RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ! - Vistara News

ದೇಶ

RBI: 33 ವರ್ಷಗಳ ನಂತರ ಬ್ರಿಟನ್‌ನಿಂದ 100 ಟನ್‌ಗಿಂತಲೂ ಹೆಚ್ಚು ಪ್ರಮಾಣದ ಚಿನ್ನ ಭಾರತಕ್ಕೆ!

RBI:ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

VISTARANEWS.COM


on

RBI
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌(RBI) ಇಂಗ್ಲೆಂಡ್‌ನಲ್ಲಿದ್ದ ತನ್ನ 100 ಟನ್‌ಗೂ ಅಧಿಕ ಚಿನ್ನವನ್ನು ದೇಶಿಯ ಖಜಾನೆ(vaults)ಗಳಿಗೆ ರವಾನಿಸಿದೆ. ಕಳೆದ 33ವರ್ಷಗಳ ನಂತರ ಇದೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಚಿನ್ನ ಭಾರತಕ್ಕೆ ಬರುತ್ತಿರುವುದು. ಮುಂದಿನ ದಿನಗಳಲ್ಲಿ ಇಷ್ಟೇ ಮೊತ್ತ ಚಿನ್ನವನ್ನು ಆರ್‌ಬಿಐ ಭಾರತಕ್ಕೆ ತರಲಿದೆ. ಇನ್ನು ಈ ಚಿನ್ನವನ್ನು ಕೆಲವೊಂದು ವ್ಯವಸ್ಥಾಪನಾ ಕಾರಣ ಮತ್ತು ವೈವಿಧ್ಯಮಯ ಸಂಗ್ರಹಣೆ ಉದ್ದೇಶದಿಂದ ದೇಶಿಯ ಖಜಾನೆಗಳಿಗೆ ತರಲಾಗುತ್ತಿದೆ.

ಮಾರ್ಚ್ 2023 ರ ಮಾಹಿತಿಯ ಪ್ರಕಾರ, ಆರ್‌ಬಿಐ ಒಟ್ಟು 822.1 ಟನ್ ಚಿನ್ನವನ್ನು ಹೊಂದಿದ್ದು, ಅದರಲ್ಲಿ 413.8 ಟನ್‌ಗಳಷ್ಟು ಚಿನ್ನವನ್ನು ವಿದೇಶದಲ್ಲಿ ಇರಿಸಲಾಗಿದೆ. ಆರ್‌ಬಿಐ ಕಳೆದ ಕೆಲವು ವರ್ಷಗಳಿಂದ ಚಿನ್ನವನ್ನು ಖರೀದಿಸುತ್ತಿದ್ದು, ಕಳೆದ ಹಣಕಾಸು ವರ್ಷದಲ್ಲಿ 27.5 ಟನ್ ಚಿನ್ನವನ್ನು ಖರೀದಿಸಿತ್ತು. ಆ ಮೂಲಕ ಜಾಗತಿಕ ಮಟ್ಟದಲ್ಲಿ ಆರ್‌ಬಿಐ ಚಿನ್ನ ಸಂಗ್ರಹಣೆಯನ್ನು ಹೆಚ್ಚಿಸಿದೆ.

ಅನೇಕ ದೇಶಗಳ ಸೆಂಟ್ರಲ್ ಬ್ಯಾಂಕ್‌ಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್‌ನಲ್ಲಿ ಇರಿಸುತ್ತವೆ. ಇದರಲ್ಲಿ ಭಾರತವೂ ಒಂದು. ಸ್ವಾತಂತ್ರ್ಯ ಪೂರ್ವದಿಂದಲೂ ಭಾರತದ ಸಾಕಷ್ಟು ಚಿನ್ನವನ್ನು ಲಂಡನ್‌ನಲ್ಲಿ ಇರಿಸಲಾಗಿದೆ. ‘ಕೆಲವು ವರ್ಷಗಳ ಹಿಂದೆ ಆರ್‌ಬಿಐ ಚಿನ್ನ ಖರೀದಿಸಲು ಆರಂಭಿಸಿತು ಮತ್ತು ಅದನ್ನು ಎಲ್ಲಿ ಸಂಗ್ರಹಿಸಬೇಕು ಎಂದು ನಿರ್ಧರಿಸಿತು. ವಿದೇಶದಲ್ಲಿ ಚಿನ್ನದ ದಾಸ್ತಾನು ಹೆಚ್ಚುತ್ತಿರುವ ಕಾರಣ ಭಾರತಕ್ಕೆ ಸ್ವಲ್ಪ ಚಿನ್ನವನ್ನು ತರಲು ನಿರ್ಧರಿಸಲಾಯಿತು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದಲಾಗುತ್ತಿರುವ ರಾಜಕೀಯ ಸಂಗತಿಗಳು ಮತ್ತು ಕರೆನ್ಸಿ ಮೌಲ್ಯ ಏರಿಳಿತದ ಭೀತಿಯಿಂದಾಗಿ ಆರ್‌ಬಿಐ ಈ ಈ ಚಿನ್ನವನ್ನು ಭಾರತಕ್ಕೆ ತರಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

ಆರ್ಥಿಕ ತಜ್ಞರು ಹೇಳೋದೇನು?

ಇನ್ನು ಒಂದೇ ಬಾರಿ ಇಷ್ಟು ದೊಡ್ಡ ಮಟ್ಟದಲ್ಲಿ ಚಿನ್ನವನ್ನು ಭಾರತಕ್ಕೆ ತರುತ್ತಿರುವ ಬಗ್ಗೆ ಪ್ರಸಿದ್ದ ಆರ್ತಿಕ ತಜ್ಞ ಸಂಜೀವ್‌ ಸನ್ಯಾಲ್‌ ಟ್ವೀಟ್‌ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರಿಗೂ ತಿಳಿಯದಂತೆ ಆರ್‌ಬಿಐ ತನ್ನ 100 ಟನ್ ಚಿನ್ನದ ನಿಕ್ಷೇಪಗಳನ್ನು ಯುಕೆಯಿಂದ ಭಾರತಕ್ಕೆ ಹಿಂತಿರುಗಿಸಿದೆ. ಹೆಚ್ಚಿನ ದೇಶಗಳು ತಮ್ಮ ಚಿನ್ನವನ್ನು ಬ್ಯಾಂಕ್ ಆಫ್ ಇಂಗ್ಲೆಂಡ್ ಅಥವಾ ಅಂತಹ ಕೆಲವು ಸ್ಥಳಗಳ ಖಜಾನೆಗಳಲ್ಲಿ ಇರಿಸುತ್ತವೆ. ಭಾರತವು ಈಗ ತನ್ನ ಹೆಚ್ಚಿನ ಚಿನ್ನವನ್ನು ತನ್ನದೇ ಆದ ಖಜಾನೆಗಳಲ್ಲಿ ಇಟ್ಟುಕೊಳ್ಳುತ್ತದೆ. 1991 ರಲ್ಲಿ ಆರ್ಥಿಕ ಮತ್ತು ರಾಜಕೀಯ ಬಿಕ್ಕಟ್ಟಿನ ಮಧ್ಯೆ ನಾವು ರಾತ್ರೋರಾತ್ರಿ ಚಿನ್ನವನ್ನು ಸಾಗಿಸಬೇಕಾದ ಸ್ಥಿತಿ ನಿರ್ಮಾಣವಾಗಿತ್ತು. ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ:Theft Case : ದೇವರ ಹರಕೆ ಕುರಿಯನ್ನೇ ಕದ್ಯೊಯ್ದ ಕಳ್ಳರು; ಸೂಪರ್‌ ಮಾರ್ಕೆಟ್‌ಗಳಲ್ಲಿ ಖದೀಮರ ಕೈಚಳಕ

