Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ - Vistara News

ದೇಶ

Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

ಪ್ರಧಾನಿ ಮೋದಿ ತಮ್ಮ ಡಿಜಿಟಲ್ ಸರ್ಕಾರದ ನೀತಿಗಳ ಮೂಲಕ 80 ಕೋಟಿ ಜನರನ್ನು ಬಡತನದಿಂದ ಮತ್ತು 25 ಕೋಟಿ ಜನರನ್ನು ಬಹು ಬಡತನದಿಂದ ಹೊರಬರಲು ಸಹಾಯ ಮಾಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸಾಕಷ್ಟು ಪರಿವರ್ತನೆಯಾಗಿದೆ. ವಿಶ್ವ ಸಂಸ್ಥೆಯ ಜನರಲ್‌ ಅಸೆಂಬ್ಲಿ ಅಧ್ಯಕ್ಷರೇ ಈ ಬಗ್ಗೆ ಮೋದಿ ಆಡಳಿತಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಕೇಂದ್ರ ಮಾಜಿ ಸಚಿವ ರಾಜೀವ್ ಚಂದ್ರಶೇಖರ್ (Rajeev Chandrasekhar) ಪ್ರಸ್ತಾಪಿಸಿದ್ದಾರೆ.

VISTARANEWS.COM


on

Rajeev Chandrasekhar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಳೆದ ಹತ್ತು ವರ್ಷಗಳಲ್ಲಿ ಭಾರತದ 80 ಕೋಟಿ ಜನರು ಬಡತನದಿಂದ (poverty) ಹೊರಬಂದಿದ್ದು, ಇದಕ್ಕಾಗಿ ವಿಶ್ವಸಂಸ್ಥೆ ಜನರಲ್‌ ಅಸೆಂಬ್ಲಿ (ಯುಎನ್‌ಜಿಎ) ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ (UNGA president Dennis Francis) ಅವರು ಭಾರತವನ್ನು ಶ್ಲಾಘಿಸಿರುವುದನ್ನು ಪ್ರಸ್ತಾಪಿಸಿರುವ ಬಿಜೆಪಿ ನಾಯಕ (bjp leader) ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ( Rajeev Chandrasekhar), ಭಾರತದಲ್ಲಿ ನಡೆದಿರುವ ಪರಿವರ್ತನೆಗೆ ಇದು ಸಾಕ್ಷಿ ಎಂದಿದ್ದಾರೆ.

ಪ್ರಧಾನಿ ಮೋದಿ ತಮ್ಮ ಡಿಜಿಟಲ್ ಸರ್ಕಾರದ ನೀತಿಗಳ ಮೂಲಕ 80 ಕೋಟಿ ಜನರು ಬಡತನದಿಂದ ಮತ್ತು 25 ಕೋಟಿ ಜನರಿಗೆ ಬಹು ಬಡತನದಿಂದ ಹೊರಬರಲು ಸಹಾಯ ಮಾಡಿದ್ದಾರೆ ಎಂದು ರಾಜೀವ್‌ ಚಂದ್ರಶೇಖರ್‌ ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ಭಾರತದಲ್ಲಿ ಸಾಕಷ್ಟು ಪರಿವರ್ತನೆಯಾಗಿದೆ. ಎಂದ ಅವರು, ಪ್ರತಿ ದೇಶವು ತಮ್ಮ ಬಡವರನ್ನು ಮುನ್ನಡೆಸಲು ಈ ರೀತಿಯ ನೀತಿಗಳನ್ನು ರೂಪಿಸಬೇಕು ಎಂದು ಹೇಳಿದರು.


ತಂತ್ರಜ್ಞಾನ ಮತ್ತು ಮೊಬೈಲ್ ಫೋನ್‌ಗಳಿಂದ 80 ಕೋಟಿ ಜನರ ಜೀವನದಲ್ಲಿ ಈ ಬದಲಾವಣೆಯಾಗಿದೆ. 2014ರ ಮೊದಲು ವಿಶ್ವದ ಮುಂದೆ ಭಾರತ ಸರ್ಕಾರದ ನಿರೂಪಣೆಯೆಂದರೆ ಸರ್ಕಾರವು ಅತ್ಯಂತ ನಿಷ್ಕ್ರಿಯವಾಗಿದೆ, ಸರ್ಕಾರಿ ವ್ಯವಸ್ಥೆಯು ತುಂಬಾ ಸೋರಿಕೆ ಮತ್ತು ಭ್ರಷ್ಟವಾಗಿದೆ ಎಂದಾಗಿತ್ತು. ಭಾರತದಲ್ಲಿ ಬ್ಯಾಂಕಿಂಗ್ ಸೇರ್ಪಡೆ ಕೇವಲ ಶ್ರೀಮಂತ ಮತ್ತು ಮಧ್ಯಮ ವರ್ಗದವರಿಗೆ ಆಗಿತ್ತು. ಬಡವರಿಗೆ ಬ್ಯಾಂಕಿಂಗ್ ವ್ಯವಸ್ಥೆ ಸಂಪರ್ಕ ಕಡಿತವಾಗಿತ್ತು ಎಂದು ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

2014ರ ಮೊದಲು ಕೇವಲ 17 ಕೋಟಿ ಜನರಿಗೆ ಇಂಟರ್ನೆಟ್ ಸಂಪರ್ಕ ಲಭ್ಯವಿತ್ತು. 2014ರ ಅನಂತರ ಪ್ರಧಾನಿ ಮೋದಿ ಈ 17 ಕೋಟಿ ಇಂಟರ್ನೆಟ್ ಸಂಪರ್ಕವನ್ನು 10 ವರ್ಷಗಳಲ್ಲಿ 90 ಕೋಟಿಗೆ ಪರಿವರ್ತಿಸಿದರು. 14 ಕೋಟಿ ಜನರು ಮಾತ್ರ ಬ್ಯಾಂಕ್ ಖಾತೆ ಹೊಂದಿದ್ದರು, ಇಂದು 52 ಕೋಟಿ ಜನರು ಬ್ಯಾಂಕ್ ಖಾತೆ ಹೊಂದಿದ್ದಾರೆ. ಇವೆಲ್ಲವನ್ನೂ ಒಟ್ಟುಗೂಡಿಸಿ 25 ಕೋಟಿ ಜನರು ಬಹುಆಯಾಮದ ಬಡತನದಿಂದ ಹೊರಬಂದಿದ್ದಾರೆ. ಕೋವಿಡ್ ಸಮಯದಲ್ಲಿ 80 ಕೋಟಿ ಜನರಿಗೆ ಪಡಿತರವನ್ನು ಒದಗಿಸಲಾಗಿದೆ. 200 ಕೋಟಿ ಜನರಿಗೆ ವ್ಯಾಕ್ಸಿನೇಷನ್ ಅನ್ನು ತಂತ್ರಜ್ಞಾನದ ಸಹಾಯದಿಂದ ನಿರ್ವಹಿಸಲಾಗಿದೆ ಎಂದು ರಾಜೀವ್‌ ವಿವರಿಸಿದ್ದಾರೆ.

