Viral Video: ಓವರ್​​ಟೇಕ್​ ಮಾಡಿದಳು ಎಂಬ ಕಾರಣಕ್ಕೆ ಮಹಿಳೆಯ ಕೂದಲು ಹಿಡಿದು ಎಳೆದು, ಹೊಡೆದ ಬಿಎಸ್​ಎಫ್​ ಮಾಜಿ ಯೋಧ - Vistara News

ದೇಶ

Viral Video: ಓವರ್​​ಟೇಕ್​ ಮಾಡಿದಳು ಎಂಬ ಕಾರಣಕ್ಕೆ ಮಹಿಳೆಯ ಕೂದಲು ಹಿಡಿದು ಎಳೆದು, ಹೊಡೆದ ಬಿಎಸ್​ಎಫ್​ ಮಾಜಿ ಯೋಧ

ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕಿ ಶಿಲ್ಪಾ ಬೋಧ್​ಖೆ ಅವರು ವಿಡಿಯೊವನ್ನು ಶೇರ್​ ಮಾಡಿ ‘ಇದು ನಾಚಿಕೆಗೇಡಿನ ಘಟನೆ. ಮಹಿಳೆಯೊಬ್ಬಳು ತನ್ನ ಕಾರನ್ನು ಓವರ್​ಟೇಕ್​ ಮಾಡಿದಳು ಎಂಬ ಕಾರಣಕ್ಕೇ ಆಕೆಯ ಮೇಲೆ ಈ ವ್ಯಕ್ತಿ ಹಲ್ಲೆ ನಡೆಸಿದ್ದಾನೆ ಎಂದು ಹೇಳಿದ್ದಾರೆ.

VISTARANEWS.COM


on

Retired BSF jawan beats up woman for She overtook him In Nagpur
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಾಗ್ಪುರ: ರಸ್ತೆಯಲ್ಲಿ ವಾಹನ ಸವಾರರು ಕೆಲವೊಮ್ಮೆ ಸಣ್ಣಪುಟ್ಟ ವಿಚಾರಕ್ಕೆ ಹೊಡೆದಾಟ ಮಾಡಿಕೊಳ್ಳುತ್ತಾರೆ (Road Rage). ಪರಸ್ಪರ ವಾಹನ ಡಿಕ್ಕಿ ಹೊಡೆಯಿತು ಎಂದೋ, ಯಾರೋ ಅಡ್ಡಬಂದರು ಎಂಬ ಕಾರಣಕ್ಕೋ ..ಬೈಗುಳ, ಹೊಡೆದಾಟ ಸಾಮಾನ್ಯ. ಆದರೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಬಿಎಸ್​ಎಫ್​ ನಿವೃತ್ತ ಯೋಧನೊಬ್ಬ ಮಹಿಳೆ ತನ್ನ ಟ್ಯಾಕ್ಸಿಯನ್ನು ಓವರ್​ಟೇಕ್​ ಮಾಡಿದರು ಎಂಬ ಕಾರಣಕ್ಕೆ ಆಕೆಗೆ ಥಳಿಸಿದ್ದಾನೆ. ಈ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಆರೋಪಿ ಹೆಸರು ಶಿವ ಶಂಕರ್​ ಶ್ರೀವಾತ್ಸವ್​ ಎಂದಾಗಿದ್ದು, ಜರಿಪಟ್ಕಾ ಪ್ರದೇಶದ ಭೀಮ್ ಚೌಕ್‌ ಬಳಿ ಕಾರಿನಲ್ಲಿ ಹೋಗುತ್ತಿದ್ದ. ಆಗ ಮಹಿಳೆಯೊಬ್ಬರು ದ್ವಿಚಕ್ರವಾಹನದಲ್ಲಿ ಆ ಕಾರನ್ನು ಹಿಂದಿಕ್ಕಿ ಮುಂದೆ ಹೋದರು. ಅದನ್ನು ನೋಡಿದ ಶಿವಶಂಕರ್​ ಜೋರಾಗಿ ಕಾರು ಓಡಿಸಿ, ಮಹಿಳೆಯ ಸ್ಕೂಟರ್​ಗೆ ಸ್ವಲ್ಪವೇ ತಾಗಿಸಿದ. ಇನ್ನೇನು ಸ್ಕೂಟರ್​ ಬೀಳಬೇಕು ಎಂಬಷ್ಟರಲ್ಲಿ ಆಕೆ ಅದು ಹೇಗೋ ಗಾಡಿ ನಿಯಂತ್ರಿಸಿಕೊಂಡರು. ಅಷ್ಟೇ ಅಲ್ಲ, ಕಾರಿನ ಫೋಟೋ ಕ್ಲಿಕ್ಕಿಸಿಕೊಳ್ಳಲು ಮೊಬೈಲ್ ತೆಗೆದರು. ಅಷ್ಟರಲ್ಲಿ ಕಾರಿನಿಂದ ಇಳಿದು ಬಂದ ಶಿವಶಂಕರ್​ ಶ್ರೀವಾತ್ಸವ್​ ಮಹಿಳೆಯನ್ನು ಎಳೆದು, ಹೊಡೆದಿದ್ದಾನೆ. ಕೂದಲು ಹಿಡಿದು ಎಳೆದಾಡಿದ್ದಾನೆ. ಅಲ್ಲಿದ್ದವರೆಲ್ಲ ಸೇರಿ ಅವನಿಂದ ಮಹಿಳೆಯನ್ನು ಕಾಪಾಡಿದ್ದಾರೆ. ಆತನನ್ನು ಪೊಲೀಸರು ಸ್ಟೇಶನ್​ಗೆ ಕರೆದುಕೊಂಡು ಹೋಗಿದ್ದಾರೆ. ಮಹಿಳೆ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ: Viral Video : ವಧುವಿಗೆ ಮಾಲೆ ಹಾಕುತ್ತಿದ್ದಂತೆಯೇ ಹೌಹಾರಿದ ವರ! ತರ್ಲೆ ಸ್ನೇಹಿತರಿದ್ದರೆ ಹೀಗೇ ಆಗುವುದು

