Mann Ki Baat : 2022ರಲ್ಲಿ ದಾಖಲೆಯ 145 ಪೇಟೆಂಟ್‌ಗಳನ್ನು ಗಳಿಸಿದ್ದಕ್ಕೆ ಬೆಂಗಳೂರಿನ ಐಐಎಸ್ಸಿಗೆ ಪ್ರಧಾನಿ ಮೋದಿ ಅಭಿನಂದನೆ Vistara News
Connect with us

ದೇಶ

Mann Ki Baat : 2022ರಲ್ಲಿ ದಾಖಲೆಯ 145 ಪೇಟೆಂಟ್‌ಗಳನ್ನು ಗಳಿಸಿದ್ದಕ್ಕೆ ಬೆಂಗಳೂರಿನ ಐಐಎಸ್ಸಿಗೆ ಪ್ರಧಾನಿ ಮೋದಿ ಅಭಿನಂದನೆ

ಬೆಂಗಳೂರಿನ ಐಐಎಸ್ಸಿ ಕಳೆದ ರ್ಷ ದಾಖಲೆಯ 145 ಪೇಟೆಂಟ್‌ಗಳನ್ನು ತನ್ನದಾಗಿಸಿರುವುದು ವಿಶೇಷ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮನ್‌ ಕಿ ಬಾತ್‌ನಲ್ಲಿ (Mann Ki Baat) ಅಭಿನಂದಿಸಿದ್ದಾರೆ.

VISTARANEWS.COM


on

Prime Minister congratulated IISC for obtaining 145 patents
Koo

ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದಾಖಲೆಯ 145 ಪೇಟೆಂಟ್‌ಗಳನ್ನು ಗಳಿಸಿರುವ ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ (Indian Institute of Science- IISC) ಸಾಧನೆಯನ್ನು ಭಾನುವಾರ ತಮ್ಮ 97ನೇ ಮನ್‌ ಕಿ ಬಾತ್‌ ಬಾನುಲಿ ಕಾರ್ಯಕ್ರಮದಲ್ಲಿ ಪ್ರಶಂಸಿಸಿದ್ದಾರೆ.

ಪ್ರಿಯ ದೇಶವಾಸಿಗಳೇ, ನಿಮಗೊಂದು ಸಂತಸದ ಸಂಗತಿಯನ್ನು ಹೇಳುತ್ತೇನೆ. ದೇಶದ ಅತ್ಯಂತ ಹಳೆಯ ವಿಜ್ಞಾನ ಸಂಸ್ಥೆಗಳಲ್ಲೊಂದಾಗಿರುವ, ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಅನ್ನು ಜೆಮ್‌ಶೆಡ್‌ಜೀ ಟಾಟಾ ಮತ್ತು ಸ್ವಾನಿ ವಿವೇಕಾನಂದರ ಪ್ರೇರಣೆಯಂತೆ ಸ್ಥಾಪಿಸಲಾಯಿತು. ಈ ಮಹತ್ವದ ಸಂಸ್ಥೆ 2022ರಲ್ಲಿ ಒಟ್ಟು 145 ಪೇಟೆಂಟ್‌ಗಳನ್ನು ತನ್ನ ಹೆಸರಿಗೆ ಬರೆಸಿಕೊಂಡಿದೆ. ಅಂದರೆ ಪ್ರತಿ 5 ದಿನಕ್ಕೊಮ್ಮೆ ಎರಡು ಪೇಟೆಂಟ್‌ಗಳನ್ನು ಗಳಿಸಿಕೊಂಡಿದೆ. ಈ ದಾಖಲೆ ಗಮನಾರ್ಹವಾಗಿದೆ. ಇದಕ್ಕಾಗಿ ಐಐಎಸ್ಸಿಯ ವಿಜ್ಞಾನಿಗಳ ತಂಡವನ್ನು ಅಭಿನಂದಿಸುತ್ತೇನೆ. ಭಾರತ ಇವತ್ತು ಜಾಗತಿಕ ಪೇಟೆಂಟ್‌‌ ವಿಚಾರದಲ್ಲಿ 7ನೆಯ ಮತ್ತು ಟ್ರೇಡ್‌ ಮಾರ್ಕ್‌ನಲ್ಲಿ 5ನೆಯ ರ‍್ಯಾಂಕ ಗಳಿಸಿದೆ. ಕಳೆದ ಐದು ವರ್ಷಗಳಲ್ಲಿ ಪೇಟೆಂಟ್‌ ಗಳಿಕೆಯಲ್ಲಿ 50% ಏರಿಕೆಯಾಗಿದೆ. ಜಾಗತಿಕ ಆವಿಷ್ಕಾರ ಸೂಚ್ಯಂಕದಲ್ಲಿ ಭಾರತದ ಸ್ಥಾನ 2015-22 ಅವಧಿಯಲ್ಲಿ 80ರಿಂದ 40ಕ್ಕೆ ಸುಧಾರಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಜಿ-20 ಶೃಂಗ ಕಾರ್ಯಕ್ರಮಗಳು ಚುರುಕು

ದೇಶದಲ್ಲಿ ಜಿ20 ಶೃಂಗ ಕುರಿತ ಕಾರ್ಯಕ್ರಮಗಳು ಚುರುಕಾಗಿವೆ. ಭಾರತದ ಪ್ರತಿಯೊಂದು ಮೂಲೆಯಲ್ಲೂ ಇದು ನಡೆಯುತ್ತಿದೆ. ಅಲ್ಲಿ ಪೌಷ್ಟಿಕಾಹಾರಗಳು, ಸ್ಥಳೀಯ ವೈವಿಧ್ಯಮಯ ಸಿರಿಧಾನ್ಯಗಳ ಆಹಾರಗಳು ಸರಬರಾಜಾಗುತ್ತವೆ. ಸಜ್ಜೆಯಿಂದ ತಯಾರಿಸಿದ ಖಿಚಡಿ, ರಾಗಿ ಪಾಯಸ, ರೋಟಿ, ಪೂರಿ, ದೋಸೆ ಇತ್ಯಾದಿಗಳನ್ನು ಅತಿಥಿಗಳಿಗೆ ಬಡಿಸಲಾಗುತ್ತಿದೆ. ಸಿರಿ ಧಾನ್ಯಗಳನ್ನು ಈ ಮೂಲಕ ಜಾಗತಿಕ ಮಟ್ಟದಲ್ಲಿ ಪ್ರಚುರಪಡಿಸಲಾಗುತ್ತಿದೆ. ಜಿ20 ಕಾರ್ಯಕ್ರಮಗಳು ಇರುವಲ್ಲಿ ಸಿರಿ ಧಾನ್ಯಗಳ ಮಳಿಗೆಗಳನ್ನೂ ತೆರೆಯಲಾಗುತ್ತಿದೆ ಎಂದು ವಿವರಿಸಿದರು.

