Recession: ಅಮೆರಿಕದಲ್ಲಿ ತೀವ್ರ ಆರ್ಥಿಕ ಕುಸಿತ, ಭಾರತಕ್ಕೂ ಆತಂಕ: ಅರ್ಥಶಾಸ್ತ್ರಜ್ಞರ ಎಚ್ಚರಿಕೆ - Vistara News

ದೇಶ

Recession: ಅಮೆರಿಕದಲ್ಲಿ ತೀವ್ರ ಆರ್ಥಿಕ ಕುಸಿತ, ಭಾರತಕ್ಕೂ ಆತಂಕ: ಅರ್ಥಶಾಸ್ತ್ರಜ್ಞರ ಎಚ್ಚರಿಕೆ

ಭಾರತದ ಜಿಡಿಪಿಯ ಆಧಾರಗಳಲ್ಲಿ ಒಂದಾದ ಐಟಿ ಸೇವಾ ವಲಯವನ್ನು (IT sector) ಆರ್ಥಿಕ ಕುಸಿತ ಬಾಧಿಸಲಿದೆ. ಮಾತ್ರವಲ್ಲದೆ ಬಾಂಡ್ ಮತ್ತು ಇಕ್ವಿಟಿ ಮಾರುಕಟ್ಟೆಗಳಲ್ಲೂ ಸಾಕಷ್ಟು ಚಂಚಲತೆಯನ್ನು ತರುತ್ತದೆ ಎಂದಿದ್ದಾರೆ.

VISTARANEWS.COM


on

recession
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಯುನೈಟೆಡ್ ಸ್ಟೇಟ್ಸ್‌ನಲ್ಲಿ ಶೀಘ್ರದಲ್ಲೇ ಆಳವಾದ ಆರ್ಥಿಕ ಹಿಂಜರಿತ (deep Recession in USA) ತಲೆದೋರಬಹುದು. ಇದು ಭಾರತವನ್ನೂ ಬಾಧಿಸಲಿದೆ ಎಂದು ಉನ್ನತ ಅರ್ಥಶಾಸ್ತ್ರಜ್ಞರೊಬ್ಬರು ಹೇಳಿದ್ದಾರೆ.

ಖಾಸಗಿ ಚಾನೆಲ್‌ನಲ್ಲಿ ನಡೆದ ವಿಶೇಷ ಸಂವಾದದಲ್ಲಿ ಆಕ್ಸಿಸ್ ಬ್ಯಾಂಕ್‌ನ ಮುಖ್ಯ ಅರ್ಥಶಾಸ್ತ್ರಜ್ಞ ಮತ್ತು ಆಧಾರ್‌ ಪ್ರಾಧಿಕಾರದ ಅರೆಕಾಲಿಕ ಅಧ್ಯಕ್ಷರಾಗಿರುವ ನೀಲಕಂಠ ಮಿಶ್ರಾ ಇದನ್ನು ಹೇಳಿದ್ದಾರೆ. ಅಮೆರಿಕದ ವಿತ್ತೀಯ ಕುಸಿತವು ಭಾರತದ GDPಯನ್ನೂ (India GDP) ಬಾಧಿಸಲಿದೆ. ಯಾಕೆಂದರೆ ಭಾರತದ ಜಿಡಿಪಿಯ ಆಧಾರಗಳಲ್ಲಿ ಒಂದಾದ ಐಟಿ ಸೇವಾ ವಲಯವನ್ನು (IT sector) ಅದು ಬಾಧಿಸಲಿದೆ. ಮಾತ್ರವಲ್ಲದೆ ಬಾಂಡ್ ಮತ್ತು ಇಕ್ವಿಟಿ ಮಾರುಕಟ್ಟೆಗಳಲ್ಲೂ ಸಾಕಷ್ಟು ಚಂಚಲತೆಯನ್ನು ತರುತ್ತದೆ ಎಂದಿದ್ದಾರೆ.

ಈ ವರ್ಷ ಅಮೆರಿಕಕ್ಕೆ ಆರ್ಥಿಕ ಹಿಂಜರಿತ ಕಾಲೂರುವ, ಅದರ ಜಿಡಿಪಿ ಬೆಳವಣಿಗೆ ಕುಸಿಯುವ ನಿರೀಕ್ಷೆಯಿತ್ತು. ಆದರೆ ಅದು ಸಂಭವಿಸಲಿಲ್ಲ. ಸೆಪ್ಟೆಂಬರ್ ಅಂತ್ಯದ ವೇಳೆಗೆ ಜನ ತಾವು ಸುರಕ್ಷಿತ ಎಂದು ಭಾವಿಸಿದರು. ಆದರೆ ಈ ವರ್ಷ, ಅಮೆರಿಕದ ವಿತ್ತೀಯ ಕೊರತೆ ಅವರ GDPಯ 4%ರಷ್ಟು ಹೆಚ್ಚಾಗಿದೆ ಎಂದು ನಮ್ಮ ವಿಶ್ಲೇಷಣೆ ಹೇಳುತ್ತದೆ. ಅವರು 1 ಲಕ್ಷ ಕೋಟಿ ಡಾಲರ್‌ ವಿತ್ತೀಯ ಕೊರತೆ ಅಂದಾಜಿಸಿದ್ದರು. ಆದರೆ 2 ಲಕ್ಷ ಕೋಟಿ ಡಾಲರ್‌ ಆಗಿದೆ. ವಿತ್ತೀಯ ಕೊರತೆ ತುಂಬಾ ಹೆಚ್ಚಿದೆ. ಇದನ್ನು ಕಡಿಮೆ ಮಾಡದೇ ಇದ್ದರೆ ಆರ್ಥಿಕತೆಯ ಬೆಳವಣಿಗೆಯನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಮಿಶ್ರಾ ಹೇಳಿದರು.

