Tarek Fatah Dead: ಖ್ಯಾತ ಪಾಕ್-ಕೆನಡಿಯನ್ ಅಂಕಣಕಾರ, ಲೇಖಕ ತಾರೆಕ್ ಫತಾಹ್ ನಿಧನ - Vistara News

ದೇಶ

Tarek Fatah Dead: ಖ್ಯಾತ ಪಾಕ್-ಕೆನಡಿಯನ್ ಅಂಕಣಕಾರ, ಲೇಖಕ ತಾರೆಕ್ ಫತಾಹ್ ನಿಧನ

Tarek Fatah Dead: ಪಾಕಿಸ್ತಾನದಲ್ಲಿ ಜನಿಸಿದ ಭಾರತೀಯ ಮತ್ತು ಇಸ್ಲಾಮ್‌ನಲ್ಲಿ ಜನಿಸಿದ ಪಂಜಾಬಿ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಪಾಕಿಸ್ತಾನ ಮೂಲದ ಕೆನಡಿಯನ್ ತಾರೆಕ್ ಫತಾಹ್, ದೀರ್ಘ ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ.

VISTARANEWS.COM


on

Renowned Pakistani-Canadian columnist, author Tarek Fatah passes away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಖ್ಯಾತ ಲೇಖಕ, ಅಂಕಣಕಾರ, ಪಾಕ್-ಕೆನಡಿಯನ್ ತಾರೆಕ್ ಫತಾಹ್ ಅವರು ಮೃತರಾಗಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ದೀರ್ಘಕಾಲದಿಂದ ಅನಾರೋಗ್ಯಕ್ಕೀಡಾಗಿದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ತಾರೆಕ್ ಫತಾಹ್ ಅವರ ನಿಧನವನ್ನು ಅವರ ಪುತ್ರಿ ನತಾಶಾ ಫತಾಹ್ ಅವರು ಖಚಿತಪಡಿಸಿದ್ದಾರೆ(Tarek Fatah Dead).

ತಾರೆಕ್ ಫತಾಹ್ ಅವರ ಪುತ್ರಿ ನತಾಶಾ ಅವರ ಟ್ವೀಟ್

ಪಂಜಾಬ್‌ನ ಸಿಂಹ, ಹಿಂದೂಸ್ತಾನದ ಪುತ್ರ, ಕೆನಡಾವನ್ನು ಪ್ರೀತಿಸುವವ, ಸತ್ಯ ಹೇಳುವಾತ, ನ್ಯಾಯಯಕ್ಕಾಗಿ ಹೋರಾಡುವ, ತುಳಿತಕ್ಕೊಳಗಾದವರು, ದೀನದಲಿತರು, ಹಿಂದುಳಿದವರು ಧ್ವನಿ, ತಾರೆಕ್ ಫತಾಹ್ ಬ್ಯಾಟನ್ ಪಾಸ್ ಮಾಡಿದ್ದಾರೆ. ಅವರ ಕ್ರಾಂತಿ ಅವರನ್ನು ತಿಳಿದಿರುವವರು ಮತ್ತು ಪ್ರೀತಿಸುವ ಎಲ್ಲರೊಂದಿಗೆ ಅದು ಮುಂದರಿಯಲಿದೆ. ನೀವು ನಮ್ಮೊಂದಿಗೆ ಸೇರಿಕೊಳ್ಳುತ್ತೀರಾ? 1949-2023 ಎಂದು ಫತಾಹ್ ಅವರ ಪುತ್ರಿ ನತಾಶಾ ಟ್ವೀಟ್ ಮಾಡಿದ್ದಾರೆ.

ನನ್ನ ತಂದೆಯೊಂದಿಗೆ ನಿಧಾನವಾದ ಭಾನುವಾರದ ಮುಂಜಾನೆಯನ್ನು ಆನಂದಿಸುತ್ತಿದ್ದೇನೆ. ಹಳೆಯ ಬಾಲಿವುಡ್ ಹಾಡುಗಳನ್ನು ಕೇಳುತ್ತಿದ್ದೇನೆ ಮತ್ತು ಭಾರತ ಮಾತೆಯ ಮೇಲಿನ ನಮ್ಮ ಪ್ರೀತಿಗಾಗಿ ನಾನು ಕಿತ್ತಳೆ ಬಣ್ಣ ಬಟ್ಟೆ ಧರಿಸಿದ್ದೇನೆ ಎಂದು ನತಾಶಾ ಅವರು ಟ್ವೀಟ್‌ ಮಾಡಿದ್ದರು.

Tarek Fatah ನಿಧನಕ್ಕೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಕಂಬನಿ

ಫತಾಹ್ ಅವರು ಇಸ್ಲಾಂ ಧರ್ಮದ ಬಗ್ಗೆ ಪ್ರಗತಿಪರ ದೃಷ್ಟಿಕೋನಗಳು ಮತ್ತು ಪಾಕಿಸ್ತಾನದ ಬಗ್ಗೆ ಅವರ ಕಡು ನಿಲುವುಗಳಿಗೆ ಹೆಸರುವಾಸಿಯಾಗಿದ್ದರು. ಅವರು ತಮ್ಮನ್ನು ‘ಪಾಕಿಸ್ತಾನದಲ್ಲಿ ಜನಿಸಿದ ಭಾರತೀಯ’ ಮತ್ತು ‘ಇಸ್ಲಾಂನಲ್ಲಿ ಜನಿಸಿದ ಪಂಜಾಬಿ’ ಎಂದು ಕರೆದುಕೊಳ್ಳುತ್ತಿದ್ದರು .ಭಾರತದಲ್ಲಿ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ನೀಡಿದ್ದರು.

