Samsung: ಎಐ ಫೀಚರ್‌ಗಳ ನಿಯೋ ಕ್ಯೂಎಲ್ಇಡಿ 8ಕೆ, 4ಕೆ, ಒಎಲ್ಇಡಿ ಟಿವಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್; ದರ ಎಷ್ಟು? - Vistara News

ದೇಶ

Samsung: ಎಐ ಫೀಚರ್‌ಗಳ ನಿಯೋ ಕ್ಯೂಎಲ್ಇಡಿ 8ಕೆ, 4ಕೆ, ಒಎಲ್ಇಡಿ ಟಿವಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್; ದರ ಎಷ್ಟು?

Samsung: ಬೆಂಗಳೂರಿನ ಸ್ಯಾಮ್‌ಸಂಗ್ ಒಪೆರಾ ಹೌಸ್‌ನಲ್ಲಿ ಬುಧವಾರ ನಡೆದ ‘ಅನ್‌ಬಾಕ್ಸ್‌ & ಡಿಸ್ಕವರ್‌’ ಕಾರ್ಯಕ್ರಮದಲ್ಲಿ ತನ್ನ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ 4ಕೆ ಮತ್ತು ಒಎಲ್ಇಡಿ ಟಿವಿಗಳನ್ನು ಬಿಡುಗಡೆ ಮಾಡಲಾಯಿತು.

VISTARANEWS.COM


on

Samsung launches Neo QLED 8K 4K OLED TV in India
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಕಂಪನಿ ಸ್ಯಾಮ್‌ಸಂಗ್ (Samsung) ತನ್ನ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ 4ಕೆ ಮತ್ತು ಓಎಲ್ಇಡಿ ಟಿವಿಗಳನ್ನು ಬಿಡುಗಡೆ ಮಾಡುವ ಮೂಲಕ ಎಐ ಟಿವಿಗಳ ಹೊಸ ಯುಗವನ್ನು ಪ್ರಾರಂಭಿಸಿದೆ.

ಬೆಂಗಳೂರಿನ ಸ್ಯಾಮ್‌ಸಂಗ್ ಒಪೆರಾ ಹೌಸ್‌ನಲ್ಲಿ ಬುಧವಾರ ನಡೆದ ‘ಅನ್‌ಬಾಕ್ಸ್‌ & ಡಿಸ್ಕವರ್‌’ ಕಾರ್ಯಕ್ರಮದಲ್ಲಿ ತನ್ನ ಅಲ್ಟ್ರಾ ಪ್ರೀಮಿಯಂ ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ 4ಕೆ ಮತ್ತು ಓಎಲ್ಇಡಿ ಟಿವಿಗಳನ್ನು ಬಿಡುಗಡೆ ಮಾಡಲಾಯಿತು.

2024ರ ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ 4ಕೆ ಮತ್ತು ಓಎಲ್ಇಡಿ ಟಿವಿಗಳ ಶ್ರೇಣಿಯು ಅತ್ಯಂತ ಶಕ್ತಿಶಾಲಿ ಎಐ ಫೀಚರ್‌ಗಳನ್ನು ಹೊಂದಿದ್ದು, ನಿಮ್ಮ ಮನೆಯಲ್ಲಿ ಮನರಂಜನೆ ಪಡೆಯುವ ಅನುಭವವನ್ನು ಅದ್ಭುತಗೊಳಿಸಲಿದೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್‌ ಸೇವೆ ಆರಂಭ

ಈ ಕುರಿತು ಸ್ಯಾಮ್‌ಸಂಗ್ ನೈಋತ್ಯ ಏಷ್ಯಾದ ಅಧ್ಯಕ್ಷ ಮತ್ತು ಸಿಇಒ ಜೆಬಿ ಪಾರ್ಕ್ ಮಾತನಾಡಿ, ಸ್ಯಾಮ್‌ಸಂಗ್ ಗ್ರಾಹಕರ ಜೀವನಶೈಲಿಯಲ್ಲಿ ಬದಲಾವಣೆ ತರಲು ತನ್ನ ಉನ್ನತ ವರ್ಗದ ಟಿವಿಗಳಲ್ಲಿ ಕೃತಕ ಬುದ್ಧಿಮತ್ತೆಯ (ಎಐ) ಅದ್ಭುತ ಶಕ್ತಿಯನ್ನು ಹೊಂದಿಸುತ್ತಿದೆ. ನಾವು ನಮ್ಮ ಗ್ರಾಹಕರಿಗೆ ಅಸಾಧಾರಣ ವೀಕ್ಷಣೆಯ ಅನುಭವಗಳನ್ನು ನೀಡಲು ಎಐ ಫೀಚರ್‌ಗಳನ್ನು ನೀಡುತ್ತಿದ್ದೇವೆ. ನಮ್ಮ 2024 ರ ಶ್ರೇಣಿಯ ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ 4ಕೆ ಮತ್ತು ಓಎಲ್ಇಡಿ ಟಿವಿಗಳು ಪ್ರತೀ ಮನೆಯ ಮನರಂಜನೆಯ ಅನುಭವವನ್ನು ಅದ್ಭುತಗೊಳಿಸಲಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಸ್ಯಾಮ್‌ಸಂಗ್ ಇಂಡಿಯಾದ ವಿಷುಯಲ್ ಡಿಸ್ಪ್ಲೇ ಬಿಸಿನೆಸ್ ನ ಹಿರಿಯ ಉಪಾಧ್ಯಕ್ಷ ಮೋಹನ್‌ದೀಪ್ ಸಿಂಗ್ ಮಾತನಾಡಿ, ದೃಶ್ಯ ವೀಕ್ಷಣೆ ಮತ್ತು ಧ್ವನಿ ಗುಣಮಟ್ಟದಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸಲೆಂದೇ ವಿನ್ಯಾಸಗೊಳಿಸಲಾಗಿರುವ ಎಐ ಟಿವಿಗಳನ್ನು ನಾವು ಬಿಡುಗಡೆ ಮಾಡಿದ್ದೇವೆ. ನಮ್ಮ ಹೊಸ ಶ್ರೇಣಿಯ ಎಐ-ಚಾಲಿತ 8ಕೆ ನಿಯೋ ಕ್ಯೂಎಲ್ಇಡಿಗಳು, 4K ನಿಯೋ ಕ್ಯೂಎಲ್ಇಡಿಗಳು ಮತ್ತು ಓಎಲ್ಇಡಿ ಟಿವಿಗಳನ್ನು ಬಿಡುಗಡೆಯ ಮೂಲಕ ನಾವು ಭಾರತದಲ್ಲಿ ನಮ್ಮ ಮಾರುಕಟ್ಟೆ ನಾಯಕತ್ವವನ್ನು ವಿಸ್ತರಿಸುವ ವಿಶ್ವಾಸ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಸ್ಯಾಮ್‌ಸಂಗ್‌ನ ಪ್ರಮುಖ ಟಿವಿ ಆಗಿರುವ ನಿಯೋ ಕ್ಯೂಎಲ್ಇಡಿ 8ಕೆ ಟಿವಿಯು ಅತ್ಯಾಧುನಿಕ ಎನ್‌ಕ್ಯೂ8 ಎಐ ಜೆನ್3 ಪ್ರೊಸೆಸರ್‌ ಹೊಂದಿದೆ. ಇದು ಎಐ ಟಿವಿ ತಂತ್ರಜ್ಞಾನದಲ್ಲಿನ ಗಮನಾರ್ಹ ಪ್ರಗತಿಯನ್ನು ಸೂಚಿಸುತ್ತದೆ. ಎನ್‌ಕ್ಯೂ8 ಎಐ ಜೆನ್3 ಪ್ರೊಸೆಸರ್ ನ್ಯೂರಲ್ ಪ್ರೊಸೆಸಿಂಗ್ ಯೂನಿಟ್ (ಎನ್‌ಪಿಯು) ಅನ್ನು ಹೊಂದಿದೆ, ಅದು ಅದರ ಹಿಂದಿನ ಪ್ರೊಸೆಸರ್ ಗಿಂತ ಎರಡು ಪಟ್ಟು ವೇಗವನ್ನು ಹೊಂದಿದೆ, ಜತೆಗೆ ನ್ಯೂರಲ್ ನೆಟ್‌ವರ್ಕ್‌ಗಳಲ್ಲಿ 64 ರಿಂದ 512 ವರೆಗೆ ಎಂಟು ಪಟ್ಟು ಹೆಚ್ಚಳವಾಗಿದ್ದು ಅತ್ಯಂತ ಸೂಕ್ಷ್ಮ ವಿವರಗಳನ್ನು ಕೂಡ ಕಾಣಿಸುವ ಮೂಲಕ ಗ್ರಾಹಕರಿಗೆ ಅಸಾಧಾರಣ ವೀಕ್ಷಣಾ ಅನುಭವ ಒದಗಿಸಲಿದೆ.

