Cyclone Biparjoy: ಗುಜರಾತ್​​ನಲ್ಲಿ ಬಿಪರ್​ಜಾಯ್​ ಸಂಕಷ್ಟ; ಹಸುಳೆಗೆ ಖಾಲಿ ಸಿಮೆಂಟ್​ ಚೀಲದ ಶ್ರೀರಕ್ಷೆ! - Vistara News

ದೇಶ

Cyclone Biparjoy: ಗುಜರಾತ್​​ನಲ್ಲಿ ಬಿಪರ್​ಜಾಯ್​ ಸಂಕಷ್ಟ; ಹಸುಳೆಗೆ ಖಾಲಿ ಸಿಮೆಂಟ್​ ಚೀಲದ ಶ್ರೀರಕ್ಷೆ!

ಬಿಪರ್​ಜಾಯ್ ಚಂಡಮಾರುತವು ದುರ್ಬಲಗೊಂಡಿದ್ದಲ್ಲದೆ, ರಾಜಸ್ಥಾನದ ಕಡೆಗೆ ಚಲಿಸಿದೆ. ಇಂದು ಗುಜರಾತ್​ ಕರಾವಳಿಯ ಕೆಲವು ಭಾಗಗಳಲ್ಲಿ ಮತ್ತು ರಾಜಸ್ಥಾನದ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಜೋರಾಗಿ ಗಾಳಿ ಬೀಸುವ ಜತೆಗೆ ಕಡಿಮೆಯಿಂದ ಸಾಮಾನ್ಯ ಮಳೆಯಾಗಬಹುದು. ರಾಜಸ್ಥಾನ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

VISTARANEWS.COM


on

Rescue Operations In Biparjoy Cyclone hit Gujarat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುಜರಾತ್​​ನಲ್ಲಿ ಬಿಪರ್​ಜಾಯ್​ ಚಂಡಮಾರುತದ (Cyclone Biparjoy) ಅಬ್ಬರದಿಂದ ವಿಪರೀತ ಮಳೆಯಾಗುತ್ತಿದೆ. ಸಮುದ್ರದಲ್ಲಿ ದೊಡ್ಡದೊಡ್ಡ ಅಲೆಗಳು ಏಳುತ್ತಿವೆ. ಜಲಾವೃತಗೊಂಡ ಪ್ರದೇಶಗಳಿಂದ ಜನರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುವ ಕೆಲಸವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ಚುರುಕಾಗಿ ಮಾಡುತ್ತಿದ್ದಾರೆ. ಚಂಡಮಾರುತದಿಂದ ಗುಜರಾತ್​​ನಲ್ಲಿ ಉಂಟಾಗಿರುವ ಅವ್ಯವಸ್ಥೆಗಳ ಹಲವು ಫೋಟೋ-ವಿಡಿಯೊಗಳು ಸಾಕಷ್ಟು ವೈರಲ್ ಆಗುತ್ತಿವೆ. ಹಾಗೇ, ದೇವಭೂಮಿ ದ್ವಾರಕಾ ಜಿಲ್ಲೆಯ ರೂಪನ್​ ಬಂದರ್ ಶಾಲೆ ಇರುವ ಭಾಗ ಸಂಪೂರ್ಣವಾಗಿ ಜಲಾವೃತಗೊಂಡು, ಅಲ್ಲಿಂದ ಸುಮಾರು 127 ಜನರನ್ನು ಎನ್​ಡಿಆರ್​ಎಫ್​ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.

ರೂಪನ್ ಬಂದರ್​ ಶಾಲೆಯಲ್ಲಿ ಸುತ್ತಲೂ ಮೊಣಕಾಲು ಮಟ್ಟದ ನೀರು ನಿಂತಿತ್ತು. ಅಲ್ಲಿಯೇ ಸುತ್ತಮುತ್ತಲೂ ಇದ್ದ ಮನೆಗಳ ಜನರೂ ಕೂಡ ಇದರಿಂದ ಪರದಾಡುತ್ತಿದ್ದರು. ಎನ್​ಡಿಆರ್​ಎಫ್ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾದರು. ವೃದ್ಧರು, ಮಕ್ಕಳು, ಹಸುಳೆ, ಸೇರಿ ಎಲ್ಲರನ್ನೂ ಪಾರುಮಾಡಿದ್ದಾರೆ. ಇದೇ ವೇಳೆ ಶಿಶುವೊಂದನ್ನು ಬಟ್ಟೆಯಲ್ಲಿ ಸುತ್ತಿ, ಬಳಿಕ ಅದಕ್ಕೆ ಮಳೆ ತಾಗಬಾರದು ಎಂಬ ಕಾರಣಕ್ಕೆ, ಮೇಲಿಂದ ಸಿಮೆಂಟ್ ಚೀಲ ಹಾಕಿ ಸುತ್ತಿ ಕರೆದುಕೊಂಡು ಬರುತ್ತಿರುವ ವಿಡಿಯೊ ವೈರಲ್ ಆಗಿದೆ. ಈ ಭಾಗದಿಂದ ಒಟ್ಟು 82 ಪುರುಷರು, 15 ಮಕ್ಕಳು, ಮೂವರು ನರ್ಸಿಂಗ್ ಸಿಬ್ಬಂದಿ, 27 ಮಹಿಳೆಯರನ್ನು ಎನ್​ಡಿಆರ್​ಎಫ್​ ಯೋಧರು ಯಶಸ್ವಿಯಾಗಿ ರಕ್ಷಣೆ ಮಾಡಿದ್ದಾರೆ.

