Raghuram Rajan | ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಸ್ಮಾರ್ಟ್‌ ಮ್ಯಾನ್ ಎಂದ ರಘುರಾಮ್ ರಾಜನ್ - Vistara News

ದೇಶ

Raghuram Rajan | ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಸ್ಮಾರ್ಟ್‌ ಮ್ಯಾನ್ ಎಂದ ರಘುರಾಮ್ ರಾಜನ್

ರಾಹುಲ್ ಗಾಂಧಿ ಅವರನ್ನು ಅವರ ರಾಜಕೀಯ ವಿರೋಧಿಗಳು ಪಪ್ಪು ಎಂದು ಬಿಂಬಿಸುವ ಪ್ರಯತ್ನವನ್ನು ರಾಜಕೀಯದಲ್ಲಿ ಮಾಡುತ್ತಾ ಬಂದಿದ್ದಾರೆ. ರಘುರಾಮ್ ರಾಜನ್ (Raghuram Rajan) ಅವರು ರಾಹುಲ್ ಸ್ಮಾರ್ಟ್‌ಮ್ಯಾನ್ ಎಂದು ಹೇಳಿದ್ದಾರೆ.

VISTARANEWS.COM


on

Raghuram Rajan and Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಪ್ಪು ಅಲ್ಲ, ಅವರೊಬ್ಬ ಸ್ಮಾರ್ಟ್ ವ್ಯಕ್ತಿ ಎಂದು ಖ್ಯಾತ ಅರ್ಥಶಾಸ್ತ್ರಜ್ಞರೂ ಆಗಿರುವ ಆರ್‌ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ (Raghuram Rajan) ಅವರು ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ರಾಹುಲ್ ಗಾಂಧಿ ಅವರನ್ನು ಬೆಂಬಲಿಸಿ ಮಾತನಾಡಿದ ಅವರು, ರಾಹುಲ್ ಅವರನ್ನು ಪಪ್ಪು ಎಂದು ಬಿಂಬಿಸಿದ್ದು ದುರದೃಷ್ಟಕರ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ರಘುರಾಮ್ ರಾಜನ್ ಅವರು ಭಾರತ್ ಜೋಡೋ ಯಾತ್ರೆಯಲ್ಲೂ ಪಾಲ್ಗೊಂಡಿದ್ದರು.

ದಾವೋಸ್‌ನಲ್ಲಿ ಆಯೋಜಿಸಲಾಗಿದ್ದ ಜಾಗತಿಕ ಆರ್ಥಿಕ ವೇದಿಕೆಯ ಕಾರ್ಯಕ್ರಮದ ಸಂದರ್ಭದಲ್ಲೂ ರಾಹುಲ್ ಗಾಂಧಿ ಬಗ್ಗೆ ಮಾತನಾಡಿದ್ದ ರಘುರಾಮ್ ರಾಜನ್ ಅವರು, ನಾನು ಬಹಳ ಹತ್ತಿರದಿಂದ ರಾಹುಲ್ ಅವರೊಂದಿಗೆ ಕೆಲಸ ಮಾಡಿದ್ದೇನೆ. ನಾನು ಹಲವು ವರ್ಷಗಳಿಂದ ಅವರನ್ನು ಬಲ್ಲೆ. ರಾಹುಲ್ ಯಾವುದೇ ರೀತಿಯಲ್ಲೂ ಪಪ್ಪು ಅಲ್ಲ. ತಮ್ಮ ಆದ್ಯತೆಗಳೇನು, ತಮಗಿರುವ ಸಾಮರ್ಥ್ಯಗಳೇನು ಎಂಬ ಬಗ್ಗೆ ಸ್ಪಷ್ಟವಾಗಿ ಅವರಿಗೆ ಗೊತ್ತಿದೆ ಎಂದು ಹೇಳಿದ್ದರು.

ರಾಹುಲ್ ಗಾಂಧಿ ಅವರನ್ನು ಅವರ ರಾಜಕೀಯ ವಿರೋಧಿಗಳು ಪಪ್ಪು ಎಂದು ಕರೆಯುತ್ತಾರೆ. ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯೂ ಪ್ರತಿ ಹಂತದಲ್ಲಿ ಅವರನ್ನು ಪಪ್ಪು ಎಂಬುದನ್ನು ಬಿಂಬಿಸುವ ಪ್ರಯತ್ನವನ್ನು ಮಾಡುತ್ತಿರುತ್ತಿದೆ. ಈ ವಿಷಯವನ್ನು ಇತ್ತೀಚೆಗೆ ರಾಹುಲ್ ಗಾಂಧಿ ಅವರು ಹೇಳಿಕೊಂಡಿದ್ದರು. ಇದಕ್ಕಾಗಿ ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದೆ ಎಂದು ಅವರು ಆರೋಪಿಸಿದ್ದರು.

