ಪ್ರಧಾನಿ ಮೋದಿ ಆರ್​ಎಸ್​​ಎಸ್​ ಸ್ವಯಂಸೇವಕ ಹೌದು, ಆದರೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಾರೆ ಎಂದ ಮೋಹನ್​ ಭಾಗವತ್​ - Vistara News

ದೇಶ

ಪ್ರಧಾನಿ ಮೋದಿ ಆರ್​ಎಸ್​​ಎಸ್​ ಸ್ವಯಂಸೇವಕ ಹೌದು, ಆದರೆ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಾರೆ ಎಂದ ಮೋಹನ್​ ಭಾಗವತ್​

ಪ್ರಧಾನಿ ನರೇಂದ್ರ ಮೋದಿ ಮೂಲತಃ ಆರ್‌ಎಸ್‌ಎಸ್‌ ಪ್ರಚಾರಕರು. ಕೇಂದ್ರ ಸರ್ಕಾರದ ಆಡಳಿತದಲ್ಲಿ ಆರ್​ಎಸ್​ಎಸ್​ ಹಸ್ತಕ್ಷೇಪದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಹೇಳಿಕೆ ಮಹತ್ವ ಪಡೆದಿದೆ.

VISTARANEWS.COM


on

RSS Never control its outfits and Swayamsewak Says Mohan Bhagwat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭೋಪಾಲ್​: ಯಾವುದೇ ವ್ಯಕ್ತಿಯನ್ನಾಗಲೀ, ಸಂಸ್ಥೆಯ ಮೇಲಾಗಲೀ ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿಯಂತ್ರಣ ಸಾಧಿಸುವುದಿಲ್ಲ ಎಂದು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಸ್ಪಷ್ಟಪಡಿಸಿದ್ದಾರೆ. ಮಧ್ಯಪ್ರದೇಶದ ಜಬಲ್​​ಪುರದಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಭಾಗವತ್​, ‘ಆರ್​ಎಸ್​​ಎಸ್​​ ಹೆಸರು ಬಂದಾಗ ಪ್ರಧಾನಿ ನರೇಂದ್ರ ಮೋದಿ ಹೆಸರನ್ನು ಅದಕ್ಕೆ ತಳುಕು ಹಾಕುತ್ತಾರೆ. ನರೇಂದ್ರ ಮೋದಿ ಮತ್ತಿತರ ನಾಯಕರ ಕೆಲಸವನ್ನೂ ಸಂಘವೇ ನಿಯಂತ್ರಿಸುತ್ತದೆ ಎಂಬ ಮಾತುಗಳೂ ಕೇಳಿಬಂದಿವೆ. ಆದರೆ ವಾಸ್ತವದಲ್ಲಿ ಹಾಗಿಲ್ಲ. ಮೋದಿ ಜೀ ಸಂಘದ ಸ್ವಯಂಸೇವಕರೂ ಹೌದು, ಪ್ರಚಾರಕ್​ ಕೂಡ ಆಗಿದ್ದಾರೆ. ಆದರೆ ಅವರ ಕೆಲಸವನ್ನು ಅವರು ಸ್ವತಂತ್ರ್ಯವಾಗಿಯೇ ಮಾಡುತ್ತಿದ್ದಾರೆ. ನಾವದರಲ್ಲಿ ನೇರವಾಗಿಯೂ, ಪರೋಕ್ಷವಾಗಿಯೂ ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಹೇಳಿದ್ದಾರೆ.

‘ಇನ್ನು ವಿಶ್ವ ಹಿಂದು ಪರಿಷತ್ ಕೂಡ ನಮ್ಮ ಸಂಘಕ್ಕೆ ಸೇರಿದ್ದು. ನಮ್ಮ ಸ್ವಯಂಸೇವಕರೇ ಅದನ್ನು ನಡೆಸುತ್ತಾರೆ. ಆದರೆ ವಿಎಚ್​​ಪಿ ಮಾಡುವ ಕಾರ್ಯಗಳನ್ನು ಆರ್​ಎಸ್​ಎಸ್​ ನಿಯಂತ್ರಿಸುವುದಿಲ್ಲ ಅಥವಾ ಸಂಘ ಅದರ ಮೇಲೆ ಪ್ರಭುತ್ವ ಸಾಧಿಸುವುದಿಲ್ಲ’ ಎಂದು ಸ್ಪಷ್ಟಪಡಿಸಿದ ಮೋಹನ್​ ಭಾಗವತ್​, ‘ಆರ್​​ಎಸ್​ಎಸ್​ ಅದರ ಸ್ವಯಂಸೇವಕರೊಂದಿಗೆ ಸಮಾಲೋಚನೆ ನಡೆಸುತ್ತದೆ, ಸಲಹೆಗಳನ್ನೂ ನೀಡುತ್ತದೆ. ಆದರೆ ಹೀಗೇ ಮಾಡಿ, ಹಾಗೇ ಮಾಡಿ ಎಂದು ಅಧಿಕಾರ ಚಲಾಯಿಸುವುದಿಲ್ಲ. ನಮ್ಮ ಮಾತು ಕೇಳಲೇಬೇಕು ಎಂಬ ನಿಯಮವನ್ನೂ ವಿಧಿಸಿಲ್ಲ. ಅವರನ್ನೆಂದಿಗೂ ನಿಯಂತ್ರಿಸುವುದಿಲ್ಲ’ ಎಂದು ಒತ್ತಿ ಹೇಳಿದ್ದಾರೆ.

