Ram Mandir: ಏನಿದು ಪ್ರಾಣ ಪ್ರತಿಷ್ಠೆ? ಈ ಸಂಗತಿ ನಮಗೇಕೆ ಗೊತ್ತಿರಬೇಕೆಂದರೆ... - Vistara News

ದೇಶ

Ram Mandir: ಏನಿದು ಪ್ರಾಣ ಪ್ರತಿಷ್ಠೆ? ಈ ಸಂಗತಿ ನಮಗೇಕೆ ಗೊತ್ತಿರಬೇಕೆಂದರೆ…

Ram Mandir: ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22ರಂದು ದೇವರ ವಿಗ್ರಹಕ್ಕೆ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಚರಣೆಯ ಬಗ್ಗೆ ವಿವರ ಇಲ್ಲಿದೆ.

VISTARANEWS.COM


on

Why is Ram Mandir Prana Pratshapan on January 22 And check details
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಯೋಧ್ಯೆ: ಕೋಟ್ಯಂತರ ಹಿಂದೂಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ 2024ರ ಜನವರಿ 22ರಂದು ರಾಮ ಮಂದಿರ (Ram Mandir) ಉದ್ಘಾಟನೆಯಾಗಲಿದೆ. ಈ ‘ಪ್ರಾಣ ಪ್ರತಿಷ್ಠಾ’ (Pran Pratistha-ಪ್ರತಿಷ್ಠಾಪನಾ ಸಮಾರಂಭ) ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಈ ಪ್ರತಿಷ್ಠಾಪನಾ ಸಮಾರಂಭದ ನಂತರ ರಾಮ್ ಲಲ್ಲಾ (Lord Ram Lalla) ವಿಗ್ರಹವನ್ನು ರಾಮ ದೇವಾಲಯದಲ್ಲಿ ಸ್ಥಾಪಿಸಲಾಗುತ್ತದೆ. ಹಾಗಾದರೆ ಪ್ರಾಣ ಪ್ರತಿಷ್ಠಾ ಎಂದರೇನು? ಇದರಲ್ಲಿನ ಆಚರಣೆಗಳು ಯಾವುವು? ಎನ್ನುವುದರ ವಿವರ ಇಲ್ಲಿದೆ.

ಪ್ರಾಣ ಪ್ರತಿಷ್ಠಾ ಎಂದರೇನು?

ಪ್ರಾಣ ಪ್ರತಿಷ್ಠಾ ಎನ್ನುವುದು ಹಿಂದೂ ಮತ್ತು ಜೈನ ಧರ್ಮದಲ್ಲಿನ ಜನಪ್ರಿಯ ಆಚರಣೆಯಾಗಿದ್ದು, ದೇವರ ವಿಗ್ರಹವನ್ನು ಪವಿತ್ರಗೊಳಿಸಿದ ನಂತರ ದೇವಾಲಯದ ಗರ್ಭಗುಡಿಯಲ್ಲಿ ಸ್ಥಾಪಿಸಲಾಗುತ್ತದೆ. ವಿಗ್ರಹಗಳನ್ನು ಹೀಗೆ ಪ್ರತಿಷ್ಠಾಪಿಸುವ ಸಮಯದಲ್ಲಿ ಪುರೋಹಿತರು ವೈದಿಕ ಸ್ತೋತ್ರಗಳ ಪಠಣ ನಡೆಸುವುದು ವಾಡಿಕೆ. ಪ್ರಾಣ್ ಎಂಬ ಪದದ ಅರ್ಥ ಜೀವಶಕ್ತಿ ಮತ್ತು ಪ್ರತಿಷ್ಠಾ ಎಂದರೆ ಸ್ಥಾಪನೆ. ಪ್ರಾಣ ಪ್ರತಿಷ್ಠಾ ಅಥವಾ ಪ್ರತಿಷ್ಠಾಪನಾ ಸಮಾರಂಭ ಎಂದರೆ ವಿಗ್ರಹಕ್ಕೆ ಜೀವಶಕ್ತಿಯನ್ನು ತುಂಬುವ ಆಚರಣೆ ಎಂದು ಹಿರಿಯರು ಹೇಳುತ್ತಾರೆ.

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯ ಮೊದಲು ವಿಗ್ರಹಕ್ಕೆ ಯಾವುದೇ ವಿಶೇಷ ಶಕ್ತಿ ಇರುವುದಿಲ್ಲ ಎನ್ನಲಾಗಿದೆ. ಪ್ರಾಣ ಪ್ರತಿಷ್ಠಾನದ ಮೂಲಕ ವಿಗ್ರಹಕ್ಕೆ ವಿಶೇಷ ಶಕ್ತಿಗಳನ್ನು ತುಂಬಲಾಗುತ್ತದೆ. ಬಳಿಕವೇ ವಿಗ್ರಹ ದೈವಿಕ ಶಕ್ತಿಯಾಗಿ ರೂಪಾಂತರಗೊಳ್ಳುತ್ತದೆ. ಈ ಪ್ರಕ್ರಿಯೆಯ ನಂತರ ಭಕ್ತರು ಈ ವಿಗ್ರಹಗಳನ್ನು ಪೂಜಿಸಬಹುದು ಎಂದು ನಂಬಲಾಗಿದೆ.

ಆಚರಣೆ ಹೇಗೆ?

