Sukhoi Su-57: ರಷ್ಯಾದ ಸು-57 ಯುದ್ಧ ವಿಮಾನ ಪವರ್‌ಫುಲ್‌; ಆದರೆ ಭಾರತ ಖರೀದಿಸುತ್ತಿಲ್ಲ, ಏಕೆಂದರೆ… - Vistara News

ದೇಶ

Sukhoi Su-57: ರಷ್ಯಾದ ಸು-57 ಯುದ್ಧ ವಿಮಾನ ಪವರ್‌ಫುಲ್‌; ಆದರೆ ಭಾರತ ಖರೀದಿಸುತ್ತಿಲ್ಲ, ಏಕೆಂದರೆ…

ಸುಖೋಯಿ ಸು-57 (Sukhoi Su-57) ಒಂದು ಆಸನದ, ಅವಳಿ ಇಂಜಿನ್‌ಗಳನ್ನು ಹೊಂದಿರುವ ಯುದ್ಧ ವಿಮಾನವಾಗಿದೆ. ಇದು ಆಕ್ರಮಣಕ್ಕೆ ಹೇಳಿ ಮಾಡಿಸಿದಂತಿದೆ.

VISTARANEWS.COM


on

Sukhoi Su-57
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Girish Linganna

ರಷ್ಯಾದ ಮೊದಲ ಸ್ಟೆಲ್ತ್ ಯುದ್ಧ (Sukhoi Su-57) ವಿಮಾನ, ಸುಖೋಯಿ ಸು-57 ಆ ದೇಶದ ವೈಮಾನಿಕ ತಂತ್ರಜ್ಞಾನದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಮೂಲತಃ ಪಿಎಕೆ ಎಫ್ಎ (ಪ್ರಾಸ್ಪೆಕ್ಟಿವ್ ಏರ್‌ಬಾರ್ನ್ ಕಾಂಪ್ಲೆಕ್ಸ್ ಆಫ್ ಫ್ರಂಟ್‌ಲೈನ್ ಏವಿಯೇಷನ್‌) ಎಂದು ಕರೆಯಲಾಗಿದ್ದ ಸು-57 ವಿಮಾನದ ಅಭಿವೃದ್ಧಿ 2000ನೇ ದಶಕದ ಆರಂಭದಲ್ಲಿ ಶುರುವಾಯಿತು. ಇದು ಎಫ್-22 ರಾಪ್ಟರ್‌ನಂತಹ ಎದುರಾಳಿ ಅಮೆರಿಕಾದ ಸ್ಟೆಲ್ತ್ ಯುದ್ಧ ವಿಮಾನಗಳಿಗೆ ನೇರ ಪ್ರತ್ಯುತ್ತರವಾಗಿ ಆರಂಭಗೊಂಡಿತು.

ಆಲೋಚನೆಗಳಿಂದ ಕಾರ್ಯರೂಪಕ್ಕೆ; ನೀಲಿ ನಕ್ಷೆಯಿಂದ ವಾಸ್ತವಕ್ಕೆ ಸು-57 ಹಾದಿ:
ಜನವರಿ 29, 2010ರಂದು, ಸು-57 ಯುದ್ಧ ವಿಮಾನ ಅದರ ಪ್ರಥಮ ಹಾರಾಟವನ್ನು ಯಶಸ್ವಿಯಾಗಿ ಪೂರೈಸಿತು. ಆ ಮೂಲಕ ರಷ್ಯನ್ ವಾಯುಪಡೆ ಒಂದು ನೂತನ ಯುಗವನ್ನು ಪ್ರವೇಶಿಸಿತು. ಈ ಅತ್ಯಾಧುನಿಕ, ಐದನೇ ತಲೆಮಾರಿನ ಯುದ್ಧ ವಿಮಾನವನ್ನು ಹೆಚ್ಚಿನ ಕುಶಲತೆಯಿಂದ ಚಲಿಸುವಂತೆ, ಸ್ಟೆಲ್ತ್ ಸಾಮರ್ಥ್ಯ ಹೊಂದಿರುವಂತೆ, ಹಾಗೂ ಅತ್ಯಾಧುನಿಕ ಏವಿಯಾನಿಕ್ಸ್ ವ್ಯವಸ್ಥೆಗಳೊಡನೆ ನಿರ್ಮಿಸಲಾಗಿದ್ದು, ಹಿಂದಿನ ತಲೆಮಾರಿನ ವಿಮಾನಗಳನ್ನು ಮೀರಿಸುತ್ತದೆ. ಅದರೊಡನೆ, ಭೂಮಿಯ ಮತ್ತು ನೌಕಾಪಡೆಗಳಿಂದ ಎದುರಾಗುವ ಅಪಾಯಗಳನ್ನೂ ನಿವಾರಿಸುವಂತೆ ಇದನ್ನು ನಿರ್ಮಿಸಲಾಗಿದೆ. ಆದರೆ, ಇದರ ಆರಂಭಿಕ ಹಾರಾಟ ನಡೆಸಿ ಹತ್ತು ವರ್ಷಕ್ಕೂ ಹೆಚ್ಚು ಸಮಯ ಕಳೆದಿದ್ದರೂ, ಸು-57 ಹಲವು ಅಡೆತಡೆಗಳು ಮತ್ತು ವಿಳಂಬಗಳನ್ನು ಎದುರಿಸಿತು. ಇದರ ಪರಿಣಾಮವಾಗಿ, ಈ ವಿಮಾನಗಳ ಸರಣಿ ಉತ್ಪಾದನೆ ಮತ್ತು ರಷ್ಯನ್ ವಾಯುಪಡೆಗೆ ಪೂರೈಕೆ ಕೇವಲ 2020ರಲ್ಲಷ್ಟೇ ಆರಂಭವಾಯಿತು.

