ದೇಶ
Rahul Gandhi: ಪ್ರಜಾಪ್ರಭುತ್ವಕ್ಕೆ ಅಪಾಯ ಹೇಳಿಕೆ, ಸಂಸದೀಯ ಸಮಿತಿ ಸಭೆಯಲ್ಲಿ ರಾಹುಲ್ ಸ್ಪಷ್ಟನೆ
ವಿದೇಶಾಂಗ ಸಚಿವ ಜೈಶಂಕರ್ ನೇತೃತ್ವದಲ್ಲಿ ನಡೆದ ಸಂಸದೀಯ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ(Rahul Gandhi) ಅವರು, ಲಂಡನ್ನಲ್ಲಿ ಭಾರತೀಯ ಪ್ರಜಾಪ್ರಭುತ್ವ ಕುರಿತು ನೀಡಿದ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆಂದು ಎಂದು ತಿಳಿದು ಬಂದಿದೆ.
ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ನೇತೃತ್ವದ ಸಂಸದೀಯ ಸಲಹಾ ಸಮಿತಿ ಸಭೆಯಲ್ಲಿ ನಡೆದಿದ್ದು, ಸದಸ್ಯರಾಗಿರುವ ರಾಹುಲ್ ಗಾಂಧಿ(Rahul Gandhi) ಅವರೂ ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ, ಅವರು, ಲಂಡನ್ನಲ್ಲಿ ತಮ್ಮ ಭಾಷಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆಂದು ತಿಳಿದು ಬಂದಿದೆ. ಭಾರತದ ಪ್ರಜಾಪ್ರಭುತ್ವದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದೇನೆಯಷ್ಟೇ, ಅದನ್ನೇ ಭಾರತ ವಿರೋಧಿ ಎಂದು ಹಣೆಪಟ್ಟಿ ಕಟ್ಟುವಂತಿಲ್ಲ ಎಂದು ಹೇಳಿದ್ದಾರೆಂದು ತಿಳಿದು ಬಂದಿದೆ. ಅಲ್ಲದೇ, ಬೇರೆ ಯಾವುದೇ ದೇಶ ಮಧ್ಯ ಪ್ರವೇಶಿಸಬೇಕೆಂದು ಹೇಳಿಲ್ಲ ಎಂದು ರಾಹುಲ್ ಹೇಳಿದರು ಎನ್ನಲಾಗಿದೆ.
ಸಮಿತಿ ಸಭೆಯಲ್ಲಿ ಹಾಜರಿದ್ದ ನಾಯಕರಿಗೆ ಸ್ಪಷ್ಟನೆ ನೀಡಿದ ರಾಹುಲ್ ಗಾಂಧಿ ಅವರು, ಭಾರತೀಯ ಪ್ರಜಾಪ್ರಭುತ್ವ ಸಮಸ್ಯೆಯು ಆಂತರಿಕವಾಗಿದ್ದು, ಅದನ್ನು ನಾವೇ ಪರಿಹರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾಗಿಯೂ ಹೇಳಿದ್ದಾರೆ. ಜಿ20 ಅಧ್ಯಕ್ಷತೆಯ ಕುರಿತು ಚರ್ಚಿಸಲು ಈ ವಿದೇಶಾಂಗ ಸಂಸದೀಯ ಸಲಹಾ ಸಮಿತಿಯ ಸಭೆಯನ್ನು ಕರೆಯಲಾಗಿತ್ತು. ಈ ಸಮಿತಿಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಚೇರ್ಮನ್ನರಾಗಿದ್ದು, ರಾಹುಲ್ ಗಾಂಧಿ ಅವರು ಸದಸ್ಯರಾಗಿದ್ದಾರೆ. ಸಭೆಯ ಆರಂಭದಲ್ಲಿ ಜಿ20 ಅಧ್ಯಕ್ಷತೆಯ ಕುರಿತು ಸಚಿವರು ವಿವರವಾದ ಮಾಹಿತಿಯನ್ನು ಒದಗಿಸಿದರು.
ಸಭೆಯ ಆರಂಭದ ಸುತ್ತಿನಲ್ಲಿ ರಾಹುಲ್ ಗಾಂಧಿ ಅವರು ಏನೂ ಮಾತನಾಡಿರಲಿಲ್ಲ. ವಿದೇಶಿ ನೆಲದಲ್ಲಿ ರಾಜಕೀಯನ ನಾಯಕರು ಭಾರತೀಯ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಿ, ಮೈಲೇಜ್ ಪಡೆದುಕೊಳ್ಳುತ್ತಿದ್ದಾರೆಂದು ಸಂಸದರೊಬ್ಬರು ಆರೋಪಿಸಿದರು. ಆಗ ಮಧ್ಯ ಪ್ರವೇಶಿಸಿದ ರಾಹುಲ್ ಗಾಂಧಿ ಸ್ಪಷ್ಟನೆ ನೀಡಿದರು ಎಂದು ತಿಳಿದು ಬಂದಿದೆ.
ಇಂಥ ವಿಷಯದ ಬಗ್ಗೆ ಮಾತನಾಡಲು ಇದು ಸೂಕ್ತ ವೇದಿಕೆಯಲ್ಲ ಎಂದು ಗಾಂಧಿ ಅವರ ಟೀಕೆಗಳಿಗೆ ಬಿಜೆಪಿ ಸಂಸದರು ತಿರುಗೇಟು ನೀಡಿದರು. ಸಭೆಯಲ್ಲಿ ಉಪಸ್ಥಿತರಿದ್ದ ಇತರ ಕೆಲವು ಸಂಸದರು ಸಹ ಬಿಜೆಪಿ ಸಂಸದರು ಮಂಡಿಸಿದ ವಾದವನ್ನು ಬೆಂಬಲಿಸಿದರು. ಆದರೆ, ಪ್ರತಿಪಕ್ಷದ ಸಂಸದರು, ರಾಹುಲ್ ಗಾಂಧಿ ಅವರಿಗೆ ಸ್ಪಷ್ಟನೆ ನೀಡುವ ಹಕ್ಕಿದೆ ಎಂದು ಅವರನ್ನು ಬೆಂಬಲಿಸಿದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Delhi Police: ರಾಹುಲ್ ಗಾಂಧಿ ಮನೆಗೆ ದಿಲ್ಲಿ ಪೊಲೀಸ್, ರೇಪ್ ಸಂತ್ರಸ್ತೆ ಮಾಹಿತಿ ಕೋರಿಕೆ
ಸಭೆಯಲ್ಲಿ ತೀವ್ರ ವಾದ-ವಿವಾದ ಜೋರಾಗುತ್ತಿದ್ದಂತೆ ಸಮಿತಿಯ ಚೇರ್ಮನ್ನರಾದ ಎಸ್ ಜೈಶಂಕರ್ ಅವರು ಮಧ್ಯಪ್ರವೇಶಿಸಿ, ಪ್ರತಿಕ್ರಿಯೆ ನೀಡದಂತೆ ರಾಹುಲ್ ಗಾಂಧಿ ಅವರನ್ನು ತಡೆದರು. ಅಲ್ಲದೇ, ಸಂಸತ್ತಿನಲ್ಲಿ ಈ ಬಗ್ಗೆ ಮಾತನಾಡುವಂತೆ ಉಳಿದ ಸಂಸದರಿಗೂ ತಿಳಿಸಿದರು.