ಮುಂದಿನ ವರ್ಷ ವಿತ್ತೀಯ ಕೊರತೆಯನ್ನು ಇಳಿಸಲು ಅವರು ಬಯಸಿದರೂ ಸಾಧ್ಯವಾಗದು. ಹಣಕಾಸಿನ ಕೊರತೆ ತುಂಬಾ ಹೆಚ್ಚಿರುವುದರಿಂದ, ಯಾರೂ ಯುಎಸ್ ಬಾಂಡ್‌ಗಳನ್ನು ಖರೀದಿಸಲು ಬಯಸುವುದಿಲ್ಲ. ದರಗಳು ಏರುತ್ತಿವೆ. ಇದು ಪ್ರಪಂಚದಾದ್ಯಂತ ಬೇಡಿಕೆಯ ಕೊರತೆಗೆ ಕಾರಣವಾಗುತ್ತದೆ. ಇದರಿಂದ ಸಂಭವಿಸುವ ಆರ್ಥಿಕ ಹಿಂಜರಿತ ಬಹಳ ಆಳವಾದದ್ದಾಗಿರಬಹುದು ಎಂದು ಎಚ್ಚರಿಸಿದ್ದಾರೆ.

ಭಾರತದ ಮೇಲೇನು ಪರಿಣಾಮ?

ಇದು ಭಾರತದ ಮೇಲೆ ನಾಲ್ಕು ಮಾರ್ಗಗಳ ಮೂಲಕ ಪರಿಣಾಮ ಬೀರಬಹುದು. ಯುಎಸ್ ಆರ್ಥಿಕ ಹಿಂಜರಿತದಿಂದ ನಮ್ಮ ಐಟಿ ಸೇವೆಗಳ ಉದ್ಯಮ ಮತ್ತು ನಮ್ಮ ವ್ಯಾಪಾರ ಸೇವೆಗಳ ರಫ್ತುಗಳಿಗೆ ಹೊಡೆತ ಬೀಳಬಹುದು. ಸೇವೆಗಳ ರಫ್ತುಗಳು ಭಾರತದ ರಫ್ತಿನ 10%ರಷ್ಟಿದೆ. ಅವು ಬಹಳಷ್ಟು ಕುಸಿದರೆ, ನಾವು ಜಿಡಿಪಿ ಬೆಳವಣಿಗೆಯ 1%ನಷ್ಟು ಕಳೆದುಕೊಳ್ಳಬಹುದು ಎಂದು ಮಿಶ್ರಾ ಹೇಳಿದರು.

ಎರಡನೆಯ ಮಾರ್ಗವೆಂದರೆ ಸರಕುಗಳ ರಫ್ತಿನ ಮೇಲೆ ಪರಿಣಾಮ. ಸರಕುಗಳ ಬೇಡಿಕೆ ಕುಸಿಯುತ್ತದೆ. ಇದು ಈಗಾಗಲೇ ಚೀನಾ, ಯುರೋಪ್ ಮತ್ತು ಜಪಾನ್‌ನಲ್ಲಿ ಕಡಿಮೆಯಾಗಿದೆ ಎಂದು ಎಚ್ಚರಿಸಿದ್ದಾರೆ. ಭಾರತದಲ್ಲಿ ಉತ್ಪನ್ನಗಳನ್ನು ಡಂಪ್ ಮಾಡುವುದು ಇನ್ನೊಂದು ದೊಡ್ಡ ಅಪಾಯ. ಬೇಡಿಕೆ ಚೇತರಿಸಿಕೊಳ್ಳುವ ಏಕೈಕ ದೇಶವಾಗಿ ಭಾರತ ಉಳಿದಿದ್ದರೆ, ಪ್ರತಿ ತಯಾರಕರೂ ಇಲ್ಲಿ ಮಾರಾಟ ಮಾಡಲು ಬಯಸುತ್ತಾರೆ. ಇದು ಭಾರತೀಯ ತಯಾರಕರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ.

ನಾಲ್ಕನೆಯ ಸಮಸ್ಯೆಯೆಂದರೆ US ಆರ್ಥಿಕ ಹಿಂಜರಿತವು ಅದರ ಸರ್ಕಾರಿ ಬಾಂಡ್‌ನ ಇಳುವರಿ ಮೇಲೆ ಪರಿಣಾಮ ಬೀರುತ್ತದೆ. ಇತರ ಆರ್ಥಿಕತೆಗಳಿಗೆ ಬಂಡವಾಳದ ವೆಚ್ಚವು ಹೆಚ್ಚಾಗುತ್ತದೆ. ಭಾರತದಲ್ಲಿನ ದೊಡ್ಡ ಸಾಲಗಾರರು ಸಾಲವನ್ನು ಮೊದಲೇ ಸುಲಭವಾಗಿ ಪಡೆಯುತ್ತಾರೆ. ಆದರೆ ಅಂತಹ ಸಾಲಗಳು ಕಳೆದ 6-8 ತಿಂಗಳುಗಳಿಂದ ಲಭ್ಯವಿಲ್ಲ. ಇದು ಬಾಂಡ್ ಮಾರುಕಟ್ಟೆಗಳು ಮತ್ತು ಈಕ್ವಿಟಿ ಮಾರುಕಟ್ಟೆಗಳಂತಹ ಹಣಕಾಸು ಮಾರುಕಟ್ಟೆಗಳಲ್ಲಿ ಚಂಚಲತೆ ತರುತ್ತದೆ ಎಂದಿದ್ದಾರೆ.

ತಯಾರಾಗುವುದು ಹೇಗೆ?

