BJP Poaching AAP | ದೆಹಲಿಯ ಒಬ್ಬ ಕೌನ್ಸಿಲರ್‌ಗೆ ಬಿಜೆಪಿ 10 ಕೋಟಿ ರೂ. ಆಫರ್‌, ಆಪ್‌ ಗಂಭೀರ ಆರೋಪ - Vistara News

ದಿಲ್ಲಿ ಪಾಲಿಕೆ ಚುನಾವಣೆ

BJP Poaching AAP | ದೆಹಲಿಯ ಒಬ್ಬ ಕೌನ್ಸಿಲರ್‌ಗೆ ಬಿಜೆಪಿ 10 ಕೋಟಿ ರೂ. ಆಫರ್‌, ಆಪ್‌ ಗಂಭೀರ ಆರೋಪ

ದೆಹಲಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ “ಕುದುರೆ ವ್ಯಾಪಾರ”ದ (BJP Poaching AAP) ಆರೋಪ ಮಾಡಿದೆ.

VISTARANEWS.COM


on

Arvind Kejriwal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಬಿಜೆಪಿಯ ೧೫ ವರ್ಷಗಳ ಆಡಳಿತವನ್ನು ಕೊನೆಗಾಣಿಸಿದ ಆಪ್‌ ಈಗ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದೆ. “ಆಪ್‌ನ ೧೦ ಕೌನ್ಸಿಲರ್‌ಗಳ ಖರೀದಿಗೆ ಬಿಜೆಪಿ ೧೦೦ ಕೋಟಿ ರೂಪಾಯಿಯ ಆಫರ್‌ (BJP Poaching AAP) ನೀಡಿದೆ” ಎಂದು ಆಪ್‌ ಕೌನ್ಸಿಲರ್‌ಗಳು ಸುದ್ದಿಗೋಷ್ಠಿ ನಡೆಸಿ ಆರೋಪ ಮಾಡಿದ್ದಾರೆ.

“ಪಾಲಿಕೆ ಚುನಾವಣೆಯಲ್ಲಿ ಸೋತ ಬಿಜೆಪಿಯು ಹೊಲಸು ರಾಜಕಾರಣ ಮಾಡುತ್ತಿದೆ. ಹಣಬಲದಿಂದ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸಲು ಯತ್ನಿಸುತ್ತಿದೆ. ಆಪ್‌ನ ಒಬ್ಬ ಕೌನ್ಸಿಲರ್‌ಗೆ ೧೦ ಕೋಟಿ ರೂ. ಆಫರ್‌ ನೀಡಿದೆ. ಒಬ್ಬ ಕೌನ್ಸಿಲರ್‌ಗೆ ತಲಾ ೧೦ ಕೋಟಿ ರೂ. ನೀಡಿ, ಒಟ್ಟು ೧೦ ಕೌನ್ಸಿಲರ್‌ಗಳನ್ನು ಸೆಳೆಯುವ ತಂತ್ರ ಬಿಜೆಪಿಯದ್ದಾಗಿದೆ. ಹಾಗೆಯೇ, ಒಂದು ಕ್ರಾಸ್‌ ವೋಟಿಂಗ್‌ಗೆ ೫೦ ಲಕ್ಷ ರೂ. ಫಿಕ್ಸ್‌ ಮಾಡಿದೆ. ಆ ಮೂಲಕ ದೆಹಲಿ ಪಾಲಿಕೆಯಲ್ಲಿ ಆಪ್‌ ಆಡಳಿತ ನಡೆಸುವುದನ್ನು ತಡೆಯಲು ಬಿಜೆಪಿ ಎಲ್ಲ ಪ್ರಯತ್ನ ಮಾಡುತ್ತಿದೆ” ಎಂದು ಆಪ್‌ ಕೌನ್ಸಿಲರ್‌ಗಳಾದ ಡಾ.ರೊನಾಕ್ಷಿ ಶರ್ಮಾ, ಅರುಣ್‌ ನವಾರಿಯಾ ಹಾಗೂ ಜ್ಯೋತಿ ರಾಣಿ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಆರೋಪಿಸಿದ್ದಾರೆ.