1991ರಲ್ಲಿ ಏನಾಗಿತ್ತು?

1991 ರಲ್ಲಿ, ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದ ಚಂದ್ರಶೇಖರ್ ನೇತೃತ್ವದ ಸರ್ಕಾರ ಹಣವನ್ನು ಸಂಗ್ರಹಿಸಲು ಚಿನ್ನವನ್ನು ಒತ್ತೆ ಇಟ್ಟಿತ್ತು. ಜುಲೈ 4 ಮತ್ತು 18 ರ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕ್ ಆಫ್ ಇಂಗ್ಲೆಂಡ್ ಮತ್ತು ಬ್ಯಾಂಕ್ ಆಫ್ ಜಪಾನ್‌ನಲ್ಲಿ 46.91 ಟನ್ ಚಿನ್ನವನ್ನು ಒತ್ತೆ ಇಟ್ಟು, $400 ಮಿಲಿಯನ್ ಸಾಲ ಪಡೆದುಕೊಂಡಿತ್ತು. ಸುಮಾರು 15 ವರ್ಷಗಳ ಹಿಂದೆ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಸರ್ಕಾರದ ಅಡಿಯಲ್ಲಿ ಆರ್‌ಬಿಐ ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (ಐಎಂಎಫ್) 200 ಟನ್ ಚಿನ್ನವನ್ನು ಖರೀದಿಸಿತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

Water Tank Collapsed: ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 12 ಮಂದಿಯನ್ನು ಅವಶೇಷದಡಿಯಿಂದ ಹೊರಗೆಳೆದಿದ್ದು, ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

VISTARANEWS.COM


on

Water tank Collapsed
Koo

ಮಥುರಾ: ಉತ್ತರಪ್ರದೇಶದ ಮಥುರಾ(Mathura)ದಲ್ಲಿ ವಾಟರ್‌ ಟ್ಯಾಂಕ್‌ ಕುಸಿದು(Water Tank Collapsed) ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರಿಗೆ ಗಂಭೀರವಾಗಿ ಗಾಯಗಳಾಗಿವೆ. ಅವಶೇಷದಡಿಯಲ್ಲಿ ಅನೇಕ ಮನೆಗಳು ಸಿಲುಕಿಕೊಂಡಿವೆ. ಯುಪಿ ಆವಾಸ್‌ ವಿಕಾಸ್‌ ಪರಿಷತ್‌ ಅಭಿವೃದ್ಧಿಪಡಿಸಿರುವ ಕೃಷ್ಣ ವಿಹಾರ್‌ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಹತ್ತಿರ ಮನೆಗಳಿಗೆ ಭೀಕರ ಹಾನಿಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. 12 ಮಂದಿಯನ್ನು ಅವಶೇಷದಡಿಯಿಂದ ಹೊರಗೆಳೆದಿದ್ದು, ಅವರ ಸ್ಥಿತಿ ಬಹಳ ಗಂಭೀರವಾಗಿದೆ. ಸ್ಥಳದಲ್ಲಿ ಅಗ್ನಿ ಶಾಮಕ ದಳ, ಪೊಲೀಸರು, ಕಂದಾಯ ಇಲಾಖೆ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ

ಬರೋಬ್ಬರಿ 2.5 ಲಕ್ಷ ಲೀಟರ್‌ ನೀರಿನ ಟ್ಯಾಂಕ್‌ ಕುಸಿದು ಬಿದ್ದಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ಇದೆ. NDRF ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರಂಭದಲ್ಲಿ ಅವಶೇಷದಡಿಯಲ್ಲಿ ಸಿಲುಕಿದ್ದ ನಾಲ್ವರನ್ನು ಹೊರತೆಗೆಯಲಾಗಿತ್ತು. ಬಳಿಕ ಈ ಸಂಖ್ಯೆ 12ಕ್ಕೆ ಏರಿಕೆ ಆಗಿತ್ತು. ಆ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ಶೈಲೇಂದ್ರ ಸಿಂಗ್‌ ಹೇಳಿದ್ದಾರೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಕುಮಾರ್ ಪಾಂಡೆ ಸೇರಿದಂತೆ ಜಿಲ್ಲೆಯ ಎಲ್ಲಾ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಆಹಾರ ಮತ್ತು ವಸತಿ ಸೌಲಭ್ಯ ಕಲ್ಪಿಸಲು ಕಂದಾಯ ಇಲಾಖೆ ಶ್ರಮಿಸುತ್ತಿದೆ.

ಎರಡೂ ವರ್ಷಗಳ ಹಿಂದೆ ನಿರ್ಮಾಣ

2021ರಲ್ಲಿ ಈ ಟ್ಯಾಂಕ್‌ನ ಕಾಮಗಾರಿ ಪೂರ್ಣಗೊಂಡಿತ್ತು ಎಂದು ತಿಳಿಸಿದ ಜಿಲ್ಲಾಧಿಕಾರಿಗಳು, ಗಂಗಾಜಲ ಕುಡಿಯುವ ನೀರಿನ ಯೋಜನೆಯಡಿ 6 ಕೋಟಿ ರೂ. ವೆಚ್ಚದಲ್ಲಿ ಜಲ ನಿಗಮದಿಂದ ಟ್ಯಾಂಕ್‌ ನಿರ್ಮಿಸಲಾಗಿದೆ ಎಂದು ತಿಳಿಸಿದರು. ಕೇವಲ ಮೂರು ವರ್ಷಗಳಲ್ಲಿ ಕಟ್ಟಡ ಕುಸಿತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು. ಇನ್ನು ಘಟನಾ ಸ್ಥಳಕ್ಕೆ ಭಾರತೀಯ ಸೇನೆಯ ತಂಡ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಇದನ್ನೂ ಓದಿ: Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

Continue Reading

ದೇಶ

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

New Criminal Law: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದ್ದು, ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ. ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ.