ಶಿವಸೇನೆ ಉದ್ಧವ್ ಠಾಕ್ರೆ ಬಣದ ನಾಯಕಿ ಶಿಲ್ಪಾ ಬೋಧ್​ಖೆ ಅವರು ವಿಡಿಯೊವನ್ನು ಶೇರ್​ ಮಾಡಿ ‘ಇದು ನಾಚಿಕೆಗೇಡಿನ ಘಟನೆ. ಮಹಿಳೆಯೊಬ್ಬಳು ತನ್ನ ಕಾರನ್ನು ಓವರ್​ಟೇಕ್​ ಮಾಡಿದಳು ಎಂಬ ಕಾರಣಕ್ಕೇ ಆಕೆಯ ಮೇಲೆ ಈ ವ್ಯಕ್ತಿ ಹಲ್ಲೆ ನಡೆಸಿದ್ದಾನೆ. ಗೃಹ ಮಂತ್ರಿ ದೇವೇಂದ್ರ ಫಡ್ನವೀಸ್ ಅವರೇ, ಇತ್ತೀಚೆಗಷ್ಟೇ ಇಲ್ಲೆಲ್ಲ ಮಹಿಳಾ ದಿನಾಚರಣೆಯನ್ನು ಆಚರಣೆ ಮಾಡಲಾಯಿತು. ಆದರೆ ಇಲ್ನೋಡಿ, ಮಹಿಳೆಯರಿಗೆ ಎಷ್ಟು ಗೌರವ ಸಿಗುತ್ತಿದೆ, ಅವರೆಷ್ಟು ಸುರಕ್ಷಿತರಾಗಿದ್ದಾರೆ ಎಂಬುದನ್ನು’ ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ಮಹಿಳೆ ಮೇಲೆ ಹಲ್ಲೆ ಮಾಡಿದ ವಿಡಿಯೊ ಇಲ್ಲಿದೆ ನೋಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Madhavi Latha: ಬಿಜೆಪಿಯ ಹೈದರಾಬಾದ್ ಅಭ್ಯರ್ಥಿ 221 ಕೋಟಿ ಆಸ್ತಿ ಹೊಂದಿದ್ದು, ತೆಲಂಗಾಣದ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿದ್ದಾರೆ. ವ್ಯಾಪಾರಿ ದಂಪತಿ ಮೂವರು ಮಕ್ಕಳನ್ನು ಹೊಂದಿದ್ದು, ಹೆಚ್ಚಿನ ಹಣವನ್ನು ಹೂಡಿಕೆ ಮಾಡಿರುವುದಾಗಿ ಅಫಿಡವಿಟ್ ನಲ್ಲಿ ಘೋಷಿಸಿದ್ದಾರೆ.

VISTARANEWS.COM


on

By

Madhavi Latha
Koo

ಹೈದರಾಬಾದ್: ತೆಲಂಗಾಣದ (Telangana) ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರಾಗಿರುವ ಹೈದರಾಬಾದ್ (Hyderabad) ಲೋಕಸಭಾ (lok sabha) ಕ್ಷೇತ್ರದ ಬಿಜೆಪಿ (bjp) ಅಭ್ಯರ್ಥಿ ಕೊಂಪೆಲ್ಲಾ ಮಾಧವಿ ಲತಾ (Kompella Madhavi Latha) ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 221.37 ಕೋಟಿ ರೂ. ಎಂಬುದಾಗಿ ಬುಧವಾರ ನಾಮಪತ್ರ (nomination) ಸಲ್ಲಿಸುವ ವೇಳೆ ಚುನಾವಣಾ ಆಯೋಗಕ್ಕೆ ( Election Commission) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.

ಮಾಧವಿ ಲತಾ ಮತ್ತು ಅವರ ಪತಿ ಕೊಂಪೆಲ್ಲಾ ವಿಶ್ವನಾಥ್ ಇಬ್ಬರೂ ವ್ಯಾಪಾರಿಗಳು. ಅವರ ಮೂವರು ಅವಲಂಬಿತ ಮಕ್ಕಳು, 165.46 ಕೋಟಿ ರೂಪಾಯಿಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಮತ್ತು ಮಾಧವಿ ಲತಾ ದಂಪತಿ 55.91 ಕೋಟಿ ರೂಪಾಯಿಗಳ ಸ್ಥಿರ ಆಸ್ತಿಯನ್ನು ಹೊಂದಿದ್ದಾರೆ.

ತೆಲಂಗಾಣದ ಅವಳಿ ನಗರವಾದ ಸಿಕಂದರಾಬಾದ್‌ನಲ್ಲಿ ನೆಲೆಸಿರುವ 49 ವರ್ಷದ ಮಾಧವಿ ಲತಾ ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಗೊಂಡರು. ಮೊದಲ ಬಾರಿಗೆ ಚುನಾವಣೆಯ ಕಣಕ್ಕೆ ಇಳಿದಿದ್ದಾರೆ.

ಇದನ್ನೂ ಓದಿ: Rahul Gandhi: ಶೀಘ್ರವೇ ಅಯೋಧ್ಯೆಗೆ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ; ರಾಮಲಲ್ಲಾನ ದರ್ಶನ!

ಮಾಧವಿ ಲತಾ ಅವರು ಲಿಸ್ಟೆಡ್ ಮತ್ತು ಅನ್ ಲಿಸ್ಟೆಡ್ ಕಂಪನಿಗಳಲ್ಲಿ 25.20 ಕೋಟಿ ಹೂಡಿಕೆ ಸೇರಿದಂತೆ 31.31 ಕೋಟಿ ರೂ.ಗಳ ಚರ ಆಸ್ತಿಯನ್ನು ಹೊಂದಿದ್ದಾರೆ ಎಂದು ಅವರು ಘೋಷಿಸಿದರು.


ವಿರಿಂಚಿ ಲಿಮಿಟೆಡ್‌ನಲ್ಲಿ 7.80 ಕೋಟಿ ರೂಪಾಯಿ ಹೂಡಿಕೆಯನ್ನು ಹೊಂದಿರುವ ಅವರು 3.78 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಹೊಂದಿದ್ದಾರೆ.

ಮಾಧವಿ ಲತಾ ಅವರ ಪತಿ ವಿರಿಂಚಿ ಲಿಮಿಟೆಡ್‌ನಲ್ಲಿ 52.36 ಕೋಟಿ ರೂ. ಮೌಲ್ಯದ ಷೇರುಗಳನ್ನು ಒಳಗೊಂಡಂತೆ 88.31 ಕೋಟಿ ರೂ. ಚರ ಆಸ್ತಿಯನ್ನು ಹೊಂದಿದ್ದಾರೆ. ಅವರ ಮೂವರು ಅವಲಂಬಿತ ಮಕ್ಕಳು ಸಹ 45 ಕೋಟಿ ರೂ. ಗೂ ಹೆಚ್ಚು ಒಟ್ಟು ಚರ ಆಸ್ತಿ ಹೊಂದಿದ್ದಾರೆ. ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು 6.32 ಕೋಟಿ ಸ್ಥಿರಾಸ್ತಿ ಹೊಂದಿದ್ದು, ಪತಿಯ ಸ್ಥಿರಾಸ್ತಿ ಮೌಲ್ಯ 49.59 ಕೋಟಿ ರೂ. ಗಳಾಗಿದೆ.

ಆಸ್ತಿಗಳಲ್ಲಿ ಕೃಷಿಯೇತರ ಭೂಮಿ, ಹೈದರಾಬಾದ್ ಮತ್ತು ಸುತ್ತಮುತ್ತಲಿನ ವಾಣಿಜ್ಯ ಮತ್ತು ವಸತಿ ಕಟ್ಟಡಗಳು ಸೇರಿವೆ.
ಮಾಧವಿ ಲತಾ ಅವರು 90 ಲಕ್ಷ ರೂ., ಅವರ ಪತಿಯು 26.13 ಕೋಟಿ ರೂ. ಇಕ್ವಿಟಿ ಹೊಂದಿದ್ದಾರೆ. 2022-23ರಲ್ಲಿ ಅವರ ಆದಾಯ 3.76 ಲಕ್ಷ ರೂ.ಗಳಾಗಿದ್ದರೆ, 2021-22ರಲ್ಲಿ 1.22 ಕೋಟಿ ರೂ. ಗಳಾಗಿತ್ತು. 2022-23ರಲ್ಲಿ ವಿಶ್ವನಾಥ್ ಅವರ ಆದಾಯ 2.82 ಕೋಟಿ ರೂ. ಗಳಾಗಿದ್ದರೆ, 2021- 22ರಲ್ಲಿ 6.86 ಕೋಟಿ ರೂ.