ಪ್ರಾಣ ಪ್ರತಿಷ್ಠಾ ಪ್ರಕ್ರಿಯೆಯು ವಿಗ್ರಹವನ್ನು ದೇವಾಲಯಕ್ಕೆ ಸಾಂಪ್ರದಾಯಿಕವಾಗಿ ತರುವುದರೊಂದಿಗೆ ಪ್ರಾರಂಭವಾಗುತ್ತದೆ. ನಂತರ ವಿಗ್ರಹಕ್ಕೆ ಹಾಲಿನಿಂದ ಸ್ನಾನ ಮಾಡಿಸಲಾಗುತ್ತದೆ. ಜತೆಗೆ ಸುಗಂಧ ದ್ರವ್ಯಗಳನ್ನು ಹಚ್ಚುವ ಮೂಲಕ ವಿಗ್ರಹವನ್ನು ಜೀವಂತಗೊಳಿಸಲಾಗುತ್ತದೆ. ಬಳಿಕ ಗರ್ಭಗುಡಿಯಲ್ಲಿ ವಿಗ್ರಹವನ್ನು ಇರಿಸುವ ಪ್ರಕ್ರಿಯೆ ಪ್ರಾರಂಭವಾಗುತ್ತದೆ. ಈ ಸಮಯದಲ್ಲಿ ವಿಗ್ರಹವನ್ನು ಪ್ರಧಾನ ಅರ್ಚಕರು ಅಲಂಕರಿಸಿ ಸರಿಯಾದ ಸ್ಥಳದಲ್ಲಿ ಸ್ಥಾಪಿಸುತ್ತಾರೆ. ನಂತರ ಪುರೋಹಿತರು ಸ್ತೋತ್ರಗಳು ಮತ್ತು ಮಂತ್ರಗಳನ್ನು ಹೇಳಲು ಪ್ರಾರಂಭಿಸುತ್ತಾರೆ. ಮೊದಲಿಗೆ ವಿಗ್ರಹದ ಕಣ್ಣುಗಳನ್ನು ತೆರೆಯಲಾಗುತ್ತದೆ. ಈ ಪ್ರಕ್ರಿಯೆ ನಂತರ ವಿಗ್ರಹವನ್ನು ಪೂಜಿಸಲು ಯೋಗ್ಯವೆಂದು ಪರಿಗಣಿಸಲಾಗುತ್ತದೆ. ಈ ಎಲ್ಲ ಆಚರಣೆಗಳು ವಿಗ್ರಹಕ್ಕೆ ಜೀವ ತುಂಬುತ್ತವೆ ಎನ್ನುವ ನಂಬಿಕೆ ಇದೆ.

ಮನೆಯಲ್ಲಿ ಯಾಕೆ ವಿಗ್ರಹ ಇರಿಸಬಾರದು?

ಪ್ರಸಿದ್ಧ ಯೋಗಿ ಮತ್ತು ತತ್ವಜ್ಞಾನಿ ಸದ್ಗುರುಗಳು ಕಲ್ಲಿನ ಪ್ರತಿಮೆಯನ್ನು ಮನೆಗಳಲ್ಲಿ ಯಾಕೆ ಸ್ಥಾಪಿಸಬಾರದು ಎನ್ನುವುದಕ್ಕೆ ವಿವರಣೆ ನೀಡುತ್ತಾರೆ. ದೇವಾಲಯಗಳಲ್ಲಿನ ವಿಗ್ರಹಕ್ಕೆ ಅರ್ಚಕರು ಪ್ರತಿದಿನ ಸರಿಯಾದ ಕ್ರಮದಲ್ಲಿ ಪೂಜೆ ಸಲ್ಲಿಸುತ್ತಾರೆ. ಆದರೆ ಮನೆಯಲ್ಲಿ ಎಲ್ಲ ದಿನ ಸಂಪ್ರದಾಯಬದ್ಧವಾಗಿ ಹೀಗೆ ಮಾಡಲು ಸಾಧ್ಯವಾಗುವುದಿಲ್ಲ. ಈ ಕಲ್ಲಿನ ವಿಗ್ರಹಗಳನ್ನು ಪ್ರತಿದಿನ ಪೂಜಿಸದಿದ್ದರೆ ಅವು ಮನೆಯಿಂದ ಶಕ್ತಿಯನ್ನು ಹೀರಿಕೊಳ್ಳುತ್ತವೆ ಎಂದು ಸದ್ಗುರು ಹೇಳುತ್ತಾರೆ. ಒಮ್ಮೆ ವಿಗ್ರಹವನ್ನು ಪ್ರತಿಷ್ಠಾಪಿಸಿದ ನಂತರ ಅದು ಶಾಶ್ವತವಾಗಿ ಉಳಿಯುತ್ತದೆ ಎಂದು ಪರಿಗಣಿಸಲಾಗುತ್ತದೆ. ಒಮ್ಮೆ ಪ್ರಾಣ ಪ್ರತಿಷ್ಠೆಯಾದರೆ ನಂತರ ಪ್ರತಿದಿನ ಎಲ್ಲ ಆಚರಣೆಗಳೊಂದಿಗೆ ವಿಗ್ರಹಗಳನ್ನು ಪೂಜಿಸಲೇ ಬೇಕು.

ವಿಗ್ರಹವು ಪೂರ್ವಾಭಿಮುಖವಾಗಿ ಏಕೆ ಇರಬೇಕು?

