Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ! - Vistara News

ದೇಶ

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ಮಿಸ್‌ ಮಾಡಿದ್ದರು ರತನ್‌ ಟಾಟಾ!

Ratan Tata : ಕಾಯಿಲೆ ಬಿದ್ದ ನಾಯಿಗಳನ್ನು ನೋಡಿಕೊಳ್ಳಲು ಇಂಗ್ಲೆಂಡ್‌ನ ರಾಯಲ್‌ ಸನ್ಮಾನವನ್ನೇ ರತನ್‌ ಟಾಟಾ ಮಿಸ್‌ ಮಾಡಿದ್ದರು. ಬೀದಿ ನಾಯಿಗಳ ಅವರ ಕಾಳಜಿಗೆ ಇಡೀ ಲಂಡನ್‌ ಜನತೆ ತಲೆಬಾಗಿತ್ತು.

VISTARANEWS.COM


on

Ratan Tata missed england's royal honour to take care of sick dogs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಭಾರತದ ಅತಿ ಶ್ರೇಷ್ಠ ಉದ್ಯಮಿಯಾದ ರತನ್ ಟಾಟಾ (Ratan Tata) ಅವರ ಮಾನವೀಯ ಗುಣಗಳ ಬಗ್ಗೆ ಎಷ್ಟು ಹೇಳಿದರೂ ಕಡಿಮೆಯೇ.. ತಮ್ಮ ಸಂಪತ್ತಿನ ಅರ್ಧ ಭಾಗವನ್ನು ದಾನ ಮಾಡಿದ್ದು, ಕೊರೊನಾ ಸಂಕಷ್ಟದ ಸಮಯದಲ್ಲಿ ಪ್ರಧಾನಿ ಪರಿಹಾರ ನಿಧಿಗೆ 500 ಕೋಟಿ ರೂ. ದಾನ ಮಾಡಿದ್ದು.. ಹೀಗೆ ನೂರಾರು ಉದಾಹರಣೆಗಳು ದೊರೆಯುತ್ತವೆ. ಅದಕ್ಕೆ ಇನ್ನೊಂದು ಪುರಾವೆಯು ಇಲ್ಲಿದೆ.

ರತನ್ ಟಾಟಾ ಅವರ ಜೀವಮಾನದ ಸಾಧನೆಗಳನ್ನು ಪರಿಗಣಿಸಿ 2018ರಲ್ಲಿ ಸನ್ಮಾನ ಮಾಡಲು ಇಂಗ್ಲೆಂಡಿನ ರಾಜಕುಮಾರ ಚಾರ್ಲ್ಸ್ ಅವರು ಇಂಗ್ಲೆಂಡಿಗೆ ಆಮಂತ್ರಿಸಿದ್ದರು. ಅದು ರಾಯಲ್ ಮನೆತನದ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ಏರ್ಪಾಡಾಗಿದ್ದ ರಾಜಗೌರವದ ಸನ್ಮಾನ! ಪ್ರಿನ್ಸ್ ಚಾರ್ಲ್ಸ್ ಈ ಗೌರವದ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲು ನೂರಾರು ಅತಿ ಗಣ್ಯ ವ್ಯಕ್ತಿಗಳನ್ನು ಕರೆದಿದ್ದರು. ರತನ್ ಟಾಟಾ ಅವರು ಕೂಡ ಈ ಆಮಂತ್ರಣವನ್ನು ಸ್ವೀಕರಿಸಿ ಲಂಡನ್ನಿಗೆ ಹೊರಡುವ ತಯಾರಿ ಮಾಡಿದ್ದರು.

ಅವರನ್ನು ಇಂಗ್ಲೆಂಡಿನಲ್ಲಿ ಸ್ವಾಗತ ಮಾಡಿ ಅವರ ಆತಿಥ್ಯದ ವ್ಯವಸ್ಥೆಯನ್ನು ಮಾಡಲು ಚಾರ್ಲ್ಸ್ ಅವರಿಂದ ನಿಯುಕ್ತ ಆದವರು ಖ್ಯಾತ ಉದ್ಯಮಿಗಳು ಮತ್ತು ಅಂಕಣಕಾರರಾದ ಸುಹೇಲ್ ಸೇಥ ಅವರು. ಸುಹೇಲ್ ಅವರು ನಾಲ್ಕು ದಿನ ಮೊದಲೇ ಲಂಡನ್ನಿಗೆ ಹೋಗಿ ಟಾಟಾ ಅವರನ್ನು ಸ್ವಾಗತ ಮಾಡಲು ಸಿದ್ಧತೆಯನ್ನೂ ಮಾಡಿದ್ದರು.

