RSS Meeting: ಸ್ವಾಭಿಮಾನದ ಆಧಾರದ ಮೇಲೆ ದೇಶದ ಪುನರುತ್ಥಾನ, ಆರೆಸ್ಸೆಸ್‌ ವಾರ್ಷಿಕ ಸಭೆಯಲ್ಲಿ ನಿರ್ಣಯ - Vistara News

ದೇಶ

RSS Meeting: ಸ್ವಾಭಿಮಾನದ ಆಧಾರದ ಮೇಲೆ ದೇಶದ ಪುನರುತ್ಥಾನ, ಆರೆಸ್ಸೆಸ್‌ ವಾರ್ಷಿಕ ಸಭೆಯಲ್ಲಿ ನಿರ್ಣಯ

RSS Meeting: ಅನಾದಿ ಕಾಲದಿಂದಲೂ ಭಾರತ ವಸುದೈವ ಕುಟುಂಬಕಂ (ವಿಶ್ವವೇ ಕುಟುಂಬ) ತತ್ವದ ಆಧಾರದ ಮೇಲೆ ಸಾಗಿಬಂದಿದೆ. ಮುಂದೆಯೂ ಇದೇ ತತ್ವದಂತೆ ಇರಲಿದೆ ಎಂದು ಆರ್‌ಎಸ್‌ಎಸ್‌ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

VISTARANEWS.COM


on

Resurgence of the country on the basis of Selfhood, resolution of RSS in ABPS
ಸಭೆಯ ವೇದಿಕೆ ಮೇಲೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಉಪಸ್ಥಿತರಿದ್ದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ದೇಶವನ್ನು ಸ್ವಾಭಿಮಾನದ ಆಧಾರದ ಮೇಲೆ ಪುನರುತ್ಥಾನಗೊಳಿಸುವ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘ ನಿರ್ಣಯ ಕೈಗೊಂಡಿದೆ. ಹರಿಯಾಣದ ಪಾಣಿಪತ್‌ ಜಿಲ್ಲೆ ಸಮಾಲ್ಕದಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್‌ ವಾರ್ಷಿಕ ಅಖಿಲ ಭಾರತೀಯ ಪ್ರತಿನಿಧಿ (ABPS) ಸಭೆಯಲ್ಲಿ (RSS Meeting) ನಿರ್ಣಯ ಕೈಗೊಳ್ಳಲಾಗಿದೆ.

“ವಿದೇಶಿಯರ ಆಕ್ರಮಣದ ಸಮಯದಲ್ಲೂ ಭಾರತವು ಜಗತ್ತಿನ ಸ್ವಾಸ್ಥ್ಯದ ಕುರಿತು ಯೋಚನೆ ಮಾಡುತ್ತಿತ್ತು. ಭಾರತದ ಆರ್ಥಿಕ, ಸಾಮಾಜಿಕ ಸಾಂಸ್ಕೃತಿಕ ಹಾಗೂ ಧಾರ್ಮಿಕ ವ್ಯವಸ್ಥೆಯ ಮೇಲೆ ಆಕ್ರಮಣ ಮಾಡಲಾಯಿತು. ಅದರೂ, ಭಾರತವು ತ್ರಿವಳಿ ‘ಸ್ವ’ ಎಂದರೆ ಸ್ವಧರ್ಮ, ಸ್ವದೇಶ ಹಾಗೂ ಸ್ವರಾಜ್ಯಕ್ಕಾಗಿ ಹೋರಾಟ ನಡೆಸಿತು. ಈಗಲೂ ‘ಸ್ವ’ ಎಂದರೆ ಸ್ವಾಭಿಮಾನ (Selfhood)ದ ಆಧಾರದ ಮೇಲೆ ದೇಶ ನಿರ್ಮಿಸುವ ಅವಶ್ಯಕತೆ ಇದೆ” ಎಂದು ನಿರ್ಣಯ ತೆಗೆದುಕೊಳ್ಳಲಾಗಿದೆ.

“ಭಾರತವು ಈಗ ಸರ್ವ ಕ್ಷೇತ್ರಗಳಲ್ಲಿ ಏಳಿಗೆ ಹೊಂದುತ್ತಿದೆ. ಆರ್ಥಿಕ, ಸಾಮಾಜಿಕ, ಸಾಂಸ್ಕೃತಿ ಹಾಗೂ ಧಾರ್ಮಿಕ ನೆಲೆಗಟ್ಟಿನಲ್ಲಿ ಪುನರುತ್ಥಾನಗೊಳ್ಳುತ್ತಿದೆ. ಸನಾತನ ಕಾಲದಿಂದಲೂ ಭಾರತವು ವಸುದೈವ ಕುಟುಂಬಕಂ ಎಂಬ ತತ್ವದಂತೆ ನಡೆದುಕೊಂಡಿದೆ. ಈಗಲೂ ಜಾಗತಿಕ ಹಿತವನ್ನೇ ಬಯಸುತ್ತಿದೆ. ಭವಿಷ್ಯತ್ತಿನಲ್ಲೂ ಇದೇ ರೀತಿ ದೇಶ ಮುನ್ನಡೆಯಲಿದೆ” ಎಂದು ಹೇಳಿದರು. ಸಭೆಯಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿ ಸಂಘದ ಹಲವು ಮುಖಂಡರು ಉಪಸ್ಥಿತರಿದ್ದರು. ಮಾರ್ಚ್‌ 14ರಂದು ಸಭೆ ಮುಗಿಯಲಿದೆ.

ಇದನ್ನೂ ಓದಿ: Garbha Sanskar: ಗರ್ಭದಲ್ಲಿರುವ ಶಿಶುವಿಗೇ ಭಗವದ್ಗೀತೆ, ರಾಮಾಯಣ ಶಿಕ್ಷಣ; ಆರೆಸ್ಸೆಸ್ ಅಂಗಸಂಸ್ಥೆಯಿಂದ ಅಭಿಯಾನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Boat Capsizes: ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿದ ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ. ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆ ತೀವ್ರ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ.

VISTARANEWS.COM


on

Boat Capsizes
Koo

ಭುವನೇಶ್ವರ:‌ ಒಡಿಶಾದ ಜಾರ್ಸುಗುಡ ಜಿಲ್ಲೆಯ ಮಹಾನದಿ ನದಿ (Mahanadi River)ಯಲ್ಲಿ ಶುಕ್ರವಾರ (ಏಪ್ರಿಲ್‌ 19) ದುರಂತವೊಂದು ಸಂಭವಿಸಿದೆ. ದೋಣಿ ಮಗುಚಿ ಬಿದ್ದ (Boat Capsizes) ಪರಿಣಾಮ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಮಾರು 50 ಪ್ರಯಾಣಿಕರನ್ನು ಹೊತ್ತ ದೋಣಿ ಪಥರ್ಸೇನಿ ಕುಡಾದಿಂದ ಬಾರ್ಗರ್ ಜಿಲ್ಲೆಯ ಬಂಜಿಪಲ್ಲಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಜಾರ್ಸುಗುಡ ಜಿಲ್ಲೆಯ ರೆಂಗಲಿ ಪೊಲೀಸ್ ಠಾಣೆಯ ಶಾರದಾ ಘಾಟ್ ತಲುಪುತ್ತಿದ್ದಾಗ ದೋಣಿ ಮಗುಚಿ ಬಿದ್ದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸ್ಥಳೀಯ ಮೀನುಗಾರರು 35 ಪ್ರಯಾಣಿಕರನ್ನು ರಕ್ಷಿಸಿ ದಡಕ್ಕೆ ಕರೆ ತಂದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ನಂತರ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳ ಸಿಬ್ಬಂದಿ ಇನ್ನೂ ಏಳು ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಇತರ ಏಳು ಪ್ರಯಾಣಿಕರು ಇನ್ನೂ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಪರಿಹಾರ ಘೋಷಣೆ

ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮೃತರ ಕುಟುಂಬಕ್ಕೆ 4 ಲಕ್ಷ ರೂ.ಗಳ ಪರಿಹಾರ ಮೊತ್ತವನ್ನು ಘೋಷಿಸಿದ್ದಾರೆ. ಜತೆಗೆ ಐದು ಡೈವರ್‌ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಜಮ್ಮು-ಕಾಶ್ಮೀರದ ಜೇಲಂ ನದಿಯಲ್ಲಿ ದೋಣಿಯೊಂದು ಮುಳುಗಿ, ನಾಲ್ವರು ಶಾಲಾ ಮಕ್ಕಳು ಜಲಸಮಾಧಿಯಾಗಿದ್ದರು. ಈ ಘಟನೆ ಹಸಿಯಾಗಿರುವಾಗಲೇ ಇಂದೂ ಅಂತಹದ್ದೇ ದುರಂತ ಸಂಭವಿಸಿದೆ. ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿತ್ತು. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ದೋಣಿ ಮಗುಚಿತ್ತು.

