ಗಣರಾಜ್ಯೋತ್ಸವ
Republic Day 2023: ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದೆ 74ನೇ ಗಣರಾಜ್ಯೋತ್ಸವ ಪಥಸಂಚಲನ!
ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್ ತನಕ ನಡೆಯಲಿರುವ ಗಣರಾಜ್ಯೋತ್ಸವ (Republic Day 2023) ಪಥಸಂಚಲನವು ಹಲವಾರು ಪ್ರಥಮಗಳಿಗೆ ಸಾಕ್ಷಿಯಾಗಲಿದೆ. ರಾಜಪಥಕ್ಕೆ ಕರ್ತವ್ಯ ಪಥ ಎಂದು ಮರು ನಾಮಕರಣ ಮಾಡಿದ ಬಳಿಕ ನಡೆಯುವ ಮೊದಲ ಗಣರಾಜ್ಯೋತ್ಸವ ಇದಾಗಿದೆ.
ಗಣರಾಜ್ಯೋತ್ಸವ
Beating Retreat 2023: ತುಂತುರು ಮಳೆ ಮಧ್ಯೆ ಗಣರಾಜ್ಯೋತ್ಸವ ಸಮಾರೋಪ, ಇಲ್ಲಿವೆ ರಮಣೀಯ ಫೋಟೊಗಳು
Beating Retreat 2023: ಪ್ರಸಕ್ತ ಗಣರಾಜ್ಯೋತ್ಸವದ ಸಮಾರೋಪ ಸಮಾರಂಭವು ದೆಹಲಿ ವಿಜಯ ಚೌಕ್ನಲ್ಲಿ ಅದ್ಧೂರಿಯಾಗಿ ನೆರವೇರಿದೆ. ಬೃಹತ್ ಡ್ರೋನ್ ಶೋ ಈ ಬಾರಿ ಗಮನ ಸೆಳೆಯಿತು.
ನವದೆಹಲಿ: ಗಣರಾಜ್ಯೋತ್ಸವದಂತೆ ಗಣರಾಜ್ಯೋತ್ಸವದ ಸಮಾರೋಪ (Beating Retreat 2023) ಸಮಾರಂಭವೂ ಅದ್ಧೂರಿಯಾಗಿ ನೆರವೇರಿದೆ. ವಿಜಯ್ ಚೌಕ್ನಲ್ಲಿ ಸುಮಾರು 3,500ಕ್ಕೂ ಅಧಿಕ ಡ್ರೋನ್ಗಳ ಹಾರಾಟ, ಸಾಂಸ್ಕೃತಿಕ ಕಾರ್ಯಕ್ರಮ, ರಂಗಿನ ಬೆಳಕು ಸೇರಿ ಹಲವು ಚಟುವಟಿಕೆಗಳೊಂದಿಗೆ 2023ನೇ ಗಣರಾಜ್ಯೋತ್ಸವಕ್ಕೆ ಅದ್ಧೂರಿಯಾಗಿ ತೆರೆ ಎಳೆಯಲಾಯಿತು. ಕೊನೆಗೆ ಸಾರೇ ಜಹಾಂಸೆ ಅಚ್ಛಾ ಗೀತೆ ಹಾಡಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು. ತುಂತುರ ಮಳೆಯನ್ನೂ ಲೆಕ್ಕಿಸದೆ ಸಾರ್ವಜನಿಕರು ಸಮಾರೋಪ ಸಮಾರಂಭ ಕಣ್ತುಂಬಿಕೊಂಡರು. ಕಾರ್ಯಕ್ರಮದ ಕೆಲವು ಫೋಟೊಗಳು ಇಲ್ಲಿವೆ.
ಇದನ್ನೂ ಓದಿ: Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು
ಕರ್ನಾಟಕ
Republic Day 2023: ಭಾರತವು ಬಲಿಷ್ಠ ಸಂವಿಧಾನವನ್ನು ಹೊಂದಿದೆ: ಪ್ರಸನ್ನನಾಥ ಸ್ವಾಮೀಜಿ
Republic Day 2023: ಸ್ವಾತಂತ್ರ್ಯಾ ನಂತರ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ಸಂವಿಧಾನವನ್ನು ರಚನೆ ಮಾಡಲಾಯಿತು ಎಂದು ಪ್ರಸನ್ನನಾಥ ಸ್ವಾಮೀಜಿ ಹೇಳಿದರು.