ಸಾಮರ್ಥ್ಯಗಳ ಅನಾವರಣ; ಸು-57 ವೈಶಿಷ್ಟ್ಯಗಳು

ಸುಖೋಯಿ ಸು-57 ಒಂದು ಆಸನದ, ಅವಳಿ ಇಂಜಿನ್‌ಗಳನ್ನು ಹೊಂದಿರುವ ಯುದ್ಧ ವಿಮಾನವಾಗಿದೆ. ಇದು ಅತ್ಯಂತ ಉತ್ಕೃಷ್ಟ ತಂತ್ರಜ್ಞಾನಗಳನ್ನು ಹೊಂದಿದ್ದು, ಬ್ಲೆಂಡೆಡ್ ವಿಂಗ್ ರಚನೆಯನ್ನು ಹೊಂದಿದೆ. ಈ ಕಾರಣದಿಂದ ಅತ್ಯಂತ ಕನಿಷ್ಠ ರೇಡಾರ್ ಕ್ರಾಸ್ ಸೆಕ್ಷನ್ (ರೇಡಾರ್‌ಗಳಿಂದ ಗುರುತಿಸಲ್ಪಡುವ ಪ್ರಮಾಣ) ಹೊಂದಿದೆ. ಸ್ಟೆಲ್ತ್ ಸಾಮರ್ಥ್ಯಕ್ಕಾಗಿ ಆಂತರಿಕವಾಗಿ ಆಯುಧ ಸಂಗ್ರಹಣಾ ವಿಭಾಗಗಳು, ಆಧುನಿಕ ಸೆನ್ಸರ್‌ಗಳು ಮತ್ತು ಸಂವಹನ ವ್ಯವಸ್ಥೆಗಳನ್ನು ಇದರಲ್ಲಿ ಅಳವಡಿಸಲಾಗಿದೆ. ಸು-57ರ ಇಂಜಿನ್‌ಗಳನ್ನು ವಿಮಾನಕ್ಕೆ ಸೂಪರ್ ಕ್ರೂಸ್ ಸಾಮರ್ಥ್ಯ ಒದಗಿಸುವ ರೀತಿಯಲ್ಲಿ ನಿರ್ಮಿಸಲಾಗಿದ್ದು, ಆಫ್ಟರ್ ಬರ್ನರ್‌ಗಳ ಅವಶ್ಯಕತೆಯಿಲ್ಲದೆ ಸೂಪರ್‌ಸಾನಿಕ್ ಹಾರಾಟ ನಡೆಸುತ್ತದೆ.
ಸು-57 ಸ್ಟೆಲ್ತ್ ಯುದ್ಧ ವಿಮಾನ ಮ್ಯಾಕ್ 2 ವೇಗದಲ್ಲಿ, ಶಬ್ದದ ವೇಗದ ಎರಡು ಪಟ್ಟು ಹೆಚ್ಚಿನ ವೇಗದಲ್ಲಿ, ಅಂದರೆ ಪ್ರತಿ ಗಂಟೆಗೆ 1,500 ಮೈಲಿ ಅಥವಾ 2,414 ಕಿಲೋಮೀಟರ್ ವೇಗವಾಗಿ ಚಲಿಸುತ್ತದೆ. ಈ ಯುದ್ಧ ವಿಮಾನ ಆಫ್ಟರ್ ಬರ್ನರ್‌ಗಳನ್ನು ಬಳಸಿಕೊಳ್ಳದೆಯೇ ಸೂಪರ್‌ಸಾನಿಕ್ ಹಾರಾಟ (ಗರಿಷ್ಠ ಮ್ಯಾಕ್ 1.6) ನಿರ್ವಹಿಸಬಲ್ಲದು. ಇದು ಆಫ್ಟರ್ ಬರ್ನರ್ ಬಳಸಿ ಮ್ಯಾಕ್ 1.6 ವೇಗ ಸಾಧಿಸುವ ಎಫ್-35 ಸ್ಟೆಲ್ತ್ ಯುದ್ಧ ವಿಮಾನಕ್ಕಿಂತ ವೇಗವಾಗಿದೆ. ಸು-57 ಸೂಪರ್ ಮನೂವರೇಬಿಲಿಟಿ (ಅತ್ಯಂತ ಕುಶಲ ಚಲನೆ) ಸಾಮರ್ಥ್ಯ ಹೊಂದಿದ್ದು, ಸಾಮಾನ್ಯ ವಿಮಾನಗಳಿಗೆ ಸಾಧ್ಯವಿಲ್ಲದ ರೀತಿಯಲ್ಲಿ ಗಾಳಿಯಲ್ಲಿ ಹಾರಾಟ ಕೌಶಲ್ಯ ಪ್ರದರ್ಶಿಸಬಲ್ಲದು.

sukhoi su-57 price in rupees

ರಷ್ಯಾದ ಸ್ಟೆಲ್ತ್ ಸಾಮರ್ಥ್ಯವಾದ ಸು-57ರ ಬೆಲೆ ಎಷ್ಟು?

ಸು-57 ರಷ್ಯಾದ ಅತ್ಯಾಧುನಿಕ ಸ್ಟೆಲ್ತ್ ಯುದ್ಧ ವಿಮಾನವಾಗಿದ್ದು, ಬಹಳಷ್ಟು ಕುತೂಹಲ ಮತ್ತು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಇದು ಎಫ್-22 ಮತ್ತು ಎಫ್-35ಗೆ ಪ್ರತಿಸ್ಪರ್ಧಿಯಾಗಿ ವಿನ್ಯಾಸಗೊಂಡಿದ್ದು, ಅತ್ಯಾಧುನಿಕ ವೈಶಿಷ್ಟ್ಯಗಳು ಮತ್ತು ಕುಶಲತೆಯನ್ನು ಹೊಂದಿದೆ. ಆದರೆ ಈ ಆಧುನಿಕ ತಂತ್ರಜ್ಞಾನಗಳ ಕಾರಣದಿಂದಾಗಿ ಈ ಯುದ್ಧ ವಿಮಾನ ಹೆಚ್ಚು ಬೆಲೆಬಾಳುತ್ತದೆ.
ಸು-57 ಯುದ್ಧ ವಿಮಾನದ ವೆಚ್ಚಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳು ಲಭ್ಯವಿಲ್ಲದಿದ್ದರೂ, ಪ್ರತಿಯೊಂದು ವಿಮಾನವೂ 40ರಿಂದ 50 ಮಿಲಿಯನ್ ಡಾಲರ್ ಮೌಲ್ಯ ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಉತ್ಪಾದನಾ ಪ್ರಮಾಣ, ರಫ್ತು ಒಪ್ಪಂದಗಳು, ಹಾಗೂ ಆಧುನಿಕ ಆಯುಧಗಳು ಮತ್ತು ವ್ಯವಸ್ಥೆಗಳ ಅಳವಡಿಕೆಯ ಕಾರಣಗಳಿಂದ ವಿಮಾನದ ಬೆಲೆ ಬದಲಾಗುವ ಸಾಧ್ಯತೆಗಳಿವೆ.

ಭಾರತದ ಕಾರ್ಯತಂತ್ರದ ನಡೆ; ಸುಖೋಯಿ ಸು-57 ಖರೀದಿಗಿಂತ ದೇಶೀಯ ಅಭಿವೃದ್ಧಿಗೆ ಒತ್ತು

ರಷ್ಯಾದೊಡನೆ ಭಾರತ ನಿರಂತರವಾಗಿ ಮಾತುಕತೆಗಳನ್ನು ನಡೆಸುತ್ತಿದ್ದರೂ, ದೀರ್ಘಕಾಲದ ರಕ್ಷಣಾ ಸಹಯೋಗ ಹೊಂದಿದ್ದರೂ, ಭಾರತ ರಷ್ಯಾದಿಂದ ಐದನೇ ತಲೆಮಾರಿನ ಸುಖೋಯಿ ಸು-57 ಯುದ್ಧ ವಿಮಾನ ಖರೀದಿಗೆ ಮುಂದಾಗಿಲ್ಲ. ಇತ್ತೀಚಿನ ಮಾಹಿತಿಗಳ ಪ್ರಕಾರ, ಭಾರತೀಯ ವಾಯುಪಡೆ (ಐಎಎಫ್) ತನ್ನ ದಾಸ್ತಾನಿನಲ್ಲಿ ಸು-57 ಯುದ್ಧ ವಿಮಾನವನ್ನು ಹೊಂದಿಲ್ಲ ಮತ್ತು ಈ ವಿಮಾನ ಖರೀದಿಗೆ ಯಾವುದೇ ಆದೇಶ ನೀಡಿರುವ ವರದಿಗಳು ಬಂದಿಲ್ಲ. ರಕ್ಷಣಾ ತಜ್ಞರು ಮತ್ತು ಭಾರತೀಯ ವಾಯುಪಡೆ ಸುಖೋಯಿ ಸು-57 ಯುದ್ಧ ವಿಮಾನದ ಕುರಿತು ಆಸಕ್ತಿ ಹೊಂದಿದ್ದರೂ, ಭಾರತ ತನ್ನದೇ ಆದ ಐದನೇ ತಲೆಮಾರಿನ ಯುದ್ಧ ವಿಮಾನವನ್ನು ಅಭಿವೃದ್ಧಿ ಪಡಿಸುವ ಆಸಕ್ತಿ ಹೊಂದಿದೆ. ಈ ಸಾಮರ್ಥ್ಯ ಹೊಂದಿರುವ ಅಡ್ವಾನ್ಸ್ಡ್ ಮೀಡಿಯಂ ಕಾಂಬ್ಯಾಟ್ ಏರ್‌ಕ್ರಾಫ್ಟ್ (ಎಎಂಸಿಎ) ಪ್ರಸ್ತುತ ಅಭಿವೃದ್ಧಿಯ ಹಂತದಲ್ಲಿದೆ.