ಇತರ ದೇಶಗಳು ಸಹ ಭಾರತದ ಹೆಜ್ಜೆಗಳನ್ನು ಅನುಸರಿಸಬೇಕು ಎಂದು ಬ್ರಿಟನ್‌ ಮಾಜಿ ಪ್ರಧಾನಿ ಟೋನಿ ಬ್ಲೇರ್ ಹೇಳಿದ್ದರು. ಹತ್ತು ವರ್ಷಗಳಲ್ಲಿ ಏನಾಯಿತು ಎಂದು ನಮ್ಮ ವಿರೋಧ ಪಕ್ಷಗಳು ಕೇಳುತ್ತವೆ. ಆದರೆ ಪ್ರಧಾನಿ ಮೋದಿ ಬಡವರು ಮತ್ತು ರೈತರಿಗಾಗಿ ಏನು ಮಾಡಿದ್ದಾರೆ ಎಂಬುದು ಜಗತ್ತಿಗೆ ತಿಳಿದಿದೆ, ನಮಗೂ ತಿಳಿದಿದೆ. ತಂತ್ರಜ್ಞಾನವನ್ನು ಬಳಸಿಕೊಂಡು ಅವರನ್ನು ಸಬಲೀಕರಣಗೊಳಿಸಲಾಗಿದೆ. ಜಗತ್ತು ಅದನ್ನು ಒಪ್ಪಿಕೊಳ್ಳುತ್ತದೆ ಎಂದಿದ್ದಾರೆ ರಾಜೀವ್‌ ಚಂದ್ರಶೇಖರ್‌.

ಇದನ್ನೂ ಓದಿ: Pralhad Joshi: ಪ್ರಸಕ್ತ ಸಕ್ಕರೆ ಋತುವಿನಲ್ಲಿ 1 ಲಕ್ಷ ಕೋಟಿ ರೂ. ರೈತರ ಬಾಕಿ ಪಾವತಿ

ಕ್ಷಿಪ್ರ ಅಭಿವೃದ್ಧಿಗಾಗಿ ಡಿಜಿಟಲೀಕರಣದ ಬಳಕೆಯನ್ನು ಒತ್ತಿಹೇಳುತ್ತಾ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 78ನೇ ಅಧಿವೇಶನದ ಅಧ್ಯಕ್ಷ ಡೆನ್ನಿಸ್ ಫ್ರಾನ್ಸಿಸ್ ಅವರು ಕಳೆದ 5-6 ವರ್ಷಗಳಲ್ಲಿ 800 ಮಿಲಿಯನ್ ಜನರನ್ನು ಬಡತನದಿಂದ ಮೇಲಕ್ಕೆತ್ತಿರುವ ಭಾರತದ ಕ್ರಮವನ್ನು ಶ್ಲಾಘಿಸಿದ್ದರು. ಭಾರತದ ಗ್ರಾಮೀಣ ಪ್ರದೇಶದ ಜನರ ಕೇವಲ ಸ್ಮಾರ್ಟ್‌ಫೋನ್ ಸ್ಪರ್ಶದಿಂದ ಹೇಗೆ ಪಾವತಿಗಳನ್ನು ಮತ್ತು ಬಿಲ್‌ಗಳನ್ನು ಸುಲಭವಾಗಿ ಪಾವತಿಸುತ್ತಿದ್ದಾರೆ ಎಂಬುದನ್ನು ಅವರು ತಿಳಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: 144 ಸೈನಿಕರು 31 ಗಂಟೆಯೊಳಗೆ 190 ಅಡಿ ಉದ್ದದ ಸೇತುವೆ ನಿರ್ಮಿಸಿದ್ದು ಹೇಗೆ?

ಭೂಕುಸಿತವಾಗಿರುವ ವಯನಾಡಿನ (Wayanad Landslide) ಚೂರಲ್ಮಲಾದಿಂದ ಮುಂಡಕ್ಕೈ ಗೆ ಸಂಪರ್ಕ ಕಲ್ಪಿಸಲು ಭಾರತೀಯ ಸೈನಿಕರು 31 ಗಂಟೆಗಳಲ್ಲಿ ಅದ್ಭುತ ಸೇತುವೆಯನ್ನು ನಿರ್ಮಿಸಿದ್ದಾರೆ. 190 ಅಡಿ ಉದ್ದದ ಸೇತುವೆ ನಿರ್ಮಾಣ ಕಾರ್ಯ ಸುಲಭವಾಗಿರಲಿಲ್ಲ. ಆದರೂ ನಮ್ಮ ಸೈನಿಕರು ಸೀಮಿತ ಅವಧಿಯಲ್ಲಿ ಅದನ್ನು ನಿರ್ಮಿಸಿದ್ದಾರೆ. ಇದರ ಕಾರ್ಯಾಚರಣೆ ಹೇಗಿತ್ತು ಗೊತ್ತೇ? ಅಂದ ಹಾಗೆ, ಈ ಸೇತುವೆಗೆ ಬೆಂಗಳೂರಿನ ನಂಟೂ ಇದೆ.

VISTARANEWS.COM


on

By

Wayanad Landslide
Koo

ವಯನಾಡು: ಪ್ರವಾಹ ಪೀಡಿತ ವಯನಾಡಿನಲ್ಲಿ (Wayanad Landslide) ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತೀಯ ಸೇನೆ (Indian army) 31 ಗಂಟೆಗಳ ಅವಧಿಯಲ್ಲಿ ಯಾವುದೇ ವಿರಾಮವಿಲ್ಲದೆ 190 ಅಡಿ ಉದ್ದದ ಸೇತುವೆಯನ್ನು (Bailey bridge) ನಿರ್ಮಿಸಿ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ವಯನಾಡಿನ ಕುಗ್ರಾಮವಾದ ಚೂರಲ್ಮಲಾ ಮತ್ತು ಮುಂಡಕ್ಕೈ ಭೂಕುಸಿತದಿಂದಾಗಿ ಧ್ವಂಸಗೊಂಡಿದ್ದು, ಇಲ್ಲಿ ಫ್ಯಾಬ್ರಿಕೇಟೆಡ್ ಟ್ರಸ್ ಬೈಲಿ ಸೇತುವೆಯನ್ನು ನಿರ್ಮಿಸಲಾಗಿದೆ.

ಬೆಟ್ಟಗಳಿಂದ ಪ್ರಬಲ ಬಂಡೆಗಳು ಉರುಳಿ ಬಿದ್ದ ಪರಿಣಾಮ ಇಲ್ಲಿದ್ದ 100 ಅಡಿ ಉದ್ದದ ಕಾಂಕ್ರೀಟ್ ಸೇತುವೆ ಸಂಪೂರ್ಣ ಧ್ವಂಸಗೊಂಡಿದೆ. ನಿರ್ಮಾಣಗೊಂಡ ಹೊಸ ಸೇತುವೆ ಮೇಲೆ ಸೈನ್ಯವು ಮೊದಲು ಆಂಬ್ಯುಲೆನ್ಸ್ ಅನ್ನು ಹಾದುಹೋಗಲು ಅವಕಾಶ ಮಾಡಿಕೊಟ್ಟಿತು. ಬಳಿಕ ಮಿಲಿಟರಿ ಸೇವೆಯನ್ನು ಒದಗಿಸಲು ಕಳುಹಿಸಿತ್ತು.

3 ಮೀಟರ್ ಅಗಲದ ಸೇತುವೆಯ ಸಾಮರ್ಥ್ಯವನ್ನು 24 ಟನ್‌ಗಳನ್ನು ಹೊತ್ತೊಯ್ಯಬಲ್ಲ ಟ್ರಕ್ ಮೂಲಕ ಪರೀಕ್ಷೆ ನಡೆಸಲಾಯಿತು. ಈ ಸೇತುವೆ ನಿರ್ಮಾಣದಿಂದ ಮುಂಡಕ್ಕೈನಲ್ಲಿ ಶೋಧ ಕಾರ್ಯಾಚರಣೆಯನ್ನು ಚುರುಕುಗೊಳಿಸಬಹುದು ಎಂದು ಕರ್ನಾಟಕ ಮತ್ತು ಕೇರಳ ಉಪ ಪ್ರದೇಶ ಕಮಾಂಡಿಂಗ್ ಅಧಿಕಾರಿ ಮೇಜರ್ ಜನರಲ್ ವಿ.ಟಿ. ಮ್ಯಾಥ್ಯೂ ತಿಳಿಸಿದ್ದಾರೆ.