ಇದೇ ಸಮಾರಂಭದಲ್ಲಿ ಹಿಂದುತ್ವದ ಬಗ್ಗೆ ಮಾತನಾಡಿದ ಮೋಹನ್​ ಭಾಗವತ್​, ‘ಎಲ್ಲವನ್ನೂ-ಎಲ್ಲರನ್ನೂ ಒಳಗೊಳ್ಳುವ ತತ್ವವೇ ಹಿಂದುತ್ವದ ಅರ್ಥ. ನಮ್ಮ ಸಂವಿಧಾನದ ಪೀಠಿಕೆಯಲ್ಲೇ ಅದರ ಉಲ್ಲೇಖವಿದೆ. ಭಾರತವೆಂಬುದು ಭಾಷೆಗಳ, ವ್ಯಾಪಾರ ಹಿತಾಸಕ್ತಿಗಳು, ರಾಜಕೀಯ ಅಧಿಕಾರ ಮತ್ತು ಚಿಂತನೆಗಳ ಆಧಾರದ ಮೇಲೆ ನಿರ್ಮಿತವಾದ ದೇಶವಲ್ಲ. ಇದು ‘ವಸುದೈವ ಕುಟುಂಬಕಂ’ (ಇಡೀ ವಿಶ್ವವೇ ಒಂದು ಕುಟುಂಬ) ಮತ್ತು ‘ವಿವಿಧತೆಯಲ್ಲಿ ಏಕತೆ’ ಎಂಬ ತತ್ವಗಳ ಆಧಾರದಲ್ಲಿ ನಿರ್ಮಾಣಗೊಂಡ ರಾಷ್ಟ್ರ ಎಂದೂ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಎಂದಲ್ಲ, ಬಿಜೆಪಿಯ ಅನೇಕ ನಾಯಕರ ವಿಚಾರಕ್ಕೆ ಬಂದಾಗ ಅವರಿಗೆ ಆರ್​ಎಸ್​ಎಸ್​​ನ್ನು ತಳುಕುಹಾಕುವುದು ಇದೆ. ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆರ್​ಎಸ್​ಎಸ್​ ಸಂಪೂರ್ಣ ಹಸ್ತಕ್ಷೇಪ ಮಾಡುತ್ತದೆ. ಇನ್ನು ಪಕ್ಷದೊಳಗಿನ ಪದಾಧಿಕಾರಿಗಳ ನೇಮಕ, ಸಚಿವ ಸಂಪುಟ ವಿಸ್ತರಣೆ ಇತ್ಯಾದಿಗಳೂ ಕೂಡ ಸಂಘ ಹೇಳಿದಂತೆ ನಡೆಯುತ್ತವೆ ಎಂಬಿತ್ಯಾದಿ ಮಾತುಗಳು ಚಾಲ್ತಿಯಲ್ಲಿವೆ. ಹೀಗಿರುವಾಗ ಮೋಹನ್​ ಭಾಗವತ್​ ಈ ಮಾತುಗಳನ್ನಾಡಿದ್ದು ಮಹತ್ವ ಪಡೆದುಕೊಂಡಿದೆ.

ಇದನ್ನೂ ಓದಿ: ಸವಿಸ್ತಾರ ಅಂಕಣ | ಆರ್‌ಎಸ್‌ಎಸ್ ಚಿಂತನೆಗಳೊಂದಿಗೆ ಬಿಜೆಪಿ ನಾಯಕರ ಆಲೋಚನೆಗಳೇಕೆ ತಾಳೆ ಆಗುತ್ತಿಲ್ಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

Cauvery Dispute: ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು.

VISTARANEWS.COM


on

cauvery dispute
Koo

ನವದೆಹಲಿ: ಕರ್ನಾಟಕದಲ್ಲಿ ಬರಗಾಲವಿದ್ದರೂ ಕಾವೇರಿ ನದಿ ನೀರು (Cauvery Dispute) ವಿಚಾರದಲ್ಲಿ ಮೊಂಡಾಟ ಪ್ರದರ್ಶಿಸುತ್ತಿದ್ದ ತಮಿಳುನಾಡಿಗೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಸಮಿತಿ ಸಭೆಯಲ್ಲಿ ಭಾರಿ ಮುಖಭಂಗವಾಗಿದೆ. ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ತಮಿಳುನಾಡಿನ ವಾದವನ್ನು ಒಪ್ಪದ ಸಿಡಬ್ಲ್ಯೂಆರ್‌ಸಿಯು ಕರ್ನಾಟಕದಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಇದರಿಂದಾಗಿ, ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಭಾರಿ ಮುಖಭಂಗವಾಗಿದೆ.

ತಮಿಳುನಾಡಿಗೆ ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂದು 2023-24ನೇ ಜಲವರ್ಷದ ಅಂತಿಮ ಸಭೆಯಲ್ಲಿ ಸಿಡಬ್ಲ್ಯೂಆರ್‌ಸಿ ಖಡಕ್‌ ಆದೇಶ ನೀಡಿದೆ. “ಕರ್ನಾಟಕದಲ್ಲಿ ತೀವ್ರ ಬರಗಾಲ ಇರುವುದರಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ. ಅಚ್ಚುಕಟ್ಟು ಪ್ರದೇಶದಲ್ಲಿ ಮಳೆಯಿಂದ ನೈಸರ್ಗಿಕವಾಗಿ ನದಿ ಸೇರುವ ನೀರನ್ನು ಬಳಸಿಕೊಳ್ಳಿ” ಎಂಬುದಾಗಿ ತಮಿಳುನಾಡಿಗೆ ಸೂಚನೆ ನೀಡಿದೆ. ಮೇ 21ರಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆ ನಡೆಯಲಿದ್ದು, ಅಲ್ಲೂ ತಮಿಳುನಾಡು ತನ್ನ ಮೊಂಡುವಾದ ಮುಂದಿಡಲಿದೆ ಎಂದು ಹೇಳಲಾಗುತ್ತಿದೆ.

