ಸಂಗಾತಿಗಾಗಿ 2000 ಕಿ.ಮೀ ಸಂಚರಿಸಿದ ರಾಯಲ್ ಬೆಂಗಾಲ್ ಟೈಗರ್! ಈ ಹುಲಿ ಹೋಗಿದ್ದೆಲ್ಲಿಗೆ? - Vistara News

ದೇಶ

ಸಂಗಾತಿಗಾಗಿ 2000 ಕಿ.ಮೀ ಸಂಚರಿಸಿದ ರಾಯಲ್ ಬೆಂಗಾಲ್ ಟೈಗರ್! ಈ ಹುಲಿ ಹೋಗಿದ್ದೆಲ್ಲಿಗೆ?

Royal Bengal Tiger: ಮಹಾರಾಷ್ಟ್ರದ ಹುಲಿಯೊಂದು ಸೂಕ್ತ ವಾಸಸ್ಥಾನ ಮತ್ತು ಸಂಗಾತಿಗಾಗಿ ನಾಲ್ಕು ರಾಜ್ಯಗಳನ್ನು ದಾಟಿ ನಿರ್ದಿಷ್ಟ ಅರಣ್ಯ ಪ್ರದೇಶಕ್ಕೆ ತಲುಪಿರುವ ಘಟನೆ ಬೆಳಕಿಗೆ ಬಂದಿದೆ.

VISTARANEWS.COM


on

Royal Bengal Tiger travels 2000 km for mate and new home
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭುವನೇಶ್ವರ, ಒಡಿಶಾ: ಸ್ಥಿರ ವಾಸಸ್ಥಾನ (suitable territory) ಮತ್ತು ಸೂಕ್ತ ಸಂಗಾತಿಗಾಗಿ (potential mate) ಪ್ರಾಣಿಗಳು ಎಂಥದ್ದೇ ಸಾಹಸಕ್ಕೂ ಮುಂದಾಗುತ್ತವೆ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದೆ. ರಾಯಲ್ ಬೆಂಗಾಲ್ ಹುಲಿಯೊಂದು (Royal Bengal Tiger) ತನಗೆ ಸರಿಹೊಂದು ವಾಸಸ್ಥಾನ ಮತ್ತು ಸಂಗಾತಿಗೆ ಸುಮಾರು 2 ಸಾವಿರ ಕಿ.ಮೀ ಸಂಚರಿಸಿದೆ. ಹೌದು, ಮಹಾರಾಷ್ಟ್ರದ (Maharashtra) ತಡೋಬಾದಿಂದ ಗಂಡು ರಾಯಲ್ ಬೆಂಗಾಲ್ ಹುಲಿಯು ಕಳೆದ ಐದು ತಿಂಗಳುಗಳಲ್ಲಿ, ನಾಲ್ಕು ರಾಜ್ಯಗಳನ್ನು ಹಾಯ್ದು ಒಡಿಶಾ (Odisha) ಕಾಡಿಗೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2023ರ ಜೂನ್ ತಿಂಗಳಲ್ಲಿ ರಾಜ್ಯದ ಅರಣ್ಯದಲ್ಲಿ ಹುಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದರೂ, ಅದು ಎಲ್ಲಿಂದ ಬಂತು ಎಂದು ಖಚಿತವಾಗಿರಲಿಲ್ಲ ಎಂದು ಒಡಿಶಾ ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. “ಅಂದಿನಿಂದ ಇದು ಒಡಿಶಾದ ರಾಯಗಡ ವಿಭಾಗ ಮತ್ತು ಆಂಧ್ರಪ್ರದೇಶದ ಮನ್ಯಂ ವಿಭಾಗದ ನಡುವೆ ಪರ್ಯಾಯವಾಗಿ ಸಂಚರಿಸುತ್ತಿತ್ತು. ಸೆಪ್ಟೆಂಬರ್‌ನಲ್ಲಿ ಗಜಪತಿ ಜಿಲ್ಲೆಯ ಪರ್ಲಾಖೆಮುಂಡಿ ಅರಣ್ಯ ವಿಭಾಗಕ್ಕೆ ಪ್ರವೇಶಿಸಿತು. ಈ ವೇಳೆ ಗ್ರಾಮಸ್ಥರು ಹುಲಿಯನ್ನು ನೋಡಿದ ಬಗ್ಗೆ ಮಾತನಾಡಲು ಪ್ರಾರಂಭಿಸಿದರು” ಎಂದು ಪರ್ಲಾಖೆಮುಂಡಿಯ ವಿಭಾಗೀಯ ಅರಣ್ಯಾಧಿಕಾರಿ ಆನಂದ್ ಎಸ್ ತಿಳಿಸಿದ್ದಾರೆ.

ಅಕ್ಟೋಬರ್ ತಿಂಗಳಲ್ಲಿ ಹುಲಿ ಹಸುವೊಂದನ್ನು ಎಳೆದುಕೊಂಡ ಪ್ರಕರಣ ವರದಿಯಾಗಿತ್ತು. ವಿಶೇಷ ಎಂದರೆ, ಕಳೆದ 30 ವರ್ಷದಲ್ಲಿ ಗಜಪತಿಯಲ್ಲಿ ಯಾವುದೇ ಹುಲಿ ಕಾಣಿಸಿಕೊಂಡಿರಲಿಲ್ಲ. ಹಾಗಾಗಿ, ಹಸುವನ್ನು ಎಳೆದೊಯ್ದಿರುವುದು ಹುಲಿಯೇ ಅಥವಾ ಚಿರತೆಯೇ ಎಂಬ ಬಗ್ಗೆ ಅನುಮಾನಗಳಿದ್ದವು. ಆದರೆ, ಅರಣ್ಯಗಳಲ್ಲಿ ಅಳವಡಿಸಲಾಗಿರುವ ಕ್ಯಾಮೆರಾಗಳಿಂದಾಗಿ ಹುಲಿಯೇ ಎಂಬುದು ಖಚಿತವಾಯಿತು ಮತ್ತು ಒಟ್ಟು ಮೂರು ಬಾರಿ ಅದು ಕ್ಯಾಮೆರಾದಲ್ಲಿ ಸೆರೆ ಆಗಿತ್ತು ಎನ್ನುತ್ತಾರೆ ಅಧಿಕಾರಿಗಳು.

ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಚಿತ್ರವನ್ನು ಡೆಹ್ರಾಡೂನ್‌ನಲ್ಲಿರುವ ವೈಲ್ಡ್‌ಲೈಫ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (ಡಬ್ಲ್ಯುಐಐ) ಗೆ ಮ್ಯಾಪಿಂಗ್‌ಗಾಗಿ ಕಳುಹಿಸಲಾಗಿತ್ತು. ವಿಶೇಷ ಎಂದರೆ, ಕ್ಯಾಮೆರಾದಲ್ಲಿ ಸೆರೆಯಾದ ಹುಲಿಯ ಚಿತ್ರವು ಮಹಾರಾಷ್ಟ್ರದ ಬ್ರಹ್ಮಪುರಿ ಅರಣ್ಯ ವಿಭಾಗದಲ್ಲಿ ಹಿಂದೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದ ಹುಲಿಯೊಂದೆ ತಾಳೆಯಾಯಿತು. ಆಗ, ಎಲ್ಲವೂ ತಿಳಿಯಾಯಿತು. ಮಹಾರಾಷ್ಟ್ರದಿಂದ ಸುಮಾರು 2000 ಕಿ.ಮೀ ಕ್ರಮಿಸಿದ ಈ ಹುಲಿ ಒಡಿಶಾ ಅರಣ್ಯಕ್ಕೆ ಬಂದಿದೆ. ಬಹುಶಃ ತನಗಾಗಿಯೇ ಸೂಕ್ತವಾದ ವಾಸಸ್ಥಾನ ಮತ್ತು ಸಂಗಾತಿಗಾಗಿ ವಲಸೆ ಬಂದಿರಬಹುದು ಎಂದು ತಜ್ಞರು ಹೇಳುತ್ತಾರೆ.

ಒಡಿಶಾವನ್ನು ತಲುಪವ ಮೊದಲು ಈ ಬೆಂಗಾಲ್ ಟೈಗರ್ ತೆಲಂಗಾಣ, ಆಂಧ್ರ ಪ್ರದೇಶ ಮತ್ತು ಛತ್ತೀಸ್‌ಗಡ ರಾಜ್ಯಗಳನ್ನು ದಾಟಿ ಬಂದಿದೆ. ಕಳೆದ ಒಂದು ತಿಂಗಳಲ್ಲಿ ಈ ಹುಲಿ ಸುಮಾರು 500 ಕಿ.ಮೀ. ಸಂಚರಿಸಿದೆ. ಈ ಹುಲಿ ಪರ್ಲಖೆಮುಂಡಿಯಿಂದ ಶ್ರೀಕಾಕುಲಂಗೆ, ನಂತರ ಇಚ್ಛಾಪುರಕ್ಕೆ ಮತ್ತು ಅಂತಿಮವಾಗಿ ಪರ್ಲಾಖೆಮುಂಡಿಗೆ ಹಿಂತಿರುಗಿದೆ. ಬಹುಶಃ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಮಹಾರಾಷ್ಟ್ರದಿಂದ ಒಡಿಶಾಗೆ ಹುಲಿಯೊಂದು ವಲಸೆ ಬಂದಿದೆ ಎನ್ನುತ್ತಾರೆ ಅಧಿಕಾರಿಗಳು.

2019 ರಲ್ಲಿ ಮಹಾರಾಷ್ಟ್ರದ ವನ್ಯಜೀವಿ ಅಧಿಕಾರಿಗಳು ಮಹಾರಾಷ್ಟ್ರದ ತಿಪೇಶ್ವರ ವನ್ಯಜೀವಿ ಅಭಯಾರಣ್ಯದಿಂದ TWLS-T1-C1 ಎಂಬ ಹುಲಿಯನ್ನು ಅದರ ಪ್ರಸರಣವನ್ನು ಪತ್ತೆಹಚ್ಚಲು ರೇಡಿಯೊ ಕಾಲರ್ ಬಳಸಿದ್ದರು. ಮುಂದಿನ 13 ತಿಂಗಳುಗಳಲ್ಲಿ ಈ ಹುಲಿ 3,017 ಕಿ.ಮೀ ಸಂಚರಿಸಿತ್ತು. ಸೂಕ್ತ ವಾಸಸ್ಥಾನ ಮತ್ತು ಸಂಗಾತಿಯ ಹುಡುಕಾಟದಲ್ಲಿ ದೇಶದ ಯಾವುದೇ ಹುಲಿ ಕ್ರಮಿಸಿರುವ ಅತಿ ದೂರದ ಪಯಣ ಇದಾಗಿದೆ.

ಈ ಸುದ್ದಿಯನ್ನೂ ಓದಿ: Tiger Attack: ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬರ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

Reels Accident : ರೀಲ್ಸ್‌ ಹುಚ್ಚು ಯುವತಿಯೊಬ್ಬಳ ಪ್ರಾಣವನ್ನೇ ಕಸಿದಿದೆ. ಬೆಟ್ಟದ ತುದಿಯಲ್ಲಿ ಸಾಹಸ ಪ್ರದರ್ಶಿಸಲು ಹೋಗಿ 25ರ ಯುವತಿ ಪ್ರಪಾತಕ್ಕೆ ಬಿದ್ದು ದಾರುಣವಾಗಿ ಮೃತಪಟ್ಟಿದ್ದಾಳೆ. ಸಾವಿನ ಕೊನೆ ಕ್ಷಣವು ಸ್ನೇಹಿತನ ಮೊಬೈಲ್‌ನಲ್ಲಿ (Reels Tragedy) ಸೆರೆಯಾಗಿದೆ.

