Nuclear Weapons | ಯಾವುದೇ ಕಾರಣಕ್ಕೂ ಅಣ್ವಸ್ತ್ರ ಬಳಕೆ ಕೂಡದು, ರಷ್ಯಾಗೆ ರಾಜನಾಥ್‌ ಸಿಂಗ್‌ ಆಗ್ರಹ - Vistara News

ದೇಶ

Nuclear Weapons | ಯಾವುದೇ ಕಾರಣಕ್ಕೂ ಅಣ್ವಸ್ತ್ರ ಬಳಕೆ ಕೂಡದು, ರಷ್ಯಾಗೆ ರಾಜನಾಥ್‌ ಸಿಂಗ್‌ ಆಗ್ರಹ

ಉಕ್ರೇನ್‌ ಮೇಲೆ ರಷ್ಯಾ ಅಣ್ವಸ್ತ್ರ ಪ್ರಯೋಗಿಸುತ್ತದೆ (Nuclear Weapons) ಎಂಬ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ “ಅಣ್ವಸ್ತ್ರ ಪ್ರಯೋಗ ಕೂಡದು” ಎಂದು ರಷ್ಯಾಗೆ ಭಾರತ ಆಗ್ರಹಿಸಿದೆ.

VISTARANEWS.COM


on

Rajnath Singh
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ/ಮಾಸ್ಕೊ: ಇತ್ತೀಚೆಗೆ ನಡೆದ ಶಾಂಘೈ ಸಹಕಾರ ಸಂಘಟನೆ (SCO) ಸಭೆ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರ ಜತೆ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, “ಯುದ್ಧ ನಡೆಸಲು ಇದು ಕಾಲವಲ್ಲ” ಎಂದು ಶಾಂತಿ ಸ್ಥಾಪನೆ ಕುರಿತು ಸೂಚ್ಯವಾಗಿ ಹೇಳಿದ್ದರು. ಆದರೆ, ಇತ್ತೀಚೆಗೆ ಉಕ್ರೇನ್‌ ಮೇಲೆ ಆಕ್ರಮಣ ತೀವ್ರಗೊಳಿಸಿರುವ ರಷ್ಯಾ, ಪರಮಾಣು ದಾಳಿ ನಡೆಸುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, “ಯಾವುದೇ ಕಾರಣಕ್ಕೂ ಪರಮಾಣು ದಾಳಿ (Nuclear Weapons) ಕೂಡದು” ಎಂದು ರಷ್ಯಾವನ್ನು ಒತ್ತಾಯಿಸಿದ್ದಾರೆ.

ಕಳೆದ ಭಾನುವಾರ ರಷ್ಯಾ ರಕ್ಷಣಾ ಸಚಿವ ಸೆರ್ಗೆಯಿ ಶೊಯಿಗು ಅವರು ಹಲವು ರಾಷ್ಟ್ರಗಳ ರಕ್ಷಣಾ ಸಚಿವರಿಗೆ ಸರಣಿ ಕರೆಗಳ ಮೂಲಕ ಮಾತನಾಡಿದ್ದಾರೆ. ಇದೇ ವೇಳೆ, ರಾಜನಾಥ್‌ ಸಿಂಗ್‌ ಅವರ ಜತೆಗೂ ಶೊಯಿಗು ಮಾತನಾಡಿದ್ದು, “ಯಾವುದೇ ಕಾರಣಕ್ಕೂ ಪರಮಾಣು ಬಳಕೆಯಾಗಬಾರದು. ಮಾನವತೆಯ ವಿರುದ್ಧ ಇರುವ ಅಣ್ವಸ್ತ್ರಗಳನ್ನು ಯುದ್ಧದ ಭಾಗವಾಗಿ ಬಳಸಬಾರದು. ಮಾತುಕತೆ ಮೂಲಕವೇ ಬಿಕ್ಕಟ್ಟು ಬಗೆಹರಿಸಬೇಕು” ಎಂದು ಸಿಂಗ್‌ ಮಾತುಕತೆ ವೇಳೆ ಒತ್ತಾಯಿಸಿದ್ದಾರೆ.

ಕಳೆದ ಫೆಬ್ರವರಿಯಿಂದಲೇ ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡುತ್ತಿದ್ದು, ಇಡೀ ದೇಶವನ್ನೇ ಭಾಗಶಃ ಹಾಳು ಮಾಡಿದೆ. ಆದರೆ, ಕಳೆದ ಕೆಲವು ದಿನಗಳಿಂದ ಉಕ್ರೇನ್‌ ಮೇಲೆ ರಷ್ಯಾ ಅಣ್ವಸ್ತ್ರ ದಾಳಿ ಮಾಡಲು ಯೋಜನೆ ರೂಪಿಸಿದೆ, ಇದಕ್ಕೆ ಪುಟಿನ್‌ ಆದೇಶ ಹೊರಡಿಸಿದ್ದಾರೆ ಎಂಬೆಲ್ಲ ಮಾತುಗಳು ಕೇಳಿಬರುತ್ತಿವೆ. ಪರಿಸ್ಥಿತಿ ಹೀಗಿರುವಾಗಲೂ ರಷ್ಯಾ ಉಕ್ರೇನ್‌ ಮೇಲೆಯೇ ಆರೋಪ ಮಾಡುತ್ತಿದೆ. ಉಕ್ರೇನ್‌ ರೇಡಿಯೇಟಿವ್‌ ಪರಮಾಣು ತಯಾರಿಸಲು ಆದೇಶಿಸಿದೆ ಎಂದು ರಷ್ಯಾ ಆರೋಪಿಸುತ್ತಿದೆ. ಹೀಗೆ, ಆರೋಪ-ಪ್ರತ್ಯಾರೋಪವು ಜಾಗತಿಕ ಸಮುದಾಯವನ್ನು ಆತಂಕಕ್ಕೀಡು ಮಾಡಿದೆ.

