IT Raids: 353 ಕೋಟಿ ರೂ. ನಗದು ಜಪ್ತಿ! ಐಟಿ ದಾಳಿಯ ಇದುವರೆಗಿನ ಗರಿಷ್ಠ ಮೊತ್ತ! - Vistara News

ದೇಶ

IT Raids: 353 ಕೋಟಿ ರೂ. ನಗದು ಜಪ್ತಿ! ಐಟಿ ದಾಳಿಯ ಇದುವರೆಗಿನ ಗರಿಷ್ಠ ಮೊತ್ತ!

IT Raids: ಕಾಂಗ್ರೆಸ್ ಸಂಸದ ಧೀರಜ್ ಸಾಹು ಅವರಿಗೆ ಸೇರಿದ ಮದ್ಯ ಕಂಪನಿಗಳ ಮೇಲೆ ದಾಳಿ ನಡೆಸಿದ ಐಟಿ ಇಲಾಖೆ ಅಧಿಕಾರಿಗಳು 353 ಕೋಟಿ ರೂ. ಜಪ್ತಿ ಮಾಡಿದ್ದಾರೆ.

VISTARANEWS.COM


on

rs 353 crore cash Seized from IT Raids and Congress MP
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಒಡಿಶಾ ಮೂಲದ ಡಿಸ್ಟಿಲರಿ ಗ್ರೂಪ್‌ಗೆ (Odisha-based distillery group) ಸಂಬಂಧಿಸಿದ ಮೂರು ರಾಜ್ಯಗಳ ವಿವಿಧ ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿದ ಐದು ದಿನಗಳ ದಾಳಿಯಲ್ಲಿ (IT Raids) ಒಟ್ಟು 353 ಕೋಟಿ ರೂ. ನಗದನ್ನು ಜಪ್ತಿ ಮಾಡಿದೆ(Cash Seize). ಇದು ದೇಶದ ಆದಾಯ ತೆರಿಗೆ ದಾಳಿಯ ಇತಿಹಾಸದಲ್ಲಿ ಅತಿ ಹೆಚ್ಚು ನಗದು ವಶಪಡಿಸಿಕೊಂಡ ಪ್ರಕರಣವಾಗಿದೆ (highest ever cash seizure) ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಭಾನುವಾರ ಸಂಜೆಯ ಹೊತ್ತಿಗೆ ಬೊಲಂಗೀರ್, ತಿತ್ಲಗಢ್ ಮತ್ತು ಸಂಬಲ್‌ಪುರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮೂರು ಶಾಖೆಗಳಲ್ಲಿ ಮೂರು ಡಜನ್‌ಗೂ ಹೆಚ್ಚು ಎಣಿಕೆ ಯಂತ್ರಗಳು ಮತ್ತು 80 ಅಧಿಕಾರಿಗಳನ್ನು ನಿಯೋಜಿಸುವ ಮೂಲಕ ಎಲ್ಲಾ ವಶಪಡಿಸಿಕೊಂಡ ಹಣವನ್ನು ಎಣಿಸಲಾಯಿತು. ಎಸ್‌ಬಿಐನ ಸಂಬಲ್‌ಪುರ ಮತ್ತು ತಿತ್ಲಗಢ ಶಾಖೆಯಲ್ಲಿ 48.5 ಕೋಟಿ ಎಣಿಕೆಯಾಗಿದ್ದರೆ, ಬ್ಯಾಂಕ್‌ನ ಬೋಲಂಗಿರ್ ಮುಖ್ಯ ಶಾಖೆಯಲ್ಲಿ ಕನಿಷ್ಠ 50 ಉದ್ಯೋಗಿಗಳು 25 ಎಣಿಕೆ ಯಂತ್ರಗಳನ್ನು ಬಳಸಿ 305 ಕೋಟಿ ಎಣಿಸುವಲ್ಲಿ ಯಶಸ್ವಿಯಾಗಿದ್ದಾರೆ. ಭಾನುವಾರಮ ಮಧ್ಯೆ ರಾತ್ರಿ ವೇಳೆ ಐಟಿ ಅಧಿಕಾರಿಗಳು ತಮ್ಮ ಕಾರ್ಯಾಚರಣೆಯನ್ನು ಮುಗಿಸಿದ್ದಾರೆ.

ಎರಡು ದಿನಗಳ ಹಿಂದೆ ಬೋಳಂಗೀರಿನ ಎಸ್‌ಬಿಐ ಮುಖ್ಯ ಶಾಖೆಗೆ ಬೋಳಂಗಿರ್ ಪಟ್ಟಣದ ಸುಡಪದ ಪ್ರದೇಶದಲ್ಲಿರುವ ಮದ್ಯದ ಕಂಪನಿಯ ಕಚೇರಿಯಿಂದ 100, 200 ಮತ್ತು 500 ಮುಖಬೆಲೆಯ 176 ಚೀಲ ಕರೆನ್ಸಿಗಳನ್ನು ತರಲಾಗಿತ್ತು. ಸಿಬ್ಬಂದಿಯು ಹಗಲು ರಾತ್ರಿ ಶೌಚಾಲಯದ ವಿರಾಮಗಳನ್ನು ಹೊರತುಪಡಿಸಿ ಉಳಿದೆಲ್ಲ ಸಮಯದಲ್ಲಿ ಎಣಿಕೆಯಲ್ಲಿ ನಿರತರಾಗಿದ್ದರು. ಕಳೆದ 3 ದಿನಗಳಲ್ಲಿ ಸಿಬ್ಬಂದಿ ಎಣಿಸಿದ ನಗದು ಮೊತ್ತವು ಅವರು ಒಂದು ವರ್ಷದಲ್ಲಿ ಮಾಡಿದ್ದಕ್ಕಿಂತ ಹೆಚ್ಚು ಎಂದು ಎಸ್‌ಬಿಐ ಬೋಲಂಗಿರ್‌ನ ಪ್ರಾದೇಶಿಕ ವ್ಯವಸ್ಥಾಪಕ ಭಗತ್ ಬೆಹೆರಾ ಹೇಳಿದ್ದಾರೆ.