ಒಮ್ಮೆ ಸುಹೇಲ್ ಅವರು ಯಾವುದೋ ಒಂದು ಕೆಲಸದಲ್ಲಿ ಮುಳುಗಿದ್ದಾಗ ಅವರ ಮೊಬೈಲ್ ಫೋನ್ ಒಂದೇ ಸಮನೆ ಹೊಡೆದುಕೊಳ್ಳಲು ಆರಂಭ ಆಯಿತು. ಸುಹೇಲ್ ಸ್ವಲ್ಪ ಹೊತ್ತಿನ ನಂತರ ಮೊಬೈಲ್ ನೋಡಿದಾಗ ರತನ್ ಟಾಟಾ ಅವರ ಹನ್ನೊಂದು ಮಿಸ್ ಕಾಲ್ ಇತ್ತು! ಯಾಕೆಂದು ಸುಹೇಲ್ ಗಾಬರಿ ಬಿದ್ದು ಟಾಟಾ ಅವರಿಗೆ ಮರು ಕಾಲ್ ಮಾಡಿದರು. ಕಾಲ್ ಕನೆಕ್ಟ್ ಆಯಿತು. ಅಂದು ರತನ್ ಟಾಟಾ ಅವರ ಧ್ವನಿ ನಡುಗುತ್ತಿತ್ತು.

ಅವರು ಹೇಳುತ್ತಾ ಹೋದರು. “ಸುಹೇಲ್ ಸಾರಿ. ನಿಮಗೆ ತೊಂದರೆ ಕೊಡುತ್ತಾ ಇದ್ದೇನೆ. ನಿಮಗೆ ಹೇಗೆ ಹೇಳಬೇಕೋ ಗೊತ್ತಾಗುತ್ತಿಲ್ಲ. ನನ್ನ ಎರಡು ನಾಯಿಗಳಾದ ಟ್ಯಾಂಗೋ ಮತ್ತು ಟಿಟೋಗಳ ಪೈಕಿ ಒಂದು ಇಂದು ತೀವ್ರವಾಗಿ ಅಸ್ವಸ್ಥ ಆಗಿದೆ. ನಿಮಗೆ ಗೊತ್ತು ನಾನು ಎಷ್ಟು ಅವುಗಳನ್ನು ಪ್ರೀತಿ ಮಾಡುತ್ತೇನೆ ಎಂದು. ಇಂಥಹ ಸಂಕೀರ್ಣ ಸನ್ನಿವೇಶದಲ್ಲಿ ನಾನು ನಾಯಿಗಳನ್ನು ಬಿಟ್ಟು ಲಂಡನ್‌ಗೆ ಬರಲು ಸಾಧ್ಯ ಇಲ್ಲ. ನೀವಿದನ್ನು ದಯವಿಟ್ಟು ಪ್ರಿನ್ಸ್ ಚಾರ್ಲ್ಸ್ ಅವರಿಗೆ ತುರ್ತಾಗಿ ತಿಳಿಸಬೇಕು ಮತ್ತು ನಾನು ಅವರ ಕ್ಷಮೆಯನ್ನು ಕೇಳುತ್ತಿದ್ದೇನೆ ಎಂದು ಕೂಡ ತಿಳಿಸಬೇಕು” ಎಂದರು.

ಸುಹೇಲ್ ಅವರಿಗೆ ಏನು ಉತ್ತರ ಹೇಳಬೇಕು ಎಂದು ಗೊತ್ತಾಗಲಿಲ್ಲ. ಅವರು “ರತನ್ ಜಿ. ಇದು ಸಾಮಾನ್ಯ ಕಾರ್ಯಕ್ರಮ ಅಲ್ಲ. ಇಂಗ್ಲಿಷ್ ರಾಜಮನೆತನದ ಗೌರವದ ಕಾರ್ಯಕ್ರಮ. ಸ್ವತಃ ಪ್ರಿನ್ಸ್ ಚಾರ್ಲ್ಸ್ ಮುಂದೆ ನಿಂತು ಈ ಕಾರ್ಯಕ್ರಮ ಏರ್ಪಡಿಸುತ್ತಿದ್ದಾರೆ. ನೂರಕ್ಕೂ ಹೆಚ್ಚಿನ ವಿವಿಐಪಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಸ್ವತಃ ಇಂಗ್ಲೆಂಡ್ ರಾಣಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಒಪ್ಪಿದ್ದಾರೆ. ಆದ್ದರಿಂದ ನೀವು ನಾಯಿಗಳ ಬಗ್ಗೆ ಬೇರೇನಾದರೂ ವ್ಯವಸ್ಥೆಯನ್ನು ಮಾಡಿ ಲಂಡನ್ನಿಗೆ ಹೊರಡಬೇಕು ಎಂದು ವಿನಂತಿ ಮಾಡುತ್ತೇನೆ” ಎಂದರು.

