Rajasthan Election: ಝಲರ್‌ಪಟಾನ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಸುಂಧರಾ ರಾಜೆ; ನಿವೃತ್ತಿ ವದಂತಿಗೆ ಬ್ರೇಕ್‌ - Vistara News

ದೇಶ

Rajasthan Election: ಝಲರ್‌ಪಟಾನ್‌ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ವಸುಂಧರಾ ರಾಜೆ; ನಿವೃತ್ತಿ ವದಂತಿಗೆ ಬ್ರೇಕ್‌

Rajasthan Election: ರಾಜಸ್ಥಾನ ವಿಧಾನಸಭಾ ಚುನಾವಣೆ ಭಾರೀ ಕುತೂಹಲ ಕೆರಳಿಸಿದೆ. ಶನಿವಾರ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ನಾಮಪತ್ರ ಸಲ್ಲಿಸುವ ಮೂಲಕ ರಾಜಕೀಯ ನಿವೃತ್ತಿಯ ವದಂತಿಗೆ ತೆರೆ ಎಳೆದಿದ್ದಾರೆ.

VISTARANEWS.COM


on

vasundhara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭಾ ಚುನಾವಣೆಗೆ (Rajasthan Election) ಬಿಜೆಪಿ (BJP) ಭರ್ಜರಿ ಸಿದ್ಧತೆ ನಡೆಸಿದೆ. ಶನಿವಾರ ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕಿ ವಸುಂಧರಾ ರಾಜೆ (Vasundhara Raje) ಝಲರ್‌ಪಟಾನ್‌ (Jhalrapatan) ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.

ವಸುಂಧರಾ ರಾಜೆ ನಾಮಪತ್ರ ಸಲ್ಲಿಕೆ ವೇಳೆ ಹಿರಿಯ ನಾಯಕ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು. ಈ ಬಗ್ಗೆ ಪ್ರಹ್ಲಾದ್‌ ಜೋಶಿ ಸೋಷಿಯಲ್‌ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ʼʼರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ನಾಯಕಿ ವಸುಂಧರಾ ರಾಜೆ ರಾಜಸ್ಥಾನದ ಝಲರ್‌ಪಟಾನ್‌ ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ನಾಮನಿರ್ದೇಶನ ಸಂದರ್ಭದಲ್ಲಿ ನಮ್ಮ ಉತ್ಸಾಹಿ ಕಾರ್ಯಕರ್ತರೊಂದಿಗೆ ನಾನು ಭಾಗವಹಿಸಿದ್ದೆʼʼ ಎಂದು ಅವರು ಬರೆದುಕೊಂಡಿದ್ದಾರೆ.

ವದಂತಿಗೆ ತೆರೆ ಎಳೆದ ನಾಯಕಿ

ನಾಮಪತ್ರ ಸಲ್ಲಿಸುವ ಮೂಲಕ ವಸುಂಧರಾ ರಾಜೆ ಸಕ್ರಿಯ ರಾಜಕೀಯದಿಂದ ನಿವೃತ್ತಿ ಹೊಂದುವ ಬಗ್ಗೆ ಇದ್ದ ಊಹಾಪೋಹಗಳನ್ನು ತಳ್ಳಿ ಹಾಕಿದ್ದಾರೆ. “ನಾನು ಎಲ್ಲಿಗೂ ಹೋಗುವುದಿಲ್ಲ, ನಾನು ನಾಮಪತ್ರವನ್ನು ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ. ನಿವೃತ್ತಿಯ ಬಗ್ಗೆ ಏನನ್ನೂ ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಬೇಡಿ” ಎಂದು ಅವರು ಹೇಳಿದ್ದಾರೆ. 2003ರಿಂದ ಅವರು ಝಲರ್‌ಪಟಾನ್‌ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ರಾಜೆ 2003ರಲ್ಲಿ ಝಲರ್‌ಪಟಾನ್‌ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಅಂದು ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಚಿನ್ ಪೈಲಟ್ ಅವರ ತಾಯಿ ರಮಾ ಪೈಲಟ್ ಅವರನ್ನು ಸೋಲಿಸಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿತು ಮತ್ತು ರಾಜೆ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರು.

2008ರಲ್ಲಿ ಬಿಜೆಪಿ ಚುನಾವಣೆಯಲ್ಲಿ ಸೋತಿತು, ಅಶೋಕ್ ಗೆಹ್ಲೋಟ್ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರವನ್ನು ರಚಿಸಿತ್ತು. ಆದರೆ ರಾಜೆ ಆ ಬಾರಿಯೂ ಝಲರ್‌ಪಟಾನ್‌ನಿಂದ ಸ್ಪರ್ಧಿಸಿ ಕಾಂಗ್ರೆಸ್‌ನ ಮೋಹನ್ ಲಾಲ್ ರಾಥೋಡ್ ಅವರನ್ನು ಸೋಲಿಸಿದ್ದರು.

2013ರಲ್ಲಿ ಮತ್ತೆ ಇತಿಹಾಸ ಮರುಕಳಿಸಿತ್ತು. ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 200 ಸ್ಥಾನಗಳ ಪೈಕಿ 163 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ರಾಜೆ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ಚಂದ್ರಾವತ್ ಅವರನ್ನು 60,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು.

ಇದನ್ನೂ ಓದಿ: Free Ration: 80 ಕೋಟಿ ಜನರಿಗೆ 5 ವರ್ಷ ಉಚಿತ ಪಡಿತರ; ಮೋದಿ ಮಹತ್ವದ ಘೋಷಣೆ

ಪರ್ಯಾಯ ಸರ್ಕಾರವನ್ನು ಆಯ್ಕೆ ಮಾಡುವ ರಾಜಸ್ಥಾನ ಮಂದಿ 2018ರ ಚುನಾವಣೆಯಲ್ಲಿ ಮತ್ತೆ ಕಾಂಗ್ರೆಸ್‌ಗೆ ಮಣೆ ಹಾಕಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ ಸೋತಿತು ಮತ್ತು ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಹಿಡಿಯಿತು. ಆದಾಗ್ಯೂ ರಾಜೆ ವರ್ಚಸ್ಸು ಕುಂದಿರಲಿಲ್ಲ. ಅವರು ಕಾಂಗ್ರೆಸ್‌ನ ಮನ್ವೇಂದ್ರ ಸಿಂಗ್ ಅವರನ್ನು ಸೋಲಿಸುವ ಮೂಲಕ ತಮ್ಮ ಭದ್ರಕೋಟೆಯನ್ನು ಉಳಿಸಿಕೊಂಡರು. ಮನ್ವೇಂದ್ರ ಸಿಂಗ್ ಮಾಜಿ ಕೇಂದ್ರ ಸಚಿವ ಜಸ್ವಂತ್‌ ಸಿಂಗ್‌ ಅವರ ಪುತ್ರ ಎನ್ನುವುದು ವಿಶೇಷ.