VISTARANEWS.COM


on

By

Reels tragedy
Koo

ಮಹಾರಾಷ್ಟ್ರ: ಇತ್ತೀಚಿನ ದಿನಗಳಲ್ಲಿ ರೀಲ್ಸ್‌ಗಾಗಿ (Reels Accident) ಯುವ ಜನತೆಯಲ್ಲಿ ಹುಚ್ಚು ಸಾಹಸ ಪ್ರದರ್ಶಿಸುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದಕ್ಕಾಗಿ ತಮ್ಮ ಪ್ರಾಣವನ್ನೇ ಒತ್ತೆ ಇಡುತ್ತಾರೆ. ಅದರಲ್ಲೂ ಜನಪ್ರಿಯತೆ ಗಳಿಸಲು ಯಾವ ಮಟ್ಟಕ್ಕೂ ಬೇಕಾದರೂ ಇಳಿಯಲು ತಯಾರಿರುತ್ತಾರೆ. ಇಂತಹ ರೀಲ್ಸ್‌ (Reels Tragedy) ಮಾಡಲು ಹೋಗಿ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ.

ಅಂತಹದ್ದೇ ಘಟನೆಯೊಂದು ಮಹಾರಾಷ್ಟ್ರದ ಸಂಭಾಜಿನಗರ ಜಿಲ್ಲೆಯ ಸುಲಿಭಂಜನ್ ಗ್ರಾಮದಲ್ಲಿ ಘಟನೆ ನಡೆದಿದೆ. ರೀಲ್ಸ್ ಹುಚ್ಚಿಗೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶ್ವೇತಾ (25) ಮೃತ ದುರ್ದೈವಿ. ಶ್ವೇತಾ ತನ್ನ ಮೂವರು ಸ್ನೇಹಿತರ ಜತೆಗೆ ಸುಲಿಭಂಜನ್ ಗ್ರಾಮದ ದತ್ತ ಮಂದಿರಕ್ಕೆ ಪ್ರವಾಸಕ್ಕೆ ತೆರಳಿದ್ದಳು. ಈ ವೇಳೆ ಬೆಟ್ಟದ ತುದಿಯಲ್ಲಿ ಕಾರು ನಿಲ್ಲಿಸಿ ರೀಲ್ಸ್ ಮಾಡುತ್ತಿದ್ದಳು. ಕಾರಿನೊಳಗೆ ಕುಳಿತ ಶ್ವೇತಾ ರಿವರ್ಸ್ ಗೇರ್‌ನಲ್ಲಿದ್ದ ಕಾರನ್ನು ಚಲಾಯಿಸಿದ್ದಾಳೆ.ಏಕಾಏಕಿ ಜೋರಾಗಿ ಎಕ್ಸಿಲೇಟರ್‌ ಹೊತ್ತಿದ್ದಾಳೆ. ಅಷ್ಟೇ ನೋಡ ನೋಡುತ್ತಿದ್ದಂತೆ ಜಸ್ಟ್‌ 15 ಸೆಕೆಂಡ್‌ನಲ್ಲೇ ಯುವತಿ ಕಾರು ಸಮೇತ ಪ್ರಪಾತಕ್ಕೆ ಬಿದ್ದಿದ್ದಾಳೆ.

ಲೈವ್ ಆ್ಯಕ್ಸಿಡೆಂಟ್ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಪಾತಕ್ಕೆ ಬಿದ್ದ ರಭಸಕ್ಕೆ ಕಾರು ಛಿದ್ರ ಛಿದ್ರವಾಗಿದ್ದರೆ ಶ್ವೇತಾ ಸ್ಪಾಟ್‌ನಲ್ಲೇ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು! ವಿಡಿಯೊ ನೋಡಿ

ಬಿಹಾರ : ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸರ್ಕಾರ ಮಕ್ಕಳಿಗೆ ಬಿಸಿಯೂಟ ಯೋಜನೆಯನ್ನು ನೀಡುತ್ತಿದೆ. ಅದರಂತೆ ಮಕ್ಕಳಿಗೆ ಮಧ್ಯಾಹ್ನದ ಊಟವನ್ನು ಶಾಲೆಯಲ್ಲಿಯೇ ತಯಾರಿಸಿ ಉಚಿತವಾಗಿ ನೀಡಲಾಗುತ್ತಿದೆ. ಆದರೆ ಈ ಊಟ ಸೇವಿಸಿ ಹಲವು ಬಾರಿ ಮಕ್ಕಳು ಅಸ್ವಸ್ಥರಾದ ಬಗ್ಗೆ ನಾವು ಕೇಳಿದ್ದೇವೆ. ಅಂತಹದೊಂದು ಘಟನೆ ಬಿಹಾರದ ಬಂಕಾದಲ್ಲಿ ನಡೆದಿದ್ದು, ಈ ಬಗ್ಗೆ ಇಲ್ಲಿನ ವಿದ್ಯಾರ್ಥಿಯೊಬ್ಬ ಸಾಕ್ಷಿ ಸಮೇತ ನಿರೂಪಿಸಿದ್ದಾನೆ. ಈ ಸುದ್ದಿ ಈಗ ಎಲ್ಲೆಡೆ ವೈರಲ್‌ (Viral News) ಆಗಿದೆ.