ಇದನ್ನೂ ಓದಿ: Cyclone Biparjoy: ಬಿಪರ್‌ಜಾಯ್‌ ಚಂಡಮಾರುತ ಭೀತಿ; ಈ ಪದದ ಅರ್ಥ ಏನು? ಮೊದಲು ಎಲ್ಲಿ ಬಳಕೆ?

ಗೃಹ ಸಚಿವ ಅಮಿತ್​ ಶಾ ವೈಮಾನಿಕ ಸಮೀಕ್ಷೆ

ಬಿಪರ್​ಜಾಯ್ ಚಂಡಮಾರುತವು ದುರ್ಬಲಗೊಂಡಿದ್ದಲ್ಲದೆ, ರಾಜಸ್ಥಾನದ ಕಡೆಗೆ ಚಲಿಸಿದೆ. ಇಂದು ಗುಜರಾತ್​ ಕರಾವಳಿಯ ಕೆಲವು ಭಾಗಗಳಲ್ಲಿ ಮತ್ತು ರಾಜಸ್ಥಾನದ ದಕ್ಷಿಣ ಕರಾವಳಿ ಪ್ರದೇಶದಲ್ಲಿ ಜೋರಾಗಿ ಗಾಳಿ ಬೀಸುವ ಜತೆಗೆ ಕಡಿಮೆಯಿಂದ ಸಾಮಾನ್ಯ ಮಳೆಯಾಗಬಹುದು. ರಾಜಸ್ಥಾನ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಬಿಪರ್​ಜಾಯ್​ ಚಂಡಮಾರುತದ ಕಾರಣಕ್ಕೆ ಗುಜರಾತ್​​ನಲ್ಲಿ ವಿಪರೀತ ಹಾನಿಯಾಗಿದ್ದು, ಇಂದು ಗೃಹ ಸಚಿವ ಅಮಿತ್ ಶಾ ಅವರು ವೈಮಾನಿಕ ಸಮೀಕ್ಷೆ ಮೂಲಕ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಲಿದ್ದಾರೆ. ಇವರ ಜತೆಗೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​ ಕೂಡ ಇರಲಿದ್ದಾರೆ. ಇಂದು ಮಧ್ಯಾಹ್ನ ಅಮಿತ್ ಶಾ ಅವರು ಭುಜ್​​ನಲ್ಲಿ ಸಭೆ ನಡೆಸಲಿದ್ದು, ಚಂಡಮಾರುತದ ಪರಿಣಾಮ, ಹಾನಿ, ಪರಿಹಾರ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Hindu Girl: ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

VISTARANEWS.COM


on

Hindu Girl
ಸಾಂದರ್ಭಿಕ ಚಿತ್ರ.
Koo

ಮುಂಬೈ: ಯಾವ ಧರ್ಮವೂ ಹಿಂಸೆಯನ್ನು, ಬಲವಂತದ ಮತಾಂತರವನ್ನು, ಲೈಂಗಿಕ ಕಿರುಕುಳ ಸೇರಿ ಯಾವುದೇ ಅನಾಚಾರವನ್ನು ಬೋಧಿಸುವುದಿಲ್ಲ. ಯಾವ ಧರ್ಮಗ್ರಂಥವೂ ಬೇರೆಯವರಿಗೆ ಕೆಡಕು ಮಾಡಿ ಎನ್ನುವುದಿಲ್ಲ. ಆದರೆ, ಧರ್ಮಪಾಲಕರ ಮೂಲಭೂತವಾದವು ಸಮಾಜಕ್ಕೆ ಮಾರಕವಾಗುತ್ತಿದೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದಲ್ಲಿ (Maharashtra) ಮುಸ್ಲಿಂ ವ್ಯಕ್ತಿಯೊಬ್ಬ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯು ಇಸ್ಲಾಂಅನ್ನು ಅನುಸರಿಸಬೇಕು ಎಂದು ಒತ್ತಾಯಿಸುವ ಮೂಲಕ ಹೀನ ಕೃತ್ಯ ಎಸಗಿದ್ದಾನೆ.

ಮುಂಬೈನ ಕಾಶಿಗಾಂವ್‌ ಪ್ರದೇಶದಲ್ಲಿ ಹೀನ ಕೃತ್ಯ ನಡೆದಿದೆ. ಇಬ್ರಾಹಿಂ ಖಾನ್‌ ಎಂಬಾತನೇ ಹೀನ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಬ್ರಾಹಿಂ ಖಾನ್‌ ವಿರುದ್ಧ ಐಪಿಸಿ ಹಾಗೂ ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಇನ್ನು, ಕೃತ್ಯ ಬಯಲಾಗುತ್ತಲೇ ಇಬ್ರಾಹಿಂ ಖಾನ್‌ ಪರಾರಿಯಾಗಿದ್ದು, ಈತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Hubli

