Same Sex Marriage Verdict: ಸಲಿಂಗ ವಿವಾಹ ಮಾನ್ಯತೆ; ಇಲ್ಲಿವೆ ಸುಪ್ರೀಂ ಕೋರ್ಟ್‌ ಅಣಿಮುತ್ತುಗಳು - Vistara News

ಕೋರ್ಟ್

Same Sex Marriage Verdict: ಸಲಿಂಗ ವಿವಾಹ ಮಾನ್ಯತೆ; ಇಲ್ಲಿವೆ ಸುಪ್ರೀಂ ಕೋರ್ಟ್‌ ಅಣಿಮುತ್ತುಗಳು

ಸುಪ್ರೀಂ ಕೋರ್ಟ್‌ ಈ ತೀರ್ಪಿನ (same sex marriage verdict) ವೇಳೆ ನೀಡಿರುವ ಹಲವು ಪ್ರಮುಖ ಅಭಿಪ್ರಾಯಗಳು ಸರ್ಕಾರಕ್ಕೆ ಸೂಚನೆಗಳಾಗಿ ಮಹತ್ವದ್ದಾಗಿವೆ.

VISTARANEWS.COM


on

Same Sex Marriage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಕುರಿತು ಸುಪ್ರೀಂ ಕೋರ್ಟ್‌ (supreme court) ಇಂದು ಮಹತ್ವದ ತೀರ್ಪು (same sex marriage verdict) ನೀಡಿದ್ದು, ಈ ಕುರಿತು ಕಾನೂನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಮಾತ್ರ ಇದೆ ಎಂದಿದೆ.

ಸುಪ್ರೀಂ ಕೋರ್ಟ್‌ ಈ ತೀರ್ಪಿನ (same sex marriage verdict) ವೇಳೆ ನೀಡಿರುವ ಹಲವು ಪ್ರಮುಖ ಅಭಿಪ್ರಾಯಗಳು ಸರ್ಕಾರಕ್ಕೆ ಸೂಚನೆಯಾಗುವಂತಿದ್ದು, ಈ ಕೆಳಗಿನಂತಿವೆ.

