Site icon Vistara News

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಮಾಡಿ ವಾಪಸ್​ ಬರುತ್ತಿದ್ದಾಗ ಅಪಘಾತ; 8 ಯಾತ್ರಾರ್ಥಿಗಳ ಸಾವು

Road accident near Kerala Tamil Nadu border 8 Died

ಪತ್ತನಂತಿಟ್ಟ: ಕೇರಳದ ಶಬರಿಮಲೆಯಿಂದ ವಾಪಸ್​ ತಮಿಳುನಾಡಿಗೆ ಪ್ರಯಾಣಿಸುತ್ತಿದ್ದ ವಾಹನ ಪಲ್ಟಿಯಾಗಿ 8 ಯಾತ್ರಾರ್ಥಿಗಳು ಮೃತಪಟ್ಟ ದುರ್ಘಟನೆ ಕೇರಳ-ತಮಿಳುನಾಡು ಗಡಿಯಲ್ಲಿರುವ ಕುಮಿಲಿಯಲ್ಲಿ ನಡೆದಿದೆ. ಮಗು ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರೆಲ್ಲ ತಮಿಳುನಾಡಿನ ತೇಣಿ-ಆಂಡಿಪೆಟ್ಟಿ ನಿವಾಸಿಗಳಾಗಿದ್ದು, ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ಕೊಟ್ಟು, ಶುಕ್ರವಾರ ರಾತ್ರಿ ಅಲ್ಲಿಂದ ವಾಪಸ್​ ತಮ್ಮೂರಿಗೆ ಮರಳುತ್ತಿದ್ದರು. ಆದರೆ ರಾತ್ರಿ 11ಗಂಟೆ ಹೊತ್ತಿಗೆ ಆ ವಾಹನ ಅಪಘಾತಕ್ಕೀಡಾಗಿದೆ. ಈ ವಾಹನ ಸಿಕ್ಕಾಪಟೆ ವೇಗವಾಗಿ ಹೋಗುತ್ತಿತ್ತು. ಕುಮಿಲಿ ಬಳಿ ಗುಡ್ಡ ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆ ಪಕ್ಕದ 40 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ.

ಕೇಂದ್ರ ವಿದೇಶಾಂಗ ಇಲಾಖೆ ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯದ ಸಹಾಯಕ ಸಚಿವ ವಿ. ಮರಳೀಧರನ್​ ಅವರು ಘಟನೆ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇದೀಗ ಸಂಕ್ರಾಂತಿ ಹಬ್ಬ ಸಮೀಪಿಸುತ್ತಿರುವ ಕಾರಣ ಶಬರಿಮಲೆ ದೇವಸ್ಥಾನಕ್ಕೆ ಹೋಗುವ ಯಾತ್ರಾರ್ಥಿಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಸಮಯದಲ್ಲಿ ದೇಗುಲದಲ್ಲಿ ಒಂದು ದಿನಕ್ಕೆ ಲಕ್ಷ ಭಕ್ತರು ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: Road Accident | ಶಬರಿಮಲೆಗೆ ತೆರಳಿದ್ದವರ ಮಿನಿ ಬಸ್‌ಗೆ ಲಾರಿ ಡಿಕ್ಕಿ; ಅಪಘಾತದಲ್ಲಿ 23 ಜನರಿಗೆ ಗಾಯ, ಇಬ್ಬರ ಸ್ಥಿತಿ ಗಂಭೀರ

Exit mobile version