ಕಚ್ಚಾ ತೈಲದ ಬೆಲೆ ಈಗಾಗಲೇ ಕಳೆದ ಎರಡು-ಮೂರು ದಿನಗಳಲ್ಲಿ ಕುಸಿಯಲು ಪ್ರಾರಂಭಿಸಿದೆ. ಏಕೆಂದರೆ ಜನ ಆರ್ಥಿಕ ಹಿಂಜರಿತದ ಭಯವನ್ನು ಅನುಭವಿಸಲು ಆರಂಭಿಸಿದ್ದಾರೆ. ಮುಂದಿನ ವರ್ಷ ಮೇ-ಜೂನ್‌ನಲ್ಲಿ ಯುಎಸ್ ಆರ್ಥಿಕ ಹಿಂಜರಿತಕ್ಕೆ ಹೋದರೆ, ತೈಲ ಬೆಲೆಗಳು ಇನ್ನಷ್ಟು ಕಡಿಮೆಯಾಗುತ್ತವೆ. ಅಥವಾ ತೈಲ ಬೆಲೆ ಏರಿಕೆಯಾದರೆ ಅದು ಭಾರತದ ಆರ್ಥಿಕತೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಇದನ್ನು ನಿಭಾಯಿಸಲು ಸ್ಥೂಲ ಆರ್ಥಿಕ ಸ್ಥಿರತೆಯ ಮೇಲೆ ಗಮನ ಹರಿಸಬೇಕು. ರಿಸ್ಕ್‌ ತೆಗೆದುಕೊಳ್ಳುವ ಬದಲು ಪ್ರಕ್ಷುಬ್ಧತೆಯ ಅಲೆಗಳನ್ನು ಎದುರಿಸುವತ್ತ ಕಣ್ಣಿಡಬೇಕು ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Arvind Kejriwal: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಈ ನಿಟ್ಟಿನಲ್ಲಿ ಜಾಮೀನು ಅವಧಿಯನ್ನು ಏಳು ದಿನ ವಿಸ್ತರಿಸುವಂತೆ ಈ ಹಿಂದೆ ಅರವಿಂದ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದ ಕಾರಣ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ ಮರಳಬೇಕಾಯಿತು. ಇಂದು ದಿಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕಾವೇರಿ ಭವೇಜಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣದ ಆರೋಪ ಎದುರಿಸುತ್ತಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ಮತ್ತೆ ವಜಾಗೊಳಿಸಿದೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ಜೂ.19ವರೆಗೆ ವಿಸ್ತರಿಸಿದೆ.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಈ ನಿಟ್ಟಿನಲ್ಲಿ ಜಾಮೀನು ಅವಧಿಯನ್ನು ಏಳು ದಿನ ವಿಸ್ತರಿಸುವಂತೆ ಈ ಹಿಂದೆ ಅರವಿಂದ ಕೇಜ್ರಿವಾಲ್‌ ಅರ್ಜಿ ಸಲ್ಲಿಸಿದ್ದರು. ಆದರೆ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಿರಾಕರಿಸಿದ ಕಾರಣ ಕೇಜ್ರಿವಾಲ್‌ ತಿಹಾರ್‌ ಜೈಲಿಗೆ ಮರಳಬೇಕಾಯಿತು. ಇಂದು ದಿಲ್ಲಿ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಕಾವೇರಿ ಭವೇಜಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೇ ಅವರ ನ್ಯಾಯಾಂಗ ಬಂಧನವನ್ನು ವಿಸ್ತರಿಸಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಅಗತ್ಯವಿರುವ ಎಲ್ಲಾ ವೈದ್ಯಕೀಯ ತಪಾಸಣೆಯನ್ನು ನಡೆಸುವಂತೆ ಕೋರ್ಟ್‌ ಆದೇಶಿಸಿದೆ. ಇಂದು ಕೇಜ್ರಿವಾಲ್‌ ವರ್ಚುವಲ್‌ ಸೌಲಭ್ಯದ ಮೂಲಕ ಕೋರ್ಟ್‌ಗೆ ಹಾಜರಾಗಿದ್ದರು.

ಪ್ರಕರಣದ ಹಿನ್ನೆಲೆ

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ. 5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್​ ಅವರಿಗೆ ಇ.ಡಿ. 9 ಬಾರಿ ನೋಟಿಸ್ ಜಾರಿ ಮಾಡಿತ್ತು. ಬಳಿಕ ಮಾರ್ಚ್​ 21ರಂದು ಅವರನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಮಧ್ಯಂತರ ಜಾಮೀನು ಪಡೆದು ಒಂದು ತಿಂಗಳು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಜೈಲಿಗೆ ಮರಳುವಂತೆ ಕೋರ್ಟ್‌ ಈ ಹಿಂದೆಯೇ ಆದೇಶಿಸಿತ್ತು.

ಇದನ್ನೂ ಓದಿ:Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Continue Reading

ಪ್ರಮುಖ ಸುದ್ದಿ

Bangalore Central Election Result 2024 : ಪಿ.ಸಿ ಮೋಹನ್​ ಮರ್ಯಾದೆ ಉಳಿಸಿದ ಮಹದೇವರಪುರ ಕ್ಷೇತ್ರ!

Bangalore Central Election Result 2024: ಮಹದೇವಪುರ ಕ್ಷೇತ್ರದಲ್ಲಿ ಎಣಿಕೆ ಆರಂಭಗೊಂಡಾಗ ಪಿ.ಸಿ ಮೋಹನ್ ಅವರಿಗೆ ಮುನ್ನಡೆ ಸಿಗಲು ಆರಂಭವಾಯಿತು. ಈ ವೇಳೆ ಎಣಿಕೆ ಕೇಂದ್ರನ್ನು ತೊರೆದಿದ್ದ ಬಿಜೆಪಿ ಕಾರ್ಯಕರ್ತರು ಮತ್ತೆ ಅಲ್ಲಿಗೆ ಬರಲು ಆರಂಭಿಸಿದರು. ಈ ಕ್ಷೇತ್ರವೊಂದೇ ಮೋಹನ್ ಅವರಿಗೆ 1,18,046 ಮತದ ಮುನ್ನಡೆ ತಂದುಕೊಟ್ಟಿತು. 32,707 ಮತಗಳ ಅಂತರದಿಂದ ಅವರು ಗೆದ್ದೇ ಬಿಟ್ಟರು.