ಬಿಹಾರದ ಬಂಕಾದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿ ರಿಷಿ ಸಿಂಗ್ ಕಾಲೇಜಿನ ಅವ್ಯವಸ್ಥೆಯಿಂದ ಹಿಡಿದು ಕಳಪೆ ಗುಣಮಟ್ಟದ ಆಹಾರವನ್ನು ನೀಡುತ್ತಿರುವ ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾನೆ.
ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಊಟದಲ್ಲಿ ಸತ್ತ ಹಾವು ಇತ್ತು ಎಂದು ತನ್ನ ಸೋಷಿಯಲ್‌ ಮೀಡಿಯಾ ಪೇಜ್ ನಲ್ಲಿ ಬರೆದಿದ್ದಾನೆ. ಆ ಆಹಾರವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯಕ್ಕೀಡಾಗಿದ್ದರು ಎಂಬುದಾಗಿ ತಿಳಿಸಿದ್ದಾನೆ. ಇದಕ್ಕೆ ಸಂಬಂಧಿಸಿದ ಪೋಟೊಗಳನ್ನು ಪೋಸ್ಟ್ ಮಾಡಿದ್ದಾನೆ.

ಹಾಗೇ ಮತ್ತೊಂದು ಪೋಸ್ಟ್ ನಲ್ಲಿ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬ್ರೆಡ್‌ನ ಬಗ್ಗೆ ತಿಳಿಸಿದ್ದಾನೆ. ಬ್ರೆಡ್‌ಗೆ ಅವಧಿ ಮೀರಿದ ಕಾರಣ ಅದರಲ್ಲಿ ಇರುವೆ, ಹುಳುಗಳು ಇವೆ. ಅದನ್ನು ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇದು ವಿದ್ಯಾರ್ಥಿಗಳ ಆರೋಗ್ಯವನ್ನು ಹಾಳುಮಾಡುತ್ತದೆ ಎಂದು ಅದಕ್ಕೆ ಸಂಬಂಧಪಟ್ಟ ವಿಡಿಯೊ ತುಣುಕೊಂದನ್ನು ಪೋಸ್ಟ್ ಮಾಡಿದ್ದಾನೆ.

ಅಲ್ಲದೇ ಇದರ ಕುರಿತು ಕ್ರಮ ತೆಗೆದುಕೊಳ್ಳಲು ಕಾಲೇಜು ಆಡಳಿತ ಮತ್ತು ಸ್ಥಳೀಯ ಪ್ರಾಧಿಕಾರ ಯಾರು ಮುಂದೆ ಬರುತ್ತಿಲ್ಲ ಎಂದು ವಿದ್ಯಾರ್ಥಿಯು ತಿಳಿಸಿದ್ದಾನೆ. ಹಾಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಬಂಕಾಗೆ ಟ್ಯಾಗ್ ಮಾಡಿದ್ದಾನೆ. ಜೂನ್ 17 ಸೋಮವಾರದಿಂದು ಈ ಘಟನೆ ವರದಿಯಾಗಿದೆ.

ಈ ಘಟನೆಯ ನಂತರ ಬಂಕಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಂಶುಲ್ ಕುಮಾರ್ ಮತ್ತು ಇತರ ಕೆಲವು ಅಧಿಕಾರಿಗಳು ಈ ವಿಷಯವನ್ನು ತನಿಖೆ ಮಾಡಲು ಮೆಸ್ ಗೆ ಭೇಟಿ ನೀಡಿದ್ದಾರೆ ಮತ್ತು ಮೆಸ್ ಮಾಲೀಕರಿಗೆ ದಂಡ ವಿಧಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದೇಶ

Narendra Modi: ಮೂರನೇ ಬಾರಿ ಪ್ರಧಾನಿ ಪಟ್ಟಕ್ಕೇರಿದ ಬಳಿಕ ಇಂದು ಸ್ವಕ್ಷೇತ್ರ ವಾರಾಣಸಿಗೆ ಮೋದಿ ಮೊದಲ ಭೇಟಿ

Narendra Modi: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.

VISTARANEWS.COM


on

Narendra Modi
Koo

ಲಕ್ನೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಇಂದು (ಜೂನ್‌ 18) ಉತ್ತರ ಪ್ರದೇಶದ ತಮ್ಮ ಕ್ಷೇತ್ರ ವಾರಣಾಸಿ (Varanasi)ಗೆ ಭೇಟಿ ನೀಡಲಿದ್ದಾರೆ. ಸತತ ಮೂರು ಬಾರಿ ಇಲ್ಲಿಂದ ಸ್ಪರ್ಧಿಸಿ ಮೋದಿ ಅವರು ಹ್ಯಾಟ್ರಿಕ್‌ ಜಯ ಗಳಿಸಿದ್ದಾರೆ. ಪ್ರಧಾನಿ ಪಟ್ಟಕ್ಕೇರಿದ ಬಳಿಕ ಅವರ ಮೊದಲ ಸ್ವಕ್ಷೇತ್ರ ಭೇಟಿ ಇದು ಎನ್ನುವುದು ವಿಶೇಷ. ಈ ಸಂದರ್ಭದಲ್ಲಿ ಅವರು  ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಈ ಮೂಲಕ ಸುಮಾರು 9.26 ರೈತರ ಖಾತೆಗಳಿಗೆ 20,000 ಕೋಟಿ ರೂ. ಜಮೆ ಆಗಲಿದೆ.

ಮಾತ್ರವಲ್ಲ ಕೃಷಿ ಸಖಿಗಳಾಗಿ ತರಬೇತಿ ಪಡೆದ 30,000ಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿಗೆ ಮೋದಿ ಪ್ರಮಾಣಪತ್ರಗಳನ್ನೂ ಬಿಡುಗಡೆ ಮಾಡಲಿದ್ದಾರೆ. ಜತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ಆನಂದಿಬೆನ್ ಪಟೇಲ್, ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಹಲವು ರಾಜ್ಯ ಸಚಿವರು ಭಾಗವಹಿಸಲಿದ್ದಾರೆ.

