Rahul Gandhi | ಬಿಜೆಪಿ ಕಾರ್ಯಕರ್ತರತ್ತ ಕೈ ಬೀಸಿ, ಗಾಳಿಯಲ್ಲಿ ಮುತ್ತು ತೇಲಿಬಿಟ್ಟ ರಾಹುಲ್ ಗಾಂಧಿ! - Vistara News

ದೇಶ

Rahul Gandhi | ಬಿಜೆಪಿ ಕಾರ್ಯಕರ್ತರತ್ತ ಕೈ ಬೀಸಿ, ಗಾಳಿಯಲ್ಲಿ ಮುತ್ತು ತೇಲಿಬಿಟ್ಟ ರಾಹುಲ್ ಗಾಂಧಿ!

ರಾಹುಲ್ ಗಾಂಧಿ (Rahul Gandhi) ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ದಕ್ಷಿಣದ ಕನ್ಯಾಕುಮಾರಿಯಿಂದ ಉತ್ತರ ಜಮ್ಮು ಕಾಶ್ಮೀರದ ಶ್ರೀನಗರವರೆಗೂ ನಡೆಯುತ್ತಿದೆ.

VISTARANEWS.COM


on

Rahul Gandhi @ Rajsthan
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ರಾಹುಲ್ ಗಾಂಧಿ (Rahul Gandhi) ನೇತೃತ್ವದ ಭಾರತ್ ಜೋಡೋ ಯಾತ್ರೆ ಈಗ ರಾಜಸ್ಥಾನದ ಜಲವಾರ್ ತಲುಪಿದೆ. ಮಂಗಳವಾರ ಬೆಳಗ್ಗೆ ಯಾತ್ರೆಯು ಜಲವಾರ್‌ದ ಬಿಜೆಪಿ ಕಚೇರಿ ಎದುರು ಹಾದು ಹೋಗುತ್ತಿದ್ದಾಗ, ರಾಹುಲ್ ಗಾಂಧಿ ಅವರು ಬಿಜೆಪಿ ಕಚೇರಿ ಕಟ್ಟಡದ ಮೇಲೆ ನಿಂತಿದ್ದ ಕಾರ್ಯಕರ್ತರತ್ತ ಗಾಳಿಯಲ್ಲಿ ಮುತ್ತು ತೇಲಿ ಬಿಟ್ಟು, ಕೈ ಬೀಸಿದ ವಿಡಿಯೋ ಈಗ ಸಾಕಷ್ಟು ವೈರಲ್ ಆಗಿದೆ.

ಬಿಜೆಪಿ ಕಚೇರಿ ಕಟ್ಟಡದ ಛಾವಣಿಯ ಮೇಲೆ ಬಿಜೆಪಿ ಧ್ವಜಗಳೊಂದಿಗೆ ಕಾರ್ಯಕರ್ತರು ನಿಂತುಕೊಂಡು ಯಾತ್ರೆಯನ್ನು ವೀಕ್ಷಿಸುತ್ತಿರುತ್ತಾರೆ. ಅವರತ್ತ ದೃಷ್ಟಿ ಹಾಯಿಸುವ ರಾಹುಲ್ ಗಾಂಧಿ ಅವರತ್ತ ಕೈ ಬೀಸಿ, ಫ್ಲೈಯಿಂಗ್ ಕಿಸ್ ನೀಡುತ್ತಾರೆ. ಆಗ ಕೆಲವು ಬಿಜೆಪಿ ಕಾರ್ಯಕರ್ತರು ಮರಳಿ ರಾಹುಲ್ ಗಾಂಧಿ ಅವರತ್ತ ಕೈ ಬೀಸುವ ದೃಶ್ಯವನ್ನು ಈ ವಿಡಿಯೋದಲ್ಲಿ ಕಾಣಬಹುದು. ಜಲವಾರ್ ಬಿಜೆಪಿ ನಾಯಕಿ, ಮಾಜಿ ಸಿಎಂ ವಸುಂಧರಾ ರಾಜೆ ಅವರ ತವರು ಕ್ಷೇತ್ರವಾಗಿದೆ. ಮುಂದಿನ ವರ್ಷ ರಾಜಸ್ಥಾನ ವಿಧಾನಸಭೆಗೆ ಚುನಾವಣೆ ನಡೆಯಲಿದೆ.

ರಾಜಸ್ಥಾನದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್ ಸೇರಿದಂತೆ ಹಲವು ಸಚಿವರು, ಶಾಸಕರು ರಾಹುಲ್ ಗಾಂಧಿ ಜತೆ ಹೆಜ್ಜೆ ಹಾಕಿದರು. ಈ ಯಾತ್ರೆಯ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಂತ್ಯವಾಗಲಿದೆ.

ಇದನ್ನೂ ಓದಿ | ಭಾರತ್ ಜೋಡೋ ಯಾತ್ರೆ ಸೇರಿಕೊಂಡ ಆದಿತ್ಯ ಠಾಕ್ರೆ; ರಾಹುಲ್​ ಗಾಂಧಿ ಪಕ್ಕದಲ್ಲಿ ಹೆಜ್ಜೆಹಾಕಿದ ಉದ್ಧವ್​ ಪುತ್ರ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Lok Sabha Election: ನಾಳೆ ಮೊದಲ ಹಂತದ ಮತದಾನ; ಪ್ರಜಾಪ್ರಭುತ್ವದ ಹಬ್ಬಕ್ಕೆ ಹೇಗಿದೆ ಸಿದ್ಧತೆ?