VISTARANEWS.COM


on

Election Results 2024
Koo

ಬೆಂಗಳೂರು: ಲೋಕ ಸಭಾ ಚುನಾವಣಾ ಫಲಿತಾಂಶದಲ್ಲಿ ಕರ್ನಾಟಕದ ಮತದಾರರ ಪಾಲಿಗೆ ಅತ್ಯಂತ ಕುತೂಹಲ ಮೂಡಿಸಿದ ಕ್ಷೇತ್ರವೆಂದರೆ ಬೆಂಗಳೂರು ಸೆಂಟ್ರಲ್ (Bangalore Central Election Result 2024)​. ಇಲ್ಲಿ ಕೊನೇ ತನಕ ಕಾಂಗ್ರೆಸ್​ನ ಮನ್ಸೂರ್ ಅಲಿ ಖಾನ್​ ಗೆದ್ದಿದ್ದಾರೆ ಎಂದು ಅಂದುಕೊಂಡರೆ ಕೊನೇ ಕ್ಷಣದಲ್ಲಿ ಹಾಲಿ ಸಂಸದ ಪಿ. ಸಿ ಮೋಹನ್ ಅವರೇ ಗೆದ್ದು ಬೀಗಿದ್ದಾರೆ. ಈ ರೋಚಕ ಫಲಿತಾಂಶಕ್ಕೆ ಕಾರಣ ಮಂಜುಳಾ ಲಿಂಬಾವಳಿ ಪ್ರತಿನಿಧಿಸುವ ಮಹದೇವಪುರ ಕ್ಷೇತ್ರ. ಈ ಕ್ಷೇತ್ರವೊಂದೇ ಪಿ. ಸಿ ಮೋಹನ್ ಅವರಿಗೆ ದೊಡ್ಡ ಪ್ರಮಾಣದಲ್ಲಿ ಲೀಡ್​ ಕೊಡುವೆ ಮೂಲ ಅವರ ಮರ್ಯಾದೆ ಕಾಪಾಡಿದೆ.

ಸೆಂಟ್ರಲ್ ಕ್ಷೇತ್ರದ ಮತ ಎಣಿಕೆ ಕಾರ್ಯವು ವಸಂತನಗರದ ಮೌಂಟ್ ಕಾರ್ಮೆಲ್​ ಕಾಲೇಜಿನಲ್ಲಿ ನಡೆಯಿತು. ಇಲ್ಲಿ ಜಮಾಯಿಸಿದ್ದ ಕಾಂಗ್ರೆಸ್​ ಕಾರ್ಯಕರ್ತರು ಕೊನೇ ಸುತ್ತಿನ ತನಕ ಸಂಭ್ರಮಿಸಿದ್ದರೆ, ಬಿಜೆಪಿ ಕಾರ್ಯಕರ್ತರು ಕೊನೆಯಲ್ಲಿ ಸಂಭ್ರಮಿಸಿದ್ದರು. ಅದಕ್ಕಿಂತ ಮೊದಲು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಸಂಪೂರ್ಣ ಸ್ಪರ್ಧೆ ಏರ್ಪಟ್ಟಿತ್ತು. ಹಿನ್ನಡೆ- ಮುನ್ನಡೆ ಆಗುತ್ತಿದ್ದಂತೆ ಪರಸ್ಪರ ಪಕ್ಷಗಳ ಕಾರ್ಯಕರ್ತರ ಕೇಕೆ ಹಾಕಿದರು.

ವಿಧಾನಸಭಾ ಕ್ಷೇತ್ರಮನ್ಸೂರ್​ ಅಲಿಖಾನ್​ಪಿ.ಸಿ. ಮೋಹನ್​
ಸರ್ವಜ್ಱನಗರ1,4079466,550
ಸಿ.ವಿ ರಾಮನ್​ನಗರ53,34673, 460
ಶಿವಾಜಿನಗರ70,73143,221
ಶಾಂತಿನಗರ70,18449,846
ಗಾಂಧಿನಗರ51,12374,447
ರಾಜಾಜಿನಗರ36,44875,917
ಚಾಮರಾಜಪೇಟೆ87,11644,163
ಮಹದೇವಪುರ1,15,5862,29, 632

ಮಂಗಳವಾರ ಮತ ಎಣಿಕೆ ಕಾರ್ಯ ಆರಂಭಗೊಂಡಾಗ ಅಂಚೆ ಮತಗಳನ್ನು ಲೆಕ್ಕ ಹಾಕಲಾಯಿತು. ಪಿ.ಸಿ ಮೋಹನ್ ಅವರು ಮುನ್ನಡೆ ಪಡೆದುಕೊಂಡರು. ನಂತರ ಇವಿಎಂ ಯಂತ್ರಗಳನ್ನು ತೆಗೆದು ಲೆಕ್ಕ ಹಾಕಲಾಯಿತು. ಆರಂಭದಲ್ಲಿ ಪಿ.ಸಿ ಮೋಹನ್​ ಮುನ್ನಡೆ ಸಾಧಿಸುತ್ತಲೇ ಹೋದರು. ಆದರೆ ಸರ್ವಜ್ಱನಗರ, ಶಾಂತಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಇವಿಎಂಗಳನ್ನು ಲೆಕ್ಕ ಹಾಕುವ ವೇಳೆ ಕಾಂಗ್ರೆಸ್​ಗೆ ಮುನ್ನಡೆ ದೊರೆಯಿತು. ಆಗ ಸಂಭ್ರಮಿಸುವ ಸರದ ಕಾಂಗ್ರೆಸ್ ಕಾರ್ಯಕರ್ತರದ್ದಾಯಿತು. ಒಟ್ಟು ಮುನ್ನಡೆ 68 ಸಾವಿರದಿಂದ 72 ಸಾವಿರಕ್ಕೆ ಏರಿಕೆಯಾಯಿತು. ವಿಷಯ ತಿಳಿದ ಕಾರ್ಯಕರ್ತರು ಮತ ಎಣಿಕೆ ಕೇಂದ್ರದತ್ತ ಮುನ್ನುಗ್ಗಲು ಆರಂಭಿಸಿದ್ದಾರೆ. ಆದರೆ ಅವರ ಸಂಭ್ರಮ ಹೆಚ್ಚು ಹೊತ್ತು ಇರಲಿಲ್ಲ.