ವಾರಣಾಸಿ ಪ್ರವಾಸದ ಸಂಪೂರ್ಣ ವಿವರ

ಮೋದಿ ಅವರು ಸುಮಾರು 5 ಗಂಟೆಗಳ ಕಾಲ ವಾರಣಾಸಿಯಲ್ಲಿ ಇರಲಿದ್ದಾರೆ. ಸಂಜೆ 4 ಗಂಟೆ ಸುಮಾರಿಗೆ ಮೋದಿ ಬಬತ್ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಸಂಜೆ 5 ಗಂಟೆ ಸುಮಾರಿಗೆ ವಾರಣಾಸಿಯಲ್ಲಿ ಆಯೋಜಿಸಿರುವ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಸಮ್ಮಾನ್ ನಿಧಿಯ ಕಂತನ್ನು ಮೋದಿ ಬಿಡುಗಡೆ ಮಾಡಲಿದ್ದು, ವಾರಣಾಸಿಯಲ್ಲಿ 2,76,665 ಫಲಾನುಭವಿಗಳಿದ್ದಾರೆ. ಜತೆಗೆ 21 ರೈತರನ್ನು ಭೇಟಿ ಮಾಡಿ ಅವರ ಉತ್ಪನ್ನಗಳನ್ನು ಪರಿಶೀಲಿಸಲಿದ್ದಾರೆ.

ಸಂಜೆ 7 ಗಂಟೆ ಸುಮಾರಿಗೆ ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ನಡೆಯಲಿರುವ ಗಂಗಾ ಆರತಿಯನ್ನು ವೀಕ್ಷಿಸಲಿರುವ ಮೋದಿ, ನಂತರ ರಾತ್ರಿ 8 ಗಂಟೆಗೆ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಸುಮಾರು 25 ನಿಮಿಷಗಳ ಕಾಲ ದೇವಾಲಯದಲ್ಲಿ ಇರಲಿದ್ದಾರೆ ಎಂದು ಕಾಶಿ ವಿಶ್ವನಾಥ ದೇವಾಲಯದ ಸಿಇಒ ವಿಶ್ವ ಭೂಷಣ್ ಮಿಶ್ರಾ ತಿಳಿಸಿದ್ದಾರೆ. ಈ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಸುಮಾರು 1,52,513 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ: Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

ಏನಿದು ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆ?

ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ 2019ರಲ್ಲಿ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

Continue Reading

ದೇಶ

Nuclear Weapon: ಭಾರತದಲ್ಲಿದೆ ಪಾಕಿಸ್ತಾನಕ್ಕಿಂತ ಹೆಚ್ಚಿನ ಪರಮಾಣು ಶಸ್ತ್ರಾಸ್ತ್ರ; ಹೀಗಿದೆ ಹೊಸ ಅಂಕಿ-ಅಂಶ

Nuclear Weapon: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ವರದಿಯೊಂದು ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದೂ ವಿವರಿಸಲಾಗಿದೆ.

VISTARANEWS.COM


on

Nuclear Weapon
Koo

ನವದೆಹಲಿ: ಅಮೆರಿಕ, ರಷ್ಯಾ, ಫ್ರಾನ್ಸ್, ಚೀನಾ, ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರ (Nuclear Weapon)ಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ವೀಡನ್ ಚಿಂತಕರ ಚಾವಡಿ ಥಿಂಕ್‌-ಟ್ಯಾಂಕ್‌ (Swedish think-tank) ಸೋಮವಾರ ತಿಳಿಸಿದೆ. ಜತೆಗೆ ಭಾರತ ಪಾಕಿಸ್ತಾನಕ್ಕಿಂತ ಹೆಚ್ಚಿನ ಸಂಖ್ಯೆಯ ಪರಮಾಣು ಶಸ್ತ್ರಾಸ್ತ್ರ ಹೊಂದಿದೆ ಎಂದು ವರದಿ ಹೇಳಿದೆ.

ಜಾಗತಿಕವಾಗಿ ಆವರಿಸಿರುವ ಯುದ್ಧದ ಭೀತಿಯ ನಡುವೆ, ಚೀನಾದ ಪರಮಾಣು ಶಸ್ತ್ರಾಸ್ತ್ರದ ಪ್ರಮಾಣ ಒಂದು ವರ್ಷದಲ್ಲಿ 90ರಷ್ಟು ಏರಿಕೆಯಾಗಿದೆ. 2023ರ ಜನವರಿಯಲ್ಲಿ ಚೀನಾದಲ್ಲಿ 410 ಸಿಡಿತಲೆ (Warheads) ಇದ್ದರೆ 2024ರ ಜನವರಿಯಲ್ಲಿ ಅದರ ಸಂಖ್ಯೆ 500ಕ್ಕೆ ಏರಿದೆ. ಜತೆಗೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ. ಅಲ್ಲದೆ ಚೀನಾ ಕೆಲವು ಸಿಡಿತಲೆಗಳನ್ನು ಸರ್ವ ಸನ್ನದ್ಧ ರೀತಿಯಲ್ಲಿ ಇರಿಸಿಕೊಂಡಿದೆ ಎಂದೂ ಮೂಲಗಳು ತಿಳಿಸಿವೆ.

ಆಧುನೀಕರಣಕ್ಕೆ ಒತ್ತು

ಅಮೆರಿಕ, ರಷ್ಯಾ, ಇಂಗ್ಲೆಂಡ್‌, ಫ್ರಾನ್ಸ್, ಚೀನಾ, ಭಾರತ, ಪಾಕಿಸ್ತಾನ, ಉತ್ತರ ಕೊರಿಯಾ ಮತ್ತು ಇಸ್ರೇಲ್ – ಈ ಒಂಬತ್ತು ಪರಮಾಣು ಸಶಸ್ತ್ರ ರಾಷ್ಟ್ರಗಳು ತಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಆಧುನೀಕರಿಸುವುದನ್ನು ಮುಂದುವರಿಸಿವೆ ಎಂದು ಸ್ಟಾಕ್ಹೋಮ್ ಇಂಟರ್‌ನ್ಯಾಷನಲ್‌ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ (SIPRI) ವರದಿ ಮಾಡಿದೆ.