ಇದನ್ನೂ ಓದಿ: ಹಡಗು ಮುಳುಗಿ 94 ಜನರ ದುರ್ಮರಣ, 26 ಮಂದಿ ನಾಪತ್ತೆ; ಕಾಲರಾ ಭೀತಿ ತೆಗೆಯಿತು ಪ್ರಾಣ!

Continue Reading

Lok Sabha Election 2024

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Lok Sabha Election 2024: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್‌ 10) ನಡೆದಿದೆ. ಬಹುತೇಕ ಕಡೆ ಉತ್ತಮ ಮರದಾನ ದಾಖಲಾಗಿದೆ. ಆದರೆ ನಾಗಾಲ್ಯಾಂಡ್‌ನ ಪೂರ್ವ ಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ. ಹೆಚ್ಚಿನ ಆರ್ಥಿಕ ಸ್ವಾಯತ್ತತೆಯೊಂದಿಗೆ ಪ್ರತ್ಯೇಕ ಆಡಳಿತಕ್ಕೆ ಆಗ್ರಹಿಸುತ್ತಿರುವ ಈಸ್ಟರ್ನ್‌ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ ಈ ಚುನಾವಣೆಯನ್ನು ಬಹಿಷ್ಕರಿಸುವಂತೆ ಸ್ಥಳೀಯರಿಗೆ ಕರೆ ನೀಡಿತ್ತು. ಅದು ಪರಿಣಾಮ ಬೀರಿದೆ.

VISTARANEWS.COM


on

Lok Sabha Election 2024
Koo

ನವದೆಹಲಿ: ಲೋಕಸಭಾ ಚುನಾವಣೆ (Lok Sabha Election 2024)ಯ ಮೊದಲ ಹಂತದ ಮತದಾನ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 102 ಕ್ಷೇತ್ರಗಳಲ್ಲಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಹುತೇಕ ಎಲ್ಲ ಕಡೆ ಜನರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ತಮ್ಮ ಕರ್ತವ್ಯ ಪೂರೈಸಿದ್ದಾರೆ. ಆದರೆ ಇದಕ್ಕೆ ತದ್ವಿರುದ್ಧ ಎನ್ನುವಂತೆ ನಾಗಾಲ್ಯಾಂಡ್‌ನ ಪೂರ್ವ ಭಾಗದ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನವಾಗಿದೆ. ಇಲ್ಲಿನ ಸಾರ್ವಜನಿಕರು ಮತದಾನವನ್ನೇ ಬಹಿಷ್ಕರಿಸಿದ್ದಾರೆ.

ಹೆಚ್ಚಿನ ಆರ್ಥಿಕ ಸ್ವಾಯತ್ತತೆಯೊಂದಿಗೆ ಪ್ರತ್ಯೇಕ ಆಡಳಿತಕ್ಕೆ ಆಗ್ರಹಿಸುತ್ತಿರುವ ಈಸ್ಟರ್ನ್‌ ನಾಗಾಲ್ಯಾಂಡ್ ಪೀಪಲ್ಸ್ ಆರ್ಗನೈಸೇಷನ್ (ENPO)ಈ ಚುನಾವಣೆಯನ್ನು ಬಹಿಷ್ಕರಿಸುವಂತೆ ಸ್ಥಳೀಯರಿಗೆ ಕರೆ ನೀಡಿತ್ತು. ಅದು ಪರಿಣಾಮ ಬೀರಿದೆ ಎಂದು ಮೂಲಗಳು ತಿಳಿಸಿವೆ. ಇದೀಗ ಚುನಾವಣಾ ಪ್ರಕ್ರಿಯೆಗೆ ಅಡ್ಡಿಪಡಿಸಿದ್ದಕ್ಕಾಗಿ ಈಶಾನ್ಯ ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ ಇಎನ್‌ಪಿಒಗೆ ನೋಟಿಸ್ ಜಾರಿ ಮಾಡಿದ್ದಾರೆ.

ಅಧಿಕಾರಿಗಳು ಹೇಳಿದ್ದೇನು?

ನಾಗಾಲ್ಯಾಂಡ್‌ನ ಹೆಚ್ಚುವರಿ ಮುಖ್ಯ ಚುನಾವಣಾ ಅಧಿಕಾರಿ ಅವಾ ಲೋರಿಂಗ್ ಈ ಬಗ್ಗೆ ಮಾತನಾಡಿ, ʼʼಈ ಪ್ರದೇಶದ 20 ವಿಧಾನಸಭಾ ಕ್ಷೇತ್ರಗಳಲ್ಲಿ ಹರಡಿರುವ 738 ಮತಗಟ್ಟೆಗಳಲ್ಲಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು. ಬೆಳಿಗ್ಗೆ 7ರಿಂದ ಸಂಜೆ 4ರವರೆಗೆ ಯಾವುದೇ ಮತದಾರ ಬರಲಿಲ್ಲ. ಅಚ್ಚರಿ ಎಂದರೆ 20 ಶಾಸಕರು ಸಹ ಮತ ಚಲಾಯಿಸಲಿಲ್ಲʼʼ ಎಂದು ತಿಳಿಸಿದ್ದಾರೆ.

ನಾಗಾಲ್ಯಾಂಡ್‌ನ ಒಟ್ಟು 13.25 ಲಕ್ಷ ಮತದಾರರ ಪೈಕಿ ಪೂರ್ವ ನಾಗಾಲ್ಯಾಂಡ್‌ನ ಈ ಆರು ಜಿಲ್ಲೆಗಳಲ್ಲಿ 4,00,632 ಮತದಾರರಿದ್ದಾರೆ. ನಾಗಾಲ್ಯಾಂಡ್​ನ 16 ಜಿಲ್ಲೆಗಳಲ್ಲಿ ಪೂರ್ವ ಭಾಗದ 6 ಜಿಲ್ಲೆಗಳು ಹೆಚ್ಚಿನ ಸ್ವಾಯತ್ತತೆ ಮತ್ತು ಪ್ರತ್ಯೇಕ ಭಾಗಕ್ಕೆ ಒತ್ತಾಯಿಸುತ್ತಿವೆ. ಇಲ್ಲಿ 20 ಶಾಸಕರಿದ್ದಾರೆ. ಕಳೆದ ವರ್ಷದ ವಿಧಾನಸಭೆ ಚುನಾವಣೆಯ ಮೊದಲೂ ಇಎನ್‌ಪಿಒ ಇದೇ ರೀತಿಯ ಕರೆ ನೀಡಿತ್ತು. ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭರವಸೆಯ ನಂತರ ಇದನ್ನು ಹಿಂಪಡೆಯಲಾಗಿತ್ತು. ನಾಗಾಲ್ಯಾಂಡ್ ಏಕೈಕ ಲೋಕಸಭಾ ಸ್ಥಾನವನ್ನು ಹೊಂದಿದೆ.

ಮೃತಪಟ್ಟ ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿ

ಪಶ್ಚಿಮ ಬಂಗಾಳದ ಕೂಚ್‌ಬೆಹರ್‌ನ ಮಥಭಂಗ ಮತದಾನ ಕೇಂದ್ರದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪ್ಯಾರಾ ಮಿಲಿಟರಿ ಪಡೆಯ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಶೌಚಾಲಯದಲ್ಲಿ ಕಾಲು ಜಾರಿ ಬಿದ್ದು ಅವರು ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಇದರ ಹಿಂದೆ ಯಾವುದೇ ಅಪರಾಧದ ಆಯಾಮ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಹಕ್ಕು ಚಲಾಯಿಸಿ ಮಾದರಿಯಾದ ವಿಶ್ವದ ಅತ್ಯಂತ ಕುಬ್ಜ ಮಹಿಳೆ ಜ್ಯೋತಿ ಆಮ್ಗೆ

ಸಾರ್ವತ್ರಿಕ ಚುನಾವಣೆ ದೇಶಾದ್ಯಂತ ಏಳು ಹಂತಗಳಲ್ಲಿ ನಡೆಯಲಿದ್ದು, ಜೂನ್ 1ರಂದು ಕೊನೆಗೊಳ್ಳಲಿದೆ. ಲೋಕಸಭೆ ಚುನಾವಣೆಯ ಮತಗಳ ಎಣಿಕೆ ಮತ್ತು ಫಲಿತಾಂಶ ಘೋಷಣೆ ಜೂನ್ 4ರಂದು ನಡೆಯಲಿದೆ. ಇಂದು ಮತದಾನ ನಡೆದ 102 ಕ್ಷೇತ್ರದ ಕಣದಲ್ಲಿ 1,625 ಅಭ್ಯರ್ಥಿಗಳು, 1,491 ಪುರುಷ, 134 ಮಹಿಳಾ ಅಭ್ಯರ್ಥಿಗಳು ಇದ್ದಾರೆ. 41 ಹೆಲಿಕಾಪ್ಟರ್, 84 ವಿಶೇಷ ರೈಲು ಹಾಗೂ 1 ಲಕ್ಷ ವಾಹನಗಳು ಚುನಾವಣಾ ಕಾರ್ಯಕ್ಕೆ ಬಳಸಲಾಗಿದೆ.