ತಾರೆಕ್ ಫತಾಹ್ ಅವರು 1949 ನವೆಂಬರ್ 20ರಂದು ಪಾಕಿಸ್ತಾನದ ಕರಾಚಿಯಲ್ಲಿ ಜನಿಸಿದರು. ಅವರು 1980ರ ದಶಕದ ಆರಂಭದಲ್ಲಿ ಕೆನಡಾಕ್ಕೆ ವಲಸೆ ಹೋದರು. ರಾಜಕೀಯ ಕಾರ್ಯಕರ್ತ, ಪತ್ರಕರ್ತ ಮತ್ತು ದೂರದರ್ಶನ ನಿರೂಪಕರಾಗಿ ಕೆಲಸ ಮಾಡಿದರು. ಅವರು ‘ಚೇಸಿಂಗ್ ಎ ಮಿರಾಜ್: ದಿ ಟ್ರಾಜಿಕ್ ಇಲ್ಯೂಷನ್ ಆಫ್ ಆನ್ ಇಸ್ಲಾಮಿಕ್ ಸ್ಟೇಟ್’ ಮತ್ತು ‘ದಿ ಯಹೂದಿ ಈಸ್ ನಾಟ್ ಮೈ ಎನಿಮಿ: ಅನ್‌ವೇಲಿಂಗ್‌ ದಿ ಮಿಥ್ಸ್ ದ್ಯಾಟ್ ಫ್ಯೂಯಲ್ ಮುಸ್ಲಿಂ ಆ್ಯಂಟಿ-ಸ್ಮಿಟಿಸಂ’ ಸೇರಿದಂತೆ ಹಲವಾರು ಪುಸ್ತಕಗಳನ್ನು ಬರೆದಿದ್ದಾರೆ.

ಇದನ್ನೂ ಓದಿ: ಕೆ.ವಿ ತಿರುಮಲೇಶ್‌: ಕನ್ನಡಕ್ಕೆ ಸದಾ ಹೊಸದನ್ನು ತರುತ್ತಿದ್ದ ಕವಿಹೃದಯಿ, ಚಿಂತಕ

ತಾರೆಕ್ ಫತಾಹ್ ನಿಧನ ಸುದ್ದಿ ಗೊತ್ತಾಗುತ್ತಿದಂತೆ ಹಲವರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಸಂತಾಪಗಳ ಟ್ವೀಟ್‌ಗಳಾಗುತ್ತಿವೆ. ನಟ ರಣವೀರ್ ಶೋರೆ ಅವರು ಟ್ವೀಟ್ ಮಾಡಿ, ಫತಾಹ್ ನಿಧನ ಸುದ್ದಿ ತಿಳಿದು ದುಃಖವಾಗಿದೆ. ನನಗೆ ಗೊತ್ತಿರುವ ಪೈಕಿ ಅವರು ಭಾರೀ ಧೈರ್ಯಶಾಲಿ ಮತ್ತು ಜಾಣ ವ್ಯಕ್ತಿಯಾಗಿದ್ದರು. ಅವರಿಗೆ ಸದ್ಗತಿ ಸಿಗಲಿ. ಅವರು ತಮ್ಮ ಪಾಲಿನಗಿಂತಲೂ ಹೆಚ್ಚಿನ ಒಳ್ಳೆಯದನ್ನು ಈ ಜಗತ್ತಿಗೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ISRO Mission : ಭೂ ಪರಿವೀಕ್ಷಣಾ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

ISRO Mission : ಉಡಾವಣೆ ಭಾರತೀಯ ಕಾಲಮಾನ 09:17 ಕ್ಕೆ ಆರಂಭಗೊಂಡಿತು. ಉಡಾವಣೆಯಾದ ಸುಮಾರು 17 ನಿಮಿಷಗಳ ನಂತರ, ಇಒಎಸ್ -08 ಉಪಗ್ರಹವನ್ನು ಎಸ್ಆರ್ -0 ಡೆಮೊಸ್ಯಾಟ್ ಜೊತೆಗೆ 475 ಕಿ.ಮೀ ವೃತ್ತಾಕಾರದ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಲಾಯಿತು. ಉಪಗ್ರಹವು 175.5 ಕೆ.ಜಿ ತೂಕವನ್ನು ಹೊಂದಿದೆ. ಇದರಲ್ಲಿ ಹೊಸ ತಾಂತ್ರಿಕತೆ ಹಾಗೂ ಪೇಲೋಡ್​ಗಳಿವೆ.

VISTARANEWS.COM


on

ISRO Mission
Koo

ಬೆಂಗಳೂರು: ಭೂಪರಿವೀಕ್ಷಣಾ ಉಪಗ್ರಹಗಳನ್ನು (EOS-08) ಭಾರತೀಯ ಬಾಹ್ಯಾಕಾಶ ಸಂಸ್ಥೆ (ISRO Mission) ಶುಕ್ರವಾರ ಯಶಸ್ವಿಯಾಗಿ ಭೂ ಕಕ್ಷೆಯಲ್ಲಿ ಸ್ಥಾಪಿಸಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸಣ್ಣ ಉಪಗ್ರಹ ಉಡಾವಣಾ ವಾಹನ (ಎಸ್ಎಸ್ಎಲ್​ವಿ-ಡಿ 3) ಈ ಉಪಗ್ರಹಗಳನ್ನು ಹೊತ್ತೊಯ್ದಿತು. ಚೆನ್ನೈನಿಂದ ಪೂರ್ವಕ್ಕೆ 135 ಕಿ.ಮೀ ದೂರದಲ್ಲಿರುವ ಬಾಹ್ಯಾಕಾಶ ಕೇಂದ್ರದ ಮೊದಲ ಉಡಾವಣಾ ಪ್ಯಾಡ್​ನಿಂದ ಬೆಳಿಗ್ಗೆ 9.17 ಕ್ಕೆ ಉಪಗ್ರಹಗಳನ್ನು ಹೊತ್ತಿದ್ದ ಎಸ್​​ಎಸ್​ಎಲ್​​ವಿ ಹಾರಾಟ ಆರಂಭಿಸಿತು.