ಇದನ್ನೂ ಓದಿ | ಭಾರತ್​ ಜೋಡೋ ಯಾತ್ರೆಗೆ ಆರ್​ಬಿಐ ಮಾಜಿ ಗವರ್ನರ್​ ರಘುರಾಮ್​ ರಾಜನ್​ ಸಾಥ್; ರಾಹುಲ್​ ಗಾಂಧಿಯೊಂದಿಗೆ ಕಾಲ್ನಡಿಗೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ದೇಶ

Physical abuse: ಲೈಂಗಿಕ ಕಿರುಕುಳ ಕೇಸ್‌; ಅರ್ಜುನ ಪ್ರಶಸ್ತಿ ಪುರಸ್ಕೃತ ಅಧಿಕಾರಿ ವಜಾ

Physical abuse:ಸಿಆರ್‌ಪಿಎಫ್‌ನ ಡೆಪ್ಯೂಟಿ ಇನ್‌ಸ್ಪೆಕ್ಟರ್‌ ಜನರಲ್‌ ಶ್ರೇಣಿಯ ಕ್ರೀಡಾ ವಿಭಾಗದ ಅಧಿಕಾರಿಯಾಗಿರುವ ಖಂಜನ್‌ ಸಿಂಗ್‌ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವಿಚಾರಣೆ ನಡೆಸಿದ ಸಿಆರ್‌ಪಿಎಫ್‌ ಖಂಜನ್‌ ಸಿಂಗ್‌ ಅವರನ್ನು ದೋಷಿ ಎಂದು ಘೋಷಿಸಿದೆ.

VISTARANEWS.COM


on

By

Koo

ನವದೆಹಲಿ: ಲೈಂಗಿಕ ಕಿರುಕುಳ (Physical abuse) ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಹಿನ್ನೆಲೆ ಅರ್ಜುನ ಪ್ರಶಸ್ತಿ ಪುರಸ್ಕೃತ (Arjuna Awardee) ಕೇಂದ್ರೀಯ ಮೀಸಲು ಪಡೆಯ(CRPF) ಹಿರಿಯ ಅಧಿಕಾರಿಯೊಬ್ಬರನ್ನು ಕರ್ತವ್ಯದಿಂದ ವಜಾಗೊಳಿಸಿ ಆದೇಶ ಹೊರಡಿಸಲಾಗಿದೆ. ಸಿಆರ್‌ಪಿಎಫ್‌ನ ಡೆಪ್ಯೂಟಿ ಇನ್‌ಸ್ಪೆಕ್ಟರ್‌ ಜನರಲ್‌ (DIG) ಶ್ರೇಣಿಯ ಕ್ರೀಡಾ ವಿಭಾಗದ ಅಧಿಕಾರಿಯಾಗಿರುವ ಖಂಜನ್‌ ಸಿಂಗ್‌ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ವಿರುದ್ಧ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿತ್ತು. ಇದರ ಬೆನ್ನಲ್ಲೇ ವಿಚಾರಣೆ ನಡೆಸಿದ ಸಿಆರ್‌ಪಿಎಫ್‌ ಖಂಜನ್‌ ಸಿಂಗ್‌ ಅವರನ್ನು ದೋಷಿ ಎಂದು ಘೋಷಿಸಿದೆ.

ಈ ಕುರಿರು ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಖಂಜನ್‌ ಸಿಂಗ್‌ ವಿರುದ್ಧ ಆರೋಪ ಸಾಭೀತಾಗುತ್ತಿದ್ದಂತೆ ಸಿಆರ್‌ಪಿಎಫ್‌ ಕೇಂದ್ರ ಲೋಕ ಸೇವಾ ಆಯೋಗ(UPSC) ಗೆ ತನಿಖಾ ವರದಿ ಸಲ್ಲಿಸಿ ತಕ್ಷಣ ಅವರನ್ನು ಸೇವೆಯಿಂದ ವಜಾಗೊಳಿಸುವಂತೆ ಮನವಿ ಮಾಡಿತ್ತು. ಖಂಜನ್‌ ಸಿಂಗ್‌ ವಿರುದ್ಧ ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗಿದೆ. ಬಳಿಕ ಅವರನ್ನು ವಜಾಗೊಳಿಸುವಂತೆ UPSC ಕೂಡ ಕೇಂದ್ರ ಗೃಹ ಸಚಿವಾಲಯಕ್ಕೆ ಮನವಿ ಮಾಡಿತ್ತು. ಗೃಹ ಸಚಿವಾಲಯವೂ ಇದಕ್ಕೆ ಅನುಮತಿ ಸೂಚಿಸಿತ್ತು. ಹೀಗಾಗಿ ಸಿಆರ್‌ಪಿಎಫ್‌ ಖಂಜನ್‌ ಸಿಂಗ್‌ ಅವರನ್ನು ವಜಾಗೊಳಿಸಿ ನೋಟಿಸ್‌ ಜಾರಿಗೊಳಿಸಿದೆ ಎಂದು ತಿಳಿಸಿದ್ದಾರೆ.