ಕರ್ನಾಟಕ
ಕೆಜಿಎಫ್ನ ರಾಬರ್ಟಸನ್ ಪೇಟೆ ಸೇರಿ 41 ನಗರಗಳಲ್ಲಿ Jio True 5G ಸೇವೆ ಶುರು
ರಿಲಯನ್ಸ್ ಕಂಪನಿಯ ಜಿಯೋ ದೇಶಾದ್ಯಂತ ತನ್ನ 5ಜಿ ಸೇವೆಯನ್ನು ವಿಸ್ತರಿಸುತ್ತದೆ. ಈವರೆಗೆ ಒಟ್ಟಾರೆ 406 ನಗರಗಳಲ್ಲಿ 5ಜಿ ಸೇವೆ ದೊರೆಯುತ್ತಿದೆ. ಈಗ ಕರ್ನಾಟಕದ ಕೆಜಿಎಫ್ ನಗರದಲ್ಲಿ ಲಾಂಚ್ ಮಾಡಲಾಗಿದೆ(Jio True 5G).
ಬೆಂಗಳೂರು: ಕರ್ನಾಟಕದ ಕೋಲಾರ ಜಿಲ್ಲೆಯ ಕೆಜಿಎಫ್ನ ರಾಬರ್ಟಸನ್ಪೇಟೆ ಸೇರಿದಂತೆ ದೇಶದ 16 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 41 ಹೆಚ್ಚುವರಿ ನಗರಗಳಲ್ಲಿ ರಿಲಯನ್ಸ್ ಜಿಯೋ ತನ್ನ ಟ್ರೂ 5ಜಿ ಸೇವೆಗಳನ್ನು (Jio True 5G) ಮಂಗಳವಾರ ಪ್ರಾರಂಭಿಸಿದೆ. ರಿಲಯನ್ಸ್ ಜಿಯೋ ಭಾರತದ ಡಿಜಿಟಲ್ ರೂಪಾಂತರದ ಕಡೆಗೆ ದಣಿವರಿಯದೆ ಕೆಲಸ ಮಾಡುತ್ತಿದೆ ಮತ್ತು ಈ ನಗರಗಳಲ್ಲಿ ಹೆಚ್ಚಿನವುಗಳಲ್ಲಿ ಟ್ರೂ 5ಜಿ ಸೇವೆಗಳನ್ನು ವಿಸ್ತರಿಸಿದ ಮೊದಲ ಟೆಲಿಕಾಂ ಆಪರೇಟರ್ ಜಿಯೋ ಆಗಿದೆ. ಇದರೊಂದಿಗೆ ದೇಶದ 406 ನಗರಗಳಿಗೆ ತನ್ನ ವ್ಯಾಪ್ತಿಯನ್ನು ವಿಸ್ತರಿಸಿದೆ.
ಜಿಯೋ ತನ್ನ ಸುಧಾರಿತ ಟ್ರೂ 5ಜಿ ಸೇವೆಗಳನ್ನು ಶೀಘ್ರವಾಗಿ ಹೊರ ತರುತ್ತಿದೆ. ಆದರೂ ಗ್ರಾಹಕರಿಗೆ ಬಹು ನೆಚ್ಚಿನ ಆಪರೇಟರ್ ಆದ ಜಿಯೋ ಉತ್ತಮ ಗ್ರಾಹಕ ಅನುಭವವನ್ನು ಖಚಿತಪಡಿಸಿಕೊಳ್ಳಲು ಆ ನಗರವು ಅದರ ಟ್ರೂ 5ಜಿ ನೆಟ್ವರ್ಕ್ನಿಂದ ಗಣನೀಯ ಪ್ರಮಾಣದಲ್ಲಿ ಕವರ್ ಆದಾಗ ಮಾತ್ರ ಟ್ರೂ 5ಜಿ ಅನ್ನು ಹೊಸ ನಗರಕ್ಕೆ ವಿಸ್ತರಿಸುತ್ತದೆ. ಜಿಯೋ ಟ್ರೂ 5ಜಿ ಅನುಭವವನ್ನು ಈಗಾಗಲೇ ನೂರಾರು ನಗರಗಳಲ್ಲಿ ಲಕ್ಷಾಂತರ ಬಳಕೆದಾರರು ಪಡೆಯುತ್ತಿದ್ದಾರೆ.