ಕಾಶ್ಮೀರದ ಪ್ರವಾಸಕ್ಕೆ ಕರೆ: ಕಾಶ್ಮೀರ ಕಣಿವೆಯಲ್ಲಿ ಹಿಮಾಚ್ಛಾದಿತ ಗಿರಿ ಕಂದರಗಳು ಈಗ ಶೋಭಾಯಮಾನವಾಗಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿವೆ. ಅನೇಕ ಮಂದಿ ಭೇಟಿ ನೀಡಿದ ಬಳಿಕ ಜಾಲತಾಣಗಳಲ್ಲಿ ಸುಂದರವಾದ ಫೋಟೊಗಳನ್ನು ಶೇರ್‌ ಮಾಡುತ್ತಿದ್ದಾರೆ. ಅವುಗಳನ್ನು ನೋಡುವವರಿಗೆ ತಾವೂ ಒಮ್ಮೆಯಾದರೂ ಭೇಟಿ ನೀಡಬೇಕು ಎಂದು ಅನ್ನಿಸದೆ ಇರಲಾರದು. ಅವುಗಳು ಅಷ್ಟು ಮನೋಹರವಾಗಿವೆ ಎಂದರು.

ದೇಶ

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

Viral Video: ಬಾಡಿದ ತರಕಾರಿಯನ್ನು ರಾಸಾಯನಿಕಯುಕ್ತ ನೀರಿನಲ್ಲಿ ಮುಳುಗಿಸಿ, ಅದನ್ನು ಫ್ರೆಶ್‌ ಆಗಿ ಮಾಡಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದೇ ಹೇಳಲಾಗುತ್ತಿದೆ.

VISTARANEWS.COM


on

Edited by

Man Dips Leafy Vegetables In Chemical Solution Here is a video
Koo

ನವದೆಹಲಿ: ಸಾಯಂಕಾಲ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ, ವಾಕಿಂಗ್‌ ಮುಗಿಸಿ ಹಿಂತಿರುಗುವಾಗ, ಹೆಂಡತಿ ಒತ್ತಾಯ ಮಾಡಿದಳೋ ಎಂದು ಮನೆಗೆ ತರಕಾರಿ ತೆಗೆದುಕೊಂಡು ಹೋಗುತ್ತೀರಿ. ತರಕಾರಿ ಮಾರುವವರೂ ಅಷ್ಟೇ, ಈಗಷ್ಟೇ ತೋಟದಿಂದ ಮಾರುಕಟ್ಟೆಗೆ ಬಂದಿದೆ, ತರಕಾರಿ ಫ್ರೆಶ್‌ ಇದೆ ಎಂದು ಕೊಡುತ್ತಾರೆ. ನೀವೂ ನೋಡುತ್ತೀರಿ, ಫ್ರೆಶ್‌ ಇರುವುದನ್ನು ದೃಢಪಡಿಸಿಕೊಳ್ಳುತ್ತೀರಿ ಹಾಗೂ ಖರೀದಿಸುತ್ತೀರಿ. ಆದರೆ, ಹುಷಾರ್‌, ಬಹುತೇಕ ಸಂದರ್ಭಗಳಲ್ಲಿ ನೀವು ಖರೀದಿಸಿದ ತರಕಾರಿ ನೈಸರ್ಗಿಕವಾಗಿ ಫ್ರೆಶ್‌ ಆಗಿದ್ದಲ್ಲ, ಅದು ರಾಸಾಯನಿಕದಿಂದ (Viral Video) ಫ್ರೆಶ್‌ ಆಗಿರುತ್ತದೆ.

ಹೌದು, ಬೆಳಗ್ಗೆಯೇ ಮಾರುಕಟ್ಟೆಗೆ ಬಂದ, ಸಂಜೆಯಾಗುತ್ತಲೇ ಬಾಡಿದ ತರಕಾರಿಯನ್ನು ಫ್ರೆಶ್‌ ಆಗಿ ಕಾಣುವ, ಯಾರು ನೋಡಿದರೂ, ಒಂದೇ ನೋಟಕ್ಕೆ ಖರೀದಿಸುವ ರೀತಿಯಲ್ಲಿ ಕೆಮಿಕಲ್‌ ಮಿಶ್ರಿತ ನೀರಿನಲ್ಲಿ ಮುಳುಗಿಸಿ ತೆಗೆಯಲಾಗುತ್ತದೆ. ರಾಸಾಯನಿಕದ ಪರಿಣಾಮದಿಂದಾಗಿ, ಯಾವುದೇ ಬಾಡಿದ ಸೊಪ್ಪು, ತರಕಾರಿ ಫ್ರೆಶ್‌ ಆಗಿ ಕಾಣುತ್ತದೆ. ಹೀಗೆ ರಾಸಾಯನಿಕದಿಂದ ತರಕಾರಿಯನ್ನು ಫ್ರೆಶ್‌ ಆಗಿ ಮಾಡುವ ವಿಡಿಯೊವನ್ನು ಅಮಿತ್‌ ತಧಾನಿ ಎಂಬುವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ವಿಡಿಯೊ ವೈರಲ್‌ ಆಗಿದೆ.

ಇಲ್ಲಿದೆ ಭಯಾನಕ ವಿಡಿಯೊ

ಪೂರ್ತಿಯಾಗಿ ಬಾಡಿದ, ತಿನ್ನಲು ಸಾಧ್ಯವಾಗದ ತರಕಾರಿಯನ್ನು ಮಾರಾಟಗಾರರು ರಾಸಾಯನಿಕದಲ್ಲಿ ಮುಳುಗಿಸಿ ತೆಗೆಯುತ್ತಾರೆ. ಕೆಲವೇ ಸೆಕೆಂಡ್‌ಗಳಲ್ಲಿ ಆ ತರಕಾರಿ ಹಸಿರಾಗಿ, ತಾಜಾ ತರಕಾರಿಯಂತೆ ಕಾಣುತ್ತದೆ. ಇಂತಹ ತರಕಾರಿಯನ್ನು ತಿಂದರೆ, ರಾಸಾಯನಿಕ ದೇಹ ಸೇರಿ ಅನಾರೋಗ್ಯಕ್ಕೀಡಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ತರಕಾರಿ ಖರೀದಿಸುವಾಗ ಜನ ಎಚ್ಚರಿಕೆಯಿಂದ ಇರಬೇಕು ಎಂದೂ ಸಲಹೆ ನೀಡಲಾಗುತ್ತಿದೆ. ಆದರೆ, ಯಾವುದೇ ತರಕಾರಿಯನ್ನು ರಾಸಾಯನಿಕಯುಕ್ತವೋ, ಅಲ್ಲವೋ ಎಂಬುದನ್ನು ಹೇಗೆ ಗುರುತಿಸಬೇಕು ಎಂಬುದೇ ಗೊಂದಲ ಮೂಡಿಸಿದೆ.