  • ಕೋರ್ಟ್‌ ಕಾನೂನು ರಚಿಸಲಾರದು. ಅದು ಕಾನೂನನ್ನು ವ್ಯಾಖ್ಯಾನಿಸಬಹುದು, ಪರಿಣಾಮವನ್ನು ತರಬಹುದು.
  • ವಿಶೇಷ ವಿವಾಹ ಕಾಯಿದೆಯಲ್ಲಿ ತಿದ್ದುಪಡಿಯ ಬಗ್ಗೆ ಸಂಸತ್ತು ನಿರ್ಧರಿಸಬೇಕು. ಶಾಸಕಾಂಗದ ಅಧಿಕಾರದಲ್ಲಿ ಕೋರ್ಟ್‌ ಮದ್ಯಪ್ರವೇಶಿಸುವುದಿಲ್ಲ.
  • ಮದುವೆಯು ಸ್ಥಿರ ಮತ್ತು ಬದಲಾಗದ ವ್ಯವಸ್ಥೆ ಎಂದು ಹೇಳುವುದು ತಪ್ಪು.
  • ಕ್ವಿಯರ್ ಎಂಬುದು ಯುಗಯುಗಾಂತರಗಳಿಂದ ಇರುವ ನೈಸರ್ಗಿಕ ವಿದ್ಯಮಾನ. ಸಲಿಂಗಕಾಮ ಅಥವಾ ವಿಭಿನ್ನ ಕಾಮವು ನಗರ ಪರಿಕಲ್ಪನೆಯಲ್ಲ ಅಥವಾ ಸಮಾಜದ ಮೇಲ್ವರ್ಗಗಳಿಗೆ ಸೀಮಿತವಾಗಿಲ್ಲ.
  • ಪರಸ್ಪರ ಪ್ರೀತಿ ಮತ್ತು ಸಂಪರ್ಕವನ್ನು ಅನುಭವಿಸುವ ನಮ್ಮ ಸಾಮರ್ಥ್ಯವು ನಮ್ಮನ್ನು ಮನುಷ್ಯರನ್ನಾಗಿ ಮಾಡುತ್ತದೆ. ನಮ್ಮ ಭಾವನೆಗಳನ್ನು ಹಂಚಿಕೊಳ್ಳುವ ಅಗತ್ಯವು ನಮ್ಮನ್ನು ನಾವಾಗುವಂತೆ ಮಾಡುತ್ತದೆ. ಈ ಸಂಬಂಧಗಳು ಹಲವು ರೂಪಗಳನ್ನು ತೆಗೆದುಕೊಳ್ಳಬಹುದು, ಜನ್ಮಜಾತ ಕುಟುಂಬಗಳು, ಪ್ರಣಯ ಸಂಬಂಧಗಳು ಇತ್ಯಾದಿ.
  • ಕುಟುಂಬದ ಭಾಗವಾಗುವ ಅಗತ್ಯವು ಮಾನವ ಗುಣಲಕ್ಷಣದ ಪ್ರಮುಖ ಭಾಗವಾಗಿದೆ ಮತ್ತು ಸ್ವಯಂ ಅಭಿವೃದ್ಧಿಗೆ ಮುಖ್ಯವಾಗಿದೆ.
  • ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ವ್ಯಕ್ತಿಯ ಜೀವನ ಕ್ರಮವನ್ನು ಆಯ್ಕೆ ಮಾಡುವ ಅವಿಭಾಜ್ಯ ಅಂಗ. ಕೆಲವರು ಇದನ್ನು ತಮ್ಮ ಜೀವನದ ಪ್ರಮುಖ ನಿರ್ಧಾರವೆಂದು ಪರಿಗಣಿಸಬಹುದು. ಈ ಹಕ್ಕು ಆರ್ಟಿಕಲ್ 21ರ ಅಡಿಯಲ್ಲಿ ಜೀವನ ಮತ್ತು ಸ್ವಾತಂತ್ರ್ಯದ ಹಕ್ಕಿನ ಮೂಲಕ್ಕೆ ಸಂಬಂಧಿಸಿದೆ.
  • ದಾಂಪತ್ಯಕ್ಕೆ ಪ್ರವೇಶಿಸುವ ಹಕ್ಕು ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಮತ್ತು ಆ ದಾಂಪತ್ಯವನ್ನು ಗುರುತಿಸುವ ಹಕ್ಕನ್ನು ಒಳಗೊಂಡಿದೆ. ಅಂತಹ ಸಾಂಗತ್ಯಗಳನ್ನು ಗುರುತಿಸುವಲ್ಲಿ ವಿಫಲವಾದರೆ ಕ್ವಿಯರ್‌ ದಂಪತಿಗಳ ವಿರುದ್ಧ ತಾರತಮ್ಯ ಉಂಟಾಗುತ್ತದೆ.
  • ಕ್ವಿಯರ್‌ಗಳು ಸೇರಿದಂತೆ ಎಲ್ಲಾ ವ್ಯಕ್ತಿಗಳು ತಮ್ಮ ಜೀವನದ ನೈತಿಕ ಗುಣಮಟ್ಟವನ್ನು ನಿರ್ಣಯಿಸುವ ಹಕ್ಕನ್ನು ಹೊಂದಿದ್ದಾರೆ. ಸ್ವಾತಂತ್ರ್ಯದ ಅರ್ಥವೆಂದರೆ ವ್ಯಕ್ತಿ ತಾನು ಬಯಸಿದಂತೆ ಆಗುವ ಸಾಮರ್ಥ್ಯ.
  • ಕ್ವಿಯರ್‌ ವ್ಯಕ್ತಿಗಳ ಮೇಲೆ ತಾರತಮ್ಯ ಮಾಡಲಾಗದು ಎಂದು ಈ ನ್ಯಾಯಾಲಯ ಗುರುತಿಸಿದೆ. ವಸ್ತು ಪ್ರಯೋಜನಗಳು ಮತ್ತು ಸೇವೆಗಳು ಭಿನ್ನಲಿಂಗೀಯ ದಂಪತಿಗಳತ್ತ ಗಮನವಿಟ್ಟಿವೆ. ಹಾಗೆಂದು ಕ್ವಿಯರ್‌ ದಂಪತಿಗಳಿಗೆ ಇವನ್ನು ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ.
  • ಅವಿವಾಹಿತ ದಂಪತಿಗಳು ತಮ್ಮ ಸಂಬಂಧದ ಬಗ್ಗೆ ಗಂಭೀರವಾಗಿಲ್ಲ ಎಂದು ಭಾವಿಸಲು ಸಾಧ್ಯವಿಲ್ಲ. ಆದ್ದರಿಂದ ವಿಭಿನ್ನ ದಂಪತಿಗಳು ಮಕ್ಕಳನ್ನು ದತ್ತು ಪಡೆಯುವ ಹಕ್ಕನ್ನು ನಿರಾಕರಿಸುವುದು ಅಸಾಂವಿಧಾನಿಕ.
  • ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ದಾಂಪತ್ಯಕ್ಕೆ ಪ್ರವೇಶಿಸುವ ಹಕ್ಕನ್ನು ನಿರ್ಬಂಧಿಸಲಾಗುವುದಿಲ್ಲ.
  • ಕೌಟುಂಬಿಕ ವಿಚಾರಗಳಿಂದ ಸರ್ಕಾರದ ವ್ಯಾಪ್ತಿಯನ್ನು ಹಿಂತೆಗೆದುಕೊಳ್ಳುವುದರಿಂದ, ದುರ್ಬಲ ವ್ಯಕ್ತಿಗಳು ಅಸುರಕ್ಷಿತರಾಗುತ್ತಾರೆ. ಹೀಗಾಗಿ, ಖಾಸಗಿ ಜಾಗದಲ್ಲಿನ ಎಲ್ಲಾ ಆಪ್ತ ಚಟುವಟಿಕೆಗಳು ಕಾನೂನಾತ್ಮಕ ಆಡಳಿತದ ಪರಿಶೀಲನೆಯನ್ನು ಮೀರಿವೆ ಎಂದು ಹೇಳಲಾಗುವುದಿಲ್ಲ.
  • ವಿಶೇಷ ವಿವಾಹ ಕಾಯಿದೆಯಲ್ಲಿ ಬದಲಾವಣೆಯನ್ನು ಸಂಸತ್ತು ನಿರ್ಧರಿಸುತ್ತದೆ. ಈ ನ್ಯಾಯಾಲಯವು ಶಾಸಕಾಂಗದ ವ್ಯಾಪ್ತಿಗೆ ಪ್ರವೇಶಿಸದಂತೆ ಎಚ್ಚರಿಕೆ ವಹಿಸುತ್ತದೆ.
  • ಪಡಿತರ ಚೀಟಿಗಳು, ಪಿಂಚಣಿ, ಗ್ರಾಚ್ಯುಟಿ ಮತ್ತು ಉತ್ತರಾಧಿಕಾರ ಹಕ್ಕು ಸೇರಿದಂತೆ ಸಲಿಂಗ ದಂಪತಿಗಳ ಕಳವಳಗಳನ್ನು ಪರಿಹರಿಸಲು ಕೇಂದ್ರವು ಕ್ಯಾಬಿನೆಟ್ ಕಾರ್ಯದರ್ಶಿ ನೇತೃತ್ವದ ಸಮಿತಿಯೊಂದಿಗೆ ಮುಂದುವರಿಯಬೇಕು.
  • ಟ್ರಾನ್ಸ್‌ಜೆಂಡರ್‌ ಪುರುಷನು ಮಹಿಳೆಯನ್ನು ಮದುವೆಯಾಗಬಹುದು, ಮತ್ತು ಟ್ರಾನ್ಸ್‌ಜೆಂಡರ್‌ ಮಹಿಳೆಯು ಪುರುಷನನ್ನು ಮದುವೆಯಾಗಬಹುದು.
  • ಸಲಿಂಗ ವಿವಾಹಗಳನ್ನು ಗುರುತಿಸದ ಕಾರಣ ವಿಶೇಷ ವಿವಾಹ ಕಾಯಿದೆಯನ್ನು ಅಸಾಂವಿಧಾನಿಕ ಎನ್ನಲು ಸಾಧ್ಯವಿಲ್ಲ. ಹೊಸ ವಿವಾಹ ವ್ಯವಸ್ಥೆಯನ್ನು ರಚಿಸಲು ನಾವು ಸಂಸತ್ತು ಅಥವಾ ಸರ್ಕಾರವನ್ನು ಒತ್ತಾಯಿಸಲು ಸಾಧ್ಯವಿಲ್ಲ.