ಬೌಧ್ ಡಿಸ್ಟಿಲರೀಸ್ ಪ್ರೈವೇಟ್ ಲಿಮಿಟೆಡ್‌ನ ಗ್ರೂಪ್ ಕಂಪನಿಯಾಗಿರುವ ಬಾಲ್ಡಿಯೊ ಸಾಹು ಮತ್ತು ಗ್ರೂಪ್ ಆಫ್ ಕಂಪನಿಗಳು ಕಾಂಗ್ರೆಸ್ ರಾಜ್ಯಸಭಾ ಸಂಸದರೊಂದಿಗೆ ಸಂಪರ್ಕ ಹೊಂದಿವೆ. ಅವರ ಮಗ ರಿತೇಶ್ ಸಾಹು ವ್ಯವಸ್ಥಾಪಕ ನಿರ್ದೇಶಕರಾಗಿದ್ದರೆ, ಹಿರಿಯ ಸಹೋದರ ಉದಯ್ ಶಂಕರ್ ಪ್ರಸಾದ್ ಅವರು ಎಕ್ಸ್‌ಟ್ರಾ ನ್ಯೂಟ್ರಲ್ ಅಲ್ಕೋಹಾಲ್ ತಯಾರಿಸುವ ಕಂಪನಿಯ ಅಧ್ಯಕ್ಷರಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಭಾನುವಾರ ರಾಹುಲ್ ಗಾಂಧಿಯನ್ನು ಗುರಿಯಾಗಿಸಿಕೊಂಡು ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ. ಕಾಂಗ್ರೆಸ್​ನ ಭ್ರಷ್ಟರ ಕೈಗೆ ಕಾನೂನಿಗೆ ಕುಣಿಗೆ ಬೀಳಲಿದೆ, ಅವರೆಲ್ಲರೂ ಅದಕ್ಕೆ ಹೊಣೆಯಾಗಲಿದ್ದಾರೆ ಎಂಬುದಾಗಿ ಬಿಜೆಪಿ ಹೇಳಿದೆ.

ಒಡಿಶಾದ ಬಾಲಂಗೀರ್​ನಲ್ಲಿರುವ ಸಾಹು ಅವರ ಸಹೋದರನ ಒಡೆತನದ ಡಿಸ್ಟಿಲರಿ ಕಂಪನಿಯ ಆವರಣದಿಂದ ಆದಾಯ ತೆರಿಗೆ ಇಲಾಖೆ 300 ಕೋಟಿ ರೂ.ಗಿಂತ ಹೆಚ್ಚು ನಗದು ವಶಪಡಿಸಿಕೊಂಡಿದೆ. ನಿರಂತರವಾಗಿ ನಡೆಯುತ್ತಿರುವ ಶೋಧ ಕಾರ್ಯಾಚರಣೆಯಲ್ಲಿ ಬಗೆದಷ್ಟು ನೋಟಿನ ಕಂತೆಗಳು ಸಿಗುತ್ತಿವೆ. ಕಾರ್ಯಾಚರಣೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರ ಬೆಳಿಗ್ಗೆ ಹೊಸ ಎಣಿಕೆ ಯಂತ್ರಗಳನ್ನು ತಂದು ದುಡ್ಡನ್ನು ಎಣಿಸಲು ಆರಂಭಿಸಿದ್ದಾರೆ.

ಸಹೋದರ, ನೀವು ಮತ್ತು ನಿಮ್ಮ ನಾಯಕ ರಾಹುಲ್ ಗಾಂಧಿ ಇದಕ್ಕೆಲ್ಲ ಉತ್ತರಿಸಬೇಕು. ಇದು ನವ ಭಾರತ. ವಂಶಪಾರಂಪರ್ಯದ ಹೆಸರಿನಲ್ಲಿ ಜನಸಾಮಾನ್ಯರ ಶೋಷಣೆ ಮಾಡಲು ಇಲ್ಲಿ ಕಿಂಚಿತ್ತೂ ಅವಕಾಶವಿಲ್ಲ. ನೀವು ತಪ್ಪಿಸಿಕೊಳ್ಳಲು ಓಡಿ ಓಡಿ ಸುಸ್ತಾಗುತ್ತೀರಿ. ಕಾನೂನು ನಿಮ್ಮನ್ನು ಬೆನ್ನಟ್ಟದೆ ಬಿಡುವುದಿಲ್ಲ. ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರಕ್ಕೆ ಖಾತರಿ ಕೊಟ್ಟರೆ, ನರೇಂದ್ರ ಮೋದಿ ಭ್ರಷ್ಟಾಚಾರದ ವಿರುದ್ಧ ಕ್ರಮದ ಖಾತರಿ ನೀಡುತ್ತಾರೆ. ಸಾರ್ವಜನಿಕರ ಹಣವನ್ನು ನೀವು ಹಿಂದಿರುಗಿಸಬೇಕಾಗುತ್ತದೆ” ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಐಟಿ ರೇಡ್​ ವಿಚಾರದಲ್ಲಿ ರಾಹುಲ್ ಗಾಂಧಿ ಅವರ ಮೌನವನ್ನು ಕೇಂದ್ರ ಸಚಿವ ಜಿ ಕಿಶನ್ ರೆಡ್ಡಿ ಪ್ರಶ್ನಿಸಿದ್ದಾರೆ. “ಧೀರಜ್ ಸಾಹು ವಿರುದ್ಧದ ಐಟಿ ಶೋಧದ ಬಗ್ಗೆ ರಾಹುಲ್ ಗಾಂಧಿ ಏಕೆ ಮೌನವಾಗಿದ್ದಾರೆ ಎಂದು ನಾನು ಕೇಳಲು ಬಯಸುತ್ತೇನೆ. ನೀವು ಸದಾ ಆದಾಯ ತೆರಿಗೆ ಇಲಾಖೆಯನ್ನು ಟೀಕಿಸುತ್ತೀರುತ್ತೀರಿ. ಆದರೆ ಈಗ ಏಕೆ ಸುಮ್ಮನಿದ್ದೀರಿ ಎಂದು ಕೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: ಇಷ್ಟೊಂದು ಕಪ್ಪು ಹಣ ಎಲ್ಲಿಡುತ್ತಾರೋ ಎಂದು ಕೇಳಿದ್ದ ಕೈ ಸಂಸದನ ಬಳಿ 300 ಕೋಟಿ ರೂ. ಬ್ಲ್ಯಾಕ್ ಮನಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

Arvind Kejriwal: ದೆಹಲಿ ಅಬಕಾರಿ ನೀತಿ ಜಾರಿ ವೇಳೆ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಜೈಲುಪಾಲಾಗಿದ್ದಾರೆ. ಇದರ ಬೆನ್ನಲ್ಲೇ, ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಖಲಿಸ್ತಾನಿ ಉಗ್ರ ಸಂಘಟನೆ ಸಿಖ್ಸ್‌ ಫಾರ್‌ ಜಸ್ಟಿಸ್‌ನಿಂದ ದೇಣಿಗೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ಶಿಫಾರಸು ಮಾಡಿದ್ದಾರೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಿಷೇಧಿತ ಖಲಿಸ್ತಾನಿ ಉಗ್ರ ಸಂಘಟನೆ ‘ಸಿಖ್ಸ್‌ ಫಾರ್‌ ಜಸ್ಟಿಸ್‌’ನಿಂದ (Sikhs for Justice) ರಾಜಕೀಯ ದೇಣಿಗೆ ಪಡೆದ ಪ್ರಕರಣವನ್ನು ಎನ್‌ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ (VK Saxena) ಅವರು ಶಿಫಾರಸು ಮಾಡಿದ್ದಾರೆ.

