Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್ Vistara News

ದೇಶ

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

Kamal Haasan: ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಳಿಕ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಟ ಕಮಲ್‌ ಹಾಸನ್‌ ಅವರು ಉದಯನಿಧಿ ಸ್ಟಾಲಿನ್‌ ಪರ ನಿಂತಿದ್ದಾರೆ.

VISTARANEWS.COM


on

Kamal Haasan And Udhayanidhi Stalin
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: “ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದ ಹಾಗೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ ನೀಡಿ ಭಾರಿ ಟೀಕೆಗೆ ಗುರಿಯಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರಿಗೆ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕೂಡ ನೋಟಿಸ್‌ ನೀಡಿದೆ. ಇದರ ಬೆನ್ನಲ್ಲೇ, ನಟ, ಮಕ್ಕಳ್‌ ನೀಧಿ ಮೈಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ ಅವರು ಉದಯನಿಧಿ ಸ್ಟಾಲಿನ್‌ ಪರ ನಿಂತಿದ್ದಾರೆ. “ಸನಾತನ ಧರ್ಮದ ವಿಚಾರಕ್ಕೆ ಸಂಬಂಧಿಸಿದಂ‌ತೆ ‘ಚಿಕ್ಕ ಮಗು’ ಉದಯನಿಧಿ ಸ್ಟಾಲಿನ್‌ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಸನಾತನ ಧರ್ಮದ ಕುರಿತಂತೆ ಇನ್ನೂ ಚಿಕ್ಕವನಾಗಿರುವ (Young Kid) ಉದಯನಿಧಿ ಸ್ಟಾಲಿನ್‌ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಎಲ್ಲರೂ ಅವನ ಮೇಲೆ ಮುಗಿಬಿದ್ದಿದ್ದಾರೆ” ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ಆದರೆ, ಅವರು ಯಾವುದೇ ಪಕ್ಷ ಅಥವಾ ಸಂಘಟನೆಯ ಹೆಸರು ಹೇಳಿಲ್ಲ. ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ಬಳಿಕ ಉದಯನಿಧಿ ಸ್ಟಾಲಿನ್‌ ವಿರುದ್ಧ ಕೇಳಿಬರುತ್ತಿರುವ ಆಕ್ರೋಶದ ಕುರಿತು ಕಮಲ್‌ ಹಾಸನ್‌ ಅವರು ಸಮಾರಂಭವೊಂದರಲ್ಲಿ ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸನಾತನ ಕುರಿತೂ ಕಮಲ್‌ ಹಾಸನ್‌ ಪ್ರತಿಕ್ರಿಯೆ

ಸನಾತನ ಧರ್ಮದ ಕುರಿತು ಕೂಡ ಕಮಲ್‌ ಹಾಸನ್‌ ಪ್ರತಿಕ್ರಿಯೆ ನೀಡಿದ್ದಾರೆ. “ನಾವೆಲ್ಲ ಪೆರಿಯಾರ್‌ ಅವರಿಂದ ಸನಾತನ ಎಂಬ ಪದವನ್ನು ಕೇಳಿದ್ದೇವೆ. ಪೆರಿಯಾರ್‌ ಅವರು ವಾರಾಣಸಿಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ತಿಲಕ ಇಟ್ಟುಕೊಂಡು ಪೂಜೆ ಮಾಡುತ್ತಿದ್ದರು. ಅಂತಹವರು ಎಲ್ಲವನ್ನೂ ಬಿಟ್ಟು ಸಮಾಜ ಸುಧಾರಣೆಗೆ ಇಳಿದರು. ಹಾಗಂತ, ಪೆರಿಯಾರ್‌ ಅವರನ್ನು ಡಿಎಂಕೆ ಸೇರಿ ಯಾವುದೇ ಪಕ್ಷವು ಸ್ವಂತ ಮಾಡಿಕೊಳ್ಳುವ ಹಾಗಿಲ್ಲ. ಅವರನ್ನು ಇಡೀ ತಮಿಳುನಾಡು ಸ್ವಂತ ಮಾಡಿಕೊಂಡಿದೆ” ಎಂದರು.

ಇದನ್ನೂ ಓದಿ: Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್‌, ಎದುರಾಯ್ತು ಸಂಕಷ್ಟ

ಏನು ಹೇಳಿದ್ದರು ಉದಯನಿಧಿ ಸ್ಟಾಲಿನ್?

ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಮಾಜಿ ಎಮ್ಮೆಲ್ಲೆಗಳಿಗೆ ಅವರ ಊರಲ್ಲೇ 50 ವೋಟು ಬಿದ್ದಿಲ್ಲ! ಕಾಂಗ್ರೆಸ್ ನಾಯಕ

Madhya Pradesh: ಐದು ರಾಜ್ಯಗಳ ಪೈಕಿ ಮಧ್ಯ ಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವು ಸೋಲು ಅನುಭವಿಸಿದೆ.

VISTARANEWS.COM


on

our former mlas they did not get even 50 votes in Madhya Pradesh Says Congress
Koo

ಭೋಪಾಲ್: ನಮ್ಮ ಮಾಜಿ ಶಾಸಕರಿಗೆ (Former MLAs) ಅವರ ಊರಿನಲ್ಲಿ 50 ಮತಗಳು ಬಿದ್ದಿಲ್ಲ (50 Votes). ನಾವು ಗೆಲ್ಲೋದು ಹೇಗೆ ಎಂದು ಮಧ್ಯ ಪ್ರದೇಶ ಕಾಂಗ್ರೆಸ್ ನಾಯಕ ಕಮಲ್ ನಾಥ್ (Madhya Pradesh Congress Leader Kamal Nath) ಅವರು ಹೇಳಿದ್ದಾರೆ. ತಮ್ಮ ಊರುಗಳಲ್ಲಿ 50 ಮತಗಳು ಕೂಡ ಬಿದ್ದಿಲ್ಲ ಎಂದು ಮಾಜಿ ಶಾಸಕರು ಕಮಲ್ ನಾಥ ಅವರಿಗೆ ತಿಳಿಸಿದ್ದಾರೆ. ಮಧ್ಯ ಪ್ರದೇಶ ಚುನಾವಣಾ ಫಲಿತಾಂಶದ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿರುವ ಕಮಲ್ ನಾಥ್ ಅವರು, ಚುನಾವಣಾ ಅಕ್ರಮ ನಡೆದಿದೆ (electoral malpractices) ಎಂದೇನೂ ಆರೋಪಿಸಲಿಲ್ಲ. ಆದರೆ, ಮತ್ತೊಂದೆಡೆ, ದಿಗ್ವಿಜಯ್ ಸಿಂಗ್ (Digvijaya Singh) ವರು ವಿದ್ಯುನ್ಮಾನ ಮತಯಯಂತ್ರಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಾರೆ.

ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದ ಮೂರು ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಎರಡು ದಿನಗಳ ನಂತರ ಈ ಹೇಳಿಕೆಗಳು ಬಂದಿವೆ. ತೆಲಂಗಾಣದಲ್ಲಿ ಕಾಂಗ್ರೆಸ್ ತನ್ನ ಏಕೈಕ ಗೆಲುವಿನಲ್ಲಿ ಸಮಾಧಾನ ಕಂಡುಕೊಳ್ಳಬೇಕಾಯಿತು. ಮಧ್ಯ ಪ್ರದೇಶದಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ. ಕಾಂಗ್ರೆಸ್ 66 ಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮಧ್ಯಪ್ರದೇಶದಲ್ಲಿ ಸಮಬಲ ಸ್ಪರ್ಧೆ ನಡೆಯಲಿದೆ ಎಂದು ಎಕ್ಸಿಟ್ ಪೋಲ್‌ಗಳ ಊಹೆ ಕೂಡ ಸುಳ್ಳಾಯಿತು.

ಕಾಂಗ್ರೆಸ್‌ನ ಪ್ರಚಾರದ ನೇತೃತ್ವ ವಹಿಸಿರುವ ಕಮಲ್ ನಾಥ್, ಪಕ್ಷದ ಕಳಪೆ ಪ್ರದರ್ಶನದ ಹಿಂದಿನ ಕಾರಣಗಳನ್ನು ವಿಶ್ಲೇಷಿಸಲು ಪಕ್ಷದ ಜತೆ ಚರ್ಚಿಸಲಾಗುವುದು. ಈ ಕುರಿತು ಗೆದ್ದ ಮತ್ತು ಸೋತ ಅಭ್ಯರ್ಥಿಗಳ ಜತೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಕೆಲವು ಕಾಂಗ್ರೆಸ್ ನಾಯಕು ಇವಿಎಂ ಹ್ಯಾಕ್ ಬಗ್ಗೆ ಆರೋಪಿಸುತ್ತಿದ್ದಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಕಮಲ್ ನಾಥ್ ಅವರು, ಚರ್ಚೆ ನಡೆಸದೆ ತೀರ್ಮಾನಕ್ಕೆ ಬರುವುದು ಸರಿಯಲ್ಲ, ನಾನು ಮೊದಲು ಎಲ್ಲರೊಂದಿಗೆ ಮಾತನಾಡುತ್ತೇನೆ. ಆ ಮೇಲೆ ಈ ಬಗ್ಗೆ ನಿರ್ಧರಿಸುತ್ತೇನೆ ಎಂದು ಹೇಳಿದರು.