ಅಮಿತ್‌ ತಧಾನಿ ಅವರು ಶೇರ್‌ ಮಾಡಿದ ವಿಡಿಯೊವನ್ನು 4.76 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ. “ಇದು ತುಂಬ ಭಯ ಹುಟ್ಟಿಸುವ ವಿಡಿಯೊ. ಇಂತಹ ನಕಲಿ ತರಕಾರಿಯನ್ನು ಗುರುತಿಸುವುದು ಹೇಗೆ? ಸಾಮಾನ್ಯವಾಗಿ ಮನೆಯಲ್ಲಿ ತರಕಾರಿಯನ್ನು ತೊಳೆದು ಅಡುಗೆ ಮಾಡುತ್ತೇವೆ. ಆದರೆ, ಇನ್ನು ಮುಂದೆ ಸಾಬೂನು ಹಾಕಿ ತೊಳೆಯಬೇಕೆ” ಎಂಬುದಾಗಿ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.

ತರಕಾರಿ ಯಾವುದರಲ್ಲಿ ತೊಳೆಯಬೇಕು?

ಮತ್ತೊಬ್ಬರು ಪ್ರತಿಕ್ರಿಯಿಸಿ, “ನಿಮಗೆ ಪರಿಚಯ ಇದ್ದವರಲ್ಲಿ ಮಾತ್ರ ತರಕಾರಿ ಖರೀದಿಸಿ. ಅದನ್ನೂ ಮನೆಗೆ ತಂದಾಗ ಚೆನ್ನಾಗಿ ತೊಳೆಯಿರಿ. ಮನೆಯಲ್ಲಿ ಸ್ವಲ್ಪ ಜಾಗವಿದ್ದರೂ ನೀವೇ ತರಕಾರಿ ಬೆಳೆಯಿರಿ. ಇದರಿಂದ ಆರೋಗ್ಯ ಸುಧಾರಿಸುತ್ತದೆ” ಎಂದು ಸಲಹೆ ನೀಡಿದ್ದಾರೆ. ಇದುವರೆಗೆ ರಾಸಾಯನಿಕ ಬಳಸಿ ಬಾಳೆ ಸೇರಿ ಹಲವು ರೀತಿಯ ಕಾಯಿಗಳನ್ನು ಹಣ್ಣು ಮಾಡಲಾಗುತ್ತಿತ್ತು. ಈಗ ತರಕಾರಿಗೂ ಇದೇ ಪದ್ಧತಿ ರೂಢಿಯಾಗಿರುವುದು ಜನರ ಆತಂಕ ಹೆಚ್ಚಿಸಿದೆ.

ಇದನ್ನೂ ಓದಿ: Viral Video : ಮಾರುದ್ದದ ವಿಷಕಾರಿ ಹಾವನ್ನು ಕೈನಲ್ಲಿ ಹಿಡಿದು ವಿಡಿಯೊ ಮಾಡಿದ ವ್ಯಕ್ತಿ; ಇಲ್ಲಿದೆ ನೋಡಿ ವೈರಲ್‌ ವಿಡಿಯೊ

Continue Reading

ಗ್ಯಾಜೆಟ್ಸ್

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಭಾರತೀಯ ಮಾರುಕಟ್ಟೆಗೆ ಮತ್ತೊಂದು ಹೊಸ ಲ್ಯಾಪ್‌ಟಾಪ್ ಲಾಂಚ್ ಆಗಿದೆ. ಸಾಕಷ್ಟು ಹೊಸ ಫೀಚರ್ಸ್‌ಗಳೊಂದಿಗೆ HP Pavilion Aero 13 ಲ್ಯಾಪ್‌ಟ್ಯಾಪ್ ಗಮನ ಸೆಳೆಯುತ್ತಿದೆ.

VISTARANEWS.COM


on

Edited by

HP Pavilion Aero 13 Laptop Launched and Check details
Koo

ಬೆಂಗಳೂರು: ಎಚ್‌ಪಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಪೆವಿಲಿಯನ್ ಏರೋ 13 (HP Pavilion Aero 13) ಲ್ಯಾಪ್‌ಟ್ಯಾಪ್‌ಗಳನ್ನು ಮಂಗಳಾರ ಬಿಡುಗಡೆ ಮಾಡಿದೆ. ಶಕ್ತಿಯುತ ಕಾರ್ಯಕ್ಷಮತೆಗಾಗಿ AMD Ryzen™ 7 ಪ್ರೊಸೆಸರ್ ಮತ್ತು Radeon™ ಗ್ರಾಫಿಕ್ಸ್‌ ಒಳಗೊಂಡಿದೆ. GenZ ಮತ್ತು ಈ ಸಹಸ್ರಮಾನದ ಆಧುನಿಕ ಗ್ರಾಹಕರಿಗಾಗಿ ಈ ಸಾಧನವನ್ನು ನಿರ್ಮಿಸಲಾಗಿದೆ. ಯಾವುದೇ ಸಮಯ ಅಥವಾ ಸ್ಥಳದಲ್ಲಿ ಉತ್ಪಾದಕವಾಗಿ ಕೆಲಸ ಮಾಡಲು ಮತ್ತು ಕಲಿಯಲು ಅನುವು ಮಾಡಿಕೊಡುತ್ತದೆ.

ಆಧುನಿಕ ಜಗತ್ತಿನಲ್ಲಿ, ಬಹುಮುಖವಾದ ಹಲವು ಕಾರ್ಯಗಳನ್ನು ಮಾಡಬಲ್ಲ, ಕೆಲಸ ಮತ್ತು ಕಲಿಕೆ ಎರಡನ್ನೂ ನಿಭಾಯಿಸಬಲ್ಲ ಸಾಧನಗಳನ್ನು ಗ್ರಾಹಕರು ಅರಸುತ್ತಿರುತ್ತಾರೆ. ಹೈಬ್ರಿಡ್ ಕಾರ್ಯಶೈಲಿಗೆ ಸರಿಹೊಂದುವಂತೆ ಈ ಸಾಧನಗಳು ಹಗುರವಾಗಿರಬೇಕು ಮತ್ತು ಯುವ ಪೀಳಿಗೆಯ ಆದ್ಯತೆಗಳನ್ನು ಪೂರೈಸುವಂತೆ ಆಕರ್ಷಕವಾಗಿರಬೇಕು. ಹೊಚ್ಚ-ಹೊಸ HP ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ Wi-Fi6 ಜತೆಗೆ ವೇಗದ ಮತ್ತು ವಿಶ್ವಾಸಾರ್ಹ ಸಂಪರ್ಕವನ್ನು ಹೊಂದಿದೆ. 10.5 ಗಂಟೆಗಳವರೆಗೆ ಬ್ಯಾಟರಿ ಬಾಳಿಕೆ ಇದ್ದು, ಯಾವುದೇ ಸ್ಥಳದಿಂದ ಕೆಲಸ, ಬ್ರೌಸಿಂಗ್ ಮತ್ತು ಸ್ಟ್ರೀಮಿಂಗ್ ಮಾಡಲು ಸೂಕ್ತವಾಗಿದೆ.