ಇದಕ್ಕೂ ಮೊದಲು, ಬಿಜೆಪಿ ಕೂಡ ಆಪ್‌ ವಿರುದ್ಧ ಇದೇ ಆರೋಪ ಮಾಡಿದೆ. ಬಿಜೆಪಿ ಕೌನ್ಸಿಲರ್‌ಗಳಿಗೆ ಆಪ್‌ ಆಮಿಷ ಒಡ್ಡುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ದೆಹಲಿ ಮಹಾನಗರ ಪಾಲಿಕೆಯ ೨೫೦ ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಆಪ್‌ ೧೩೪, ಬಿಜೆಪಿ ೧೦೪ ಹಾಗೂ ಕಾಂಗ್ರೆಸ್‌ ೯ ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

ಇದನ್ನೂ ಓದಿ | Delhi MCD Election| ದೆಹಲಿ ಮಹಾನಗರ ಪಾಲಿಕೆ ಆಪ್​ ಮಡಿಲಿಗೆ; ಬಿಜೆಪಿಯ 15 ವರ್ಷಗಳ ಆಡಳಿತ ಅಂತ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದಿಲ್ಲಿ ಪಾಲಿಕೆ ಚುನಾವಣೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದ ಸುಪ್ರೀಂ, ಆಪ್‌ಗೆ ಭಾರಿ ಮುನ್ನಡೆ

Delhi Mayor Polls: ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದರಿಂದ ಬಿಜೆಪಿ ಹಾಗೂ ಆಪ್‌ ನಡುವಿನ ಬಿಕ್ಕಟ್ಟು ಬಹುತೇಕ ಬಗೆಹರಿದಂತಾಗಿದೆ.

VISTARANEWS.COM


on

Delhi Mayor Polls

ನವದೆಹಲಿ: ಮಹಾನಗರ ಪಾಲಿಕೆಯ ಮೇಯರ್‌ ಆಯ್ಕೆಯ ಕಗ್ಗಂಟಿನ (Delhi Mayor Polls) ವಿಚಾರದಲ್ಲಿ ಬಿಜೆಪಿ ವಿರುದ್ಧ ಆಪ್‌ಗೆ ಭಾರಿ ಮುನ್ನಡೆ ದೊರೆತಿದೆ. “ಮೇಯರ್‌ ಆಯ್ಕೆಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ. ಸಕ್ಸೇನಾ ಅವರು ಪ್ರಸ್ತಾಪಿಸಿದ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ” ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟಪಡಿಸಿದೆ. ಹಾಗೆಯೇ, ೨೪ ಗಂಟೆಯೊಳಗೆ ಮೇಯರ್‌ ಆಯ್ಕೆಗೆ ಚುನಾವಣೆ ನಡೆಸಿ ಎಂದು ಲೆಫ್ಟಿನೆಂಟ್‌ ಗವರ್ನರ್‌ಗೆ ಸೂಚಿಸಿದೆ.

“ದೆಹಲಿ ಮೇಯರ್‌ ಚುನಾವಣೆಯಲ್ಲಿ ನಾಮನಿರ್ದೇಶಿತ ಸದಸ್ಯರಿಗೆ ಮತದಾನ ಮಾಡುವ ಹಕ್ಕಿಲ್ಲ. ಇದರ ಕುರಿತು ಕಾನೂನಿನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ” ಎಂದು ಆಪ್‌ ಸಲ್ಲಿಸಿದ ಅರ್ಜಿಯ ವಿಚಾರಣೆ ವೇಳೆ ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿದೆ. ಮೇಯರ್‌ ಆಯ್ಕೆಗೆ ಜನವರಿ ೬, ೨೪ ಹಾಗೂ ಫೆಬ್ರವರಿ ೬ರಂದು ಸಭೆ ನಡೆಸಲಾಗಿತ್ತು. ಆದರೆ, ಬಿಜೆಪಿ-ಆಪ್‌ ಗಲಾಟೆಯಿಂದಾಗಿ ಆಯ್ಕೆ ಸಾಧ್ಯವಾಗಿರಲಿಲ್ಲ.