Cauvery water CWRC order

ಫೆಬ್ರವರಿಯಿಂದ ಮೇವರೆಗೆ ಕರ್ನಾಟಕವು ಪ್ರತಿ ತಿಂಗಳು 2.50 ಟಿಎಂಸಿಯಂತೆ ಪರಿಸರ ಹರಿವನ್ನು ನಿರಂತರವಾಗಿ ಬಿಡುಗಡೆ ಮಾಡಬೇಕು ಎಂದು ಕಳೆದ ಫೆಬ್ರವರಿಯಲ್ಲಿಯೇ ತಮಿಳುನಾಡು ಸಿಡಬ್ಲ್ಯೂಆರ್‌ಸಿ ಸಭೆಯಲ್ಲಿ ವಾದ ಮಂಡಿಸಿತ್ತು. ಸುಪ್ರೀಂ ಕೋರ್ಟ್‌ ಆದೇಶದಂತೆ ಮಾರ್ಚ್‌ ಹಾಗೂ ಏಪ್ರಿಲ್‌ನಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಬಿಟ್ಟಿತ್ತು. ಆದರೆ, ಮೇ ಅಂತ್ಯದವರೆಗೂ ನೀರು ಬಿಡಬೇಕು ಎಂಬುದು ತಮಿಳುನಾಡಿನ ವಾದವಾಗಿತ್ತು. ಇದನ್ನು ಸಿಡಬ್ಲ್ಯೂಆರ್‌ಸಿ ನಿರಾಕರಿಸಿದೆ.

ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆ ಬರುತ್ತಿದೆ. ಇಷ್ಟಾದರೂ ಅಣೆಕಟ್ಟುಗಳು ತುಂಬಿಲ್ಲ. ರಾಜ್ಯದ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೇ 31 ದೇಶವನ್ನು ಮುಂಗಾರು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿರುವುದು ರೈತರ ಪಾಲಿಗೆ ಸಿಹಿ ಸುದ್ದಿಯೇ ಆಗಿದೆ. ಮೇ 27ರಿಂದ ಜೂನ್‌ 4ರ ಅವಧಿಯಲ್ಲಿ ಯಾವಾಗ ಬೇಕಾದರೂ ನೈಋತ್ಯ ಮುಂಗಾರು ಪ್ರವೇಶಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಪ್ರತಿ ವರ್ಷ ಜೂನ್‌ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ದೇಶಾದ್ಯಂತ ವ್ಯಾಪಿಸುವುದು ವಾಡಿಕೆಯಾಗಿದೆ. ಆದರೆ, ಹವಾಮಾನ ಇಲಾಖೆಯು ಈ ಬಾರಿ ಒಂದು ದಿನ ಮೊದಲೇ ಪ್ರವೇಶಿಸಲಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ನಲ್ಲಿ ಮುಂಗಾರು ಮಳೆ ಅಂತ್ಯವಾಗಲಿದೆ.

ಇದನ್ನೂ ಓದಿ: HD Kumaraswamy: ಜನರ ಕಣ್ಣಿಗೆ ಮಣ್ಣೆರಚಬೇಡಿ; ಮಂಡ್ಯಕ್ಕೆ ಕಾವೇರಿ ಗ್ಯಾರಂಟಿ ಕೊಡಿ: ಕಾಂಗ್ರೆಸ್‌ಗೆ ಎಚ್‌ಡಿಕೆ ಸವಾಲು

Continue Reading

ದೇಶ

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ನಡೆದಿದೆ. ಇದರಲ್ಲಿ ಲೇಡಿ ಕಾನ್‌ಸ್ಟೆಬಲ್‌ ಕೂಡ ಭಾಗಿಯಾಗಿದ್ದರು. ಗಾಯಕ ಮನಮೋಹಕವಾಗಿ ಹಾಡಿದ್ದಕ್ಕೆ ಮಹಿಳಾ ಪೇದೆಯು ಮನದುಂಬಿ ಅವರಿಗೆ ಮುತ್ತು ಕೊಟ್ಟರು. ತಬ್ಬಿಕೊಂಡು ಅಭಿಮಾನ ವ್ಯಕ್ತಪಡಿಸಿದರು. ಈಗ ಇದೇ ಅವರಿಗೆ ಮುಳುವಾಗಿದೆ.

VISTARANEWS.COM


on

Lady Constable
Koo

ದಿಸ್ಪುರ: ನೆಚ್ಚಿನ ನಟ-ನಟಿ, ಗಾಯಕ-ಗಾಯಕಿ ಸೇರಿ ಯಾವುದೇ ಸೆಲೆಬ್ರಿಟಿ (Celebrity) ಸಿಕ್ಕರೆ ಹೇಗೆ ವರ್ತಿಸುತ್ತೇವೆ? ಅವರ ಜತೆ ಒಂದು ಸೆಲ್ಫಿ ತೆಗೆದುಕೊಳ್ಳುತ್ತೇವೆ. ತುಸು ಸಮಯ ಸಿಕ್ಕರೂ ಆಟೋಗ್ರಾಫ್‌ ಹಾಕಿಸಿಕೊಳ್ಳುತ್ತೇವೆ. ಆದರೆ, ಅಸ್ಸಾಂನಲ್ಲಿ (Assam) ಲೇಡಿ ಕಾನ್‌ಸ್ಟೆಬಲ್‌ ಒಬ್ಬರು (Lady Constable) ಮೆಚ್ಚಿದ ಗಾಯಕನನ್ನು ವೇದಿಕೆ ಮೇಲೆಯೇ ತಬ್ಬಿಕೊಂಡು, ಗಾಯಕನ ಕೆನ್ನೆಗೊಂದು ಮುತ್ತು ಕೊಟ್ಟು ಅಭಿಮಾನ ಮೆರೆದಿದ್ದಾರೆ. ಆದರೆ, ಗಾಯಕನಿಗೆ ವೇದಿಕೆ ಮೇಲೆಯೇ ಮುತ್ತುಕೊಟ್ಟ ಮಹಿಳಾ ಪೇದೆಯನ್ನು ಈಗ ಅಮಾನತು ಮಾಡಲಾಗಿದೆ.

