Central Vista | ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ - Vistara News

ದೇಶ

Central Vista | ಇಂಡಿಯಾ ಗೇಟ್‌ನಲ್ಲಿ ನೇತಾಜಿ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್‌ (Central Vista) ಅವರ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ. ಏಕಶಿಲೆಯ ಗ್ರಾನೈಟ್‌ನಲ್ಲಿ ನೇತಾಜಿ ಅವರ ೨೮ ಅಡಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದು, ಇದನ್ನು ಕೆತ್ತಲು ಶಿಲ್ಪಿಗಳು 26 ಸಾವಿರ ಗಂಟೆ ವ್ಯಯಿಸಿದ್ದಾರೆ.

VISTARANEWS.COM


on

central subhash1
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್‌ (Central Vista) ಅವರ ಮೂರ್ತಿಯನ್ನು ಅನಾವರಣಗೊಳಿಸಿದ್ದಾರೆ. ಏಕಶಿಲೆಯ ಗ್ರಾನೈಟ್‌ನಲ್ಲಿ ನೇತಾಜಿ ಅವರ ೨೮ ಅಡಿ ಪ್ರತಿಮೆಯನ್ನು ಅನಾವರಣಗೊಳಿಸಿದ್ದು, ಇದನ್ನು ಕೆತ್ತಲು ಶಿಲ್ಪಿಗಳು ೨೬ ಸಾವಿರ ಗಂಟೆ ವ್ಯಯಿಸಿದ್ದಾರೆ.

ಸೆಂಟ್ರಲ್‌ ವಿಸ್ಟಾ ಯೋಜನೆಯಡಿ ಇಂಡಿಯಾ ಗೇಟ್‌ನಿಂದ ರಾಷ್ಟ್ರಪತಿ ಭವನದವರೆಗಿನ ರಾಜಪಥ (ಕರ್ತವ್ಯ ಪಥ) ವ್ಯಾಪ್ತಿಯನ್ನು ಅಭಿವೃದ್ಧಿಪಡಿಸಲಾಗಿದೆ. ಅಲ್ಲದೆ, ಇಂಡಿಯಾ ಗೇಟ್‌ನಲ್ಲಿ ೨೮ ಅಡಿ ಎತ್ತರದ, 65 ಮೆಟ್ರಿಕ್‌ ಟನ್‌ನ ಪ್ರತಿಮೆ ಅಳವಡಿಸಲಾಗಿದೆ. ಆಧುನಿಕ ಉಪಕರಣಗಳನ್ನು ಬಳಸಿ ಶಿಲ್ಪಿಗಳು ಸಾಂಪ್ರದಾಯಿಕ ಶೈಲಿಯಲ್ಲಿಯೇ ಮೂರ್ತಿಯನ್ನು ಕೆತ್ತಿದ್ದಾರೆ. ಇದಕ್ಕೆ ಮೋದಿ ಅವರು ವಿಧ್ಯುಕ್ತ ಚಾಲನೆ ನೀಡಿದ್ದಾರೆ.

ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ೧೨೫ನೇ ಜನ್ಮದಿನದ ಹಿನ್ನೆಲೆಯಲ್ಲಿ ಜನವರಿ ೨೩ರ ಪರಾಕ್ರಮ ದಿವಸದಂದು ನೇತಾಜಿಯವರ “ಹಾಲೋಗ್ರಾಂ ಪ್ರತಿಮೆ”ಯನ್ನು ಮೋದಿ ಅನಾವರಣಗೊಳಿಸಿದ್ದರು. ಈಗ ಇದೇ ಜಾಗದಲ್ಲಿ ನೇತಾಜಿ ಅವರ ನೈಜ ಮೂರ್ತಿಯನ್ನು ಅನಾವರಣಗೊಳಿಸಲಾಗಿದೆ.

ಇದನ್ನೂ ಓದಿ | Rajpath | ಬ್ರಿಟಿಷರ ಕಾಲದ ಹೆಸರಿಗೆ ವಿದಾಯ, ರಾಜಪಥದ ಹೆಸರು ಬದಲಿಸಲು ತೀರ್ಮಾನ, ಏನದು ಹೊಸ ಹೆಸರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ

Pune porsche car crash : ಪರಾಧದ ಗಂಭೀರತೆಯನ್ನು ಆಧರಿಸಿ ವಿಚಾರಣೆ ಸಮಯದಲ್ಲಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು. ಅದರ ಹಿನ್ನೆಲೆಯಲ್ಲಿ ಬೇಲ್ ರದ್ದು ಮಾಡಲಾಗಿದೆ. ಹೆಚ್ಚಿನ ತನಿಖೆಯ ಪ್ರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯ ಮಂಡಳಿ ಹೇಳಿದೆ.