ಒಂದು ಕ್ರಿಮಿನಲ್ ಕೇಸ್

ಬಿಜೆಪಿ ಅಭ್ಯರ್ಥಿ ಒಂದು ಕ್ರಿಮಿನಲ್ ಮೊಕದ್ದಮೆ ಎದುರಿಸುತ್ತಿದ್ದಾರೆ. ಕಳೆದ ವಾರ ಆಕೆಯ ವಿರುದ್ಧ ಬೇಗಂ ಬಜಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295-ಎ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಸಿದ್ದಿ ಅಂಬರ್ ಬಜಾರ್ ವೃತ್ತದಲ್ಲಿರುವ ಮಸೀದಿಯಲ್ಲಿ ಕಾಲ್ಪನಿಕ ಬಾಣದ ಚಿತ್ರ ಬಿಡಿಸುವ ಇಂಗಿತವನ್ನು ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

Continue Reading

ದೇಶ

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Kotak Bank: ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ ವಿತರಿಸುವುದು, ಅವರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸುವುದಕ್ಕೆ ಆರ್‌ಬಿಐ ನಿರ್ಬಂಧ ಹೇರಿರುವ ಕಾರಣ ಹಳೆಯ ಗ್ರಾಹಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಆರ್‌ಬಿಐ ತಿಳಿಸಿದೆ. ಆದರೆ, ಆರ್‌ಬಿಐ ನಿರ್ಬಂಧದ ಹಿನ್ನೆಲೆಯಲ್ಲಿ ಗುರುವಾರ ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ ಮೌಲ್ಯವು ಶೇ.10ರಷ್ಟು ಕುಸಿತ ಕಂಡಿದೆ.

VISTARANEWS.COM


on

Kotak Bank
Koo

ಮುಂಬೈ: ಸುರಕ್ಷತಾ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಹೊಸ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆ ಒದಗಿಸಬಾರದು ಎಂದು ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ (Kotak Mahindra Bank) ಆರ್‌ಬಿಐ ನಿರ್ಬಂಧ ವಿಧಿಸಿದೆ. ಇದರ ಬೆನ್ನಲ್ಲೇ, ಕೊಟಕ್‌ ಮಹೀಂದ್ರಾ ಬ್ಯಾಂಕ್‌ನ ಷೇರುಗಳ (Kotak Bank Shares) ಮೌಲ್ಯವು ಗುರುವಾರ (ಏಪ್ರಿಲ್‌ 25) ಶೇ.10ರಷ್ಟು ಕುಸಿತವಾಗಿದೆ. ಇದರಿಂದ ಹೂಡಿಕೆದಾರರಿಗೂ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಗುರುವಾರ ಷೇರುಪೇಟೆಯಲ್ಲಿ ವಹಿವಾಟು ಆರಂಭವಾಗುತ್ತಲೇ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಷೇರುಗಳ ಮೌಲ್ಯವು ಕುಸಿಯುತ್ತ ಹೋಯಿತು. ಒಟ್ಟು ಶೇ.10ರಷ್ಟು ಮೌಲ್ಯ ಕುಸಿತ ಕಂಡಿದ್ದು, ಬಿಎಸ್‌ಇಯಲ್ಲಿ ಕೊಟಕ್‌ ಬ್ಯಾಂಕ್‌ನ ಒಂದು ಷೇರಿನ ಮೌಲ್ಯವು 1,658.75 ರೂ.ಗೆ ಕುಸಿತವಾಗಿದೆ. ಅಷ್ಟೇ ಅಲ್ಲ, ಆರ್‌ಬಿಐ ನಿರ್ಬಂಧದಿಂದ ಕೊಟಕ್‌ ಮಹಿಂದ್ರಾ ಬ್ಯಾಂಕ್‌ಗೆ ಮುಂದಿನ ದಿನಗಳಲ್ಲಿ ಭಾರಿ ನಷ್ಟವಾಗಲಿದೆ. ಬ್ಯಾಂಕ್‌ ಏಳಿಗೆ, ಹೊಸ ಗ್ರಾಹಕರನ್ನು ಸೆಳೆಯುವಲ್ಲಿಯೂ ಹಿನ್ನಡೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಆರ್‌ಬಿಐ ನಿರ್ಬಂಧಕ್ಕೆ ಕಾರಣ ಏನು?

ಬ್ಯಾಂಕಿಂಗ್‌ ನಿಯಂತ್ರಣ ಕಾಯ್ದೆಯ 35ಎ ಸೆಕ್ಷನ್‌ನ ಅಡಿಯಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ಗೆ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ. ಆರ್‌ಬಿಐ ನಿಯಮಗಳ ಪಾಲನೆ ಮಾಡದ ಹಿನ್ನೆಲೆಯಲ್ಲಿ ಆರ್‌ಬಿಐ ನಿರ್ಬಂಧಗಳನ್ನು ವಿಧಿಸಿದೆ ಎಂದು ತಿಳಿದುಬಂದಿದೆ. “ನೂತನ ಗ್ರಾಹಕರಿಗೆ ಕ್ರೆಡಿಟ್‌ ಕಾರ್ಡ್‌ಗಳನ್ನು ನೀಡಬಾರದು. ಹಾಗೆಯೇ, ಹೊಸ ಗ್ರಾಹಕರಿಗೆ ಆನ್‌ಲೈನ್‌ ಹಾಗೂ ಮೊಬೈಲ್‌ ಬ್ಯಾಂಕಿಂಗ್‌ ಸೇವೆಗಳನ್ನು ಒದಗಿಸಬಾರದು. ತತ್‌ಕ್ಷಣದಿಂದಲೇ ನಿರ್ಬಂಧಗಳು ಜಾರಿಗೆ ಬರಲಿವೆ” ಎಂದು ಆರ್‌ಬಿಐ ಆದೇಶಿಸಿದೆ.

