Sadguru Jaggi Vasudev: ಆಸ್ಪತ್ರೆ ಬೆಡ್‌ನಲ್ಲೂ ಸದ್ಗುರು ಜಗ್ಗಿ ವಾಸುದೇವ್‌ ತಮಾಷೆ! ವೈರಲ್‌ ಆಯ್ತು ವಿಡಿಯೋ - Vistara News

ದೇಶ

Sadguru Jaggi Vasudev: ಆಸ್ಪತ್ರೆ ಬೆಡ್‌ನಲ್ಲೂ ಸದ್ಗುರು ಜಗ್ಗಿ ವಾಸುದೇವ್‌ ತಮಾಷೆ! ವೈರಲ್‌ ಆಯ್ತು ವಿಡಿಯೋ

Sadguru Jaggi Vasudev: ಪ್ರಧಾನಿ ನರೇಂದ್ರ ಮೋದಿ ಅವರು ಸದ್ಗರುವಿನೊಂದಿಗೆ ಮಾತನಾಡಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ

VISTARANEWS.COM


on

Sadguru Jaggi Vasudev
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಗಂಭೀರವಾದ ಸಮಸ್ಯೆಯಿಂದಾಗಿ ಮೆದುಳಿನ ಸರ್ಜರಿಗೆ (Brain Surgery) ಒಳಗಾಗಿರುವ ಆಧ್ಯಾತ್ಮಿಕ ಗುರು ಸದ್ಗುರು ಜಗ್ಗಿ ವಾಸುದೇವ್‌ (Sadguru Jaggi Vasudev), ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ಐಸಿಯು ಬೆಡ್‌ನಿಂದಲೇ ಅವರು ಮಾಡಿರುವ ವಿಡಿಯೋ ಸಂದೇಶ ಇದೀಗ ವೈರಲ್‌ (viral video) ಆಗಿದೆ.

ಸದ್ಗುರು ತಮ್ಮ ಆಸ್ಪತ್ರೆಯ ಹಾಸಿಗೆಯಿಂದ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. “ಅಪೋಲೋ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕರು ಸಮಸ್ಯೆ ಹುಡುಕೋಣ ಎಂದು ನನ್ನ ತಲೆಬುರುಡೆಯನ್ನು ತೆರೆದರು. ಆದರೆ ಏನೂ ಕಂಡುಬರಲಿಲ್ಲ- ಅದು ಸಂಪೂರ್ಣವಾಗಿ ಖಾಲಿಯಾಗಿತ್ತು. ಆದ್ದರಿಂದ ಅವರು ಅದನ್ನು ಬಿಟ್ಟುಕೊಟ್ಟು ಮತ್ತೆ ಹೊಲಿಗೆ ಹಾಕಿದರು. ನಾನು ಈಗ ದೆಹಲಿಯಲ್ಲಿ ನಾನು ತೇಪೆಹಾಕಿದ ತಲೆಬುರುಡೆಯೊಂದಿಗೆ ಇದ್ದೇನೆ, ಆದರೆ ಮೆದುಳು ಯಾವುದೇ ಹಾನಿಗೊಳಗಾಗಿಲ್ಲ” ಎಂದು ಸದ್ಗುರು ವಿನೋದಮಯವಾಗಿ ಹೇಳಿದ್ದಾರೆ.

ಏತನ್ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಸದ್ಗರುವಿನೊಂದಿಗೆ ಮಾತನಾಡಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. “ಸದ್ಗುರು ಅವರೊಂದಿಗೆ ಮಾತನಾಡಿದ್ದೇನೆ. ಅವರಿಗೆ ಉತ್ತಮ ಆರೋಗ್ಯ ಮತ್ತು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದೇನೆ” ಎಂದು ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮೋದಿಯವರ ಸಂದೇಶಕ್ಕೆ ಪ್ರತಿಕ್ರಿಯಿಸಿದ ಸದ್ಗುರು, “ಪ್ರೀತಿಯ ಪ್ರಧಾನ ಮಂತ್ರಿಜೀ, ನನ್ನ ಬಗ್ಗೆ ಕಳವಳ ಪಡಬೇಡಿ. ನಿಮಗೆ ಮುನ್ನಡೆಸಲು ಒಂದು ದೇಶವೇ ಇದೆ. ನಿಮ್ಮ ಕಾಳಜಿಯಿಂದ ನನ್ನ ಹೃದಯತುಂಬಿದೆ. ನಾನು ಚೇತರಿಕೆಯ ಹಾದಿಯಲ್ಲಿದ್ದೇನೆ. ಧನ್ಯವಾದ” ಎಂದಿದ್ದಾರೆ.

ಸದ್ಗುರುಗಳ ಬಗ್ಗೆ ಆಸ್ಪತ್ರೆ ಏನು ಹೇಳಿದೆ?

ದೆಹಲಿಯ ಇಂದ್ರಪ್ರಸ್ಥ ಅಪೋಲೋ ಹಾಸ್ಪಿಟಲ್ಸ್‌ನ ಹಿರಿಯ ಸಲಹೆಗಾರ, ನರರೋಗ ತಜ್ಞ ಡಾ. ವಿನಿತ್ ಸೂರಿ ಅವರ ಬಳಿ ಮಾರ್ಚ್ 15ರ ಮಧ್ಯಾಹ್ನ 3:45ರ ಸುಮಾರಿಗೆ ಸದ್ಗುರು ತೀವ್ರ ತಲೆನೋವಿನ ಕಾರಣ ಸಮಾಲೋಚಿಸಿದ್ದರು. ವಿನಿತ್ ಸೂರಿ ಅವರು ತಕ್ಷಣವೇ ಇದು ಸಬ್-ಡ್ಯೂರಲ್ ಹೆಮಟೋಮಾ ಇರಬಹುದು ಎಂದು ಶಂಕಿಸಿದ್ದರು. ತುರ್ತು MRI ಸ್ಕ್ಯಾನ್‌ಗೆ ಸಲಹೆ ನೀಡಿದ್ದರು. ಅದೇ ದಿನ ಸಂಜೆ 4:30ಕ್ಕೆ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಯಲ್ಲಿ ಸದ್ಗುರು ಮೆದುಳಿನ ಎಂಆರ್‌ಐ ಮಾಡಿಸಿಕೊಂಡರು. ಮೆದುಳಿನಲ್ಲಿ ಭಾರೀ ರಕ್ತಸ್ರಾವ ಕಂಡುಬಂದಿತ್ತು.