ಮೈಕ್ರೋಸ್ಯಾಟ್​ಲೈಟ್​ ವಿನ್ಯಾಸಗೊಳಿಸುವುದು ಮತ್ತು ಅಭಿವೃದ್ಧಿಪಡಿಸುವುದು ಮತ್ತು ಮೈಕ್ರೋಸ್ಯಾಟ್​ಲೈಟ್​ ಬಸ್​ಗೆ ಹೊಂದಿಕೆಯಾಗುವ ಪೇಲೋಡ್ ಉಪಕರಣಗಳನ್ನು ರಚಿಸುವುದು ಎಸ್ಎಸ್ಎಸ್​ವಿ -ಡಿ3 ಮತ್ತು ಇಒಎಸ್ -08 ಯೋಜನೆಯ ಉದ್ದೇಶ ಎಂದು ಬೆಂಗಳೂರಿನಲ್ಲಿ ಪ್ರಧಾನ ಕಚೇರಿ ಹೊಂದಿರುವ ರಾಷ್ಟ್ರೀಯ ಬಾಹ್ಯಾಕಾಶ ಸಂಸ್ಥೆ (ISRO) ತಿಳಿಸಿದೆ. ಎಸ್ಎಸ್ಎಲ್​​ವಿ -ಡಿ3 ಮಿಷನ್ ಮೊದಲಿಗೆ ಆಗಸ್ಟ್ 15 ರಂದು ನಿಗದಿಯಾಗಿತ್ತು. ಬಳಿಕ ಒಂದು ದಿನ ಮುಂದೂಡಲ್ಪಟ್ಟು 16ರಂದು ಉಡಾವಣೆಗೊಂಡಿತು. ಇದು ಬಾಹ್ಯಾಕಾಶಕ್ಕೆ ಕಡಿಮೆ ವೆಚ್ಚದಲ್ಲಿ ಯಾನ ಮಾಡುವ ಇಸ್ರೋದ ಪ್ರಯತ್ನಗಳಲ್ಲಿ ಮಹತ್ವದ ಹೆಜ್ಜೆಯಾಗಿದೆ.

ಉಡಾವಣೆ ಭಾರತೀಯ ಕಾಲಮಾನ 09:17 ಕ್ಕೆ ಆರಂಭಗೊಂಡಿತು. ಉಡಾವಣೆಯಾದ ಸುಮಾರು 17 ನಿಮಿಷಗಳ ನಂತರ, ಇಒಎಸ್ -08 ಉಪಗ್ರಹವನ್ನು ಎಸ್ಆರ್ -0 ಡೆಮೊಸ್ಯಾಟ್ ಜೊತೆಗೆ 475 ಕಿ.ಮೀ ವೃತ್ತಾಕಾರದ ಕಕ್ಷೆಯಲ್ಲಿ ಯಶಸ್ವಿಯಾಗಿ ಇರಿಸಲಾಯಿತು. ಉಪಗ್ರಹವು 175.5 ಕೆ.ಜಿ ತೂಕವನ್ನು ಹೊಂದಿದೆ. ಇದರಲ್ಲಿ ಹೊಸ ತಾಂತ್ರಿಕತೆ ಹಾಗೂ ಪೇಲೋಡ್​ಗಳಿವೆ.

ಇದನ್ನೂ ಓದಿ:Rahul Gandhi : ಕೆಂಪುಕೋಟೆಯಲ್ಲಿ ರಾಹುಲ್ ಗಾಂಧಿಗೆ ಲಾಸ್ಟ್​ ಬೆಂಚ್​; ಬಿಜೆಪಿ- ಕಾಂಗ್ರೆಸ್​ ಜಟಾಪಟಿ

ಕಾರ್ಯವೇನು?

ಉಪಗ್ರಹ ಆಧಾರಿತ ಕಣ್ಗಾವಲು, ವಿಪತ್ತು ಮೇಲ್ವಿಚಾರಣೆ, ಪರಿಸರದ ಮೇಲ್ವಿಚಾರಣೆ, ಬೆಂಕಿ ಪತ್ತೆ, ಜ್ವಾಲಾಮುಖಿ ಚಟುವಟಿಕೆ ವೀಕ್ಷಣೆ ಮತ್ತು ಕೈಗಾರಿಕಾ ಮತ್ತು ವಿದ್ಯುತ್ ಸ್ಥಾವರಗಳ ವಿಪತ್ತು ಮೇಲ್ವಿಚಾರಣೆಗೆ ಈ ಉಪಗ್ರಹ ಬಳಕೆಯಾಗಲಿದೆ. ಹಗಲು ಮತ್ತು ರಾತ್ರಿ ಮಿಡ್-ವೇವ್ ಐಆರ್ (ಎಂಐಆರ್) ಮತ್ತು ಲಾಂಗ್-ವೇವ್ ಐಆರ್ (ಎಲ್ಡಬ್ಲ್ಯುಐಆರ್) ಬ್ಯಾಂಡ್​ಗಳಲ್ಲಿ ಚಿತ್ರಗಳನ್ನು ಸೆರೆಹಿಡಿಯಲು ಇಒಐಆರ್ ಪೇಲೋಡ್ ಇದು ಹೊಂದಿದೆ

ಸಾಗರ ಮೇಲ್ಮೈ ಗಾಳಿ ವಿಶ್ಲೇಷಣೆ, ಮಣ್ಣಿನ ತೇವಾಂಶ ಮೌಲ್ಯಮಾಪನ, ಹಿಮಾಲಯ ಪ್ರದೇಶದ ಕ್ರಯೋಸ್ಪಿಯರ್ ಅಧ್ಯಯನಗಳು, ಪ್ರವಾಹ ಪತ್ತೆ ಮತ್ತು ಒಳನಾಡಿನ ಜಲಮೂಲದ ಪತ್ತೆಯಂತಹ ಕಾರ್ಯವನ್ನೂ ಇದು ಮಾಡಬಲ್ಲುದು.