16 ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ 41 ನಗರಗಳೆಂದರೆ ಅದೋನಿ, ಬದ್ವೇಲ್, ಚಿಲಕಲೂರಿಪೇಟೆ, ಗುಡಿವಾಡ, ಕದಿರಿ, ನರಸಾಪುರ, ರಾಯಚೋಟಿ, ಶ್ರೀಕಾಳಹಸ್ತಿ, ತಾಡೆಪಲ್ಲಿಗುಡೆಂ (ಆಂಧ್ರಪ್ರದೇಶ), ಮಾರ್ಗೋವಾ (ಗೋವಾ) ಫತೇಹಾಬಾದ್, ಗೋಹಾನ, ಹಂಸಿ, ನರ್ನಾಲ್, ಪಲ್ವಾಲ್ (ಹರಿಯಾಣ), ಪೌಂಟಾ ಸಾಹಿಬ್ (ಹಿಮಾಚಲ ಪ್ರದೇಶ), ರಜೌರಿ (ಜಮ್ಮು ಮತ್ತು ಕಾಶ್ಮೀರ) ದುಮ್ಕಾ (ಜಾರ್ಖಂಡ್), ರಾಬರ್ಟ್ಸನ್ಪೇಟೆ(ಕರ್ನಾಟಕ), ಕಾಞಂಗಾಡ್, ನೆಡುಮಂಗಡ, ತಳಿಪರಂಬ, ತಲಸ್ಸೆರಿ, ತಿರುವಲ್ಲಾ (ಕೇರಳ), ಬೇತುಲ್, ವಿದಿಶಾ, ದೇವಾಸ್, (ಮಧ್ಯಪ್ರದೇಶ) ಭಂಡಾರಾ, ವಾರ್ಧಾ (ಮಹಾರಾಷ್ಟ್ರ), ಲುಂಗ್ಲೇ (ಮಿಜೋರಾಂ), ಬ್ಯಾಸನಗರ, ರಾಯಗಡ (ಒಡಿಶಾ), ಹೋಶಿಯಾರ್ಪುರ (ಪಂಜಾಬ್), ಟೋಂಕ್ (ರಾಜಸ್ಥಾನ), ಕಾರೈಕುಡಿ, ಕೃಷ್ಣಗಿರಿ, ರಾಣಿಪೇಟ್, ಥೇನಿ ಅಲ್ಲಿನಗರಂ, ಉದಗಮಂಡಲಂ, ವಾನಂಬಾಡಿ (ತಮಿಳುನಾಡು) ಮತ್ತು ಕುಮಾರ್ಘಾಟ್ (ತ್ರಿಪುರ)
ಇಂದಿನ ಟ್ರೂ 5ಜಿ ಆರಂಭದ ಕುರಿತು ಪ್ರತಿಕ್ರಿಯಿಸಿದ ಜಿಯೋ ವಕ್ತಾರರು, “ದೇಶಾದ್ಯಂತ ಲಕ್ಷಾಂತರ ಬಳಕೆದಾರರು ಜಿಯೋ ಟ್ರೂ 5ಜಿ ಬಳಸಲು ಪ್ರಾರಂಭಿಸಿದ್ದಾರೆ. ನಮ್ಮ ನೆಟ್ವರ್ಕ್ನ ಬಲವು ನಮ್ಮ ಗ್ರಾಹಕರ ಜೀವನವನ್ನು ಹೆಚ್ಚಿಸುತ್ತದೆ ಎಂಬ ವಿಶ್ವಾಸ ನಮಗಿದೆ. ಜಿಯೋ ತನ್ನ ಟ್ರೂ 5ಜಿ ವ್ಯಾಪ್ತಿಯನ್ನು ವೇಗವಾಗಿ ವಿಸ್ತರಿಸುತ್ತಿದೆ. ನಾವು ದೇಶದ ಹೆಚ್ಚಿನ ಭಾಗವನ್ನು ಆವರಿಸಿದ್ದೇವೆ, ಇದು ನಮಗೆ ಅತ್ಯಂತ ಹೆಮ್ಮೆಯ ವಿಷಯವಾಗಿದೆ.
“2023ರಲ್ಲಿ ಜಿಯೋ ಟ್ರೂ 5ಜಿ ತಂತ್ರಜ್ಞಾನದ ಪರಿವರ್ತನೆಯ ಪ್ರಯೋಜನಗಳನ್ನು ಪ್ರತಿ ಭಾರತೀಯ ಆನಂದಿಸಬೇಕೆಂದು ನಾವು ಬಯಸುತ್ತೇವೆ. ರಾಜ್ಯ ಸರ್ಕಾರಗಳು ಮತ್ತು ಆಡಳಿತಗಾರರು ತಮ್ಮ ಪ್ರದೇಶಗಳನ್ನು ಡಿಜಿಟಲೈಸ್ ಮಾಡುವುದಕ್ಕೆ ಬೆಂಬಲ ನೀಡಿದ್ದಕ್ಕಾಗಿ ನಾವು ಕೃತಜ್ಞರಾಗಿರುತ್ತೇವೆ,” ಎಂದಿದ್ದಾರೆ.
ಇದನ್ನೂ ಓದಿ: ಈಗ ದೇಶದ 304 ನಗರಗಳಲ್ಲಿ ರಿಲಯನ್ಸ್ ಜಿಯೋ ಟ್ರೂ 5ಜಿ ಸೇವೆ ಲಭ್ಯ, ಕೋಲಾರದಲ್ಲೂ ಲಾಂಚ್
ಮಾರ್ಚ್ 21ರಿಂದ ಈ 41 ನಗರಗಳಲ್ಲಿರುವ ಜಿಯೋ ಬಳಕೆದಾರರಿಗೆ ಜಿಯೋ ವೆಲ್ಕಮ್ ಆಫರ್ ಅನ್ನು ಪ್ರಯತ್ನಿಸಲು ಆಹ್ವಾನಿಸಲಾಗುತ್ತದೆ, ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಅನುಭವಿಸಬಹುದು.
ದೇಶ
Viral Video: ನೀವು ತಿನ್ನುವ ‘ತಾಜಾ’ ತರಕಾರಿ ರಾಸಾಯನಿಕಯುಕ್ತ, ಹೇಗೆ ಅಂತೀರಾ? ಇಲ್ಲಿದೆ ವಿಡಿಯೊ
Viral Video: ಬಾಡಿದ ತರಕಾರಿಯನ್ನು ರಾಸಾಯನಿಕಯುಕ್ತ ನೀರಿನಲ್ಲಿ ಮುಳುಗಿಸಿ, ಅದನ್ನು ಫ್ರೆಶ್ ಆಗಿ ಮಾಡಲಾಗುತ್ತಿದೆ. ಇದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ ಎಂದೇ ಹೇಳಲಾಗುತ್ತಿದೆ.