24-48 ಗಂಟೆಗಳ ಅವಧಿಯ ಒಂದು ತಾಜಾ ರಕ್ತಸ್ರಾವದ ಜೊತೆಗೆ, 3-4 ವಾರಗಳ ಅವಧಿಯ ಹಿಂದಿನ ದೀರ್ಘಕಾಲದ ರಕ್ತಸ್ರಾವದ ಗುರುತೂ ಇತ್ತು. ಸದ್ಗುರುಗಳಿಗೆ ತಕ್ಷಣವೇ ಆಸ್ಪತ್ರೆಗೆ ಸೇರಲು ಸಲಹೆ ನೀಡಲಾಯಿತು. ಆದರೆ ಅವರು ಮಾರ್ಚ್ 15ರಂದು ಸಂಜೆ 6 ಗಂಟೆಗೆ ಮತ್ತು ಮಾರ್ಚ್ 16ರಂದು ಇಂಡಿಯಾ ಟುಡೇ ಸಮಾವೇಶದಲ್ಲಿ ಭಾಗವಹಿಸಲಿದ್ದರು.

ಡಾ. ಸೂರಿ ಅವರ ಪ್ರಕಾರ, ಸದ್ಗುರು “ನನ್ನ ಕಳೆದ 40 ವರ್ಷಗಳಲ್ಲಿ ನಾನು ಒಂದೇ ಒಂದು ಸಭೆಯನ್ನು ತಪ್ಪಿಸಿಲ್ಲ” ಎಂದು ಹೇಳಿದರು. ತೀವ್ರವಾದ ನೋವಿನ ನಡುವೆಯೂ ಅವರು ನೋವು ನಿವಾರಕಗಳ ಬೆಂಬಲದಿಂದ ಸಭೆಯಲ್ಲಿ ಭಾಗವಹಿಸಿದರು.

ಮಾರ್ಚ್ 17ರಂದು ಸದ್ಗುರುವಿಗೆ ಎಡಗಾಲಿನ ಊತ, ಪ್ರಜ್ಞೆಯಲ್ಲಿ ಕುಸಿತ, ಪುನರಾವರ್ತಿತ ವಾಂತಿ ಕಂಡುಬಂತು. ತಲೆನೋವು ತೀವ್ರವಾಗಿ ಉಲ್ಬಣಗೊಂಡಿತು. ಅಂತಿಮವಾಗಿ ಡಾ. ವಿನಿತ್ ಸೂರಿ ಅವರ ಆರೈಕೆಯಲ್ಲಿ ಇಂದ್ರಪ್ರಸ್ಥ ಅಪೋಲೋ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. “ಇದೀಗ ನೀವು ಸರ್ಜರಿ ನಿರ್ವಹಿಸುವ ಸಮಯ” ಎಂದು ಸದ್ಗುರು ಹೇಳಿದರು.

ಮೆದುಳಿನ ಊತ ಮಾರಣಾಂತಿಕವಾಗಿ ಬೆಳೆದುದನ್ನು ತುರ್ತು CT ಮುಖ್ಯಸ್ಥರು ಖಚಿತಪಡಿಸಿದರು. ಡಾ. ವಿನಿತ್ ಸೂರಿ, ಡಾ. ಪ್ರಣವ್ ಕುಮಾರ್, ಡಾ. ಸುಧೀರ್ ತ್ಯಾಗಿ ಮತ್ತು ಡಾ. ಎಸ್ ಚಟರ್ಜಿ ಅವರನ್ನೊಳಗೊಂಡ ವೈದ್ಯರ ತಂಡವು ಸದ್ಗುರುಗಳ ಸರ್ಜರಿ ನಿರ್ವಹಿಸಿತು. ತಲೆಬುರುಡೆಯಲ್ಲಿನ ರಕ್ತಸ್ರಾವವನ್ನು ತೆಗೆದುಹಾಕಲು ತುರ್ತು ಮೆದುಳಿನ ಶಸ್ತ್ರಚಿಕಿತ್ಸೆ ನಡೆಯಿತು. ಶಸ್ತ್ರಚಿಕಿತ್ಸೆಯ ನಂತರ ಸದ್ಗುರುಗಳನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿದೆ. ವೈದ್ಯರ ಪ್ರಕಾರ ಸದ್ಗುರು ಆರೋಗ್ಯದಲ್ಲಿ ಸ್ಥಿರವಾದ ಪ್ರಗತಿಯನ್ನು ತೋರಿಸಿದ್ದಾರೆ. ಅವರ ಮೆದುಳು, ದೇಹ ಮತ್ತು ಪ್ರಮುಖ ಆರೋಗ್ಯ ಸೂಚಿಗಳು ಸುಧಾರಿಸಿವೆ.

ಇದನ್ನೂ ಓದಿ: Sadhguru Jaggi Vasudev: ಹಾಲಿವುಡ್‌ ಸಾಂಗ್‌ನಲ್ಲಿ ಮಿಂಚಿದ ಸದ್ಗುರು ಜಗ್ಗಿ ವಾಸುದೇವ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Naxal activities: ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ಬಾಂಬ್‌ ಸ್ಕ್ವಾಡ್‌ ಮತ್ತು ಪೊಲೀಸರು ಎರಡು ತಂಡಗಳು ಭಾನುವಾರ ತಿಪಗಡ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸ್ಥಳಕ್ಕೆ ತಂಡ ತಲುಪಿದಾಗ ಸ್ಫೋಟಕಗಳು ತುಂಬಿದ್ದ ಆರು ಕುಕ್ಕರ್‌ ಬಾಂಬ್‌, ಸ್ಫೋಟಕಗಳು ಮತ್ತು ಮೂರು ಕ್ಲೇಮೋರ್‌ ಕೊಳವೆಗಳು ಪತ್ತೆಯಾಗಿದ್ದವು. ಅಷ್ಟೇ ಅಲ್ಲದೇ ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ತುಂಬಿಸಿದ್ದ ಗನ್‌ ಪೌಡರ್‌, ಔಷಧಗಳು, ಕಂಬಳಿ ಹೀಗೇ ಹಲವು ವಸ್ತುಗಳು ಪತ್ತೆ ಆಗಿವೆ. ಇನ್ನು ಒಂಬತ್ತು IED ಮತ್ತು ಮೂರು ಕ್ಲೇಮೋರ್‌ ಪೈಪ್‌ಗಳನ್ನು ಸ್ಥಳದಲ್ಲೇ ನಾಶಪಡಿಸಿಲಾಗಿದೆ