ಈ ಬಾರಿಯ ರಾಜಸ್ಥಾನ ಚುನಾವಣೆ ಕುತೂಹಲ ಮೂಡಿಸಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಜಿದ್ದಾಜಿದ್ದಿನ ಹೋರಾಟ ನಡೆಯುವ ನಿರೀಕ್ಷೆ ಇದೆ. ಇಲ್ಲಿ ನವೆಂಬರ್‌ 25ರಂದು ಚುನಾವಣೆ ನಡೆದು ಡಿಸೆಂಬರ್‌ 3ರಂದು ಫಲಿತಾಂಶ ಹೊರ ಬೀಳಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

MDH, Everest Spices: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಲು ಅಮೆರಿಕ ಮುಂದಾಗಿದೆ. ಉತ್ಪನ್ನಗಳನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ ನಂತರ ಈ ಬೆಳವಣಿಕೆ ಕಂಡು ಬಂದಿದೆ. ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

MDH, Everest Spices
Koo

ವಾಷಿಂಗ್ಟನ್‌: ಕ್ಯಾನ್ಸರ್ ಉಂಟು ಮಾಡುವ ಕೀಟ ನಾಶಕವನ್ನು ಒಳಗೊಂಡಿದೆ ಎಂಬ ಆರೋಪದ ನಂತರ ಜನಪ್ರಿಯ ಭಾರತೀಯ ಮಸಾಲೆ ಬ್ರ್ಯಾಂಡ್‌ಗಳಾದ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನ (MDH, Everest Spices)ಗಳ ಮಾರಾಟವನ್ನು ಸಿಂಗಾಪುರ, ಹಾಂಗ್ ಕಾಂಗ್ ನಿಷೇಧಿಸಿದ್ದು, ಇದೀಗ ಅಮೆರಿಕವೂ ಕ್ರಮಕ್ಕೆ ಮುಂದಾಗಿದೆ. ಅಮೆರಿಕದ ಫುಡ್ ಆ್ಯಂಡ್‌ ಡ್ರಗ್ ಅಡ್ಮಿನಿಸ್ಟ್ರೇಷನ್ (Food and Drug Administration) ಎಂಡಿಎಚ್ ಮತ್ತು ಎವರೆಸ್ಟ್‌ ಉತ್ಪನ್ನಗಳ ಬಗ್ಗೆ ಮಾಹಿತಿಯನ್ನು ಸಂಗ್ರಹಿಸುತ್ತಿದೆ.

“ಎಫ್‌ಡಿಎ ಪರಿಸ್ಥಿತಿಯ ಬಗ್ಗೆ ಹೆಚ್ಚುವರಿ ಮಾಹಿತಿಯನ್ನು ಸಂಗ್ರಹಿಸುತ್ತಿದೆ” ಎಂದು ವಕ್ತಾರರು ತಿಳಿಸಿದ್ದಾರೆ. ಭಾರತ ಸೇರಿ ಜಗತ್ತಿನೆಲ್ಲೆಡೆ ಖ್ಯಾತಿ ಗಳಿಸಿರುವ ಎಂಡಿಎಚ್‌ನ ಮೂರು ಮಸಾಲಾ ಪದಾರ್ಥಗಳು ಹಾಗೂ ಎವರೆಸ್ಟ್‌ನ ಒಂದು ಮಸಾಲಾ ಪದಾರ್ಥದಲ್ಲಿ ಕ್ಯಾನ್ಸರ್‌ಗೆ ಕಾರಣವಾಗುವ ಕಾರ್ಸಿನೋಜೆನಿಕ್‌ ರಾಸಾಯನಿಕ ಇರುವ ಕಾರಣ ಹಾಂಕಾಂಗ್‌ ಆಹಾರ ನಿಯಂತ್ರಣ ಪ್ರಾಧಿಕಾರವು ನಾಲ್ಕೂ ಉತ್ಪನ್ನಗಳ ಮಾರಾಟವನ್ನು ಇತ್ತೀಚೆಗೆ ನಿಷೇಧಿಸಿತ್ತು. ಎಂಡಿಎಚ್‌ನ ಕರಿ ಪೌಡರ್‌, ಮಿಕ್ಸ್ಡ್‌ ಮಸಾಲಾ ಪೌಡರ್‌ ಹಾಗೂ ಸಾಂಬಾರ್‌ ಮಸಾಲಾ ಮತ್ತು ಎವರೆಸ್ಟ್‌ನ ಫಿಶ್‌ ಕರಿ ಮಸಾಲಾವನ್ನು ನಿಷೇಧಿತ ಉತ್ಪನ್ನಗಳು.

ವಿವಾದದ ಬಳಿಕ ಎವರೆಸ್ಟ್ ಸಂಸ್ಥೆ ಪ್ರತಿಕ್ರಿಯಿಸಿ, ʼʼತನ್ನ ಮಸಾಲೆಗಳು ಸೇವನೆಗೆ ಸುರಕ್ಷಿತʼʼ ಎಂದು ಹೇಳಿದೆ. ಆದರೆ ಎಂಡಿಎಚ್ ಇದುವರೆಗೆ ತನ್ನ ಉತ್ಪನ್ನಗಳ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಕಂಪನಿಗಳ ಉತ್ಪನ್ನಗಳನ್ನು ಅಮೆರಿಕ, ಯುರೋಪ್‌, ಇಂಗ್ಲೆಂಡ್‌ ಮತ್ತು ಮಧ್ಯಪ್ರಾಚ್ಯ ದೇಶಗಳಿಗೆ ರಫ್ತು ಮಾಡಲಾಗುತ್ತಿದೆ. ಇತ್ತ ಎಂಡಿಎಚ್ ಮತ್ತು ಎವರೆಸ್ಟ್ ಗ್ರೂಪ್‌ನ ಉತ್ಪನ್ನಗಳ ಗುಣಮಟ್ಟ ತಪಾಸಣೆಗೆ ಭಾರತೀಯ ಆಹಾರ ಸುರಕ್ಷತಾ ನಿಯಂತ್ರಕ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಸೋಮವಾರ ಆದೇಶ ಹೊರಡಿಸಿದೆ.

