Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌! - Vistara News

ದೇಶ

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Samsung: ಸ್ಯಾಮ್‌ಸಂಗ್ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ತನ್ನ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಟಿ20 ವಿಶ್ವಕಪ್‌ ಕ್ರಿಕೆಟ್ ಸಮೀಪಿಸುತ್ತಿದ್ದಂತೆ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯಲು ‘ಬಿಗ್ ಟಿವಿ ಡೇಸ್’ ಮಾರಾಟ ಪರಿಚಯಿಸಲಾಗಿದೆ.

VISTARANEWS.COM


on

Samsung Big TV Days Sale Exciting offer on big TVs
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ತನ್ನ ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಟಿ20 ವಿಶ್ವಕಪ್‌ ಕ್ರಿಕೆಟ್ ಸಮೀಪಿಸುತ್ತಿದ್ದಂತೆ ಗ್ರಾಹಕರು ದೊಡ್ಡ ಟಿವಿಗಳಲ್ಲಿ ಕ್ರೀಡಾಂಗಣದ ಅನುಭವ ಪಡೆಯಲು ‘ಬಿಗ್ ಟಿವಿ ಡೇಸ್’ ಮಾರಾಟ ಪರಿಚಯಿಸಲಾಗಿದೆ.

‘ಬಿಗ್ ಟಿವಿ ಡೇಸ್’ ಆಫರ್ ಸಮಯದಲ್ಲಿ ಸ್ಯಾಮ್‌ಸಂಗ್ ಟಿವಿಗಳನ್ನು ಖರೀದಿಸುವ ಗ್ರಾಹಕರು, ಅವರು ಖರೀದಿಸಿದ ಟಿವಿಯನ್ನು ಅವಲಂಬಿಸಿ ರೂ. 89990 ಮೌಲ್ಯದ ಸೆರಿಫ್ ಟಿವಿ ಅಥವಾ ರೂ. 79990 ಮೌಲ್ಯದ ಸೌಂಡ್‌ಬಾರ್ ಅನ್ನು ಉಚಿತವಾಗಿ ಪಡೆಯುತ್ತಾರೆ. ಗ್ರಾಹಕರು ರೂ.2990 ದಿಂದ ಆರಂಭವಾಗುವ ಸುಲಭ ಇಎಂಐ ಸೌಲಭ್ಯವನ್ನು ಪಡೆಯಬಹುದು ಮತ್ತು 20% ವರೆಗಿನ ಕ್ಯಾಶ್‌ಬ್ಯಾಕ್ ಅನ್ನು ಕೂಡ ಪಡೆಯಬಹುದು. ಈ ಆಫರ್‌ಗಳು Samsung.com, ಪ್ರಮುಖ ರಿಟೇಲ್ ಅಂಗಡಿಗಳು ಮತ್ತು ಹಲವಾರು ಇತರ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಲಭ್ಯವಿರುತ್ತವೆ. ರಾಷ್ಟ್ರವ್ಯಾಪಿ ಇರುವ ಗ್ರಾಹಕರು ಇದರ ಪ್ರಯೋಜನ ಪಡೆಯಬಹುದಾಗಿದೆ. ಆಫರ್‌ಗಳು ಜೂನ್ 1 ರಿಂದ ಆರಂಭವಾಗುತ್ತದೆ ಮತ್ತು ಜೂನ್ 30, 2024ಕ್ಕೆ ಕೊನೆಗೊಳ್ಳಲಿದೆ. ಆಫರ್‌ಗಳು 98″/85″/83″/77″/75″ ಗಾತ್ರಗಳ ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಶ್ರೇಣಿಯ ಆಯ್ದ ಮಾಡೆಲ್‌ಗಳ ಮೇಲೆ ಲಭ್ಯವಿದೆ.

ಇದನ್ನೂ ಓದಿ: Mysore News: ಶಾಸ್ತ್ರ ಜ್ಞಾನಕ್ಕೆ ಪ್ರಪಂಚದ ಎಲ್ಲೆಡೆ ಮಾನ್ಯತೆ: ಮಂತ್ರಾಲಯ ಶ್ರೀ

ಸ್ಯಾಮ್‌ಸಂಗ್ ಗ್ರಾಹಕರ ಟಿವಿ ವೀಕ್ಷಣೆ ಅನುಭವವನ್ನು ಅತ್ಯುನ್ನತಗೊಳಿಸಲು ಮತ್ತು ಅಸಾಧಾರಣ ವೀಕ್ಷಣೆಯ ಅನುಭವಗಳನ್ನು ಒದಗಿಸಲು ಟಿವಿಗಳಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಕ್ರಾಂತಿಕಾರಕ ಶಕ್ತಿಯನ್ನು ಪರಿಚಯಿಸಿದೆ. ಈ ಟೆಲಿವಿಷನ್‌ಗಳು ಎಐ ಬಳಕೆಯ ಮೂಲಕ ಮನೆಯ ಮನರಂಜನಾ ಅನುಭವಕ್ಕೆ ಹೊಸ ರೂಪ ನೀಡಲಿದೆ. ಸುಸ್ಥಿರತೆ ಮತ್ತು ಹೆಚ್ಚಿನ ಭದ್ರತೆ ಒದಗಿಸುತ್ತದೆ.

ಸ್ಯಾಮ್‌ಸಂಗ್ ಇಂಡಿಯಾದ ವಿಷುಯಲ್ ಡಿಸ್‌ಪ್ಲೇ ಬ್ಯುಸಿನೆಸ್‌ನ ಹಿರಿಯ ಉಪಾಧ್ಯಕ್ಷ ಮೋಹನ್‌ದೀಪ್ ಸಿಂಗ್ ಈ ಕುರಿತು ಮಾತನಾಡಿ, ಟಿ20 ವಿಶ್ವಕಪ್‌ ಕ್ರಿಕೆಟ್ ಸಂದರ್ಭದಲ್ಲಿ ದೊಡ್ಡ ಗಾತ್ರದ ಪರದೆ ಮತ್ತು ಪ್ರೀಮಿಯಂ ವೀಕ್ಷಣೆಯ ಅನುಭವಕ್ಕೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ನಮ್ಮ ‘ಬಿಗ್ ಟಿವಿ ಡೇಸ್’ ಮಾರಾಟವನ್ನು ಸೂಕ್ತವಾಗಿ ಆಯೋಜಿಸಲಾಗಿದೆ.