2024ರ ನಿಯೋ ಕ್ಯೂಎಲ್ಇಡಿ 8ಕೆಯಲ್ಲಿ ಲಭ್ಯವಿರುವ ಹಲವು ಎಐ ಫೀಚರ್‌ಗಳು

ಎಐ ಪಿಚ್ಚರ್ ಟೆಕ್ನಾಲಜಿ: ಮುಖಭಾವ ಮತ್ತು ಇತರ ಅತ್ಯಂತ ಸೂಕ್ಷ್ಮ ವಿವರಗಳನ್ನು ಕೂಡ ಅತ್ಯುತ್ತಮವಾದ ಸ್ಪಷ್ಟತೆ ಮತ್ತು ಸಹಜತೆಯೊಂದಿಗೆ ಇದು ನೋಡುಗರಿಗೆ ದಾಟಿಸುವಂತೆ ಮಾಡುತ್ತದೆ.

ಇದನ್ನೂ ಓದಿ: Kodagu News: ಶ್ರದ್ಧಾ-ಭಕ್ತಿಯಿಂದ ಜರುಗಿದ ಮಳೂರು ಶ್ರೀ ಬೆಳ್ಳಾರಿಕಮ್ಮ ದೇವಾಲಯದ ಜಾತ್ರಾ ಮಹೋತ್ಸವ

ಎಐ ಅಪ್‌ಸ್ಕೇಲಿಂಗ್ ಪ್ರೊ: ಈ ವೈಶಿಷ್ಯ್ಟವು ಎಲ್ಲಾ ಕಂಟೆಂಟ್ ಅನ್ನು 8ಕೆ ಡಿಸ್‌ಪ್ಲೇಗೆ ಸರಿ ಹೊಂದಿಸುತ್ತದೆ.

ಎಐ ಮೋಷನ್ ಎನ್ ಹ್ಯಾನ್ಸರ್ ಪ್ರೊ- ಕ್ರೀಡೆಯಂತಹ ತೀವ್ರ ಭಾವನೆ ಉದ್ದೀಪಿಸುವ ಕಂಟೆಂಟ್ ಗಳನ್ನು ತುಂಬಾ ಸ್ಪಷ್ಟವಾಗಿ ಕಾಣಿಸಲು ಅತ್ಯಾಧುನಿಕ ಮೋಷನ್ ಡಿಟೆಕ್ಷನ್ ಅಲ್ಗಾರಿದಮ್ ಅನ್ನು ಈ ಫೀಚರ್ ಬಳಸುತ್ತದೆ. ಈ ಮೂಲಕ ಬಳಕೆದಾರರಿಗೆ ಪ್ರತಿ ಕ್ಷಣವನ್ನು ಆನಂದಿಸಲು ಸಹಾಯ ಮಾಡುತ್ತದೆ. ಪಂದ್ಯದ ಸಮಯದಲ್ಲಿ, ಯಾವುದೇ ಅಸ್ಪಷ್ಟತೆ ಇಲ್ಲದೆ ಚೆಂಡನ್ನು ನೋಡಲು ಇದು ಸಹಾಯ ಮಾಡುತ್ತದೆ. ಬಳಕೆದಾರರು ಕ್ರೀಡಾಂಗಣದಲ್ಲಿ ಪಂದ್ಯವನ್ನು ಲೈವ್ ಆಗಿ ವೀಕ್ಷಿಸುವ ಅನುಭವವನ್ನು ಹೊಂದಲಿದ್ದಾರೆ.

ರಿಯಲ್ ಡೆಪ್ತ್ ಎನ್‌ಹಾನ್ಸರ್ ಪ್ರೊ ವೈಶಿಷ್ಟ್ಯವು ಚಿತ್ರಗಳಿಗೆ ತೀವ್ರತೆಯನ್ನು ಒದಗಿಸುತ್ತದೆ ಮತ್ತು ವೀಕ್ಷಕರು ದೃಶ್ಯದಲ್ಲಿ ಮುಳುಗಿಹೋಗುವಂತೆ ಮಾಡುತ್ತದೆ.

ಎಐ ಸೌಂಡ್ ಟೆಕ್ನಾಲಜಿ– ಇದು ಆಕ್ಟಿವ್ ವಾಯ್ಸ್ ಆಂಪ್ಲಿಫೈಯರ್ ಪ್ರೊ ಮೂಲಕ ನಿಖರವಾದ ಆಡಿಯೊವನ್ನು ಒದಗಿಸಲು ಸಹಾಯ ಮಾಡುತ್ತದೆ. ಹಿನ್ನೆಲೆ ಶಬ್ದಗಳನ್ನು ಗ್ರಹಿಸುತ್ತದೆ ಮತ್ತು ಸ್ವಯಂಚಾಲಿತವಾಗಿ ವಾಲ್ಯೂಮ್ ಅನ್ನು ಅದಕ್ಕೆ ತಕ್ಕಂತೆ ಸರಿಹೊಂದಿಸುತ್ತದೆ. ಆಬ್ಜೆಕ್ಟ್ ಟ್ರ್ಯಾಕಿಂಗ್ ಸೌಂಡ್ ಪ್ರೊ ತೆರೆಯ ಮೇಲಿನ ದೃಶ್ಯಕ್ಕೆ ಸೂಕ್ತವಾಗಿ ಧ್ವನಿಯನ್ನು ಸಿಂಕ್ ಮಾಡುವ ಮೂಲಕ ಆಡಿಯೊ ಅನುಭವವನ್ನು ಉತ್ಕೃಷ್ಟಗೊಳಿಸುತ್ತದೆ. ಜತೆಗೆ ಹೆಚ್ಚು ಆಕರ್ಷಕ ಮತ್ತು ಆಹ್ಲಾದಕರ ವೀಕ್ಷಣೆಯ ಅನುಭವವನ್ನು ಉಂಟು ಮಾಡುತ್ತದೆ. ಅಡಾಪ್ಟಿವ್ ಸೌಂಡ್ ಪ್ರೊ ಆಡಿಯೊವನ್ನು ಕಂಟೆಂಟ್ ಮತ್ತು ಕೋಣೆಗೆ ತಕ್ಕಂತೆ ಅತಿ ಬುದ್ಧಿವಂತಿಕೆಯಿಂದ ಹೊಂದಿಸುವ ಮೂಲಕ ಆಡಿಯೊ ಅನುಭವವನ್ನು ಇನ್ನಷ್ಟು ಅದ್ಭುತಗೊಳಿಸುತ್ತದೆ ಮತ್ತು ಶ್ರೀಮಂತಗೊಳಿಸುತ್ತದೆ.