VISTARANEWS.COM


on

New Criminal Law
Koo

ನವದೆಹಲಿ: ಬ್ರಿಟಿಷ್​ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳಿಗೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿದ್ದು, ಇಂದು ಜಾರಿಗೆ ಬಂದಿದೆ (New Criminal Law). ಹೊಸ ಕಾನೂನಿನ ಪ್ರಕಾರ ಹೊಸದಿಲ್ಲಿಯ ರೈಲ್ವೆ ನಿಲ್ದಾಣದ ಬಳಿ ರಸ್ತೆಯ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಬೀದಿ ವ್ಯಾಪಾರಿಯ ವಿರುದ್ಧ ಮೊದಲ ಎಫ್ಐಆರ್ ದಾಖಲಿಸಲಾಗಿದೆ.

ಹೊಸ ಕ್ರಿಮಿನಲ್ ಕೋಡ್‌ನ ಸೆಕ್ಷನ್ 285ರ ಅಡಿಯಲ್ಲಿ ಈ ಎಫ್ಐಆರ್ ದಾಖಲಿಸಲಾಗಿದೆ. ಈ ಕಾನೂನಿನ ಪ್ರಕಾರ ಯಾವುದೇ ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಿದರೆ ಅಥವಾ ಸಾರ್ವಜನಿಕ ಮಾರ್ಗದಲ್ಲಿ ಸಂಚರಿಸುವ ಯಾವುದೇ ವ್ಯಕ್ತಿಗೆ ಅಪಾಯ ಅಥವಾ ಗಾಯವನ್ನು ಉಂಟು ಮಾಡಿದರೆ 5 ಸಾವಿರ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ.

ಭಾನುವಾರ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ರಸ್ತೆಯಲ್ಲಿ ನೀರಿನ ಬಾಟಲಿಗಳು ಮತ್ತು ಗುಟ್ಕಾ ಮಾರಾಟ ಮಾಡುವ ಬೀದಿ ವ್ಯಾಪಾರಿಯನ್ನು ಗುರುತಿಸಿದ ನಂತರ ಎಫ್ಐಆರ್ ದಾಖಲಿಸಲಾಗಿದೆ. ಬೀದಿ ವ್ಯಾಪಾರಿಯ ತಾತ್ಕಾಲಿಕ ಅಂಗಡಿಯು ರಸ್ತೆಗೆ ಅಡ್ಡವಾಗಿ ನಿಂತಿತ್ತು. ಅದನ್ನು ಸ್ಥಳಾಂತರಿಸಲು ಪೊಲೀಸ್‌ ಸಿಬ್ಬಂದಿ ಕೇಳಿಕೊಂಡರೂ ಒಪ್ಪದೇ ಇದ್ದಾಗ ಎಫ್ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಬೀದಿ ಬದಿ ವ್ಯಾಪಾರಿ ಭಾನುವಾರ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದ ಬಳಿಯ ಪಾದಚಾರಿ ಮೇಲ್ಸೇತುವೆಯ ಕೆಳಗೆ ತನ್ನ ಅಂಗಡಿಯನ್ನು ನಿಲ್ಲಿಸಿದ್ದ ಎಂದು ಹೇಳಲಾಗಿದೆ. “ಆ ವ್ಯಾಪಾರಿಯು ಬೀದಿಯಲ್ಲಿ ನೀರಿನ ಬಾಟಲಿ, ಬೀಡಿ ಮತ್ತು ಸಿಗರೇಟುಗಳನ್ನು ಮಾರಾಟ ಮಾಡುತ್ತಿದ್ದ. ಸಾರ್ವಜನಿಕರ ಸುಗಮ ಸಂಚಾರಕ್ಕೆ ಆತನ ಅಂಗಡಿ ಅಡ್ಡಿಯಾಗುತ್ತಿತ್ತು. ರಸ್ತೆಯಿಂದ ಅಂಗಡಿಯನ್ನು ತೆರವುಗೊಳಿಸುವಂತೆ ಸಬ್ ಇನ್ಸ್‌ಪೆಕ್ಟರ್ ಆ ವ್ಯಾಪಾರಿ ಬಳಿ ಹಲವು ಬಾರಿ ಮನವಿ ಮಾಡಿದರು. ಆದರೆ ಆತ ಅದಕ್ಕೆ ಒಪ್ಪಲಿಲ್ಲ” ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ. ವ್ಯಾಪಾರಿಯನ್ನು ಬಿಹಾರದ ಪಾಟ್ನಾ ಮೂಲದ ಪಂಕಜ್ ಕುಮಾರ್ ಎಂದು ಗುರುತಿಸಲಾಗಿದೆ.

ಏನಿದು ಹೊಸ ಕಾನೂನು?

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆ ಪಡೆಯಿತು. ಆದರೆ ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಇವೇ ಆ ಮೂರು ಹೊಸ ಕಾನೂನುಗಳು. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ

Continue Reading

ದೇಶ

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Parliament Sessions: ಎರಡು ದಿನಗಳ ವಿರಾಮದ ನಂತರ ಸಂಸತ್‌ ಕಲಾಪ ಇಂದು ಮತ್ತೆ ಆರಂಭವಾಗಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ವಾರ ಸಂಸತ್ತು ಬಿಸಿ ಏರಿದ ಚರ್ಚೆಗೆ ಸಾಕ್ಷಿಯಾಗುವ ಎಲ್ಲ ಲಕ್ಷಣಗಳಿವೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಯಲ್ಲಿನ ಅಕ್ರಮ, ಅಗ್ನಿಪಥ್ ಯೋಜನೆ ಮುಂತಾದ ಪ್ರಮುಖ ವಿಷಯಗಳ ಮೇಲೆ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಎನ್‌ಡಿಎ ಸರ್ಕಾರದ ಮೇಲೆ ದಾಳಿ ನಡೆಸಲು ಸಜ್ಜಾಗಿದೆ. ಸಂಸತ್ತು ಅಧಿವೇಶನವನ್ನು ಲೈವ್‌ ಆಗಿ ಇಲ್ಲಿ ನೋಡಿ.