VISTARANEWS.COM


on

Pune porsche car crash
Koo

ಬೆಂಗಳೂರು : ಪುಣೆಯ ಬಾರ್​ ಒಂದರಲ್ಲಿ ಪಾರ್ಟಿ ಮಾಡಿ ಮದ್ಯ ಸೇವಿಸಿದ ನಂತರ ತನ್ನ ಅಪ್ಪನ ಐಷಾರಾಮಿ ಪೋರ್ಷೆ ಕಾರನ್ನು (Pune porsche car crash) ಚಲಾಯಿಸಿಕೊಂಡು ಹೋಗಿ ಅಫಘಾತ ಎಸಗಿದ್ದ 17 ಬಾಲಕನಿಗೆ ನೀಡಲಾಗಿದ್ದ ಜಾಮೀನನ್ನು ಬಾಲ ನ್ಯಾಯ ಮಂಡಳಿ ವಜಾ ಮಾಡಿದೆ. ಬಾಲಕ ಬೈಕ್​ಗೆ ಗುದ್ದಿದ ಪರಿಣಾಮ ಇಬ್ಬರು ಮೃತಪಟ್ಟಿದ್ದರು. ಈ ಘಟನೆ ದೇಶದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ, ಮದ್ಯದ ಮತ್ತಿನಲ್ಲಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದವನಿಗೆ ಬೇಲ್​ ಕೊಟ್ಟ ಬಗ್ಗೆಯೂ ಚರ್ಚೆಗಳು ನಡೆದಿದ್ದವು.

ಅಪಘಾತ ಎಸಗಿ ಇಬ್ಬರನ್ನು ಬಲಿ ಪಡೆದ ಅಪ್ರಾಪ್ತ ವಯಸ್ಕನನ್ನು ಮಕ್ಕಳ ವೀಕ್ಷಣಾ ಕೇಂದ್ರಕ್ಕೆ ಕಳುಹಿಸಬೇಕಾಗುತ್ತದೆ ಎಂದು ಮಂಡಳಿ ಹೇಳಿದೆ. ಅಪರಾಧದ ಗಂಭೀರತೆಯನ್ನು ಆಧರಿಸಿ ವಿಚಾರಣೆ ಸಮಯದಲ್ಲಿ ಅಪ್ರಾಪ್ತ ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಬೇಕೆಂದು ಪುಣೆ ಪೊಲೀಸರು ಒತ್ತಾಯಿಸಿದ್ದರು. ಅದರ ಹಿನ್ನೆಲೆಯಲ್ಲಿ ಬೇಲ್ ರದ್ದು ಮಾಡಲಾಗಿದೆ. ಹೆಚ್ಚಿನ ತನಿಖೆಯ ಪ್ರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾಯ ಮಂಡಳಿ ಹೇಳಿದೆ.

ಪುಣೆಯಲ್ಲಿ ಪೋರ್ಷೆ ಕಾರಿನಲ್ಲಿ ಅತಿ ವೇಗವಾಗಿ ಸಾಗಿದ ಬಾಲಕ ಇಬ್ಬರು ಐಟಿ ವೃತ್ತಿಪರರಿಬ್ಬರ ಸಾವಿಗೆ ಕಾರಣನಾಗಿದ್ದ. 17 ವರ್ಷದ ಬಾಲಕನಿಗೆ 25 ವರ್ಷ ತುಂಬುವವರೆಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಲಾಗುವುದುಎಂದು ಮಹಾರಾಷ್ಟ್ರ ಸಾರಿಗೆ ಆಯುಕ್ತ ವಿವೇಕ್ ಭೀಮನ್ವರ್ ಬುಧವಾರ ಹೇಳಿದ್ದಾರೆ.

ಇದನ್ನೂ ಓದಿ:

ಕಾರಿನ ಮಾಲೀಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್​ ಅಗರ್ವಾಲ್​ 1,758 ರೂ.ಗಳ ಶುಲ್ಕವನ್ನು ಪಾವತಿಸದ ಕಾರಣ ಪೋರ್ಷೆ ಟೇಕಾನ್ ನ ಶಾಶ್ವತ ನೋಂದಣಿ ಆಗಿರಲಿಲ್ಲ. ಆ ಪ್ರಕ್ರಿಯೆ ಮಾರ್ಚ್ ನಿಂದ ಬಾಕಿ ಉಳಿದಿದೆ ಎಂದು ರಾಜ್ಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ. ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಸೆಕ್ಷನ್ 158 ರ ಅಡಿಯಲ್ಲಿ ಹೊಸ ಪ್ರಕರಣ ದಾಖಲಾದ ನಂತರ ಬಾಲಕನನ್ನು ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ವಿಶಾಲ್ ಅಗರ್ವಾಲ್ ಅವರನ್ನು ಬುಧವಾರ ಪುಣೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಅವರನ್ನು ಮೇ 24 ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ.

ಚಾಣಾಕ್ಷತನ ಮೆರೆದ ಪೊಲೀಸರು
ವಿಶಾಲ್‌ ಅಗರ್ವಾಲ್‌ ಇಷ್ಟೆಲ್ಲ ಯೋಜನೆ ರೂಪಿಸಿದರೂ ಪುಣೆ ಕ್ರೈಂ ಬ್ರ್ಯಾಂಚ್‌ ಪೊಲೀಸರು ಸಂಭಾಜಿನಗರದಲ್ಲಿ ವಿಶಾಲ್‌ ಅಗರ್ವಾಲ್‌ ಅವರನ್ನು ಬಂಧಿಸಿದರು. ಸಿಸಿಟಿವಿ ಕ್ಯಾಮೆರಾ ಹಾಗೂ ವಿಶಾಲ್‌ ಅಗರ್ವಾಲ್‌ ಗೆಳೆಯನ ಕಾರಿನ ಜಿಪಿಎಸ್‌ ಟ್ರ್ಯಾಕ್‌ ಮಾಡಿ, ಕೊನೆಗೂ ಅವರನ್ನು ಬಂಧಿಸಿದ್ದಾರೆ. ಸಂಭಾಜಿ ನಗರದ ಲಾಡ್ಜ್‌ನಲ್ಲಿ ಇರುವ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿರುವ ವಿಶಾಲ್‌ ಅಗರ್ವಾಲ್‌ ವಿರುದ್ಧ ಪೊಲೀಸರು ಎಫ್‌ಐಆರ್‌ ಕೂಡ ದಾಖಲಿಸಿದ್ದಾರೆ.

