ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ದಾಖಲೆ! 10.60 ಲಕ್ಷ ಕೋಟಿ ರೂ.ಗೆ ತಲುಪಿದ ಸಂಗ್ರಹ - Vistara News

ದೇಶ

ನಿವ್ವಳ ನೇರ ತೆರಿಗೆ ಸಂಗ್ರಹದಲ್ಲಿ ದಾಖಲೆ! 10.60 ಲಕ್ಷ ಕೋಟಿ ರೂ.ಗೆ ತಲುಪಿದ ಸಂಗ್ರಹ

direct tax: 2023-24 ಹಣಕಾಸು ವರ್ಷದಲ್ಲಿ ನಿವ್ವಳ ನೇರ ತೆರಿಗೆ ಸಂಗ್ರಹವು ಮತ್ತೊಂದು ಹಂತವನ್ನು ತಲುಪಿದ್ದು, ದಾಖಲೆ ಬರೆದಿದೆ.

VISTARANEWS.COM


on

Record in net direct tax collection and it reached Rs.10.60 lakh crore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನೇರ ತೆರಿಗೆ ಸಂಗ್ರಹದಲ್ಲಿ (Net Direct tax) ಭಾರತವು (India) ಹೊಸ ದಾಖಲೆಯನ್ನು ಬರೆದಿದೆ. ಶುಕ್ರವಾರ ಬಿಡುಗಡೆಯಾದ ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಭಾರತದ ಒಟ್ಟು ನೇರ ತೆರಿಗೆ ಸಂಗ್ರಹ ವರ್ಷದಿಂದ ವರ್ಷಕ್ಕೆ ಶೇ.18.59 ಏರಿಕೆಯಾಗಿ, 12.37 ಲಕ್ಷ ಕೋಟಿಗೆ ಹೆಚ್ಚಿದೆ. ಮರುಪಾವತಿಯ ನಂತರ ನಿವ್ವಳ ನೇರ ತೆರಿಗೆ ಸಂಗ್ರಹವು ಶೇ.21.82 ರಷ್ಟು ಜಿಗಿದು, 10.60 ಲಕ್ಷ ಕೋಟಿ ರೂ.ಗೆ ತಲುಪಿದೆ.

ಈ ತೆರಿಗೆ ಸಂಗ್ರಹಣೆಯು 2023-24 ಹಣಕಾಸು ವರ್ಷದ ನೇರ ತೆರಿಗೆಗಳ ಒಟ್ಟು ಬಜೆಟ್ ಅಂದಾಜುಗಳ ಶೇಕಡಾ 58.15 ರಷ್ಟಾಗಿದೆ ಎಂದು ಹಣಕಾಸು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

2023 ಏಪ್ರಿಲ್ 1ರಿಂದ ನವೆಂಬರ್ 9ರವರೆಗಿನ ಅವಧಿಯಲ್ಲಿ 1.77 ಲಕ್ಷ ಕೋಟಿ ರೂ. ರಿಫಂಡ್ ಮಾಡಲಾಗಿದೆ ಎಂದೂ ಹೇಳಲಾಗಿದೆ. ಕಾರ್ಪೊರೇಟ್ ಆದಾಯ ತೆರಿಗೆ (CIT) ಮತ್ತು ವೈಯಕ್ತಿಕ ಆದಾಯ ತೆರಿಗೆ (PIT) ಸಂಗ್ರಹಣೆಯಲ್ಲಿ ನಿವ್ವಳ ಬೆಳವಣಿಗೆಯು ಕ್ರಮವಾಗಿ ಶೇ.12.48 ಮತ್ತು ಶೇ.31.77 ಏರಿಕೆಯಾಗಿದೆ.

ಇದುವರೆಗೆ ಒಟ್ಟು ಆದಾಯ ಸಂಗ್ರಹಣೆದಲ್ಲಿ ಸಿಐಟಿ ಮತ್ತು ಪಿಐಟಿ ಬೆಳವಣಿಗೆಯ ದರವು 7.13 ಪ್ರತಿಶತದಷ್ಟಿದ್ದರೆ, ಪಿಐಟಿಯ ಬೆಳವಣಿಗೆಯ ದರವು 28.29 ಪ್ರತಿಶತ ಇದೆ ಎಂದು ಸಚಿವಾಲಯವು ತಿಳಿಸಿದೆ. ರಿಫಂಡ್ ಹೊಂದಾಣಿಕೆ ಮಾಡಿದ ಬಳಿಕ ಸಿಐಟಿ ನಿವ್ವಳ ಬೆಳವಣಿಗೆಯ ಸಂಗ್ರವು ಶೇ.12.48ರಷ್ಟಿದೆ ಮತ್ತು ಪಿಐಟಿ ಸಂಗ್ರವು ಶೇ.31.77ರಷ್ಟಿದೆ. ಎಸ್‌ಟಿಟಿ ಸೇರಿದಂತೆ ಪಿಐಟಿ ಸಂಗ್ರಹವು ಶೇ.31.26ರಷ್ಟಿದೆ ಎಂದು ಸಚಿವಾಲಯವು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ಸುದ್ದಿಯನ್ನೂ ಓದಿ: CM Siddaramaiah: ರಾಜ್ಯದ ವಾಣಿಜ್ಯ ತೆರಿಗೆ ಸಂಗ್ರಹ ದೇಶದಲ್ಲೇ ಅತ್ಯಧಿಕ ; ಆದರೆ, ಸಿಎಂ ಸಿದ್ದರಾಮಯ್ಯಗೆ ಮಾತ್ರ ಸಮಾಧಾನವಿಲ್ಲ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

