Rain News: ಉತ್ತರ ಭಾರತದಲ್ಲಿ ಅಬ್ಬರದ ವರುಣ, 37ಜನರ ಮರಣ; ನಲುಗುತ್ತಿದೆ ಹಿಮಾಚಲ - Vistara News

ದೇಶ

Rain News: ಉತ್ತರ ಭಾರತದಲ್ಲಿ ಅಬ್ಬರದ ವರುಣ, 37ಜನರ ಮರಣ; ನಲುಗುತ್ತಿದೆ ಹಿಮಾಚಲ

ಉತ್ತರ ಭಾರತದಲ್ಲಿ ಹಿಮಾಚಲ ಪ್ರದೇಶ, ಪಂಜಾಬ್​, ಉತ್ತರಾಖಂಡ್​, ಹರ್ಯಾಣಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ ಭಾರತೀಯ ಸೇನೆ ಯೋಧರೂ ಕೂಡ ಜನಸಾಮಾನ್ಯರ ರಕ್ಷಣೆಯಲ್ಲಿ ಕೈಜೋಡಿಸಿದ್ದಾರೆ.

VISTARANEWS.COM


on

North India floods Effect
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಳೆಯ ಅಬ್ಬರಕ್ಕೆ ಉತ್ತರ ಭಾರತ ಅಕ್ಷರಶಃ ನಲುಗುತ್ತಿದೆ. ಮಳೆ (Rain News) ಸಂಬಂಧಿ ಅನಾಹುತಗಳಿಗೆ ಇದುವರೆಗೆ ಉತ್ತರ ಭಾರತದಲ್ಲಿ 37 ಮಂದಿ ಮೃತಪಟ್ಟಿದ್ದಾರೆ. ಎಲ್ಲಿ ನೋಡಿದರೂ ತುಂಬಿ ಹರಿಯುತ್ತಿರುವ ನೀರು, ಪ್ರವಾಹ, ಭೂಕುಸಿತ. ಅದರಲ್ಲೂ ಹಿಮಾಚಲ ಪ್ರದೇಶದಲ್ಲಿ ಮಳೆ (Himachal Pradesh Rain) ತಂದೊಡ್ಡಿದ ಪರಿಸ್ಥಿತಿ ಇನ್ನೂ ಭೀಕರವಾಗಿದೆ. ಅತಿಹೆಚ್ಚು ಸಾವಾಗಿದ್ದೂ ಇಲ್ಲೇ. ಹಿಮಾಚಲ ಪ್ರದೇಶದಲ್ಲಿ ಕಳೆದ 2ದಿನಗಳಲ್ಲಿ 18 ಮಂದಿ ಮೃತಪಟ್ಟಿದ್ದಾರೆ. ಪಂಜಾಬ್​​ನಲ್ಲಿ 9 ಮಂದಿ, ರಾಜಸ್ಥಾನದಲ್ಲಿ 7 ಮತ್ತು ಉತ್ತರ ಪ್ರದೇಶದಲ್ಲಿ ಮೂರು ಮಂದಿ ಅಸುನೀಗಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅಪಾಯದ ಮಟ್ಟ ಮೀರಿ, ಮೈದುಂಬಿ ಹರಿಯುತ್ತಿರುವ ಬಿಯಾಸ್ ನದಿ, ಟ್ರಕ್​ವೊಂದನ್ನು ಕೊಚ್ಚಿಕೊಂಡು ಹೋಗುತ್ತಿರುವ ದೃಶ್ಯ ವೈರಲ್ ಆಗಿದೆ.

ಹಿಮಾಚಲ ಪ್ರದೇಶದ ಸೋಲನ್, ಶಿಮ್ಲಾ, ಸಿರ್​ಮೌರ್​, ಕುಲ್ಲು, ಮಂಡಿ, ಕಿನ್ನೌರ್​, ಲಾಹೌಲ್​ನಲ್ಲಿ ಮುಂದಿನ 24ಗಂಟೆಗಳ ಕಾಲ ರೆಡ್​ ಅಲರ್ಟ್​ ಇರಲಿದೆ. ಹಾಗೇ, ಉನಾ, ಹಮೀರ್​ಪುರ, ಕಂಗ್ರಾ, ಚಂಬಾಗಳಲ್ಲಿ ಮುಂದಿನ 24ಗಂಟೆಗೆ ಆರೆಂಜ್ ಅಲರ್ಟ್​ ಘೋಷಣೆಯಾಗಿದೆ. ಮಂಡಿ, ಕಿನ್ನೌ್​, ಲಾಹೌಲ್​ ಸ್ಪಿಟಿಯಲ್ಲಿ ಪ್ರವಾಹ ಉಂಟಾಗುವ ಎಚ್ಚರಿಕೆ ನೀಡಲಾಗಿದೆ. ಹಿಮಾಚಲ ಪ್ರದೇಶದ ಭೀಕರ ಮಳೆಯಿಂದಾಗಿ ರಾಜ್ಯದ 12 ಬೃಹತ್ ಸೇತುವೆಗಳಿಗೆ ಹಾನಿಯಾಗಿದೆ. ಒಟ್ಟಾರೆಯಾಗಿ ಹಾನಿಯಾದ ಮೂಲಸೌಕರ್ಯಗಳ ವೆಚ್ಚ ಸುಮಾರು 3 ಸಾವಿರ ಕೋಟಿಯಿಂದ 4 ಸಾವಿರ ಕೋಟಿ ರೂ. ಎಂದು ಹೇಳಲಾಗಿದೆ. ಮಂಡಿಯಲ್ಲಿರುವ ಪಂಚವಕ್ತ್ರ ದೇಗುಲದ ಬಳಿ ಸೋಮವಾರ ಅಬ್ಬರದ ಪ್ರವಾಹ ಇತ್ತು. ಅದು ಇಂದು ತುಸುಮಟ್ಟಿಗೆ ತಗ್ಗಿದೆ.

