Rave Party: ರೇವ್‌ ಪಾರ್ಟಿ ಮೇಲೆ ಪೊಲೀಸರ ದಾಳಿ; ಅಪ್ರಾಪ್ತರು ಸೇರಿ 39 ವಿದ್ಯಾರ್ಥಿಗಳ ವಶ - Vistara News

ದೇಶ

Rave Party: ರೇವ್‌ ಪಾರ್ಟಿ ಮೇಲೆ ಪೊಲೀಸರ ದಾಳಿ; ಅಪ್ರಾಪ್ತರು ಸೇರಿ 39 ವಿದ್ಯಾರ್ಥಿಗಳ ವಶ

Rave Party: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉತ್ತರ ಪ್ರದೇಶದ ಪೊಲೀಸರು ರೇವ್‌ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿ ಅಪ್ರಾಪ್ತರು ಸೇರಿ ಸುಮಾರು 39 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾ ಸೆಕ್ಟರ್-94ರ ಐಷಾರಾಮಿ ಸೊಸೈಟಿಯ ಫ್ಲ್ಯಾಟ್‌ನಲ್ಲಿ ರೇವ್‌ ಪಾರ್ಟಿ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ʼʼಬಂಧಿತರು ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ವಿದ್ಯಾರ್ಥಿಗಳು. ಅವರ ವಯಸ್ಸು 16ರಿಂದ 20 ವರ್ಷʼʼ ಎಂದು ಪೊಲೀಸರು ತಿಳಿಸಿದ್ದಾರೆ.

VISTARANEWS.COM


on

Rave Party
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಮಹತ್ವದ ಕಾರ್ಯಾಚರಣೆಯೊಂದರಲ್ಲಿ ಉತ್ತರ ಪ್ರದೇಶದ ಪೊಲೀಸರು ರೇವ್‌ ಪಾರ್ಟಿ (Rave Party)ಯೊಂದರ ಮೇಲೆ ದಾಳಿ ನಡೆಸಿ ಅಪ್ರಾಪ್ತರು ಸೇರಿ ಸುಮಾರು 39 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ನೋಯ್ಡಾ ಸೆಕ್ಟರ್-94ರ ಐಷಾರಾಮಿ ಸೊಸೈಟಿಯ ಫ್ಲ್ಯಾಟ್‌ನಲ್ಲಿ ರೇವ್‌ ಪಾರ್ಟಿ ಮಾಡಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು.

ʼʼಸೂಪರ್‌ನೋವಾ ಅಪಾರ್ಟ್‌ಮೆಂಟ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ದಾಳಿ ಆಯೋಜಿಸಲಾಗಿತ್ತು. ಈ ವೇಳೆ ಫ್ಲ್ಯಾಟ್‌ನಲ್ಲಿ ಅನೇಕ ಮದ್ಯದ ಬಾಟಲಿ ಪತ್ತೆಯಾಗಿದೆ. ಬಂಧಿತರು ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರ ವಿದ್ಯಾರ್ಥಿಗಳು. ಅವರ ವಯಸ್ಸು 16ರಿಂದ 20 ವರ್ಷʼʼ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಫ್ಲ್ಯಾಟ್‌ನಿಂದ ಹೆಚ್ಚಿನ ಸಂಖ್ಯೆಯ ಹರಿಯಾಣ ಲೇಬಲ್ ಮಾಡಿದ ಮದ್ಯದ ಬಾಟಲಿಗಳು ಮತ್ತು ಹುಕ್ಕಾಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಚಾರಣೆಯ ಸಮಯದಲ್ಲಿ, ವಿದ್ಯಾರ್ಥಿಗಳನ್ನು ವಾಟ್ಸ್‌ಆ್ಯಪ್‌ ಮೂಲಕ ಪಾರ್ಟಿಗೆ ಆಹ್ವಾನಿಸಲಾಗಿದೆ ಎಂಬ ವಿಚಾರ ತಿಳಿದುಬಂದಿದೆ. ಪ್ರವೇಶ ಶುಲ್ಕವು ಪ್ರತಿ ಮಹಿಳೆಗೆ 500 ರೂ., ಜೋಡಿಗೆ 800 ರೂ. ಮತ್ತು ಪುರುಷರಿಗೆ 1,000 ರೂ. ನಿಗದಿಪಡಿಸಲಾಗಿತ್ತು. 6 ಗಂಟೆಗೆ ಪಾರ್ಟಿ ನಡೆಯಲಿದೆ ಎಂದು ವಾಟ್ಸ್‌ಆ್ಯಪ್‌ ಸಂದೇಶದಲ್ಲಿ ತಿಳಿಸಲಾಗಿತ್ತು.

ಪಾನಮತ್ತ ವಿದ್ಯಾರ್ಥಿಗಳು ಪಾರ್ಟಿ ಮಾಡಿದ ಬಳಿಕ ಅತಿರೇಕದಿಂದ ವರ್ತಿಸಿ ಗಲಾಟೆ ಮಾಡಿದ್ದಾರೆ ಎನ್ನುವ ದೂರು ಕೇಳಿ ಬಂದಿದೆ. ಎಲ್ಲೆಂದರಲ್ಲಿ ಬಾಟಲಿ ಎಸೆದು ರಾದ್ಧಾಂತ ಮಾಡಿದ್ದಾರೆ ಎಂದು ಅಕ್ಕ ಪಕ್ಕದ ಫ್ಲ್ಯಾಟ್‌ ನಿವಾಸಿಗಳು ಆರೋಪಿಸಿದ್ದಾರೆ.