ಮಹದೇವಪುರ ಕ್ಷೇತ್ರದಲ್ಲಿ ಕ್ಷಿಪ್ರ ಬದಲಾವಣೆ

ಮಹದೇವಪುರ ಕ್ಷೇತ್ರದಲ್ಲಿ ಎಣಿಕೆ ಆರಂಭಗೊಂಡಾಗ ಪಿ.ಸಿ ಮೋಹನ್ ಅವರಿಗೆ ಮುನ್ನಡೆ ಸಿಗಲು ಆರಂಭವಾಯಿತು. ಈ ವೇಳೆ ಎಣಿಕೆ ಕೇಂದ್ರನ್ನು ತೊರೆದಿದ್ದ ಬಿಜೆಪಿ ಕಾರ್ಯಕರ್ತರು ಮತ್ತೆ ಅಲ್ಲಿಗೆ ಬರಲು ಆರಂಭಿಸಿದರು. ಈ ಕ್ಷೇತ್ರವೊಂದೇ ಮೋಹನ್ ಅವರಿಗೆ 1,18,046 ಮತದ ಮುನ್ನಡೆ ತಂದುಕೊಟ್ಟಿತು. 32,707 ಮತಗಳ ಅಂತರದಿಂದ ಅವರು ಗೆದ್ದೇ ಬಿಟ್ಟರು.

ಇದನ್ನೂ ಓದಿ: Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

ಮೋಹನ್​ ಸಾಧನೆ

ಈ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಪಿ.ಸಿ ಮೋಹನ್ ಅವರು ದಾಖಲೆ ಬರೆದರು. 2008ರಲ್ಲಿ ಕ್ಷೇತ್ರ ಮರುವಿಗಂಗಣೆಯಾದ ಬಳಿಕದಿಂದ ನಡೆದ 2009, 2014, 2019 ಹಾಗೂ 2024 ಚುನಾವಣೆಯಲ್ಲಿ ಗೆದ್ದು ಸಾಧನೆ ಮಾಡಿದ್ದಾರೆ.

ಧರ್ಮ ಧ್ರುವೀಕರಣ

ಬೆಂಗಳೂರು ಸೆಂಟ್ರಲ್​ ಕ್ಷೇತ್ರದಲ್ಲಿನ ಒಟ್ಟು 8 ವಿಧಾನ ಸಭಾ ಕ್ಷೇತ್ರಗಳಲ್ಲಿ 3ರಲ್ಲಿ ಬಿಜೆಪಿ ಹಾಗೂ 5ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಜಮೀರ್​ ಅಹಮ್ಮದ್​, ಕೆ.ಜೆ ಜಾರ್ಜ್​, ದಿನೇಶ್​ ಗುಂಡೂರಾವ್​ ಅವರಂಥ ಮಂತ್ರಿಗಳೂ ಇದ್ದಾರೆ. ಇಲ್ಲೆಲ್ಲ ಅಲ್ಪ ಸಂಖ್ಯಾತರೂ ಸಾಕಷ್ಟಿದ್ದಾರೆ. ಧರ್ಮದ ಧ್ರುವೀಕರಣದ ಮೂಲಕ ಬಿಜೆಪಿಯನ್ನು ಸೋಲಿಸುವ ಯತ್ನ ಕಾಂಗ್ರೆಸ್​ನದ್ದಾಗಿತ್ತು. ಆ ಎಲ್ಲ ಯೋಜನೆಗಳನ್ನು ವಿಫಲಗೊಳಿಸಿದ್ದು ಮಹದೇವಪುರ ವಿಧಾನಸಭಾಕ್ಷೇತ್ರ. ಹಿಂದಿನ ಬಾರಿಯೂ ರಿಜ್ವಾನ್ ಅರ್ಷದ್ ಇಲ್ಲಿ ಪಿಸಿ ಮೋಹನ್ ವಿರುದ್ಧ ಸೋತಿದ್ದರು.

ಮುನ್ನಡೆ ಕೊಟ್ಟಿದ್ದು ಹೀಗೆ

ಸಚಿವ. ಕೆ.ಜೆ ಜಾರ್ಜ್​ ಪ್ರತಿನಿಧಿಸುವ ಸರ್ವಜ್ಱನಗರ (74,242 ಮತಗಳು), ಜಮೀರ್ ಅಹ್ಮದ್ ಪ್ರತಿನಿಧಿಸುವ ಚಾಮರಾಜಪೇಟೆ (42,953 ಮತಗಳು) ಮುನ್ನಡೆಯನ್ನು ಮನ್ಸೂರ್ ಅವರಿಗೆ ದೊರಕಿಸಿಕೊಟ್ಟಿತು. ಎನ್​ ಎ ಹ್ಯಾರಿಸ್ ಪ್ರತಿನಿಧಿಸುವ ಶಾಂತಿನಗರ (20,338 ಮತಗಳು), ರಿಜ್ವಾನ್ ಅರ್ಷದ್ ಪ್ರತಿನಿಧಿಸುವ ಶಿವಾಜಿನಗರ (27,510 ಮತಗಳು) ಮುನ್ನಡೆಯನ್ನೂ ಕೊಟ್ಟಿತ್ತು. ಆದರೆ, ದಿನೇಶ್ ಗುಂಡೂರಾವ್ ಅವರ ಗಾಂಧಿನಗರದಲ್ಲಿ ಬಿಜೆಪಿಗೆ 23 ಸಾವಿರ ಮತಗಳ ಮುನ್ನಡೆ ಸಿಕ್ಕಿತ್ತು. ಇನ್ನು ಬಿಜೆಪಿ ಪ್ರತಿನಿಧಿಸು ರಘು ಅವರ ಸಿ.ವಿ ರಾಮನ್ ನಗರ 20, 114, ಸುರೇಶ್ ಕುಮಾರ್ ಅವರ ರಾಜಾಜಿನಗರ (39,429 ಮತಗಳು) ಲೀಡ್ ಕೊಟ್ಟಿತ್ತು. ಆದರೆ, ಚಿಂದಿ ಉಡಾಯಿಸಿದ್ದು ಮಹದೇವಪುರ ಕ್ಷೇತ್ರ 1.18 ಲಕ್ಷ ಲೀಡ್​ ಕೊಟ್ಟಿತು. ಮಹದೇವಪುರ ಕ್ಷೇತ್ರದಲ್ಲಿ ಐಟಿ ಉದ್ಯೋಗಿಗಳು, ಉತ್ತರ ಭಾರತದ ವಲಸಿಗರು ಜಾಸ್ತಿ ಇದ್ದಾರೆ. ಅವರೆಲ್ಲರೂ ಸೇರಿ ಬಿಜೆಪಿ ಗೆಲ್ಲಿಸಿದ್ದಾರೆ.

