Presidential Polls 2022: ರಾಷ್ಟ್ರಪತಿ ಚುನಾವಣೆ ಪ್ರಾರಂಭ; ಮತದಾನ ಮಾಡಿದ ಪ್ರಧಾನಿ ಮೋದಿ - Vistara News

ದೇಶ

Presidential Polls 2022: ರಾಷ್ಟ್ರಪತಿ ಚುನಾವಣೆ ಪ್ರಾರಂಭ; ಮತದಾನ ಮಾಡಿದ ಪ್ರಧಾನಿ ಮೋದಿ

ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರ ಅಧಿಕಾರ ಅವಧಿ ಜುಲೈ 24ಕ್ಕೆ ಅಂತ್ಯಗೊಳ್ಳುತ್ತದೆ. ಇಂದು ಮತದಾನ ಪ್ರಾರಂಭವಾಗಿದ್ದು, ಜುಲೈ 21ರಂದು ಮತ ಎಣಿಕೆ ನಡೆಯುತ್ತದೆ.

VISTARANEWS.COM


on

Presidential polls start PM Modi cast his vote
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ರಾಷ್ಟ್ರದ ಅತ್ಯುನ್ನತ ಸ್ಥಾನವಾದ ರಾಷ್ಟ್ರಪತಿ ಹುದ್ದೆಗೆ ಚುನಾವಣೆ (Presidential Polls 2022)ಬೆಳಗ್ಗೆ 10 ಗಂಟೆಯಿಂದ ಪ್ರಾರಂಭವಾಗಿದೆ. ಇದು ಜನಸಾಮಾನ್ಯರು ಮತ ಹಾಕುವ ಚುನಾವಣೆಯಲ್ಲ. ಬದಲಿಗೆ ಎಲ್ಲ ರಾಜ್ಯಗಳ ಶಾಸಕರು, ಸಂಸದರು ಮತ ಚಲಾಯಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌, ಒಡಿಶಾ ಸಿಎಂ ನವೀನ್‌ ಪಟ್ನಾಯಕ್‌, ಗುಜರಾತ್‌ ಸಿಎಂ ಭೂಪೇಂದ್ರ ಪಟೇಲ್‌, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಸೇರಿ ಹಲವು ಗಣ್ಯರು ಈಗಾಗಲೇ ತಮ್ಮ ಮತ ಚಲಾಯಿಸಿದ್ದಾರೆ. ಸಂಜೆ 5ಗಂಟೆವರೆಗೆ ಮತದಾನ ನಡೆಯಲಿದೆ. ನ್ಯಾಯಸಮ್ಮತವಾಗಿ ಮತ್ತು ಮುಕ್ತವಾಗಿ ಚುನಾವಣೆ ನಡೆಯಲು ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದೆ. ಸಂಸತ್ತಿನ ಸುತ್ತಮುತ್ತ, ಅದರಲ್ಲೂ ಮತದಾನ ನಡೆಯುವ ಎಲ್ಲ ಸ್ಥಳಗಳಲ್ಲೂ ಸೂಕ್ತ ಭದ್ರತೆ ಒದಗಿಸಲಾಗಿದೆ.

ರಾಷ್ಟ್ರಪತಿ ಚುನಾವಣಾ ಕಣದಲ್ಲಿ ಎನ್‌ಡಿಎ ಒಕ್ಕೂಟದಿಂದ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಒಕ್ಕೂಟದ ಕಡೆಯಿಂದ ಯಶವಂತ್‌ ಸಿನ್ಹಾ ಕಣದಲ್ಲಿದ್ದಾರೆ. ಇಲ್ಲಿ ದ್ರೌಪದಿ ಮುರ್ಮು ಗೆಲುವು ನಿಶ್ಚಿತವೇ ಎಂದೂ ಹೇಳಲಾಗುತ್ತಿದೆ. ಯಾಕೆಂದರೆ ದ್ರೌಪದಿ ಮುರ್ಮು ಅವರಿಗೆ ಎನ್‌ಡಿಎ ಒಕ್ಕೂಟದ ಪಕ್ಷಗಳ ಹೊರತಾಗಿ, ಶಿವಸೇನೆ, ಜಾರ್ಖಂಡ ಮುಕ್ತಿ ಮೋರ್ಚಾ, ಬಿಜು ಜನತಾ ದಳ, ಬಹುಜನ ಸಮಾಜ ಪಾರ್ಟಿ, ವೈಎಸ್‌ಆರ್‌ ಕಾಂಗ್ರೆಸ್‌ ಪಾರ್ಟಿಗಳೂ ಬೆಂಬಲ ಸೂಚಿಸಿವೆ. ಆಪ್‌, ಸಮಾಜವಾದಿ ಪಾರ್ಟಿ ಸೇರಿ ಉಳಿದೆಲ್ಲವೂಗಳೂ ಯಶವಂತ್‌ ಸಿನ್ಹಾ ಪರವಾಗಿ ಇದ್ದರೂ ಕೂಡ ಇಂದು ಮತದಾನ ಮಾಡುವ ಸಂಸದರು, ಶಾಸಕರ ಸಂಖ್ಯೆಯನ್ನು ಪರಿಗಣಿಸಿದರೆ ದ್ರೌಪದಿ ಮುರ್ಮು ಅವರೇ ಮುಂದಿನ ರಾಷ್ಟ್ರಪತಿ ಎಂಬುದರಲ್ಲಿ ಎರಡು ಮಾತಿಲ್ಲ.

ಇಂದು ಯಾರೆಲ್ಲ ಮತದಾನ ಮಾಡುತ್ತಾರೆ?

ಸಂಸತ್ತಿನ ಎರಡೂ ಸದನಗಳ ಒಟ್ಟಾರೆ 776 ಸಂಸದರು ಮತ್ತು ಎಲ್ಲಾ ರಾಜ್ಯಗಳ 4,033 ಶಾಸಕರು ಸೇರಿದಂತೆ ಒಟ್ಟು 4,809 ಮತದಾರರು ಮತದಾನ ಮಾಡಲಿದ್ದಾರೆ. ರಾಷ್ಟ್ರಪತಿ ಚುನಾವಣೆಗೆ ಸಂಸತ್ತಿನಲ್ಲಿ ಮತ್ತು ರಾಜ್ಯ ವಿಧಾನಸಭೆಗಳ ಆವರಣದಲ್ಲಿ ಮತದಾನ ನಡೆಯಲಿದ್ದು, ರಾಜ್ಯಸಭೆಯ ಮಹಾಕಾರ್ಯದರ್ಶಿ ಚುನಾವಣಾಧಿಕಾರಿಯಾಗಿರುತ್ತಾರೆ.

ಸಂಸತ್ತಿನ ಉಭಯ ಸದನಗಳ ಚುನಾಯಿತ ಸದಸ್ಯರನ್ನು ಒಳಗೊಂಡಿರುವ ಮತದಾರರು ಮತ್ತು ದೆಹಲಿಯ ರಾಷ್ಟ್ರೀಯ ರಾಜಧಾನಿ ಪ್ರದೇಶ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶ ಸೇರಿದಂತೆ ಎಲ್ಲಾ ರಾಜ್ಯಗಳ ಶಾಸಕಾಂಗ ಸಭೆಗಳ ಚುನಾಯಿತ ಸದಸ್ಯರು ರಾಷ್ಟ್ರಪತಿಗಳನ್ನು ಆಯ್ಕೆ ಮಾಡಲು ಮತ ಚಲಾಯಿಸುತ್ತಾರೆ.