ಕೊಟಕ್‌ ಮಹೀಂದ್ರಾ ಬ್ಯಾಂಕ್‌ ಗ್ರಾಹಕರು ಆನ್‌ಲೈನ್‌ ಮೂಲಕ ವಹಿವಾಟು ನಡೆಸಲು ಬ್ಯಾಂಕ್‌ ಸರಿಯಾದ ಸುರಕ್ಷತೆ ಒದಗಿಸಿಲ್ಲ. 2022 ಹಾಗೂ 2023ರಲ್ಲಿ ಐಟಿ ಪರಿಶೀಲನೆ ಕುರಿತು ಆರ್‌ಬಿಐ ಆತಂಕ ವ್ಯಕ್ತಪಡಿಸಿದರೂ ಸುರಕ್ಷತೆ ನೀಡುವಲ್ಲಿ ಕೊಟಕ್‌ ಮಹೀಂದ್ರಾ ಬ್ಯಾಂಕ್‌ ವಿಫಲವಾಗಿದೆ. ಬ್ಯಾಂಕ್‌ನ ಐಟಿ ಮೂಲ ಸೌಕರ್ಯ, ಐಟಿ ನಿರ್ವಹಣೆ, ಪ್ಯಾಚ್‌ ಮತ್ತು ಚೇಂಜ್‌ ಮ್ಯಾನೇಜ್‌ಮೆಂಟ್‌, ಬಳಕೆದಾರರ ಅನುಮತಿ ನಿರ್ವಹಣೆ, ವೆಂಡರ್‌ ರಿಸ್ಕ್‌ ಮ್ಯಾನೇಜ್‌ಮೆಂಟ್, ಡೇಟಾ ಸೆಕ್ಯುರಿಟಿ ಸೇರಿ ಹಲವು ಸುರಕ್ಷತೆಗಳನ್ನು ಒದಗಿಸುವಲ್ಲಿ ಬ್ಯಾಂಕ್‌ ವಿಫಲವಾಗಿದೆ ಎಂದು ಆರ್‌ಬಿಐ ತಿಳಿಸಿದೆ. ಇದೇ ಕಾರಣಕ್ಕಾಗಿ ನಿರ್ಬಂಧಗಳನ್ನು ವಿಧಿಸಿದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: Kotak Bank: ಕೊಟಕ್‌ ಬ್ಯಾಂಕ್‌ ಕ್ರೆಡಿಟ್‌ ಕಾರ್ಡ್‌ ನಿಷೇಧ; ಹಳೆಯ ಗ್ರಾಹಕರಿಗೆ ಏನು ತೊಂದರೆ? ಇಲ್ಲಿದೆ ಮಾಹಿತಿ

Continue Reading

ದೇಶ

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

Samsung: ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ್ಯ ಹೆಚ್ಚಿಸಲು ವಿನ್ಯಾಸ ಮಾಡಲಾದ ರಾಷ್ಟ್ರೀಯ ಕೌಶಲ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಷನ್ ಕ್ಯಾಂಪಸ್ ನ ಎರಡನೇ ಆವೃತ್ತಿಯನ್ನು ಸ್ಯಾಮ್‌ಸಂಗ್ ಇಂಡಿಯಾ ಪ್ರಾರಂಭಿಸಿದೆ.

VISTARANEWS.COM


on

Samsung India launched the 2nd edition of Samsung Innovation Campus
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆದ ಸ್ಯಾಮ್‌ಸಂಗ್ (Samsung) ಎಐ, ಐಒಟಿ, ಬಿಗ್ ಡೇಟಾ, ಮತ್ತು ಕೋಡಿಂಗ್ ಮತ್ತು ಪ್ರೋಗ್ರಾಮಿಂಗ್ ಮುಂತಾದ ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಯುವಜನತೆಯ ಕೌಶಲ ಹೆಚ್ಚಿಸಲು ವಿನ್ಯಾಸ ಮಾಡಲಾದ ತನ್ನ ರಾಷ್ಟ್ರೀಯ ಕೌಶಲ್ಯ ಕಾರ್ಯಕ್ರಮ ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಎರಡನೇ ಆವೃತ್ತಿಯನ್ನು ಪ್ರಾರಂಭಿಸಿದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್ ಕಾರ್ಯಕ್ರಮವು 18-25 ವರ್ಷ ವಯಸ್ಸಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನಗಳ ಕೌಶಲ ಒದಗಿಸುವ ಮತ್ತು ಆ ಮೂಲಕ ಅವರಿಗೆ ಉದ್ಯೋಗಾವಕಾಶ ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಯುವಜನತೆಗೆ ಸರಿಯಾದ ಅವಕಾಶಗಳನ್ನು ಸೃಷ್ಟಿ ಮಾಡಲು ರೂಪಿಸಲಾಗಿರುವ ಭಾರತ ಸರ್ಕಾರದ ಸ್ಕಿಲ್ ಇಂಡಿಯಾ ಮತ್ತು ಡಿಜಿಟಲ್ ಇಂಡಿಯಾದಂತಹ ಉಪಕ್ರಮಗಳನ್ನು ಬೆಂಬಲಿಸಲು ಈ ಕಾರ್ಯಕ್ರಮವನ್ನು ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ: Sachin Tendulkar Birthday: ಎಐ ತಂತ್ರಜ್ಞಾನದ ಮೂಲಕ ತೆಂಡೂಲ್ಕರ್​ಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಐಸಿಸಿ

ಭಾರತದಾದ್ಯಂತ ಇರುವ 3,500 ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ತಿಳುವಳಿಕೆ ಒಪ್ಪಂದಕ್ಕೆ ಈ ವಾರದ ಆರಂಭದಲ್ಲಿ ಸ್ಯಾಮ್‌ಸಂಗ್ ಮತ್ತು ಎಲೆಕ್ಟ್ರಾನಿಕ್ಸ್ ಸೆಕ್ಟರ್ ಸ್ಕಿಲ್ಸ್ ಕೌನ್ಸಿಲ್ ಆಫ್ ಇಂಡಿಯಾ (ಇಎಸ್‌ಎಸ್‌ಸಿಐ) ನಡುವೆ ಸಹಿ ಮಾಡಲಾಗಿದೆ.

ಈ ವರ್ಷ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಕೌಶಲ ಒದಗಿಸುವುದರ ಜತೆಗೆ ಇನ್ನೂ ಹೆಚ್ಚಿನ ಆಸಕ್ತಿಕರ ಅಂಶಗಳು ಸೇರ್ಪಡೆಗೊಂಡಿವೆ. ಪ್ರತಿ ಕ್ಷೇತ್ರದಲ್ಲಿ ರಾಷ್ಟ್ರೀಯ ಟಾಪರ್‌ ಸ್ಥಾನ ಪಡೆಯುವವರು ದೆಹಲಿ/ಎನ್‌ಸಿಆರ್‌ನಲ್ಲಿರುವ ಸ್ಯಾಮ್‌ಸಂಗ್ ಘಟಕಗಳಿಗೆ ಭೇಟಿ ನೀಡುವ ಅವಕಾಶ ಪಡೆಯುತ್ತಾರೆ. ಜತೆಗೆ ರೂ. 1 ಲಕ್ಷದ ನಗದು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಘಟಕಗಳಿಗೆ ಭೇಟಿ ನೀಡುವ ವಿದ್ಯಾರ್ಥಿಗಳು ಸ್ಯಾಮ್‌ಸಂಗ್‌ನ ನಾಯಕತ್ವದ ತಂಡಗಳೊಂದಿಗೆ ಸಂವಹನ ನಡೆಸುವ ಮತ್ತು ಅವರಿಂದ ಮಾರ್ಗದರ್ಶನ ಪಡೆಯುವ ಅವಕಾಶ ಹೊಂದಲಿದ್ದಾರೆ. ರಾಷ್ಟ್ರ ಮಟ್ಟದ ಕೋರ್ಸ್ ಟಾಪರ್‌ಗಳು ಸ್ಯಾಮ್‌ಸಂಗ್ ಗ್ಯಾಲಕ್ಸಿ ಬಡ್ಸ್ ಮತ್ತು ಸ್ಯಾಮ್‌ಸಂಗ್ ಗ್ಯಾಲಕ್ಸಿ ಸ್ಮಾರ್ಟ್‌ವಾಚ್‌ಗಳಂತಹ ಅತ್ಯಾಕರ್ಷಕ ಸ್ಯಾಮ್‌ಸಂಗ್ ಉತ್ಪನ್ನಗಳನ್ನು ಸಹ ಪಡೆಯಲಿದ್ದಾರೆ.