1993ರ ದೆಹಲಿ ಬಾಂಬ್‌ ಸ್ಫೋಟದ ಅಪರಾಧಿ, ಖಲಿಸ್ತಾನಿ ಉಗ್ರ ದೇವಿಂದರ್‌ ಪಾಲ್‌ ಭುಲ್ಲರ್‌ನನ್ನು ಜೈಲಿನಿಂದ ಬಿಡುಗಡೆಗೊಳಿಸುವುದಾಗಿ ತಿಳಿಸಿ ಆಮ್‌ ಆದ್ಮಿ ಪಕ್ಷವು ಸಿಖ್ಸ್‌ ಫಾರ್‌ ಜಸ್ಟಿಸ್‌ ಸಂಘಟನೆಯಿಂದ ಸುಮಾರು 133 ಕೋಟಿ ರೂ. (16 ದಶಲಕ್ಷ ಡಾಲರ್)‌ ದೇಣಿಗೆ ಪಡೆದಿದೆ ಎಂಬ ಕುರಿತು ದೂರು ನೀಡಿದ ಹಿನ್ನೆಲೆಯಲ್ಲಿ ವಿ.ಕೆ.ಸಕ್ಸೇನಾ ಅವರು ಎನ್‌ಐಎ ತನಿಖೆಗೆ ಶಿಫಾರಸು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಿಖ್ಸ್‌ ಫಾರ್‌ ಜಸ್ಟಿಸ್‌ ಉಗ್ರ ಸಂಘಟನೆಯು ವಾಂಟೆಡ್‌ ಉಗ್ರ ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಸ್ಥಾಪಿಸಿದ್ದಾನೆ. ಇದನ್ನು ಕೇಂದ್ರ ಸರ್ಕಾರವು ನಿಷೇಧಿಸಿದೆ. ಈ ಸಂಘಟನೆಯಿಂದ ಆಮ್‌ ಆದ್ಮಿ ಪಕ್ಷವು ನೂರಾರು ಕೋಟಿ ರೂ. ದೇಣಿಗೆ ಪಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈಗ ಇದರ ಕುರಿತು ಎನ್‌ಐಎ ತನಿಖೆಗೆ ವಿ.ಕೆ.ಸಕ್ಸೇನಾ ಅವರು ಶಿಫಾರಸು ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಜಾರಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದ್ದು, ತಿಹಾರ ಜೈಲಿನಲ್ಲಿದ್ದಾರೆ. ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿತ್ತು. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪವಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಅರವಿಂದ್‌ ಕೇಜ್ರಿವಾಲ್‌ ಮಾತ್ರವಲ್ಲ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರನ್ನೂ ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

ಅಷ್ಟೇ ಅಲ್ಲ, ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಕೂಡ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಮತ್ತೊಂದೆಡೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಇ.ಡಿ ಸಲ್ಲಿಸಿದ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಈಗಾಗಲೇ ಜಾಮೀನು ಸಿಕ್ಕಿದೆ. ಇದರಿಂದ ಅವರು ತಾತ್ಕಾಲಿಕವಾಗಿ ರಿಲೀಫ್‌ ಪಡೆದಿದ್ದರು. ಆದರೆ, ಈಗ ಬಂಧನದಿಂದ ರಕ್ಷಣೆಗೆ ನೀಡದ ಕಾರಣ ಅವರು ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

Continue Reading

ಪ್ರಮುಖ ಸುದ್ದಿ

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

ಮೆಹರ್‌ ಜಹಾನ್‌ ಹಾಗೂ ಮನ್ನಾನ್‌ ಜೈದಿಯು 2023ರ ನವೆಂಬರ್‌ನಲ್ಲಿ ಮದುವೆಯಾಗಿದ್ದಾರೆ. ಮೆಹರ್‌ ಜಹಾನ್‌ಗೆ ಕುಡಿತದ ಚಟ ಇರುವ, ಆಗಾಗ ಸಿಗರೇಟು ಸೇದುವ ಚಟ ಇರುವುದು ಮನ್ನಾನ್‌ ಜೈದಿಗೆ ಗೊತ್ತಾಗಿದೆ. ಪತ್ನಿಯ ಚಟಗಳ ಕುರಿತು ಅರಿತುಕೊಂಡ ಮನ್ನಾನ್‌ ಜೈದಿಯು ನಾಲ್ಕು ಮಾತು ಬೈದಿದ್ದಾನೆ. ಇಷ್ಟಕ್ಕೇ ಆಕೆಯು, ಗಂಡನಿಗೆ ಇನ್ನಿಲ್ಲದ ಕಿರುಕುಳ ನೀಡಿ, ಕೊಲೆ ಮಾಡಲು ಯತ್ನಿಸಿದ್ದಾಳೆ ಎಂದು ತಿಳಿದುಬಂದಿದೆ.