ಸದನ ಅಥವಾ ಶಾಸಕಾಂಗ ಸಭೆಯ ನಾಮನಿರ್ದೇಶಿತ ಸದಸ್ಯರು ಮತದಾನಕ್ಕೆ ಅರ್ಹರಲ್ಲ. ಆದ್ದರಿಂದ, ಅವರು ಚುನಾವಣೆಯಲ್ಲಿ ಭಾಗವಹಿಸುವಂತಿಲ್ಲ. ಅದೇ ರೀತಿ ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರು ಕೂಡ ಮತದಾರರಲ್ಲ. ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.

ಯಾರು ನಾಮನಿರ್ದೇಶನಗಳನ್ನು ಸಲ್ಲಿಸಬಹುದು?
ಜೂನ್ 15ರಂದು ಅಧಿಸೂಚನೆ ಹೊರಡಿಸಿದ ನಂತರ ಜೂನ್ 29ರವರೆಗೆ ನಾಮಪತ್ರಗಳನ್ನು ಸಲ್ಲಿಸಬಹುದು. ಜೂನ್ 30 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜುಲೈ 2 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಜೂನ್ 15ರಂದು ನಾಮಪತ್ರಗಳ ಸಲ್ಲಿಕೆಯ ನಿಯಮಗಳನ್ನು ತಿಳಿಸಲಾಗುವುದು.

1997ರಿಂದ ಆಡಳಿತ ಮತ್ತು ವಿರೋಧ ಪಕ್ಷದ ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆದಿದೆ. ಅಭ್ಯರ್ಥಿಯ ಹೆಸರನ್ನು 50 ಸಂಸದರು ಪ್ರಸ್ತಾಪಿಸುವುದು ಮತ್ತು 50 ಮಂದಿ ಉಮೇದುವಾರಿಕೆಯನ್ನು ಅನುಮೋದಿಸುವುದು ಕಡ್ಡಾಯವಾಗಿದೆ. ಗಂಭೀರವಲ್ಲದ ಅಭ್ಯರ್ಥಿಗಳನ್ನು ರಾಷ್ಟ್ರಪತಿ ಚುನಾವಣೆಯಿಂದ ಹೊರಗಿಡುವುದು ಈ ನಿಯಮದ ಉದ್ದೇಶವಾಗಿದೆ.

ಅಭ್ಯರ್ಥಿಯು 15,000 ರೂ.ಗಳ ಭದ್ರತಾ ಠೇವಣಿ ಇರಿಸಬೇಕಾಗುತ್ತದೆ. 1997ರಲ್ಲಿ ಭದ್ರತಾ ಠೇವಣಿಯನ್ನು ರೂ 2,500ರಿಂದ ರೂ 15,000ಕ್ಕೆ ಹೆಚ್ಚಿಸಲಾಯಿತು, ಈ ಮೊದಲು ಪ್ರಸ್ತಾವಕರು ಮತ್ತು ಅನುಮೋದಕರ ಒಟ್ಟು ಸಂಖ್ಯೆ 10 ಇರಬೇಕಾಗಿತ್ತು. ಕಾನೂನು ತಿದ್ದುಪಡಿಯ ಬಳಿಕ ಅದನ್ನು 50ಕ್ಕೆ ಹೆಚ್ಚಿಸಲಾಯಿತು.

ಅಭ್ಯರ್ಥಿಯು ಭಾರತದ ಪ್ರಜೆಯಾಗಿರಬೇಕು ಮತ್ತು 35 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಯಾವುದೇ ಸದನದ ಸದಸ್ಯರಾಗಿದ್ದು ಚುನಾವಣೆಗೆ ಅರ್ಹತೆ ಹೊಂದಿರಬೇಕು. ರಾಷ್ಟ್ರಪತಿಗಳ ಅಧಿಕಾರಾವಧಿ ಐದು ವರ್ಷಗಳಾಗಿರುತ್ತವೆ.

ಚುನಾವಣೆ ಆಯೋಗದ ಪ್ರಕಾರ, ಒಬ್ಬ ವ್ಯಕ್ತಿಯು ಭಾರತ ಸರ್ಕಾರ ಅಥವಾ ಯಾವುದೇ ರಾಜ್ಯದ ಸರ್ಕಾರದ ಅಡಿಯಲ್ಲಿ ಅಥವಾ ಯಾವುದೇ ರಾಜ್ಯ ಸರ್ಕಾರಗಳ ನಿಯಂತ್ರಣಕ್ಕೆ ಒಳಪಟ್ಟಿರುವ ಯಾವುದೇ ಸ್ಥಳೀಯ ಅಥವಾ ಇತರ ಪ್ರಾಧಿಕಾರದ ಅಡಿಯಲ್ಲಿ ಯಾವುದೇ ರೀತಿಯ ಲಾಭದಾಯಕ ಹುದ್ದೆಯನ್ನು ಹೊಂದಿದ್ದರೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಅರ್ಹರಾಗುವುದಿಲ್ಲ,

ಒಬ್ಬ ಮತದಾರನು ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳ ನಾಮನಿರ್ದೇಶನ ಪತ್ರಗಳನ್ನು ಪ್ರಸ್ತಾಪಿಸುವುದಾಗಲಿ, ಅನುಮೋದಿಸುವುದಾಗಲಿ ಮಾಡುವಂತಿಲ್ಲ ಎಂದು ಚುನಾವಣೆ ಆಯೋಗ ಹೇಳುತ್ತದೆ. ಯಾರಾದರೂ ಹಾಗೆ ಮಾಡಿದಲ್ಲಿ ಅವರ ಸಹಿಯು ಮೊದಲು ವಿತರಿಸಿದ ನಾಮನಿರ್ದೇಶನವನ್ನು ಹೊರತುಪಡಿಸಿ ಬೇರೆ ಯಾವುದೇ ನಾಮನಿರ್ದೇಶನ ಪತ್ರದಲ್ಲಿ ಅಮಾನ್ಯವಾಗಿರುತ್ತದೆ. ಅಲ್ಲದೆ, ಅಭ್ಯರ್ಥಿಯಿಂದ ಅಥವಾ ಅವರ ಪರವಾಗಿ ನಾಲ್ಕಕ್ಕಿಂತ ಹೆಚ್ಚು ನಾಮಪತ್ರಗಳನ್ನು ಸಲ್ಲಿಸುವಂತಿಲ್ಲ ಅಥವಾ ಚುನಾವಣಾಧಿಕಾರಿ ಅವುಗಳನ್ನು ಸ್ವೀಕರಿಸುವಂತೆಯೂ ಇಲ್ಲ.

ಮತದಾನದ ಕ್ರಮ ಹೇಗಿರುತ್ತದೆ?

