Narendra Modi: ಮೋದಿ ಕಾಲಿಗೆ ನಮಸ್ಕರಿಸಿ ತಮ್ಮ ದೇಶಕ್ಕೆ ಸ್ವಾಗತಿಸಿದ ಪಪುವಾ ನ್ಯೂಗಿನಿಯಾ ಪ್ರಧಾನಿ; ಇಲ್ಲಿದೆ ವಿಡಿಯೊ - Vistara News

ದೇಶ

Narendra Modi: ಮೋದಿ ಕಾಲಿಗೆ ನಮಸ್ಕರಿಸಿ ತಮ್ಮ ದೇಶಕ್ಕೆ ಸ್ವಾಗತಿಸಿದ ಪಪುವಾ ನ್ಯೂಗಿನಿಯಾ ಪ್ರಧಾನಿ; ಇಲ್ಲಿದೆ ವಿಡಿಯೊ

Narendra Modi: ನರೇಂದ್ರ ಮೋದಿ ಅವರು ಹೊಸ ದಾಖಲೆ ಬರೆದರು. ಪಪುವಾ ನ್ಯೂಗಿನಿಯಾಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎನಿಸಿದರು. ಮೋದಿ ಅವರಿಗೆ ವಿಶೇಷ ಗೌರವ ನೀಡಲು ಇದು ಕೂಡ ಕಾರಣವಾಗಿದೆ.

VISTARANEWS.COM


on

Narendra Modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಜಗತ್ತಿನ ಯಾವುದೇ ದೇಶಕ್ಕೆ ಹೋಗಲಿ ಹೆಚ್ಚಿನ ಮಾನ್ಯತೆ ಸಿಗುತ್ತದೆ. ಅನಿವಾಸಿ ಭಾರತೀಯರು ಸೇರಿ ಆ ದೇಶದ ನಾಗರಿಕರು ಕೂಡ ಮೋದಿ (Narendra Modi) ಅವರನ್ನು ಸ್ವಾಗತಿಸಲು ಸಜ್ಜಾಗಿರುತ್ತಾರೆ. ಜಾಗತಿಕ ನಾಯಕರು ಕೂಡ ಮೋದಿ ಅವರಿಗೆ ಹೆಚ್ಚಿನ ಗೌರವ ನೀಡುತ್ತಾರೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರೇ ನರೇಂದ್ರ ಮೋದಿ ಅವರಿಂದ ಆಟೋಗ್ರಾಫ್‌ ಪಡೆದಿರುವ ಉದಾಹರಣೆಯೂ ಇದೆ. ಇದರ ಬೆನ್ನಲ್ಲೇ, ಪಪುವಾ ನ್ಯೂಗಿನಿಯಾ ದೇಶದ ಪ್ರಧಾನಿ ಜೇಮ್ಸ್‌ ಮರಾಪೆ ಅವರು ನರೇಂದ್ರ ಮೋದಿ ಅವರ ಕಾಲಿಗೆ ನಮಸ್ಕರಿಸಿ, ತಮ್ಮ ದೇಶಕ್ಕೆ ಸ್ವಾಗತಿಸಿದ್ದಾರೆ. ಈ ವಿಡಿಯೊ ಈಗ ವೈರಲ್‌ ಆಗಿದೆ.

ಪಪುವಾ ನ್ಯೂಗಿನಿಯಾದಲ್ಲಿ ಮೇ 22ರಂದು ಇಂಡಿಯಾ-ಪೆಸಿಫಿಕ್‌ ಐಲ್ಯಾಂಡ್ಸ್‌ ಕೋಪರೇಷನ್‌ (FIPIC) ಸಭೆ ನಡೆಯಲಿದೆ. ಇದಕ್ಕಾಗಿ ಮೋದಿ ಅವರು ಪಪುವಾ ನ್ಯೂಗಿನಿಯಾಗೆ ತೆರಳಿದ್ದಾರೆ. ಮೋದಿ ಅವರು ತಮ್ಮ ದೇಶಕ್ಕೆ ಆಗಮಿಸುತ್ತಲೇ ಅವರನ್ನು ತಬ್ಬಿಕೊಂಡು ಜೇಮ್ಸ್‌ ಮರಾಪೆ ಸ್ವಾಗತಿಸಿದರು. ಇದೇ ವೇಳೆ, ಮೋದಿ ಕಾಲು ಮುಟ್ಟಿ ಅವರು ನಮಸ್ಕರಿಸಿದರು. ಭಾರತದಲ್ಲಿ ಹಿರಿಯರಿಗೆ ನಮಸ್ಕರಿಸಿ ಗೌರವ ಸಲ್ಲಿಸುವ ಪದ್ಧತಿ ಇದೆ. ಇದನ್ನೇ ಜೇಮ್ಸ್‌ ಅವರು ಕೂಡ ಅನುಸರಿಸಿದರು.