ಎಐ ಆಟೋ ಗೇಮ್ ಮೋಡ್- ಇದು ಆಟ ಮತ್ತು ಆಟದ ಪ್ರಕಾರ ಎರಡನ್ನೂ ಗುರುತಿಸುತ್ತದೆ ಮತ್ತು ಅದಕ್ಕೆ ತಕ್ಕಂತೆ ದೃಶ್ಯದ ಗುಣಮಟ್ಟ ಮತ್ತು ಧ್ವನಿ ಗುಣಮಟ್ಟದ ಸೆಟ್ಟಿಂಗ್‌ಗಳನ್ನು ಸ್ವಯಂಚಾಲಿತವಾಗಿ ಸರಿಹೊಂದಿಸುತ್ತದೆ.

ಎಐ ಕಸ್ಟಮೈಸೇಷನ್ ಮೋಡ್- ಇದು ಬಳಕೆದಾರರ ಆದ್ಯತೆಯ ಆಧಾರದ ಮೇಲೆ ಕಂಟೆಂಟ್ ಅನ್ನು ಆಧರಿಸಿ ಪ್ರತಿ ದೃಶ್ಯಕ್ಕೆ ಅನುಗುಣವಾಗಿ ಚಿತ್ರವನ್ನು ಸರಿಹೊಂದಿಸುತ್ತದೆ.

ಎಐ ಎನರ್ಜಿ ಮೋಡ್– ಇದು ಚಿತ್ರದ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ವಿದ್ಯುತ್ ಉಳಿಸುತ್ತದೆ.

ನಿಯೋ ಕ್ಯೂಎಲ್ಇಡಿ 8ಕೆ ಟಿವಿ: ನಿಯೋ ಕ್ಯೂಎಲ್ಇಡಿ 8ಕೆ ಟಿವಿಗಳು ಕ್ಯೂಎನ್900ಡಿ ಮತ್ತು ಕ್ಯೂಎನ್800ಡಿ ಎರಡು ಮಾದರಿಗಳಲ್ಲಿ ಲಭ್ಯವಿದೆ. 65, 75 ಮತ್ತು 85 ಇಂಚುಗಳ ಗಾತ್ರಗಳಲ್ಲಿ ದೊರೆಯುತ್ತದೆ.

ನಿಯೋ ಕ್ಯೂಎಲ್ಇಡಿ 4ಕೆ ಟಿವಿ: ನಿಯೋ ಕ್ಯೂಎಲ್ಇಡಿ 4ಕೆ ಟಿವಿ ಕ್ಯೂಎನ್85ಡಿ ಮತ್ತು ಕ್ಯೂಎನ್90ಡಿ ಎಂಬ ಎರಡು ಮಾದರಿಗಳಲ್ಲಿ ಲಭ್ಯವಿದೆ. 55, 65, 75, 85 ಮತ್ತು 98 ಇಂಚುಗಳ ಗಾತ್ರಗಳಲ್ಲಿ ದೊರೆಯುತ್ತದೆ.

ಸ್ಯಾಮ್‌ಸಂಗ್ ವಿಶ್ವದಲ್ಲಿಯೇ ಮೊತ್ತ ಮೊದಲ ಗ್ಲೇರ್ ಫ್ರೀ ಓಎಲ್ಇಡಿ ಟಿವಿಯನ್ನು ಸಹ ಪರಿಚಯಿಸುತ್ತಿದೆ. ಇದು ಯಾವುದೇ ಬೆಳಕಿನ ಸ್ಥಿತಿಯಲ್ಲಿ ಸ್ಪಷ್ಟವಾದ ಚಿತ್ರಣವನ್ನು ತೋರಿಸುತ್ತದೆ. ಅನಗತ್ಯ ಪ್ರತಿಫಲನವನ್ನು ತೆಗೆದುಹಾಕುತ್ತದೆ. ನಿಯೋ ಕ್ಯೂಎಲ್ಇಡಿ 4ಕೆ ಶ್ರೇಣಿಯ ಟಿವಿಯಂತೆಯೇ ಅದೇ ಅಸಾಧಾರಣ ಎನ್‌ಕ್ಯೂ4 ಎಐ ಜೆನ್2 ಪ್ರೊಸೆಸರ್‌ನಿಂದ ನಡೆಸಲ್ಪಡುತ್ತದೆ. ಸ್ಯಾಮ್‌ಸಂಗ್‌ನ ಓಎಲ್ಇಡಿ ಟಿವಿಗಳು ರಿಯಲ್ ಡೆಪ್ತ್ ಎನ್‌ಹಾನ್ಸರ್ ಮತ್ತು ಓಎಲ್ಇಡಿ ಎಚ್ ಡಿ ಆರ್ ಪ್ರೊನಂತಹ ವೈಶಿಷ್ಟ್ಯಗಳನ್ನು ಹೊಂದಿದ್ದು, ದೃಶ್ಯಗಳ ಗುಣಮಟ್ಟವನ್ನು ಹೊಸ ಎತ್ತರಕ್ಕೆ ಕೊಂಡೊಯುತ್ತವೆ.

ಹೆಚ್ಚುವರಿಯಾಗಿ, ಮೋಷನ್ ಆಕ್ಸಲೇಟರ್ 144 ಹರ್ಟ್ಜ್ ನಂತಹ ವೈಶಿಷ್ಟ್ಯಗಳನ್ನು ಹೊಂದಿದ್ದು, ಸುಗಮ ಚಲನೆ ಮತ್ತು ತ್ವರಿತ ರೆಸ್ಪೋನ್ಸ್ ರೇಟ್ ಒದಗಿಸುತ್ತದೆ. ಅದರಿಂದಾಗಿಯೇ ಸ್ಯಾಮ್‌ಸಂಗ್ ಓಎಲ್ಇಡಿ ಗೇಮಿಂಗ್‌ಗೆ ಅತ್ಯುತ್ತಮ ಆಯ್ಕೆಯಾಗಿದೆ. ನಯವಾದ ಸುಂದರ ವಿನ್ಯಾಸ ಹೊಂದಿರುವ ಈ ಓಎಲ್ಇಡಿ ಟಿವಿಗಳು ವೀಕ್ಷಣೆಯ ಸ್ಥಳವನ್ನು ಹೆಚ್ಚು ನೀಡುತ್ತವೆ. ಸ್ಯಾಮ್‌ಸಂಗ್ ಓಎಲ್ಇಡಿ ಟಿವಿ ಎಸ್95ಡಿ ಮತ್ತು ಎಸ್90ಡಿ ಎರಡು ಮಾದರಿಗಳಲ್ಲಿ ಲಭ್ಯವಿರುತ್ತದೆ. 55, 65, 77 ಮತ್ತು 83 ಇಂಚುಗಳ ಗಾತ್ರದಲ್ಲಿ ದೊರೆಯುತ್ತದೆ.

ಇದನ್ನೂ ಓದಿ: Karnataka Weather: ಬಾಗಲಕೋಟೆ, ಬೆಳಗಾವಿ, ವಿಜಯಪುರದಲ್ಲಿ ಇಂದು ರಾತ್ರಿ ಗುಡುಗು ಸಹಿತ ಮಳೆ ಸಾಧ್ಯತೆ

ಸ್ಯಾಮ್‌ಸಂಗ್ ಭಾರತೀಯ ಗ್ರಾಹಕರಿಗೆ ಗೇಮಿಂಗ್, ಮನರಂಜನೆ, ಶಿಕ್ಷಣ ಮತ್ತು ಫಿಟ್‌ನೆಸ್‌ನಂತಹ ಹಲವಾರು ಸೇವೆಗಳನ್ನು ಒದಗಿಸಲು ಪ್ರಾದೇಶಿಕಗೊಳಿಸಿದ ಸ್ಮಾರ್ಟ್ ಸೌಲಭ್ಯಗಳನ್ನು ನೀಡುತ್ತದೆ.