Lok Sabha Election: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನವು ಶುಕ್ರವಾರ ನಡೆಯಲಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಮೊದಲ ಹಂತದಲ್ಲಿ 1,626 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದ ಹಿನ್ನೆಲೆಯಲ್ಲಿ ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಗಿದೆ. ಛತ್ತೀಸ್‌ಗಢದಲ್ಲಿ ನಕ್ಸಲ್‌ ದಾಳಿಯ ಭೀತಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ.

VISTARANEWS.COM


on

Lok Sabha Election
Koo

ನವದೆಹಲಿ: ಲೋಕಸಭೆ ಚುನಾವಣೆಗೆ (Lok Sabha Election 2024) ಶುಕ್ರವಾರ (ಏಪ್ರಿಲ್‌ 19) ಚಾಲನೆ ಸಿಗಲಿದೆ. ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಳೆ ಮೊದಲ ಹಂತದ ಮತದಾನ (First Phase Voting) ನಡೆಯಲಿದ್ದು, ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತದಾನ ಆರಂಭವಾಗಲಿದ್ದು, ಸಂಜೆ 5 ಗಂಟೆವರೆಗೆ ಜನರು ಹಕ್ಕು ಚಲಾಯಿಸಬಹುದಾಗಿದೆ. ಮತಗಟ್ಟೆಗಳಲ್ಲಿ ಹೆಚ್ಚಿನ ಜನ ಇದ್ದರೆ ಇನ್ನೂ ಒಂದು ಗಂಟೆ ವಿಸ್ತರಣೆ ಮಾಡಬಹುದಾಗಿದೆ. ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ಸಿದ್ಧತೆ ಹೇಗಿದೆ? ಯಾವ ಪ್ರಮುಖ ಅಭ್ಯರ್ಥಿಗಳು ಕಣದಲ್ಲಿದ್ದಾರೆ ಎಂಬುದು ಸೇರಿ ವಿವಿಧ ಮಾಹಿತಿ ಇಲ್ಲಿದೆ.

ಚುನಾವಣೆ ಆಯೋಗ ಸನ್ನದ್ಧ

ಪ್ರಜಾಪ್ರಭುತ್ವದ ಹಬ್ಬವನ್ನು ಶಾಂತಿಯುತವಾಗಿ ಹಾಗೂ ಪಾರದರ್ಶಕವಾಗಿ ಆಚರಿಸಲು ಚುನಾವಣೆ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ. ಮತಗಟ್ಟೆಗಳಿಗೆ ಮತಯಂತ್ರಗಳು ಸೇರಿ ಅಗತ್ಯ ಉಪಕರಣಗಳ ರವಾನೆ, ಸಿಬ್ಬಂದಿಯ ರವಾನೆ, ಮತದಾರರಿಗೆ ಸಕಲ ರೀತಿಯ ಸೌಲಭ್ಯ ಒದಗಿಸುವುದು ಸೇರಿ ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಇನ್ನು ಸೂಕ್ಷ್ಮ ಮತಗಟ್ಟೆಗಳಲ್ಲಿ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಶಾಂತಿಯುತ ಮತದಾನ ಪ್ರಕ್ರಿಯೆಗೆ ಅನುವು ಮಾಡಿಕೊಡುತ್ತಿದೆ.

ನಾಳೆ ಎಲ್ಲೆಲ್ಲಿ ಮತದಾನ?

ದೇಶದ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶುಕ್ರವಾರ ಮತದಾನ ನಡೆಯಲಿದೆ. ತಮಿಳುನಾಡಿನ 39, ಉತ್ತರಾಖಂಡ 5, ಅರುಣಾಚಲ ಪ್ರದೇಶ 2, ಮಣಿಪುರ 2, ಮಿಜೋರಾಂ 2, ನಾಗಾಲಾಂಡ್ಯ್‌ 1, ಸಿಕ್ಕಿಂ 1, ಬಿಹಾರ 4, ಛತ್ತೀಸ್‌ಗಢ 1, ಮಧ್ಯಪ್ರದೇಶ 6, ಮಹಾರಾಷ್ಟ್ರ 5, ರಾಜಸ್ಥಾನ 12, ತ್ರಿಪುರ 1, ಉತ್ತರ ಪ್ರದೇಶ 8, ಪಶ್ಚಿಮ ಬಂಗಾಳ 3, ಅಂಡಮಾನ್‌ ನಿಕೋಬಾರ್‌ ದ್ವೀಪಗಳು 1, ಜಮ್ಮು ಕಾಶ್ಮೀರ 1, ಲಕ್ಷದ್ವೀಪ 1 ಹಾಗೂ ಪುದುಚೇರಿಯ ಒಂದು ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಕಣದಲ್ಲಿರುವ ಪ್ರಮುಖರು ಯಾರು?