ʼʼಹಾಂಕಾಂಗ್ ಮತ್ತು ಸಿಂಗಾಪುರದ ಅಧಿಕಾರಿಗಳಿಂದ ಎಂಡಿಎಚ್ ಮತ್ತು ಎವರೆಸ್ಟ್ ಉತ್ಪನ್ನಗಳ ರಫ್ತು ಬಗ್ಗೆ ಮಾಹಿತಿ ಕೋರಲಾಗಿದೆ. ಗುಣಮಟ್ಟದ ಸಮಸ್ಯೆಗಳ ಮೂಲ ಕಾರಣವನ್ನು ಕಂಡುಹಿಡಿಯಲು ಕಂಪನಿಗಳೊಂದಿಗೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಭಾರತದ ಮಸಾಲೆ ಮಂಡಳಿ ಬುಧವಾರ ತಿಳಿಸಿದೆ.

ಇದನ್ನೂ ಓದಿ: Pesticide: ಎವರೆಸ್ಟ್‌ ಫಿಶ್‌ ಕರಿ ಮಸಾಲೆಯಲ್ಲಿ ಕೀಟನಾಶಕ; ಬ್ಯಾನ್‌ ಮಾಡಿದ ಸಿಂಗಾಪುರ

ಏನಿದು ವಿವಾದ?

ಕೆಲವು ದಿನಗಳ ಹಿಂದೆ ಭಾರತದ ಜನಪ್ರಿಯ ಉತ್ಪನ್ನವಾದ ಮಸಾಲೆ ತಯಾರಕ ಎವರೆಸ್ಟ್‌ನ ಫಿಶ್ ಕರಿ ಮಸಾಲಾವನ್ನು ಹಿಂಪಡೆಯಲು ಸಿಂಗಾಪುರ ಆದೇಶಿಸಿತ್ತು. ಇದರಲ್ಲಿ ಸುರಕ್ಷಿತ ಮಿತಿಯನ್ನು ಮೀರಿ ಕೀಟನಾಶಕ ಎಥಿಲೀನ್ ಆಕ್ಸೈಡ್ ಇದೆ ಎಂದು ಅದು ಆರೋಪಿಸಿತ್ತು. ಅನುಮತಿಸಲಾದ ಮಿತಿಯನ್ನು ಮೀರಿದ ಮಟ್ಟದಲ್ಲಿ ಫಿಶ್‌ ಕರಿ ಮಸಾಲಾದಲ್ಲಿ ಎಥಿಲೀನ್ ಆಕ್ಸೈಡ್ ಕೀಟನಾಶಕವಿದೆ. ಎಥಿಲೀನ್ ಆಕ್ಸೈಡ್ ಅನ್ನು ಆಹಾರದಲ್ಲಿ ಬಳಸಲು ಅನುಮತಿಸಲಾಗಿಲ್ಲ. ಕೃಷಿ ಉತ್ಪನ್ನಗಳ ಫ್ಯುಮಿಗೇಶನ್‌ ವೇಳೆ ಸೂಕ್ಷ್ಮಜೀವಿ ಮಾಲಿನ್ಯವನ್ನು ತಡೆಗಟ್ಟಲು ಮಾತ್ರ ಅದನ್ನು ಬಳಸಲಾಗುತ್ತದೆ ಎಂದು ಕಾರಣ ತಿಳಿಸಿತ್ತು. ಅದಾದ ಬಳಿಕ ಹಾಂಕಾಂಗ್‌ನಲ್ಲೂ ಎಂಡಿಎಚ್‌ ಹಾಗೂ ಎವರೆಸ್ಟ್‌ ಮಸಾಲಾ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿತ್ತು. ಹಾಗಾಗಿ ಜಾಗತಿಕವಾಗಿ ಭಾರತದ ಎರಡು ಮಸಾಲಾ ಬ್ರ್ಯಾಂಡ್‌ಗಳು ನಕಾರಾತ್ಮಕ ಕಾರಣಕ್ಕಾಗಿ ಸುದ್ದಿಯಾಗಿವೆ.

Continue Reading

ಕ್ರೈಂ

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

Medical Negligence: ಹಾವು ಕಡಿತದಿಂದ ಅಸ್ವಸ್ಥಗೊಂಡಿದ್ದ ಬಾಲಕನಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಬಾಲಕ ಮೃತಪಟ್ಟಿದ್ದು, ಆಸ್ಪತ್ರೆ ವಿರುದ್ಧ ಹೋರಾಡಿದ ತಂದೆಗೆ ಕೊನೆಗೂ ನ್ಯಾಯ ಸಿಕ್ಕಿದೆ. ದೆಹಲಿಯ ರಾಷ್ಟ್ರೀಯ ಗ್ರಾಹಕ ನ್ಯಾಯಾಲಯವು ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ 10 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದೆ.

VISTARANEWS.COM


on

By

Medical Negligence
Koo

ನವದೆಹಲಿ: ಹಾವು ಕಡಿತದಿಂದ (snake bite) 12 ವರ್ಷದ ಬಾಲಕ (boy) ಮೃತಪಟ್ಟ 16 ವರ್ಷಗಳ ಬಳಿಕ ಬಾಲಕನ ತಂದೆಗೆ ದೆಹಲಿಯ (delhi) ರಾಷ್ಟ್ರೀಯ ಗ್ರಾಹಕ ನ್ಯಾಯಾಲಯವು ವೈದ್ಯಕೀಯ ನಿರ್ಲಕ್ಷ್ಯಕ್ಕಾಗಿ (Medical Negligence) 10 ಲಕ್ಷ ರೂಪಾಯಿ ಪರಿಹಾರವನ್ನು ನೀಡುವಂತೆ ಮಹಾರಾಷ್ಟ್ರದ (maharstra) ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಗೆ (Mahatma Gandhi Mission Hospital) ಆದೇಶ ನೀಡಿದೆ.