Continue Reading

ದೇಶ

Lok Sabha Election : ಬಿಜೆಪಿ 305 ಸೀಟ್ ಗೆಲ್ಲೋದು ಗ್ಯಾರಂಟಿ; ಅಮೆರಿಕದ ರಾಜಕೀಯ ಪಂಡಿತನ ಭವಿಷ್ಯ

Lok Sabha Election: ಜಾಗತಿಕವಾಗಿ ಅಗಾಧ ಪ್ರಮಾಣದ ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿದೆ. ಜಾಗತೀಕರಣದ ಭವಿಷ್ಯವು ಕಂಪನಿಗಳು ಬಯಸಿದ ರೀತಿಯಲ್ಲಿ ಹೋಗುತ್ತಿಲ್ಲ. ರಾಜಕೀಯವು ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಮೂಗು ತೂರಿಸುತ್ತಿದೆ. ಯುದ್ಧಗಳು, ಯುಎಸ್-ಚೀನಾ ಸಂಬಂಧಗಳು ಮತ್ತು ಯುಎಸ್ ಚುನಾವಣೆ ಎಲ್ಲವೂ ಅದರ ದೊಡ್ಡ ಭಾಗವಾಗಿದೆ ಎಂದು ಇಯಾನ್ ಬ್ರೆಮ್ಮರ್​ ಹೇಳಿದರು.

VISTARANEWS.COM


on

lok sabha election
Koo

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬಿಜೆಪಿ 305 ಸ್ಥಾನಗಳನ್ನು (ಹೆಚ್ಚು ಕಡಿಮೆ) ಗೆಲ್ಲಲಿದೆ ಎಂದು ಅಮೆರಿಕದ ರಾಜಕೀಯ ಪಂಡಿತ ಇಯಾನ್ ಬ್ರೆಮ್ಮರ್ ಮಂಗಳವಾರ ಭವಿಷ್ಯ ನುಡಿದಿದ್ದಾರೆ. ಎನ್​ಡಿಟಿವಿಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಅವರು ಭಾರತದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆ ಕುರಿತು ಮಾತನಾಡುತ್ತಾ ಬಿಜೆಪಿಗೆ ಮತ್ತೆ ಬಹುಮತ ಖಾತರಿ ಎಂದು ಹೇಳಿದ್ದಾರೆ. ಸಂಶೋಧನಾ ಸಲಹಾ ಸಂಸ್ಥೆಯಾದ ಯುರೇಷಿಯಾ ಗ್ರೂಪ್ನ ಸ್ಥಾಪಕರಾಗಿರುವ ಬ್ರೆಮ್ಮರ್, ಜಾಗತಿಕ ರಾಜಕೀಯ ದೃಷ್ಟಿಕೋನದಿಂದ ಭಾರತೀಯ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆ ಸ್ಥಿರವಾಗಿದೆ. ನವೆಂಬರ್ ನಲ್ಲಿ ನಡೆಯಲಿರುವ ಅಮೆರಿಕದ ಚುನಾವಣೆಗಿಂತಲೂ ಉತ್ತಮವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಜಾಗತಿಕವಾಗಿ ಅಗಾಧ ಪ್ರಮಾಣದ ರಾಜಕೀಯ ಅನಿಶ್ಚಿತತೆ ಸೃಷ್ಟಿಯಾಗಿದೆ. ಜಾಗತೀಕರಣದ ಭವಿಷ್ಯವು ಕಂಪನಿಗಳು ಬಯಸಿದ ರೀತಿಯಲ್ಲಿ ಹೋಗುತ್ತಿಲ್ಲ. ರಾಜಕೀಯವು ಜಾಗತಿಕ ಮಾರುಕಟ್ಟೆಯಲ್ಲಿ ತನ್ನ ಮೂಗು ತೂರಿಸುತ್ತಿದೆ. ಯುದ್ಧಗಳು, ಯುಎಸ್-ಚೀನಾ ಸಂಬಂಧಗಳು ಮತ್ತು ಯುಎಸ್ ಚುನಾವಣೆ ಎಲ್ಲವೂ ಅದರ ದೊಡ್ಡ ಭಾಗವಾಗಿದೆ. ಎಲ್ಲವನ್ನೂ ಸರಿಯಾಗಿ ನಿರ್ವಹಿಸಲಾಗುತ್ತಿಲ್ಲ ಮತ್ತು ಹೆಚ್ಚು ನಕಾರಾತ್ಮಕವಾಗಿವೆ. ಜಗತ್ತಿನಲ್ಲಿ ರಾಜಕೀಯವಾಗಿ ಸ್ಥಿರವಾಗಿ ಕಾಣುವ ಏಕೈಕ ವಿಷಯವೆಂದರೆ ಭಾರತದ ಚುನಾವಣೆ. ಉಳಿದೆಲ್ಲವೂ ಸಮಸ್ಯಾತ್ಮಕ ಕಾಣುತ್ತದೆ ಎಂದು ಬ್ರೆಮ್ಮರ್​ ಹೇಳಿದ್ದಾರೆ.