ಇಷ್ಟಾಗಿಯೂ ಅವರು ಚುನಾವಣಾ ಫಲಿತಾಂಶದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರ ಚಿತ್ತ ಕಾಂಗ್ರೆಸ್ ಪರವಾಗಿಯೇ ಇದೆ ಎಂದು ಒತ್ತಿ ಹೇಳಿದರು. ಮಧ್ಯ ಪ್ರದೇಶದಲ್ಲಿ ಪರಿಸ್ಥಿತಿ ಹೇಗಿತ್ತು ಎಂಬುದು ನಿಮಗೂ(ಸುದ್ದಿಗಾರರು) ಗೊತ್ತಿತ್ತು. ಈಗ ನನ್ನೇಕೆ ಕೇಳುತ್ತಿದ್ದೀರಿ. ನಮ್ಮ ಕೆಲವು ಎಮ್ಮೆಲ್ಲೆಗಳು ತಮ್ಮ ಊರಿನಲ್ಲಿ 50 ಮತಗಳು ಬಿದ್ದಿಲ್ಲ ಎಂದು ಹೇಳಿದ್ದಾರೆ. ಹೀಗೆ ಆಗಲು ಹೇಗೆ ಸಾಧ್ಯ ಎಂದು ಕಮಲ್ ನಾಥ್ ಅವರು ಹೇಳಿದ್ದಾರೆ.

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

ಬಿಜೆಪಿ (Bhartiya Janata Party) ಗೆದ್ದಾಗಲೆಲ್ಲ ಪ್ರತಿಪಕ್ಷಗಳು (Opposition Parties) ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ (EVM Hack) ಮಾಡಲಾಗಿದೆ ಎಂದು ಆರೋಪ ಮಾಡುತ್ತಿದ್ದವು. ಈಗ ಕಾಂಗ್ರೆಸ್ ಪಕ್ಷ (Congress Party) ಹೊಸ ಪ್ರಲಾಪವನ್ನು ಆರಂಭಿಸಿದೆ. ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ (Congress Leader Digvijaya Singh) ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿ, ಭಾರತೀಯ ಜನತಾ ಪಾರ್ಟಿಗೆ ಚುನಾವಣಾ ಫಲಿತಾಂಶವು (Election Result 2023) ಎರಡು ದಿನಗಳ ಮುಂಚಿತವಾಗಿಯೇ ಗೊತ್ತಿತ್ತು ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ಚುನಾವಣಾ ಅಕ್ರಮ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಫೇಸ್‌ಬುಕ್ ಪೋಸ್ಟ್ ಮತ್ತು ಭಾರತೀಯ ಚುನಾವಣಾ ಆಯೋಗದ ಫಲಿತಾಂಶ ಪುಟದ ಎರಡು ಸ್ಕ್ರೀನ್ ಶಾಟ್ ಷೇರ್ ಮಾಡಿಕೊಂಡಿದ್ದಾರೆ. ಅಲ್ಲದೇ, ”ಈ ಎರಡು ಚಿತ್ರಗಳನ್ನು ಹತ್ತಿರದಿಂದ ನೋಡಿ. ಖಚ್ರೋಡ್ ಅಸೆಂಬ್ಲಿ ಕ್ಷೇತ್ರದಲ್ಲಿ ಪ್ರತಿ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದರು ಮತ್ತು ಮತಗಳ ಅಂತರ ಎಷ್ಟು ಎಂಬುದನ್ನು ಬಿಜೆಪಿ ಕಾರ್ಯಕರ್ತರು ಬರೆದಿದ್ದಾರೆ. ಮುಖ್ಯವಾಗಿ, ಈ ಪೋಸ್ಟ್ ಅನ್ನು ಎಣಿಕೆಗೆ ಎರಡು ದಿನಗಳ ಮೊದಲು ಅಂದರೆ ಡಿಸೆಂಬರ್ 1ರಂದು ಮಾಡಲಾಗಿದೆ. ಈಗ ಇದನ್ನು ಫಲಿತಾಂಶಗಳೊಂದಿಗೆ ತುಲನೆ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದ ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಡಾ. ತೇಜ್‌ಬಹದ್ದೂರ್ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್‌ ಅಭ್ಯರ್ಥಿ ದಿಲಿಪ್ ಸಿಂಗ್ ಗುರ್ಜರ್ ಅವರನ್ನು 15,927 ಮತಗಳ ಅಂತರದಿಂದ ಸೋಲಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಉಲ್ಲೇಖಿಸಿರುವ ಫೇಸ್‌ಬುಕ್ ಪೋಸ್ಟ್ ಅನಿಲ್ ಚಚ್ಚೇದ್ ಅವರ ಪ್ರೊಫೈಲ್‌ನಿಂದ ತೆಗೆದುಕೊಳ್ಳಲಾಗಿದೆ. ಈ ಪ್ರೊಫೈಲ್‌ನಲ್ಲಿ ಅವರು ಡಿಜಿಟಲ್ ಕ್ರಿಯೇಟರ್ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಪ್ರೊಫೈಲ್‌ನಲ್ಲಿ ಚುನಾವಣಾ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಮತ್ತು ಪಕ್ಷದ ಅನೇಕ ರ್ಯಾಲಿಗಳ ಫೋಟೋಗಳನ್ನು ಕಾಣಬಹುದು. ಬಿಜೆಪಿಯನ್ನು ಬೆಂಬಲಿಸುವ ಸಾಕಷ್ಟು ಪೋಸ್ಟ್‌ಗಳಿವೆ.