VISTARANEWS.COM


on

Woman
Koo

ಲಖನೌ: ರಾತ್ರಿ ಗಂಡ ಕುಡಿದು ಮನೆಗೆ ಬಂದರೆ ಹೆಂಡತಿಗೆ ಕೋಪ ಬಂದೇ ಬರುತ್ತದೆ. ಆಗ ಅವರು ಬೈಯುತ್ತಾರೆ, ಊಟ ಕೊಡಲ್ಲ, ನಾನೇ ಸತ್ತುಹೋಗುತ್ತೇನೆ ಎಂದು ಹೆದರಿಸುತ್ತಾರೆ. ಆತನ ನಶೆ ಇಳಿದ ಮೇಲೆ ಸಂಬಂಧಿಕರನ್ನು ಕರೆಸಿ ಬುದ್ಧಿವಾದ ಹೇಳುತ್ತಾರೆ. ಆದರೆ, ಉತ್ತರ ಪ್ರದೇಶದಲ್ಲಿ (Uttar Pradesh) ಮಹಿಳೆಯೊಬ್ಬರು ತಾವೇ ಮದ್ಯಪಾನ ಮಾಡಿ, ಪತಿ ಗಂಡನ ಗುಪ್ತಾಂಗವನ್ನೇ ಸುಟ್ಟು, ಅದನ್ನು ಕತ್ತರಿಸಲು ಯತ್ನಿಸಿದ್ದಾರೆ. ಈ ಭೀಕರ ವಿಡಿಯೊ (Viral Video) ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಹೌದು, ಅಮ್ರೋಹ ಜಿಲ್ಲೆಯ ಚಾಕ್‌ ಮೆಹೂದ್‌ ಗ್ರಾಮದಲ್ಲಿ ಮೆಹರ್‌ ಜಹಾನ್‌ ಎಂಬ 30 ವರ್ಷದ ಮಹಿಳೆಯು ಪತಿ ಮನ್ನಾನ್‌ ಜೈದಿಯ ಗುಪ್ತಾಂಗ ಸುಟ್ಟು, ಕತ್ತರಿಸಲು ಯತ್ನಿಸಿದ್ದಾರೆ. ದಿನವಿಡೀ ದುಡಿದು ಮನೆಗೆ ಬಂದ ಗಂಡನಿಗೆ ಮಹಿಳೆಯು ಹಾಲಿನಲ್ಲಿ ಮತ್ತು ಬರುವ ಅಂಶವನ್ನು ಸೇರಿಸಿ, ಆತ ನಶೆಗೆ ಜಾರುತ್ತಲೇ ಕೈ ಕಾಲು ಕಟ್ಟಿಹಾಕಿದ್ದಾರೆ. ಕೈ ಕಾಲು ಕಟ್ಟಿ, ಆತನ ಗುಪ್ತಾಂಗವನ್ನು ಸಿಗರೇಟಿನಿಂದ ಸುಟ್ಟ ಬಳಿಕವೇ ಮನ್ನಾನ್‌ ಜೈದಿಗೆ ಎಚ್ಚರವಾಗಿದೆ. ಇನ್ನೇನು ಗುಪ್ತಾಂಗ ಕತ್ತರಿಸಬೇಕು ಎನ್ನುವಷ್ಟರಲ್ಲೇ ಆತನು ಕೂಗಾಡಿದ್ದಾನೆ. ಬಳಿಕ ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಮೆಹರ್‌ ಜಹಾನ್‌ನನ್ನು ಬಂಧಿಸಿದ್ದಾರೆ.

ಕುಡಿತದ ಚಟ ಇರುವ ಮೆಹರ್‌

ಮೂಲಗಳ ಪ್ರಕಾರ, ಮೆಹರ್‌ ಜಹಾನ್‌ ಹಾಗೂ ಮನ್ನಾನ್‌ ಜೈದಿಯು 2023ರ ನವೆಂಬರ್‌ನಲ್ಲಿ ಮದುವೆಯಾಗಿದ್ದಾರೆ. ಮೆಹರ್‌ ಜಹಾನ್‌ಗೆ ಕುಡಿತದ ಚಟ ಇರುವ, ಆಗಾಗ ಸಿಗರೇಟು ಸೇದುವ ಚಟ ಇರುವುದು ಮನ್ನಾನ್‌ ಜೈದಿಗೆ ಗೊತ್ತಾಗಿದೆ. ಪತ್ನಿಯ ಚಟಗಳ ಕುರಿತು ಅರಿತುಕೊಂಡ ಮನ್ನಾನ್‌ ಜೈದಿಯು ನಾಲ್ಕು ಮಾತು ಬೈದಿದ್ದಾನೆ. ನಿನ್ನ ತಂದೆ-ತಾಯಿಗೆ ಹೇಳುತ್ತೇನೆ ಎಂದಿದ್ದಾರೆ. ಇದರಿಂದಾಗಿ ಕುಪಿತಗೊಂಡ ಮೆಹರ್‌ ಜಹಾನ್‌, ಗಂಡನನ್ನು ಕಟ್ಟಿ ಹಾಕಿ ಕೊಲೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಕುಡಿದ ನಶೆಯಲ್ಲಿಯೇ ಮಹಿಳೆಯು ಗಂಡನಿಗೆ ಕಿರುಕುಳ ಕೊಟ್ಟಿದ್ದಾರೆ ಎನ್ನಲಾಗಿದೆ. ವೈರಲ್‌ ಆದ ವಿಡಿಯೊದ ಪ್ರಕಾರ, ಪತ್ನಿಯು ಸಿಗರೇಟಿನಿಂದ ಸುಡುತ್ತಲೇ ಸಹಾಯಕ್ಕಾಗಿ ಅಂಗಲಾಚಿದ ಧ್ವನಿಯು ಕೇಳಿಸಿದೆ. ನನ್ನ ಪಾಡಿಗೆ ನಾನು ಮದ್ಯಪಾನ ಮಾಡಿಕೊಂಡು, ಸಿಗರೇಟು ಸೇದಿಕೊಂಡು ಇರುತ್ತೇನೆ. ಇದರ ಕುರಿತು ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ ಎಂಬುದಾಗಿ ಮಹಿಳೆಯು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಸದ್ಯ, ಮನ್ನಾನ್‌ ಜೈದಿಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Police Officer: ಮರಳು ಮಾಫಿಯಾ ತಡೆಯಲು ಹೋದ ಎಎಸ್‌ಐ ಮೇಲೆ ಟ್ರ್ಯಾಕ್ಟರ್‌ ಹರಿಸಿ ಕೊಲೆ!

Continue Reading

ದೇಶ

Lok Sabha Election 2024: ಗುಜರಾತ್‌ನಲ್ಲಿ ಶೇ.10ಕ್ಕಿಂತ ಹೆಚ್ಚು ಮುಸ್ಲಿಮರಿದ್ದರೂ ಕಾಂಗ್ರೆಸ್ ಒಬ್ಬ ಮುಸ್ಲಿಮನಿಗೂ ಟಿಕೆಟ್‌ ಕೊಟ್ಟಿಲ್ಲ!