ಪ್ರಸ್ತುತ ಮುಂಬೈನಲ್ಲಿ ಸೇವೆ ಸಲ್ಲಿಸುತ್ತಿದ್ದ ಖಂಜನ್‌ ಸಿಂಗ್‌ ತಮ್ಮ ವಜಾದ ಬಗ್ಗೆ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸಿಆರ್‌ಪಿಎಫ್‌ ಅವರಿಗೆ ನೀಡಿರುವ ನೋಟಿಸ್‌ಗೆ 15 ದಿನದೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಇನ್ನು ಖಂಜನ್‌ ಸಿಂಗ್‌ ವಿರುದ್ಧ ಎರಡು ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿತ್ತು. ಇದೀಗ ಒಂದು ಪ್ರಕರಣದಲ್ಲಿ ಅವರು ದೋಷಿ ಎಂದು ಸಾಬೀತಾಗಿದ್ದು, ಮತ್ತೊಂದು ಪ್ರಕರಣದ ತನಿಖೆ ಮುಂದುವರಿದೆ ಎಂದು ಸಿಆರ್‌ಪಿಎಫ್‌ನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಖಂಜನ್‌ ಸಿಂಗ್‌ ಸಿಆರ್‌ಪಿಎಫ್‌ನ ಕ್ರೀಡಾ ವಿಭಾಗದ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮುನ್ನ 1986ರಲ್ಲಿ ಸಿಯೋಲ್‌ ಏಷಿಯನ್‌ ಗೇಮ್ಸ್‌ನ ಈಜು ಸ್ಪರ್ಧೆಯಲ್ಲಿ ರಜತ ಪದಕ ಗೆದ್ದುಕೊಂಡಿದ್ದರು. 1951ರ ನಂತರ ಈಜು ಸ್ಪರ್ಧೆಯಲ್ಲ ಭಾರತ ಗೆದ್ದ ಮೊದಲ ಪದಕ ಆದಾಗಿತ್ತು. ಇದಾದ ಬಳಿಕ ಅವರ ಸೇವೆಯನ್ನು ಗುರುತಿಸಿ ಅವರಿಗೆ ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಇನ್ನು ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬರುತ್ತಿದ್ದಂತೆ ಈ ಹಿಂದೆಯೇ ಖಂಜನ್‌ ಸಿಂಗ್‌ ಅದನ್ನು ನಿರಾಕರಿಸಿದ್ದರು. ತಮ್ಮ ಗೌರವಕ್ಕೆ ಧಕ್ಕೆ ತರುವ ಉದ್ದೇಶದಿಂದ ಇಂತಹ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿಕೆ ಕೊಟ್ಟಿದ್ದರು.

ಇದನ್ನೂ ಓದಿ:Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

ಸಿಆರ್‌ಪಿಎಫ್‌ನಲ್ಲಿ 3.25ಲಕ್ಷಕ್ಕೂ ‍ಅಧಿಕ ಸಿಬ್ಬಂದಿಗಳಿದ್ದು, 1986ರಲ್ಲಿ ಮೊದಲ ಬಾರಿಗೆ ಮಹಿಳಾ ಸಿಬ್ಬಂದಿಯನ್ನು ನೇಮಿಸಲಾಯಿತು. ಪ್ರಸ್ತುತ ಒಟ್ಟು ಆರು ಮಹಿಳಾ ಬೆಟಾಲಿನ್‌ ಇದ್ದು, ಸುಮಾರು 8000ಕ್ಕೂ ಅಧಿಕ ಸಿಬ್ಬಂದಿಗಳಿದ್ದಾರೆ. ಅಲ್ಲದೇ ಕ್ರೀಡಾ ಹಾಗೂ ಆಡಳಿತ ವಿಭಾಗದಲ್ಲೂ ಮಹಿಳಾ ಸಿಬ್ಬಂದಿಯನ್ನು ಹೊಂದಿದೆ.

Continue Reading

Lok Sabha Election 2024

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Lok Sabha Election 2024: ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

VISTARANEWS.COM


on

lok sabha election 2024 voting
Koo

ಹೊಸದಿಲ್ಲಿ: ನಿನ್ನೆ (ಏಪ್ರಿಲ್‌ 26) ಲೋಕಸಭೆ ಚುನಾವಣೆ (Lok Sabha Election 2024) ಎರಡನೇ ಹಂತದ ಮತದಾನ (voting) ನಡೆಯಿತು. ಇದರಲ್ಲಿ ಯಾವ ರಾಜ್ಯಗಳಲ್ಲಿ ಅತಿ ಹೆಚ್ಚು ಮತ್ತು ಯಾವ ರಾಜ್ಯಗಳಲ್ಲಿ ಅತಿ ಕಡಿಮೆ ಮತದಾನವಾಗಿದೆ ಎಂಬ ಮಾಹಿತಿ ಇಲ್ಲಿದೆ. ತ್ರಿಪುರಾದಲ್ಲಿ ಅತಿ ಹೆಚ್ಚು ಅಂದಾಜು 77.94% ಮತದಾನವಾಗಿದೆ.

ನಂತರ ಮಣಿಪುರ (76.46%), ಛತ್ತೀಸ್‌ಗಢ (72.51%), ಪಶ್ಚಿಮ ಬಂಗಾಳ (71.84%), ಅಸ್ಸಾಂ (70.68%), ಕರ್ನಾಟಕದಲ್ಲಿ 69.23%, J&K (67.22%), ಮತ್ತು ಕೇರಳ (64.99%) ಮತದಾನ ದಾಖಲಿಸಿವೆ. ಉತ್ತರ ಪ್ರದೇಶದಲ್ಲಿ ಅತಿ ಕಡಿಮೆ ಅಂದಾಜು ಮತದಾನವಾಗಿದೆ (53.02%). ರಾಜಸ್ಥಾನದಲ್ಲಿ 59.69%, ಮಧ್ಯಪ್ರದೇಶದಲ್ಲಿ 55.19%, ಮಹಾರಾಷ್ಟ್ರ 53.71% ಮತ್ತು ಬಿಹಾರ 53.60% ಮತದಾನವಾಗಿದೆ.

ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ನಿನ್ನೆ ನಡೆದಿತ್ತು. ಶುಕ್ರವಾರ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಲ್ಲಿ ನಾಗರಿಕರು ತಮ್ಮ ಹಕ್ಕನ್ನು ಚಲಾಯಿಸಿದ್ದರು. ದಕ್ಷಿಣ ಕರ್ನಾಟಕದ ಉಡುಪಿ – ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ಮಂಡ್ಯ, ಹಾಸನ, ದಕ್ಷಿಣ ಕನ್ನಡ, ಮೈಸೂರು – ಕೊಡಗು, ಚಿಕ್ಕಬಳ್ಳಾಪುರ, ತುಮಕೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಗ್ರಾಮಾಂತರ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ನಡೆದಿತ್ತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ? ನಗರ ವಾಸಿಗಳು ಈ ಬಾರಿಯೂ ಕಡಿಮೆ ಪ್ರಮಾಣದಲ್ಲಿ ಮತದಾನ ಮಾಡಿದ್ದು ವಿಷಾದನೀಯ.

VISTARANEWS.COM


on

lok sabha election
Koo

ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ (lok sabha Election) ಮೊದಲ ಹಂತದ ಚುನಾವಣೆ (Lok Sabha Election) ಶುಕ್ರವಾರ ಸಂಜೆ (ಏಪ್ರಿಲ್​ 26) 6 ಗಂಟೆಗೆ ಮುಕ್ತಾಯಗೊಂಡಿದೆ. ರಾಜ್ಯದ ಮೊದಲ ಹಂತದ ಒಟ್ಟಾರೆ ಮತದಾನ 69.23% ದಾಖಲಾಗಿದೆ. ರಾಜ್ಯದ 14 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಮತದಾನಕ್ಕೆ ಮುಂಜಾನೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಮಧ್ಯಾಹ್ನದ ನಂತರ ಮತದಾನ ಪ್ರಮಾಣ ಕಡಿಮೆಯಾಯಿತು. ಮಂಡ್ಯ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚಿನ ಪ್ರಮಾಣದ (81.48%) ಮತದಾನವಾಗಿದ್ದು, ಬೆಂಗಳೂರು ಸೆಂಟ್ರಲ್‌ ಕ್ಷೇತ್ರದಲ್ಲಿ ಅತಿ ಕಡಿಮೆ (52.81%) ವೋಟಿಂಗ್ ದಾಖಲಾಗಿದೆ. ಮತದಾನದ ಸಮಯ ಮುಕ್ತಾಯಗೊಳ್ಳುತ್ತಿದ್ದಂತೆ ಅಧಿಕಾರಿಗಳು ಇವಿಎಂ ಯಂತ್ರಗಳಿಗೆ ಸೀಲ್ ಮಾಡಿದ್ದು, ಭಾರೀ ಭದ್ರತೆಯೊಂದಿಗೆ ನಿಗದಿತ ಸ್ಟ್ರಾಂಗ್ ರೂಮ್​ಗೆ ರವಾನೆಯಾಗಿವೆ. ಸಂಸದ ಸ್ಥಾನದ ಆಕಾಂಕ್ಷಿಗಳು ಫಲಿತಾಂಶಕ್ಕೆ ಇನ್ನೂ ಒಂದು ತಿಂಗಳು ಕಾಯಬೇಕಿದೆ.

ಮತದಾನ ಪ್ರಮಾಣವನ್ನು ಗಮನಿಸಿದರೆ ಕೆಲವು ಅಂಶಗಳನ್ನು ಹೇಳಬಹುದಾಗಿದೆ. ನಗರಕ್ಕೆ ಹೋಲಿಸಿದರೆ ಗ್ರಾಮಾಂತರ ಪ್ರದೇಶಗಳೇ ಮತದಾನದ ಪ್ರಮಾಣದಲ್ಲಿ ವಾಸಿ. ಬೆಂಗಳೂರು ಗ್ರಾಮಾಂತರದಲ್ಲಿ 67.29% ಮತದಾನವಾಗಿದೆ. ಬೆಂಗಳೂರು ದಕ್ಷಿಣ ಹಾಗೂ ಉತ್ತರಗಳಲ್ಲಿ 53.15% ಹಾಗೂ 54.42% ಮತದಾನವಾಗಿದೆ. ಮಂಡ್ಯದಲ್ಲಿ ಅತ್ಯಧಿಕ ಮತದಾನವಾಗಿರುವುದು ಈ ಪ್ರದೇಶದ ಜನತೆಯ ರಾಜಕೀಯ ಪ್ರಜ್ಞೆಯಿಂದಾಗಿಯೇ ಇರಬಹುದು. ಕೋಲಾರ (78.07%) ಹಾಗೂ ತುಮಕೂರು (77.70%) ಕೂಡ ಹೆಚ್ಚಿನ ಮತದಾನ ದಾಖಲಿಸಿವೆ. ಬೆಂಗಳೂರು ಕೇಂದ್ರ ಕ್ಷೇತ್ರದ ನೀರಸ ಮತದಾನ (52.81%) ಚಿಂತೆಗೆ ಕಾರಣವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಒಟ್ಟಾರೆ ಮತದಾನ ಶೇಕಡಾವಾರು 68.81% ಆಗಿತ್ತು. ಈ ಬಾರಿ ಮೊದಲ ಹಂತದಲ್ಲಿ ಅದಕ್ಕಿಂತ ಸ್ವಲ್ಪ ಹೆಚ್ಚಿಗೆ (69.23%) ಮತದಾನವಾಗಿದೆ. ಆದರೆ ಎರಡನೇ ಹಂತದಲ್ಲಿ ಎಷ್ಟಾಗಲಿದೆ ಎಂಬುದರ ಮೇಲೆ ಒಟ್ಟಾರೆ ಸರಾಸರಿ ನಿರ್ಧಾರವಾಗಲಿದೆ.