Continue Reading

Lok Sabha Election 2024

Nitish Kumar: ಎನ್‌ಡಿಎ ಸರ್ಕಾರಕ್ಕೆ ಜೆಡಿಯು, ಟಿಡಿಪಿ ಬೆಂಬಲ; ಸ್ಪೀಕರ್‌ ಹುದ್ದೆಗೆ ಎರಡೂ ಪಕ್ಷಗಳಿಂದ ಬೇಡಿಕೆ?

Nitish Kumar: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು (Election Results 2024), ಬಿಜೆಪಿ ನೇತೃತ್ವದ ಎನ್‌ಡಿಎ (NDA) 292 ಸೀಟುಗಳನ್ನು ಗೆದ್ದುಕೊಂಡು ಅತೀ ದೊಡ್ಡ ಒಕ್ಕೂಟವಾಗಿ ಹೊರ ಹೊಮ್ಮಿದೆ. ಈಗಾಗಲೇ ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ನೇತೃತ್ವದ ಜೆಡಿಯು ಈಗಾಗಲೇ ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ವ್ಯಕ್ತಪಡಿಸಿದೆ. ಇದಕ್ಕೆ ಬದಲಾಗಿ ಎರಡೂ ಪಕ್ಷಗಳು ಹೊಸ ಸರ್ಕಾರದಲ್ಲಿ ಪ್ರಮುಖ ಹುದ್ದೆಯಾದ ಸ್ಪೀಕರ್‌ ಪೋಸ್ಟ್‌ ನೀಡುವಂತೆ ಬೇಡಿಕೆ ಮುಂದಿಡುವ ಸಾಧ್ಯತೆ ಇದೆ.

VISTARANEWS.COM


on

Nitish Kumar
Koo

ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯಾಗಿದ್ದು (Election Results 2024), ಬಿಜೆಪಿ ನೇತೃತ್ವದ ಎನ್‌ಡಿಎ (NDA) 292 ಸೀಟುಗಳನ್ನು ಗೆದ್ದುಕೊಂಡು ಅತೀ ದೊಡ್ಡ ಒಕ್ಕೂಟವಾಗಿ ಹೊರ ಹೊಮ್ಮಿದೆ. ಈ ಮೂಲಕ ಬಹುಮತಕ್ಕೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ ಅನ್ನು ದಾಟಿದ್ದು, ಸರ್ಕಾರ ರಚನೆಯ ಕಸರತ್ತು ಆರಂಭವಾಗಿದೆ. ಆಂಧ್ರ ಪ್ರದೇಶದ ಚಂದ್ರಬಾಬು ನಾಯ್ಡು  (N Chandrababu Naidu) ನೇತೃತ್ವದ ಟಿಡಿಪಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ (Nitish Kumar) ನೇತೃತ್ವದ ಜೆಡಿಯು ಈಗಾಗಲೇ ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ವ್ಯಕ್ತಪಡಿಸಿದೆ. ಈ ಮಧ್ಯೆ ಎರಡೂ ಪಕ್ಷಗಳು ಹೊಸ ಸರ್ಕಾರದಲ್ಲಿ ಪ್ರಮುಖ ಹುದ್ದೆಯಾದ ಸ್ಪೀಕರ್‌ ಪೋಸ್ಟ್‌ ನೀಡುವಂತೆ ಬೇಡಿಕೆ ಮುಂದಿಡುವ ಸಾಧ್ಯತೆ ಇದೆ.

ಸ್ಪೀಕರ್ ಹುದ್ದೆಯನ್ನು ಮೈತ್ರಿ ಕೂಟಗಳಿಗೆ ನೀಡಬೇಕು ಎಂದು ಉಭಯ ಪಕ್ಷಗಳು ಈಗಾಗಲೇ ಬಿಜೆಪಿ ನಾಯಕತ್ವಕ್ಕೆ ಸೂಚಿಸಿವೆ ಎಂದು ಮೂಲಗಳು ತಿಳಿಸಿವೆ. 1990ರ ದಶಕದ ಕೊನೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದಾಗ ಟಿಡಿಪಿಯ ಜಿಎಂಸಿ ಬಾಲಯೋಗಿ ಸ್ಪೀಕರ್ ಆಗಿದ್ದರು.

ಭವಿಷ್ಯದಲ್ಲಿ ಸಂಭವಿಸಬಹುದಾದ ವಿಭಜನೆಯಿಂದ ಮೈತ್ರಿಯನ್ನು ರಕ್ಷಿಸುವ ಉದ್ದೇಶದಿಂದ ಪಕ್ಷಗಳು ಈ ಬೇಡಿಕೆ ಸಲ್ಲಿಸಿವೆ ಎಂದು ಅಂದಾಜಿಸಲಾಗಿದೆ. ಪಕ್ಷಾಂತರ ವಿರೋಧಿ ಕಾನೂನಿನಲ್ಲಿ ಸ್ಪೀಕರ್ ಪಾತ್ರವು ನಿರ್ಣಾಯಕವಾಗಿದೆ. ಈ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಸ್ಪೀಕರ್‌ ತೆಗೆದುಕೊಳ್ಳಬಹುದಾಗಿದ್ದು, ಇದೇ ಕಾರಣಕ್ಕೆ ಸ್ಪೀಕರ್‌ ಹುದ್ದೆ ಮುಖ್ಯ ಎನಿಸಿಕೊಂಡಿದೆ.