ಗುಜರಾತ್‌ನಲ್ಲಿ ಕಾಂಗ್ರೆಸ್‌ನಿಂದ ಯಾವುದೇ ಮುಸ್ಲಿಂ ಅಭ್ಯರ್ಥಿಯನ್ನೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಕಣಕ್ಕೆ ಇಳಿಸಿಲ್ಲ. ಬಿಎಸ್‌ಪಿ ಮಾತ್ರ ಇಲ್ಲಿ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದೆ. ಈ ಕುರಿತ ವಿಶ್ಲೇಷಣಾತ್ಮಕ ವರದಿ ಇಲ್ಲಿದೆ.

VISTARANEWS.COM


on

By

Lok Sabha Election-2024
Koo

ಗುಜರಾತ್‌ನಲ್ಲಿ (gujarat) ಲೋಕಸಭೆ ಚುನಾವಣೆಗೆ (Lok Sabha Election 2024) ಮುಸ್ಲಿಂ (muslim) ಅಭ್ಯರ್ಥಿಯನ್ನು (candidate) ಕಣಕ್ಕಿಳಿಸಿದ ಏಕೈಕ ರಾಷ್ಟ್ರೀಯ ಪಕ್ಷ ಬಿಎಸ್‌ಪಿ (BSP). ಕಾಂಗ್ರೆಸ್‌ನಿಂದ (congress) ಯಾವುದೇ ಮುಸ್ಲಿಂ ಅಭ್ಯರ್ಥಿ ಗುಜರಾತ್‌ನಲ್ಲಿ ಕಣಕ್ಕೆ ಇಳಿದಿಲ್ಲ. ಮೇ 7ರಂದು ಮತದಾನ ನಡೆಯಲಿರುವ ರಾಜ್ಯದಲ್ಲಿ ಒಟ್ಟು 266 ಅಭ್ಯರ್ಥಿಗಳ ಪೈಕಿ ಕೇವಲ 32 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇಲ್ಲಿ ಹೆಚ್ಚಿನ ಮುಸ್ಲಿಂ ಅಭ್ಯರ್ಥಿಗಳು ಸ್ವತಂತ್ರವಾಗಿ ಸ್ಪರ್ಧಿಸುತ್ತಿದ್ದಾರೆ. ಕೆಲವರು ಖೇಡಾ, ಲಾಗ್ ಪಾರ್ಟಿ, ರೈಟ್ ಟು ರೀಕಾಲ್ ಪಾರ್ಟಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಭಾರತೀಯ ಜನನಾಯಕ್ ಪಕ್ಷದಂತಹ ಸಣ್ಣ ಪಕ್ಷಗಳಿಂದ ಸ್ಪರ್ಧಿಸಿದ್ದಾರೆ. ಗಾಂಧಿನಗರದಲ್ಲಿ ಅತೀ ಹೆಚ್ಚು ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಅಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ಅಭ್ಯರ್ಥಿ ಮತ್ತು ಸೋನಾಲ್ ಪಟೇಲ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಇದರ ನಂತರ ಭರೂಚ್ ಮತ್ತು ಪಟಾನ್ ನಲ್ಲಿ ತಲಾ ನಾಲ್ಕು ಮಂದಿ ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿ ಇದ್ದಾರೆ.

ಗುಜರಾತ್‌ನ ಜನಸಂಖ್ಯೆಯಲ್ಲಿ ಸುಮಾರು ಶೇ. 10ರಷ್ಟು ಮುಸ್ಲಿಮರು ಎಂದು ಅಂದಾಜಿಸಲಾಗಿದೆ. ಕಚ್, ಜಾಮ್‌ನಗರ, ಜುನಾಗಢ್, ಭರೂಚ್, ಭಾವನಗರ, ಸುರೇಂದ್ರನಗರ, ಪಟಾನ್, ಬನಸ್ಕಾಂತ, ಸಬರ್ಕಾಂತ, ಅಹಮದಾಬಾದ್ ಪಶ್ಚಿಮ, ಅಹಮದಾಬಾದ್ ಪೂರ್ವ, ಗಾಂಧಿನಗರ, ನವಸಾರಿ, ಪಂಚಮಹಲ್‌ಗಳು ಮತ್ತು ಆನಂದ್ ಸೇರಿದಂತೆ ಕನಿಷ್ಠ 15 ಸ್ಥಾನಗಳಲ್ಲಿ ಅವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಹಿಂದಿನ ಚುನಾವಣೆ

2019, 2009 ಮತ್ತು 2004ರಲ್ಲಿ ಕಾಂಗ್ರೆಸ್ ಭರೂಚ್‌ನಿಂದ ತಲಾ ಒಬ್ಬ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ಇದು ಹಿರಿಯ ನಾಯಕ ಅಹ್ಮದ್ ಪಟೇಲ್‌ ಅವರ ಭದ್ರಕೋಟೆಯಾಗಿತ್ತು. ಬಳಿಕ ಶೇರ್ಖಾನ್ ಪಠಾಣ್, ಅಜೀಜ್ ಟಂಕರ್ವಿ ಮತ್ತು ಮೊಹಮ್ಮದ್ ಪಟೇಲ್ ನಾಮನಿರ್ದೇಶನಗೊಂಡರು. ಈ ಬಾರಿ ಆಮ್ ಆದ್ಮಿ ಪಕ್ಷವು ಇಂಡಿಯಾ ಬ್ಲಾಕ್ ಪ್ರತಿನಿಧಿಯಾಗಿ ಭರೂಚ್ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದು, ಪಕ್ಷವು ತನ್ನ ಶಾಸಕ ಚೈತಾರ್ ವಾಸವ ಅವರನ್ನು ಇಲ್ಲಿ ಕಣಕ್ಕಿಳಿಸಿದೆ.

2014 ರಲ್ಲಿ ಕಾಂಗ್ರೆಸ್ ಭರೂಚ್‌ನಿಂದ ಜಯೇಶ್ ಪಟೇಲ್ ಅವರನ್ನು ಕಣಕ್ಕಿಳಿಸಿತು. ಆದರೆ ನವಸಾರಿಯಲ್ಲಿ ಬಿಜೆಪಿಯ ಸಿ.ಆರ್. ಪಾಟೀಲ್ ಅವರನ್ನು ಎದುರಿಸಲು ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತು.


