Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು? - Vistara News

ದೇಶ

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Ratan Tata: ರತನ್ ಟಾಟಾ ಅವರು ಅವಿವಾಹಿತವಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಅವರು ಆಲ್ಮೋಸ್ಟ್ ಮದುವೆಯಾಗಿರುವ ಕತೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಹ್ಯೂಮನ್ಸ್ ಆಫ್ ಬಾಂಬೆಗೆ (Humans of Bombay) ನೀಡಿದ ಸಂದರ್ಶನದಲ್ಲಿ ತಮ್ಮ ಆಲ್ಮೋಸ್ಟ್ ಮದುವೆ (Marriage) ಹಾಗೂ ಪ್ರೀತಿಯ (Love) ಕತೆಯನ್ನು ರತನ್ ಟಾಟಾ ಬಿಚ್ಚಿಟ್ಟಿದ್ದರು.

VISTARANEWS.COM


on

Why Ratan Tata didn't get married
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ/ಮುಂಬೈ: ಭಾರತದ ಪ್ರಖ್ಯಾತ ಉದ್ಯಮಿ ಹಾಗೂ ಟಾಟಾ ಸನ್ಸ್‌ನ (Tata Sons) ಮಾಜಿ ಚೇರ್ಮನ್ ರತನ್ ಟಾಟಾ (Ratan Tata) ಅವರು ತಮ್ಮ ಸರಳತೆ ಹಾಗೂ ಧರ್ಮದರ್ಶಿ ಕೆಲಸಗಳಿಂದಾಗಿ ಮನ್ನಣೆ ಗಳಿಸಿದ್ದರು. ತೀವ್ರ ಅನಾರೋಗ್ಯದಿಂದ ರತನ್‌ ಟಾಟಾ ಮುಂಬೈನಲ್ಲಿ ನಿಧನ (ಅ.9) ಹೊಂದಿದ್ದಾರೆ. ಕೈಗಾರಿಕ ಉದ್ಯಮದಲ್ಲಿ ರತ್ನದಂತಿದ್ದ ರತನ್‌ ಟಾಟಾ ಅಗಲಿಕೆಗೆ ಕೋಟ್ಯಂತರ ಹೃದಯಗಳು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ರತನ್‌ ಸರಳತೆಗೆ ಹೆಸರುವಾಸಿಯಾದವರು. ರತನ್ ಟಾಟಾ ಅವರು ಅವಿವಾಹಿತವಾಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ. ಆದರೆ, ಅವರು ಆಲ್ಮೋಸ್ಟ್ ಮದುವೆಯಾಗಿರುವ ಕತೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ಹ್ಯೂಮನ್ಸ್ ಆಫ್ ಬಾಂಬೆಗೆ (Humans of Bombay) ನೀಡಿದ ಸಂದರ್ಶನದಲ್ಲಿ ತಮ್ಮ ಆಲ್ಮೋಸ್ಟ್ ಮದುವೆ (Marriage) ಹಾಗೂ ಪ್ರೀತಿಯ (Love) ಕತೆಯನ್ನು ರತನ್ ಟಾಟಾ ಬಿಚ್ಚಿಟ್ಟಿದ್ದರು.

ಲಾಸ್ ಏಂಜಲೀಸ್‌ನಲ್ಲಿ ನಾನು ಆಲ್ಮೋಸ್ಟ್ ಮದುವೆಯಾಗಿದ್ದೆ! ಆದರೆ ನನ್ನ ಅಜ್ಜಿಯೊಂದಿಗೆ ನಾನು ತಕ್ಷಣಕ್ಕೆ ಭಾರತಕ್ಕೆ ಹಿಂತಿರುಗಿದ್ದರಿಂದ ಆ ಮದುವೆಯು ಮುಂದುವರಿಯುವುದನ್ನು ಸಾಧ್ಯವಾಗಲಿಲ್ಲ. ನಾನು ಮದುವೆಯಾಗಲು ಇಚ್ಛಿಸಿದ ವ್ಯಕ್ತಿ ಸ್ವಲ್ಪ ಸಮಯದ ನಂತರ ನನ್ನೊಂದಿಗೆ ಭಾರತಕ್ಕೆ ಬರಬೇಕಾಗಿತ್ತು ಎಂದು ಅವರು ಸಂದರ್ಶನದಲ್ಲಿ ಹೇಳಿದರು.