ಇದನ್ನೂ ಓದಿ: Same sex marriage verdict: ಸಲಿಂಗ ವಿವಾಹ ಮಾನ್ಯತೆ ಚೆಂಡು ಸಂಸತ್‌ ಅಂಗಳಕ್ಕೆ; ಸುಪ್ರೀಂ ಕೋರ್ಟ್‌ನಿಂದ 4 ಪ್ರತ್ಯೇಕ ತೀರ್ಪು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ. ಜೂನ್‌ 1ರವರೆಗೆ ಅವರಿಗೆ ಸುಪ್ರೀಂ ಕೋರ್ಟ್‌ ಜಾಮೀನು ನೀಡಿದೆ.

VISTARANEWS.COM


on

Aravind Kejriwal
Koo

ನವದೆಹಲಿ: ಏಳು ಹಂತದ ಲೋಕಸಭೆ ಚುನಾವಣೆಯ (Lok Sabha Election 2024) ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರಿಗೆ ಸುಪ್ರೀಂ ಕೋರ್ಟ್ (Supreme court) ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಅಬಕಾರಿ ನೀತಿ (Delhi Excise policy) ಹಗರಣದಲ್ಲಿ ಮಾರ್ಚ್ 21ರಂದು ಜಾರಿ ನಿರ್ದೇಶನಾಲಯದಿಂದ (ED) ಬಂಧಿಸಲ್ಪಟ್ಟಿರುವ ಆಮ್ ಆದ್ಮಿ ಪಕ್ಷದ (Aam Admi Party) ನಾಯಕ ಜೂನ್ 2ರೊಳಗೆ ಜೈಲು ಅಧಿಕಾರಿಗಳಿಗೆ ಶರಣಾಗಬೇಕಿದೆ.

ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ (Illegal money transaction) ವರ್ಗಾವಣೆ ಪ್ರಕರಣದಲ್ಲಿ ಅರೆಸ್ಟ್‌ ಆಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌(Supreme Court)ನಲ್ಲಿ ನಡೆಯಿತು. ಸದ್ಯ ತಿಹಾರ್‌ ಜೈಲಿನಲ್ಲಿರುವ ಕೇಜ್ರಿವಾಲ್‌ ಲೋಕಸಭೆ ಚುನಾವಣೆ ಹಿನ್ನೆಲೆ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠವು ಎರಡು ಭಾಗಗಳಾಗಿ ವಿಂಗಡಿಸಿದೆ. ಅವರ ಪ್ರಮುಖ ಅರ್ಜಿಯು ಕೇಂದ್ರ ತನಿಖಾ ಸಂಸ್ಥೆಯಿಂದ ತನ್ನ ಬಂಧನವನ್ನು ಪ್ರಶ್ನಿಸಿದೆ ಮತ್ತು ಅದನ್ನು “ಕಾನೂನುಬಾಹಿರ” ಎಂದು ಘೋಷಿಸುವಂತೆ ಕೋರಿದೆ. ಎರಡನೇ ಅಂಶವು ನಡೆಯುತ್ತಿರುವ ಲೋಕಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಮಧ್ಯಂತರ ಜಾಮೀನು ಮಂಜೂರು ಮಾಡಲು ಸಂಬಂಧಿಸಿದೆ. ಎರಡನೇ ಭಾಗಕ್ಕೆ ಸಂಬಂಧಿಸಿ ಇಂದು ಕೋರ್ಟ್‌ ತೀರ್ಪು ನೀಡಿದೆ.

ನ್ಯಾಯಮೂರ್ತಿ ಸಂಜೀವ್‌ ಖನ್ನಾ ನೇತೃತ್ವದ ಪೀಠ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದೆ. ED ಪರ ವಕೀಲ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ, ಅರವಿಂದ ಕೇಜ್ರಿವಾಲ್‌ ಅವರಿಗೆ ಚುನಾವಣೆ ದೃಷ್ಟಿಯಿಂದ ಜಾಮೀನು ನೀಡಿದರೆ ಜನರಿಗೆ ತಪ್ಪು ಸಂದೇಶ ಹೋದಂತಾಗುತ್ತದೆ. ರಾಜಕಾರಣಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯ ಎಂದು ಜನ ಭಾವಿಸುತ್ತಾರೆ ಎಂದು ಈಗಾಗಲೇ ವಾದ ಮಂಡಿಸಿದ್ದರು. ಇದಾದ ಬಳಿಕ ಈ ಪ್ರಕರಣವನ್ನು ನ್ಯಾಯಪೀಠ ಎರಡು ಭಾಗವನ್ನಾಗಿ ವಿಭಜಿಸಿತ್ತು. ಒಂದು ಇಡಿ ಬಂಧನ ಪ್ರಶ್ನಿಸಿ ಕೇಜ್ರಿವಾಲ್‌ ಸಲ್ಲಿಸಿದ ಅರ್ಜಿ. ಮತ್ತೊಂದು ಮಧ್ಯಂತರ ಜಾಮೀನು ಅರ್ಜಿ. ಮಂಗಳವಾರ ವಿಚಾರಣೆ ನಡೆಸಿದ ಕೋರ್ಟ್‌ ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನವನ್ನು ಮೇ 20ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿತ್ತು ಮತ್ತು ಮಧ್ಯಂತರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ನಡೆಸುವುದಾಗಿ ಹೇಳಿತ್ತು.

ಏ.9ರಂದು ಇದೇ ಪ್ರಕರಣ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್‌, ಅಕ್ರಮ ಹಣ ವರ್ಗಾವಣೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಪದೇ ಪದೇ ಸಮನ್ಸ್‌ ನೀಡಿದರೂ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇಡಿ ಕೊನೆಗೆ ಅವರನ್ನು ಅರೆಸ್ಟ್‌ ಮಾಡಲೇಬೇಕಾಗಿತ್ತು. ಅದರಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಹೇಳಿತ್ತು. ಹೀಗಾಗಿ ಕೇಜ್ರಿವಾಲ್‌ ಕೊನೆಗೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಇದನ್ನೂ ಓದಿ:Char Dham Yatra: ಇಂದಿನಿಂದ ಪವಿತ್ರ ಚಾರ್‌ಧಾಮ್‌ ಯಾತ್ರೆ ಆರಂಭ

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Arvind Kejriwal: ಕೇಜ್ರಿವಾಲ್‌ ಜಾಮೀನು ಅರ್ಜಿ ಇಂದು ವಿಚಾರಣೆ; ದಿಲ್ಲಿ ಸಿಎಂಗೆ ಜೈಲಾ…? ಬೇಲಾ?