ಬಿಜೆಪಿಯ ಭದ್ರಕೋಟೆ

ಕಳೆದ ಎರಡು ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಗುಜರಾತ್‌ನ ಎಲ್ಲಾ 26 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಈ ಬಾರಿ 25 ಕ್ಷೇತ್ರಗಳಲ್ಲಿ ಮಾತ್ರ ಮತದಾನ ನಡೆಯಲಿದ್ದು, ಸೂರತ್‌ನಲ್ಲಿ ಬಿಜೆಪಿ ಅವಿರೋಧವಾಗಿ ಗೆಲುವು ಸಾಧಿಸಿದೆ.

ಏಕೈಕ ಮುಸ್ಲಿಂ ಶಾಸಕ

ಪ್ರಸ್ತುತ ಗುಜರಾತ್ ಅಸೆಂಬ್ಲಿಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಏಕೈಕ ಮುಸ್ಲಿಂ ಶಾಸಕ ಇಮ್ರಾನ್ ಖೇಡವಾಲಾ ಅವರು ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಶೇ.10ರಷ್ಟು ಮುಸ್ಲಿಂ ಜನಸಂಖ್ಯೆ ಇದ್ದರೂ ಕಾಂಗ್ರೆಸ್‌ ಒಂದೇ ಒಂದು ಕ್ಷೇತ್ರದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿಲ್ಲ ಎಂಬ ಬಗ್ಗೆ ಇವರು ಸ್ಪಷ್ಟ ವಿವರಣೆ ನೀಡಲು ವಿಫಲರಾಗಿದ್ದಾರೆ.

ಹಿಂದೆ ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು

1957ರಲ್ಲಿ ಭರೂಚ್ ಲೋಕಸಭಾ ಸ್ಥಾನವು 1984ರವರೆಗೆ ಕಾಂಗ್ರೆಸ್ ಭದ್ರಕೋಟೆಯಾಗಿತ್ತು. 1977 ಮತ್ತು 1984ರ ನಡುವೆ ಅಹ್ಮದ್ ಪಟೇಲ್ ಮೂರು ಬಾರಿ ಗೆದಿದ್ದರು. ಇವರು ಈ ಸ್ಥಾನದಿಂದ ಗೆದ್ದ ಕೊನೆಯ ಕಾಂಗ್ರೆಸ್ ಸಂಸದರಾಗಿದ್ದರು. 1989ರಲ್ಲಿ ಅವರನ್ನು ಸೋಲಿಸಿದ ಬಿಜೆಪಿಯ ಚಂದುಭಾಯಿ ದೇಶಮುಖ್, ಬಳಿಕ ಮನ್ಸುಖ್ ವಾಸವಾ ಮರು ಚುನಾಯಿಸಲ್ಪಟ್ಟರು. ಈ ವರ್ಷ ಮನ್ಸುಖ್ ಈ ಕ್ಷೇತ್ರದಿಂದ ಏಳನೇ ಬಾರಿಗೆ ಚುನಾವಣೆ ಎದುರಿಸುತ್ತಿದ್ದಾರೆ.

ಅಹ್ಮದ್ ಪಟೇಲ್ ಅವರ ಮಕ್ಕಳಾದ ಫೈಸಲ್ ಮತ್ತು ಮುಮ್ತಾಜ್ ಅವರು ಭರೂಚ್‌ನಿಂದ ಟಿಕೆಟ್ ಕೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಇಮ್ರಾನ್‌ ಖೇಡಾವಾಲಾ, ಅವರು ಅಲ್ಲಿ ಗೆಲ್ಲಲು ಸಾಧ್ಯವಿಲ್ಲ. ಕ್ಷೇತ್ರದಲ್ಲಿ ಸುಮಾರು ಮೂರು ಲಕ್ಷ ಮುಸ್ಲಿಂ ಮತಗಳಿವೆ. ಅವರೆಲ್ಲರೂ ಮತ ಹಾಕಿದರೂ ಸಾಕಾಗುವುದಿಲ್ಲ. ಕೇವಲ ಮುಸ್ಲಿಂ ಮತಗಳಿಂದ ಗೆಲ್ಲಲು ಸಾಧ್ಯವಿಲ್ಲ. ಹಿಂದೂ ಮತಗಳನ್ನು ಪಡೆಯಬೇಕು ಎನ್ನುತ್ತಾರೆ.

ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಮತ್ತು ಇಸ್ಲಾಮಿಕ್ ಹೂಡಿಕೆ ಸಲಹಾ ಸೇವೆಗಳ ಪ್ಲಾಟ್‌ಫಾರ್ಮ್ ಪಾರ್ಸೋಲಿ ಕಾರ್ಪೊರೇಷನ್ ಮಾಲೀಕ ಜಾಫರ್ ಸರೇಶ್‌ವಾಲಾ, ಯಾವುದೇ ರಾಷ್ಟ್ರೀಯ ಪಕ್ಷವು ಮುಸ್ಲಿಮರನ್ನು ಕಣಕ್ಕಿಳಿಸಿಲ್ಲ ಎಂಬ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಘಟಾನುಘಟಿಗಳ ಸ್ಪರ್ಧೆ; ಮೇ 7ರ ಮೂರನೇ ಹಂತದ ಪೈಪೋಟಿಯ ಚಿತ್ರಣ ಇಲ್ಲಿದೆ

ಗುಜರಾತ್‌ನಲ್ಲಿ ಮುಸ್ಲಿಮರ ಬಗ್ಗೆ ಹೆಮ್ಮೆಪಡಲು ಸಾಕಷ್ಟು ವಿಷಯಗಳಿವೆ. 2002ರ ಅನಂತರ ಮುಸ್ಲಿಮರು ಶಿಕ್ಷಣ, ಉದ್ಯಮಶೀಲತೆ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದಾರೆ ಎನ್ನುತ್ತಾರೆ ಸುರೇಶ್ ವಾಲಾ.

ಗುಜರಾತ್‌ನಲ್ಲಿ ಬಿಜೆಪಿ 30 ವರ್ಷಗಳಿಂದ ಅಧಿಕಾರದಲ್ಲಿದೆ. 2022ರವರೆಗೂ ಮೂವರು ಶಾಸಕರಾದ ಗಯಾಸುದ್ದೀನ್ (ಶೇಖ್), ಜಾವೇದ್ ಪೀರ್ಜಾದಾ ಮತ್ತು ನಾನು ಇದ್ದೆವು. ಈಗ ನಾನು ಒಬ್ಬನೇ ರಾಜ್ಯಾದ್ಯಂತ ಇರುವ ಎಲ್ಲಾ ಮುಸ್ಲಿಂ ಸಮಸ್ಯೆಗಳನ್ನು ನಿಭಾಯಿಸಬೇಕಾಗಿದೆ ಎನ್ನುತ್ತಾರೆ ಶಾಸಕ ಇಮ್ರಾನ್ ಖೇಡವಾಲಾ.