6 ತಿಂಗಳಿಂದ ನಿರಂತರ ಕಿರುಕುಳ

14 ವರ್ಷದ ಬಾಲಕಿ ಹಾಗೂ ಆಕೆಯ ಸಹೋದರಿಯ ತಂದೆ-ತಾಯಿ ತೀರಿಕೊಂಡ ಕಾರಣ 2023ರ ಕಾಶಿಗಾಂವ್‌ಗೆ ಇಬ್ಬರೂ ಸ್ಥಳಾಂತರಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿ ಇಬ್ಬರೂ ಆಶ್ರಯ ಪಡೆದಿದ್ದಾರೆ. ಇದೇ ಕಾಶಿಗಾಂವ್‌ ನಿವಾಸಿಯಾದ ಇಬ್ರಾಹಿಂ ಖಾನ್‌, ಬಾಲಕಿಯನ್ನು ಗಮನಿಸಿದ್ದಾನೆ. ಪದೇಪದೆ ಬಾಲಕಿಯನ್ನು ಮಾತನಾಡಿಸುವುದು, ನಗುವುದು, ನೀನೇ ನನ್ನ ಜೀವನ ಎಂದು ಕಿಚಾಯಿಸುವುದು ಸೇರಿ ಹಲವು ರೀತಿಯಲ್ಲಿ ಆಕೆಯ ಮನವೊಲಿಸಲು ಯತ್ನಿಸಿದ್ದಾನೆ.

ಕೆಲ ತಿಂಗಳ ಹಿಂದೆ, ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಇಬ್ರಾಹಿಂ ಖಾನ್‌ ಬಾಲಕಿಯ ಮನೆಗೆ ನುಗ್ಗಿದ್ದಾನೆ. ಆಗ ಬಾಲಕಿಯ ಎದುರು ಪ್ರೇಮ ನಿವೇದನೆ ಮಾಡಿದ ಆತ, ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಆಕೆಯ ಮನೆಗೆ ಹೋಗುವುದು, ಲೈಂಗಿಕ ದೌರ್ಜನ್ಯ ಎಸಗುವುದು ಹಾಗೂ ಇಸ್ಲಾಂ ರೀತಿ-ರಿವಾಜುಗಳನ್ನು ಅನುಸರಿಸಬೇಕು ಎಂಬುದಾಗಿ ಒತ್ತಾಯಿಸಿದ್ದಾನೆ. ಇಬ್ರಾಹಿಂ ಖಾನ್‌ನಿಂದ ನಿರಂತರವಾಗಿ ಕಿರುಕುಳಕ್ಕೊಳಗಾದ ಬಾಲಕಿಯು ಮೇ 3ರಂದು ಹಿರಿಯರೊಂದಿಗೆ ತೆರಳಿ ದೂರು ದಾಖಲಿಸಿದ್ದಾಳೆ. ಇದಾದ ಬಳಿಕ ಪೊಲೀಸರು ಕೇಸ್‌ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

“ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನುಗ್ಗುತ್ತಿದ್ದ ಆತ, ನನ್ನನ್ನು ಮದುವೆಯಾಗುತ್ತೇನೆ ಎಂಬುದಾಗಿ ಹೇಳು ಎಂದು ಒತ್ತಾಯಿಸುತ್ತಿದ್ದ. ನನಗೆ ನನ್ನ ತಂದೆ-ತಾಯಿ ಜತೆ ಇರಲು ಇಷ್ಟವಿಲ್ಲ. ನಿನ್ನೊಂದಿಗೆ ನಾನು ಬದುಕಲು ಇಷ್ಟ. ಇಬ್ಬರೂ ಬೇರೆ ಕಡೆ ಬಾಡಿಗೆ ಮನೆ ಮಾಡೋಣ. ಅಲ್ಲಿ ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ. ಇಬ್ಬರೂ ಜತೆಯಾಗಿರೋಣ ಎಂದು ಹೇಳಿದ. ಇದಕ್ಕೆ ನಾನು ಒಪ್ಪದಿದ್ದಾಗ ದೌರ್ಜನ್ಯ ಎಸಗಿದ” ಎಂಬುದಾಗಿ ಎಫ್‌ಐಆರ್‌ನಲ್ಲಿ ಬಾಲಕಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: PUBG Love: ಪಬ್ಜಿ ಆಡುವಾಗ ಸಿಕ್ಕ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಮದುವೆ; ಈಗ ಬಾಳೇ ನರಕ!

Continue Reading

ದೇಶ

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Poonch Terrorists: ಮೇ 4ರಂದು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ವಾಯುಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಈಗ ದಾಳಿ ಮಾಡಿದ ಮೂವರು ಉಗ್ರರನ್ನು ಗುರುತಿಸಲಾಗಿದ್ದು, ಎನ್‌ಕೌಂಟರ್‌ಗೆ ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

VISTARANEWS.COM


on

Poonch Terrorists
Koo

ಶ್ರೀನಗರ: ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ (Indian Air Force) ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ (Poonch Terrorists) ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು (Indian Army) ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮೇ 4ರಂದು ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ವಾಯುಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಪೂಂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಮೊದಲೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿತ್ತು.