CBI Arrest: ರೈಲ್ವೇ ಟೆಂಡರ್‌ನಲ್ಲಿ ಭಾರೀ ಗೋಲ್‌ಮಾಲ್;‌ ಸರ್ಕಾರಿ ಅಧಿಕಾರಿಗಳು ಸಿಬಿಐ ಬಲೆಗೆ

CBI Arrest: ರೈಲ್ವೇ ಟೆಂಡರ್‌ಗೆ ಸಂಬಂಧಿಸಿದಂತೆ ಬರೋಬ್ಬರಿ 11ಲಕ್ಷ ರೂ. ಹಣ ಮತ್ತು ಚಿನ್ನವನ್ನು ಲಂಚವಾಗಿ ಪಡೆದ ಆರೋಪದಲ್ಲಿ ಏಳು ಮಂದಿ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಏಳು ಮಂದಿಯನ್ನು ಅರೆಸ್ಟ್‌ ಮಾಡಿದೆ.

VISTARANEWS.COM


on

CBI Arrest
Koo

ಹೊಸಿದಿಲ್ಲಿ: ರೈಲ್ವೇ ಟೆಂಡರ್‌ನಲ್ಲಿ ಅಕ್ರಮ ನಡೆದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಐವರು ಸರ್ಕಾರಿ ಅಧಿಕಾರಿಗಳು ಸೇರಿದಂತೆ ಬರೋಬ್ಬರಿ ಏಳು ಮಂದಿಯನ್ನು ಕೇಂದ್ರೀಯ ತನಿಖಾ ಸಂಸ್ಥೆ(CBI Arrest) ಅರೆಸ್ಟ್‌ ಮಾಡಿದೆ. ವಿಭಾಗೀಯ ರೈಲ್ವೆ ಮ್ಯಾನೇಜರ್ (DRM), ವಿಭಾಗೀಯ ಹಣಕಾಸು ವ್ಯವಸ್ಥಾಪಕ (Sr. DFM), ನಿವೃತ ಹಿರಿಯ. ವಿಭಾಗೀಯ ಎಂಜಿನಿಯರ್ (Sr. DEN) ಸಮನ್ವಯ, ಕಛೇರಿ ಸೂಪರಿಂಟೆಂಡೆಂಟ್, ದಕ್ಷಿಣ ಮಧ್ಯ ರೈಲ್ವೆಯ ಖಾತೆ ಸಹಾಯಕ, ಗುಂತಕಲ್ ವಿಭಾಗ (ಆಂಧ್ರ ಪ್ರದೇಶ) ಮತ್ತು ಇಬ್ಬರು ಖಾಸಗಿ ವ್ಯಕ್ತಿಗಳು ಅವುಗಳೆಂದರೆ ಬೆಂಗಳೂರು ಮೂಲದ ಸಂಸ್ಥೆಯ ನಿರ್ದೇಶಕ (ಖಾಸಗಿ ವ್ಯಕ್ತಿ) ಮತ್ತು ಇನ್ನೊಬ್ಬ ಖಾಸಗಿ ವ್ಯಕ್ತಿಯನ್ನು ಸಿಬಿಐ ಅರೆಸ್ಟ್‌ ಮಾಡಿದೆ.

ರೈಲ್ವೇ ಟೆಂಡರ್‌ಗೆ ಸಂಬಂಧಿಸಿದಂತೆ ಬರೋಬ್ಬರಿ 11ಲಕ್ಷ ರೂ. ಹಣ ಮತ್ತು ಚಿನ್ನವನ್ನು ಲಂಚವಾಗಿ ಪಡೆದ ಆರೋಪದಲ್ಲಿ ಏಳು ಮಂದಿ ವಿರುದ್ಧ ಕೇಸ್‌ ದಾಖಲಾಗಿತ್ತು. ಇದೀಗ ಈ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಏಳು ಮಂದಿಯನ್ನು ಅರೆಸ್ಟ್‌ ಮಾಡಿದೆ.