ಹಿಂದೂ ಧಾರ್ಮಿಕ ಗ್ರಂಥಗಳ ಪ್ರಕಾರ ದೇವಾಲಯದ ವಿಗ್ರಹದ ಮುಖವು ಯಾವಾಗಲೂ ಪೂರ್ವದ ಕಡೆಗೆ ಇರಬೇಕು. ಪೂರ್ವ ದಿಕ್ಕಿನಲ್ಲಿ ಸಕಾರಾತ್ಮಕ ಶಕ್ತಿ ಇದೆ ಎನ್ನುವ ನಂಬಿಕೆ ಇದಕ್ಕೆ ಕಾರಣ. ಸೂರ್ಯನು ಈ ದಿಕ್ಕಿನಲ್ಲಿ ಉದಯಿಸುವುದರಿಂದ ವಿಗ್ರಹಗಳನ್ನು ಪೂರ್ವಾಭಿಮುಖವಾಗಿ ಸ್ಥಾಪಿಸಬೇಕು ಎಂದು ಶಾಸ್ತ್ರಗಳು ಹೇಳುತ್ತವೆ. ಹಿಂದೂ ಸಂಪ್ರದಾಯಗಳ ದೇವರ ವಿಗ್ರಹಕ್ಕೆ ಮೊದಲ ಪೂಜೆ ಬ್ರಹ್ಮ ಮುಹೂರ್ತದಲ್ಲಿ ನಡೆಯಬೇಕು.

ಇದನ್ನೂ ಓದಿ: Ayodhya Ram Mandir: ಅಯೋಧ್ಯೆಯ ರಾಮ್‌ಲಲ್ಲಾ ಮೂರ್ತಿಗೆ ಮೈಸೂರಿನಿಂದ ಗುಪ್ತವಾಗಿ ತೆರಳಿದ ಶಿಲೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Kannur Bomb Blast: ಸ್ಟೀಲ್‌ನಿಂದ ತಯಾರಿಸಿದ ಬಾಂಬ್‌ಅನ್ನು ಗಮನಿಸದ ವ್ಯಕ್ತಿಯು, ಪೊಟ್ಟಣ ತೆಗೆದು, ಅದನ್ನು ಒಡೆಯಲು ಯತ್ನಿಸಿದ್ದಾರೆ. ಆಗ ಅದು ಸ್ಫೋಟಗೊಂಡು ಆಯಿನಾತ್‌ ವೇಲಾಯುಧನ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

VISTARANEWS.COM


on

Kannur Bomb Blast
Koo

ತಿರುವನಂತಪುರಂ: ಕೇರಳದ ಕಣ್ಣೂರು ಜಿಲ್ಲೆಯ ತಲಸ್ಸೇರಿ ಬಳಿಯ ಜಮೀನಿನಲ್ಲಿ ಬಾಂಬ್‌ (Kannur Bomb Blast) ಸ್ಫೋಟಗೊಂಡು 86 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಕುಡಕ್ಕಲಮ್‌ ಗ್ರಾಮದ ಆಯಿನಾತ್‌ ವೇಲಾಯುಧನ್‌ (Aayinatt Velayudhan) ಅವರು ಮೃತರು. ಆಯಿನಾತ್‌ ವೇಲಾಯುಧನ್‌ ಅವರು ಜಮೀನಿನಲ್ಲಿ ತೆಂಗಿನಕಾಯಿ ಸಂಗ್ರಹಿಸಲು ಹೋದಾಗ, ಬಾಂಬ್‌ ಇದ್ದ ಪೊಟ್ಟಣ ಕಂಡಿದೆ. ಅದನ್ನು ಅವರು ಎತ್ತಿಕೊಂಡು, ತೆಗೆದು ನೋಡಿದಾಗ ಅದು ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.

ಸ್ಟೀಲ್‌ನಿಂದ ತಯಾರಿಸಿದ ಬಾಂಬ್‌ಅನ್ನು ಗಮನಿಸದ ವ್ಯಕ್ತಿಯು, ಪೊಟ್ಟಣ ತೆಗೆದು, ಅದನ್ನು ಒಡೆಯಲು ಯತ್ನಿಸಿದ್ದಾರೆ. ಆಗ ಅದು ಸ್ಫೋಟಗೊಂಡು ಆಯಿನಾತ್‌ ವೇಲಾಯುಧನ್‌ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದಾರೆ ಎಂಬುದಾಗಿ ವೈದ್ಯರು ಘೋಷಿಸಿದರು ಎಂದು ಮೂಲಗಳು ತಿಳಿಸಿವೆ.

ಬಾಂಬ್‌ ಸ್ಫೋಟಗೊಂಡ ಜಮೀನು.

“ಬಾಂಬ್‌ ಸ್ಫೋಟದ ಕುರಿತು ತನಿಖೆ ಆರಂಭಿಸಲಾಗಿದೆ. ಬಾಂಬ್‌ ಸ್ಫೋಟಗೊಂಡ ಸ್ಥಳದಲ್ಲಿ ಬಾಂಬ್‌ ನಿಷ್ಕ್ರೀಯ ದಳದ ಸಿಬ್ಬಂದಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಮರಣೋತ್ತರ ಪರೀಕ್ಷೆಯನ್ನು ಬುಧವಾರ ನಡೆಸಲಾಗುತ್ತದೆ. ಮರಣೋತ್ತರ ವರದಿ ಬಂದ ಬಳಿಕ ಇನ್ನಷ್ಟು ಮಾಹಿತಿ ದೊರೆಯಲಿದೆ” ಎಂಬುದಾಗಿ ತಲಸ್ಸೇರಿ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಇದುವರೆಗೆ ಜಮೀನಿನಲ್ಲಿ ಬಾಂಬ್‌ ಹೇಗೆ ಬಂತು? ಅದನ್ನು ಎಲ್ಲಿ ತಯಾರಿಸಲಾಗಿತ್ತು? ಅದನ್ನೇಕೆ ಜಮೀನಿನಲ್ಲಿ ಬಿಸಾಡಲಾಗಿತ್ತು ಎಂಬುದರ ಮಾಹಿತಿ ಲಭ್ಯವಾಗಿಲ್ಲ.