ಉತ್ತರ ಭಾರತದಲ್ಲಿ ಹಿಮಾಚಲ ಪ್ರದೇಶ, ಪಂಜಾಬ್​, ಉತ್ತರಾಖಂಡ್​, ಹರ್ಯಾಣಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ ಭಾರತೀಯ ಸೇನೆ ಯೋಧರೂ ಕೂಡ ಜನಸಾಮಾನ್ಯರ ರಕ್ಷಣೆಯಲ್ಲಿ ಕೈಜೋಡಿಸಿದ್ದಾರೆ. ಪೊಲೀಸರು, ಹೋಮ್​ಗಾರ್ಡ್​ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ. ಹಿಮಾಚಲ ಪ್ರದೇಶದ ಚಂದರ್ತಾಲ್, ಪಾಗಲ್ ನಲ್ಲಾ, ಲಾಹೌಲ್​ ಮತ್ತು ಸ್ಪಿಟಿಗಳಲ್ಲಿ ಒಟ್ಟು 300 ಪ್ರವಾಸಿಗರು ಸಿಕ್ಕಿಬಿದ್ದಿದ್ದಾರೆ. ಅವರನ್ನು ರಕ್ಷಣೆ ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಹಾಗೇ, ಉನಾ ಜಿಲ್ಲೆಯ ಲಾಲ್ಸಿಂಗಿ ಎಂಬಲ್ಲಿ ಜಲಾವೃತ ಪ್ರದೇಶದಲ್ಲಿ ಸಿಲುಕಿದ್ದ 515 ಕಾರ್ಮಿಕರನ್ನು ಪೊಲೀಸರು, ಹೋಂ ಗಾರ್ಡ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಹಾಗೇ, ಜಮ್ಮುವಿನಲ್ಲಿ ಅದರಲ್ಲೂ ಭಗವತಿನಗರದಲ್ಲಿ 7000ಕ್ಕೂ ಅಧಿಕ ಯಾತ್ರಾರ್ಥಿಗಳು ಸಿಲುಕಿದ್ದಾರೆ. ರಾಂಬನ್​ ಜಿಲ್ಲೆಯ ಚಂದೇರ್​ಕೋಟ್​​ ಬೇಸ್​ ಕ್ಯಾಂಪ್​​ನಲ್ಲಿ 5000ಕ್ಕೂ ಹೆಚ್ಚು ಯಾತ್ರಾರ್ಥಿಗಳು ಇದ್ದಾರೆ.

ಇದನ್ನೂ ಓದಿ: Delhi Rain: ಮಳೆ ಪ್ರವಾಹದಲ್ಲಿ ಮುಳುಗುತ್ತಿದೆ ಉತ್ತರ ಭಾರತ; ಕಾಶ್ಮೀರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಯೋಧರು

ಪಂಜಾಬ್​, ಹರ್ಯಾಣ, ಚಂಡಿಗಢ್​​, ಉತ್ತರಾಖಂಡ್​ಗಳಲ್ಲೂ ವಿಪರೀತ ಮಳೆಯಾಗುತ್ತಿದೆ. ಪಂಜಾಬ್​ನಲ್ಲಿ ವಿವಿಧ ಜಲಾವೃತ ಭಾಗಗಳಲ್ಲಿ ಸಿಲುಕಿದ್ದ 910 ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಉತ್ತರಾಖಂಡ್​ನಲ್ಲಿ ಹಲವು ಭಾಗಗಳಲ್ಲಿ ಭೂಕುಸಿತವಾಗುತ್ತಿದೆ. ಇಡೀ ಉತ್ತರ ಭಾರತಾದಾದ್ಯಂತ ಹಲವು ಹೆದ್ದಾರಿಗಳು ಬ್ಲಾಕ್ ಆಗಿವೆ. ರಸ್ತೆ ಸಂಚಾರ, ಜನ ಸಂಚಾರ ಸಾಧ್ಯವಾಗುತ್ತಿಲ್ಲ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಮಾಜಿ ಡಿಜಿಪಿ ರಾಜೇಶ್ ದಾಸ್ ಮತ್ತು ಇತರ ಕೆಲವು ಮಂದಿ ತೈಯೂರಿನಲ್ಲಿರುವ ತಮ್ಮ ಒಡೆತನದ ಮನೆಗೆ ಅತಿಕ್ರಮವಾಗಿ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅವರ ಮಾಜಿ ಪತ್ನಿ ಆರೋಪಿಸಿದ್ದು, ಈ ಕುರಿತು ಕೆಲಂಬಾಕ್ಕಂ ಠಾಣೆಗೆ ದೂರು ನೀಡಿದ್ದರಿಂದ ಅವರನ್ನು (Former DGP Arrested) ಬಂಧಿಸಲಾಯಿತು.