VISTARANEWS.COM


on

Naxal activities
Koo

ಮಹಾರಾಷ್ಟ್ರ: ನಕ್ಸಲರು(Naxal activities) ಅಡಗಿಸಿಟ್ಟಿದ್ದ ಕುಕ್ಕರ್‌ ಬಾಂಬ್‌(Cooker Bomb), ಸ್ಫೋಟಕಗಳನ್ನು ಪೊಲೀಸರು ಪತ್ತೆ ಹಚ್ಚಿದ್ದು, ಮಹಾರಾಷ್ಟ್ರ(Maharastra)ದಲ್ಲಿ ನಡೆಯಬೇಕಿದ್ದ ಭಾರೀ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಸ್ಫೋಟಕಗಳು ತುಂಬಿದ್ದ ಆರು ಕುಕ್ಕರ್‌ ಬಾಂಬ್‌, ಸ್ಫೋಟಕಗಳು ಮತ್ತು ಮೂರು ಕ್ಲೇಮೋರ್‌ ಕೊಳವೆಗಳು ಮಹಾರಾಷ್ಟ್ರದ ಗದ್‌ಚಿರೋಳಿಯ ತಿಪಗಡ್‌ ಪ್ರದೇಶದಲ್ಲಿ ದೊರೆತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಯಶಸ್ವಿ ಕಾರ್ಯಾಚರಣೆಯಿಂದಾಗಿ ನಕ್ಸಲರು ಮಹಾರಾಷ್ಟ್ರದಲ್ಲಿ ಐಇಡಿ ಬಾಂಬ್‌ ಸ್ಫೋಟಕ್ಕೆ ರೂಪಿಸಿದ್ದ ಸಂಚು ವಿಫಲಗೊಂಡಿದೆ.

ಘಟನೆ ಬಗ್ಗೆ ಗದ್‌ಚಿರೋಳಿ ಪೊಲೀಸ್‌ ವರಿಷ್ಠಾಧಿಕಾರಿ ನೀಲೋತ್ಪಲ್‌ ಮಾಹಿತಿ ನೀಡಿದ್ದು, ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿ ಆಧಾರದ ಮೇಲೆ ಬಾಂಬ್‌ ಸ್ಕ್ವಾಡ್‌ ಮತ್ತು ಪೊಲೀಸರು ಎರಡು ತಂಡಗಳು ಭಾನುವಾರ ತಿಪಗಡ್‌ ಅರಣ್ಯ ಪ್ರದೇಶದಲ್ಲಿ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಸ್ಥಳಕ್ಕೆ ತಂಡ ತಲುಪಿದಾಗ ಸ್ಫೋಟಕಗಳು ತುಂಬಿದ್ದ ಆರು ಕುಕ್ಕರ್‌ ಬಾಂಬ್‌, ಸ್ಫೋಟಕಗಳು ಮತ್ತು ಮೂರು ಕ್ಲೇಮೋರ್‌ ಕೊಳವೆಗಳು ಪತ್ತೆಯಾಗಿದ್ದವು. ಅಷ್ಟೇ ಅಲ್ಲದೇ ಪ್ಲಾಸ್ಟಿಕ್‌ ಬ್ಯಾಗ್‌ನಲ್ಲಿ ತುಂಬಿಸಿದ್ದ ಗನ್‌ ಪೌಡರ್‌, ಔಷಧಗಳು, ಕಂಬಳಿ ಹೀಗೇ ಹಲವು ವಸ್ತುಗಳು ಪತ್ತೆ ಆಗಿವೆ. ಇನ್ನು ಒಂಬತ್ತು IED ಮತ್ತು ಮೂರು ಕ್ಲೇಮೋರ್‌ ಪೈಪ್‌ಗಳನ್ನು ಸ್ಥಳದಲ್ಲೇ ನಾಶಪಡಿಸಿಲಾಗಿದೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೊಡ್ಡ ಮಟ್ಟದ ಸ್ಫೋಟ ನಡೆಸಲು ನಕ್ಸಲರು ಸಂಚು ರೂಪಿಸಿದ್ದರು. ಸ್ಫೋಟಕಗಳು ಪತ್ತೆಯಾಗಿರುವ ಹಿನ್ನೆಲೆ ಭದ್ರತೆ ಮತ್ತಷ್ಟು ಬಿಗಿಗೊಳಿಸಲಾಗಿದೆ. ಗದ್‌ಚಿರೋಳಿ-ಚಿಮೂರ್‌ ಲೋಕಸಭಾ ಕ್ಷೇತ್ರದಲ್ಲಿ ಏ.19ರಂದು ಮತದಾನ ನಡೆದಿದ್ದು, ಜೂ.4ರಂದು ಫಲಿತಾಂಶ ಹೊರ ಬೀಳಲಿದೆ.

ಒಂದು ತಿಂಗಳ ಹಿಂದೆ ರಾಜ್ಯದ ಕುಕ್ಕೆ ಸುಬ್ರಹ್ಮಣ್ಯ ಸಮೀಪ ನಕ್ಸಲ್​ ಚಟುವಟಿಕೆ ಹೆಚ್ಚಾಗಿದೆ ಎಂಬುದಾಗಿ ವರದಿಯಾಗಿತ್ತು. ದ.ಕ ಜಿಲ್ಲೆಯ ‌ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಐನೆಕಿದು ಗ್ರಾಮದ ಅರಣ್ಯದಂಚಿನ ಮನೆಯೊಂದಕ್ಕೆ ಶಂಕಿತ ನಕ್ಸಲರು ಭೇಟಿ ನೀಡಿದ್ದಾರೆ ಎಂಬುದಾಗಿ ಹೇಳಲಾಗಿತ್ತು. ಮೂವರಿದ್ದ ತಂಡ ಐನೆಕಿದು ಗ್ರಾಮದ ಅಶೋಕ್ ಎಂಬವರ ಮನೆಗೆ ಭೇಟಿ ನೀಡಿದ್ದಾರೆ ಎಂಬುದಾಗಿ ವರದಿಯಾಗಿದೆ. ಮನೆಯವರ ಜತೆ ಸುಮಾರು ಒಂದು ತಾಸಿಗೂ ಅಧಿಕ ಕಾಲ ಮಾತುಕತೆ ನಡೆಸಿ ಅವರು ವಾಪಸ್​ ತೆರಳಿದ್ದರು.