ಎಲ್ವಿಶ್‌ ಯಾದವ್‌ ವಿರುದ್ಧ ಎಫ್‌ಐಆರ್‌

ಕಳೆದ ವರ್ಷ ನವೆಂಬರ್‌ನಲ್ಲಿ ಪಾರ್ಟಿಯೊಂದರಲ್ಲಿ ಹಾವಿನ ವಿಷವನ್ನು ಬಳಸಲಾಗುತ್ತಿದೆ ಎಂದು ಆರೋಪಿಸಿ ಎನ್‌ಜಿಒದಿಂದ ದೂರು ಬಂದ ಹಿನ್ನಲೆಯಲ್ಲಿ ನೋಯ್ಡಾ ಪೊಲೀಸರು ದಾಳಿ ನಡೆಸಿದ್ದರು. ಈ ಪ್ರಕರಣದಲ್ಲಿ ಹಿಂದಿ  ಬಿಗ್‌ಬಾಸ್ ಒಟಿಟಿ ಸೀಸನ್‌ 2 ಸ್ಪರ್ಧೆಯ ವಿಜೇತ ಮತ್ತು ಯೂಟ್ಯೂಬರ್ ಎಲ್ವಿಶ್ ಯಾದವ್ ಹೆಸರೂ ಇತ್ತು. ಬಳಿಕ ಎಲ್ವಿಶ್ ಯಾದವ್ ಹೆಸರನ್ನು ಎಫ್ಐಆರ್‌ನಲ್ಲಿ ಸೇರಿಸಲಾಗಿತ್ತು. ಆದರೆ 26 ವರ್ಷದ ಯೂಟ್ಯೂಬರ್ ತನ್ನ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿದ್ದಾರೆ ಮತ್ತು ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

ವಿದೇಶಿ ಪ್ರಜೆಗಳಿಗೂ ಆತಿಥ್ಯ ನೀಡಿದ ರೇವ್ ಪಾರ್ಟಿಗಳಲ್ಲಿ ಭಾಗವಹಿಸಿದ್ದ ಕೆಲವರು ಹಾವಿನ ವಿಷವನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪಿಗಳಿಂದ ಐದು ನಾಗರಹಾವು ಸೇರಿದಂತೆ ಒಂಬತ್ತು ಹಾವುಗಳು ಹಾಗೂ 20 ಎಂ.ಎಲ್‌. ಹಾವಿನ ವಿಷವನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ವಶಪಡಿಸಿಕೊಂಡ ಹಾವುಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಲಾಗಿತ್ತು. ವಿವಿಧ ಸ್ಥಳಗಳಿಂದ ಹಾವುಗಳನ್ನು ಹಿಡಿದು ಅವುಗಳ ವಿಷವನ್ನು ಹೊರತೆಗೆಯುತ್ತಿದ್ದರು. ಅದನ್ನು ಎಲ್ವಿಶ್ ಯಾದವ್‌ ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗಿತ್ತು.

ಇದನ್ನೂ ಓದಿ: Elvish Yadav: ʻಬಿಗ್ ಬಾಸ್‌ ಒಟಿಟಿʼ ವಿನ್ನರ್‌ಗೆ ಮತ್ತೆ ಸಂಕಷ್ಟ; ಎಲ್ವಿಶ್‌ ವಿರುದ್ಧ ಇಡಿ ಕೇಸ್‌

ಪ್ರಾಣಿ ಹಕ್ಕುಗಳಿಗಾಗಿ ಹೋರಾಟ ನಡೆಸುವ ಗುಂಪು ಪಿಎಫ್ಎ (People For Animals) ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಪಿಎಫ್ಎ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಮೇನಕಾ ಗಾಂಧಿ ಈ ಬಗ್ಗೆ ಮಾತನಾಡಿ, ಎಲ್ವಿಶ್‌ ಯಾದವ್ ಹಾವಿನ ವಿಷವನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಕರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Hindu Population: ಅಸ್ಸಾಂ ಹಾಗೂ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಬದಲಾವಣೆಯಾಗಿರುವ ಕುರಿತು 2011ರ ಜನಗಣತಿಯ ಮಾಹಿತಿಯೇ ಹೇಳುತ್ತದೆ ಎಂಬುದಾಗಿ ಹಿಮಂತ ಬಿಸ್ವಾ ಶರ್ಮಾ ಅವರು ಮತ್ತೆ ಹಿಂದುಗಳ ಜನಸಂಖ್ಯೆ ಕುಂಠಿತವಾಗಿರುವ ಕುರಿತ ಚರ್ಚೆಗೆ ಇಂಬು ನೀಡಿದ್ದಾರೆ.

VISTARANEWS.COM


on

Hindu Population
Koo

ದಿಸ್ಪುರ: ಭಾರತದಲ್ಲಿ ಕೆಲ ದಶಕಗಳಿಂದ ಹಿಂದುಗಳ ಜನಸಂಖ್ಯೆಯು (Hindu Population) ಕಡಿಮೆಯಾಗಿದೆ ಎಂಬ ವರದಿಗಳು ಇತ್ತೀಚೆಗೆ ಕೇಳಿಬಂದು, ಭಾರಿ ಚರ್ಚೆಗೆ ಗ್ರಾಸವಾಗಿದ್ದವು. ಇದರ ಬೆನ್ನಲ್ಲೇ, ಅಸ್ಸಾಂನಲ್ಲಿ ಹಿಂದುಗಳ ಜನಸಂಖ್ಯೆಯು ಕಡಿಮೆಯಾಗಿದೆ ಎಂಬುದಾಗಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ (Himanta Biswa Sarma) ತಿಳಿಸಿದ್ದಾರೆ. ಇದು ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.