ಮೊದಲ ಹಂತದ ಚುನಾವಣೆಯಲ್ಲಿಯೇ ದೇಶದ ಘಟಾನುಘಟಿಗಳ ಭವಿಷ್ಯವು ಮತಯಂತ್ರದಲ್ಲಿ ಭದ್ರವಾಗಲಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ (ಕೊಯಮತ್ತೂರು), ಮಾಜಿ ರಾಜ್ಯಪಾಲೆ ತಮಿಳ್‌ಸಾಯಿ ಸುಂದರರಾಜನ್‌ (ಚೆನ್ನೈ ದಕ್ಷಿಣ), ಎಲ್‌ಜೆಪಿ ಮುಖ್ಯಸ್ಥ ಚಿರಾಗ್‌ ಪಾಸ್ವಾನ್‌ (ಜಮುಯಿ), ಮಾಜಿ ಸಿಎಂ ಕಮಲ್‌ನಾಥ್‌ ಪುತ್ರ ನಕುಲ್‌ ನಾಥ್‌ (ಛಿಂದ್ವಾರ), ಕನಿಮೋಳಿ ಕರುಣಾನಿಧಿ (ತೂತುಕುಡಿ) ಸೇರಿ ಹಲವು ಪ್ರಮುಖ ಅಭ್ಯರ್ಥಿಗಳ ಭವಿಷ್ಯವು ನಾಳೆ ತೀರ್ಮಾನವಾಗಲಿದೆ.

ಲೋಕಸಭೆ ಚುನಾವಣೆಯು ಶುಕ್ರವಾರ ಆರಂಭವಾಗಲಿದ್ದು, ಜೂನ್‌ 1ರವರೆಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮೊದಲ ಹಂತದಲ್ಲಿ 1,626 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮೊದಲ ಹಂತದ ಮತದಾನದ ಹಿನ್ನೆಲೆಯಲ್ಲಿ ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆ ಎಳೆಯಲಾಗಿದೆ. ಛತ್ತೀಸ್‌ಗಢದಲ್ಲಿ ನಕ್ಸಲ್‌ ದಾಳಿಯ ಭೀತಿ ಹಿನ್ನೆಲೆಯಲ್ಲಿ ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಕರ್ನಾಟಕದಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಮತದಾನ ನಡೆಯಲಿದೆ.

ಇದನ್ನೂ ಓದಿ: Priyanka Vadra: ಇವಿಎಂ ತಿರುಚದಿದ್ದರೆ ಬಿಜೆಪಿಗೆ 180 ಸೀಟೂ ಬರಲ್ಲ ಎಂದ ಪ್ರಿಯಾಂಕಾ ವಾದ್ರಾ!

Continue Reading

ದೇಶ

ಬ್ರೇಕಪ್‌ ಬಳಿಕ ಹುಡುಗ ಆತ್ಮಹತ್ಯೆ ಮಾಡಿಕೊಂಡರೆ ಪ್ರಿಯತಮೆ ಹೊಣೆ ಅಲ್ಲ; ಕೋರ್ಟ್‌ ಆದೇಶ

ಲವ್‌ ಫೇಲ್ಯೂರ್‌ ಆಯಿತು ಎಂದು ದೆಹಲಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೆ ಮಗನ ಪ್ರಿಯತಮೆಯೇ ಕಾರಣ ಎಂಬುದಾಗಿ ಯುವಕನ ತಂದೆಯು ದೂರು ನೀಡಿದ್ದರು. ಈ ಪ್ರಕರಣದ ಕುರಿತು ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, ಲವ್‌ ಫೇಲ್ಯೂರ್‌ ಆಯಿತೆಂದು ಆತ್ಮಹತ್ಯೆ ಮಾಡಿಕೊಂಡರೆ, ಅದಕ್ಕೆ ಆತನ ದುರ್ಬಲ ಮನಸ್ಥಿತಿಯೇ ಕಾರಣ. ಹಾಗಾಗಿ, ಲವ್‌ ಫೇಲ್ಯೂರ್‌ ಪ್ರಕರಣಗಳಲ್ಲಿ ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಲವ್ವರ್‌ ಹೊಣೆಯಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

VISTARANEWS.COM


on

Break Up
Koo

ನವದೆಹಲಿ: ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂದೋ, ಮನಸಾರೆ ಇಷ್ಟಪಟ್ಟವಳು ಇನ್ನೊಬ್ಬನ ಪಕ್ಕದಲ್ಲಿ ಹಸೆಮಣೆ ಮೇಲೆ ಕೂತುಕೊಳ್ಳುತ್ತಾಳೆ ಎಂಬುದನ್ನು ಕಲ್ಪನೆ ಮಾಡಿಕೊಳ್ಳಲು ಆಗದೆ ಯುವಕರು ಆತ್ಮಹತ್ಯೆಗೆ (Suicide) ಶರಣಾಗುತ್ತಾರೆ. ಬ್ರೇಕಪ್‌ (Love Break Up) ಬಳಿಕ ಆತ್ಮಹತ್ಯೆ ಮಾಡಿಕೊಳ್ಳುವ ಹೆಣ್ಣುಮಕ್ಕಳೂ ಇದ್ದಾರೆ. ಆದರೆ, ಬ್ರೇಕಪ್‌ ಬಳಿಕ (Love Failure) ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಯುವತಿ ಅಥವಾ ಪ್ರಿಯತಮೆಯು ಹೊಣೆ ಅಲ್ಲ ಎಂದು ದೆಹಲಿ ಹೈಕೋರ್ಟ್‌ (Delhi High Court) ಆದೇಶ ಹೊರಡಿಸಿದೆ.