ಮಳೆ ಬರುತ್ತಿದ್ದ ವೇಳೆ ಅಶೋಕ್ ಅವರ ಮನೆಗೆ ಬಂದ ಶಂಕಿತ ನಕ್ಸಲರು ಮೊಬೈಲ್ ಚಾರ್ಜ್ ಮಾಡಿ ಅಲ್ಲಿಂದ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಂದ ಮೂವರ ಬಳಿಯೂ ಶಸ್ತ್ರಾಸ್ತ್ರಗಳಿದ್ದವು. ದಕ್ಷಿಣ ಕನ್ನಡ- ಕೊಡಗು ಗಡಿ ಭಾಗದ ಕೂಜಿಮಲೆಯ ಎಸ್ಟೇಟ್‌ ಅಂಗಡಿಗೂ ಶಂಕಿತ ನಕ್ಸಲರು ಬಂದಿದ್ದರು. ಅವರೇ ಮತ್ತೆ ಅಶೋಕ್ ಅವರ ಮನೆಗೆ ಬಂದಿದ್ದಾರೆ ಎಂದು ಹೇಳಲಾಗಿತ್ತು.

ಇದನ್ನೂ ಓದಿ:Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

ಸುಬ್ರಹ್ಮಣ್ಯ ಭಾಗದಲ್ಲಿ ನಕ್ಸಲ್‌ ನಿಗ್ರಹ ದಳ ನಿರಂತರ ಶೋಧ ಕಾರ್ಯ ನಡೆಸುತ್ತಿತ್ತು. ಆದರೆ ಅವರಿಗೆ ಯಾವುದೇ ಸುಳಿವು ಲಭಿಸಿರಲಿಲ್ಲ. ನಕ್ಸಲರು ಭೇಟಿ ನೀಡಿದ ಪ್ರದೇಶ ಕುಮಾರಪರ್ವತ ಸಾಲಿನ ಪಾಟಿ ಕುಮೇರಿ ದಟ್ಟ ಕಾಡಿಗೆ ಹತ್ತಿರವಿದೆ. ಅಲ್ಲಿಂದ ಒಂದು ದಾರಿ ಸೋಮವಾರಪೇಟೆಗೆ ಹೋಗುತ್ತದೆ ಹಾಗೂ ಇನ್ನೊಂದು ದಾರಿ ಗಾಳಿಬೀಡು ಪ್ರದೇಶಕ್ಕೆ ಸಂಪರ್ಕ ಕಲ್ಪಿಸುತ್ತದೆ. ಅದೂ ಅಲ್ಲದೆ, ಸಂಪಾಜೆ ಮೂಲಕ ಕೇರಳದ ಅರಣ್ಯದೊಳಗೆ ಪ್ರವೇಶ ಮಾಡಲು ಅವರಿಗೆ ಅವಕಾಶವಿದೆ.

Continue Reading

ದೇಶ

Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

Narendra Modi: ಪ್ರಧಾನಿಯನ್ನು ಕಾಣಲೆಂದು ನೆರೆದಿದ್ದ ಜನರ ಬಳಿ ತೆರಳಿದ್ದ ಪ್ರಧಾನಿಯನ್ನು ಮಹಿಳೆಯ ಕೈಯಲ್ಲಿದ್ದ ಮಗುವೊಂದು ಸೆಳೆದಿತ್ತು. ಮಗುವಿನತ್ತ ಹೋದ ಪ್ರಧಾನಿ ಅದನ್ನು ಎತ್ತಿಕೊಂಡು ಮುದ್ದಾಡಿದರು. ಕೆಲ ಹೊತ್ತು ಮಗುವಿನ ಜೊತೆ ಆಟ ಆಡಿದರು. ಮಗುವಿನ ತಾಯಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಅಲ್ಲಿ ನೆರೆದಿದ್ದ ಜನ ಮೋದಿ, ಮೋದಿ ಎಂದು ಹರ್ಷೋದ್ಘಾರ ಹಾಕಿದ್ದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

VISTARANEWS.COM


on

Narendra Modi
Koo

ಅಹ್ಮದಾಬಾದ್‌: ದೇಶಾದ್ಯಂತ ಲೋಕಸಭೆ ಚುನಾವಣೆ(Lok Sabha Election 2024)ಯ ಮೂರನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ(Narendra Modi), ಗೃಹಸಚಿವ ಅಮಿತ್‌ ಶಾ(Amit shah) ಸೇರಿದಂತೆ ಅನೇಕರು ಬೆಳ್ಳಂಬೆಳಗ್ಗೆ ತಮ್ಮ ಮತ ಹಕ್ಕನ್ನು ಚಲಾಯಿಸಿದ್ದಾರೆ. ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆ (Nishan Higher Secondary School)ಯ ಮತದಾನ ಕೇಂದ್ರದಲ್ಲಿ ಬೆಳಗ್ಗೆ 7.45ರ ಸುಮಾರಿಗೆ ತಮ್ಮ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿಯನ್ನು ನೋಡಲೆಂದು ಸಹಸ್ರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಈ ವೇಳೆ ಅಲ್ಲೇ ಇದ್ದ ಮಹಿಳೆಯ ಮಗುವೊಂದನ್ನು ಎತ್ತಿಕೊಂಡ ಪ್ರಧಾನಿ ಮುದ್ದಾಡಿದ್ದಾರೆ.