ನಿಯೋ ಕ್ಯೂಎಲ್‌ಇಡಿ, ಓಎಲ್‌ಇಡಿ ಮತ್ತು ಕ್ರಿಸ್ಟಲ್ 4ಕೆ ಯುಎಚ್‌ಡಿ ಟಿವಿಗಳು ಸೇರಿದಂತೆ ನಮ್ಮ ಅಲ್ಟ್ರಾ-ಪ್ರೀಮಿಯಂ ಶ್ರೇಣಿಯ ಟಿವಿಗಳನ್ನು ಅತ್ಯಾಕರ್ಷಕ ಕೊಡುಗೆಗಳ ಜತೆಗೆ ನೀಡುವ ಮೂಲಕ ನಮ್ಮ ಗ್ರಾಹಕರಿಗೆ ತಮ್ಮ ಮನೆಗಳಲ್ಲಿ ನೇರವಾಗಿ ಕ್ರೀಡಾಂಗಣದಲ್ಲಿಯೇ ಕ್ರಿಕೆಟ್ ನೋಡುವಂತೆ ಅನ್ನಿಸುವ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿದ್ದೇವೆ. ನಮ್ಮ ಅತ್ಯಾಧುನಿಕ ಎಐ-ಚಾಲಿತ ಟೆಲಿವಿಷನ್‌ಗಳಲ್ಲಿ ನಮ್ಮ ಗ್ರಾಹಕರು ಅಸಾಧಾರಣ ದೃಶ್ಯ ಗುಣಮಟ್ಟ, ಅಪೂರ್ವ ಆಡಿಯೋ ಮತ್ತು ಸಪೂರ ವಿನ್ಯಾಸಗಳನ್ನು ನಿರೀಕ್ಷೆ ಮಾಡಬಹುದು. ಇದಲ್ಲದೆ ಎಐ ಬಳಕೆಯಿಂದ 8ಕೆ ಎಐ ಅಪ್‌ಸ್ಕೇಲಿಂಗ್ ಮತ್ತು ಎಐ ಮೋಷನ್‌ ಎನ್ ಹ್ಯಾನ್ಸರ್ ಪ್ರೊ ನಂತಹ ಫೀಚರ್‌ಗಳು ಕ್ರಿಕೆಟ್ ನೇರಪ್ರಸಾರದ ಸಂದರ್ಭದಲ್ಲಿ ಬಾಲ್ ಅನ್ನು ಸ್ಪಷ್ಟವಾಗಿ ಕಾಣಿಸುವ ಮೂಲಕ ಗ್ರಾಹಕರಿಗೆ ಅದ್ಭುತ ಕ್ರಿಕೆಟ್ ವೀಕ್ಷಣೆಯ ಅನುಭವವನ್ನು ಒದಗಿಸುತ್ತದೆ ಎಂದು ತಿಳಿಸಿದ್ದಾರೆ.

ಸ್ಯಾಮ್‌ಸಂಗ್ ಕಂಪನಿಯು ಭಾರತೀಯ ಗ್ರಾಹಕರಿಗಾಗಿಯೇ ಪ್ರಾದೇಶಿಕವಾಗಿ ಸಿದ್ಧಗೊಳಿಸಲಾದ ಸ್ಮಾರ್ಟ್ ಅನುಭವಗಳನ್ನು ನೀಡಲು ಈ ಟಿವಿಗಳಲ್ಲಿ ಗೇಮಿಂಗ್, ಮನರಂಜನೆ, ಶಿಕ್ಷಣ ಮತ್ತು ಫಿಟ್‌ನೆಸ್‌ನಂತಹ ಸೌಲಭ್ಯಗಳನ್ನು ಒದಗಿಸಿದೆ. ಕ್ಲೌಡ್ ಗೇಮಿಂಗ್ ಸೇವೆಯು ಬಳಕೆದಾರರಿಗೆ ಯಾವುದೇ ಕನ್ಸೋಲ್ ಅಥವಾ ಪಿಸಿ ಅಗತ್ಯವಿಲ್ಲದೆಯೇ ಎಎಎ ಗೇಮ್‌ಗಳನ್ನು ಪ್ಲಗ್ ಮತ್ತು ಪ್ಲೇ ಮೂಲಕ ಆಡಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: Battery Life Tips: ಈ 5 ಸಲಹೆ ಪಾಲಿಸಿ; ನಿಮ್ಮ ಸ್ಮಾರ್ಟ್‌ಫೋನ್ ಬ್ಯಾಟರಿ ಸಾಮರ್ಥ್ಯ ಹೆಚ್ಚಿಸಿ!