ಎಸ್ಎಸ್ಎಲ್​ವಿ ಸಾಧನೆ

ಎಸ್ಎಸ್ಎಲ್​ವಿ ಡಿ 3 ಮಿಷನ್ ಉಪಗ್ರಹ ಮೇನ್​​ಫ್ರೇಮ್​ ವ್ಯವಸ್ಥೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಎತ್ತಿ ತೋರಿಸುತ್ತದೆ. ಇದರಲ್ಲಿ ಇಂಟಿಗ್ರೇಟೆಡ್ ಏವಿಯಾನಿಕ್ಸ್ ಸಿಸ್ಟಮ್ ಕೂಡ ಸೇರಿದೆ. ಇದು ಅನೇಕ ಕಾರ್ಯಗಳನ್ನು ಒಂದೇ ಘಟಕದ ಮೂಲಕ ನಿಯಂತ್ರಿಸುತ್ತದೆ. 400 ಜಿಬಿ ಡೇಟಾ ಸಂಗ್ರಹಣೆ ಸಾಮರ್ಥ್ಯವೂ ಇದೆ. ಈ ಮಿಷನ್ ಸಣ್ಣ ಉಪಗ್ರಹ ಉಡಾವಣೆಗಳಿಗೆ ಹೆಚ್ಚುತ್ತಿರುವ ಬೇಡಿಕೆಗೆ ಹೊಂದಿಕೊಳ್ಳುವ ಇಸ್ರೋದ ಸಾಮರ್ಥ್ಯವನ್ನು ಪ್ರದರ್ಶಿಸಿದೆ.

ಈ ಉಡಾವಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವುದರೊಂದಿಗೆ ಇಸ್ರೋ ಜಾಗತಿಕ ಬಾಹ್ಯಾಕಾಶ ಮಾರುಕಟ್ಟೆಯಲ್ಲಿ ತನ್ನ ಸಾಮರ್ಥ್ಯಗಳನ್ನು ವಿಸ್ತರಿಸಿದೆ. ಮಿನಿ, ಮ್ರೈಕ್ರೊ ಮತ್ತು ನ್ಯಾನೊ ಉಪಗ್ರಹಗಳನ್ನು ಉಡಾವಣೆ ಮಾಡಲು ಸಜ್ಜಾಗಿದೆ. ಇಒಎಸ್ -08 ಮಿಷನ್ ಭಾರತದ ಬಾಹ್ಯಾಕಾಶ ಸಾಮರ್ಥ್ಯವನ್ನು ಹೆಚ್ಚಿಸುವುದಲ್ಲದೆ ಅಂತರರಾಷ್ಟ್ರೀಯ ಬಾಹ್ಯಾಕಾಶ ಸಮುದಾಯದಲ್ಲಿ ಅದರ ಸ್ಥಾನ ಬಲಪಡಿಸುತ್ತದೆ.

Continue Reading

ಪ್ರಮುಖ ಸುದ್ದಿ

Physical Assault : 11 ವರ್ಷದ ಶಾಲಾ ಬಾಲಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

Physical Assault : ಪ್ರಾಂಶುಪಾಲರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದು ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಶಿಕ್ಷಕನ ವಿರುದ್ಧ ಕಠಿಣ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

VISTARANEWS.COM


on

Physical Assault
Koo

ಮುಂಬೈ: 11 ವರ್ಷದ ಬಾಲಕಿಯ ಮೇಲೆ ಶಾಲಾ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ (Physical Assault) ಮುಂಬೈನ ಕಾಂದಿವಲಿಯಲ್ಲಿ ನಡೆದಿದೆ. 7 ನೇ ತರಗತಿಯ ವಿದ್ಯಾರ್ಥಿ ಬುಧವಾರ ಈ ಬಗ್ಗೆ ಶಾಲಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾನೆ. ಶಿಕ್ಷಕ ತನ್ನ ತರಗತಿಯ ನಂತರ ತನ್ನನ್ನು ಕರೆದು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವಳು ತನ್ನ ಪ್ರಾಂಶುಪಾಲರಿಗೆ ತಿಳಿಸಿದ್ದಾಳೆ. ಜುಲೈನಲ್ಲಿ ಈ ಘಟನೆ ನಡೆದಿದ್ದು ಇದೀಗ ಪ್ರಕರಣದ ದಾಖಲಾಗಿದೆ.

ಪ್ರಾಂಶುಪಾಲರು ಆಕೆಯ ಪೋಷಕರಿಗೆ ಮಾಹಿತಿ ನೀಡಿದ್ದು ಅವರು ಪೊಲೀಸರನ್ನು ಸಂಪರ್ಕಿಸಿ ದೂರು ದಾಖಲಿಸಿದ್ದಾರೆ. ಬಾಲಕಿಯ ಹೇಳಿಕೆಯ ಆಧಾರದ ಮೇಲೆ, ಶಿಕ್ಷಕನ ವಿರುದ್ಧ ಕಠಿಣ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ.