Wayanad Landslide
Wayanad Landslide


ಸೇತುವೆಯ ಅಗಲವು ಮಣ್ಣು ತೆಗೆಯುವ ಯಂತ್ರ, ಅಗೆಯುವ ಯಂತ್ರಗಳು, ಆಂಬ್ಯುಲೆನ್ಸ್‌ ಮತ್ತು ಜೀಪ್‌, ಟ್ರಕ್‌ಗಳು ಸಾಗಲು ಸಾಕಷ್ಟು ಉತ್ತಮವಾಗಿದೆ. ಮುಂಡಕೈಗೆ ಇಲ್ಲಿಯವರೆಗೆ ಕೇವಲ ಟೀ ಎಸ್ಟೇಟ್‌ನಲ್ಲಿದ್ದ ಆಫ್ ರೋಡ್ ಜೀಪುಗಳನ್ನು ಮಾತ್ರ ಕಳುಹಿಸಲು ಸಾಧ್ಯವಾಗುತ್ತಿತ್ತು ಎಂದು ಅಧಿಕಾರಿ ತಿಳಿಸಿದರು. ಮಂಡಕೈ ಪ್ರದೇಶದಲ್ಲಿ 400 ಮನೆಗಳಿದ್ದು, ಭೂಕುಸಿತದಿಂದ 30 ಮಂದಿ ಮಾತ್ರ ಬದುಕುಳಿದಿದ್ದಾರೆ. ಅಲ್ಲಿ ಇನ್ನೂ ಅನೇಕ ಜನರಿದ್ದು, ಕಾಣೆಯಾಗಿದ್ದಾರೆ ಎಂದು ಅವರು ಹೇಳಿದರು.

ಸೇತುವೆ ಹೇಗೆ ನಿರ್ಮಿಸಲಾಯಿತು?

ಜುಲೈ 30ರಂದು ಚೂರಲ್ಮಲಾದಲ್ಲಿ ಬೈಲಿ ಸೇತುವೆಗಾಗಿ 20 ಟ್ರಕ್‌ಗಳಲ್ಲಿ ಬೆಂಗಳೂರಿನಿಂದ ಪ್ರತಿ 10 ಅಡಿ ಉದ್ದದ ಪ್ಯಾನಲ್‌ಗಳನ್ನು ಸಾಗಿಸಲಾಗಿತ್ತು. 190 ಅಡಿ ಉದ್ದದ ಸೇತುವೆ ನಿರ್ಮಿಸಲು ಒಟ್ಟು 19 ಉಕ್ಕಿನ ಫಲಕಗಳನ್ನು ಬಳಸಲಾಗಿದೆ. ಇದು ಒಂದೇ ಪಿಯರ್‌ನಿಂದ ಆಧರಿತವಾಗಿದ ಎಂದು ಮೇಜರ್ ಜನರಲ್ ಮ್ಯಾಥ್ಯೂ ಹೇಳಿದರು.

Wayanad Landslide
Wayanad Landslide


ಮಂಗಳವಾರ ಸಂಜೆಯೇ ಮದ್ರಾಸ್ ಎಂಜಿನಿಯರ್ ಗ್ರೂಪ್‌ನ ಅಧಿಕಾರಿಗಳು, ಸೇನೆಯ ಎಂಜಿನಿಯರಿಂಗ್ ಟಾಸ್ಕ್ ಫೋರ್ಸ್ ಸ್ಥಳಕ್ಕೆ ಆಗಮಿಸಿತ್ತು. ಬುಧವಾರ ಬೆಳಗ್ಗೆ 9 ಗಂಟೆಗೆ ಸೀಮಿತ ಸ್ಥಳಾವಕಾಶದಲ್ಲಿ ಸೇತುವೆ ನಿರ್ಮಾಣ ಕಾರ್ಯವನ್ನು 144 ಅಧಿಕಾರಿಗಳು ಪ್ರಾರಂಭಿಸಿದರು. ಒಂದು ಟ್ರಕ್‌ಗೆ ಮಾತ್ರ ಸ್ಥಳಾವಕಾಶವಿತ್ತು. ಪ್ರತಿಕೂಲ ಹವಾಮಾನ ಪರಿಸ್ಥಿತಿ, ಸಾಕಷ್ಟು ಸ್ಥಳಾವಕಾಶದ ಕೊರತೆಯಿಂದ ಕಾಮಗಾರಿ ವಿಳಂಬವಾಯಿತು. ಇವೆಲ್ಲದರ ಹೊರತಾಗಿಯೂ ಅಧಿಕಾರಿಗಳು ರಾತ್ರಿಯಿಡೀ ಬಿಡುವಿಲ್ಲದೆ ದುಡಿದು ಆಗಸ್ಟ್ 1ರಂದು ಸಂಜೆ 6 ಗಂಟೆಗೆ ಸೇತುವೆಯನ್ನು ಸಿದ್ಧಗೊಳಿಸಿದರು ಎಂದು ಅವರು ತಿಳಿಸಿದರು.



ಇದನ್ನೂ ಓದಿ: Wayanad Landslide: ವಯನಾಡು ಹಿಂದೆ ಹೇಗಿತ್ತು? ಈಗ ಹೇಗಿದೆ? ದುರಂತ ಸ್ಥಳದ ದೃಶ್ಯ ಸೆರೆ ಹಿಡಿದ ಇಸ್ರೋ

ಬೈಲಿ ಸೇತುವೆಗೆ ಸಮಾನಾಂತರವಾದ ಕಾಲುಸೇತುವೆ ನಿರ್ಮಾಣ ಕಾರ್ಯವನ್ನು ಗುರುವಾರ ಮುಂಜಾನೆ 3 ಗಂಟೆ ಸುಮಾರಿಗೆ ಸೇನೆಯ ಸಿಬ್ಬಂದಿ ಪ್ರಾರಂಭಿಸಿದರು. 100 ಅಡಿ ಉದ್ದದ ಈ ಸೇತುವೆಯನ್ನು ಸಂಜೆ 6 ಗಂಟೆಗೆ ಪೂರ್ಣಗೊಳಿಸಿದ್ದೇವೆ ಎಂದರು. ಈ ಎರಡು ಸೇತುವೆಗಳನ್ನು ಸರ್ಕಾರ ಬಯಸಿದಷ್ಟು ಕಾಲ ಇರಿಸಿಕೊಳ್ಳಬಹುದು. ಈ ಹಿಂದೆ ಶಬರಿಮಲೆಯಲ್ಲಿ ನಿರ್ಮಿಸಿರುವ ಬೈಲಿ ಸೇತುವೆ ಇನ್ನೂ ಇದೆ ಎಂದು ಅವರು ತಿಳಿಸಿದರು.