ಮೂಲ ಸೌಕರ್ಯ ಸೇರಿದಂತೆ ನಾನಾ ಕಾರಣಗಳಿಗೋಸ್ಕರ ಹಲವೆಡೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದು ಹಾಗೂ ಮತದಾನ ಬಹಿಷ್ಕಾರ ಮಾಡಿದ್ದು ಕೂಡ ನಡೆದಿವೆ. ಸಮಾಧಾನ ಮಾಡಲು ಬಂದ ಅಧಿಕಾರಿಗಳ ಮೇಲೆಯೆ ಗ್ರಾಮಸ್ಥರು ಮುಗಿಬಿದ್ದು ಪೊಲೀಸರ ಲಾಠಿ ಏಟು ತಿನ್ನಬೇಕಾದ ಪ್ರಸಂಗವೂ ಎದುರಾಯಿತು. ಸ್ವಾತಂತ್ರ್ಯ ದೊರೆತು ಎಂಟು ದಶಕ ಕಳೆದರೂ ಇನ್ನೂ ಮೂಲಸೌಕರ್ಯ ಕಲ್ಪಿಸದ ನಮ್ಮ ಆಡಳಿತಗಳಿಗೆ ಮತದಾನ ಬಹಿಷ್ಕಾರವೇ ಸೂಕ್ತ ಉತ್ತರ ಎಂದು ಗ್ರಾಮೀಣ ಜನತೆ ಕಂಡುಕೊಂಡರೋ ಗೊತ್ತಿಲ್ಲ. ಇದು ಮೊದಲೇ ಸಾರಿ, ಕಾರಣ ಹೇಳಿ ಮಾಡುವ ಬಹಿಷ್ಕಾರ. ಆದರೆ ವಿದ್ಯಾವಂತ ನಗರವಾಸಿಗಳ ʼಮತದಾನ ಬಹಿಷ್ಕಾರʼಕ್ಕೆ ಕಾರಣವಾದರೂ ಏನು? ನಗರದಲ್ಲಿ ಮತದಾನ ಹೆಚ್ಚಳ ಮಾಡಲು ಚುನಾವಣಾ ಆಯೋಗ ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದೆ. ಹೊಸ ಮತದಾರರಿಗಾಗಿಯೇ ಉತ್ತೇಜನದ ಉಪಕ್ರಮಗಳು, ಮಹಿಳೆಯರಿಗಾಗಿಯೇ ಸಖಿ ಮತಗಟ್ಟೆಗಳು, ಸಾರ್ವತ್ರಿಕ ರಜೆ ಎಲ್ಲವನ್ನೂ ಘೋಷಿಸಲಾಗಿದೆ. ಯಾವುದೇ ಕಷ್ಟವಿಲ್ಲದೆ ಮತದಾರರ ಗುರುತಿನ ಚೀಟಿ ಅಪ್‌ಡೇಟ್‌ ಮಾಡುವ, ತಮ್ಮ ಮತಗಟ್ಟೆ ಎಲ್ಲಿ ಎಂದು ತಿಳಿಯಲು ಕ್ಯುಆರ್‌ ಕೋಡ್‌ ಒದಗಿಸುವ ವ್ಯವಸ್ಥೆಯನ್ನೂ ಒದಗಿಸಲಾಗಿದೆ. ಎಷ್ಟೋ ಮಂದಿ ಶತಾಯುಷಿಗಳು, ದುರ್ಬಲರು, ಅಂಗವಿಕಲರು, ಇನ್ನೇನು ಸರ್ಜರಿಗೆ ಒಳಗಾಗಲಿದ್ದವರು ಬಂದು ಮತ ಹಾಕಿದ್ದಾರೆ. ಮುಂಜಾನೆಯೇ ಬಂದು ಮತಹಾಕಿ ಸೀದಾ ಮಂಟಪಕ್ಕೇ ತೆರಳಿದ ಮದುಮಗಳೂ ಕಂಡುಬಂದಿದ್ದಾಳೆ. ಎಲ್ಲ ಸರಿ ಇದ್ದೂ ಮತ ಹಾಕದ ಮಂದಿಗೆ ಏನೆನ್ನೋಣ?