ಡಿಸೆಂಬರ್ 1ರಂದು ಮಾಡಲಾಗಿರುವ ಪೋಸ್ಟ್‌ನಲ್ಲಿ ಚಚ್ಚೇದ್ ಅವರು ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಒಟ್ಟು 1,78,364 ಚಲಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ 93,000 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ 77,000 ಮತಗಳನ್ನು ಪಡೆದಿದ್ದಾರೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಡಿಸೆಂಬರ್ 3ರಂದು ಪ್ರಕಟವಾದ ಫಲಿತಾಂಶದ ಪ್ರಕಾರ, ಬಿಜೆಪಿ ಅಭ್ಯರ್ಥಿ 93,552 ಮತ್ತು ಕಾಂಗ್ರೆಸ್ ಅಭ್ಯರ್ಥಿ 77,625 ಮತಗಳನ್ನು ಪಡೆದುಕೊಂಡಿದ್ದರು. ಡಿಸೆಂಬರ್ 1ರ ಪೋಸ್ಟ್‌ನಲ್ಲಿ ತಿಳಿಸಲಾದ ಮತಗಳು ಮತ್ತು ಫಲಿತಾಂಶದ ವೇಳೆ ಗೊತ್ತಾದ ಮತಗಳು ಆಲ್ಮೋಸ್ಟ್ ಒಂದೇ ತೆರನಾಗಿವೆ. ಈ ಪೋಸ್ಟ್ ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬಿಜೆಪಿ ನಾಯಕರಿಗೆ ಮೊದಲೇ ಫಲಿತಾಂಶ ಗೊತ್ತಿತ್ತು ಎಂದು ಆರೋಪಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಆರೋಪಿಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ, ಶಾಸಕ ರಾಮೇಶ್ವರ್ ಶರ್ಮಾ ಅವರು, ದಿಗ್ವಿಜಯ್ ಸಿಂಗ್ ಅವರು ಯಾರನ್ನೂ ನಂಬಲ್ಲ. ಇವಿಎಂ ಮೇಲೂ ನಂಬಿಕೆ ಇಲ್ಲ. ಸ್ವತಃ ಅವರಿಗೆ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಹಾಗೆಯೇ, ಪೋಸ್ಟ್ ಮಾಡಿರುವ ಅನಿಲ್ ಚಚ್ಚೇದ್ ಅವರು ಪಕ್ಷದ ಪದಾಧಿಕಾರಿಯೇ ಅಥವಾ ಅಲ್ಲವೇ ಎಂಬುದನ್ನು ಭಾರತೀಯ ಜನತಾ ಪಾರ್ಟಿಯು ಖಚಿತಪಡಿಸಿಲ್ಲ. ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಗೆದ್ದ ಮಾರನೇ ದಿನವೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಮತ್ತೆ ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತಯೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Election Result 2023: ಸನಾತನ ಧರ್ಮ ವಿರೋಧಿಸಿದ್ದಕ್ಕೇ ಕಾಂಗ್ರೆಸ್‌ಗೆ ಸೋಲು; ಪಕ್ಷದ ವಿರುದ್ಧವೇ ತಿರುಗಿ ಬಿದ್ದ ನಾಯಕ!