1962ರಲ್ಲಿ ಭಾರತ-ಚೀನಾ ಯುದ್ಧವು ಪ್ರಾರಂಭವಾದ ನಂತರ ಅವರ ಸಂಗಾತಿಯು ಭಾರತಕ್ಕೆ ಭೇಟಿ ನೀಡಲು ಆಕೆಯ ಪೋಷಕರು ಅನುಮತಿಸದ ಕಾರಣ ಸಂಬಂಧವು ಮುರಿದುಬಿತ್ತು ಎಂದು ರತನ್ ಟಾಟ್ ಹೇಳಿಕೊಂಡಿದ್ದರು. ಹಾಗಾಗಿ, ನಮ್ಮೊಂದಿಗೆ ಆಲ್ಮೋಸ್ಟ್ ಮದುವೆ ಎಂಬುದಷ್ಟು ಉಳಿಯಿತು ಎಂದು ಹೇಳಿಕೊಂಡಿದ್ದರು.

ಆ ಸಂಬಂಧ ಬಳಿಕ ನಾನು, ನನ್ನ ಹೆಂಡತಿ ಎಂದು ಕರೆಯುವಂಥ ಯಾವುದೇ ವ್ಯಕ್ತಿ ನನಗೆ ದೊರೆಯಲಿಲ್ಲ. ಆ ಬಳಿಕ ನನ್ನ ಜೀವನವೇ ಒಂದು ಸಂಘರ್ಷಕ್ಕೆ ಸಿಲುಕಿಕೊಂಡಿತು. ನಾನು ನಿರಂತರವಾಗಿ ಕೆಲಸ ಮಾಡುತ್ತಾ, ಪ್ರಯಾಣ ಮಾಡುತ್ತಿದ್ದೆ. ಹಾಗಾಗಿ, ನನಗಾಗಿ ಅಂತ ಸಮಯ ತುಂಬಾ ಕಡಿಮೆ ಉಳಿಯುತ್ತಿತ್ತು. ಇಂದು, ನಾನು ನನ್ನ ಕಳೆದ ಹೋದ ದಿನಗಳ ಬಗ್ಗೆ ಯೋಚಿಸಿದರೆ, ನನಗೇನೂ ಆ ಬಗ್ಗೆ ಯಾವುದೇ ಪಶ್ಚಾತ್ತಾಪ ಇಲ್ಲ. ಒಂದು ಕ್ಷಣಕ್ಕೆ ಆ ರೀತಿ ನನಗೆ ಅನ್ನಿಸುವುದಿಲ್ಲ ಎಂದು ರತನ್ ಟಾಟಾ ಹೇಳಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಅಸುನೀಗಿದ್ದಾರೆ. ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

VISTARANEWS.COM


on

By

Ratan Tata
Koo

ಬೆಂಗಳೂರು: ದೇಶದ ಹೆಮ್ಮೆಯ ಉದ್ಯಮಿ, ಟಾಟಾ ಸಮೂಹದ ಮುಖ್ಯಸ್ಥರಾದ ರತನ್ ಟಾಟಾ ಅವರ ನಿಧನದ ಸುದ್ದಿ ದುಃಖವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟಾಟಾ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿದ್ದು ಮಾತ್ರವಲ್ಲ, ಭಾರತದ ಉದ್ಯಮ ವಲಯವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊಸ ಎತ್ತರಕ್ಕೆ ಕೊಂಡೊಯ್ದ ದೂರದೃಷ್ಟಿಯ ವ್ಯಕ್ತಿ. ರತನ್ ಟಾಟಾ ಅವರು ತಮ್ಮ ಬದುಕು ಮತ್ತು ಸಾಧನೆಗಳ ಮೂಲಕ ಅಜರಾಮರ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ

ದೇಶದಲ್ಲಿ ಕೈಗಾರಿಕಾ ಸಂಸ್ಕೃತಿಯನ್ನು ಉನ್ನತ ಮೌಲ್ಯಗಳೊಂದಿಗೆ ಕಟ್ಟಿದ ಟಾಟಾ ಸಮೂಹದ ಆಧಾರಸ್ತಂಭಗಳಲ್ಲಿ ಒಬ್ಬರಾಗಿದ್ದ ರತನ್ ಟಾಟಾ ಅವರ ನಿಧನದಿಂದ ನಿರ್ವಾತ ಸೃಷ್ಟಿಯಾಗಿದೆ. ಅವರ ಭೌತಿಕ ಅನುಪಸ್ಥಿತಿಯು ಭಾರತಕ್ಕೂ ಕರ್ನಾಟಕಕ್ಕೂ ಬಹುದೊಡ್ಡ ನಷ್ಟ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಶೋಕ ವ್ಯಕ್ತಪಡಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಎಂ.ಬಿ ಅಲ್ಲಿಂದಲೇ ತಮ್ಮ ಶೋಕ ಸಂದೇಶ ಕಳಿಸಿದ್ದು, ಉದ್ಯಮ ಲೋಕದ ದಿಗ್ಗಜನ‌ ಸಾವಿಗೆ ದಿಗ್ಭ್ರಮೆ ವ್ಯಕ್ತಪಡಿಸಿದ್ದರು.