VISTARANEWS.COM


on

By

Former DGP Arrested
Koo

ಚೆನ್ನೈ: ಲೈಂಗಿಕ ಕಿರುಕುಳ ಪ್ರಕರಣದಲ್ಲಿ (sexually harassment case) ಈ ಹಿಂದೆ ಶಿಕ್ಷೆಗೆ ಗುರಿಯಾಗಿದ್ದ ಮಾಜಿ ಡಿಜಿಪಿ ರಾಜೇಶ್ ದಾಸ್ ಅವರನ್ನು (Former DGP Arrested) ವಿಚ್ಛೇದಿತ ಪತ್ನಿಯ ಮನೆಯಲ್ಲಿ ಅಕ್ರಮ ಪ್ರವೇಶ ಆರೋಪದಡಿಯಲ್ಲಿ ಶುಕ್ರವಾರ ಬೆಳಗ್ಗೆ ತಾಂಬರಂ ನಗರ ಪೊಲೀಸರು (Tambaram city police) ಬಂಧಿಸಿದ್ದಾರೆ.

ರಾಜೇಶ್ ದಾಸ್ ಅವರ ವಿಚ್ಛೇದಿತ ಪತ್ನಿ, ತಮಿಳುನಾಡಿನ (tamilnadu) ಇಂಧನ ಕಾರ್ಯದರ್ಶಿ ಬೀಲಾ ವೆಂಕಟೇಶನ್ (Beela Venkatesan) ಅವರು ನೀಡಿದ ದೂರಿನ ಆಧಾರದ ಮೇಲೆ ಈ ವಾರದ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಬೀಲಾ ಅವರು ಈ ವಾರದ ಆರಂಭದಲ್ಲಿ ನೀಡಿದ ದೂರಿನಲ್ಲಿ ದಾಸ್ ಮತ್ತು ಇತರ ಕೆಲವು ಮಂದಿ ತೈಯೂರಿನಲ್ಲಿರುವ ತನ್ನ ಒಡೆತನದ ಮನೆಗೆ ಅತಿಕ್ರಮವಾಗಿ ನುಗ್ಗಿ ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಈ ಕುರಿತು ಕೆಲಂಬಾಕ್ಕಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ದಾಸ್ ಅವರು ತಾವು ಆ ಮನೆಯ ಕಾಯಂ ನಿವಾಸಿ ಎಂದು ಹೇಳಿಕೊಂಡಿದ್ದರು. ಇಂಧನ ಕಾರ್ಯದರ್ಶಿಯಾಗಿ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಮನೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಕ್ಕಾಗಿ ಬೀಲಾ ಅವರನ್ನು ದೂಷಿಸಿದ್ದರು. ಈ ಸಂಬಂಧ ಅವರು ಗುರುವಾರ ಮದ್ರಾಸ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸುವಂತೆ ಬೀಲಾ ಅವರಿಗೆ ಕೋರ್ಟ್ ಸೂಚನೆ ನೀಡಿತ್ತು.

ಪನೈಯೂರಿನಲ್ಲಿರುವ ಅವರ ಮನೆಯಿಂದ ಬಂಧನವನ್ನು ದೃಢಪಡಿಸಿದ ತಾಂಬರಂ ಪೊಲೀಸರು, ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದರು. ಕಿರಿಯ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ದಾಸ್‌ ಅವರಿಗೆ ಈ ಹಿಂದೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಅವರಿಗೆ ಶಿಕ್ಷೆಯಿಂದ ವಿನಾಯಿತಿ ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದ ಬಳಿಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಸುಪ್ರೀಂ ಕೋರ್ಟ್ ಸದ್ಯ ಅವರಿಗೆ ಕೊಂಚ ರಿಲೀಫ್ ನೀಡಿದೆ.

ಇದನ್ನೂ ಓದಿ: Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

Continue Reading

ಪ್ರಮುಖ ಸುದ್ದಿ

Ebola Virus: ಲ್ಯಾಬ್‌ನಲ್ಲಿ ಮತ್ತೊಂದು ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ; ಈ ಲಕ್ಷಣ ಕಂಡರೆ ಮರಣ ನಿಶ್ಚಿತ!

Ebola Virus: ಎಬೋಲಾ ಸಾಂಕ್ರಾಮಿಕವಾಗಿದ್ದು, ಇದು ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಕೋತಿ, ಬಾವಲಿಯ ರಕ್ತ, ಸೋಂಕಿನಿಂದ ಕೂಡಿದ ಗಾಳಿ ಅಥವಾ ಎಬೋಲಾ ಸೋಂಕಿತನ ವೀರ್ಯದಿಂದ ಹರಡುತ್ತದೆ ಎಂದು ತಿಳಿದುಬಂದಿದೆ. ಸೋಂಕು ತಗುಲಿದವರು ಬಹು ಅಂಗಾಂಗ ವೈಫಲ್ಯದಿಂದ ಮೃತಪಡುತ್ತಾರೆ ಎಂಬುದಾಗಿ ಚೀನಾದ ವಿಜ್ಞಾನಿಗಳು ಹೇಳಿದ್ದಾರೆ. ಇದರಿಂದಾಗಿ ಭಾರತ ಸೇರಿ ಜಗತ್ತಿನಾದ್ಯಂತ ಭೀತಿ ಎದುರಾಗಿದೆ.