ಇಲ್ಲಿದೆ ವಿಡಿಯೊ

ಪಪುವಾ ನ್ಯೂಗಿನಿಯಾಗೆ ತೆರಳುವ ಮೂಲಕ ನರೇಂದ್ರ ಮೋದಿ ಹೊಸ ದಾಖಲೆ ಸೃಷ್ಟಿಸಿದರು. ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿಯೊಬ್ಬರು ಪಪುವಾ ನ್ಯೂಗಿನಿಯಾಗೆ ತೆರಳಿದ್ದಾರೆ. ಇದು ಕೂಡ ಮೋದಿ ಅವರಿಗೆ ವಿಶೇಷ ಗೌರವ ನೀಡಲು ಕಾರಣವಾಗಿದೆ. ಜಿ-7 ಶೃಂಗಸಭೆಯ ಹಿನ್ನೆಲೆಯಲ್ಲಿ ಮೋದಿ ಅವರು ಜಪಾನ್‌ನಲ್ಲಿದ್ದಾಗ ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರು ಮೋದಿ ಆಟೋಗ್ರಾಫ್‌ ತೆಗೆದುಕೊಂಡಿದ್ದು ಕೂಡ ಸುದ್ದಿಯಾಗಿದೆ.

ಇದನ್ನೂ ಓದಿ: G7 Summit: ಪ್ರಧಾನಿ ಮೋದಿ ಆಟೋಗ್ರಾಫ್ ಕೇಳಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್!

ಜಿ7 ಶೃಂಗಸಭೆಯ ವೇಳೆ ಅಧ್ಯಕ್ಷ ಜೋ ಬಿಡನ್ ಅವರು ಪ್ರಧಾನಿ ಮೋದಿಯವರ ಬಳಿಗೆ ಬಂದು ಭಾರತದ ಪ್ರಧಾನ ಮಂತ್ರಿಯ ಕಾರ್ಯಕ್ರಮಕ್ಕೆ ಹಾಜರಾಗಲು ಪ್ರಮುಖ ನಾಗರಿಕರಿಂದ ಬೇಡಿಕೆ ಹೆಚ್ಚುತ್ತಿದೆ ಎಂದು ಹೇಳಿದ್ದಾರೆ. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಕೂಡ, ಸಿಡ್ನಿಯಲ್ಲಿ ಸಮುದಾಯ ಸ್ವಾಗತಕ್ಕಾಗಿ 20,000 ಸಾಮರ್ಥ್ಯವಿದೆ. ಆದರೆ, ಹಾಜರಾಗಲು ಬರುತ್ತಿರುವ ವಿನಂತಿಗಳನ್ನು ಈ ಸಾಮರ್ಥ್ಯಕ್ಕೆ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದರು. ಇದೇ ವೇಳೆ, 90 ಸಾವಿರ ಆಸನ ವ್ಯವಸ್ಥೆ ಇರುವ ಭಾರತದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ತಮ್ಮ ವಿಜಯಯಾತ್ರೆಯಲ್ಲಿ ಹೇಗೆ ಅವರನ್ನು ಜನರು ಸ್ವಾಗತಿಸಿದರು ಎಂಬುದನ್ನು ನೆನಪಿಸಿಕೊಂಡರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

Viral News: ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು.

VISTARANEWS.COM


on

Viral News
Koo

ನವದೆಹಲಿ: ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಮಂಗಳವಾರ ನಡೆದಿದ್ದ(IPL 2024) ಡೆಲ್ಲಿ ಕ್ಯಾಪಿಟಲ್ಸ್​ ಮತ್ತು ರಾಜಸ್ಥಾನ್ ರಾಯಲ್ಸ್​ ನಡುವಣ ಪಂದ್ಯದಲ್ಲಿ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಪರ ಘೋಷಣೆಗಳನ್ನು ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆಪ್ ಕಾರ್ಯಕರ್ತರನ್ನು ದಿಲ್ಲಿ ಪೊಲೀಸರು ಬಂಧಿಸಿರುವ ಘಟನೆ ತಡವಾಗಿ(Viral News) ಬೆಳಕಿಗೆ ಬಂದಿದೆ.

ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಛಾತ್ರ ಯುವ ಸಂಘರ್ಷ(AAP workers) ಸಮಿತಿಯ ಸದಸ್ಯರು ಕೇಜ್ರಿವಾಲ್ ಬಂಧನವನ್ನು ಪ್ರತಿಭಟಿಸಿ ‘ಜೈಲ್ ಕಾ ಜವಾಬ್ ವೋಟ್ ಸೆ’ (ಬಂಧನಕ್ಕೆ ಉತ್ತರವನ್ನು ಮತದಿಂದ ನೀಡಿ) ಎಂಬ ಘೋಷಣೆಯ ಟೀ ಶರ್ಟ್‌ಗಳನ್ನು ಧರಿಸಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಇದು ಮಾತ್ರವಲ್ಲದೆ ಪಂದ್ಯದ ಸಂದರ್ಭ ಕೇಜ್ರಿವಾಲ್ ಬಂಧನ ಖಂಡಿಸಿ ಘೋಷಣೆಗಳನ್ನು ಕೂಗಿದ್ದರು. ಇದೀಗ ಇವರ ವಿರುದ್ಧ ಸಾರ್ವಜನಿಕವಾಗಿ ಗದ್ದಲವನ್ನು ಸೃಷ್ಟಿಸಿದ ಆರೋಪದಲ್ಲಿ ಬಂಧಿಸಲಾಗಿದೆ. ಸೂಕ್ತ ಕಾನೂನಾತ್ಮಕ ವಿಧಿವಿಧಾನಗಳು ಪೂರ್ಣಗೊಂಡ ಬಳಿಕವಷ್ಟೇ ಬಂಧಿತರನ್ನು ಬಿಡುಗಡೆಗೊಳಿಸಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ತಿಹಾರ ಜೈಲಿನಲ್ಲಿದ್ದಾರೆ. ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ IPL 2024 Points Table: ಸನ್​ರೈಸರ್ಸ್​ಗೆ 10 ವಿಕೆಟ್​ ಗೆಲುವು; ಅಂಕಪಟ್ಟಿಯಲ್ಲಿ ಕುಸಿದ ಚೆನ್ನೈ

ಅಷ್ಟೇ ಅಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ನ್ಯಾಯಾಂಗ ಬಂಧನವನ್ನು (Judicial custody) ದೆಹಲಿ ನ್ಯಾಯಾಲಯ ಮೇ 20ರವರೆಗೆ ವಿಸ್ತರಿಸಿದ್ದು, ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ಆದೇಶವನ್ನೂ ಕಾಯ್ದಿರಿಸಿದೆ.

Continue Reading

ಕ್ರೈಂ

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

Crime News: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ. ಪತಿಯ ಕಿರುಕುಳದಿಂದ ಮಹಿಳೆ ಈ ಕೃತ್ಯ ಎಸಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Crime News
Koo

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ ಕಿರುಕುಳದಿಂದ ತಾನು ಈ ನಿರ್ಧಾರಕ್ಕೆ ಬಂದಿರುವುದಾಗಿ ಆರೋಪಿಸಿದ್ದಾಳೆ. ಮೃತರನ್ನು ಅಶ್ವಿನಿ ನಿಕುಂಭ್‌ (30) ಮತ್ತು ಮಕ್ಕಳಾದ ಆರಾಧ್ಯಾ (8) ಹಾಗೂ ಅಗಸ್ತ್ಯ (2) ಎಂದು ಗುರುತಿಸಲಾಗಿದೆ (Crime News).

ʼʼಅಶ್ವಿನಿ ಆತ್ಮಹತ್ಯೆ ಮಾಡುವ ಮುನ್ನ ಮಕ್ಕಳಿಗೆ ವಿಷ ನೀಡಿದ್ದಾರೆʼʼ ಎಂದು ಪೊಲೀಸರು ತಿಳಿಸಿದ್ದು, ಘಟನೆ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಬುಧವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ಅಶ್ವಿನಿ ಕೋನಾರ್ಕ್‌ ನಗರದ ಅಪಾರ್ಟ್‌ಮೆಂಟ್‌ನ ಟೆರೇಸ್‌ನಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಳು. ಘಟನೆ ಸ್ಥಳಕ್ಕೆ ತಲುಪಿದ ಪೊಲೀಸರಿಗೆ ಬಳಿಕ ಆಕೆಯ ಮಕ್ಕಳ ಶವವೂ ಕಂಡು ಬಂದಿತ್ತು. ಈ ವೇಳೆ ಆಕೆಯ ಪತಿ ಊರಿನಲ್ಲಿ ಇರಲಿಲ್ಲ. ಹೀಗಾಗಿ ಆಕೆಯೇ ಮಕ್ಕಳಿಗೆ ವಿಷ ಉಣಿಸಿ ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಊಹಿಸಿದ್ದಾರೆ.

ಡೆತ್‌ನೋಟ್‌ ಪತ್ತೆ

ಪರಿಶೀಲನೆ ವೇಳೆ ಪೊಲೀಸರಿಗೆ ಅಶ್ವಿನಿ ಬರೆದಿದ್ದಾಳೆ ಎನ್ನಲಾದ ಡೆತ್‌ನೋಟ್‌ ಪತ್ತೆಯಾಗಿದೆ. ಇದರಲ್ಲಿ ಆಕೆ ಪತಿ ಸ್ವಪ್ನಿಲ್‌ ಕಿರುಕುಳ ನೀಡುತ್ತಿರುವ ಬಗ್ಗೆ ಉಲ್ಲೇಖಿಸಿದ್ದಾಳೆ.‌ ಜತೆಗೆ ಸಾಯುವ ಮುನ್ನ ವಿಡಿಯೊವನ್ನು ರೆಕಾರ್ಡ್‌ ಮಾಡಿದ್ದಾಳೆ. ಸ್ವಪ್ನಿಲ್‌ ನಿರಂತರ ಹಿಂಸೆ ನೀಡುತ್ತಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಆಕೆ ತನ್ನ ಸಂಬಂಧಿಕರಿಗೆ ಕಳುಹಿಸಿದ ವಿಡಿಯೊದಲ್ಲಿ ತಿಳಿಸಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಕೃತ್ಯ ನಡೆಯುವ ವೇಳೆ ಸ್ವಪ್ನಿಲ್‌ ಕೆಲಸದ ನಿಮಿತ್ತ ಪುಣೆಗೆ ತೆರಳಿದ್ದರು. ಸದ್ಯ ಅವರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿದೆ.