Continue Reading

ಪ್ರಮುಖ ಸುದ್ದಿ

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

BSNL 5G Service : ಸಾರ್ವಜನಿಕ ವಲಯದ ಉದ್ಯಮವಾಗಿರುವ ಬಿಎಸ್​​ಎನ್​​ 4 ಜಿ ಮತ್ತು 5 ಜಿ ಕಡೆಗೆ ಹೊರಳುವ ನಿಟ್ಟಿನಲ್ಲಿ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಿದೆ. ವಾಯ್ಸ್ ಆಫ್ ಇಂಡಿಯನ್ ಕಮ್ಯುನಿಕೇಷನ್ ಟೆಕ್ನಾಲಜಿ ಎಂಟಪ್ರೈ ಸಸ್ (ವಿಒಐಸಿಇ) ವರದಿ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್ಎನ್ಎಲ್ ಮೂಲಸೌಕರ್ಯವನ್ನು ಬಳಸಿಕೊಂಡು 5 ಜಿ ಸೇವೆ ನೀಡಲು ಸಿದ್ಧವಾಗಿದೆ.

VISTARANEWS.COM


on

BSNL 5G Service
Koo

ಬೆಂಗಳೂರು : ಐದನೇ ಪೀಳಿಗೆಯ ನೆಟ್ವರ್ಕ್​ (5G) ಸೇವೆ ನೀಡುತ್ತಿರುವ ಜಿಯೊ ಹಾಗೂ ಏರ್​ಟೆಲ್​ ಇತ್ತೀಚಿಗೆ ತಮ್ಮ ರೀಚಾರ್ಜ್​ ಪ್ಲ್ಯಾನ್​ಗಳ ದರ ಹೆಚ್ಚಿಸಿ ಗ್ರಾಹಕರಿಗೆ ಆಘಾತ ಕೊಟ್ಟಿತ್ತು. ಹೀಗಾಗಿ ಜನರು ಕಡಿಮೆ ಬೆಲೆಗೆ ಸೇವೆ ಕೊಡುವ ಬಿಎಸ್​ಎನ್​ಎಲ್ ಕಡೆಗೆ ವಾಲುವ ಯೋಚನೆ ಮಾಡಿದ್ದರು. ಅವರೆಲ್ಲರಿಗೂ ಇಲ್ಲೊಂದು ಶುಭ ಸುದ್ದಿಯಿದೆ. ಸರ್ಕಾರಿ ಸ್ವಾಮ್ಯದ ಸಂಸ್ಥೆಯಾಗಿರುವ ಬಿಎಸ್​​ಎನ್​ಎಲ್ 5ಜಿ ನೆಟ್ವರ್ಕ್​ಗೆ (BSNL 5G Service) ಪ್ರವೇಶ ಪಡೆದಿದೆ. ಬಿಎಸ್​ಎನ್​​ಎಲ್ ಈ ಸೇವೆಯ ಟ್ರಯಲ್​ ರನ್​ ಮಾಡುತ್ತಿದ್ದು ಬಹುತೇಕ ಯಶಸ್ವಿಯಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಅದು ಗ್ರಾಹಕರಿಗೆ ಲಭ್ಯವಾಗಲಿದೆ. ಬಿಎಸ್​ಎನ್​ಎಲ್​ ಕಚೇರಿಗಳಿಗೆ 5ಜಿ ಸಿಮ್​ಗಳು ಇದಾಗಲೇ ತಲುಪಿದೆ ಎಂಬ ವಿಡಿಯೊಗಳು ಹರಿದಾಡುತ್ತಿವೆ.

ಕೇಂದ್ರ ಸರ್ಕಾರದ ಸಂವಹನ ಸಚಿವ ಜ್ಯೋತಿರಾದಿತ್ಯ ಎಂ ಸಿಂಧಿಯಾ ತಮ್ಮ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್ ಮೂಲಕ ವೀಡಿಯೊವೊಂದರನ್ನು ಪೋಸ್ಟ್ ಮಾಡಿದ್ದು, ಅದರಲ್ಲಿ ಅವರು 5 ಜಿ ನೆಟ್ವರ್ಕ್​ ಮೂಲಕ ವೀಡಿಯೊ ಕಾಲ್ ಮಾಡಿದ್ದಾರೆ. “ಬಿಎಸ್ಎನ್ಎಲ್​​ನ 5ಜಿ ಫೋನ್ ಕರೆಯನ್ನು ಪರೀಕ್ಷಿಸಿದೆ ” ಎಂದು ಸಚಿವರು ಪೋಸ್ಟ್​​ನಲ್ಲಿ ಬರೆದಿದ್ದಾರೆ. ಅವರು ಸೆಂಟರ್​ ಫಾರ್​ ಡೆವಲಪ್​ಮೆಂಟ್​ ಆಫ್​ ಟೆಲಿಮ್ಯಾಟಿಕ್ಸ್​​ ಸಂಸ್ಥೆಯಲ್ಲಿ ಈ ಪರೀಕ್ಷೆ ನಡೆಸಿದ್ದಾರೆ.

ಸಚಿವರು ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಕರೆಯ ಮಾಡಿ ಮಾತನಾಡಿದ ಮಹಿಳೆಯನ್ನು ಕೋಣೆಯಿಂದ ಹೊರಗೆ ಹೋಗುವಂತೆ ಕೇಳುವುದನ್ನು ಕೇಳಬಹುದು. ಆ ಹೆಂಗಸು ಹೊರಗೆ ಹೋದಾಗಲೂ ಕರೆ ನಿರಂತರವಾಗಿ ಬರುತ್ತಿತ್ತು. ಜ್ಯೋತಿರಾದಿತ್ಯ ಅವರು ತಕ್ಷಣ ಈ ಸೇವೆಯನ್ನು ನೋಡಿ ಖುಷಿ ಪಟ್ಟರು. ಆ ಕಡೆ ಇದ್ದ ಮಹಿಳೆ “ಹೌದು, ಸರ್, ನಾನು ನಿಮ್ಮ ಮಾತನ್ನು ಕೇಳಬಲ್ಲೆ” ಎಂದು ಹೇಳಿದ್ದಾರೆ.

ದೊಡ್ಡ ಮಟ್ಟದ ಸಿದ್ಧತೆ

ಸಾರ್ವಜನಿಕ ವಲಯದ ಉದ್ಯಮವಾಗಿರುವ ಬಿಎಸ್​​ಎನ್​​ 4 ಜಿ ಮತ್ತು 5 ಜಿ ಕಡೆಗೆ ಹೊರಳುವ ನಿಟ್ಟಿನಲ್ಲಿ ತನ್ನ ತಾಂತ್ರಿಕ ಸಾಮರ್ಥ್ಯವನ್ನು ಪರೀಕ್ಷೆ ಮಾಡುತ್ತಿದೆ. ವಾಯ್ಸ್ ಆಫ್ ಇಂಡಿಯನ್ ಕಮ್ಯುನಿಕೇಷನ್ ಟೆಕ್ನಾಲಜಿ ಎಂಟಪ್ರೈ ಸಸ್ (ವಿಒಐಸಿಇ) ವರದಿ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್ಎನ್ಎಲ್ ಮೂಲಸೌಕರ್ಯವನ್ನು ಬಳಸಿಕೊಂಡು 5 ಜಿ ಸೇವೆ ನೀಡಲು ಸಿದ್ಧವಾಗಿದೆ. ಈ ಉದ್ಯಮ ಗುಂಪಿನಲ್ಲಿ ಟಾಟಾ ಕನ್ಸಲ್ಟೆನ್ಸಿ, ತೇಜಸ್ ನೆಟ್ವರ್ಕ್ಸ್, ವಿಎನ್ಎಲ್, ಯುನೈಟೆಡ್ ಟೆಲಿಕಾಂ, ಕೋರಲ್ ಟೆಲಿಕಾಂ ಮತ್ತು ಎಚ್ಎಫ್​​ಎಸಿಎಲ್ ಸೇರಿವೆ. ಇದರ ಜತೆಗೆ ಬಿಎಸ್​ಎನ್​​ಎಲ್​ 5ಜಿಯೂ ಗ್ರಾಹಕರಿಗೆ ಸಿಗಲಿದೆ.