ಶಿವಮೊಗ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು ಎಂಬುದನ್ನು ತೋರಿಸಿಕೊಟ್ಟಂತಹ ಸಂವಿಧಾನ (Republic Day 2023) ನಮ್ಮ ದೇಶದ್ದು, ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಅಭಿಪ್ರಾಯಪಟ್ಟರು.
ನಗರದ ಗುರುಪುರದಲ್ಲಿರುವ ಬಿಜಿಎಸ್ ಶಾಲಾ ಕಾಲೇಜಿನಲ್ಲಿ ನಡೆದ ೭೪ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಸ್ವಾತಂತ್ರ್ಯಾ ನಂತರ ಭಾರತದ ಪ್ರಜೆಗಳಾದ ನಾವು ಹೇಗೆ ಬದುಕಬೇಕು, ನಮ್ಮ ಆಡಳಿತ ವೈಖರಿ ಯಾವ ರೀತಿ ನಡೆಯಬೇಕು ಎಂಬುದನ್ನು ತೋರಿಸಿಕೊಡುವ ಸಲುವಾಗಿ ನಿಯಮಗಳನ್ನು ರೂಪಿಸಲಾಯಿತು. ಅದುವೇ ನಮ್ಮ ಸಂವಿಧಾನ ಎಂದರು.
ಈ ಸಂವಿಧಾನ ರಚಿಸಲು ಡಾ. ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಯಿತು. ಅವರು ನೀಡಿದಂತಹ ವರದಿಯ ಅನುಸಾರ ನಮ್ಮ ಸಂವಿಧಾನ ಜಾರಿಗೆ ಬಂದಿತು. ಅತ್ಯಂತ ಬಲಿಷ್ಠವಾದ ಮತ್ತು ಪ್ರಬುದ್ಧವಾದ ಸಂವಿಧಾನವನ್ನು ನಮ್ಮ ದೇಶ ಹೊಂದಿದೆ. ವಿಶ್ವದಲ್ಲಿಯೇ ಅತ್ಯಂತ ಉತ್ತಮವಾದ ಸಂವಿಧಾನವನ್ನು ಹೊಂದಿರುವ ದೇಶ ಭಾರತವಾಗಿದೆ ಎಂದರು.
ಇದನ್ನೂ ಓದಿ | Washington Sundar | ನಿಮ್ಮಿಷ್ಟದ ಬಿರಿಯಾನಿ ಸಿಗಲ್ಲ ಎಂದಾದರೆ ಹೋಟೆಲ್ ಬದಲಿಸುತ್ತೀರಾ? ಸುಂದರ್ ಕೇಳಿದ್ದು ಯಾರಿಗೆ?
ಇದೇ ತಿಂಗಳು ನಾವು ಮತದಾರರ ದಿನಾಚರಣೆಯನ್ನು ಆಚರಿಸಿದ್ದೇವೆ, ನಮ್ಮ ಜನಪ್ರತಿನಿಧಿಯನ್ನು ಮತ್ತು ನಮ್ಮ ದೇಶವನ್ನು ಮುನ್ನಡೆಸುವಂತಹ ನಾಯಕರನ್ನು ಆರಿಸಿಕೊಳ್ಳುವಂತಹ ಅವಕಾಶ ಮತ್ತು ಹೊಣೆಗಾರಿಕೆ ನಮ್ಮ ಮೇಲೆಯೇ ಇದೆ. ದುರಂತವೆಂದರೆ ಮತದಾನದಲ್ಲಿ ಪಾಲ್ಗೊಳ್ಳದೇ ಇರುವುದು ನಮಗೆ ನಾವೇ ದ್ರೋಹ ಮಾಡಿಕೊಂಡಂತಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ತಮಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮತವನ್ನು ಚಲಾಯಿಸುವ ಮೂಲಕ ಉತ್ತಮ ಜನನಾಯಕರನ್ನು ಆಯ್ಕೆ ಮಾಡಿ ದೇಶದ ಹಾಗೂ ರಾಜ್ಯದ ಭವಿಷ್ಯವನ್ನು ಭದ್ರಗೊಳಿಸುವಂತಹ ಗುರುತರ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕು ಎಂದರು.