ಪ್ರಮುಖ ಖಾತೆಗಳಿಗೆ ಬೇಡಿಕೆ?

ಇದರ ಜತೆಗೆ ಕಿಂಗ್‌ ಮೇಕರ್‌ ಆಗಿರುವ ಟಿಡಿಪಿ ಕೇಂದ್ರ ಸರ್ಕಾರದಲ್ಲಿ ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಸಾರಿಗೆ ಖಾತೆಗಳನ್ನು ಕೋರಬಹುದು ಎಂದು ಮೂಲಗಳು ತಿಳಿಸಿವೆ. ಮಾತ್ರವಲ್ಲ ಕೃಷಿ, ಜಲಶಕ್ತಿ, ಐಟಿ ಮತ್ತು ರಾಜ್ಯ ಹಣಕಾಸು ಖಾತೆಗಳಿಗೂ ಬೇಡಿಕೆ ಇಡುವ ಸಾಧ್ಯತೆ ಇದೆ. ಒಟ್ಟಾರೆಯಾಗಿ ಟಿಡಿಪಿ 5-6 ಖಾತೆಗಳಿಗಾಗಿ ಹಕ್ಕು ಮಂಡಿಸಲಿದೆ.

ಬಹುಮತಕ್ಕೆ ಅಗತ್ಯವಾದ ಮ್ಯಾಜಿಕ್‌ ನಂಬರ್‌ 272. ಕಳೆದ ಬಾರಿ ಬಿಜೆಪಿ ಒಂದೇ 303 ಸೀಟುಗಳನ್ನು ಗೆದ್ದುಕೊಂಡಿತ್ತು. ಆದರೆ ಈ ಬಾರಿ ಕಮಲ ಪಡೆಗೆ ಕೇವಲ 240 ಸ್ಥಾನ ಸಿಕ್ಕಿದೆ. ಹೀಗಾಗಿ ಸರ್ಕಾರ ರಚಿಸಲು ಮಿತ್ರಪಕ್ಷಗಳ ಸಹಕಾರ ಅನಿವಾರ್ಯ. ಮಿತ್ರಪಕ್ಷಗಳೆಲ್ಲ ಸೇರಿ ಎನ್‌ಡಿಎಗೆ 292 ಸ್ಥಾನಗಳಿವೆ. ಇತ್ತ ಪ್ರತಿಪಕ್ಷಗಳ ʼಇಂಡಿಯಾʼ ಒಕ್ಕೂಟ 234 ಸ್ಥಾನ ಪಡೆದುಕೊಂಡಿದ್ದು, ಸರ್ಕಾರ ರಚನೆಯ ಪ್ರಯತ್ನದಲ್ಲಿದೆ. ಎನ್‌ಡಿಎ ಮಿತ್ರಪಕ್ಷಗಳನ್ನು ಸೆಳೆಯುವ ಪ್ರಯತ್ನವನ್ನು ಈಗಾಗಲೇ ಆರಂಭಿಸಿದೆ. ಬುಧವಾರ ʼಇಂಡಿಯಾʼ ಒಕ್ಕೂಟ ಕೂಡ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದೆ.

ಇದನ್ನೂ ಓದಿ: Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

ಜೂನ್‌ 8ರಂದು ಮೋದಿ ಪ್ರಮಾಣ ವಚವ ಸ್ವೀಕಾರ?

ಉತ್ತರ ಪ್ರದೇಶದ ವಾರಾಣಾಸಿಯಿಂದ ಸ್ಪರ್ಧಿಸಿ ಸತತ ಮೂರನೇ ಬಾರಿಗೆ ಆಯ್ಕೆಯಾಗಿರುವ ನರೇಂದ್ರ ಮೋದಿ ಜೂನ್‌ 8ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಅಂದು ಸಂಜೆ 4 ಗಂಟೆಗೆ ಸಮಾರಂಭ ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Continue Reading

ದೇಶ

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

Devendra Fadnavis: ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

VISTARANEWS.COM


on

Devendra Fadnavis
Koo

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ (Lok Sabha Election Result 2024) ಬಿಜೆಪಿಯು ಕಳಪೆ ಪ್ರದರ್ಶನ ತೋರಿರುವ ಕಾರಣ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ (Devendra Fadnavis) ಅವರು ಹಿನ್ನಡೆಯ ಹೊಣೆ ಹೊತ್ತು ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮಹಾರಾಷ್ಟ್ರದ (Maharashtra) ಒಟ್ಟು 48 ಕ್ಷೇತ್ರಗಳಲ್ಲಿ ಬಿಜೆಪಿಯು ಕೇವಲ 9 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಕಾರಣ ಉಪ ಮುಖ್ಯಮಂತ್ರಿ ಜವಾಬ್ದಾರಿಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ದೇವೇಂದ್ರ ಫಡ್ನವೀಸ್‌ ಅವರು ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.

ದೇವೇಂದ್ರ ಫಡ್ನವೀಸ್‌ ಅವರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಇನ್ನಷ್ಟು ಬಲಿಷ್ಠವಾಗಲು ನಾನು ಸಂಘಟನೆ ಮಟ್ಟದಲ್ಲಿ ಕೆಲಸ ಮಾಡಲು ಇಚ್ಛಿಸತ್ತೇನೆ. ಪಕ್ಷದ ಸಂಘಟನೆಗೆ ನನ್ನ ಆದ್ಯತೆ ಇರಲಿದೆ. ಪೂರ್ಣಪ್ರಮಾಣದಲ್ಲಿ ಪಕ್ಷ ಸಂಘಟನೆ ಮಾಡುತ್ತೇನೆ. ಹಾಗಾಗಿ, ಉಪ ಮುಖ್ಯಮಂತ್ರಿ ಹುದ್ದೆಯಿಂದ ನಿಯುಕ್ತಿಗೊಳಿಸಿ ಎಂಬುದಾಗಿ ಬಿಜೆಪಿ ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ” ಎಂಬುದಾಗಿ ತಿಳಿಸಿದ್ದಾರೆ.