ಇದುವರೆಗೆ, ಪಾಲಿಕೆಯ ಸಭೆಯಲ್ಲಿ ಬಿಜೆಪಿಯ ನಾಮನಿರ್ದೇಶಿತ ಸದಸ್ಯರಿಗೆ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ ಅವರು ಮೊದಲು ಮತದಾನ ಮಾಡಲು ಅವಕಾಶ ನೀಡಿದ ಕಾರಣ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಪ್ರತಿ ಸಭೆಯಲ್ಲಿಯೂ ನಾಮನಿರ್ದೇಶಿತ ಸದಸ್ಯರಿಗೆ ಮೊದಲು ಮತದಾನದ ಅವಕಾಶ ನೀಡಿದ ಕಾರಣ ಬೇಸತ್ತ ಆಪ್‌ ಕೋರ್ಟ್‌ ಮೊರೆ ಹೋಗಿದೆ.

ಇದನ್ನೂ ಓದಿ: Delhi Mayor Polls: ದಿಲ್ಲಿ ಮಹಾನಗರ ಪಾಲಿಕೆ ಸಭೆ ಮುಂದೂಡಿಕೆ, ಮತ್ತೆ ಆಯ್ಕೆಯಾಗಲಿಲ್ಲ ಮೇಯರ್! ಆಪ್ ಕೋರ್ಟ್ ಮೊರೆ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Ruckus | ದೆಹಲಿಯಲ್ಲಿ ಬೀದಿಗೆ ಬಂದ ಬಿಜೆಪಿ, ಆಪ್‌ ಜಗಳ, ಮತ ಹಾಕಿದ ಜನರಿಗೇ ನಾಚಿಕೆಯಾಗುವಂತೆ ಕಿತ್ತಾಟ

ದೆಹಲಿ ಮಹಾನಗರ ಪಾಲಿಕೆಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಪ್‌ ಕೌನ್ಸಿಲರ್‌ಗಳ ಕಿತ್ತಾಟವು ಮುಗಿಲುಮುಟ್ಟಿದೆ. ಕೆಲ ದಿನಗಳ ಹಿಂದೆ ಪಾಲಿಕೆಯ ಕಚೇರಿಯಲ್ಲಿ ನಡೆದಿದ್ದ ಗಲಾಟೆ (Delhi MCD Ruckus) ಈಗ ಬೀದಿಗೆ ಬಂದಿದೆ.

VISTARANEWS.COM


on

Delhi MCD Ruckus

ನವದೆಹಲಿ: ಮುನ್ಸಿಪಲ್‌ ಕಾರ್ಪೊರೇಷನ್‌ ಆಫ್‌ ದೆಹಲಿ (MCD)ಯ ಮೇಯರ್‌ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ಆಫ್‌ ಕೌನ್ಸಿಲರ್‌ಗಳ ಮಧ್ಯೆ ನಡೆಯುತ್ತಿರುವ ಗಲಾಟೆಯೀಗ (Delhi MCD Ruckus) ಬೀದಿಗೆ ಬಂದಿದೆ. ಮೇಯರ್‌ ಚುನಾವಣೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಇಂತಹವರಿಗೆ ನಾವು ಮತ ಹಾಕಿದೆವಾ ಎಂದು ಜನ ಬೇಸರ ವ್ಯಕ್ತಪಡಿಸುವಷ್ಟರ ಮಟ್ಟಿಗೆ ಕಾದಾಟ ತಾರಕಕ್ಕೇರಿದೆ.

ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಪ್ರತಿಭಟನೆ
ಲೆಫ್ಟಿನೆಂಟ್‌ ಗವರ್ನರ್‌ ಅವರು ಮಹಾನಗರ ಪಾಲಿಕೆಯ ಸ್ಪೀಕರ್‌ ಆಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ನೇಮಿಸಿದ ಕಾರಣ ಬಿಜೆಪಿ ಹಾಗೂ ಲೆಫ್ಟಿನೆಂಟ್‌ ಗವರ್ನರ್‌ ವಿರುದ್ಧ ಆಪ್‌ ಆಕ್ರೋಶ ವ್ಯಕ್ತಪಡಿಸಿದೆ. ಬಿಜೆಪಿ ಕೇಂದ್ರ ಕಚೇರಿ ಎದುರು ಆಪ್‌ ಕೌನ್ಸಿಲರ್‌ಗಳು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮೇಲೆ ಜಲಫಿರಂಗಿ
ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ನಿವಾಸದ ಎದುರು ಬಿಜೆಪಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದ್ದು, ಗುಂಪನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿಯ ಇಬ್ಬರು ಮಹಿಳಾ ಕೌನ್ಸಿಲರ್‌ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆಯನ್ನು ತೀವ್ರಗೊಳಿಸಿದರು. ಇದರಿಂದಾಗಿ ಪೊಲೀಸರು ಜಲಫಿರಂಗಿ ಪ್ರಯೋಗಿಸಬೇಕಾಯಿತು.

ಏಕೆ ಇಷ್ಟೊಂದು ಗಲಾಟೆ?
ಜನವರಿ 6ರಂದು ನಡೆದ ಮೊದಲ ಸಭೆಯ ವೇಳೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ತಾತ್ಕಾಲಿಕವಾಗಿ ಬಿಜೆಪಿಯ ಸತ್ಯ ಶರ್ಮಾ ಅವರನ್ನು ಸ್ಪೀಕರ್ ಆಗಿ ಆಯ್ಕೆ ಮಾಡುತ್ತಿದ್ದಂತೆ ಸಭೆಯಲ್ಲಿ ಸಂಘರ್ಷ ಶುರುವಾಯಿತು. ಶರ್ಮಾ ಅವರು ಮೊದಲಿಗೆ, ನಾಮನಿರ್ದೇಶನಗೊಂಡ ಸದಸ್ಯರಿಗೆ ಪ್ರಮಾಣವಚನ ಬೋಧಿಸಲು ಮುಂದಾದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಆಪ್ ಸದಸ್ಯರು, ನಾಮನಿರ್ದೇಶನಗೊಂಡ ಸದಸ್ಯರಿಗಿಂತ ಮೊದಲು, ಚುನಾಯಿತ ಸದಸ್ಯರಿಗೆ ಪ್ರಮಾಣವಚನ ಬೋಧಿಸಬೇಕು ಎಂದು ಪಟ್ಟು ಹಿಡಿದರು. ಆಗ ಬಿಜೆಪಿ ಮತ್ತು ಆಪ್ ಸದಸ್ಯರ ಮಧ್ಯೆ ಜಟಾಪಟಿ ಶುರುವಾಯಿತು.