ಕಣ್ಣೂರಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಬಾಂಬ್‌ಗಳ ಉತ್ಪಾದನೆ ಹಾಗೂ ಸ್ಫೋಟದಂತಹ ಪ್ರಕರಣಗಳು ಹೆಚ್ಚಾಗಿವೆ. ಆರು ತಿಂಗಳ ಹಿಂದೆಯೇ ಕಸ ಸಂಗ್ರಹಿಸುವ ವ್ಯಕ್ತಿಯೊಬ್ಬರು ಕಸ ಆಯ್ದುಕೊಳ್ಳುವಾಗ ಬಾಂಬ್‌ ಸ್ಫೋಟಗೊಂಡು ಗಾಯಗೊಂಡಿದ್ದರು. ಆರ್‌ಎಸ್‌ಎಸ್‌ ಕಾರ್ಯಕರ್ತರೊಬ್ಬರ ಮನೆಯ ಮೇಲೂ ಬಾಂಬ್‌ ದಾಳಿ ನಡೆದಿತ್ತು. ತಂಡವೊಂದು ಬಾಂಬ್‌ ತಯಾರಿಸುವಾಗಲೇ ಸ್ಫೋಟಗೊಂಡು ಸಿಪಿಎಂ ಕಾರ್ಯಕರ್ತರೊಬ್ಬರು ಮೃತಪಟ್ಟಿದ್ದರು. ಇಂತಹ ಪ್ರಕರಣಗಳನ್ನು ನಿಗ್ರಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Election Results 2024: ಪಶ್ಚಿಮ ಬಂಗಾಲದಲ್ಲಿ ಮತ ಎಣಿಕೆಗೂ ಮುನ್ನ ಬಾಂಬ್‌ ಸ್ಫೋಟ, ಐವರಿಗೆ ಗಾಯ

Continue Reading

ದೇಶ

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Kisan Samman Nidhi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ. ಇದೇ ವೇಳೆ ಅವರು ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ರೈತರ ಖಾತೆಗಳಿಗೆ ಜಮೆ ಮಾಡಿದ್ದಾರೆ.

VISTARANEWS.COM


on

Kisan Samman Nidhi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ಅಲ್ಲದೆ, ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (Kisan Samman Nidhi) ಯೋಜನೆಯ 17ನೇ ಕಂತಿನ ಮೊತ್ತವಾದ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದರು.

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪದಗ್ರಹಣ ಮಾಡಿದ ಬಳಿಕ ನರೇಂದ್ರ ಮೋದಿ ಅವರು ಮೊದಲಿಗೆ ರೈತರ ಖಾತೆಗಳಿಗೆ ತಲಾ 2 ಸಾವಿರ ರೂ. ಜಮೆ ಮಾಡುವ ದಿಸೆಯಲ್ಲಿ 20 ಸಾವಿರ ಕೋಟಿ ರೂ. ಕಿಸಾನ್‌ ಸಮ್ಮಾನ್‌ ನಿಧಿ ಬಿಡುಗಡೆ ಮಾಡುವ ಕಡತಕ್ಕೆ ಸಹಿ ಮಾಡಿದ್ದರು. ಅದರಂತೆ ಮಂಗಳವಾರ ಮೋದಿ ಅವರು ರೈತರ ಖಾತೆಗಳಿಗೆ ಹಣ ಜಮೆ ಮಾಡಿದ್ದಾರೆ.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇದನ್ನೂ ಓದಿ: Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Continue Reading

ದೇಶ

Eid Celebration: ಯೋಗಿ ವಾರ್ನಿಂಗ್‌ ಎಫೆಕ್ಟ್‌; ಉ.ಪ್ರದೇಶದ ಯಾವ ರಸ್ತೆಯಲ್ಲೂ ಬಕ್ರೀದ್‌ ನಮಾಜ್‌ ನಡೆಯಲಿಲ್ಲ!

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಖಡಕ್‌ ಸೂಚನೆಯ ಅನಂತರ ಉತ್ತರ ಪ್ರದೇಶ ರಾಜ್ಯದಾದ್ಯಂತ ಸಂಚಾರಕ್ಕೆ ಅಡ್ಡಿಯಾಗದಂತೆ ಈದ್ ಆಚರಣೆ ಈ ಬಾರಿ ನಡೆದಿದೆ. ಮುಸ್ಲಿಂ ಧಾರ್ಮಿಕ ಮುಖಂಡರು ಮುಖ್ಯಮಂತ್ರಿಯ ಸೂಚನೆಯನ್ನು ಬೆಂಬಲಿಸಿದ್ದು, ವಿಶೇಷವಾಗಿ ಗೊತ್ತುಪಡಿಸಿದ ಈದ್ಗಾಗಳು ಮತ್ತು ಸಾಂಪ್ರದಾಯಿಕ ಸ್ಥಳಗಳಲ್ಲಿ ಮಾತ್ರ ಈದ್ ಪ್ರಾರ್ಥನೆಗಳನ್ನು ( Eid Celebration) ನಡೆಸಲಾಯಿತು.