ಸ್ಯಾಮ್‌ಸಂಗ್ ಎಜುಕೇಶನ್ ಹಬ್ ಬಳಕೆದಾರರಿಗೆ ಲೈವ್ ತರಗತಿಗಳ ಜತೆಗೆ ದೊಡ್ಡ ಪರದೆಯ ಕಲಿಕೆಯನ್ನು ಒದಗಿಸುತ್ತಿದ್ದು, ನಿಮ್ಮ ಮಕ್ಕಳಿಗೆ ಹೆಚ್ಚು ಸಂವಾದಾತ್ಮಕ ಮತ್ತು ಖುಷಿದಾಯ ಕಲಿಕೆಯ ಸೌಲಭ್ಯ ಒದಗಿಸುತ್ತದೆ. ಎಲ್ಲಕ್ಕಿಂತ ಹೆಚ್ಚಾಗಿ ಟಿವಿ ಕೀ ಕ್ಲೌಡ್ ಸೇವೆಯ ಮೂಲಕ ಕ್ಲೌಡ್ ಮೂಲಕ ವಿಷಯದ ನೇರ ಪ್ರಸಾರವನ್ನು ಒದಗಿಸುವುದರಿಂದ ಗ್ರಾಹಕರಿಗೆ ಇನ್ನು ಮುಂದೆ ಸೆಟ್-ಟಾಪ್ ಬಾಕ್ಸ್ ಅಗತ್ಯ ಇರುವುದಿಲ್ಲ. ಸ್ಯಾಮ್‌ಸಂಗ್ ಟಿವಿ ಪ್ಲಸ್ ಫೀಚರ್ ಸುದ್ದಿ, ಚಲನಚಿತ್ರಗಳು, ಮನರಂಜನೆ ಮತ್ತು ಇತ್ಯಾದಿಗಳನ್ನು ವೀಕ್ಷಿಸಲು 100+ ಚಾನೆಲ್‌ಗಳನ್ನು ಉಚಿತವಾಗಿ ಒದಗಿಸುತ್ತದೆ.

ನಿಯೋ ಕ್ಯೂಎಲ್ಇಡಿ 8ಕೆ

ನಿಯೋ ಕ್ಯೂಎಲ್ಇಡಿ 8ಕೆ ಶ್ರೇಣಿಯು ಎನ್‌ಕ್ಯೂ8 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯ ನಿರ್ವಹಿಸುತ್ತದೆ. ಅದು ಎಐ-ಆಧರಿತ ಅನುಭವವನ್ನು ಒದಗಿಸುತ್ತದೆ ಮತ್ತು ಸ್ಪಷ್ಟವಾಗಿರುವ ಚಿತ್ರ ಗುಣಮಟ್ಟವನ್ನು ನೀಡುತ್ತದೆ. ಎನ್‌ಕ್ಯೂ8 ಎಐ ಜೆನ್2 ಪ್ರೊಸೆಸರ್, 256 ಎಐ ನ್ಯೂರಲ್ ನೆಟ್‌ವರ್ಕ್‌ಗಳಿಂದ ಚಾಲಿತವಾಗಿದ್ದು, ನೀವು ಓಟಿಟಿ ನೋಡುತ್ತಿರಲಿ, ನಿಮ್ಮ ಮೆಚ್ಚಿನ ವೀಡಿಯೊ ಗೇಮ್ ಗಳನ್ನು ಆಡುತ್ತಿರಲಿ ಅಥವಾ ಲೈವ್ ಕ್ರೀಡೆಗಳನ್ನು ವೀಕ್ಷಿಸುತ್ತಿರಲಿ ಎಲ್ಲಾ ಸಂದರ್ಭಗಳಲ್ಲೂ 8ಕೆ ಅನುಭವವನ್ನು ನೀಡುವಂತಹ ದೃಶ್ಯ ಮತ್ತು ಆಡಿಯೋ ಎರಡನ್ನೂ ಒದಗಿಸಲು ಸಹಾಯ ಮಾಡುತ್ತದೆ. ಸ್ಯಾಮ್‌ಸಂಗ್‌ನ ನಿಯೋ ಕ್ಯೂಎಲ್ಇಡಿ 8ಕೆ ಟಿವಿಗಳು ಮೋಷನ್ ಆಕ್ಸಲೇಟರ್ ಟರ್ಬೋ ಪ್ರೋ ಫೀಚರ್ ಹೊಂದಿದ್ದು, ಅದು ಹೆಚ್ಚಿನ ವೇಗದ ಗೇಮಿಂಗ್‌ ಆಡುವ ಸಂದರ್ಭದಲ್ಲಿ ದೃಶ್ಯಗಳನ್ನು ಸ್ಥಿರವಾಗಿ ಕಾಣಿಸುತ್ತದೆ ಮತ್ತು ಅಪೂರ್ವ ವೇಗವನ್ನು ಒದಗಿಸುತ್ತದೆ.

ನಿಯೋ ಕ್ಯೂಎಲ್ಇಡಿ 4ಕೆ 2024

ನಿಯೋ ಕ್ಯೂಎಲ್ಇಡಿ 4ಕೆ ಉತ್ಪನ್ನ ಶ್ರೇಣಿಯು ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯ ನಿರ್ವಹಿಸುತ್ತದೆ. ಈ ಪ್ರೊಸೆಸರ್ ಯಾವುದೇ ವಿಷಯವನ್ನು ಅದ್ಭುತವಾದ 4ಕೆ ದೃಶ್ಯಾವಳಿಯಲ್ಲಿ ತೋರಿಸುತ್ತದೆ ಮತ್ತು ಪ್ರತೀ ದೃಶ್ಯಕ್ಕೂ ಜೀವ ತುಂಬುತ್ತದೆ. ಕ್ವಾಂಟಮ್ ಮ್ಯಾಟ್ರಿಕ್ಸ್ ತಂತ್ರಜ್ಞಾನದಿಂದ ಮತ್ತಷ್ಟು ಶಕ್ತಿ ತುಂಬಲ್ಪಟ್ಟಿದ್ದು, ಸಂಕೀರಣ ದೃಶ್ಯಗಳಲ್ಲಿಯೂ ಅತ್ಯುತ್ತಮ ದೃಶ್ಯ ವೈಭವವನ್ನು ಒದಗಿಸುತ್ತದೆ. ಆಡಿಯೋ ಅನುಭವ ಉನ್ನತೀಕರಿಸಲು ಡಾಲ್ಬಿ ಅಟ್ಮೋಸ್ ವ್ಯವಸ್ಥೆ ಇದೆ. ಒಟ್ಟಾರೆ ನಿಯೋ ಕ್ಯೂಎಲ್ಇಡಿ 4ಕೆ ಶ್ರೇಣಿಯ ಟಿವಿಗಳು ಅತ್ಯದ್ಭುತ 4ಕೆ ಅನುಭವ ನೀಡುತ್ತವೆ.