Continue Reading

ದೇಶ

MP High Court: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ; ಮಹತ್ವದ ತೀರ್ಪು ಪ್ರಕಟಿಸಿದ ಕೋರ್ಟ್‌

MP High Court: ಮಧ್ಯ ಪ್ರದೇಶ ಹೈಕೋರ್ಟ್‌ ನೀಡಿದ ಮಹತ್ವದ ತೀರ್ಪಿನಲ್ಲಿ ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

VISTARANEWS.COM


on

MP High Court
Koo

ಭೋಪಾಲ್‌: ಪತ್ನಿಯೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ (MP High Court) ತೀರ್ಪು ನೀಡಿದೆ. ವೈವಾಹಿಕ ಅತ್ಯಾಚಾರವು ಭಾರತೀಯ ದಂಡ ಸಂಹಿತೆಯಡಿ ಅಪರಾಧವಲ್ಲದ ಕಾರಣ, ಈ ಪ್ರಕರಣದಲ್ಲಿ ಹೆಂಡತಿಯ ‘ಸಮ್ಮತಿ’ ಎಂಬ ಪರಿಕಲ್ಪನೆಯು ‘ಮುಖ್ಯವಲ್ಲ’ ಎಂದು ಅದು ಹೇಳಿದೆ. ಐಪಿಸಿ ಸೆಕ್ಷನ್‌ 377 (ಅಸ್ವಾಭಾವಿಕ ಲೈಂಗಿಕತೆ) ಮತ್ತು 506 (ಕ್ರಿಮಿನಲ್‌ ಬೆದರಿಕೆ) ಅಡಿಯಲ್ಲಿ ತನ್ನ ಪತಿ ವಿರುದ್ಧ ವಿಚ್ಛೇದಿತ ಪತ್ನಿ ದಾಖಲಿಸಿದ ದೂರನ್ನು ರದ್ದುಗೊಳಿಸುವಾಗ ನ್ಯಾಯಮೂರ್ತಿ ಜಿ.ಎಸ್‌.ಅಹ್ಲುವಾಲಿಯಾ ಈ ತೀರ್ಪು ನೀಡಿದ್ದಾರೆ.

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳ ಹಲವು ತೀರ್ಪುಗಳು ಮತ್ತು ಐಪಿಸಿಯ ಸೆಕ್ಷನ್ 375ರ ಅಡಿಯಲ್ಲಿನ ಅತ್ಯಾಚಾರದ ವ್ಯಾಖ್ಯಾನವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಜಿ.ಎಸ್.ಅಹ್ಲುವಾಲಿಯಾ ಅವರು, ಪತಿಯು ತನ್ನ ಪತ್ನಿಯೊಂದಿಗೆ ಗುದ ಸಂಭೋಗದಲ್ಲಿ ತೊಡಗುವುದು ಅತ್ಯಾಚಾರವಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಹಿನ್ನೆಲೆ

ದಂಪತಿಯು 2019ರ ಮೇಯಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ಅದಾಗಿ ಒಂದು ವರ್ಷದ ಮೊದಲೇ ಅಂದರೆ 2020ರ ಫೆಬ್ರವರಿಯಿಂದ ಪತ್ನಿ ಅವರ ಪೋಷಕರ ಮನೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ ಎಂದು ಪತಿ ಹೇಳಿದ್ದಾರೆ. ಇತ್ತ ಪತ್ನಿ ಪತಿ ಮತ್ತು ಅತ್ತೆಯ ವಿರುದ್ಧ ವರದಕ್ಷಿಣೆ ಕಿರುಕುಳ ದಾಖಲಿಸಿದ್ದಾರೆ. ಸದ್ಯ ಇದು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಮಧ್ಯೆ 2022ರ ಜುಲೈಯಲ್ಲಿ ಪತ್ನಿ ಮತ್ತೆ ಅಸ್ವಾಭಾವಿಕ ಲೈಂಗಿಕತೆಯ ಆರೋಪ ಹೊರಿಸಿ ಪತಿಯ ವಿರುದ್ಧ ಮತ್ತೊಂದು ಎಫ್‌ಆರ್‌ಐ ದಾಖಲಿಸಿದ್ದರು.

“ವೈವಾಹಿಕ ಅತ್ಯಾಚಾರವನ್ನು ಇಲ್ಲಿಯವರೆಗೆ ಗುರುತಿಸಲಾಗಿಲ್ಲ” ಎಂದು ನ್ಯಾಯಮೂರ್ತಿ ಅಹ್ಲುವಾಲಿಯಾ ಹೇಳಿ ಅರ್ಜಿದಾರರ ವಿರುದ್ಧದ ಎಫ್ಐಆರ್ ಅನ್ನು ರದ್ದುಗೊಳಿಸಿದರು. ಐಪಿಸಿ ಸೆಕ್ಷನ್‌ 375ರ ಅಡಿಯಲ್ಲಿ ಅತ್ಯಾಚಾರದ ತಿದ್ದುಪಡಿ ವ್ಯಾಖ್ಯಾನವನ್ನು ಉಲ್ಲೇಖಿಸಿ, ಕೆಲವು ಸಂದರ್ಭಗಳಲ್ಲಿ ಅಸಹಜ ಕೃತ್ಯಕ್ಕೆ ಪತ್ನಿಯ ಒಪ್ಪಿಗೆ ಪಡೆಯುವುದು ಪ್ರಾಮುಖ್ಯತೆಯನ್ನು ಕಳೆದುಕೊಳ್ಳುವಂತೆ ಮಾಡುತ್ತದೆ ಎಂದೂ ಹೈಕೋರ್ಟ್‌ ಹೇಳಿದೆ.