VISTARANEWS.COM


on

By

Eid Celebration
Koo

ಲಖನೌ: ಬಕ್ರೀದ್‌ ವೇಳೆ ನಿಗದಿತ ಸ್ಥಳಗಳಲ್ಲೇ ನಮಾಜ್‌ ಮಾಡಬೇಕು. ಇದನ್ನು ಬಿಟ್ಟು ರಸ್ತೆಗಳಲ್ಲಿ ನಮಾಜ್‌ ಮಾಡಿದರೆ ಹುಷಾರ್‌ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ (Chief Minister) ಯೋಗಿ ಆದಿತ್ಯನಾಥ್ (Yogi Adityanath) ಎಚ್ಚರಿಕೆ ಕೊಟ್ಟಿದ್ದರು. ಯೋಗಿ ವಾರ್ನಿಂಗ್‌ ಫಲ ಕೊಟ್ಟಿದೆ. ಸೋಮವಾರ ಈದ್-ಉಲ್-ಅಝಾ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಂಚಾರಕ್ಕೆ ಅಡ್ಡಿಯಾಗದಂತೆ ಗೊತ್ತುಪಡಿಸಿದ ಪ್ರದೇಶಗಳಲ್ಲಿ ಮಾತ್ರ ಈದ್ ಪ್ರಾರ್ಥನೆ (Eid Celebration) ನಡೆಸಲಾಗಿದೆ.

ಮುಸ್ಲಿಂ ಧಾರ್ಮಿಕ ಮುಖಂಡರು ಮುಖ್ಯಮಂತ್ರಿಯ ಸೂಚನೆಯನ್ನು ಬೆಂಬಲಿಸಿದ್ದಾರೆ. ಈದ್ ಪ್ರಾರ್ಥನೆಗಳನ್ನು ವಿಶೇಷವಾಗಿ ಗೊತ್ತುಪಡಿಸಿದ ಈದ್ಗಾಗಳು ಮತ್ತು ಇತರ ಸಾಂಪ್ರದಾಯಿಕ ಸ್ಥಳಗಳಲ್ಲಿ ಮಾತ್ರ ನಡೆಸಲಾಯಿತು. ಮಸೀದಿ ಮತ್ತು ಈದ್ಗಾಗಳು ಸೀಮಿತ ಸ್ಥಳವನ್ನು ಹೊಂದಿರುವ ಪ್ರದೇಶಗಳಲ್ಲಿ ಪ್ರಾರ್ಥನೆಗಳನ್ನು ವಿವಿಧ ಪಾಳಿಗಳಲ್ಲಿ ನಡೆಸಲಾಯಿತು.

ಸೂಕ್ಷ್ಮ ಪ್ರದೇಶಗಳಲ್ಲಿ ಡ್ರೋನ್ ಕಣ್ಗಾವಲು ಸೇರಿದಂತೆ ರಾಜ್ಯಾದ್ಯಂತ ಬಿಗಿ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಹೆಚ್ಚುವರಿಯಾಗಿ, ಸಾರ್ವಜನಿಕರಿಗೆ ಅವರ ಸುರಕ್ಷತೆಯ ಬಗ್ಗೆ ಭರವಸೆ ನೀಡಲು ಭಾರೀ ಪೊಲೀಸ್ ಪಡೆ ಹಿಂದಿನ ದಿನ ಧ್ವಜ ಮೆರವಣಿಗೆಯನ್ನು ನಡೆಸಿತು. ಈ ಹಿಂದೆ ಕೂಡ ಈದ್-ಉಲ್-ಫಿತರ್ ಸಮಯದಲ್ಲಿ ರಸ್ತೆಗಳಲ್ಲಿ ಅಲ್ಲ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ ಎಂದು ಮುಖ್ಯಮಂತ್ರಿ ಸೂಚನೆ ನೀಡಿದ್ದರು.

ಈದ್ ಸಿದ್ಧತೆ ಕುರಿತು ಸಿಎಂ ಯೋಗಿ ಎಲ್ಲಾ ಜಿಲ್ಲೆಗಳ ಅಧಿಕಾರಿಗಳು ಮತ್ತು ರಾಜ್ಯ ಮಟ್ಟದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಸಾರ್ವಜನಿಕರಿಗೆ ಸಕಾರಾತ್ಮಕ ಸಂದೇಶವನ್ನು ರವಾನಿಸುವುದನ್ನು ಖಚಿತಪಡಿಸಿಕೊಳ್ಳಲು ಧಾರ್ಮಿಕ ಮುಖಂಡರು ಮತ್ತು ಇತರ ಪ್ರಮುಖ ಸಮುದಾಯದ ಸದಸ್ಯರೊಂದಿಗೆ ಸಂವಾದವನ್ನು ನಿರ್ವಹಿಸುವ ಮಹತ್ವವನ್ನು ಅವರು ಒತ್ತಿ ಹೇಳಿದ್ದರು. ಪೊಲೀಸ್ ಠಾಣೆ, ವೃತ್ತ, ಜಿಲ್ಲೆ, ವ್ಯಾಪ್ತಿ, ವಲಯ, ವಿಭಾಗ ಮಟ್ಟದ ಹಿರಿಯ ಅಧಿಕಾರಿಗಳು ಶಾಂತಿ ಸಮಿತಿ ಸಭೆ ನಡೆಸಿ ಮಾಧ್ಯಮದವರನ್ನು ತೊಡಗಿಸಿಕೊಂಡು ಶಾಂತಿ ಸೌಹಾರ್ದತೆ ಕಾಪಾಡುವಂತೆ ಸಲಹೆ ನೀಡಿದ್ದರು.