ಏಪ್ರಿಲ್ 19 ರಂದು ಪ್ರಾರಂಭವಾದ ಏಳು ಹಂತಗಳಲ್ಲಿ ಭಾರತೀಯ ಚುನಾವಣೆಯ ಬಗ್ಗೆ ಅವರ ಭವಿಷ್ಯವಾಣಿಯ ಬಗ್ಗೆ ಕೇಳಿದಾಗ, ಯುರೇಷಿಯಾ ಗ್ರೂಪ್ ಸಂಶೋಧನೆಯ ಪ್ರಕಾರ ಬಿಜೆಪಿ 295ರಿಂದ 315 ಸ್ಥಾನಗಳನ್ನು ಗೆಲ್ಲಬಹುದು ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 2014 ರ ಚುನಾವಣೆಯಲ್ಲಿ 282 ಸ್ಥಾನಗಳೊಂದಿಗೆ (ಅದರ ಎನ್ಡಿಎ ಪಾಲುದಾರರೊಂದಿಗೆ ಸೇರಿಕೊಂಟ್ಟು ಒಟ್ಟು 336 ಸ್ಥಾನ ) ಮತ್ತು 2019 ರಲ್ಲಿ 303 (ಎನ್​ಡಿ ಮಿತ್ರಪಕ್ಷಗಳೊಂದಿಗೆ 353) ಸ್ಥಾನಗಳನ್ನು ಗೆದ್ದುಕೊಂಡಿತ್ತು. ಬಿಜೆಪಿ ಈ ಬಾರಿ ಹ್ಯಾಟ್ರಿಕ್ ಸಾಧನೆ ಮಾಡುವ ನಿರೀಕ್ಷೆಯಿದೆ.

ಭಾರತದಲ್ಲಿ ರಾಜಕೀಯ ಅನಿಶ್ಚಿತತೆ ಇಲ್ಲ

ವಿಶ್ವದ ಎಲ್ಲಾ ಚುನಾವಣೆಗಳಲ್ಲಿ (ಯುರೋಪಿಯನ್ ಒಕ್ಕೂಟದ ಚುನಾವಣೆಗಳು ಮತ್ತು ಬಹುಶಃ, ಯುನೈಟೆಡ್ ಕಿಂಗ್ಡಮ್​ನ ರಾಷ್ಟ್ರೀಯ ಚುನಾವಣೆ ಸೇರಿದಂತೆ) ಅತಿದೊಡ್ಡ ಪ್ರಜಾಪ್ರಭುತ್ವವನ್ನು ಹೊಂದಿರುವ ಭಾರತವು ಸುಗಮ ಚುನಾಣೆಯನ್ನು ಹೊಂದಿದೆ. ಭಾರತೀಯ ರಾಜಕೀಯ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಅನಿಶ್ಚಿತತೆ ಇಲ್ಲ” ಎಂದು ಇಯಾನ್ ಬ್ರೆಮ್ಮರ್​ ಹೇಳಿದರು.

ಇದನ್ನೂ ಓದಿ: Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

ಬ್ರೆಮ್ಮರ್ ಅವರು “ಮುಕ್ತ ಮತ್ತು ನ್ಯಾಯಸಮ್ಮತ ಮತ್ತು ಪಾರದರ್ಶಕ” ಭಾರತೀಯ ಚುನಾವಣಾ ಪ್ರಕ್ರಿಯೆಯನ್ನು ಶ್ಲಾಘಿಸಿದರು. “ಬಲವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಸ್ಥಿರ ಸುಧಾರಣೆಯ ಹಿನ್ನೆಲೆಯಲ್ಲಿ ಮೋದಿ ಮೂರನೇ ಅವಧಿಗೆ ಗೆಲ್ಲುವುದು ಬಹುತೇಕ ಖಚಿತ ಎಂದು ಅವರು ಹೇಳಿದರು.

ಭಾರತದ ಆರ್ಥಿಕ ಭವಿಷ್ಯದ ಬಗ್ಗೆ ಮಾತನಾಡಿದ ಬ್ರೆಮ್ಮರ್, “ಭಾರತವು ದಶಕಗಳಿಂದ ಕಳಪೆ ಸಾಧನೆ ಮಾಡಿರುವುದನ್ನು ಜಗತ್ತು ನೋಡಿದೆ. ಭಾರತವು ನಂಬಲಾಗದ ಮಾನವ ಸಂಪನ್ಮೂಲ ಮತ್ತು ಬಲವಾದ ಬೌದ್ಧಿಕ ಬಂಡವಾಳ ಹೊಂದಿದೆ. ಅಮೆರಿಕದ ಅನೇಕ ಸಿಇಒಗಳು ಭಾರತದಿಂದ ಬರುತ್ತಾರೆ. ಆದರೂ ಭಾರತವು ಆರ್ಥಿಕತೆಯಾಗಿ ಕಳಪೆ ಸಾಧನೆ ಮಾಡಿದೆ ಎಂಬುದಾಗಿ ವಿಶ್ಲೇಷಣೆ ಮಾಡಿದರು.