“ಲವ್‌ ಫೇಲ್ಯೂರ್‌ ಆಯಿತು ಎಂದು ಲವ್ವರ್‌ ಆತ್ಮಹತ್ಯೆ ಮಾಡಿಕೊಂಡರೆ ಮಹಿಳೆ, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂತು ಎಂದು ವಿದ್ಯಾರ್ಥಿಯು ನೇಣಿಗೆ ಕೊರಳೊಡ್ಡಿದರೆ ಮೌಲ್ಯಮಾಪಕ, ಕೇಸ್‌ ವಜಾ ಆಯಿತು ಎಂದು ಕ್ಲೈಂಟ್‌ ಆತ್ಮಹತ್ಯೆಗೆ ಶರಣಾದರೆ ವಕೀಲ ಹೊಣೆಯಾಗುವುದಿಲ್ಲ. ದುರ್ಬಲ ಮನಸ್ಥಿತಿಯ ವ್ಯಕ್ತಿಯು ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳಿಗೆ ಕೈ ಹಾಕಿದರೆ, ಇನ್ನೊಬ್ಬ ವ್ಯಕ್ತಿಯು ಹೊಣೆಯಾಗಲು ಸಾಧ್ಯವಾಗುವುದಿಲ್ಲ ” ಎಂಬುದಾಗಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣದಲ್ಲಿ ಇಬ್ಬರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಮೂರ್ತಿ ಅಮಿತ್‌ ಮಹಾಜನ್‌ ಅವರು ಸ್ಪಷ್ಟಪಡಿಸಿದರು.

Court Order

ಏನಿದು ಪ್ರಕರಣ?

ದೆಹಲಿಯಲ್ಲಿ 2023ರಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಆತನ ಪ್ರೇಯಸಿಯೇ ಕಾರಣವಾಗಿದೆ. ಯುವತಿಯ ಮತ್ತೊಬ್ಬ ಗೆಳೆಯನು ಕೂಡ ನನ್ನ ಮಗನ ಆತ್ಮಹತ್ಯೆಗೆ ಜವಾಬ್ದಾರರು ಎಂಬುದಾಗಿ ಆತ್ಮಹತ್ಯೆ ಮಾಡಿಕೊಂಡ ಯುವಕನ ತಂದೆಯು ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ಯುವತಿ ಹಾಗೂ ಆಕೆಯ ಗೆಳೆಯನು ಬಂಧನದ ಭೀತಿಯಲ್ಲಿದ್ದರು. ಹಾಗಾಗಿ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈಗ ನ್ಯಾಯಾಲಯವು ಇಬ್ಬರಿಗೂ ನಿರೀಕ್ಷಣಾ ಮಂಜೂರು ಮಾಡಿದೆ.

“ನನ್ನ ಮಗ ಹಾಗೂ ಯುವತಿಯು ಪ್ರೀತಿಸುತ್ತಿದ್ದರು. ಇಬ್ಬರ ಮಧ್ಯೆ ದೈಹಿಕ ಸಂಬಂಧವೂ ಇತ್ತು. ಆದರೆ, ಬ್ರೇಕಪ್‌ ಬಳಿಕ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನನ್ನ ಮಗ ಬರೆದ ಡೆತ್‌ನೋಟ್‌ನಲ್ಲಿ ಯುವತಿ ಹಾಗೂ ಆಕೆಯ ಗೆಳೆಯನ ಹೆಸರಿದೆ. ಇವರಿಬ್ಬರಿಂದಾಗಿಯೇ ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ” ಎಂಬುದಾಗಿ ಯುವಕನ ತಂದೆಯು ದೂರಿನಲ್ಲಿ ಪ್ರಸ್ತಾಪಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ನ್ಯಾಯಾಲಯವು, “ಡೆತ್‌ನೋಟ್‌ನಲ್ಲಿ ಇಬ್ಬರ ಹೆಸರಿದೆ ನಿಜ. ಆದರೆ, ಅವರಿಬ್ಬರೂ ಪ್ರಚೋದನೆ ನೀಡಿದ, ಬೆದರಿಕೆ ಹಾಕಿದ ಕುರಿತು ಪ್ರಸ್ತಾಪವಿಲ್ಲ. ದುರ್ಬಲ ಮನಸ್ಥಿತಿಯವರು ಮಾತ್ರ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯ” ಎಂದು ಸ್ಪಷ್ಟಪಡಿಸಿತು.