ಹೆಚ್ಚುವರಿಯಾಗಿ ಗೊತ್ತುಪಡಿಸಿದ ಪ್ರದೇಶಗಳನ್ನು ಮುಂಚಿತವಾಗಿ ಗುರುತಿಸಬೇಕೆಂದು ಅವರು ನಿರ್ದೇಶನ ನೀಡಿದ್ದರು. ನಿಷೇಧಿತ ಪ್ರಾಣಿಗಳ ಬಲಿಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದರು. ಬಲಿದಾನದ ಅನಂತರ ತ್ಯಾಜ್ಯ ವಿಲೇವಾರಿಗೆ ವ್ಯವಸ್ಥಿತ ಯೋಜನೆ ಪ್ರತಿ ಜಿಲ್ಲೆಯಲ್ಲೂ ಜಾರಿಯಾಗಬೇಕು ಎಂದು ಹೇಳಿದ್ದರು.

30 ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ನಮಾಜ್

ಅಂದಾಜಿನ ಪ್ರಕಾರ ಈ ವರ್ಷ, ರಾಜ್ಯದಾದ್ಯಂತ 30,000ಕ್ಕೂ ಹೆಚ್ಚು ಸ್ಥಳಗಳಲ್ಲಿ ನಮಾಜ್ ಮಾಡಲಾಯಿತು. ಸುಮಾರು 3,000 ಗೊತ್ತುಪಡಿಸಿದ ಸ್ಥಳಗಳಲ್ಲಿ ಬಲವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಇದನ್ನೂ ಓದಿ: NEET UG 2024: ನೀಟ್ ಯುಜಿ ವಿವಾದ; ಶೇ. 0.001ರಷ್ಟು ನಿರ್ಲಕ್ಷ್ಯವೂ ಸಹಿಸಲು ಸಾಧ್ಯವಿಲ್ಲ ಎಂದು ಚಾಟಿ ಬೀಸಿದ ಸುಪ್ರೀಂ ಕೋರ್ಟ್‌

ಈ ಹಿಂದೆ ರಾಜ್ಯದ ಹಲವು ನಗರಗಳಲ್ಲಿ ಲಕ್ಷಾಂತರ ಜನರು ರಸ್ತೆ ಮತ್ತಿತರ ಕಡೆ ನಮಾಜ್ ಮಾಡಿ ಸಂಚಾರಕ್ಕೆ ತೊಂದರೆಯಾಗುತ್ತಿತ್ತು. ಆದರೆ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕರೆಯಿಂದಾಗಿ ದೇಶದಾದ್ಯಂತ ಹೊಸ ಸಂದೇಶ ರವಾನೆಯಾಗುತ್ತಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಯ ಮಸೀದಿಗಳು ಮತ್ತು ಈದ್ಗಾಗಳಲ್ಲಿ ಶಾಂತಿಯುತವಾಗಿ ನಮಾಜ್ ಮಾಡಲಾಗುತ್ತಿದೆ.

ಹೆಚ್ಚುವರಿಯಾಗಿ ಭಾನುವಾರ ಗಂಗಾ ದಸರಾ, ಸೋಮವಾರ ಈದ್-ಉಲ್-ಅಝಾ ಮತ್ತು ಮಂಗಳವಾರ ಜ್ಯೇಷ್ಠ ಮಾಸದ ಬಡಾ ಮಂಗಲ್ ರಾಜ್ಯ ಪೊಲೀಸ್ ಇಲಾಖೆಯನ್ನು ಹೆಚ್ಚು ಜಾಗೃತವಾಗಿ ಇರುವಂತೆ ಮಾಡಿದೆ. ಈ ಪೂರ್ವಭಾವಿ ವಿಧಾನವು ಸಂಭಾವ್ಯ ವಿವಾದಗಳ ಭಯವನ್ನು ಹೋಗಲಾಡಿಸಲು ಸಹಾಯ ಮಾಡಿತು. ಎಲ್ಲಾ 75 ಜಿಲ್ಲೆಗಳಿಂದ ವರದಿಯಾದ ಸಂತೋಷದಾಯಕ ಮತ್ತು ಉತ್ಸಾಹಭರಿತ ಆಚರಣೆಗಳಿಗೆ ಕಾರಣವಾಯಿತು.

Continue Reading

ದೇಶ

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Narendra Modi: ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ ನರೇಂದ್ರ ಮೋದಿ ಅವರು 1.5 ಲಕ್ಷ ಮತಗಳಿಂದ ಗೆಲುವು ಸಾಧಿಸಿದ್ದಾರೆ. ವಾರಾಣಸಿಯಿಂದ ಮೂರನೇ ಬಾರಿಗೆ ಗೆದ್ದು, ಮೂರನೇ ಬಾರಿಗೆ ಪ್ರಧಾನಿಯಾಗಿ ಸ್ವೀಕರಿಸಿದ ಬಳಿಕ ನರೇಂದ್ರ ಮೋದಿ ಅವರು ಇದೇ ಮೊದಲ ಬಾರಿಗೆ ವಾರಾಣಸಿಗೆ ಭೇಟಿ ನೀಡಿದ್ದಾರೆ.