ನವದೆಹಲಿ: ಸಾಯಂಕಾಲ ಕಚೇರಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ, ವಾಕಿಂಗ್ ಮುಗಿಸಿ ಹಿಂತಿರುಗುವಾಗ, ಹೆಂಡತಿ ಒತ್ತಾಯ ಮಾಡಿದಳೋ ಎಂದು ಮನೆಗೆ ತರಕಾರಿ ತೆಗೆದುಕೊಂಡು ಹೋಗುತ್ತೀರಿ. ತರಕಾರಿ ಮಾರುವವರೂ ಅಷ್ಟೇ, ಈಗಷ್ಟೇ ತೋಟದಿಂದ ಮಾರುಕಟ್ಟೆಗೆ ಬಂದಿದೆ, ತರಕಾರಿ ಫ್ರೆಶ್ ಇದೆ ಎಂದು ಕೊಡುತ್ತಾರೆ. ನೀವೂ ನೋಡುತ್ತೀರಿ, ಫ್ರೆಶ್ ಇರುವುದನ್ನು ದೃಢಪಡಿಸಿಕೊಳ್ಳುತ್ತೀರಿ ಹಾಗೂ ಖರೀದಿಸುತ್ತೀರಿ. ಆದರೆ, ಹುಷಾರ್, ಬಹುತೇಕ ಸಂದರ್ಭಗಳಲ್ಲಿ ನೀವು ಖರೀದಿಸಿದ ತರಕಾರಿ ನೈಸರ್ಗಿಕವಾಗಿ ಫ್ರೆಶ್ ಆಗಿದ್ದಲ್ಲ, ಅದು ರಾಸಾಯನಿಕದಿಂದ (Viral Video) ಫ್ರೆಶ್ ಆಗಿರುತ್ತದೆ.
ಹೌದು, ಬೆಳಗ್ಗೆಯೇ ಮಾರುಕಟ್ಟೆಗೆ ಬಂದ, ಸಂಜೆಯಾಗುತ್ತಲೇ ಬಾಡಿದ ತರಕಾರಿಯನ್ನು ಫ್ರೆಶ್ ಆಗಿ ಕಾಣುವ, ಯಾರು ನೋಡಿದರೂ, ಒಂದೇ ನೋಟಕ್ಕೆ ಖರೀದಿಸುವ ರೀತಿಯಲ್ಲಿ ಕೆಮಿಕಲ್ ಮಿಶ್ರಿತ ನೀರಿನಲ್ಲಿ ಮುಳುಗಿಸಿ ತೆಗೆಯಲಾಗುತ್ತದೆ. ರಾಸಾಯನಿಕದ ಪರಿಣಾಮದಿಂದಾಗಿ, ಯಾವುದೇ ಬಾಡಿದ ಸೊಪ್ಪು, ತರಕಾರಿ ಫ್ರೆಶ್ ಆಗಿ ಕಾಣುತ್ತದೆ. ಹೀಗೆ ರಾಸಾಯನಿಕದಿಂದ ತರಕಾರಿಯನ್ನು ಫ್ರೆಶ್ ಆಗಿ ಮಾಡುವ ವಿಡಿಯೊವನ್ನು ಅಮಿತ್ ತಧಾನಿ ಎಂಬುವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ವಿಡಿಯೊ ವೈರಲ್ ಆಗಿದೆ.
ಇಲ್ಲಿದೆ ಭಯಾನಕ ವಿಡಿಯೊ
ಪೂರ್ತಿಯಾಗಿ ಬಾಡಿದ, ತಿನ್ನಲು ಸಾಧ್ಯವಾಗದ ತರಕಾರಿಯನ್ನು ಮಾರಾಟಗಾರರು ರಾಸಾಯನಿಕದಲ್ಲಿ ಮುಳುಗಿಸಿ ತೆಗೆಯುತ್ತಾರೆ. ಕೆಲವೇ ಸೆಕೆಂಡ್ಗಳಲ್ಲಿ ಆ ತರಕಾರಿ ಹಸಿರಾಗಿ, ತಾಜಾ ತರಕಾರಿಯಂತೆ ಕಾಣುತ್ತದೆ. ಇಂತಹ ತರಕಾರಿಯನ್ನು ತಿಂದರೆ, ರಾಸಾಯನಿಕ ದೇಹ ಸೇರಿ ಅನಾರೋಗ್ಯಕ್ಕೀಡಾಗುವ ಸಾಧ್ಯತೆ ಇದೆ ಎಂದೇ ಹೇಳಲಾಗುತ್ತಿದೆ. ಹಾಗಾಗಿ, ತರಕಾರಿ ಖರೀದಿಸುವಾಗ ಜನ ಎಚ್ಚರಿಕೆಯಿಂದ ಇರಬೇಕು ಎಂದೂ ಸಲಹೆ ನೀಡಲಾಗುತ್ತಿದೆ. ಆದರೆ, ಯಾವುದೇ ತರಕಾರಿಯನ್ನು ರಾಸಾಯನಿಕಯುಕ್ತವೋ, ಅಲ್ಲವೋ ಎಂಬುದನ್ನು ಹೇಗೆ ಗುರುತಿಸಬೇಕು ಎಂಬುದೇ ಗೊಂದಲ ಮೂಡಿಸಿದೆ.
ಅಮಿತ್ ತಧಾನಿ ಅವರು ಶೇರ್ ಮಾಡಿದ ವಿಡಿಯೊವನ್ನು 4.76 ಲಕ್ಷಕ್ಕೂ ಅಧಿಕ ಜನ ವೀಕ್ಷಿಸಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ. “ಇದು ತುಂಬ ಭಯ ಹುಟ್ಟಿಸುವ ವಿಡಿಯೊ. ಇಂತಹ ನಕಲಿ ತರಕಾರಿಯನ್ನು ಗುರುತಿಸುವುದು ಹೇಗೆ? ಸಾಮಾನ್ಯವಾಗಿ ಮನೆಯಲ್ಲಿ ತರಕಾರಿಯನ್ನು ತೊಳೆದು ಅಡುಗೆ ಮಾಡುತ್ತೇವೆ. ಆದರೆ, ಇನ್ನು ಮುಂದೆ ಸಾಬೂನು ಹಾಕಿ ತೊಳೆಯಬೇಕೆ” ಎಂಬುದಾಗಿ ವ್ಯಕ್ತಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ತರಕಾರಿ ಯಾವುದರಲ್ಲಿ ತೊಳೆಯಬೇಕು?
ಮತ್ತೊಬ್ಬರು ಪ್ರತಿಕ್ರಿಯಿಸಿ, “ನಿಮಗೆ ಪರಿಚಯ ಇದ್ದವರಲ್ಲಿ ಮಾತ್ರ ತರಕಾರಿ ಖರೀದಿಸಿ. ಅದನ್ನೂ ಮನೆಗೆ ತಂದಾಗ ಚೆನ್ನಾಗಿ ತೊಳೆಯಿರಿ. ಮನೆಯಲ್ಲಿ ಸ್ವಲ್ಪ ಜಾಗವಿದ್ದರೂ ನೀವೇ ತರಕಾರಿ ಬೆಳೆಯಿರಿ. ಇದರಿಂದ ಆರೋಗ್ಯ ಸುಧಾರಿಸುತ್ತದೆ” ಎಂದು ಸಲಹೆ ನೀಡಿದ್ದಾರೆ. ಇದುವರೆಗೆ ರಾಸಾಯನಿಕ ಬಳಸಿ ಬಾಳೆ ಸೇರಿ ಹಲವು ರೀತಿಯ ಕಾಯಿಗಳನ್ನು ಹಣ್ಣು ಮಾಡಲಾಗುತ್ತಿತ್ತು. ಈಗ ತರಕಾರಿಗೂ ಇದೇ ಪದ್ಧತಿ ರೂಢಿಯಾಗಿರುವುದು ಜನರ ಆತಂಕ ಹೆಚ್ಚಿಸಿದೆ.