ಸಿಸಿಟಿವಿ ದೃಶ್ಯಗಳು ಹಾಗೂ ಫೋಟೊಗಳನ್ನು ಪರಿಶೀಲನೆ ಮಾಡುತ್ತಿರುವ ಭಾರತೀಯ ಸೇನೆಯು ರಾಜೌರಿ ಹಾಗೂ ಪೂಂಚ್‌ನ ಅರಣ್ಯ ಪ್ರದೇಶದಲ್ಲಿ‌ ಮೂವರ ಹತ್ಯೆಗಾಗಿ ಬೃಹತ್ ಕಾರ್ಯಾಚರಣೆ ಕೈಗೊಳ್ಳಲು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ ಕೆಲವೆಡೆ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ ಎಂದು ಹೇಳಲಾಗುತ್ತಿದೆ. ಪೂಂಚ್‌ ದಾಳಿಯ ಬಳಿಕ ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾದ ಮೂವರು ಉಗ್ರರನ್ನು ಹೊಡೆದುರುಳಿಸುವ ಮೂಲಕ ಯೋಧರು ಸೇಡು ತೀರಿಸಿಕೊಂಡಿದ್ದರು. ಮೇ 6ರಂದು ಕುಲ್ಗಾಮ್‌ನಲ್ಲಿ ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಉಗ್ರ ಸೇರಿ ಒಟ್ಟು ಮೂವರು ಹತ್ಯೆಗೈದಿದ್ದರು.

ಇದನ್ನೂ ಓದಿ: Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Continue Reading

ದೇಶ

Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

ಹೆಚ್ಚುತ್ತಿರುವ ಬೀದಿನಾಯಿಗಳು ಆಕ್ರಮಣ ಸಾಮಾಜಿಕವಾಗಿ ಆತಂಕಕ್ಕೆ ಕಾರಣವಾಗಿದೆ. ಬೀದಿ ನಾಯಿಗಳು ದಾಳಿಗೆ ಅನೇಕ ಕಾರಣಗಳಿರುತ್ತವೆ. ಬೀದಿ ನಾಯಿಗಳು (Dogs Attack) ಏಕೆ ದಾಳಿ ಮಾಡುತ್ತವೆ, ನಾಯಿಗಳ ಬಗ್ಗೆ ಕಾನೂನು ಏನು ಹೇಳುತ್ತದೆ ಮತ್ತು ಅಂತಹ ದಾಳಿಗಳಿಗೆ ಯಾರು ಹೊಣೆಗಾರರಾಗುತ್ತಾರೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Dogs Attack
Koo

ಚೆನ್ನೈನ (chennai) ಸಾರ್ವಜನಿಕ ಪ್ರದೇಶದಲ್ಲಿ ಇತ್ತೀಚೆಗೆ ಎರಡು ಸಾಕು ನಾಯಿಗಳು ದಾಳಿ (Dogs Attack) ನಡೆಸಿದ್ದರಿಂದ ಐದು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡು ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಾಯಿತು. ಕಳೆದ ಫೆಬ್ರವರಿಯಲ್ಲಿ ದೆಹಲಿಯ (delhi) ತುಘಲಕ್ ಲೇನ್‌ನ ಧೋಬಿ ಘಾಟ್ ಪ್ರದೇಶದಲ್ಲಿ ಎರಡು ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದು ಹಾಕಿತ್ತು. ಕಳೆದ ವರ್ಷ, ವಾಘ್ ಬಕ್ರಿ ಟೀ ಗ್ರೂಪ್‌ನ (Wagh Bakri Tea Group) ಕಾರ್ಯನಿರ್ವಾಹಕ ನಿರ್ದೇಶಕ ಪರಾಗ್ ದೇಸಾಯಿ ಅವರು ಬೀದಿ ನಾಯಿಗಳ ದಾಳಿಗೆ ಒಳಗಾಗಿ ಸಾವನ್ನಪ್ಪಿದ್ದರು.

ಇದು ಕೆಲವು ಉದಾಹರಣೆಯಷ್ಟೇ. ದೇಶದ ಹಲವಾರು ಭಾಗಗಳಲ್ಲಿ ನಾಯಿಗಳ ದಾಳಿಯಿಂದ ಅನೇಕ ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಗಾಯಗೊಂಡಿದ್ದಾರೆ. ಇದು ಸಮಾಜಿಕವಾಗಿ ಆತಂಕಕ್ಕೆ ಕಾರಣವಾಗಿದೆ. ಬೀದಿನಾಯಿಗಳು ದುರ್ಬಲ ಜನರನ್ನು, ಹೆಚ್ಚಾಗಿ ಮಕ್ಕಳು ಮತ್ತು ಹಿರಿಯ ನಾಗರಿಕರ ಮೇಲೆ ದಾಳಿ ನಡೆಸುತ್ತವೆ. ಬೀದಿ ನಾಯಿಗಳು ಏಕೆ ದಾಳಿ ಮಾಡುತ್ತವೆ, ನಾಯಿಗಳ ಬಗ್ಗೆ ಕಾನೂನು ಏನು ಹೇಳುತ್ತದೆ ಮತ್ತು ಅಂತಹ ದಾಳಿಗಳಿಗೆ ಯಾರು ಹೊಣೆಗಾರರಾಗುತ್ತಾರೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ದಾಳಿಗೆ ಏನು ಕಾರಣ?