ಇದನ್ನೂ ಓದಿ: ಶಾಲೆಗೆ ಹೋಗದ್ದಕ್ಕೆ ಬೈದ ತಾಯಿ, ಬಾಲಕ ಆತ್ಮಹತ್ಯೆ

ನೆಚ್ಚಿನ ಶ್ವಾನ ಮರಿ ನಾಪತ್ತೆಯಾದ ಕೊರಗಿನಿಂದ ಆತ್ಮಹತ್ಯೆ

ತನ್ನ ಪ್ರೀತಿಯ ಶ್ವಾನ ನಾಪತ್ತೆಯಾದ ಹಿನ್ನೆಲೆಯಲ್ಲಿ ಕೊರಗಿನಿಂದ 12 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಏಪ್ರಿಲ್‌ 27ರಂದು ಹರಿಯಾಣದಲ್ಲಿ ನಡೆದಿತ್ತು. ʼʼಐದು ದಿನಗಳ ಹಿಂದೆ ನಮ್ಮ ಸಾಕು ನಾಯಿ ಕಾಣೆಯಾಗಿತ್ತು. ಈ ಶ್ವಾನ ಮತ್ತು ಬಾಲಕಿಯ ಮಧ್ಯೆ ಸುಮಾರು 3 ತಿಂಗಳಿಂದ ಉತ್ತಮ ಬಾಂಧವ್ಯ ರೂಪುಗೊಂಡಿತ್ತುʼʼ ಎಂದು ಘಟನೆಯ ಬಗ್ಗೆ ಮನೆಯವರು ತಿಳಿಸಿದ್ದರು. ʼʼಶ್ವಾನ ಕಾಣೆಯಾದಾಗಿನಿಂದ ಆಕೆ ಖಿನ್ನತೆಗೆ ಒಳಗಾಗಿದ್ದಳು. ಬಳಿಕ ತೀವ್ರ ಚಿಂತೆಗೆ ಒಳಗಾಗಿದ್ದ ಅವಳು ಸರಿಯಾಗಿ ಆಹಾರವನ್ನೂ ಸೇವಿಸುತ್ತಿರಲಿಲ್ಲʼʼ ಎಂದು ಅವರು ಹೇಳಿದ್ದರು. ಕುಟುಂಬಸ್ಥರು ಆಕೆಯನ್ನು ಸಮಾಧಾನಪಡಿಸಲು ಎಷ್ಟೇ ಪ್ರಯತ್ನಿಸಿದರೂ ನಾಯಿಮರಿಯನ್ನು ಕಳೆದುಕೊಂಡ 6ನೇ ತರಗತಿಯ ವಿದ್ಯಾರ್ಥಿನಿಯ ದುಃಖವನ್ನು ಕಡಿಮೆ ಮಾಡಲು ಸಾಧ್ಯವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.

ಬಾಲಕಿಯ ತಾಯಿ ಮತ್ತು ಸಹೋದರಿ ದಿನಸಿ ಖರೀದಿಗಾಗಿ ಮನೆಯಿಂದ ಹೊರ ಹೋಗಿದ್ದರು. ಮನೆಯಲ್ಲಿ ಒಬ್ಬಳೇ ಇದ್ದ ಬಾಲಕಿ ಈ ವೇಳೆ ಶಾಕಿಂಗ್‌ ನಿರ್ಧಾರ ಕೈಗೊಂಡಿದ್ದಳು. ನೇಣು ಬಿಗಿದುಕೊಂಡು ಜೀವ ಕಳೆದುಕೊಂಡಿದ್ದಳು.

Continue Reading

ವೈರಲ್ ನ್ಯೂಸ್

Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

Viral News: ತಮಿಳುನಾಡಿನ ದೇವಸ್ಥಾನವೊಂದರ ಆವರಣದಲ್ಲಿ ಭೀಕರ ಅಪಘಾತವೊಂದು ನಡೆದಿದ್ದು, ಕಾರಿನ ಚಾಲಕ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದಾನೆ. ದೇಗುಲದ ಕಂಬಕ್ಕೆ ಡಿಕ್ಕಿ ಹೊಡೆದ ಕಾರು ಸಂಪೂರ್ಣ ಜಖಂಗೊಂಡಿದೆ. ವಿಶೇಷ ಎಂದರೆ ಹೊಸ ಕಾರಿನ ಪೂಜೆಯ ವೇಳೆ ಈ ಅಪಘಾತ ನಡೆದಿದೆ. ಸದ್ಯ ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್‌ ಆಗಿದೆ.