ಇದನ್ನೂ ಓದಿ | Indian Students | ಉಕ್ರೇನ್‌ನಲ್ಲಿರುವವರು ಭಾರತಕ್ಕೆ ಬನ್ನಿ, ಇಲ್ಲಿಂದ ಯಾರೂ ಹೋಗದಿರಿ, ರಾಯಭಾರ ಕಚೇರಿ ಸೂಚನೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hindu Marriage: ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌

Hindu Marriage: ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

VISTARANEWS.COM


on

Hindu Marriage
Koo

ನವದೆಹಲಿ:ಹಿಂದೂ ವಿವಾಹ(Hindu Marriage) ಶಾಸ್ತ್ರಬದ್ಧವಾಗಿ ಅಥವಾ ವಿಧಿಬದ್ಧವಾಗಿ(Requisite Ceremonies) ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌(Supreme Court) ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ(Hindu Marriage Act) ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

ಇತ್ತೀಚೆಗೆ ಇಬ್ಬರು ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ದಂಪತಿ ಸಲ್ಲಿಸಿದ್ದ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಇದ್ದ ಪೀಠ, ಹಿಂದೂ ವಿವಾಹವು ಸೂಕ್ತವಾದ ಆಚರಣೆಗಳು ಇಲ್ಲದೆಯೇ ಆಗಿದ್ದಲ್ಲಿ, ಅಂತಹ ವಿವಾಹವನ್ನು ‘ಹಿಂದೂ ವಿವಾಹವೆಂದು ಪರಿಗಣಿಸಲಾಗದು’ ಎಂದು ಏಪ್ರಿಲ್‌ 19ರ ಆದೇಶದಲ್ಲಿ ಹೇಳಿತ್ತು. ‘ಹಿಂದೂ ವಿವಾಹದಲ್ಲಿ ಸಪ್ತಪದಿ ಅಂದರೆ ಋಗ್ವೇದದ ಪ್ರಕಾರ, ಏಳನೆಯ ಹೆಜ್ಜೆಯನ್ನು ಪೂರ್ಣಗೊಳಿಸಿದ ನಂತರ ವರನು ವಧುವಿಗೆ ‘ಏಳು ಹೆಜ್ಜೆಗಳ ಮೂಲಕ ನಾವು ಸಖರಾಗಿದ್ದೇವೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರಕ್ಕೆ ಬರಬೇಕು. ಹಿಂದೂ ವಿವಾಹ ಅಂದರೆ ಅದೊಂದು ಸಂಸ್ಕಾರ. ಭಾರತೀಯ ಸಮಾಜದಲ್ಲಿ ಮದುವೆಗೆ ಅದರದ್ದೇ ಆದ ಮೌಲ್ಯಗಳಿವೆ ಎಂದು ಹೇಳಿದೆ.

ಮದುವೆ ಎಂಬುದು ಕೇವಲ ನೃತ್ಯ, ಸಂಗೀತ, ಮನೋರಂಜನೆಗಾಗಿ ನಡೆಯುವ ಕಾರ್ಯಕ್ರಮ ಅಲ್ಲ. ಇದು ಭಾರತೀಯ ಕುಟುಂಬ ವ್ಯವಸ್ಥೆಗೆ ಅಡಿಪಾಯ ಹಾಕುವ ವಿಚಾರವಾಗಿದೆ. ಇದು ಒಬ್ಬ ಪುರುಷ ಮತ್ತು ಮಹಿಳೆಗೆ ಗಂಡ-ಹೆಂಡತಿ ಎಂಬ ಸ್ಥಾನಮಾನವನ್ನು ನೀಡುವ ವ್ಯವಸ್ಥೆ. ಅದು ಬಹಳ ಪವಿತ್ರವಾದ ವಿಚಾರವಾಗಿದ್ದು, ಅದು ಒಬ್ಬ ವ್ಯಕ್ತಿಗೆ ಜೀವನ ಪರ್ಯಾಂತ ಗೌರವ, ಸಮಾನತೆ, ಒಮ್ಮತದ ಮತ್ತು ಆರೋಗ್ಯಯುತ ಸಂಬಂಧವನ್ನು ನೀಡುತ್ತದೆ. ಇದು ಪುರುಷ ಮತ್ತು ಮಹಿಳೆಯ ನಡುವೆ ಸಂಬಂಧವನ್ನು ಬೆಸೆಯಲು ಆಚರಿಸುವ ವಿಧ್ಯುಕ್ತ ಕಾರ್ಯಕ್ರಮವಾಗಿದೆ. ಪತಿ ಪತ್ನಿಯ ಸ್ಥಾನವನ್ನು ಪಡೆಯಲು ಯುವಕ-ಯುವತಿಯರು ಹಿಂದೂ ವಿವಾಹ ಕಾಯ್ದೆಯಡಿಯಲ್ಲಿ ಮಾನ್ಯವಾದ ವಿವಾಹ ಆಚರಣೆ ಇಲ್ಲದಿದ್ದರೂ ವಿವಾಹ ಆಗಿದೆ ಎಂಬಂತೆ ತೋರಿಸಿಕೊಳ್ಳುವ ಕ್ರಮವನ್ನು ನಾವು ಒಪ್ಪುವುದಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದನ್ನೂ ಓದಿ: Lok Sabha Election 2024: 60 ವರ್ಷ ದೇಶವಾಳಿದ ನಕಲಿ ಗಾಂಧಿ ಕಂಪನಿಯಲ್ಲಿ ಪ್ರಧಾನಿ ಅಭ್ಯರ್ಥಿಗೆ ಬರ: ಜೋಶಿ ಲೇವಡಿ