VISTARANEWS.COM


on

Ebola Virus
Koo

ಬೀಜಿಂಗ್: ಜಗತ್ತಿಗೇ ಕೊರೊನಾ (Corona Virus) ಎಂಬ ಮಹಾಮಾರಿಯನ್ನು ಹರಡಿ, ಕೋಟ್ಯಂತರ ಜನರ ಪ್ರಾಣಕ್ಕೆ ಕುತ್ತು ತಂದ ಚೀನಾ ಈಗ ಮತ್ತೊಂದು ಜೈವಿಕ ಯುದ್ಧಕ್ಕೆ ಮುಂದಾಗಿದೆ. ಮಾರಣಾಂತಿಕ ಎಬೋಲಾ ರೂಪಾಂತರಿ ಸೋಂಕನ್ನು (Ebola Mutant Virus) ಚೀನಾದ ವಿಜ್ಞಾನಿಗಳು ಸೃಷ್ಟಿಸಿದ್ದು, ಇದರಿಂದ ಜಗತ್ತಿಗೇ ಆತಂಕ ಎದುರಾಗಿದೆ. ಹೆಬೈ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ವಿಜ್ಞಾನಿಗಳು ಎಬೋಲಾ ರೂಪಾಂತರಿ ವೈರಸ್‌ಅನ್ನು ಸೃಷ್ಟಿಸಿದ್ದಾರೆ. ಹ್ಯಾಮ್‌ಸ್ಟರ್‌ಗಳಿಗೆ (ಕಿರುಕಡಿಗ-ಇಲಿಯಂತ ಚಿಕ್ಕ ಪ್ರಾಣಿ) ವೈರಸ್‌ ಇಂಜೆಕ್ಟ್‌ ಮಾಡಿದರೆ, ಮೂರೇ ದಿನಗಳಲ್ಲಿ ಅವರು ಸಾಯುತ್ತವೆ ಎಂದು ಸೈನ್ಸ್‌ ಡೈರೆಕ್ಟ್‌ ಜರ್ನಲ್‌ನಲ್ಲಿ ವರದಿ ಪ್ರಕಟವಾಗಿದೆ.

ಸಿರಿಯಾ ಮೂಲದ, ಮೂರು ವಾರಗಳ ಹಿಂದೆ ಜನಿಸಿದ ಹ್ಯಾಮ್‌ಸ್ಟರ್‌ಗಳಿಗೆ ಎಬೋಲಾ ರೂಪಾಂತರಿ ತಳಿಯ ವೈರಸ್‌ಅನ್ನು ಇಂಜೆಕ್ಟ್‌ ಮಾಡಲಾಗಿತ್ತು. 5 ಗಂಡು ಹಾಗೂ 5 ಹೆಣ್ಣು ಹ್ಯಾಮ್‌ಸ್ಟರ್‌ಗಳಿಗೆ ಸೋಂಕನ್ನು ಇಂಜೆಕ್ಷನ್‌ ಮೂಲಕ ನೀಡಲಾಗಿತ್ತು. ಮೂರು ದಿನಗಳಲ್ಲಿಯೇ ಅವರು ಮೃತಪಟ್ಟವು” ಎಂಬುದಾಗಿ ವಿಜ್ಞಾನಿಗಳೇ ಹೇಳಿದ್ದಾರೆ. ಹಾಗಾಗಿ, ಇದು ಕೂಡ ಕೊರೊನಾ ಸಾಂಕ್ರಾಮಿಕದಂತೆ ಮಾರಣಾಂತಿಕವಾಗಿದ್ದು, ಭಾರತ ಸೇರಿ ಜಗತ್ತಿನ ಹಲವು ರಾಷ್ಟ್ರಗಳಿಗೆ ಕಮ್ಯುನಿಸ್ಟ್‌ ರಾಷ್ಟ್ರವು ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿದೆ.

ಮನುಷ್ಯರಿಗೆ ಹೇಗೆ ಅಪಾಯ?

ಹ್ಯಾಮ್‌ಸ್ಟರ್‌ಗಳಿಗೆ ಉಂಟಾದ ಪರಿಣಾಮವೇ ಮನುಷ್ಯರಿಗೂ ಆಗಲಿದೆ. ಮೊದಲು ಜೀವಕೋಶಗಳಿಗೆ ಹರಡುವ ಸೋಂಕು, ಹೃದಯ, ಶ್ವಾಸಕೋಶ, ಹೊಟ್ಟೆ, ಲಿವರ್‌ ಸೇರಿ ಹಲವು ಅಂಗಗಳನ್ನು ನಿಷ್ಕ್ರಿಯಗೊಳಿಸುತ್ತದೆ. ಕೊನೆಗೆ, ಬಹು ಅಂಗಾಂಗ ವೈಫಲ್ಯದಿಂದ ಮನುಷ್ಯನು ಕೂಡ ಮೂರ್ನಾಲ್ಕು ದಿನಗಳಲ್ಲಿಯೇ ಮೃತಪಡಲಿದ್ದಾನೆ ಎಂಬುದಾಗಿ ಚೀನಾ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಜಗತ್ತಿನಾದ್ಯಂತ ಭೀತಿ ಎದುರಾಗಿದೆ.