ಸಾಮರ್ಥ್ಯ ಎಷ್ಟು?

ಕೇಂದ್ರ ಸರ್ಕಾರವು 700 ಮೆಗಾಹರ್ಟ್ಸ್, 2200 ಮೆಗಾಹರ್ಟ್ಸ್, 3300 ಮೆಗಾಹರ್ಟ್ಸ್ ಮತ್ತು 26 ಗಿಗಾಹರ್ಟ್ಸ್ ಸ್ಪೆಕ್ಟ್ರಮ್ ಬ್ಯಾಂಡ್​ಗಳನ್ನು ಬಿಎಸ್ಎನ್ಎಲ್​ಗೆ ಹಂಚಿಕೆ ಮಾಡಿದೆ. ಈ ನೆಟ್ವರ್ಕ್​ ಸಾಮರ್ಥ್ಯದಲ್ಲಿ ಬಿಎಸ್ಎನ್ಎಲ್ ದೇಶಾದ್ಯಂತ 4 ಜಿ ಮತ್ತು 5 ಜಿ ಸೇವೆ ನೀಡಲಿದೆ.

ಬಿಎಸ್​ಎನ್​ಎಲ್​ 5ಜಿ ಸಿಮ್​ ವಿಡಿಯೊ ವೈರಲ್

ಮಹಾರಾಷ್ಟ್ರದ ಬಿಎಸ್ಎನ್ಎಲ್ ಕಚೇರಿಯ ಉದ್ಯೋಗಿಗಳು 5ಜಿ ಸಿಮ್ ಅನ್​ಬಾಕ್ಸಿಂಗ್ ಮಾಡುತ್ತಿದ್ದಾರೆ ಎನ್ನಲಾದ ವಿಡಿಯೊವೊಂದು ವೈರಲ್ ಆಗಿದೆ. ವೀಡಿಯೊದಲ್ಲಿ, ಬಿಎಸ್ಎನ್ಎಲ್ ಸಿಮ್​​ಗಳನ್ನು 5 ಜಿ ಲೋಗೋದೊಂದಿಗೆ ಸಿದ್ಧಪಡಿಸಲಾಗಿದೆ. ಇದು ಪರೀಕ್ಷಾರ್ಥ ಸಿಮ್​ ಅಥವಾ ಸಾರ್ವಜನಿಕರ ವಿತರಣೆಗಾ ಎಂಬುದು ಸ್ಪಷ್ಟವಾಗಿಲ್ಲ. ಯಾಕೆಂದರೆ ಸಂಸ್ಥೆಯು ಇನ್ನೂ 5 ಜಿ ಮತ್ತು 4 ಜಿ ಸೇವೆಗಳನ್ನು ಅಧಿಕೃತ ಪ್ರಾರಂಭಿಸಿಲ್ಲ.

ಬೆಂಗಳೂರಿನಲ್ಲಿ ಆರಂಭವಾಗಲಿದೆ ಪರೀಕ್ಷೆ

ಬಿಎಸ್​ಎನ್​​ಎಲ್​ 5 ಸೇವೆ ಬೆಂಗಳೂರಿನಲ್ಲಿಯೂ ಪರೀಕ್ಷೆಗೆ ಒಳಪಡಲಿವೆ. ಜತೆಗೆ ರಾಷ್ಟ್ರರಾಜಧಾನಿ ದೆಹಲಿ ಹಾಗೂ ದಕ್ಷಿಣದ ಪ್ರಮುಖ ನಗರ ಚೆನ್ನೈನ ಜನಪ್ರಿಯ ಸ್ಥಳಗಳಲ್ಲಿ 5 ಜಿ ಸೇವೆಗಳ ಪ್ರಯೋಗಗಳು ನಡೆಯಲಿವೆ. ಬೆಂಗಳೂರಿನ ಸರ್ಕಾರಿ ಕಚೇರಿ, ದೆಹಲಿಯ ಸಂಚಾರ್ ಭವನ, ಕನೌಟ್ ಪ್ಲೇಸ್, ಜೆಎಎನ್​​ಯು ಕ್ಯಾಂಪಸ್ ಮತ್ತು ಐಐಟಿ ದೆಹಲಿ, ದೆಹಲಿಯ ಇಂಡಿಯಾ ಹ್ಯಾಬಿಟಾಟ್ ಸೆಂಟರ್, ಗುರುಗ್ರಾಮ್ ಮತ್ತು ಐಐಟಿ ಹೈದರಾಬಾದ್​ನ ಆಯ್ದ ಸ್ಥಳಗಳಲ್ಲಿ 5 ಸೇವೆಯ ಪರೀಕ್ಷೆ ನಡೆಯಲಿದೆ.

ಬಿಎಸ್ಎನ್ಎಲ್​ಗೆ ಬಜೆಟ್​ನಲ್ಲಿ ಅನುದಾನ

ಈ ವರ್ಷದ ಕೇಂದ್ರ ಸರ್ಕಾರದ ಬಜೆಟ್​ನಲ್ಲಿ ಬಿಎಸ್ಎನ್ಎಲ್ ಪುನರುಜ್ಜೀವನಗೊಳಿಸುವ ಯೋಜನೆ ಪ್ರಕಟಿಸಲಾಗಿತ್ತು. ಅದಕ್ಕಾಗಿ 82 ಸಾವಿರ ಕೋಟಿ ರೂ.ಗಳನ್ನು ಮೀಸಲಿಡುವುದಾಗಿ ಘೋಷಿಸಲಾಗಿದೆ. ಟೆಲಿಕಾಂ ಕಂಪನಿಯ ಮೂಲಸೌಕರ್ಯವನ್ನು ಹೆಚ್ಚಿಸಲು ಮತ್ತು ಸಂಪೂರ್ಣವಾಗಿ ಭಾರತದಲ್ಲಿಯೇ ಅಭಿವೃದ್ಧಿಪಡಿಸಿದ 4 ಜಿ ಮತ್ತು 5 ಜಿ ತಂತ್ರಜ್ಞಾನವನ್ನು ಹೊರತರಲು ಅನುಕೂಲವಾಗುವಂತೆ ಈ ಹಣವನ್ನು ಬಳಸಲಾಗುವುದು ಎಂದು ಹೇಳಲಾಗಿತ್ತು. ಈ ಕ್ರಮವು ಭವಿಷ್ಯದಲ್ಲಿ ಖಾಸಗಿ ಟೆಲಿಕಾಂ ಕಂಪನಿಗಳಿಗೆ ಗಮನಾರ್ಹ ಸವಾಲನ್ನು ಒಡ್ಡಬಹುದು. ಪ್ರಮುಖವಾಗಿ ಈಗಾಗಲೇ ಈ ಕ್ಷೇತ್ರದಲ್ಲಿ ಬಲಾಢ್ಯ ಎನಿಸಿಕೊಂಡಿರುವ ಜಿಯೊ ಹಾಗೂ ಏರ್​ಟೆಲ್​ಗೆ ಸವಾಲೊಡ್ಡಲಿದೆ.