2019ರ ಲೋಕಸಭೆ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿಯು ಒಟ್ಟು 48 ಕ್ಷೇತ್ರಗಳ ಪೈಕಿ 23 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ, ಬಿಜೆಪಿಯು ಈ ಬಾರಿ 9 ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕಾಂಗ್ರೆಸ್‌, ಶಿವಸೇನೆ (ಉದ್ಧವ್‌ ಠಾಕ್ರೆ ಬಣ) ಹಾಗೂ ಎನ್‌ಸಿಪಿ (ಶರದ್‌ ಪವಾರ್)‌ ಅವರ ಮಹಾ ವಿಕಾಸ್‌ ಅಘಾಡಿಯು ಈ ಬಾರಿ 30 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ, ಕಳೆದ ಬಾರಿ 1 ಕ್ಷೇತ್ರ ಗೆದ್ದಿದ್ದ ಕಾಂಗ್ರೆಸ್‌ ಈ ಬಾರಿ 13 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯು ರಾಜ್ಯದಲ್ಲಿ 17 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.

ನರೇಂದ್ರ ಮೋದಿ ರಾಜೀನಾಮೆ

ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ರಾಷ್ಟ್ರಪತಿಗಳು ರಾಜೀನಾಮೆ ಅಂಗೀಕರಿಸಿದ್ದಾರೆ. 17ನೇ ಲೋಕಸಭೆ ವಿಸರ್ಜನೆಯ ಆಗಬೇಕಿರುವ ಹಿನ್ನೆಲೆಯಲ್ಲಿ ಅವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊಮ್ಮಿರುವ ಎನ್‌ಡಿಎ ಸರಕಾರ ರಚನೆಯ ಹಕ್ಕು ಮಂಡಿಸಬೇಕಿದೆ. ಮಿತ್ರಪಕ್ಷಗಳ ಜತೆಗೆ ಸಮಾಲೋಚನೆಯ ಬಳಿಕ ಮೋದಿಯವರು ರಾಷ್ಟ್ರಪತಿಗಳ ಮುಂದೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಮೋದಿಯವರು ಉಸ್ತುವಾರಿ ಪ್ರಧಾನಿಯಾಗಿ ಮುಂದುವರಿಯಲಿದ್ದು, ಜೂನ್‌ 8ರಂದು ನೂತನ ಸರಕಾರದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ರಾಷ್ಟ್ರಪತಿಗಳು ನೂತನ ಪ್ರಧಾನಿ ಹಾಗೂ ಸಚಿವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

ಇದನ್ನೂ ಓದಿ: PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

Continue Reading
Advertisement
self harming
ಕರ್ನಾಟಕ25 mins ago

Self Harming: ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ

R Ashwin
ಕ್ರೀಡೆ31 mins ago

R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

Arvind Kejriwal
ದೇಶ55 mins ago

Arvind Kejriwal: ಕೇಜ್ರಿವಾಲ್‌ಗೆ ಮತ್ತೆ ಹಿನ್ನಡೆ; ಮಧ್ಯಂತರ ಜಾಮೀನು ಅರ್ಜಿ ವಜಾ-ನ್ಯಾಯಾಂಗ ಬಂಧನ ವಿಸ್ತರಣೆ

Election Results 2024
ಪ್ರಮುಖ ಸುದ್ದಿ1 hour ago

Bangalore Central Election Result 2024 : ಪಿ.ಸಿ ಮೋಹನ್​ ಮರ್ಯಾದೆ ಉಳಿಸಿದ ಮಹದೇವರಪುರ ಕ್ಷೇತ್ರ!

India vs Ireland
ಕ್ರೀಡೆ1 hour ago

India vs Ireland: ರೋಹಿತ್​ ಜತೆ ವಿರಾಟ್​ ಕೊಹ್ಲಿ ಇನಿಂಗ್ಸ್​ ಆರಂಭ?

J Shantha
Lok Sabha Election 20241 hour ago

J Shantha: ಅಣ್ಣ-ತಂಗಿಗೆ ಕಹಿ; ಕರ್ನಾಟಕದಲ್ಲಿ ಶ್ರೀರಾಮುಲು, ಆಂಧ್ರದಲ್ಲಿ ಜೆ. ಶಾಂತಾಗೆ ಸೋಲು!

Nitish Kumar
Lok Sabha Election 20241 hour ago

Nitish Kumar: ಎನ್‌ಡಿಎ ಸರ್ಕಾರಕ್ಕೆ ಜೆಡಿಯು, ಟಿಡಿಪಿ ಬೆಂಬಲ; ಸ್ಪೀಕರ್‌ ಹುದ್ದೆಗೆ ಎರಡೂ ಪಕ್ಷಗಳಿಂದ ಬೇಡಿಕೆ?

Kumar Bangarappa
ಪ್ರಮುಖ ಸುದ್ದಿ2 hours ago

Kumar Bangarappa: ಶಿವರಾಜ್ ಕುಮಾರ್ ನಮ್ಮೂರಿನ ಜಾತ್ರೆಯಲ್ಲಿ ಕುಣಿಯಲು ಅರ್ಜಿ ಹಾಕಲಿ! ಗೀತಾ ಸೋತ ಹಿನ್ನೆಲೆಯಲ್ಲಿ ಕುಮಾರ್ ಬಂಗಾರಪ್ಪ ಗೇಲಿ

Devendra Fadnavis
ದೇಶ2 hours ago

Devendra Fadnavis: ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ; ಡಿಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾದ ಫಡ್ನವೀಸ್

SCO vs ENG
ಕ್ರೀಡೆ2 hours ago

SCO vs ENG: ಮಳೆಯಿಂದ ಇಂಗ್ಲೆಂಡ್​-ಸ್ಕಾಟ್ಲೆಂಡ್​ ಪಂದ್ಯ ರದ್ದು; ನೇಪಾಳ ವಿರುದ್ಧ ಗೆದ್ದ ನೆದರ್ಲೆಂಡ್ಸ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