Continue Reading

ದೇಶ

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

Digvijaya Singh: ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಚುನಾವಣೆ ಸೋತ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಮತ್ತೆ ಇವಿಎಂ ಹ್ಯಾಕ್ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ.

VISTARANEWS.COM


on

BJP knew the result two days earlier vote count Says Congress
Koo

ಭೋಪಾಲ್: ಬಿಜೆಪಿ (Bhartiya Janata Party) ಗೆದ್ದಾಗಲೆಲ್ಲ ಪ್ರತಿಪಕ್ಷಗಳು (Opposition Parties) ವಿದ್ಯುನ್ಮಾನ ಮತಯಂತ್ರಗಳನ್ನು ಹ್ಯಾಕ್ (EVM Hack) ಮಾಡಲಾಗಿದೆ ಎಂದು ಆರೋಪ ಮಾಡುತ್ತಿದ್ದವು. ಈಗ ಕಾಂಗ್ರೆಸ್ ಪಕ್ಷ (Congress Party) ಹೊಸ ಪ್ರಲಾಪವನ್ನು ಆರಂಭಿಸಿದೆ. ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ (Congress Leader Digvijaya Singh) ಅವರು ಎಕ್ಸ್ ವೇದಿಕೆಯಲ್ಲಿ ಪೋಸ್ಟ್ ಮಾಡಿ, ಭಾರತೀಯ ಜನತಾ ಪಾರ್ಟಿಗೆ ಚುನಾವಣಾ ಫಲಿತಾಂಶವು (Election Result 2023) ಎರಡು ದಿನಗಳ ಮುಂಚಿತವಾಗಿಯೇ ಗೊತ್ತಿತ್ತು ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿ ಚುನಾವಣಾ ಅಕ್ರಮ ನಡೆಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಫೇಸ್‌ಬುಕ್ ಪೋಸ್ಟ್ ಮತ್ತು ಭಾರತೀಯ ಚುನಾವಣಾ ಆಯೋಗದ ಫಲಿತಾಂಶ ಪುಟದ ಎರಡು ಸ್ಕ್ರೀನ್ ಶಾಟ್ ಷೇರ್ ಮಾಡಿಕೊಂಡಿದ್ದಾರೆ. ಅಲ್ಲದೇ, ”ಈ ಎರಡು ಚಿತ್ರಗಳನ್ನು ಹತ್ತಿರದಿಂದ ನೋಡಿ. ಖಚ್ರೋಡ್ ಅಸೆಂಬ್ಲಿ ಕ್ಷೇತ್ರದಲ್ಲಿ ಪ್ರತಿ ಅಭ್ಯರ್ಥಿ ಎಷ್ಟು ಮತಗಳನ್ನು ಪಡೆದರು ಮತ್ತು ಮತಗಳ ಅಂತರ ಎಷ್ಟು ಎಂಬುದನ್ನು ಬಿಜೆಪಿ ಕಾರ್ಯಕರ್ತರು ಬರೆದಿದ್ದಾರೆ. ಮುಖ್ಯವಾಗಿ, ಈ ಪೋಸ್ಟ್ ಅನ್ನು ಎಣಿಕೆಗೆ ಎರಡು ದಿನಗಳ ಮೊದಲು ಅಂದರೆ ಡಿಸೆಂಬರ್ 1ರಂದು ಮಾಡಲಾಗಿದೆ. ಈಗ ಇದನ್ನು ಫಲಿತಾಂಶಗಳೊಂದಿಗೆ ತುಲನೆ ಮಾಡಿ” ಎಂದು ಬರೆದುಕೊಂಡಿದ್ದಾರೆ.