ಭಾರತದಲ್ಲಿ ಪ್ರಾಣಿಗಳ ಆರೋಗ್ಯ ರಕ್ಷಣೆ ಮತ್ತು ನಿಯಂತ್ರಣಕ್ಕೆ ಸರಿಯಾದ ಕಾರ್ಯವಿಧಾನಗಳಿಲ್ಲ. ಸರಿಯಾದ ಪ್ರಾಣಿ ನಿಯಂತ್ರಣ ಕ್ರಮಗಳ ಕೊರತೆಯು ಬೃಹತ್ ಸಂಖ್ಯಾ ಸ್ಫೋಟಕ್ಕೆ ಮತ್ತು ಮನುಷ್ಯರೊಂದಿಗೆ ಘರ್ಷಣೆಗೆ ಕಾರಣವಾಗಿದೆ. ಇದಲ್ಲದೆ, ಸಾಂಕ್ರಾಮಿಕ ಕಾಯಿಲೆ, ಆಹಾರದ ಕೊರತೆಯಿಂದಾಗಿ ನಾಯಿಗಳು ಉಗ್ರವಾಗುತ್ತದೆ.

ನಾಯಿಗಳ ಸಂಖ್ಯೆ

ಅಂಕಿಅಂಶಗಳ ಪ್ರಕಾರ ಭಾರತದಲ್ಲಿ ಸಾಕು ನಾಯಿಗಳ ಒಟ್ಟಾರೆ ಸಂಖ್ಯೆಯು 2021ರಲ್ಲಿ 27 ಮಿಲಿಯನ್‌ಗಿಂತಲೂ ಹೆಚ್ಚಿದೆ. 2026ರ ವೇಳೆಗೆ ಇವುಗಳ ಸಂಖ್ಯೆಯು 43 ಮಿಲಿಯನ್‌ಗಿಂತಲೂ ಹೆಚ್ಚು ತಲುಪುವ ಸಾಧ್ಯತೆಯಿದೆ.
ಜಾಗತಿಕ ಪಿಇಟಿ ಆರೋಗ್ಯ ಮತ್ತು ಪೌಷ್ಟಿಕಾಂಶ ಕಂಪನಿಯಾದ ಮಾರ್ಸ್ ಪೆಟ್‌ಕೇರ್‌ನ ಸ್ಟೇಟ್ ಆಫ್ ಪೆಟ್ ಹೋಮ್‌ಲೆಸ್‌ನೆಸ್ ಇಂಡೆಕ್ಸ್ 2021ರ ಪ್ರಕಾರ ಭಾರತದಲ್ಲಿ ಬೀದಿ ನಾಯಿಗಳ ಸಂಖ್ಯೆಯು ಸುಮಾರು 62 ಮಿಲಿಯನ್ ಆಗಿದೆ.

ನಾಯಿ ಕಡಿತ ಪ್ರಕರಣ

2019ರಲ್ಲಿ ದೇಶದಲ್ಲಿ 4,146 ನಾಯಿ ಕಡಿತದ ಪ್ರಕರಣಗಳು ಮಾನವ ಸಾವಿಗೆ ಕಾರಣವಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಅಂಕಿಅಂಶಗಳನ್ನು ತೋರಿಸುತ್ತದೆ. ಇನ್ನೊಂದು ಮಾಹಿತಿ ಪ್ರಕಾರ ದೇಶದಲ್ಲಿ 2019 ರಿಂದ 1.5 ಕೋಟಿ ನಾಯಿ ಕಡಿತದ ಪ್ರಕರಣಗಳು ನಡೆದಿದೆ. ಅತೀ ಹೆಚ್ಚು ನಾಯಿಗಳು ಉತ್ತರ ಪ್ರದೇಶದಲ್ಲಿದ್ದು, 27.52 ಲಕ್ಷ ನಾಯಿಗಳನ್ನು ಹೊಂದಿದೆ. ತಮಿಳುನಾಡಿನಲ್ಲಿ 20.7 ಲಕ್ಷ ಮತ್ತು ಮಹಾರಾಷ್ಟ್ರ ದಲ್ಲಿ 15.75 ಲಕ್ಷ ನಾಯಿಗಳನ್ನು ಹೊಂದಿದೆ.

ನಾಯಿ ದಾಳಿಗೆ ಯಾರು ಹೊಣೆ?

ಬೀದಿ ನಾಯಿಗಳು ವ್ಯಘ್ರಗೊಂಡಿರಬಹುದು, ನೊಂದಿರಬಹುದು, ಹಸಿದಿರಬಹುದು, ಆಘಾತಕ್ಕೊಳಗಾಗಿರಬಹುದು, ಆತಂಕಕ್ಕೊಳಗಾಗಬಹುದು ಅಥವಾ ತಮ್ಮ ಮರಿಗಳನ್ನು ರಕ್ಷಿಸಿಕೊಳ್ಳಲು ದಾಳಿ ನಡೆಸುತ್ತವೆ. ಸರ್ಕಾರ ಮತ್ತು ಪ್ರಾಣಿ ಕಲ್ಯಾಣ ಸಂಸ್ಥೆಗಳ ನಿರ್ಲಕ್ಷ್ಯ ಮತ್ತು ವೈಯಕ್ತಿಕ ನಿರಾಸಕ್ತಿ ಸೇರಿದಂತೆ ಹಲವಾರು ಅಂಶಗಳ ಪರಿಣಾಮವಾಗಿ ಬೀದಿ ನಾಯಿಗಳ ದಾಳಿ ನಡೆಸುತ್ತವೆ.