Continue Reading

ರಾಜಕೀಯ

Party Symbols: ವಿವಿಧ ಪಕ್ಷಗಳ ಚುನಾವಣಾ ಚಿಹ್ನೆ ಹಿಂದೆ ಹೇಗಿತ್ತು, ಈಗ ಏನಾಗಿದೆ? ಸಂಗ್ರಹಯೋಗ್ಯ ಮಾಹಿತಿ

Party symbols: ಭಾರತದಲ್ಲಿ ಚುನಾವಣೆ ಆರಂಭದಿಂದಲೂ ವಿವಿಧ ಪಕ್ಷಗಳಿಗೆ ಚುನಾವಣಾ ಚಿಹ್ನೆಯನ್ನು ನೀಡಲಾಗುತ್ತಿದೆ. ಆದರೆ ಈಗ ಇರುವ ಚುನಾವಣೆ ಚಿಹ್ನೆಗಳು ಮೊದಲು ಇರಲಿಲ್ಲ. ಪಕ್ಷ ಹುಟ್ಟಿಕೊಂಡ ಕೆಲವು ವರ್ಷಗಳ ಬಳಿಕ ಬಳಕೆಗೆ ಬಂದವು. ಕೆಲವು ಪಕ್ಷಗಳು ತನ್ನ ಚಿಹ್ನೆಯನ್ನು ಕಳೆದುಕೊಂಡು ಹೊಸ ಗುರುತನ್ನು ಪಡೆದಿದೆ. ಈ ಚಿಹ್ನೆಯ ಮಹತ್ವ ಎಷ್ಟು ಗೊತ್ತೇ? ಈ ಕುರಿತ ಸಂಗ್ರಹಯೋಗ್ಯ ಮಾಹಿತಿ ಇಲ್ಲಿದೆ.

VISTARANEWS.COM


on

By

Party symbols
Koo

ಚುನಾವಣೆ (election) ವೇಳೆ ಎಲ್ಲರ ಗಮನ ಸೆಳೆಯುವುದು ಚುನಾವಣಾ ಚಿಹ್ನೆಗಳು. ಈ ಬಾರಿಯೂ ಲೋಕಸಭಾ ಚುನಾವಣೆ- 2024ರಲ್ಲಿ (loksabha election-2024) ಕಣಕ್ಕೆ ಇಳಿದಿರುವ ಅಭ್ಯರ್ಥಿಗಳಿಗೆ ಚುನಾವಣಾ ಆಯೋಗವು ನೀಡಿದ್ದ ಚುನಾವಣಾ ಚಿಹ್ನೆಗಳು ಎಲ್ಲರ ಗಮನ ಸೆಳೆದಿತ್ತು. ಚುನಾವಣಾ ಚಿಹ್ನೆಯ (Party symbols) ಬಳಕೆ ಹೊಸದೇನಲ್ಲ 1951ರ ಮೊದಲ ಚುನಾವಣೆಯಿಂದಲೇ ಅಭ್ಯರ್ಥಿಯನ್ನು (candidate) ಗುರುತಿಸಲು ಚುನಾವಣಾ ಚಿಹ್ನೆಗಳನ್ನು ಬಳಸಲಾಗುತ್ತಿದೆ.

ಚುನಾವಣಾ ಪ್ರಚಾರದ ವೇಳೆ ಜನರ ಗಮನಸೆಳೆಯುವ ಚುನಾವಣಾ ಚಿಹ್ನೆಗಳು ಒಂದೇ ಹೆಸರಿನ ಅಭ್ಯರ್ಥಿಗಳು ಕಣದಲ್ಲಿ ಇದ್ದರೆ ತಮ್ಮ ನೆಚ್ಚಿನ ಅಭ್ಯರ್ಥಿಯನ್ನು ಗುರುತಿಸಲು ಇದು ಸಹಾಯ ಮಾಡುತ್ತದೆ. ಚಿತ್ರಗಳು ಸಾಮಾನ್ಯವಾಗಿ ಎಲ್ಲರಿಗೂ ನೆನಪಿನಲ್ಲಿ ಉಳಿಯುತ್ತದೆ. ದೇಶದಲ್ಲಿ ಚುನಾವಣೆ ಪ್ರಕ್ರಿಯೆ ಆರಂಭವಾದಾಗ ಸಾಕ್ಷರರ ಪ್ರಮಾಣ ಕಡಿಮೆ ಇತ್ತು. ಹೀಗಾಗಿಯೇ ಚುನಾವಣಾ ಆಯೋಗ ಚಿಹ್ನೆಗಳನ್ನು ಬಳಸಲು ಪ್ರಾರಂಭಿಸಿತ್ತು.

ಅಕ್ಷರಗಳಿಗಿಂತ ಹೆಚ್ಚು ವೇಗವಾಗಿ ಮನ ಮುಟ್ಟುವ ಚುನಾವಣಾ ಚಿಹ್ನೆಗಳು ಮತ್ತು ಅವುಗಳ ಸೃಜನಾತ್ಮಕ ಬಳಕೆಯ ಕುರಿತು ಭಾರತದಲ್ಲಿ ಹಿನ್ನೆಲೆ ಹೇಗಿತ್ತು ಗೊತ್ತೇ ?

ಇದನ್ನೂ ಓದಿ: Lok Sabha Election 2024: ಕಾಂಗ್ರೆಸ್‌-ಬಿಜೆಪಿ ಮಧ್ಯೆ ʼಚೆಂಬುʼ ವಾರ್; ಗ್ಯಾರಂಟಿಗಳಿಂದ ಜನರಿಗೆ ಕಾಂಗ್ರೆಸ್‌ ಟೋಪಿ ಎಂದ ವಿಜಯೇಂದ್ರ

ಯಾವಾಗ ಆರಂಭ?

1951ರ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆ ಸೇರಿ 53 ಪಕ್ಷಗಳ ಅಭ್ಯರ್ಥಿಗಳು ಸುಮಾರು 4,500 ಸ್ಥಾನಗಳಿಗೆ ಸ್ಪರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ಆಯೋಗವು ಅಭ್ಯರ್ಥಿಗಳು ಸ್ಪರ್ಧಿಸಬಹುದಾದ ಪಕ್ಷಗಳಿಗೆ ಚಿಹ್ನೆಗಳನ್ನು ನಿಗದಿಪಡಿಸಿತ್ತು. ಈ ಪ್ರಕ್ರಿಯೆಯು ಚುನಾವಣಾ ಚಿಹ್ನೆಗಳ ಮೀಸಲಾತಿ ಮತ್ತು ಹಂಚಿಕೆ ಆದೇಶ 1968ರಲ್ಲಿ ಹೊರಬಂದು ಇದು ಹೆಚ್ಚು ಸುವ್ಯವಸ್ಥಿತವಾಯಿತು. ಇದರ ಪ್ರಕಾರ ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಪಕ್ಷಗಳಿಗೆ ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆಯನ್ನು ಮಾಡಲಾಗುತ್ತದೆ. ಇದು ಎರಡು ಅಥವಾ ಹೆಚ್ಚಿನ ಪಕ್ಷಗಳ ವಿಲೀನದ ಸಂದರ್ಭದಲ್ಲಿ ಅಥವಾ ಪಕ್ಷದಲ್ಲಿ ವಿಭಜನೆಯ ಸಂದರ್ಭದಲ್ಲಿ ಅನ್ವಯಿಸಬಹುದಾದ ನಿಯಮಗಳನ್ನೂ ಹೊಂದಿದೆ.