ಈಗ ನಾವು ಬೆಳವಣಿಗೆಯನ್ನು ನೋಡುತ್ತಿದ್ದೇವೆ. ಭಾರತವು ಮುಂದಿನ ವರ್ಷ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು ಬಹುಶಃ 2028 ರ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ನಾವು ನಂಬಿದ್ದೇವೆ. ಆದರೆ ವಿಶ್ವದ ಇತರ ಭಾಗಗಳೊಂದಿಗಿನ ಸ್ನೇಹವನ್ನು ವ್ಯಾಖ್ಯಾನಿಸುವ ವಿಷಯದಲ್ಲಿ ಭಾರತವು ಹೆಚ್ಚು ಶಕ್ತಿಶಾಲಿಯಾಗುತ್ತಿರುವುದನ್ನು ನಾವು ನೋಡುತ್ತೇವೆ ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Shah Rukh Khan : ಶಾರುಖ್​ ಖಾನ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Shah Rukh Khan : ಐಪಿಎಲ್ 2024ರ ಮೊದಲ ಪ್ಲೇಆಫ್ ಪಂದ್ಯದಲ್ಲಿ ಎಸ್ಆರ್​ಎಚ್​​​ ವಿರುದ್ಧ ತಮ್ಮ ತಂಡ ಕೆಕೆಆರ್ ಅನ್ನು ಬೆಂಬಲಿಸಲು ಶಾರುಖ್ ಖಾನ್ ಅಹಮದಾಬಾದ್​ಗೆ ಬಂದಿದ್ದರು. ಪಂದ್ಯದ ಮುಕ್ತಾಯದ ತನಕ ಅವರು ಮೈದಾನದಲ್ಲಿಯೇ ಇದ್ದರು. ಬಳಿಕ ಅವರು ಮೈದಾನಕ್ಕೆ ಇಳಿದು ಕ್ಯಾಮೆರಾಗಳಿಗೆ ಫೋಸ್​ ಕೊಟ್ಟಿದ್ದರು. ಅಭಿಮಾನಿಗಳಿಗೆ ಕೈ ಬೀಸಿ ಶುಭಾಶಯ ಹೇಳಿದ್ದರು.

VISTARANEWS.COM


on

Shah Rukh Khan
Koo

ಅಹ್ಮದಾಬಾದ್: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ (Shah Rukh Khan) ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬುದಾಗಿ ವರದಿಗಳಾಗಿವೆ. ಅವರನ್ನು ತಕ್ಷಣವೇ ಅಹಮದಾಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವರದಿಗಳ ಪ್ರಕಾರ, ಮಂಗಳವಾರ ಕೋಲ್ಕತ್ತಾ ನೈಟ್ ರೈಡರ್ಸ್ (KKR ) ಮತ್ತು ಸನ್​ರೈಸರ್ಸ್​​ ಹೈದರಾಬಾದ್ (SRH) ನಡುವಿನ ಐಪಿಎಲ್ ಪಂದ್ಯದ ಸಮಯದಲ್ಲಿ ನಟ ಬಿಸಿಲಿನ ಆಘಾತಕ್ಕೆ (Sun Stroke) ಒಳಗಾದ ನಂತರ ಅನಾರೋಗ್ಯಕ್ಕೆ ಒಳಗಾಗಿದ್ದಾರೆ ಎಂದು ಹೇಳಲಾಗಿದೆ.

ಐಪಿಎಲ್ 2024ರ ಮೊದಲ ಪ್ಲೇಆಫ್ ಪಂದ್ಯದಲ್ಲಿ ಎಸ್ಆರ್​ಎಚ್​​​ ವಿರುದ್ಧ ತಮ್ಮ ತಂಡ ಕೆಕೆಆರ್ ಅನ್ನು ಬೆಂಬಲಿಸಲು ಶಾರುಖ್ ಖಾನ್ ಅಹಮದಾಬಾದ್​ಗೆ ಬಂದಿದ್ದರು. ಪಂದ್ಯದ ಮುಕ್ತಾಯದ ತನಕ ಅವರು ಮೈದಾನದಲ್ಲಿಯೇ ಇದ್ದರು. ಬಳಿಕ ಅವರು ಮೈದಾನಕ್ಕೆ ಇಳಿದು ಕ್ಯಾಮೆರಾಗಳಿಗೆ ಫೋಸ್​ ಕೊಟ್ಟಿದ್ದರು. ಅಭಿಮಾನಿಗಳಿಗೆ ಕೈ ಬೀಸಿ ಶುಭಾಶಯ ಹೇಳಿದ್ದರು. ಆದರೆ, ಅಲ್ಲಿಂದ ನಿರ್ಗಮಿಸಿದ ಬಳಿಕ ಅವರಿಗೆ ಅನಾರೋಗ್ಯ ಉಂಟಾಗಿದೆ ಎಂದು ಹೇಳಲಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರ ಆರೋಗ್ಯದ ನಿಗಾ ವಹಿಸುತ್ತಿದ್ದಾರೆ ಎಂಬುದಾಗಿ ಮಾಹಿತಿ ದೊರಕಿದೆ.