ಧ್ವಜಾರೋಹಣ ನೇರವೇರಿಸಿದ ನಿವೃತ್ತ ಪ್ರಾಧ್ಯಾಪಕ ಪ್ರೊ.ಗೌರಿಶಂಕರ್ ಮಾತನಾಡಿ, ಪ್ರತಿಯೊಂದು ಮಗುವಿನಲ್ಲಿಯೂ ಕೌಶಲ್ಯ ಮತ್ತು ಜ್ಞಾನ ಅಡಗಿರುತ್ತದೆ. ಇಂದು ವಿದ್ಯಾರ್ಥಿಗಳಾಗಿರುವ ನೀವು ಭವಿಷ್ಯದಲ್ಲಿ ಮಹಾತ್ಮ ಗಾಂಧಿ, ನೆಹರೂ, ಸುಭಾಷ್ ಚಂದ್ರಬೋಸ್, ಐನ್ಸ್ಟೀನ್ ಸೇರಿದಂತೆ ಮಹಾನ್ ವ್ಯಕ್ತಿಗಳಾಗಬಹುದಾಗಿದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯೂ ನಿರಂತರ ಶ್ರಮವನ್ನು ನಡೆಸಿದ್ದೇ ಆದಲ್ಲಿ ನಿಮ್ಮ ಗುರಿಯನ್ನು ತಲುಪಬಹುದಾಗಿದೆ. ಇದರೊಂದಿಗೆ ಅದೃಷ್ಟವೂ ಬೇಕಾಗಿದೆ. ಇದರಲ್ಲಿ ಕೇವಲ ಒಂದನ್ನು ನಂಬಿ ಕೂರುವಂತಿಲ್ಲ. ನಿಮ್ಮಲ್ಲಿರುವ ಪ್ರತಿಭೆಯನ್ನು ಹೊರ ತೆಗೆಯುವಂತಹ ಕೆಲಸವನ್ನು ಪೋಷಕರು ಹಾಗೂ ಶಿಕ್ಷಕರು ಮಾಡಬೇಕಾಗಿದೆ ಎಂದರು.
ಇದನ್ನೂ ಓದಿ | Masaba Gupta: ಫ್ಯಾಮಿಲಿ ಗೆಟ್ ಟು ಗೆದರ್ನಲ್ಲಿ ಸಂಭ್ರಮಿಸಿದ ನವದಂಪತಿ ಮಸಾಬಾ-ಸತ್ಯದೀಪ್
ವೇದಿಕೆ ಭಯವನ್ನು ಬಿಟ್ಟರೆ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಂತಹ ಸಮಾರಂಭವನ್ನು ಸಮರ್ಥವಾಗಿ ಎದುರಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಅವರು, ನಿಮ್ಮಲಿರುವ ಜ್ಞಾನವನ್ನು ಸದುಪಯೋಗಪಡಿಸಿಕೊಂಡು ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರಾಜ್ಯ ಹಾಗೂ ರಾಷ್ಟ್ರದ ಪ್ರಜೆಗಳಾಗಿ ಎಂದು ಹಾರೈಸಿದರು. ಸಮಾರಂಭದಲ್ಲಿ ಪ್ರಾಂಶುಪಾಲ ಎಸ್.ಎಚ್.ಸುರೇಶ್, ಉಪನ್ಯಾಸಕ ರಮೇಶ್, ಅಧ್ಯಾಪಕ ಹರೀಶ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕ ರಾ.ಹ.ತಿಮ್ಮೇನಹಳ್ಳಿ ಗಣರಾಜ್ಯೋತ್ಸವ ಕಾರ್ಯಕ್ರಮ ನಿರ್ವಹಿಸಿದರು.
ಕರ್ನಾಟಕ
Siddeshwara Swamiji: ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ಶ್ರೀಗಳ ಮರುಸೃಷ್ಟಿ; ದೃಶ್ಯ ರೂಪಕ ವೈರಲ್
Siddeshwara Swamiji: ಇತ್ತೀಚೆಗೆ ಲಿಂಗೈಕ್ಯರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರ ಮರುಸೃಷ್ಟಿಯನ್ನು ಶಾಲಾ ವಿದ್ಯಾರ್ಥಿಗಳು ಮಾಡಿರುವುದು ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ. ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಶ್ರೀಗಳ ದೃಶ್ಯ ರೂಪಕದ ಮೂಲಕ ಮಹಾಚೇತನವನ್ನು ವಿಶೇಷವಾಗಿ ಸ್ಮರಿಸಿದರು.