ಒಂದೇ ವರ್ಗಾವಣೆ ಮಾಡಬಹುದಾದ ಮತ ಪದ್ಧತಿಯನ್ನು ಬಳಸಿಕೊಂಡು ಪ್ರಮಾಣಾನುಗುಣ ಪ್ರಾತಿನಿಧ್ಯದ ಮೂಲಕ ಮತ್ತು ರಹಸ್ಯ ಮತದಾನದ ಮೂಲಕ ಮತದಾನ ನಡೆಸಲಾಗುತ್ತದೆ. ʼʼಸಂವಿಧಾನವು ರಾಷ್ಟ್ರಪತಿಗಳ ಪದವಿಗೆ ರಹಸ್ಯ ಮತದಾನದ ಮೂಲಕ ಚುನಾವಣೆ ನಡೆಸಬೇಕೆಂದು ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ, ಮತದಾರರು ಸೂಕ್ಷ್ಮವಾಗಿ ಮತದ ಗೌಪ್ಯತೆಯನ್ನು ಕಾಯ್ದುಕೊಳ್ಳಬೇಕೆಂದು ನಿರೀಕ್ಷಿಸಲಾಗುತ್ತದೆ. ಈ ಚುನಾವಣೆಯಲ್ಲಿ ಮುಕ್ತ ಮತದಾನದ ಪರಿಕಲ್ಪನೆ ಇಲ್ಲ ಮತ್ತು ರಾಷ್ಟ್ರಪತಿ ಮತ್ತು ಉಪ ರಾಷ್ಟ್ರಪತಿಗಳ ಚುನಾವಣೆಯ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಯಾರಿಗೂ ಮತಪತ್ರವನ್ನು ತೋರಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ಸಿಇಸಿ ರಾಜೀವ್ ಕುಮಾರ್ ಹೇಳುತ್ತಾರೆ.

ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಉಲ್ಲಂಘನೆ ಕಂಡುಬಂದಲ್ಲಿ ಚುನಾವಣೆ ಅಧಿಕಾರಿ ಬ್ಯಾಲೆಟ್ ಪೇಪರ್ ಅನ್ನು ರದ್ದುಗೊಳಿಸುತ್ತಾರೆ. ಮತದಾರರಿಗೆ ಚುನಾವಣಾಧಿಕಾರಿ ನೀಡುವ ನಿರ್ದಿಷ್ಟ ಪೆನ್‌ನಿಂದ ಮಾತ್ರ ಮತದ ಗುರುತು ಮಾಡಬಹುದಾಗಿದೆ.

ದೇಶದ ಅತ್ಯುನ್ನತ ಹುದ್ದೆಗೆ ನಡೆಯುವ ಈ ಚುನಾವಣೆಯಲ್ಲಿ ಯಾವುದೇ ರೀತಿಯ ಅವ್ಯವಹಾರ ನಡೆಯಬಾರದು ಎಂಬುದು ಚುನಾವಣಾ ಆಯೋಗದ ಸಂಕಲ್ಪವಾಗಿದ್ದು, ಅಂಥವು ಏನಾದರೂ ಕಂಡುಬಂದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ರದ್ದತಿಗೆ ಅರ್ಜಿಯನ್ನು ಸಲ್ಲಿಸಲು ಅವಕಾಶವಿದೆ ಎಂದು ಕುಮಾರ್ ಹೇಳಿದರು.

ಅಧ್ಯಕ್ಷೀಯ ಮತ್ತು ಉಪಾಧ್ಯಕ್ಷರ ಚುನಾವಣೆಗಳ ಕಾಯಿದೆ, 1952ರ ಸೆಕ್ಷನ್ 18ರ ಪ್ರಕಾರ, ಹಿಂದಿರುಗಿದ ಅಭ್ಯರ್ಥಿ ಅಥವಾ ಯಾವುದೇ ವ್ಯಕ್ತಿಯಿಂದ ಐಪಿಸಿಯ ಸೆಕ್ಷನ್ 171ಬಿ ಮತ್ತು 171ಸಿಯಲ್ಲಿ ವ್ಯಾಖ್ಯಾನಿಸಲಾದ “ಲಂಚ” ಅಥವಾ “ಅನಾವಶ್ಯಕ ಪ್ರಭಾವ”ದ ಅಪರಾಧವು ಚುನಾವಣಾ ಅರ್ಜಿಯಲ್ಲಿ ಉಲ್ಲೇಖವಾಗಿದ್ದರೆ ಸುಪ್ರೀಂ ಕೋರ್ಟ್‌ ಚುನಾವಣೆಯನ್ನು ಅನೂರ್ಜಿತ ಗೊಳಿಸಬಹುದಾಗಿದೆ.

ಲೆಕ್ಕಾಚಾರವು ಹೇಗೆ ನಡೆಯುತ್ತದೆ?
ಜಮ್ಮು-ಕಾಶ್ಮೀರದಲ್ಲಿ ಶಾಸಕಾಂಗ ಸಭೆ ಇಲ್ಲದ ಕಾರಣ ಈ ಬಾರಿಯ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸದರೊಬ್ಬರ ಮತದ ಮೌಲ್ಯ 708ರಿಂದ 700ಕ್ಕೆ ಇಳಿದಿದೆ. ಚುನಾವಣೆ ಆಯೋಗದ ಪ್ರಕಾರ, ಈ ಮೌಲ್ಯವು ದೆಹಲಿ, ಪುದುಚೇರಿ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ರಾಜ್ಯಗಳು ಮತ್ತು ಯುಟಿಗಳ ಶಾಸಕಾಂಗ ಸಭೆಗಳಲ್ಲಿ ಇರುವ ಚುನಾಯಿತ ಸದಸ್ಯರ ಸಂಖ್ಯೆಯನ್ನು ಆಧರಿಸಿದೆ.

ರಾಜ್ಯಗಳಲ್ಲಿ, ಪ್ರತಿ ಶಾಸಕರ ಮತದ ಮೌಲ್ಯವು ಜನಸಂಖ್ಯೆಗೆ ಅನುಗುಣವಾಗಿ ಬದಲಾಗುತ್ತದೆ. ಉದಾಹರಣೆಗೆ, ಉತ್ತರ ಪ್ರದೇಶದಲ್ಲಿ, ಪ್ರತಿ ಶಾಸಕರ ಮತದ ಮೌಲ್ಯವು 208ರಷ್ಟಿದೆ, ಜಾರ್ಖಂಡ್ ಮತ್ತು ತಮಿಳುನಾಡಿನಲ್ಲಿ 176ರಷ್ಟಿದೆ. ಮಹಾರಾಷ್ಟ್ರದಲ್ಲಿ, ಇದು 175. ಸಿಕ್ಕಿಂನಲ್ಲಿ, ಮೌಲ್ಯವು ಏಳು, ನಾಗಾಲ್ಯಾಂಡ್‌ನಲ್ಲಿ ಇದು ಒಂಬತ್ತು ಮತ್ತು ಮಿಜೋರಾಂನಲ್ಲಿ ಎಂಟು ಆಗಿದೆ.

ಬಿಜೆಪಿಯು ತನ್ನ ನಾಮನಿರ್ದೇಶಿತ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿಕೊಳ್ಳಲು ಅನುಕೂಲಕರ ಸ್ಥಿತಿಯಲ್ಲಿದೆ. ಆಡಳಿತಾರೂಢ ಎನ್‌ಡಿಎ 440 ಸಂಸದರನ್ನು ಹೊಂದಿದ್ದರೆ, ಪ್ರತಿಪಕ್ಷ ಯುಪಿಎ ಸುಮಾರು 180 ಸಂಸದರನ್ನು ಹೊಂದಿದೆ, ಜೊತೆಗೆ ಟಿಎಂಸಿಯ 36 ಸಂಸದರನ್ನು ಹೊಂದಿದೆ, ಇದು ಸಾಮಾನ್ಯವಾಗಿ ವಿರೋಧ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತದೆ.