ಪ್ರಧಾನಿ ಮೋದಿಗೆ ಮಕ್ಕಳ ಜೊತೆಗೆ ಅವಿನಾಭಾವ ಸಂಬಂಧವಿದೆ. ಅನೇಕ ಬಾರಿ ಮಕ್ಕಳೊಂದಿಗೆ ತಾವೊಬ್ಬ ಪ್ರಧಾನಿ ಎಂಬುದನ್ನೂ ಮರೆತು ಅತ್ಯಂತ ಪ್ರೀತಿಯಿಂದ ಮಕ್ಕಳ ಜೊತೆ ಬೆರೆಯುವುದನ್ನು ಆಗಾಗ ಕಾಣಬಹುದಾಗಿದೆ. ಕಳೆದ ಬಾರಿ ಕಲಬುರಗಿಯಲ್ಲಿ ಪ್ರಚಾರ ಕಾರ್ಯಕ್ರಮಕ್ಕೆಂದು ಆಗಮಿಸಿದ್ದ ಅವರನ್ನು ಕಾಣಲೆಂದೇ ಬಂದಿದ್ದ ಮಕ್ಕಳ ಜೊತೆ ಕೆಲ ಸಮಯ ಕಳೆದು, ಮಕ್ಕಳಿಗೆ ಕೆಲವೊಂದು ಬೆರಳಿಗೆ ಮಾಡುವ ವ್ಯಾಯಾಮಗಳನ್ನು ತೋರಿಸಿಕೊಟ್ಟಿದ್ದರು. ಇದೀಗ ಮತ್ತೆ ಅಂತಹದ್ದೇ ವಿಶೇಷ ಕ್ಷಣದೊಂದಿಗೆ ಪ್ರಧಾನಿ ಮೋದಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ:Road rage: BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ, ಇಲ್ಲಿದೆ ವಿಡಿಯೋ

ಪ್ರಧಾನಿಯನ್ನು ಕಾಣಲೆಂದು ನೆರೆದಿದ್ದ ಜನರ ಬಳಿ ತೆರಳಿದ್ದ ಪ್ರಧಾನಿಯನ್ನು ಮಹಿಳೆಯ ಕೈಯಲ್ಲಿದ್ದ ಮಗುವೊಂದು ಸೆಳೆದಿತ್ತು. ಮಗುವಿನತ್ತ ಹೋದ ಪ್ರಧಾನಿ ಅದನ್ನು ಎತ್ತಿಕೊಂಡು ಮುದ್ದಾಡಿದರು. ಕೆಲ ಹೊತ್ತು ಮಗುವಿನ ಜೊತೆ ಆಟ ಆಡಿದರು. ಮಗುವಿನ ತಾಯಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಅಲ್ಲಿ ನೆರೆದಿದ್ದ ಜನ ಮೋದಿ, ಮೋದಿ ಎಂದು ಹರ್ಷೋದ್ಘಾರ ಹಾಕಿದ್ದರು. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮತದಾನ ಕೇಂದ್ರದ ಬಳಿಗೆ ಪ್ರಧಾನಿ ಸುಮಾರು 7.30ರ ಹೊತ್ತಿಗೆ ಆಗಮಿಸಿದ್ದರು. ಅಮಿತ್‌ ಶಾ ಪ್ರಧಾನಿಯನ್ನು ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಸುತ್ತ ನೆರೆದಿದ್ದ ಸಾವರ್ಜನಿಕರತ್ತ ಕೈ ಬೀಸುತ್ತ ಮತಗಟ್ಟೆಗೆ ತೆರಳಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು. ಈ ಮಧ್ಯೆ ಅಭಿಮಾನಿಗಳಿಗೆ ಮೋದಿ ಆಟೋಗ್ರಾಫ್‌ ನೀಡುವುದನ್ನೂ ಮರೆಯಲಿಲ್ಲ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

Continue Reading

Lok Sabha Election 2024

Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Lok Sabha Election 2024: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆಯ ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದ್ದಾರೆ. ಸುತ್ತ ನೆರೆದಿದ್ದ ಸಾವಿರಾರು ಜನರತ್ತ ಕೈ ಬೀಸುತ್ತ ಮತದಾನ ಕೇಂದ್ರಕ್ಕೆ ತೆರಳಿ ವೋಟು ಮಾಡಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು.

VISTARANEWS.COM


on

Lok Sabha Election 2024
Koo

ಗಾಂಧಿನಗರ: ಲೋಕಸಭಾ ಚುನಾವಣೆ (Lok Sabha Election 2024)ಯ ಮೂರನೇ ಹಂತದ ಮತದಾನ ಆರಂಭವಾಗಿದೆ. 93 ಕ್ಷೇತ್ರಗಳಲ್ಲಿ ಮತದಾರರು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಅದರಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಗುಜರಾತ್‌ನ ಅಹಮದಾಬಾದ್‌ನ ನಿಶಾನ್‌ ಹೈಯರ್‌ ಸೆಕಂಡರಿ ಶಾಲೆ (Nishan Higher Secondary School)ಯ ಮತದಾನ ಕೇಂದ್ರದಲ್ಲಿ ಬೆಳಗ್ಗೆ 7.45ರ ಸುಮಾರಿಗೆ ತಮ್ಮ ಹಕ್ಕು ಚಲಾಯಿಸಿದರು. ಕೇಂದ್ರ ಸಚಿವ ಅಮಿತ್‌ ಶಾ (Amit Shah) ಅವರೊಂದಿಗೆ ಆಗಮಿಸಿದ ಅವರು ಸುತ್ತ ನೆರೆದಿದ್ದ ಸಾವಿರಾರು ಜನರತ್ತ ಕೈ ಬೀಸುತ್ತ ಮತದಾನ ಕೇಂದ್ರಕ್ಕೆ ತೆರಳಿ ವೋಟು ಮಾಡಿದರು. ಈ ಮಧ್ಯೆ ಎಲ್ಲರೂ ಮತದಾನ ಮಾಡುವಂತೆ ಅವರು ಕನ್ನಡದಲ್ಲೇ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮತದಾನ ಕೇಂದ್ರದ ಬಳಿಗೆ ಪ್ರಧಾನಿ ಸುಮಾರು 7.30ರ ಹೊತ್ತಿಗೆ ಆಗಮಿಸಿದ್ದರು. ಅಮಿತ್‌ ಶಾ ಪ್ರಧಾನಿಯನ್ನು ಸ್ವಾಗತಿಸಿದರು. ಬಳಿಕ ಇಬ್ಬರು ನಾಯಕರು ಸುತ್ತ ನೆರೆದಿದ್ದ ಸಾವರ್ಜನಿಕರತ್ತ ಕೈ ಬೀಸುತ್ತ ಮತಗಟ್ಟೆಗೆ ತೆರಳಿದರು. ರಸ್ತೆಯುದ್ದಕ್ಕೂ ನಿಂತಿದ್ದ ಜನರು ಮೋದಿ ಪರ ಘೋಷಣೆ ಕೂಗಿದರು. ಈ ಮಧ್ಯೆ ಅಭಿಮಾನಿಗಳಿಗೆ ಮೋದಿ ಆಟೋಗ್ರಾಫ್‌ ನೀಡುವುದನ್ನೂ ಮರೆಯಲಿಲ್ಲ. ಅಮಿತ್‌ ಶಾ ಸ್ಪರ್ಧಿಸುತ್ತಿರುವ ಗಾಂಧಿನಗರದಲ್ಲಿಯೂ ಇಂದು ಮತದಾನ ನಡೆಯಲಿದ್ದು, ಕೆಲ ಹೊತ್ತಿನಲ್ಲೇ ಅವರು ಹಕ್ಕು ಚಲಾಯಿಸಲಿದ್ದಾರೆ.