ಹಿಂದೂ ವಿವಾಹ ಕಾಯ್ದೆ ಜಾರಿಗೊಳಿಸಿದ ನಂತರದಲ್ಲಿ ಪತಿ ಮತ್ತು ಪತ್ನಿಯ ನಡುವೆ ಕಾನೂನಿನ ಮಾನ್ಯತೆ ಇರುವ ಸಂಬಂಧ ಎಂದರೆ ಅದು ಏಕಸಾಂಗತ್ಯ ಮಾತ್ರ. ಈ ಕಾಯ್ದೆ ಬಹುಪತ್ನಿತ್ವವನ್ನು ಒಪ್ಪುವುದಿಲ್ಲ. ಅಗತ್ಯವಿರುವ ಶಾಸ್ತ್ರ ಸಂಪ್ರದಾಯ ಕೈಗೊಳ್ಳದೇ ಇದ್ದಾಗ ಪ್ರಾಧಿಕಾರ ನೀಡುವ ಮದುವೆಯ ಪ್ರಮಾಣ ಪತ್ರವನ್ನು ನೀಡಿದೆ ಎಂದ ಮಾತ್ರಕ್ಕೆ ಮದುವೆ ಆಗಿದೆ ಎನ್ನಲಾಗದು. ಕಾಯ್ದೆಯ ಸೆಕ್ಷನ್‌ 7ರ ಪ್ರಕಾರ ಹಿಂದೂ ವಿವಾಹ ವಿಧಿಬದ್ಧವಾಗಿ ನಡೆದಿರಬೇಕು ಎಂದು ಪೀಠ ಸ್ಪಷ್ಟಪಡಿಸಿದೆ.

Continue Reading

ಪ್ರಮುಖ ಸುದ್ದಿ

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

PM Narendra Modi: ನಮ್ಮ ಮುಸ್ಲಿಂ ಸಹೋದರಿಯರು ವೋಟ್ ಬ್ಯಾಂಕ್ ರಾಜಕಾರಣದ ಅತಿ ದೊಡ್ಡ ಬಲಿಪಶುಗಳು. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕಾಂಗ್ರೆಸ್ ಮುಸ್ಲಿಂ ಸಹೋದರಿಯರಿಗೆ ಭದ್ರತೆಯನ್ನು ನೀಡಲಿಲ್ಲ. ತ್ರಿವಳಿ ತಲಾಖ್ ರದ್ದತಿಯು ಮಹಿಳೆಯರಿಗೆ ಮಾತ್ರವಲ್ಲದೆ ಕುಟುಂಬಗಳಿಗೆ ಭದ್ರತೆಯನ್ನು ಒದಗಿಸಿದೆ ಎಂದಿದ್ದಾರೆ ಮೋದಿ.

VISTARANEWS.COM


on

pm Narendra Modi
Koo

ಹೊಸದಿಲ್ಲಿ: ಕೇಂದ್ರದದಲ್ಲಿದ್ದ ಹಿಂದಿನ ಕಾಂಗ್ರೆಸ್‌ ಸರ್ಕಾರಗಳ ವಿರುದ್ಧ ಕಿಡಿಕಾರಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು, ನವ ಭಾರತವು (India) ಇತರ ದೇಶಗಳಿಗೆ ಭಯೋತ್ಪಾದಕರ (terrorists) ಬಗ್ಗೆ ದಾಖಲೆಗಳನ್ನು (dossiers)‌ ಕಳುಹಿಸುವುದಿಲ್ಲ. ಬದಲಾಗಿ ಅವರಿಗೆ “ಡೋಸ್” ನೀಡಿ ಅವರ ತವರು ನೆಲದಲ್ಲೇ (Home turf) ಅವರನ್ನು ಕೊಲ್ಲುತ್ತದೆ ಎಂದು ಹೇಳಿದ್ದಾರೆ.

“ಹತ್ತು ವರ್ಷಗಳ ಹಿಂದೆ ದೇಶವು ಭಯೋತ್ಪಾದನೆಯಿಂದ ಬಳಲುತ್ತಿತ್ತು. ಆದರೆ ಕಾಂಗ್ರೆಸ್, ಭಯೋತ್ಪಾದನೆಯ ಮೂಲವನ್ನು ತಿಳಿದಿದ್ದರೂ, ಪಾಕಿಸ್ತಾನಕ್ಕೆ ದಸ್ತಾವೇಜನ್ನು ಕಳುಹಿಸುತ್ತಿತ್ತು” ಎಂದು ಗುಜರಾತ್‌ನ ಸಬರ್ಕಾಂತ ಜಿಲ್ಲೆಯ ಹಿಮತ್‌ನಗರ ನಗರದಲ್ಲಿ ನಡೆದ ರ್ಯಾಲಿಯಲ್ಲಿ ಪ್ರಧಾನಿ ಹೇಳಿದರು. “ಇಂದು, ಭಾರತವು ಭಯೋತ್ಪಾದನೆಯ ನೇತಾರರಿಗೆ ದಾಖಲೆಗಳನ್ನು ಕಳುಹಿಸುವುದಿಲ್ಲ. ಆದರೆ ಅವರಿಗೆ ಡೋಸ್ ನೀಡಿ ಅವರ ಮನೆಯ ಒಳಗೇ ಕೊಲ್ಲುತ್ತದೆ” ಎಂದಿದ್ದಾರೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಕಾಂಗ್ರೆಸ್ ಅನ್ನು ಗುರಿಯಾಗಿಟ್ಟುಕೊಂಡು, ಭಾರತದಲ್ಲಿ ಮುಸ್ಲಿಂ ಮಹಿಳೆಯರು ವೋಟ್ ಬ್ಯಾಂಕ್ ರಾಜಕಾರಣದ ದೊಡ್ಡ ಬಲಿಪಶುಗಳು ಎಂದು ಹೇಳಿದರು. “ನಮ್ಮ ಮುಸ್ಲಿಂ ಸಹೋದರಿಯರು ವೋಟ್ ಬ್ಯಾಂಕ್ ರಾಜಕಾರಣದ ಅತಿ ದೊಡ್ಡ ಬಲಿಪಶುಗಳು. ಸುಪ್ರೀಂ ಕೋರ್ಟ್ ತೀರ್ಪಿನ ನಂತರವೂ ಕಾಂಗ್ರೆಸ್ ಮುಸ್ಲಿಂ ಸಹೋದರಿಯರಿಗೆ ಭದ್ರತೆಯನ್ನು ನೀಡಲಿಲ್ಲ. ತ್ರಿವಳಿ ತಲಾಖ್ ರದ್ದತಿಯು ಮಹಿಳೆಯರಿಗೆ ಮಾತ್ರವಲ್ಲದೆ ಕುಟುಂಬಗಳಿಗೆ ಭದ್ರತೆಯನ್ನು ಒದಗಿಸಿದೆ. ಅವರು (ಕಾಂಗ್ರೆಸ್) ವೋಟ್ ಬ್ಯಾಂಕ್‌ಗಾಗಿ ತ್ರಿವಳಿ ತಲಾಖ್ ಪದ್ಧತಿಯನ್ನು ನಿಲ್ಲಿಸಲಿಲ್ಲ…” ಎಂದು ಪ್ರಧಾನಿ ಪ್ರತಿಪಾದಿಸಿದರು.