ಎಬೋಲಾ ಹರಡುವುದು ಹೇಗೆ?

ಎಬೋಲಾ ಸಾಂಕ್ರಾಮಿಕವಾಗಿದ್ದು, ಇದು ವೈರಾಣುವಿನಿಂದ ಹರಡುವ ಕಾಯಿಲೆಯಾಗಿದೆ. ಕೋತಿ, ಬಾವಲಿಯ ರಕ್ತ, ಸೋಂಕಿನಿಂದ ಕೂಡಿದ ಗಾಳಿ ಅಥವಾ ಎಬೋಲಾ ಸೋಂಕಿತನ ವೀರ್ಯದಿಂದ ಹರಡುತ್ತದೆ ಎಂದು ತಿಳಿದುಬಂದಿದೆ. ಗಂಟಲು ನೋವು, ಸ್ನಾಯು ನೋವು ಮತ್ತು ತಲೆನೋವು, ಯಕೃತ್ತು ಮತ್ತು ಮೂತ್ರ ಕಾರ್ಯನಿರ್ವಹಣೆಯ ಹದಗೆಡುತ್ತದೆ. ಸಾಮಾನ್ಯವಾಗಿ ವಾಕರಿಕೆ, ವಾಂತಿ ಮತ್ತು ಭೇದಿ ಇದರ ಲಕ್ಷಣಗಳಾಗಿವೆ. ಬಾವಲಿ, ಕೋತಿಯಂತಹ ಪ್ರಾಣಿಗಳಿಂದ ದೂರ ಇರುವುದು ಒಳಿತು ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

Continue Reading

ಕ್ರೈಂ

Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

ಜನಿಸಲಿರುವ ಮಗು ಗಂಡು ಅಥವಾ ಹೆಣ್ಣು ಎಂದು ತಿಳಿಯಲು ಐವರು ಹೆಣ್ಣು ಮಕ್ಕಳ ತಂದೆ ಪತ್ನಿಯ ಹೊಟ್ಟೆಯನ್ನು ಸೀಳಿದ್ದ. (Murder Attempt). ಇದರಿಂದ ಆಘಾತಗೊಂಡ ಆಕೆ ಬೀದಿಗೆ ಓಡಿ ಹೋಗಿ ತನ್ನನ್ನು ತಾನು ರಕ್ಷಿಸಿಕೊಂಡರೂ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿತ್ತು. ಅದು ಗಂಡು ಮಗುವಾಗಿತ್ತು!

VISTARANEWS.COM


on

By

Murder Attempt
Koo

ಉತ್ತರ ಪ್ರದೇಶ: ಹುಟ್ಟಲಿರುವ ಮಗು ಗಂಡೋ ಹೆಣ್ಣೋ (gender check) ಎಂಬುದನ್ನು ಪರೀಕ್ಷಿಸಲು ಹೆಂಡತಿಯ ಹೊಟ್ಟೆಯನ್ನೇ ಕತ್ತಿಯಿಂದ ಸೀಳಿದ್ದ (Murder Attempt) ಉತ್ತರ ಪ್ರದೇಶದ (uttarpradesh) ಬದೌನ್‌ ಗ್ರಾಮದ ಐವರು ಹೆಣ್ಣು ಮಕ್ಕಳ ತಂದೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಬದೌನ್‌ನ ಸಿವಿಲ್ ಲೈನ್ಸ್‌ನ ನಿವಾಸಿ ಪನ್ನಾ ಲಾಲ್ ಶಿಕ್ಷೆಗೆ ಗುರಿಯಾದ ವ್ಯಕ್ತಿ.

2020ರ ಸೆಪ್ಟೆಂಬರ್‌ನಲ್ಲಿ ಪನ್ನಾಲಾಲ್ ಗರ್ಭಿಣಿಯಾಗಿದ್ದ ತನ್ನ ಪತ್ನಿ ಅನಿತಾ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ್ದ. ದಂಪತಿಗೆ ಮದುವೆಯಾಗಿ 22 ವರ್ಷಗಳಾಗಿತ್ತು. ಐದು ಹೆಣ್ಣು ಮಕ್ಕಳಿದ್ದರೂ ಪನ್ನಾ ಲಾಲ್‌ಗೆ ಗಂಡು ಮಗು ಬೇಕೆಂಬ ಹಠವಿತ್ತು. ಇದು ಪತಿ ಪತ್ನಿಯ ನಡುವೆ ನಿರಂತರ ಜಗಳಕ್ಕೆ ಕಾರಣವಾಗುತ್ತಿತ್ತು.