400 ನಿಟ್ಸ್ ಪ್ರಕಾಶಮಾನವಾದ ಮತ್ತು 16:10 ಆಕಾರ ಅನುಪಾತದಗ ಸ್ಕ್ರೀನ್ ಬಳಕೆದಾರರಿಗೆ ತಲ್ಲೀನಗೊಳಿಸುವ ವೀಕ್ಷಣೆಯ ಅನುಭವವನ್ನು ನೀಡುತ್ತದೆ. HP ಪೆವಿಲಿಯನ್ ಏರೋ 13 ಕೇವಲ 970 ಗ್ರಾಂ ಭಾರವಿದ್ದು, GenZ ಗಳು ಮತ್ತು ಈ ಸಹಸ್ರಮಾನದ ಯುವಜನರಿಗೆ ಪೋರ್ಟಬಿಲಿಟಿಯನ್ನು ಸಕ್ರಿಯಗೊಳಿಸುತ್ತದೆ. ಇದು ಅವರ ಶೈಲಿ ಮತ್ತು ಜೀವನಶೈಲಿಗೆ ಹೊಂದಿಕೊಳ್ಳಲು ಮೂರು ವಿಶಿಷ್ಟ ಬಣ್ಣಗಳಲ್ಲಿದೆ – ಪೇಲ್ ರೋಸ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್.

HP ಇಂಡಿಯಾ ಪರ್ಸನಲ್ ಸಿಸ್ಟಮ್ಸ್ ಹಿರಿಯ ನಿರ್ದೇಶಕ ವಿಕ್ರಮ್ ಬೇಡಿ ಮಾತನಾಡಿ, “ಪಿಸಿಗಳು ಹೈಬ್ರಿಡ್ ಪರಿಸರದಲ್ಲಿ ಜನರ ಜೀವನದ ಪ್ರಮುಖ ಅಂಶಗಳಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಬಹುಮುಖ ಮತ್ತು ಶಕ್ತಿಯುತ ಕಂಪ್ಯೂಟಿಂಗ್ ಪರಿಹಾರಗಳಿಗಾಗಿ ವೃದ್ಧಿಸುತ್ತಿರುವ ಬೇಡಿಕೆಯನ್ನು ಪೂರೈಸಲು HP ವಿನ್ಯಾಸಗೊಳಿಸಿದ ಹೊಸ ಪೆವಿಲಿಯನ್ ಏರೋ 13 ಲ್ಯಾಪ್‌ಟಾಪ್ ಪರಿಚಯಿಸಲು ನಾವು ಹೆಮ್ಮೆಪಡುತ್ತೇವೆ. ಇದು ಅಸಾಧಾರಣ ಕಾರ್ಯಕ್ಷಮತೆ ಮತ್ತು ಚಲನಶೀಲತೆಯನ್ನು ನೀಡುತ್ತದೆ, ಬಳಕೆದಾರರು ಪ್ರಯಾಣಿಸುತ್ತಿರುವಾಗಲೂ ಉತ್ಪಾದಕವಾಗಿರಲು ಮತ್ತು ಮನೋರಂಜನೆಯನ್ನು ಪಡೆಯಲು ಅನುವು ಮಾಡಿಕೊಡುತ್ತದೆ. HP ಪೆವಿಲಿಯನ್ ಏರೋ 13 ಆಕರ್ಷಕವಾದ ಪ್ರೀಮಿಯಂ ಲ್ಯಾಪ್‌ಟಾಪ್ ಆಗಿದೆ. ಕೆಲಸ ಮತ್ತು ಗೇಮಿಂಗ್ – ಎರಡೂ ವಿಷಯಗಳಲ್ಲಿ ಬಳಕೆದಾರರಿಗೆ ಅಸಾಧಾರಣವಾಗಿ ಆಪ್ತವಾಗುತ್ತದೆ.

ಹೈಬ್ರಿಡ್ ಪರಿಸರಕ್ಕೆ ಅನುಗುಣವಾಗಿ ಉನ್ನತ ದರ್ಜೆಯ ಕಾರ್ಯಕ್ಷಮತೆಯನ್ನು ನೀಡುವಂತೆ ಹಗುರವಾದ ಆದರೆ ಶಕ್ತಿಶಾಲಿಯಾದ HP ಪೆವಿಲಿಯನ್ ಏರೋ 13 ರೂಪಿಸಲಾಗದೆ. ಕೆಲಸ ಮಾಡಲು ಅಥವಾ ಸ್ನೇಹಿತರ ಜತೆಗೆ ಸ್ಪಷ್ಟವಾದ ವೀಡಿಯೋ ಕರೆಗಳನ್ನು ಮಾಡಲು ಮತ್ತು ಅನಗತ್ಯವಾದ ಹಿನ್ನೆಲೆಯ ಗದ್ದಲವನ್ನು ನಿವಾರಿಸುವ ಸೌಕರ್ಯವನ್ನು ಹೊಂದಿದೆ. 100% sRGB ಸಹಿತವಾದ ವಿಶಾಲವಾದ ಕಲರ್‌ ಪ್ಯಾಲೆಟ್ ವೆಬ್‌ನಲ್ಲಿ ಸರ್ಫ್ ಮಾಡುವಾಗ ಮತ್ತು ವೀಡಿಯೋಗಳನ್ನು ಸ್ಟ್ರೀಮ್ ಮಾಡುವಾಗ ಹೆಚ್ಚು ರೋಮಾಂಚಕ ಚಿತ್ರಗಳ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಫ್ಲಿಕರ್-ರಹಿತವಾದ ಪರದೆಯು ದಿನವಿಡೀ ಕೆಲಸ ಮಾಡಲು ಮತ್ತು ರಾತ್ರಿಯಿಡೀ ಆಟವಾಡಲು ಸೌಕರ್ಯ ನೀಡುವುದು HP ಪೆವಿಲಿಯನ್ ಏರೋ ವಿಶೇಷತೆಯಾಗಿದೆ. ಹೆಚ್ಚುವರಿಯಾಗಿ, 2.5k ರೆಸಲ್ಯೂಶನ್ ಸ್ಕ್ರೀನ್ ಮೇಲೆ ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಗಳನ್ನು ಮೂಡಿಸುತ್ತದೆ. ಇದನ್ನು 4-ಬದಿಗಳ ಕಿರಿದಾದ ಅಂಚಿನ ಸ್ಕ್ರೀನ್ ವೀಕ್ಷಣೆಗೆ ಇರುವ ಎಲ್ಲ ಅಡ್ಡಿಗಳನ್ನೂ ನಿವಾರಿಸುತ್ತದೆ.