ವಿಜಯಪುರ: ನಡೆದಾಡುವ ದೇವರೆಂದೇ ಭಕ್ತ ಜನರು ನಂಬಿದ್ದ ಮಹಾ ಸಂತ ಸಿದ್ದೇಶ್ವರ ಸ್ವಾಮೀಜಿಯವರ (Siddeshwara Swamiji) ದೃಶ್ಯ ರೂಪಕ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಗಣರಾಜ್ಯೋತ್ಸವದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಸಿದ್ದೇಶ್ವರ ದೃಶ್ಯ ರೂಪಕ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಇಲ್ಲಿನ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದ ಶಾಲಾ ವಿದ್ಯಾರ್ಥಿಗಳು, ಸಂತನೆಂದರೆ ಯಾರು ಎನ್ನುವ ಹಾಡಿನೊಂದಿಗೆ ಶ್ರೀಗಳ ದೃಶ್ಯ ರೂಪಕವನ್ನು ಮಾಡಿ ತೋರಿಸಿದ್ದಾರೆ. ತಮ್ಮ ಮಾತಿನ ಮೂಲಕವೇ ಜಗವನ್ನು ಗೆದ್ದ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲವಾದರೂ, ಅವರ ನಡೆ-ನುಡಿ, ಅವರ ಆದರ್ಶಗಳು ಜೀವಂತವಾಗಿವೆ.
ಇದನ್ನೂ ಓದಿ: Ola Cab Compensation: ಓಲಾ ಕ್ಯಾಬ್ನಲ್ಲಿ ಎಸಿ ಇಲ್ಲದ್ದಕ್ಕೆ ದೂರು, ಬೆಂಗಳೂರು ವ್ಯಕ್ತಿಗೆ 15 ಸಾವಿರ ರೂ. ಪರಿಹಾರ
ಅವರಾಡುವ ಮಾತುಗಳೆಲ್ಲ ದಿವ್ಯವಾಣಿ ಎಂತಿದ್ದವು. ೮೨ ವರ್ಷಗಳ ಸಾರ್ಥಕ ಬದುಕಿನ ಉದ್ದಕ್ಕೂ ಸ್ವಂತದ ಬಗ್ಗೆ ಸಾಸಿವೆಯಷ್ಟೂ ಯೋಚಿಸದ ಶ್ರೀಗಳು, ಜಗತ್ತಿನ ಜನರ ಒಳಿತಿನ ಬಗ್ಗೆಯೇ ಧೇನಿಸಿದರು. ತಾವು ಬಿಟ್ಟು ಹೋದ ಉದಾತ್ತ ಆದರ್ಶಗಳ ಮೂಲಕ ಶತಮಾನಗಳ ಆಚೆಗೂ ಚಿರಂತನವಾಗಿ ಉಳಿದಿದ್ದಾರೆ.
ಈಗ ಮಕ್ಕಳ ಈ ದೃಶ್ಯ ರೂಪಕ ಸಾಮಾಜಿಕ ಜಾಲತಾಣದಲ್ಲಿ ಜನರ ಮೆಚ್ಚುಗೆಯನ್ನು ಗಳಿಸುತ್ತಿದೆ. ನೆಟ್ಟಿಗರು ಮಕ್ಕಳ ನಟನೆಗೆ ಸೈ ಎಂದಿದ್ದಾರೆ.
ಗಣರಾಜ್ಯೋತ್ಸವ
Republic Day : ಗಣರಾಜ್ಯೋತ್ಸವ ಹಿನ್ನೆಲೆ ಸಿಹಿ ಹಂಚಿಕೊಂಡ ಭಾರತ, ಪಾಕಿಸ್ತಾನದ ಸೈನಿಕರು
ಗಣರಾಜ್ಯೋತ್ಸವ ಖುಷಿಯಲ್ಲಿದ್ದ ಭಾರತದ ಸೈನಿಕರು ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಗಡಿ ಭದ್ರತಾ ಪಡೆಯ ಸಿಬ್ಬಂದಿಗೆ ಸಿಹಿ ಹಂಚಿದರು.
ನವ ದೆಹಲಿ : ದೇಶಾದ್ಯಂತ ಗುರುವಾರ (ಜನವರಿ 26ರಂದು) ಗಣರಾಜ್ಯೋತ್ಸವ (Republic Day) ಆಚರಣೆ ಮಾಡಲಾಯಿತು. ಅಂತೆಯೇ ಗಡಿಯಲ್ಲೂ ಭಾರತದ ಗಡಿ ಭದ್ರತಾ ಸಿಬ್ಬಂದಿಗಳು ಸಂಭ್ರಮಾಚರಣೆ ನಡೆಸಿದರು. ಇದೇ ವೇಳೆ ಭಾರತ ಹಾಗೂ ಪಾಕಿಸ್ತಾನದ (India-Pak soldiers) ಸೇನಾ ಸಿಬ್ಬಂದಿಗಳು ಪರಸ್ಪರ ಸಿಹಿ ಹಂಚಿಕೊಂಡು ಖುಷಿ ಹಂಚಿಕೊಂಡರು.