ಸ್ಟೆಲ್ತ್

ಯುದ್ಧ ವಿಮಾನಗಳಲ್ಲಿರುವ ಸ್ಟೆಲ್ತ್ ಸಾಮರ್ಥ್ಯ ಎಂದರೆ ಆ ವಿಮಾನ ರೇಡಾರ್‌ಗಳು ಮತ್ತು ಇತರ ಪತ್ತೆ ವ್ಯವಸ್ಥೆಗಳ ಕಣ್ಣಿಗೆ ಬೀಳದಂತೆ ತಪ್ಪಿಸಿಕೊಂಡು ಚಲಿಸಲು ನೆರವಾಗುವ ತಂತ್ರಜ್ಞಾನವಾಗಿದೆ.

ಏವಿಯಾನಿಕ್ಸ್

ಏವಿಯಾನಿಕ್ಸ್ ಎನ್ನುವುದು ವಿಮಾನಗಳಲ್ಲಿ, ಕೃತಕ ಉಪಗ್ರಹಗಳಲ್ಲಿ, ಹಾಗೂ ಬಾಹ್ಯಾಕಾಶ ನೌಕೆಗಳಲ್ಲಿ ಸಂವಹನ, ಸಂಚರಣೆ (ನ್ಯಾವಿಗೇಶನ್), ಹಾಗೂ ಇತರ ಅವಶ್ಯಕ ಉದ್ದೇಶಗಳಿಗೆ ಬಳಸುವ ಇಲೆಕ್ಟ್ರಾನಿಕ್ ವ್ಯವಸ್ಥೆಗಳಾಗಿವೆ.

ಸೂಪರ್ ಕ್ರೂಸ್

ಸೂಪರ್ ಕ್ರೂಸ್ ಎನ್ನುವುದು ಹೆಚ್ಚಿನ ಪ್ರಮಾಣದಲ್ಲಿ ಇಂಧನ ಬಳಸಿ ಥ್ರಸ್ಟ್ ಹೆಚ್ಚಿಸುವ ಆಫ್ಟರ್ ಬರ್ನರ್‌ಗಳ ಮೇಲೆ ಅವಲಂಬಿತವಾಗಿರದೆ, ಸೂಪರ್‌ಸಾನಿಕ್ ವೇಗವನ್ನು ಕಾಪಾಡಿಕೊಳ್ಳುವ ಯುದ್ಧ ವಿಮಾನದ ಸಾಮರ್ಥ್ಯವಾಗಿದೆ.

ಆಫ್ಟರ್ ಬರ್ನರ್ಸ್

ಆಫ್ಟರ್ ಬರ್ನರ್ಸ್ ಎಂಬುದು ಹೆಚ್ಚಿನ ಪ್ರಮಾಣದ ಇಂಧನವನ್ನು ದಹಿಸಿ, ಹೆಚ್ಚಿನ ಶಕ್ತಿ ಬಿಡುಗಡೆಗೊಳಿಸಿ, ಯುದ್ಧ ವಿಮಾನ ಹೆಚ್ಚಿನ ವೇಗದಲ್ಲಿ ಚಲಿಸುವಂತೆ ಮಾಡುವ ವ್ಯವಸ್ಥೆಯಾಗಿದೆ.

ಸೂಪರ್‌ಸಾನಿಕ್

ಶಬ್ದದ ವೇಗಕ್ಕಿಂತಲೂ ಹೆಚ್ಚಿನ ವೇಗವನ್ನು ಸೂಪರ್‌ಸಾನಿಕ್ ಎಂದು ಕರೆಯಲಾಗುತ್ತದೆ.

ಐದನೇ ತಲೆಮಾರು

ಐದನೇ ತಲೆಮಾರಿನ ಯುದ್ಧ ವಿಮಾನಗಳೆಂದರೆ ಆಧುನಿಕ ಯುದ್ಧ ವಿಮಾನಗಳಾಗಿದ್ದು, ಅವುಗಳನ್ನು ಹಾರಾಟದ ಸಂದರ್ಭದಲ್ಲಿ ಗುರುತಿಸುವುದು ಕಷ್ಟಕರವಾಗಿರುತ್ತದೆ. ಅದರೊಡನೆ, ಐದನೇ ತಲೆಮಾರಿನ ಯುದ್ಧ ವಿಮಾನಗಳು ಆಧುನಿಕ ತಂತ್ರಜ್ಞಾನ ಮತ್ತು ಕಂಪ್ಯೂಟರ್ ಸಿಸ್ಟಮ್‌ಗಳು, ಮಿಲಿಟರಿ ಕಾರ್ಯಾಚರಣೆಯ ಇನ್ನೊಂದು ಭಾಗದೊಡನೆ ಸಂವಹನ ನಡೆಸುವ ಮತ್ತು ಮಾಹಿತಿ ರವಾನಿಸುವ ಸಾಮರ್ಥ್ಯ, ಹೆಚ್ಚಿನ ಇಂಧನ ಬಳಸದೆ ಸೂಪರ್‌ಸಾನಿಕ್ ವೇಗದಲ್ಲಿ ಚಲಿಸುವ ಸಾಮರ್ಥ್ಯ ಹೊಂದಿರುತ್ತವೆ.

(ಲೇಖಕರು ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕರು)

ಇದನ್ನೂ ಓದಿ: Israel Hamas War : ಯಾಹ್ಯಾ, ಮೊಹಮ್ಮದ್, ಮರ್ವಾನ್, ಇಸ್ಮಾಯಿಲ್, ಖಾಲೆದ್: ಹಮಾಸ್‌ನ ಅತ್ಯುಗ್ರ ಮೆದುಳುಗಳಿವು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

Amit Shah: ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಊ ಮತ್ತು ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರದ್ದುಗೊಳಿಸುವಂತೆ ಅಮಿತ್‌ ಶಾ ಈ ವಿಡಿಯೋದಲ್ಲಿ ಕರೆ ನೀಡಿದ್ದಾರೆ ಎಂದು ಹೇಳಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿತ್ತು.

VISTARANEWS.COM


on

Amit Shah doctored video case
Koo

ಹೊಸದಿಲ್ಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Home minister Amit Shah) ಅವರ ವಿಡಿಯೋವನ್ನು ತಿರುಚಿ (doctored video case) ಪ್ರಸಾರ ಮಾಡುತ್ತಿರುವ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷ (Aam Admi Party- AAP) ಮತ್ತು ಕಾಂಗ್ರೆಸ್‌ (congress) ಪಕ್ಷಕ್ಕೆ ಸಂಬಂಧಿಸಿದ ಮೂವರನ್ನು ಬಂಧಿಸಲಾಗಿದೆ.