ಮತ್ತೊಂದು ಪ್ರಕರಣದಲ್ಲಿ, ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ (ಸಿಜಿಎಸ್‌ಟಿ) ಇನ್ಸ್‌ಪೆಕ್ಟರ್ ಒಬ್ಬರನ್ನು ಗುರುವಾರ ಗುಜರಾತ್‌ನ ರಾಜ್‌ಕೋಟ್‌ನಲ್ಲಿ 2.5 ಲಕ್ಷ ರೂಪಾಯಿ ಲಂಚ ಕೇಳಿ ಸ್ವೀಕರಿಸಿದ ಆರೋಪದ ಮೇಲೆ ಸಿಬಿಐ ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೀನ್ ಧಂಕರ್ ಅವರು ಕಾನೂನು ಪ್ರಕಾರ ವ್ಯವಹಾರ ನಡೆಸುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯ ಸಂಸ್ಥೆಯಿಂದ ಲಂಚ ಕೇಳಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

“ದಾಖಲೆಗಳಲ್ಲಿ ನಮೂದಿಸಿರುವಂತೆ ಯಾವುದೇ ಸರಕುಗಳನ್ನು ಸಂಸ್ಥೆಯಿಂದ ಹೊರಕ್ಕೆ ಸಾಗಿಸಲಾಗುತ್ತಿಲ್ಲ ಎಂದು ಅವರು ಹೇಳಿದರು. ನಂತರ ಅವರು 2.5 ಲಕ್ಷ ರೂಪಾಯಿ ಲಂಚವನ್ನು ಕೇಳಿದರು ಮತ್ತು ಸಂಸ್ಥೆಯ ಜಿಎಸ್ಟಿ ಸಂಖ್ಯೆಯನ್ನು ರದ್ದುಗೊಳಿಸುವಂತೆ ಬೆದರಿಕೆ ಹಾಕಿದರು” ಎಂದು ಕೇಂದ್ರ ತನಿಖಾ ದಳದ ಪ್ರಕಟಣೆ ತಿಳಿಸಿದೆ.

ದೂರು ಪಡೆದ ನಂತರ ಸಿಬಿಐ ಬಲೆ ಬೀಸಿತ್ತು. ಆ ವೇಳೆ ಧಂಕರ್‌ ಸಿಬಿಐ ಬಲೆಗೆ ಬಿದ್ದಿದರು. ತನಿಖೆಯ ಭಾಗವಾಗಿ ಆರೋಪಿಗಳಿಗೆ ಸಂಪರ್ಕವಿರುವ ರಾಜ್‌ಕೋಟ್‌ನಲ್ಲಿರುವ ಆವರಣವನ್ನು ಶೋಧಿಸಲಾಗುತ್ತಿದೆ ಎಂದು ಸಿಬಿಐ ಪ್ರಕಟಣೆ ತಿಳಿಸಿದೆ.

ಕೆಲವು ವಾರಗಳ ಹಿಂದೆ ಸಿಬಿಐ, ಕಸ್ಟಮ್ಸ್, ಮಾದಕ ದ್ರವ್ಯ ಮತ್ತು ಆದಾಯ ತೆರಿಗೆ ಅಧಿಕಾರಿಗಳಂತೆ ನಟಿಸುತ್ತಿದ್ದ ಗ್ಯಾಂಗ್‌ವೊಂದು ಬಹುರಾಷ್ಟ್ರೀಯ ಕಂಪನಿಯ ನಿವೃತ್ತ ಹಿರಿಯ ಅಧಿಕಾರಿಯೊಬ್ಬರಿಗೆ 85 ಲಕ್ಷ ರೂ. ವಂಚಿಸಿರುವ ಕುರಿತು ಆಂಧ್ರಪ್ರದೇಶದ ವಿಶಾಖಪಟ್ಟಣಂ ಮತ್ತು ದೆಹಲಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಣವನ್ನು ಚೆಕ್ ಮೂಲಕ ಪಡೆದ ಗ್ಯಾಂಗ್ ದೆಹಲಿಯ ಉತ್ತಮ್ ನಗರದಲ್ಲಿ ಹೆಚ್‌ಡಿಎಫ್‌ಸಿ ಖಾತೆಯನ್ನು ನಿರ್ವಹಿಸುತ್ತಿದ್ದ ‘ರಾಣಾ ಗಾರ್ಮೆಂಟ್ಸ್’ ಎಂಬ ಕಂಪನಿಗೆ ವರ್ಗಾಯಿಸಿದೆ. ವಿಶಾಖಪಟ್ಟಣಂನಲ್ಲಿ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಪ್ರಕಾರ, ಗ್ಯಾಂಗ್ ‘ರಾಣಾ ಗಾರ್ಮೆಂಟ್ಸ್’ ನಡೆಸುತ್ತಿದ್ದ ಎಚ್‌ಡಿಎಫ್‌ಸಿ ಖಾತೆಯಿಂದ ಭಾರತದಾದ್ಯಂತ 105 ಖಾತೆಗಳಿಗೆ ಈ ಹಣವನ್ನು ವರ್ಗಾಯಿಸಿದೆ. ಈ ಕುರಿತು ಹೆಚ್‌ಡಿಎಫ್‌ಸಿ ಬ್ಯಾಂಕ್‌ನ ಉತ್ತಮ್ ನಗರ ಶಾಖೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ:Project Zorawar: ಚೀನಾಗೆ ಪೆಟ್ಟು ಕೊಡಲು ದೇಶೀಯವಾಗಿ ಯುದ್ಧ ಟ್ಯಾಂಕ್‌ ಉತ್ಪಾದನೆ; ಏನಿವುಗಳ ವಿಶೇಷ?