ಮಧ್ಯಪ್ರದೇಶದ ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಡಾ. ತೇಜ್‌ಬಹದ್ದೂರ್ ಸಿಂಗ್ ಚೌಹಾಣ್ ಅವರು ಕಾಂಗ್ರೆಸ್‌ ಅಭ್ಯರ್ಥಿ ದಿಲಿಪ್ ಸಿಂಗ್ ಗುರ್ಜರ್ ಅವರನ್ನು 15,927 ಮತಗಳ ಅಂತರದಿಂದ ಸೋಲಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಉಲ್ಲೇಖಿಸಿರುವ ಫೇಸ್‌ಬುಕ್ ಪೋಸ್ಟ್ ಅನಿಲ್ ಚಚ್ಚೇದ್ ಅವರ ಪ್ರೊಫೈಲ್‌ನಿಂದ ತೆಗೆದುಕೊಳ್ಳಲಾಗಿದೆ. ಈ ಪ್ರೊಫೈಲ್‌ನಲ್ಲಿ ಅವರು ಡಿಜಿಟಲ್ ಕ್ರಿಯೇಟರ್ ಎಂದು ಪರಿಚಯಿಸಿಕೊಂಡಿದ್ದಾರೆ. ಈ ಪ್ರೊಫೈಲ್‌ನಲ್ಲಿ ಚುನಾವಣಾ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಮತ್ತು ಪಕ್ಷದ ಅನೇಕ ರ್ಯಾಲಿಗಳ ಫೋಟೋಗಳನ್ನು ಕಾಣಬಹುದು. ಬಿಜೆಪಿಯನ್ನು ಬೆಂಬಲಿಸುವ ಸಾಕಷ್ಟು ಪೋಸ್ಟ್‌ಗಳಿವೆ.

ಡಿಸೆಂಬರ್ 1ರಂದು ಮಾಡಲಾಗಿರುವ ಪೋಸ್ಟ್‌ನಲ್ಲಿ ಚಚ್ಚೇದ್ ಅವರು ನಾಗಡ-ಖಚ್ರೋಡ್ ಕ್ಷೇತ್ರದಲ್ಲಿ ಒಟ್ಟು 1,78,364 ಚಲಾವಣೆಯಾಗಿದ್ದು, ಬಿಜೆಪಿ ಅಭ್ಯರ್ಥಿ 93,000 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಅಭ್ಯರ್ಥಿ 77,000 ಮತಗಳನ್ನು ಪಡೆದಿದ್ದಾರೆ ಎಂದು ಪೋಸ್ಟ್‌ನಲ್ಲಿ ಬರೆಯಲಾಗಿದೆ. ಡಿಸೆಂಬರ್ 3ರಂದು ಪ್ರಕಟವಾದ ಫಲಿತಾಂಶದ ಪ್ರಕಾರ, ಬಿಜೆಪಿ ಅಭ್ಯರ್ಥಿ 93,552 ಮತ್ತು ಕಾಂಗ್ರೆಸ್ ಅಭ್ಯರ್ಥಿ 77,625 ಮತಗಳನ್ನು ಪಡೆದುಕೊಂಡಿದ್ದರು. ಡಿಸೆಂಬರ್ 1ರ ಪೋಸ್ಟ್‌ನಲ್ಲಿ ತಿಳಿಸಲಾದ ಮತಗಳು ಮತ್ತು ಫಲಿತಾಂಶದ ವೇಳೆ ಗೊತ್ತಾದ ಮತಗಳು ಆಲ್ಮೋಸ್ಟ್ ಒಂದೇ ತೆರನಾಗಿವೆ. ಈ ಪೋಸ್ಟ್ ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರು ಬಿಜೆಪಿ ನಾಯಕರಿಗೆ ಮೊದಲೇ ಫಲಿತಾಂಶ ಗೊತ್ತಿತ್ತು ಎಂದು ಆರೋಪಿಸಿದ್ದಾರೆ.