Continue Reading

ದೇಶ

12 ತಾಸು, 6 ಮಷೀನ್‌ಗಳಿಂದ 30 ಕೋಟಿ ರೂ. ಎಣಿಕೆ; ಕಾಂಗ್ರೆಸ್‌ ಮುಖಂಡನ ಪಿಎ ಮನೆಯಲ್ಲಿ ಹಣದ ರಾಶಿ!

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಜೀವ್‌ ಲಾಲ್‌ ಮನೆಯಲ್ಲಂತೂ ಹಣದ ರಾಶಿಯೇ ಇದೆ. ಸಂಜೀವ್‌ ಲಾಲ್‌ ಸೇರಿ ಹಲವರ ಕೋಣೆಗಳಲ್ಲಿ ಮಾತ್ರವಲ್ಲ, ಅವರ ಮನೆಗೆಲಸದವನ ಮನೆಯಲ್ಲೂ ಹಣದ ರಾಶಿ ಕಂಡುಬಂದಿದೆ. 30 ಕೋಟಿ ರೂಪಾಯಿಯನ್ನು ಎಣಿಸಿದರೂ, ಇನ್ನೂ ಎಣಿಕೆ ಕಾರ್ಯ ಮುಂದುವರಿದಿದೆ ಎಂದು ತಿಳಿದುಬಂದಿದೆ.

VISTARANEWS.COM


on

Ranchi Cash
Koo

ರಾಂಚಿ: ಜಾರ್ಖಂಡ್‌ ಗ್ರಾಮೀಣ ಅಭಿವೃದ್ಧಿ ಸಚಿವ, ಕಾಂಗ್ರೆಸ್‌ ನಾಯಕ ಅಲಂಗೀರ್ ಆಲಂ (Alamgir Alam) ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ (Sanjiv Lal) ಮನೆಯಲ್ಲಿ ಹಣದ ರಾಶಿ ಕಂಡು ಖುದ್ದು ಇ.ಡಿ ಅಧಿಕಾರಿಗಳೇ ದಂಗಾಗಿದ್ದಾರೆ. ಕಳೆದ 12 ತಾಸುಗಳಿಂದ 6 ನೋಟು ಎಣಿಸುವ ಮಷೀನ್‌ಗಳಿಂದ ನಿರಂತರವಾಗಿ ಎಣಿಕೆ ಮಾಡಿದರೂ ಇದುವರೆಗೆ 30 ಕೋಟಿ ರೂಪಾಯಿಯನ್ನು ಎಣಿಸಲು ಸಾಧ್ಯವಾಗಿದೆ. ಇಷ್ಟಾದರೂ, ಇನ್ನೂ ಹಣದ ರಾಶಿಯೇ ಇದ್ದು, ಮಷೀನ್‌ಗಳಿಂದ ಎಣಿಸಲು ಕೂಡ ಕಷ್ಟವಾಗುತ್ತಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಂಚಿಯ ಹಲವೆಡೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಸಂಜೀವ್‌ ಲಾಲ್‌ ಮನೆಯಲ್ಲಂತೂ ಹಣದ ರಾಶಿಯೇ ಇದೆ. ಸಂಜೀವ್‌ ಲಾಲ್‌ ಸೇರಿ ಹಲವರ ಕೋಣೆಗಳಲ್ಲಿ ಮಾತ್ರವಲ್ಲ, ಅವರ ಮನೆಗೆಲಸದವನ ಮನೆಯಲ್ಲೂ ಹಣದ ರಾಶಿ ಕಂಡುಬಂದಿದೆ. ಮೂಲಗಳ ಪ್ರಕಾರ, ಇದುವರೆಗೆ ಇ.ಡಿ ಅಧಿಕಾರಿಗಳು 30 ಕೋಟಿ ರೂಪಾಯಿಯನ್ನು ಎಣಿಸಲು ಸಾಧ್ಯವಾಗಿದೆ ಎಂದು ತಿಳಿದುಬಂದಿದೆ.

2023ರಲ್ಲಿ ಕೆಲವು ಯೋಜನೆಗಳ ಅನುಷ್ಠಾನಕ್ಕಾಗಿ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪದಲ್ಲಿ ಇ.ಡಿಯು ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಇಲಾಖೆಯ ಮುಖ್ಯ ಎಂಜಿನಿಯರ್ ವೀರೇಂದ್ರ ರಾಮ್ ಎಂಬವರು ಬಂಧಿಸಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರ ಆಪ್ತ ಕಾರ್ಯದರ್ಶಿಯ ಮನೆಯ ಮೇಲೆಯೂ ದಾಳಿ ಮಾಡಿದೆ. ಸದ್ಯ ನೋಟಿನ ಕಂತೆ ನೋಡಿ ಅಧಿಕಾರಿಗಳೇ ಬೆಚ್ಚಿ ಬಿದ್ದಿದ್ದಾರೆ. ದಾಳಿ ವೇಳೆ ನಕಲಿ ಪ್ಯಾನ್ ಕಾರ್ಡ್‌ಗಳ ಮೂಲಕ ನಕಲಿ ಕಂಪನಿಗಳನ್ನು ರಚಿಸುವುದರಿಂದ ಹಿಡಿದು ಚರ ಮತ್ತು ಸ್ಥಿರಾಸ್ತಿಗಳ ಖರೀದಿಗಾಗಿ ಕೋಟಿ ರೂ.ಗಳ ನಗದು ವಿನಿಮಯ ನಡೆಸಿದ ಮಾಹಿತಿಯೂ ಸಿಕ್ಕಿದೆ ಎಂದು ಇಡಿ ಮೂಲಗಳು ತಿಳಿಸಿವೆ.