“ಅಸ್ಸಾಂ ಹಾಗೂ ಬಾಂಗ್ಲಾದೇಶದ ಜನಸಂಖ್ಯೆಯಲ್ಲಿ ಬದಲಾವಣೆಯಾಗಿರುವ ಕುರಿತು 2011ರ ಜನಗಣತಿಯ ಮಾಹಿತಿಯೇ ಹೇಳುತ್ತದೆ. ಪಶ್ಚಿಮ ಬಂಗಾಳ ಹಾಗೂ ಜಾರ್ಖಂಡ್‌ನಲ್ಲೂ ಇದೇ ಪರಿಸ್ಥಿತಿ ಇದೆ. ಜನಗಣತಿ ದಾಖಲೆ ಪ್ರಕಾರ, ಅಸ್ಸಾಂನಲ್ಲಿ 1951ರಿಂದ 2011ರ ಅವಧಿಯಲ್ಲಿ ಹಿಂದು ಜನಸಂಖ್ಯೆಯ ಪ್ರಮಾಣವು ಶೇ.9.23ರಷ್ಟು ಕಡಿಮೆಯಾಗಿದೆ. ಬಾಂಗ್ಲಾದೇಶದಲ್ಲಂತೂ ಹಿಂದುಗಳ ಸ್ಥಿತಿ ಕಷ್ಟಕರವಾಗಿದ್ದು, ಶೇ.13.5ಕ್ಕೆ ಇಳಿಕೆಯಾಗಿದೆ” ಎಂಬುದಾಗಿ ವರದಿ ತಿಳಿಸಿದೆ.

ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿ ನಡೆಸುತ್ತಿರುವ ಕುರಿತು ಮಾತನಾಡಿದ ಅವರು, “ಬಾಂಗ್ಲಾದೇಶದಲ್ಲಿ ಹಿಂದುಗಳ ಸ್ಥಿತಿಯು ಚಿಂತಾಜನಕವಾಗಿದೆ. ಗಾಜಾದಲ್ಲಿ ಅಲ್ಪಸಂಖ್ಯಾತರ ಮೇಲೆ ದಾಳಿ ನಡೆಸಲಾಗಿದೆ ಎಂಬುದಾಗಿ ದೇಶದಲ್ಲಿ ಪ್ರತಿಭಟನೆ ನಡೆಸಿದರು. ಆದರೆ, ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ಆಗುತ್ತಿರುವ ದಾಳಿಗಳ ಕುರಿತು ಪ್ರತಿಪಕ್ಷಗಳ ನಾಯಕರು ಮಾತನಾಡುವುದಿಲ್ಲ. ಜಗತ್ತಿನ ಮುಸ್ಲಿಮರ ಬಗ್ಗೆ ಕಾಳಜಿ ತೋರುವ ಕಾಂಗ್ರೆಸ್‌, ಹಿಂದುಗಳ ಬಗ್ಗೆ ಯಾವುದೇ ಕಾಳಜಿ ತೋರುವುದಿಲ್ಲ” ಎಂದರು.

ಕೆಲ ದಿನಗಳ ಹಿಂದೆಯೂ ಹಿಮಂತ ಬಿಸ್ವಾ ಶರ್ಮಾ ಅವರು ಹಿಂದುಗಳ ಕುರಿತು ಮಾತನಾಡಿದ್ದರು. “ಹಿಂದುಗಳಿಂದ ದೇಶದಲ್ಲಿ ಕೋಮುವಾದ ಸೃಷ್ಟಿಯಾಗುವುದಿಲ್ಲ. ದೇಶದಲ್ಲಿ ಬಾಂಗ್ಲಾದೇಶ ಮೂಲದ ಧರ್ಮವು (ಇಸ್ಲಾಂ) ಕೋಮುವಾದ ಸೃಷ್ಟಿಸುತ್ತದೆ. ಇದಕ್ಕೆ ಲೋಕಸಭೆ ಚುನಾವಣೆಯೇ ಸಾಕ್ಷಿಯಾಗಿದೆ” ಎಂದು ಅವರು ಹೇಳಿದ್ದರು. ಅಸ್ಸಾಂನಲ್ಲಿ ಯಾವ ಧರ್ಮದವರು ಯಾವ ಪಕ್ಷಕ್ಕೆ ಮತ ನೀಡಿದ್ದಾರೆ ಎಂಬುದನ್ನು ವಿಶ್ಲೇಷಿಸುತ್ತ ಅವರು ಹೀಗೆ ಹೇಳಿದ್ದರು.

ಇದನ್ನೂ ಓದಿ: Himanta Sarma: ಹಿಂದು ಅಲ್ಲ, ಆ ಒಂದು ಧರ್ಮದಿಂದ ಕೋಮುವಾದ ಸೃಷ್ಟಿ ಎಂದ ಹಿಮಂತ ಶರ್ಮಾ! ಯಾವುದದು?

Continue Reading

ದೇಶ

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Kashmir Encounter: ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

VISTARANEWS.COM


on

Kashmir Encounter
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಸೈನಿಕರನ್ನು ಗುರಿಯಾಗಿಸಿ ದಾಳಿ ಮಾಡುವುದನ್ನು ಉಗ್ರರು ಮುಂದುವರಿಸಿದ್ದು, ಅನಂತನಾಗ್‌ ಜಿಲ್ಲೆಯಲ್ಲಿ (Anantnag District) ನಡೆದ ಗುಂಡಿನ ಚಕಮಕಿಯಲ್ಲಿ (Kashmir Encounter) ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಗುಂಡಿನ ಚಕಮಕಿಯ ವೇಳೆ ಇಬ್ಬರು ನಾಗರಿಕರು ಕೂಡ ಗಾಯಗೊಂಡಿದ್ದಾರೆ. ಇದಾದ ಬಳಿಕವೂ ಭದ್ರತಾ ಸಿಬ್ಬಂದಿಯು ಎನ್‌ಕೌಂಟರ್‌ ನಡೆದ ಜಾಗವನ್ನು ಸುತ್ತುವರಿದಿದ್ದು, ಕಾರ್ಯಾಚರಣೆ ಮುಂದುವರಿಸಿದ್ದಾರೆ ಎಂದು ತಿಳಿದುಬಂದಿದೆ.