ಇದನ್ನೂ ಓದಿ: Rajeev Chandrasekhar: 10 ವರ್ಷಗಳಲ್ಲಿ 80 ಕೋಟಿ ಮಂದಿ ಬಡತನದಿಂದ ಹೊರಗೆ; ವಿಶ್ವಸಂಸ್ಥೆಯಲ್ಲೇ ಮೋದಿ ಆಡಳಿತಕ್ಕೆ ಪ್ರಶಂಸೆ

ಸರ್ಕಾರಿ ಸ್ವಾಮ್ಯದ ಟೆಲಿಕಾಂ ಕಂಪನಿಯಿಂದ ಎದುರಾಗುವ ಸ್ಪರ್ಧೆಯ ಹಿನ್ನೆಲೆಯಲ್ಲಿ, ಖಾಸಗಿ ಕಂಪನಿಗಳು ತಮಗೆ ಆಗಲಿರುವ ಗಣನೀಯ ನಷ್ಟವನ್ನು ತಪ್ಪಿಸಲು ಪ್ರತಿ ಬಳಕೆದಾರರಿಂದ ಆದಾಯ ಹೆಚ್ಚಿಸಲು ಪ್ರಯತ್ನಿಸಬಹುದು.

ಬಿಎಸ್ಎನ್ಎಲ್ ಬಳಕೆದಾರರ ಸಂಖ್ಯೆಯಲ್ಲಿ ಹೆಚ್ಚಳ

5ಸೇವೆಯ ಭರವಸೆ ಹಾಗೂ ಖಾಸಗಿ ಕಂಪನಿಗಳ ಟ್ಯಾರಿಫ್​ ಹೆಚ್ಚಳದ ಕಾರಣಕ್ಕೆ ಕಳೆದ 30 ದಿನಗಳಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಹೊಸ ಸಿಮ್​ಗಳು ಮಾರಾಟವಾಗಿವೆ ಎಂದು ಆಂಧ್ರಪ್ರದೇಶದ ಬಿಎಸ್ ಎನ್ ಎಲ್ ಘೋಷಿಸಿದೆ. ಈ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಆಂಧ್ರಪ್ರದೇಶದಲ್ಲಿ ಮಾತ್ರವಲ್ಲ, ಭಾರತದಾದ್ಯಂತ ವಿವಿಧ ಟೆಲಿಕಾಂ ವಲಯಗಳಲ್ಲಿ ಬಿಎಸ್ಎನ್ಎಲ್ ಚಂದಾದಾರರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚುತ್ತಿದೆ.

ಖಾಸಗಿ ಟೆಲಿಕಾಂ ಕಂಪನಿಗಳು ಪರಿಷ್ಕೃತ ದರ ಯೋಜನೆಗಳನ್ನು ಪರಿಚಯಿಸುವುದರೊಂದಿಗೆ ಬಳಕೆದಾರರು ತಮ್ಮ ಸಿಮ್ ಅನ್ನು ಬಿಎಸ್ಎನ್ಎಲ್​ಗೆ ಪೋರ್ಟ್​ ಮಾಡಲು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಪ್ರಾರಂಭಿಸಿದ್ದಾರೆ. ಪೂರಕವಾಗಿ ಬಿಎಸ್​ಎನ್​​ಎಲ್​ ಸಿಮ್ ಕಾರ್ಡ್ ಪೋರ್ಟಿಂಗ್​ಗೆ ಅನುಕೂಲವಾಗುವಂತೆ ದೇಶಾದ್ಯಂತ ವಿವಿಧ ನಗರಗಳಲ್ಲಿ ಕೇಂದ್ರಗಳನ್ನು ತೆರೆದಿದೆ.

Continue Reading

ರಾಜಕೀಯ

Parliament Session: ಪೈರಸಿಯಿಂದ ಚಿತ್ರೋದ್ಯಮಕ್ಕೆ 20,000 ಕೋಟಿ ರೂ. ನಷ್ಟ; ಸಂಸತ್‌ನಲ್ಲಿ ಕಳವಳ

ಪೈರಸಿಯಿಂದಾಗಿ ಕಲಾವಿದರ ವರ್ಷಗಳ ಪರಿಶ್ರಮ ವ್ಯರ್ಥವಾಗುತ್ತಿದೆ. ಈ ವ್ಯಾಪಕ ಸಮಸ್ಯೆಯಿಂದ ಕಲಾವಿದರ ಸೃಜನಶೀಲ ಪ್ರಯತ್ನಗಳು ಮತ್ತು ಉದ್ಯಮದ ಆರ್ಥಿಕ ಸದೃಢತೆಗೆ ಧಕ್ಕೆಯಾಗುತ್ತಿದೆ. ಕೋವಿಡ್-19 ಸಾಂಕ್ರಾಮಿಕದ ಬಳಿಕ ಆನ್ಲೈನ್ ನಲ್ಲಿ ಪೈರಸಿಯು ಶೇ. 62 ಹೆಚ್ಚಳವಾಗಿದೆ ಎಂದು ರಾಜ್ಯಸಭೆಯಲ್ಲಿ (Parliament Session) ಸಂಸದ ರಾಘವ್ ಚಡ್ಡಾ ಕಳವಳ ವ್ಯಕ್ತಪಡಿಸಿದ್ದಾರೆ.

VISTARANEWS.COM


on

By

Parliament Session
Koo

ನವದೆಹಲಿ: ಒಟಿಟಿ ಪ್ಲಾಟ್‌ಫಾರ್ಮ್‌ಗಳಲ್ಲಿನ (OTT platforms) ಪೈರಸಿಯನ್ನು (piracy on the film industry) ತಡೆಗಟ್ಟಲು ತುರ್ತು ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ (MP Raghav Chadha) ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ (rajya sabha) ಮಾತನಾಡಿದ ಅವರು, ಚಲನಚಿತ್ರೋದ್ಯಮದ ಮೇಲೆ ಪೈರಸಿಯ ತೀವ್ರ ಆರ್ಥಿಕ ಪರಿಣಾಮವನ್ನು ಬೀರುತ್ತಿದೆ. ವಾರ್ಷಿಕ 20,000 ಕೋಟಿ ರೂ. ನಷ್ಟವಾಗುತ್ತಿದೆ ಎಂದು ತಿಳಿಸಿದರು.

ಪೈರಸಿಯಿಂದಾಗಿ ಕಲಾವಿದರ ವರ್ಷಗಳ ಪರಿಶ್ರಮ ವ್ಯರ್ಥವಾಗುತ್ತಿದೆ. ಈ ವ್ಯಾಪಕ ಸಮಸ್ಯೆಯಿಂದ ಕಲಾವಿದರ ಸೃಜನಶೀಲ ಪ್ರಯತ್ನಗಳು ಮತ್ತು ಉದ್ಯಮದ ಆರ್ಥಿಕ ಸದೃಢತೆಗೆ ಧಕ್ಕೆಯಾಗುತ್ತಿದೆ ಎಂದು ತಿಳಿಸಿದ ಚಡ್ಡಾ, ಕೋವಿಡ್-19 ಸಾಂಕ್ರಾಮಿಕದ ಸಮಯದಲ್ಲೇ ಪೈರಸಿಯು ಶೇ. 62 ಹೆಚ್ಚಳವಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು. ಟ್ವೀಟ್‌ನಲ್ಲೂ ಈ ಕುರಿತು ಮಾಹಿತಿ ಹಂಚಿಕೊಂಡ ಆಪ್ ನಾಯಕ ಪರಿಸ್ಥಿತಿಯ ಗಂಭೀರತೆ ಬಗ್ಗೆ ಎಲ್ಲರ ಗಮನ ಸೆಳೆಯುವ ಅಗತ್ಯವಿದೆ ಎಂದು ತಿಳಿಸಿದರು.