“ನಾನು ಮತ ಬ್ಯಾಂಕ್ ಬಗ್ಗೆ ಚಿಂತಿಸುವುದಿಲ್ಲ. ನಾನು ಚುನಾವಣೆಯಲ್ಲಿ ಗೆಲ್ಲಲು ಕೆಲಸ ಮಾಡುವುದಿಲ್ಲ. ನಾವು ಮುಸ್ಲಿಂ ಮಹಿಳೆಯರ ಜೀವನವನ್ನು ಸುಲಭಗೊಳಿಸಲು ಬಯಸಿದ್ದು, ತ್ರಿವಳಿ ತಲಾಖ್ ಅನ್ನು ಕಾನೂನುಬಾಹಿರಗೊಳಿಸಿದ್ದೇವೆ…” ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಪುನರಾಯ್ಕೆಯಾದರೆ ದೇಶದಲ್ಲಿ ಬೆಂಕಿ ಹೊತ್ತಿಕೊಳ್ಳುತ್ತದೆ ಎಂದು ಕಾಂಗ್ರೆಸ್ ನಾಯಕರು ಎಚ್ಚರಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ (Rahul Gandhi) ವಿರುದ್ಧ ವ್ಯಂಗ್ಯವಾಡಿದರು. “ಕಾಂಗ್ರೆಸ್‌ನ ʻಶೆಹಜಾದಾʼ ಮೋದಿ ಮೂರನೇ ಬಾರಿಗೆ ಪ್ರಧಾನಿಯಾದರೆ ದೇಶದಲ್ಲಿ ಬೆಂಕಿ ಬೀಳುತ್ತದೆ ಎಂದು ಹೇಳುತ್ತಿದ್ದಾರೆ. ವಾಸ್ತವ ಏನೆಂದರೆ, ಕಾಂಗ್ರೆಸ್‌ನ ಕನಸುಗಳು ಸುಟ್ಟು ಬೂದಿಯಾಗಿವೆ…” ಎಂದು ಮೋದಿ ಹೇಳಿದರು.

“ಕಾಂಗ್ರೆಸ್ ನಾಯಕರು ಈಗ ಸಂವಿಧಾನವು ಅಪಾಯದಲ್ಲಿದೆ ಮತ್ತು ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಹೇಳುತ್ತಿದ್ದಾರೆ. ವಾಸ್ತವದಲ್ಲಿ, ಕಾಂಗ್ರೆಸ್ ತನ್ನ 70 ವರ್ಷಗಳ ಆಡಳಿತದಲ್ಲಿ ಇಡೀ ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತರಲು ಸಾಧ್ಯವಾಗಲಿಲ್ಲ. ನಮ್ಮ ಸಂವಿಧಾನವನ್ನು ಕಾಶ್ಮೀರದಲ್ಲಿ ಜಾರಿಗೊಳಿಸಿರಲಿಲ್ಲ. ನಾನು ಸಂವಿಧಾನಕ್ಕೆ ಬದ್ಧನಾಗಿರುವ ಕಾರಣ ಅದನ್ನು ಮಾಡಿದೆ” ಎಂದು ಅವರು ಒತ್ತಿ ಹೇಳಿದರು.

ಇದನ್ನೂ ಓದಿ: Shyam Rangeela: ಮೋದಿಯನ್ನು ಮಿಮಿಕ್ರಿ ಮಾಡಿ ಖ್ಯಾತಿಯಾದ ಕಲಾವಿದ ಈಗ ಪ್ರಧಾನಿ ವಿರುದ್ಧವೇ ಕಣಕ್ಕೆ!

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

ದೇಶದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು ದೇಶೀಯವಾಗಿ ಅಭಿವೃದ್ಧಿಪಡಿಸಿರುವ ಸ್ಮಾರ್ಟ್‌ ಕ್ಷಿಪಣಿಯ ಪರೀಕ್ಷೆಯನ್ನು ಯಶಸ್ವಿಯಾಗಿ ಕೈಗೊಳ್ಳಲಾಗಿದೆ. ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ, ವೈರಿಗಳ ಮೇಲೆ ಹದ್ದಿನ ಕಣ್ಣಿಡುವ ಇದು ಗೇಮ್‌ ಚೇಂಜರ್‌ ಎಂದೇ ಹೇಳಲಾಗುತ್ತಿದೆ.