ಅನಂತನಾಗ್‌ ಜಿಲ್ಲೆಯ ಅಲ್ಹಾನ್‌ ಗಡೋಲೆ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಆರಂಭಿಸಿದ್ದರು. ಇದೇ ವೇಳೆ ಉಗ್ರರು ಕೂಡ ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆಗ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಜಮ್ಮು ಕಾಶ್ಮೀರದ ಪೊಲೀಸರು ಮಾಹಿತಿ ನೀಡಿದ್ದಾರೆ. ಇದಾದ ಬಳಿಕವೇ ಹೆಚ್ಚಿನ ಸಿಬ್ಬಂದಿಯು ಸ್ಥಳಕ್ಕೆ ಆಗಮಿಸಿ ಉಗ್ರರಿಗಾಗಿ ಶೋಧ ನಡೆಸುತ್ತಿದ್ದಾರೆ.

“ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿರುವ ಜತೆಗೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದಾಗ್ಯೂ, ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಮುಂದುವರಿಸಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ ಉಗ್ರರು ಪಾಕಿಸ್ತಾನದ ಉಗ್ರರಾಗಿರಬಹುದು ಎಂದು ಶಂಕಿಸಲಾಗಿದೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿರುವ ಕಾರಣ ಭಾರತೀಯ ಸೇನೆ ಹಾಗೂ ಜಮ್ಮು-ಕಾಶ್ಮೀರ ಪೊಲೀಸರು ಕಾರ್ಯಾಚರಣೆಗಳನ್ನು ಕೈಗೊಳ್ಳುತ್ತಲೇ ಇರುತ್ತಾರೆ. ಜುಲೈ 6 ಮತ್ತು 7 ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಗುಂಡಿನ ಚಕಮಕಿಗಳಲ್ಲಿ ಭದ್ರತಾ ಪಡೆಗಳು ಆರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದವು. ಇದಾದ ನಂತರವೂ ಉಗ್ರರ ದಾಳಿಗಳು ಮುಂದುವರಿದಿವೆ. ಸೈನಿಕರು, ಸೇನಾ ನೆಲಗಳು, ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿದ್ದಾರೆ.

ಇದನ್ನೂ ಓದಿ: Terrorist Attack: ಕುಪ್ವಾರ ಎನ್‌ಕೌಂಟರ್‌ನಲ್ಲಿ ಓರ್ವ ಯೋಧ ಹುತಾತ್ಮ: ಪಾಕ್‌ ಉಗ್ರನನ್ನು ಹೊಡೆದುರುಳಿಸಿದ ಸೇನೆ

Continue Reading

ದೇಶ

TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

TV Somanathan: ರಾಜೀವ್‌ ಗೌಬಾ ಅವರು 2019ರಲ್ಲಿ ಎರಡು ವರ್ಷಗಳ ಅವಧಿಗೆ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಇದಾದ ಬಳಿಕ 2021, 2022 ಹಾಗೂ 2023ರಲ್ಲಿ ಅವರ ಅವಧಿಯನ್ನು ತಲಾ ಒಂದೊಂದು ವರ್ಷ ವಿಸ್ತರಣೆ ಮಾಡಲಾಯಿತು. ಈಗ ಟಿ.ವಿ.ಸೋಮನಾಥನ್‌ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ಅವರ ಹುದ್ದೆಗೆ ನೇಮಿಸಲಾಗಿದೆ.

VISTARANEWS.COM


on

TV Somanathan
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾದ ಬಳಿಕ ಆಡಳಿತಾತ್ಮಕವಾಗಿ ಹಲವು ಮಹತ್ವದ ಬದಲಾವಣೆ ಮಾಡುತ್ತಿದ್ದಾರೆ. ದಕ್ಷ ಹಾಗೂ ಹೊಸ ಅಧಿಕಾರಿಗಳನ್ನು ಹೊಸ ಹೊಸ ಹುದ್ದೆಗಳಿಗೆ ನೇಮಿಸುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಕೇಂದ್ರ ಸರ್ಕಾರವು (Central Government) ಟಿ.ವಿ.ಸೋಮನಾಥನ್‌ (TV Somanathan) ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಟಿ.ವಿ.ಸೋಮನಾಥನ್‌ ಅವರು ಸದ್ಯ ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

“ನೇಮಕಾತಿ ಕುರಿತ ಸಂಪುಟ ಸಮಿತಿಯು ಟಿ.ವಿ.ಸೋಮನಾಥನ್‌ ಅವರನ್ನು ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ. ಇದುವರೆಗೆ ಅವರು ಸಂಪುಟ ಕಚೇರಿಯಲ್ಲಿ ವಿಶೇಷ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಅವರಿಗೆ ಪದೋನ್ನತಿ ನೀಡಲಾಗಿದೆ” ಎಂಬುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕಳೆದ 5 ವರ್ಷಗಳಿಂದಲೂ ರಾಜೀವ್‌ ಗೌಬಾ ಅವರು ಸಂಪುಟ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹುದ್ದೆಗೆ ಸೋಮನಾಥನ್‌ ಅವರನ್ನು ನೇಮಿಸಲಾಗಿದೆ. ಇವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.

ಯಾರಿವರು ಸೋಮನಾಥನ್?

ಟಿ.ವಿ.ಸೋಮನಾಥನ್‌ ಅವರು 1987ರ ಬ್ಯಾಚ್‌, ತಮಿಳುನಾಡು ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದರೆ. ಇವರು ತಮಿಳುನಾಡು ಸರ್ಕಾರದಲ್ಲೂ ಹಲವು ಹುದ್ದೆಗಳನ್ನು ನಿಭಾಯಿಸಿದ್ದಾರೆ. ಕೋಲ್ಕೊತಾ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪಿಎಚ್‌.ಡಿ ಪಡೆದಿರುವ ಇವರು ಹಲವು ವಿಷಯಗಳಲ್ಲಿ ಪರಿಣತಿ ಹೊಂದಿದ್ದಾರೆ. ಇವರು 2019ರಿಂದ 2021ರವರೆಗೆ ಹಣಕಾಸು ವೆಚ್ಚ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. 2015-2017ರ ಅವಧಿಯಲ್ಲಿ ಇವರು ಪಿಎಂಒ ಜಂಟಿ ಕಾರ್ಯದರ್ಶಿಯಾಗಿದ್ದರು.