ಜಮ್ಷೆಡ್ಜಿ ಟಾಟಾ ಮತ್ತು ಜೆ ಆರ್ ಡಿ ಟಾಟಾ ತಮ್ಮ ವೈವಿಧ್ಯಮಯ ಉದ್ಯಮಗಳ ಮೂಲಕ ಆಧುನಿಕ ಭಾರತವನ್ನು ಕಟ್ಟಿದರು. ಇವರ ಬಳಿಕ ಎರಡು ದಶಕಗಳ ಕಾಲ‌ ಟಾಟಾ ಸಮೂಹದ ಚುಕ್ಕಾಣಿ ಹಿಡಿದಿದ್ದ ರತನ್ ಟಾಟಾ ಅವರು, ತಮ್ಮ ಸಮೂಹವನ್ನು ಜಾಗತಿಕ ಸ್ತರದಲ್ಲಿ ವಿಸ್ತರಿಸಿದರು ಎಂದು ಸಚಿವ ಎಂ.ಬಿ ಪಾಟೀಲ್‌ ಸ್ಮರಿಸಿದ್ದರು.

ಟಾಟಾ ಸಮೂಹವು ಕರ್ನಾಟಕದಲ್ಲಿ ಕೂಡ ಭಾರೀ ಪ್ರಮಾಣದಲ್ಲಿ ಬಂಡವಾಳ ಹೂಡಿದ್ದು, ಅಪಾರ ಪ್ರಮಾಣದ ಉದ್ಯೋಗಗಳನ್ನು ಸೃಷ್ಟಿಸಿದೆ. ರತನ್ ಟಾಟಾ ಕೂಡ ಉದ್ಯಮಶೀಲತೆಯನ್ನು ಉನ್ನತ ಮಟ್ಟದ ಮೌಲ್ಯಗಳ ಜತೆ ಪ್ರತಿನಿಧಿಸುತ್ತಿದ್ದರು. ಅವರು ಸದಾ ದೇಶ ಮತ್ತು ಸಮಾಜದ ಹಿತವನ್ನು ಕೂಡ ಪರಿಗಣಿಸುತ್ತಿದ್ದರು. ಇದರೊಂದಿಗೆ ಅವರು ಟಾಟಾ ಪರಂಪರೆಯ ವಾರಸುದಾರರಾಗಿದ್ದರು ಎಂದು ಅವರು ಅಗಲಿದ ಉದ್ಯಮಿಯ ಗುಣಗಾನ ಮಾಡಿದ್ದಾರೆ.

ಉದ್ಯಮಿ ರತನ್ ಟಾಟಾ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಸೂಚಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Jammu-Kashmir Election: ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯ ಕಮಾಲ್, ಚೇತರಿಸಿಕೊಂಡ ಕಮಲ ಪಡೆ; ತಲೆಕೆಳಗಾಯ್ತು ಹರಿಯಾಣ ಚುನಾವಣೆ ಸಮೀಕ್ಷೆ ಲೆಕ್ಕಾಚಾರ

ಹರಿಯಾಣದಲ್ಲಿ ಬಿಜೆಪಿ ಮೂರನೇ ಬಾರಿ ಅಧಿಕಾರಕ್ಕೆ ಬಂದಿದ್ದು, ಹ್ಯಾಟ್ರಿಕ್ ಗೆಲವು ಸಾಧಿಸಿದೆ. ಇತ್ತ ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯು ಕಮಾಲ್ ಮಾಡಿದೆ.

VISTARANEWS.COM


on

By

Congress alliance wins in Kashmir Haryana poll survey Calculations turned upside down
Koo

ಲೋಕಸಭಾ ಚುನಾವಣೆ ಬಳಿಕ ನಡೆದ 2 ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟಗೊಂಡಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ (Jammu-Kashmir Election) ಕಾಂಗ್ರೆಸ್ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮೈತ್ರಿ ಸಕ್ಸಸ್ ಆಗಿದ್ದರೆ ಈ ಬಾರಿ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರವೇ ಬರಲಿದೆ ಎಂಬ ಲೆಕ್ಕಾಚಾರ ಉಲ್ಟಾ ಆಗಿದೆ. ಕಾಶ್ಮೀರದಲ್ಲಿ 3 ಹಂತದಲ್ಲಿ ಚುನಾವಣೆ ನಡೆದಿದ್ರೆ, ಹರಿಯಾಣದ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಎಲ್ಲಾ ಚುನಾವನೋತ್ತರ ಸಮೀಕ್ಷೆಗಳು ಸಹ ಕಾಶ್ಮೀರದಲ್ಲಿ ಅತಂತ್ರವಾಗಿದೆ. ಹರ್ಯಾಣದಲ್ಲಿ ಈ ಬಾರಿ ಕಾಂಗ್ರೆಸ್ ಗೆ ಅಧಿಕಾರ ಫಿಕ್ಸ್ ಎಂದು ಭವಿಷ್ಯ ನುಡಿದಿದ್ವು. ಅದರಂತೆ ಫಲಿತಾಂಶದ ದಿನವಾದ ಗುರುವಾರ, ಹರ್ಯಾಣದಲ್ಲಿ ಕಾಂಗ್ರೆಸ್ ಪ್ರಾರಂಭದಲ್ಲಿ ಗೆಲ್ಲುವ ಹುಮ್ಮಸ್ಸಿದ್ದರೂ, 10.30 ಆಗುತ್ತಿದ್ದಂತೆ ಲೆಕ್ಕಾಚಾರವೇ ಬೇರೆ ಆಗೋಗಿತ್ತು.