ಫೈನಲ್ ತಲುಪಿದ ಕೆಕೆಆರ್

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ರೋಚಕ ಪಂದ್ಯದ ನಂತರ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಐಪಿಎಲ್ 2024 ರ ಫೈನಲ್​ಗೆ ಪ್ರವೇಶಿಸಿದೆ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದ ವೇಳೆ ಶಾರುಖ್ ಖಾನ್ ಮತ್ತು ಅವರ ಮಕ್ಕಳಾದ ಅಬ್ರಾಮ್, ಸುಹಾನಾ ಇದ್ದರು. ಜತೆಗೆ ನಟಿ ಅನನ್ಯಾ ಮತ್ತು ಶನಾಯಾ ಕೂಡ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: LPL 2024 : ಫ್ರಾಂಚೈಸಿ ಮಾಲೀಕನಿಂದಲೇ ಮ್ಯಾಚ್​ ಫಿಕ್ಸಿಂಗ್; ಬಂಧನ

ಯಶಸ್ಸಿನ ಸಂಭ್ರಮದಲ್ಲಿ ಶಾರುಖ್​

ಶಾರುಖ್ ಖಾನ್ ಇತ್ತೀಚೆಗೆ ಮೂರು ಬ್ಲಾಕ್ಬಸ್ಟರ್ ಚಿತ್ರಗಳನ್ನು ನೀಡಿದ್ದಾರೆ: “ಪಠಾಣ್”, “ಜವಾನ್” ಮತ್ತು “ಡಂಕಿ”. ಆ ಬಳಿಕ ಅವರು ತಮ್ಮ ಐಪಿಎಲ್ ತಂಡ ಕೋಲ್ಕತಾ ನೈಟ್ ರೈಡರ್​ ಜತೆಗೆ ಇದ್ದಾರೆ. ಈ ಬಾರಿ ಅವರ ತಂಡುವ ಫೈನಲ್​ಗೆ ಪ್ರವೇಶ ಪಡೆದಿದೆ. ಇದರ ಜತೆಎಗ ಕಿಂಗ್ ಖಾನ್ ತಮ್ಮ ಮುಂಬರುವ ಚಿತ್ರ “ಕಿಂಗ್” ನಲ್ಲಿ ಕೆಲಸ ಮಾಡುತ್ತಿದ್ದಾರೆ,

ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರು
ಶಾರುಖ್ ಖಾನ್ ಅವರ ಆರೋಗ್ಯದ ಕುರಿತ ಮಾಹಿತಿಗಾಗಿ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತಿದ್ದಾರೆ. ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವ ಅಗತ್ಯವನ್ನು ಶಾರುಖ್ ಅವರ ಅನಾರೋಗ್ಯ ಎತ್ತಿ ತೋರಿಸುತ್ತಿದೆ.

Continue Reading

ಪ್ರಮುಖ ಸುದ್ದಿ

Other Backward Classes: 2011ರ ನಂತರ ನೀಡಿದ್ದ ಒಬಿಸಿ ಪ್ರಮಾಣಪತ್ರಗಳನ್ನು ರದ್ದು ಮಾಡಿದ ಕೋಲ್ಕೊತಾ ಹೈಕೋರ್ಟ್​​

Other Backward Classes : 2012 ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ.

VISTARANEWS.COM


on

Calcutta High Court
Koo

ಕೋಲ್ಕತಾ: ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಆಡಳಿತದಲ್ಲಿ 2011ರಿಂದ ಪಶ್ಚಿಮ ಬಂಗಾಳದಲ್ಲಿ ನೀಡಲಾಗುತ್ತಿರುವ ಇತರ ಹಿಂದುಳಿದ ವರ್ಗಗಳ (Other Backward Classes) ಎಲ್ಲಾ ಪ್ರಮಾಣಪತ್ರಗಳನ್ನು ಕೋಲ್ಕೊತಾ ಹೈಕೋರ್ಟ್ ರದ್ದುಗೊಳಿಸಿದೆ. ಅದು ಹೊಸದಾಗಿ ಪಟ್ಟಿಗೆ ಸೇರ್ಪಡೆ ಮಾಡಲಾಗಿರುವ ಜಾತಿಗಳಿಗೆ ಅನ್ವಯ. ಅಂತೆಯೇ ಇದು ಹಾಲಿ ಈ ಸಮುದಾಯದ ಜನರು ಹೊಂದಿರುವ ಉದ್ಯೋಗಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಈ ಆದೇಶವನ್ನು ಸ್ವೀಕರಿಸಿವುದಿಲ್ಲ ಎಂದು ಹೇಳಿದ್ದಾರೆ. ತಪಶಿಲಿ ಸಮುದಾಯಕ್ಕೆ ನೀಡಲಾದ ಹಕ್ಕುಗಳನ್ನು ಕಸಿದುಕೊಳ್ಳುವ ಆದೇಶವನ್ನು ತಾವು ಒಪ್ಪುವುದಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ.