ವಿಲೀನ, ವಿಭಜನೆಯಾದ ಸಂದರ್ಭದಲ್ಲಿ ಕೆಲವು ಚಿಹ್ನೆಗಳು ಹೊಸದಾಗಿ ಬರುತ್ತದೆ, ಇನ್ನು ಕೆಲವು ಅಳಿಸಿ ಹೋಗುತ್ತದೆ. ಪ್ರಸ್ತುತ ಇರುವ ಚಿಹ್ನೆಗಳು ಹುಟ್ಟಿಕೊಳ್ಳುವುದರ ಹಿಂದೆ ಬಹು ದೊಡ್ಡ ಕಥೆಯೇ ಇದೆ.


ಕಾಂಗ್ರೆಸ್ ನ ಕೈ

ಕಾಂಗ್ರೆಸ್ ಪ್ರಾರಂಭದಲ್ಲಿ ಚುನಾವಣಾ ಚಿಹ್ನೆಯಾಗಿ ನೊಗ ಹಿಡಿದ ಎತ್ತುಗಳನ್ನು ಹೊಂದಿತ್ತು. ಜವಾಹರಲಾಲ್ ನೆಹರು, 1969ರಲ್ಲಿ ಇಂದಿರಾ ಗಾಂಧಿ ಅವರೂ ಜೋಡಿ ಎತ್ತಿನ ಚಿಹ್ನೆಯನ್ನು ಹೊಂದಿದ್ದರು. 1969ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಎಸ್. ನಿಜಲಿಂಗಪ್ಪ ಅವರು ಪಕ್ಷದಿಂದ ಹೊರಹೋದಾಗ ಕಾಂಗ್ರೆಸ್ ವಿಭಜನೆಯಾಯಿತು. ಈ ಸಂದರ್ಭದಲ್ಲಿ ಚುನಾವಣಾ ಚಿನ್ಹೆಯಾಗಿದ್ದ ಜೋಡಿ ಎತ್ತುಗಳ ಬಗ್ಗೆ ವಿವಾದ ಉಂಟಾಯಿತು. ಇಂದಿರಾ ಗಾಂಧಿಯವರ ಬಣಕ್ಕೆ ಹಸು, ಕರು ಚಿಹ್ನೆಯನ್ನು ನೀಡಲಾಯಿತು. ಇದಕ್ಕೂ ಆಕ್ಷೇಪಣೆ ವ್ಯಕ್ತವಾಗಿದ್ದು, ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು.

ತುರ್ತುಪರಿಸ್ಥಿತಿಯ ಬಳಿಕ ಮೊರಾರ್ಜಿ ದೇಸಾಯಿ ನೇತೃತ್ವದ ಜನತಾ ಪಕ್ಷದ ಕೈಯಲ್ಲಿ ಸೋಲು ಅನುಭವಿಸಿದ ಇಂದಿರಾ ಗಾಂಧಿ ಅವರು ಮರಳಿ ಅಧಿಕಾರಕ್ಕೆ ಬರಲು ಪ್ರಯತ್ನಿಸಿದರು. ತಮ್ಮ ಅಧೀನದಲ್ಲಿರುವ ಪಕ್ಷ ನಿಜವಾದ ಕಾಂಗ್ರೆಸ್ ಎಂದು ಹೇಳಿ ಕಾಂಗ್ರೆಸ್ (ಇಂದಿರಾ) ರಚನೆಯನ್ನು ಘೋಷಿಸಿದರು. 1979ರವರೆಗೆ ಇದ್ದ ಹಸುಕರು ಚಿಹ್ನೆಯನ್ನು ಫ್ರೀಜ್ ಮಾಡಲಾಯಿತು. ಚುನಾವಣಾ ಆಯೋಗವು ಹಲವಾರು ಚಿಹ್ನೆಗಳ ನಡುವೆ ಆಯ್ಕೆಯನ್ನು ನೀಡಿತು. ಅದರಲ್ಲಿ ಕಲ್ಲೇಕುಳಂಗರದ ಕೈಪತಿ ದೇವಸ್ಥಾನ ಅಥವಾ ಕೈ ದೇವಸ್ಥಾನದ ಕಥೆಯು ಇಂದಿರಾ ಗಾಂಧಿಯವರಿಗೆ ‘ಕೈ’ ಚಿಹ್ನೆಯನ್ನು ಪಡೆಯಲು ಪ್ರೇರೇಪಿಸಿತು ಎನ್ನಲಾಗಿದೆ.

ಭಾರತೀಯ ಜನತಾ ಪಕ್ಷ

1980ರಲ್ಲಿ ಬಿಜೆಪಿ ಜನಸಂಘದಿಂದ ಹುಟ್ಟಿಕೊಂಡಿತ್ತು. 1977ರಲ್ಲಿ ಜನ ಸಂಘವು ಜನತಾ ಪಕ್ಷದೊಂದಿಗೆ ವಿಲೀನಗೊಂಡು ಕೇಂದ್ರ ಸರ್ಕಾರವನ್ನು ರಚಿಸಿತ್ತು. ಭಾರತದ ಮೊದಲ ಸಾರ್ವತ್ರಿಕ ಚುನಾವಣೆ ವೇಳೆ ಭಾರತೀಯ ಜನಸಂಘದ ಚುನಾವಣಾ ಚಿಹ್ನೆ 1977ರ ತನಕ ಎಣ್ಣೆ ದೀಪವಾಗಿತ್ತು. ಬಳಿಕ ಅದು ನೊಗ ಹಿಡಿದ ರೈತನನ್ನು ತನ್ನ ಚಿಹ್ನೆಯಾಗಿ ಬಳಸಿತ್ತು. 1980ರಲ್ಲಿ ಜನತಾ ಪಕ್ಷ ದಿಂದ ಹೊರಬಂದ ಜನಸಂಘ ನಾಯಕರು ಭಾರತೀಯ ಜನತಾ ಪಾರ್ಟಿ ಎಂಬ ಹೊಸ ಪಕ್ಷ ಕಟ್ಟಿ ಅದಕ್ಕೆ ಕಮಲದ ಹೂವು ಚುನಾವಣಾ ಚಿಹ್ನೆಯಾಗಿ ಪಡೆದರು.

ಇದಕ್ಕೆ ಸ್ಫೂರ್ತಿಯಾಗಿದ್ದು 1980ರಲ್ಲಿ ಅಟಲ್ ಬಿಹಾರಿ ವಾಜಪೇಯಿಯವರು ಮುಂಬಯಿಯಲ್ಲಿ ರ್ಯಾಲಿ ನಡೆಸುತ್ತಿದ್ದಾಗ ಕಾಂಗ್ರೆಸ್ ವಿರುದ್ಧ ಮಾತನಾಡುತ್ತ “ಅಂಧೇರಾ ಚಟೇಗಾ, ಸೂರಜ್ ನಿಕ್ಲೇಗಾ, ಕಮಲ ಖಿಲೇಗಾ” ಎಂದು ಹೇಳಿದ್ದರು. 1980ರ ಏಪ್ರಿಲ್ 6ರಂದು ಭಾರತೀಯ ಜನತಾ ಪಕ್ಷದ ರಚನೆಯ ವೇಳೆ ವಾಜಪೇಯಿಯವರ ಕಮಲದ ಚಿಹ್ನೆಯ ಆಯ್ಕೆಯು ಹೊಸ ಪಕ್ಷದ ರಾಷ್ಟ್ರೀಯತಾವಾದಿ ಸಿದ್ಧಾಂತಗಳಿಗೆ ಹೊಂದಿಕೆಯಾಯಿತು. ಹೀಗಾಗಿ ಕಮಲ ಬಿಜೆಪಿಯ ಚಿಹ್ನೆಯಾಯಿತು.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ

ಪ್ರಾರಂಭದಲ್ಲಿ ಕಮ್ಯೂನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)ಯು ಕತ್ತಿ (ಕುಡುಗೋಲು) ಸುತ್ತಿಗೆ ನಕ್ಷತ್ರಗಳನ್ನು ಚುನಾವಣಾ ಚಿಹ್ನೆಯಾಗಿ ಬಳಸಿಕೊಂಡಿತ್ತು. 1964ರ ಬಳಿಕ ಐದು-ಬಿಂದುಗಳ ನಕ್ಷತ್ರವನ್ನು ಸೇರಿಸಲಾಯಿತು. ಬಳಿಕ ವಿಭಜನೆಯಾಗಿ ಸಿಪಿಐ (ಎಂ), ಸಿಪಿಐ (ಎಡ) ಪಕ್ಷಗಳು ಹುಟ್ಟಿಕೊಂಡವು. ಆಂಧ್ರಪ್ರದೇಶ, ಕೇರಳ ಮತ್ತು ಪಶ್ಚಿಮ ಬಂಗಾಳದ ಲ್ಲಿ ಮಾತ್ರ ಸ್ಥಾನಗಳನ್ನು ಪಡೆದಿರುವ ಸಿಪಿಐ ಪಕ್ಷಕ್ಕೆ 1964ರಲ್ಲಿ ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಲಾಯಿತು. ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಸಿಪಿಐ (ಮಾರ್ಕ್ಸ್‌ವಾದಿ)ಯ ಚುನಾವಣಾ ಚಿಹ್ನೆ ಕತ್ತಿ ಮತ್ತು ಜೋಳದ ತೆನೆಯಾಗಿತ್ತು.