VISTARANEWS.COM


on

SMART Missile
Koo

ಭಾರತದ ರಕ್ಷಣಾ ಕ್ಷೇತ್ರಕ್ಕೆ ಬಲ ನೀಡುವ, ಜಲಾಂತರ್ಗಾಮಿ ನೌಕೆಗಳನ್ನು ನಿಗ್ರಹಿಸುವ (Anti-Submarine Missile System) ಸಾಮರ್ಥ್ಯದ ಸೂಪರ್‌ಸಾನಿಕ್‌ ಮಿಸೈಲ್‌ ಅಸಿಸ್ಟೆಡ್‌ ರಿಲೀಸ್‌ ಆಫ್‌ ಟಾರ್ಪೆಡೊ (SMART Missile) ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ. ಇದು ಭಾರತದ ನೌಕಾಪಡೆಯ ಬಲವನ್ನು ಇನ್ನಷ್ಟು ಹೆಚ್ಚಿಸಲಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯು (DRDO) ದೇಶೀಯವಾಗಿ ಸ್ಮಾರ್ಟ್‌ ಕ್ಷಿಪಣಿಯನ್ನು ಅಭಿವೃದ್ಧಿಪಡಿಸಿದೆ. ಇದರಿಂದ ಸಾಗರ ಪ್ರದೇಶದಲ್ಲಿ ನೌಕಾಪಡೆಯು ವೈರಿಗಳ ಮೇಲೆ ಇನ್ನಷ್ಟು ನಿಗಾ ಇರಿಸಲು, ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಳ್ಳಲು, ಪ್ರತಿದಾಳಿ ನಡೆಸಲು ನೆರವಾಗಲಿದೆ. ಇದು ಎರಡನೇ ಪರೀಕ್ಷಾರ್ಥ ಉಡಾವಣೆ. ಇದು ಕ್ಯಾನಿಸ್ಟರ್‌ ಆಧಾರಿತ, 643 ಕಿ.ಮೀ ದೂರದ ಗುರಿಗಳನ್ನು ಹೊಡೆದುರುಳಿಸಬಲ್ಲ ಸಾಮರ್ಥ್ಯ ಹೊಂದಿದ್ದು, ಸಾಗರ ಪ್ರದೇಶದಲ್ಲಿ ಯಾವುದೇ ತುರ್ತು ಪರಿಸ್ಥಿತಿ ಎದುರಾದಾಗ ಕ್ಷಿಪ್ರ ಕಾರ್ಯಾಚರಣೆ ನಡೆಸಲಿದೆ. ಆಗಸದಲ್ಲಿಯೇ ಶತ್ರುನೌಕೆಗಳನ್ನು ಡಿಟೆಕ್ಟ್‌ ಮಾಡುವ ತಂತ್ರಜ್ಞಾನ ಹೊಂದಿದೆ.

ಭಾರತದ ವಾಯುಪಡೆ, ನೌಕಾಪಡೆ ಹಾಗೂ ಭೂಸೇನೆಗಳು ಮೂರೂ ಕಳೆದ ಒಂದು ದಶಕದಲ್ಲಿ ಸಾಕಷ್ಟು ಹೊಸ ಶಸ್ತ್ರಾಸ್ತ್ರಗಳನ್ನು ಪಡೆದಿವೆ. ಭಾರತದ ನೌಕಾಪಡೆ ಈಗ ಸಾಕಷ್ಟು ಯುದ್ಧನೌಕೆಗಳು, ಐಎನ್‌ಎಸ್‌ ವಿಕ್ರಮಾದಿತ್ಯದಂಥ ಜೆಟ್‌ಫೈಟರ್‌ ಕ್ಯಾರಿಯರ್‌ಗಳು, ಅರಿಹಂತ್‌ನಂತ ಸಬ್‌ಮರೀನ್‌ಗಳನ್ನು ಹೊಂದಿದೆ. ಪ್ರಸ್ತುತ ಇದು ಜಗತ್ತಿನ 7ನೇ ಅತಿ ಪ್ರಬಲ ನೌಕಾಪಡೆಯೆನಿಸಿದೆ. ಈ ಪ್ರಾಬಲ್ಯ ಭಾರತವನ್ನು ಸುತ್ತುವರಿದ ಸಾಗರ ಪ್ರದೇಶವನ್ನು ರಕ್ಷಿಸುವುದಷ್ಟೇ ಅಲ್ಲ, ಇಲ್ಲ ಓಡಾಡುವ ಮಿತ್ರದೇಶಗಳ ನೌಕೆಗಳ ರಕ್ಷಣೆಗೂ ನೆರವಾಗಿದೆ ಎನ್ನುವುದು ನಮ್ಮ ಹೆಮ್ಮೆ. ಇತ್ತೀಚೆಗೆ ನಮ್ಮ ನೌಕಾದಳ ಬಲ್ಗೇರಿಯಾ ಹಾಗೂ ಇರಾನ್‌ನ ಹಡಗುಗಳನ್ನು ಕಡಲ್ಗಳ್ಳರಿಂದ ರಕ್ಷಿಸಿದುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು. ಇತ್ತೀಚೆಗೆ ಬಂಗಾಳ ಕೊಲ್ಲಿಯಲ್ಲಿ ನಮ್ಮ ಸ್ವಾಮ್ಯವನ್ನು ಇನ್ನಷ್ಟು ಗಟ್ಟಿಗೊಳಿಸುವ ನೆಲೆಯಿಂದ ಲಕ್ಷದ್ವೀಪದಲ್ಲಿ ನೌಕಾಪಡೆಯು ʼಐಎನ್‌ಎಸ್‌ಜಟಾಯುʼ ಹೆಸರಿನ ಮತ್ತೊಂದು ನೆಲೆಯನ್ನು ನಿರ್ಮಿಸುವ ವ್ಯೂಹಾತ್ಮಕ ಹಾಗೂ ರಕ್ಷಣಾತ್ಮಕ ಹೆಜ್ಜೆ ಇರಿಸಿದೆ. ಈಗಾಗಲೇ ಅಂಡಮಾನ್‌ನಲ್ಲಿ ಐಎನ್‌ಎಸ್‌ ಬಾಜ್‌ ಎಂಬ ನೌಕಾನೆಲೆ ಇದೆ. ಲಕ್ಷದ್ವೀಪದ ಕವರಟ್ಟಿಯಲ್ಲೇ ದ್ವೀಪ್ರಕಾಶಕ ಎಂಬ ನೌಕಾನೆಲೆ ಇದೆ. ಪಶ್ಚಿಮ ಅರಬ್ಬೀ ಸಮುದ್ರದಲ್ಲಿ ವೈರಿಗಳ ಮೇಲೆ ಹೆಚ್ಚಿನ ನಿಗಾ ಇರಿಸುವುದು, ಸಾಗರ ಪ್ರದೇಶದಲ್ಲಿ ಭಯೋತ್ಪಾದನೆ- ಅಪರಾಧ ತಡೆಗಟ್ಟುವುದು, ಸಮುದ್ರ ಪ್ರದೇಶದಲ್ಲಿ ಮಾದಕವಸ್ತು ಅಕ್ರಮ ಸಾಗಣೆ ನಿಯಂತ್ರಣ ಸಾಧ್ಯ. ಹೊಸ ಟಾರ್ಪೆಡೊ (SMART Missile) ಕ್ಷಿಪಣಿ ಕೂಡ ಇದಕ್ಕೆ ಪೂರಕ.