ಈ ಕುರಿತು ಮಾತನಾಡಿದ ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಓ ಜೆಬಿ ಪಾರ್ಕ್, ಸ್ಯಾಮ್‌ಸಂಗ್ ಭಾರತದಲ್ಲಿ ಕಳೆದ 28 ವರ್ಷಗಳಿಂದ ತನ್ನ ಅಸ್ತಿತ್ವ ಹೊಂದಿದ್ದು, ಈ ಎಲ್ಲಾ ವರ್ಷಗಳಲ್ಲಿ ರಾಷ್ಟ್ರದ ಬೆಳವಣಿಗೆಗೆ ಕೊಡುಗೆ ನೀಡಿದೆ. ನಮ್ಮ ದೃಷ್ಟಿಕೋನವು ಯುವಜನರಿಗೆ ಕೌಶಲ್ಯ ಒದಗಿಸುವ ಮತ್ತು ಅವರಿಗೆ ವೃತ್ತಿಪರ ಬೆಳವಣಿಗೆಯ ಅವಕಾಶಗಳನ್ನು ಒದಗಿಸಿ ಅವರನ್ನು ಸಬಲೀಕರಣಗೊಳಿಸುವ ಭಾರತ ಸರ್ಕಾರದ ಉದ್ದೇಶಗಳೊಂದಿಗೆ ಸರಿಯಾಗಿ ಹೊಂದಿಕೆಯಾಗುತ್ತದೆ.

ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ ಮೂಲಕ, ನಾವು ಯುವಜನತೆಯ ಕೌಶಲ್ಯವನ್ನು ವೃದ್ಧಿಸುವ ಕೌಶಲ್ಯ ಆಧಾರಿತ ಕಲಿಕೆಯ ವೇದಿಕೆಯನ್ನು ನಿರ್ಮಿಸುತ್ತಿದ್ದೇವೆ. ಅದರಿಂದ ಯುವಕರು ಭವಿಷ್ಯದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ ಮತ್ತು ಅರ್ಥಪೂರ್ಣ ಬದಲಾವಣೆ ಸಾಧ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: 2nd PUC Exam: ಏ.29ರಿಂದ ದ್ವಿತೀಯ ಪಿಯುಸಿ ಪರೀಕ್ಷೆ-2; ಪ್ರವೇಶ ಪತ್ರ ಬಿಡುಗಡೆ

ಇಎಸ್‌ಎಸ್‌ಸಿಐ ಸಂಸ್ಥೆಯು ಕೌಶಲಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಉದ್ಯಮ ಸಂಘಗಳಿಂದ ಉತ್ತೇಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ಕೌಶಲ ಒದಗಿಸುವ ಸಂಸ್ಥೆಯಾಗಿದೆ ಮತ್ತು ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮ (ಎನ್‌ಎಸ್‌ಡಿಸಿ) ಅಡಿಯಲ್ಲಿ ಸೆಕ್ಟರ್ ಸ್ಕಿಲ್ ಕೌನ್ಸಿಲ್ (ವಲಯ ಕೌಶಲ್ಯ ಮಂಡಳಿ) ಆಗಿ ಕಾರ್ಯನಿರ್ವಹಿಸುತ್ತದೆ. ಇದು ತನ್ನ ರಾಷ್ಟ್ರವ್ಯಾಪಿ ಇರುವ ಅನುಮೋದಿತ ತರಬೇತಿ ಮತ್ತು ಶಿಕ್ಷಣ ಪಾಲುದಾರರ ನೆಟ್‌ವರ್ಕ್ ಮೂಲಕ ಸ್ಥಳೀಯ ಮಟ್ಟದಲ್ಲಿ ತರಬೇತಿಯನ್ನು ನೀಡುತ್ತದೆ. ಇಎಸ್‌ಎಸ್‌ಸಿಐ ಸಂಸ್ಥೆಯು ಭಾರತದ ಸಣ್ಣ ಪಟ್ಟಣಗಳಲ್ಲಿ ಎಲ್ಲೆಲ್ಲಿ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನ ಶಿಕ್ಷಣದ ಲಭ್ಯತೆ ಇಲ್ಲವೋ ಅಲ್ಲೆಲ್ಲಾ ಯುವಜನತೆಗೆ ಕೋರ್ಸ್‌ಗಳನ್ನು ಒದಗಿಸುವ ಅವಕಾಶಗಳನ್ನು ಕೂಡ ಎದುರು ನೋಡುತ್ತದೆ.

ಈ ಕುರಿತು ಇಎಸ್‌ಎಸ್‌ಸಿಐ ಚೀಫ್ ಆಫರೇಟಿಂಗ್ ಆಫೀಸರ್ (Officiating CEO) ಡಾ. ಅಭಿಲಾಷಾ ಗೌರ್ ಮಾತನಾಡಿ, ದೇಶದಲ್ಲಿ ಕೌಶಲ ಒದಗಿಸುವ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ಸಿಎಸ್‌ಆರ್‌ ಉಪಕ್ರಮಕ್ಕಾಗಿ ಸ್ಯಾಮ್‌ಸಂಗ್ ಜತೆಗೆ ಪಾಲುದಾರಿಕೆ ಹೊಂದಲು ಇಎಸ್‌ಎಸ್‌ಸಿಐ ಸಂತೋಷ ಪಡುತ್ತದೆ. ನಮ್ಮ ಉದ್ದೇಶಕ್ಕೆ ಅನುಗುಣವಾಗಿ ರಾಷ್ಟ್ರದ ಯುವಜನರಿಗೆ ಅದರಲ್ಲೂ ವಿಶೇಷವಾಗಿ ಕಡಿಮೆ ಸವಲತ್ತು ಹೊಂದಿರುವ ವಿದ್ಯಾರ್ಥಿಗಳಿಗೆ ಭವಿಷ್ಯದ ತಂತ್ರಜ್ಞಾನದ ಕ್ಷೇತ್ರಗಳಲ್ಲಿ ಕೌಶಲ ಮತ್ತು ಅಗತ್ಯ ಜ್ಞಾನವನ್ನು ಒದಗಿಸಲು ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ ಅನ್ನು ವಿನ್ಯಾಸಗೊಳಿಸಲಾಗಿದೆ. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನ ಒದಗಿಸುತ್ತದೆ ಮತ್ತು ಅವರನ್ನು ಉದ್ಯೋಗಕ್ಕೆ ಸಿದ್ಧಗೊಳಿಸುತ್ತದೆ ಎಂಬ ಭರವಸೆ ನಮಗಿದೆ ಎಂದು ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ದಾಖಲಾದ ಯುವಜನತೆ ತರಗತಿ ಮೂಲಕ ಮತ್ತು ಆನ್‌ಲೈನ್ ತರಬೇತಿ ಪಡೆಯುತ್ತಾರೆ ಹಾಗೂ ಎಐ, ಐಒಟಿ, ಬಿಗ್ ಡೇಟಾ ಮತ್ತು ಕೋಡಿಂಗ್ ಆಂಡ್ ಪ್ರೋಗ್ರಾಮಿಂಗ್‌ನಲ್ಲಿ ತಮ್ಮ ಆಯ್ದ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್ ಅನ್ನು ಪೂರ್ಣಗೊಳಿಸುತ್ತಾರೆ.

ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ಸಾಫ್ಟ್ ಸ್ಕಿಲ್ಸ್ ತರಬೇತಿಯನ್ನೂ ನೀಡಲಾಗುವುದು. ಭಾಗವಹಿಸುವವರು ಭಾರತದಾದ್ಯಂತ ಇರುವ ಇಎಸ್‌ಎಸ್‌ಸಿಐಯ ತರಬೇತಿದಾರರು ಮತ್ತು ಶಿಕ್ಷಣ ಪಾಲುದಾರರ ಮೂಲಕ ಸಿದ್ಧಗೊಳಿಸಲಾಗುತ್ತದೆ. ಈ ಕಾರ್ಯಕ್ರಮವು ಆಫ್‌ಲೈನ್ ಮತ್ತು ಆನ್‌ಲೈನ್ ಕಲಿಕೆ, ಹ್ಯಾಕಥಾನ್‌ಗಳು ಮತ್ತು ಕ್ಯಾಪ್‌ಸ್ಟೋನ್ ಪ್ರಾಜೆಕ್ಟ್‌ಗಳು ಮತ್ತು ಸ್ಯಾಮ್‌ಸಂಗ್ ಉದ್ಯೋಗಿಗಳು ಒದಗಿಸುವ ಪರಿಣಿತ ಮಾರ್ಗದರ್ಶನವನ್ನು ಒಳಗೊಂಡಿರುತ್ತದೆ.

ಈ ಕಾರ್ಯಕ್ರಮವು ನಾಲ್ಕು ರಾಜ್ಯಗಳಲ್ಲಿ ಎಂಟು ಶೈಕ್ಷಣಿಕ ಸಂಸ್ಥೆಗಳಲ್ಲಿ ನಡೆಯುತ್ತದೆ. ದೇಶದ ಉತ್ತರ ಭಾಗದಲ್ಲಿ, ದೆಹಲಿ ಎನ್‌ಸಿಆರ್‌ನಲ್ಲಿರುವ ಎರಡು ಕೇಂದ್ರಗಳ ಜತೆಗೆ ಲಕ್ನೋ ಮತ್ತು ಗೋರಖ್‌ಪುರದಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ದಕ್ಷಿಣ ಭಾರತದಲ್ಲಿ, ತಮಿಳುನಾಡಿನ ಚೆನ್ನೈ ಮತ್ತು ಶ್ರೀಪೆರಂಬದೂರಿನಲ್ಲಿ 2 ಕೇಂದ್ರಗಳು ಮತ್ತು ಕರ್ನಾಟಕದ ಬೆಂಗಳೂರಿನಲ್ಲಿ ಎರಡು ತರಬೇತಿ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ಗೆ ಉಸೇನ್‌ ಬೋಲ್ಟ್ ಬ್ರ್ಯಾಂಡ್‌ ಅಂಬಾಸಿಡರ್

ಕಾರ್ಯಕ್ರಮವು ಏಪ್ರಿಲ್ 2024 ರಲ್ಲಿ ಪ್ರಾರಂಭವಾಗಲಿದೆ ಮತ್ತು ವಿಶೇಷವಾಗಿ ವಿನ್ಯಾಸಗೊಳಿಸಲಾದ ಆರು ತಿಂಗಳ ಕೋರ್ಸ್ ಅಕ್ಟೋಬರ್ 2024ರಲ್ಲಿ ಕೊನೆಗೊಳ್ಳುತ್ತದೆ. ನವೆಂಬರ್ 2024ರಲ್ಲಿ ಕೋರ್ಸ್ ಟಾಪರ್‌ಗಳ ಹೆಸರನ್ನು ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

Continue Reading

Lok Sabha Election 2024

Voter ID: ವೋಟರ್‌ ಐಡಿ ಕಾರ್ಡ್‌ ಸಿಕ್ಕಿಲ್ಲವೆ? ಡೋಂಟ್‌ ವರಿ. ಈ 12 ದಾಖಲೆಗಳಲ್ಲಿ ಒಂದಿದ್ದರೆ ಸಾಕು!

Voter ID: ಕರ್ನಾಟಕ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಶುಕ್ರವಾರ ಮತದಾನ ನಡೆಯಲಿದೆ. ಮತದಾನಕ್ಕೆ ಹೊರಡುವಾಗ ಯಾವುದಾದರೊಂದು ಗುರುತು ಪತ್ರವನ್ನು ಜೊತೆಗೆ ತೆಗೆದುಕೊಂಡು ಹೋಗುವುದನ್ನು ಮರೆಯದಿರಿ. ವೋಟರ್ ಐಡಿ ಇಲ್ಲದೇ ಇದ್ದರೆ ಚುನಾವಣಾ ಆಯೋಗ ನಿರ್ದೇಶಿಸಿರುವ ಯಾವುದಾದರೊಂದು ಗುರುತು ಪತ್ರವನ್ನು ತೋರಿಸಿ ಮತದಾನ ಮಾಡಬಹುದು. ಈ ಬಗ್ಗೆ ಇಲ್ಲಿದೆ ಮಾಹಿತಿ.

VISTARANEWS.COM


on

By

Voter ID
Koo

ಬೆಂಗಳೂರು: ಲೋಕಸಭಾ ಚುನಾವಣೆ 2024ರ (Lok Sabha election 2024) ಅಂಗವಾಗಿ ರಾಜ್ಯದಲ್ಲಿ (karnataka) ಏಪ್ರಿಲ್ 26ರಂದು ಮೊದಲ ಹಂತದ ಮತದಾನ (voting) ನಡೆಯಲಿದೆ. ಈ ಸಂದರ್ಭದಲ್ಲಿ ಮತದಾರರ ಗುರುತು ಚೀಟಿ (voter id) ಇಲ್ಲದಿದ್ದರೂ ಚಿಂತಿಸಬೇಡಿ. ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ಸಾಕು. ಆದರೆ ಯಾವುದಾರು ಒಂದು ಗುರುತಿನ ಚೀಟಿ ಹೊಂದಿರಲೇಬೇಕು. ಮತದಾರರ ಗುರುತು, ವಾಸಸ್ಥಳ, ಜನನ ಮತ್ತು ಇತರ ವಿವರಗಳನ್ನು ದೃಢೀಕರಿಸುವ ಗುರುತು ಚೀಟಿ ಇದ್ದರೆ ಸಾಕು.

ಮತದಾನವು ನಮ್ಮ ಮೂಲಭೂತ ಹಕ್ಕು ಮಾತ್ರವಲ್ಲ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಜವಾಬ್ದಾರಿಯಾಗಿದೆ. ಇದಕ್ಕಾಗಿ ಅಧಿಕೃತ ಗುರುತಿನ ಚೀಟಿ ಬಹಳ ಮುಖ್ಯವಾದ ದಾಖಲೆಯಾಗಿದೆ. ಯಾಕೆಂದರೆ ಅದನ್ನು ಹೊಂದಿರುವವರ ಗುರುತು ಮತ್ತು ವಿವರಗಳನ್ನು ಪರಿಶೀಲಿಸಲು ಸಹಕಾರಿಯಾಗುತ್ತದೆ.