ಹೊಸದಾಗಿ ಚುನಾಯಿತವಾದ ದೆಹಲಿಯ ಮುನ್ಸಿಪಲ್ ಕಾರ್ಪೊರೇಷನ್‌ಗೆ 10 ಸದಸ್ಯರನ್ನು ನಾಮನಿರ್ದೇಶನ ಮಾಡಲಾಗಿದೆ. ಸಕ್ಸೇನಾ ಅವರು ಶುಕ್ರವಾರ ಮೇಯರ್ ಚುನಾವಣೆಯ ಅಧ್ಯಕ್ಷತೆ ವಹಿಸಲು ಬಿಜೆಪಿ ಕೌನ್ಸಿಲರ್ ಸತ್ಯ ಶರ್ಮಾ ಅವರನ್ನು ತಾತ್ಕಾಲಿಕ ಸ್ಪೀಕರ್ ಎಂದು ಘೋಷಿಸಿದರು. ಮೇಯರ್ ಆಯ್ಕೆಯ ಹಿನ್ನೆಲೆಯು ಆಪ್ ಮತ್ತು ಬಿಜೆಪಿ ಸದಸ್ಯರ ಮಧ್ಯೆ ತೀವ್ರ ವಾಗ್ವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ | Delhi Mayor Polls | ಮಾರಾಮಾರಿ ನಡುವೆ ದಿಲ್ಲಿ ಪಾಲಿಕೆ ಸಭೆ ಮುಂದೂಡಿಕೆ, ನಡೆಯಲಿಲ್ಲ ಮೇಯರ್ ಎಲೆಕ್ಷನ್!

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election | ಆಪ್​ ವಿರುದ್ಧ ಸೋತಿದ್ದರೂ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಬಿಜೆಪಿ

ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಸ್ಥಾನಕ್ಕೆ ಮತ್ತು ಆಲೆ ಮೊಹಮ್ಮದ್​ ಇಕ್ಬಾಲ್​ ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳಾಗಿದ್ದಾರೆ.

VISTARANEWS.COM


on

Rekha Gupta is Delhi BJP Mayor candidate
ರೇಖಾ ಗುಪ್ತಾ ಮತ್ತು ಶೆಲ್ಲಿ ಓಬೆರಾಯ್​

ನವ ದೆಹಲಿ: ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಆಮ್​ ಆದ್ಮಿ ಪಕ್ಷದ ಎದುರು ಸೋತಿದ್ದ ಬಿಜೆಪಿ, ಅಷ್ಟು ಸುಲಭಕ್ಕೆ ಅಲ್ಲಿನ ಪಟ್ಟ ಬಿಟ್ಟುಕೊಡುವ ಹಾಗೆ ಕಾಣುತ್ತಿಲ್ಲ. ಡಿಸೆಂಬರ್​ 4ರಂದು ದೆಹಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಒಟ್ಟು 250 ವಾರ್ಡ್​ಗಳಿಗೆ ನಡೆದ ಎಲೆಕ್ಷನ್​​ನಲ್ಲಿ ಆಮ್​ ಆದ್ಮಿ ಪಕ್ಷ 134 ಸೀಟುಗಳನ್ನು ಗೆದ್ದಿದ್ದರೆ, ಬಿಜೆಪಿ 104 ವಾರ್ಡ್​ಗಳಲ್ಲಿ ಜಯಸಾಧಿಸಿತ್ತು. ಈ ಮೂಲಕ ಕಳೆದ 15ವರ್ಷಗಳಿಂದಲೂ ದೆಹಲಿ ಮಹಾನಗರ ಪಾಲಿಕೆಯಲ್ಲಿ ಇದ್ದ ಬಿಜೆಪಿ ಆಡಳಿತ ಕೊನೆಗೊಂಡಿತ್ತು.