ಕ್ಯೂಎಲ್ಇಡಿ ಟಿವಿ

ಸ್ಯಾಮ್‌ಸಂಗ್‌ನ ಕ್ಯೂಎಲ್ಇಡಿ ಟಿವಿ ಕ್ವಾಂಟಮ್ ಡಾಟ್ ತಂತ್ರಜ್ಞಾನದೊಂದಿಗೆ ಅತ್ಯದ್ಭುತ ದೃಶ್ಯ ಗುಣಮಟ್ಟವನ್ನು ಒದಗಿಸುತ್ತದೆ. 100% ಬಣ್ಣ ಸ್ಪಷ್ಟತೆ ಹೊಂದಿರುವುದರಿಂದ ಈ ಟಿವಿ, ಎಷ್ಟೇ ಬ್ರೈಟ್‌ನೆಸ್ ಇದ್ದರೂ ಜಾಸ್ತಿ ಮಾಡಿದರೂ ಕಡಿಮೆ ಇದ್ದರೂ ಸೂಕ್ತವಾದ ಬಣ್ಣಗಳನ್ನೇ ಕಾಣಿಸುತ್ತವೆ. ಇದರ ಅಲ್ಟ್ರಾ-ಸ್ಲಿಮ್ ವಿನ್ಯಾಸವು ಯಾವುದೇ ರೀತಿ ಮನೆಯೊಳಗೆ ಸುಂದರವಾಗಿ ಕಾಣಿಸುತ್ತದೆ. ನೀವು ವಾಸಿಸುವ ಸ್ಥಳದ ಸೊಬಗನ್ನು ಹೆಚ್ಚಿಸುತ್ತದೆ.

ಒಎಲ್ಇಡಿ ಟಿವಿ

ಪ್ರಪಂಚದ ಮೊದಲ ಗ್ಲೇರ್-ಫ್ರೀ ಓಎಲ್ಇಡಿ ಟಿವಿ ಯಾವುದೇ ರೀತಿಯ ಬೆಳಕು ಇದ್ದರೂ ಗಾಢ ಕಪ್ಪು ಮತ್ತು ಸ್ಪಷ್ಟ ದೃಶ್ಯಗಳನ್ನು ಪ್ರಸಾರ ಮಾಡುವಾಗ ಯಾವುದೇ ರೀತಿಯ ಅನಗತ್ಯ ರಿಫ್ಲೆಕ್ಷನ್‌ಗಳನ್ನು (ಪ್ರತಿಬಿಂಬ) ಕಾಣಿಸುವುದಿಲ್ಲ. ಈ ಟಿವಿಗಳೂ ಅದೇ ಅಸಾಧಾರಣ ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತದೆ.

ಸ್ಯಾಮ್‌ಸಂಗ್‌ನ ಓಎಲ್ಇಡಿ ಟಿವಿಗಳು ರಿಯಲ್ ಡೆಪ್ತ್ ಎನ್‌ಹಾನ್ಸರ್ ಮತ್ತು ಒಎಲ್ಇಡಿ ಎಚ್‌ಡಿಆರ್ ಪ್ರೊನಂತಹ ವೈಶಿಷ್ಟ್ಯಗಳನ್ನು ಹೊಂದಿದ್ದು, ಅದರಿಂದ ದೃಶ್ಯದ ಗುಣಮಟ್ಟವನ್ನು ಮತ್ತಷ್ಟು ಉನ್ನತೀಕರಿಸುತ್ತದೆ. ಜತೆಗೆ ಮೋಷನ್ ಆಕ್ಸಲೇಟರ್ 144 ಹರ್ಟ್ಜ್ ಫೀಚರ್ ಸುಗಮ ಚಲನೆ ಮತ್ತು ವೇಗದ ತ್ವರಿತ ಪ್ರತಿಕ್ರಿಯೆ ಸೌಲಭ್ಯ ಒದಗಿಸುತ್ತಿದ್ದು, ಆದ್ದರಿಂದಲೇ ಸ್ಯಾಮ್ ಓಎಲ್ಇಡಿ ಗೇಮಿಂಗ್‌ಗೆ ಸೂಕ್ತ ಆಯ್ಕೆಯಾಗಿದೆ. ಸಪೂರವಾದ ವಿನ್ಯಾಸ ಹೊಂದಿರುವ ಈ ಓಎಲ್ಇಡಿ ಟಿವಿಗಳು ಮನೆಯಲ್ಲಿ ಎಲ್ಲಿ ಟಿವಿ ಇಟ್ಟಿದ್ದೀರೋ ಆ ಸ್ಥಳದ ಸೊಬಗು ಹೆಚ್ಚಿಸುತ್ತದೆ.

ಇದನ್ನೂ ಓದಿ: World Bicycle Day: ಸೈಕಲ್‌ ಹೊಡೆಯುವುದರ ಲಾಭಗಳು ನಾವಂದುಕೊಂಡಿದ್ದಕ್ಕಿಂತ ಹೆಚ್ಚು!

ಯುಎಚ್‌ಡಿ ಟಿವಿ

ಸ್ಯಾಮ್‌ಸಂಗ್‌ನ ಯುಎಚ್‌ಡಿ ಟಿವಿ ವಿಶಿಷ್ಟವಾದ ಕ್ರಿಸ್ಟಲ್ ಕಲರ್ ತಂತ್ರಜ್ಞಾನ ಹೊಂದಿದ್ದು, ಬಣ್ಣಗಳಿಗೆ ಜೀವ ತುಂಬುತ್ತದೆ, ಪ್ರತಿ ಛಾಯೆಯಲ್ಲೂ ಸೂಕ್ಷ್ಮ ವಿವರಗಳನ್ನು ಕಾಣಿಸುತ್ತದೆ ಮೋಷನ್ ಆಕ್ಸಲೇಟರ್ ಫೀಚರ್ ವೇಗವಾಗಿ ಚಲಿಸುವ ದೃಶ್ಯಗಳನ್ನು ಸುಗಮವಾಗಿ ಮತ್ತು ಸ್ಪಷ್ಟವಾಗಿ ಕಾಣಿಸುತ್ತದೆ. ಪ್ರತಿ ಗೇಮ್, ಚಲನಚಿತ್ರ ಅಥವಾ ಯಾವುದೋ ಶೋ ಅನ್ನು ಹೆಚ್ಚು ಸೊಗಸಾಗಿ ಕಾಣಿಸುತ್ತದೆ ಮತ್ತು ಆನಂದಿಸುವಂತೆ ಮಾಡುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