Continue Reading

ದೇಶ

Building Collapse: ಐದು ಅಂತಸ್ತಿನ ಕಟ್ಟಡ ಧರಾಶಾಹಿ- ಏಳು ಜನ ದಾರುಣ ಸಾವು

Building Collapse: ಘಟನೆ ಬಗ್ಗೆ ಸೂರತ್‌ನ ಅಗ್ನಿಶಾಮಕ ಅಧಿಕಾರಿ ಬಸಂತ್‌ ಪರೀಕ್‌ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಲ್ಲಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ ಎಂದು ಹೇಳಿದ್ದಾರೆ

VISTARANEWS.COM


on

Building Collapse
Koo

ಅಹ್ಮದಾಬಾದ್‌: ಗೇಮಿಂಗ್‌ ಜೋನ್‌(Gaming zone)ನಲ್ಲಿ ಭಾರೀ ಬೆಂಕಿ ಅವಘಡ(Fire Accident)ದ ಬಳಿಕ ಗುಜರಾತ್‌(Gujarat)ನಲ್ಲಿ ಇದೀಗ ಮತ್ತೊಂದು ದುರಂತ ಸಂಭವಿಸಿದೆ. ಐದು ಅಂತಸ್ತಿನ ಕಟ್ಟಡ(Building Collapse) ಧರಾಶಾಹಿಯಾಗಿದ್ದು, ಏಳು ಜನ ಧಾರುಣವಾಗಿ ಮೃತಪಟ್ಟಿದ್ದಾರೆ. ಸೂರತ್‌ನಲ್ಲಿ ಈ ಘಟನೆ ನಡೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಅವಶೇಷದಡಿಯಲ್ಲಿ ಹಲವು ಜನ ಸಿಲುಕಿರುವ ಸಾಧ್ಯತೆ ಇದೆ.

ಘಟನೆ ಬಗ್ಗೆ ಸೂರತ್‌ನ ಅಗ್ನಿಶಾಮಕ ಅಧಿಕಾರಿ ಬಸಂತ್‌ ಪರೀಕ್‌ ಮಾಹಿತಿ ನೀಡಿದ್ದು, ಶನಿವಾರ ರಾತ್ರಿ ಈ ದುರಂತ ಸಂಭವಿಸಿದೆ. ರಾತ್ರಿಯಿಡೀ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಏಳು ಮೃತ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ಕನಿಷ್ಠ ಆರರಿಂದ ಏಳು ಜನರು ಇನ್ನೂ ಅವಶೇಷಗಳಲ್ಲಿ ಸಿಕ್ಕಿಬಿದ್ದಿರುವ ಭಯವಿದ್ದು, ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಎಸ್‌ಡಿಆರ್‌ಎಫ್ (ರಾಜ್ಯ ವಿಪತ್ತು ನಿರ್ವಹಣಾ ಪಡೆ) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ನಡೆಸುತ್ತಿವೆ ಎಂದು ಹೇಳಿದ್ದಾರೆ.

ಸುಮಾರು ಐದು ಫ್ಲಾಟ್‌ಗಳಿಗಳನ್ನು ಹೊಂದಿರುವ ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ. ಈ ಪ್ರದೇಶದಲ್ಲಿ ಕಾರ್ಖಾನೆಗಳಲ್ಲಿ ಕೆಲಸ ಮಾಡುವವರು ಈ ಫ್ಲ್ಯಾಟ್‌ನಲ್ಲಿ ವಾಸವಾಗಿದ್ದರು. ರಕ್ಷಣಾ ಕಾರ್ಯವನ್ನು ಪ್ರಾರಂಭಿಸಿದಾಗ, ಒಳಗೆ ಸಿಲುಕಿರುವವರ ಧ್ವನಿಯನ್ನು ನಾವು ಕೇಳಿದ್ದೇವೆ. ನಾವು ಮಹಿಳೆಯನ್ನು ಜೀವಂತವಾಗಿ ಅವಶೇಷಗಳಿಂದ ರಕ್ಷಿಸಿ ಆಸ್ಪತ್ರೆಗೆ ಕಳುಹಿಸಿದ್ದೇವೆ. ಸುಮಾರು ಐದು ಜನರು ಇನ್ನೂ ಒಳಗೆ ಸಿಲುಕಿರುವ ಶಂಕೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಮೇ 25ರಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. 9 ಮಕ್ಕಳು, ಮಹಿಳೆಯರು ಸೇರಿ 32 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಗೇಮಿಂಗ್‌ ಜೋನ್‌ ಕಟ್ಟಡದಲ್ಲಿ ನೂರಾರು ಮಕ್ಕಳು ಹಾಗೂ ಅವರ ತಾಯಂದಿರು ಇದ್ದರು. ವೀಕೆಂಡ್‌ ಇರುವ ಕಾರಣ ಮಕ್ಕಳು ಆಟವಾಡಲಿ ಎಂಬುದಾಗಿ ಟಿಆರ್‌ಪಿ ಗೇಮಿಂಗ್‌ ಜೋನ್‌ಗೆ ಕರೆದುಕೊಂಡು ಹೋಗಿದ್ದರು. ಇದೇ ವೇಳೆ ಏಕಾಏಕಿ ಅಗ್ನಿ ದುರಂತ ಸಂಭವಿಸಿದ ಕಾರಣ 32 ಜನ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಇವರಲ್ಲಿ ಮಹಿಳೆಯರು ಹಾಗೂ ಮಕ್ಕಳು ಕೂಡ ಸೇರಿದ್ದಾರೆ. ಗೇಮಿಂಗ್‌ ಜೋನ್‌ನಲ್ಲಿ ಅಗ್ನಿ ದುರಂತ ಸಂಭವಿಸಲು ನಿಖರ ಕಾರಣ ತಿಳಿದುಬಂದಿಲ್ಲ.