ಹೌದು, ಅಸ್ಸಾಂನ ದಿಬ್ರುಗಢದಲ್ಲಿ ಮೇ 10ರಂದು ಮ್ಯೂಸಿಕ್‌ ಕನ್ಸರ್ಟ್‌ ಆಯೋಜಿಸಲಾಗಿತ್ತು. ಗ್ಯಾಂಗ್‌ಸ್ಟರ್‌ ಬಾಲಿವುಡ್‌ ಸಿನಿಮಾದ ಯಾ ಅಲಿ ಎಂಬ ಹಾಡು ಹಾಡಿದ ಖ್ಯಾತ ಜುಬೀನ್‌ ಗರ್ಗ್‌ ಅವರು ಮ್ಯೂಸಿಕ್‌ ಕನ್ಸರ್ಟ್‌ ನಡೆಸಿಕೊಟ್ಟರು. ಅವರ ಮನಮೋಹಕ ಹಾಡಿಗೆ ಅಲ್ಲಿ ನೆರೆದಿದ್ದ ಎಲ್ಲರೂ ಚಪ್ಪಾಳೆ, ಕೇಕೆ ಮೂಲಕ ಪ್ರೋತ್ಸಾಹ ನೀಡಿದರು. ಆದರೆ, ಅಲ್ಲಿಯೇ ಇದ್ದ ಮಹಿಳಾ ಪೇದೆ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರಿಗೆ ಮುತ್ತು ಕೊಟ್ಟರು. ಈ ವಿಡಿಯೊ ಭಾರಿ ವೈರಲ್‌ ಕೂಡ ಆಯಿತು.

ನೆಚ್ಚಿನ ಗಾಯಕನ ಹಾಡಿಗೆ ಫಿದಾ ಆದ ಮಿಲಿಪ್ರಭಾ ಚುಟಿಯಾ ಅವರು ವೇದಿಕೆ ಮೇಲೆ ಹತ್ತಿ ಜುಬೀನ್‌ ಗರ್ಗ್‌ ಅವರನ್ನು ಗಟ್ಟಿಯಾಗಿ ತಬ್ಬಿಕೊಂಡರು. ಅವರನ್ನು ಮನಸಾರೆ ಹೊಗಳಿದರು. ಗಾಯಕನ ಮೇಲೆ ಎಷ್ಟು ಅಭಿಮಾನ ಹೊಂದಿದ್ದೇನೆ ಎಂಬುದನ್ನು ಭಾವುಕರಾಗಿ ತಿಳಿಸಿದರು. ಇದೇ ವೇಳೆ ಅವರು ಜುಬೀನ್‌ ಗರ್ಗ್‌ ಅವರ ಕೆನ್ನೆಗೆ ಪದೇಪದೆ ಮುತ್ತು ಕೊಟ್ಟರು. ಅಷ್ಟೇ ಅಲ್ಲ, ಗಾಯಕನ ಪಾದ ಮುಟ್ಟಿ ನಮಸ್ಕಾರ ಮಾಡಿದರು. ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಯಾಯಿತು.

ವಿಡಿಯೊ ವೈರಲ್‌ ಆಗುತ್ತಲೇ ಮಿಲಿಪ್ರಭಾ ಚುಟಿಯಾ ಅವರನ್ನು ಅಸ್ಸಾಂ ಪೊಲೀಸ್‌ ಇಲಾಖೆಯು ಅಮಾನತುಗೊಳಿಸಿದೆ. ಪೊಲೀಸ್‌ ಇಲಾಖೆಯ ಶಿಸ್ತು ಹಾಗೂ ಸಾರ್ವಜನಿಕ ವರ್ತನೆಯ ನಿಯಮಗಳನ್ನು ಮೀರಿದ ಆರೋಪದಲ್ಲಿ ಅವರನ್ನು ಅಮಾನತುಗೊಳಿಸಿದೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೇದೆ ವರ್ತನೆ ಬಗ್ಗೆ ಪರ-ವಿರೋಧ ಚರ್ಚೆಯಾಗಿದೆ. ನೆಚ್ಚಿನ ಗಾಯಕನನ್ನು ತಬ್ಬಿಕೊಂಡು, ಮುತ್ತು ಕೊಡುವುದರಲ್ಲಿ ಅಶ್ಲೀಲತೆ ಏನಿದೆ ಎಂದು ಒಂದಷ್ಟು ಜನ ಹೇಳಿದರೆ, ಪೊಲೀಸ್‌ ಅಧಿಕಾರಿಯಾದವರು ಸಾರ್ವಜನಿಕವಾಗಿ ಹೇಗಿರಬೇಕು ಎಂಬುದು ಗೊತ್ತಿರಬೇಕು ಎಂದು ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

Continue Reading

Lok Sabha Election 2024

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

DK Shivakumar: ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಈಗ ಇಲ್ಲಿಗೆ ಡಿಕೆಶಿ ಎಂಟ್ರಿ ಕೊಟ್ಟಿದ್ದು, ಚುನಾವಣಾ ಕಾರ್ಯತಂತ್ರಗಳಲ್ಲಿ ತೊಡಗಿದ್ದಾರೆ.