ಆಡಳಿತ ವಿರೋಧಿ ಅಲೆ, 2 ಬಾರಿ ಬಿಜೆಪಿ ಅಧಿಕಾರ ನಡೆಸಿದೆ. ಈ ಬಾರಿ ಹರಿಯಾಣ ಜನ ಬದಲಾವಣೆ ಬಯಸಿದ್ದಾರೆ ಅನ್ನುವಷ್ಟರಲ್ಲಿ ಮತ್ತೆ ಬಿಜೆಪಿ ಮುನ್ನಡೆ ಸಾಧಿಸಿತ್ತು. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಹಾಗೂ NC ಮೈತ್ರಿ ವರ್ಕೌಟ್ ಆಗಿ ಅಧಿಕಾರ ದೊರೆತಿದ್ರೆ, ಬಿಜೆಪಿ ಕಳೆದ ಬಾರಿಗಿಂತ ಉತ್ತಮ ಪ್ರದರ್ಶನ ನೀಡಿದೆ. ಆದರೆ ಮೆಹಬೂಬ ಮಫ್ತಿರ ಪಿಡಿಪಿ ಪಕ್ಷ ಮಾತ್ರ ಎರಡಂಕಿ ದಾಟುವಲ್ಲೂ ಸಹ ಯಶಸ್ವಿಯಾಗಿಲ್ಲ.

 Congress alliance wins in Kashmir Haryana poll survey Calculations turned upside down
Congress alliance wins in Kashmir Haryana poll survey Calculations turned upside down

ಹರಿಯಾಣದಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಲು ಕಾರಣಗಳೇನು?

-ಪ್ರಬಲ ಆಡಳಿತ ವಿರೋಧಿ ಅಲೆಯನ್ನ ಚುನಾವಣಾ ಸಂಧರ್ಭದಲ್ಲಿ ಎದುರುಸಿರುವುದು
-ಕಳೆದ ಸರ್ಕಾರದಲ್ಲಿ ಮನೋಹರ್ ಲಾಲ್ ಖಟ್ಟರ್ ಅವರ ಬದಲಿಗೆ ನಯಾಬ್ ಸಿಂಗ್ ಸೈನಿ ರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿರುವುದು
-ಸೈನರನ್ನ ಮುಖ್ಯಮಂತ್ರಿಯಾಗಿ ನೇಮಕ ಮಾಡುವ ಮೂಲಕ ಬಿಜೆಪಿ ಒಬಿಸಿ ಪರವಾಗಿ ಇದೇ ಎಂಬ ಸಂದೇಶ ರವಾನೆ
-ಒಬಿಸಿ ಸಮುದಾಯದ ಮೊದಲ ಮುಖ್ಯಮಂತ್ರಿಯಾಗಿ ಹರ್ಯಾಣದಲ್ಲಿ ಸೈನಿ ನೇಮಕ
-ಜಾಟ್ ಸಮುದಾಯದ ಕೆಂಗಣ್ಣಿಗೆ ಬಿಜೆಪಿ ಗುರಿಯಾಗಿದ್ದರು ಸಹ, ಜಾಟ್ ಸಮುದಾಯ ಹೊರತುಪಡಿಸಿ ಬೇರೆ ಸಮುದಾಯದ ವೋಟ್ ಬ್ಯಾಂಕ್ ಭದ್ರಪಡಿಸಿಕೊಂಡಿದ್ದು
-ಹರಿಯಾಣದಲ್ಲಿ 30% ಜಾಟ್‌, 34% ಒಬಿಸಿ, ದಲಿತರು 16%, ಮತ್ತು 23% ಪಂಜಾಬಿಗಳು ಹಾಗೂ ಬ್ರಾಹ್ಮಣರು, ರಜಪೂತರು, ಅಗರ್‌ವಾಲ್‌ಗಳು, ಅಹಿರ್, ಗುಜ್ಜರ್ ಮತ್ತು ಸೈನಿಗಳು ಹರಿಯಾಣದಲ್ಲಿ ಸುಮಾರು 11% ಜನಸಂಖ್ಯೆ ಹೊಂದಿದೆ.
-ಜಾತಿ ಲೆಕ್ಕಾಚಾರ ಬಿಜೆಪಿಯ ಕೈ ಹಿಡಿದಿರುವುದು
-ಜಾಟ್ ಸಮುದಾಯ ಹೊರತುಪಡಿಸಿ, ಒಬಿಸಿ ಹಾಗೂ ದಲಿತ ವೋಟ್ ಗಳನ್ನ ಭದ್ರಪಡಿಸಿಕೊಂಡಿದ್ದು
-ಮುಖ್ಯಮಂತ್ರಿಯಾಗಿ ಸೈನಿ 70 ದಿನಗಳ ಅಧಿಕಾರಾವಧಿಯಲ್ಲಿ ತೆಗೆದುಕೊಂಡ ನಿರ್ಧಾರಗಳು ಹಾಗೂ ಆಡಳಿತ ಶೈಲಿ
-ಪ್ರಧಾನಿ ಮೋದಿ ಭಾಷಣ ಹಾಗೂ ಅಮಿತ್ ಶಾ ಮತ್ತು ಮೋದಿ ಒಟ್ಟಾರೆ ನಡೆಸಿದ್ದ 14 ರೋಡ್ ಶೋಗಳು
-ರೈತಾಪಿ ವರ್ಗದಿಂದ ಬಿಜೆಪಿ ಮೇಲಿದ್ದ ಕೋಪ ಹಾಗೂ ಅಗ್ನಿವೀರ್ ಯೋಜನೆ ಬಗ್ಗೆ ಇದ್ದ ಕಳವಳ ನಿವಾರಿಸುವಲ್ಲಿ ಬಿಜೆಪಿ ಯಶಸ್ವಿಯಾಗಿತ್ತು.

ಹರಿಯಾಣದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳೇನು?

-ಬಿಜೆಪಿಗಿದ್ದ ಆಡಳಿತ ವಿರೋಧಿ ಅಲೆಯನ್ನ ಸದುಪಯೋಗಪಡಿಸಿಕೊಳ್ಳದಿರುವುದು
-ಜಾಟ್ ಸಮುದಾಯದ ಮೇಲಿನ ಅತಿಯಾದ ನಂಬಿಕೆ ಹಾಗೂ ಜಾಟ್ ವೋಟ್ ಗಳ ಮೇಲೆಯೇ ಹೆಚ್ಚು ನಿಗಾ ವಹಿಸಿದ್ದು
-ರಾಹುಲ್ ಗಾಂಧಿ ತಮ್ಮ ಭಾಷಣದ ವೇಳೆ ದಲಿತ ಮತಗಳ ಕ್ರೂಡಿಕರಣಕ್ಕೆ ಪ್ರಯತ್ನಿಸಿದ್ದಾದರೂ, ಸ್ಥಳೀಯ ನಾಯಕರು ಈ ಬಗ್ಗೆ ಗಮನ ಹರಿಸದಿರುವುದು
-ಜಾಟ್ ಮತಗಳ ಮೇಲಿನ ಅವಲಂಬನೆ, ಒಳಜಗಳ, ಹೂಡಾಗಳ ಮೇಲಿನ ಅತಿಯಾದ ಅವಲಂಬನೆ
-ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಕಲಹ ಜನರಿಗೆ ಬೇಸರ ತರಿಸಿತ್ತು
-ದಲಿತ ನಾಯಕಿ ಮತ್ತು ಸಿರ್ಸಾ ಸಂಸದೆ ಕುಮಾರಿ ಸೆಲ್ಜಾ ಮತ್ತು ಮಾಜಿ ಸಿಎಂ ಮತ್ತು ಜಾಟ್ ನಾಯಕ ಭೂಪಿಂದರ್ ಸಿಂಗ್ ಹೂಡಾ ನಡುವಿನ ಕಲಹವು ಸೋಲಿಗೆ ಪ್ರಮುಖ ಕಾರಣ
-ಕಾಂಗ್ರೆಸ್ ದಲಿತ ವಿರೋಧಿ ಎಂದು ಆರೋಪಿಸಿದಾಗ, ಸರಿಯಾಗಿ ರಾಜ್ಯ ನಾಯಕರು ಬಿಜೆಪಿಗೆ ಕೌಂಟರ್ ನೀಡದಿರುವುದು
-ಅಭ್ಯರ್ಥಿ ಆಯ್ಕೆ ಬಳಿಕ ಬಂಡಾಯವನ್ನ ಶಮನ ಮಾಡಲು ವಿಫಲ ಆಗಿರುವುದು
-ಲೋಕಸಭೆ ಚುನಾವಣೆಯಲ್ಲಿ 10 ಕ್ಷೇತ್ರದ ಪೈಕಿ ಕಾಂಗ್ರೆಸ್ 5 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು, ಈ ಅತಿಯಾದ ಆತ್ಮವಿಶ್ವಾಸ ಸಹ ಸೋಲಿಗೆ ಕಾರಣ
-ಪರಿಣಾಮಕಾರಿಯಲ್ಲದ ಪ್ರಚಾರ ಮತ್ತು ಸ್ಥಳೀಯ ಸಮಸ್ಯೆಗಳ ಬಗ್ಗೆ ಗಮನ ನೀಡದಿರುವುದು