ಇದನ್ನೂ ಓದಿ: Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

Continue Reading

Fact Check

Fact Check: 10 ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟಕ್ಕೆ 200 ಸ್ಥಾನ ಎಂಬ ವರದಿ ನಿಜವೇ? ಇಲ್ಲಿದೆ ಸತ್ಯ!

Fact Check: ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಭಾರಿ ಮುನ್ನಡೆ ಸಾಧಿಸುತ್ತದೆ. 10 ರಾಜ್ಯಗಳಲ್ಲಿಯೇ ಇಂಡಿಯಾ ಒಕ್ಕೂಟವು 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತದೆ ಎಂಬುದಾಗಿ ದೈನಿಕ್‌ ಭಾಸ್ಕರ್‌ ಪತ್ರಿಕೆಯ ಸಮೀಕ್ಷಾ ವರದಿ ತಿಳಿಸಿದೆ ಎಂಬ ವರದಿಯು ಹರಿದಾಡಿದೆ. ಆದರೆ, ಈ ಕುರಿತು ಫ್ಯಾಕ್ಟ್‌ ಚೆಕ್‌ ಮಾಡಿದಾಗ ಮಹತ್ವದ ಸಂಗತಿ ಬಯಲಾಗಿದೆ.

VISTARANEWS.COM


on

Fact Check
Koo

ನವದೆಹಲಿ: ಸಾಮಾಜಿಕ ಜಾಲತಾಣಗಳು ನಮಗೆ ಎಷ್ಟು ಮಾಹಿತಿ ನೀಡುತ್ತವೆಯೋ, ಅಷ್ಟೇ ಪ್ರಮಾಣದಲ್ಲಿ ನಕಲಿ ಸುದ್ದಿಗಳನ್ನು ಹರಡುವ ತಾಣಗಳಾಗಿಯೂ ಬದಲಾಗಿವೆ. ಅದರಲ್ಲೂ, ಚುನಾವಣೆ ಸಂದರ್ಭದಲ್ಲಂತೂ ನಕಲಿ ಸುದ್ದಿಗಳ ಹಾವಳಿ ಜಾಸ್ತಿಯಾಗುತ್ತದೆ. ಇದಕ್ಕೆ ನಿದರ್ಶನ ಎಂಬಂತೆ, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಇಂಡಿಯಾ ಒಕ್ಕೂಟಕ್ಕೆ (India Bloc) 10 ರಾಜ್ಯಗಳಲ್ಲಿ ಭಾರಿ ಮುನ್ನಡೆ ಸಿಗಲಿದೆ ಎಂಬುದಾಗಿ ದೈನಿಕ್‌ ಭಾಸ್ಕರ್‌ (Dainik Bhaskar) ಹಿಂದಿ ಪತ್ರಿಕೆಯ ಸಮೀಕ್ಷೆ ತಿಳಿಸಿದೆ ಎಂಬ ವರದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಹಾಗಾದರೆ, ಏನಿದು ವರದಿ? ಸಮೀಕ್ಷೆಯ ಅಂಕಿ-ಅಂಶಗಳು ನಿಜವೇ (Fact Check) ಎಂಬುದರ ಫ್ಯಾಕ್ಟ್‌ ಚೆಕ್‌ ಇಲ್ಲಿದೆ.

ಏನಿದು ವೈರಲ್‌ ಆದ ವರದಿ?

ಲೋಕಸಭೆ ಚುನಾವಣೆಗೂ ಮುನ್ನ ದೈನಿಕ ಭಾಸ್ಕರ್‌ ಹಿಂದಿ ಪತ್ರಿಕೆಯು ಸಮೀಕ್ಷೆಯೊಂದನ್ನು ನಡೆಸಿದೆ. ಸಮೀಕ್ಷೆಯ ವರದಿ ಪ್ರಕಾರ, ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟವು ಭಾರಿ ಮುನ್ನಡೆ ಪಡೆಯಲಿದೆ. ಅದರಲ್ಲೂ, 10 ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟವು 200ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಎನ್‌ಡಿಎ ಮೈತ್ರಿಕೂಟವು ವಾಶ್‌ಔಟ್‌ ಆಗಲಿದೆ. ನರೇಂದ್ರ ಮೋದಿ ಅವರ ವರ್ಚಸ್ಸು ಈ ಬಾರಿ ಬಿಜೆಪಿಗೆ ವೋಟುಗಳನ್ನು ತಂದುಕೊಡಲ್ಲ” ಎಂಬ ವರದಿಯು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಕೆಲವು ಕಾಂಗ್ರೆಸ್‌ ನಾಯಕರು ಕೂಡ ಇದನ್ನು ಹಂಚಿಕೊಂಡಿದ್ದಾರೆ.

ವಾಸ್ತವಾಂಶ ಏನು?