ಪರಿಶಿಷ್ಟ ಜಾತಿ (ಎಸ್‌ಸಿ), ಪರಿಶಿಷ್ಟ ಪಂಗಡಗಊ ಮತ್ತು ಇತರೆ ಹಿಂದುಳಿದ ವರ್ಗಗಳ (OBC) ಮೀಸಲಾತಿಯನ್ನು ರದ್ದುಗೊಳಿಸಲಾಗುವುದು ಎಂದು ಅಮಿತ್‌ ಶಾ ಈ ವಿಡಿಯೋದಲ್ಲಿ ಕರೆ ನೀಡಿದ್ದಾರೆ ಎಂದು ಹೇಳಿ ವಿಡಿಯೋವನ್ನು ಹಂಚಿಕೊಳ್ಳಲಾಗುತ್ತಿತ್ತು. ಪ್ರಕರಣದಲ್ಲಿ ಅಹಮದಾಬಾದ್ ಸೈಬರ್ ಕ್ರೈಂ ವಿಭಾಗದ ಪೊಲೀಸರು ಇಬ್ಬರನ್ನು ಬಂಧಿಸಿದ್ದರೆ, ಮತ್ತೊಬ್ಬ ವ್ಯಕ್ತಿಯನ್ನು ಅಸ್ಸಾಂನಿಂದ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ನಕಲಿ ವೀಡಿಯೊವನ್ನು ಕಾಂಗ್ರೆಸ್ ಹರಡುತ್ತಿದೆ ಎಂದು ಅಮಿತ್‌ ಶಾ, ದೂಷಿಸಿದ್ದಾರೆ. ಇದು ಆ ಪಕ್ಷದ ಹತಾಶೆ ಮತ್ತು ನಿರಾಶೆಯ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವರ ಈ ತಿರುಚಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿಯು ಮೀಸಲಾತಿಯನ್ನು ರದ್ದುಗೊಳಿಸಲು ತಯಾರಿ ನಡೆಸುತ್ತಿದೆ ಎಂದು ಹೇಳಿಕೊಂಡು ಹಲವಾರು ಕಾಂಗ್ರೆಸ್ ನಾಯಕರು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳಲ್ಲಿ ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಮಂಗಳವಾರ ಗುವಾಹಟಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಸಚಿವರು, “ಬಿಜೆಪಿ 400 ಸ್ಥಾನಗಳನ್ನು ದಾಟಿದ ನಂತರ ಮೀಸಲಾತಿಯನ್ನು ಕೊನೆಗೊಳಿಸುತ್ತದೆ ಎಂದು ಕಾಂಗ್ರೆಸ್ ತಪ್ಪು ಮಾಹಿತಿಯನ್ನು ಹರಡುತ್ತಿದೆ” ಎಂದು ಹೇಳಿದರು. “ಈ ಆರೋಪ ಸುಳ್ಳು ಮತ್ತು ಆಧಾರರಹಿತವಾಗಿವೆ. ಬಿಜೆಪಿಯು ಎಸ್‌ಸಿ, ಎಸ್‌ಟಿ ಮತ್ತು ಒಬಿಸಿಗಳಿಗೆ ಮೀಸಲಾತಿಯನ್ನು ಬೆಂಬಲಿಸುತ್ತದೆ ಮತ್ತು ಯಾವಾಗಲೂ ರಕ್ಷಕನಾಗಿ ತನ್ನ ಪಾತ್ರವನ್ನು ನಿರ್ವಹಿಸುತ್ತದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ” ಎಂದು ಅವರು ಹೇಳಿದರು.

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಉಸ್ತುವಾರಿ ವಹಿಸಿಕೊಂಡಾಗಿನಿಂದ ರಾಜಕೀಯವನ್ನು ಇನ್ನಷ್ಟು ತಳಮಟ್ಟಕ್ಕೆ ಕೊಂಡೊಯ್ಯಲು ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು. “ನಕಲಿ ವೀಡಿಯೊಗಳನ್ನು ಪ್ರಸಾರ ಮಾಡುವ ಮೂಲಕ ಸಾರ್ವಜನಿಕ ಬೆಂಬಲವನ್ನು ಪಡೆಯುವ ಅವರ ಪ್ರಯತ್ನವು ಖಂಡನೀಯ. ಭಾರತೀಯ ರಾಜಕೀಯದಲ್ಲಿ ಯಾವುದೇ ಪಕ್ಷವು ಎಂದಿಗೂ ಹೀಗೆ ಮಾಡಬಾರದು ಎಂದು ನಾನು ನಂಬುತ್ತೇನೆ” ಎಂದಿದ್ದಾರೆ.

ಏತನ್ಮಧ್ಯೆ, ನಕಲಿ ವೀಡಿಯೋವನ್ನು ಹಂಚಿಕೊಂಡ ಆರೋಪದ ಮೇಲೆ ಮಹಾರಾಷ್ಟ್ರ ಯೂತ್ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಮತ್ತು ಇತರ 16 ಜನರ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಗೊತ್ತಾಗಿದೆ. ಮುಂಬೈ ಬಿಜೆಪಿ ಕಾರ್ಯಾಧ್ಯಕ್ಷ ಪ್ರತೀಕ್ ಕರ್ಪೆ ಅವರು ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಸೈಬರ್ ಪೊಲೀಸ್ ಠಾಣೆಯಲ್ಲಿ ಸೋಮವಾರ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ.

ಇದನ್ನೂ ಓದಿ: Hassan pen drive case: “ಇದನ್ನು ಸಹಿಸಲು ಸಾಧ್ಯವಿಲ್ಲ…” ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಖಡಕ್‌ ಎಚ್ಚರಿಕೆ

Continue Reading

ದೇಶ

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Toyota Kirloskar Motor: ಟೊಯೊಟಾ ಕಿರ್ಲೋಸ್ಕರ್ ಮೋಟಾರ್ ಟೊಯೊಟಾ ರುಮಿಯಾನ್ G-AT ನೂತನ ಗ್ರೇಡ್ ಅನ್ನು ಪರಿಚಯಿಸಿದ್ದು, 1.5-ಲೀಟರ್ ಸೀರಿಸ್ ಪೆಟ್ರೋಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನಿಂದ ನಿಯಂತ್ರಿಸಲ್ಪಡುತ್ತದೆ. ನಿಯೋ ಡ್ರೈವ್ (ಐಎಸ್‌ಜಿ) ತಂತ್ರಜ್ಞಾನವನ್ನು ಒಳಗೊಂಡಿದೆ.

VISTARANEWS.COM


on

Toyota Kirloskar Motor Introduces New G-AT Grade of Toyota Rumion
Koo

ಬೆಂಗಳೂರು: ಟೊಯೊಟಾ ರುಮಿಯಾನ್‌ನ G-AT ಹೊಸ ಸರಣಿಯ ಅಧಿಕೃತ ಬುಕ್ಕಿಂಗ್ ಆರಂಭಿಸಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (Toyota Kirloskar Motor) ಬೆಲೆಯನ್ನು ಇಂದು ಘೋಷಿಸಿದ್ದು, ಹೊಸದಾಗಿ ಬಿಡುಗಡೆಯಾದ G-AT ವೇರಿಯಂಟ್‌ ಸರಿಸಾಟಿಯಿಲ್ಲದ ಸ್ಪೇಸ್ ಮತ್ತು ಕಂಫರ್ಟ್‌, ಅತ್ಯುತ್ತಮ ಇಂಧನ ದಕ್ಷತೆ, ಸ್ಟೈಲಿಶ್ ಮತ್ತು ಪ್ರೀಮಿಯಂ ಎಕ್ಸ್‌ಟೀರಿಯರ್ ಡಿಸೈನ್‌ ಒಳಗೊಂಡಿದೆ.

ಟಿಕೆಎಂನ ಇತ್ತೀಚಿನ ಆಫರ್ ಬೆಲೆಯು 13 ಲಕ್ಷ ರೂ. ಗಳ ಆಕರ್ಷಕ ಎಕ್ಸ್ ಶೋರೂಂ ಬೆಲೆಯಲ್ಲಿ ಲಭ್ಯವಿದೆ. ಡೆಲಿವರಿ ಮೇ 5 ರಿಂದ ಪ್ರಾರಂಭವಾಗುವ ನಿರೀಕ್ಷೆಯಿದ್ದು, ಗ್ರಾಹಕರು ಯಾವುದೇ ಅಧಿಕೃತ ಡೀಲರ್‌ಶಿಪ್‌ಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ 11 ಸಾವಿರ ರೂ. ಬುಕಿಂಗ್ ಶುಲ್ಕದೊಂದಿಗೆ ವಾಹನವನ್ನು ಬುಕ್ ಮಾಡಬಹುದಾಗಿದೆ.