ರಾಜೀವ್‌ ಗೌಬಾ ಅವರು 2019ರಲ್ಲಿ ಎರಡು ವರ್ಷಗಳ ಅವಧಿಗೆ ಸಂಪುಟ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಇದಾದ ಬಳಿಕ 2021, 2022 ಹಾಗೂ 2023ರಲ್ಲಿ ಅವರ ಅವಧಿಯನ್ನು ತಲಾ ಒಂದೊಂದು ವರ್ಷ ವಿಸ್ತರಣೆ ಮಾಡಲಾಯಿತು. ರಾಜೀವ್‌ ಗೌಬಾ ಅವರು ಜಮ್ಮು-ಕಾಶ್ಮೀರಕ್ಕೆ ಅನ್ವಯಿಸುತ್ತಿದ್ದ 370ನೇ ವಿಧಿ ರದ್ದುಗೊಳಿಸಿದ ಬಳಿಕ, ಅದನ್ನು ಎರಡು ವಿಭಾಗಗಳಾಗಿ ವಿಂಗಡಿಸಲು ಕಾರಣವಾದ ಜಮ್ಮು-ಕಾಶ್ಮೀರ ಮರು ಸಂಘಟನೆ ಕಾಯ್ದೆಯ (2019) ನಿರ್ಮಾತೃ ಎಂದೇ ಹೇಳಲಾಗುತ್ತದೆ.

ಇದನ್ನೂ ಓದಿ: Officer Dismissed: ಸುಳ್ಳು ದಾಖಲೆ ನೀಡಿ ನೇಮಕ; ಸಹಾಯಕ ತೋಟಗಾರಿಕೆ ಅಧಿಕಾರಿ ವಜಾ

Continue Reading

ವಿದೇಶ

Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

ಬಾಂಗ್ಲಾದಿಂದ ಭಾರತಕ್ಕೆ ವಲಸೆ ಬಂದಿರುವ ಅನೇಕರು (Hindus in Bangla) ಒಂದಲ್ಲಾ ಒಂದು ರೀತಿಯ ನೋವಿನ ಕಥೆಯನ್ನು ಹೇಳುತ್ತಾರೆ. ಪೂರ್ವಜರ ಮನೆಗಳು ಮತ್ತು ನೆನಪುಗಳನ್ನು ಬಿಟ್ಟು ಬರುವುದು ಸುಲಭವಲ್ಲ. ಆದರೆ ಪ್ರಾಣ ರಕ್ಷಣೆಗಾಗಿ ಓಡಿ ಬರಲೇ ಬೇಕಾಯಿತು ಎನ್ನುವ ಅವರಲ್ಲಿ ದೇಶ, ಸಂಬಂಧಿಗಳನ್ನು ಬಿಟ್ಟು ಬಂದ ನೋವು ಇನ್ನೂ ಇದೆ. ಅದನ್ನು ಅವರು ಬಿಚ್ಚಿಟ್ಟಿದ್ದು ಹೀಗೆ. ಬಾಂಗ್ಲಾದಲ್ಲಿ ಹಿಂದೂಗಳು ಹೇಗಿದ್ದಾರೆ? ಬಾಂಗ್ಲಾ ವಲಸಿಗರ ಮನಕಲಕುವ ಮಾತುಗಳು ಇಲ್ಲಿವೆ.

VISTARANEWS.COM


on

By

Hindus in Bangla
Koo

ಭಾರತದ ಸ್ವಾತಂತ್ರ್ಯ ಅನಂತರವೂ ದೇಶದ ಗಡಿಯ ಭಾಗದಲ್ಲಿ ಬಾಂಗ್ಲಾದೇಶದ (bangladesh) ಸಾಮಾಜಿಕ, ರಾಜಕೀಯ ಪರಿಸ್ಥಿತಿಗಳು ಪ್ರಭಾವವನ್ನು ಬೀರುತ್ತಲೇ ಇದೆ. ಇದು ಬಾಂಗ್ಲಾಕ್ಕೆ ಹತ್ತಿರದ ನೆರೆಯ ರಾಜ್ಯವಾದ ಪಶ್ಚಿಮ ಬಂಗಾಳದ (west bengal) ಜನರ ಮೇಲೆ ಅದರಲ್ಲೂ ಮುಖ್ಯವಾಗಿ ಬಾಂಗ್ಲಾದಿಂದ ವಲಸೆ ಬಂದಿರುವ (Immigrant) ಹಿಂದೂಗಳ (Hindus in Bangla) ಮೇಲೆ ಗಮನಾರ್ಹ ಪರಿಣಾಮವನ್ನು ಉಂಟು ಮಾಡುತ್ತಿದೆ. ದೇಶ ವಿಭಜನೆಯ ಸಂದರ್ಭದಲ್ಲಿ ಲಕ್ಷಾಂತರ ಜನರು ಬಾಂಗ್ಲಾದಿಂದ ಭಾರತಕ್ಕೆ ಬಂದರು. ಅವರು ಪಶ್ಚಿಮ ಬಂಗಾಳ, ತ್ರಿಪುರಾ, ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಲ್ಲಿ ಆಶ್ರಯ ಪಡೆದರು. ಅನೇಕರು ತಮ್ಮ ಜೀವನವನ್ನು ಪುನರ್ ನಿರ್ಮಿಸುವ ಭರವಸೆಯಲ್ಲಿ ಬಂದರು. ಆದರೆ “ನಿರಾಶ್ರಿತರು” ಎಂಬ ಶಾಶ್ವತ ಹಣೆಪಟ್ಟಿಯನ್ನು ಪಡೆದರು.