ಸುಸ್ಥಿರತೆ ಮತ್ತು ಪರಿಸರ ರಕ್ಷಣೆಗೆ HP ಯ ಬದ್ಧತೆಗೆ ಅನುಗುಣವಾಗಿ HP ಪೆವಿಲಿಯನ್ ಏರೋ 13 ವಿನ್ಯಾಸಗೊಳಿಸಲಾಗಿದೆ. ಗ್ರಾಹಕರು ಬಳಸಿದ ಮರುಬಳಕೆಯ ಮತ್ತು ಸಾಗರದಿಂದ ಸಂಗ್ರಹಿಸಿದ ಪ್ಲಾಸ್ಟಿಕ್‌ನಿಂದ ನಿರ್ಮಿಸಲಾಗಿದೆ. VOC ಹೊರಸೂಸುವಿಕೆ ತಗ್ಗಿಸಲು ನೀರು-ಆಧಾರಿತ ಬಣ್ಣವನ್ನು ಬಳಸಲಾಗಿದೆ.

HP ಪೆವಿಲಿಯನ್ ಏರೋ 13 ವಿಶೇಷತೆಗಳೇನು?

ಡಿಸ್‌ಪ್ಲೇ ಹೇಗಿದೆ?

• 16:10 ಆಕಾರ ಅನುಪಾತದೊಂದಿಗೆ HP ಯ ಪ್ರಥಮ ಪೆವಿಲಿಯನ್ ಲ್ಯಾಪ್‌ಟಾಪ್
• ತಡೆರಹಿತ ಬ್ರೌಸಿಂಗ್ ಅನುಭವಕ್ಕಾಗಿ 400 ನಿಟ್‌ಗಳಷ್ಟು ಪ್ರಕಾಶಮಾನ ಡಿಸ್‌ಪ್ಲೇ
• ಫ್ಲಿಕರ್-ರಹಿತ ಪರದೆ
• ವೀಕ್ಷಣೆಯ ಅಡ್ಡಿಗಳನ್ನು ನಿವಾರಿಸಲು 4-ಬದಿ ಕಿರಿದಾದ ಅಂಚಿನ ಡಿಸ್‌ಪ್ಲೇ
• ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಕ್ಕಾಗಿ 2.5k ರೆಸಲ್ಯೂಶನ್
• ಬಿಸಿಲಿನಲ್ಲೂ ಬ್ರೌಸಿಂಗ್ ಮಾಡುವುದಕ್ಕಾಗಿ 400 ನಿಟ್ಸ್ ಪ್ರಕಾಶ
• 100% sRGB ಯೊಂದಿಗೆ ವಿಶಾಲ ಕಲರ್ ಪ್ಯಾಲೆಟ್

ಕಾರ್ಯಕ್ಷಮತೆ

• ಸುಗಮ ಕಾರ್ಯಕ್ಷಮತೆಗಾಗಿ AMD Ryzen™ 7000 ಸರಣಿಯ ಪ್ರೊಸೆಸರ್, Radeon™ ಗ್ರಾಫಿಕ್ಸ್
• Wi-Fi 6 ಜೊತೆಗೆ ವಿಶ್ವಾಸಾರ್ಹ ಮತ್ತು ವೇಗದ ಸಂಪರ್ಕ
• ತಡೆರಹಿತ ಕಲಿಕೆ ಮತ್ತು ಕೆಲಸಕ್ಕಾಗಿ 10.5 ಗಂಟೆಗಳ ಬ್ಯಾಟರಿ ಬಾಳಿಕೆ
• ಉತ್ತಮ ವೀಡಿಯೊ ಕರೆಗಳಿಗಾಗಿ AI ನಾಯ್ಸ್ ರಿಮೂವಲ್ ಸೌಕರ್ಯ
• ಕಾರ್ಯಗಳ ಬೇಡಿಕೆಯನ್ನು ನಿರ್ವಹಿಸಲು DDR5 RAM

ವಿನ್ಯಾಸ

• ಕೇವಲ 970 ಗ್ರಾಂ ಭಾರವಿದ್ದು, ಪೋರ್ಟಬಿಲಿಟಿಯನ್ನು ಖಚಿತಪಡಿಸುತ್ತದೆ.
• ಮೂರು ಬಣ್ಣಗಳಲ್ಲಿ ಲಭ್ಯವಿದೆ – ರೋಸ್ ಪೇಲ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್

ಬೆಲೆ ಮತ್ತು ಲಭ್ಯತೆ

• HP Pavilion Aero 13 (Ryzen 5 ಸಹಿತ) 72,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ
• HP Pavilion Aero 13 (Ryzen 7 ಸಹಿತ) 1TB SSD 82,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

Continue Reading

ದೇಶ

Supreme Court: ನೇಣಿಗೇರಿಸುವುದು ಕ್ರೂರತನವೇ? ಈ ಬಗ್ಗೆ ಚರ್ಚಿಸಿ ಎಂದು ಕೇಂದ್ರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್

Supreme Court: ಮರಣದಂಡನೆಗೆ ಶಿಕ್ಷೆಗೆ ಗುರಿಯಾದ ಅಪರಾಧಿಯನ್ನು ನೇಣಿಗೇರಿಸುವುದು(Hanging) ಕ್ರೂರತನವೇ? ಈ ಬಗ್ಗೆ ಚರ್ಚೆ ನಡೆಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಕಡಿಮೆ ನೋವಿನ ಮೂಲಕ ಮರಣದಂಡನೆ ಜಾರಿ ಮಾಡುವ ಪರ್ಯಾಯ ಮಾರ್ಗ ಶೋಧಕ್ಕೂ ಸೂಚಿಸಿದೆ.

VISTARANEWS.COM


on

Edited by

Death By Hanging Cruel asks Supreme Court
Koo

ನವದೆಹಲಿ: ನೇಣಿಗೇರಿಸುವ ಮೂಲಕ ಮರಣದಂಡನೆಯನ್ನು(Hanging) ಜಾರಿಗೊಳಿಸುವುದಕ್ಕಿಂತಲೂ ಕಡಿಮೆ ನೋವು ಆಗುವ ಮೂಲಕ ಮರಣದಂಡನೆಯನ್ನು ಜಾರಿ ಮಾಡುವ ಪರ್ಯಾಯ ಮಾರ್ಗವನ್ನು ಶೋಧಿಸಬಹುದೇ ಎಂದು ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಕೇಳಿದೆ. ಈ ಬಗ್ಗೆ ಚರ್ಚೆ ಮಾಡುವಂತೆ ದೇಶದ ಅತ್ಯುನ್ನತ ನ್ಯಾಯಾಲಯವು ಸೂಚಿಸಿದೆ.