ಸದ್ಯ ನೋಟಿನ ರಾಶಿಯನ್ನು ತೋರಿಸುವ ವಿಡಿಯೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿದ್ದು, ವೈರಲ್‌ ಆಗಿದೆ. ಈ ದಾಳಿಯ ಬಗ್ಗೆ ಮಾತನಾಡಿದ ಜಾರ್ಖಂಡ್ ಬಿಜೆಪಿ ವಕ್ತಾರ ಪ್ರತುಲ್ ಶಾಹದೇವ್, ”ಜಾರ್ಖಂಡ್‌ನಲ್ಲಿ ಭ್ರಷ್ಟಾಚಾರ ಕೊನೆಗೊಳ್ಳುತ್ತಿಲ್ಲ. ಈ ಹಣಗಳನ್ನು ಇವರು (ಕಾಂಗ್ರೆಸ್‌) ಚುನಾವಣೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಚುನಾವಣಾ ಆಯೋಗ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕುʼʼ ಎಂದು ಆಗ್ರಹಿಸಿದ್ದಾರೆ.

ಜಾರ್ಖಂಡ್‌ನ ಮತ್ತೋರ್ವ ಬಿಜೆಪಿ ಸಂಸದ ದೀಪಕ್ ಪ್ರಕಾಶ್ ಮಾತನಾಡಿ, “ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ), ಕಾಂಗ್ರೆಸ್ ಮತ್ತು ಆರ್‌ಜೆಡಿ ಜಾರ್ಖಂಡ್ ಅನ್ನು ‘ಲೂಟ್‌ಖಂಡ್‌ʼ ಆಗಿ ಪರಿವರ್ತಿಸುವ ಕೆಲಸವನ್ನು ಮಾಡುತ್ತಿವೆ. ಇಂದು ಮತ್ತೆ 25 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದ್ದು, ಅದು ಆಡಳಿತ ಪಕ್ಷದ ಸಚಿವರಿಗೆ ಸೇರಿದೆ. ಇದು ಜಾರ್ಖಂಡ್‌ನ ಜನರಿಗೆ ಮಾಡಿದ ಅವಮಾನ” ಎಂದು ವಾಗ್ದಾಳಿ ನಡೆಸಿದ್ದಾರೆ.

ವಿವಿಧ ಕಡೆ ದಾಳಿ

ರಾಂಚಿಯ ಸೈಲ್ ಸಿಟಿ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ತನಿಖಾ ಸಂಸ್ಥೆ ಏಕಕಾಲದಲ್ಲಿ ದಾಳಿ ಕೈಗೊಂಡಿದೆ. ಇಡಿಯ ಒಂದು ತಂಡ ಸೋಮವಾರ ಬೆಳಗ್ಗೆ, ರಸ್ತೆ ನಿರ್ಮಾಣ ವಿಭಾಗದ ಇಂಜಿನಿಯರ್ ವಿಕಾಸ್ ಕುಮಾರ್ ಅವರ ಮನೆ ಮೇಲೂ ದಾಳಿ ನಡೆಸಿತ್ತು. ಇನ್ನೊಂದು ತಂಡ ಬರಿಯಾತು, ಮೊರಬದಿ ಮತ್ತು ಬೋಡಿಯಾ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಕಳೆದ ವರ್ಷ ಬಂಧಿತರಾದ ವೀರೇಂದ್ರ ರಾಮ್‌ ಅಕ್ಮವಾಗಿ 100 ಕೋಟಿ ರೂ. ಮೌಲ್ಯದ ಆಸ್ತಿ ಗಳಿಸಿದ ಆರೋಪ ಹೊತ್ತಿದ್ದಾರೆ. ಜತೆಗೆ ಜಾರ್ಖಂಡ್‌ನ ಕೆಲವು ರಾಜಕಾರಣಿಗಳೊಂದಿಗಿನ ವಹಿವಾಟಿನ ವಿವರಗಳನ್ನು ಅವರಿಂದ ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ: Shiv Sena : ಇಡಿ ದಾಳಿಗೆ ಒಳಗಾಗಿದ್ದ ಉದ್ಧವ್​ ಬಣದ ಶಾಸಕ, ಶಿಂಧೆ ಬಣಕ್ಕೆ ಸೇರ್ಪಡೆ

Continue Reading
Advertisement
Lok Sabha Election-2024
ಕರ್ನಾಟಕ20 mins ago

ನಾಳೆ ಎರಡನೇ ಹಂತದ ಮತದಾನ; ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಮೊಬೈಲ್‌ನಲ್ಲೇ ಚೆಕ್ ಮಾಡಿ

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

IPL 2024
ಕ್ರೀಡೆ1 hour ago

IPL 2024 : ಪೃಥ್ವಿ ಶಾ ಗರ್ಲ್​​ ಫ್ರೆಂಡ್​​​ ನಿಧಿಯನ್ನು ತಬ್ಬಿ ಅಭಿನಂದಿಸಿದ ಶಾರುಖ್​ ಖಾನ್​​

CM Siddaramaiah
ಪ್ರಮುಖ ಸುದ್ದಿ1 hour ago

CM Siddaramaiah: ಚುನಾವಣೆಯಲ್ಲಿ ʼಕೈʼ ಬಲಪಡಿಸಿ; ನಾಡಿನ ಮಹಿಳೆಯರಿಗೆ ಸಿಎಂ ಬಹಿರಂಗ ಪತ್ರ

Arvind Kejriwal
ದೇಶ1 hour ago

Arvind Kejriwal: ಖಲಿಸ್ತಾನಿ ಉಗ್ರರಿಂದ ದೇಣಿಗೆ; ಕೇಜ್ರಿವಾಲ್‌ ವಿರುದ್ಧ ಎನ್‌ಐಎ ತನಿಖೆಗೆ ಶಿಫಾರಸು!

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Female foeticide
ಪ್ರಮುಖ ಸುದ್ದಿ2 hours ago

Female Foeticide: ಮಂಡ್ಯದಲ್ಲಿ ನಿಲ್ಲದ ಹೆಣ್ಣು ಭ್ರೂಣ ಹತ್ಯೆ; ಗರ್ಭಪಾತ ಮಾಡುವಾಗಲೇ ದಾಳಿ, ಮೂವರ ಅರೆಸ್ಟ್‌!

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Summer Holiday Fashion
ಫ್ಯಾಷನ್2 hours ago

Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

Woman
ಪ್ರಮುಖ ಸುದ್ದಿ2 hours ago

ಕೈಗಳನ್ನು ಕಟ್ಟಿಹಾಕಿ ಸಿಗರೇಟ್‌ನಿಂದ ಗಂಡನ ಗುಪ್ತಾಂಗ ಸುಟ್ಟ ಹೆಂಡತಿ! ಭೀಕರ ವಿಡಿಯೊ ಇಲ್ಲಿದೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 hour ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ15 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