VISTARANEWS.COM


on

Viral News
Koo

ಚೆನ್ನೈ: ಹೊಸ ಮನೆ, ವಾಹನ, ದುಬಾರಿ ವಸ್ತು ಕೊಂಡುಕೊಳ್ಳುವುದು ಮಧ್ಯಮ ವರ್ಗದ ಭಾರತೀಯರ ಪಾಲಿನ ಬಹು ದೊಡ್ಡ ಕನಸು. ಈ ಕನಸು ನನಸಾದ ವೇಳೆ ನಾವು ಅದಕ್ಕೆ ಪೂಜೆ ಸಲ್ಲಿಸುವುದು ವಾಡಿಕೆ. ವಾಹನವಾದರೆ ಬಳಸುವ ಮುನ್ನ ದೇವಸ್ಥಾನಕ್ಕೆ ಕೊಂಡೊಯ್ದು ಅದಕ್ಕೆ ಅರ್ಚಕರ ಕೈಯಿಂದ ಪೂಜೆ ಮಾಡಿಸುತ್ತೇವೆ. ಮುಂದೆ ಯಾವ ರೀತಿಯ ವಿಘ್ನವೂ ಎದುರಾಗದಿರಲಿ ಎಂದು ಪ್ರಾರ್ಥನೆ ಸಲ್ಲಿಸುತ್ತೇವೆ. ಅದೇ ರೀತಿ ಇಲ್ಲೊಬ್ಬ ತಾನು ಖರೀದಿಸಿದ ಹೊಸ ಕಾರಿಗೆ ಪೂಜೆ ಸಲ್ಲಿಸಲೆಂದು ದೇವಸ್ಥಾನಕ್ಕೆ ತೆರಳಿದ್ದಾನೆ. ಎಲ್ಲವೂ ಸುಸೂತ್ರವಾಗಿ ನಡೆಸಿತ್ತು. ಆದರೆ ಕೊನೆಯಲ್ಲಿ ಎಡವಟ್ಟೊಂದು ನಡೆದೇ ಹೋಯ್ತು. ಆತ ಬ್ರೇಕ್‌ ಎಂದು ಎಕ್ಸಿಲೇಟರ್‌ ತುಳಿದಿದ್ದು ಕಾರು ದೇವಸ್ಥಾನದ ಕಂಬಕ್ಕೆ ಗುದ್ದಿ ಜಖಂಗೊಂಡಿದೆ. ಸದ್ಯ ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ವೈರಲ್‌ ಆಗಿದೆ (Viral News).

ತಮಿಳುನಾಡಿನ ಕಡಲೂರು ಜಿಲ್ಲೆಯ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆದಿದೆ. ಸುಧಾಕರ್‌ ಎನ್ನುವವರು ಹೊಸ ಕಾರು ಖರೀದಿಸಿದ್ದರು. ವಾಡಿಕೆಯಂತೆ ಹೊಸ ಕಾರನ್ನು ಪೂಜೆಗಾಗಿ ದೇವಸ್ಥಾನಕ್ಕೆ ತಂದಿದ್ದರು. ಹೂ ಮಾಲೆಗಳಿಂದ ಕಾರನ್ನು ಅಲಂಕರಿಸಲಾಗಿತ್ತು. ಅರ್ಚಕರು ಪೂಜೆ ನೆರವೇರಿಸಿ ಕಾರನ್ನು ಸ್ವಲ್ಪ ಮುಂದಕ್ಕೆ ಚಲಾಯಿಸುವಂತೆ ಹೇಳಿದರು.