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಈ ದಿನ ನಮ್ಮದು, ನಮ್ಮ ಅಧಿಕಾರ ಚಲಾಯಿಸೋಣ

ಮತದಾನ ಕಡಿಮೆಯಾದರೆ ತಾಂತ್ರಿಕವಾಗಿ ನಾವು ಸಮರ್ಪಕವಾದ ಸರ್ಕಾರವನ್ನು ಚುನಾಯಿಸುತ್ತಿರುವುದಿಲ್ಲ. ದೇಶದ 60% ಜನ ಮಾತ್ರ ಮತ ಹಾಕಿ, ಅದರಲ್ಲಿ 30% ಮತ ಪಡೆದ ಪಕ್ಷ ಅಧಿಕಾರಕ್ಕೆ ಬಂದರೆ, ಒಟ್ಟಾರೆ ದೇಶದ ಜನತೆಯಲ್ಲಿ ಆ ಪಕ್ಷವನ್ನು ಆಯ್ಕೆ ಮಾಡಿದವರು ಮೂರನೇ ಒಂದು ಭಾಗ ಮಾತ್ರವೇ ಆಗಿರುತ್ತಾರೆ. ಉಳಿದ ಮೂರನೇ ಎರಡು ಭಾಗ ಜನತೆ ಆ ಪಕ್ಷದ ವಿರುದ್ಧ ಇದ್ದಾರೆ ಎಂದು ತಿಳಿಯಬೇಕಾಗುತ್ತದೆ. ವಾಸ್ತವ ಹಾಗಿರುವುದಿಲ್ಲ. ಮತ ಹಾಕದ ಮಂದಿಯಲ್ಲಿ ಎಷ್ಟು ಮತಗಳು ಯಾವ ಪಕ್ಷದ್ದು ಎಂದು ನಿರ್ಣಯಿಸುವ ಯಾವ ವಿಧಾನವೂ ಇಲ್ಲ. ಹೀಗಾಗಿ ಮತದಾನ ಪ್ರಮಾಣ ಕಡಿಮೆ ಬಂದಾಗ, ಬರುವ ಫಲಿತಾಂಶವೂ ಅಷ್ಟರ ಮಟ್ಟಿಗೆ ಅಸಮರ್ಪಕವೇ ಆಗಿರುತ್ತದೆ. ಇನ್ನು ವಿದ್ಯಾವಂತರು, ಪ್ರಜ್ಞಾವಂತರು ಮತದಾನದಿಂದ ಹಿಂದುಳಿದರೆ, ಪ್ರಜ್ಞಾವಂತಿಕೆಯ ಆಯ್ಕೆಯೂ ಇಲ್ಲದಾಗುತ್ತದೆ. ಇದರಿಂದ ನಷ್ಟ ಪ್ರಜೆಗಳಿಗೇ. ಮೂರ್ಖರು ಅಧಿಕಾರಕ್ಕೆ ಆರಿಸಿ ಬರಬಾರದು ಎಂದಿದ್ದರೆ, ಬುದ್ಧಿವಂತರು ಮತ ಹಾಕಬೇಕು. ಮೇ 7ರಂದು ನಡೆಯುವ ಎರಡನೇ ಹಂತದ ಮತದಾನದಲ್ಲಾದರೂ ಹೆಚ್ಚಿನ ಪ್ರಮಾಣದ ಮತದಾನವಾಗಲಿ ಎಂದು ಆಶಿಸೋಣ.

Continue Reading

Lok Sabha Election 2024

Lok Sabha Election : ಲೊಕಸಭಾ ಚುನಾವಣೆಯ ಎರಡನೇ ಹಂತದ 88 ಕ್ಷೇತ್ರಗಳಲ್ಲಿ ಶೇ 60.96 ಮತದಾನ

Lok Sabha Election: ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

VISTARANEWS.COM


on

lok sabha election
Koo

ಬೆಂಗಳೂರು : ಏಪ್ರಿಲ್​​ 26ರಂದು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾದ ಲೋಕ ಸಭಾ ಚುನಾವಣೆಯ (Lok Sabha Election) ಎರಡನೇ ಹಂತದ ಮತದಾನವು ಶಾಂತಿಯುತವಾಗಿ ನಡೆಯಿತು. ಒಟ್ಟು 88 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು ಸಂಜೆ 7 ಗಂಟೆಯ ವೇಳೆಗೆ ಅಂದಾಜು 60.96% ಮತದಾನವನ್ನು ದಾಖಲಿಸಿದೆ. ಎಂದು ಚುನಾವಣಾ ಆಯೋಗ ಹೇಳಿದೆ. 13 ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳ ಮತದಾರರು ಬಿಸಿ ಹವಾಮಾನ ಪರಿಸ್ಥಿತಿಗಳನ್ನು ಲೆಕ್ಕಿಸದೆ ತಮ್ಮ ಮತಗಟ್ಟೆಯಲ್ಲಿ ಉತ್ಸಾಹದಿಂದ ಮತ ಚಲಾಯಿಸಿದರು. ನವವಿವಾಹಿತರಿಂದ ಹಿಡಿದು ಹಿರಿಯ ನಾಗರಿಕರವರೆಗೆ, ಬುಡಕಟ್ಟು ಜನಾಂಗದವರಿಂದ ಐಟಿ ವೃತ್ತಿಪರರು, ಅಂಗವಿಕಲರು, ಮಹಿಳೆಯರು ಮತ್ತು ಯುವಕರು ಎಲ್ಲರೂ ತಮ್ಮ ಮತ ಚಲಾಯಿಸಿದರು. 2024ರ ಲೋಕಸಭಾ ಚುನಾವಣೆಗೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ಪೂರ್ಣಗೊಂಡಿದೆ.