VISTARANEWS.COM


on

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

ಪಶ್ಚಿಮ ಬಂಗಾಳದ ಫಾಲ್ಟಾ ವಿಧಾನಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ದೊಡ್ಡ ವಿವಾದ ಸೃಷ್ಟಿಯಾಗಿದೆ. ಹಲವಾರು ಮತಗಟ್ಟೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರದ (EVM) ಮೇಲಿರುವ ಬಿಜೆಪಿಯ ‘ಕಮಲ’ ಚಿಹ್ನೆಯ ಬಟನ್ ಅನ್ನು ಟೇಪ್‌ನಿಂದ ಮುಚ್ಚಲಾಗಿದೆ ಎಂದು ಬಿಜೆಪಿ ಮುಖಂಡ ಅಮಿತ್ ಮಾಳವೀಯ ವಿಡಿಯೋ ಸಹಿತ ಆರೋಪಿಸಿದ್ದಾರೆ. ಇದರಿಂದ ಮತದಾರರಿಗೆ ತೊಂದರೆಯಾಗಿದ್ದು, ಅಂತಹ ಮತಗಟ್ಟೆಗಳಲ್ಲಿ ಕೂಡಲೇ ಮರುಮತದಾನ ನಡೆಸಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಈ ಘಟನೆಯ ಬೆನ್ನಲ್ಲೇ ನಿರ್ಲಕ್ಷ್ಯ ತೋರಿದ ಐವರು ಪೊಲೀಸ್ ಅಧಿಕಾರಿಗಳನ್ನು ಆಯೋಗ ಅಮಾನತುಗೊಳಿಸಿದೆ.

ಇದೇ ವೇಳೆ, ಚುನಾವಣಾ ಅಧಿಕಾರಿ ಅಜಯ್ ಪಾಲ್ ಶರ್ಮಾ ಮತ್ತು ಟಿಎಂಸಿ ಅಭ್ಯರ್ಥಿ ಜಹಾಂಗೀರ್ ಖಾನ್ ನಡುವೆ ಭಾರಿ ಮಾತಿನ ಚಕಮಕಿ ನಡೆದಿದೆ. “ಮತದಾರರಿಗೆ ಬೆದರಿಕೆ ಹಾಕಿದರೆ ಅಳಬೇಡಿ, ಕಠಿಣ ಕ್ರಮ ಜರುಗಿಸುತ್ತೇವೆ” ಎಂದು ಅಧಿಕಾರಿ ಎಚ್ಚರಿಕೆ ನೀಡಿದರೆ, “ನೀವು ಸಿಂಗಮ್ ಆದರೆ ನಾನು ಪುಷ್ಪ, ಯಾವುದಕ್ಕೂ ಬಗ್ಗಲ್ಲ” ಎಂದು ಅಭ್ಯರ್ಥಿ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಅಳಿಯ ಅಭಿಷೇಕ್ ಬ್ಯಾನರ್ಜಿ ಅವರ ಭದ್ರಕೋಟೆಯಾದ ಈ ಕ್ಷೇತ್ರದಲ್ಲಿ ಇಂತಹ ಅಕ್ರಮದ ಆರೋಪ ಕೇಳಿಬಂದಿರುವುದು ಭಾರಿ ಸಂಚಲನ ಮೂಡಿಸಿದೆ.

Continue Reading

Latest

ಹಣ ಪಡೆಯಲು ಬ್ಯಾಂಕಿಗೆ ಸಹೋದರಿಯ ಅಸ್ಥಿಪಂಜರವನ್ನೇ ತಂದ ವ್ಯಕ್ತಿ!

VISTARANEWS.COM


on

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಮಾನವೀಯತೆ ಮರೆತ ಬ್ಯಾಂಕ್ ಸಿಬ್ಬಂದಿಯ ನಡೆಗೆ ಇಡೀ ದೇಶವೇ ಮರುಗುವಂತಾಗಿದೆ. ಮೃತ ಸಹೋದರಿಯ ಹೆಸರಿನಲ್ಲಿದ್ದ ಠೇವಣಿ ಹಣವನ್ನು ಹಿಂಪಡೆಯಲು ಹೋದ ಜೀತು ಮುಂಡಾ ಎಂಬ ಅನಕ್ಷರಸ್ಥ ಬುಡಕಟ್ಟು ವ್ಯಕ್ತಿಗೆ, ಬ್ಯಾಂಕ್ ಸಿಬ್ಬಂದಿ ಪದೇ ಪದೇ “ಖಾತೆದಾರಳನ್ನು ಕರೆತನ್ನಿ” ಎಂದು ಕಿರುಕುಳ ನೀಡಿದ್ದಾರೆ. ಆಕೆ ನಿಧನಳಾಗಿದ್ದಾಳೆ ಎಂದು ಹೇಳಿದರೂ ಕೇಳದ ಸಿಬ್ಬಂದಿಯ ವರ್ತನೆಯಿಂದ ಹತಾಶರಾದ ಜೀತು, ಸಾವಿನ ಪುರಾವೆ ತೋರಿಸಲು ಸಮಾಧಿಯನ್ನು ಅಗೆದು ಸಹೋದರಿಯ ಅಸ್ಥಿಪಂಜರವನ್ನೇ ಬ್ಯಾಂಕಿಗೆ ಹೊತ್ತು ತಂದಿದ್ದಾರೆ.