ಸ್ಥೂಲವಾಗಿ ಲೆಕ್ಕಾಚಾರ ಮಾಡಿದರೆ, ಎಲ್ಲಾ ಮತದಾರರ ಒಟ್ಟು 10,86,431 ಮತಗಳಲ್ಲಿ ಎನ್‌ಡಿಎ ಸುಮಾರು 5,35,000 ಮತಗಳನ್ನು ಹೊಂದಿದೆ. ಇದು ತನ್ನ ಸಂಸದರ 3,08,000 ಮತಗಳು ಮತ್ತು ಮತ್ತು ಮಿತ್ರಪಕ್ಷಗಳ ಬೆಂಬಲವನ್ನು ಒಳಗೊಂಡಿದೆ.

ರಾಜ್ಯಗಳ ಪೈಕಿ, 273 ಶಾಸಕರನ್ನು ಹೊಂದಿರುವ ಯುಪಿಯಿಂದ ಬಿಜೆಪಿ ಗರಿಷ್ಠ 56,784 ಮತಗಳನ್ನು ಹೊಂದಿದೆ. ಯುಪಿಯಲ್ಲಿ ಪ್ರತಿ ಎಂಎಲ್‌ಎ ಗರಿಷ್ಠ 208 ಮತಗಳನ್ನು ಹೊಂದಿದೆ. ಬಿಹಾರದಿಂದ ಎನ್‌ಡಿಎ ತನ್ನ ಎರಡನೇ ಅತಿ ಹೆಚ್ಚು ಮತಗಳನ್ನು ಪಡೆಯುತ್ತದೆ, ಅಲ್ಲಿ 127 ಶಾಸಕರನ್ನು ಹೊಂದಿದ್ದು, ಪ್ರತಿ ಶಾಸಕರು 173 ಮತಗಳನ್ನು ಹೊಂದಿರುವುದರಿಂದ ಆ ರಾಜ್ಯದ ಒಟ್ಟು ಮತಗಳ ಮೌಲ್ಯ 21,971 ಮತಗಳಾಗುತ್ತವೆ. ನಂತರ ಮಹಾರಾಷ್ಟ್ರದಿಂದ 18,375 ಮತಗಳನ್ನು ಪಡೆಯುತ್ತದೆ. ಅಲ್ಲಿ 105 ಬಿಜೆಪಿಗೆ ಶಾಸಕರಿದ್ದು ತಲಾ 175 ಮತಗಳ ಮೌಲ್ಯ ಹೊಂದಿದೆ. 131 ಶಾಸಕರನ್ನು ಹೊಂದಿರುವ ಎನ್‌ಡಿಎ ಮಧ್ಯಪ್ರದೇಶದಿಂದ 17,161 ಮತಗಳನ್ನು, ಗುಜರಾತ್‌ನಿಂದ 112 ಶಾಸಕರ 16,464 ಮತಗಳನ್ನು ಮತ್ತು ಕರ್ನಾಟಕದಲ್ಲಿ ತನ್ನ 122 ಶಾಸಕರ ಪೈಕಿ 15,982 ಮತಗಳನ್ನು ಪಡೆಯಲಿದೆ. ಯುಪಿಎ ಸಂಸದರು ಮತ್ತು ಶಾಸಕರಿಂದ 1,50,000 ಕ್ಕಿಂತ ಸ್ವಲ್ಪ ಹೆಚ್ಚು ಮತಗಳನ್ನು ಹೊಂದಿದೆ. ಈ ಹಿಂದೆಯೂ ವಿರೋಧ ಪಕ್ಷದ ಅಭ್ಯರ್ಥಿಗಳು ಮೂರು ಲಕ್ಷಕ್ಕಿಂತ ಸ್ವಲ್ಪ ಹೆಚ್ಚು ಮತಗಳನ್ನು ಪಡೆದಿದ್ದರು.

ಮತಗಳ ಎಣಿಕೆ ಹೇಗೆ ನಡೆಯುತ್ತದೆ?
ರಾಜ್ಯಗಳ ಎಲ್ಲಾ ಮತಪತ್ರಗಳನ್ನು ತಂದ ನಂತರ ಎಣಿಕೆ ಮಾಡಲಾಗುತ್ತದೆ. ಈ ಬಾರಿ ಜುಲೈ 21 ರಂದು ರಾಷ್ಟ್ರ ರಾಜಧಾನಿಯಲ್ಲಿ ಎಣಿಕೆ ನಡೆಯಲಿದೆ. ಕೋವಿಂದ್ ಅವರ ಅವಧಿ ಜುಲೈ 24 ರಂದು ಕೊನೆಗೊಳ್ಳುತ್ತದೆ ಮತ್ತು ಜುಲೈ 25 ರಂದು ಹೊಸ ರಾಷ್ಟ್ರಪತಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Maha politics: ರಾಷ್ಟ್ರಪತಿ ಚುನಾವಣೆಯಲ್ಲಿ ಮುರ್ಮು ಬೆಂಬಲಿಸಲು 16 ಶಿವಸೇನಾ ಸಂಸದರ ಒಲವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Medical Students: ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

Medical Students: ಕನ್ಯಾಕುಮಾರಿಯ ಬೀಚ್‌ನಲ್ಲಿ ಐವರು ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳು ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ತಂಜಾವೂರಿನ ಚಾರುಕವಿ, ನೇಯ್‌ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್‌, ದಿಂಡಿಗಲ್‌ನ ಪ್ರವೀಣ್‌ ಸ್ಯಾಮ್‌ ಹಾಗೂ ಆಂಧ್ರಪ್ರದೇಶದ ವೆಂಕಟೇಶ್‌ ಎಂಬುದಾಗಿ ಗುರುತಿಸಲಾಗಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಈಜಾಡಲು ಹೋಗಿದ್ದಾಗ ಐವರು ನೀರುಪಾಲಾಗಿದ್ದಾರೆ.

VISTARANEWS.COM


on

Medical Students
Koo

ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ (Kanniyakumari) ಸಮುದ್ರದಲ್ಲಿ ಮುಳುಗಿ ಐವರು ಮೆಡಿಕಲ್‌ ವಿದ್ಯಾರ್ಥಿಗಳು (Medical Students) ಮೃತಪಟ್ಟಿದ್ದಾರೆ. ಮದುವೆ ಸಮಾರಂಭಕ್ಕೆಂದು ಐವರು ವಿದ್ಯಾರ್ಥಿಗಳು ತೆರಳಿದ್ದರು. ಇದೇ ವೇಳೆ, ಲೆಮುರ್‌ ಬೀಚ್‌ನಲ್ಲಿ (Lemur Beach) ಈಜಾಡುವಾಗ ಐವರೂ ನೀರುಪಾಲಾಗಿದ್ದಾರೆ. ಐವರಲ್ಲಿ ಇಬ್ಬರು ಯುವತಿಯರಿದ್ದರು ಎಂದು ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ. ಐವರೂ ತಿರುಚಿರಪಳ್ಳಿಯಲ್ಲಿರುವ ಎಸ್‌ಆರ್‌ಎಂ ಮೆಡಿಕಲ್‌ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ.