ಇವರಿಬ್ಬರ ಜಗಳದ ಬಗ್ಗೆ ಅನಿತಾ ಅವರ ಕುಟುಂಬಕ್ಕೂ ತಿಳಿದಿತ್ತು. ಅವರು ಇವರಿಬ್ಬರ ನಡುವಿನ ಜಗಳವನ್ನು ನಿಲ್ಲಿಸಲು ಪನ್ನಾ ಲಾಲ್ ಅವರನ್ನು ಮನವೊಲಿಸಲು ಪ್ರಯತ್ನಿಸಿದರು. ಆದರೆ ಪನ್ನಾಲಾಲ್ ಅನಿತಾಗೆ ವಿಚ್ಛೇದನ ನೀಡಿ ಇನ್ನೊಬ್ಬ ಮಹಿಳೆಯನ್ನು ಮದುವೆಯಾಗುವುದಾಗಿ ಬೆದರಿಕೆ ಹಾಕಿದ್ದ.

ಘಟನೆ ನಡೆದ ದಿನದಂದು ದಂಪತಿ ಗರ್ಭದಲ್ಲಿರುವ ಮಗುವಿನ ಲಿಂಗದ ಬಗ್ಗೆ ಮತ್ತೆ ಜಗಳವಾಡಿದ್ದಾರೆ. ಇದರಿಂದ ಕುಪಿತಗೊಂಡ ಪನ್ನಾ ಲಾಲ್ ಅನಿತಾಗೆ ಗಂಡು ಅಥವಾ ಹೆಣ್ಣು ಮಗುವಿದೆಯೇ ಎಂದು ಪರೀಕ್ಷಿಸಲು ಅನಿತಾ ಅವರ ಹೊಟ್ಟೆಯನ್ನು ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದ. ಅನಿತಾ ಜಗಳವಾಡಿದಾಗ ಆಕೆಗೆ ಕೊಲೆ ಬೆದರಿಕೆಯನ್ನೂ ಹಾಕಿದ್ದ.

ಪನ್ನಾಲಾಲ್ ಆಕೆಯ ಮೇಲೆ ಹಲ್ಲೆ ನಡೆಸಿದ್ದು, ಆಕೆ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾಳೆ. ಈ ವೇಳೆ ಅವನು ಅವಳನ್ನು ಹಿಡಿದು ಹರಿತವಾದ ಕತ್ತಿಯಿಂದ ಅವಳ ಹೊಟ್ಟೆಯನ್ನು ಕತ್ತರಿಸಿ, ಮಗು ಹೆಣ್ಣೋ ಗಂಡೋ ನೋಡಿಯೇ ಬಿಡುತ್ತೇನೆ ಎಂದು ಅಬ್ಬರಿಸಿದ್ದ. ಆಗ ಆಕೆ ಎಂಟು ತಿಂಗಳ ಗರ್ಭಿಣಿಯಾಗಿದ್ದಳು. ಆಕೆಯ ಕರುಳು ಹೊಟ್ಟೆಯಿಂದ ನೇತಾಡುವಷ್ಟು ಆಳವಾದ ಗಾಯವಾಗಿತ್ತು.

ಇದನ್ನೂ ಓದಿ: Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

ತೀವ್ರವಾಗಿ ಗಾಯಗೊಂಡರೂ ಆಕೆ ಬೀದಿಗೆ ಓಡಿದಳು. ಹತ್ತಿರದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಅವಳ ಸಹೋದರ ಅವಳ ಕಿರುಚಾಟವನ್ನು ಕೇಳಿ ಅವಳನ್ನು ರಕ್ಷಿಸಲು ಬಂದ. ಆತನನ್ನು ಕಂಡ ಪನ್ನಾ ಲಾಲ್ ಸ್ಥಳದಿಂದ ಪರಾರಿಯಾದ. ಅನಿತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆಕೆ ಬದುಕುಳಿದಿದ್ದರೂ, ಆಕೆಯ ಹೊಟ್ಟೆಯಲ್ಲಿದ್ದ ಗಂಡು ಸಾವನ್ನಪ್ಪಿತ್ತು. ಅದು ಗಂಡು ಮಗುವಾಗಿತ್ತು ಎಂದು ಅನಿತಾ ನ್ಯಾಯಾಲಯಕ್ಕೆ ನೀಡಿದ ದೂರಿನಲ್ಲಿ ತಿಳಿಸಿದ್ದರು.

ಆಸ್ತಿ ವಿವಾದದ ಕಾರಣ ಅನಿತಾ ತನ್ನ ಸಹೋದರರೊಂದಿಗೆ ಸೇರಿ ತನ್ನ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಲು ತನಗೆ ತಾನೇ ಗಾಯ ಮಾಡಿಕೊಂಡಿದ್ದಾಳೆ ಎಂದು ಪನ್ನಾಲಾಲ್ ನ್ಯಾಯಾಲಯದಲ್ಲಿ ವಾದಿಸಿದ್ದ. ಆದರೆ ಪನ್ನಾಲಾಲ್ ವಿರುದ್ಧ ಆರೋಪ ಸಾಬೀತಾಗಿರುವುದರಿಂಅ ನ್ಯಾಯಾಲಯ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

Continue Reading

ವೈರಲ್ ನ್ಯೂಸ್

Viral Video: ಮೈದುನನ ಇಬ್ಬರು ಮಕ್ಕಳನ್ನು ವಿಷವಿಕ್ಕಿ ಕೊಂದಳು, ಮೂರನೇ ಮಗುವನ್ನು ಕೊಲ್ಲುವಾಗ ಸಿಕ್ಕಿ ಬಿದ್ದಳು!