ಗೆದ್ದ ಪಕ್ಷದಿಂದಲೇ ಮೇಯರ್​ ಮತ್ತು ಉಪಮೇಯರ್​ಗಳನ್ನು ಆಯ್ಕೆ ಮಾಡಲಾಗುತ್ತದೆ. ದೆಹಲಿ ಮಹಾನಗರ ಪಾಲಿಕೆಯ ಚುಕ್ಕಾಣಿ ಹಿಡಿದ ಆಮ್​ ಆದ್ಮಿ ಪಕ್ಷ ಜನವರಿ 6ರಂದು ಮೇಯರ್​ ಮತ್ತು ಉಪಮೇಯರ್​ ಸ್ಥಾನದ ಆಯ್ಕೆ ಪ್ರಕ್ರಿಯೆಯನ್ನು ನಿಗದಿಪಡಿಸಿತ್ತು. ಇಂದು ನಾಮಪತ್ರ ಸಲ್ಲಿಸಲು ಕೊನೇ ದಿನವಾಗಿತ್ತು. ಇದೇ ವೇಳೆ ಬಿಜೆಪಿ ಯೂಟರ್ನ್​ ಹೊಡೆದಿದೆ. ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಸೋತಿರುವ ಬಿಜೆಪಿ ಇದೀಗ ಮೇಯರ್​-ಉಪಮೇಯರ್​ ಸ್ಥಾನಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಅದರಂತೆ ಮೇಯರ್​ ಸ್ಥಾನಕ್ಕೆ ಬಿಜೆಪಿ ರೇಖಾ ಗುಪ್ತಾರನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದು, ಉಪಮೇಯರ್ ಸ್ಥಾನಕ್ಕೆ ಕಮಲ್ ಬಾಗ್ರಿ ಅವರನ್ನು ಕಣಕ್ಕಿಳಿಸಿದೆ. ಇವರಿಬ್ಬರೂ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ಇದರಲ್ಲಿ ರೇಖಾಗುಪ್ತಾ ಶಾಲಿಮಾರ್ ಬಾಘ್​​ನ ಕೌನ್ಸಿಲರ್​ ಆಗಿದ್ದು, ಮೂರು ಅವಧಿಗೆ ಆಡಳಿತ ನಡೆಸಿದ ಅನುಭವಿ. ಹಾಗೇ, ಕಮಲ್​ ಬಾಗ್ರಿಯವರು ರಾಮ್​ ನಗರ ವಾರ್ಡ್​​ನ ಕೌನ್ಸಿಲರ್​. ಮೇಯರ್​ ಹುದ್ದೆಗೆ ಯಾರು ಬೇಕಾದರೂ ಸ್ಪರ್ಧಿಸಬಹುದು. ಗೆದ್ದ ಪಕ್ಷದವರೇ ಆಯ್ಕೆಯಾಗಬೇಕು ಎಂದೇನೂ ಇಲ್ಲ. ಹಾಗಾಗಿಯೇ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೇವೆ ಎಂದು ಬಿಜೆಪಿ ಹೇಳಿಕೊಂಡಿದೆ. ಇನ್ನೊಂದೆಡೆ ಆಮ್​ ಆದ್ಮಿ ಪಕ್ಷದಿಂದ ಶೆಲ್ಲಿ ಒಬೆರಾಯ್​ ಮೇಯರ್​ ಅಭ್ಯರ್ಥಿಯಾಗಿದ್ದು, ಉಪಮೇಯರ್​ ಸ್ಥಾನಕ್ಕೆ ಆಲೆ ಮೊಹಮ್ಮದ್​ ಇಕ್ಬಾಲ್​ ಅವರನ್ನು ಅಭ್ಯರ್ಥಿಯನ್ನಾಗಿಸಿದೆ.

ಇದನ್ನೂ ಓದಿ: Delhi MCD Election | ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಿಂದ ಆಪರೇಷನ್‌ ಕಮಲ?

Continue Reading

ದಿಲ್ಲಿ ಪಾಲಿಕೆ ಚುನಾವಣೆ

Delhi MCD Election | ದೆಹಲಿ ಪಾಲಿಕೆ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಿಂದ ಆಪರೇಷನ್‌ ಕಮಲ?

ದೆಹಲಿ ಮಹಾನಗರ ಪಾಲಿಕೆ (Delhi MCD Election) ಚುನಾವಣೆಯಲ್ಲಿ ಸೋಲುಂಡ ಬೆನ್ನಲ್ಲೇ ಬಿಜೆಪಿಯು ಆಪ್‌ ಕೌನ್ಸಿಲರ್‌ಗಳ ಖರೀದಿಗೆ ಯತ್ನಿಸುತ್ತಿದೆ ಎಂದು ಆಪ್‌ ಗಂಭೀರ ಆರೋಪ ಮಾಡಿದೆ.