ಇತ್ತೀಚೆಗೆ ನಮ್ಮ ಕ್ಷಿಪಣಿ ಬಲ ಇನ್ನಷ್ಟು ಮೈದುಂಬಿಕೊಳ್ಳುತ್ತಿದೆ. ದೇಶೀಯವಾಗಿ ಅಭಿವೃದ್ಧಿಪಡಿಸಿದ, ಹಲವು ಪರಮಾಣು ಬಾಂಬ್‌ಗಳನ್ನು (Nuclear warhead) ಏಕಕಾಲಕ್ಕೆ ಕೊಂಡೊಯ್ಯಬಲ್ಲ ಸಾಮರ್ಥ್ಯದ ಅಗ್ನಿ-ವಿ (Agni-V) ಬಹು ಸಿಡಿತಲೆ ಕ್ಷಿಪಣಿಯ ಇತ್ತೀಚಿನ ಹಾರಾಟ ಪರೀಕ್ಷೆ ಇಲ್ಲಿ ಉಲ್ಲೇಖನೀಯ. ಇದೊಂದು ಬಹು ಸ್ವತಂತ್ರವಾಗಿ ಕಾರ್ಯಾಚರಿಸಬಲ್ಲ, ರೀ-ಎಂಟ್ರಿ ತಂತ್ರಜ್ಞಾನ ಹೊಂದಿರುವ ಕ್ಷಿಪಣಿ. ಇದರ ಸಿಡಿತಲೆಯು ಬಾಹ್ಯಾಕಾಶದಲ್ಲಿ ಬೇರ್ಪಟ್ಟು, ಬೆಂಕಿಯ ಚೆಂಡುಗಳು ವಾತಾವರಣವನ್ನು ಮರು ಪ್ರವೇಶಿಸುತ್ತವೆ. ಪ್ರತಿಯೊಂದು ಸಿಡಿತಲೆಯೂ ವಿಭಿನ್ನ ವೇಗದಲ್ಲಿ ಕೆಳಗಿಳಿದು ನೆಲಕ್ಕೆ ಅಪ್ಪಳಿಸುತ್ತದೆ. MIRVಯ ಮುಖ್ಯ ಸಾಮರ್ಥ್ಯವೇ ಮರು-ಪ್ರವೇಶ. ಪ್ರತಿ ಸಿಡಿತಲೆಯೂ ವಿಭಿನ್ನ ವೇಗಗಳು ಮತ್ತು ಪ್ರತ್ಯೇಕ ಗುರಿಗಳನ್ನು ಹೊಂದಿರುವುದರಿಂದ, ಕ್ಷಿಪಣಿ ವಿರೋಧಿ ಗುರಾಣಿಗಳಿಂದ ಅಗ್ನಿ-V ಅನ್ನು ಪ್ರತಿಬಂಧಿಸಲು ಸಾಧ್ಯವಿಲ್ಲ. ಇದನ್ನು ʼಮಿಷನ್‌ ದಿವ್ಯಾಸ್ತ್ರʼ ಎಂದು ಕರೆಯಲಾಗಿದೆ.

ಏಷ್ಯಾ ಉಪಖಂಡದಲ್ಲಿ ಆ ಮೂಲಕ ಶಸ್ತ್ರಾಸ್ತ್ರ ಪೈಪೋಟಿ ಸೃಷ್ಟಿಸುವುದು ನಮ್ಮ ಉದ್ದೇಶವಲ್ಲ. ಜಗತ್ತಿನಲ್ಲಿಯೇ ಅತಿ ದೊಡ್ಡದಾದ ಪ್ರಜಾಪ್ರಭುತ್ವ ದೇಶದ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮ್ಮ ಉದ್ದೇಶ. ನಾವು ಬಲಿಷ್ಟರಾದಾಗ ನಮ್‌ ಮಸುತ್ತಮುತ್ತಲಿನವರೂ ನಮ್ಮನ್ನು ಗೌರವದಿಂದ ಕಾಣುತ್ತಾರೆ. ಅಮೆರಿಕದಂಥ ಬಲಿಷ್ಠ ರಾಷ್ಟ್ರಗಳೂ ʼಭಾರತ ನಮ್ಮ ಮಿತ್ರʼ ಎಂದು ಹಾಡಿ ಹೊಗಳುತ್ತವೆ. ಇಸ್ರೇಲ್‌, ಆಸ್ಟ್ರೇಲಿಯದಂಥ ದೇಶಗಳು ನಮ್ಮೊಂದಿಗೆ ರಕ್ಷಣಾ ಕೊಡುಕೊಳ್ಳುವಿಕೆಗಳನ್ನು ನಡೆಸುತ್ತವೆ. ಫ್ರಾನ್ಸ್‌ನಂಥ ದೇಶಗಳೇ ರಫೇಲ್‌ನಂಥ ಅದ್ಭುತ ಯುದ್ಧಸಾಮರ್ಥ್ಯವನ್ನು ಹೊಂದಿರುವ ಫೈಟರ್‌ ಜೆಟ್‌ಗಳನ್ನು ನಮ್ಮೊಂದಿಗೆ ಹಂಚಿಕೊಳ್ಳುತ್ತವೆ. ʼಭಾರತಕ್ಕೆ ವಿಶ್ವಸಂಸ್ಥೆಯ ಭದ್ರತಾ ಸಮಿತಿಯಲ್ಲಿ ಶಾಶ್ವತ ಸ್ಥಾನಮಾನ ನೀಡಬೇಕುʼ ಎಂದು ಬ್ರಿಟನ್‌ ಪ್ರತಿಪಾದಿಸುತ್ತದೆ. ಇದೆಲ್ಲವೂ ಸ್ವಸಾಮರ್ಥ್ಯ ಇದ್ದಾಗ ಮಾತ್ರ ಸಾಧ್ಯ. ಆ ನಿಟ್ಟಿನಲ್ಲಿ ಭಾರತ ನಡೆ ಬಲಿಷ್ಠತೆಯತ್ತ ಸಹಜವಾಗಿ ಮುಂದುವರಿದಿದೆ.