VISTARANEWS.COM


on

DK Shivakumar in Uttar Pradesh and Strategy in Amethi and Rae Bareli
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯವಾಗಿ 5ನೇ ಹಂತಕ್ಕೆ ರಾಜಕೀಯ ಪಕ್ಷಗಳು ಸಿದ್ಧವಾಗುತ್ತಿವೆ. ಇತ್ತ ಟ್ರಬಲ್‌ ಶೂಟರ್‌ ಖ್ಯಾತಿಯ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅಂತಾರಾಜ್ಯಗಳಲ್ಲಿ ಪ್ರಚಾರಕ್ಕೆ ಜೈ ಎಂದಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಆಂಧ್ರಪ್ರದೇಶದ ಕಡಪ ಪ್ರಚಾರಕ್ಕೆ ಹೋಗಿದ್ದ ಡಿಕೆಶಿ ಈಗ ಉತ್ತರ ಪ್ರದೇಶ ತಲುಪಿದ್ದಾರೆ. ಅಮೇಥಿ ಮತ್ತು ರಾಯ್‌ಬರೇಲಿಯಲ್ಲಿ ಪ್ರಚಾರಕ್ಕೆ ಮುಂದಾಗಿದ್ದು, ತಂತ್ರಗಾರಿಕೆಯಲ್ಲಿ ತೊಡಗಲಿದ್ದಾರೆ ಎಂದು ತಿಳಿದುಬಂದಿದೆ.

ಈ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಬೆನ್ನಿಗೆ ಡಿ.ಕೆ. ಶಿವಕುಮಾರ್‌ ನಿಂತಿದ್ದಾರೆ. ಕಳೆದ ಬಾರಿ ಅಮೇಥಿಯಲ್ಲಾದ ಸೋಲಿನ ಕಹಿಯನ್ನು ಮರೆಸಲು ಪಣ ತೊಟ್ಟಿರುವ ಡಿಕೆಶಿ ಈಗ ಆ ನಿಟ್ಟಿನಲ್ಲಿ ಪ್ರಚಾರಕ್ಕೆ ಮುನ್ನಡಿ ಬರೆಯಲು ಹೊರಟಿದ್ದಾರೆ. ಅಲ್ಲಿ ಯಾವ ರೀತಿ ತಂತ್ರಗಾರಿಕೆ ಮಾಡಲಿದ್ದಾರೆ? ಅದು ಮತದಾರರ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದು ಫಲಿತಾಂಶ ಬಂದ ಮೇಲಷ್ಟೆ ತಿಳಿಯಬಹುದಾಗಿದೆ.

ಕಾಂಗ್ರೆಸ್‌ಗೆ ಅಮೇಥಿ ಮತ್ತು ರಾಯ್‌ ಬರೇಲಿ ಏಕೆ ಮುಖ್ಯ?

ಕಾಂಗ್ರೆಸ್‌ ಪಕ್ಷಕ್ಕೆ ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರವು ಭಾರಿ ಮುಖ್ಯವಾಗಿದೆ. ಏಕೆಂದರೆ, ರಾಯ್‌ ಬರೇಲಿಯು ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸ್ಪರ್ಧಿಸಿ ಗೆಲ್ಲುತ್ತಾ ಬಂದಿರುವ ಕ್ಷೇತ್ರವಾಗಿದೆ. ಇದು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಆದರೆ, ಈ ಬಾರಿ ಸೋನಿಯಾ ಗಾಂಧಿ ಸ್ಪರ್ಧಾ ಕಣದಿಂದ ಹಿಂದೆ ಸರಿದಿದ್ದು, ರಾಜ್ಯಸಭೆ ಮೂಲಕ ರಾಜಕೀಯದಲ್ಲಿದ್ದಾರೆ. ಹೀಗಾಗಿ ಈ ಕ್ಷೇತ್ರವನ್ನು ತಮ್ಮ ಪುತ್ರ ರಾಹುಲ್‌ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ. ಕಳೆದ ಇಷ್ಟು ವರ್ಷಗಳಿಂದ ಗೆಲ್ಲುತ್ತಾ ಬಂದಿರುವ ಈ ಕ್ಷೇತ್ರದಲ್ಲಿ ಈ ಬಾರಿ ರಾಹುಲ್‌ಗೆ ಅಗ್ನಿ ಪರೀಕ್ಷೆಯಾಗಿದೆ. ಶತಾಯಗತಾಯ ಗೆಲ್ಲಲೇ ಬೇಕಿರುವ ಅನಿವಾರ್ಯತೆ ಸೃಷ್ಟಿಯಾಗಿದೆ. ಇಲ್ಲದಿದ್ದರೆ ಅವರ ನಾಯಕತ್ವದ ಮೇಲೆ ಮತ್ತೊಮ್ಮೆ ಪ್ರಶ್ನೆಗಳು ಏಳುತ್ತವೆ. ಹೀಗಾಗಿ ಈ ಕ್ಷೇತ್ರಕ್ಕೆ ಕಾಂಗ್ರೆಸ್‌ ಹೆಚ್ಚಿನ ಒತ್ತನ್ನು ನೀಡಿದೆ. ಇದಕ್ಕಾಗಿಯೇ ಡಿ.ಕೆ. ಶಿವಕುಮಾರ್‌ ಅಲ್ಲಿ ತಮ್ಮ ದೃಷ್ಟಿಯನ್ನು ನೆಟ್ಟಿದ್ದಾರೆ ಎನ್ನಲಾಗಿದೆ.