ಇದನ್ನೂ ಓದಿ: Lok Sabha Election 2024: ಏಪ್ರಿಲ್‌ 26ಕ್ಕೆ ಮೊದಲ ಹಂತದ ಮತದಾನ; ಸಾರ್ವತ್ರಿಕ ರಜೆ ಘೋಷಿಸಿದ ರಾಜ್ಯ ಸರ್ಕಾರ


ಯಾರು ಅರ್ಹರು?

ಭಾರತದ ಚುನಾವಣಾ ಆಯೋಗದ ಪ್ರಕಾರ ನಾಗರಿಕರು ಈ ಕೆಳಗಿನ ಷರತ್ತುಗಳ ಅಡಿಯಲ್ಲಿ ಮತದಾರರಾಗಲು ಅರ್ಹರಾಗಿರುತ್ತಾರೆ. 18 ವರ್ಷ ವಯಸ್ಸಿನ ಪ್ರತಿಯೊಬ್ಬ ನಾಗರಿಕರು ಯಾವುದಾದರೂ ನಿರ್ಧಿಷ್ಟ ಕಾರಣದಿಂದ ಅನರ್ಹಗೊಳಿಸದ ಹೊರತು ಮತದಾರರ ಗುರುತು ಚೀಟಿ ಪಡೆಯಲು ದಾಖಲಾತಿ ನಡೆಸಲು ಅರ್ಹರಾಗಿರುತ್ತಾರೆ.
ಅರ್ಹ ಮತದಾರನ ಸಾಮಾನ್ಯ ನಿವಾಸದ ಸ್ಥಳದಲ್ಲಿ ಮಾತ್ರ ನೋಂದಣಿ ಮಾಡಿಸಬಹುದು ಹಾಗೂ ಒಂದೇ ಸ್ಥಳದಲ್ಲಿ ಮಾತ್ರ ನೋಂದಣಿ ಸಾಧ್ಯ.

ಸಾಗರೋತ್ತರ ಭಾರತೀಯರ ಪಾಸ್‌ಪೋರ್ಟ್‌ನಲ್ಲಿನೀಡಿರುವ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಾರೆ ಎಂದು ಪರಿಗಣಿಸಲಾಗುತ್ತದೆ. ಆದರೆ ಮತದಾರರು ತಮ್ಮ ಮನೆಯ ವಿಳಾಸದಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಾರೆ ಎಂದು ಪರಿಗಣಿಸಲಾಗುವುದು.


ವೋಟರ್ ಐಡಿ ಇಲ್ಲದೆ ಮತ ಚಲಾಯಿಸಬಹುದೇ?

ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮತಗಟ್ಟೆಗಳಲ್ಲಿ ಮತದಾರರ ಗುರುತಿನ ಅಗತ್ಯವಿದೆ. ಮತ ಚಲಾಯಿಸಲು ಚುನಾವಣಾ ಆಯೋಗ ನೀಡಿದ ಮತದಾರರ ಗುರುತಿನ ಚೀಟಿ ಅಥವಾ ಅಧಿಕೃತ ಗುರುತಿನ ಯಾವುದೇ ಒಂದು ದಾಖಲೆಯನ್ನು ಒದಗಿಸಬೇಕು.

ಭಾರತೀಯ ಚುನಾವಣಾ ಆಯೋಗ (ಇಸಿಐ) ನೀಡಿದ ಸೂಚನೆಗಳ ಪ್ರಕಾರ ಮತದಾರರ ಗುರುತಿನ ಚೀಟಿ ಇಲ್ಲದೆಯೂ ಚುನಾವಣೆಯಲ್ಲಿ ಮತ ಚಲಾಯಿಸಬಹುದು. ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇರುವವರೆಗೆ ಮತ ಚಲಾಯಿಸಲು ಮತದಾರರು ಅರ್ಹನಾಗಿರುತ್ತಾರೆ.

ಹೆಸರಿದೆಯೇ ಪರಿಶೀಲಿಸಿ

ಮತದಾನ ಪ್ರಕ್ರಿಯೆಯಲ್ಲಿ (ಇಸಿಐ) ಪಾಲ್ಗೊಳ್ಳುವ ಮೊದಲು ಭಾರತದ ಚುನಾವಣಾ ಆಯೋಗದ ಅಧಿಕೃತ ಮತದಾರರ ಪಟ್ಟಿಯಲ್ಲಿ ಹೆಸರು ಇದೆಯೇ ಎಂದು ಪರಿಶೀಲಿಸಬೇಕು. ಮತಪತ್ರವನ್ನು ಚಲಾಯಿಸುವ ಮೊದಲು ಈ ಪಟ್ಟಿಯನ್ನು ಪರಿಶೀಲಿಸುವುದು ನಿರ್ಣಾಯಕವಾಗಿದೆ ಏಕೆಂದರೆ ಅದರಲ್ಲಿ ನೀವು ಮತ ಚಲಾಯಿಸುವ ಅರ್ಹತೆಯನ್ನು ದೃಢೀಕರಿಸುತ್ತದೆ.

ಮತದಾರರ ಗುರುತಿನ ಚೀಟಿಯನ್ನು ಹೊಂದಿಲ್ಲದಿದ್ದರೆ ಚುನಾವಣಾ ಆಯೋಗವು ಗೊತ್ತುಪಡಿಸಿದ ಪರ್ಯಾಯ ದಾಖಲೆಗಳನ್ನು ಮತದಾರರು ಬಳಸಬಹುದು.

ವೋಟರ್‌ ಐಡಿ ಇಲ್ಲದಿದ್ದರೆ ಈ ದಾಖಲೆ ಸಾಕು

ಮತದಾರರ ಪಟ್ಟಿಯಲ್ಲಿ ಹೆಸರಿದ್ದು, ಗುರುತಿಗಾಗಿ ಎಪಿಕ್ ಅಥವಾ ಮತದಾರರ ಐಡಿ ಹೊಂದಿಲ್ಲದಿದ್ದರೆ ಸಾರ್ವತ್ರಿಕ ಚುನಾವಣೆಯ ವೇಳೆ ವೋಟರ್ ಐಡಿ ಇಲ್ಲದೆಯೇ ಮತವನ್ನು ಚಲಾಯಿಸಲು ಬಳಸಬಹುದಾದ ದಾಖಲೆಗಳು ಇಂತಿವೆ. ಈ ದಾಖಲೆಗಳನ್ನು ಮತದಾನದ ವೇಳೆ ಗುರುತು ಚೀಟಿಯಾಗಿ ಮತದಾನ ಕೇಂದ್ರದಲ್ಲಿ ತೋರಿಸಬಹುದಾಗಿದೆ.