2024ರ ಜನವರಿಯಿಂದ ಜಾಗತಿಕವಾಗಿ 12,121 ಸಿಡಿತಲೆಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ ಸುಮಾರು 9,585ರಷ್ಟು ಸಂಭಾವ್ಯ ಬಳಕೆಗಾಗಿ ಮಿಲಿಟರಿ ದಾಸ್ತಾನುಗಳಲ್ಲಿವೆ. ಈ ಪೈಕಿ ಸುಮಾರು 3,904 ಸಿಡಿತಲೆಗಳನ್ನು ಕ್ಷಿಪಣಿಗಳು ಮತ್ತು ವಿಮಾನಗಳೊಂದಿಗೆ ಸಜ್ಜುಗೊಳಿಸಲಾಗಿದೆ ಎನ್ನುವ ಆಘಾತಕಾರಿ ಮಾಹಿತಿಯೂ ಬಹಿರಂಗಗೊಂಡಿದೆ.

ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಅನೇಕ ಸಿಡಿತಲೆಗಳನ್ನು ನಿಯೋಜಿಸುವ ಸಾಮರ್ಥ್ಯವನ್ನು ಈಗಾಗಲೇ ರಷ್ಯಾ, ಫ್ರಾನ್ಸ್, ಇಂಗ್ಲೆಂಡ್‌, ಅಮೆರಿಕ ಮತ್ತು ಚೀನಾ ಹೊಂದಿದ್ದು, ಇದನ್ನು ಅಭಿವೃದ್ಧಿ ಪಡಿಸಲು ಭಾರತ, ಪಾಕಿಸ್ತಾನ ಮತ್ತು ಉತ್ತರ ಕೊರಿಯಾಗಳು ಮುಂದಾಗಿವೆ. ಇದು ನಿಯೋಜಿತ ಸಿಡಿತಲೆಗಳುಗೆ ಮನ್ನಷ್ಟು ಶಕ್ತಿ ತುಂಬುತ್ತದೆ ಮತ್ತು ಇನ್ನಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಎಂದು ಥಿಂಕ್‌-ಟ್ಯಾಂಕ್‌ ಹೇಳಿದೆ. ಜಾಗತಿಕವಾಗಿ ಕಂಡು ಬಂದಿರುವ ಪರಮಾಣು ಶಸ್ತ್ರಾಸ್ತ್ರಗಳ ಪೈಕಿ ರಷ್ಯಾ ಮತ್ತು ಅಮೆರಿಕದಲ್ಲಿ ಸಿಂಹಪಾಲಿದೆ. ಅಂದೆ ಒಟ್ಟು ಶೇ. 90ರಷ್ಟು ಈ ಎರಡು ದೇಶಗಳಲ್ಲಿವೆ.

ಭಾರತ, ಪಾಕಿಸ್ತಾನದಲ್ಲಿ ಎಷ್ಟಿದೆ?

ಈ ವರ್ಷದ ಜನವರಿಯಲ್ಲಿ ಭಾರತದ ‘ಸಂಗ್ರಹಿತ’ ಪರಮಾಣು ಸಿಡಿತಲೆಗಳ ಸಂಖ್ಯೆ 172ರಷ್ಟಿದ್ದರೆ, ಪಾಕಿಸ್ತಾನದ ಸಂಖ್ಯೆ 170 ಎಂದು ವರದಿ ಹೇಳಿದೆ. “ಪಾಕಿಸ್ತಾನವು ಭಾರತದ ಮುಖ್ಯ ಕೇಂದ್ರಬಿಂದುವಾಗಿದ್ದರೂ, ಚೀನಾದಾದ್ಯಂತ ಗುರಿಗಳನ್ನು ತಲುಪುವ ಸಾಮರ್ಥ್ಯ ಸೇರಿದಂತೆ ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳಿಗೆ ಒತ್ತು ನೀಡುತ್ತಿದೆ” ಎಂದು ಮೂಲಗಳು ತಿಳಿಸಿದೆ. ಇನ್ನು ರಷ್ಯಾ ಮತ್ತು ಅಮೆರಿಕಕ್ಕೆ ಹೋಲಿಸಿದರೆ ಚೀನಾದಲ್ಲಿ ಸಿಡಿತಲೆಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಚೀನಾ ತನ್ನ ಪರಮಾಣು ಶಸ್ತ್ರಾಗಾರವನ್ನು ಇತರ ದೇಶಗಳಿಗಿಂತ ವೇಗವಾಗಿ ವಿಸ್ತರಿಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Mission Divyastra: ʼದಿವ್ಯಾಸ್ತ್ರʼಕ್ಕೆ ಜೀವ ತುಂಬಿದ ʼದಿವ್ಯ ಪುತ್ರಿ! ಯಾರಿವರು?

Continue Reading

ರಾಜಕೀಯ

Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

Opposition Leader: ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಪ್ರತಿಪಕ್ಷ ಅತ್ಯಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದರಿಂದ ಅಧಿಕೃತವಾಗಿ ಪ್ರತಿಪಕ್ಷ ನಾಯಕನ ಆಯ್ಕೆ ಆಗಿರಲಿಲ್ಲ. ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿವೆ.