VISTARANEWS.COM


on

Delhi Liquor Policy Case judicial custody of Manish Sisodia Extended

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಮಹಾನಗರ ಪಾಲಿಕೆ ಚುನಾವಣೆಯಲ್ಲಿ (Delhi MCD Election) ಸೋಲನುಭವಿಸಿದ ಬಿಜೆಪಿಯು ಆಪರೇಷನ್‌ ಕಮಲಕ್ಕೆ ಮುಂದಾಗಿದೆ ಎಂದು ಆಮ್‌ ಆದ್ಮಿ ಪಕ್ಷವು ಗಂಭೀರ ಆರೋಪ ಮಾಡಿದೆ. “ಬಿಜೆಪಿಯು ತನ್ನ ಅಸಲಿ ಆಟ ಶುರು ಮಾಡಿದೆ. ಆಪ್‌ ಕೌನ್ಸಿಲರ್‌ಗಳಿಗೆ ಬಿಜೆಪಿಯಿಂದ ಕರೆಗಳು ಬರುತ್ತಿವೆ” ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ ಆರೋಪಿಸಿದ್ದಾರೆ.

“ಬಿಜೆಪಿಯಿಂದ ಬರುವ ಪ್ರತಿಯೊಂದು ಕರೆಗಳನ್ನು ರೆಕಾರ್ಡ್‌ ಮಾಡುವಂತೆ ನಮ್ಮ ಪಕ್ಷದ ಕೌನ್ಸಿಲರ್‌ಗಳಿಗೆ ಸೂಚಿಸಲಾಗಿದೆ. ಬಿಜೆಪಿಯ ಯಾವುದೇ ಆಟವೂ ನಡೆಯುವುದಿಲ್ಲ. ನಮ್ಮ ಪಕ್ಷದ ಒಬ್ಬರೇ ಒಬ್ಬ ಕೌನ್ಸಿಲರ್‌ಗಳು ಮಾರಾಟವಾಗುವುದಿಲ್ಲ. ಸೋಲಿನ ಹತಾಶೆಯಿಂದಾಗಿ ಬಿಜೆಪಿಯು ಇಂತಹ ಕೃತ್ಯಕ್ಕೆ ಕೈಹಾಕಿದೆ. ಇದರಲ್ಲಿ ಅದು ಯಾವುದೇ ಕಾರಣಕ್ಕೂ ಯಶಸ್ವಿಯಾಗುವುದಿಲ್ಲ” ಎಂದು ಮನೀಷ್‌ ಸಿಸೋಡಿಯಾ ಹೇಳಿದ್ದಾರೆ.

ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ೧೫ ವರ್ಷದಿಂದ ಪಾರುಪತ್ಯ ಸಾಧಿಸಿದ್ದ ಬಿಜೆಪಿಯನ್ನು ಸೋಲಿಸಿ ಆಪ್‌ ಗೆಲುವು ಸಾಧಿಸಿದೆ. ೨೫೦ ವಾರ್ಡ್‌ಗಳಲ್ಲಿ ಆಪ್‌ ೧೩೪, ಬಿಜೆಪಿ ೧೦೪, ಕಾಂಗ್ರೆಸ್‌ ೯ ಹಾಗೂ ೩ ವಾರ್ಡ್‌ಗಳಲ್ಲಿ ಸ್ವತಂತ್ರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ | Delhi MCD Election | ದೆಹಲಿಯಲ್ಲಿ ಬಿಜೆಪಿ ಲೋಕಲ್‌ ಕೋಟೆ ಭೇದಿಸಿದ ಆಪ್‌, ಗೆಲುವಿಗೆ ಪ್ರಮುಖ ಕಾರಣಗಳೇನು?