ನೇಣು ಹಾಕುವುದಕ್ಕಿಂತ ಕಡಿಮೆ ನೋವಿನ ವಿಧಾನವಿದೆಯೇ ಎಂದು ಪರಿಶೀಲಿಸಲು ಚರ್ಚೆಯನ್ನು ಪ್ರಾರಂಭಿಸಲು ಮತ್ತು ಮಾಹಿತಿಯನ್ನು ಸಂಗ್ರಹಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ನೇಣು ಹಾಕುವ ಮೂಲಕ ಉಂಟಾಗುವ ಪರಿಣಾಮಗಳ ಕುರಿತಾದ ಅಧ್ಯಯನ ಮಾಹಿತಿಯೊಂದಿಗೆ ಬನ್ನಿ ಎಂದು ಕೇಂದ್ರ ಸರ್ಕಾರ ಅಟಾರ್ನಿ ಜನರಲ್ ಅವರಿಗೆ ಆರ್ ವೆಂಕಟರಮಣಿ ಅವರಿಗೆ ಕೋರಿದೆ.

ಮರಣದಂಡನೆಗೆ ಗುರಿಯಾದ ಅಪರಾಧಿಗಳಿಗೆ ನೋವು ರಹಿತವಾಗಿ ಶಿಕ್ಷೆಯನ್ನು ಜಾರಿಗೊಳಿಸುವ ಕುರಿತು ದಾಖಲಾಗಿರುವ ಪಿಐಎಲ್‌ಗಳ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿದೆ. ನೇಣು ಹಾಕುವ ಬದಲು ಗುಂಡು ಹಾರಿಸುವುದು, ಮಾರಣಾಂತಿಕ ಚುಚ್ಚುಮದ್ದು ನೀಡುವುದು ಅಥವಾ ವಿದ್ಯುತ್ ಕುರ್ಚಿ ಮೂಲಕ ಸಾಯಿಸುವುದು ಸೇರಿದಂತೆ ಇತರ ಕ್ರಮಗಳನ್ನು ಅರ್ಜಿಯಲ್ಲಿ ಮಾಹಿತಿ ನೀಡಲಾಗಿದೆ. ಕುತ್ತಿಗೆಗೆ ನೇಣು ಹಾಕಿ ಮರಣದಂಡನೆಯನ್ನು ಜಾರಿಗೊಳಿಸುವ ಪ್ರಕ್ರಿಯೆ ಅತ್ಯಂತ ಕ್ರೂರವಾಗಿದೆ ಎಂದು, ಕಾನೂನು ಆಯೋಗದ ವರದಿಯನ್ನು ಓದಿ ವಕೀಲ ರಿಷಿ ಮಲ್ಹೋತ್ರಾ ಅವರು ಕೋರ್ಟ್‌ಗೆ ತಿಳಿಸಿದರು.

ಹೌದು, ಇದೊಂದು ಚರ್ಚಾ ವಿಷಯವಾಗಿದೆ. ಈ ಕುರಿತು ನಮಗೆ ಕೆಲವು ವೈಜ್ಞಾನಿಕ ದತ್ತಾಂಶಗಳು ನಮ್ಮ ಬಳಿ ಇಲ್ಲ. ನೋವಿಗೆ ಕಾರಣವಾಗುವ ಕೆಲವು ಅಧ್ಯಯನಗಳನ್ನು ನಮಗೆ ಕೊಡಿ. ನಾವು ಒಂದು ಸಮಿತಿಯನ್ನು ರಚಿಸಬಹುದು, ಈ ಕುರಿತು ಮುಂದಿನ ವಿಚಾಣೆಯಲ್ಲಿ ಚರ್ಚಿಸಬಹುದು ಎಂದು ಸಿಜೆಐ ಡಿ ವೈ ಚಂದ್ರಚೂಡ್ ಹೇಳಿದರು. ಅಲ್ಲದೇ, ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ನಿಗದಿ ಮಾಡಿದ್ದಾರೆ.

ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್ ಪಿ ಎಸ್ ನರಸಿಂಹ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇಂದಿಗೂ ಸಾವಿನಲ್ಲಿ ಘನತೆ ಇರಬೇಕೆಂಬ ಪ್ರಶ್ನೆ ಚರ್ಚೆಯಾಗುತ್ತಲೇ ಇದೆ. ಅದು ಕಡಿಮೆ ನೋವಿನಿಂದ ಕೂಡಿರಬೇಕು. ಸದ್ಯದ ಪರಿಸ್ಥಿತಿಯ ನೇಣು ಹಾಕುವುದು ತೃಪ್ತಿಕರ ಸಾಧನವಾಗಿದೆ. ಹಾಗಾದಲ್ಲಿ, ಇಂಜೆಕ್ಷನ್ ಕೊಟ್ಟು ಸಾಯಿಸುವುದು ಪರಿಗಣಿಸಬಹುದೇ ಎಂದು ಜಸ್ಟೀಸ್ ಹೇಳಿದರು.

ಚುಚ್ಚುಮದ್ದು ಮೂಲಕ ಮರಣ ದಂಡನೆ ಶಿಕ್ಷೆಯ ಜಾರಿ ಮಾಡುವುದು ನೋವಿನಿಂದ ಕೊಡಿದೆ. ಶೂಟ್ ಮಾಡುವ ಮೂಲಕ ಶಿಕ್ಷೆ ಜಾರಿ ಮಾಡುವುದು ಮಿಲಿಟರಿ ಆಡಳಿತಗಳ ನೆಚ್ಚಿನ ಟೈಮ್‌ಪಾಸ್ ಆಗಿತ್ತು. ಇದು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರು ಹೇಳಿದರು.

Continue Reading

ಕರ್ನಾಟಕ

Nitin Gadkari: ಗಡ್ಕರಿಗೆ ಬೆದರಿಕೆ ಕರೆ ಮಾಡಿದ್ದು ಮಂಗಳೂರು ಮಹಿಳೆಯ ಮೊಬೈಲ್‌ನಿಂದ, ಏನಿದು ಕೇಸ್?