ದಿಗ್ವಿಜಯ್ ಸಿಂಗ್ ಅವರು ಆರೋಪಿಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ, ಶಾಸಕ ರಾಮೇಶ್ವರ್ ಶರ್ಮಾ ಅವರು, ದಿಗ್ವಿಜಯ್ ಸಿಂಗ್ ಅವರು ಯಾರನ್ನೂ ನಂಬಲ್ಲ. ಇವಿಎಂ ಮೇಲೂ ನಂಬಿಕೆ ಇಲ್ಲ. ಸ್ವತಃ ಅವರಿಗೆ ಅವರ ಮೇಲೆಯೇ ನಂಬಿಕೆ ಇಲ್ಲ ಎಂದು ಲೇವಡಿ ಮಾಡಿದ್ದಾರೆ. ಹಾಗೆಯೇ, ಪೋಸ್ಟ್ ಮಾಡಿರುವ ಅನಿಲ್ ಚಚ್ಚೇದ್ ಅವರು ಪಕ್ಷದ ಪದಾಧಿಕಾರಿಯೇ ಅಥವಾ ಅಲ್ಲವೇ ಎಂಬುದನ್ನು ಭಾರತೀಯ ಜನತಾ ಪಾರ್ಟಿಯು ಖಚಿತಪಡಿಸಿಲ್ಲ.

ಛತ್ತೀಸ್‌ಗಢ, ಮಧ್ಯ ಪ್ರದೇಶ ಹಾಗೂ ರಾಜಸ್ಥಾನ ಚುನಾವಣೆಗಳಲ್ಲಿ ಭಾರತೀಯ ಜನತಾ ಪಾರ್ಟಿಯು ಗೆದ್ದ ಮಾರನೇ ದಿನವೇ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಮತ್ತೆ ವಿದ್ಯುನ್ಮಾನ ಮತ ಯಂತ್ರಗಳ ವಿಶ್ವಾಸಾರ್ಹತಯೆ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಚಿಪ್‌ನೊಂದಿಗೆ ಇರುವ ಯಾವುದೇ ಯಂತ್ರವನ್ನು ಹ್ಯಾಕ್ ಮಾಡಬಹುದು. ನಾನು 2003ರಿಂದಲೂ ವಿದ್ಯುನ್ಮಾನ ಮತಯಂತ್ರಗಳನ್ನು ವಿರೋಧಿಸುತ್ತಲೇ ಬಂದಿದ್ದೇನೆ. ವೃತ್ತಿಪರ ಹ್ಯಾಕರ್ಸ್‌ಗಳಿಗೆ ನಮ್ಮ ಪ್ರಜಾಪ್ರಭುತ್ವದ ನಿಯಂತ್ರಣ ಮಾಡಲು ಬಿಟ್ಟುಕೊಡಬೇಕೇ; ಎಲ್ಲ ಪಾರ್ಟಿಗಳು ಕೇಳಿಕೊಳ್ಳಬೇಕಾದ ಮೂಲಭೂತ ಪ್ರಶ್ನೆಯಾಗಿದೆ. ಗೌರವಾನ್ವಿತ ಕೇಂದ್ರ ಚುನಾವಣಾ ಆಯೋಗ ಹಾಗೂ ಸುಪ್ರೀಂ ಕೋರ್ಟ್ ನಮ್ಮ ಭಾರತೀಯ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡುತ್ತೀರಾ? ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರು ಎಕ್ಸ್ ವೇದಿಕೆಯಲ್ಲಿ ಮತ್ತೊಂದು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: Mizoram Election Results: ಎಂಎನ್‌ಎಫ್‌ಗೆ ಭಾರೀ ಸೋಲು, ಮಿಜೋರಾಂನಲ್ಲಿ ಇನ್ನು ಜೆಡ್‌ಪಿಎಂ ಆಡಳಿತ

Continue Reading

ದೇಶ

Gautam Adani: ಒಂದೇ ವಾರದಲ್ಲಿ ಅದಾನಿ ಸಂಪತ್ತಿನಲ್ಲಿ 10 ಶತಕೋಟಿ ಡಾಲರ್ ಏರಿಕೆ!

Gautam Adani: ಶಾರ್ಟ್‌ ಸೆಲ್ಲರ್ ಹಿಂಡೆನ್‌ಬರ್ಗ್ ವರದಿಯಿಂದ ಭಾರೀ ಕುಸಿತ ಕಂಡಿದ್ದ ಅದಾನಿ ಗ್ರೂಪ್ ಷೇರುಗಳು ಈಗ ಏರುಗತಿಯಲ್ಲಿದ್ದು, ಗೌತಮ್ ಅದಾನಿ ಮತ್ತೆ ಜಗತ್ತಿನ ಟಾಪ್ 20 ಶ್ರೀಮಂತರ ಪಟ್ಟಿಯಲ್ಲಿ 16ನೇ ಸ್ಥಾನಕ್ಕೆ ಏರಿದ್ದಾರೆ.