ರಾಜ್‌ಕೋಟ್‌ ಅಗ್ನಿ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡುವುದಾಗಿ ಗುಜರಾತ್‌ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನೂ ಘೋಷಣೆ ಮಾಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನೂ (SIT) ರಚಿಸಲಾಗಿದೆ.

ಇದನ್ನೂ ಓದಿ:Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Continue Reading

ದೇಶ

Rain News: ವರುಣನ ಆರ್ಭಟ; ಮಳೆ ಸಂಬಂಧಿ ಅವಘಡಗಳಿಗೆ 24 ಗಂಟೆಯಲ್ಲಿ 13 ಜನ ಬಲಿ

Rain News: ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

VISTARANEWS.COM


on

Rain News
Koo

ಲಖನೌ: ಕರ್ನಾಟಕದ (Karnataka) ಹಲವೆಡೆ, ಅದರಲ್ಲೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಸ್ತೆಗಳು ಕೊಚ್ಚಿಕೊಂಡು ಹೋಗಿದ್ದು, ಮನೆಗಳು ಕುಸಿದಿವೆ. ಇದರಿಂದ ನಾಡಿನ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಕರ್ನಾಟಕ ಮಾತ್ರವಲ್ಲ, ಉತ್ತರ ಪ್ರದೇಶದಲ್ಲೂ (Uttar Pradesh) ವರುಣನ ಆರ್ಭಟವು (Rain News) ಜೋರಾಗಿದೆ. ಕಳೆದ 24 ಗಂಟೆಗಳಲ್ಲಿಯೇ ಮಳೆ ಸಂಬಂಧಿ ಅವಘಡಗಳಿಂದ 13 ಜನ ಮೃತಪಟ್ಟಿದ್ದು, ನೂರಾರು ಜನ ಗಾಯಗೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಮಳೆ ಸಂಬಂಧಿ ಅವಘಡಗಳ ಕುರಿತು ಉತ್ತರ ಪ್ರದೇಶ ಪರಿಹಾರ ಇಲಾಖೆಯ ಅಧಿಕಾರಿಗಳೇ ಮಾಹಿತಿ ನೀಡಿದ್ದಾರೆ. ಮಳೆ ಸಂಬಂಧಿ ಅವಘಡಗಳಾದ ಸಿಡಿಲು, ಕಟ್ಟಡ ಕುಸಿತ, ಭೂಕುಸಿತ ಸೇರಿ ಹಲವು ರೀತಿಯ ಅವಘಡಗಳಿಂದ 13 ಜನ ಮೃತಪಟ್ಟಿದ್ದಾರೆ. ಶುಕ್ರವಾರ ಸಂಜೆ 6.30ರಿಂದ ಶನಿವಾರ ಸಂಜೆ 6.30ರ ಅವಧಿಯ 24 ಗಂಟೆಗಳಲ್ಲಿಯೇ ಇಷ್ಟು ಜನ ಮೃತಪಟ್ಟಿದ್ದಾರೆ. ನೂರಾರು ಜನ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಉತ್ತರ ಪ್ರದೇಶದಲ್ಲಿ ಸರಾಸರಿ 18.3 ಮಿಲಿಮೀಟರ್‌ ಮಳೆಯಾಗಿದೆ. ಫತೇಪುರದಲ್ಲಿ ಇಬ್ಬರು, ರಾಯ್‌ಬರೇಲಿಯಲ್ಲಿ ಇಬ್ಬರು, ಬುಲಂದ್‌ಶಹರ್‌, ಕನೌಜ್‌, ಮೈನ್‌ಪುರಿ, ಕೌಶಂಬಿ, ಫಿರೋಜಾಬಾದ್‌, ಪ್ರತಾಪ್‌ಗಢ ಹಾಗೂ ಉನ್ನಾವೋ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉತ್ತರ ಪ್ರದೇಶದ 75 ಜಿಲ್ಲೆಗಳ ಪೈಕಿ 45 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಸತತ ಮಳೆಯಿಂದಾಗಿ ರಾಜ್ಯದ ಬಹುತೇಕ ನದಿಗಳು ಉಕ್ಕಿ ಹರಿಯುತ್ತಿವೆ. ಮೀನುಗಾರಿಕೆಗೆ ತೆರಳದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಅಸ್ಸಾಂನಲ್ಲಿ 52 ಮಂದಿ ಸಾವು