2012ರಲ್ಲಿ ಅಂಗೀಕರಿಸಿದ ರಾಜ್ಯ ಸರ್ಕಾರದ ಹೊಸ ಕಾನೂನಿನ ಅಡಿಯಲ್ಲಿ ಹಲವಾರು ಸಮುದಾಯಗಳಿಗೆ ಇತರ ಹಿಂದುಳಿದ ವರ್ಗಗಳ ಮೀಸಲಾತಿ ನೀಡಲಾಗಿತ್ತು. ಅದನ್ನು ನ್ಯಾಯಾಲಯ ರದ್ದುಗೊಳಿಸಿದೆ. ಆದಾಗ್ಯೂ, ನ್ಯಾಯಮೂರ್ತಿಗಳಾದ ತಪಬ್ರತಾ ಚಕ್ರವರ್ತಿ ಮತ್ತು ರಾಜಶೇಖರ್ ಮಂಥಾ ಅವರು, 2010 ಕ್ಕಿಂತ ಮೊದಲು ವರ್ಗೀಕರಿಸಿದ ಒಬಿಸಿಯ 66 ವರ್ಗಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡಿಲ್ಲ. ಈ ವರ್ಗಗಳ ಕುರಿತು ಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿಗಳಲ್ಲಿ ಪ್ರಶ್ನಿಸಲಾಗಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅರ್ಜಿಯಲ್ಲಿ ಏನಿತ್ತು?

“2010 ರ ನಂತರ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳು 1993 (ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗ) ಕಾಯ್ದೆಯನ್ನು ಕಡೆಗಣಿಸಿವೆ ಎಂದು 2011 ರಲ್ಲಿ ಸಲ್ಲಿಸಲಾದ ಪಿಐಎಲ್​ನಲ್ಲಿ ಪ್ರಶ್ನಿಸಲಾಗಿತ್ತು . ವಾಸ್ತವವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಿಗೆ ಅವರ ಸರಿಯಾದ ಪ್ರಮಾಣಪತ್ರಗಳನ್ನು ನೀಡಲಾಗಿಲ್ಲ. 2010ರ ನಂತರ ನೀಡಲಾದ ಎಲ್ಲ ಒಬಿಸಿ ಪ್ರಮಾಣಪತ್ರಗಳನ್ನು ವಿಭಾಗೀಯ ಪೀಠ ರದ್ದುಪಡಿಸಿದೆ. 2010ಕ್ಕಿಂತ ಮೊದಲು ಒಬಿಸಿ ಪ್ರಮಾಣಪತ್ರ ಹೊಂದಿರುವವರು ಕೋಲ್ಕೊತಾ ಹೈಕೋರ್ಟ್ ವಿಚಾರಣೆಯ ಭಾರವನ್ನು ಹೊರುವುದಿಲ್ಲ” ಎಂದು ವಕೀಲ ಸುದೀಪ್ತಾ ದಾಸ್ ಗುಪ್ತಾ ವಾದಿಸಿದ್ದರು.

ಆದಾಗ್ಯೂ, ಈ ಆದೇಶವು ಈಗಾಗಲೇ ಸೇವೆಯಲ್ಲಿರುವ ಅಥವಾ ಮೀಸಲಾತಿಯಿಂದ ಪ್ರಯೋಜನ ಪಡೆದ ಅಥವಾ ರಾಜ್ಯದ ಯಾವುದೇ ಆಯ್ಕೆ ಪ್ರಕ್ರಿಯೆಯಲ್ಲಿ ಯಶಸ್ವಿಯಾದ ಹೊರಹಾಕಲ್ಪಟ್ಟ ವರ್ಗಗಳ ನಾಗರಿಕರ ಸೇವೆಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಮಮತಾ ವಿರೋಧ

ಪಶ್ಚಿಮ ಬಂಗಾಳ ಸರ್ಕಾರ ಪರಿಚಯಿಸಿದ ಒಬಿಸಿ ಮೀಸಲಾತಿ ಕೋಟಾ ಮುಂದುವರಿಯುತ್ತದೆ. ಮನೆ-ಮನೆ ಸಮೀಕ್ಷೆ ನಡೆಸಿದ ನಂತರ ನಾವು ಮಸೂದೆ ಸಿದ್ಧಪಡಿಸಿದ್ದೇವೆ. ಅದನ್ನು ಕ್ಯಾಬಿನೆಟ್ ಮತ್ತು ವಿಧಾನಸಭೆ ಅಂಗೀಕರಿಸಿದೆ ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: Bomb Threat : ಗೃಹ ಸಚಿವಾಲಯಕ್ಕೆ ಬಾಂಬ್ ಬೆದರಿಕೆ; ದೆಹಲಿಯಲ್ಲಿ ಆತಂಕ

ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಜನರಿಗೆ ನೀಡುವ ಸೌಲಭ್ಯಗಳನ್ನು ತಡೆಯಲು ಬಿಜೆಪಿ ಪಿತೂರಿ ನಡೆಸಿದೆ. ಅಂತಹ ಧೈರ್ಯವನ್ನು ಅವರು ಹೇಗೆ ತೋರಿಸುತ್ತಾರೆ ಎಂದು ಅವರು ಪ್ರಶ್ನಿಸಿದ್ದಾರೆ. ನ್ಯಾಯಾಲಯದ ತೀರ್ಪು ತಪಶಿಲಿ ಸಮುದಾಯಕ್ಕೆ ಮೀಸಲಾತಿಯನ್ನು ರದ್ದುಗೊಳಿಸುವ ಬಿಜೆಪಿಯ ಪ್ರಯತ್ನಗಳ ಭಾಗವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮತ್ತು ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.