Continue Reading
Advertisement
ನೀಟ್ 2026 ಪರೀಕ್ಷೆ
Latest9 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: NEET ಪರೀಕ್ಷೆಗೆ ಹೆಚ್ಚುವರಿ ಸಮಯ

ಜೋಸೆಫ್‌ ವಿಜಯ್‌
Latest11 hours ago

ಎಂಜಿಆರ್‌, ಜಯಲಲಿತಾ ಹಾದಿಯಲ್ಲಿ ವಿಜಯ್‌: ಇಂದು ಕೊಲ್ಲೂರು ಮೂಕಾಂಬಿಕೆ ದರ್ಶನ

Latest1 day ago

ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಸೇರಿ ನಾಲ್ವರು ಅಭ್ಯರ್ಥಿಗಳು ಅವಿರೋಧ ಆಯ್ಕೆ

ನರೇಂದ್ರ ಮೋದಿ
Latest1 day ago

ಪ್ರಧಾನಿ ನರೇಂದ್ರ ಮೋದಿಗೆ ಕಿಚ್ಚನ ಸೆಲ್ಯೂಟ್‌ : 12 ವರ್ಷಗಳ ನರೇಂದ್ರ ಮೋದಿ ಐತಿಹಾಸಿಕ ಆಡಳಿತಕ್ಕೆ ಶ್ಲಾಘನೆ

ರಾಜ್ಯಸಭೆ ಟಿಕೆಟ್‌
ಪ್ರಮುಖ ಸುದ್ದಿ2 days ago

ರಾಜ್ಯಸಭೆ ಟಿಕೆಟ್‌ ವಿಚಾರಕ್ಕೆ ಹೆಚ್‌ಡಿಡಿ ಸ್ಪಷ್ಟನೆ : ಎನ್‌ಡಿಎ ಜತೆ ಬಾಂಧವ್ಯ ಮುಂದುವರಿಯಲಿದೆ

ನರೇಂದ್ರ ಮೋದಿ
Latest2 days ago

ನೆಹರೂ ದಾಖಲೆ ಮುರಿದ ನರೇಂದ್ರ ಮೋದಿ: ಭಾರತದ ದೀರ್ಘಾವಧಿಯ ಚುನಾಯಿತ ಪ್ರಧಾನಿಯಾಗಿ ಹೊಸ ಇತಿಹಾಸ

ಆರೆಂಜ್ ಅಲರ್ಟ್‌
Latest2 days ago

ಮುಂಗಾರು ಅಬ್ಬರ ಹೆಚ್ಚಳ: ಇಂದು 11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌, 2 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಮೀನಾಕ್ಷಿ ನಟರಾಜನ್
Latest2 days ago

ರಾಜ್ಯಸಭೆ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ಗೆ ಬಿಗ್‌ ಶಾಕ್‌ : ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕೃತ – ʻಕೈ‌‌‌‌ʼ ಶಾಸಕರ ರೆಸಾರ್ಟ್‌ ರಾಜಕೀಯ ಕ್ಯಾನ್ಸಲ್

Latest3 days ago

‘ದೇವೇಗೌಡರ ಮೇಲಿನ ಕಾಂಗ್ರೆಸ್ ಅನುಕಂಪ ಕೇವಲ ನಾಟಕ!’: ಮೈತ್ರಿ ಬಿರುಕಿನ ಯತ್ನಕ್ಕೆ HDK ತಿರುಗೇಟು

Latest3 days ago

H-1B ವೀಸಾ ಶುಲ್ಕಕ್ಕೆ ಕೋರ್ಟ್ ಬ್ರೇಕ್: ಟ್ರಂಪ್ ಸರ್ಕಾರದ ಆದೇಶ ಅಸಿಂಧು, ಭಾರತೀಯರು ನಿರಾಳ

galipata neetu
ಕಿರುತೆರೆ3 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ3 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