VISTARANEWS.COM


on

By

Leader of the Opposition
Koo

ಲೋಕಸಭೆ ಚುನಾವಣೆ (loksabha election) ಫಲಿತಾಂಶ ಹೊರಬಿದ್ದು ಹದಿನೈದು ದಿನ ಕಳೆದಿದೆ. ಈಗ ಭಾರಿ ಚರ್ಚೆಯಲ್ಲಿರುವ ವಿಷಯ ವಿರೋಧ ಪಕ್ಷದ ನಾಯಕನ (Opposition Leader) ಸ್ಥಾನದ್ದು. ಯಾಕೆಂದರೆ 10 ವರ್ಷಗಳ ಬಳಿಕ ದೇಶದ ಕೆಳಮನೆಯಲ್ಲಿ (loksabha) ಪ್ರತಿಪಕ್ಷದ ನಾಯಕ ತನ್ನ ಸ್ಥಾನವನ್ನು ಅಲಂಕರಿಸಲಿದ್ದಾರೆ. 2014ರಿಂದ ಈ ಹುದ್ದೆ ಖಾಲಿಯಿತ್ತು. ಆದರೆ ಈ ಬಾರಿ ಕಾಂಗ್ರೆಸ್ (congress) ಸಾಕಷ್ಟು ಸ್ಥಾನಗಳನ್ನು ಗಳಿಸಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಶೀಘ್ರದಲ್ಲಿ ನಡೆಯಲಿದೆ.

ಕಳೆದ 10 ವರ್ಷಗಳಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಒಟ್ಟು ಲೋಕಸಭೆ ಸದಸ್ಯರ ಪೈಕಿ ಶೇ.10ಕ್ಕಿಂತ ಕಡಿಮೆ ಇತ್ತು. ವಿಶೇಷವೆಂದರೆ, ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿಯಾಗುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ದೇಶದಲ್ಲಿ ಎಂಟು ಬಾರಿ ಇಂತಹ ಘಟನೆ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನಿಗೆ ಸಂಬಂಧಿಸಿದ ಕೆಲವು ಪ್ರಮುಖ ವಿಷಯಗಳು ಇಲ್ಲಿದೆ.

ವಿರೋಧ ಪಕ್ಷದ ಮೊದಲ ನಾಯಕ

ಪಂಡಿತ್ ಜವಾಹರಲಾಲ್ ನೆಹರೂ ಪ್ರಧಾನಿ ಆಗಿದ್ದ ಮೊದಲ, ಎರಡನೇ ಮತ್ತು ಮೂರನೇ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನ ಹುದ್ದೆ ಖಾಲಿ ಉಳಿದಿತ್ತು. ನಾಲ್ಕನೇ ಲೋಕಸಭೆಯಲ್ಲಿ ದೇಶದಲ್ಲಿ ಮೊದಲ ಬಾರಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿದ್ದು ರಾಮ್ ಸುಭಾಗ್ ಅವರು ಈ ಸ್ಥಾನ ಪಡೆದರು.

ಎಂಟು ಬಾರಿ ಸ್ಥಾನ ಖಾಲಿಯಾಗಿತ್ತು

ಐದು, ಏಳು ಮತ್ತು ಎಂಟನೇ ಲೋಕಸಭೆಯಲ್ಲಿ ಈ ಹುದ್ದೆ ಖಾಲಿ ಉಳಿದಿತ್ತು. 16ನೇ ಲೋಕಸಭೆ ಚುನಾವಣೆ 2014 ಮತ್ತು 17ನೇ ಲೋಕಸಭೆ 2019ರಲ್ಲಿ ವಿರೋಧ ಪಕ್ಷಗಳು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ. 18ನೇ ಲೋಕಸಭೆಯಲ್ಲಿ ಪ್ರಪ್ರಥಮ ಬಾರಿಗೆ ನರೇಂದ್ರ ಮೋದಿ ವಿರುದ್ಧ ಅಧಿಕೃತವಾಗಿ ಪ್ರತಿಪಕ್ಷ ನಾಯಕನನ್ನು ನೇಮಿಸುವ ಅವಕಾಶ ವಿಪಕ್ಷಗಳಿಗೆ ಸಿಕ್ಕಿದೆ. ಲೋಕಸಭೆಯಲ್ಲಿ ಒಟ್ಟು ಎಂಟು ಬಾರಿ ವಿರೋಧ ಪಕ್ಷದ ನಾಯಕನ ಸ್ಥಾನ ಖಾಲಿ ಉಳಿದಿತ್ತು.

10 ವರ್ಷಗಳ ಅನಂತರ ಕಾಂಗ್ರೆಸ್‌ಗೆ ಅವಕಾಶ

2024ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 240 ಸ್ಥಾನಗಳನ್ನು ಪಡೆದುಕೊಂಡಿದೆ. ಆದರೆ ಬಿಜೆಪಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ (ಎನ್‌ಡಿಎ) 292 ಲೋಕಸಭಾ ಸ್ಥಾನಗಳೊಂದಿಗೆ ಸಂಪೂರ್ಣ ಬಹುಮತವನ್ನು ಪಡೆದುಕೊಂಡಿದೆ. ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 52 ಸ್ಥಾನಗಳನ್ನು ಪಡೆಯಲು ಶಕ್ತವಾಗಿತ್ತು. ಆದರೆ ಈ ಬಾರಿ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡುವಷ್ಟು ಸ್ಥಾನಗಳನ್ನು ಪಡೆದಿದೆ.

ಇದನ್ನೂ ಓದಿ: Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

ವಿರೋಧ ಪಕ್ಷದ ನಾಯಕನಿಗೆ ಸಿಗುವ ಸೌಲಭ್ಯಗಳೇನು?