ಹಕ್ಕು ಚಲಾಯಿಸಿದ ಗಣ್ಯರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬಾರಾಮತಿಯಲ್ಲಿ ಮತ ಚಲಾಯಿಸಿದರು. ಅಜಿತ್ ಅವರ ಪತ್ನಿ ಸುನೇತ್ರಾ ಮತ್ತು ತಾಯಿ ಕೂಡ ಬಾರಾಮತಿಯ ಕಟೇವಾಡಿ ಮತಗಟ್ಟೆಯಲ್ಲಿ ಬೆಳಿಗ್ಗೆ ಮತದಾನ ಮಾಡಿದರು.

ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಲು ಕರೆ

ಮಂಗಳವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮೋದಿ ಅವರು, ಈ ಮೂರನೇ ಹಂತದಲ್ಲಿ ಎಲ್ಲರೂ ಹಕ್ಕು ಚಲಾಯಿಸುವ ಮೂಲಕ ದಾಖಲೆ ಪ್ರಮಾಣದ ಮತದಾನಕ್ಕೆ ಕಾರಣವಾಗಬೇಕು ಎಂದು ಕರೆ ನೀಡಿದ್ದಾರೆ. ʼʼಚುನಾವಣೆಯ ಇಂದಿನ ಹಂತದಲ್ಲಿ ಮತದಾನ ಮಾಡುವ ಎಲ್ಲರೂ ದಾಖಲೆ ಸಂಖ್ಯೆಯಲ್ಲಿ ತಮ್ಮ ಹಕ್ಕು ಚಲಾಯಿಸಬೇಕೆಂದು ಮನವಿ ಮಾಡುತ್ತೇನೆ. ಮತದಾರರ ಸಕ್ರಿಯ ಭಾಗವಹಿಸುವಿಕೆಯು ಖಂಡಿತವಾಗಿ ಚುನಾವಣೆಯನ್ನು ಮತ್ತಷ್ಟು ರೋಮಾಂಚಕಗೊಳಿಸುತ್ತದೆ” ಎಂದು ಅವರು ಬರೆದುಕೊಂಡಿದ್ದಾರೆ.

ಕರ್ನಾಟಕ ಸೇರಿ ಒಟ್ಟು 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ನಡೆಯುತ್ತಿದೆ. ಇದರಲ್ಲಿ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೂ ಸೇರಿವೆ. ಬೆಳಿಗ್ಗೆ 7 ಗಂಟೆಗೆ ಆರಂಭವಾದ ಮತದಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Lok Sabha Election 2024: ಮೂರನೇ ಹಂತದ ಮತದಾನ ಆರಂಭ; ಇಂದು ವೋಟು ಮಾಡಲಿದ್ದಾರೆ ಮೋದಿ, ಅಮಿತ್‌ ಶಾ

ಮತದಾನ ನಡೆಯುವ ರಾಜ್ಯಗಳು

ನಗರ್ ಹವೇಲಿ ಮತ್ತು ದಮನ್ ಮತ್ತು ದಿಯು (2), ಅಸ್ಸಾಂ (4), ಬಿಹಾರ (5), ಛತ್ತೀಸ್‌ಗಢ (7), ದಾದ್ರಾ, ಗೋವಾ (2), ಗುಜರಾತ್ (25), ಕರ್ನಾಟಕ (14), ಮಹಾರಾಷ್ಟ್ರ (11), ಮಧ್ಯಪ್ರದೇಶ (8), ಉತ್ತರ ಪ್ರದೇಶ (10) ಮತ್ತು ಪಶ್ಚಿಮ ಬಂಗಾಳ (4)ಗಳಲ್ಲಿ ಮತದಾನ ನಡೆಯುತ್ತಿದೆ. ಸೂರತ್ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಅವಿರೋಧವಾಗಿ ಗೆಲುವು ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಲೋಕಸಭಾ ಕ್ಷೇತ್ರಕ್ಕೂ ಇಂದೇ ಮತದಾನ ನಿಗದಿಯಾಗಿತ್ತು. ಆದರೆ ಪ್ರತಿಕೂಲ ಹವಾಮಾನ ಕಾರಣದಿಂದ ಚುನಾವಣಾ ಆಯೋಗ ಇತ್ತೀಚೆಗೆ ಇದನ್ನು ಮೇ 25ಕ್ಕೆ ಮುಂದೂಡಿತ್ತು.

Continue Reading

ದೇಶ

Lok Sabha Elections 2024: ಗೂಗಲ್‌ ಡೂಡಲ್‌ನಲ್ಲೂ ಪ್ರಜಾಪ್ರಭುತ್ವ ಹಬ್ಬದ ಸಂಭ್ರಮ

Lok Sabha Elections 2024:ಗೂಗಲ್‌ ಇಂದು ಹೊಸ ಡೂಡಲ್‌ ಅನ್ನು ಪ್ರಕಟಿಸಿದ್ದು, ತನ್ನ ಲೋಗೋದಲ್ಲಿ ಮತದಾನವನ್ನು ಸಾಂಕೇತಿಕವಾಗಿ ತೋರಿಸುವ ಶಾಯಿ ಇರುವ ಬೆರಳಿನ ಚಿತ್ರವನ್ನು ಇಟ್ಟಿದೆ. ಆ ಲೋಗೋವನ್ನು ಕ್ಲಿಕ್‌ ಮಾಡಿದರೆ ಗೂಗಲ್‌ ಬಳಕೆದಾರರಿಗೆ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ಸುದ್ದಿಗಳು ಲಭ್ಯವಾಗಲಿವೆ.