VISTARANEWS.COM


on

Narendra Modi
Koo

ವಾರಾಣಸಿ: ಲೋಕಸಭೆ ಚುನಾವಣೆ (Lok Sabha Election 2024) ಬಳಿಕ ಇದೇ ಮೊದಲ ಬಾರಿಗೆ ತಮ್ಮ ಲೋಕಸಭೆ ಕ್ಷೇತ್ರವಾದ ವಾರಾಣಸಿಗೆ (Varanasi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಜೂನ್‌ 18) ಭೇಟಿ ನೀಡಿದ್ದಾರೆ. ವಾರಾಣಸಿಯಲ್ಲಿ ನಡೆದ ಕಿಸಾನ್ ಸಮ್ಮೇಳನದಲ್ಲಿ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ (PM Kisan Nidhi Samman) ಯೋಜನೆಯ 20 ಸಾವಿರ ಕೋಟಿ ರೂಪಾಯಿಯನ್ನು ದೇಶದ 9.26 ಕೋಟಿ ರೈತರ ಖಾತೆಗಳಿಗೆ ಜಮೆ ಮಾಡಿದ ಬಳಿಕ ಅವರು ಮಾತನಾಡಿದರು. “ಲೋಕಸಭೆ ಚುನಾವಣೆಯಲ್ಲಿ ನೀವು ನನ್ನನ್ನು ಮೂರನೇ ಬಾರಿಗೆ ಸಂಸದನಾಗಿ ಮಾತ್ರವಲ್ಲ, ಮೂರನೇ ಬಾರಿಗೆ ದೇಶದ ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದೀರಿ. ನಿಮಗೆ ನನ್ನ ಧನ್ಯವಾದಗಳು” ಎಂದು ಹೇಳಿದರು.

“ಕಳೆದ 60 ವರ್ಷದಲ್ಲಿಯೇ ದೇಶದಲ್ಲಿ ಯಾವುದೇ ಪಕ್ಷದ ಸರ್ಕಾರವನ್ನು ಸತತ ಮೂರನೇ ಬಾರಿಗೆ ಆಯ್ಕೆ ಮಾಡಿರಲಿಲ್ಲ. ಆದರೆ, ದೇಶದ ಜನರು ನನ್ನನ್ನು ಸತತ ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ನೇಮಕ ಮಾಡಿದ್ದಾರೆ. ವಾರಾಣಸಿಯ ಜನರೂ ನನ್ನ ಜತೆ ನಿಂತಿದ್ದಾರೆ. ಇದು ಐತಿಹಾಸಿಕವಾಗಿದ್ದು, ಮುಂದಿನ 5 ವರ್ಷಗಳವರೆಗೆ ನಿಮ್ಮ ಸೇವೆ ಮಾಡುತ್ತೇನೆ. ವಿಕಸಿತ ಭಾರತದ ನಿರ್ಮಾಣಕ್ಕಾಗಿ ಶ್ರಮ ವಹಿಸುತ್ತೇನೆ. ರೈತರು, ಯುವಕರು ಹಾಗೂ ಮಹಿಳೆಯರು ದೇಶದ ಮೂರು ಸ್ತಂಭಗಳಾಗಿದ್ದು, ಇವರೆಲ್ಲರ ಏಳಿಗೆಗೆ ಆಡಳಿತ ನಡೆಸುತ್ತೇವೆ” ಎಂದು ತಿಳಿಸಿದರು.

“ಕೇಂದ್ರದಲ್ಲಿ ನಮ್ಮ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ದೇಶದ 9.26 ಕೋಟಿ ರೈತರಿಗೆ ಹಣಕಾಸು ನೆರವು ನೀಡುವ ಕಡತಕ್ಕೆ ನಾನು ಮೊದಲು ಸಹಿ ಹಾಕಿದೆ. ಆ ಮೂಲಕ ರೈತರಿಗೆ ಅನುಕೂಲ ಮಾಡುವುದು ನಮ್ಮ ಉದ್ದೇಶವಾಗಿತ್ತು. ಇನ್ನು ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿಯಲ್ಲಿ ಬಡವರಿಗೆ 3 ಕೋಟಿ ಬಡವರಿಗೆ ಮನೆ ನಿರ್ಮಿಸುವ ಕುರಿತು ಕೂಡ ತೀರ್ಮಾನಿಸಲಾಗಿದೆ. ಲಕ್‌ಪತಿ ದೀದಿ ಸೇರಿ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಇದರಿಂದ ರೈತರು ಸಕಲ ರೀತಿಯಲ್ಲಿ ಏಳಿಗೆ ಹೊಂದಲಿದ್ದಾರೆ” ಎಂದರು.