ಈ ವೇಳೆ ನಡೆಯಿತು ಬಹು ದೊಡ್ಡ ಅಚಾತುರ್ಯ. ಸುಧಾಕರ್‌ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಿದ್ದಾರೆ. ಕಾರು ದೇವಸ್ಥಾನದ ಆವರಣದಲ್ಲಿದ್ದ ಹಂಪ್‌, ಮೆಟ್ಟಿಲು ದಾಟಿ ಸೀದಾ ಮುಂದಕ್ಕೆ ಚಲಿಸಿ ಕಂಬಕ್ಕೆ ಗುದ್ದಿದೆ. ಪಕ್ಕದಲ್ಲಿ ಇದ್ದವರಿಗೆ ಒಂದು ಕ್ಷಣ ಗರ ಬಡಿದಂತಾಗಿದ್ದು, ಏನು ಮಾಡಬೇಕೆಂದು ತೋಚದ ಸ್ಥಿತಿ ನಿರ್ಮಾಣವಾಗಿತ್ತು. ವಿಶೇಷ ಎಂದರೆ ಚಾಲಕನ ಇನ್ನೊಂದು ಬದಿಯ ಡೋರ್ ಬಳಿ ನಿಂತಿದ್ದ ವ್ಯಕ್ತಿಯೊಬ್ಬರು ಕೂಡ ನೇತಾಡಿಕೊಂಡೇ ಹೋಗಿದ್ದಾರೆ. ವಾಹನದ ಹಿಂದೆ ಇನ್ನೊಬ್ಬ ವ್ಯಕ್ತಿಯೊಬ್ಬರು ಓಡುತ್ತಿರುವುದು ಕೂಡ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸದ್ಯ ಹೊಸ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್‌ ಯಾರಿಗೂ ಹಾನಿಯಾಗಿಲ್ಲ. ಚಾಲಕ ಮತ್ತು ಕಾರಿನ ಸ್ಟೆಪ್‌ನಲ್ಲಿ ನೇತಾಡಿಕೊಂಡಿದ್ದ ವ್ಯಕ್ತಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಹೊಸ ಕಾರು ಮಾತ್ರ ಜಖಂಗೊಂಡಿದೆ. ಸಣ್ಣ ಅಚಾತುರ್ಯದಿಂದ ನಡೆದ ಈ ಅನಾಹುತದಿಂದ ಚಾಲಕ ಈಗ ಕೈ ಹಿಸುಕುವಂತಾಗಿದೆ.

ಬೆಂಗಳೂರಿನಲ್ಲಿಯೂ ನಡೆದಿತ್ತು ಇದೇ ರೀತಿಯ ಘಟನೆ

ಇದೇ ರೀತಿಯ ಘಟನೆ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿಯೂ ನಡೆದಿತ್ತು. ಆಂಬ್ಯುಲೆನ್ಸ್‌ ಚಾಲಕನ ಎಡವಟ್ಟಿನಿಂದ ಸರಣಿ ಅಪಘಾತ ಸಂಭವಿಸಿತ್ತು. ಆತ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ ಪರಿಣಾಮ ಆಂಬುಲೆನ್ಸ್, ಮೂರು ಕಾರು ಮತ್ತು ಒಂದು ಬೈಕ್ ನಡುವೆ ಸರಣಿ ಅಪಘಾತ ನಡೆದಿತ್ತು. ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ ಬಳಿ ಈ ಘಟನೆ ವರದಿಯಾಗಿದ್ದು, ಬೈಕ್ ಸವಾರನ ಕಾಲಿಗೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಬಚಾವ್ ಆಗಿದ್ದರು.

ಇದನ್ನೂ ಓದಿ: Viral Video: ಅಬ್ಬಾ.. ಎಂಥಾ ಭೀಕರ ದೃಶ್ಯ! ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು

Continue Reading

ವಿದೇಶ

Cancer-Causing Chemicals: ಕಾರು ಪ್ರಿಯರೇ ಎಚ್ಚರ …ಎಚ್ಚರ..‌ ಕಾರಿನಲ್ಲಿ ಉತ್ಪತ್ತಿ ಆಗ್ತಿದೆ ಕ್ಯಾನ್ಸರ್‌ ಕಾರಕ ಕೆಮಿಕಲ್

Cancer-Causing Chemicals:ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು( ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನುಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