Nitin Gadkari: ಕಳೆದ ಜನವರಿಯಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿನಿಂದ ಜಯೇಶ್‌ ಕಾಂತಾ ಎಂಬಾತನ ಹೆಸರಿನಲ್ಲಿ ನಾಗಪುರದ ಕಚೇರಿಗೆ ಬೆದರಿಕೆ ಕರೆ ಮಾಡಲಾಗಿತ್ತು. ಇದೀಗ ಅದೇ ಜಯೇಶ್‌ ಹೆಸರಿನಲ್ಲಿ ಹಿಂಡಲಗಾ ಜೈಲಿನಿಂದಲೇ ಕರೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Edited by

Threat Calls to Nitin Gadkari made by Mangaluru womans phone Says Police
Koo

ಬೆಂಗಳೂರು: ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ (Nitin Gadkari) ಅವರಿಗೆ ಮತ್ತೆ ಬೆದರಿಕೆ ಕರೆಗಳು ಬಂದಿದ್ದು, ಇದರ ಹಿನ್ನೆಲೆಯಲ್ಲಿ ಸಚಿವರ ಕಚೇರಿ ಹಾಗೂ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ ಜಯೇಶ್‌ ಪೂಜಾರಿ ಎಂಬಾತನೇ ಮತ್ತೆ ಬೆದರಿಕೆ ಕರೆ ಮಾಡಿದ್ದಾನೆ ಎಂಬುದಾಗಿ ನಾಗ್ಪುರ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಮಂಗಳೂರಿನ ಮಹಿಳೆಯ ಮೊಬೈಲ್‌ನಿಂದ ಬೆದರಿಕೆ ಕರೆ ಮಾಡಿದ್ದಾನೆ ಎಂದು ಮಹತ್ವದ ಅಂಶ ಬಹಿರಂಗಪಡಿಸಿದ್ದಾರೆ.

“ನಿತಿನ್‌ ಗಡ್ಕರಿ ಅವರ ಕಚೇರಿಗೆ ಕರೆಗಳನ್ನು ಮಾಡಿದ ವ್ಯಕ್ತಿಯು ಜಯೇಶ್‌ ಪೂಜಾರಿ ಎಂಬುದಾಗಿ ತಿಳಿಸಿದ್ದಾನೆ. ಕರೆ ಮಾಡಿದ ನಂಬರ್‌ಅನ್ನು ಆಧರಿಸಿ ತನಿಖೆ ನಡೆಸಲಾಗಿದ್ದು, ಆ ಮಹಿಳೆಯು ಮಂಗಳೂರಿನವರು ಎಂಬುದಾಗಿ ಗೊತ್ತಾಗಿದೆ. ನಾವು ಕೂಡ ಆ ಮಹಿಳೆಯನ್ನು ಸಂಪರ್ಕಿಸಿದ್ದು, ಮಂಗಳೂರಿನಲ್ಲಿ ಇವೆಂಟ್‌ ಮ್ಯಾನೇಜ್‌ಮೆಂಟ್‌ ಕೆಲಸ ಮಾಡಿಕೊಂಡಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಮಹಿಳೆಯ ಫ್ರೆಂಡ್‌ ಅಥವಾ ಜಯೇಶ್‌ ಪೂಜಾರಿಯಿಂದ ಕರೆ ಬಂದಿರುವ ಆಯಾಮದಲ್ಲಿಯೂ ತನಿಖೆ ನಡೆಸಲಾಗುತ್ತಿದೆ” ಎಂದು ನಾಗ್ಪುರ ಡಿಸಿಪಿ ರಾಹುಲ್‌ ಮಂದಾನೆ ಮಾಹಿತಿ ನೀಡಿದ್ದಾರೆ.

ನಾಗ್ಪುರ ಪೊಲೀಸರು ನೀಡಿದ ಮಾಹಿತಿ

ನಿತಿನ್‌ ಗಡ್ಕರಿ ಕಚೇರಿಗೆಕರೆ ಮಾಡಿ 10 ಕೋಟಿ ರೂಪಾಯಿ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಜನವರಿಯಲ್ಲಿ ಕರೆ ಮಾಡಿದ್ದಾಗ 100 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದ ಎಂಬುದಾಗಿ ತಿಳಿದುಬಂದಿದೆ. ಅಲ್ಲದೆ, ಜನವರಿಯಲ್ಲಿ ಕರೆ ಮಾಡಿದ್ದಾತ, ತಾನು ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಸಹಚರ ಎಂಬುದಾಗಿ ಹೇಳಿದ್ದ. ಆಗಲೂ, ಗಡ್ಕರಿ ನಿವಾಸ ಹಾಗೂ ಕಚೇರಿಗೆ ಹೆಚ್ಚಿನ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು.

ಜನವರಿಯಲ್ಲೂ ಜಯೇಶ್‌ ಪೂಜಾರಿ ಹೆಸರಲ್ಲಿ ಕರೆ

ಕಳೆದ ಜನವರಿ 14ರಂದು ನಾಗ್ಪುರದಲ್ಲಿರುವ ನಿತಿನ್‌ ಗಡ್ಕರಿ ಅವರ ಕಚೇರಿಗೆ ರಾತ್ರಿ 11.25, 11.32 ಮತ್ತು 12.32ಕ್ಕೆ ಕರೆ ಮಾಡಿ ಬೆದರಿಕೆ ಹಾಕಲಾಗಿತ್ತು. ಇದು ಹಿಂಡಲಗಾ ಜೈಲಿನಿಂದ ಬಂದ ಕರೆ ಇದೆಂದು ಪ್ರಾಥಮಿಕ ತನಿಖೆಯಲ್ಲೇ ಬಯಲಾಗಿತ್ತು. ಆವತ್ತು ಕರೆ ಮಾಡಿದವನು ಜೈಲಿನಲ್ಲಿರುವ ಹಿಂಡಲಗಾ ಜೈಲಿನಲ್ಲಿರುವ ಕೈದಿಯಾಗಿರುವ ಗ್ಯಾಂಗ್‌ ಸ್ಟರ್‌ ಜಯೇಶ್‌ ಕಾಂತಾ ಅಲಿಯಾಸ್‌ ಜಯೇಶ್‌ ಪೂಜಾರಿ ಎಂದು ಪತ್ತೆ ಹಚ್ಚಲಾಗಿತ್ತು. ಆವತ್ತು ಜಯೇಶ್‌ ಪೂಜಾರಿಯ ಕೋಣೆಯನ್ನು ಶೋಧಿಸಿದಾಗ ಒಂದು ಡೈರಿ ಪತ್ತೆಯಾಗಿತ್ತು.