ಅಸ್ಸಾಂನಲ್ಲಿ ಮಳೆಯಿಂದಾಗಿ ಕಳೆದ 24 ಗಂಟೆಗಳಲ್ಲಿ ಸುಮಾರು 52 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ನೆರೆಯಿಂದಾಗಿ ಅಂದಾಜು 24 ಲಕ್ಷ ಮಂದಿ ತೊಂದರೆಗೆ ಒಳಗಾಗಿದ್ದಾರೆ. ರಾಜ್ಯದ ಮುಕ್ಕಾಲು ಭಾಗಗಳಲ್ಲಿ ನೆರೆ ಆವರಿಸಿದೆ. ರಾಜ್ಯದ 35 ಜಿಲ್ಲೆಗಳ ಪೈಕಿ 30 ಜಿಲ್ಲೆಗಳು ತೀವ್ರವಾಗಿ ಪ್ರವಾಹದ ಹೊಡೆತಕ್ಕೆ ಸಿಲುಕಿವೆ. ಒಂದು ತಿಂಗಳಿನಿಂದ ಇಲ್ಲಿನ ಪರಿಸ್ಥಿತಿ ಭೀಕರವಾಗಿದ್ದು, ಪ್ರಾಣಹಾನಿಯ ಜತೆಗೆ ವ್ಯಾಪಕ ಪ್ರಮಾಣದಲ್ಲಿ ಬೆಳೆ ನಾಶ ಉಂಟಾಗಿದೆ. ಈ ಈಶಾನ್ಯ ರಾಜ್ಯದ ಸಾವಿರಾರು ಜನರು ಸ್ಥಳಾಂತರಗೊಂಡಿದ್ದಾರೆ ಮತ್ತು ನಿರಾಶ್ರಿತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Continue Reading

ದೇಶ

Mid Day Meal: ಮಕ್ಕಳ ಬಿಸಿಯೂಟದಲ್ಲೂ ಕಳ್ಳಾಟ, ವಿದ್ಯಾರ್ಥಿಗಳಿಗೆ ಸಿಗೋದು ಬರೀ ಅನ್ನ-ಅರಿಶಿಣ; Video ಇದೆ

Mid Day Meal: ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಆದರೆ, ಮಕ್ಕಳಿಗೆ ಸಿಗುತ್ತಿರುವುದು ಮಾತ್ರ ಅರಿಶಿಣ ಮಿಶ್ರಿತ ಅನ್ನ. ಸಾಮಾಜಿಕ ಜಾಲತಾಣದಲ್ಲಿ ಮಕ್ಕಳ ದುಸ್ಥಿತಿಯ ವಿಡಿಯೊ ವೈರಲ್‌ ಆಗಿದೆ.

VISTARANEWS.COM


on

Mid Day Meal
Koo

ರಾಯ್‌ಪುರ: ಬಡವರ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಸಿಗಲಿ, ಊಟದ ಆಸೆಗಾಗಿಯಾದರೂ ಬಡವರ ಮಕ್ಕಳು ಶಾಲೆಗೆ ಬಂದು, ವಿದ್ಯಾವಂತರಾಗಲಿ ಎಂದು ಕರ್ನಾಟಕ ಸೇರಿ ದೇಶದ ಹಲವು ರಾಜ್ಯಗಳ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟದ (Mid Day Meal) ಯೋಜನೆಗಳನ್ನು ಜಾರಿಗೆ ತರಲಾಗಿದೆ. ಆದರೆ, ಸರ್ಕಾರಗಳು ಜಾರಿಗೆ ತಂದಿರುವ ಇಂತಹ ಉತ್ತಮ ಯೋಜನೆಗಳಲ್ಲೂ, ಮಕ್ಕಳ ಊಟದಲ್ಲೂ ಅಧಿಕಾರಿಗಳು ಕಳ್ಳಾಟ ಆಡುತ್ತಿದ್ದಾರೆ. ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಬಿಸಿಯೂಟ ನೀಡುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಲೇ ಇರುತ್ತವೆ. ಇದಕ್ಕೆ ನಿದರ್ಶನ ಎಂಬಂತೆ, ಛತ್ತೀಸ್‌ಗಢದ (Chhattisgarh) ಶಾಲೆಯೊಂದರಲ್ಲಿ ಮಕ್ಕಳಿಗೆ ಬಿಸಿಯೂಟ ಯೋಜನೆ ಅನ್ವಯ ಬರೀ ಅನ್ನ ಹಾಗೂ ಅರಿಶಿಣ ಮಿಶ್ರಣ ಮಾಡಿ, ಅದನ್ನೇ ನೀಡಲಾಗಿದೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಹೌದು, ಛತ್ತೀಸ್‌ಗಢದ ಬಲರಾಮ್‌ಪುರ ಜಿಲ್ಲೆಯ ಬಿಜಾಕುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಇಷ್ಟೊಂದು ಕಳಪೆ ಆಹಾರವನ್ನು ನೀಡಲಾಗುತ್ತಿದೆ. ಮಕ್ಕಳು ಅರಿಶಿಣ ಮಿಕ್ಸ್‌ ಆಗಿರುವ ಅನ್ನವನ್ನು ಸೇವಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 43 ವಿದ್ಯಾರ್ಥಿಗಳು ಓದುತ್ತಿದ್ದು, ಬಹುತೇಕರು ಬಡವರ ಮಕ್ಕಳಾಗಿದ್ದಾರೆ. ಆದರೆ, ಇವರಿಗೆ ಕಳೆದ ಒಂದು ವಾರದಿಂದ ಬಿಸಿಯೂಟದಲ್ಲಿ ತರಕಾರಿ ನೀಡದೆ, ಬರೀ ಅರಿಶಿಣ ಮಿಶ್ರಣ ಆಗಿರುವ ಅನ್ನ ನೀಡಲಾಗುತ್ತಿದೆ. ಇದನ್ನು ಶಾಲೆಯ ಅಧಿಕಾರಿಗಳೇ ದೃಢಪಡಿಸಿದ್ದಾರೆ.