VISTARANEWS.COM


on

Parliament Sessions
Koo

ನವದೆಹಲಿ: ಎರಡು ದಿನಗಳ ವಿರಾಮದ ನಂತರ ಸಂಸತ್‌ ಕಲಾಪ (Parliament Sessions) ಇಂದು ಮತ್ತೆ ಆರಂಭವಾಗಲಿದೆ. 18ನೇ ಲೋಕಸಭೆಯ ಮೊದಲ ಅಧಿವೇಶನದ ಎರಡನೇ ವಾರ ಸಂಸತ್ತು ಬಿಸಿ ಏರಿದ ಚರ್ಚೆಗೆ ಸಾಕ್ಷಿಯಾಗುವ ಎಲ್ಲ ಲಕ್ಷಣಗಳಿವೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯಲ್ಲಿನ ಅಕ್ರಮ, ಅಗ್ನಿಪಥ್ ಯೋಜನೆ ಮುಂತಾದ ಪ್ರಮುಖ ವಿಷಯಗಳ ಮೇಲೆ ಪ್ರತಿಪಕ್ಷಗಳ ಇಂಡಿ ಒಕ್ಕೂಟ ಎನ್‌ಡಿಎ ಸರ್ಕಾರದ ಮೇಲೆ ದಾಳಿ ನಡೆಸಲು ಸಜ್ಜಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದ ಮತ್ತು ಹಣದುಬ್ಬರದ ಜತೆಗೆ ಪ್ರತಿಪಕ್ಷಗಳು ಭಾರತದಲ್ಲಿ ನಿರುದ್ಯೋಗ ಸಮಸ್ಯೆಗಳ ಬಗ್ಗೆಯೂ ಧ್ವನಿ ಎತ್ತುವ ಸಾಧ್ಯತೆಯಿದೆ.

ನೀಟ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಶುಕ್ರವಾರ ಕೋಲಾಹಲ ನಡೆದ ಕಾರಣ ಸ್ಪೀಕರ್‌ ಓಂ ಬಿರ್ಲಾ ಅವರು ಲೋಕಸಭೆ ಅಧಿವೇಶನವನ್ನು ಸೋಮವಾರಕ್ಕೆ ಮುಂದೂಡಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವನ್ನು ಆದ್ಯತೆಯ ಮೇರೆಗೆ ಚರ್ಚಿಸುವ ನಿರ್ಣಯವನ್ನು ಅಂಗೀಕರಿಸುವಂತೆ ಇಂಡಿ ಒಕ್ಕೂಟದ ಸದಸ್ಯರು ಕೋರಿದ ಬಳಿಕ ಗದ್ದಲ ಪ್ರಾರಂಭವಾಗಿತ್ತು. ಈ ಕೋಲಾಹಲದ ಮಧ್ಯೆ ಸ್ಪೀಕರ್ ಓಂ ಬಿರ್ಲಾ ಅವರು ಸದನವನ್ನು ಮೊದಲು ಮಧ್ಯಾಹ್ನ 12ರವರೆಗೆ ಮತ್ತು ನಂತರ ಜುಲೈ 1ರವರೆಗೆ ಮುಂದೂಡಿದ್ದರು.

ಇವತ್ತು ಏನಾಗಲಿದೆ?

ಪ್ರತಿಪಕ್ಷಗಳ ನಾಯಕ ರಾಹುಲ್‌ ಗಾಂಧಿ ಅವರು, ʼʼನೀಟ್‌ ವಿವಾದ ಅತ್ಯಂತ ಪ್ರಮುಖವಾದುದು. ಈ ವಿಚಾರವಾಗಿ ಚರ್ಚೆ ನಡೆಸಲು ಪಟ್ಟು ಹಿಡಿಯುತ್ತೇವೆʼʼ ಎಂದು ಈ ಹಿಂದೆಯೇ ಘೋಷಿಸಿದ್ದಾರೆ. ಶುಕ್ರವಾರ ಈ ಬಗ್ಗೆ ಪ್ರಸ್ತಾವಿಸಿದ್ದರೂ, ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆಯನ್ನು ಸದನವು ಕೈಗೆತ್ತಿಕೊಳ್ಳಲಿರುವುದರಿಂದ ನೀಟ್ ಕುರಿತು ಚರ್ಚೆಗೆ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಓಂ ಬಿರ್ಲಾ ಹೇಳಿದ್ದರಿಂದ ಸದನದಲ್ಲಿ ಗದ್ದಲ ಏರ್ಪಟ್ಟಿತ್ತು.

ನೀಟ್ ವಿವಾದದ ಬಗ್ಗೆ ಚರ್ಚಿಸಲು ಪ್ರತಿಪಕ್ಷಗಳು ಒತ್ತಾಯಿಸಿದ್ದರಿಂದ ಇತ್ತ ರಾಜ್ಯಸಭೆಯಲ್ಲಿಯೂ ಕೋಲಾಹಲ ನಡೆಯಿತು. ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇತರ ಸದಸ್ಯರೊಂದಿಗೆ ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಉಭಯ ಸದನಗಳಲ್ಲಿ ಈ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ. ಅಗ್ನಿಪಥ್ ಯೋಜನೆ, ಹಣದುಬ್ಬರ ಮತ್ತು ನಿರುದ್ಯೋಗದಂತಹ ಇತರ ವಿಷಯಗಳನ್ನು ಇಂಡಿ ಬಣದ ನಾಯಕರು ಪ್ರಸ್ತಾವಿಸಲಿದ್ದು, ನೀಟ್ ವಿಷಯದ ಬಗ್ಗೆ ಸಂಸತ್ತಿನ ನಿಯಮ 267ರ ಅಡಿ ಚರ್ಚೆಗೆ ಒತ್ತಾಯಿಸಲಿದ್ದಾರೆ.

ಲೋಕಸಭೆಯಲ್ಲಿ ಬಿಜೆಪಿ ಸದಸ್ಯ ಮತ್ತು ಮಾಜಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ. ಬಿಜೆಪಿ ಹಿರಿಯ ನಾಯಕಿ ದಿ. ಸುಷ್ಮಾ ಸ್ವರಾಜ್ ಅವರ ಪುತ್ರಿ, ಸಂಸದೆ ಬಾನ್ಸುರಿ ಸ್ವರಾಜ್ ಅವರು ಈ ನಿರ್ಣಯವನ್ನು ಅನುಮೋದಿಸಲಿದ್ದಾರೆ.

ಲೋಕಸಭೆಯಲ್ಲಿ ವಂದನಾ ನಿರ್ಣಯದ ಮೇಲಿನ ಚರ್ಚೆಗೆ 16 ಗಂಟೆಗಳ ಸಮಯವನ್ನು ನಿಗದಿಪಡಿಸಲಾಗಿದೆ. ಇದಕ್ಕೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಿಸಲಿದ್ದಾರೆ. ರಾಜ್ಯಸಭೆಯಲ್ಲಿ ಇದಕ್ಕಾಗಿ 21 ಗಂಟೆಗಳನ್ನು ಮೀಸಲಿಡಲಾಗಿದೆ.