ಹಾವು ಕಡಿತದಿಂದ ಅಸ್ವಸ್ಥನಾಗಿದ್ದ ಮಹಾರಾಷ್ಟ್ರದ ಪರಶುರಾಮ್ ಲ್ಯಾಂಡ್ಗೆ ಅವರ ಮಗ ದೇವಾನಂದ್ 2007ರ ಅಕ್ಟೋಬರ್ ನಲ್ಲಿ ಮಹಾತ್ಮ ಗಾಂಧಿ ಮಿಷನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ.

ಬಾಲಕನ ತಂದೆ ನೀಡಿದ ದೂರಿನ ಮೇರೆಗೆ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು (NCDRC) ಆಸ್ಪತ್ರೆಯ ನಿರ್ಲಕ್ಷ್ಯವನ್ನು ಪರಿಗಣಿಸಿ ಲ್ಯಾಂಡ್ಗೆ ಅವರಿಗೆ ಪರಿಹಾರವನ್ನು ಏಪ್ರಿಲ್ 24 ರಂದು ಘೋಷಿಸಿದೆ.

ಇದನ್ನೂ ಓದಿ: Assault Case : ಕುಡಿದ ನಶೆಯಲ್ಲಿ ಸ್ನೇಹಿತನಿಗೆ ಬೆಂಕಿ ಹಚ್ಚಿದ ಮಿತ್ರ ದ್ರೋಹಿಗಳು ಅರೆಸ್ಟ್‌

ಬಾಲಕನ ತಂದೆ ನೀಡಿರುವ ದೂರಿನ ಪ್ರಕಾರ ಆಸ್ಪತ್ರೆಯ ಡಾಕ್ಟರ್ ಶೀನು ಗುಪ್ತಾ ಅವರು ತಮ್ಮ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದು, ದೇವಾನಂದ್ ನನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದ್ದರು ಎಂದು ಹೇಳಲಾಗಿದೆ.

ಮಗನ ಸ್ಥಿತಿ ಗಂಭೀರವಾದ ಕಾರಣ ಚಿಕಿತ್ಸೆ ಮುಂದುವರೆಸುವಂತೆ ಲ್ಯಾಂಡ್​ಗೆ ಅವರು ವೈದ್ಯರಲ್ಲಿ ಮನವಿ ಮಾಡಿದ ಬಳಿಕ ವೈದ್ಯರು 500 ರೂ. ಮೌಲ್ಯದ ಚುಚ್ಚುಮದ್ದನ್ನು ಸೂಚಿಸಿದ್ದರು. ಅವರು ಪತ್ನಿಯ ಚಿನ್ನಾಭರಣಗಳನ್ನು ಗಿರವಿ ಇಟ್ಟು ಚುಚ್ಚುಮದ್ದು ಸೇರಿದಂತೆ ವೈದ್ಯರು ಸೂಚಿಸಿರುವ ಹಲವಾರು ದುಬಾರಿ ಔಷಧಗಳನ್ನು ಖರೀದಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಆಸ್ಪತ್ರೆಗೆ ಹಿಂದಿರುಗಿ ಕೂಡಲೇ ಮಗನಿಗೆ ಚಿಕಿತ್ಸೆ ನೀಡುವಂತೆ ವಿನಂತಿಸಿದರು. ಆದರೂ ವೈದ್ಯರು ಹೆಚ್ಚಿನ ಹಣವನ್ನು ಠೇವಣಿ ಮಾಡುವವರೆಗೂ ಚಿಕಿತ್ಸೆ ಪ್ರಾರಂಭಿಸಲು ನಿರಾಕರಿಸಿದರು. ಇದರಿಂದ ದೇವಾನಂದ್ ರಾತ್ರಿ 8.30ರ ವೇಳೆಗೆ ನಿಧನನಾಗಿದ್ದಾನೆ.

ದೂರು ದಾಖಲು

ಈ ಕುರಿತು 2017ರಲ್ಲಿ ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಲ್ಯಾಂಡ್ಗೆ ದೂರು ದಾಖಲಿಸಿದ್ದರು. ಆದರೆ, ಮೂರು ವರ್ಷಗಳ ಅನಂತರ ಮಹಾರಾಷ್ಟ್ರ ರಾಜ್ಯ ಗ್ರಾಹಕ ನ್ಯಾಯಾಲಯವು ವೈದ್ಯ ಗುಪ್ತಾ ಮತ್ತು ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ 10 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿತ್ತು. ಇದರಿಂದ ಅಸಮಾಧಾನಗೊಂಡ ಆಸ್ಪತ್ರೆಯು ಎನ್‌ಸಿಡಿಆರ್‌ಸಿಗೆ ತೆರಳಿ ರಾಜ್ಯ ಗ್ರಾಹಕ ನ್ಯಾಯಾಲಯದ ಆದೇಶವು “ಕಾನೂನು ಅರ್ಹತೆಗಿಂತ ಹೆಚ್ಚಾಗಿ ಸಹಾನುಭೂತಿಯ ಆಧಾರದ ಮೇಲಿದೆ ಎಂದು ಆರೋಪಿಸಿ ದೂರು ನೀಡಿತ್ತು.

ಮಗನನ್ನು ಆಸ್ಪತ್ರೆಗೆ ಕರೆತರುವಲ್ಲಿ ದೂರುದಾರರು ಸರಿಸುಮಾರು ಅರ್ಧ ಗಂಟೆ ವಿಳಂಬ ಮಾಡಿರುವುದನ್ನು ರಾಜ್ಯ ಆಯೋಗವು ನಿರ್ಲಕ್ಷಿಸಿದೆ ಎಂದು ಆಸ್ಪತ್ರೆಯು ವಾದಿಸಿತು.

ಮಧ್ಯಾಹ್ನ 1.40 ರ ಸುಮಾರಿಗೆ ಬಾಲಕ ಆಸ್ಪತ್ರೆಯಲ್ಲಿದ್ದರೂ ಮಗನಿಗೆ ಚಿಕಿತ್ಸೆ ನೀಡಲಿಲ್ಲ ಎಂಬುದು ಲ್ಯಾಂಡ್ಗೆ ವಾದಿಸಿದ್ದರು. ಇದಕ್ಕೆ ಪ್ರತಿಯಾಗಿ ಆಸ್ಪತ್ರೆಯು ರೋಗಿಯ ಸ್ಥಿತಿ ಗಂಭೀರವಾಗಿತ್ತು ಎಂದು ಹೇಳಿದೆ.