ಮೃತರನ್ನು ತಂಜಾವೂರಿನ ಚಾರುಕವಿ, ನೇಯ್‌ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್‌, ದಿಂಡಿಗಲ್‌ನ ಪ್ರವೀಣ್‌ ಸ್ಯಾಮ್‌ ಹಾಗೂ ಆಂಧ್ರಪ್ರದೇಶದ ವೆಂಕಟೇಶ್‌ ಎಂಬುದಾಗಿ ಗುರುತಿಸಲಾಗಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಈಜಾಡಲು ಹೋಗಿದ್ದಾಗ ಐವರು ನೀರುಪಾಲಾಗಿದ್ದಾರೆ. ಇಂಟರ್ನ್‌ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ ಎಂಬುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರವೇಶ ನಿರಾಕರಿಸಲಾಗಿತ್ತು

“ಲೆಮುರ್‌ ಬೀಚ್‌ ಖಾಸಗಿ ಬೀಚ್‌ ಆಗಿದ್ದು, ಇಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಸಲಾಗಿತ್ತು. ಭಾನುವಾರ (ಮೇ 5) ಮದುವೆಗೆ ಬಂದಿದ್ದ ವಿದ್ಯಾರ್ಥಿಗಳು ಅವರಲ್ಲೇ ಗುಂಪುಗಳಾಗಿ ಚದುರಿ ಹೋಗಿದ್ದಾರೆ. ಗೆಳೆಯರು ಸೇರಿ ಪ್ರವಾಸಿ ತಾಣಗಳಿಗೆ ಹೆಸರಾದ ಕನ್ಯಾಕುಮಾರಿಯನ್ನು ಸುತ್ತಲು ಮುಂದಾಗಿದ್ದಾರೆ. ಇವರಲ್ಲಿ ಎಂಟು ವಿದ್ಯಾರ್ಥಿಗಳು ಲೆಮುರ್‌ ಬೀಚ್‌ ಪ್ರವೇಶಿಸಿದ್ದಾರೆ. ಸಮುದ್ರದಲ್ಲಿ ಭಾರಿ ಅಲೆಗಳಿರುವ ಕಾರಣ ಪ್ರವೇಶ ನಿರಾಕರಿಸಲಾಗಿತ್ತು. ಹೀಗಿದ್ದರೂ ಅವರು ಹೇಗೆ ಹೋದರು ಎಂಬ ಕುರಿತು ತನಿಖೆ ನಡೆಸಲಾಗುತ್ತಿದೆ” ಎಂದು ಕನ್ಯಾಕುಮಾರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಇ. ಸುಂದರವದನಂ ಮಾಹಿತಿ ನೀಡಿದ್ದಾರೆ.

ಕೆಲವೇ ತಿಂಗಳಲ್ಲಿ ಕೋರ್ಸ್‌ ಮುಗಿಯುವುದಿತ್ತು

ಮೆಡಿಕಲ್‌ ಕಾಲೇಜು ವಿದ್ಯಾರ್ಥಿಗಳ ಕೋರ್ಸ್‌ ಇನ್ನೇನು ಕೆಲವೇ ದಿನಗಳಲ್ಲಿ ಮುಗಿಯುವುದಿತ್ತು. ಎಲ್ಲರೂ ವೈದ್ಯರಾಗುವ ಕನಸು ಕಾಣುತ್ತಿದ್ದರು. ಯಾವ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಮಾಡಬೇಕು, ಯಾವ ನಗರಕ್ಕೆ ಹೋದರೆ ಸೂಕ್ತ ಎಂಬ ಕುರಿತು ಅವರ ಮಧ್ಯೆಯೇ ಚರ್ಚೆ ನಡೆಯುತ್ತಿತ್ತು. ಅವರ ಪೋಷಕರು ಕೂಡ ನೂರಾರು ಕನಸು ಕಂಡಿದ್ದರು. ಆದರೆ, ಮದುವೆಗೆ ಹೋದವರು, ಮದುವೆ ಮುಗಿಸಿ, ಖಾಸಗಿ ಬೀಚ್‌ನಲ್ಲಿ ಪ್ರವೇಶ ಇಲ್ಲದಿದ್ದರೂ ಈಜಲು ಹೋಗಿದ್ದೇ ಅವರ ಪ್ರಾಣಕ್ಕೆ ಕುತ್ತು ತಂದಿದೆ.

ಇದನ್ನೂ ಓದಿ: Drowned In water : ತಾಯಿ- ಮಗಳು ಸೇರಿ ನಾಲ್ವರು ನೀರುಪಾಲು

Continue Reading

ಉದ್ಯೋಗ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ನಾಳೆ (ಮೇ 7)ಯೇ ಕೊನೆಯ ದಿನ. ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

VISTARANEWS.COM


on

Job Alert
Koo

ಬೆಂಗಳೂರು: ಉತ್ತಮ ಉದ್ಯೋಗಕ್ಕಾಗಿ ಹುಡುಕಾಟ ನಡೆಸುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಲೋವರ್‌ ಡಿವಿಷನ್‌ ಕ್ಲರ್ಕ್‌, ಡೇಟಾ ಎಂಟ್ರಿ ಆಪರೇಟರ್‌ ಸೇರಿ ಬರೋಬ್ಬರಿ 3,712 ಹುದ್ದೆಗಳಿವೆ (SSC CHSL Recruitment 2024). ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ನಾಳೆ (ಮೇ 7) (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಲೋವರ್‌ ಡಿವಿಷನ್‌ ಕ್ಲರ್ಕ್‌ (LDC) / ಜೂನಿಯರ್‌ ಸೆಕ್ರೆಟೆರಿಯೇಟ್‌ ಅಸಿಸ್ಟಂಟ್‌ (JSA), ಡೇಟಾ ಎಂಟ್ರಿ ಆಪರೇಟರ್‌ (DEO) ಮತ್ತು ಡೇಟಾ ಎಂಟ್ರಿ ಆಪರೇಟರ್‌ ಗ್ರೇಡ್‌ ʼA’ ಹುದ್ದೆಗಳಿವೆ. ಎಲ್‌ಡಿಸಿ ಹುದ್ದೆಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ತೇರ್ಗಡೆಯಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 12ನೇ ತರಗತಿಯಲ್ಲಿ ವಿಜ್ಞಾನ ಮತ್ತು ಗಣಿತ ವಿಷಯವನ್ನು ಓದಿದವರು ಡೇಟಾ ಎಂಟ್ರಿ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ತತ್ಸಮಾನ ವಿದ್ಯಾರ್ಹತೆ ಹೊಂದಿದವರೂ ಅಪ್ಲೈ ಮಾಡಬಹುದು.