ದಶಕಗಳ ಅನಂತರ ಬಾಂಗ್ಲಾದಲ್ಲಿ ಉಂಟಾಗುತ್ತಿರುವ ರಾಜಕೀಯ, ಸಾಮಾಜಿಕ ಸಂಘರ್ಷದ ಪರಿಣಾಮಗಳು ಬಾಂಗ್ಲಾದಿಂದ ವಲಸೆ ಬಂದಿರುವ ಜನರು ಇರುವ ರಾಜ್ಯಗಳಲ್ಲಿ ಪರಿಣಾಮ ಬೀರುತ್ತಿದೆ. ಇಲ್ಲಿರುವ ಅನೇಕ ಅಲ್ಪಸಂಖ್ಯಾತ ಸಮುದಾಯಗಳು ನೆರೆಯ ರಾಷ್ಟ್ರದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ಒತ್ತಾಯಿಸುತ್ತಾರೆ. ಇದು ಬಂಗಾಳಿ ಹಿಂದೂಗಳ ಆತಂಕಕ್ಕೆ ಕಾರಣವಾಗುತ್ತದೆ. ಹಿಂದಿನ ದೌರ್ಜನ್ಯಗಳಿಗೆ ಸಾಕ್ಷಿಯಾದ ಹಲವಾರು ಬಂಗಾಳಿ ಹಿಂದೂಗಳು ಈ ಕುರಿತು ತಮ್ಮ ಅನುಭವಗಳನ್ನು oneindia ಮಾಧ್ಯಮದ ಜೊತೆಗೆ ಹಂಚಿಕೊಂಡಿದ್ದಾರೆ.


ಮನೆಗಳನ್ನು ಸುಟ್ಟು ಹಾಕಿದ್ದರು

1971ರಲ್ಲಿ ಭಾರತಕ್ಕೆ ಬಂದ ಸುಶೀಲ್ ಗಂಗೋಪಾಧ್ಯಾಯ ಅವರು ಮೂಲತಃ ಬಾಂಗ್ಲಾದೇಶದ ನೊವಾಖಾಲಿ ಜಿಲ್ಲೆಯವರು. ಅಲ್ಲಿ ಅವರು ದೊಡ್ಡ ಕುಟುಂಬ ಮತ್ತು ವಿಶಾಲವಾದ ಭೂಮಿಯನ್ನು ಹೊಂದಿದ್ದರು ಆದರೆ ವಿಮೋಚನಾ ಯುದ್ಧದ ಸಮಯದಲ್ಲಿ ಪಾಕಿಸ್ತಾನಿ ಸೈನ್ಯ ಮತ್ತು ರಜಾಕಾರರು ದಾಳಿ ಮಾಡಿ ಇವರ ಮನೆಗಳನ್ನು ಸುಟ್ಟು ಹಾಕಿದರು. ಅನೇಕರು ಕ್ರೂರವಾಗಿ ಕೊಲ್ಲಲ್ಪಟ್ಟರು ಎಂದು ಅವರು ಈಗಲೂ ನೆನಪಿಸಿಕೊಳ್ಳುತ್ತಾರೆ. ಸ್ವಾತಂತ್ರ್ಯದ ಬಳಿಕ ಬಹುಸಂಖ್ಯಾತ ಸಮುದಾಯದ ದಬ್ಬಾಳಿಕೆಯು ಅವರನ್ನು ಭಾರತದಲ್ಲಿ ಶಾಶ್ವತ ಆಶ್ರಯ ಪಡೆಯಲು ಪ್ರೇರೇಪಿಸಿತ್ತು.


ಪ್ರಸ್ತುತ ಬಾಂಗ್ಲಾದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಅವರು, ಬಾಂಗ್ಲಾದೇಶದಲ್ಲಿ ಇತ್ತೀಚಿನ ಘಟನೆ ಹೃದಯ ವಿದ್ರಾವಕವಾಗಿದೆ. ಗರ್ಭಿಣಿಯ ಹೊಟ್ಟೆಗೆ ಒದೆಯುವ ದೃಶ್ಯಗಳನ್ನು ನಾನು ನೋಡಿದ್ದೇನೆ. ಇಂತಹ ಕ್ರೂರತೆಯನ್ನು ಊಹಿಸಲೂ ಸಾಧ್ಯವಿಲ್ಲ. ಒಬ್ಬ ಭಾರತೀಯನಾಗಿ ನಾನು ಅವರನ್ನು ರಕ್ಷಿಸಬೇಕೆಂದು ಒತ್ತಾಯಿಸುತ್ತೇನೆ. ನಮ್ಮ ಸ್ಥಳೀಯ ಸಹೋದರರು ಅಲ್ಲಿ ಹಿಂದೂಗಳನ್ನು ಕೆಟ್ಟದಾಗಿ ನಡೆಸಿಕೊಳ್ಳುವುದನ್ನು ಮುಂದುವರೆಸಿದರೆ ನಾವು ಬಾಂಗ್ಲಾದೇಶದಲ್ಲಿ ‘ಕ್ವಿಟ್ ಇಂಡಿಯಾ’ ಚಳವಳಿಯನ್ನು ನಡೆಸಬೇಕಾಗಬಹುದು ಎನ್ನುತ್ತಾರೆ.


1971ರ ಅವರ ನೆನಪುಗಳು ಇನ್ನೂ ಜೀವಂತವಾಗಿವೆ. ಆಗ ನನಗೆ ಕೇವಲ 10 ಅಥವಾ 12 ವರ್ಷ. ರಜಾಕಾರರು ನಮ್ಮನ್ನು ಹಿಂಸಿಸಿದರು, ಪುರುಷರ ದೇಹಗಳನ್ನು ನದಿಗಳಿಗೆ ಎಸೆದು ತಾಯಿಯಂದಿರ ಮೇಲೆ ಅತ್ಯಾಚಾರ ನಡೆಸಿದರು. ಪಾಕಿಸ್ತಾನಿ ಸೇನೆಯಿಂದ ಅನೇಕ ಮಹಿಳೆಯರು ಗರ್ಭ ಧರಿಸುವಂತಾಯಿತು. ವರ್ಷಗಳ ಅನಂತರವೂ ಆ ಗಾಯಗಳು ಇನ್ನೂ ಉಳಿದಿವೆ ಎನ್ನುತ್ತಾರೆ ಅವರು.