VISTARANEWS.COM


on

Google doodle
Koo

ನವದೆಹಲಿ: ದೇಶಾದ್ಯಂತ ಇಂದು ಲೋಕಸಭೆ ಚುನಾವಣೆ(Lok Sabha Elections 2024)ಯ ಮೂರನೇ ಹಂತ ಮತದಾನ ಪ್ರಕ್ರಿಯೆ ಬಿರುಸಿನಿಂದ ನಡೆಯುತ್ತಿದೆ. ಮತದಾರರು ಬಹಳಷ್ಟು ಉತ್ಸಾಹದಿಂದಲೇ ಮತ ಚಲಾಯಿಸುತ್ತಿದ್ದರೆ, ಇತ್ತ ಈ ಪ್ರಜಾಪ್ರಭುತ್ವದ ಹಬ್ಬವನ್ನು ಗೂಗಲ್‌(Google) ಕೂಡ ಸಂಭ್ರಮಿಸುತ್ತಿದೆ. ಗೂಗಲ್‌ ಇಂದು ಹೊಸ ಡೂಡಲ್‌(Google Doodle) ಅನ್ನು ಪ್ರಕಟಿಸಿದ್ದು, ತನ್ನ ಲೋಗೋದಲ್ಲಿ ಮತದಾನವನ್ನು ಸಾಂಕೇತಿಕವಾಗಿ ತೋರಿಸುವ ಶಾಯಿ ಇರುವ ಬೆರಳಿನ ಚಿತ್ರವನ್ನು ಇಟ್ಟಿದೆ. ಆ ಲೋಗೋವನ್ನು ಕ್ಲಿಕ್‌ ಮಾಡಿದರೆ ಗೂಗಲ್‌ ಬಳಕೆದಾರರಿಗೆ ಚುನಾವಣೆ, ಮತದಾನಕ್ಕೆ ಸಂಬಂಧಿಸಿದ ಸುದ್ದಿಗಳು ಲಭ್ಯವಾಗಲಿವೆ.

ಏನಿದು ಗೂಗಲ್‌ ಡೂಡಲ್‌?

ಗೂಗಲ್‌ ಲೋಗೋವನ್ನು ತಾತ್ಕಾಲಿಕವಾಗಿ ಬದಲಾಯಿಸುವುದನ್ನು ಗೂಗಲ್‌ ಡೂಡಲ್‌ ಎಂದು ಕರೆಯಲಾಗುತ್ತದೆ. ಇದು ಜಾಗತಿಕ ಮತ್ತು ಸ್ಥಳೀಯ ರಜಾದಿನಗಳು, ಪ್ರಮುಖ ದಿನಾಚರಣೆಗಳು, ಸಮಾಜಕ್ಕೆ ಕೊಡುಗೆ ನೀಡಿರುವ ಪ್ರಸಿದ್ದ ವ್ಯಕ್ತಿಗಳುಗೆ ಗೌರವ ನೀಡುವ ಉದ್ದೇಶದಿಂದ ಗೂಗಲ್‌ ಈ ಡೂಡಲ್‌ ಅನ್ನು ಪರಿಚಯಿಸಿದೆ. ಆಯಾಯ ದಿನದಂದು ಲೋಗೋವನ್ನು ಬದಲಾಯಿಸಲಾಗುತ್ತದೆ. ಅದನ್ನು ಕ್ಲಿಕ್‌ ಮಾಡಿದಾಗ ಅದಕ್ಕೆ ಸಂಬಂಧಿಸಿದ ಮಾಹಿತಿ ಲಭ್ಯವಾಗಲಿದೆ.

ಕರ್ನಾಟಕ ಸೇರಿ ದೇಶದ ವಿವಿಧ ಕಡೆ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಆರಂಭವಾಗಿದೆ. ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿನ ಮತದಾನ ನಡೆಯುತ್ತಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಬಿಜೆಪಿಗೆ ಈ ಹಂತ ಪ್ರಮುಖ ಎನಿಸಿಕೊಂಡಿದೆ. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕೇಂದ್ರ ಸಚಿವರಾದ ಅಮಿತ್ ಶಾ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಮನ್ಸುಖ್ ಮಾಂಡವಿಯಾ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿಗಳಾದ ಶಿವರಾಜ್ ಸಿಂಗ್ ಚೌಹಾಣ್ (ವಿದಿಶಾ) ಮತ್ತು ದಿಗ್ವಿಜಯ್ ಸಿಂಗ್ (ರಾಜ್‌ಗಢ) ಅವರ ಭವಿಷ್ಯ ಇಂದೇ ನಿರ್ಧಾರವಾಗಲಿದೆ. ಜತೆಗೆ ಪ್ರಮುಖ ಬಿಜೆಪಿ ನಾಯಕರಾದ ಪುರುಷೋತ್ತಮ್ ರೂಪಾಲಾ (ರಾಜ್‌ಕೋಟ್‌), ಪ್ರಹ್ಲಾದ್ ಜೋಶಿ (ಧಾರವಾಡ) ಮತ್ತು ಎಸ್‌.ಪಿ. ಸಿಂಗ್ ಬಘೇಲ್ (ಆಗ್ರಾ) ಅವರಿಗೂ ಈ ಹಂತ ನಿರ್ಣಾಯಕವಾಗಲಿದೆ.