2024ರ ನಿಯೋ ಕ್ಯೂಎಲ್ಇಡಿ 8ಕೆ, ಹೊಸ ಕ್ಯೂಎಲ್ಇಡಿ 4ಕೆ ಮತ್ತು ಓಎಲ್ಇಡಿ ಟಿವಿಗಳನ್ನು ಸೆಟಪ್ ಮಾಡಿದ ತಕ್ಷಣ ಸ್ಮಾರ್ಟ್ ಪರಿಸರ ವ್ಯವಸ್ಥೆಯೊಂದಿಗೆ ಸಂಪರ್ಕ ಹೊಂದುವಂತೆ ವಿನ್ಯಾಸಗೊಳಿಸಲಾಗಿದೆ. ಬಳಕೆದಾರರು ತಮ್ಮ ಹೊಸ ಸ್ಯಾಮ್‌ಸಂಗ್ ಟಿವಿಯನ್ನು ಆನ್ ಮಾಡಿದ ತಕ್ಷಣ ಟಿವಿ ಗ್ರಹಿಸುತ್ತದೆ ಮತ್ತು ಅಸ್ತಿತ್ವದಲ್ಲಿರುವ ನೆಟ್‌ವರ್ಕ್‌ಗಳು ಮತ್ತು ಸಾಧನಗಳಿಗೆ ಸಂಪರ್ಕ ನೀಡುತ್ತದೆ. ಜತೆಗೆ ಈ ಎಲ್ಲವನ್ನೂ ಬಳಕೆದಾರರ ಸ್ಮಾರ್ಟ್‌ಫೋನ್‌ಗಳಿಗೆ ನೋಟಿಫಿಕೇಷನ್ ಕಳುಹಿಸುವ ಮೂಲಕ ತಿಳಿಸುತ್ತದೆ. ಪ್ರಯಾಸವಿಲ್ಲದ ಸೆಟಪ್ ವ್ಯವಸ್ಥೆಯು ಮನೆಯಲ್ಲಿರುವ ಎಲ್ಲಾ ಸ್ಯಾಮ್‌ಸಂಗ್ ಸಾಧನಗಳಿಗೆ ಹಾಗೂ ಥರ್ಡ್-ಪಾರ್ಟಿ ಉಪಕರಣಗಳು ಮತ್ತು ಐಓಟಿ ಸಾಧನಗಳಿಗೂ ಸಂಪರ್ಕ ಸಾಧಿಸುತ್ತದೆ.

ಸ್ಯಾಮ್‌ಸಂಗ್‌ನ 2024ರ ಟಿವಿ ಶ್ರೇಣಿಯು ಬಳಕೆದಾರರ ಸ್ಮಾರ್ಟ್‌ಫೋನ್‌ಗಳೊಂದಿಗೆ ಅತ್ಯುತ್ತಮ ಏಕೀಕರಣ ಸಾಧಿಸಲಿದ್ದು, ಈ ವಿಚಾರದಲ್ಲಿ ಮತ್ತೊಂದು ಎತ್ತರವನ್ನು ಸಾಧಿಸಿದೆ. ಸ್ಮಾರ್ಟ್ ಮೊಬೈಲ್ ಕನೆಕ್ಟ್ ಫೀಚರ್ ಅನ್ನು ಸಕ್ರಿಯಗೊಳಿಸಲು ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್ ಅನ್ನು ಟಿವಿಯ ಬಳಿ ತಂದರೆ ಸಾಕು, ಅದು ಫೋನ್ ಅನ್ನು ಟಿವಿ ಮತ್ತು ಸಂಪರ್ಕಿತ ಗೃಹೋಪಯೋಗಿ ಉಪಕರಣಗಳಿಗೆ ಸಾರ್ವತ್ರಿಕ ರಿಮೋಟ್ ಆಗಿ ಪರಿವರ್ತನೆ ಹೊಂದುತ್ತದೆ.

ಬೆಲೆ ಮತ್ತು ಮುಂಗಡ ಬುಕ್ಕಿಂಗ್‌ ಆಫರ್ ಕುರಿತು

ಪ್ರೀ-ಆರ್ಡರ್ ಕೊಡುಗೆಯ ಭಾಗವಾಗಿ, ನಿಯೋ ಕ್ಯೂಎಲ್ಇಡಿ 8ಕೆ, ನಿಯೋ ಕ್ಯೂಎಲ್ಇಡಿ 4ಕೆ ಮತ್ತು ಗ್ಲೇರ್ ಫ್ರೀ ಓಎಲ್ಇಡಿ ಶ್ರೇಣಿಯನ್ನು ಖರೀದಿಸುವ ಗ್ರಾಹಕರು ರೂ. 79990 ಮೌಲ್ಯದ ಉಚಿತ ಸೌಂಡ್‌ಬಾರ್, ರೂ. 59990 ಮೌಲ್ಯದ ಫ್ರೀಸ್ಟೈಲ್, ರೂ.29990 ಮೌಲ್ಯದ ಮ್ಯೂಸಿಕ್ ಫ್ರೇಮ್ ಪಡೆಯಲಿದ್ದಾರೆ. ಈ ಆಫರ್ ಖರೀದಿಸುವ ಮಾಡೆಲ್ ಅನ್ನು ಅವಲಂಬಿಸಿರುತ್ತದೆ ಮತ್ತು ಏಪ್ರಿಲ್ 30, 2024ರವರೆಗೆ ಲಭ್ಯವಿರುತ್ತದೆ. ಗ್ರಾಹಕರು ಮಾಡೆಲ್ ಅನ್ನು ಅವಲಂಬಿಸಿ 20% ವರೆಗೆ ಕ್ಯಾಶ್‌ಬ್ಯಾಕ್ ಪಡೆಯಬಹುದು.

ಇದನ್ನೂ ಓದಿ: Dental Braces: ಹಲ್ಲುಗಳ ಸೌಂದರ್ಯ ವೃದ್ಧಿಗೆ ಬ್ರೇಸಸ್‌ ಹಾಕುವ ಯೋಚನೆ ಇದೆಯೇ? ಈ ಮಾಹಿತಿ ತಿಳಿದಿರಲಿ

ಸ್ಯಾಮ್‌ಸಂಗ್‌ನ ನಿಯೋ ಕ್ಯೂಎಲ್ಇಡಿ 8ಕೆ ಶ್ರೇಣಿಯು ಬೆಲೆ ರೂ. 319990 ರಿಂದ ಪ್ರಾರಂಭ, ಸ್ಯಾಮ್‌ಸಂಗ್‌ನ ನಿಯೋ ಕ್ಯೂಎಲ್ಇಡಿ 4ಕೆ ಶ್ರೇಣಿಯು ಬೆಲೆ ರೂ. 139990 ರಿಂದ ಪ್ರಾರಂಭ, ಸ್ಯಾಮ್‌ಸಂಗ್‌ನ ಒಎಲ್ಇಡಿ ಶ್ರೇಣಿಯು ಬೆಲೆ ರೂ. 164990 ರಿಂದ ಪ್ರಾರಂಭವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ವಾಣಿಜ್ಯ

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

ಬಹುತೇಕ ಕೆಲಸಗಳಿಗೆ ದಾಖಲೆಯಾಗಿ ಬಳಸಲ್ಪಡುವ ಭಾರತೀಯ ನಾಗರಿಕರ ಗುರುತಿನ ಪುರಾವೆಯಾಗಿರುವ ಆಧಾರ್ ಕಾರ್ಡ್ ನಲ್ಲಿ (Aadhaar Update) ವಿಳಾಸ ಬದಲಾವಣೆಗೆ ಇನ್ನು ಮುಂದೆ ವಿದ್ಯುತ್, ನೀರು, ದೂರವಾಣಿ ಬಿಲ್ ಗಳನ್ನು ಬಳಸಬಹುದು. ಆದರೆ ಇದಕ್ಕೆ ಕೆಲವು ನಿಯಮಗಳಿವೆ. ಅದು ಏನು, ಹೇಗೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Aadhaar Update
Koo