ಇದನ್ನೂ ಓದಿ: Labour Day 2024: ಕಾರ್ಮಿಕ ದಿನಾಚರಣೆ ಸಂದರ್ಭದಲ್ಲಿ ಉದ್ಯೋಗಿಗಳಿಗೆ ಉಪಯುಕ್ತ ಹಣಕಾಸು ಟಿಪ್ಸ್‌ ಇಲ್ಲಿದೆ

ಟೊಯೊಟಾ ರುಮಿಯಾನ್ G-AT ವೇರಿಯಂಟ್ 1.5-ಲೀಟರ್ ಸೀರಿಸ್ ಪೆಟ್ರೋಲ್ ಎಂಜಿನ್‌ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್‌ನಿಂದ ನಿಯಂತ್ರಿಸಲ್ಪಡುತ್ತದೆ. ನಿಯೋ ಡ್ರೈವ್ (ಐಎಸ್‌ಜಿ) ತಂತ್ರಜ್ಞಾನವನ್ನು ಒಳಗೊಂಡಿದೆ. ಪೆಟ್ರೋಲ್ ಗ್ರೇಡ್ 75.8 ಕಿಲೋವ್ಯಾಟ್ @ 6000 rpm ಪವರ್ ಮತ್ತು 136.8 Nm @ 4400 ಆರ್‌ಪಿಎಂ ಟಾರ್ಕ್ ಅನ್ನು ಹೊಂದಿದೆ. ಸಿಎನ್‌ಜಿ ಗ್ರೇಡ್ 64.6 ಕಿಲೋವ್ಯಾಟ್ ಔಟ್‌ಪುಟ್ @ 5500 rpm ಮತ್ತು 121.5 Nm@4200 rpm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಟೊಯೊಟಾ ರುಮಿಯಾನ್ ಈಗ ನಿಯೋ ಡ್ರೈವ್ MT ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಎಸ್, ಜಿ ಮತ್ತು ವಿ ಗ್ರೇಡ್ ಮತ್ತು ನಿಯೋ ಡ್ರೈವ್ AT: ಎಸ್, ಜಿ ಮತ್ತು ವಿ ಗ್ರೇಡ್. ಇ-ಸಿಎನ್ ಜಿ: ಎಸ್ ಗ್ರೇಡ್ ಗ್ರಾಹಕರಿಗೆ ವ್ಯಾಪಕ ಶ್ರೇಣಿಯ ಆಯ್ಕೆಗಳನ್ನು ನೀಡುತ್ತದೆ.

G-AT ವೇರಿಯಂಟ್ ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಹೊಂದಿರುವ 17.78 ಸೆಂ.ಮೀ ಸ್ಮಾರ್ಟ್ ಪ್ಲೇ ಕ್ಯಾಸ್ಟ್ ಟಚ್ ಸ್ಕ್ರೀನ್ ಆಡಿಯೊ ಸಿಸ್ಟಮ್ ಸೇರಿದಂತೆ ಸುಧಾರಿತ ತಂತ್ರಜ್ಞಾನವನ್ನು ಒಳಗೊಂಡಿದೆ. ಟೊಯೊಟಾ i-Connect ಹೊಂದಿರುವ ಇದು ಹವಾಮಾನ, ಲಾಕ್ / ಅನ್ಲಾಕ್, ಹಜಾರ್ಡ್ ಲೈಟ್ಸ್ ಸೇರಿದಂತೆ ಅನೇಕ ಸಂಪರ್ಕಿತ ವೈಶಿಷ್ಟ್ಯಗಳಿಗಾಗಿ ರಿಮೋಟ್ ಕಂಟ್ರೋಲ್ ಅನ್ನು ನೀಡುತ್ತದೆ. ಟೊಯೊಟಾ ರುಮಿಯಾನ್ ಡ್ಯುಯಲ್ ಫ್ರಂಟ್ ಏರ್ ಬ್ಯಾಗ್ಸ್, ಇಬಿಡಿಯೊಂದಿಗೆ ಎಬಿಎಸ್, ಹಿಲ್ ಹೋಲ್ಡ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ (ಇಎಸ್ ಪಿ) ಸೇರಿದಂತೆ ಹಲವು ಸುಧಾರಿತ ಸುರಕ್ಷತಾ ವೈಶಿಷ್ಟ್ಯಗಳೊಂದಿಗೆ ತನ್ನ ಮಾಲೀಕರ ಸುರಕ್ಷತೆಗೆ ಆದ್ಯತೆ ನೀಡುತ್ತದೆ.

ಇದನ್ನೂ ಓದಿ: IPL 2024: ಐಪಿಎಲ್​ನಲ್ಲಿ ವಿಶೇಷ ದಾಖಲೆ ಬರೆದ ಕುಲ್​ದೀಪ್, ನರೈನ್

ಈ ಕುರಿತು ಟಿಕೆಎಂನ ಸೇಲ್ಸ್ ಅಂಡ್ ಸ್ಟ್ರಾಟಜಿಕ್ ಮಾರ್ಕೆಟಿಂಗ್ ನ ಉಪಾಧ್ಯಕ್ಷ ಶಬರಿ ಮನೋಹರ್ ಮಾತನಾಡಿ, ಟೊಯೊಟಾ ರುಮಿಯಾನ್ ಸೀರಿಸ್‌ಗೆ ಹೊಸ ಗ್ರೆಡ್ ಸೇರ್ಪಡೆಯನ್ನು ಘೋಷಿಸಲು ನಾವು ಉತ್ಸುಕರಾಗಿದ್ದೇವೆ, ಇದರಿಂದಾಗಿ ಗ್ರಾಹಕರಿಗೆ ಅವರ ಚಲನಶೀಲತೆ ಅಗತ್ಯತೆಗಳು ಮತ್ತು ಅವಶ್ಯಕತೆಗಳ ಆಧಾರದ ಮೇಲೆ ವ್ಯಾಪಕ ಆಯ್ಕೆಗಳನ್ನು ನೀಡುತ್ತದೆ. G-AT ವೇರಿಯಂಟ್‌ನ ಬುಕಿಂಗ್ ಈಗ ತೆರೆದಿದೆ. ಆಗಸ್ಟ್ 23ರಲ್ಲಿ ಬಿಡುಗಡೆಯಾದಾಗಿನಿಂದ ಟೊಯೊಟಾ ರುಮಿಯಾನ್ ಗ್ರಾಹಕರಲ್ಲಿ ಹೆಚ್ಚಿನ ಉತ್ಸಾಹವನ್ನು ಸೃಷ್ಟಿಸಿದೆ. ಇದು ಹೆಚ್ಚಿನ ಎನ್‌ಕ್ವೈರಿ ಮತ್ತು ಆರೋಗ್ಯಕರ ಬುಕಿಂಗ್‌ಗೆ ಕಾರಣವಾಗಿದೆ. ನಮ್ಮ ಮೌಲ್ಯಯುತ ಗ್ರಾಹಕರು ತೋರಿಸಿದ ಪ್ರೀತಿ ಮತ್ತು ನಂಬಿಕೆಯನ್ನು ನಾವು ತುಂಬು ಹೃದಯದಿಂದ ಪ್ರಶಂಸಿಸುತ್ತೇವೆ ಎಂದು ತಿಳಿಸಿದ್ದಾರೆ.

ಟೊಯೊಟಾ MPV ಸಿಗ್ನೇಚರ್ ಫ್ರಂಟ್ ಗ್ರಿಲ್, ಕ್ರೋಮ್ ಫಿನಿಶ್‌ನೊಂದಿಗೆ ಫ್ರಂಟ್ ಬಂಪರ್, ಬ್ಯಾಕ್ ಡೋರ್ ಕ್ರೋಮ್ ಡಿಸೈನ್ ನೊಂದಿಗೆ ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. ಅತ್ಯಾಧುನಿಕ ಡ್ಯುಯಲ್ ಟೋನ್ ಅಲಾಯ್ ವೀಲ್ಸ್, ದೃಢವಾದ ಗುಣಲಕ್ಷಣಗಳೊಂದಿಗೆ ರಫ್ ಲುಕ್‌ಗಾಗಿ ರುಮಿಯನ್ ಸ್ಟೈಲಿಶ್ ಮತ್ತು ಪ್ರೀಮಿಯಂ ಎಕ್ಸ್‌ಟೀರಿಯರ್ ಡಿಸೈನ್ ಅನ್ನು ಹೊಂದಿದೆ. ಐಷಾರಾಮಿ ಒಳಾಂಗಣವು ಮರದ ಫಿನಿಶ್ ಡ್ಯಾಶ್ ಬೋರ್ಡ್ ಮತ್ತು ಡೋರ್ ಟ್ರಿಮ್‌ಗಳೊಂದಿಗೆ ಪ್ರೀಮಿಯಂ ಡ್ಯುಯಲ್-ಟೋನ್, ಪ್ರೀಮಿಯಂ ಡ್ಯುಯಲ್-ಟೋನ್ ಒಳಾಂಗಣ ಮತ್ತು ಅನುಕೂಲಕರ ಸೌಲಭ್ಯಗಳನ್ನು ನೀಡುತ್ತದೆ.