ಗುಜರಾತ್‌ನಲ್ಲಿ ಒಟ್ಟು 26 ಕ್ಷೇತ್ರಗಳಲ್ಲಿ ಈ ಪೈಕಿ ಒಂದು ಕಡೆ ಈಗಾಗಲೇ ಬಿಜೆಪಿ ಅವಿರೋಧವಾಗಿ ಆಯ್ಕೆಯಾಗಿದೆ. ಇನ್ನು ಉಳಿದ 25, ಮಹಾರಾಷ್ಟ್ರದ 11, ಉತ್ತರ ಪ್ರದೇಶದ 10, ಕರ್ನಾಟಕದ 28 ಸ್ಥಾನಗಳ ಪೈಕಿ 14, ಛತ್ತೀಸ್‌ಗಢದ 7, ಬಿಹಾರದ 5, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ತಲಾ 4 ಮತ್ತು ಗೋವಾದ ಎಲ್ಲ 2, ಮಧ್ಯಪ್ರದೇಶದ 9 ಸ್ಥಾನಗಳಿಗೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ. ಜತೆಗೆ ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ಮತ್ತು ನಗರ್ ಹವೇಲಿ, ದಮನ್ ಮತ್ತು ದಿಯು (2 ಸ್ಥಾನಗಳು)ಗಳಲ್ಲಿಯೂ ಇಂದು ವೋಟಿಂಗ್‌ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ನಾಲ್ಕು ಮುಸ್ಲಿಂ ಬಹುಸಂಖ್ಯಾತ ಕ್ಷೇತ್ರಗಳಿಗೆ ಮಂಗಳವಾರ ಮತದಾನ ನಡೆಯಲಿದ್ದು, ಎಡ ಪಕ್ಷ-ಕಾಂಗ್ರೆಸ್ ಒಕ್ಕೂಟ ಮತ್ತು ಟಿಎಂಸಿ ನಡುವೆ ಅಲ್ಪಸಂಖ್ಯಾತ ಮತಗಳ ವಿಭಜನೆ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಚಾರ ಫಲಿತಾಂಶವನ್ನು ನಿರ್ಣಯಿಸುವ ಸಾಧ್ಯತೆ ಇದೆ.

ಇದನ್ನೂ ಓದಿ:http:Lok Sabha Election 2024: ಮುಂಜಾನೆಯಿಂದಲೇ ಮತದಾನ ಬಿರುಸು, ಎಲ್ಲೆಡೆ ಶಾಂತಿಯುತ

ಉತ್ತರ ಪ್ರದೇಶದ 10 ಲೋಕಸಭಾ ಕ್ಷೇತ್ರಗಳಿಗೆ ಮೂರನೇ ಹಂತದಲ್ಲಿ ಮತದಾನ ನಡೆಯಲಿದ್ದು, ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಕುಟುಂಬ ಎಲ್ಲರ ಗಮನ ಸೆಳೆದಿದೆ. ಡಿಂಪಲ್ ಯಾದವ್ ಅವರು ತಮ್ಮ ಮಾವ ಮುಲಾಯಂ ಸಿಂಗ್ ಯಾದವ್ ಅವರ ನಿಧನದ ನಂತರ ನಡೆದ ಉಪಚುನಾವಣೆಯಲ್ಲಿ ಗೆದ್ದ ಮೈನ್ಪುರಿ ಲೋಕಸಭಾ ಸ್ಥಾನವನ್ನು ಉಳಿಸಿಕೊಳ್ಳುವ ಗುರಿ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ರಾಷ್ಟ್ರೀಯ ಪ್ರಧಾನ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರ ಪುತ್ರ ಅಕ್ಷಯ ಯಾದವ್ ಅವರು ಗೆದ್ದಿದ್ದ ಫಿರೋಜಾಬಾದ್ ಸ್ಥಾನವನ್ನು ಮರಳಿ ಪಡೆಯಲು ಪ್ರಯತ್ನಿಸಲಿದ್ದಾರೆ.

Continue Reading
Advertisement
prajwal ravanna case dk shivakumar poster
ಪ್ರಮುಖ ಸುದ್ದಿ10 mins ago

Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

Naxal activities
ದೇಶ28 mins ago

Naxal activities: 6 ಕುಕ್ಕರ್‌ ಬಾಂಬ್‌, IED ಸ್ಫೋಟಕಗಳು ಪತ್ತೆ; ತಪ್ಪಿದ ಭಾರೀ ನಕ್ಸಲ್‌ ಅಟ್ಯಾಕ್‌

Rohit Sharma
ಕ್ರೀಡೆ45 mins ago

Rohit Sharma: ರೋಹಿತ್ ಶರ್ಮ​ ಕಣ್ಣೀರಿಗೆ ಅಸಲಿ ಕಾರಣ ಇದಂತೆ!

lok sabha election 2024 voting second phase
ಪ್ರಮುಖ ಸುದ್ದಿ58 mins ago

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

T20 World Cup 2024
ಕ್ರೀಡೆ1 hour ago

T20 World Cup 2024: ಮಿನಿ ವಿಶ್ವಕಪ್​ ಸಮರಕ್ಕೆ ಡ್ರಾಪ್ -ಇನ್ ಪಿಚ್ ಅಳವಡಿಕೆ ಕಾರ್ಯ ಪೂರ್ಣ; ವಿಡಿಯೊ ವೈರಲ್​

Ramana Avatara Movie
ಸಿನಿಮಾ1 hour ago

Ramana Avatara Movie: ಬಂಪರ್ ಆಫರ್; ಕೇವಲ 99 ರೂ.ಗೆ ಸಿಗಲಿದೆ ‘ರಾಮನ ಅವತಾರ’ ಸಿನಿಮಾ ಟಿಕೆಟ್

Narendra Modi
ದೇಶ1 hour ago

Narendra Modi: ಮತದಾನದ ಬಳಿಕ ಮಗುವನ್ನು ಎತ್ತಿ ಆಡಿಸಿದ ಪ್ರಧಾನಿ ಮೋದಿ; ವಿಡಿಯೋ ನೋಡಿ

IPL 2024
ಕ್ರೀಡೆ2 hours ago

IPL 2024: ಶತಕ ಬಾರಿಸಿ ಟಿ20ಯಲ್ಲಿ ದಾಖಲೆ ಬರೆದ ಸೂರ್ಯಕುಮಾರ್ ಯಾದವ್​​

chikkaballapur road accident
ಕ್ರೈಂ2 hours ago

Road Accident: ಕಲ್ಲು ಸಾಗಿಸುತ್ತಿದ್ದ ಕ್ಯಾಂಟರ್‌ ಪಲ್ಟಿಯಾಗಿ ಮೂವರ ಸಾವು

World Asthma Day
ಆರೋಗ್ಯ2 hours ago

World Asthma Day: ಅಸ್ತಮಾದಿಂದ ಪಾರಾಗಲು ಈ ಸಂಗತಿ ತಿಳಿದುಕೊಂಡಿರಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ16 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ17 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ17 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