ಬಹುಜನ ಸಮಾಜ ಪಕ್ಷ

1984ರಲ್ಲಿ ಹುಟ್ಟಿಕೊಂಡ ಬಹುಜನ ಸಮಾಜ ಪಕ್ಷ (BSP) 1988ರ ಅಲಹಾಬಾದ್ ಉಪ ಚುನಾವಣೆಯಲ್ಲಿ ತನ್ನ ಛಾಪು ಮೂಡಿಸಿತ್ತು. ಬಿಎಸ್‌ಪಿಯ ಸಂಸ್ಥಾಪಕ ಕಾನ್ಶಿ ರಾಮ್ ಅವರು ಪ್ರಚಾರದ ವೇಳೆ ಆನೆಯ ಮೇಲೆ ನೀಲಿ ಧ್ವಜದ ಚಿಹ್ನೆಯನ್ನು ಬಳಸಿಕೊಂಡರು. ಹಿಂದೂ ಮತ್ತು ಬೌದ್ಧ ಧರ್ಮದಲ್ಲಿ ಪ್ರಾಮುಖ್ಯತೆಯನ್ನು ಹೊಂದಿರುವ ‘ಆನೆ’ ಚಿಹ್ನೆಯು ಕಾನ್ಶಿರಾಮ್‌ಗೆ ಹೆಚ್ಚಿನ ಬಲ ತುಂಬಿತ್ತು. ಬಿಎಸ್ಪಿಯ ‘ಆನೆ’ ಭಾರತದಲ್ಲಿ ಕೆಲವು ಪ್ರಾಣಿ ಆಧಾರಿತ ಚುನಾವಣಾ ಚಿಹ್ನೆಗಳಲ್ಲಿ ಒಂದಾಗಿದೆ. ಯಾಕೆಂದರೆ ಚುನಾವಣಾ ಆಯೋಗವು ಈಗ ಹೊಸದಾಗಿ ಪ್ರಾಣಿಗಳ ಚಿಹ್ನೆಗಳನ್ನು ನೀಡುವುದನ್ನು ನಿಲ್ಲಿಸಿದೆ.

ಆಮ್ ಆದ್ಮಿ ಪಕ್ಷ

2011ರಲ್ಲಿ ಅಣ್ಣಾ ಹಜಾರೆ ನೇತೃತ್ವದಲ್ಲಿ ಭ್ರಷ್ಟಾಚಾರದ ವಿರುದ್ಧ ಹುಟ್ಟಿಕೊಂಡ ಸಂಘಟನೆ ಇದು. ಅರವಿಂದ್ ಕೇಜ್ರಿವಾಲ್ ಅವರು 2012ರಲ್ಲಿ ಆಮ್ ಆದ್ಮಿ ಪಕ್ಷವನ್ನು ರಚಿಸಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದರು. ‘ಪೊರಕೆ’ಯ ಇದರ ಚುನಾವಣಾ ಚಿಹ್ನೆಯಾಗಿದೆ. ಚುನಾವಣಾ ಆಯೋಗಕ್ಕೆ ಪಕ್ಷವು ಸಲ್ಲಿಸಿದ ಮೂರು ಚಿಹ್ನೆಗಳಲ್ಲಿ ‘ಮೇಣದಬತ್ತಿ’ ಮತ್ತು ‘ಟ್ಯಾಪ್’ ಕೂಡ ಇತ್ತು.

ಪೊರಕೆಯ ಚಿಹ್ನೆ ಕಾರ್ಮಿಕರ ಘನತೆಗಾಗಿ ಮಾತ್ರವಲ್ಲ, ನಮ್ಮ ಸರ್ಕಾರ ಮತ್ತು ನಮ್ಮ ಶಾಸಕಾಂಗವನ್ನು ವ್ಯಾಪಿಸಿರುವ ಕೊಳೆಯನ್ನು ಸ್ವಚ್ಛಗೊಳಿಸುವ ಪಕ್ಷದ ಆಶಯವನ್ನು ಪ್ರತಿನಿಧಿಸುತ್ತದೆ ಎನ್ನುತ್ತಾರೆ ಪಕ್ಷದ ಮುಖಂಡರು.

ನ್ಯಾಷನಲ್ ಪೀಪಲ್ಸ್ ಪಾರ್ಟಿ

ಭಾರತದಲ್ಲಿನ ಆರು ರಾಷ್ಟ್ರೀಯ ಪಕ್ಷಗಳಲ್ಲಿ ಒಂದಾದ ನ್ಯಾಷನಲ್ ಪೀಪಲ್ಸ್ ಪಾರ್ಟಿ (NPP) ಅನ್ನು 2013ರಲ್ಲಿ ಸ್ಥಾಪಿಸಲಾಯಿತು. ಅದರ ಸಂಸ್ಥಾಪಕ ಮಾಜಿ ಮೇಘಾಲಯ ಮುಖ್ಯಮಂತ್ರಿ ಪಿ.ಎ. ಸಂಗ್ಮಾ ಅವರನ್ನು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿತ್ತು.

ಪುಸ್ತಕವನ್ನು ಪಕ್ಷದ ಚಿಹ್ನೆಯಾಗಿ ಮಾಡಿಕೊಂಡ ಅವರು ಸಾಕ್ಷರತೆ ಮತ್ತು ಶಿಕ್ಷಣವು ದುರ್ಬಲ ವರ್ಗದವರನ್ನು ಸಬಲೀಕರಣಗೊಳಿಸುತ್ತದೆ ಎಂದು ನಂಬುವುದಾಗಿ ಹೇಳಿ ಶಿಕ್ಷಣಕ್ಕೆ ಒತ್ತು ನೀಡುವ ಭರವಸೆ ನೀಡಿದ್ದರು.

ವಿವಿಧ ಪಕ್ಷಗಳಿಗೆ ಒಂದೇ ಚಿಹ್ನೆಗಳು

ಇನ್ನು ರಾಜ್ಯ ಮಟ್ಟದಲ್ಲಿ ಒಂದೇ ಚುನಾವಣಾ ಚಿಹ್ನೆಯನ್ನು ಪಡೆದು ಬೇರೆಬೇರೆ ಪಕ್ಷಗಳಿಂದಲೂ ಅಭ್ಯರ್ಥಿಗಳು ಕಣಕ್ಕೆ ಇಳಿದಿರುವ ಇತಿಹಾಸವೂ ಇದೆ. ಒಂದೇ ಕ್ಷೇತ್ರದಿಂದ ಪರಸ್ಪರರ ವಿರುದ್ಧ ಸ್ಪರ್ಧಿಸುವುದಿಲ್ಲವೋ ಅಲ್ಲಿಯವರೆಗೆ ಅದು ಸಾಮಾನ್ಯವಾಗಿ ಸಮಸ್ಯೆಯನ್ನು ಉಂಟು ಮಾಡುವುದಿಲ್ಲ. ಆದರೆ ಪಕ್ಷಗಳು ತನ್ನ ಕಾಯ್ದಿರಿಸಿದ ಚಿಹ್ನೆಯಡಿ ಬೇರೆಯವರಿಗೆ ಸ್ಪರ್ಧಿಸಲು ಅನುಮತಿಸುವುದಿಲ್ಲ ಎಂಬ ಷರತ್ತು ವಿಧಿಸುತ್ತದೆ.