ಪೈರಸಿ ಎನ್ನುವುದು ಚಲನಚಿತ್ರೋದ್ಯಮದಲ್ಲಿ ಮತ್ತು ಈಗ ಒಟಿಟಿ ಪ್ರಪಂಚದಲ್ಲಿಯೂ ವ್ಯಾಪಕವಾಗಿರುವ ಪ್ಲೇಗ್‌ನಂತೆ ಹರಡುತ್ತಿದೆ. ಸಾಂಕ್ರಾಮಿಕದ ಸಮಯದಲ್ಲೇ ಆನ್‌ಲೈನ್ ಪೈರಸಿ ಶೇ. 62ರಷ್ಟು ಏರಿಕೆ ಕಂಡಿದೆ. ಒಂದು ವರ್ಷದ ಹಿಂದೆ ಸಿನಿಮಾಟೋಗ್ರಾಫಿಕ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದ್ದೇವೆ. ಆದರೆ ಇದು ಆನ್‌ಲೈನ್ ಪೈರಸಿ ವಿರುದ್ಧ ಯಾವುದೇ ಕಾರ್ಯವಿಧಾನವನ್ನು ಹೊಂದಿಲ್ಲ. ಇದು ಮಲ್ಟಿಪ್ಲೆಕ್ಸ್‌ಗಳಲ್ಲಿ ಆಂಟಿ ಕ್ಯಾಮ್ ರೆಕಾರ್ಡಿಂಗ್ ಮೇಲೆ ಹೆಚ್ಚಾಗಿ ಕೇಂದ್ರೀಕರಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Yogi Adityanath: ನೀರು ಎರಚಿ ಮಹಿಳೆಗೆ ಕಿರುಕುಳ ಕೇಸ್‌; ಇಡೀ ಪೊಲೀಸ್‌ ಚೌಕಿಯೇ ಅಮಾನತು; ಇನ್ಮುಂದೆ ʼಬುಲೆಟ್‌ ರೈಲ್‌ʼ ಓಡಿಸಲಾಗುತ್ತೆ ಎಂದು ವಾರ್ನಿಂಗ್‌

ಸೀಮಿತ ವ್ಯಾಪ್ತಿ ಹೊಂದಿರುವ ಈಗಿನ ಕಾನೂನನ್ನು ಟೀಕಿಸಿದ ಅವರು, ಇದು ಡಿಜಿಟಲ್ ಪೈರಸಿಯಿಂದ ಎದುರಾಗುವ ಸವಾಲುಗಳನ್ನು ಎದುರಿಸಲು ಸಮರ್ಥವಾಗಿಲ್ಲ. ಇದರಿಂದ ಪೈರಸಿ ಹಾವಳಿ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಈ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ಸೂಕ್ತವಾದ ಕಾನೂನನ್ನು ಪರಿಚಯಿಸುವಂತೆ ಅವರು ಸರ್ಕಾರಕ್ಕೆ ತಿಳಿಸಿದರು.

Continue Reading

ದೇಶ

Election Bond: ಚುನಾವಣಾ ಬಾಂಡ್‌ ಹಗರಣದ ಬಗ್ಗೆ SIT ತನಿಖೆಗೆ ಆಗ್ರಹ; ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್‌

Election Bond: ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಅರ್ಜಿಯನ್ನು ತಿರಸ್ಕರಿಸಿದ್ದು, ಈ ಹಿಂದೆಯೇ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದೆ. ಫೆಬ್ರವರಿ 15 ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು “ಅಸಂವಿಧಾನಿಕ” ಎಂದು ತೀರ್ಪು ನೀಡಿತ್ತು.

VISTARANEWS.COM


on

Election Bond
Koo

ನವದೆಹಲಿ: ಚುನಾವಣಾ ಬಾಂಡ್‌(Election Bond)ಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಪ್ರಕರಣದ ಬಗ್ಗೆ ವಿಶೇಷ ತನಿಖಾ ತಂಡದಿಂದ (SIT) ತನಿಖೆಗೆ ಒತ್ತಾಯಿಸಿ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್‌ (Supreme Court) ತಿರಸ್ಕರಿಸಿದೆ. ಚುನಾವಣಾ ಬಾಂಡ್‌ ಎಂಬುದು ಅತಿದೊಡ್ಡ ಹಗರಣವಾಗಿದ್ದು, ಇದರ ತನಿಖೆಯನ್ನು SITಗೆ ವಹಿಸುಂತೆ ಆಗ್ರಹಿಸಿ ಎರಡು ಸರ್ಕಾರೇತರ ಸಂಸ್ಥೆಗಳು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು(PIL) ಹೂಡಿದ್ದವು.

ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಅರ್ಜಿಯನ್ನು ತಿರಸ್ಕರಿಸಿದ್ದು, ಈ ಹಿಂದೆಯೇ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದೆ. ಫೆಬ್ರವರಿ 15 ರಂದು, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆಯನ್ನು “ಅಸಂವಿಧಾನಿಕ” ಎಂದು ತೀರ್ಪು ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಸಂವಿಧಾನ ಪೀಠವು ಅನಾಮಧೇಯ ಚುನಾವಣಾ ಬಾಂಡ್ ಯೋಜನೆಯು ಆರ್ಟಿಕಲ್ 19 (1) (ಎ) ಅಡಿಯಲ್ಲಿ ಮಾಹಿತಿ ಹಕ್ಕು ಉಲ್ಲಂಘನೆ ಎಂದು ಹೇಳಿತ್ತು.

ಚುನಾವಣಾ ಬಾಂಡ್‌ ಯೋಜನೆಯು ಸಂವಿಧಾನದ 19 (1) (A) ವಿಧಿ ಅಡಿಯಲ್ಲಿ ನೀಡಲಾದ ಮಾಹಿತಿ ಹಕ್ಕು ಕಾಯ್ದೆಯ ಉಲ್ಲಂಘನೆಯಾಗುತ್ತದೆ. ಇದರಿಂದ ಕೊಡು-ಕೊಳ್ಳುವ ವ್ಯವಹಾರಕ್ಕೆ ( ಉದಾಹರಣೆ: ನೀನೊಂದು ಸಹಾಯ ಮಾಡಿದರೆ, ಅದಕ್ಕೆ ಬದಲಾಗಿ ಬೇರೆ ರೀತಿಯಲ್ಲಿ ನಾನು ಸಹಾಯ ಮಾಡುವುದು) ಪುಷ್ಟಿ ನೀಡುತ್ತದೆ. ಹಾಗೆಯೇ, ಕಂಪನಿಗಳ ಕಾಯ್ದೆಗೆ ತಿದ್ದುಪಡಿ ತಂದಿರುವುದು ಅಸಾಂವಿಧಾನಿಕವಾಗಿದೆ. ರಾಜಕೀಯ ಪಕ್ಷಗಳು ಪಡೆಯುವ ದೇಣಿಗೆಯ ಮೂಲ ತಿಳಿಯುವ ಹಕ್ಕು ದೇಶದ ನಾಗರಿಕರಿಗೆ ಇದೆ” ಎಂದು ನ್ಯಾಯಾಲಯ ತಿಳಿಸಿತು.