“ಕಳೆದ ಒಂದು ವಾರದಿಂದ ತರಕಾರಿ ಪೂರೈಸುವವರು ಶಾಲೆಗೆ ತರಕಾರಿ ಪೂರೈಸುತ್ತಿಲ್ಲ. ಎಷ್ಟೇ ಪ್ರಯತ್ನ ಪಟ್ಟರೂ ತರಕಾರಿ ವ್ಯವಸ್ಥೆ ಆಗಿಲ್ಲ. ಹಾಗಾಗಿ, ಮಕ್ಕಳಿಗೆ ಅನ್ನ-ಸಾರು ಇಲ್ಲವೇ ಅರಿಶಿಣ ಮಿಶ್ರಿತ ಅನ್ನ ನೀಡುತ್ತಿದ್ದೇವೆ” ಎಂದು ಶಾಲೆಯ ಮುಖ್ಯೋಪಾಧ್ಯಾಯ ತಿಳಿಸಿದ್ದಾರೆ. ಇವರ ಆರೋಪಗಳಿಗೆ ತರಕಾರಿ ಪೂರೈಸುವವರು ಪ್ರತಿಕ್ರಿಯಿಸಿದ್ದು, “ಶಾಲೆಗೆ ತರಕಾರಿ ಪೂರೈಸಿದ್ದಕ್ಕೆ ಹಲವು ತಿಂಗಳಿಂದ ಹಣ ನೀಡಿಲ್ಲ. ಇದರಿಂದಾಗಿ ನಾವು ತರಕಾರಿ ಪೂರೈಸುತ್ತಿಲ್ಲ” ಎಂದು ಹೇಳಿದ್ದಾರೆ. ಹೀಗೆ ಆರೋಪ-ಪ್ರತ್ಯಾರೋಪದ ಮಧ್ಯೆ ಮಕ್ಕಳು ಪೌಷ್ಟಿಕಾಂಶಯುಕ್ತ ಊಟದಿಂದ ವಿಮುಖರಾಗುತ್ತಿದ್ದಾರೆ. ಇದಕ್ಕೆ ಗ್ರಾಮಸ್ಥರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಅಪೌಷ್ಟಿಕತೆ ಪ್ರಮಾಣ ಶೇ.17.76ರಷ್ಟಿದೆ. ಇದರಿಂದಾಗಿ ಬಿಸಿಯೂಟ ಯೋಜನೆಗೆ ರಾಜ್ಯ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತದೆ. ಬಿಸಿಯೂಟದಲ್ಲಿ ಮಕ್ಕಳಿಗೆ ಚಪಾತಿ, ಅನ್ನ, ಸಾಂಬಾರ್‌, ಬೇಳೆ-ಕಾಳಿನಿಂದ ಮಾಡಿದ ಪಲ್ಯ ಸೇರಿ ಹಲವು ರೀತಿಯ ತಿನಿಸುಗಳು ಇರಬೇಕು ಎಂಬ ನಿಯಮ ರೂಪಿಸಿದೆ. ಇದಕ್ಕಾಗಿ ವಾರ್ಷಿಕ ಕೋಟ್ಯಂತರ ರೂ. ಖರ್ಚು ಮಾಡುತ್ತಿದೆ. ಇಷ್ಟಾದರೂ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಯ ನಿರ್ಲಕ್ಷ್ಯದಿಂದ ಮಕ್ಕಳು ಅಪೌಷ್ಟಿಕಾಂಶಯುಕ್ತ ಆಹಾರ ಸೇವಿಸುವಂತಾಗಿದೆ. ಮಕ್ಕಳು ಬರೀ ಅನ್ನ ತಿನ್ನುತ್ತಿರುವ ವಿಡಿಯೊ ವೈರಲ್‌ ಆಗುತ್ತಲೇ ಜಿಲ್ಲಾ ಶಿಕ್ಷಣ ಅಧಿಕಾರಿ ದೇವೇಂದ್ರ ನಾಥ್‌ ಮಿಶ್ರಾ ಪ್ರತಿಕ್ರಿಯಿಸಿದ್ದು, “ಪ್ರಕರಣ ಈಗ ಗಮನಕ್ಕೆ ಬಂದಿದೆ. ಕೂಡಲೇ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಇದನ್ನೂ ಓದಿ: Students Fall Sick: ಬಿಸಿಯೂಟ ಸೇವಿಸಿ ಸರ್ಕಾರಿ ಶಾಲೆಯ 70ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ವಿಚಾರಿಸಿದ ಶಾಸಕ