ಬೈಸಿಕಲ್ ಗಾಗಿ ಸ್ಪರ್ಧೆ

ಭಾರತೀಯ ರಾಜಕೀಯ ಇತಿಹಾಸದಲ್ಲಿ ಬೈಸಿಕಲ್ ತೀವ್ರ ಪೈಪೋಟಿಯ ಸಂಕೇತವಾಗಿದೆ. ಎನ್.ಟಿ. ರಾಮರಾವ್ ಅವರ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಮುಲಾಯಂ ಸಿಂಗ್ ಯಾದವ್ ಅವರ ಸಮಾಜವಾದಿ ಪಕ್ಷದ ನಡುವೆ ಬೈಸಿಕಲ್ ಗಾಗಿ ಪೈಪೋಟಿ ಏರ್ಪಟ್ಟಿತ್ತು.

1982ರಲ್ಲಿ ಸ್ಥಾಪನೆಯಾದ ಟಿಡಿಪಿಯಿಂದ 1995ರಲ್ಲಿ ಎನ್. ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದಲ್ಲಿ ಅಧಿಕಾರ ವಹಿಸಿಕೊಂಡಾಗ ಟಿಡಿಪಿಯನ್ನು ಅದರ ‘ಬೈಸಿಕಲ್ ಚಿಹ್ನೆ’ಯೊಂದಿಗೆ ಪಡೆದರು.
ಸುಮಾರು ಒಂದು ದಶಕದ ಅನಂತರ ಸಮಾಜವಾದಿ ಪಕ್ಷದ ರಚನೆಯಾಗಿ ಮುಲಾಯಂ ಸಿಂಗ್ ಯಾದವ್ ಅವರ ಮಗ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಮುಲಾಯಂ ಅವರ ಸಹೋದರ ಶಿವಪಾಲ್ ಯಾದವ್ ನಡುವೆ ಕಲಹ ಉಂಟಾಗಿ ಪಕ್ಷ ಮತ್ತು ಅದರ ಚಿಹ್ನೆಯ ಮೇಲೆ ಅಧಿಕಾರವನ್ನು 2017ರಲ್ಲಿ ಅಖಿಲೇಶ್‌ಗೆ ನೀಡಲಾಯಿತು.


ಬಿಲ್ಲು ಮತ್ತು ಬಾಣ

ಪ್ರಸ್ತುತ ಸ್ಪರ್ಧೆಯಲ್ಲಿರುವ ಮತ್ತೊಂದು ಚಿಹ್ನೆ ಮಹಾರಾಷ್ಟ್ರದಲ್ಲಿ ‘ಬಿಲ್ಲು ಮತ್ತು ಬಾಣ’. ಏಕನಾಥ್ ಶಿಂಧೆ ನೇತೃತ್ವದ “ನೈಜ” ಶಿವಸೇನೆಗೆ ಹಂಚಲ್ಪಟ್ಟ ಈ ಚಿಹ್ನೆಯನ್ನು ಮೊದಲು 1989ರಲ್ಲಿ ಬಾಳ್ ಠಾಕ್ರೆ ಅವರು ಬಳಸಿದ್ದರು.

1972ರಲ್ಲಿ ರಚಿಸಲಾದ ಜಾರ್ಖಂಡ್ ಮುಕ್ತಿ ಮೋರ್ಚಾ ಜಾರ್ಖಂಡ್‌ನಲ್ಲಿ ಅದೇ ‘ಬಿಲ್ಲು ಮತ್ತು ಬಾಣ’ ಚಿಹ್ನೆಯನ್ನು ಬಳಸುತ್ತದೆ. ಬಿಹಾರದ ಜನತಾ ದಳ (ಯುನೈಟೆಡ್) ಪಕ್ಷದ ಚಿಹ್ನೆಯು ‘ಬಾಣ’ವಾಗಿದೆ. 2019 ರಲ್ಲಿ ಚುನಾವಣಾ ಆಯೋಗವು ಮಹಾರಾಷ್ಟ್ರ ಅಥವಾ ಜಾರ್ಖಂಡ್‌ನಲ್ಲಿ ಈ ಚಿಹ್ನೆಯನ್ನು ಬಳಸಲು ಅನುಮತಿಸುವುದಿಲ್ಲ ಎಂದು ಘೋಷಿಸಿತು. .

Continue Reading

Latest

Char Dham Yatra 2024: ಈ ಬೇಸಿಗೆಯಲ್ಲಿ ಚಾರ್ ಧಾಮ್ ಯಾತ್ರೆಗೆ ಸಿದ್ಧರಾಗಿ! ನೋಂದಣಿ ಮಾಹಿತಿ ಇಲ್ಲಿದೆ

Char Dham Yatra 2024: ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಮತ್ತು ಬದರಿನಾಥ್ ಗೆ ನಡೆಸುವ ಯಾತ್ರೆಗೆ ಚಾರ್ ಧಾಮ್ ಯಾತ್ರೆ ಎಂದು ಕರೆಯಲಾಗುತ್ತದೆ. ಈ ಬಾರಿ ಅಕ್ಷಯ ತೃತೀಯದ ಬಳಿಕ ಈ ನಾಲ್ಕು ದೇವಾಲಯದ ಬಾಗಿಲುಗಳು ತೆರೆಯಲಿದ್ದು, ಆರು ತಿಂಗಳ ಕಾಲ ಭಕ್ತರ ಭೇಟಿಗೆ ಅವಕಾಶವಿದೆ. ಆದರೆ ಅಲ್ಲಿಗೆ ಹೋಗಲು ಮೊದಲೇ ನೋಂದಣಿ ಮಾಡಿಸಿಕೊಳ್ಳಬೇಕು. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Char Dham Yatra 2024
Koo

ಚಾರ್ ಧಾಮ್ ಯಾತ್ರೆ ಬಗ್ಗೆ ಸಾಕಷ್ಟು ಮಂದಿ ಕೇಳಿರುತ್ತಾರೆ. ಆದರೆ ಎಲ್ಲರಿಗೂ ಅಲ್ಲಿ ಹೋಗೋ ಅವಕಾಶ ಸಿಗುವುದಿಲ್ಲ. ಹಲವು ಬಾರಿ ಯೋಜನೆ ಮಾಡಿ ಯಾವುದೋ ಕಾರಣದಿಂದ ಅದನ್ನು ಮುಂದೂಡಿರುತ್ತಾರೆ. ಆದರೆ ಈ ಬಾರಿ ಬೇಸಿಗೆ ರಜೆಯಲ್ಲೇ (summer holidays) ಚಾರ್ ಧಾಮ್ ಯಾತ್ರೆ (Char Dham Yatra 2024) ಮಾಡಿ ಬರಬಹುದು.

ಚಾರ್ ಧಾಮ್ ಯಾತ್ರೆ ಎಂದೇ ಕರೆಯಲ್ಪಡುವ ಉತ್ತರಾಖಂಡದ (uttarakhand) ನಾಲ್ಕು ಪವಿತ್ರ ಕ್ಷೇತ್ರಗಳಾದ ಗಂಗೋತ್ರಿ (Gangotri), ಯಮುನೋತ್ರಿ (Yamunotri), ಕೇದಾರನಾಥ ( Kedarnath) ಮತ್ತು ಬದರಿನಾಥರ (Badrinath) ವಾರ್ಷಿಕ ತೀರ್ಥಯಾತ್ರೆಯ ಆನ್‌ಲೈನ್ ನೋಂದಣಿ ಪ್ರಕ್ರಿಯೆ ಸೋಮವಾರ ಪ್ರಾರಂಭವಾಗಿದೆ.
ಯಾತ್ರೆಗೆ ಬರಲು ಇಚ್ಛಿಸುವವರು ಪ್ರವಾಸೋದ್ಯಮ ಇಲಾಖೆಯ ಪೋರ್ಟಲ್‌ನಲ್ಲಿ ನೋಂದಣಿ ಮಾಡಿಸಿಕೊಳ್ಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೇ 10ರಂದು ಪ್ರಾರಂಭ

ವಾರ್ಷಿಕ ಚಾರ್ ಧಾಮ್ ಯಾತ್ರೆಯು ಮೇ 10ರಂದು ಅಕ್ಷಯ ತೃತೀಯ ಸಂದರ್ಭದಲ್ಲಿ ಪ್ರಾರಂಭವಾಗಲಿದೆ. ಈ ಸಂದರ್ಭದಲ್ಲಿ ಗಂಗೋತ್ರಿ, ಯಮುನೋತ್ರಿ, ಕೇದಾರನಾಥ ಈ ಮೂರು ದೇಗುಲಗಳಲ್ಲಿ ಬಾಗಿಲನ್ನು ಭಕ್ತರಿಗಾಗಿ ತೆರೆಯಲಾಗುತ್ತದೆ. ಬದರಿನಾಥ ದೇವಾಲಯದ ಬಾಗಿಲು ಮೇ 12 ರಂದು ಸಾರ್ವಜನಿಕರಿಗೆ ತೆರೆಯಲಾಗುವುದು.