ಇದಕ್ಕೆ ಸಂಬಂಧಿಸಿದ ಸಾಕ್ಷಿಗಳನ್ನು ಪರಿಶೀಲಿಸಿದ ಬಳಿಕ ಆಸ್ಪತ್ರೆಯ ನಿರ್ಲಕ್ಷ್ಯಕ್ಕೆ ಬಲವಾದ ಪುರಾವೆಗಳು ದೊರೆತಿದೆ. ವೈದ್ಯಕೀಯ ಪೇಪರ್‌ಗಳನ್ನು ಪರೀಕ್ಷಿಸಿದಾಗ ವೈದ್ಯರು “ಸಕಾಲಿಕ ಚಿಕಿತ್ಸೆ” ನೀಡಲು ವಿಫಲವಾಗಿರುವುದು ತಿಳಿದು ಬಂದಿದೆ. ಇಷ್ಟು ಮಾತ್ರವಲ್ಲದೆ ಸಂಬಂಧವಿಲ್ಲದ ವ್ಯಕ್ತಿಯನ್ನು ಬಾಲಕನ ಅಜ್ಜ ಎಂದು ಹೇಳಿ ಹೆಚ್ಚಿನ ಅಪಾಯದ ಒಪ್ಪಿಗೆ ನಮೂನೆಗೆ ಸಹಿ ಹಾಕಿಸಲಾಗಿದೆ.

ಅಲ್ಲದೇ ಈ ಘಟನೆಯ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಗೆ ತಿಳಿಸಲು ಆಸ್ಪತ್ರೆ ವಿಫಲವಾಗಿರುವುದು ಮತ್ತೊಂದು ಲೋಪವಾಗಿದೆ ಎಂದು ನ್ಯಾಯಾಲಯ ತಿಳಿಸಿದ್ದು, ಆಸ್ಪತ್ರೆಗೆ ದಂಡ ವಿಧಿಸಿದೆ.

Continue Reading

ವೈರಲ್ ನ್ಯೂಸ್

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Viral News: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸ್ಥಳೀಯರು ತಕ್ಕ ಪಾಠ ಕಲಿಸಿದ್ದಾರೆ. ಮೊಬೈಲ್‌ ಅಂಗಡಿ ಇಟ್ಟುಕೊಂಡಿರುವ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ. ಈ ಬಗ್ಗೆ ಸಂತ್ರಸ್ತ ಅಪ್ರಾಪ್ತ ಬಾಲಕಿಯೊಬ್ಬರ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಇನ್ನು ಈತನ ವರ್ತನೆ ಬಗ್ಗೆ ಅನುಮಾನಗೊಂಡಿದ್ದ ಸ್ಥಳೀಯರು ಅಂಗಡಿಗೆ ದಾಳಿ ನಡೆಸಿ ಆತನಿಗೆ ಥಳಿಸಿದ್ದಾರೆ. ಸದ್ಯ ಘಟನೆಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Viral News
Koo

ಡೆಹ್ರಾಡೂನ್: ಒಂದಷ್ಟು ಜನರ ಗುಂಪು ಮೊಬೈಲ್‌ ಅಂಗಡಿಯಾತನನ್ನು ರಸ್ತೆಗೆಳೆದು ಸರಿಯಾಗಿ ಥಳಿಸುತ್ತಾರೆ. ಮಹಿಳೆಯರೂ ಆತನಿಗೆ ಧರ್ಮದೇಟು ನೀಡುತ್ತಾರೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಈ ಘಟನೆಯ ವಿಡಿಯೊ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಅಷ್ಟಕ್ಕೂ ಜನರ ಗುಂಪು ಯಾಕೆ ಮೊಬೈಲ್‌ ಅಂಗಡಿಯಾತನನ್ನು ಥಳಿಸಿದ್ದು? ಏನಿದು ಘಟನೆ? ನಿಮ್ಮ ಎಲ್ಲ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ (Viral News).

ಘಟನೆಯ ಹಿಂದೆ ಲವ್‌ ಜಿಹಾದ್‌ನ ಶಂಕೆ ವ್ಯಕ್ತವಾಗುತ್ತಿದೆ. ಹಲ್ಲೆಗೊಳಗಾದ ಮುಸ್ಲಿಂ ಯುವ ಲವ್‌ ಜಿಹಾದ್‌ಗೆ ಪ್ರಯತ್ನಿಸುತ್ತಿದ್ದ. ಅದನ್ನು ರೆಡ್‌ ಹ್ಯಾಂಡಾಗಿ ಹಿಡಿದ ಸ್ಥಳೀಯರು ಆತನಿಗೆ ತಕ್ಕ ಶಾಸ್ತಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ (ಏಪ್ರಿಲ್ 25) ಈ ಘಟನೆ ನಡೆದಿದೆ.

ಅನಿಲ್ ಶರ್ಮಾ ಎನ್ನುವವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ 1.39 ನಿಮಿಷಗಳ ಈ ವಿಡಿಯೊ ಹಂಚಿಕೊಂಡಿದ್ದಾರೆ. “ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಘಟನೆ ಇದು. ಹಿಂದೂಗಳು ಮುಸ್ಲಿಮರಿಗೆ ಅಂಗಡಿಗಳನ್ನು ಬಾಡಿಗೆಗೆ ನೀಡುತ್ತಾರೆ. ಬಳಿಕ ಮುಸ್ಲಿಮರು ಲವ್‌ ಜಿಹಾದ್‌ ಆರಂಭಿಸುತ್ತಾರೆ. ಇಲ್ಲೂ ಆಗಿದ್ದು ಅದೇ. ಮೊಬೈಲ್ ಅಂಗಡಿಯನ್ನು ನಡೆಸುತ್ತಿದ್ದ ಆರೋಪಿ ಅಥರುದ್ದೀನ್‌ ರೀಚಾರ್ಜ್‌ಗಾಗಿ ತನ್ನ ಬಳಿಗೆ ಬರುವ ಹಿಂದು ಹುಡುಗಿಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ” ಎಂದು ಅವರು ಬರೆದುಕೊಂಡಿದ್ದಾರೆ.