ಇದನ್ನೂ ಓದಿ: Viral Video : ಮಾರುದ್ದದ ವಿಷಕಾರಿ ಹಾವನ್ನು ಕೈನಲ್ಲಿ ಹಿಡಿದು ವಿಡಿಯೊ ಮಾಡಿದ ವ್ಯಕ್ತಿ; ಇಲ್ಲಿದೆ ನೋಡಿ ವೈರಲ್ ವಿಡಿಯೊ
ಗ್ಯಾಜೆಟ್ಸ್
HP Pavilion Aero 13 ಲ್ಯಾಪ್ಟಾಪ್ ಲಾಂಚ್, ಏನೆಲ್ಲ ವಿಶೇಷತೆಗಳಿವೆ? ಬೆಲೆ ಎಷ್ಟು?
ಭಾರತೀಯ ಮಾರುಕಟ್ಟೆಗೆ ಮತ್ತೊಂದು ಹೊಸ ಲ್ಯಾಪ್ಟಾಪ್ ಲಾಂಚ್ ಆಗಿದೆ. ಸಾಕಷ್ಟು ಹೊಸ ಫೀಚರ್ಸ್ಗಳೊಂದಿಗೆ HP Pavilion Aero 13 ಲ್ಯಾಪ್ಟ್ಯಾಪ್ ಗಮನ ಸೆಳೆಯುತ್ತಿದೆ.
ಬೆಂಗಳೂರು: ಎಚ್ಪಿ ಕಂಪನಿಯು ಭಾರತದಲ್ಲಿ ತನ್ನ ಹೊಸ ಪೆವಿಲಿಯನ್ ಏರೋ 13 (HP Pavilion Aero 13) ಲ್ಯಾಪ್ಟ್ಯಾಪ್ಗಳನ್ನು ಮಂಗಳಾರ ಬಿಡುಗಡೆ ಮಾಡಿದೆ. ಶಕ್ತಿಯುತ ಕಾರ್ಯಕ್ಷಮತೆಗಾಗಿ AMD Ryzen™ 7 ಪ್ರೊಸೆಸರ್ ಮತ್ತು Radeon™ ಗ್ರಾಫಿಕ್ಸ್ ಒಳಗೊಂಡಿದೆ. GenZ ಮತ್ತು ಈ ಸಹಸ್ರಮಾನದ ಆಧುನಿಕ ಗ್ರಾಹಕರಿಗಾಗಿ ಈ ಸಾಧನವನ್ನು ನಿರ್ಮಿಸಲಾಗಿದೆ. ಯಾವುದೇ ಸಮಯ ಅಥವಾ ಸ್ಥಳದಲ್ಲಿ ಉತ್ಪಾದಕವಾಗಿ ಕೆಲಸ ಮಾಡಲು ಮತ್ತು ಕಲಿಯಲು ಅನುವು ಮಾಡಿಕೊಡುತ್ತದೆ.
ಆಧುನಿಕ ಜಗತ್ತಿನಲ್ಲಿ, ಬಹುಮುಖವಾದ ಹಲವು ಕಾರ್ಯಗಳನ್ನು ಮಾಡಬಲ್ಲ, ಕೆಲಸ ಮತ್ತು ಕಲಿಕೆ ಎರಡನ್ನೂ ನಿಭಾಯಿಸಬಲ್ಲ ಸಾಧನಗಳನ್ನು ಗ್ರಾಹಕರು ಅರಸುತ್ತಿರುತ್ತಾರೆ. ಹೈಬ್ರಿಡ್ ಕಾರ್ಯಶೈಲಿಗೆ ಸರಿಹೊಂದುವಂತೆ ಈ ಸಾಧನಗಳು ಹಗುರವಾಗಿರಬೇಕು ಮತ್ತು ಯುವ ಪೀಳಿಗೆಯ ಆದ್ಯತೆಗಳನ್ನು ಪೂರೈಸುವಂತೆ ಆಕರ್ಷಕವಾಗಿರಬೇಕು. ಹೊಚ್ಚ-ಹೊಸ HP ಪೆವಿಲಿಯನ್ ಏರೋ 13 ಲ್ಯಾಪ್ಟಾಪ್ Wi-Fi6 ಜತೆಗೆ ವೇಗದ ಮತ್ತು ವಿಶ್ವಾಸಾರ್ಹ ಸಂಪರ್ಕವನ್ನು ಹೊಂದಿದೆ. 10.5 ಗಂಟೆಗಳವರೆಗೆ ಬ್ಯಾಟರಿ ಬಾಳಿಕೆ ಇದ್ದು, ಯಾವುದೇ ಸ್ಥಳದಿಂದ ಕೆಲಸ, ಬ್ರೌಸಿಂಗ್ ಮತ್ತು ಸ್ಟ್ರೀಮಿಂಗ್ ಮಾಡಲು ಸೂಕ್ತವಾಗಿದೆ.
400 ನಿಟ್ಸ್ ಪ್ರಕಾಶಮಾನವಾದ ಮತ್ತು 16:10 ಆಕಾರ ಅನುಪಾತದಗ ಸ್ಕ್ರೀನ್ ಬಳಕೆದಾರರಿಗೆ ತಲ್ಲೀನಗೊಳಿಸುವ ವೀಕ್ಷಣೆಯ ಅನುಭವವನ್ನು ನೀಡುತ್ತದೆ. HP ಪೆವಿಲಿಯನ್ ಏರೋ 13 ಕೇವಲ 970 ಗ್ರಾಂ ಭಾರವಿದ್ದು, GenZ ಗಳು ಮತ್ತು ಈ ಸಹಸ್ರಮಾನದ ಯುವಜನರಿಗೆ ಪೋರ್ಟಬಿಲಿಟಿಯನ್ನು ಸಕ್ರಿಯಗೊಳಿಸುತ್ತದೆ. ಇದು ಅವರ ಶೈಲಿ ಮತ್ತು ಜೀವನಶೈಲಿಗೆ ಹೊಂದಿಕೊಳ್ಳಲು ಮೂರು ವಿಶಿಷ್ಟ ಬಣ್ಣಗಳಲ್ಲಿದೆ – ಪೇಲ್ ರೋಸ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್.