VISTARANEWS.COM


on

Cancer Causing Chemicals
Koo

ವಾಷಿಂಗ್ಟನ್‌: ಕಾರಿನಲ್ಲಿ ಲಾಂಗ್‌ ಡ್ರೈವ್‌ ಹೋಗೋದು ಬಹುತೇಕ ಎಲ್ಲರೂ ಇಷ್ಟ ಪಡುತ್ತಾರೆ. ತಣ್ಣನೇ ಎ ಸಿ ಹಾಕೊಂಡು ಕಿಲೋಮೀಟರ್‌ಗಟ್ಟಲೇ ಕಾರು ಚಲಾಯಿಸೋದೇ ಒಂದು ಕ್ರೇಜ್‌. ಕಾರು(Car) ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಕಾರು ಪ್ರಿಯರಿಗೊಂದು ಶಾಕಿಂಗ್‌ ವಿಚಾರವೊಂದು ಪತ್ತೆಯಾಗಿದೆ. ಕಾರಿನಲ್ಲಿ ಉತ್ಪತ್ತಿಯಾಗಿರುವ ರಾಸಾಯನಿಕವೊಂದನ್ನು ಶ್ವಾಸಿಸುವುದರಿಂದ ಜನ ಕ್ಯಾನ್ಸರ್‌ಗೆ(Cancer) ತುತ್ತಾಗುತ್ತಾರೆ ಎಂಬ ಆಘಾತಕಾರಿ ವಿಚಾರವೊಂದು ಬೆಳಕಿಗೆ ಬಂದಿದೆ. ಅಮೆರಿಕಾದ ಪರಿಸರ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧಕರು(Environmental Science & Technology) ಈ ಅಧ್ಯಯನ ನಡೆಸಿ ವರದಿ, ನೀಡಿದ್ದು, ಕಾರಿನೊಳಗೆ ಹೊರಬರುವ ಅಪಾಯಕಾರಿ ರಾಸಾಯನಿಕವನ್ನು(Cancer-Causing Chemicals) ಉಸಿರಾಡುವುದರಿಂದ ಜನ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಮೆರಿಕ ರಾಷ್ಟ್ರೀಯ ಟಾಕ್ಸೋಲಾಜಿ ಕಾರ್ಯಕ್ರಮದಡಿಯಲ್ಲಿ ಸಂಶೋಧಕರು ಈ ಅಧ್ಯಯನ ನಡೆಸಿದ್ದು, ಅದಕ್ಕಾಗಿ ಅವರು 2015 ಮತ್ತು 2019ರನಡುವೆ ತಯಾರಾಗಿರುವ 101 ಎಲ್ಲಾ ರೀತಿಯ ಅಂದರೆ ಎಲೆಕ್ಟ್ರಿಕ್‌, ಗ್ಯಾಸ್‌ ಮತ್ತು ಹೈಬ್ರಿಡ್‌ ಕಾರಗಳನ್ನು ಮಾದರಿಗಳನ್ನಾಗಿ ತೆಗೆದುಕೊಂಡಿದ್ದಾರೆ. ಈ ಕಾರುಗಳು ಶೇ.99ರಷ್ಟು ಕಾರುಗಳು TCIPP ಎಂಬ ಜ್ವಾಲೆ ನಿವಾರಕ ಸಾಧನವನ್ನು ಹೊಂದಿದೆ. ಇವುಗಳು ನೇರವಾಗಿ ಮನುಷ್ಯನ ನರಗಳು, ಸಂತಾನೋತ್ಪತ್ತಿ ಶಕ್ತಿ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಕಾರುಗಳಲ್ಲಿ ಪ್ರತಿನಿತ್ಯ ಒಂದು ಗಂಟೆಗಳ ಕಾಲ ಕಳೆದರೆ ಜನ ನಿಧಾನವಾಗಿ ಆರೋಗ್ಯ ಸಮಸ್ಯೆಗೆ ತುತ್ತಾಗುತ್ತಾರೆ ಎಂದು ಸಂಶೋಧಕರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.

ಈ ಕುರಿತು ಡ್ಯೂಕ್‌ ವಿಶ್ವವಿದ್ಯಾನಿಲಯದ ಪ್ರಮುಖ ಸಂಶೋಧಕರಾದ ರೆಬೆಕ್ಕಾ ಹೋಹೆನ್‌ ಮಾತನಾಡಿದ್ದು, ಪ್ರತಿನಿತ್ಯ ಕಾರಿನಲ್ಲೇ ಬಹುದೂರ ಪ್ರಯಾಣಿಸುವವರು ಮತ್ತು ಮಕ್ಕಳಲ್ಲಿ ಈ ಸಮಸ್ಯೆ ಅತಿ ಹೆಚ್ಚಾಗಿ ಕಂಡುಬರುತ್ತಿದೆ. ಬೇಸಿಗೆ ಕಾಲದಲ್ಲಿ ಕಾರಿನ ಸೀಟುಗಳಿಂದ ಈ ರಾಸಾಯನಿಕಗಳು ಅತಿ ಹೆಚ್ಚಾಗಿ ಹೊರಬರುತ್ತವೆ. ಇದು ಕ್ಯಾನ್ಸರ್‌ಗೆ ತುತ್ತು ಮಾಡುವಂತೆ ಅಪಾಯಕಾರಿ ರಾಸಾಯನಿಕಗಳಾಗಿವೆ. ಕಾರು ತಯಾರಕರು ಸೀಟಿನ ಒಳಗೆ ತುಂಬಿಸುವ ವಸ್ತುಗಳಿಗೆ(seat foam) ಮತ್ತು ಕಾರಿನ ಒಳಗಿರುವ ಇತರೇ ವಸ್ತುಗಳಿಗೆ ಬಹುಕಾಲ ಬಾಳಿಕೆ ಬರುವಂತೆ ಮಾಡುವ ಉದ್ದೇಶದಿಂದ ರಾಸಾಯನಿಕಗಳನ್ನು ಸೇರಿಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Gurpatwant Singh Pannun: ಪನ್ನುನ್‌ ಹತ್ಯೆ ಸಂಚಿನಲ್ಲಿ ಭಾರತದ ಕೈವಾಡ; ಅಮೆರಿಕ ಆರೋಪಕ್ಕೆ ರಷ್ಯಾ ಟಾಂಗ್‌