ಇದನ್ನೂ ಓದಿ: Mantralaya Tour: ಮಂತ್ರಾಲಯಕ್ಕೆ ಒಂದೇ ದಿನದಲ್ಲಿ ಹೋಗಿ ಬರಬೇಕೆ? ಈ ರೈಲುಗಳಲ್ಲಿ ಹೊರಡಿ

ಆರು ತಿಂಗಳು ಬಂದ್

ಪ್ರತಿ ವರ್ಷ ಲಕ್ಷಾಂತರ ಭಕ್ತರು ಎತ್ತರದಲ್ಲಿರುವ ಈ ಪವಿತ್ರ ದೇವಾಲಯಗಳಿಗೆ ಭೇಟಿ ನೀಡುತ್ತಾರೆ. ಪ್ರತಿ ವರ್ಷ ಚಳಿಗಾಲದ ತಿಂಗಳ ಆರಂಭದಿಂದ ಸುಮಾರು ಆರು ತಿಂಗಳ ಕಾಲ ಮುಚ್ಚಲಾಗುತ್ತದೆ. ಯಾತ್ರೆಯು ಸಾಮಾನ್ಯವಾಗಿ ಏಪ್ರಿಲ್- ಮೇ ತಿಂಗಳಿನಿಂದ ಅಕ್ಟೋಬರ್-ನವೆಂಬರ್ ವರೆಗೆ ನಡೆಯುತ್ತದೆ.

ಪ್ರದಕ್ಷಿಣಾಕಾರ ಪೂಜೆ

ಹಿಂದೂ ಧರ್ಮದಲ್ಲಿ ಈ ಪವಿತ್ರ ದೇವಾಲಯಗಳು ಆಳವಾದ ಆಧ್ಯಾತ್ಮಿಕ ಮಹತ್ವವನ್ನು ಹೊಂದಿವೆ. ಇಲ್ಲಿ ಪ್ರದಕ್ಷಿಣಾಕಾರವಾಗಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಬೇಕು ಎಂದೇ ನಂಬಲಾಗಿದೆ. ಹೀಗಾಗಿ ಯಾತ್ರೆಯು ಯಮುನೋತ್ರಿಯಿಂದ ಪ್ರಾರಂಭವಾಗುತ್ತದೆ, ಗಂಗೋತ್ರಿ ಕಡೆಗೆ ಸಾಗುತ್ತದೆ, ಕೇದಾರನಾಥದ ಭೇಟಿ ಬಳಿಕ ಅಂತಿಮವಾಗಿ ಬದರಿನಾಥದಲ್ಲಿ ಕೊನೆಗೊಳ್ಳುತ್ತದೆ.

ನೋಂದಣಿ ಹೇಗೆ?

ಚಾರ್ ಧಾಮ್ ಯಾತ್ರೆಗೆ ಹೋಗಲು ಇಚ್ಛಿಸುವವರು ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆಯ ಚಾರ್ ಧಾಮ್ ಯಾತ್ರೆಗಾಗಿ ಗೊತ್ತುಪಡಿಸಿದ ಅಧಿಕೃತ ವೆಬ್‌ಸೈಟ್‌ನಲ್ಲಿ andtouristcare.uk.gov.in ಅಥವಾ registrationandtouristcare.uk.gov.in ನಲ್ಲಿ ನೋಂದಣಿ ಮಾಡಿಕೊಳ್ಳಬಹುದು.

ಮೊದಲು ವೆಬ್ ಸೈಟ್ ಗೆ ಭೇಟಿ ನೀಡಿ ರಿಜಿಸ್ಟರ್ ಅಥವಾ ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿ.
ಹೆಸರು, ಸಂಪರ್ಕ ಸಂಖ್ಯೆ, ಇಮೇಲ್ ಐಡಿ, ಇತ್ಯಾದಿ ಸೇರಿದಂತೆ ಅಗತ್ಯವಿರುವ ವಿವರಗಳನ್ನು ನಮೂದಿಸಿ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಿದ ಒಟಿಪಿಯನ್ನು ನಮೂದಿಸುವ ಮೂಲಕ ನೋಂದಣಿಯನ್ನು ಪೂರ್ಣಗೊಳಿಸಿ.

ಬಳಿಕ ಹೊಸ ಡ್ಯಾಶ್‌ಬೋರ್ಡ್ ಕಾಣಿಸಿಕೊಳ್ಳುತ್ತದೆ. ಅಲ್ಲಿ ವ್ಯಕ್ತಿಯು ಪ್ರಯಾಣದ ದಿನಾಂಕಗಳು, ಪ್ರವಾಸಿಗರ ಸಂಖ್ಯೆ, ಭೇಟಿ ನೀಡಲು ದೇವಾಲಯಗಳು ಸೇರಿದಂತೆ ಹೆಚ್ಚಿನ ಪ್ರವಾಸದ ವಿವರಗಳನ್ನು ನೋಡಬಹುದು.
ನೋಂದಣಿ ಪೂರ್ಣಗೊಂಡ ಅನಂತರ ನೋಂದಾಯಿತ ಮೊಬೈಲ್ ಸಂಖ್ಯೆಗೆ ನೋಂದಣಿ ಸಂಖ್ಯೆಯನ್ನು ಕಳುಹಿಸಲಾಗುತ್ತದೆ ಮತ್ತು ಮುಂದೆ ಚಾರ್ ಧಾಮ್ ಯಾತ್ರೆಗಾಗಿ ನೋಂದಣಿ ಪತ್ರವನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬೇಕು.

ನೋಂದಣಿಗೆ ಬೇರೆ ಅವಕಾಶವೂ ಇದೆ

ವೆಬ್‌ಸೈಟ್‌ನ ಹೊರತಾಗಿ ಪ್ರವಾಸಿಗರು ಟೂರಿಸ್ಟ್‌ಕೇರರ್ ತಾರಾಖಂಡ್ ಸ್ಮಾರ್ಟ್‌ಫೋನ್ ಅಪ್ಲಿಕೇಶನ್ ಮೂಲಕ ತಮ್ಮನ್ನು ನೋಂದಾಯಿಸಿಕೊಳ್ಳಬಹುದು. ನೋಂದಾಯಿಸಲು ಇನ್ನೊಂದು ಮಾರ್ಗವೆಂದರೆ WhatsApp ನಲ್ಲಿ 8394833833 ಗೆ ಸಂದೇಶ ಕಳುಹಿಸುವುದು. ಪ್ರವಾಸೋದ್ಯಮ ಇಲಾಖೆಯು ಟೋಲ್ ಫ್ರೀ ಸಂಖ್ಯೆ 0135-1364 ಅನ್ನು ಡಯಲ್ ಮಾಡುವ ಮೂಲಕ ನೋಂದಣಿ ಸೇವೆಯನ್ನು ಪೂರ್ಣಗೊಳಿಸಬಹುದು.

ಇದಲ್ಲದೇ ಉತ್ತರಾಖಂಡ ಪ್ರವಾಸೋದ್ಯಮ ಇಲಾಖೆಯು ರಿಷಿಕೇಶ ಮತ್ತು ಹರಿದ್ವಾರದಲ್ಲಿ ನೋಂದಣಿ ಕೌಂಟರ್‌ಗಳನ್ನು ಸ್ಥಾಪಿಸಿದೆ. ಅಲ್ಲಿ ಯಾತ್ರಾರ್ಥಿಗಳು ಆಫ್‌ಲೈನ್ ನೋಂದಣಿ ನಡೆಸಬಹುದು. ಯಾತ್ರಿಕರು ಮತದಾರರ ಗುರುತಿನ ಚೀಟಿ, ಪಾಸ್‌ಪೋರ್ಟ್, ಪಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್‌ನಂತಹ ಅಗತ್ಯ ದಾಖಲೆಗಳನ್ನು ಇಲ್ಲಿ ತೋರಿಸಬೇಕಾಗುತ್ತದೆ.