ಅಮೇಥಿ ವಾಪಸ್‌ಗೆ ತಂತ್ರ

ಇನ್ನು ಅಮೇಥಿ ಲೋಕಸಭಾ ಕ್ಷೇತ್ರ ಸಹ ಕಾಂಗ್ರೆಸ್‌ ಕಪಿಮುಷ್ಟಿಯಲ್ಲಿತ್ತು. 1980ರಲ್ಲಿ ಸಂಜಯ್‌ ಗಾಂಧಿ ಮೊದಲ ಬಾರಿಗೆ ಇಲ್ಲಿಂದ ಸ್ಪರ್ಧಿಸಿದ್ದರು. ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಸ್ಪರ್ಧೆ ಮಾಡಿದ್ದರು. ಅವರು 1981 ರಿಂದ 1991ರವರೆಗೆ 4 ಬಾರಿ ಸ್ಪರ್ಧಿಸಿ ಗೆದ್ದಿದ್ದರು. ಬಳಿಕ 1998ರಲ್ಲಿ ಸೋನಿಯಾ ಗಾಂಧಿ, 2004ರಿಂದ 2014ರ ವರೆಗೆ ರಾಹುಲ್‌ ಗಾಂಧಿ ಇಲ್ಲಿಂದಲೇ ಚುನಾಯಿತರಾಗುತ್ತಾ ಬರುತ್ತಿದ್ದರು. ಆದರೆ, 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಿ ಬರೋಬ್ಬರಿ 55,120 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇಲ್ಲಿ ರಾಹುಲ್‌ ಗಾಂಧಿಗೆ ಮುಖಭಂಗವಾಗಿತ್ತು. ಆದರೆ, ರಾಹುಲ್‌ ಕೇರಳದ ವಯನಾಡಿನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಹೀಗಾಗಿ ಒಂದರಲ್ಲಿ ಹೋದ ಮಾನ, ಇನ್ನೊಂದರಲ್ಲಿ ಬಂತು ಎಂಬಂತೆ ಆಗಿತ್ತು. ಈ ಬಾರಿಯೂ ರಾಹುಲ್‌ ವಯನಾಡು ಹಾಗೂ ರಾಯ್‌ ಬರೇಲಿಯಲ್ಲಿ ಸ್ಪರ್ಧೆ ಮಾಡಿದ್ದಾರೆ. ಇನ್ನು ಅಮೇಥಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸ್ಪರ್ಧೆ ಮಾಡಿದ್ದಾರೆ. ಅವರಿಗೆ ಎದುರಾಳಿಯಾಗಿ ಕಿಶೋರ್‌ ಲಾಲ್‌ ಶರ್ಮಾ ಸ್ಪರ್ಧೆ ಮಾಡಿದ್ದಾರೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಗಾಂಧಿ ಕುಟುಂಬದ ಅತ್ಯಾಪ್ತನಿಗೆ ಟಿಕೆಟ್‌

ಕಿಶೋರ್‌ ಲಾಲ್‌ ಶರ್ಮಾ ಅವರು ರಾಯ್‌ಬರೇಲಿ ಹಾಗೂ ಅಮೇಥಿ ಕ್ಷೇತ್ರಗಳಿಗೆ ಅಘೋಷಿತ ಉಸ್ತುವಾರಿಯಂತೆ ಇದ್ದರು. ಇಲ್ಲಿ ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಪ್ರತಿನಿಧಿಸುವಾಗ ಹೆಚ್ಚಿನ ಹೊಣೆ ಇವರ ಮೇಲೆಯೇ ಇತ್ತು. ಹೀಗಾಗಿ ಇಲ್ಲಿ ಪಕ್ಷದ ಚಟುವಟಿಕೆಯಲ್ಲಿ ನಿರತರಾಗುತ್ತಿದ್ದರಿಂದ ಅವರಿಗೆ ಕ್ಷೇತ್ರ ಪರಿಚಯದ ಜತೆಗೆ ಸ್ಥಳೀಯ ನಾಯಕರ ಒಡನಾಟವೂ ಇದೆ. ಜತೆಗೆ ಗಾಂಧಿ ಕುಟುಂಬ ಅತ್ಯಾಪ್ತರೂ ಆಗಿದ್ದರಿಂದ ಅವರಿಗೆ ಈ ಬಾರಿ ಅಮೇಥಿಯಿಂದ ಟಿಕೆಟ್‌ ನೀಡಲಾಗಿದೆ. ಈ ಎಲ್ಲ ಕಾರಣಗಳಿಂದ ಅಮೇಥಿಯನ್ನು ಗೆದ್ದು ಬೀಗುವ ಮೂಲಕ ಜಿದ್ದು ಸಾಧಿಸುವ ತವಕದಲ್ಲಿ ಕಾಂಗ್ರೆಸ್‌ ಇದೆ. ಹೀಗಾಗಿ ಡಿ.ಕೆ. ಶಿವಕುಮಾರ್‌ ಈ ಎರಡೂ ಕ್ಷೇತ್ರಗಳ ಮೇಲೆ ಫೋಕಸ್‌ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡೂ ಕ್ಷೇತ್ರಗಳಲ್ಲಿ ಕೆಲವು ದಿನ ವಾಸ್ತವ್ಯ ಹೂಡಿ ತಂತ್ರಗಾರಿಕೆ ಹೆಣೆಯಲಿದ್ದಾರೆ.

Continue Reading

ದೇಶ

ಶಾರುಖ್‌ ಖಾನ್‌ ಜಾಹೀರಾತು ನೋಡಿ ಗುಟ್ಕಾ ತಿಂದ ಮಕ್ಕಳು; ನಟ ಸಾಯಲ್ಲ, ನಾವು ಸಾಯ್ತೀವಾ ಅಂದರು!

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ.