ಈ ವಿಚಿತ್ರ ಮತ್ತು ಆಘಾತಕಾರಿ ಘಟನೆಯಿಂದ ಎಚ್ಚೆತ್ತ ಪೊಲೀಸರು ಹಾಗೂ ಸ್ಥಳೀಯ ಆಡಳಿತವು ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಜೀತು ಮುಂಡಾ ಅವರ ಸಹೋದರಿಯ ಖಾತೆಯಲ್ಲಿದ್ದ ನಾಮಿನಿ ಕೂಡ ಈಗಾಗಲೇ ಮೃತಪಟ್ಟಿದ್ದು, ಕಾನೂನಿನ ಪ್ರಕಾರ ಜೀತು ಅವರೇ ಈ ಹಣಕ್ಕೆ ಏಕೈಕ ಹಕ್ಕುದಾರರಾಗಿದ್ದಾರೆ. ಬ್ಯಾಂಕ್ ಅಧಿಕಾರಿಗಳು ಮೃತ ವ್ಯಕ್ತಿಯ ಖಾತೆಯಿಂದ ಹಣ ಹಿಂಪಡೆಯುವ ಸರಳ ನಿಯಮಗಳನ್ನು ವಿವರಿಸುವಲ್ಲಿ ವಿಫಲರಾಗಿ, ಒಬ್ಬ ಅಮಾಯಕ ವ್ಯಕ್ತಿಯನ್ನು ಇಂತಹ ದಾರುಣ ಸ್ಥಿತಿಗೆ ತಳ್ಳಿದ್ದು ನಿಜಕ್ಕೂ ದುರದೃಷ್ಟಕರ.

ಸದ್ಯ ಪೊಲೀಸರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಮರು ಅಂತ್ಯಕ್ರಿಯೆ ಮಾಡಲಾಗಿದ್ದು, ಜೀತು ಮುಂಡಾ ಅವರಿಗೆ ಬರಬೇಕಾದ ಹಣವನ್ನು ಶೀಘ್ರವಾಗಿ ವಿತರಿಸುವಂತೆ ಜಿಲ್ಲಾಡಳಿತವು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಘಟನೆಯು ಸರ್ಕಾರಿ ಮತ್ತು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಸಾಮಾನ್ಯ ಜನರಿಗೆ, ಅದರಲ್ಲೂ ವಿಶೇಷವಾಗಿ ಅನಕ್ಷರಸ್ಥರಿಗೆ ಸಿಗಬೇಕಾದ ಕನಿಷ್ಠ ಗೌರವ ಮತ್ತು ಮಾರ್ಗದರ್ಶನದ ಕೊರತೆಯನ್ನು ಎತ್ತಿ ತೋರಿಸಿದೆ.

Continue Reading

Latest

ದೆಹಲಿ ಏರ್‌ಪೋರ್ಟ್‌ನಲ್ಲಿ ಅಪಘಾತ: ಟೇಕಾಫ್ ಆಗುವಾಗ ಸ್ವಿಸ್ ಏರ್ ವಿಮಾನದ ಎಂಜಿನ್‌ನಲ್ಲಿ ಬೆಂಕಿ; ಆರು ಮಂದಿಗೆ ಗಾಯ!

VISTARANEWS.COM


on

ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗಿನ ಜಾವ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ಸ್ವಿಟ್ಜರ್‌ಲ್ಯಾಂಡ್‌ನ ಜ್ಯೂರಿಚ್‌ಗೆ ಹಾರಲು ಸಿದ್ಧವಾಗಿದ್ದ ಸ್ವಿಸ್ ಏರ್ ವಿಮಾನ (LX147) ರನ್‌ವೇನಲ್ಲಿ ಟೇಕಾಫ್ ಆಗಲು ವೇಗವಾಗಿ ಚಲಿಸುತ್ತಿದ್ದಾಗ, ಅದರ ಒಂದು ಎಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ದಿಢೀರ್ ಬೆಂಕಿ ಹೊತ್ತಿಕೊಂಡಿದೆ. ಬೆಳಗಿನ ಜಾವ 1.08ರ ಸುಮಾರಿಗೆ ಸಂಭವಿಸಿದ ಈ ಘಟನೆಯಿಂದ ವಿಮಾನದಲ್ಲಿದ್ದ 228 ಪ್ರಯಾಣಿಕರು ಮತ್ತು ನಾಲ್ವರು ಶಿಶುಗಳು ಸೇರಿದಂತೆ ಒಟ್ಟು 232 ಮಂದಿ ಕೆಲಕಾಲ ಆತಂಕದ ಸುಳಿಯಲ್ಲಿ ಸಿಲುಕಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಪೈಲಟ್ ಸಮಯಪ್ರಜ್ಞೆ ಮೆರೆದು ಟೇಕಾಫ್ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮುನ್ನೆಚ್ಚರಿಕೆ ಕ್ರಮವಾಗಿ ತುರ್ತು ನಿರ್ಗಮನ ಸ್ಲೈಡ್‌ಗಳನ್ನು (Emergency Slides) ಬಳಸಿ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಈ ಅವಸರದ ಸ್ಥಳಾಂತರ ಪ್ರಕ್ರಿಯೆಯಲ್ಲಿ ಆರು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಲ್ಲಿ ವಿಮಾನದ ಸಿಬ್ಬಂದಿ ವರ್ಗದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಸ್ಲೈಡ್‌ಗಳನ್ನು ಬಳಸಲು ಸಾಧ್ಯವಾಗದ ಕೆಲವು ಪ್ರಯಾಣಿಕರಿಗೆ ಪರ್ಯಾಯ ಮೆಟ್ಟಿಲುಗಳ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