ಜಯೇಶ್‌ ಕಾಂತಾನನ್ನು ಆವತ್ತು ನಾಗಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮರಳಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದರು. ಈಗ ಆತ ಮತ್ತೆ ಕರೆ ಮಾಡಿದ್ದಾನೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಪದೇಪದೆ ಗಡ್ಕರಿ ಅವರಿಗೆ ಕರೆ ಮಾಡುವ ಉದ್ದೇಶದ ಬಗ್ಗೆಯೂ ತನಿಖೆ ಆಗಬೇಕಾಗಿದೆ. ಮಹಾರಾಷ್ಟ್ರ ಎಟಿಎಸ್‌ ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: Nitin Gadkari : ಕೇಂದ್ರ ಸಚಿವ ನಿತಿನ್‌ ಗಡ್ಕರಿ ಕಚೇರಿಗೆ ಮತ್ತೆ ಜೀವ ಬೆದರಿಕೆ ಕರೆ; ಏನಾಗುತ್ತಿದೆ ಹಿಂಡಲಗಾ ಜೈಲಿನಲ್ಲಿ?

Continue Reading
Advertisement
Man Dips Leafy Vegetables In Chemical Solution, Here is a video
ದೇಶ35 seconds ago

Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ

ಸಿನಿಮಾ6 mins ago

Rashmika Mandanna: ದ್ವೇಷಿಸುವವರನ್ನು ಹೇಗೆ ಎದುರಿಸಬೇಕೆಂದು ಪಾಠ ಹೇಳಿಕೊಟ್ಟ ನಟಿ ರಶ್ಮಿಕಾ ಮಂದಣ್ಣ

inflation
ವಾಣಿಜ್ಯ8 mins ago

Retail inflation : ಚಿಲ್ಲರೆ ಹಣದುಬ್ಬರ ಹೆಚ್ಚಳಕ್ಕೆ ಆರ್‌ಬಿಐ ಕಳವಳ

Delhi team won the toss against UP and chose fielding
ಕ್ರಿಕೆಟ್10 mins ago

WPL 2023 : ಯುಪಿ ವಿರುದ್ಧ ಟಾಸ್​ ಗೆದ್ದ ಡೆಲ್ಲಿ ತಂಡದಿಂದ ಫೀಲ್ಡಿಂಗ್ ಆಯ್ಕೆ

savadatti accident
ಕರ್ನಾಟಕ14 mins ago

Road accident : ಸವದತ್ತಿ ಪಟ್ಟಣದಲ್ಲಿ ಲಾರಿ ಬ್ರೇಕ್‌ ಫೇಲ್‌ ಆಗಿ ಸರಣಿ ಅಪಘಾತ; ಸ್ಥಳದಲ್ಲೇ ಇಬ್ಬರು ಮೃತ್ಯು

HP Pavilion Aero 13 Laptop Launched and Check details
ಗ್ಯಾಜೆಟ್ಸ್16 mins ago

HP Pavilion Aero 13 ಲ್ಯಾಪ್‌ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?

ಕರ್ನಾಟಕ17 mins ago

Basavaraj Bommai: ವಿಜಯಪುರದಲ್ಲಿ 4.64 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸುವ ಗುರಿ; ಬೊಮ್ಮಾಯಿ

congress says cm basavraj bommai will not get chance to contest inkarnataka election
ಕರ್ನಾಟಕ29 mins ago

Karnataka Election: ಸಿಎಂ ಬೊಮ್ಮಾಯಿಗೇ ಟಿಕೆಟ್‌ ಸಿಗುವುದು ಡೌಟು ಎಂದ ಕಾಂಗ್ರೆಸ್‌

Azam peer Khadri
ಕರ್ನಾಟಕ40 mins ago

Karnataka Elections : ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಕಟ್ಟಿ ಹಾಕಲು ಹೊರಟ ಕಾಂಗ್ರೆಸ್‌ಗೆ ಈಗ ಖಾದ್ರಿ ಸಂಕಟ!

ಕಿರುತೆರೆ43 mins ago

Kannada Serial: 900 ಸಂಚಿಕೆ ಪೂರೈಸಿದ ಜೊತೆ ಜೊತೆಯಲಿ ಧಾರಾವಾಹಿ; ಸಂಭ್ರಮದಲ್ಲಿ ತಂಡ

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ1 month ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Village Accountant Recruitment
ಉದ್ಯೋಗ1 month ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Sphoorti Salu
ಸುವಚನ15 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Paid leave for govt employees involved in the strike
ನೌಕರರ ಕಾರ್ನರ್3 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ4 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ1 month ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ2 hours ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ6 hours ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ7 hours ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ1 day ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ1 day ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

someone cant tell the truth that Tipu used to charge high taxes on Hindus says Hariprakash konemane
ಕರ್ನಾಟಕ2 days ago

ಇತಿಹಾಸ ವಸ್ತುನಿಷ್ಠವಾಗಿರಬೇಕು, ನಿಸ್ವಾರ್ಥದಿಂದ ಬರೆಯುವವರನ್ನು ಗೌರವಿಸಬೇಕು: ಹರಿಪ್ರಕಾಶ್‌ ಕೋಣೆಮನೆ

Auto services to be stopped from Sunday midnight, Drivers protest against whiteboard bike taxi
ಕರ್ನಾಟಕ2 days ago

Bengaluru Auto Bandh: ಬೈಕ್‌ ಟ್ಯಾಕ್ಸಿಗೆ ವಿರೋಧ; ಭಾನುವಾರ ಮಧ್ಯರಾತ್ರಿಯಿಂದಲೇ ಆಟೋ ಸಂಚಾರ ಸ್ಥಗಿತ

Organizing our Power Run Marathon in the name of puneeth rajkumar
ಕರ್ನಾಟಕ2 days ago

Puneeth Rajkumar: ಅಪ್ಪು ಹೆಸರಲ್ಲಿ ನಮ್ಮ ಪವರ್ ರನ್ ಮ್ಯಾರಥಾನ್; ಅಶ್ವಿನಿ ಪುನೀತ್‌ ಚಾಲನೆ

Due to heavy rains, motorists struggle on Bengaluru-Mysuru dashapatha
ಕರ್ನಾಟಕ3 days ago

Karnataka Rain: ಸರಾಗವಾಗಿ ಹರಿಯದ ಮಳೆ ನೀರು, ಕೈಕೊಟ್ಟ ವಾಹನ; ಬೆಂಗಳೂರು-ಮೈಸೂರು ದಶಪಥದಲ್ಲಿ ದಿಕ್ಕೆಟ್ಟ ಪ್ರಯಾಣಿಕರು!

ಕರ್ನಾಟಕ6 days ago

Karnataka Election 2023: ಧ್ರುವನಾರಾಯಣ ಪುತ್ರ ದರ್ಶನ್‌ಗಾಗಿ ನಂಜನಗೂಡು ಟಿಕೆಟ್ ತ್ಯಾಗ ಮಾಡಿದ ಎಚ್.ಸಿ. ಮಹದೇವಪ್ಪ

ಟ್ರೆಂಡಿಂಗ್‌

error: Content is protected !!