ಇದನ್ನೂ ಓದಿ: Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

ವಿಧಿಬದ್ಧವಾಗಿ ನಡೆಯದ ಮದುವೆಗೆ ಮಾನ್ಯತೆ ಇಲ್ಲ: ಸುಪ್ರೀಂ ಕೋರ್ಟ್‌

ಹಿಂದೂ ವಿವಾಹ ಶಾಸ್ತ್ರಬದ್ಧವಾಗಿ ಅಥವಾ ವಿಧಿಬದ್ಧವಾಗಿ ನಡೆಯದೇ ಇದ್ದಲ್ಲಿ ಅದಕ್ಕೆ ಮಾನ್ಯತೆ ಇಲ್ಲ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ಸ್ಪಷ್ಟಪಡಿಸಿದೆ. ಹಿಂದೂ ಸಂಪ್ರದಾಯದ ಪ್ರಕಾರ ಮದುವೆ ಅಂದರೆ ಕೇವಲ ಸಂಗೀತ, ನೃತ್ಯ ಸಂಭ್ರಮ ಅಲ್ಲ ಅಥವಾ ವ್ಯವಹಾರ ಅಲ್ಲ. ಕೆಲವು ವಿಧಿ ವಿಧಾನಗಳು, ಸಂಪ್ರದಾಯಗಳ ಮೂಲಕ ನಡೆದರೆ ಮಾತ್ರ ವಿವಾಹಕ್ಕೆ ಮಾನ್ಯತೆ ಇರುತ್ತದೆ. ಹಿಂದೂ ವಿವಾಹ ಕಾಯ್ದೆ ಪ್ರಕಾರ ಈ ವಿಧಿವಿಧಾನಗಳು, ಸಂಪ್ರದಾಯಗಳು ನಡೆದರೆ ಮಾತ್ರ ಮದುವೆಗೆ ಮಾನ್ಯತೆ ದೊರೆಯುತ್ತದೆ ಎಂದು ಕೋರ್ಟ್‌ ಹೇಳಿದೆ.

ಇತ್ತೀಚೆಗೆ ಇಬ್ಬರು ಪೈಲಟ್‌ ಆಗಿ ಕೆಲಸ ಮಾಡುತ್ತಿದ್ದ ದಂಪತಿ ಸಲ್ಲಿಸಿದ್ದ ವಿಚ್ಛೇದನಾ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗರತ್ನ ಮತ್ತು ಅಗಸ್ಟಿನ್‌ ಜಾರ್ಜ್‌ ಮಸಿಹ್‌ ಇದ್ದ ಪೀಠ, ಹಿಂದೂ ವಿವಾಹವು ಸೂಕ್ತವಾದ ಆಚರಣೆಗಳು ಇಲ್ಲದೆಯೇ ಆಗಿದ್ದಲ್ಲಿ, ಅಂತಹ ವಿವಾಹವನ್ನು ‘ಹಿಂದೂ ವಿವಾಹವೆಂದು ಪರಿಗಣಿಸಲಾಗದು’ ಎಂದು ಏಪ್ರಿಲ್‌ 19ರ ಆದೇಶದಲ್ಲಿ ಹೇಳಿತ್ತು. ‘ಹಿಂದೂ ವಿವಾಹದಲ್ಲಿ ಸಪ್ತಪದಿ ಅಂದರೆ ಋಗ್ವೇದದ ಪ್ರಕಾರ, ಏಳನೆಯ ಹೆಜ್ಜೆಯನ್ನು ಪೂರ್ಣಗೊಳಿಸಿದ ನಂತರ ವರನು ವಧುವಿಗೆ ‘ಏಳು ಹೆಜ್ಜೆಗಳ ಮೂಲಕ ನಾವು ಸಖರಾಗಿದ್ದೇವೆ. ಹೀಗಾಗಿ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ಚೆನ್ನಾಗಿ ಯೋಚಿಸಿ ನಿರ್ಧಾರಕ್ಕೆ ಬರಬೇಕು. ಹಿಂದೂ ವಿವಾಹ ಅಂದರೆ ಅದೊಂದು ಸಂಸ್ಕಾರ. ಭಾರತೀಯ ಸಮಾಜದಲ್ಲಿ ಮದುವೆಗೆ ಅದರದ್ದೇ ಆದ ಮೌಲ್ಯಗಳಿವೆ ಎಂದು ಹೇಳಿದೆ.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲೂ ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ ತನಿಖೆಗೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ

Covishield Vaccine: ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ.

VISTARANEWS.COM


on

Covishield vaccine supreme court
Koo

ಹೊಸದಿಲ್ಲಿ: ಬ್ರಿಟನ್‌ನಲ್ಲಿ (UK) ಕೋವಿಶೀಲ್ಡ್‌ ಲಸಿಕೆಯ (Covishield vaccine) ಅಡ್ಡ ಪರಿಣಾಮಗಳ (Side effects) ಬಗ್ಗೆ ಕೋಲಾಹಲ ಹೆಚ್ಚುತ್ತಿರುವಂತೆ, ಭಾರತದಲ್ಲಿಯೂ ಕೋವಿಶೀಲ್ಡ್‌ ಲಸಿಕೆ ಸೈಡ್‌ ಎಫೆಕ್ಟ್‌ಗಳ ಬಗೆಗೆ ಅಧ್ಯಯನ ನಡೆಸಲು ಆದೇಶಿಸುವಂತೆ ವಕೀಲರೊಬ್ಬರು ಸುಪ್ರೀಂ ಕೋರ್ಟ್‌ನಲ್ಲಿ (Supreme court) ಮನವಿ ಸಲ್ಲಿಸಿದ್ದಾರೆ.

ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ (ಏಮ್ಸ್-‌ AIIMS) ವೈದ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನು ರಚಿಸುವ ಮೂಲಕ ಅಸ್ಟ್ರಾಜೆನೆಕಾದ (AstraZeneca) ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸುವಂತೆ ಕೋರಿ ವಕೀಲ ವಿಶಾಲ್ ತಿವಾರಿ ಅವರು ಅರ್ಜಿ ಸಲ್ಲಿಸಿದ್ದಾರೆ. ಸಮಿತಿಯು ಏಮ್ಸ್‌ ನಿರ್ದೇಶಕರ ನೇತೃತ್ವವನ್ನು ಹೊಂದಿರಬೇಕು; ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರು ಮೇಲ್ವಿಚಾರಣೆ ಮಾಡಬೇಕು; ಕೋವಿಶೀಲ್ಡ್ ಲಸಿಕೆ, ಅದರ ಅಡ್ಡಪರಿಣಾಮಗಳು ಮತ್ತು ಅಪಾಯಕಾರಿ ಅಂಶಗಳನ್ನು ಪರೀಕ್ಷಿಸಬೇಕು ಎಂದವರು ಕೋರಿದ್ದಾರೆ.