ಘಟನೆಗೆ ಸಂಬಂಧಿಸಿದಂತೆ ಸ್ವಿಸ್ ಏರ್ ಸಂಸ್ಥೆಯು ಈಗಾಗಲೇ ತನಿಖಾ ಕಾರ್ಯಪಡೆಯನ್ನು ರಚಿಸಿದೆ. ವಿಮಾನಯಾನ ಸಂಸ್ಥೆಯ ತಾಂತ್ರಿಕ ತಜ್ಞರು ದೆಹಲಿಗೆ ಆಗಮಿಸಿ ವಿಮಾನದ ಎಂಜಿನ್ ವಿಫಲವಾಗಲು ನಿಖರ ಕಾರಣವೇನು ಎಂಬುದನ್ನು ಪರಿಶೀಲಿಸಲಿದ್ದಾರೆ. ಸದ್ಯ ವಿಮಾನ ನಿಲ್ದಾಣದಲ್ಲಿ ಸಿಲುಕಿರುವ ಪ್ರಯಾಣಿಕರಿಗೆ ಸ್ಥಳೀಯ ತಂಡಗಳು ನೆರವು ನೀಡುತ್ತಿದ್ದು, ಅವರಿಗೆ ಹೋಟೆಲ್ ವಸತಿ ಮತ್ತು ಮರು ಬುಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಪ್ರಯಾಣಿಕರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದು ತಿಳಿಸಿರುವ ಸಂಸ್ಥೆಯು, ಸ್ಥಳೀಯ ಅಧಿಕಾರಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವುದಾಗಿ ಸ್ಪಷ್ಟಪಡಿಸಿದೆ.

Continue Reading

Latest

ಅಂಬಾನಿ ಮನೆ ಅಡುಗೆಮನೆ ಮೆನು ಹೇಗಿರುತ್ತೆ ಗೊತ್ತಾ? ಪ್ರತಿದಿನ 4000 ರೊಟ್ಟಿ ತಯಾರಾಗುವುದರ ಹಿಂದಿನ ಅಸಲಿ ಕಾರಣವೇನು?

VISTARANEWS.COM


on

ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಅವರ ನಿವಾಸ ‘ಆಂಟಿಲಿಯಾ’ ಕೇವಲ ಐಷಾರಾಮಿ ಜೀವನಕ್ಕೆ ಮಾತ್ರವಲ್ಲ, ಅಲ್ಲಿನ ಶಿಸ್ತುಬದ್ಧ ಆಹಾರ ಪದ್ಧತಿಗೂ ಹೆಸರುವಾಸಿ. ಅಂಬಾನಿ ಕುಟುಂಬದ ಸದಸ್ಯರು ಅಪ್ಪಟ ಸಸ್ಯಾಹಾರಿಗಳಾಗಿದ್ದು, ಅತ್ಯಂತ ಸಾತ್ವಿಕ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸುತ್ತಾರೆ. ಮುಖೇಶ್ ಅಂಬಾನಿ ಅವರ ದಿನಚರಿ ಬೆಳಿಗ್ಗೆ ಪಪ್ಪಾಯಿ ರಸ ಮತ್ತು ಇಡ್ಲಿ-ಸಾಂಬಾರ್‌ನೊಂದಿಗೆ ಆರಂಭವಾದರೆ, ನೀತಾ ಅಂಬಾನಿ ಅವರು ಹಣ್ಣುಗಳು ಹಾಗೂ ಡ್ರೈಫ್ರೂಟ್ಸ್ ಗೆ ಆದ್ಯತೆ ನೀಡುತ್ತಾರೆ. ಮಧ್ಯಾಹ್ನದ ಊಟದಲ್ಲಿ ಗುಜರಾತಿ ಶೈಲಿಯ ದಾಲ್, ಅನ್ನ, ರೊಟ್ಟಿ ಮತ್ತು ಸಲಾಡ್‌ಗಳಿದ್ದರೆ, ರಾತ್ರಿಯ ಭೋಜನದಲ್ಲಿ ಆರೋಗ್ಯಕ್ಕೆ ಪೂರಕವಾದ ರಾಗಿ ರೊಟ್ಟಿ ಮತ್ತು ಹಗುರವಾದ ತರಕಾರಿ ಖಾದ್ಯಗಳಿರುತ್ತವೆ.