ಸಾಕುಪ್ರಾಣಿಗಳನ್ನು ರಕ್ಷಣೆ ಕಾನೂನು

ಯಾವುದೇ ಪ್ರಾಣಿಯನ್ನು ದೀರ್ಘ ಕಾಲ ಸರಪಳಿಯಲ್ಲಿ ಬಂಧಿಸುವುದು ಕ್ರೌರ್ಯಕ್ಕೆ ಸಮಾನ. ಇದಕ್ಕೆ ದಂಡ ಅಥವಾ 3 ತಿಂಗಳವರೆಗೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ಮಾಲೀಕರು ತಮ್ಮ ಸಾಕುಪ್ರಾಣಿಗಳಿಗೆ ಸಾಕಷ್ಟು ಆಹಾರ, ಪಾನೀಯ ಅಥವಾ ಆಶ್ರಯವನ್ನು ಒದಗಿಸಲು ವಿಫಲವಾದರೆ ಅವರು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ 1960 ರ ಸೆಕ್ಷನ್ 11 (1) (h) ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ. ಇದು 1960 ಶಿಕ್ಷಾರ್ಹ ಅಪರಾಧವಾಗಿದೆ. ಯಾವುದೇ ವ್ಯಕ್ತಿಯು, ಯಾವುದೇ ಸಮಂಜಸವಾದ ಕಾರಣವಿಲ್ಲದೆ ಪ್ರಾಣಿಯು ಹಸಿವು ಅಥವಾ ಬಾಯಾರಿಕೆಯಿಂದ ನೋವನ್ನು ಅನುಭವಿಸುವ ಪರಿಸ್ಥಿತಿಯಲ್ಲಿ ಪ್ರಾಣಿಯನ್ನು ತ್ಯಜಿಸಿದರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಸೋಂಕಿತ, ರೋಗಗ್ರಸ್ತ ಅಥವಾ ಅಂಗವಿಕಲ ಪ್ರಾಣಿಯನ್ನು ಯಾವುದೇ ಅನುಮತಿಯಿಲ್ಲದೆ ಬೀದಿಗೆ ಬಿಟ್ಟರೆ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಸಾಕುಪ್ರಾಣಿಗಳ ಮಾಲೀಕರನ್ನು ಬೆದರಿಸುವುದು, ಅಥವಾ ಆರೈಕೆ ಮಾಡದಂತೆ ತಡೆಯುವುದು IPC ಯ ಸೆಕ್ಷನ್ 503 ರ ಅಡಿಯಲ್ಲಿ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ.

ನಾಯಿಗಳು ದಾಳಿ ಮಾಡಿದಾಗ ಏನು ಮಾಡಬೇಕು?

ನಾಯಿಗಳು ದಾಳಿ ಮಾಡಲು ಬಂದರೆ ಓಡಬೇಡಿ, ಕಿರುಚಬೇಡಿ. ಬದಲಾಗಿ ನಿಶ್ಚಲವಾಗಿರಿ. ಓಡಿದರೆ, ಕಿರುಚಿದರೆ ನಾಯಿ ದಾಳಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ.

ಕೋಲಿನಿಂದ ನಾಯಿಯನ್ನು ಬೆದರಿಸಬೇಡಿ. ಇದರಿಂದ ಅವು ಅಕ್ರಮಣಕಾರಿಯಾಗುತ್ತದೆ. ಬೀದಿಯಲ್ಲಿ ನಾಯಿಗಳಿಗೆ ಬಿಸ್ಕತ್ತುಗಳನ್ನು ನೀಡಿ. ಇದರಿಂದ ಅವುಗಳು ನಿಮ್ಮನ್ನು ಸ್ನೇಹಿತರಂತೆ ನೋಡುತ್ತದೆ.

ಇದನ್ನೂ ಓದಿ: Hindu Population: ಹಿಂದೂಗಳ ಜನಸಂಖ್ಯೆ ಶೇ.7.8 ಕುಸಿತ; ಮುಸ್ಲಿಮರ ಸಂಖ್ಯೆ ಶೇ.43.15 ಏರಿಕೆ!

ನಾಯಿಗಳು ದೊಡ್ಡ ಗುಂಪಿನಲ್ಲಿದ್ದರೆ ಅವುಗಳೊಂದಿಗೆ ಗುರಾಯಿಸಿ ನೋಡಬೇಡಿ. ನೇರವಾಗಿ ನಡೆಯಿರಿ. ನಾಯಿಗಳನ್ನು ಕಂಡು ಹಿಂತಿರುಗಿ ಓಡಬೇಡಿ. ಭಯವಾದರೆ ಬೇರೆ ಮಾರ್ಗವನ್ನು ಬಳಸಿ.