ಘಟನೆಯ ವಿವರ

ಈ ಪ್ರಕರಣವು ಹಲ್ದ್ವಾನಿಯ ಕೊಟ್ವಾಲಿಯಲ್ಲಿ ನಡೆದಿದೆ. ಅಲ್ಲಿ ವಾಸಿಸುವ ಮಹಿಳೆಯೊಬ್ಬರು ಏಪ್ರಿಲ್ 25ರಂದು ಪೊಲೀಸರಿಗೆ ದೂರು ನೀಡಿದ್ದು, ತನ್ನ 17 ವರ್ಷದ ಮಗಳು ಕೆಲವು ದಿನಗಳ ಹಿಂದೆ ಮೊಬೈಲ್ ಫೋನ್ ರೀಚಾರ್ಜ್ ಮಾಡಲು ಅಥರುದ್ದೀನ್‌ನ ‘ದೆಹಲಿ ಮೊಬೈಲ್ ಶಾಪ್’ ತೆರಳಿದ್ದಳು. ಬಳಿಕ ಆತ ಮಗಳ ಮೊಬೈಲ್‌ಗೆ ಅಶ್ಲೀಲ ಮೆಸೇಜ್‌ ಕಳುಹಿಸಲು ಆರಂಭಿಸಿದ್ದ ಎಂದು ಆರೋಪಿಸಿದ್ದರು. ಜತೆಗೆ ಮೆಸೇಜ್‌ನ ಸ್ಕ್ರೀನ್‌ ಶಾಟ್‌ ಒದಗಿಸಿದ್ದರು.

ಅಪ್ರಾಪ್ತ ಬಾಲಕಿ ಸಂದೇಶಗಳಲ್ಲಿ ಅಥರುದ್ದೀನ್‌ನನ್ನು ಪದೇ ಪದೆ ‘ಸಹೋದರ’ ಎಂದೇ ಕರೆದಿರುವುದು ಕಂಡು ಬಂದಿದೆ. ಆದಾಗ್ಯೂ ಅವನು ಆಕೆ ಸಹೋದರ ಎಂದು ಕರೆಯುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ. ಮಾತ್ರವಲ್ಲ ತನ್ನೊಂದಿಗೆ ಸ್ನೇಹ ಬೆಳೆಸಲು ಒತ್ತಾಯಿಸಿದ್ದ. ತನ್ನ ಕನಸಿನಲ್ಲಿ ನಿನ್ನನ್ನು ನೋಡಿದ್ದೇನೆ ಎಂದೂ ಪೂಸಿ ಹೊಡೆದಿದ್ದ. ತನ್ನನ್ನು ಸಿಖ್ ಎಂದು ಉಲ್ಲೇಖಿಸುವ ಮೂಲಕ ಅಪ್ರಾಪ್ತ ಬಾಲಕಿಯನ್ನು ಮೋಸಗೊಳಿಸಲು ಪ್ರಯತ್ನಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಇಲ್ಲಿಗೇ ಮುಗಿದಿಲ್ಲ

ಅಥರುದ್ದೀನ್‌ ಕಿರುಕುಳ ಅಲ್ಲಿಗೆ ನಿಂತಿರಲಿಲ್ಲ. ಆತ ಅವಳನ್ನು ಕಾಲೇಜು ನಿಲ್ದಾಣದವರೆಗೂ ಹಿಂಬಾಲಿಸಿದ್ದ. ಜತೆಗೆ ದಾರಿಯಲ್ಲಿ ಅವಳ ಕೈಯನ್ನು ಹಿಡಿಯಲು ಪ್ರಯತ್ನಿಸಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆತನ ಕಿರುಕುಳದಿಂದ ಮಗಳು ಭಯಗೊಂಡಿದ್ದಾಳೆ ಮತ್ತು ಮಾನಸಿಕ ಖಿನ್ನತೆಗೆ ಜಾರಿದ್ದಾಳೆ. ಸರಿಯಾಗಿ ಊಟವನ್ನೂ ಮಾಡುತ್ತಿಲ್ಲ ಎಂದು ಮಹಿಳೆ ಬಹಿರಂಗಪಡಿಸಿದ್ದಾರೆ. ದೂರಿನಲ್ಲಿ ಮುಸ್ಲಿಂ ಯುವಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸದ್ಯ ಪೊಲೀಸರು ಅಥರುದ್ದೀನ್‌ನನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ಆರಂಭವಾಗಿದೆ.

ಇದನ್ನೂ ಓದಿ: Love jihad? : ಮೆಸೇಜ್‌ನಲ್ಲೇ ಹಿಂದು ಯುವತಿಯರನ್ನು ಸೆಳೆಯುತ್ತಿದ್ದ ಖದೀಮ ಫಯಾಜ್‌ಗೆ ಗೂಸಾ!

ಇತರರೊಂದಿಗೂ ಇದೇ ವರ್ತನೆ

ಘಟನೆ ಬಗ್ಗೆ ಬಜರಂಗ ದಳದ ಕಾರ್ಯಕರ್ತ ಜೋಗಿಂದರ್‌ ಸಿಂಗ್‌ ರಾಣಾ ಹೆಚ್ಚಿನ ಮಾಹಿತಿ ನೀಡಿದ್ದಾರೆ. ʼʼಆರೋಪಿ ಅಥರುದ್ದೀನ್‌ ಹಲ್ದ್ವಾನಿಯ ಮಖಾನಿ ರಸ್ತೆಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದಾನೆ. ಈತ ಸಂತ್ರಸ್ತೆಗಿಂತ 10 ವರ್ಷ ಹಿರಿಯವನು. ತನ್ನ ತಂಗಿಯ ವಯಸ್ಸಿನ ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ್ದಾನೆʼʼ ಎಂದು ಹೇಳಿದ್ದಾರೆ. ʼʼಅಲ್ಲದೆ ಅಂಗಡಿ ನಡೆಸಲು ಆತನ ಬಳಿ ಸೂಕ್ತ ದಾಖಲೆಗಳೇ ಇಲ್ಲ. ಅಲ್ಲದೆ ಆತನ ಮೊಬೈಲ್‌ನಲ್ಲಿ ಇನ್ನೂ ಅನೇಕ ಹಿಂದೂ ಹುಡುಗಿಯರ ಸಂಖ್ಯೆಗಳು ಕಂಡು ಬಂದಿವೆ. ಅವರೊಂದಿಗೆ ಅಶ್ಲೀಲವಾಗಿ ಚಾಟ್‌ ನಡೆಸಿರುವುದು ಕೂಡ ತಿಳಿದು ಬಂದಿದೆʼʼ ಎಂದು ಜೋಗಿಂದರ್‌ ಸಿಂಗ್‌ ರಾಣಾ ಹೇಳಿದ್ದಾರೆ.