ಭಾನುವಾರ ರಾಹುಲ್‌ ಗಾಂಧಿ ಅವರು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ, ʼʼಪ್ರತಿಪಕ್ಷ ಪ್ರಜಾಪ್ರಭುತ್ವದ ಮುಖ್ಯ ಭಾಗ. ನಿಮ್ಮ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾವಿಸುವುದಾಗಿ ಭರವಸೆ ನೀಡುತ್ತೇನೆ. ಆ ಮೂಲಕ ನಾನು ನಿಮ್ಮ ಧ್ವನಿಯನ್ನು ಎತ್ತುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಆ ಮೂಲಕ ತೀವ್ರ ಹೋರಾಟದ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: Parliament Sessions: ಸೆಂಗೋಲ್‌ ಮೇಲೆ ಪ್ರತಿಪಕ್ಷಗಳ ಕಣ್ಣು; ಸಂಸತ್‌ನಲ್ಲಿ ಭಾರೀ ಕೋಲಾಹಲ

Continue Reading

ವಾಣಿಜ್ಯ

Birla Opus: ಬಿರ್ಲಾ ಪೇಂಟ್ ಜಾಹೀರಾತು ನಿಮಗೂ ಇಷ್ಟ ಆಗಿರಬೇಕಲ್ಲವೇ? ಇದರ ಸಂದೇಶ ಏನು? ಹಿನ್ನೆಲೆ ಏನು? ಕುತೂಹಲಕರ ಮಾಹಿತಿ

ಆದಿತ್ಯ ಬಿರ್ಲಾ ಗ್ರೂಪ್‌ನ (Aditya Birla Group) ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ತನ್ನ ಮೊದಲ ವಿಷಯಾಧಾರಿತ ಸಂವಹನ ಚಿತ್ರವನ್ನು ಬಿಡುಗಡೆ ಮಾಡಿದೆ. ‘ಮೇಕ್ ಲೈಫ್ ಬ್ಯೂಟಿಫುಲ್’ ಎಂಬ ಅಡಿಬರಹದ ಅಡಿಯಲ್ಲಿ ಬಿರ್ಲಾ ಓಪಸ್‌ನ (Birla Opus) ಬ್ರಾಂಡ್ ಫಿಲಾಸಫಿಯನ್ನು ಈ ಜಾಹೀರಾತು ಚಿತ್ರವು ಪ್ರದರ್ಶಿಸಿದೆ. ಬದುಕನ್ನು ಸುಂದರಗೊಳಿಸು ಎಂಬ ಸಂದೇಶ ಸಾರುವ ಈ ಜಾಹೀರಾತಿನ ಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಈ ಜಾಹೀರಾತಿನ ಹಿನ್ನೆಲೆಯ ಕುರಿತ ಕುತೂಹಲಕರ ಮಾಹಿತಿ ಇಲ್ಲಿದೆ.

VISTARANEWS.COM


on

By

Birla Opus
Koo

ವಕ್ತ್ ಎ ಹಿ ಖುಷಿಯೋ ಕೋ ಖೋಲ್ ದೋ ದುನಿಯಾ ಕೋ ರಂಗ್ ದೋ… ಜಾಹೀರಾತಿನಲ್ಲಿ ಬರುವ ಈ ಹಾಡು ಎಲ್ಲರ ಮನದಲ್ಲೂ ಗುನುಗುನಿಸುತ್ತಿರಬಹುದು. ಬಿರ್ಲಾ ಪೇಂಟ್ ನ (Birla Opus) ಈ ಜಾಹೀರಾತು (advertisement) ಎಲ್ಲರಿಗೂ ಇಷ್ಟವಾಗಿರಬೇಕು. ಇದರ ಸಂದೇಶ ಏನು, ಹಿನ್ನೆಲೆ ಏನು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಬಣ್ಣಗಳೇ (colour) ಇಲ್ಲದ ತನ್ನ ಸುತ್ತಮುತ್ತಲಿನ ಪ್ರಪಂಚಕ್ಕೆ ಪುಟ್ಟ ಬಾಲಕನೊಬ್ಬ (kid) ಬಣ್ಣ ಕೊಡುತ್ತಾ ಹೋಗುತ್ತಾನೆ. ತಾಯಿ ಮೊದಲು ಆತನನ್ನು ತಡೆಯುತ್ತಾಳೆ. ಆದರೆ ಬಾಲಕ ತನ್ನ ಪಟ್ಟು ಬಿಡುವುದಿಲ್ಲ. ಎಲ್ಲರೂ ಅವನು ನೀಡಿದ ಬಣ್ಣದ ಖುಷಿಯಲ್ಲಿ ಮಿಂದೇಳುವಗ ಆತನ ತಾಯಿಗೂ ಬಣ್ಣ ಬೇಕೆಂದೆನಿಸುತ್ತದೆ. ಅಲ್ಲಿಗೆ ಜಾಹೀರಾತು ಕೊನೆಗೊಳ್ಳುತ್ತದೆ.

ಆದಿತ್ಯ ಬಿರ್ಲಾ ಗ್ರೂಪ್‌ನ (Aditya Birla Group) ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿ ಬಿರ್ಲಾ ಓಪಸ್ ಪೇಂಟ್ಸ್ ತನ್ನ ಮೊದಲ ವಿಷಯಾಧಾರಿತ ಸಂವಹನ ಚಿತ್ರವನ್ನು ಬಿಡುಗಡೆ ಮಾಡಿದೆ. ‘ಮೇಕ್ ಲೈಫ್ ಬ್ಯೂಟಿಫುಲ್’ ಎಂಬ ಅಡಿಬರಹದ ಅಡಿಯಲ್ಲಿ ಬಿರ್ಲಾ ಓಪಸ್‌ನ ಬ್ರಾಂಡ್ ಫಿಲಾಸಫಿಯನ್ನು ಈ ಚಿತ್ರವು ಪ್ರದರ್ಶಿಸಿದೆ.

ಇದು ಬಿರ್ಲಾ ಓಪಸ್ ಬ್ರ್ಯಾಂಡ್‌ನ ಬದಲಾವಣೆಯ ಶಕ್ತಿಯನ್ನು ಪ್ರದರ್ಶಿಸುತ್ತದೆ ಮತ್ತು ಹೆಚ್ಚು ಸುಂದರವಾದ ಜಗತ್ತನ್ನು ರಚಿಸಲು ಸಹಾಯ ಮಾಡುತ್ತದೆ ಎನ್ನುವ ಸಂದೇಶವನ್ನು ಒಳಗೊಂಡಿದೆ.