  1. 1. ಆಧಾರ್ ಕಾರ್ಡ್
  2. 2. MNREGA ಜಾಬ್ ಕಾರ್ಡ್
  3. 3. ಬ್ಯಾಂಕ್/ ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು
  4. 4. ಕಾರ್ಮಿಕ ಸಚಿವಾಲಯದ ಯೋಜನೆಯಡಿ ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್
  5. 5. ಚಾಲನಾ ಪರವಾನಗಿ
  6. 6. ಪ್ಯಾನ್ ಕಾರ್ಡ್
  7. 7. NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್
  8. 8. ಭಾರತೀಯ ಪಾಸ್ ಪೋರ್ಟ್
  9. 9. ಭಾವಚಿತ್ರದೊಂದಿಗೆ ಪಿಂಚಣಿ ದಾಖಲೆ
  10. 10. ಕೇಂದ್ರ/ ರಾಜ್ಯ ಸರ್ಕಾರ/ ಪಿಎಸ್‌ಯು/ ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
  11. 11. ಎಂಪಿಗಳು/ ಎಂಎಲ್‌ಎಗಳು/ ಎಂಎಲ್‌ಸಿಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
  12. 12. ವಿಶಿಷ್ಟ ಅಂಗವೈಕಲ್ಯ ಐಡಿ (UDID) ಕಾರ್ಡ್

ನೋಂದಣಿ ಸ್ಥಿತಿ ಪರಿಶೀಲನೆ ಹೇಗೆ?

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸಿಕೊಂಡರೆ ಮಾತ್ರ ಮತ ಚಲಾಯಿಸಬಹುದು. ಪಟ್ಟಿಯಲ್ಲಿ ಹೆಸರು ಇದೆಯೇ, ಇಲ್ಲವೇ ಎಂಬುದನ್ನು ಚುನಾವಣಾ ಆಯೋಗದ ಅಧಿಕೃತ ವೆಬ್‌ ಸೈಟ್‌ನಲ್ಲಿ https://electoralsearch.eci.gov.in ಗೆ ಲಾಗಿನ್ ಆಗಿ ನೋಡಬಹುದು. ಅಲ್ಲದೇ ಮತದಾರರ ಸಹಾಯವಾಣಿ 1950ಕ್ಕೆ ಕರೆಯೂ ಪರಿಶೀಲನೆ ನಡೆಸಬಹುದಾಗಿದೆ.

Continue Reading
Advertisement
Road Accident in Chamarajanagar
ಚಾಮರಾಜನಗರ5 mins ago

Road Accident : ಶಾಸಕ ಎಆರ್ ಕೃಷ್ಣಮೂರ್ತಿ ಕಾರು ಅಪಘಾತ; ಚಲಿಸುತ್ತಿದ್ದಾಗಲೇ ಕಾರ್‌ ಟೈರ್‌ ಸ್ಫೋಟ

IPL 2024
ಕ್ರೀಡೆ20 mins ago

IPL 2024: ಸಿಕ್ಸರ್​ನಿಂದ ಗಾಯಗೊಂಡ ಕ್ಯಾಮೆರಮನ್​ಗೆ ವಿಡಿಯೊ ಮೂಲಕ ಕ್ಷಮೆ ಕೇಳಿದ ರಿಷಭ್​ ಪಂತ್​​

gold rate today 34
ಚಿನ್ನದ ದರ24 mins ago

Gold Rate Today: ಬಂಗಾರದ ಮಾರುಕಟ್ಟೆಯಲ್ಲಿ ದರ ಇಂದು ತುಸು ಇಳಿಕೆ; 24Kಗೆ ಎಷ್ಟಿದೆ ನೋಡಿ

Lok sabha election 2024
Lok Sabha Election 202449 mins ago

Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

leopard Attack
ಕ್ರೀಡೆ52 mins ago

leopard Attack: ಚಿರತೆ ದಾಳಿ; ಜಿಂಬಾಬ್ವೆ ಮಾಜಿ ಕ್ರಿಕೆಟಿಗನಿಗೆ ತೀವ್ರ ಗಾಯ

Madhavi Latha
Lok Sabha Election 20241 hour ago

Kompella Madhavi Latha: ಹೈದರಾಬಾದ್‌ನಲ್ಲಿ ಓವೈಸಿ ವಿರುದ್ಧ ಕಣಕ್ಕಿಳಿದಿರುವ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಆಸ್ತಿ ಎಷ್ಟಿದೆ ನೋಡಿ!

Tamannaah Bhatia Summoned in Illegal IPL Streaming Case
South Cinema1 hour ago

Tamannaah Bhatia: ಐಪಿಎಲ್ ಸ್ಟ್ರೀಮಿಂಗ್ ಪ್ರಕರಣ; ನಟಿ ತಮನ್ನಾಗೆ ಸಮನ್ಸ್‌!

Kotak Bank
ದೇಶ1 hour ago

Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Samsung India launched the 2nd edition of Samsung Innovation Campus
ದೇಶ1 hour ago

Samsung: ಸ್ಯಾಮ್‌ಸಂಗ್ ಇನ್ನೋವೇಶನ್ ಕ್ಯಾಂಪಸ್‌ನ 2ನೇ ಆವೃತ್ತಿ ಪ್ರಾರಂಭಿಸಿದ ಸ್ಯಾಮ್‌ಸಂಗ್ ಇಂಡಿಯಾ

physical abuse women
ಬೆಂಗಳೂರು1 hour ago

Physical abuse : ಬೆಂಗಳೂರಲ್ಲಿ ಯುವತಿ ಕಿಡ್ನ್ಯಾಪ್; ಐವರು ಕಾಮುಕರಿಂದ ಅತ್ಯಾಚಾರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

Bengaluru karaga 2024
ಬೆಂಗಳೂರು3 days ago

Bengaluru Karaga 2024 : ಅದ್ಧೂರಿಯಾಗಿ ನೆರವೇರಿದ ಹಸಿ ಕರಗ; ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಕ್ಷಣಗಣನೆ

Murder Case in yadagiri rakesh and fayas
ಯಾದಗಿರಿ3 days ago

Murder Case : ಹಿಂದು ಯುವಕ ರೊಟ್ಟಿ ಕೇಳಿದ್ದಕ್ಕೆ ಗುಪ್ತಾಂಗಕ್ಕೆ ಒದ್ದು ಕೊಂದರು ಅನ್ಯಕೋಮಿನ ಯುವಕರು!

bomb Threat case in Bengaluru
ಬೆಂಗಳೂರು3 days ago

Bomb Threat: ಬಾಂಬ್‌ ಇಟ್ಟಿರುವುದಾಗಿ ಬೆಂಗಳೂರಿನ ಕದಂಬ ಹೋಟೆಲ್‌ಗೆ ಬೆದರಿಕೆ ಪತ್ರ; ಪೊಲೀಸರು ದೌಡು

CET Exam 2024
ಬೆಂಗಳೂರು3 days ago

CET 2024 Exam : ಔಟ್‌ ಆಫ್‌ ಸಿಲಬಸ್‌ ಪ್ರಶ್ನೆಗೆ ಆಕ್ರೋಶ; ಕೈ ಕೈ ಮಿಲಾಯಿಸಿದ ಪೊಲೀಸರು- ಎವಿಬಿಪಿ ಕಾರ್ಯಕರ್ತರು

Dina Bhavishya
ಭವಿಷ್ಯ3 days ago

Dina Bhavishya : ಸಹೋದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ; ಈ ರಾಶಿಯವರು ಎಚ್ಚರ

Dina Bhavishya
ಭವಿಷ್ಯ4 days ago

Dina Bhavishya : ಅಮೂಲ್ಯ ವಸ್ತುಗಳು ಕೈ ತಪ್ಪಬಹುದು; ಈ ರಾಶಿಯವರು ಇಂದು ಎಚ್ಚರವಹಿಸಿ

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ5 days ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20245 days ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

ಟ್ರೆಂಡಿಂಗ್‌