Continue Reading
Advertisement
Sonakshi Sinha has a hilarious take on her pregnancy
ಬಾಲಿವುಡ್4 mins ago

Sonakshi Sinha: ಮದುವೆಯಾದ ಕೆಲವೇ ದಿನಗಳಲ್ಲಿ ಸೋನಾಕ್ಷಿ ಸಿನ್ಹಾ ಗರ್ಭಿಣಿ? ಆಸ್ಪತ್ರೆಯಲ್ಲಿ ನಟಿ ಹೇಳಿದ್ದೇನು?

ATM Robbery
ಕರ್ನಾಟಕ36 mins ago

ATM Robbery: ಎಟಿಎಂನಲ್ಲಿ 15 ಲಕ್ಷ ರೂ. ದೋಚಿದ ಕಳ್ಳರು; ಗ್ಯಾಸ್ ಕಟರ್ ಬಳಸಿ ಕೃತ್ಯ!

Rohit Sharma
ಕ್ರೀಡೆ41 mins ago

Rohit Sharma: ಚಾಂಪಿಯನ್ಸ್​ ಟ್ರೋಫಿಗೂ ರೋಹಿತ್​ ನಾಯಕ; ಖಚಿತಪಡಿಸಿದ ಜಯ್​ ಶಾ

Attempt To Murder
ಬೆಂಗಳೂರು ಗ್ರಾಮಾಂತರ48 mins ago

Attempt To Murder: ಬಾಯಿಗೆ ಬಂದಂತೆ ಬೈದ್ರು ಅಂತ ಸಿಟ್ಟು; ಮಾಲೀಕನಿಗೆ ಹೊಡೆದು ಕೋಮಾಗೆ ಕಳಿಸಿದ ಸಪ್ಲೇಯರ್‌!

murder case
ಶಿವಮೊಗ್ಗ2 hours ago

Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

MS Dhoni Birthday
ಕ್ರೀಡೆ2 hours ago

MS Dhoni Birthday: ಧೋನಿಯ ಪಾದ ಮುಟ್ಟಿ ನಮಸ್ಕರಿಸಿದ ಪತ್ನಿ; ವಿಡಿಯೊ ವೈರಲ್​

Dengue Cases in Hassan
ಪ್ರಮುಖ ಸುದ್ದಿ2 hours ago

Dengue Cases in Hassan: ಹಾಸನದಲ್ಲಿ ಶಂಕಿತ ಡೆಂಗ್ಯೂಗೆ 26 ವರ್ಷದ ಯುವತಿ ಬಲಿ

Actor Darshan Ninasam Ratnakka shocked to hear the news of Darshan
ಸ್ಯಾಂಡಲ್ ವುಡ್2 hours ago

Actor Darshan: ದರ್ಶನ್‌ ಸುದ್ದಿ ಕೇಳಿ ಆಘಾತವಾಗಿತ್ತು ಎಂದು ಬಿಕ್ಕಿ ಬಿಕ್ಕಿ ಅತ್ತ ನೀನಾಸಂ ರತ್ನಕ್ಕ!

Bhadra Dam
ಶಿವಮೊಗ್ಗ2 hours ago

Bhadra Dam: ಕೊನೆಗೂ ಭದ್ರಾ ಡ್ಯಾಂನ ರಿವರ್ ಗೇಟ್‌ ದುರಸ್ತಿ; ಸೋರಿಕೆಯಾಗುತ್ತಿದ್ದ ನೀರಿಗೆ ತಡೆ

Rat Fever
ಪ್ರಮುಖ ಸುದ್ದಿ2 hours ago

Rat fever: ಡೆಂಗ್ಯೂ ರುದ್ರ ನರ್ತನದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ; ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ9 hours ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ20 hours ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ23 hours ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ1 day ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

Food Poisoning
ರಾಯಚೂರು1 day ago

Food Poisoning : ಮೊರಾರ್ಜಿ ವಸತಿ ಶಾಲೆ ಅವ್ಯವಸ್ಥೆ; ಊಟ ಸೇವಿಸಿದ 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Wild Animal Attack Elephant attack
ರಾಮನಗರ1 day ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

karnataka Weather Forecast
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ2 days ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ2 days ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ2 days ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

ಟ್ರೆಂಡಿಂಗ್‌