ಬಾಲಕಿಯ ಹೇಳಿಕೆಯನ್ನು ದಾಖಲಿಸಲು ಶಿಕ್ಷಕರನ್ನು ಕರೆಸಲಾಗಿದೆ. ಪೊಲೀಸರು ಪುರಾವೆಗಳಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ತನಿಖೆ ಮಾಡುತ್ತಿದ್ದಾರೆ. ಕೋಲ್ಕೊತಾದ ಸರ್ಕಾರಿ ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯಿಂದ ಘಟನೆ ಬಳಿಕ ಬಾಲಕಿಯರು ಮತ್ತು ಮಹಿಳೆಯರ ಸುರಕ್ಷತೆಯ ಬಗ್ಗೆ ಭಾರಿ ಕಳವಳ ವ್ಯಕ್ತಗೊಂಡಿದ್ದು ಮಧ್ಯೆ ಈ ಘಟನೆ ವರದಿಯಾಗಿದೆ.

ಇದನ್ನೂ ಓದಿ: Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

ದೇಶಾದ್ಯಂತದ ಮಹಿಳೆಯರು ಶಾಲೆಗಳು, ಕೆಲಸದ ಸ್ಥಳಗಳು ಮತ್ತು ಬೀದಿಗಳಲ್ಲಿ ತಮಗೆ ಸುರಕ್ಷಿತ ಪರಿಸರವನ್ನು ಬಯಸುತ್ತಿದ್ದಾರೆ ಎಂಬುದೇ ಚರ್ಚೆಯ ವಿಚಾರವಾಗಿದೆ. 2022 ರಲ್ಲಿ 63,414 ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಪ್ರಕಟಿಸಿದ ಇತ್ತೀಚಿನ ಅಪರಾಧ ಅಂಕಿ ಅಂಶಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

PR Sreejesh : ಕುಟುಂಬ ಸಮೇತ ಪ್ರಧಾನಿ ಮೋದಿಯನ್ನು ಭೇಟಿಯಾದ ಒಲಿಂಪಿಯನ್​ ಪಿ.ಆರ್ ಶ್ರೀಜೇಶ್​​

PR Sreejesh : ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಹಾಕಿ ತಂಡದ ಅದ್ಭುತ ಅಭಿಯಾನದಲ್ಲಿ ಶ್ರೀಜೇಶ್ ಮತ್ತೊಮ್ಮೆ ಪ್ರಮುಖ ಪಾತ್ರ ವಹಿಸಿದ್ದರು. ಸ್ಪೇನ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತ ಸತತ ಎರಡನೇ ಬಾರಿ ಒಲಿಂಪಿಕ್ಸ್​​ ಕೂಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. ಆಟಗಾರರ ಸಾಮೂಹಿಕ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡವು 52 ವರ್ಷಗಳ ನಂತರ ಒಲಿಂಪಿಕ್ಸ್​​ನಲ್ಲಿ ಸತತ ಪದಕಗಳನ್ನು ಗೆದ್ದಿದೆ. ಒಟ್ಟಾರೆ ಒಲಿಂಪಿಕ್ಸ್ ಪಟ್ಟಿಯಲ್ಲಿ 13 ನೇ ಪದಕ ತನ್ನದಾಗಿಸಿಕೊಂಡಿತು.

VISTARANEWS.COM


on

PR Sreejesh
Koo

ಹೊಸದಿಲ್ಲಿ: ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಕಂಚು ಗೆದ್ದ ಬಳಿಕ ನಿವೃತ್ತಿ ಘೋಷಿಸಿರುವ ಭಾರತ ಹಾಕಿ ತಂಡದ ಗೋಲ್ ಕೀಪರ್ ಪಿ.ಆರ್.ಶ್ರೀಜೇಶ್ (PR Sreejesh) ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಂಬ ಸಮೇತ ಭೇಟಿಯಾದರು. ವಿಶೇಷವೆಂದರೆ, ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಿಎಂ ಮೋದಿ ಅವರು ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಪಾಲ್ಗೊಂಡ ಅಥ್ಲೀಟ್​ಗಳಿಗಾಗಿ ವಿಶೇಷ ಸಭೆ ಆಯೋಜಿಸಿದ್ದರು. ಅದು ಮುಗಿದ ಬಳಿಕ ಶ್ರೀಜೇಶ್​ ಕುಟುಂಬ ಸಮೇತ ಪ್ರಧಾನಿಯವನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಪ್ಯಾರಿಸ್​​ನಲ್ಲಿ ಭಾರತದ ಕಂಚಿನ ಪದಕ ವಿಜೇತರಾದ ಮನು ಭಾಕರ್, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಾಳೆ ,ಕುಸ್ತಿಪಟು ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ಇತರ ಕ್ರೀಡಾಪಟುಗಳು ಪ್ರಧಾನಿ ನಿವಾಸಕ್ಕೆ ಭೇಟಿ ನೀಡಿದ್ದರು. ತಮ್ಮ ಭೇಟಿಯ ಖುಷಿಯನ್ನು ಹಂಚಿಕೊಂಡ ಶ್ರೀಜೇಶ್, ಪ್ರಧಾನಿಯೊಂದಿಗೆ ತಮ್ಮ ಕುಟುಂಬದ ಫೋಟೋಗಳನ್ನು ಪೋಸ್ಟ್​ ಮಾಡಿದ್ದಾರೆ. ಅದರಲ್ಲಿ ಮೋದಿ ಅವರು, ಶ್ರೀಜೇಶ್​ ಮಗ ಮತ್ತು ಮಗಳ ತಲೆ ಕೈ ಇಟ್ಟು ಆಶೀರ್ವದಿಸುವುದು ಕಂಡು ಬಂದಿದೆ.