ಹಿಂದೆಂದೂ ಮಾಡದಿರುವ ಹೈ-ಡೆಫಿನಿಷನ್, ನೈಜ ಸಿಲೂಯೆಟ್‌ಗಳೊಂದಿಗೆ 3ಡಿ ವೈಶಿಷ್ಟ್ಯದ ಅನಿಮೇಷನ್ ಚಿತ್ರ ಇದಾಗಿದೆ.

ಖ್ಯಾತ ಭಾರತೀಯ ಸಂಗೀತ ಸಂಯೋಜಕ ರಾಮ್ ಸಂಪತ್ ರಚಿಸಿದ ಸುಮಧುರ ಟ್ರ್ಯಾಕ್ ಅನ್ನು ಇದು ಒಳಗೊಂಡಿದೆ. ಜಗತ್ತಿಗೆ ಬಣ್ಣ ನೀಡಿ ಸಂದೇಶದೊಂದಿಗೆ ಅಭಿಯಾನವನ್ನು ಉಂಟು ಮಾಡುವಂತಿದೆ.

ಈ ಜಾಹೀರಾತು ಚಿತ್ರವನ್ನು ಹಿಂದಿ ಮತ್ತು ಎಲ್ಲಾ ಪ್ರಮುಖ ಪ್ರಾದೇಶಿಕ ಭಾಷೆಗಳಲ್ಲಿ ಮಾಡಲಾಗಿದೆ. ಪ್ರಚಾರ ಅಭಿಯಾನ ಮೂಡಿಸಲು ಮತ್ತು ಪ್ರಯೋಗಗಳನ್ನು ಪ್ರೇರೇಪಿಸಲು ಎಲ್ಲ ಮಾದರಿಯ ಮಾಧ್ಯಮಗಳಿಂದ ಇದು ಬೆಂಬಲಿತವಾಗಿದೆ.
ಲಿಯೋ ಬರ್ನೆಟ್ ಇಂಡಿಯಾದಿಂದ ಸಂವಹನವನ್ನು ಪರಿಕಲ್ಪನೆ ಮಾಡಲಾಗಿದ್ದು, ಬ್ರೆಜಿಲ್ ಮೂಲದ ಪ್ರಮುಖ ಜಾಗತಿಕ ಅನಿಮೇಷನ್ ಸ್ಟುಡಿಯೋ ಝಾಂಬಿ ಸ್ಟುಡಿಯೋ ಇದನ್ನು ನಿರ್ಮಿಸಿದೆ.

ಪೇಂಟ್ ಉದ್ಯಮ ಪ್ರವೇಶ

2024ರ ಫೆಬ್ರವರಿಯಲ್ಲಿ ಆದಿತ್ಯ ಬಿರ್ಲಾ ಗ್ರೂಪ್ ಬಿರ್ಲಾ ಓಪಸ್ ಅನ್ನು ಪ್ರಾರಂಭಿಸುವುದರೊಂದಿಗೆ ಪೇಂಟ್ ಉದ್ಯಮಕ್ಕೆ ಪ್ರವೇಶಿಸಿದೆ. ತನ್ನ ಪೇಂಟ್ಸ್ ವ್ಯವಹಾರವನ್ನು ವಿಸ್ತರಿಸಲು ಬದ್ಧವಾಗಿರುವ ಕಂಪನಿಯು 2025ರ ವೇಳೆಗೆ ರಾಷ್ಟ್ರವ್ಯಾಪಿ ಆರು ಉತ್ಪಾದನಾ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸಿದೆ.

ಇದರ ಉದ್ದೇಶ ಏನು?

ಅನಿಮೇಷನ್ ಜಾಹೀರಾತು ಬಿಡುಗಡೆಯ ಕುರಿತು ಪ್ರತಿಕ್ರಿಯಿಸಿದ ಬಿರ್ಲಾ ಓಪಸ್‌ನ ಸಿಇಒ ರಕ್ಷಿತ್ ಹರ್‌ಗಾವೆ, ಉದ್ದೇಶ ಮತ್ತು ಮೌಲ್ಯದೊಂದಿಗೆ ಇರುವ ಉತ್ಪನ್ನಗಳು ಮತ್ತು ಅನುಭವಗಳನ್ನು ಹುಡುಕುವ ಇಂದಿನ ಗ್ರಾಹಕರ ವಿವೇಚನಾಶೀಲ ಅಭಿರುಚಿಯನ್ನು ನಾವು ಅರ್ಥಮಾಡಿಕೊಂಡಿದ್ದೇವೆ. ಈ ಚಿತ್ರದ ತಮಾಷೆಯ ನಿರೂಪಣೆಯೊಂದಿಗೆ ‘ಮೇಕ್’ ಎಂಬ ನಮ್ಮ ಬ್ರ್ಯಾಂಡ್ ನಂಬಿಕೆಯನ್ನು ನಿರೂಪಿಸುತ್ತದೆ. ಲೈಫ್ ಬ್ಯೂಟಿಫುಲ್.. ಎಂಬುದು ನಮ್ಮ ಗ್ರಾಹಕರೊಂದಿಗೆ ಈ ಪರಿವರ್ತನೆಯ ಪ್ರಯಾಣವನ್ನು ಪ್ರಾರಂಭಿಸಲು ನಾವು ಉತ್ಸುಕರಾಗಿದ್ದೇವೆ ಎಂಬ ಸಂದೇಶವನ್ನು ಇದು ಸಾರುತ್ತದೆ ಎಂದು ಹೇಳಿದರು.