ಆಂಟಿಲಿಯಾದಲ್ಲಿ ಪ್ರತಿದಿನ ಬರೋಬ್ಬರಿ 4,000 ರೊಟ್ಟಿಗಳು ತಯಾರಾಗುತ್ತವೆ ಎಂಬ ಸುದ್ದಿ ಕೇಳಲು ಅಚ್ಚರಿಯೆನಿಸಿದರೂ ಇದರ ಹಿಂದೆ ಒಂದು ಅಚ್ಚರಿಯ ಕಾರಣವಿದೆ. ಅಂಬಾನಿ ಕುಟುಂಬದ ಸದಸ್ಯರಿಗಾಗಿ ಮಾತ್ರವಲ್ಲದೆ, ಆ ಭವ್ಯ ಬಂಗಲೆಯಲ್ಲಿ ಹಗಲಿರುಳು ಕೆಲಸ ಮಾಡುವ ಸುಮಾರು 600ಕ್ಕೂ ಹೆಚ್ಚು ಸಿಬ್ಬಂದಿಗಳಿಗಾಗಿ ಈ ರೊಟ್ಟಿಗಳನ್ನು ತಯಾರಿಸಲಾಗುತ್ತದೆ. ಭದ್ರತಾ ಸಿಬ್ಬಂದಿ, ಚಾಲಕರು, ಅಡುಗೆಯವರು ಮತ್ತು ತಂತ್ರಜ್ಞರು ಸೇರಿದಂತೆ ಪ್ರತಿಯೊಬ್ಬರಿಗೂ ಮನೆಯ ಸದಸ್ಯರಂತೆಯೇ ಪೌಷ್ಟಿಕ ಮತ್ತು ರುಚಿಕರವಾದ ಊಟವನ್ನು ಇಲ್ಲಿ ನೀಡಲಾಗುತ್ತದೆ. ನೂರಾರು ರೊಟ್ಟಿಗಳನ್ನು ಕ್ಷಣಾರ್ಧದಲ್ಲಿ ತಯಾರಿಸುವ ಅತ್ಯಾಧುನಿಕ ಯಂತ್ರಗಳು ಅಲ್ಲಿವೆ, ಆದರೆ ರುಚಿ ಮತ್ತು ಗುಣಮಟ್ಟಕ್ಕೆ ಯಾವುದೇ ಕುಂದು ಬಾರದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಇನ್ನು ಈ ಬೃಹತ್ ಅಡುಗೆಮನೆಯನ್ನು ನಿರ್ವಹಿಸುವ ಅಡುಗೆಯವರ ಬಗ್ಗೆ ಹೇಳುವುದಾದರೆ, ಅವರ ಆಯ್ಕೆ ಪ್ರಕ್ರಿಯೆಯೇ ಒಂದು ರೋಚಕ ಕಥೆ. ದೇಶದ ಅತ್ಯುತ್ತಮ ಹೊಟೇಲ್‌ಗಳ ನುರಿತ ಅಡುಗೆಯವರನ್ನು ಇಲ್ಲಿ ನೇಮಿಸಿಕೊಳ್ಳಲಾಗುತ್ತಿದ್ದು, ಇವರ ಸಂಬಳ ಕೇಳಿದರೆ ಸಾಮಾನ್ಯರು ಬೆಚ್ಚಿಬೀಳುತ್ತಾರೆ. ವರದಿಗಳ ಪ್ರಕಾರ, ಇಲ್ಲಿನ ಮುಖ್ಯ ಅಡುಗೆಯವರು ತಿಂಗಳಿಗೆ ಲಕ್ಷಾಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಕೇವಲ ಹಣ ಮಾತ್ರವಲ್ಲದೆ, ಅವರಿಗೆ ವಿಮೆ ಮತ್ತು ಅವರ ಮಕ್ಕಳ ಶಿಕ್ಷಣಕ್ಕೂ ನೆರವು ನೀಡಲಾಗುತ್ತದೆ. ಹೀಗೆ ಅಂಬಾನಿ ಮನೆಯ ಅಡುಗೆಮನೆ ಕೇವಲ ಊಟ ತಯಾರಿಸುವ ಸ್ಥಳವಾಗಿರದೆ, ನೂರಾರು ಜನರಿಗೆ ಅನ್ನ ನೀಡುವ ಮತ್ತು ಅತ್ಯುತ್ತಮ ಕೆಲಸಗಾರರಿಗೆ ರಾಜಮರ್ಯಾದೆ ನೀಡುವ ತಾಣವಾಗಿದೆ.

Continue Reading
Advertisement
Latest1 hour ago

ಡಾಲಿ ಧನಂಜಯ್ ಅಭಿಮಾನಿಗಳಿಗೆ ಸಿಹಿ ಸುದ್ದಿ: ಮೊದಲ ಮಗುವಿನ ನಿರೀಕ್ಷೆಯಲ್ಲಿ ಸ್ಯಾಂಡಲ್‌ವುಡ್ ಸ್ಟಾರ್ ದಂಪತಿ!

Latest3 hours ago

ಶಿಸ್ತು ಮರೆತರಾ ರಿಯಾನ್ ಪರಾಗ್? ಕಾನೂನು ಸಂಕಷ್ಟಕ್ಕೆ ಸಿಲುಕುತ್ತಾರಾ ರಾಜಸ್ಥಾನ ರಾಯಲ್ಸ್ ಆಟಗಾರ?

Latest4 hours ago

ಮತಯಂತ್ರದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌? ಚುನಾವಣಾ ಅಕ್ರಮ ಆರೋಪಿಸಿ ಕೇಸರಿ ಪಡೆ ಆಕ್ರೋಶ

Rakshit Shetty Richard Anthony Produce By Hombale
ಅವಿಭಾಗೀಕೃತ4 hours ago

ಗುಡುಗು ಸಹಿತ ಆಲಿಕಲ್ಲು ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Latest5 hours ago

ಜಾಮೀನು ಪಡೆಯಲು ಸುಪ್ರೀಂ ಕೋರ್ಟ್‌ ಮೊರೆ ಹೋದ ದರ್ಶನ್‌.

Latest6 hours ago

ಯಶ್ ಫ್ಯಾನ್ಸ್‌ಗೆ ಶಾಕ್: ಮತ್ತೆ ಮುಂದೂಡಲ್ಪಟ್ಟ ‘ಟಾಕ್ಸಿಕ್’ ರಿಲೀಸ್ ಡೇಟ್! ಹೊಸ ದಿನಾಂಕದ ಬಗ್ಗೆ ಅಪ್‌ಡೇಟ್ ನೀಡಿದ ಚಿತ್ರತಂಡ

Rakshit Shetty Richard Anthony Produce By Hombale
ಅವಿಭಾಗೀಕೃತ6 hours ago

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ವಿಸ್ತಾರ ನ್ಯೂಸ್-ಸದಾ ನಿಮ್ಮ ಪರ:

ಕರ್ನಾಟಕ6 hours ago

ಶಾಲೆಗಳಲ್ಲಿ ಅಶ್ಲೀಲ ಹಾಡು, ನೃತ್ಯಕ್ಕೆ ಬ್ರೇಕ್: ಶಿಕ್ಷಣ ಇಲಾಖೆ ಮಹತ್ವದ ಆದೇಶ

ರಾಜಕೀಯ23 hours ago

ಮೋದಿ ಅಥವಾ ದೀದಿ? ಪ.ಬಂಗಾಳದ ಭವಿಷ್ಯ ನಿರ್ಧರಿಸಲಿದೆ 142 ಸೀಟು

Latest24 hours ago

ಸಿದ್ದರಾಮಯ್ಯನವರು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ’: ಸಿಎಂ ಬದಲಾವಣೆ ಬಗ್ಗೆ ರಾಜಣ್ಣ ನೀಡಿದ ಹೇಳಿಕೆಯ ಮರ್ಮವೇನು?

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