ಆಧಾರ್ ಕಾರ್ಡ್ ಭಾರತೀಯ ನಾಗರಿಕರ ಗುರುತಿನ ( identity of Indian citizens) ದಾಖಲೆಯಾಗಿದೆ. ಈ ಸರ್ಕಾರಿ ದಾಖಲೆಯನ್ನು ಅನೇಕ ಕೆಲಸಗಳಿಗಾಗಿ ಬಳಸಲಾಗುತ್ತದೆ. ಆಧಾರ್ ಕಾರ್ಡ್ ನಲ್ಲಿ (Aadhaar Update) ಯಾವುದೇ ಮಾಹಿತಿ (name and address) ಹಳೆಯದಾಗಿದ್ದರೆ ಅದನ್ನು ಕಾಲಕಾಲಕ್ಕೆ ಅಪ್ಡೇಟ್ ಮಾಡಿಕೊಳ್ಳುವುದು ಬಹುಮುಖ್ಯವಾಗಿರುತ್ತದೆ. ಈ ಮಾಹಿತಿ ಅಪ್ಡೇಟ್ ಗೆ ಕೆಲವೊಂದು ಪೂರಕ ದಾಖಲೆಗಳನ್ನು ಒದಗಿಸಬೇಕಾಗುತ್ತದೆ.

ಆಧಾರ್ ಕಾರ್ಡ್‌ನಲ್ಲಿ ನೀಡಲಾದ ಮಾಹಿತಿಯು ಹಳೆಯದಾಗಿರಬಾರದು. ಯಾಕೆಂದರೆ ಆಗಾಗ್ಗೆ ಇದನ್ನು ಗುರುತಿನ ಪುರಾವೆಯಾಗಿ ಬಳಸಬೇಕಾಗುತ್ತದೆ. ಆಧಾರ್ ಕಾರ್ಡ್‌ನಲ್ಲಿರುವ ಹೆಸರು ಮತ್ತು ವಿಳಾಸ ಮಾಹಿತಿಯು ಸರಿಯಾಗಿರಬೇಕು. ಒಂದು ವೇಳೆ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯೋಚಿಸುತ್ತಿದ್ದರೆ ಇದಕ್ಕಾಗಿ ಬಳಸುವ ದಾಖಲೆಗಳು ಯಾವುದು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.

ಆಧಾರ್ ಕಾರ್ಡ್ ಹೊಂದಿರುವವರು ಇನ್ನು ಮುಂದೆ ಹೆಸರು, ವಿಳಾಸ ನವೀಕರಣಕ್ಕೆ ಈ ಕೆಲವು ದಾಖಲೆಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ನಲ್ಲಿ ಸ್ಪಷ್ಟಪಡಿಸಲಾಗಿದೆ.

Aadhaar Update
Aadhaar Update


ಯಾವ ದಾಖಲೆಗಳು ಮುಖ್ಯ?

ಆಧಾರ್ ಕಾರ್ಡ್‌ನಲ್ಲಿರುವ ಹೆಸರು, ವಿಳಾಸವನ್ನು ನವೀಕರಿಸಲು ಮಾನ್ಯವಾದ ಭಾರತೀಯ ಪಾಸ್‌ಪೋರ್ಟ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸನ್ಸ್ ಅನ್ನು ಪುರಾವೆಯಾಗಿ ಬಳಸಬಹುದು. ಆದರೆ ಎಲ್ಲರೂ ಪಾಸ್ ಪೋರ್ಟ್, ಪಾನ್ ಕಾರ್ಡ್ ಅಥವಾ ಡ್ರೈವಿಂಗ್ ಲೈಸನ್ಸ್ ಹೊಂದಿರುವುದಿಲ್ಲ. ಅಲ್ಲದೇ ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಅನ್ನು ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುವುದಿಲ್ಲ. ಆದರೆ ಪಡಿತರ ಮತ್ತು ಇ-ಪಡಿತರ ಕಾರ್ಡ್ ಅನ್ನು ವಿಳಾಸದ ಪುರಾವೆಯಾಗಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Income Tax Return: ಹಳೆಯ ತೆರಿಗೆ ಪದ್ದತಿ ಕೊನೆಯಾಗುತ್ತಾ? CBDT ಅಧ್ಯಕ್ಷ ಹೇಳೋದೇನು?

ನೀರು, ವಿದ್ಯುತ್‌ ಬಿಲ್‌:

ಈಗ ಇದರೊಂದಿಗೆ ವಿದ್ಯುತ್, ನೀರು ಮತ್ತು ದೂರವಾಣಿ ಬಿಲ್‌ಗಳನ್ನು ವಿಳಾಸದ ಪುರಾವೆಯಾಗಿ ಬಳಸಬಹುದು. ಮುಖ್ಯವಾಗಿ ಆಧಾರ್ ಕಾರ್ಡ್‌ನಲ್ಲಿರುವ ವಿಳಾಸವನ್ನು ನವೀಕರಿಸಲು ಯಾರ ಹೆಸರಿನಲ್ಲಿ ವಿದ್ಯುತ್ ಬಿಲ್, ದೂರವಾಣಿ ಬಿಲ್, ನೀರಿನ ಬಿಲ್ ಅನ್ನು ಬಳಸಬಹುದು. ಆದರೆ ಇದು ಕನಿಷ್ಠ 3 ತಿಂಗಳಿಗಿಂತ ಹಳೆಯದಾಗಿರಬೇಕು.

ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್:

ಇದಲ್ಲದೇ ಪೋಸ್ಟ್‌ಪೇಯ್ಡ್ ಮೊಬೈಲ್ ಬಿಲ್ ಅನ್ನು ಸಹ ಬಳಸಬಹುದು. ಆಧಾರ್ ಕಾರ್ಡ್ ಹೊಂದಿರುವವರು ತಮ್ಮ ಜೀವ ಮತ್ತು ವೈದ್ಯಕೀಯ ವಿಮಾ ಪಾಲಿಸಿಗಳನ್ನು ಬಳಸಬಹುದು ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಹೇಳುತ್ತದೆ. ಆದರೆ ಈ ನೀತಿಯು ಬಿಲ್ ವಿತರಿಸಿದ ದಿನಾಂಕದಿಂದ 1 ವರ್ಷದವರೆಗೆ ಮಾತ್ರ ಮಾನ್ಯವಾಗಿರುತ್ತದೆ.

Continue Reading

ಪ್ರಮುಖ ಸುದ್ದಿ

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

ಮಹಾರಾಷ್ಟ್ರದಲ್ಲಿ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

VISTARANEWS.COM


on

Mumbai Spa
Koo

ಮುಂಬೈ: ಮಹಾರಾಷ್ಟ್ರದ ಮುಂಬೈನಲ್ಲಿರುವ (Mumbai) ವೊರ್ಲಿ ಪ್ರದೇಶದ ಸ್ಪಾ (Spa) ಒಂದರಲ್ಲಿ ಕೊಲೆಯಾದ ವ್ಯಕ್ತಿಯ ಮೈಮೇಲೆ ಇದ್ದ ಟ್ಯಾಟೂ, ಟ್ಯಾಟೂ ಹಾಕಿಸಿಕೊಂಡ ಹೆಸರುಗಳು ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ. ಟ್ಯಾಟೂ (Tattoo) ಹೆಸರುಗಳೇ ಹಿಸ್ಟರಿ ಶೀಟರ್‌ ಗುರು ವಾಘ್ಮರೆಯ ಕೊಲೆ ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ, ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣವೀಗ ದೇಶಾದ್ಯಂತ ಸುದ್ದಿಯಾಗಿದೆ.