“ಮೂರನೇ ಅವಧಿಯಲ್ಲಿ ದೇಶದ ಏಳಿಗೆಗೆ ಜತೆಗೆ ವಾರಾಣಸಿಯನ್ನೂ ಇನ್ನಷ್ಟು ಅಭಿವೃದ್ಧಿ ಮಾಡಲಾಗುವುದು. ಈಗಾಗಲೇ ಕಾಶಿಯ ಯುವಕ, ಯುವತಿಯರು, ರೈತರ ಏಳಿಗೆಗೆ ಹತ್ತಾರು ಕ್ರಮಗಳು, ರೈಲು ನಿಲ್ದಾಣ ಅಭಿವೃದ್ಧಿ, ಸಾಂಸ್ಕೃತಿಕ ಹಿರಿಮೆ, ಪರಂಪರೆಯನ್ನು ಮರುಕಳಿಸಲಾಗಿದೆ. ಧಾರ್ಮಿಕ ನಗರಿಯು ಅಭಿವೃದ್ಧಿಯ ನಗರವಾಗಿಯೂ ರೂಪುಗೊಂಡಿದ್ದನ್ನು ಎಲ್ಲರೂ ಕಾಣಬಹುದು. ಕಾಶಿ ವಿಶ್ವನಾಥನ ಕೃಪಾಶೀರ್ವಾದದಿಂದ ಮುಂದಿನ ವರ್ಷಗಳಲ್ಲಿಯೂ ಏಳಿಗೆಗೆ ಶ್ರಮ ವಹಿಸುತ್ತೇವೆ. ನನಗೆ ಆಶೀರ್ವಾದ ಮಾಡಿದ ಎಲ್ಲರಿಗೂ ಮತ್ತೊಮ್ಮೆ ಹೃದಯಾಂತರಾಳದ ಧನ್ಯವಾದ” ಎಂದು ಹೇಳಿದರು.

ಇದನ್ನೂ ಓದಿ: ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Continue Reading
Advertisement
Kannur Bomb Blast
ದೇಶ16 mins ago

Kannur Bomb Blast: ಕೇರಳದಲ್ಲಿ ಬಾಂಬ್‌ ಸ್ಫೋಟಕ್ಕೆ ವೃದ್ಧ ಬಲಿ; ಕಣ್ಣೂರು ಆಗುತ್ತಿದೆಯೇ ಬಾಂಬ್‌ ಕಾರ್ಖಾನೆ?

Bengaluru Power Cut
ಬೆಂಗಳೂರು23 mins ago

Bengaluru Power Cut: ಜೂನ್‌ 20ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರಲ್ಲ

Kids Hair Fashion
ಫ್ಯಾಷನ್35 mins ago

Kids Hair Fashion: ಹೆಣ್ಣುಮಕ್ಕಳ ಸಿಂಗಾರಕ್ಕೆ ಬಂತು ಕ್ಯೂಟ್‌ ಹೇರ್ ಆಕ್ಸೆಸರೀಸ್‌

Kisan Samman Nidhi
ದೇಶ1 hour ago

Kisan Samman Nidhi: 9 ಕೋಟಿ ರೈತರ ಖಾತೆಗಳಿಗೆ 20 ಸಾವಿರ ಕೋಟಿ ರೂ. ಜಮೆ ಮಾಡಿದ ಮೋದಿ; ಹೀಗೆ ಚೆಕ್‌ ಮಾಡಿ

Alka Yagnik
Latest1 hour ago

Alka Yagnik: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾರೆ ಬಾಲಿವುಡ್‌ ಖ್ಯಾತ ಹಿನ್ನೆಲೆ ಗಾಯಕಿ

Eid Celebration
ದೇಶ1 hour ago

Eid Celebration: ಯೋಗಿ ವಾರ್ನಿಂಗ್‌ ಎಫೆಕ್ಟ್‌; ಉ.ಪ್ರದೇಶದ ಯಾವ ರಸ್ತೆಯಲ್ಲೂ ಬಕ್ರೀದ್‌ ನಮಾಜ್‌ ನಡೆಯಲಿಲ್ಲ!

Kuwait Fire
ಕರ್ನಾಟಕ1 hour ago

Kuwait Fire: ಕುವೈತ್ ಅಗ್ನಿ ದುರಂತದಲ್ಲಿ ಮೃತಪಟ್ಟ ವಿಜಯಕುಮಾರ್ ಕುಟುಂಬಕ್ಕೆ 5 ಲಕ್ಷ ಪರಿಹಾರ ಕೊಟ್ಟ ಸಿಎಂ

Karnataka Weather Forecast
ಮಳೆ2 hours ago

Karnataka Weather : ಗುಡುಗು, ಸಿಡಿಲಿನ ಮಳೆಗೆ ಮನೆಯ ಗೋಡೆ ಕುಸಿತ; ನಾಳೆಗೂ ಇದೆ ಅಲರ್ಟ್‌

Narendra Modi
ದೇಶ2 hours ago

Narendra Modi: 3ನೇ ಸಲ ಗೆಲ್ಲಿಸಿದ ವಾರಾಣಸಿ ಜನತೆಗೆ ಧನ್ಯವಾದ ಎಂದ ಮೋದಿ; ಗೆದ್ದ ಬಳಿಕ ಮೊದಲ ಭೇಟಿ!

Electric Shock
ವಿಜಯಪುರ2 hours ago

Electric shock : ಮೀನು ಹಿಡಿಯಲು ಹೋದಾಗ ವಿದ್ಯುತ್‌ ಪ್ರವಹಿಸಿ ಬಾಲಕರಿಬ್ಬರು ಮೃತ್ಯು; ಕುಟುಂಬಸ್ಥರ ಆಕ್ರಂದನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು1 day ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