Continue Reading

ಕ್ರೈಂ

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Gold Seized: ದುಬೈನಿಂದ ಆಗಮಿಸಿದ ಪ್ರಯಾಣಿಕನಿಂದ ಸುಮಾರು 70 ಲಕ್ಷ ರೂ. ಮೌಲ್ಯದ ಚಿನ್ನವನ್ನು ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಏರ್ ಇಂಟೆಲಿಜೆನ್ಸ್ ಯೂನಿಟ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Gold Seized
Koo

ತಿರುಚಿರಾಪಳ್ಳಿ: ದುಬೈ ನಿಂದ (dubai) ಆಗಮಿಸಿದ ಪ್ರಯಾಣಿಕನೊಬ್ಬ ಗುದನಾಳದಲ್ಲಿ (Rectum) ಬಚ್ಚಿಟ್ಟುಕೊಂಡು ತಂದಿದ್ದ 24 ಕ್ಯಾರೆಟ್ ನ ಒಟ್ಟು 997 ಗ್ರಾಂ ಚಿನ್ನವನ್ನು (Gold Seized) ಶನಿವಾರ ಏರ್ ಇಂಟೆಲಿಜೆನ್ಸ್ ಯೂನಿಟ್ (AIU) ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ 70.58 ಲಕ್ಷ ರೂ. ಗಳಾಗಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ (Air India Express) ದುಬೈನಿಂದ ತಿರುಚ್ಚಿಗೆ (Trichy) ಆಗಮಿಸಿದ ಪ್ರಯಾಣಿಕ ಗುದನಾಳದಲ್ಲಿ ಮೂರು ಪ್ಯಾಕೆಟ್‌ಗಳಲ್ಲಿ ಚಿನ್ನವನ್ನು 1081 ಗ್ರಾಂ ಪೇಸ್ಟ್‌ ಮಾಡಿ ಬಚ್ಚಿಟ್ಟು ತಂದಿದ್ದು, ಆತನನ್ನು ಏರ್ ಇಂಟೆಲಿಜೆನ್ಸ್ ಯೂನಿಟ್ ನ ಅಧಿಕಾರಿಗಳು ವಶಕ್ಕೆ ಪಡೆದಿದ್ದರೆ. ಈ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.


ಚೆನ್ನೈ ನಲ್ಲಿ 1.25 ಕೆಜಿ ಚಿನ್ನ ವಶ

ಮತ್ತೊಂದು ಘಟನೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಅಂತಾರಾಷ್ಟ್ರೀಯ ಟರ್ಮಿನಲ್‌ನ ಆಗಮನದ ಲಾಂಜ್‌ನಲ್ಲಿರುವ ಶೌಚಾಲಯದಲ್ಲಿ 85 ಲಕ್ಷ ರೂಪಾಯಿ ಮೌಲ್ಯದ 1.25 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Murder Case : ದೊಡ್ಡವರ ಹಣಕಾಸು ವಿಷ್ಯಕ್ಕೆ 3 ವರ್ಷದ ಮಗು ಬಲಿ; ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ರೆಸ್ಟ್ ರೂಂನಲ್ಲಿ ಕಸದ ತೊಟ್ಟಿಯಲ್ಲಿ ಪ್ಯಾಕೇಜ್ ಇರುವುದನ್ನು ಗಮನಿಸಿದ ಸ್ವಚ್ಛತಾ ಸಿಬ್ಬಂದಿ ಸಿಐಎಸ್ಎಫ್ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಯಾವುದೇ ಸ್ಫೋಟಕ ವಸ್ತು ಇರಬಹುದೆಂದು ಪಾರ್ಸೆಲ್ ಅನ್ನು ಸ್ಕ್ಯಾನ್ ಮಾಡಲಾಗಿದೆ. ಸಿಐಎಸ್ಎಫ್ ಸಿಬ್ಬಂದಿ ಒಳಗೆ ಅಡಗಿಸಿಟ್ಟ ಚಿನ್ನವನ್ನು ಪತ್ತೆ ಹಚ್ಚಿ ಅನಂತರ ಹೆಚ್ಚುವರಿ ತನಿಖೆಗಾಗಿ ಕಸ್ಟಮ್ಸ್ ಅಧಿಕಾರಿಗಳಿಗೆ ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಪ್ರಯಾಣಿಕನೊಬ್ಬ ಮುಖ ಮುಚ್ಚಿಕೊಂಡು ಪಾರ್ಸೆಲ್ ಅನ್ನು ಡಸ್ಟ್‌ಬಿನ್‌ನಲ್ಲಿ ಹಾಕಿರುವುದನ್ನು ತೋರಿಸಿದೆ.

ಈ ವರ್ಷದ ಮಾರ್ಚ್‌ನಲ್ಲಿ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಎಐಯು ಅಧಿಕಾರಿಗಳು 410 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದರು.

ಸಿಂಗಾಪುರದಿಂದ ಬಂದಿದ್ದ ಪ್ರಯಾಣಿಕರೊಬ್ಬರಿಂದ 26.62 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದರು. 24 ಕ್ಯಾರೆಟ್ ನ ಈ ಚಿನ್ನವು 330 ಗ್ರಾಂ ಆಗಿತ್ತು. ಪೇಸ್ಟ್ ರೂಪದಲ್ಲಿ ತರಲಾಗಿತ್ತು. 22 ಸಾವಿರ ಮೌಲ್ಯದ 80 ಗ್ರಾಂ ಚಿನ್ನವನ್ನು ಸಿಂಗಾಪುರದಿಂದ ತಿರುಚ್ಚಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕನೊಬ್ಬ ಬಟ್ಟೆಯೊಳಗೆ ಬಚ್ಚಿಟ್ಟುಕೊಂಡು ತಂದಿದ್ದ.

ತಮಿಳುನಾಡಿನ ವಾಹನದಲ್ಲಿ ಬರುತ್ತಿದ್ದ ಚಿನ್ನಾಭರಣ ವಶಕ್ಕೆ

ಇತ್ತೀಚೆಗಷ್ಟೇ ಬೆಂಗಳೂರು ನಗರದಲ್ಲಿ ಭಾರಿ ಮೊತ್ತದ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿತ್ತು. 7.999 ಕೆ.ಜಿ. ಚಿನ್ನಾಭರಣ ಹಾಗು 46.700 ಕೆಜಿ ಬೆಳ್ಳಿ ಸೇರಿ ಸುಮಾರು ಐದು ಕೋಟಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳನ್ನು ಬೆಂಗಳೂರಿನ ವಿವೇಕ್​ ನಗರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಸೀಝ್​ ಮಾಡಲಾಗಿತ್ತು.