ನಿಮ್ಮನ್ನು ರಕ್ಷಿಸಿಕೊಳ್ಳಲು ಚೀಲವನ್ನು ಬಳಸಿ. ಹೊಟ್ಟೆ ಮತ್ತು ಕುತ್ತಿಗೆಯಂತಹ ಪ್ರಮುಖ ಅಂಗಗಳ ಮೇಲೆ ನಾಯಿಗಳು ದಾಳಿ ನಡೆಸುತ್ತವೆ. ಈ ಸಂದರ್ಭದಲ್ಲಿ ಚೀಲ ಅಥವಾ ಯಾವುದಾದರೂ ವಸ್ತುವನ್ನು ಅಡ್ಡವಾಗಿ ಹಿಡಿದು ರಕ್ಷಣೆಗೆ ಬಳಸಿ. ಶಾಂತವಾಗಿರಲು ಪ್ರಯತ್ನಿಸಿ.

ನಾಯಿಗಳು ದಾಳಿಗೆ ಮುಂದಾದಾಗ ನೇರವಾಗಿ ನಿಂತುಕೊಳ್ಳಿ. ತಲೆಯ ಮೇಲೆ ಕೈಗಳನ್ನು ಎತ್ತಿ. ಆತ್ಮವಿಶ್ವಾಸದಿಂದಿರಿ. ಆಗ ನಾಯಿಗಳೇ ಹೆದರಿ ಹಿಂದೆ ಸರಿಯುತ್ತವೆ.

Continue Reading

ದೇಶ

Covishield: ಭಾರತದಲ್ಲಿ ಕೋವಿಶೀಲ್ಡ್‌ ಸೈಡ್‌ ಎಫೆಕ್ಟ್‌ನ ಎಲ್ಲ ಮಾಹಿತಿ ಬಹಿರಂಗ ಎಂದ ಕಂಪನಿ, ಉತ್ಪಾದನೆಯೂ ಸ್ಥಗಿತ!

Covishield: ಅಸ್ಟ್ರಾಜೆನಿಕಾ ಸಹಯೋಗದಲ್ಲಿಯೇ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಕೋವಿಶೀಲ್ಡ್‌ಅನ್ನು ಭಾರತದಲ್ಲಿ ಉತ್ಪಾದನೆ ಮಾಡಿದೆ. ಜಾಗತಿಕವಾಗಿ ಅಡ್ಡ ಪರಿಣಾಮದ ಕುರಿತು ಚರ್ಚಿಸುತ್ತಿರುವ ಬೆನ್ನಲ್ಲೇ ಕಂಪನಿಯು ಸ್ಪಷ್ಟನೆ ನೀಡಿದೆ. ಲಸಿಕೆಯ ಅಡ್ಡ ಪರಿಣಾಮಗಳ ಕುರಿತು ಲಸಿಕೆ ವಿತರಿಸುವಾಗಲೇ ಮಾಹಿತಿ ನೀಡಲಾಗಿದೆ. ಈಗ ಯಾವುದೇ ಮಾಹಿತಿ ಹಂಚಿಕೊಳ್ಳಲು ಬಾಕಿ ಇಲ್ಲ ಎಂಬುದಾಗಿ ಕಂಪನಿ ತಿಳಿಸಿದೆ.

VISTARANEWS.COM


on

Covishield
Koo

ಪುಣೆ: ಲಸಿಕೆಯ ಅಡ್ಡಪರಿಣಾಮದ ಕುರಿತು ಭಾರತ ಸೇರಿ ಜಗತ್ತಿನಾದ್ಯಂತ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಬ್ರಿಟಿಷ್ ಔಷಧೀಯ ದೈತ್ಯ ಅಸ್ಟ್ರಾಜೆನಿಕಾ (AstraZeneca) ಕಂಪನಿಯು ಕೊರೊನಾ ನಿರೋಧಕ ಲಸಿಕೆ ಕೋವಿಶೀಲ್ಡ್ (Covishield Vaccine)‌ ಅನ್ನು ಜಾಗತಿಕ ಮಟ್ಟದಲ್ಲಿ ಹಿಂಪಡೆಯಲು ಮುಂದಾಗಿದೆ. ಇದರ ಬೆನ್ನಲ್ಲೇ, ಭಾರತದಲ್ಲಿ ಕೋವಿಶೀಲ್ಡ್‌ ಲಸಿಕೆಯನ್ನು ಉತ್ಪಾದಿಸಿದ್ದ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ (SII) ಕಂಪನಿಯು, “ಭಾರತದಲ್ಲಿ ಕೋವಿಶೀಲ್ಡ್‌ ಲಸಿಕೆಯ ಅಡ್ಡ ಪರಿಣಾಮದ ಕುರಿತು ಇದಕ್ಕೂ ಮೊದಲೇ ಬಹಿರಂಗಪಡಿಸಲಾಗಿದೆ” ಎಂದು ಸ್ಪಷ್ಟಪಡಿಸಿದೆ.

ಅಸ್ಟ್ರಾಜೆನಿಕಾ ಸಹಯೋಗದಲ್ಲಿಯೇ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಕೋವಿಶೀಲ್ಡ್‌ಅನ್ನು ಭಾರತದಲ್ಲಿ ಉತ್ಪಾದನೆ ಮಾಡಿದೆ. ಜಾಗತಿಕವಾಗಿ ಅಡ್ಡ ಪರಿಣಾಮದ ಕುರಿತು ಚರ್ಚಿಸುತ್ತಿರುವ ಬೆನ್ನಲ್ಲೇ ಕಂಪನಿಯು ಸ್ಪಷ್ಟನೆ ನೀಡಿದೆ. “ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome – TTS ಸೇರಿ ಎಲ್ಲ ವಿರಳ ಅಡ್ಡ ಪರಿಣಾಮಗಳ ಕುರಿತು ಈಗಾಗಲೇ ಮಾಹಿತಿ ಬಹಿರಂಗಪಡಿಸಲಾಗಿದೆ” ಎಂದು ಸೀರಂ ಸಂಸ್ಥೆಯ ವಕ್ತಾರರೊಬ್ಬರು ಪ್ರಕಟಣೆ ತಿಳಿಸಿದ್ದಾರೆ.