ಪ್ಯಾರಿಸ್ ಒಲಿಂಪಿಕ್ಸ್​​ನಲ್ಲಿ ಹಾಕಿ ತಂಡದ ಅದ್ಭುತ ಅಭಿಯಾನದಲ್ಲಿ ಶ್ರೀಜೇಶ್ ಮತ್ತೊಮ್ಮೆ ಪ್ರಮುಖ ಪಾತ್ರ ವಹಿಸಿದ್ದರು. ಸ್ಪೇನ್ ತಂಡವನ್ನು 2-1 ಗೋಲುಗಳ ಅಂತರದಿಂದ ಮಣಿಸಿದ ಭಾರತ ಸತತ ಎರಡನೇ ಬಾರಿ ಒಲಿಂಪಿಕ್ಸ್​​ ಕೂಟದಲ್ಲಿ ಕಂಚಿನ ಪದಕ ಗೆದ್ದುಕೊಂಡಿತು. ಆಟಗಾರರ ಸಾಮೂಹಿಕ ಪ್ರಯತ್ನಗಳ ಹಿನ್ನೆಲೆಯಲ್ಲಿ ಭಾರತೀಯ ಹಾಕಿ ತಂಡವು 52 ವರ್ಷಗಳ ನಂತರ ಒಲಿಂಪಿಕ್ಸ್​​ನಲ್ಲಿ ಸತತ ಪದಕಗಳನ್ನು ಗೆದ್ದಿದೆ. ಒಟ್ಟಾರೆ ಒಲಿಂಪಿಕ್ಸ್ ಪಟ್ಟಿಯಲ್ಲಿ 13 ನೇ ಪದಕ ತನ್ನದಾಗಿಸಿಕೊಂಡಿತು.

ಗಮನ ಸೆಳೆದ ಪಿ.ಆರ್. ಶ್ರೀಜೇಶ್

ಕಂಚು ಗೆದ್ದ ನಂತರ, ಗೋಲ್ ಕೀಪರ್ ಶ್ರೀಜೇಶ್​ ಗೌರವದಿಂದ ತಮ್ಮ ಗೋಲ್ ಕೀಪಿಂಗ್​​ ಗ್ಲವ್ಸ್​ ಸಮೇತ ಗೋಲ್​​ ಪೋಸ್ಟ್​​ಗೆ ನಮಸ್ಕರಿಸುವಾಗ ಅತ್ಯಂತ ಭಾವುಕರಾಗಿ ಕಾಣಿಸಿಕೊಂಡರು. ಟೋಕಿಯೊ ಒಲಿಂಪಿಕ್ಸ್​​ನಲ್ಲಿ ತಮ್ಮ ಪ್ರಸಿದ್ಧ ಸಂಭ್ರಮಾಚರಣೆಯ ಭಂಗಿಯನ್ನು ಅವರು ಪ್ಯಾರಿಸ್​ನಲ್ಲೂ ಮರುಸೃಷ್ಟಿಸಿದರು. ಇಡೀ ತಂಡ ಅವರ ಸಂಭ್ರಮದಲ್ಲಿ ಭಾಗಿಯಾಯಿತು.

18 ವರ್ಷಗಳ ವೃತ್ತಿಜೀವನದಲ್ಲಿ 278 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ ಶ್ರೀಜೇಶ್​ ವಿದಾಯ ಹೇಳಿರುವುದು ಭಾರತೀಯ ಹಾಕಿ ಅಭಿಮಾನಿಗಳ ಪಾಲಿಗೆ ಬೇಸರದ ವಿಷಯ. ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮನು ಭಾಕರ್ ಅವರೊಂದಿಗೆ ಕೇರಳ ಮೂಲದ ಆಟಗಾರನಿಗೆ ಭಾರತದ ಧ್ವಜಧಾರಿಯಾಗಿದ್ದರು. ಈ ಮೂಲಕ ಅವರಿಗೆ ವಿಶೇಷ ಗೌರವ ನೀಡಲಾಗಿದೆ.

ಇದನ್ನೂ ಓದಿ: Virat Kohli : ವಿರಾಟ್​​ ಮಾಲೀಕತ್ವದ ರೆಸ್ಟೋರೆಂಟ್​ಗೆ ಹೋದ ಡೂಪ್ಲಿಕೇಟ್​ ಕೊಹ್ಲಿ; ಗ್ರಾಹಕರು ಫುಲ್ ಕನ್​​ಫ್ಯೂಸ್​! ಇಲ್ಲಿದೆ ವಿಡಿಯೊ

ಸ್ಟಾರ್ ಶಟ್ಲರ್ ಪಿ.ವಿ.ಸಿಂಧು ಮತ್ತು ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರು ಪ್ರಧಾನಿಯೊಂದಿಗಿನ ಸಭೆಯಲ್ಲಿ ಹಾಜರಿರಲಿಲ್ಲ. ನೀರಜ್ ಅವರು ದೀರ್ಘಕಾಲದ ಸೊಂಟದ ಗಾಯಕ್ಕೆ ವೈದ್ಯಕೀಯ ಸಲಹೆಗಾಗಿ ಜರ್ಮನಿಗೆ ಹಾರಿದ್ದಾರೆ. ಪ್ರಧಾನಿ ಮೋದಿ ಅವರೊಂದಿಗೆ ಕ್ರೀಡಾಪಟುಗಳ ನಡೆಸಿರುವ ಮಾತುಕತೆಯ ಸಂಪೂರ್ಣ ವಿವರ ಶೀಘ್ರದಲ್ಲೇ ಹೊರಬರುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