ಭಾರತಕ್ಕೆ ಓಡಿ ಬಂದ ತುಂಬು ಗರ್ಭಿಣಿ

ಬಾಂಗ್ಲಾದೇಶದ ಬಂಗಾವ್‌ನ ಅನಿಮಾ ದಾಸ್‌ ಅವರ ಕಥೆ ಎಂತಹ ಕಲ್ಲು ಹೃದಯವನ್ನೂ ಕರಗಿಸಬಲ್ಲದು. ಆ ದುಃಖದ ದಿನಗಳನ್ನು ನೆನಪಿಸಿಕೊಳ್ಳುವ ಅವರು, ಆಗ ನನ್ನ ಮಗ ಚಿಕ್ಕವ, ನನ್ನ ಮಗಳು ಹೊಟ್ಟೆಯಲ್ಲಿದ್ದಳು. ದೇಶಾದ್ಯಂತ ಸಂಘರ್ಷ ಉಂಟಾಗಿತ್ತು. ಮನೆಗಳು ಸುಟ್ಟುಹೋದವು, ಭಯದಿಂದ ಮಾವ ನಮ್ಮನ್ನು ಭಾರತಕ್ಕೆ ಕಳುಹಿಸಿದರು. ಪುರುಷರ ವಿರುದ್ಧ ಹಿಂಸಾಚಾರವನ್ನು ನೆನಪಿಸಿಕೊಂಡರೆ ಈಗಲೂ ಹೃದಯ ಕಂಪಿಸುತ್ತೆ ಎನ್ನುತ್ತಾರೆ.


ಬಳಿಕ ಹಲವು ಬಾರಿ ಬಾಂಗ್ಲಾದೇಶಕ್ಕೆ ಭೇಟಿ ನೀಡಿದ್ದೇನೆ. ಆದರೆ ಅಲ್ಲಿ ಮತ್ತೆ ವಾಸಿಸುವ ಆಲೋಚನೆ ಮಾಡಲಾರೆ ಎನ್ನುತ್ತಾರೆ ಅವರು.


ಹಿಂದೂಗಳ ಮೇಲೆ ನಿರಂತರ ಶೋಷಣೆ

ಬಾಂಗ್ಲಾದೇಶದಿಂದ ವಲಸೆ ಬಂದ ಹರದನ್ ಬಿಸ್ವಾಸ್ ಅವರು ಮಾತನಾಡಿ, ನಿರಂತರ ಶೋಷಣೆಯು ಹಿಂದೂ ಸಮುದಾಯವನ್ನು ಅಲ್ಲಿ ಭಯದಲ್ಲೇ ಇರಿಸಿದೆ. ಅನೇಕರು ತಮ್ಮ ತಾಯ್ನಾಡಿಗೆ ಓಡಿಹೋಗಲು ಮತ್ತು ಭಾರತದಲ್ಲಿ ಆಶ್ರಯ ಪಡೆಯುವಂತೆ ಪ್ರೇರೇಪಿಸುತ್ತಿದೆ. ಹಿಂದೂಗಳು ಬಾಂಗ್ಲಾದೇಶದಲ್ಲಿ ಐತಿಹಾಸಿಕವಾಗಿ ಸವಾಲುಗಳನ್ನು ಎದುರಿಸುತ್ತಲೇ ಇದ್ದಾರೆ. ಸ್ವಾತಂತ್ರ್ಯದ ಸಮಯದಿಂದಲೂ ನಿರಂತರ ಅಪಾಯಗಳನ್ನು ಎದುರಿಸುತ್ತಲೇ ಇದ್ದಾರೆ ಎನ್ನುತ್ತಾರೆ ಅವರು.

ಅಜ್ಜನನ್ನು ಕಣ್ಣೆದುರೇ ಕೊಂದರು

1956ರಲ್ಲಿ ಭಾರತಕ್ಕೆ ಆಗಮಿಸಿದ್ದ ಪರೇಶ್ ದಾಸ್ ಅವರು ಮಾತನಾಡಿ, ನನ್ನ ಅಜ್ಜನನ್ನು ಕಣ್ಣೆದುರೇ ಕೊಂದರು. ಸೋದರಸಂಬಂಧಿಗಳ ಮೇಲೆ ಹಲ್ಲೆ ನಡೆಸಿದರು. ನಾವು ಭಯದಿಂದ ದೇಶ ಬಿಟ್ಟು ಬಂದೆವು. ಈಗ ಭಾರತದಲ್ಲಿ ಶಾಂತಿಯುತವಾಗಿ ವಾಸಿಸುತ್ತಿದ್ದರೂ, ನೊವಾಖಾಲಿಯಲ್ಲಿರುವ ನಮ್ಮ ಸಂಬಂಧಿಕರು ಇನ್ನೂ ಬೆದರಿಕೆಗಳನ್ನು ಎದುರಿಸುತ್ತಿದ್ದಾರೆ. ಕೇವಲ ಒಂದು ತಿಂಗಳ ಹಿಂದೆ, ನನ್ನ ಚಿಕ್ಕಪ್ಪನನ್ನು ಜಮೀನು ವಿವಾದದಲ್ಲಿ ಕೊಲ್ಲಲಾಯಿತು. ಆಸ್ತಿಗಿಂತ ಅವರ ಜೀವನಕ್ಕೆ ಆದ್ಯತೆ ನೀಡುವಂತೆ ನಾನು ಅವರಿಗೆ ಹೇಳಿದ್ದೆ ಎಂದು ಅಳಲು ತೋಡಿಕೊಂಡರು.