ಜಮ್ಮು ಕಾಶ್ಮೀರದ ಆರ್ಎಸ್ಪುರ ಪ್ರದೇಶದಲ್ಲಿ ಪಾಕಿಸ್ತಾನ ಹಾಗೂ ಭಾರತದ ಸೇನಾ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೂ ಸಿಹಿ ಸೈನಿಕರಿಗೆ ಸಿಹಿ ವಿತರಣೆ ಮಾಡಿದರು. ಈ ಮಾಹಿತಿಯನ್ನು ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ : ವಿಸ್ತಾರ TOP 10 NEWS : ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮದಿಂದ, ಹಾಸನದಲ್ಲಿ ʼದಳʼ ತಳಮಳವರೆಗಿನ ಪ್ರಮುಖ ಸುದ್ದಿಗಳಿವು
ಇದೇ ವೇಳೆ ಭಾರತ ಹಾಗೂ ಬಾಂಗ್ಲಾದೇಶದ ಗಡಿಭಾಗದ ಸಿಲಿಗುರಿಯ ಫುಲ್ಬಾರಿ ಪ್ರದೇಶದಲ್ಲೂ ಬಿಎಸ್ಎಫ್ ಹಾಗೂ ಬಾರ್ಡರ್ ಗಾರ್ಡ್ ಬಾಂಗ್ಲಾದೇಶ್ ಸಿಬ್ಬಂದಿಗಳು ಸಿಹಿ ಹಂಚಿಕೊಂಡರು. ಈ ಬಗ್ಗೆ ಮಾತನಾಡಿದ 176ನೇ ಬೆಟಾಲಿಯನ್ನ ಕಂಪನಿ ಕಮಾಂಡರ್ ಶೈಲೇಂದ್ರ ಸಿಂಗ್, ಎರಡೂ ದೇಶಗಳ ನಡುವಿನ ಸಂಬಂಧ ವೃದ್ಧಿಗಾಗಿ ಸಿಹಿ ಹಂಚಿಕೊಂಡಿದ್ದೇವೆ ಎಂದು ಹೇಳಿದರು.
-
ಸುವಚನ15 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ಪ್ರಮುಖ ಸುದ್ದಿ20 hours ago
ವಿಸ್ತಾರ ಸಂಪಾದಕೀಯ: ಪಬ್ಲಿಕ್ ಪರೀಕ್ಷೆ ಗೊಂದಲ; ವಿದ್ಯಾರ್ಥಿಗಳು, ಪೋಷಕರ ಮೇಲೆ ಮಾನಸಿಕ ಒತ್ತಡ
-
ಕರ್ನಾಟಕ24 hours ago
Life changing story : ನಿಂದನೆಯೇ ವರವಾಯಿತು, ಹಠ ತೊಟ್ಟು ವಕೀಲನಾಗಿ ಕರಿಕೋಟು ಧರಿಸಿ ವಾದಿಸಿ ಗೆದ್ದ ಯುವಕ!
-
ಆಟೋಮೊಬೈಲ್21 hours ago
Oscar 2023 : ನಾಟು ನಾಟು ಹಾಡಿಗೆ ಡಾನ್ಸ್ಮಾಡಿದ ಟೆಸ್ಲಾ ಕಾರುಗಳು! ಇಲ್ಲಿದೆ ನೋಡಿ ವಿಡಿಯೊ
-
ಕ್ರಿಕೆಟ್5 hours ago
IND VS AUS: ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ಕರ್ನಾಟಕ10 hours ago
Shivamogga politics : ಯುಗಾದಿ, ರಂಜಾನ್ಗೆ ಶುಭ ಕೋರಿ ಫ್ಲೆಕ್ಸ್ ಹಾಕಿಸಿದ ಆಯನೂರು, ಹರಕು ಬಾಯಿ ಮುಚ್ಚಲಿ ಅಂದಿದ್ದು ಯಾರಿಗೆ?
-
ಧಾರ್ಮಿಕ8 hours ago
Ugadi 2023 : ಜಗದ ಆದಿ ಈ ಯುಗಾದಿ!
-
ಅಂಕಣ10 hours ago
ನನ್ನ ದೇಶ ನನ್ನ ದನಿ ಅಂಕಣ: ಪಂಜಾಬ್ ನಾಶವಾಗುವುದು ಒಳ್ಳೆಯ ಲಕ್ಷಣವಲ್ಲ