ಇದನ್ನೂ ಓದಿ: Maoists killed: ಭದ್ರತಾ ಪಡೆಗಳ ಜತೆ ಗುಂಡಿನ ಚಕಮಕಿ, ಏಳು ಮಾವೋವಾದಿಗಳು ಫಿನಿಶ್

ಟೊಯೊಟಾ ರುಮಿಯಾನ್ ಅತ್ಯುನ್ನತ ಸುರಕ್ಷತಾ ಮಾನದಂಡಗಳನ್ನು ಸಹ ನೋಡುತ್ತದೆ. ಇದು ಡ್ಯುಯಲ್ ಫ್ರಂಟ್ ಏರ್ ಬ್ಯಾಗ್‌ಗಳು, ಇಬಿಡಿಯೊಂದಿಗೆ ಎಬಿಎಸ್ ಮತ್ತು ಬ್ರೇಕ್ ಅಸಿಸ್ಟ್, ಎಂಜಿನ್ ಇಮೊಬೈಲೈಜರ್, ಇಎಸ್‌ಪಿ, ಹಿಲ್ ಹೋಲ್ಡ್ ಅಸಿಸ್ಟ್ ಮತ್ತು ಐಎಸ್ ಒ ಫಿಕ್ಸ್ ಚೈಲ್ಡ್ ಸೀಟ್ ಆಂಕೋರೇಜ್‌ಗಳೊಂದಿಗೆ ಬಿಡುಗಡೆಯಾಗುತ್ತಿದೆ. ಪ್ರಿಟೆನ್ಷನರ್‌ಗಳು ಮತ್ತು ಫೋರ್ಸ್ ಲಿಮಿಟರ್‌ಗಳೊಂದಿಗೆ ಫ್ರಂಟ್ ಸೀಟ್ ಬೆಲ್ಟ್‌ಗಳು, ಎಲ್ಲಾ ಸೀಟ್‌ಗಳಿಗೆ ಸೀಟ್ ಬೆಲ್ಟ್ ರಿಮೈಂಡರ್ ಮತ್ತು ಹೈಸ್ಪೀಡ್ ಅಲರ್ಟ್ ಸಿಸ್ಟಮ್ ಹೊಂದಿದೆ.

Continue Reading

ದೇಶ

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Covishield Vaccine: ಕೋವಿಶೀಲ್ಡ್, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟ ಲಸಿಕೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಅಪರೂಪದ ಸಂದರ್ಭಗಳಲ್ಲಿ ಅದು ಟಿಟಿಎಸ್‌ ಸ್ಥಿತಿಗೆ ಕಾರಣವಾಗಬಹುದು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಲಸಿಕೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ನೀಡಲಾಗಿದೆ.

VISTARANEWS.COM


on

covishield vaccine
Koo

ಹೊಸದಿಲ್ಲಿ: ಬ್ರಿಟಿಷ್ ಔಷಧೀಯ ದೈತ್ಯ ಕಂಪನಿ ಅಸ್ಟ್ರಾಜೆನೆಕಾ (AstraZeneca), ತನ್ನ ಕೋವಿಡ್-19 (Covid 19) ಲಸಿಕೆ ಕೋವಿಶೀಲ್ಡ್ (Covishield Vaccine)‌ ಇದು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (Thrombosis with Thrombocytopenia Syndrome – TTS) ಎಂಬ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕಂಪನಿಯ ವಿರುದ್ಧ ದಾಖಲಾಗಿರುವ ಒಂದು ಮೊಕದ್ದಮೆಯ ಸಂದರ್ಭದಲ್ಲಿ ಇದನ್ನು ಒಪ್ಪಿಕೊಳ್ಳಲಾಗಿದೆ.

ಈ ಮೊಕದ್ದಮೆಯಲ್ಲಿ ಲಸಿಕೆಗೆ ಸಂಬಂಧಿಸಿ ಗಂಭೀರ ದೈಹಿಕ ಹಾನಿ ಮತ್ತು ಸಾವುಗಳನ್ನು ಆರೋಪಿಸಲಾಗಿದೆ. ಕೋವಿಶೀಲ್ಡ್, ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯ ಅಭಿವೃದ್ಧಿಪಡಿಸಿದ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ತಯಾರಿಸಲ್ಪಟ್ಟ ಲಸಿಕೆ. ನ್ಯಾಯಾಲಯದ ದಾಖಲೆಗಳ ಪ್ರಕಾರ ಅಪರೂಪದ ಸಂದರ್ಭಗಳಲ್ಲಿ ಅದು ಟಿಟಿಎಸ್‌ ಸ್ಥಿತಿಗೆ ಕಾರಣವಾಗಬಹುದು. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಈ ಲಸಿಕೆಯನ್ನು ಭಾರತದಾದ್ಯಂತ ವ್ಯಾಪಕವಾಗಿ ನೀಡಲಾಗಿದೆ.

ಟಿಟಿಎಸ್ ಎಂದರೇನು?

ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಜೊತೆಗಿನ ಥ್ರಂಬೋಸಿಸ್ ಅಪರೂಪದ ಸ್ಥಿತಿಯಾಗಿದ್ದು, ದೇಹದಲ್ಲಿನ ಅಸಾಮಾನ್ಯ ಸ್ಥಳಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆ ಉಂಟಾಗುತ್ತದೆ. ರಕ್ತದಲ್ಲಿನ ಪ್ಲೇಟ್‌ಲೆಟ್‌ಗಳ ಸಂಖ್ಯೆಯು ಕಡಿಮೆಯಾಗುತ್ತದೆ. ಪ್ಲೇಟ್‌ಲೆಟ್‌ಗಳು ರಕ್ತ ಹೆಪ್ಪುಗಟ್ಟಲು ಸಹಾಯ ಮಾಡುವ ಸಣ್ಣ ಕೋಶಗಳು. ಆದ್ದರಿಂದ ಅವು ತುಂಬಾ ಕಡಿಮೆ ಇರುವುದು ಅಪಾಯಕಾರಿ.

ಅಡೆನೊವೈರಲ್ ವೆಕ್ಟರ್ COVID-19 ಲಸಿಕೆಗಳನ್ನು ಪಡೆದ ಜನರಲ್ಲಿ ಈ ಸ್ಥಿತಿಯನ್ನು ಗಮನಿಸಲಾಗಿದೆ. ಉದಾಹರಣೆಗೆ Vaxzevria, Covishield (AstraZeneca) ಮತ್ತು Johnson & Johnson/Janssen COVID-19 ಲಸಿಕೆ ಪಡೆದವರಲ್ಲಿ. ದೇಹದ ರೋಗನಿರೋಧಕ ವ್ಯವಸ್ಥೆಯು ಲಸಿಕೆಗೆ ಪ್ರತಿಕ್ರಿಯಿಸಿ, ರಕ್ತದ ಹೆಪ್ಪುಗಟ್ಟುವಿಕೆಯಲ್ಲಿ ಒಳಗೊಂಡಿರುವ ಪ್ರೋಟೀನ್ ಮೇಲೆ ದಾಳಿ ಮಾಡುವ ಪ್ರತಿಕಾಯಗಳನ್ನು ತಯಾರಿಸುವುದರಿಂದ TTS ಸಂಭವಿಸುತ್ತದೆ.