Viral Video: ಮಲಗಿದ್ದ ಮಗುವಿಗೆ ಮಹಿಳೆಯೊಬ್ಬರು ವಿಷ ನೀಡುತ್ತಿರುವ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಎನ್‌ಸಿಎಂ ಇಂಡಿಯಾ ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಹಂಚಿಕೊಂಡಿದೆ. ಇದು ಎಕ್ಸ್ ನಲ್ಲಿ ಭಾರಿ ವೈರಲ್ ಆಗಿದೆ. ಇದರ ಹಿಂದಿನ ಕತೆ ಏನು? ಇಲ್ಲಿದೆ ವಿವರ.

VISTARANEWS.COM


on

By

Viral Video
Koo

ಮೈದುನನ ಮಗನಿಗೆ ಮಹಿಳೆಯೊಬ್ಬಳು ವಿಷವಿಕ್ಕಿರುವ (poison) ಘಟನೆ ರಾಜಸ್ಥಾನದ (Rajasthan) ಬಾರ್ಮರ್ ಜಿಲ್ಲೆಯ ಭದ್ರೇಸ್ ಗ್ರಾಮದಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Viral Video) ಆಗಿದೆ. ಇದಕ್ಕೆ ನೆಟ್ಟಿಗರಿಂದ ತೀವ್ರ ಆಕ್ರೋಶವೂ ವ್ಯಕ್ತವಾಗುತ್ತಿದೆ.

ಮಲಗಿದ್ದ ಮಗುವಿಗೆ ಮಹಿಳೆಯೊಬ್ಬರು ವಿಷ ನೀಡುತ್ತಿರುವ ಆಘಾತಕಾರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಎನ್‌ಸಿಎಂ ಇಂಡಿಯಾ ಕೌನ್ಸಿಲ್ ಫಾರ್ ಮೆನ್ ಅಫೇರ್ಸ್ ಹಂಚಿಕೊಂಡಿದೆ. ಇದು ಎಕ್ಸ್ ನಲ್ಲಿ ಭಾರಿ ವೈರಲ್ ಆಗಿದೆ.

ರಾಜಸ್ಥಾನದ ಭದ್ರೇಸ್ ಗ್ರಾಮದಲ್ಲಿ ಹಿರಿಯ ಸಹೋದರನ ಪತ್ನಿ ಗಂಡನ ಕಿರಿಯ ಸಹೋದರನ ಮಗುವಿಗೆ ವಿಷ ನೀಡಿರುವುದಾಗಿ ಹೇಳಲಾಗಿದೆ. ಕಿರಿಯ ಸಹೋದರನ ಇಬ್ಬರು ಮಕ್ಕಳು ಇದೇ ರೀತಿ ಸಾವನ್ನಪ್ಪಿದ್ದರು. ಈ ಬಗ್ಗೆ ಮಗುವಿನ ತಾಯಿಯು ಗಂಡನ ಸಹೋದರನ ಪತ್ನಿ ಜೇಥನಿ ಮೇಲೆ ಅನುಮಾನ ವ್ಯಕ್ತಪಡಿಸಿದ್ದಳು.

ಹಿಂದೆ ಇಬ್ಬರು ಮಕ್ಕಳು ಇದೇ ರೀತಿ ಸಾವನ್ನಪ್ಪಿದ್ದರಿಂದ ಈ ಬಾರಿ ಎಚ್ಚರಿಕೆಯಿಂದ ಇದ್ದಳು. ಮಗುವಿನ ಹಾಸಿಗೆಯ ಬಳಿ ರೆಕಾರ್ಡ್ ಮಾಡಲು ಕೆಮರಾ ಇರಿಸಿದ್ದಳು. ಸುತ್ತಮುತ್ತ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವುದನ್ನು ಪರೀಕ್ಷಿಸುತ್ತಿದ್ದಳು.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಜೇಥನಿ ಎಂಬಾಕೆ ಕೋಣೆಗೆ ಪ್ರವೇಶಿಸುತ್ತಾಳೆ. ಮಗು ಒಂಟಿಯಾಗಿ ಮಲಗಿರುವುದನ್ನು ನೋಡಿ ಮಗುವಿನ ಮೇಲೆ ಇರಿಸಿದ್ದ ಸೊಳ್ಳೆ ಪರದೆಯನ್ನು ಸದ್ದಿಲ್ಲದೆ ತೆಗೆದು ಕೆಲವು ಹನಿಗಳನ್ನು ಮಗುವಿನ ಬಾಯಿಗೆ ಹಾಕಿದಳು.


ಮಗುವನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಮೂರು ದಿನಗಳ ಕಾಲ ಐಸಿಯುನಲ್ಲಿ ಹೋರಾಡಿದ ಮಗು ಈಗ ಚೇತರಿಸಿಕೊಂಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಂಚಿರುವ ಈ ವಿಡಿಯೋವನ್ನು ಈವರೆಗೆ 17.9 ಲಕ್ಷ ಮಂದಿ ವೀಕ್ಷಿಸಿದ್ದಾರೆ. ಇದನ್ನು ನೋಡಿರುವ ಸಾಕಷ್ಟು ಮಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Miracle case : ಮುರ್ತುಜಾ ಖಾದ್ರಿ ಪವಾಡ; ಅಂತ್ಯಕ್ರಿಯೆ ಮಾಡುವಾಗಲೇ ಕೆಮ್ಮಿದ ಮಗು!