ಹಿಂದೂ ಆಗಿರುವುದೇ ಅಲ್ಲಿ ಅಪರಾಧ

ರಶೋಮೊಯ್ ಬಿಸ್ವಾಸ್ ಅವರು 1971ರ ಅನಂತರದ ಕಿರುಕುಳಗಳನ್ನು ವಿವರಿಸುತ್ತಾ, ಹಿಂದೂ ಆಗಿರುವುದೇ ಅಲ್ಲಿ ಅಪರಾಧವಾಗಿತ್ತು. ಸ್ವಾತಂತ್ರ್ಯದ ಅನಂತರವೂ ಇದು ಕಡಿಮೆ ಆಗಲಿಲ್ಲ. ಪಾಕಿಸ್ತಾನಿ ಸೇನೆ ಮತ್ತು ಜಮಾತ್ ಪಡೆಗಳು ಹಿಂದುಗಳನ್ನೇ ಗುರಿಯಾಗಿಸಿಕೊಂಡು ಹಿಂದೂಗಳ ಮನೆಗಳ ಮೇಲೆ ದಾಳಿ ನಡೆಸುತ್ತಿದ್ದವು.


ಇದನ್ನೂ ಓದಿ: Bangladesh Unrest: ಪ್ರತಿಭಟನೆಗೆ ಮಣಿದು ರಾಜೀನಾಮೆಗೆ ಮುಂದಾದ ಬಾಂಗ್ಲಾದೇಶದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಒಬೈದುಲ್ ಹಸನ್


ನನ್ನ ಕುಟುಂಬ ಅಲ್ಲಿ ಆಹಾರವಿಲ್ಲದೆ ಅನೇಕ ರಾತ್ರಿಗಳನ್ನು ಕಳೆದಿದೆ. ನಾವು ಈಗ ಭಾರತದಲ್ಲಿ ಶಾಂತಿಯಿಂದ ಬದುಕುತ್ತಿರುವಾಗ ನಮ್ಮ ಅನೇಕ ಸಂಬಂಧಿಕರು ಬಾಂಗ್ಲಾದೇಶದಲ್ಲಿ ಉಳಿದಿದ್ದಾರೆ. ಭಾರತ ಸರ್ಕಾರವು ಮಧ್ಯಪ್ರವೇಶಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ಆಗ ಮಾತ್ರ ಅಲ್ಲಿ ಹಿಂದೂಗಳು ಭಯವಿಲ್ಲದೆ ಬದುಕಬಹುದು ಎನ್ನುತ್ತಾರೆ ಅವರು.

Continue Reading
Advertisement
Actor Chetan Ahimsa
ಕರ್ನಾಟಕ4 mins ago

Actor Chetan Ahimsa: ಸ್ವಂತ ಮನೆಯಿಲ್ಲ ಎಂದ ಸಿಎಂ ಸಿದ್ದರಾಮಯ್ಯ ವಿರುದ್ಧ ನಟ ಚೇತನ್‌ ಅಹಿಂಸಾ ಕಿಡಿ

Hindu Population
ದೇಶ24 mins ago

Hindu Population: ಅಸ್ಸಾಂನಲ್ಲಿ ಹಿಂದುಗಳ ಸಂಖ್ಯೆ ಶೇ.10ರಷ್ಟು ಕುಸಿತ; ಲೆಕ್ಕ ಕೊಟ್ಟ ಹಿಮಂತ ಬಿಸ್ವಾ ಶರ್ಮಾ!

Kashmir Encounter
ದೇಶ46 mins ago

Kashmir Encounter: ಕಾಶ್ಮೀರದಲ್ಲಿ ಮುಂದುವರಿದ ಉಗ್ರರ ಅಟ್ಟಹಾಸ; ಇಬ್ಬರು ಯೋಧರು ಹುತಾತ್ಮ

Parsis Olympics 2024
ಕ್ರೀಡೆ56 mins ago

Paris Olympics 2024 : ನಾಳೆ ಪ್ಯಾರಿಸ್​ ಒಲಿಂಪಿಕ್ಸ್​ ಸಮಾರೋಪ; ಎಲ್ಲಿ ಕಾರ್ಯಕ್ರಮ? ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಎಲ್ಲ ವಿವರ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಭ್ರಷ್ಟ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯಲು ನಮ್ಮ ಹೋರಾಟ ಎಂದ ವಿಜಯೇಂದ್ರ

ಮಳೆ1 hour ago

Karnataka Weather : ವೀಕೆಂಡ್‌ ಮೋಜಿಗೆ ಮಳೆ ಅಡ್ಡಿ; ಬೆಂಗಳೂರು ಸೇರಿ ಇಲ್ಲೆಲ್ಲ ನಾಳೆ ವರ್ಷಧಾರೆ

ಪ್ರಮುಖ ಸುದ್ದಿ2 hours ago

Vinesh Phogat : ವಿನೇಶ್​ ಫೋಗಟ್​ಗೆ ಅನ್ಯಾಯವಾಗಿದೆ ಎಂದ ಆರ್​. ಅಶ್ವಿನ್​; ಅಥ್ಲೀಟ್​ಗಳ ಸಮಸ್ಯೆ ವಿವರಿಸಿದ ಸ್ಪಿನ್ನರ್​

TV Somanathan
ದೇಶ2 hours ago

TV Somanathan: ಸಂಪುಟ ಕಾರ್ಯದರ್ಶಿಯಾಗಿ ಸೋಮನಾಥನ್‌ ನೇಮಕ; ಯಾರಿವರು?

ಮೈಸೂರು2 hours ago

BJP-JDS Padayatra: ಬಂಡೆ ರೀತಿ ನಿಲ್ತೀನಿ ಎಂದು ನನ್ನ ಮೇಲೂ ಬಂಡೆ ಹಾಕಿದ್ರು: ಡಿಕೆಶಿ ವಿರುದ್ಧ ಎಚ್‌ಡಿಕೆ ಕಿಡಿ

Hindus in Bangla
ವಿದೇಶ2 hours ago

Hindus in Bangla: ಬಾಂಗ್ಲಾದಲ್ಲಿ ಹಿಂದೂ ಆಗಿರುವುದೇ ಅಪರಾಧ; ಕರಾಳ ದಿನ ನೆನಪಿಸಿಕೊಳ್ಳುವ ವಲಸಿಗರು; ವಿಡಿಯೊಗಳಿವೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ2 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು4 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ4 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ6 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