ಬಿರ್ಲಾ ಓಪಸ್‌ನ ಮಾರ್ಕೆಟಿಂಗ್ ಮುಖ್ಯಸ್ಥ ಇಂದರ್‌ಪ್ರೀತ್ ಸಿಂಗ್, ಬಿರ್ಲಾ ಓಪಸ್‌ಗಾಗಿ ನಮ್ಮ ಮೊದಲ ಬ್ರ್ಯಾಂಡ್‌ ಕಿರುಚಿತ್ರವನ್ನು ಅನಾವರಣಗೊಳಿಸಲು ನಾವು ರೋಮಾಂಚನಗೊಂಡಿದ್ದೇವೆ. ಹಾಲಿವುಡ್ ಚಲನಚಿತ್ರಗಳಲ್ಲಿನ ಹೆಚ್ ಡಿ ಅನಿಮೇಷನ್‌ಗೆ ಹೋಲಿಸಬಹುದಾದ ವಿಶ್ವದ ಅತ್ಯುತ್ತಮ ಅನಿಮೇಷನ್ ಶೈಲಿಗಳ ಮೂಲಕ ನೈಜ ಸೌಂದರ್ಯವನ್ನು ಈ ಕಿರುಚಿತ್ರವು ಉದಾಹರಿಸುತ್ತದೆ. ಇದು ಭಾರತದಲ್ಲಿನ ಬಣ್ಣಗಳ ಉದ್ಯಮದಲ್ಲಿ ಮೊದಲನೆಯದು. ಖ್ಯಾತ ಸಂಗೀತ ಸಂಯೋಜಕ ರಾಮ್ ಸಂಪತ್ ಅವರು ರಚಿಸಿರುವ ‘ದುನಿಯಾ ಕೋ ರಂಗ್ ದೋ’ ಸಂದೇಶವು ಜೀವನದಲ್ಲಿ ಭರವಸೆ, ಸಂತೋಷ ಮತ್ತು ಸೌಂದರ್ಯವನ್ನು ಕಂಡುಕೊಳ್ಳುವ ಪ್ರಬಲ ಕಲ್ಪನೆಯೊಂದಿಗೆ ಅನುರಣಿಸುತ್ತದೆ ಎಂದರು.

ಬಿರ್ಲಾ ಓಪಸ್ ಇಂದಿನ ಕ್ರಿಯಾತ್ಮಕ ಹೊಸ ಭಾರತೀಯ ಪ್ರೇಕ್ಷಕರಿಗಾಗಿ ವಿನ್ಯಾಸಗೊಳಿಸಲಾದ ಬ್ರ್ಯಾಂಡ್ ಆಗಿದೆ ಮತ್ತು ನಾವು ಅಭಿಯಾನಕ್ಕೆ ತಾಜಾ ಮತ್ತು ನವೀನ ವಿಧಾನವನ್ನು ನೀಡಲು ಬಯಸಿದ್ದೇವೆ. ಕಥೆ ಹೇಳುವಿಕೆಗಾಗಿ ಅನಿಮೇಷನ್ ಅನ್ನು ಬಳಸುವುದರಿಂದ, ನಮ್ಮ ಚಿತ್ರವು ನಮ್ಮ ಪ್ರೇಕ್ಷಕರು ಹೇಗೆ ಸ್ಫೂರ್ತಿದಾಯಕ ಮತ್ತು ರೂಪಾಂತರಗೊಳ್ಳುವ ಬಣ್ಣದಿಂದ ತಮ್ಮನ್ನು ಸುತ್ತುವರಿದಿರಬಹುದು ಎಂಬುದನ್ನು ಗ್ರಹಿಸಲು ಮಾಡಿರುವ ಕಲಾತ್ಮಕ ವಿಧಾನವಾಗಿದೆ ಎಂದು ಸಿಸಿಒ ಪಬ್ಲಿಸಿಸ್ ಗ್ರೂಪ್ – ಸೌತ್ ಏಷ್ಯಾ ಮತ್ತು ಚೇರ್ಮನ್ ರಾಜದೀಪಕ್ ದಾಸ್ ತಿಳಿಸಿದ್ದಾರೆ.


ಚಿತ್ರದ ಪರಿಕಲ್ಪನೆ ಏನು?

ಕಪ್ಪು ಬಿಳುಪಿನ ಜಗತ್ತಿನಲ್ಲಿ ಚಿತ್ರವು ತೆರೆದುಕೊಳ್ಳುತ್ತದೆ. ಮಗು ತನ್ನ ಮನೆಯಲ್ಲಿರುವ ವಸ್ತುವನ್ನು ಸ್ಪರ್ಶಿಸುತ್ತದೆ. ಅದು ಬಣ್ಣ ಪಡೆಯುತ್ತದೆ. ಮಗುವಿಗೆ ರೋಮಾಂಚನವಾಗುತ್ತದೆ. ಮಗು ಈ ರೀತಿ ಮಾಡುವುದನ್ನು ಯಾರಾದರೂ ನೋಡಿದರೆ ಆತನ ಮೇಲೆ ಕೋಪಗೊಳ್ಳಬಹುದು ಎಂದು ತಾಯಿ ಕಳವಳ ವ್ಯಕ್ತಪಡಿಸುತ್ತಾಳೆ. ಆದ್ದರಿಂದ ಹಾಗೆ ಮಾಡದಂತೆ ಹೇಳಿ ಅವನನ್ನು ರಕ್ಷಿಸಲು ಪ್ರಯತ್ನಿಸುತ್ತಾಳೆ. ಮನೆಯಿಂದ ತಾಯಿಯೊಂದಿಗೆ ಮಗನು ಹೊರಬಂದಾಗ ಅವನು ಮತ್ತೆ ತನ್ನ ಶಕ್ತಿಯನ್ನು ಬಳಸಲು ಪ್ರಯತ್ನಿಸುತ್ತಾನೆ ಮತ್ತು ಅನಂತರ ಅದನ್ನು ಸಂಭ್ರಮಿಸುತ್ತಾ ಹೋಗುತ್ತಾನೆ. ಮಂದ ಮತ್ತು ನಿರ್ಜೀವ ಜಗತ್ತನ್ನು ಅವನು ವರ್ಣರಂಜಿತ, ರೋಮಾಂಚಕ ಮತ್ತು ಸಂತೋಷವಾಗಿ ಪರಿವರ್ತಿಸುತ್ತಾ ಸಾಗುತ್ತಾನೆ. ಜಗತ್ತನ್ನು ಸುಂದರ ಸ್ಥಳವನ್ನಾಗಿ ಮಾಡಲು ತನ್ನ ಮಗ ತಂದ ಸಕಾರಾತ್ಮಕ ಪರಿಣಾಮವನ್ನು ತಾಯಿ ಅನಂತರ ಅರಿತುಕೊಳ್ಳುತ್ತಾಳೆ.