ದೇಗುಲಗಳ ವಿಶೇಷತೆ


ಯಮುನೋತ್ರಿ ಧಾಮ್ ದೇವಾಲಯವು ಯಮುನಾ ನದಿಯ ಮೂಲಕ್ಕೆ ಸಮೀಪದಲ್ಲಿ 3,293 ಮೀಟರ್ ಎತ್ತರದಲ್ಲಿ ಕಿರಿದಾದ ಕಂದರದಲ್ಲಿದೆ. ದೇವಾಲಯವು ಅಕ್ಷಯ ತೃತೀಯದಂದು ತೆರೆಯುತ್ತದೆ. ಚಳಿಗಾಲಕ್ಕಾಗಿ ಮುಂಚಿತವಾಗಿ ಯಮ ದ್ವಿತೀಯ ಅಂದರೆ ದೀಪಾವಳಿಯ ಅನಂತರ ಎರಡನೇ ದಿನ ಮುಚ್ಚುತ್ತದೆ. ಯಮುನೆಯ ನಿಜವಾದ ಮೂಲವು ಸುಮಾರು 4,421 ಮೀಟರ್ ಎತ್ತರದಲ್ಲಿ ದೇವಸ್ಥಾನಕ್ಕಿಂತ ಸ್ವಲ್ಪ ಮುಂದಿದೆ.


ಗಂಗೋತ್ರಿ ಗಂಗಾ ನದಿಯ ಅಥವಾ ಗೌಮುಖ ನದಿಯ ಮೂಲವೆಂದು ಪರಿಗಣಿಸಲಾಗಿದೆ. ಗಂಗೋತ್ರಿ ಧಾಮವು ಭಾಗೀರಥಿಯ ಬಲದಂಡೆಯಲ್ಲಿ ಸಮುದ್ರ ಮಟ್ಟದಿಂದ 3,140 ಮೀಟರ್ ಎತ್ತರದಲ್ಲಿದೆ.


ಕೇದಾರನಾಥ ದೇವಾಲಯವು ಸಮುದ್ರ ಮಟ್ಟದಿಂದ ಸುಮಾರು 3,500 ಮೀಟರ್ ಎತ್ತರದಲ್ಲಿದೆ. ಶಿವನ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥವು ರುದ್ರಪ್ರಯಾಗ ಜಿಲ್ಲೆಯ ಮಂದಾಕಿನಿ ನದಿಯ ಸಮೀಪದಲ್ಲಿದೆ.


ಭಗವಾನ್ ವಿಷ್ಣುವಿನ ಪವಿತ್ರ ಚಾರ್ ಧಾಮಗಳಲ್ಲಿ ಒಂದಾಗಿರುವ ಬದರಿನಾಥವನ್ನು ಭೂಮಿಯ ಮೇಲಿನ ವೈಕುಂಠ ಅಂದರೆ ಭಗವಾನ್ ವಿಷ್ಣುವಿನ ನಿವಾಸ ಎಂದು ಪರಿಗಣಿಸಲಾಗಿದೆ. ಸುಮಾರು 3,100 ಮೀ. ಎತ್ತರದಲ್ಲಿ ಗರ್ವಾಲ್ ಹಿಮಾಲಯದಲ್ಲಿ ಅಲಕನಂದಾ ನದಿಯ ದಡದಲ್ಲಿ ಈ ಪವಿತ್ರ ಪಟ್ಟಣವು ನಾರ್ ಮತ್ತು ನಾರಾಯಣ ಪರ್ವತ ಶ್ರೇಣಿಗಳ ನಡುವೆ ಇದೆ. ಈ ದೇವಾಲಯವನ್ನು 8 ನೇ ಶತಮಾನದಲ್ಲಿ ಋಷಿ ಆದಿ ಶಂಕರಾಚಾರ್ಯರು ಸ್ಥಾಪಿಸಿದರು ಎಂದು ನಂಬಲಾಗಿದೆ.

Continue Reading
Advertisement
Boat Capsizes
ದೇಶ5 mins ago

Boat Capsizes: ದೋಣಿ ಮುಳುಗಿ ಇಬ್ಬರು ಜಲಸಮಾಧಿ; ಏಳು ಮಂದಿ ನಾಪತ್ತೆ

Chikkaballapur Lok Sabha Constituency NDA candidate Dr K Sudhakar election campaign
ಚಿಕ್ಕಬಳ್ಳಾಪುರ13 mins ago

Lok Sabha Election: ಯಲಹಂಕದಲ್ಲಿ ಡಾ.ಕೆ.ಸುಧಾಕರ್ ಗೆ 1 ಲಕ್ಷ ಮತಗಳ ಲೀಡ್ ಕೊಡಿಸುತ್ತೇನೆ: ಎಸ್ ಆರ್ ವಿಶ್ವನಾಥ್ ಪ್ರತಿಜ್ಞೆ

Chikkaballapur Lok Sabha Constituency Congress candidate Raksha Ramaiah election campaign in Yalahanka
ಬೆಂಗಳೂರು34 mins ago

Lok Sabha Election 2024: ಬಿಜೆಪಿ ಆಡಳಿತದಲ್ಲಿ ಶೇ. 5ರಷ್ಟೂ ಉದ್ಯೋಗ ಸೃಷ್ಟಿಯಾಗಿಲ್ಲ: ರಕ್ಷಾ ರಾಮಯ್ಯ

kaalnadige Jatha programme in Uttara kannada
ಉತ್ತರ ಕನ್ನಡ59 mins ago

Lok Sabha Election 2024: ಉ.ಕ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದ ಮತದಾನದ ಗುರಿ; ಡಿಸಿ

Bangalore Rural Lok Sabha Constituency Congress candidate D K Suresh Election campaign
ಬೆಂಗಳೂರು ಗ್ರಾಮಾಂತರ1 hour ago

Lok Sabha Election 2024: ಗ್ಯಾರಂಟಿ ಯೋಜನೆಗಳು ಇಡೀ ದೇಶಕ್ಕೆ ಮಾದರಿ: ಡಿ.ಕೆ. ಸುರೇಶ್

Neha Murder Case
ಕರ್ನಾಟಕ1 hour ago

Neha Murder Case: ನನ್ನ ಮಗನಿಗೆ ಶಿಕ್ಷೆ ಆಗಬೇಕು; ಯಾರೂ ಇಂಥ ಕೃತ್ಯ ಎಸಗಬೇಡಿ ಎಂದು ಫಯಾಜ್‌ ತಂದೆ ಕಣ್ಣೀರು

IPL 2024
ಪ್ರಮುಖ ಸುದ್ದಿ1 hour ago

IPL 2024 : ಇಂಪ್ಯಾಕ್ಟ್​ ಪ್ಲೇಯರ್ ನಿಯಮಕ್ಕೆ ಆಕ್ಷೇಪ ಎತ್ತಿದ ರಿಕಿ ಪಾಂಟಿಂಗ್​

Lok Sabha Election 2024
Lok Sabha Election 20241 hour ago

Lok Sabha Election 2024: ನಾಗಾಲ್ಯಾಂಡ್‌ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ; ಕಾರಣ ಇದು

Day 2 of CET 2024 Exam 26 out of syllabus question KEA asks to raise objections by April 27
ಶಿಕ್ಷಣ2 hours ago

CET 2024 Exam: ಸಿಇಟಿ ಪರೀಕ್ಷೆಯ 2ನೇ ದಿನವೂ 26 ಔಟ್‌ ಆಫ್‌ ಸಿಲಬಸ್‌ ಪ್ರಶ್ನೆ! ಏ.27ರೊಳಗೆ ಆಕ್ಷೇಪಣೆ ಸಲ್ಲಿಸಲು KEA ಸೂಚನೆ

Maldives Tourism
ವಿದೇಶ2 hours ago

Maldives Tourism: ಪರಿಣಾಮ ಬೀರಿದ ಮಾಲ್ಡೀವ್ಸ್ ಬಹಿಷ್ಕಾರದ ಕೂಗು; ಭೇಟಿ ನೀಡುವ ಭಾರತೀಯರ ಸಂಖ್ಯೆಯಲ್ಲಿ ಭಾರೀ ಕುಸಿತ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Neha Murder Case
ಹುಬ್ಬಳ್ಳಿ7 hours ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ17 hours ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20244 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20245 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ6 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ7 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ1 week ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

ಟ್ರೆಂಡಿಂಗ್‌