ಆದರೆ ರತನ್ ಟಾಟಾ ತಮ್ಮ ನಿರ್ಧಾರವನ್ನು ಬದಲಾಯಿಸಲು ಒಪ್ಪಲಿಲ್ಲ. “ನಿಮಗೆ ಗೊತ್ತಿದೆ ನಾನು ನನ್ನ ನಾಯಿಗಳನ್ನು ಎಷ್ಟು ಪ್ರೀತಿ ಮಾಡುತ್ತೇನೆ ಎಂದು. ದಯವಿಟ್ಟು ನನಗೆ ಒತ್ತಾಯ ಮಾಡಬೇಡಿ. ನನ್ನ ಮಾತುಗಳನ್ನು ಪ್ರಿನ್ಸ್ ಚಾರ್ಲ್ಸ್ ಅವರಿಗೆ ವಿನೀತವಾಗಿ ತಲುಪಿಸಿ” ಅಂದು ಫೋನ್ ಇಟ್ಟರು. ಸುಹೇಲ್ ಅವರಿಗೆ ಈಗ ನಿಜವಾಗಿ ಉಭಯ ಸಂಕಟ ಆರಂಭ ಆಯಿತು. ಅವರು ಮರುದಿನವೇ ಮುಂಜಾನೆ ಬಕಿಂಗ್ ಹ್ಯಾಮ್ ಅರಮನೆಗೆ ಹೋದಾಗ ಅಲ್ಲಿ ಎಲ್ಲ ಸಿದ್ಧತೆಗಳೂ ಕೊನೆಯ ಹಂತದಲ್ಲಿ ಇದ್ದವು.

ಅವರು ಸಂಕೋಚದಿಂದ ಪ್ರಿನ್ಸ್ ಚಾರ್ಲ್ಸ್ ಮುಂದೆ ಹೋಗಿ ಟಾಟಾ ಹೇಳಿದ್ದನ್ನು ಪ್ರೀತಿಯಿಂದ ಹೇಳಿದರು. ಅದೇ ಕಾರಣವನ್ನು ಕೂಡ ನಿವೇದನೆ ಮಾಡಿಕೊಂಡರು. ಒಮ್ಮೆ ಚಾರ್ಲ್ಸ್ ಹಣೆಯ ಮೇಲೆ ನೆರಿಗೆಗಳು ಕಂಡುಬಂದವು. ತಕ್ಷಣ ಅವರ ಮೊದಲ ಉದ್ಗಾರ – That’s the man!

“ರತನ್ ಅವರಿಗೆ ಬರಲು ಆಗುವುದಿಲ್ಲ ಎಂದು ನೀವು ಹೇಳಿದಾಗ ನನಗೆ ಒಮ್ಮೆ ಬೇಜಾರು ಆಯಿತು. ಆದರೆ ಅವರು ನೀಡಿದ ಕಾರಣ ನೋಡಿ ನನಗೆ ಅವರ ಬಗ್ಗೆ ತುಂಬ ಹೆಮ್ಮೆ ಅನ್ನಿಸಿತು. ನನಗೆ ಅವರ ಬಗ್ಗೆ ಇರುವ ಗೌರವ, ಪ್ರೀತಿ ಇಮ್ಮಡಿ ಆಗಿದೆ. ನೋ ಪ್ರಾಬ್ಲಂ. ಈ ಕಾರ್ಯಕ್ರಮವನ್ನು ಮುಂದಕ್ಕೆ ಹಾಕೋಣ” ಎಂದು ಚಾರ್ಲ್ಸ್ ಹೇಳಿದರು. ಕೊನೆಗೂ ರತನ್ ಟಾಟಾ ಆ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಆ ಕಾರ್ಯಕ್ರಮವು ಮುಂದೆ ನಡೆಯಲೇ ಇಲ್ಲ!