ಒಬ್ಬ ನ್ಯಾಯಾಧೀಶರು ‘ನಾನು ಆರ್‌ಎಸ್‌ಎಸ್‌ ವ್ಯಕ್ತಿ’ ಎಂದು ಹೇಳುತ್ತಿದ್ದಾರೆ/ ಇನ್ನೊಬ್ಬರು ಬಿಜೆಪಿಗೆ ಸೇರುತ್ತಾರೆ… ತಪಶಿಲಿಗಳಿಗೆ ಮೀಸಲಾತಿಯನ್ನು ರದ್ದುಗೊಳಿಸಲು ಮೋದಿ ಬಯಸಿದ್ದಾರೆ. ನಾನು ಅದಕ್ಕೆ ಅವಕಾಶ ನೀಡುವುದಿಲ್ಲ. ಅವರು ಆದಿವಾಸಿಗಳ ಹಕ್ಕುಗಳನ್ನು ಕಸಿದುಕೊಳ್ಳಲು ಬಯಸುತ್ತಾರೆ ಎಂದು ಅವರು ಅಭಿಷೇಕ್ ಹೇಳಿದ್ದಾರೆ.

Continue Reading
Advertisement
IPL 2024
ಕ್ರೀಡೆ2 hours ago

IPL 2024 : 17 ವರ್ಷ ಕಾದರೂ ಟ್ರೋಫಿ ಇಲ್ಲ: ಆರ್​ಸಿಬಿ ಅಭಿಮಾನಿಗಳ ಕಾಯುವಿಕೆ ನಿರಂತರ

Karnataka police
ಪ್ರಮುಖ ಸುದ್ದಿ2 hours ago

ವಿಸ್ತಾರ ಸಂಪಾದಕೀಯ: ಒಂದು ಕಡೆ ಸರಣಿ ಕೊಲೆ, ಇನ್ನೊಂದೆಡೆ ಪೊಲೀಸರ ಬೀದಿ ಸುಲಿಗೆ!

Harish Poonja
ಕರ್ನಾಟಕ3 hours ago

Harish Poonja: ವಿಚಾರಣೆ ಮುಗಿಸಿ ಠಾಣೆಯಿಂದ ಹೊರಬಂದ ಶಾಸಕ ಹರೀಶ್‌ ಪೂಂಜಾ

IPL 2024
ಕ್ರೀಡೆ3 hours ago

IPL 2024 : ಐಪಿಎಲ್​ 17ನೇ ಆವೃತ್ತಿಯಲ್ಲಿ ಆರ್​ಸಿಬಿ ಅಭಿಯಾನ ಅಂತ್ಯ; ರಾಜಸ್ಥಾನ್​ 2ನೇ ಕ್ವಾಲಿಫೈಯರ್​ಗೆ

IPL 2024
ಪ್ರಮುಖ ಸುದ್ದಿ4 hours ago

IPL 2024 : ದಿನೇಶ್​ ಕಾರ್ತಿಕ್​ ಔಟಾ; ನಾಟೌಟಾ? ಮತ್ತೊಂದು ಅಂಪೈರಿಂಗ್ ವಿವಾದ

Mother Dies
ಕರ್ನಾಟಕ4 hours ago

Mother Dies: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಸಾವು; 35 ಲಕ್ಷ ಬಿಲ್‌ ಕಟ್ಟಿ ಮೃತದೇಹ ತೆಗೆದುಕೊಳ್ಳಿ ಎಂದ ಆಸ್ಪತ್ರೆ!

young womans lover was stabbed in the neck by an ex lover
ಉತ್ತರ ಕನ್ನಡ4 hours ago

Assault Case: ಯುವತಿಯ ಪ್ರಿಯಕರನ ಕುತ್ತಿಗೆಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ!

IPL 2024
ಪ್ರಮುಖ ಸುದ್ದಿ5 hours ago

Yuzvendra Chahal : ರಾಜಸ್ಥಾನ್​ ರಾಯಲ್ಸ್​ ಪರ ವಿಕೆಟ್​ ಗಳಿಕೆಯಲ್ಲಿ ಹೊಸ ದಾಖಲೆ ಬರೆದ ಯಜ್ವೇಂದ್ರ ಚಹಲ್​

Pune porsche car crash
ದೇಶ5 hours ago

Pune porsche car crash : ಕುಡಿದು ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಬಾಲಕನ ಜಾಮೀನು ವಜಾ

Kalki 2898 AD
ಪ್ರಮುಖ ಸುದ್ದಿ5 hours ago

Kalki 2898 AD: ಕಲ್ಕಿ ಚಿತ್ರದ ʼಬುಜ್ಜಿʼ ಪಾತ್ರ ರಿವೀಲ್; ಅದ್ಧೂರಿ ಕಾರ್ಯಕ್ರಮದ LIVE ವಿಡಿಯೊ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ20 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ6 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