TTS ಅನ್ನು 2 ಹಂತಗಳಾಗಿ ವರ್ಗೀಕರಿಸಲಾಗಿದೆ.

ಹಂತ 1

  • ಅಪರೂಪದ ರಕ್ತ ಹೆಪ್ಪುಗಟ್ಟುವಿಕೆ, ಮೆದುಳು ಅಥವಾ ಕರುಳಿನಲ್ಲಿ, ಕೆಲವೊಮ್ಮೆ ಕಾಲುಗಳು ಅಥವಾ ಶ್ವಾಸಕೋಶಗಳಲ್ಲಿ.
  • ಕಡಿಮೆ ಪ್ಲೇಟ್ಲೆಟ್ ಎಣಿಕೆ (ಪ್ರತಿ ಮೈಕ್ರೋಲೀಟರ್‌ಗೆ 150,000ಕ್ಕಿಂತ ಕಡಿಮೆ).
  • ಧನಾತ್ಮಕ PF4 ವಿರೋಧಿ ELISA ಪರೀಕ್ಷೆಗಳು ರೋಗನಿರ್ಣಯವನ್ನು ಖಚಿತಪಡಿಸಲು ಸಹಾಯ ಮಾಡುತ್ತದೆ.
  • ಹಂತ 1 ಪ್ರಕರಣಗಳು ಸಾಮಾನ್ಯವಾಗಿ ಹೆಚ್ಚು ತೀವ್ರವಾಗಿರುತ್ತವೆ ಮತ್ತು ಅಪಾಯಕಾರಿಯಾಗಿರುತ್ತವೆ.
  • ಇದು ಯುವ ಜನರಲ್ಲಿ ಹೆಚ್ಚು ಸಾಮಾನ್ಯವಾಗಿದೆ.

ಹಂತ 2

  • ಕಾಲುಗಳು ಅಥವಾ ಶ್ವಾಸಕೋಶಗಳಲ್ಲಿರುವಂತೆ ಸಾಮಾನ್ಯ ರಕ್ತ ಹೆಪ್ಪುಗಟ್ಟುವಿಕೆ.
  • ಕಡಿಮೆ ಪ್ಲೇಟ್ಲೆಟ್ ಎಣಿಕೆ (ಪ್ರತಿ ಮೈಕ್ರೋಲೀಟರ್‌ಗೆ 150,000ಕ್ಕಿಂತ ಕಡಿಮೆ).
  • ರೋಗನಿರ್ಣಯಕ್ಕೆ ಧನಾತ್ಮಕ PF4 ELISA ಪರೀಕ್ಷೆ ಅಗತ್ಯ.

ರೋಗಲಕ್ಷಣಗಳು

TTSನ ಲಕ್ಷಣಗಳು ತೀವ್ರವಾದ ತಲೆನೋವು, ಹೊಟ್ಟೆ ನೋವು, ಕಾಲುಗಳಲ್ಲಿ ಊತ, ಉಸಿರಾಟದ ತೊಂದರೆ, ಚಿಂತನೆಯಲ್ಲಿ ಸಮಸ್ಯೆ, ದೇಹದ ಕಂಪನಗಳು. ಲಸಿಕೆ ಪಡೆದ ನಂತರ ಯಾರಲ್ಲಾದರೂ ಈ ಚಿಹ್ನೆಗಳು ಕಂಡುಬಂದರೆ ಅವರು ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು.

ಇದನ್ನೂ ಓದಿ: Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

Continue Reading

ದೇಶ

Supreme Court: 14 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿ, ಬಳಿಕ ನಿರ್ಧಾರ ವಾಪಸ್‌ ಪಡೆದ ಸುಪ್ರೀಂ

Supreme Court: ಅತ್ಯಾಚಾರ ಸಂತ್ರಸ್ತ ಬಾಲಕಿಯ ಗರ್ಭಪಾತಕ್ಕೆ ನೀಡಲಾಗಿದ್ದ ಆದೇಶವನ್ನು ಸುಪ್ರೀಂಕೋರ್ಟ್‌ ಹಿಂಪಡೆದಿದ್ದು, ಬಾಲಕಿಯ ಪೋಷಕರೂ ಕೂಡ ಕೋರ್ಟ್‌ ತೀರ್ಪಿಗೆ ತಲೆಬಾಗಿದ್ದಾರೆ

VISTARANEWS.COM


on

Supreme Court
Koo

ನವದೆಹಲಿ: ಅತ್ಯಾಚಾರ ಸಂತ್ರಸ್ತ ಬಾಲಕಿಯ ಗರ್ಭಪಾತ(abortion)ಕ್ಕೆ ನೀಡಲಾಗಿದ್ದ ಆದೇಶವನ್ನು ಸುಪ್ರೀಂಕೋರ್ಟ್‌(Supreme Court) ಹಿಂಪಡೆದಿದ್ದು, ಬಾಲಕಿಯ ಪೋಷಕರೂ ಕೂಡ ಕೋರ್ಟ್‌ ತೀರ್ಪಿಗೆ ತಲೆಬಾಗಿದ್ದಾರೆ. ತಮ್ಮ ಮಗಳಿಗೆ ಸುಸೂತ್ರವಾಗಿ ಹೆರಿಗೆಯಾಗುವವರೆಗೆ ಕಾಯುತ್ತೇವೆ ಎಂದು ಹೇಳಿದ್ದಾರೆ. ಗರ್ಭದಲ್ಲಿರುವ ಮಗುವಿನ ಹಿತದೃಷ್ಟಿಯಿಂದ ಈ ತೀರ್ಪು ನೀಡುವುದಾಗಿ ಕೋರ್ಟ್‌ ಹೇಳಿದೆ. ಅತ್ಯಾಚಾರಕ್ಕೆ ಒಳಗಾಗಿ ಸಂತ್ರಸ್ತ ಬಾಲಕಿ(Victim) 30 ವಾರಗಳ ಗರ್ಭಿಣಿ(30 weeks Pregnant) ಯಾಗಿದ್ದು, ಗರ್ಭಪಾತಕ್ಕೆ ಕೋರಿ ಬಾಲಕಿಯ ತಾಯಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್‌ ಮೊದಲಿಗೆ ಗರ್ಭಪಾತಕ್ಕೆ ಅನಮತಿ ನೀಡಿತ್ತು.

ಏನಿದು ಪ್ರಕರಣ?

ಮಹಾರಾಷ್ಟ್ರ ಮೂಲದ ಈ ಬಾಲಕಿ ನಿಗೂಢವಾಗಿ ಕಾಣೆಯಾಗಿದ್ದಳು. ಈ ಬಗ್ಗೆ ಆಕೆ ತಾಯಿ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಬಾಲಕಿ ರಾಜಸ್ಥಾನದಲ್ಲಿ ಗರ್ಭಿಣಿಯಾಗಿ ಪತ್ತೆಯಾಗಿದ್ದಳು. ನಂತರ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ ಮಹಿಳೆಯ ಗರ್ಭಾವಸ್ಥೆ 24 ವಾರಗಳು ದಾಟಿದ್ದರಿಂದ ಆಕೆಯ ಗರ್ಭಪಾತಕ್ಕೆ ಅವಕಾಶ ನೀಡಲು ಏ.4ರಂದು ಬಾಂಬೆ ಹೈಕೋರ್ಟ್‌ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಮಹಿಳೆಯ ತಾಯಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಸುಪ್ರೀಂ ಕೋರ್ಟ್‌ ಏನು ತೀರ್ಪು ಏನು?

ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿದ್ದ ಕೋರ್ಟ್‌, ವೈದ್ಯಕೀಯ ವರದಿಯ ಪ್ರಕಾರ ಯುವತಿಯ ಇಚ್ಛೆಗೆ ವಿರುದ್ಧ ಗರ್ಭಧಾರಣೆ ಮುಂದುವರೆಸುವುದು ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಧಿ 142ರ ವಿಶೇಷ ಅಧಿಕಾರವನ್ನು ಬಳಸಿ ಆಕೆಯ ಗರ್ಭಪಾತಕ್ಕೆ ಮುಂಬೈನ ಸಿಯಾನ್‌ನಲ್ಲಿರುವ ಲೋಕಮಾನ್ಯ ತಿಲಕ್‌ ವೈದ್ಯಕೀಯ ಅಸ್ಪತ್ರೆಗೆ ನಿರ್ದೇಶಿಸಿತ್ತು. ಇದೀಗ ಮತ್ತೆ ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ಇದ್ದ ನ್ಯಾಯಪೀಠ, ಗರ್ಭದಲ್ಲಿರುವ ಮಗುವಿನ ಹಿತಾಸಕ್ತಿಯನ್ನು ನೋಡಿಕೊಂಡು ಗರ್ಭಪಾತಕ್ಕೆ ನೀಡಲಾಗಿದ್ದ ಅನುಮತಿಯನ್ನು ವಾಪಾಸ್‌ ಪಡೆಯುತ್ತಿರುವುದಾಗಿ ತೀರ್ಪಿನಲ್ಲಿ ತಿಳಿಸಿದೆ. ಈ ವಿಷಯದಲ್ಲಿ ಪೀಠಕ್ಕೆ ಸಹಾಯ ಮಾಡಲು ಎಎಸ್‌ಜಿ ಐಶ್ವರ್ಯಾ ಭಾಟಿ ಕೂಡ ಹಾಜರಿದ್ದರು.  ಇನ್ನು ಈ ಬಗ್ಗೆ ಬಾಲಕಿಯ ತಾಯಿಯ ಜೊತೆ ವೈದ್ಯರು ಮಾತನಾಡಿದ್ದಾರೆ. ಒಟ್ಟಿನಲ್ಲಿ ಈ ವಿಚಾರದಲ್ಲಿ ವೈದ್ಯರ ತೀರ್ಮಾನ ಅಂತಿಮ. ಅವರ ಪ್ರಕಾರ ಯಾವುದು ಹೆಚ್ಚು ಸೂಕ್ತವೋ ಅದನೇ ಮಾಡುವುದು ಉತ್ತಮ. ಈ ಬಗ್ಗೆ ಮುಂದಿನ ತೀರ್ಮಾನ ವೈದ್ಯರಿಗೆ ಬಿಟ್ಟ ವಿಚಾರ ಎಂದಿದ್ದಾರೆ.

ಇದನ್ನೂ ಓದಿ:Vinay Gowda: ಮೂರು ಸಿನಿಮಾಗಳಿಗೆ ಸಹಿ ಮಾಡಿದ ʻಬಿಗ್‌ ಬಾಸ್‌ʼ ಖ್ಯಾತಿಯ ವಿನಯ್‌ ಗೌಡ!

ವೈದ್ಯರು ಹೇಳುವುದೇನು?

ಅತ್ಯಾಚಾರ ಸಂತ್ರಸ್ತ ಅಪ್ರಾಪ್ತ ಬಾಲಕಿ ಗರ್ಭಪಾತ ಮಾಡಿಸಿಕೊಳ್ಳುವಷ್ಟು ಮಾನಸಿಕ ಮತ್ತು ದೈಹಿಕ ಸಮರ್ಥಳಿಲ್ಲ. ಆಕೆಗೆ ಪ್ರಸ್ತುತ ಸನ್ನಿವೇಶದಲ್ಲಿ ಗರ್ಭಪಾತ ಮಾಡುವುದು ಹೆಚ್ಚು ಅಪಾಯಕಾರಿಯಾಗಿದೆ. ಅಲ್ಲದೇ ಆಕೆ ಮಾನಸಿಕವಾಗಿ ಯಾವುದೇ ಸಮಸ್ಯೆ ಹೊಂದಿಲ್ಲದೇ ಇರುವ ಕಾರಣ ಮಗುವಿನ ಜನ್ಮ ಕೊಡಬಹುದು ಎಂದು ವೈದ್ಯರು ಕೋರ್ಟ್‌ಗೆ ತಿಳಿಸಿದ್ದಾರೆ.

Continue Reading
Advertisement
Amit Shah doctored video case
ದೇಶ8 mins ago

Amit Shah: ಅಮಿತ್‌ ಶಾ ತಿರುಚಿದ ವಿಡಿಯೋ ಪ್ರಕರಣ: ಆಪ್‌, ಕಾಂಗ್ರೆಸ್‌ ಪಕ್ಷದ ಮೂವರ ಬಂಧನ

National Commission for Women enters Prajwal Hassan Pen Drive Case Letter to DG to submit report within 3 days
ಕ್ರೈಂ9 mins ago

Hassan Pen Drive Case: ಪ್ರಜ್ವಲ್‌ ಕೇಸ್‌ಗೆ ರಾಷ್ಟ್ರೀಯ ಮಹಿಳಾ ಆಯೋಗ ಎಂಟ್ರಿ; 3 ದಿನದಲ್ಲಿ ವರದಿ ಕೊಡಲು ಡಿಜಿಗೆ ಪತ್ರ

T20 World Cup 2024
ಕ್ರೀಡೆ22 mins ago

T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಇಂಗ್ಲೆಂಡ್​, ದಕ್ಷಿಣ ಆಫ್ರಿಕಾ

America Shootout
ವಿದೇಶ32 mins ago

America Shootout: ಅಮೆರಿಕದಲ್ಲಿ ಮತ್ತೆ ಶೂಟೌಟ್‌; 4 ಪೊಲೀಸರು ಬಲಿ

Hassan Pen Drive Case does not work as a discharge petal says DK Shivakumar
ರಾಜಕೀಯ2 hours ago

Hassan Pen Drive Case: ಪೆನ್‌ ಡ್ರೈವ್‌ ಹೊರ ಬಿಡುವ ಚಿಲ್ಲರೆ ಕೆಲಸ ಮಾಡಲ್ಲ; ಅಸೆಂಬ್ಲಿಗೆ ಬರುವಂತೆ ಎಚ್‌ಡಿಕೆಗೆ ಡಿಕೆಶಿ ಸವಾಲು

Toyota Kirloskar Motor Introduces New G-AT Grade of Toyota Rumion
ದೇಶ2 hours ago

Toyota Kirloskar Motor: ಟೊಯೊಟಾ ರುಮಿಯಾನ್‌ G-AT ಬುಕ್ಕಿಂಗ್‌ ಶುರು! ಏನಿದರ ವಿಶೇಷ?

Rohit Sharma Birthday
ಕ್ರೀಡೆ2 hours ago

Rohit Sharma Birthday: ಬೌಲರ್​ ಆಗಿದ್ದ ರೋಹಿತ್​ ಹಿಟ್​ಮ್ಯಾನ್​ ಆಗಿದ್ದೇಗೆ?; ಕ್ರಿಕೆಟ್​ ಜರ್ನಿಯೇ ರೋಚಕ

covishield vaccine
ದೇಶ2 hours ago

Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Supreme Court
ದೇಶ2 hours ago

Supreme Court: 14 ವರ್ಷದ ಬಾಲಕಿಯ ಗರ್ಭಪಾತಕ್ಕೆ ಅನುಮತಿ ನೀಡಿ, ಬಳಿಕ ನಿರ್ಧಾರ ವಾಪಸ್‌ ಪಡೆದ ಸುಪ್ರೀಂ

Ballari City MLA Nara Bharat Reddy Election Campaign for Ballari Lok Sabha Constituency Congress Candidate E Tukaram
ಬಳ್ಳಾರಿ2 hours ago

Lok Sabha Election 2024: ಬಳ್ಳಾರಿಗೆ ಕೈಗಾರಿಕೆಗಳನ್ನು ತಂದ ಶ್ರೇಯಸ್ಸು ಕಾಂಗ್ರೆಸ್ ಪಕ್ಷದ್ದು: ನಾರಾ ಭರತ್ ರೆಡ್ಡಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ10 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20241 day ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20241 day ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