ಗುರು ವಾಘ್ಮರೆಯನ್ನು ಜುಲೈ 24ರಂದು ಸ್ಪಾನಲ್ಲಿ ಕೊಲೆ ಮಾಡಲಾಗಿದೆ. ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ ಸೇರಿ ಮೂವರು ಆರೋಪಿಗಳನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ತನಿಖೆ ನಡೆಸಿ ಬಂಧಿಸಿದ್ದಾರೆ. ಇನ್ನಿಬ್ಬರನ್ನು ವಶಪಡಿಸಿಕೊಂಡು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಬುಧವಾರ ಬೆಳಗಿನ ಜಾವ ಮುಂಬೈನ ವೊರ್ಲಿಯಲ್ಲಿರುವ ಸಾಫ್ಟ್‌ ಟಚ್‌ ಸ್ಪಾದಲ್ಲಿ 48 ವರ್ಷದ ಗುರು ವಾಘ್ಮರೆಯನ್ನು ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Mumbai Spa
Mumbai Spa

ಟ್ಯಾಟೂ ಹೆಸರುಗಳೇ ಕೇಸ್‌ ಭೇದಿಸಲು ಕಾರಣ

ಗುರು ವಾಘ್ಮರೆಯು ಆರ್‌ಟಿಇ ಕಾರ್ಯಕರ್ತನೂ ಆಗಿದ್ದು, ಆತನ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಈತನು ಹಿಸ್ಟರಿ ಶೀಟರ್‌ ಕೂಡ ಆಗಿದ್ದಾನೆ. ಆದರೆ, ಹತ್ಯೆಗೀಡಾಗುವ ಮುನ್ನ ಅಪಾಯದ ಮುನ್ಸೂಚನೆ ಅರಿತಿದ್ದ ಗುರು ವಾಘ್ಮರೆಯು ತನಗಿದ್ದ 22 ವೈರಿಗಳ ಹೆಸರುಗಳನ್ನು ತೊಡೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದ. ಪೋಸ್ಟ್‌ ಮಾರ್ಟಮ್‌ ಮಾಡುವ ವೇಳೆ ತೊಡೆಯ ಮೇಲೆ ಕಾಣಿಸಿದ ಹೆಸರುಗಳ ಜಾಡು ಹಿಡಿದು ಹೊರಟ ಪೊಲೀಸರಿಗೆ ಕೊಲೆ ಆರೋಪಿಗಳನ್ನು ಬಂಧಿಸಲು ಸಾಧ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಗುರು ವಾಘ್ಮರೆಯು ಸ್ಪಾ ಮಾಲೀಕ ಸಂತೋಷ್‌ ಶೆರೆಕರ್‌ಗೆ ಹಣಕ್ಕಾಗಿ ಪೀಡಿಸುವುದು, ಬೆದರಿಕೆ ಹಾಕುವುದು ಸೇರಿ ಹಲವು ರೀತಿಯಲ್ಲಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಸಂತೋಷ್‌, ಗುರು ವಾಘ್ಮರೆಯ ಹತ್ಯೆಗೆ ಸುಪಾರಿ ನೀಡಿದ್ದ ಎಂದು ತಿಳಿದುಬಂದಿದೆ. ಗುರು ವಾಘ್ಮರೆಯನ್ನು ಕೊಲ್ಲಲು ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೆ ಸಂತೋಷ್‌ 6 ಲಕ್ಷ ರೂ. ನೀಡಿದ್ದ ಎನ್ನಲಾಗಿದೆ.

ಮೊಹಮ್ಮದ್‌ ಫಿರೋಜ್‌ ಅನ್ಸಾರಿಗೂ ಗುರು ಮೇಲೆ ಸೇಡಿತ್ತು. ಕಳೆದ ವರ್ಷ ಮುಂಬೈನ ನಲ್ಲಾಸೋಪರ ಬಳಿಯಲ್ಲಿದ್ದ ಮೊಹಮ್ಮದ್‌ ಫಿರೋಜ್‌ ಅನ್ಸಾರಿ ಒಡೆತನದ ಸ್ಪಾ ಮೇಲೆ ಪೊಲೀಸರು ದಾಳಿ ನಡೆಸಿ, ಅದನ್ನು ಸ್ಥಗಿತಗೊಳಿಸಿದ್ದರು. ಗುರು ವಾಘ್ಮರೆ ನೀಡಿದ ದೂರಿನಿಂದಾಗಿಯೇ ಸ್ಪಾ ಸ್ಥಗಿತಗೊಂಡಿತ್ತು. ಹಾಗಾಗಿ, ಅನ್ಸಾರಿಯು ಕೆಲವರೊಂದಿಗೆ ಸೇರಿ ಗುರು ವಾಘ್ಮರೆಯನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Murder in PG: ಗೆಳತಿಗಾಗಿ ಕೊಲೆಯಾಗಿ ಹೋದ ಕೃತಿ ಕುಮಾರಿ; ಪ್ರೇಯಸಿಯನ್ನು ಬಂಧನದಲ್ಲಿಟ್ಟು ಕ್ರೌರ್ಯ ಮೆರೆದ ಪಾತಕಿ

Continue Reading

ದೇಶ

Vijay Mallya: ವಿಜಯ್‌ ಮಲ್ಯಗೆ ಸೆಬಿ ಶಾಕ್;‌ 3 ವರ್ಷ ಸೆಕ್ಯುರಿಟೀಸ್‌ ಟ್ರೇಡಿಂಗ್‌ನಿಂದ ನಿಷೇಧ

Vijay Mallya: ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ.

VISTARANEWS.COM


on

Vijay Mallya
Koo

ನವದೆಹಲಿ: ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿರುವ ದೇಶಭ್ರಷ್ಟ ಆರ್ಥಿಕ ಅಪರಾಧಿ ವಿಜಯ್‌ ಮಲ್ಯ (Vijay Mallya) ಅವರಿಗೆ ಭಾರತದ ಷೇರು ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು (SEBI) ಶಾಕ್‌ ನೀಡಿದೆ. ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಿಂದ ವಿಜಯ್‌ ಮಲ್ಯ ಅವರನ್ನು ಸೆಬಿ ನಿರ್ಬಂಧಿಸಿದೆ. ಇದರಿಂದಾಗಿ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ವಿಜಯ್‌ ಮಲ್ಯ ಯಾವುದೇ ವಹಿವಾಟು ಮಾಡದಂತೆ ತಡೆಹಿಡಿಯಲಾಗಿದೆ.

ಸೆಬಿಗೆ ನೋಂದಣಿ ಮಾಡಿದ ಕಂಪನಿಗಳು ವಿಜಯ್‌ ಮಲ್ಯ ಜತೆ ವಹಿವಾಟು ಮಾಡದಂತೆ ಸೂಚನೆ ನೀಡಲಾಗಿದೆ. ಅಷ್ಟೇ ಅಲ್ಲ, ಮುಂದಿನ ಮೂರು ವರ್ಷಗಳವರೆಗೆ ವಿಜಯ್‌ ಮಲ್ಯ ಅವರ ಎಲ್ಲ ಸೆಕ್ಯುರಿಟಿ ಹೋಲ್ಡಿಂಗ್‌ಗಳು, ಮ್ಯುಚುವಲ್‌ ಫಂಡ್‌ ಯುನಿಟ್‌ಗಳನ್ನು ತಡೆಹಿಡಿಯುವಂತೆಯೂ ಸೆಬಿ ಸೂಚನೆ ನೀಡಿದೆ. ವಿಜಯ್‌ ಮಲ್ಯ ಅವರು ಇದುವರೆಗೆ ಫಾರಿನ್‌ ಇನ್‌ಸ್ಟಿಟ್ಯೂಷನಲ್‌ ಇನ್ವೆಸ್ಟರ್‌ (FII) ವ್ಯವಸ್ಥೆ ಮೂಲಕ ಭಾರತದ ಸೆಕ್ಯುರಿಟೀಸ್‌ ಮಾರುಕಟ್ಟೆಯಲ್ಲಿ ಹಣ ಹೂಡಿಕೆ, ಸ್ಟಾಕ್‌ಗಳ ಮಾರಾಟ ಸೇರಿ ಹಲವು ಆರ್ಥಿಕ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು.