ಇನ್ನು ಈ ಬಗ್ಗೆ ಆರೋಗ್ಯ ಸುರಕ್ಷತೆ ಮತ್ತು ಔಷಧಿ ವಿಭಾಗದ ನಿರ್ದೇಶಕ ಪ್ಯಾಟ್ರಿಕ್‌ ಮಾರಿಸನ್‌ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಕಾರಿನಲ್ಲಿ ಬಳಸುವ ಫಯರ್‌ ಫ್ಲೇಮ್‌ ನಿಯಂತ್ರಕ ರಾಸಾಯನಿಕಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಮುನುಷ್ಯನನ್ನು ಕ್ಯಾನ್ಸರ್‌ಗೆ ದೂಡುತ್ತಿವೆ. ಈ ರಾಸಾಯನಿಕಗಳು ಬೆಂಕಿಯನ್ನು ಜ್ವಾಲೆಯನ್ನು ನಂದಿಸುವ ಬದಲು ಒಳಗಿದ್ದ ವ್ಯಕ್ತಿಗೆ ಉಸಿರು ಕಟ್ಟುವಂತೆ ಮಾಡುತ್ತದೆ. ಹೀಗಾಗಿ ಅಮೆರಿಕ ರಸ್ತೆ ಸುರಕ್ಷತಾ ಪ್ರಾಧಿಕಾರ ಈ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಹೇಳಿದ್ದಾರೆ.


Continue Reading
Advertisement
Rashmika Mandanna Signed Salman Khan Sikandar
ಟಾಲಿವುಡ್4 mins ago

Rashmika Mandanna: ಸಲ್ಮಾನ್ ಖಾನ್ ಜತೆ ನ್ಯಾಷನಲ್‌ ಕ್ರಶ್‌ ರಶ್ಮಿಕಾ ರೊಮ್ಯಾನ್ಸ್‌!

Jyothi Rai video Leak miscreants say to subscribe to the youtube channel
ಕಿರುತೆರೆ19 mins ago

Jyothi Rai: ಯುಟ್ಯೂಬ್‌ ಸಬ್‌ಸ್ಕ್ರೈಬ್‌ ಮಾಡಿದ್ರೆ ಜ್ಯೋತಿ ರೈ ವಿಡಿಯೊ ಅಪ್‌ಲೋಡ್‌ ಮಾಡ್ತೀನಿ ಎಂದ ಕಿಡಿಗೇಡಿ!

Viral News
ಕ್ರೀಡೆ19 mins ago

Viral News: ಐಪಿಎಲ್ ಪಂದ್ಯದ ವೇಳೆ ಕೇಜ್ರಿವಾಲ್ ಪರ ಘೋಷಣೆ; 6 ಮಂದಿ ಬಂಧನ

SSLC Exam Result 2024 Announce
ಬೆಂಗಳೂರು20 mins ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Viral video
ವೈರಲ್ ನ್ಯೂಸ್27 mins ago

Viral Video: ಪರ್ಸ್‌ ಎಗರಿಸಿ ಖುಷಿಯಲ್ಲಿದ್ದ ಕಳ್ಳನಿಗೆ ಕಾದಿತ್ತು ಬಿಗ್‌ ಶಾಕ್‌! ವಿಡಿಯೋ ಫುಲ್‌ ವೈರಲ್‌

hd revanna jailed prajwal revanna case
ಕ್ರೈಂ30 mins ago

HD Revanna Case Jailed: ಎಚ್‌.ಡಿ ರೇವಣ್ಣ ಪರ ಸುದ್ದಿಗೋಷ್ಠಿ ನಡೆಸಿದ ನಾಲ್ವರ ಬಂಧನ; ಕಾರ್ತಿಕ್‌ ಬಂಧನಕ್ಕೂ ಕ್ಷಣಗಣನೆ

Crime News
ಕ್ರೈಂ50 mins ago

Crime News: ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ?

gadag crime murder case
ಕ್ರೈಂ1 hour ago

Murder Case: ಪಾರ್ಟಿ ಮಾಡಿ ಮಲಗಿದ ಯುವಕನ ಕೊಲೆ, ಜೊತೆಗಿದ್ದ ಸ್ನೇಹಿತರಿಗೆ ಗೊತ್ತೇ ಆಗಲಿಲ್ಲ!

PBKS vs RCB
ಕ್ರೀಡೆ1 hour ago

PBKS vs RCB: ಮಳೆಯ ಕೈಯಲ್ಲಿದೆ ಆರ್​ಸಿಬಿ-ಪಂಜಾಬ್​ ಪ್ಲೇ ಆಫ್​ ಭವಿಷ್ಯ

Viral News
ವೈರಲ್ ನ್ಯೂಸ್2 hours ago

Viral News: ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದ: ಹೊಸ ಕಾರಿನ ಪೂಜೆ ವೇಳೆ ನಡೆಯಿತು ಅವಘಡ; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

SSLC Exam Result 2024 Announce
ಬೆಂಗಳೂರು20 mins ago

SSLC Result 2024: ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಪ್ರಕಟ; ಶೇ. 73.40 ವಿದ್ಯಾರ್ಥಿಗಳು ಪಾಸ್‌, ಉಡುಪಿ ಫಸ್ಟ್‌, ಯಾದಗಿರಿ ಲಾಸ್ಟ್‌

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ2 days ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ3 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ3 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ3 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ4 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

ಟ್ರೆಂಡಿಂಗ್‌