ಇದನ್ನೂ ಓದಿ: SMART Missile: ನೌಕೆಗಳನ್ನು ಧ್ವಂಸ ಮಾಡುವ ಸ್ಮಾರ್ಟ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ; ರಕ್ಷಣಾ ಕ್ಷೇತ್ರಕ್ಕೆ ಆನೆ ಬಲ

Continue Reading

ದೇಶ

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Love Jihad: ರಾಜಸ್ಥಾನದ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿರುವ ರಶೀದ್‌ ಖಾನ್‌ ಎಂಬಾತನು ಹಿಂದು ಯುವತಿಯ ಸ್ನೇಹ ಸಂಪಾದಿಸಿದ್ದಾನೆ. ತಾನು ಕೂಡ ಹಿಂದು ಎಂಬುದಾಗಿ ನಕಲಿ ಹೆಸರು ಹೇಳಿದ್ದಾನೆ. ಇದಾದ ಬಳಿಕ ಈತನ ಪ್ರೇಮ ನಿವೇದನೆಯನ್ನು ಯುವತಿ ಒಪ್ಪಿದ್ದಾಳೆ. ಆದರೆ, ಈತನು ಅತ್ಯಾಚಾರ ಎಸಗಿರುವ ಕುರಿತು ಯುವತಿಯು ದೂರು ದಾಖಲಿಸಿದ್ದು, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ.

VISTARANEWS.COM


on

Love Jihad
Koo

ಜೈಪುರ: ರಾಜಸ್ಥಾನದಲ್ಲಿ (Rajasthan) ಮುಸ್ಲಿಂ ಯುವಕನೊಬ್ಬ ಹಿಂದು ಯುವತಿಗೆ ತಾನು ಕೂಡ ಹಿಂದು ಎಂಬುದಾಗಿ ನಂಬಿಸಿ, ಮದುವೆಯಾಗುವುದಾಗಿ ಭರವಸೆ ನೀಡಿ, ಈಗ ಕೊನೆಗೆ ಆಕೆಯ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. ಹಾಗಾಗಿ, ಪ್ರಕರಣದಲ್ಲಿ ಲವ್‌ ಜಿಹಾದ್‌ (Love Jihad) ಶಂಕೆ ವ್ಯಕ್ತವಾಗಿದೆ. ಹಿಂದು ಯುವತಿ ದಾಖಲಿಸಿದ ದೂರಿನ ಅನ್ವಯ ಪೊಲೀಸರು ಮುಸ್ಲಿಂ ಯುವಕನ ವಿರುದ್ಧ ಕೇಸ್‌ ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಜಸ್ಥಾನದ ದೌಸಾ ಪ್ರದೇಶದಲ್ಲಿ ಉತ್ತರ ಪ್ರದೇಶ ಮೂಲದ ರಶೀದ್‌ ಖಾನ್‌ ಎಂಬುವನು ಹಿಂದು ಯುವತಿ ಜತೆ ಸ್ನೇಹ ಸಂಪಾದಿಸಿದ್ದಾನೆ. ತಾನು ಕೂಡ ಹಿಂದು ಎಂದು ಆಕೆಯನ್ನು ನಂಬಿಸಿದ್ದಾನೆ. ಕೊನೆಗೆ ಒಂದು ದಿನ ಯುವತಿಯ ಎದುರು ಪ್ರೇಮ ನಿವೇದನೆ ಮಾಡಿದ್ದು, ಮದುವೆಯಾಗುವುದಾಗಿ ನಂಬಿಸಿದ್ದಾನೆ. ಆದರೆ, ಕಳೆದ 7 ತಿಂಗಳಿಂದ ಯುವತಿ ಮೇಲೆ ರಶೀದ್‌ ಖಾನ್‌ ಅತ್ಯಾಚಾರ ಎಸಗಿದ್ದು, ಆತನ ಬಂಧನದಿಂದ ಬಿಡಿಸಿಕೊಂಡು ಬಂದ ಯುವತಿಯು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

“ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರಶೀದ್‌ ಖಾನ್‌, ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ. ನಾನೀಗ ಗರ್ಭಿಣಿಯಾಗಿದ್ದು, ಗರ್ಭಪಾತ ಮಾಡಿಸಿಕೊ ಎಂದು ಒತ್ತಾಯಿಸುತ್ತಿದ್ದಾನೆ. ಹಾಗಾಗಿ, ರಶೀದ್‌ ಖಾನ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಸೀತಾ ಯಾದವ್‌ ಎಂಬ ಯುವತಿಯು ದೂರು ದಾಖಲಿಸಿದ್ದಾರೆ. ರಶೀದ್‌ ಖಾನ್‌ ವಿರುದ್ಧ ಐಪಿಸಿಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕಾಗಿ ಬಲೆ ಬೀಸಿದ್ದಾರೆ.