ಏನಿದು ಸೆಕ್ಯುರಿಟೀಸ್‌ ಮಾರುಕಟ್ಟೆ?

ಸೆಕ್ಯುರಿಟೀಸ್‌ ಮಾರುಕಟ್ಟೆಯು ವ್ಯಕ್ತಿಗಳು ಅಥವಾ ಕಂಪನಿಗಳು ಷೇರುಗಳು, ಬಾಂಡ್‌ಗಳು ಮತ್ತು ಉತ್ಪನ್ನಗಳಂತಹ ಸೆಕ್ಯುರಿಟೀಸ್‌ಅನ್ನು ಖರೀದಿಸುವ ಮತ್ತು ಮಾರಾಟ ಮಾಡುವ ಹಣಕಾಸು ಮಾರುಕಟ್ಟೆಯಾಗಿದೆ. ಸ್ಟಾಕ್‌ಗಳು, ಬಾಂಡ್‌ಗಳು, ಮ್ಯೂಚುವಲ್‌ ಫಂಡ್‌ಗಳು, ಎಕ್ಸ್‌ಚೇಂಜ್‌-ಟ್ರೇಡೆಡ್‌ ಫಂಡ್‌ಗಳ ಖರೀದಿ ಹಾಗೂ ಮಾರಾಟ ಮಾಡುವ ಮಾರುಕಟ್ಟೆಯಾಗಿದೆ.

ಭಾರತದ ಬ್ಯಾಂಕ್‌ಗಳಿಗೆ ಸುಮಾರು 9 ಸಾವಿರ ಕೋಟಿ ರೂ. ವಂಚನೆ ಪ್ರಕರಣದಲ್ಲಿ ವಿಜಯ್‌ ಮಲ್ಯ ಲಂಡನ್‌ಗೆ ಹಾರಿದ್ದಾರೆ. ಇವರನ್ನು 2019ರಲ್ಲಿ ದೇಶ ಭ್ರಷ್ಟ ಆರ್ಥಿಕ ಅರಪಾಧಿ ಎಂದು ಘೋಷಿಸಲಾಗಿದೆ. 2016ರ ಮಾರ್ಚ್‌ನಲ್ಲಿ ವಿಜಯ್‌ ಮಲ್ಯ ಭಾರತದಿಂದ ಪರಾರಿಯಾಗಿದ್ದು, ಈಗ ಬ್ರಿಟನ್‌ನಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ, ವಿಜಯ್‌ ಮಲ್ಯ ಪುತ್ರ ಸಿದ್ಧಾರ್ಥ್‌ ಮಲ್ಯ ಅವರ ಮದುವೆಯು ಅದ್ಧೂರಿಯಾಗಿ ನೆರವೇರಿತ್ತು. ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನ ಮಾಡುತ್ತಿದ್ದು, ಪ್ರಕರಣವು ಕೋರ್ಟ್‌ನಲ್ಲಿದೆ.

ವಿಜಯ್‌ ಮಲ್ಯ ಈಗಲೂ ಕಿಂಗ್‌ಫಿಶರ್‌ ಬಿಯರ್‌ ಉತ್ಪಾದನೆ ಮಾಡುವ ಯುನೈಟ್‌ ಬ್ರೆವರೀಸ್‌ನಲ್ಲಿ ಶೇ.8.1ರಷ್ಟು ಷೇರುಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲ, ಸ್ಮಿರ್ನಾಫ್‌ ವೋಡ್ಕಾ ತಯಾರಿಯಾ ಸಂಸ್ಥೆಯಾದ ಯುನೈಟೆಡ್‌ ಸ್ಪರಿಟ್ಸ್‌ನಲ್ಲಿ 0.01ರಷ್ಟು ಷೇರುಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: RCB: ಆರ್​ಸಿಬಿಯ ನಂಟು ಬಿಡದ ವಿಜಯ್​ ಮಲ್ಯ; ಟ್ವೀಟ್​ ಮೂಲಕ ಅಭಿನಂದನೆ

Continue Reading

Latest

Teacher Suspended: ಮಹಿಳೆಯರು ಸಿಂಧೂರ, ಮಂಗಳಸೂತ್ರ ಧರಿಸಬಾರದು ಎಂದ ಶಿಕ್ಷಕಿ ಅಮಾನತು!

Teacher Suspended: ರಾಜಸ್ಥಾನದಲ್ಲಿ ಶಿಕ್ಷಕಿ ದಾಮೋರ್ ಎಂಬುವರು ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದ್ದರು. ಇಂದಿನಿಂದ ಎಲ್ಲಾ ಉಪವಾಸ ಆಚರಿಸುವುದನ್ನು ನಿಲ್ಲಿಸಿ, ನಾವು ಹಿಂದೂಗಳಲ್ಲ ಎಂದು ಹೇಳಿದ್ದರು. ಅವರ ಹೇಳಿಕೆಗೆ ಬುಡಕಟ್ಟು ಸಮುದಾಯದ ಮಹಿಳೆಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಕಿಯನ್ನು ಅಮಾನತು ಮಾಡಿದ್ದಾರೆ.

VISTARANEWS.COM


on

Teacher Suspended
Koo


ಹಿಂದೂ ಧರ್ಮದಲ್ಲಿ ಸಿಂಧೂರ ಮತ್ತು ಮಂಗಳಸೂತ್ರವನ್ನು ಮದುವೆಯಾದ ಹೆಣ್ಣುಮಕ್ಕಳು ಧರಿಸಬೇಕು ಎಂಬ ಸಂಪ್ರದಾಯವಿದೆ. ಇದು ಬಹಳ ಹಿಂದಿನ ಕಾಲದಿಂದಲೂ ಬಂದಂತಹ ಸಂಪ್ರದಾಯ. ಇಂದಿಗೂ ಬಹುತೇಕ ಸಂಪ್ರದಾಯಸ್ಥ ಕುಟುಂಬದ ಹೆಣ್ಣುಮಕ್ಕಳು ಈ ನಿಯಮವನ್ನು ಪಾಲಿಸುತ್ತಾ ಬಂದಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳು ಪಾಶ್ಚಿಮಾತ್ಯರ ಜೀವನಶೈಲಿಯನ್ನು ಅನುಸರಿಸುತ್ತಾ ಈ ಸಂಪ್ರದಾಯವನ್ನು ಮರೆಯುತ್ತಿದ್ದಾರೆ. ಇಂತಹ ಪರಿಸ್ಥಿತಿಯ ನಡುವೆ ಇಂತಹ ಸಂಪ್ರದಾಯವನ್ನು ಪಾಲಿಸದಂತೆ ಶಿಕ್ಷಕಿಯೊಬ್ಬರು ಜನರಿಗೆ ಸಲಹೆ ನೀಡಿದ್ದಾರೆ. ರಾಜಸ್ಥಾನದ ಮಹಿಳಾ ಶಿಕ್ಷಕಿ ಬುಡಕಟ್ಟು ಮಹಿಳೆಯರಿಗೆ ಸಿಂಧೂರ ಮತ್ತು ಮಂಗಳಸೂತ್ರವನ್ನು ಧರಿಸದಂತೆ ಸಲಹೆ ನೀಡಿದ ಹಿನ್ನೆಲೆಯಲ್ಲಿ ರಾಜಸ್ಥಾನ ಶಿಕ್ಷಣ ಇಲಾಖೆ ಅವರನ್ನು ಕೆಲಸದಿಂದ ಅಮಾನತು( Teacher Suspended)ಗೊಳಿಸಿದೆ ಎಂದು ವರದಿಯಾಗಿದೆ.