ಇಂಡಿಯಾ ಒಕ್ಕೂಟವು ಭಾರಿ ಮುನ್ನಡೆ ಸಾಧಿಸಲಿದೆ ಎಂಬುದಾಗಿ ದೈನಿಕ್‌ ಭಾಸ್ಕರ್‌ ಪತ್ರಿಕೆಯು ಏಪ್ರಿಲ್‌ 13ರಂದು ವರದಿ ಪ್ರಕಟಿಸಿದೆ ಎಂಬುದರ ಕುರಿತು ಪಿಟಿಐ ಸೇರಿ ಹಲವು ಸಂಸ್ಥೆಗಳು ಫ್ಯಾಕ್ಟ್‌ಚೆಕ್‌ ಮಾಡಿವೆ. ಇಂಡಿಯಾ ಒಕ್ಕೂಟಕ್ಕೆ ಭಾರಿ ಮುನ್ನಡೆ ಸಿಗುತ್ತದೆ ಎಂಬುದರ ಕುರಿತು ಏಪ್ರಿಲ್‌ 13ರಂದು ದೈನಿಕ್‌ ಭಾಸ್ಕರ್‌ ಯಾವುದೇ ವರದಿ ಪ್ರಕಟಿಸಿಲ್ಲ. ದೈನಿಕ್‌ ಭಾಸ್ಕರ್‌ ಪತ್ರಿಕೆಯ ಪ್ರತಿಗಳನ್ನು ಗಮನಿಸಿದಾಗ, ಅದರಲ್ಲಿ ಸಮೀಕ್ಷೆಯ ವರದಿಯನ್ನೇ ಪ್ರಕಟಿಸಿಲ್ಲ. ಹಾಗಾಗಿ, ದೈನಿಕ್‌ ಭಾಸ್ಕರ್‌ ಹೆಸರಿನಲ್ಲಿ ವೈರಲ್‌ ಆದ ವರದಿಯು ನಕಲಿ ಎಂಬುದಾಗಿ ಪಿಟಿಐ ಫ್ಯಾಕ್ಟ್‌ಚೆಕ್‌ ತಿಳಿಸಿದೆ.

ಕೆಲ ದಿನಗಳ ಹಿಂದಷ್ಟೇ ಕರ್ನಾಟಕದಲ್ಲೂ ಇಂತಹ ವರದಿಯ ಫೋಟೊವೊಂದು ವೈರಲ್‌ ಆಗಿತ್ತು. “ನಮಗೆ ಹಿಂದುಗಳ ಮತಗಳು ಬೇಡ. ಮುಸ್ಲಿಮರು ಮತ ಹಾಕಿದರೆ ಸಾಕು” ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ ಎಂಬುದಾಗಿ ನಕಲಿ ವರದಿ ಸಿದ್ಧಪಡಿಸಿ ಹರಿಬಿಡಲಾಗಿತ್ತು.

ಇದನ್ನೂ ಓದಿ: Fact Check : ಹಿಂದುಗಳ ಮತ ಕಾಂಗ್ರೆಸ್‌ಗೆ ಬೇಡ; ಮುಸ್ಲಿಂ ಮತ ಮಾತ್ರವೇ ಸಾಕೆಂದರೇ ಸಿಎಂ ಸಿದ್ದರಾಮಯ್ಯ?

Continue Reading

ದೇಶ

ವಿಶ್ವಸಂಸ್ಥೆಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಿ ಎಂಬ ಮಸ್ಕ್‌ ಆಗ್ರಹಕ್ಕೆ ಅಮೆರಿಕವೂ ಸಾಥ್, ಶೀಘ್ರವೇ ಗುಡ್‌ ನ್ಯೂಸ್?

ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಕೆಲ ದಿನಗಳ ಹಿಂದಷ್ಟೇ ಎಲಾನ್‌ ಮಸ್ಕ್‌ ಅವರು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ, ನಾವು ಕೂಡ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಬಯಸುತ್ತೇವೆ ಎಂದು ಅಮೆರಿಕ ಕೂಡ ಹೇಳಿದೆ. ಆ ಮೂಲಕ ಭಾರತದ ಪರವಾಗಿ ನಿಂತಿದೆ.

VISTARANEWS.COM


on

Modi Biden
Koo

ವಾಷಿಂಗ್ಟನ್:‌ ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವು ಮತ್ತೆ ಅಧಿಕಾರಕ್ಕೆ ಬಂದರೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ (UNSC) ಭಾರತಕ್ಕೆ ಕಾಯಂ ಸ್ಥಾನ (UN Permanent Seat) ಸಿಗಲು ಪ್ರಯತ್ನಿಸಲಾಗುವುದು ಎಂಬುದಾಗಿ ಕೆಲ ದಿನಗಳ ಹಿಂದಷ್ಟೇ ಬಿಜೆಪಿಯು ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಇನ್ನು, ಭಾರತಕ್ಕೆ ಕಾಯಂ ಸ್ಥಾನ ನೀಡಬೇಕು ಎಂದು ಟೆಸ್ಲಾ ಕಂಪನಿ ಮುಖ್ಯಸ್ಥ ಎಲಾನ್‌ ಮಸ್ಕ್‌ (Elon Musk) ಅವರೂ ಆಗ್ರಹಿಸಿದ್ದಾರೆ. ಇದರ ಬೆನ್ನಲ್ಲೇ, ಅಮೆರಿಕ ಕೂಡ ಭಾರತಕ್ಕೆ ಬೆಂಬಲ ಘೋಷಿಸಿದೆ. ಇದು ಈಗ ಜಾಗತಿಕ ಮಟ್ಟದಲ್ಲಿ ಮಹತ್ವ ಪಡೆದಿದೆ.

“ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸ್ಥಾನ ನೀಡಬೇಕು ಎಂಬುದರ ಕುರಿತು ಅಮೆರಿಕ ಅಧ್ಯಕ್ಷರೇ ಭದ್ರತಾ ಮಂಡಳಿ ಸಭೆಯಲ್ಲಿ ಮಾತನಾಡಿದ್ದಾರೆ. ವಿಶ್ವಸಂಸ್ಥೆ ಕಾರ್ಯದರ್ಶಿಯವರ ಅಭಿಪ್ರಾಯವೂ ಇದೇ ಆಗಿದೆ. ಆದಾಗ್ಯೂ, ಅಮೆರಿಕವು ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಸುಧಾರಣೆ ತರಲು ಬಯಸುತ್ತದೆ. ನಾವು 21ನೇ ಶತಮಾನದಲ್ಲಿ ಬದುಕುತ್ತಿದ್ದು, ಸುಧಾರಣೆಯನ್ನು ಬಯಸುತ್ತೇವೆ” ಎಂದು ಅಮೆರಿಕ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮುಖ್ಯ ಉಪ ವಕ್ತಾರ ವೇದಾಂತ್‌ ಪಟೇಲ್‌ ಅವರು ಹೇಳಿದ್ದಾರೆ. ಹಾಗಾಗಿ, ಶೀಘ್ರದಲ್ಲೇ ಭಾರತಕ್ಕೆ ಕಾಯಂ ಸ್ಥಾನ ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿದೆ.

ಎಲಾನ್‌ ಮಸ್ಕ್‌ ಹೇಳಿದ್ದೇನು?

“ವಿಶ್ವಸಂಸ್ಥೆಯು ಬದಲಾವಣೆ ತರಲು ಹಿಂಜರಿಯುತ್ತಿದೆ. ವಿಶ್ವಸಂಸ್ಥೆಯ ಕಾಯಂ ಸದಸ್ಯತ್ವ ಪಡೆದಿರುವ ಬಲಿಷ್ಠ ರಾಷ್ಟ್ರಗಳು ತಾವು ಹೊಂದಿರುವ ಹೆಚ್ಚಿನ ಅಧಿಕಾರವನ್ನು ಬಳಸಿಕೊಳ್ಳಲು ಬಯಸುತ್ತಿವೆ. ಇದೇ ಕಾರಣಕ್ಕಾಗಿ ಆಫ್ರಿಕಾ ಹಾಗೂ ಭಾರತಕ್ಕೆ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಕ್ಕಿಲ್ಲ. ಹಾಗಾಗಿ, ವಿಶ್ವಸಂಸ್ಥೆಯು ನಿಯಮಗಳನ್ನು ಬದಲಿಸಬೇಕು. ಜಗತ್ತಿನಲ್ಲೇ ಭಾರತ ಜನಪ್ರಿಯ ದೇಶವಾದರೂ ಇದುವರೆಗೆ ಭದ್ರತಾ ಮಂಡಳಿಯಲ್ಲಿ ಕಾಯಂ ಸ್ಥಾನ ಸಿಗದಿರುವುದು ಅಸಂಬದ್ಧವಾಗಿದೆ. ಭಾರತ ಹಾಗೂ ಆಫ್ರಿಕಾಗೆ ಕಾಯಂ ಸದಸ್ಯತ್ವ ನೀಡಬೇಕು” ಎಂದು ಎಲಾನ್‌ ಮಸ್ಕ್‌ ಅವರು ಕಳೆದ ಜನವರಿಯಲ್ಲಿ ಆಗ್ರಹಿಸಿದ್ದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿಯು 5 ಕಾಯಂ ಹಾಗೂ 10 ಕಾಯಂ ಅಲ್ಲದ ಅಥವಾ ತಾತ್ಕಾಲಿಕವಾಗಿ ಸದಸ್ಯತ್ವ ಪಡೆದಿರುವ ರಾಷ್ಟ್ರಗಳನ್ನು ಹೊಂದಿದೆ. ಕಳೆದ 16 ವರ್ಷದಿಂದಲೂ ಭಾರತವು ತಾತ್ಕಾಲಿಕ ಸದಸ್ಯತ್ವ ಪಡೆದಿದೆ. ಅಮೆರಿಕ, ಬ್ರಿಟನ್‌, ರಷ್ಯಾ, ಫ್ರಾನ್ಸ್‌ ಹಾಗೂ ಚೀನಾ ಕಾಯಂ ಸದಸ್ಯತ್ವ ಪಡೆದಿವೆ. ಭಾರತಕ್ಕೆ ಕಾಯಂ ಸ್ಥಾನ ನೀಡಲು ಚೀನಾ ಮಾತ್ರ ವಿರೋಧಿಸುತ್ತಿದ್ದು, ಎಲ್ಲ ದೇಶಗಳು ಬೆಂಬಲಿಸುತ್ತಿವೆ. ಕಳೆದ ವರ್ಷದ ಡಿಸೆಂಬರ್‌ನಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಅವರೊಂದಿಗೆ ನಡೆದ ಸಭೆಯಲ್ಲಿ ರಷ್ಯಾ ವಿದೇಶಾಂಗ ವ್ಯವಹಾರಗಳ ಸಚಿವ ಸೆರ್ಗೆಯ್‌ ಲಾವ್ರೋವ್‌ ಅವರು ಕೂಡ ಭಾರತಕ್ಕೆ ಕಾಯಂ ಸದಸ್ಯತ್ವ ನೀಡಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: PM Modi: ಅಮೆರಿಕ ಪತ್ರಿಕೆಗೆ ಮೋದಿ ಸಂದರ್ಶನ; ಮಂದಿರ, ಚೀನಾ ಸೇರಿ ಹಲವು ವಿಷಯಗಳ ಬಗ್ಗೆ ಹೇಳಿದ್ದಿಷ್ಟು!