2021ರಲ್ಲೇ ಉತ್ಪಾದನೆ ಸ್ಥಗಿತ

ಕೊರೊನಾ ಸಾಂಕ್ರಾಮಿಕದ ಸಂದರ್ಭದಲ್ಲಿ ದೇಶದಲ್ಲಿ ಕೋವಿಶೀಲ್ಡ್‌ ಲಸಿಕೆಯನ್ನು ಕೋಟ್ಯಂತರ ಡೋಸ್‌ಗಳನ್ನು ಜನರಿಗೆ ನೀಡಲಾಗಿದೆ. ಕೊರೊನಾ ಬಿಕ್ಕಟ್ಟಿನ ಬಳಿಕ ಅಂದರೆ, 2021ರ ಡಿಸೆಂಬರ್‌ನಿಂದಲೇ ಭಾರತದಲ್ಲಿ ಕೋವಿಶೀಲ್ಡ್‌ ಲಸಿಕೆಯ ಉತ್ಪಾದನೆಯನ್ನು ನಿಲ್ಲಿಸಲಾಗಿದೆ ಎಂಬುದಾಗಿ ಸೀರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಮಾಹಿತಿ ನೀಡಿದೆ. ಅಷ್ಟೇ ಅಲ್ಲ, ಲಸಿಕೆಯ ಬಾಟಲಿ ಮೇಲೆಯೇ ಅಡ್ಡ ಪರಿಣಾಮದ ಕುರಿತು ಎಚ್ಚರಿಕೆ ನೀಡಿತ್ತು.

ಕೋವಿಶೀಲ್ಡ್‌ ಲಸಿಕೆ ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome – TTS) ಎಂಬ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂಬುದನ್ನು ಈ ಹಿಂದೆ ಕೋರ್ಟ್‌ನಲ್ಲಿ ಒಪ್ಪಿಕೊಂಡಿದ್ದ ಅಸ್ಟ್ರಾಜೆನಿಕಾ ಕಂಪನಿಯು ಈಗ ವ್ಯಾಪಾರ ಉದ್ದೇಶದಿಂದ ಎಲ್ಲ ಮಾರುಕಟ್ಟೆಗಳಿಂದ ತನ್ನ ಈ ಲಸಿಕೆಯನ್ನು ತೆಗೆದು ಹಾಕುವುದಾಗಿ ಘೋಷಿಸಿದೆ.

ತಜ್ಞರು ಹೇಳುವುದಿಷ್ಟು

ಭಾರತದಲ್ಲಿ ಕೋವಿಶೀಲ್ಡ್‌ ಲಸಿಕೆ ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ ಅಡ್ಡ ಪರಿಣಾಮದ ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಅವರು ಕೆಲ ದಿನಗಳ ಹಿಂದಷ್ಟೇ ಹೇಳಿದ್ದಾರೆ. ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದವರು ತಿಳಿಸಿದ್ದಾರೆ.

ಇದನ್ನೂ ಓದಿ: Covishield vaccine: ಕೋವಿಶೀಲ್ಡ್‌ ಲಸಿಕೆಯಿಂದ ಸೈಡ್‌ ಎಫೆಕ್ಟ್‌ – ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Continue Reading
Advertisement
ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ14 mins ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ45 mins ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ59 mins ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್1 hour ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ1 hour ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Virat Kohli
ಕ್ರೀಡೆ2 hours ago

Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Poonch Terrorists
ದೇಶ2 hours ago

Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Prajwal Revanna Case
ಕರ್ನಾಟಕ2 hours ago

Prajwal Revanna Case: ಎಸ್‌ಐಟಿ ಮೇಲೆ ಕೇಸ್‌ ಹಾಕ್ತೇನೆ, ಶೀಘ್ರವೇ ಪೆನ್‌ಡ್ರೈವ್‌ ಪ್ರೊಡ್ಯುಸರ್‌ ಹೆಸರು ಹೇಳ್ತೇನೆ ಎಂದ ದೇವರಾಜೇಗೌಡ

Lok Sabha Election 2024 Pralhada Joshi who came out of the election frenzy
ಹುಬ್ಬಳ್ಳಿ2 hours ago

Lok Sabha Election 2024: ಅಬ್ಬಾ! ಅಂತೂ ಮುಗೀತು ಪುಟ್ಟಾ ಮಹಾಯುದ್ಧ ಎಂದ ಪ್ರಲ್ಹಾದ್‌ ಜೋಶಿ!

Dogs Attack
ದೇಶ2 hours ago

Dogs Attack: ನಾಯಿಗಳು ದಾಳಿ ಮಾಡಲು ಬಂದರೆ ಏನು ಮಾಡಬೇಕು? ಹೇಗೆ ರಕ್ಷಿಸಿಕೊಳ್ಳಬೇಕು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