ಜುಲೈ 19ರಂದು ಬನ್ಸ್ವಾರಾದ ಮಂಗರ್ ಧಾಮ್‍ನಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳಾ ಶಿಕ್ಷಕಿ ದಾಮೋರ್ ಬುಡಕಟ್ಟು ಮಹಿಳೆಯರನ್ನು ಉದ್ದೇಶಿಸಿ ಮಾತನಾಡುತ್ತಾ, ಕೆಲವು ಸಾಂಪ್ರದಾಯಿಕ ಹಿಂದೂ ಆಚರಣೆಗಳನ್ನು ತಿರಸ್ಕರಿಸುವಂತೆ ಸಲಹೆ ನೀಡಿದರು. ಶಿಕ್ಷಕಿ ಮೇನಕಾ ದಾಮೋರ್ ತಮ್ಮ ಭಾಷಣದಲ್ಲಿ, “ಬುಡಕಟ್ಟು ಕುಟುಂಬಗಳು ಸಿಂಧೂರವನ್ನು ಹಚ್ಚುವುದಿಲ್ಲ, ಅವರು ಮಂಗಳಸೂತ್ರವನ್ನು ಧರಿಸುವುದಿಲ್ಲ. ಬುಡಕಟ್ಟು ಸಮಾಜದಲ್ಲಿ ಮಹಿಳೆಯರು ಮತ್ತು ಹುಡುಗಿಯರು ಶಿಕ್ಷಣದ ಬಗ್ಗೆ ಹೆಚ್ಚು ಗಮನ ಹರಿಸಬೇಕು. ಇಂದಿನಿಂದ, ಎಲ್ಲಾ ಉಪವಾಸಗಳನ್ನು ಆಚರಿಸುವುದನ್ನು ನಿಲ್ಲಿಸಿ. ನಾವು ಹಿಂದೂಗಳಲ್ಲ” ಎಂದು ಹೇಳಿದ್ದಾರೆ. ಅವರ ಹೇಳಿಕೆಗೆ ಬುಡಕಟ್ಟು ಸಮುದಾಯದ ಮಹಿಳೆಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಿಕ್ಷಕಿಯ ಹೇಳಿಕೆ ವ್ಯಾಪಕ ಟೀಕೆಗೆ ಕಾರಣವಾಗಿದೆ.

Teacher Suspended
Teacher Suspended

ಇದಕ್ಕೆ ಪ್ರತಿಕ್ರಿಯಿಸಿದ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಶಿಕ್ಷಕಿ ದಾಮೋರ್ ಅವರನ್ನು ಅಮಾನತುಗೊಳಿಸಿದ್ದಾರೆ. ರಾಜಸ್ಥಾನ ನೀತಿ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಮತ್ತು ಶಿಕ್ಷಣ ಇಲಾಖೆಯ ಪ್ರತಿಷ್ಠೆಗೆ ಕಳಂಕ ತಂದ ಆರೋಪದ ಮೇಲೆ ದಾಮೋರ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಶಿಕ್ಷಕಿ ಮೇನಕಾ ದಾಮೋರ್ ಅವರು ಆದಿವಾಸಿ ಪರಿವಾರ ಸಂಸ್ಥೆಯ (Adivasi Parivar Sanstha )ಸ್ಥಾಪಕಿಯಾಗಿ ಹೆಸರುವಾಸಿಯಾಗಿದ್ದಾರೆ ಮತ್ತು ಘಟನೆಯ ಸಮಯದಲ್ಲಿ ಸಾದಾದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ:ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

ಮಂಗರ್ ಧಾಮ್‍ನಲ್ಲಿ ನಡೆದ ರ್ಯಾಲಿ ವಿಶಾಲವಾದ ಸಾಮಾಜಿಕ-ರಾಜಕೀಯ ವಿಷಯಗಳ ಬಗ್ಗೆ ಚರ್ಚಿಸಲು ವೇದಿಕೆಯಾಯಿತು. ಇದು ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಬುಡಕಟ್ಟು ಸಮುದಾಯಗಳಿಂದ ಸಾವಿರಾರು ಜನರು ಇದರಲ್ಲಿ ಭಾಗವಹಿಸುತ್ತಾರೆ. ದಾಮೋರ್ ಅವರ ವಿವಾದಾತ್ಮಕ ಭಾಷಣದ ಜೊತೆಗೆ, ಭಿಲ್ ರಾಜ್ಯವನ್ನು ರಚಿಸಬೇಕೆಂದು ಪ್ರತಿಪಾದಿಸುವ ರಾಜಕೀಯ ನಿರ್ಣಯವನ್ನು ಸಹ ಈ ಸಂದರ್ಭದಲ್ಲಿ ಅಂಗೀಕರಿಸಲಾಯಿತು ಎನ್ನಲಾಗಿದೆ.

Continue Reading
Advertisement
Aadhaar Update
ವಾಣಿಜ್ಯ7 mins ago

Aadhaar Update: ಹೊಸ ನಿಯಮ ಪ್ರಕಾರ ಆಧಾರ್ ವಿಳಾಸ ನವೀಕರಣಕ್ಕೆ ಯಾವ ದಾಖಲೆ ಬಳಸಬಹುದು?

Health Tips Kannada
ಆರೋಗ್ಯ22 mins ago

Health Tips Kannada: ಚಹಾ, ಕಾಫಿಯನ್ನು ಯಾವ ಸಮಯದಲ್ಲಿ ಕುಡಿಯಬಾರದು ಗೊತ್ತೇ?

Vastu Tips
ಧಾರ್ಮಿಕ1 hour ago

Vastu Tips: ಮನೆಯಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಬೇಕೆಂದರೆ ಅಡುಗೆ ಮನೆ ಹೀಗಿರಬೇಕು!

Remedies For Fatty Liver
ಆರೋಗ್ಯ1 hour ago

Remedies For Fatty Liver: ಲಿವರ್‌ನ ಕೊಬ್ಬನ್ನು ನೈಸರ್ಗಿಕವಾಗಿ ಹೀಗೆ ಕರಗಿಸಲು ಸಾಧ್ಯ!

Shravan Month 2024
ಧಾರ್ಮಿಕ1 hour ago

Shravan 2024: ಶ್ರಾವಣ ಮಾಸದಲ್ಲಿ ಯಾವ ಆಹಾರ ತಿನ್ನಬೇಕು, ಯಾವುದನ್ನು ತಿನ್ನಬಾರದು?

karnataka Weather Forecast
ಮಳೆ1 hour ago

Karnataka Weather : ಕರಾವಳಿ-ಮಲೆನಾಡಿನಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ- ಇರಲಿ ಎಚ್ಚರ

dina bhavishya
ಭವಿಷ್ಯ2 hours ago

Dina Bhavishya : ಈ ರಾಶಿಯವರಿಗೆ ಮಾತೇ ಮೃತ್ಯು, ಮೌನಕ್ಕೆ ಶರಣಾಗಿ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ರಣಯ ನಗರಿ ಪ್ಯಾರಿಸ್​ನಲ್ಲಿ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಅದ್ಧೂರಿ ಚಾಲನೆ

Mumbai Spa
ಪ್ರಮುಖ ಸುದ್ದಿ7 hours ago

ಕೊಲೆಯಾದ ರೌಡಿಯ ಮೈಮೇಲಿದ್ದ ಟ್ಯಾಟೂ ನೆರವಿನಿಂದ ಆರೋಪಿಗಳ ಬಂಧನ; ಹೇಗಂತೀರಾ? ಇಲ್ಲಿದೆ ರೋಚಕ ಕತೆ

Paris Olympics 2024
ಪ್ರಮುಖ ಸುದ್ದಿ7 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಭಾಗಿಯಾಗಿರುವ ಭಾರತದ ಅಥ್ಲೀಟ್​ಗಳಿಗೆ ಶುಭ ಕೋರಿದ ಪ್ರಧಾನಿ ಮೋದಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Ankola landslide
ಉತ್ತರ ಕನ್ನಡ12 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ13 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ14 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ15 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ3 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ4 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

ಟ್ರೆಂಡಿಂಗ್‌