ತ್ರಿಪುರಾದ ಏಕೈಕ ಕ್ಷೇತ್ರದಲ್ಲಿ ಶೇ.77.93, ಛತ್ತೀಸ್ ಗಢದ ಮೂರು ಕ್ಷೇತ್ರಗಳಲ್ಲಿ ಶೇ.72.13 ಹಾಗೂ ಪಶ್ಚಿಮ ಬಂಗಾಳದ ಮೂರು ಕ್ಷೇತ್ರಗಳಲ್ಲಿ ಶೇ.71.84ರಷ್ಟು ಮತದಾನವಾಗಿದೆ. ಮಣಿಪುರದ 13 ಮತಗಟ್ಟೆಗಳಲ್ಲಿ ಶೇ.76.06ರಷ್ಟು ಮತದಾನವಾಗಿದ್ದರೆ, ಅಸ್ಸಾಂನ ಮತಗಟ್ಟೆಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.70.66ರಷ್ಟು ಮತದಾನವಾಗಿದೆ. ಎರಡನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಶೇ.53.51ರಷ್ಟು ಮತದಾನವಾಗಿದೆ.

ಬಿಹಾರದಲ್ಲಿ ಮತದಾನದ ಶೇಕಡಾವಾರು ಮೊದಲ ಹಂತಕ್ಕಿಂತ ಹೆಚ್ಚಾಗಿದ್ದರೆ, ಇದು ಉತ್ತರ ಪ್ರದೇಶಕ್ಕಿಂತ 53.03% ಹೆಚ್ಚಾಗಿದೆ. ಉತ್ತರ ಪ್ರದೇಶದ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ 52.74% ಮತದಾನ ದಾಖಲಾಗಿದೆ. ಎರಡನೇ ಹಂತದಲ್ಲಿ ಮತದಾನ ನಡೆದ ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಸರಾಸರಿ ಶೇಕಡಾ 59.19 ರಷ್ಟು ಮತದಾನವಾಗಿತ್ತು. ಕೆಲವು ಘಟನೆಗಳ ಹೊರತಾಗಿಯೂ, ಮತದಾನವು ಶಾಂತಿಯುತವಾಗಿ ನಡೆಯಿತು.

ಇದನ್ನೂ ಓದಿ: Lok Sabha Election 2024: ಕರ್ನಾಟಕದಲ್ಲಿ ದಾಖಲೆಯ ಮತದಾನ; ಕಳೆದ ಬಾರಿಗಿಂತ ಏರಿಕೆ, ಮಂಡ್ಯದಲ್ಲಿ ಅತಿ ಹೆಚ್ಚು!

ಮಧ್ಯಪ್ರದೇಶದ ಆರು ಕ್ಷೇತ್ರಗಳಲ್ಲಿ ಎರಡನೇ ಹಂತದಲ್ಲಿ ಕನಿಷ್ಠ 54.83% ಮತದಾನವಾಗಿದೆ. ಕರ್ನಾಟಕದ ಹದಿನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಎರಡನೇ ಹಂತದಲ್ಲಿ ಮತದಾನ ನಡೆದಿದೆ. ಕರ್ನಾಟಕ 69. 23 ಶೇಕಡಾ ಮತದಾನವಾಗಿದೆ.

ಬಹುತೇಕ ಶಾಂತಿಯುತ ಮತದಾನ

ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯಿತು. ಸಿಇಸಿ ಶ್ರೀ ರಾಜೀವ್ ಕುಮಾರ್ ನೇತೃತ್ವದ ಆಯೋಗವು ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಮತ್ತು ಶ್ರೀ ಸುಖ್ಬೀರ್ ಸಿಂಗ್ ಸಂಧು ಅವರೊಂದಿಗೆ ಬೆಳಿಗ್ಗೆಯಿಂದ ಮತದಾನ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತು. ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೆ ತರಲಾಯಿತು. ಮತದಾರರು ಭಯ ಅಥವಾ ಬೆದರಿಕೆಯಿಲ್ಲದೆ ಮತ ಚಲಾಯಿಸಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಲಾಯಿತು. 1 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಮಾಡಲಾಗಿದೆ.

ಬಿಹಾರದ ಬಂಕಾ, ಮಾಧೇಪುರ, ಖಗರಿಯಾ ಮತ್ತು ಮುಂಗೇರ್ ಕ್ಷೇತ್ರಗಳ ಅನೇಕ ಮತಗಟ್ಟೆಗಳಲ್ಲಿ ಮತದಾನದ ಸಮಯವನ್ನು ಸಂಜೆ 6 ಗಂಟೆಯ ಬಳಿಕವೂ ವಿಸ್ತರಿಸಲಾಗಿತ್ತು. ಎರಡನೇ ಹಂತದಲ್ಲಿ, ಛತ್ತೀಸ್​​ಗಢದ ಬಸ್ತಾರ್ ಮತ್ತು ಕಂಕೇರ್ ಪಿಸಿಗಳ 46 ಗ್ರಾಮಗಳ ಮತದಾರರು ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ತಮ್ಮ ಸ್ವಂತ ಗ್ರಾಮದಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. ಗ್ರಾಮಸ್ಥರ ಅನುಕೂಲಕ್ಕಾಗಿ ಈ ಪಿಸಿಗಳಲ್ಲಿ ಮೊದಲ ಬಾರಿಗೆ 102 ಹೊಸ ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಯಿತು

ಕ್ರಿಕೆಟ್ ತಾರೆಗಳಾದ ಅನಿಲ್ ಕುಂಬ್ಳೆ, ರಾಹುಲ್ ದ್ರಾವಿಡ್ ಮತ್ತು ಜಾವಗಲ್ ಶ್ರೀನಾಥ್ ಅವರು ಬೆಂಗಳೂರಿನ ವಿವಿಧ ಮತಗಟ್ಟೆಗಳಲ್ಲಿ ಮತ ಚಲಾಯಿಸಿದರು. ಶಾಯಿ ಹಾಕಿದ ಬೆರಳುಗಳಿಂದ ಪೋಸ್ ನೀಡಿದ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮಹತ್ವದ ಸಂದೇಶವನ್ನು ಯುವಕರಿಗೆ ತಲುಪಿಸಿದರು.

Continue Reading
Advertisement
anjali nimbalkar
ಉತ್ತರ ಕನ್ನಡ32 mins ago

Anjali Nimbalkar: ಅಪಘಾತದಲ್ಲಿ ಗಾಯಗೊಂಡ ಯುವಕನಿಗೆ ನೆರವಾದ ಅಂಜಲಿ ನಿಂಬಾಳ್ಕರ್

ದೇಶ35 mins ago

Physical abuse: ಲೈಂಗಿಕ ಕಿರುಕುಳ ಕೇಸ್‌; ಅರ್ಜುನ ಪ್ರಶಸ್ತಿ ಪುರಸ್ಕೃತ ಅಧಿಕಾರಿ ವಜಾ

lok sabha election 2024 voting
Lok Sabha Election 202453 mins ago

Lok Sabha Election 2024: 2ನೇ ಹಂತದ ಮತದಾನ, ಎಲ್ಲಿ ಹೆಚ್ಚು, ಎಲ್ಲಿ ಕಡಿಮೆ?

Karnataka weather Forecast
ಮಳೆ2 hours ago

Karnataka Weather : ಒಳನಾಡಿನಲ್ಲಿ ವಿಪರೀತ ಬಿಸಿಲು; ಕರಾವಳಿಯಲ್ಲಿ ಬಿಸಿಗಾಳಿ, ಮಲೆನಾಡಿನಲ್ಲಿ ಗುಡುಗು ಮಳೆ

Baking Soda Benefits
ಆರೋಗ್ಯ2 hours ago

Baking Soda Benefits: ಅಡುಗೆ ಸೋಡಾದಿಂದ ಎಷ್ಟೊಂದು ಪ್ರಯೋಜನಗಳಿವೆ ನೋಡಿ!

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Implement the work without damaging the drinking water pipelines says ZP CEO Sadashiva Prabhu
ವಿಜಯನಗರ8 hours ago

Vijayanagara News: ಕುಡಿಯುವ ನೀರಿನ ಪೈಪ್‌ಲೈನ್‌ಗಳು ಹಾಳಾಗದಂತೆ ಕಾಮಗಾರಿ ಅನುಷ್ಠಾನಗೊಳಿಸಿ: ಜಿಪಂ ಸಿಇಒ

Congress leader Rahul Gandhi speech in Ballari
ಕರ್ನಾಟಕ8 hours ago

Lok Sabha Election 2024: ದೇಶ, ರಾಜ್ಯಕ್ಕೆ ಬಿಜೆಪಿಯಿಂದ ಖಾಲಿ ಚೊಂಬು ಕೊಟ್ಟಿದ್ದಾರೆ: ರಾಹುಲ್‌ ಗಾಂಧಿ

lok sabha election
ಪ್ರಮುಖ ಸುದ್ದಿ8 hours ago

ವಿಸ್ತಾರ ಸಂಪಾದಕೀಯ: ಗ್ರಾಮಾಂತರ ಜನರ ಮತೋತ್ಸಾಹ ನಗರದ ‘ಬುದ್ಧಿವಂತ’ ಮತದಾರರಲ್ಲಿ ಏಕಿಲ್ಲ?

Neha Murder Case
ಕರ್ನಾಟಕ8 hours ago

Neha Murder Case: ನೇಹಾ ತಂದೆಗೆ ಗನ್ ಮ್ಯಾನ್, ಮನೆಗೆ ಪೊಲೀಸ್ ಭದ್ರತೆ ಏರ್ಪಡಿಸಿದ ರಾಜ್ಯ ಸರ್ಕಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ20 hours ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 202421 hours ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 202421 hours ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ1 day ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

Lok sabha election 2024
Lok Sabha Election 20242 days ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

Dina Bhavishya
ಭವಿಷ್ಯ3 days ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

ಟ್ರೆಂಡಿಂಗ್‌