VISTARANEWS.COM


on

Shah Rukh Khan
Koo

ನವದೆಹಲಿ: ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ ಹೀರೊಗಳು, ಕ್ರಿಕೆಟಿಗರು, ಸೆಲೆಬ್ರಿಟಿಗಳು (Celebrities) ನೂರಾರು ಉತ್ಪನ್ನಗಳ ಜಾಹೀರಾತುಗಳಲ್ಲಿ (Advertisements) ಅಭಿನಯಿಸುವ ಮೂಲಕ, ಆ ಉತ್ಪನ್ನಗಳನ್ನೂ ತಾವೇ ಬಳಸಿದ್ದೇವೆ ಎಂದು ಹೇಳುವ ಮೂಲಕ ಅಥವಾ ನಟಿಸುವ ಮೂಲಕ ಕೋಟ್ಯಂತರ ಜನರನ್ನು ಸೆಳೆಯುತ್ತಾರೆ. ಇನ್ನು, ಅಭಿಮಾನಿಗಳು, ಅನುಯಾಯಿಗಳು ಕೂಡ ನೆಚ್ಚಿನ ನಟ, ಕ್ರಿಕೆಟಿಗನ ಜಾಹೀರಾತು ನೋಡಿ, ಆ ಉತ್ಪನ್ನಗಳನ್ನು ಬಳಸುತ್ತಾರೆ. ಆದರೆ, ಹೀಗೆ ನಟರು ಸೇರಿ ಸೆಲೆಬ್ರಿಟಿಗಳ ಜಾಹೀರಾತು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹೌದು, ಶಾರುಖ್‌ ಖಾನ್‌ ಅವರ ಪಾನ್‌ ಮಸಾಲ (Pan Masala) ಜಾಹೀರಾತಿನಿಂದ ಪ್ರಚೋದನೆಗೊಂಡು ಗುಟ್ಕಾ ಸೇವಿಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ಮಕ್ಕಳು ಗುಟ್ಕಾ ತಿಂದು, ಅದರ ಪರಿಣಾಮ ಗೊತ್ತಿರದೆ ಮಾತನಾಡಿದ ವಿಡಿಯೊವನ್ನು ಸತ್ಯ, ನ್ಯಾಯ, ಪ್ರೀತಿ ಎಂಬ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. “ನೀವು ಗುಟ್ಕಾ ತಿಂತಿದ್ದೀರಲ್ಲ, ಸತ್ತು ಹೋದ್ರೆ ಏನ್‌ ಗತಿ” ಎಂದು ವ್ಯಕ್ತಿಯೊಬ್ಬರು ಪ್ರಶ್ನೆ ಕೇಳುತ್ತಾರೆ. ಆಗ ಮಕ್ಕಳು, “ಶಾರುಖ್‌ ಖಾನ್‌ ಸತ್ತಿಲ್ಲ, ನಾವು ಸಾಯ್ತೀವಾ” ಎಂದಿದ್ದಾರೆ. “ಶಾರುಖ್‌ ಖಾನ್‌ ಏಕೆ ಸಾಯುತ್ತಾರೆ” ಎಂಬ ಪ್ರಶ್ನೆಗೆ, “ಶಾರುಖ್‌ ಖಾನ್‌ ಗುಟ್ಕಾ ತಿಂತಾರಲ್ಲ, ಅವ್ರೇ ಸಾಯಲ್ಲ, ನಾವ್‌ ಹೇಗೆ ಸಾಯ್ತೀವಿ” ಎಂದಿದ್ದಾರೆ. ಅಷ್ಟೇ ಅಲ್ಲ, “ಶಾರುಖ್ ಖಾನ್‌ ಗುಟ್ಕಾ ತಿನ್ನೋದು ನಿಮಗೆ ಹೇಗೆ ಗೊತ್ತು” ಎಂದು ಕೇಳಿದ್ದಕ್ಕೆ, “ಜಾಹೀರಾತಿನಲ್ಲಿ ನೋಡಿದ್ದೀವಲ್ಲ” ಎಂದಿದ್ದಾರೆ.

ಶಾರುಖ್‌ ಖಾನ್‌ ಪಾನ್‌ ಮಸಾಲ ಜಾಹೀರಾತಿನಲ್ಲಿ ನಟಿಸಿದ್ದನ್ನೇ ಈ ಮಕ್ಕಳು ನಿಜ ಎಂದು ಭಾವಿಸಿದ್ದಾರೆ. ಶಾರುಖ್‌ ಖಾನ್‌ ಗುಟ್ಕಾ ತಿಂತಾರೆ, ಅವರಿಗೇ ಏನೂ ಆಗಲ್ಲ. ಇನ್ನು ನಮಗೆ ಏನಾಗುತ್ತದೆ ಎಂಬ ಅಭಿಪ್ರಾಯಕ್ಕೆ ಬಂದು, ಚಿಕ್ಕ ವಯಸ್ಸಿನಲ್ಲೇ ಗುಟ್ಕಾ ತಿನ್ನೋದನ್ನು ಕಲಿತಿದ್ದಾರೆ. ಈ ವಿಡಿಯೊ ವೈರಲ್‌ ಆಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸೆಲೆಬ್ರಿಟಿಗಳ ಜಾಹೀರಾತುಗಳಲ್ಲಿ ನಟಿಸುವಾಗ, ಆ ಉತ್ಪನ್ನದಿಂದ ಸಮಾಜದ ಮೇಲೆ ಉಂಟಾಗುವ ಪರಿಣಾಮ ಏನು ಎಂಬುದನ್ನು ಈ ವಿಡಿಯೊ ನೋಡಿ ಕಲಿಯಬೇಕಿದೆ ಎಂದು ಆಗ್ರಹಿಸಿದ್ದಾರೆ.