COVID-19 ಸಮಯದಲ್ಲಿ ವ್ಯಾಕ್ಸಿನೇಷನ್ ಅಭಿಯಾನದ ಅಡ್ಡ ಪರಿಣಾಮಗಳಿಂದ ಮರಣ ಹೊಂದಿದ, ತೀವ್ರವಾಗಿ ಅಸ್ವಸ್ಥರಾದ, ಅಂಗವಿಕಲರಾದ ನಾಗರಿಕರಿಗೆ ಲಸಿಕೆ ಹಾನಿ ಪಾವತಿ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಸ್ಥಾಪಿಸಬೇಕು. ಜನರಿಗೆ ಪರಿಹಾರ ನೀಡಲು ಸುಪ್ರೀಂ ಕೋರ್ಟ್‌ ಸರ್ಕಾರಕ್ಕೆ ನಿರ್ದೇಶನಗಳನ್ನು ನೀಡಬೇಕು ಎಂದು ತಿವಾರಿ ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಶೀಲ್ಡ್ ಲಸಿಕೆ ಅಪರೂಪದ ಸಂದರ್ಭಗಳಲ್ಲಿ ಅಡ್ಡ ಪರಿಣಾಮಗಳನ್ನು ಕಾರಣವಾಗಬಹುದು ಎಂದು ಇತ್ತೀಚೆಗೆ ಕಂಪನಿ ಬಹಿರಂಗಪಡಿಸಿದ ಹಿನ್ನೆಲೆಯಲ್ಲಿ ತಿವಾರಿ ಅರ್ಜಿ ಸಲ್ಲಿಸಿದ್ದಾರೆ. ಫಾರ್ಮಾಸ್ಯುಟಿಕಲ್ ಕಂಪನಿ ಮತ್ತು ಲಸಿಕೆ ಡೆವಲಪರ್ ಆಸ್ಟ್ರಾಜೆನೆಕಾ ಬ್ರಿಟನ್‌ನ ನ್ಯಾಯಾಲಯದಲ್ಲಿ ಇದನ್ನು ತಿಳಿಸಿದೆ. ಇದು ರಕ್ತದಲ್ಲಿ ಪ್ಲೇಟ್‌ಲೆಟ್ ಕಡಿಮೆಯಾಗುವಿಕೆ ಮತ್ತು ಅತ್ಯಂತ ಅಪರೂಪದ ಪ್ರಕರಣಗಳಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಬಹುದು ಎಂದು ಹೇಳಿದೆ.

“ಅಸ್ಟ್ರಾಜೆನೆಕಾ ಕೋವಿಶೀಲ್ಡ್‌ ಲಸಿಕೆ ಮತ್ತು ಥ್ರಂಬೋಸಿಸ್ (ಟಿಟಿಎಸ್) ನಡುವಿನ ಸಂಬಂಧವನ್ನು ಒಪ್ಪಿಕೊಂಡಿದೆ. ಅಸ್ಟ್ರಾಜೆನೆಕಾ ಲಸಿಕೆ ಸೂತ್ರವನ್ನು ಪುಣೆ ಮೂಲದ ಲಸಿಕೆ ತಯಾರಕ ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ನೀಡಲಾಗಿದೆ. ಕೋವಿಶೀಲ್ಡ್ ತಯಾರಿಕೆಗಾಗಿ ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಭಾರತದಲ್ಲಿ 175 ಕೋಟಿಗೂ ಹೆಚ್ಚು ಜನ ಕೋವಿಶೀಲ್ಡ್ ಅನ್ನು ಪಡೆದರು” ಎಂದು ಮನವಿಯಲ್ಲಿ ತಿಳಿಸಲಾಗಿದೆ. ಕೋವಿಶೀಲ್ಡ್‌ ಜೊತೆಗೆ ಭಾರತೀಯ ತಯಾರಿಕೆಯಾದ Covaxin ಅನ್ನು ಕೂಡ ಭಾರತದಲ್ಲಿ ನೀಡಲಾಗಿತ್ತು.

ಕಳೆದ ವರ್ಷ ಲಂಡನ್‌ನಲ್ಲಿ ಜೇಮೀ ಸ್ಕಾಟ್ ಎಂಬವರು ಕಂಪನಿ ವಿರುದ್ಧ ಪ್ರಕರಣವನ್ನು ದಾಖಲಿಸಿದ್ದರು. ಅವರಲ್ಲಿ ಲಸಿಕೆ ಪಡೆದ ಬಳಿಕ ರಕ್ತ ಹೆಪ್ಪುಗಟ್ಟುವಿಕೆ ಮತ್ತು ಮೆದುಳಿನಲ್ಲಿ ರಕ್ತಸ್ರಾವವ ಉಂಟಾಗಿತ್ತು. ಶಾಶ್ವತ ಮಿದುಳಿನ ಗಾಯ ಉಂಟಾಗಿತ್ತು. ಇವರೂ ಸೇರಿ UKಯಲ್ಲಿ ಐವತ್ತೊಂದು ಪ್ರಕರಣಗಳನ್ನು ದಾಖಲಿಸಲಾಗಿದೆ. ಸಂತ್ರಸ್ತರು ಮತ್ತು ಸಂಬಂಧಿಕರು ಸುಮಾರು 100 ಮಿಲಿಯನ್ ಪೌಂಡ್‌ ಪರಿಹಾರವನ್ನು ಬಯಸಿದ್ದಾರೆ.

ಭಾರತದಲ್ಲಿ, ಕೋವಿಡ್ -19 ರ ನಂತರ ಹೃದಯಾಘಾತ ಮತ್ತು ವ್ಯಕ್ತಿಗಳ ಹಠಾತ್ ಕುಸಿತದ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಯುವಜನರಲ್ಲಿಯೂ ಹೃದಯಾಘಾತದ ಪ್ರಕರಣಗಳು ಸಂಭವಿಸಿವೆ. ಕೋವಿಶೀಲ್ಡ್‌ ಮಾಲಿಕ ಕಂಪನಿಯ ಮಾಹಿತಿ ದಾಖಲಾತಿಯು ನಮ್ಮಲ್ಲಿಯೂ ನಾಗರಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೀಡಲಾದ ಕೋವಿಶೀಲ್ಡ್ ಲಸಿಕೆಯ ಅಪಾಯಗಳ ಬಗ್ಗೆ ಯೋಚಿಸಲು ಒತ್ತಾಯಿಸಿದೆ ಎಂದು ಮನವಿಯಲ್ಲಿ ಹೇಳಿದೆ.