Continue Reading
Advertisement
Lok Sabha Election
ದೇಶ6 mins ago

Lok Sabha Election: ನಾಳೆ ಮೊದಲ ಹಂತದ ಮತದಾನ; ಪ್ರಜಾಪ್ರಭುತ್ವದ ಹಬ್ಬಕ್ಕೆ ಹೇಗಿದೆ ಸಿದ್ಧತೆ?

Malaika Arora says son Arhaan mannerisms are like Arbaaz Khan
ಸಿನಿಮಾ7 mins ago

Malaika Arora: ಮಗನ ಮ್ಯಾನರಿಸಂ ಮಾಜಿ ಪತಿಯಂತೆ ಇದೆ, ಅಟ್ರ್ಯಾಕ್ಟಿವ್‌ ಇಲ್ಲ ಎಂದ ಮಲೈಕಾ!

Viral Video
ಪ್ರಮುಖ ಸುದ್ದಿ21 mins ago

Viral Video: ಅಕ್ಷರ ಕಲಿಸಿದ ಶಿಕ್ಷಕಿಯ ಕಪಾಳಕ್ಕೆ ಹೊಡೆದ ವಿದ್ಯಾರ್ಥಿ; ಎಂಥ ಕಾಲ ಬಂತು ನೋಡಿ!

Break Up
ದೇಶ57 mins ago

ಬ್ರೇಕಪ್‌ ಬಳಿಕ ಹುಡುಗ ಆತ್ಮಹತ್ಯೆ ಮಾಡಿಕೊಂಡರೆ ಪ್ರಿಯತಮೆ ಹೊಣೆ ಅಲ್ಲ; ಕೋರ್ಟ್‌ ಆದೇಶ

kl rahul
ಕ್ರಿಕೆಟ್57 mins ago

KL Rahul: 32ನೇ ವಸಂತಕ್ಕೆ ಕಾಲಿಟ್ಟ ಕನ್ನಡಿಗ ಕೆ.ಎಲ್​ ರಾಹುಲ್​; ಬಿಸಿಸಿಐಯಿಂದ ವಿಶೇಷ ಶುಭ ಹಾರೈಕೆ

bjp protest jai shree ram slogan
ಪ್ರಮುಖ ಸುದ್ದಿ1 hour ago

Jai Shree Ram Slogan: ಬಿಜೆಪಿ ಪ್ರತಿಭಟನೆ ಆರಂಭ; ವಿಚಾರಣೆ ವೇಳೆ ಆರೋಪಿಗಳು ಹೇಳಿದ ಸಂಗತಿ ಇಲ್ಲಿದೆ!

Nikhil Siddhartha reveals his son name
ಟಾಲಿವುಡ್2 hours ago

Nikhil Siddhartha: ಮಗನ ಹೆಸರನ್ನು ರಿವೀಲ್‌ ಮಾಡಿದ ʻಕಾರ್ತಿಕೇಯʼ ಸಿನಿಮಾ ಖ್ಯಾತಿಯ ನಟ!

T20 World Cup
ಕ್ರೀಡೆ2 hours ago

T20 World Cup: ಟಿ20 ವಿಶ್ವಕಪ್​ನಲ್ಲಿ ಈ ಆಟಗಾರರಿಗೆ ಅವಕಾಶ ಸಿಗುವುದು ಡೌಟ್​

Fact Check
Fact Check2 hours ago

Fact Check: 10 ರಾಜ್ಯಗಳಲ್ಲಿ ಇಂಡಿಯಾ ಒಕ್ಕೂಟಕ್ಕೆ 200 ಸ್ಥಾನ ಎಂಬ ವರದಿ ನಿಜವೇ? ಇಲ್ಲಿದೆ ಸತ್ಯ!

Kannada New Movie nalkane ayama movie
ಸ್ಯಾಂಡಲ್ ವುಡ್2 hours ago

Kannada New Movie: ʻಮಾಸ್ಟರ್‌ ಆನಂದ್‌ʼ ಮಗಳ ಮೊದಲ ಸಿನಿಮಾ ನಾಳೆ ರಾಜ್ಯಾದ್ಯಂತ ಬಿಡುಗಡೆ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ2 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20243 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20244 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ4 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ5 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ6 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ6 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ7 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

ಟ್ರೆಂಡಿಂಗ್‌