HP ಇಂಡಿಯಾ ಪರ್ಸನಲ್ ಸಿಸ್ಟಮ್ಸ್ ಹಿರಿಯ ನಿರ್ದೇಶಕ ವಿಕ್ರಮ್ ಬೇಡಿ ಮಾತನಾಡಿ, “ಪಿಸಿಗಳು ಹೈಬ್ರಿಡ್ ಪರಿಸರದಲ್ಲಿ ಜನರ ಜೀವನದ ಪ್ರಮುಖ ಅಂಶಗಳಾಗುತ್ತಿವೆ. ಆಧುನಿಕ ಜಗತ್ತಿನಲ್ಲಿ ಬಹುಮುಖ ಮತ್ತು ಶಕ್ತಿಯುತ ಕಂಪ್ಯೂಟಿಂಗ್ ಪರಿಹಾರಗಳಿಗಾಗಿ ವೃದ್ಧಿಸುತ್ತಿರುವ ಬೇಡಿಕೆಯನ್ನು ಪೂರೈಸಲು HP ವಿನ್ಯಾಸಗೊಳಿಸಿದ ಹೊಸ ಪೆವಿಲಿಯನ್ ಏರೋ 13 ಲ್ಯಾಪ್ಟಾಪ್ ಪರಿಚಯಿಸಲು ನಾವು ಹೆಮ್ಮೆಪಡುತ್ತೇವೆ. ಇದು ಅಸಾಧಾರಣ ಕಾರ್ಯಕ್ಷಮತೆ ಮತ್ತು ಚಲನಶೀಲತೆಯನ್ನು ನೀಡುತ್ತದೆ, ಬಳಕೆದಾರರು ಪ್ರಯಾಣಿಸುತ್ತಿರುವಾಗಲೂ ಉತ್ಪಾದಕವಾಗಿರಲು ಮತ್ತು ಮನೋರಂಜನೆಯನ್ನು ಪಡೆಯಲು ಅನುವು ಮಾಡಿಕೊಡುತ್ತದೆ. HP ಪೆವಿಲಿಯನ್ ಏರೋ 13 ಆಕರ್ಷಕವಾದ ಪ್ರೀಮಿಯಂ ಲ್ಯಾಪ್ಟಾಪ್ ಆಗಿದೆ. ಕೆಲಸ ಮತ್ತು ಗೇಮಿಂಗ್ – ಎರಡೂ ವಿಷಯಗಳಲ್ಲಿ ಬಳಕೆದಾರರಿಗೆ ಅಸಾಧಾರಣವಾಗಿ ಆಪ್ತವಾಗುತ್ತದೆ.
ಹೈಬ್ರಿಡ್ ಪರಿಸರಕ್ಕೆ ಅನುಗುಣವಾಗಿ ಉನ್ನತ ದರ್ಜೆಯ ಕಾರ್ಯಕ್ಷಮತೆಯನ್ನು ನೀಡುವಂತೆ ಹಗುರವಾದ ಆದರೆ ಶಕ್ತಿಶಾಲಿಯಾದ HP ಪೆವಿಲಿಯನ್ ಏರೋ 13 ರೂಪಿಸಲಾಗದೆ. ಕೆಲಸ ಮಾಡಲು ಅಥವಾ ಸ್ನೇಹಿತರ ಜತೆಗೆ ಸ್ಪಷ್ಟವಾದ ವೀಡಿಯೋ ಕರೆಗಳನ್ನು ಮಾಡಲು ಮತ್ತು ಅನಗತ್ಯವಾದ ಹಿನ್ನೆಲೆಯ ಗದ್ದಲವನ್ನು ನಿವಾರಿಸುವ ಸೌಕರ್ಯವನ್ನು ಹೊಂದಿದೆ. 100% sRGB ಸಹಿತವಾದ ವಿಶಾಲವಾದ ಕಲರ್ ಪ್ಯಾಲೆಟ್ ವೆಬ್ನಲ್ಲಿ ಸರ್ಫ್ ಮಾಡುವಾಗ ಮತ್ತು ವೀಡಿಯೋಗಳನ್ನು ಸ್ಟ್ರೀಮ್ ಮಾಡುವಾಗ ಹೆಚ್ಚು ರೋಮಾಂಚಕ ಚಿತ್ರಗಳ ವೀಕ್ಷಣೆಗೆ ಅವಕಾಶ ಮಾಡಿಕೊಡುತ್ತದೆ. ಫ್ಲಿಕರ್-ರಹಿತವಾದ ಪರದೆಯು ದಿನವಿಡೀ ಕೆಲಸ ಮಾಡಲು ಮತ್ತು ರಾತ್ರಿಯಿಡೀ ಆಟವಾಡಲು ಸೌಕರ್ಯ ನೀಡುವುದು HP ಪೆವಿಲಿಯನ್ ಏರೋ ವಿಶೇಷತೆಯಾಗಿದೆ. ಹೆಚ್ಚುವರಿಯಾಗಿ, 2.5k ರೆಸಲ್ಯೂಶನ್ ಸ್ಕ್ರೀನ್ ಮೇಲೆ ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಗಳನ್ನು ಮೂಡಿಸುತ್ತದೆ. ಇದನ್ನು 4-ಬದಿಗಳ ಕಿರಿದಾದ ಅಂಚಿನ ಸ್ಕ್ರೀನ್ ವೀಕ್ಷಣೆಗೆ ಇರುವ ಎಲ್ಲ ಅಡ್ಡಿಗಳನ್ನೂ ನಿವಾರಿಸುತ್ತದೆ.