ವಯೋಮಿತಿ

ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 27 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ರಿಯಾಯಿತಿ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ ಅಭ್ಯರ್ಥಿಗಳಿಗೆ 10 ವರ್ಷಗಳ ವಿನಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಮಾಜಿ ಯೋಧರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಅನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಎರಡು ಹಂತದ ಲಿಖಿತ ಪರೀಕ್ಷೆ, ಸ್ಕಿಲ್‌ ಟೆಸ್ಟ್‌ / ಟೈಪಿಂಗ್‌ ಟೆಸ್ಟ್‌, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಮೊದಲ ಹಂತದ ಪರೀಕ್ಷೆ ಜುಲೈ 1,2,3,4,5,8,9,10,11,12ರಂದು ನಡೆಯಲಿದೆ. ಕರ್ನಾಟಕದಲ್ಲಿ ಪರೀಕ್ಷೆ ಬೆಳಗಾವಿ, ಬೆಂಗಳೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಯಲ್ಲಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ವೈಯಕ್ತಿಕ ಮಾಹಿತಿ ನೀಡುವ ಮೂಲಕ ಹೆಸರು ನೋಂದಾಯಿಸಿ.
  • ನಿಮಗೆ ಬಂದಿರುವ ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಈಗ ಕಾಣಿಸುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಸೂಚಿಸಿರುವ ಅಳತೆಯಲ್ಲಿ ದಾಖಲೆಗಳನ್ನು ಮತ್ತು ಫೋಟೊ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾದ ಬಳಿಕ ಈ ಬಗ್ಗೆ ಇಮೇಲ್‌, ಎಸ್‌ಎಂಎಸ್‌ ಮೂಲಕ ಸಂದೇಶ ಬರಲಿದೆ.
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಕೋರ್ಟ್‌ನಲ್ಲಿದೆ 41 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Continue Reading

ವಾಣಿಜ್ಯ

Rekha Jhunjhunwala: ಷೇರು ಮಾರುಕಟ್ಟೆಯಲ್ಲಿ ರೇಖಾ ಜುಂಜುನ್‌ವಾಲಾಗೆ 805 ಕೋಟಿ ರೂ. ನಷ್ಟ; ಕಾರಣವೇನು?

Rekha Jhunjhunwala: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ ಅವರ ಪತ್ನಿ ರೇಖಾ ಜುಂಜುನ್‌ವಾಲಾ ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿದೆ.

VISTARANEWS.COM


on

Rekha Jhunjhunwala
Koo

ಮುಂಬೈ: ದೇಶದ ಖ್ಯಾತ ಹೂಡಿಕೆದಾರ, ಉದ್ಯಮಿ ರಾಕೇಶ್‌ ಜುಂಜುನ್‌ವಾಲಾ (Rakesh Jhunjhunwala) ಅವರ ಪತ್ನಿ ರೇಖಾ ಜುಂಜುನ್‌ವಾಲಾ (Rekha Jhunjhunwala) ಅವರು ಟೈಟಾನ್ ಕಂಪನಿಯಲ್ಲಿ ಹೂಡಿಕೆ ಮಾಡಿದ್ದರಿಂದ 800 ಕೋಟಿ ರೂ.ಗಿಂತ ಹೆಚ್ಚು ನಷ್ಟ ಅನುಭವಿಸಿದ್ದಾರೆ. ಟೈಟಾನ್‌ ನಾಲ್ಕನೇ ತ್ರೈಮಾಸಿಕದ ಫಲಿತಾಂಶಗಳನ್ನು ಬಹಿರಂಗಪಟಿಸಿದ ನಂತರ ಕಂಪನಿಯ ಷೇರು ಇಂದು (ಮೇ 6) ಶೇ. 5ಕ್ಕಿಂತ ಹೆಚ್ಚು ಕುಸಿದಿದೆ. 

ರೇಖಾ ಜುಂಜುನ್ವಾಲಾ ಅವರು 2024ರ ಮಾರ್ಚ್ 31ರ ವೇಳೆಗೆ ಟಾಟಾ ಗ್ರೂಪ್ ಸಂಸ್ಥೆಯಲ್ಲಿ ಶೇಕಡಾ 5.35ರಷ್ಟು ಪಾಲನ್ನು ಹೊಂದಿದ್ದರು. ಅಂದರೆ ಇದರ ಮೌಲ್ಯ 16,792 ಕೋಟಿ ರೂ. ಇಂದಿನ ವಹಿವಾಟಿನಲ್ಲಿ ಟೈಟಾನ್‌ನ ಮಾರುಕಟ್ಟೆ ಮೌಲ್ಯ 3,13,868 ಕೋಟಿ ರೂ.ಗಳಿಂದ ಕೆಳಗಿಳಿದು 2,98,815 ಕೋಟಿ ರೂ.ಗೆ ತಲುಪಿದೆ. ಈ ಕಾರಣದಿಂದಾಗಿ ರೇಖಾ ಜುಂಜುನ್ವಾಲಾ ಅವರ ಹೂಡಿಕೆ ಮೌಲ್ಯವು 805 ಕೋಟಿ ರೂ.ಗಳಷ್ಟು ಕಡಿಮೆಯಾಗಿ 15,986 ಕೋಟಿ ರೂ.ಗೆ ತಲುಪಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಗಳಲ್ಲಿನ ಚಂಚಲತೆ ಮತ್ತು ಸ್ಪರ್ಧಾತ್ಮಕ ತೀವ್ರತೆಯು ಟೈಟಾನ್‌ನ ಲಾಭಾಂಶದ ಮೇಲೆ ಪರಿಣಾಮ ಬೀರುತ್ತದೆ ಬೀರಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಯಾರು ಈ ರೇಖಾ ಜುಂಜುನ್‌ವಾಲಾ?

ರಾಕೇಶ್‌ ಜುಂಜುನ್‌ವಾಲಾ ಅವರು ದೇಶದ ಖ್ಯಾತ ಹೂಡಿಕೆದಾರರು. ಷೇರು ಮಾರುಕಟ್ಟೆಯ ಬಿಗ್‌ ಬುಲ್‌, ಭಾರತದ ವಾರೆನ್‌ ಬಫೆಟ್‌ ಎಂದೇ ಖ್ಯಾತಿಯಾಗಿದ್ದ ಅವರು 2022ರಲ್ಲಿ ನಿಧನರಾದರು. ಆದಾಯ ತೆರಿಗೆ ಇಲಾಖೆಯ ಅಧಿಕಾರಿಯೊಬ್ಬರ ಮಗನಾಗಿದ್ದ ಜುಂಜುನ್‌ವಾಲಾ ಅವರು ಕೇವಲ 5 ಸಾವಿರ ರೂ. ಹೂಡಿಕೆಯಿಂದ ಷೇರು ವ್ಯವಹಾರವನ್ನು ಆರಂಭಿಸಿ, ಅಂತಿಮವಾಗಿ ಷೇರು ಪೇಟೆಯ ಸರದಾರರಾಗಿ 5.8 ಶತಕೋಟಿ ಡಾಲರ್‌ (ಸುಮಾರು 45 ಸಾವಿರ ಕೋಟಿ ರೂ.) ಸಂಪತ್ತಿಗೆ ಒಡೆಯರಾಗಿದ್ದರು. ಸದ್ಯ, ರೇಖಾ ಜುಂಜುನ್‌ವಾಲಾ ಅವರ ಆಸ್ತಿ ಮೌಲ್ಯ 58 ಸಾವಿರ ಕೋಟಿ ರೂ. ಆಗಿದೆ ಎಂದು ತಿಳಿದುಬಂದಿದೆ.