Continue Reading

ಕೊಡಗು

Drugs Mafia: ಥೈಲ್ಯಾಂಡ್ ಟು ದುಬೈ ಡ್ರಗ್‌ ಮಾಫಿಯಾಗೆ ಇಂಡಿಯಾನೆ ಮೈನ್ ಲಿಂಕ್; 3 ಕೋಟಿ ಮೌಲ್ಯದ ಗಾಂಜಾ ವಶ

Drugs Mafia: ಕೊಡಗು ಪೊಲೀಸರಿಂದ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾ ಬಯಲಿಗೆ ಬಂದಿದ್ದು, ರಣರೋಚಕ ಕಾರ್ಯಾಚರಣೆ ನಡೆಸಿ ಏರ್‌ಪೋರ್ಟ್‌ನಲ್ಲಿ ಪೆಡ್ಲರ್ ಅರೆಸ್ಟ್ ಮಾಡಿದ್ದಾರೆ. ಬರೋಬ್ಬರಿ 3 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

By

Drugs Mafia
Koo

ಕೊಡಗು: ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾಗೆ (Drugs Mafia) ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಇಂಟರೆಸ್ಟಿಂಗ್ ಆ್ಯಂಡ್ ಚಾಲೆಂಜಿಂಗ್ ಪ್ರಕರಣ ಭೇದಿಸಿರುವ ಕೊಡಗು ಪೊಲೀಸರು ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ರೋಚಕ ಕಾರ್ಯಾಚರಣೆಯಲ್ಲಿ ಇಂಟರ್‌ನ್ಯಾಷನಲ್ ಡ್ರಗ್ ಮಾಫಿಯಾವನ್ನು ಕೊಡಗು ಜಿಲ್ಲಾ ಪೊಲೀಸ್ ತಂಡ ಭೇದಿಸಿದೆ.

Drugs mafia
Drugs mafia

ಥೈಲ್ಯಾಂಡ್‌ನಲ್ಲಿ ತಯಾರಾರುವ ಹೈಡ್ರೋಪೋನಿಕ್ ಗಾಂಜಾವನ್ನು ದುಬೈಗೆ ಸಪ್ಲೆ ಮಾಡೋಕೆ ಭಾರತವನ್ನೇ ಬೇಸ್ ಮಾಡ್ಕೊಂಡಿದ್ದ ಗ್ಯಾಂಗ್‌ ಅನ್ನು ಕೊಡಗು‌ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ. ಥೈಲ್ಯಾಂಡ್‌ನಿಂದ ವಿಮಾನದ ಮೂಲಕವೇ ಭಾರತಕ್ಕೆ ಅಂದರೆ ಬೆಂಗಳೂರಿಗೆ ತಂದು, ಅಲ್ಲಿಂದ‌ ಬೆಂಗಳೂರು ನಗರ, ಕೊಡಗು,‌ ಕೇರಳದಲ್ಲಿ ಇಟ್ಟು ದುಬೈನಲ್ಲಿ ಕಸ್ಟಮರ್ ಸಿಕ್ಕಿದ್ಮೇಲೆ ಇಂಡಿಯಾದಿಂದ ದುಬೈಗೆ ವಿಮಾನದ ಮೂಲಕವೇ ಈ‌ ಗ್ಯಾಂಗ್ ಸಪ್ಲೆ ಮಾಡುತಿತ್ತು.