ಸುಸ್ಥಿರತೆ ಮತ್ತು ಪರಿಸರ ರಕ್ಷಣೆಗೆ HP ಯ ಬದ್ಧತೆಗೆ ಅನುಗುಣವಾಗಿ HP ಪೆವಿಲಿಯನ್ ಏರೋ 13 ವಿನ್ಯಾಸಗೊಳಿಸಲಾಗಿದೆ. ಗ್ರಾಹಕರು ಬಳಸಿದ ಮರುಬಳಕೆಯ ಮತ್ತು ಸಾಗರದಿಂದ ಸಂಗ್ರಹಿಸಿದ ಪ್ಲಾಸ್ಟಿಕ್ನಿಂದ ನಿರ್ಮಿಸಲಾಗಿದೆ. VOC ಹೊರಸೂಸುವಿಕೆ ತಗ್ಗಿಸಲು ನೀರು-ಆಧಾರಿತ ಬಣ್ಣವನ್ನು ಬಳಸಲಾಗಿದೆ.
HP ಪೆವಿಲಿಯನ್ ಏರೋ 13 ವಿಶೇಷತೆಗಳೇನು?
ಡಿಸ್ಪ್ಲೇ ಹೇಗಿದೆ?
• 16:10 ಆಕಾರ ಅನುಪಾತದೊಂದಿಗೆ HP ಯ ಪ್ರಥಮ ಪೆವಿಲಿಯನ್ ಲ್ಯಾಪ್ಟಾಪ್
• ತಡೆರಹಿತ ಬ್ರೌಸಿಂಗ್ ಅನುಭವಕ್ಕಾಗಿ 400 ನಿಟ್ಗಳಷ್ಟು ಪ್ರಕಾಶಮಾನ ಡಿಸ್ಪ್ಲೇ
• ಫ್ಲಿಕರ್-ರಹಿತ ಪರದೆ
• ವೀಕ್ಷಣೆಯ ಅಡ್ಡಿಗಳನ್ನು ನಿವಾರಿಸಲು 4-ಬದಿ ಕಿರಿದಾದ ಅಂಚಿನ ಡಿಸ್ಪ್ಲೇ
• ತೀಕ್ಷ್ಣವಾದ ಚಿತ್ರಗಳು ಮತ್ತು ಪಠ್ಯಕ್ಕಾಗಿ 2.5k ರೆಸಲ್ಯೂಶನ್
• ಬಿಸಿಲಿನಲ್ಲೂ ಬ್ರೌಸಿಂಗ್ ಮಾಡುವುದಕ್ಕಾಗಿ 400 ನಿಟ್ಸ್ ಪ್ರಕಾಶ
• 100% sRGB ಯೊಂದಿಗೆ ವಿಶಾಲ ಕಲರ್ ಪ್ಯಾಲೆಟ್
ಕಾರ್ಯಕ್ಷಮತೆ
• ಸುಗಮ ಕಾರ್ಯಕ್ಷಮತೆಗಾಗಿ AMD Ryzen™ 7000 ಸರಣಿಯ ಪ್ರೊಸೆಸರ್, Radeon™ ಗ್ರಾಫಿಕ್ಸ್
• Wi-Fi 6 ಜೊತೆಗೆ ವಿಶ್ವಾಸಾರ್ಹ ಮತ್ತು ವೇಗದ ಸಂಪರ್ಕ
• ತಡೆರಹಿತ ಕಲಿಕೆ ಮತ್ತು ಕೆಲಸಕ್ಕಾಗಿ 10.5 ಗಂಟೆಗಳ ಬ್ಯಾಟರಿ ಬಾಳಿಕೆ
• ಉತ್ತಮ ವೀಡಿಯೊ ಕರೆಗಳಿಗಾಗಿ AI ನಾಯ್ಸ್ ರಿಮೂವಲ್ ಸೌಕರ್ಯ
• ಕಾರ್ಯಗಳ ಬೇಡಿಕೆಯನ್ನು ನಿರ್ವಹಿಸಲು DDR5 RAM
ವಿನ್ಯಾಸ
• ಕೇವಲ 970 ಗ್ರಾಂ ಭಾರವಿದ್ದು, ಪೋರ್ಟಬಿಲಿಟಿಯನ್ನು ಖಚಿತಪಡಿಸುತ್ತದೆ.
• ಮೂರು ಬಣ್ಣಗಳಲ್ಲಿ ಲಭ್ಯವಿದೆ – ರೋಸ್ ಪೇಲ್ ಗೋಲ್ಡ್, ವಾರ್ಮ್ ಗೋಲ್ಡ್ ಮತ್ತು ನ್ಯಾಚುರಲ್ ಸಿಲ್ವರ್
ಬೆಲೆ ಮತ್ತು ಲಭ್ಯತೆ
• HP Pavilion Aero 13 (Ryzen 5 ಸಹಿತ) 72,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ
• HP Pavilion Aero 13 (Ryzen 7 ಸಹಿತ) 1TB SSD 82,999 ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.
ದೇಶ
Supreme Court: ನೇಣಿಗೇರಿಸುವುದು ಕ್ರೂರತನವೇ? ಈ ಬಗ್ಗೆ ಚರ್ಚಿಸಿ ಎಂದು ಕೇಂದ್ರಕ್ಕೆ ಸೂಚಿಸಿದ ಸುಪ್ರೀಂ ಕೋರ್ಟ್
Supreme Court: ಮರಣದಂಡನೆಗೆ ಶಿಕ್ಷೆಗೆ ಗುರಿಯಾದ ಅಪರಾಧಿಯನ್ನು ನೇಣಿಗೇರಿಸುವುದು(Hanging) ಕ್ರೂರತನವೇ? ಈ ಬಗ್ಗೆ ಚರ್ಚೆ ನಡೆಸುವಂತೆ ಸುಪ್ರೀಂ ಕೋರ್ಟ್ ಸರ್ಕಾರಕ್ಕೆ ಸೂಚಿಸಿದೆ. ಕಡಿಮೆ ನೋವಿನ ಮೂಲಕ ಮರಣದಂಡನೆ ಜಾರಿ ಮಾಡುವ ಪರ್ಯಾಯ ಮಾರ್ಗ ಶೋಧಕ್ಕೂ ಸೂಚಿಸಿದೆ.
ನವದೆಹಲಿ: ನೇಣಿಗೇರಿಸುವ ಮೂಲಕ ಮರಣದಂಡನೆಯನ್ನು(Hanging) ಜಾರಿಗೊಳಿಸುವುದಕ್ಕಿಂತಲೂ ಕಡಿಮೆ ನೋವು ಆಗುವ ಮೂಲಕ ಮರಣದಂಡನೆಯನ್ನು ಜಾರಿ ಮಾಡುವ ಪರ್ಯಾಯ ಮಾರ್ಗವನ್ನು ಶೋಧಿಸಬಹುದೇ ಎಂದು ಸುಪ್ರೀಂ ಕೋರ್ಟ್ (Supreme Court) ಕೇಂದ್ರ ಸರ್ಕಾರಕ್ಕೆ ಕೇಳಿದೆ. ಈ ಬಗ್ಗೆ ಚರ್ಚೆ ಮಾಡುವಂತೆ ದೇಶದ ಅತ್ಯುನ್ನತ ನ್ಯಾಯಾಲಯವು ಸೂಚಿಸಿದೆ.