2023ರ ಡಿಸೆಂಬರ್‌ ಕ್ವಾರ್ಟರ್‌ನಲ್ಲಿ ರೇಖಾ ಜುಂಜುನ್‌ವಾಲಾ 26 ಕಂಪನಿಗಳಲ್ಲಿ ಷೇರುಗಳನ್ನು ಹೊಂದಿದ್ದು, ಇದರ ಮೌಲ್ಯ 4.9 ಬಿಲಿಯನ್ ಡಾಲರ್‌ನಷ್ಟಿತ್ತು. ಆದ್ರೆ ಇದರಲ್ಲಿ 13 ಕಂಪನಿಗಳು ಮಾತ್ರ ರೇಖಾ ಜುಂಜುನ್‌ವಾಲಾ ಎಷ್ಟು ಷೇರುಗಳನ್ನು ಹೊಂದಿದ್ದಾರೆ ಎಂಬುದನ್ನು ಬಹಿರಂಗಪಡಿಸಿವೆ. ಆದರೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ಇದರಲ್ಲಿ ಐದು ಕಂಪನಿಗಳ ಸ್ಟಾಕ್‌ಗಳನ್ನು ರೇಖಾ ಮಾರಾಟ ಮಾಡಿದ್ದರು.

ಟಾಟಾ ಮೋಟಾರ್ಸ್, ಇಂಡಿಯನ್ ಹೋಟೆಲ್ಸ್, ಟೈಟಾನ್, ನಜಾರಾ ಟೆಕ್ ಮತ್ತು ಡೆಲ್ಟಾ ಕಾರ್ಪ್‌ನಂತಹ ದೊಡ್ಡ ಕಂಪನಿಗಳಲ್ಲಿ ರೇಖಾ ಅವರು ಷೇರುಗಳನ್ನು ಹೊಂದಿದ್ದಾರೆ. ಜತೆಗೆ ಮಾರ್ಚ್‌ ಕ್ವಾರ್ಟರ್‌ನಲ್ಲಿ ತಮ್ಮ ಪೋರ್ಟ್‌ಫೊಲಿಯೊಗೆ ಕೆಎಂ ಶುಗರ್‌ ಮಿಲ್ಸ್‌ ಲಿಮಿಟೆಡ್‌ ಸ್ಟಾಕ್‌ ಸೇರಿಸಿದ್ದರು. ಈ ಕಂಪನಿಯಲ್ಲಿ ರೇಖಾ ಸುಮಾರು 5 ಲಕ್ಷ ಷೇರುಗಳನ್ನು ಅಥವಾ ಶೇಕಡಾ 0.54ರಷ್ಟು ಮೌಲ್ಯವನ್ನು ಹೊಂದಿದ್ದಾರೆ. ಇವರು ಹೂಡಿಕೆ ಮಾಡುವ ಹೆಚ್ಚಿನ ಕಂಪನಿಗಳು ಮಲ್ಟಿಬ್ಯಾಗರ್ಸ್ ರಿಟರ್ನ್‌ ನೀಡುತ್ತವೆ.

ಇದನ್ನೂ ಓದಿ: ಸಮುದ್ರ ಕಾಣಲ್ಲ ಎಂದು 118 ಕೋಟಿ ರೂ.ಗೆ ಎದುರಿನ ಮನೆ ಖರೀದಿಸಿದ ರೇಖಾ ಜುಂಜುನ್‌ವಾಲಾ!

Continue Reading

ಶಿಕ್ಷಣ

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

CISCE Results 2024: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ 10ನೇ ತರಗತಿಯ ಐಸಿಎಸ್ಇ ಮತ್ತು 12ನೇ ತರಗತಿ ಐಎಸ್‌ಸಿ ಫಲಿತಾಂಶವನ್ನು ಪ್ರಕಟಿಸಿದೆ. ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

VISTARANEWS.COM


on

ICSE Results 202
Koo

ನವದೆಹಲಿ: ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) 10ನೇ ತರಗತಿಯ ಐಸಿಎಸ್ಇ (ICSE) ಮತ್ತು 12ನೇ ತರಗತಿ ಐಎಸ್‌ಸಿ (ISC) ಫಲಿತಾಂಶವನ್ನು ಇಂದು (ಮೇ 6) ಬೆಳಿಗ್ಗೆ ಪ್ರಕಟಿಸಿದೆ. ಈ ಸಿಐಎಸ್‌ಸಿ 10 ಮತ್ತು 12ನೇ ತರಗತಿ ಫಲಿತಾಂಶಗಳನ್ನು ಸಿಐಎಸ್‌ಸಿ ಅಧಿಕೃತ ವೆಬ್‌ಸೈಟ್‌ನಲ್ಲಿ cisce.org. ಮತ್ತು results.cisce.org.ನಲ್ಲಿ ವೀಕ್ಷಿಸಬಹುದು.

ಈ ವರ್ಷ ಸುಮಾರು 2.5 ವಿದ್ಯಾರ್ಥಿಗಳು ಸಿಐಎಸ್‌ಸಿಇಯ 10 ಮತ್ತು 12ನೇ ತರಗತಿಯ ಪರೀಕ್ಷೆ ಬರೆದಿದ್ದರು. 10ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 21ರಂದು ಆರಂಭವಾಗಿ ಮಾರ್ಚ್‌ 28ರಂದು ಮುಕ್ತಾಯವಾಗಿತ್ತು. ಇನ್ನು 12ನೇ ತರಗತಿ ಪರೀಕ್ಷೆ 2024ರ ಫೆಬ್ರವರಿ 12ರಂದು ಆರಂಭವಾಗಿ ಏಪ್ರಿಲ್‌ 4ರಂದು ಮುಗಿದಿತ್ತು. ಪ್ರಶ್ನೆ ಪತ್ರಿಕೆಯನ್ನು ಓದಲು ವಿದ್ಯಾರ್ಥಿಗಳಿಗೆ ಹೆಚ್ಚುವರಿ 15 ನಿಮಿಷ ನೀಡಲಾಗಿತ್ತು.

ಫಲಿತಾಂಶ ವೀಕ್ಷಿಸುವ ವಿಧಾನ

  • ಸಿಐಎಸ್‌ಸಿಇಯ ಅದಿಕೃತ ವೆಬ್‌ಸೈಟ್‌ results.cisce.org.ಗೆ ಭೇಟಿ ನೀಡಿ.
  • ಅಥವಾ ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ಪುಟದ ಮೇಲ್ಭಾಗದಲ್ಲಿ ಕಾಣಿಸುವ Course ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ICSE ಅಥವಾ ISC ಪೈಕಿ ಒಂದನ್ನು ಆರಿಸಿ.
  • ಕೋರ್ಸ್‌ ಕೋಡ್‌, ಅಭ್ಯರ್ಥಿಯ ಯುಐಡಿ (UID), ಇಂಡಕ್ಸ್‌ ನಂಬರ್‌ ಮತ್ತು ಕ್ಯಾಪ್ಚಾವನ್ನು ನಮೂದಿಸಿ.
  • Show Results ಆಯ್ಕೆ ಮೇಲೆ ಕ್ಲಿಕ್‌ ಮಾಡಿ.
  • ಫಲಿತಾಂಶವನ್ನು ಡೌನ್‌ಲೋಡ್‌ ಮಾಡಿ ಮತ್ತು ಪ್ರಿಂಟ್‌ ಔಟ್‌ ತೆಗೆದಿಡಿ.