ಕೇರಳ ಮೂಲದ ಮಹಮ್ಮದ್ ಅನೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್ ನಗರದಲ್ಲಿ ಕೆಫೆ ಇಟ್ಟುಕೊಂಡಿದ್ದ. ಈತ ಕೇರಳದ ಕಾಸರಗೋಡಿನ ಮೆಹರೂಫ್, ವಿರಾಜಪೇಟೆಯ ರವೂಫ್, ನಾಸೀರುದ್ದೀನ್, ವಾಜೀದ್, ನಾಪೋಕ್ಲುವಿನ ಯಾಹಿಯಾ, ಅಕನಾಸ್, ಅಜ್ಜಲ್, ಕೇರಳದ ರಿಯಾಜ್ ಇವರೊಂದಿಗೆ ತಂಡವನ್ನು ಕಟ್ಟಿಕೊಂಡು ಅಲ್ಲಿಂದ ಹೈಡೋಪೋನಿಕ್ ರೀತಿಯಲ್ಲಿ ಬೆಳೆದಿರುವ ಗಾಂಜಾವನ್ನು ವಿಮಾನದ ಮೂಲಕ ಭಾರತ ಮತ್ತು ದುಬೈಗೆ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ.

ಅದರ ಭಾಗವಾಗಿ ಯಾಹ್ಯಾ ಎಂಬಾತ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಥೈಲ್ಯಾಂಡ್‌‌ನಿಂದ ತಂದ ಗಾಂಜಾವನ್ನು ಈ ತಂಡ ಕೊಡಗಿಗೆ ತರುತ್ತಿದ್ದರು. ಇದೇ ವೇಳೆ ಕೇರಳದ ಮೆಹರೂಫ್‌ನ ಮುಂದಿನ ನಿರ್ದೇಶನಕ್ಕಾಗಿ ಈ ತಂಡ ಕಾಯುತ್ತಿದ್ದಾಗ ಕೊಡಗು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಂತರ ಈ ಪ್ರಕರಣದ ಕಿಂಗ್ ಪಿನ್ ಮೆಹರೂಫ್ ಥೈಲ್ಯಾಂಡ್ ದೇಶದ ಬ್ಯಾಂಕಾಕ್‌ಗೆ ಪರಾರಿಯಾಗಲು ಯತ್ನಿಸುತ್ತಿರುವಾಗ ಕೇರಳದ ಕೊಚ್ಚಿನ್ ಏರ್ ಪೋರ್ಟ್‌ನಲ್ಲಿ ಕೊಡಗು ಪೊಲೀಸರು ಬಂಧಿಸಿದ್ದಾರೆ.

ಈ ಮಾದಕ ವಸ್ತು ಥೈಲ್ಯಾಂಡ್ ಭಾರತ ಹಾಗೂ ದುಬೈ ವಿಮಾನ‌ ನಿಲ್ದಾಣದಲ್ಲಿ ಹೇಗೆ ಪಾಸ್ ಆಗುತ್ತಿತ್ತು ಎನ್ನುವುದು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.‌ ಸದ್ಯ ಈ ಬಗ್ಗೆ ಕೂಡ ಕೊಡಗು ಪೊಲೀಸರು ತನಿಖೆಯ ಒಂದು ಭಾಗವಾಗಿ ಮಾಡೋ ಸಾಧ್ಯತೆ ಇದೆ. ಒಟ್ಟಾರೆ ಥೈಲ್ಯಾಂಡ್‌ನಿಂದ ಮಾದಕ ವಸ್ತುವನ್ನು ದುಬೈಗೆ ತಲುಪಿಸಲು ಮಾಡ್ಕೊಂಡಿದ್ದ ಭಾರತದ ಲಿಂಕ್ ಇದೀಗ ಕಟ್ ಆಗಿದೆ. ಈ ನಿಟ್ಟಿನಲ್ಲಿ ಕೊಡಗು ಪೊಲೀಸರು ಮಾಡಿರೋ ಕಾರ್ಯಕ್ಕೆ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Helicopter crashed: ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪತನ; ಮೂವರು ದುರ್ಮರಣ

Helicopter crashed: ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್‌ ಪತನಗೊಂಡಿದ್ದು, ಮೂವರು ದುರ್ಮರಣ ಹೊಂದಿದ್ದಾರೆ.

VISTARANEWS.COM


on

By

Helicopter crashes in Pune's Bhavdan hilly area Three dead
Koo

ಬೆಳಗಾವಿ: ಮಹಾರಾಷ್ಟ್ರದ ಪುಣೆ ಹೊರವಲಯದಲ್ಲಿ ಹೆಲಿಕಾಪ್ಟರ್ (Helicopter crashed) ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲೆಟ್, ಓರ್ವ ಇಂಜಿನಿಯರ್ ಸೇರಿ ಮೂವರು ದುರ್ಮರಣ ಹೊಂದಿದ್ದಾರೆ. ಪುಣೆಯ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಟೇಕಾಫ್ ಆಗಿದ್ದ ಹೆಲಿಕಾಪ್ಟರ್. ಮುಂಬೈಯ ಜುಹುನ್‌ಗೆ ಪ್ರಯಾಣ ಬೆಳೆಸುತ್ತಿತ್ತು ಎಂಬ ಮಾಹಿತಿ ಇದೆ.