ಈ ಮೂಲಕ ಭಾರತೀಯ ನಾಗರಿಕರ ಸುರಕ್ಷತೆ ಮತ್ತು ಆರೋಗ್ಯದ ದೃಷ್ಟಿಯಿಂದ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಿವಾರಿ ಅವರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಲಸಿಕೆಯ ದುಷ್ಪರಿಣಾಮಗಳಿಗೆ ನಷ್ಟಪರಿಹಾರವನ್ನು ಕೋರಿದ್ದು, ಯುಕೆಯಂತಹ ಕೆಲವು ದೇಶಗಳಲ್ಲಿಯೂ ವ್ಯಾಕ್ಸಿನೇಷನ್‌ನಿಂದ ತೀವ್ರವಾಗಿ ಅಂಗವಿಕಲರಾದ ಜನರಿಗೆ ನಷ್ಟ ಪಾವತಿ ವ್ಯವಸ್ಥೆ ಇದೆ ಎಂದಿದ್ದಾರೆ.

ಇದನ್ನೂ ಓದಿ: Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Continue Reading

ಪ್ರಮುಖ ಸುದ್ದಿ

Kanthesh : ಅಶ್ಲೀಲ ವಿಡಿಯೊ ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದ ಈಶ್ವರಪ್ಪ ಪುತ್ರ ಕಾಂತೇಶ್​​

Kanthesh : ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

VISTARANEWS.COM


on

Kantesh
Koo

ಬೆಂಗಳೂರು: ಕರ್ನಾಟkದಲ್ಲಿ ಈಗ ಮಹಿಳೆಯರ ಮೇಲಿನ ದೌರ್ಜನ್ಯದ ಕುರಿತ ಚರ್ಚೆ ಜೋರಾಗಿ ನಡೆಯುತ್ತಿದೆ. ಲೈಂಗಿಕ ಹಗರಣವೊಂದು ಬಯಲಾದ ಬಳಿಕ ಈ ವಿಷಯ ಗಂಭೀರ ಎನಿಸಿದೆ. ಪ್ರಜ್ವಲ್ ರೇವಣ್ಣ ಅವರದ್ದು ಎಂದು ಹೇಳಲಾದ ಅಶ್ಲೀಲ ವಿಡಿಯೊ ಹರಿದಾಡಿ ಕೇಸು ದಾಖಲಾಗಿ, ತನಿಖಾ ತಂಡ ರಚನೆಯಾದ ಬಳಿಕ ಚರ್ಚೆಗೆ ಸಾಕಷ್ಟು ವಿಷಯಗಳು ಸಿಕ್ಕಿವೆ. ಇವೆಲ್ಲದರ ನಡುವೆ ಬಿಜೆಪಿಯ ರಾಷ್ಟ್ರೀಯ ನಾಯಕರ ಮಾತಿಗೆ ಸೊಪ್ಪು ಹಾಕದೇ ಪಕ್ಷೇತರರಾಗಿ ಶಿವಮೊಗ್ಗ ಚುನಾವಣಾ ಕಣಕ್ಕೆ ಇಳಿದಿರುವ ಮಾಜಿ ಸಚಿವ ಈಶ್ವರಪ್ಪ ಅವರ ಪುತ್ರ ಕಾಂತೇಶ್ (Kanthesh )​ ಕೂಡ ತಮಗೆ ಸಂಬಂಧಿಸಿದ ತಮ್ಮ ಮಾನ ಹಾನಿ ಮಾಡುವ ಯಾವುದೇ ಸುದ್ದಿಗಳನ್ನು ಪ್ರಕಟಿಸದಂತೆ ಕೋರ್ಟ್​​ನಿಂದ ನಿರ್ಬಂಧ ತಂದಿದ್ದಾರೆ. ಕಾಂತೇಶ್, ಮಾಧ್ಯಮಗಳಿಗೆ ನಿರ್ಬಂಧ ಕೋರಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಯಾವುದೇ ಮಾನಹಾನಿಕರ ದೃಶ್ಯ ಪ್ರಸಾರ ಮಾಡದಂತೆ ಮಧ್ಯಂತರ ನಿರ್ಬಂಧಕಾಜ್ಞೆ ಹೊರಡಿಸಿದೆ.

ಲೋಕಸಭೆ ಚುನಾವಣೆ ವೇಳೆ ತಮ್ಮ ಹೆಸರಿಗೆ ಮಸಿ ಬಳಿಯುವ ಸಾಧ್ಯತೆಗಳಿವೆ. ದುರುದ್ದೇಶಪೂರಿತ ವಿಡಿಯೊ ಅಥವಾ ಇನ್ಯಾವುದೇ ಮಾಹಿತಿಗಳನ್ನು ಭಿತ್ತರಿಸುವ ಸಾಧ್ಯತೆಗಳಿವೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಕಾಂತೇಶ್​ ಅವರು ದೃಶ್ಯಗಳ ಪ್ರಸಾರಕ್ಕೆ ನಿರ್ಬಂಧ ಕೋರಿ ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಕೋರ್ಟ್​ ಪರಿಗಣಿಸಿದೆ.

ಅರ್ಜಿಯಲ್ಲಿ ಏನಿದೆ?:

ಲೋಕಸಭೆ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ಕೆಲ ಮಾಧ್ಯಮಗಳು ನನ್ನ ಘನತೆ, ಗೌರವ ಮತ್ತು ಮಾನಹಾನಿ ಮಾಡಲು ಪ್ರಯತ್ನಿಸುತ್ತಿವೆ ಎಂಬ ಅನುಮಾನಗಳಿವೆ. ನನ್ನನ್ನೇ ನಕಲು ಮಾಡಿದ ಅಶ್ಲೀಲ ಪೋಟೊ, ವಿಡಿಯೊ ಮತ್ತು ಅಡಿಯೊಗಳನ್ನು ಪ್ರಸಾರ ಮಾಡಲು ಯತ್ನಿಸುತ್ತಿವೆ. ಒಂದೊಮ್ಮೆ ಅಂತಹ ಅಕ್ಷೇಪಾರ್ಹ ವಿಡಿಯೊ. ಫೋಟೊಗಳು ಪ್ರಸಾರಗೊಂಡರೆ ಅಥವಾ ಪ್ರಕಟವಾದರೆ ನನ್ನ ಮಾನಹಾನಿಯಾಗುತ್ತದೆ. ಆದ್ದರಿಂದ ಮಾಧ್ಯಮಗಳ ವಿರುದ್ಧ ಮಧ್ಯಂತರ ನಿರ್ಬಂಧಕಾಜ್ಞೆ ಆದೇಶ ನೀಡಬೇಕು’ ಎಂದು ಕಾಂತೇಶ್ ದಾವೆಯಲ್ಲಿ ಕೋರಿದ್ದಾರೆ.