“ಸೆಲೆಬ್ರಿಟಿಗಳು ನಮ್ಮ ಕನ್ನಡದ ಕಣ್ಮಣಿ ಡಾಕ್ಟರ್ ರಾಜ್ ಕುಮಾರ್ ಮತ್ತು ಪುನೀತ್ ರಾಜಕುಮಾರ್ ಅವರಂತಹವರನ್ನು ನೋಡಿ ಕಲಿಯಬೇಕು. ಥೂ ನಿಮ್ಮ, ನಿಮಗೆಲ್ಲ ಇದನ್ನು ನೋಡಿ ನಾಚಿಕೆ ಆಗಬೇಕು. ಇಂತಹ ಜಾಹೀರಾತು ಕೊಟ್ಟು ಯುವ ಜನತೆಯ ದಾರಿ ತಪ್ಪಿಸುತಿರುವ ನಿಮಗೆ ಧಿಕ್ಕಾರವಿರಲಿ” ಎಂಬುದಾಗಿ ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಮತ್ತೊಬ್ಬರು ಕಮೆಂಟ್‌ ಮಾಡಿದ್ದು, “ಈ ಗುಟ್ಕಾ ತಿಂದು ಮಕ್ಕಳು ಏನಾದರೂ ಮೃತಪಟ್ಟರೆ ಆಯಾ ಜಾಹೀರಾತು ಕಂಪನಿ ಹಾಗೂ ಜಾಹೀರಾತಿನಲ್ಲಿ ನಟಿಸುವ ಸೆಲೆಬ್ರಿಟಿಗಳು ಪರಿಹಾರ ನೀಡಬೇಕು ಎಂಬ ಕಾನೂನು ಬಂದರೆ ಮಾತ್ರ ಇದೆಲ್ಲ ಸರಿಯಾಗುತ್ತದೆ” ಎಂದಿದ್ದಾರೆ.

ಇದನ್ನೂ ಓದಿ: IPL 2024 : “ಶಾರುಖ್​ ಎಂದೂ ನಮ್ಮನ್ನು ಪ್ರಶ್ನಿಸಿಲ್ಲ”, ಎಲ್​ಎಸ್​​ಜಿ ಮಾಲೀಕನಿಗೆ ತಿರುಗೇಟು ಕೊಟ್ಟ ಗಂಭೀರ್​

Continue Reading
Advertisement
MS Dhoni
ಕ್ರೀಡೆ3 mins ago

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

cauvery dispute
ಕರ್ನಾಟಕ15 mins ago

Cauvery Dispute: ಕರ್ನಾಟಕದಿಂದ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ; ತಮಿಳುನಾಡಿಗೆ CWRC ಚಾಟಿ

MS Dhoni
ಪ್ರಮುಖ ಸುದ್ದಿ19 mins ago

MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

Sri Vedavyasa Jayanti programme at Bengaluru
ಬೆಂಗಳೂರು35 mins ago

Bengaluru News: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ: ವಿ. ಅಪ್ಪಣ್ಣ ಆಚಾರ್ಯ

Opposition party leader r ashok latest statement in Mysuru
ಪ್ರಮುಖ ಸುದ್ದಿ36 mins ago

R Ashok: ಪೊಲೀಸ್‌ ಇಲಾಖೆ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ: ಆರ್.ಅಶೋಕ್ ಆಕ್ರೋಶ

BJP district president N S Hegde pressmeet in Yallapur
ಉತ್ತರ ಕನ್ನಡ38 mins ago

Lok Sabha Election 2024: 2.5 ಲಕ್ಷ ಮತಗಳ ಅಂತರದಿಂದ ಕಾಗೇರಿ ಗೆಲುವು: ಬಿಜೆಪಿ ಜಿಲ್ಲಾಧ್ಯಕ್ಷರ ವಿಶ್ವಾಸ

IPL 2024
ಪ್ರಮುಖ ಸುದ್ದಿ41 mins ago

IPL 2024 : ಮಳೆಯಿಂದ ಪಂದ್ಯ ರದ್ದು, ಕೆಕೆಆರ್​, ಆರ್​ಆರ್​ ಬಳಿಕ ಪ್ಲೇಆಫ್​ಗೇರಿದ ಎಸ್​ಆರ್​ಎಚ್​​

Lady Constable
ದೇಶ2 hours ago

ಗಾಯಕನ ಹಾಡಿಗೆ ಮನಸೋತು ವೇದಿಕೆ ಮೇಲೆಯೇ ಕಿಸ್‌ ಕೊಟ್ಟ ಲೇಡಿ ಕಾನ್‌ಸ್ಟೆಬಲ್;‌ ಈಗ ಮುತ್ತು ತಂದಿದೆ ಕುತ್ತು!

DK Shivakumar in Uttar Pradesh and Strategy in Amethi and Rae Bareli
Lok Sabha Election 20242 hours ago

DK Shivakumar: ಉತ್ತರ ಪ್ರದೇಶದಲ್ಲಿ ಡಿಕೆಶಿ; ಅಮೇಥಿ, ರಾಯ್‌ ಬರೇಲಿಯಲ್ಲಿ ಮಾಡ್ತಾರಾ ಕಮಾಲ್?

IPL 2024
ಪ್ರಮುಖ ಸುದ್ದಿ2 hours ago

IPL 2024 : ವಾಂಖೆಡೆ ಸ್ಟೇಡಿಯಮ್​ನಲ್ಲಿ ಗುದ್ದಾಡಿಕೊಂಡ ಮುಂಬೈ ಇಂಡಿಯನ್ಸ್ ಆಟಗಾರರು; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ10 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು13 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು3 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