ಪುಣೆಯ ಬವ್‌ದಾನ್ ಗುಡ್ಡಗಾಡು ಪ್ರದೇಶದಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ದೆಹಲಿಯ ಮೂಲದ ಖಾಸಗಿ ಸಂಸ್ಥೆಗೆ ಸೇರಿದ ವಿಮಾನ ಇದಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ‌ಪುಣೆ ಮಹಾನಗರ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೈಲೆಟ್‌ಗಳಾದ ಪರಂಜಿತ್ ಸಿಂಗ್, ಜಿ.ಕೆ ಪಿಳ್ಳೈ, ಇಂಜಿನಿಯರ್ ಪ್ರೀತಂ ಭರದ್ವಾಜ್ ಮೃತರು ಎಂದು ತಿಳಿದು ಬಂದಿದೆ.

Continue Reading
Advertisement
Ratan Tata
ದೇಶ37 ಸೆಕೆಂಡುಗಳು ago

Ratan Tata : ಕೈಗಾರಿಕೋದ್ಯಮದ ರತ್ನ ʻರತನ್‌ ಟಾಟಾʼ ಇನ್ನಿಲ್ಲ; ಖ್ಯಾತ ಉದ್ಯಮಿಯ ನಿಧನಕ್ಕೆ ಗಣ್ಯರ ಸಂತಾಪ

Why Ratan Tata didn't get married
ದೇಶ20 ನಿಮಿಷಗಳು ago

Ratan Tata: ರತನ್ ಟಾಟಾ ಯಾಕೆ ಮದ್ವೆ ಆಗಲಿಲ್ಲ! ತಮ್ಮ ಪ್ರೀತಿಯ ಕತೆ ಬಗ್ಗೆ ಹೇಳಿದ್ದೇನು?

Dina Bhavishya
ಭವಿಷ್ಯ38 ನಿಮಿಷಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರಗಳಲ್ಲಿ ಅಧಿಕ ಲಾಭ

Heavy rain forecast in Uttara Kannada
ಮಳೆ1 ದಿನ ago

Karnataka Weather : ಇಂದು ಉತ್ತರಕನ್ನಡದಲ್ಲಿ ಭಾರಿ ಮಳೆ ಮುನ್ಸೂಚನೆ; ಯೆಲ್ಲೋ ಅಲರ್ಟ್‌ ಘೋಷಣೆ

Dina bhavishya
ಭವಿಷ್ಯ1 ದಿನ ago

Dina Bhavishya : ಈ ರಾಶಿಯವರು ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರ

Actor Darshan
ಬೆಂಗಳೂರು2 ದಿನಗಳು ago

Renukaswamy Case : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ A11, A12 ಆರೋಪಿಗಳ ಜಾಮೀನು ಅರ್ಜಿಯೂ ನಾಳೆಗೆ ಮುಂದೂಡಿಕೆ

Actor Darshan and Gang
ಬೆಂಗಳೂರು2 ದಿನಗಳು ago

Actor Darshan : ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅ.9ಕ್ಕೆ ಮುಂದೂಡಿಕೆ; ಬೇಲ್‌ ಸಿಗದಿರಲು ಇದೇ ಕಾರಣ

Congress alliance wins in Kashmir Haryana poll survey Calculations turned upside down
ದೇಶ2 ದಿನಗಳು ago

Jammu-Kashmir Election: ಕಾಶ್ಮೀರದಲ್ಲಿ ಕಾಂಗ್ರೆಸ್ ಮೈತ್ರಿಯ ಕಮಾಲ್, ಚೇತರಿಸಿಕೊಂಡ ಕಮಲ ಪಡೆ; ತಲೆಕೆಳಗಾಯ್ತು ಹರಿಯಾಣ ಚುನಾವಣೆ ಸಮೀಕ್ಷೆ ಲೆಕ್ಕಾಚಾರ

Pink Strong walkathon to raise awareness among people about breast cancer
ಬೆಂಗಳೂರು2 ದಿನಗಳು ago

Breast cancer : ಸ್ತನದಲ್ಲಿ ಗಂಟಿನ ರೀತಿ ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡಲೇಬೇಡಿ!

Road Accident
ಬೆಂಗಳೂರು2 ದಿನಗಳು ago

Road Accident : ಮಹಿಳೆಗೆ ಡಿಕ್ಕಿ ಹೊಡೆದ ಬಿಎಂಟಿಸಿ ಬಸ್‌; ಕೆಳಗೆ ಬಿದ್ದವಳ ತಲೆ ಮೇಲೆ ಹರಿದ ಕಾರು

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ7 ದಿನಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್1 ತಿಂಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