Shocking Incident : ಮಹಿಳೆಯನ್ನು ನಗ್ನಗೊಳಿಸಿ ಶಸ್ತ್ರ ಚಿಕಿತ್ಸೆ ನಡೆಸಿದ ವಾರ್ಡ್​ ಬಾಯ್​! ವಿಡಿಯೊ ವೈರಲ್​

Shocking Incident : ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್​ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ,

VISTARANEWS.COM


on

Shocking Incident
Koo

ಲಖನೌ : ಖಾಸಗಿ ಆಸ್ಪತ್ರೆಯೊಂದರ ವಾರ್ಡ್ ಬಾಯ್, ಮಹಿಳಾ ರೋಗಿಯನ್ನು ನಗ್ನಗೊಳಿಸಿ ಶಸ್ತ್ರಚಿಕಿತ್ಸೆ ಮಾಡಿದ್ದಲ್ಲದೆ ಅದನ್ನು ವಿಡಿಯೊ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ (Shocking Incident) ನಡೆದಿದೆ. ಈ ಘಟನೆ ಬಗ್ಗೆ ಆಘಾತ ವ್ಯಕ್ತಗೊಂಡಿದೆ. ವಾರ್ಡ್ ಬಾಯ್ ತನ್ನ ವಾಟ್ಸಾಪ್ ಸ್ಟೇಟಸ್​ನಲ್ಲಿ ಸರ್ಜರಿ ಮಾಡುವ ವೀಡಿಯೊವನ್ನು ಹಂಚಿಕೊಂಡಿದ್ದು, ಇದನ್ನು ಅನೇಕ ಜನರು ನೋಡಿದ್ದಾರೆ. ಬಳಿಕ ವಿಷಯ ಆಕ್ರೋಶ ಹುಟ್ಟುಹಾಕಿದ್ದು, ಆರೋಗ್ಯ ಇಲಾಖೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದೆ. ಹರ್ದಿಯಾ ಮೂಲದ ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ವಾರ್ಡ್ ಬಾಯ್ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರಿಗೆ ಸಹಾಯ ಮಾಡುತ್ತಿದ್ದ ಎಂದು ಹೇಳಲಾಗಿದೆ. ಮಹಿಳೆ ಆಪರೇಷನ್ ಥಿಯೇಟರ್ನಲ್ಲಿ ನಗ್ನವಾಗಿ ಮಲಗಿರುವಾಗ ಅದನ್ನೇ ವಿಡಿಯೊ ಮಾಡಿ ಹರಿಯಬಿಟ್ಟಿದ್ದಾನೆ. ವಾರ್ಡ್ ಬಾಯ್ ಚಿಕಿತ್ಸೆಯ ವಿಧಾನವನ್ನು ವೀಡಿಯೊವನ್ನು ರೆಕಾರ್ಡ್ ಮಾಡಿ ಸ್ಟೇಟಸ್​ಗೆ ಹಾಕಿಕೊಂಡಿದ್ದಾನೆ, ವೀಡಿಯೊವನ್ನು ನೋಡಿದ ಜನರು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡು ವಾರ್ಡ್ ಬಾಯ್ ವಿರುದ್ಧ ಕ್ರಮಕ್ಕಾಗಿ ಆಗ್ರಹಿಸಿದ್ದಾರೆ,

ಬಸ್ತಿ ಕೇರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಮತ್ತು ಕಣ್ಣಿನ ಕೇಂದ್ರದ ನಿರ್ದೇಶಕ ಡಾ.ಸಂಜಯ್ ಕುಮಾರ್ ಸೂಚನೆಯಂತೆ ಶಸ್ತ್ರಚಿಕಿತ್ಸೆ ನಡೆಸಿದ್ದೇನೆ ಎಂದು ವಾರ್ಡ್ ಬಾಯ್ ಹೇಳಿದ್ದಾನೆ. ಸಂಜಯ್ ಗೌತಮ್ ಅವರು ಘಟನೆಯ ಬಗ್ಗೆ ತನಗೆ ತಿಳಿದಿಲ್ಲ ಮತ್ತು ಆಸ್ಪತ್ರೆಯ ಆಡಳಿತವು ಈ ವಿಷಯಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದೆ. ವಾರ್ಡ್ ಬಾಯ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ತನಿಖೆ ನಡೆಸಲು ಆರೋಗ್ಯ ಇಲಾಖೆ ತಂಡವನ್ನು ರಚಿಸಿದೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ತನಿಖೆ ನಡೆಸಲು ವೈದ್ಯಕೀಯ ಅಧಿಕಾರಿಯನ್ನು ಆಸ್ಪತ್ರೆಗೆ ಕಳುಹಿಸಿದ ನಂತರ ಸಮಗ್ರ ತನಿಖೆ ನಡೆಸಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸಲಾಗುವುದಿಲ್ಲ. ತಪ್ಪಿತಸ್ಥರು ಅವಮಾನಕರ ಕೃತ್ಯಕ್ಕಾಗಿ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Indian Medical Association : ವೈದ್ಯರ ಪ್ರತಿಭಟನೆ; ಶನಿವಾರದಿಂದ 24 ಗಂಟೆ ಕಾಲ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ

ಘಟನೆ ಬಗ್ಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದಲ್ಲಿ ವೈದ್ಯಕೀಯ ತನಿಖೆ ನಡೆಸುತ್ತಿದೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಸ್ವೀಕರಿಸಿದ ನಂತರ ಇತರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯು ಉತ್ತರ ಪ್ರದೇಶದ ಬಿಜೆಪಿ ಸರ್ಕಾರದ ಅಡಿಯಲ್ಲಿ ಆರೋಗ್ಯ ಸೌಲಭ್ಯಗಳ ಭಯಾನಕ ಸ್ಥಿತಿಯನ್ನು ಬಹಿರಂಗಪಡಿಸಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದೆ. ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ರೋಗಿಗಳ ಸಾವಿಗೆ ಕಾರಣವಾದ ಇಂತಹ ಅನೇಕ ಘಟನೆಗಳು ಉತ್ತರ ಪ್ರದೇಶದಲ್ಲಿ ನಡೆಯುತ್ತಿವೆ. ರಾಜ್ಯ ಸರ್ಕಾರವು ಆರೋಗ್ಯ ಸೌಲಭ್ಯಗಳ ಪರಿಸ್ಥಿತಿಯನ್ನು ಗಮನಿಸಬೇಕು ಎಂದು ಒತ್ತಾಯಿಸಿವೆ.

Continue Reading
Advertisement
Donald Trump
ಪ್ರಮುಖ ಸುದ್ದಿ11 mins ago

Donald Trump : ಡೊನಾಲ್ಡ್​ ಟ್ರಂಪ್​, ಎಲಾನ್​ ಮಸ್ಕ್​ ಮಸ್ತ್​ ಡಾನ್ಸ್​; ಇದು ಕೃತಕ ಬುದ್ದಿಮತ್ತೆಯ ಕರಾಮತ್ತು!

70th National Film Awards Mammootty rishab shetty competition
ಸಿನಿಮಾ18 mins ago

70th National Film Awards: 70ನೇ ರಾಷ್ಟ್ರೀಯ ಪ್ರಶಸ್ತಿ ಕ್ಷಣಗಣನೆ; ರಿಷಬ್‌ ಶೆಟ್ಟಿ ಮೇಲೆ ಸಿನಿಪ್ರಿಯರ ಕಣ್ಣು!

techie missing
ಕ್ರೈಂ25 mins ago

Techie Missing: ಕಾಣೆಯಾದ ಟೆಕ್ಕಿ ಪತ್ತೆ, ಪ್ರಕರಣಕ್ಕೆ ಟ್ವಿಸ್ಟ್‌; ಜೈಲಿಗಾದ್ರೂ ಹಾಕಿ, ಆದ್ರೆ ಹೆಂಡತಿ ಹತ್ರ ಹೋಗಲ್ಲ ಎಂದು ರೋದನ!

Vinesh Phogat
ಕ್ರೀಡೆ35 mins ago

Vinesh Phogat : ತೂಕ ಇಳಿಸಲು ಹೋಗಿ ಸಾವಿನ ಬಾಗಿಲು ತಟ್ಟಿದ್ದ ವಿನೇಶ್​ ಫೋಗಟ್​; ಭಯಾನಕ ಕ್ಷಣಗಳನ್ನು ವಿವರಿಸಿದ ಕೋಚ್​!

Thalapathy Vijay Looks Intense In New GOAT Poster Trailer To Release
ಕಾಲಿವುಡ್38 mins ago

Thalapathy Vijay: ದಳಪತಿ ವಿಜಯ್ ನಟನೆಯ ‘GOAT’ ಚಿತ್ರದ ಟ್ರೈಲರ್‌ ರಿಲೀಸ್‌ ಡೇಟ್‌ ಅನೌನ್ಸ್‌!

Viral Video
Latest1 hour ago

Viral Video: ಅಪಹರಣಕಾರನಿಂದ ಪುಟ್ಟ ಮಗುವನ್ನು ರಕ್ಷಿಸಿದ ಸಾಕು ನಾಯಿ! ನಾಯಿಯ ಸಾಹಸದ ವಿಡಿಯೊ ನೋಡಿ

child trafficking gadag
ಕ್ರೈಂ1 hour ago

Child Trafficking: ಗೋವಾಗೆ ಕಳ್ಳಸಾಗಣೆ ಮಾಡುತ್ತಿದ್ದ ಹೆಣ್ಣು ಶಿಶು ರಕ್ಷಣೆ ವೇಳೆ ಅಧಿಕಾರಿಗಳ ಮೇಲೆ‌ ಹಲ್ಲೆ

ISRO Mission
ಪ್ರಮುಖ ಸುದ್ದಿ1 hour ago

ISRO Mission : ಭೂ ಪರಿವೀಕ್ಷಣಾ ಉಪಗ್ರಹವನ್ನು ಯಶಸ್ವಿಯಾಗಿ ಕಕ್ಷೆಗೆ ಸೇರಿಸಿದ ಇಸ್ರೋ

Duniya Vijay Ganesh movie overtook 'Bheem Big Collection
ಸ್ಯಾಂಡಲ್ ವುಡ್2 hours ago

Duniya Vijay: ಗಣೇಶ್‌ ಸಿನಿಮಾ ಹಿಂದಿಕ್ಕಿತೇ ‘ಭೀಮ’? ದುನಿಯಾ ವಿಜಯ್ ಸಿನಿಮಾ ಭರ್ಜರಿ ಕಲೆಕ್ಷನ್!

Physical Assault
ಪ್ರಮುಖ ಸುದ್ದಿ2 hours ago

Physical Assault : 11 ವರ್ಷದ ಶಾಲಾ ಬಾಲಕಿ ಮೇಲೆ ಶಿಕ್ಷಕನಿಂದ ಲೈಂಗಿಕ ದೌರ್ಜನ್ಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 week ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 week ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