ವಿವೇಕ್ ​ನಗರದ ಗಾಂಧಿ ಪ್ರತಿಮೆ ಬಳಿ ಇರುವ ಚೆಕ್​ ಪೋಸ್ಟ್​ ಬಳಿ ಚುನಾವಣಾ ಅಧಿಕಾರಿಗಳು ವಾಹನ ಪರಿಶೀಲನೆ ನಡೆಸುತ್ತಿದ್ದ ವೇಳೆ ತಮಿಳುನಾಡು ಮೂಲದ ಈಶರ್​ ವಾಹನದಲ್ಲಿ ಚಿನ್ನಾಭರಣ ಸಿಕ್ಕಿತ್ತು.

ಒಂದೇ ಒಂದು ಪತ್ರವನ್ನು ಹಿಡಿದಿದ್ದ ಮೂವರು ವ್ಯಕ್ತಿಗಳು, ಗಾಡಿಯಲ್ಲಿ ಚಿನ್ನಾಭರಣವಿದ್ದು ಅದನ್ನು ನಗರದ ವಿವಿಧೆಡೆ ವಿತರಿಸಲು ಹೋಗುತ್ತಿರುವುದಾಗಿ ವಿಚಾರಣೆ ವೇಳೆ ಹೇಳಿದ್ದರು.

ತಮಿಳುನಾಡಿನ ಉದ್ಯಮಿಯೊಬ್ಬನ ಸೂಚನೆಯ ಮೇರೆಗೆ ಹಾಗೂ ಆತ ಕೊಟ್ಟ ಫೋನ್​ ನಂಬರ್​ನಲ್ಲಿರುವ ವ್ಯಕ್ತಿಯನ್ನು ಸಂಪರ್ಕ​​ ಮಾಡಿ ಚಿನ್ನಾಭರಣ ತಲುಪಿಸಲು ಅವರು ಬಂದಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಿವೇಕ್ ​ನಗರ ಪೊಲೀಸರು ವಶಕ್ಕೆ ಪಡೆದಿದ್ದರು.

Continue Reading
Advertisement
virat kohli
ಪ್ರಮುಖ ಸುದ್ದಿ21 mins ago

Virat Kohli : ಅಭ್ಯಾಸದ ಮಧ್ಯೆ ಮೊಬೈಲ್​ನಲ್ಲೇ ಡೆಲ್ಲಿ ವರ್ಸಸ್​​ ಮುಂಬೈ ಮ್ಯಾಚ್ ನೋಡಿದ ಕೊಹ್ಲಿ

MDH, Everest Spices
ವಿದೇಶ29 mins ago

MDH, Everest Spices: ಎವರೆಸ್ಟ್‌, ಎಂಡಿಎಚ್‌ ಮಸಾಲೆ ಪೌಡರ್‌ಗಳ ಮಾಹಿತಿ ಸಂಗ್ರಹಕ್ಕೆ ಮುಂದಾದ ಅಮೆರಿಕ

Zameer Ahmed Khan‌
ಕರ್ನಾಟಕ37 mins ago

Zameer Ahmed Khan‌: ಸಚಿವ ಜಮೀರ್ ಅಹ್ಮದ್ ರೋಷಾವೇಶದ ಭಾಷಣಕ್ಕೆ ಗಾಜು ಪೀಸ್‌ ಪೀಸ್; ಇಲ್ಲಿದೆ ವಿಡಿಯೊ

Medical Negligence
ಕ್ರೈಂ51 mins ago

Medical Negligence: ಆಸ್ಪತ್ರೆ ನಿರ್ಲಕ್ಷ್ಯದಿಂದ ಬಾಲಕ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಕೋರ್ಟ್​​

IPL 2024
ಕ್ರೀಡೆ1 hour ago

IPL 2024 : ದೊಡ್ಡ ಮೊತ್ತದ ಪಂದ್ಯದಲ್ಲಿ ಮುಂಬೈ ವಿರುದ್ಧ ಡೆಲ್ಲಿಗೆ 10 ರನ್ ಜಯ

Viral News
ವೈರಲ್ ನ್ಯೂಸ್1 hour ago

Viral News: ಅಪ್ರಾಪ್ತ ಹಿಂದು ಹುಡುಗಿಗೆ ಅಶ್ಲೀಲ ಮೆಸೇಜ್‌ ಕಳುಹಿಸುತ್ತಿದ್ದ ಮುಸ್ಲಿಂ ಯುವಕನಿಗೆ ಬಿತ್ತು ಗೂಸಾ

Assault Case
ಕರ್ನಾಟಕ1 hour ago

Assault Case: ಬೆಂಗಳೂರಲ್ಲಿ ಟೀ ಶಾಪ್ ಯುವಕನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಯುವಕರು

Srinivasa Prasad
ಕರ್ನಾಟಕ1 hour ago

Srinivasa Prasad: ಸಂಸದ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ತೆರಳಿದ ಸಿಎಂ

Gold Seized
ಕ್ರೈಂ2 hours ago

Gold Seized: ದುಬೈನಿಂದ ಬಂದ ಪ್ರಯಾಣಿಕನ ಗುದದ್ವಾರದಲ್ಲಿತ್ತು 70 ಲಕ್ಷ ಮೌಲ್ಯದ ಚಿನ್ನ!

Virat Kohli
ಪ್ರಮುಖ ಸುದ್ದಿ2 hours ago

IPL 2024 : ಅಹಮದಾಬಾದ್​ನಲ್ಲಿ ಕೊಹ್ಲಿಗೆ ಭರ್ಜರಿ ಸ್ವಾಗತ; ವಿಡಿಯೊ ಇದೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok sabha election 2024
Lok Sabha Election 20245 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ9 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ16 hours ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ1 day ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20241 day ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20241 day ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ2 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

Neha Murder Case
ಹುಬ್ಬಳ್ಳಿ2 days ago

Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

Neha Murder case CID Officer
ಹುಬ್ಬಳ್ಳಿ2 days ago

Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

ಟ್ರೆಂಡಿಂಗ್‌