ಟಾಟಾ ಒಮ್ಮೆ ತಮ್ಮ ಎರಡು ನಾಯಿಗಳ ಬಗ್ಗೆ ಮಾಡಿದ ಟ್ವೀಟ್ ಹೀಗಿದೆ – Tito and Tango seek nothing in return for their affection other than a little love and attention. I miss them terribly when I am away!

ಯಾರೂ ಸುಖಾಸುಮ್ಮನೆ ದೊಡ್ಡವರು ಆಗುವುದಿಲ್ಲ! ಅವೆರಡೂ ರತನ್ ಟಾಟಾ ಸಾಕಿದ ಬೀದಿ ನಾಯಿಗಳು ಆಗಿದ್ದವು!

ಟಾಟಾ ಅವರಿಗೆ ತಮ್ಮ ಜೀವನದ ಆದ್ಯತೆಗಳನ್ನು ನಿರ್ಧಾರ ಮಾಡಲು ಗೊತ್ತಿದೆ ಮತ್ತು ಅವರು ತಮ್ಮ ಆದ್ಯತೆಗಳಿಂದ ಒಂದಿಷ್ಟೂ ವಿಚಲಿತ ಆಗುವುದಿಲ್ಲ. ತಮ್ಮ ಕಂಪೆನಿಯ ಪ್ರತಿ ಉದ್ಯೋಗಿಯನ್ನೂ ಅವರು ಅದೇ ಮಾನವೀಯ ಅಂತಃಕರಣದಿಂದ ನೋಡಿಕೊಳ್ಳುತ್ತಾರೆ ಎಂದು ಅನೇಕರು ಹೇಳಿದ್ದಾರೆ. ಅಂದ ಹಾಗೆ ರತನ್ ಟಾಟಾ ಈವರೆಗೆ ಮದುವೆ ಆಗಿಲ್ಲ! ನಾನು ನಾಲ್ಕು ಬಾರಿ ಮದುವೆಯ ಹೊಸ್ತಿಲಿನ ತನಕ ಬಂದು ಭಯದಿಂದ ಹಿಂದೆ ಹೋಗಿದ್ದೆ ಎಂದವರು ತಮಾಷೆಗೆ ಹೇಳಿದ್ದಾರೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

VISTARANEWS.COM


on

ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಏರಿಕೆ ಮಾಡಲಾಗಿದೆ. ತೈಲ ಕಂಪನಿಗಳು ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ ₹3 ರೂಪಾಯಿಗಳನ್ನು ಹೆಚ್ಚಿಸಿವೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದ್ದು, ವಾಹನ ಸವಾರರು ಅಕ್ಷರಶಃ ಕಂಗಾಲಾಗಿದ್ದಾರೆ. ಅಮೆರಿಕ-ಇರಾನ್​ ಯುದ್ಧದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಡೀಸೆಲ್, ಪೆಟ್ರೋಲ್ ದುಬಾರಿಯಾಗಿದೆ. ಕಳೆದ ಒಂದು ವರ್ಷದಲ್ಲಿ ಮೊದಲ ಸಲ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ರೂ. 94.77 ರಿಂದ ರೂ. 97.77ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ.89.67 ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಸುಮಾರು 102.84 ರೂಪಾಯಿ ಇತ್ತು. ದರ ಏರಿಕೆ ಬೆನ್ನಲ್ಲೇ ಪೆಟ್ರೋಲ್ 106.17 ರೂಪಾಯಿಗೆ ತಲುಪಿದೆ. ನಿನ್ನೆ 90.99 ರೂಪಾಯಿ ಇದ್ದ ಡೀಸೆಲ್ ಬೆಲೆ ಇಂದಿನಿಂದ 94.10 ರೂಪಾಯಿಗೆ ಏರಿಕೆಯಾಗಿದೆ. ಪ್ರತಿ ಲೀಟರ್‌ಗೆ 3.14 ರೂಪಾಯಿ ಹೆಚ್ಚಳ ಆಗಿದೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading
Advertisement
Latest15 hours ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest20 hours ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest20 hours ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest2 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest2 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ2 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest2 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest2 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest2 days ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest3 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