ನೇಣು ಹಾಕುವುದಕ್ಕಿಂತ ಕಡಿಮೆ ನೋವಿನ ವಿಧಾನವಿದೆಯೇ ಎಂದು ಪರಿಶೀಲಿಸಲು ಚರ್ಚೆಯನ್ನು ಪ್ರಾರಂಭಿಸಲು ಮತ್ತು ಮಾಹಿತಿಯನ್ನು ಸಂಗ್ರಹಿಸಲು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ನೇಣು ಹಾಕುವ ಮೂಲಕ ಉಂಟಾಗುವ ಪರಿಣಾಮಗಳ ಕುರಿತಾದ ಅಧ್ಯಯನ ಮಾಹಿತಿಯೊಂದಿಗೆ ಬನ್ನಿ ಎಂದು ಕೇಂದ್ರ ಸರ್ಕಾರ ಅಟಾರ್ನಿ ಜನರಲ್ ಅವರಿಗೆ ಆರ್ ವೆಂಕಟರಮಣಿ ಅವರಿಗೆ ಕೋರಿದೆ.
ಮರಣದಂಡನೆಗೆ ಗುರಿಯಾದ ಅಪರಾಧಿಗಳಿಗೆ ನೋವು ರಹಿತವಾಗಿ ಶಿಕ್ಷೆಯನ್ನು ಜಾರಿಗೊಳಿಸುವ ಕುರಿತು ದಾಖಲಾಗಿರುವ ಪಿಐಎಲ್ಗಳ ವಿಚಾರಣೆಯನ್ನು ನ್ಯಾಯಾಲಯವು ಕೈಗೆತ್ತಿಕೊಂಡಿದೆ. ನೇಣು ಹಾಕುವ ಬದಲು ಗುಂಡು ಹಾರಿಸುವುದು, ಮಾರಣಾಂತಿಕ ಚುಚ್ಚುಮದ್ದು ನೀಡುವುದು ಅಥವಾ ವಿದ್ಯುತ್ ಕುರ್ಚಿ ಮೂಲಕ ಸಾಯಿಸುವುದು ಸೇರಿದಂತೆ ಇತರ ಕ್ರಮಗಳನ್ನು ಅರ್ಜಿಯಲ್ಲಿ ಮಾಹಿತಿ ನೀಡಲಾಗಿದೆ. ಕುತ್ತಿಗೆಗೆ ನೇಣು ಹಾಕಿ ಮರಣದಂಡನೆಯನ್ನು ಜಾರಿಗೊಳಿಸುವ ಪ್ರಕ್ರಿಯೆ ಅತ್ಯಂತ ಕ್ರೂರವಾಗಿದೆ ಎಂದು, ಕಾನೂನು ಆಯೋಗದ ವರದಿಯನ್ನು ಓದಿ ವಕೀಲ ರಿಷಿ ಮಲ್ಹೋತ್ರಾ ಅವರು ಕೋರ್ಟ್ಗೆ ತಿಳಿಸಿದರು.
ಹೌದು, ಇದೊಂದು ಚರ್ಚಾ ವಿಷಯವಾಗಿದೆ. ಈ ಕುರಿತು ನಮಗೆ ಕೆಲವು ವೈಜ್ಞಾನಿಕ ದತ್ತಾಂಶಗಳು ನಮ್ಮ ಬಳಿ ಇಲ್ಲ. ನೋವಿಗೆ ಕಾರಣವಾಗುವ ಕೆಲವು ಅಧ್ಯಯನಗಳನ್ನು ನಮಗೆ ಕೊಡಿ. ನಾವು ಒಂದು ಸಮಿತಿಯನ್ನು ರಚಿಸಬಹುದು, ಈ ಕುರಿತು ಮುಂದಿನ ವಿಚಾಣೆಯಲ್ಲಿ ಚರ್ಚಿಸಬಹುದು ಎಂದು ಸಿಜೆಐ ಡಿ ವೈ ಚಂದ್ರಚೂಡ್ ಹೇಳಿದರು. ಅಲ್ಲದೇ, ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ನಿಗದಿ ಮಾಡಿದ್ದಾರೆ.
ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್ ಪಿ ಎಸ್ ನರಸಿಂಹ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಇಂದಿಗೂ ಸಾವಿನಲ್ಲಿ ಘನತೆ ಇರಬೇಕೆಂಬ ಪ್ರಶ್ನೆ ಚರ್ಚೆಯಾಗುತ್ತಲೇ ಇದೆ. ಅದು ಕಡಿಮೆ ನೋವಿನಿಂದ ಕೂಡಿರಬೇಕು. ಸದ್ಯದ ಪರಿಸ್ಥಿತಿಯ ನೇಣು ಹಾಕುವುದು ತೃಪ್ತಿಕರ ಸಾಧನವಾಗಿದೆ. ಹಾಗಾದಲ್ಲಿ, ಇಂಜೆಕ್ಷನ್ ಕೊಟ್ಟು ಸಾಯಿಸುವುದು ಪರಿಗಣಿಸಬಹುದೇ ಎಂದು ಜಸ್ಟೀಸ್ ಹೇಳಿದರು.
ಚುಚ್ಚುಮದ್ದು ಮೂಲಕ ಮರಣ ದಂಡನೆ ಶಿಕ್ಷೆಯ ಜಾರಿ ಮಾಡುವುದು ನೋವಿನಿಂದ ಕೊಡಿದೆ. ಶೂಟ್ ಮಾಡುವ ಮೂಲಕ ಶಿಕ್ಷೆ ಜಾರಿ ಮಾಡುವುದು ಮಿಲಿಟರಿ ಆಡಳಿತಗಳ ನೆಚ್ಚಿನ ಟೈಮ್ಪಾಸ್ ಆಗಿತ್ತು. ಇದು ಮಾನವ ಹಕ್ಕುಗಳ ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ಸಿಜೆಐ ಚಂದ್ರಚೂಡ್ ಅವರು ಹೇಳಿದರು.
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ21 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ24 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್22 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್6 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ10 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ8 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ10 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