ಏನಿದು ಚುನಾವಣಾ ಬಾಂಡ್‌?

ಚುನಾವಣಾ ಬಾಂಡ್‌ ಯೋಜನೆಯನ್ನು 2017ರಲ್ಲಿ ಆಗಿನ ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರು ಬಜೆಟ್‌ ಅಧಿವೇಶನದಲ್ಲಿ ಮೊದಲು ಪ್ರಸ್ತಾಪಿಸಿದರು. ಹಣಕಾಸು ಕಾಯ್ದೆ ಹಾಗೂ ಪ್ರಜಾಪ್ರತಿನಿಧಿ ಕಾಯ್ದೆಗಳಿಗೆ ತಿದ್ದುಪಡಿ ತಂದು 2018ರ ಜನವರಿಯಲ್ಲಿ ಚುನಾವಣಾ ಬಾಂಡ್‌ ಯೋಜನೆ ಜಾರಿ ಕುರಿತು ಅಧಿಸೂಚನೆ ಹೊರಡಿಸಲಾಯಿತು. ಆ ಮೂಲಕ ಚುನಾವಣಾ ಬಾಂಡ್‌ ಯೋಜನೆ ಜಾರಿಗೊಳಿಸಲಾಯಿತು.

ಬಿಜೆಪಿಗೆ ಹೆಚ್ಚು ದೇಣಿಗೆ

ಚುನಾವಣಾ ಬಾಂಡ್‌ ಯೋಜನೆ ಜಾರಿಯಾದ ಬಳಿಕ ಬಿಜೆಪಿಗೆ ಹೆಚ್ಚುಗೆ ದೇಣಿಗೆ ಸಂದಾಯವಾಗಿದೆ. ಆಡಳಿತಾರೂಢ ಪಕ್ಷವಾದ ಕಾರಣ ಹೆಚ್ಚು ದೇಣಿಗೆ ಸಂಗ್ರಹಿಸಿದೆ. 2022-23ನೇ ಸಾಲಿನಲ್ಲಿ ಬಿಜೆಪಿಗೆ ಚುನಾವಣಾ ಬಾಂಡ್‌ಗಳ ಮೂಲಕವೇ ಸುಮಾರು 1,300 ಕೋಟಿ ರೂ. ದೇಣಿಗೆ ಸಂಗ್ರಹವಾಗಿದೆ. ಇದು ಕಾಂಗ್ರೆಸ್‌ಗಿಂತ ಎಂಟು ಪಟ್ಟು ಹೆಚ್ಚಿನ ಮೊತ್ತವಾಗಿದೆ.

ಚುನಾವಣಾ ಬಾಂಡ್‌ ಯೋಜನೆಯ ಸಾಂವಿಧಾನಿಕ ಮಾನ್ಯತೆಯನ್ನು ಪ್ರಶ್ನಿಸಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಕಳೆದ ವರ್ಷದ ನವೆಂಬರ್‌ 2ರಂದು ತೀರ್ಪು ಕಾಯ್ದಿರಿಸಿತ್ತು. ಈಗ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದ್ದು, ಯೋಜನೆಯ ಸಾಂವಿಧಾನಿಕ ಮಾನ್ಯತೆಯನ್ನು ಅಲ್ಲಗಳೆದಿದೆ.

ಇದನ್ನೂ ಓದಿ: NEET UG 2024: ಪ್ರಶ್ನೆ ಪತ್ರಿಕೆ ಸೋರಿಕೆ ಕೇವಲ ಎರಡು ನಗರಗಳಿಗೆ ಸೀಮಿತ; ಮರು ಪರೀಕ್ಷೆ ಅಗತ್ಯವಿಲ್ಲ-ಸುಪ್ರೀಂಕೋರ್ಟ್‌

Continue Reading
Advertisement
Wayanad Landslide
ದೇಶ31 mins ago

Wayanad Landslide: 144 ಸೈನಿಕರು 31 ಗಂಟೆಯೊಳಗೆ 190 ಅಡಿ ಉದ್ದದ ಸೇತುವೆ ನಿರ್ಮಿಸಿದ್ದು ಹೇಗೆ?

Actress Kiara Aadvani
Latest32 mins ago

Actress Kiara Aadvani: ಬಿಕಿನಿ ಪ್ರಿಯರು ಕಿಯಾರಾ ಅಡ್ವಾಣಿಯ ಈ ಟಾಪ್ 5 ಬಿಕಿನಿ ಟ್ರೈ ಮಾಡಬಹುದು!

Indian 2 OTT Release
ಸಿನಿಮಾ33 mins ago

Indian 2 OTT Release: ಒಟಿಟಿಯಲ್ಲಿ ಇಂಡಿಯನ್ 2 ಬಿಡುಗಡೆ ವಿಳಂಬ ಆಗುತ್ತಿರುವುದು ಈ ಕಾರಣಕ್ಕೆ!

One day workshop on 10th August by G Academy in Bengaluru
ಬೆಂಗಳೂರು42 mins ago

Workshop: ಬೆಂಗಳೂರಿನಲ್ಲಿ ಆ.10ರಂದು ಸಿನಿಮಾಸಕ್ತರಿಗೆ ಕಾರ್ಯಾಗಾರ

Ranadhurandhara book release in Bengaluru on August 4
ಕರ್ನಾಟಕ43 mins ago

Book Release: ಬೆಂಗಳೂರಿನಲ್ಲಿ ಆ.4ರಂದು ʼರಣಧುರಂಧರʼ ಗ್ರಂಥ ಲೋಕಾರ್ಪಣೆ

Manu Bhaker
ಕ್ರೀಡೆ55 mins ago

Manu Bhaker : 25 ಮೀಟರ್ ಪಿಸ್ತೂಲ್ ವಿಭಾಗದಲ್ಲಿ ಮನು ಭಾಕರ್​ ಫೈನಲ್​ಗೆ​​; ಒಂದೇ ಒಲಿಂಪಿಕ್ಸ್​ನಲ್ಲಿ ಮೂರನೇ ಬಾರಿ ಫೈನಲ್​ಗೆ

Woman Deliver Baby in Auto
ಕರ್ನಾಟಕ1 hour ago

Woman Deliver Baby in Auto: ಆಸ್ಪತ್ರೆಗೆ ಹೋಗುವಾಗ ಆಟೋದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

Mangaluru Train Timings
Latest1 hour ago

Mangaluru Train Timings: ಮಂಗಳೂರು-ಬೆಂಗಳೂರು ರೈಲು ವೇಳಾಪಟ್ಟಿ ಬದಲು; ಪ್ರಯಾಣಿಕರಿಗೆ ಏನು ಲಾಭ?

BSNL 5G Service
ಪ್ರಮುಖ ಸುದ್ದಿ1 hour ago

BSNL 5G Service : ಬಿಎಸ್​ಎನ್​​ಎಲ್​ 5ಜಿ ಸಿಮ್​ಕಾರ್ಡ್​ಗಳು ವಿತರಣೆಗೆ ರೆಡಿ​; ಬೆಂಗಳೂರಿನಲ್ಲಿಯೂ ಲಭ್ಯವೇ?

karnataka Rain
ಮಳೆ1 hour ago

Karnataka Rain : ಹಾಸನದಲ್ಲಿ ಗಾಳಿ- ಮಳೆಗೆ ಕುಸಿದು ಬಿದ್ದ ಮನೆ; ಮಂಗಳೂರಿನಲ್ಲಿ ಜಾನುವಾರುಗಳು ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 day ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 day ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