ವೈರಲ್ ಆಗಿರುವ ಈ ವಿಡಿಯೋ ಕುರಿತು ಬಾರ್ಮರ್ ಪೊಲೀಸರು ಪ್ರತಿಕ್ರಿಯಿಸಿದ್ದು, ಇದು ಭದ್ರೇಸ್ ಗ್ರಾಮದ ಮುಖೇಶ್ ಪ್ರಜಾಪತ್ ಅವರ ಮಗನಿಗೆ ವಿಷವಿಕ್ಕಿರುವ ವಿಡಿಯೋ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನೊಂದು ಮಾಹಿತಿ ಪ್ರಕಾರ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕೆ ಆಕೆ ಈ ರೀತಿ ಮಾಡಿದ್ದಳೆಂದು ಹೇಳಿಲ್ಲ ಎನ್ನಲಾಗಿದೆ.

Continue Reading
Advertisement
Former DGP Arrested
ಕ್ರೈಂ9 mins ago

Former DGP Arrested: ವಿಚ್ಛೇದಿತ ಪತ್ನಿಯ ದೂರು; ಮಾಜಿ ಡಿಜಿಪಿ ಜೈಲು ಪಾಲು

ಕ್ರೈಂ9 mins ago

Rameshwaram Cafe Blast: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣದ 5ನೇ ಆರೋಪಿಗೆ ಲಷ್ಕರ್–ಎ–ತಯ್ಬಾ ಜತೆ ಲಿಂಕ್‌!

CSK vs RC
ಕ್ರೀಡೆ14 mins ago

CSK vs RCB: ಮತ್ತೆ ಆರ್​ಸಿಬಿ, ಕೊಹ್ಲಿಯ ಬಗ್ಗೆ ಕಿಡಿಕಾರಿದ ಚೆನ್ನೈ ತಂಡದ ಮಾಜಿ ಆಟಗಾರ

BSNL network problem in Hosanagara The lawyer decided to climb the tower and protest
ಕರ್ನಾಟಕ17 mins ago

Hosanagara News: ಹೊಸನಗರದಲ್ಲಿ ಬಿಎಸ್‌ಎನ್‌ಎಲ್‌ ನೆಟ್‌ವರ್ಕ್‌ ಸಮಸ್ಯೆ; ಟವರ್‌ ಏರಿ ಪ್ರತಿಭಟನೆಗೆ ಮುಂದಾದ ವಕೀಲ!

union minister pralhad joshi spoke in North East Graduate Constituency Electoral Convention at ballari
ಕರ್ನಾಟಕ21 mins ago

MLC Election: ಜಗತ್ತು ತೆವಳುತ್ತಿದ್ದರೆ ಮೋದಿ ಭಾರತ ಓಡುತ್ತಿದೆ; ಸಚಿವ ಪ್ರಲ್ಹಾದ್‌ ಜೋಶಿ ವ್ಯಾಖ್ಯಾನ

Crocodile Attack
ಕರ್ನಾಟಕ27 mins ago

Crocodile Attack: ಕೃಷ್ಣಾ ನದಿಯಲ್ಲಿ ಬಾಲಕನನ್ನು ಎಳೆದೊಯ್ದ ಮೊಸಳೆ

Washing Machine Cleaning Tips
ಲೈಫ್‌ಸ್ಟೈಲ್28 mins ago

Washing Machine Cleaning Tips: ವಾಷಿಂಗ್ ಮೆಷಿನ್ ಹೆಚ್ಚು ಬಾಳಿಕೆ ಬರಬೇಕೆ? ಈ ರೀತಿ ಸ್ವಚ್ಛಗೊಳಿಸಿ

Ebola Virus
ಪ್ರಮುಖ ಸುದ್ದಿ37 mins ago

Ebola Virus: ಲ್ಯಾಬ್‌ನಲ್ಲಿ ಮತ್ತೊಂದು ಡೆಡ್ಲಿ ವೈರಸ್‌ ಸೃಷ್ಟಿಸಿದ ಚೀನಾ; ಈ ಲಕ್ಷಣ ಕಂಡರೆ ಮರಣ ನಿಶ್ಚಿತ!

Karnataka Weather Forecast
ಮಳೆ45 mins ago

Karnataka Weather : ಕೈಯಲ್ಲಿ ಛತ್ರಿ ಹಿಡಿದು ಬಸ್ ಡ್ರೈವಿಂಗ್; ಮಳೆಗೆ ಕುಸಿದು ಬಿದ್ದ ಮಾಳಿಗೆ ಮನೆ

Murder Attempt
ಕ್ರೈಂ46 mins ago

Murder Attempt: ಮಗು ಹೆಣ್ಣೋ ಗಂಡೋ ನೋಡಲು ಹೆಂಡತಿಯ ಹೊಟ್ಟೆ ಸೀಳಿದವನಿಗೆ ಜೀವಾವಧಿ ಶಿಕ್ಷೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ5 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ5 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ7 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