physical abuse women

ಹೋಟೆಲ್‌ನಲ್ಲಿ ಹಿಂದು ಯುವತಿ ಶವ ಪತ್ತೆ

ಒಂದು ದಿನದ ಹಿಂದಷ್ಟೇ, ಮಧ್ಯಪ್ರದೇಶದಲ್ಲಿ ಹೋಟೆಲ್‌ ರೂಮ್‌ನಲ್ಲಿ ಹಿಂದು ಯುವತಿ ಶವ ಪತ್ತೆಯಾಗಿದ್ದ, ಲವ್‌ ಜಿಹಾದ್‌ ಶಂಕೆ ವ್ಯಕ್ತವಾಗಿದೆ. ಹೊಟೇಲ್‌ ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಹಿಂದೂ ಯುವತಿಯ ಮೃತದೇಹ ಪತ್ತೆಯಾಗಿದ್ದು, ಆಕೆ ಪ್ರಿಯಕರ ಜುನೈದ್‌ ಎಂಬಾತನ ಕೈವಾಡ ಇರುವ ಶಂಕೆ ವ್ಯಕ್ತವಾಗಿದೆ. ಮಧ್ಯಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಈ ಘಟನೆ ನಡೆಸಿದ್ದು, ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಬಹಳ ಸುದ್ದಿ ಮಾಡುತ್ತಿದೆ. ಪೊಲೀಸ್‌ ಮಾಹಿತಿ ಪ್ರಕಾರ, ಜುನೈದ್‌ ಎಂಬಾತನ ಹೆಸರಿನಲ್ಲಿ ಬುಕ್‌ ಆಗಿದ್ದ ಹೊಟೇಲ್‌ ರೂಂನಲ್ಲಿ ಹಿಂದೂ ಯುವತಿಯ(24) ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿದೆ. ಇದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಟಿಕಾ ಎಂಬ ಹೊಟೇಲ್‌ನಲ್ಲಿ ಈ ಘಟನೆ ನಡೆದಿದ್ದು, ಮೃತ ಯುವತಿ ಎರಡು ದಿನಗಳಿಂದ ಆರೋಪಿ ಜುನೈದ್‌ ಜೊತೆ ಹೊಟೇಲ್‌ನಲ್ಲಿ ತಂಗಿದ್ದಳು. ಅನುಮಾನಗೊಂಡ ಹೊಟೇಲ್‌ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ತಕ್ಷಣ ಸ್ಥಳಕ್ಕೆ ದೌಡಾಯಿಸಿ ಬಾಗಿಲು ಒಡೆದು ನೋಡಿದಾಗ ಆಕೆಯ ದೇಹ ಸೀಲಿಂಗ್‌ ಫ್ಯಾನ್‌ನಲ್ಲಿ ನೇತಾಡುತ್ತಿತ್ತು.

ಇದನ್ನೂ ಓದಿ: Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

Continue Reading
Advertisement
Hindu Marriage
ದೇಶ2 mins ago

Hindu Marriage: ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂಕೋರ್ಟ್‌

pm Narendra Modi
ಪ್ರಮುಖ ಸುದ್ದಿ23 mins ago

PM Narendra Modi: ಉಗ್ರರನ್ನು ಅವರ ತಾಯ್ನೆಲದಲ್ಲೇ ಕೊಲ್ಲುತ್ತೇವೆ: ಗುಡುಗಿದ ಪಿಎಂ ನರೇಂದ್ರ ಮೋದಿ

karnataka Weather Forecast
ಮಳೆ1 hour ago

Karnataka Weather : ಇಂದು ಮೂರು ಹೊತ್ತು ಒಂದೊಂದು ವಾತಾವರಣ

Vastu Tips
ಲೈಫ್‌ಸ್ಟೈಲ್1 hour ago

Vastu Tips: ಮನೆ ಹೊರಗಿನ ಉದ್ಯಾನದಲ್ಲಿ ವಾಸ್ತು ಪಾಲಿಸಿ; ಮನೆಯೊಳಗಿನ ನೆಮ್ಮದಿ ವೃದ್ಧಿಸಿ

SMART Missile
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಕ್ಷಿಪಣಿ ಬಲದಿಂದ ನಮ್ಮ ನೌಕಾಪಡೆ ‘ಸ್ಮಾರ್ಟ್‌’ ಜತೆಗೆ ಇನ್ನಷ್ಟು ಬಲಿಷ್ಠ

Aloe Vera face mask
ಆರೋಗ್ಯ2 hours ago

Aloe Vera Benefits: ಬೇಸಿಗೆಯಲ್ಲಿ ಚರ್ಮವನ್ನು ತಂಪಾಗಿಸಲು ಲೋಳೆಸರದ ಮಾಸ್ಕ್‌ ಬಳಸಿ

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

Benefits of Tender Coconut
ಆರೋಗ್ಯ3 hours ago

Benefits of Tender Coconut: ಎಳನೀರು ಹೀರುವುದರಿಂದ ದೇಹಕ್ಕೆ ಏನೇನು ಲಾಭ ಗೊತ್ತೇ?

Bhajanotsava
ಬೆಂಗಳೂರು6 hours ago

Bhajanotsava: ಓಂಕಾರ ಆಶ್ರಮದಲ್ಲಿ ನಿರಂತರ ಭಜನೋತ್ಸವ ಸಂಪನ್ನ

Shata Chandika Yaga
ಚಿಕ್ಕಬಳ್ಳಾಪುರ7 hours ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