ಇದನ್ನೂ ಓದಿ: NEET-UG Row: ನೀಟ್‌ ಕೌನ್ಸೆಲಿಂಗ್‌ಗೆ ತಡೆ ಇಲ್ಲ ಎಂದು ಪುನರುಚ್ಚರಿಸಿದ ಸುಪ್ರೀಂ ಕೋರ್ಟ್

ಬಿರ್ಲಾ ಓಪಸ್ ಪೇಂಟ್ಸ್

ಆದಿತ್ಯ ಬಿರ್ಲಾ ಗ್ರೂಪ್‌ನ ಪ್ರಮುಖ ಸಂಸ್ಥೆಯಾದ ಗ್ರಾಸಿಮ್ ಇಂಡಸ್ಟ್ರೀಸ್ ಅಡಿಯಲ್ಲಿರುವ ಬಿರ್ಲಾ ಓಪಸ್ ಪೇಂಟ್ಸ್ ಭಾರತದ ಗ್ರಾಹಕರಿಗೆ ಅಲಂಕಾರಿಕ ಚಿತ್ರಕಲೆಗೆ ಬೇಕಾದ ಬಣ್ಣಗಳನ್ನು ಒದಗಿಸುತ್ತದೆ. 2024ರಲ್ಲಿ ಪ್ರಾರಂಭವಾದ ಬಿರ್ಲಾ ಓಪಸ್ ಪೇಂಟ್ಸ್ ಇಂಟೀರಿಯರ್, ಎಕ್ಸ್‌ಟೀರಿಯರ್ಸ್, ವಾಟರ್‌ಫ್ರೂಫಿಂಗ್, ಎನಾಮೆಲ್ ಪೇಂಟ್‌ಗಳು, ವುಡ್ ಫಿನಿಶ್‌ಗಳು ಮತ್ತು ವಾಲ್‌ಪೇಪರ್‌ಗಳಂತಹ ವಿಭಾಗಗಳಾದ್ಯಂತ ಉನ್ನತ ಉತ್ಪನ್ನಗಳ ಶ್ರೇಣಿಯನ್ನು ಒಳಗೊಂಡ ಸಂಪೂರ್ಣ ಪೋರ್ಟ್‌ಫೋಲಿಯೊವನ್ನು ಹೊಂದಿದೆ.

ಭಾರತದಾದ್ಯಂತ ಹರಡಿರುವ ಆರು ಉತ್ಪಾದನಾ ಘಟಕಗಳೊಂದಿಗೆ ಬಿರ್ಲಾ ಓಪಸ್ ಪೇಂಟ್ಸ್ ಅಲಂಕಾರಿಕ ಬಣ್ಣಗಳ ವಿಭಾಗದಲ್ಲಿ ಮಾರುಕಟ್ಟೆಯಲ್ಲಿ ಪ್ರಮುಖ ಸ್ಥಾನವನ್ನು ಪಡೆದಿದೆ. ಅಂತೂ, ಈ ವಿಶಿಷ್ಟ ಜಾಹೀರಾತು ಈ ಉತ್ಪನ್ನಕ್ಕೆ ಭಾರಿ ಪ್ರಚಾರ ತಂದು ಕೊಟ್ಟಿದೆ.‌ ಈ ಜಾಹೀರಾತಿನ ಸೃಜನಶೀಲ ಕಲ್ಪನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

Continue Reading
Advertisement
Team India Captain
ಕ್ರೀಡೆ9 mins ago

Team India Captain : ರೋಹಿತ್ ಶರ್ಮಾ ನಂತರ ಟಿ20 ತಂಡದ ನಾಯಕ ಯಾರು? ಇಲ್ಲಿದೆ ಐದು ಮುಂಚೂಣಿ ಹೆಸರುಗಳು

Water tank Collapsed
ದೇಶ11 mins ago

Water Tank Collapsed: ಭೀಕರ ದುರಂತ; ಇಬ್ಬರು ಸ್ಥಳದಲ್ಲೇ ಸಾವು-12ಮಂದಿಗೆ ಗಂಭೀರ ಗಾಯ

New Criminal Law
ದೇಶ21 mins ago

New Criminal Law: ಹೊಸ ಕ್ರಿಮಿನಲ್‌ ಕಾನೂನಿನಂತೆ ಬೀದಿ ವ್ಯಾಪಾರಿ ವಿರುದ್ಧ ಮೊದಲ ಎಫ್‌ಐಆರ್‌ ದಾಖಲು

Actor Darshan In Central Jail remembering mother and son
ಕ್ರೈಂ22 mins ago

Actor Darshan: ಇಂದಾದ್ರೂ ಭೇಟಿಗೆ ಬರ್ತಾರಾ ದರ್ಶನ್‌ ಅಮ್ಮ, ತಮ್ಮ?

Rakshit Shetty Visited Koragajja Temple And Prayed
ಸಿನಿಮಾ44 mins ago

Rakshit Shetty: ಕೊರಗಜ್ಜ ಸನ್ನಿಧಾನಕ್ಕೆ ಭೇಟಿ ಕೊಟ್ಟ ಸಿಂಪಲ್‌ ಸ್ಟಾರ್‌ ರಕ್ಷಿತ್‌ ಶೆಟ್ಟಿ!

Parliament Sessions
ದೇಶ56 mins ago

Parliament Sessions: ಇಂದು ಸಂಸತ್‌ ಕಲಾಪ ಪುನರಾರಂಭ; ʼನೀಟ್‌ʼ ಚರ್ಚೆಗೆ ಪ್ರತಿಪಕ್ಷಗಳ ಪಟ್ಟು ಸಾಧ್ಯತೆ: Live ಇಲ್ಲಿ ನೋಡಿ

Watermelon At Nigh
ಆರೋಗ್ಯ56 mins ago

Watermelon At Night: ಸಂಜೆ 7 ಗಂಟೆಯ ಕಲ್ಲಂಗಡಿ ಹಣ್ಣನ್ನು ತಿನ್ನಲು ಹೋಗಬೇಡಿ!

Off Shoulder Tops Fashion
ಫ್ಯಾಷನ್56 mins ago

Off Shoulder Tops Fashion: ನೀವೂ ಆಫ್‌ ಶೋಲ್ಡರ್‌ ಟಾಪ್‌ ಧರಿಸಬಹುದು! ಆದರೆ ಈ ಎಚ್ಚರಿಕೆ ವಹಿಸಿ

shubham milk price hike
ಪ್ರಮುಖ ಸುದ್ದಿ58 mins ago

Milk Price Hike: ಹಾಲಿನ ದರ 4 ರೂ. ಹೆಚ್ಚಳ? ಶುಭಂ ಗೋಲ್ಡ್‌ ದರ ಏರಿಕೆ

irat Kohli's Heartfelt Tribute to Anushka Sharma
ಕ್ರಿಕೆಟ್1 hour ago

Virat Kohli: ಈ ಗೆಲುವು ನನ್ನದಷ್ಟೇ ಅಲ್ಲ, ನಿನ್ನದು ಕೂಡ ಎಂದು ಪತ್ನಿಗೆ ಪ್ರೀತಿ ವ್ಯಕ್ತಪಡಿಸಿದ ವಿರಾಟ್‌ ಕೊಹ್ಲಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ16 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು21 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