ಯಡಿಯೂರಪ್ಪ ವಿರುದ್ಧ ಬಂಡೆದ್ದ ಅಪ್ಪ, ಮಗ

ಮಾಜಿ ಸಚಿವ ಹಾಗೂ ಬಿಜೆಪಿ ಕಟ್ಟಾಳು ಕೆಎಸ್​ ಈಶ್ವರಪ್ಪ ಪುತ್ರ ಕಾಂತೇಶ್ ಅವರು ಈ ಬಾರಿ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಹೈಕಮಾಂಡ್​ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ನೀಡಿದೆ. ಆಕ್ರೋಶಗೊಂಡಿರುವ ಕೆಎಸ್ ಈಶ್ವರಪ್ಪ ಯಡಿಯೂರಪ್ಪ ಹಾಗೂ ಪುತ್ರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಸಿಡಿದೆದ್ದಿದ್ದಾರೆ. ಕುಟುಂಬ ರಾಜಕಾರಣ ಎಂದು ಹೇಳಿದ್ದಾರೆ. ಕುಟುಂಬ ರಾಜಕಾರಣಕ್ಕೆ ಅಂತ್ಯ ಹಾಡಲು ಶಿವಮೊಗ್ಗದಲ್ಲಿ ಬಿಎಸ್​ವೈ ಪುತ್ರ ರಾಘವೇಂದ್ರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ.

ಇದನ್ನೂಓದಿ: Hassan Pen Drive Case: ಪೆನ್‌ಡ್ರೈವ್‌ನಲ್ಲಿ ಅಶ್ಲೀಲ ವಿಡಿಯೊ ಅಪ್‌ಲೋಡ್‌ ಆಗಿದ್ದು ವಿದೇಶದಲ್ಲಿ! ದುಬೈನಲ್ಲಿ ನಡೆದಿದ್ದೇನು?

ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರಿಂದ ಈಶ್ವರಪ್ಪ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿದೆ. ಇದೀಗ ಪಕ್ಷೇತರವಾಗಿ ಕಣಕ್ಕಿಳಿದಿರುವ ಈಶ್ವರಪ್ಪ ರಾಘವೇಂದ್ರ ಅವರನ್ನು ಸೋಲಿಸಬೇಕೆಂದು ಪಣತೊಟ್ಟಿದ್ದಾರೆ.

Continue Reading
Advertisement
Dog Attack in raichur
ರಾಯಚೂರು4 mins ago

Dog Attack: ಆಟವಾಡುತ್ತಿದ್ದವಳ ಕಿತ್ತು ತಿಂದ ಬೀದಿ ನಾಯಿ; ರಕ್ತಸ್ರಾವವಾಗಿ 4 ವರ್ಷದ ಬಾಲಕಿ ಸಾವು

jain monk samadhi sena chikkodi sallekhana
ಚಿಕ್ಕೋಡಿ11 mins ago

Sallekhana: ಸಲ್ಲೇಖನ ವ್ರತ ಸ್ವೀಕರಿಸಿ ಸಮಾಧಿಸೇನ ಮುನಿ ಜಿನೈಕ್ಯ

Viral Video
ವೈರಲ್ ನ್ಯೂಸ್18 mins ago

Viral Video: ಅಬ್ಬಾ…ಇವರೆಂಥಾ ರಾಕ್ಷಸರು! ಸೊಸೆ ಮೇಲೆ ಅತ್ತೆ, ನಾದಿನಿಯಿಂದ ಅಟ್ಯಾಕ್‌; ವಿಡಿಯೋ ವೈರಲ್‌

Prashant Kishor
Lok Sabha Election 202424 mins ago

Prashant Kishor: ಈ ಬಾರಿ ಮೋದಿಗೆ ಹಿನ್ನಡೆ ಆಗುತ್ತಾ? ಪ್ರಶಾಂತ್ ಕಿಶೋರ್ ಲೇಟೆಸ್ಟ್ ಲೆಕ್ಕಾಚಾರ ಹೀಗಿದೆ

Cannes 2024 Sonam Kapoor dubs this outfit the best at Cannes this year
ಬಾಲಿವುಡ್42 mins ago

Cannes 2024: ಇವರ ಫ್ಯಾಷನ್‌ ಮುಂದೆ ಐಶ್ವರ್ಯಾ ರೈ, ಕಿಯಾರಾನೂ ಇಲ್ಲ! ಸೋನಮ್ ಹೊಗಳಿದ್ದು ಯಾರನ್ನ?

cisf soldier death raichur
ಕ್ರೈಂ1 hour ago

Soldier death: ಬಂದೂಕು ಆಕಸ್ಮಿಕವಾಗಿ ಸಿಡಿದು CISF ಯೋಧ ಸಾವು

Viral Video
ವೈರಲ್ ನ್ಯೂಸ್1 hour ago

Viral Video: ಈಜುಕೊಳದಲ್ಲಿ ಭೀಕರ ದುರಂತ; ಸ್ಟಂಟ್‌ ಮಾಡಲು ಹೋಗಿ ಯುವಕನ ಪ್ರಾಣಕ್ಕೆ ಕುತ್ತು-ವಿಡಿಯೋ ನೋಡಿ

T20 World Cup 2024
ಕ್ರಿಕೆಟ್1 hour ago

T20 World Cup 2024: ಆಸ್ಟ್ರೇಲಿಯಾ ತಂಡ ಸೇರಿದ ಸ್ಫೋಟಕ ಬ್ಯಾಟರ್​ ಫ್ರೇಸರ್-ಮೆಕ್‌ಗುರ್ಕ್​

Crime News
ದೇಶ2 hours ago

ಕುಡಿದು ಕಾರು ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತನ ತಂದೆಯನ್ನು ಬಂಧಿಸಿದ ಪೊಲೀಸರು; ಬಾರ್‌ ಮಾಲೀಕನ ವಿರುದ್ಧವೂ ಕ್ರಮ

missing case davanagere
ಕ್ರೈಂ2 hours ago

Missing case: ಒಂದೇ ಕುಟುಂಬದ ಮೂವರು ನಿಗೂಢ ನಾಪತ್ತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ4 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ5 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು5 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