ಸಿಐಎಸ್‌ಸಿಇ ಈ ಬಾರಿ ಹೊಸ ಸೌಲಭ್ಯವನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ತಮ್ಮ ಐಸಿಎಸ್ಇ ಮತ್ತು ಐಎಸ್‌ಸಿ ಫಲಿತಾಂಶಗಳ ಮರು ಪರಿಶೀಲನೆ ಮತ್ತು ಮರು ಮೌಲ್ಯಮಾಪನವನ್ನು ಕೋರಲು ಅನುವು ಮಾಡಿಕೊಟ್ಟಿದೆ. ಮರುಪರಿಶೀಲನೆಗೆ ಪ್ರತಿ ಪತ್ರಿಕೆಗೆ 1,000 ರೂ. ಮರು ಮೌಲ್ಯಮಾಪನಕ್ಕೆ 1,500 ರೂ. ಶುಲ್ಕ ನಿಗದಿ ಪಡಿಸಲಾಗಿದೆ. ಫಲಿತಾಂಶ ಘೋಷಣೆಯ ನಂತರ ಈ ಆಯ್ಕೆಯು ಪರಿಷತ್ತಿನ ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ. ಇದಲ್ಲದೆ ಐಸಿಎಸ್ಇ ಮತ್ತು ಐಎಸ್‌ಸಿ ಕಂಪಾರ್ಟ್‌ಮೆಂಟ್‌ ಪರೀಕ್ಷೆಗಳನ್ನು ನಿಲ್ಲಿಸಲು ಸಿಐಎಸ್‌ಇ ನಿರ್ಧರಿಸಿದೆ. ಬದಲಾಗಿ ವಿದ್ಯಾರ್ಥಿಗಳಿಗೆ ಎರಡು ವಿಷಯಗಳಲ್ಲಿ ಸುಧಾರಣಾ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅವಕಾಶ ನೀಡಿದೆ.

ಫಲಿತಾಂಶದ ವಿವರ

10ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 2,43,617
  • ತೇರ್ಗಡೆಯಾದವರು: 2,42,328
  • ಪಾಸ್‌ ಆದ ಶೇಕಡಾವಾರು: 99.47%

12ನೇ ತರಗತಿ

  • ಪರೀಕ್ಷೆ ಬರೆದ ವಿದ್ಯಾರ್ಥಿಗಳ ಸಂಖ್ಯೆ: 99,901
  • ತೇರ್ಗಡೆಯಾದವರು: 98,088
  • ಪಾಸ್‌ ಆದ ಶೇಕಡಾವಾರು: 98.19%

ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

ಕೆಸೆಟ್‌ ಪರೀಕ್ಷೆ- 2023ರ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ – ಕೆಸೆಟ್‌ʼ (KSET – Karnataka State Eligibility Test) ಇದರ 2023ನೇ ಸಾಲಿನ ಪರೀಕ್ಷೆಯನ್ನು ಕಳೆದ ಜನವರಿ ತಿಂಗಳಲ್ಲಿ ನಡೆಸಲಾಗಿತ್ತು. ಪರೀಕ್ಷೆಗೆ ಬರೆದವರು ಈಗ ತಮ್ಮ ತಾತ್ಕಾಲಿಕ ಸ್ಕೋರ್‌ ಪಟ್ಟಿಯನ್ನು ಚೆಕ್‌ ಮಾಡಿಕೊಳ್ಳಬಹುದು.

ಪ್ರಸ್ತುತ ಕೆಇಎ ಬಿಡುಗಡೆ ಮಾಡಿರುವ ಕೆಸೆಟ್‌ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ವಿವರವಾದ ಮಾಹಿತಿಗಳೊಂದಿಗೆ ಸಲ್ಲಿಸಲು ಮೇ 10, 2024 ರವರೆಗೆ ಅವಕಾಶ ನೀಡಿದೆ. ಆಕ್ಷೇಪಣೆಯನ್ನು ಇಮೇಲ್‌ ವಿಳಾಸ -keakset2023@gmail.com ಗೆ ಕಳುಹಿಸಬಹುದು.

ಇದನ್ನೂ ಓದಿ: Best Courses After SSLC: ವಿಜ್ಞಾನ, ವಾಣಿಜ್ಯ, ಕಲೆ; ಎಸ್ ಎಸ್ ಎಲ್ ಸಿ ನಂತರ ಮುಂದೇನು?

Continue Reading
Advertisement
Lok Sabha Election 2024
ಬಾಗಲಕೋಟೆ8 mins ago

Lok Sabha Election 2024: ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಮುಖ್ಯ ಶಿಕ್ಷಕ ಹೃದಯಾಘಾತದಿಂದ ಸಾವು

The Goat Life OTT Release Date Fix
ಒಟಿಟಿ16 mins ago

The Goat Life: ಪೃಥ್ವಿರಾಜ್ ಸುಕುಮಾರನ್ ಅಭಿನಯದ ʻಆಡುಜೀವಿತಂʼ ಒಟಿಟಿ ರಿಲೀಸ್‌ ಎಲ್ಲಿ?

No Diet Day
ಆರೋಗ್ಯ17 mins ago

No Diet Day: ಬೇಕಾಬಿಟ್ಟಿ ಡಯಟ್‌ ಮಾಡಿದರೆ ಏನಾಗುತ್ತದೆ? ಈ ಸಂಗತಿ ತಿಳಿದಿರಲಿ

Dead Body Found
ಕ್ರೈಂ23 mins ago

Dead Body Found: ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ

Medical Students
ದೇಶ28 mins ago

Medical Students: ಸಮುದ್ರದಲ್ಲಿ ಮುಳುಗಿ 5 ಮೆಡಿಕಲ್‌ ವಿದ್ಯಾರ್ಥಿಗಳ ಸಾವು!

India's T20 World Cup Jersey
ಕ್ರೀಡೆ35 mins ago

India’s T20 World Cup Jersey: ಟಿ20 ವಿಶ್ವಕಪ್​ಗೆ ಹೊಸ ಜೆರ್ಸಿಯಲ್ಲಿ ಆಡಲಿದೆ ಭಾರತ; ಜೆರ್ಸಿ ಫೋಟೊ ವೈರಲ್​

Job Alert
ಉದ್ಯೋಗ40 mins ago

Job Alert: ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ನ 3,712 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ನಾಳೆಯೇ ಕೊನೆಯ ದಿನ

assault case in bengaluru
ಬೆಂಗಳೂರು2 hours ago

Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ

Prajwal Revanna Case site inspection by SIT team in HD Revanna Basavanagudi residence
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ಅತ್ಯಾಚಾರ ಕೇಸ್‌; ಎಚ್‌.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ

No Diet Day 2024
ಆರೋಗ್ಯ2 hours ago

No Diet Day 2024: ಇಂದು ಡಯೆಟ್‌ ರಹಿತ ದಿನ ಆಚರಿಸುವುದೇಕೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ21 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ23 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ23 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ4 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ5 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