ವಿರೋಧ ಪಕ್ಷದ ನಾಯಕನ ಹುದ್ದೆಯು ಕ್ಯಾಬಿನೆಟ್ ಸಚಿವರಿಗೆ ಸಮಾನವಾಗಿದೆ. ಅವರು ಕೇಂದ್ರ ಸಚಿವರಿಗೆ ಸಮಾನವಾದ ಸಂಬಳ, ಭತ್ಯೆಗಳು ಮತ್ತು ಇತರ ಸೌಲಭ್ಯಗಳನ್ನು ಪಡೆಯುತ್ತಾರೆ. ವಸತಿ ಮತ್ತು ಚಾಲಕನೊಂದಿಗೆ ಕಾರನ್ನು ಒದಗಿಸಲಾಗುತ್ತದೆ. ವಿರೋಧ ಪಕ್ಷದ ನಾಯಕರಿಗೂ ಸಿಬ್ಬಂದಿ ಸಿಗುತ್ತಾರೆ. ವಿರೋಧ ಪಕ್ಷದ ನಾಯಕರು ಸಾರ್ವಜನಿಕ ಖಾತೆಗಳು, ಸಾರ್ವಜನಿಕ ಉದ್ಯಮಗಳು ಮತ್ತು ಅಂದಾಜುಗಳಂತಹ ಪ್ರಮುಖ ಸಮಿತಿಗಳ ಸದಸ್ಯರಾಗಿರುತ್ತಾರೆ. ಅವರು ಹಲವಾರು ಇತರ ಜಂಟಿ ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ.

ಸಿಬಿಐ, ಎನ್‌ಎಚ್‌ಆರ್‌ಸಿ, ಕೇಂದ್ರ ಜಾಗೃತ ಆಯೋಗ, ಕೇಂದ್ರ ಮಾಹಿತಿ ಆಯೋಗದ ಮುಖ್ಯಸ್ಥರನ್ನು ನೇಮಿಸುವ ಆಯ್ಕೆ ಸಮಿತಿಗಳಲ್ಲಿ ವಿರೋಧ ಪಕ್ಷದ ನಾಯಕನನ್ನು ಸದಸ್ಯರನ್ನಾಗಿ ಮಾಡಲಾಗುತ್ತದೆ. ಸಂಸತ್ತಿನಲ್ಲಿ ಸರ್ಕಾರದ ನೀತಿಗಳನ್ನು ಟೀಕಿಸುವ ಸ್ವಾತಂತ್ರ್ಯ ವಿರೋಧ ಪಕ್ಷದ ನಾಯಕನಿಗೆ ಇರುತ್ತದೆ.

Continue Reading
Advertisement
actor darshan manager death
ಪ್ರಮುಖ ಸುದ್ದಿ15 mins ago

Actor Darshan: ರಕ್ತ ಕಾರಿಕೊಂಡು ಸತ್ತ ದರ್ಶನ್‌ ಫಾರಂ ಹೌಸ್ ಮ್ಯಾನೇಜರ್;‌ ಏನಿದು ಮತ್ತೊಂದು ನಿಗೂಢ?

Gautam Gambhir
ಕ್ರೀಡೆ28 mins ago

Gautam Gambhir: ಅಮೀತ್​ ಶಾ ಭೇಟಿಯಾದ ಗೌತಮ್‌ ಗಂಭೀರ್‌; ಕೋಚ್​ ಆಗುವುದು ಖಚಿತ ಎಂದ ನೆಟ್ಟಿಗರು

Reels tragedy
ದೇಶ32 mins ago

Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

bhavani revanna bail
ಕ್ರೈಂ44 mins ago

Bhavani Revanna: ಭವಾನಿ ರೇವಣ್ಣ‌ ನಿರಾಳ, ನಿರೀಕ್ಷಣಾ ಜಾಮೀನು ನೀಡಿದ ಹೈಕೋರ್ಟ್

Viral News
Latest50 mins ago

Viral News: 20 ತಿಂಗಳ ಮಗುವಿಗೆ ಸಿಗರೇಟ್ ಸೇದಿಸಲು, ಮದ್ಯ ಕುಡಿಸಲು ಯತ್ನಿಸಿದ ತಾಯಿ!

Drowned in water
ಯಾದಗಿರಿ1 hour ago

Drowned in Water : ಯಾದಗಿರಿಯಲ್ಲಿ ತೆರೆದ ಗುಂಡಿಗೆ ಬಾಲಕ ಬಲಿ; ಬಳ್ಳಾರಿಯಲ್ಲಿ ಕೃಷಿ ಹೊಂಡಕ್ಕೆ ಬಿದ್ದವನು ಮೃತ್ಯು

WI vs AFG
ಕ್ರೀಡೆ1 hour ago

WI vs AFG: ಒಂದೇ ಓವರ್​ನಲ್ಲಿ 36 ರನ್​ ಗಳಿಸಿ ಯುವರಾಜ್​ ಸಿಂಗ್​ ದಾಖಲೆ ಸರಿಗಟ್ಟಿದ ನಿಕೋಲಸ್​ ಪೂರನ್​

NEET UG 2024
Latest1 hour ago

NEET UG 2024: ಮಗಳ ಜೊತೆ ಸೇರಿ ನೀಟ್ ಯುಜಿ ಪರೀಕ್ಷೆ ಬರೆದು ಪಾಸಾದ ಅಪ್ಪ!

Sidhartha Mallya
ಸಿನಿಮಾ2 hours ago

Sidhartha Mallya: ಹಸೆಮಣೆಗೇರಲು ಸಜ್ಜಾದ ದೀಪಿಕಾ ಪಡುಕೋಣೆ ಮಾಜಿ ಪ್ರೇಮಿ ಸಿದ್ಧಾರ್ಥ್‌ ಮಲ್ಯ

murder case
ಕ್ರೈಂ2 hours ago

Murder case : ರಸ್ತೆಯಲ್ಲಿ ಅಡ್ಡಗಟ್ಟಿ ಚಿಕ್ಕಮ್ಮನನ್ನು ಹೊಡೆದು ಕೊಂದ ದುಷ್ಟ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು23 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 day ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ2 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ2 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ3 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ4 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು4 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ4 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