VISTARANEWS.COM


on

Gautam adani wealth increased by 10 billion dollars in a week
Koo

ನವದೆಹಲಿ: ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ (Hindenburg Report) ವರದಿಯಿಂದಾಗಿ ಭಾರೀ ಕುಸಿತ ಅನುಭವಿಸಿದ್ದ ಅದಾನಿ ಗ್ರೂಪ್‌(Adani Group) ಷೇರುಗಳು ಈಗ ಏರುಗತಿಯಲ್ಲಿವೆ(adani Shares). ಪರಿಣಾಮ, ಅದಾನಿ ಗ್ರೂಪ್ ಚೇರ್ಮನ್ ಗೌತಮ್ ಅದಾನಿ (Gautam Adani) ಅವರ ಸಂಪತ್ತಿನ ಮೌಲ್ಯವು ಒಂದೇ ವಾರದಲ್ಲಿ 10 ಶತಕೋಟಿ ಡಾಲರ್‌ನಷ್ಟು ಏರಿಕೆ ಕಂಡಿದೆ. ಸದ್ಯ ಅವರು ಒಟ್ಟು ಆಸ್ತಿ ಮೌಲ್ಯ 70.3 ಶತಕೋಟಿ ಡಾಲರ್‌ನಷ್ಟಿದೆ(Gautam Adani’s Wealth) ಎಂದು ಮಾಧ್ಯಮಗಳು ವರದಿ ಮಾಡಿವೆ.

ಸಂಪತ್ತಿನ ಹೆಚ್ಚಳದ ನಂತರ ಗೌತಮ್ ಅದಾನಿ ಈಗ ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ 16 ನೇ ಸ್ಥಾನಕ್ಕೆ ಏರಿದ್ದಾರೆ. ಟಾಪ್ 20 ಪಟ್ಟಿಯಲ್ಲಿ ಎರಡನೇ ಭಾರತೀಯ ಬಿಲಿಯನೇರ್ ಆಗಿದ್ದಾರೆ. ಮುಕೇಶ್ ಅಂಬಾನಿ ಅವರು 90.4 ಶತಕೋಟಿ ಡಾಲರ್‌ ಆಸ್ತಿಯೊಂದಿಗೆ 13ನೇ ಸ್ಥಾನದಲ್ಲಿದ್ದಾರೆ.

ಅಮೆರಿಕದ ಇಂಟರ್ನ್ಯಾಷನಲ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೊರೇಶನ್ (DFC)ಯ ವರದಿಯ ನಂತರ, ಮಂಗಳವಾರ ಅದಾನಿ ಗ್ರೂಪ್‌ ಷೇರುಗಳು 20% ರಷ್ಟು ಏರಿಕೆ ಕಂಡವು. ಅದಾನಿ ಗ್ರೂಪ್ ವಿರುದ್ಧ ಹಿಂಡೆನ್‌ಬರ್ಗ್ ಮಾಡಿದ್ದ ಕಾರ್ಪೊರೇಟ್ ವಂಚನೆಯ ವರದಿಯ ಆರೋಪಗಳು ಅಪ್ರಸ್ತು ಎಂಬುದನ್ನು ಈ ಬೆಳವಣಿಗೆಯು ಸಾಬೀತುಪಡಿಸುತ್ತಿವೆ.

ಶ್ರೀಲಂಕಾದಲ್ಲಿ ಕಂಟೈನರ್ ಟರ್ಮಿನಲ್ ನಿರ್ಮಿಸಲು ಡಿಎಫ್‌ಸಿ 553 ಮಿಲಿಯನ್ ಡಾಲರ್ ಅಂದರೆ, 4600 ಕೋಟಿ ರೂ.ಗೂ ಹೆಚ್ಚು ಸಾಲವನ್ನು ಅದಾನಿಗೆ ನೀಡಿದೆ. ಸಾಲವನ್ನು ನೀಡುವ ಮೊದಲು, ಡಿಎಫ್‌ಸಿ ಶಾರ್ಟ್ ಸೆಲ್ಲರ್ ಸಂಸ್ಥೆ ಹಿಂಡೆನ್‌ಬರ್ಗ್‌ನ ಆರೋಪಗಳ ಕುರಿತು ತನಿಖೆ ಮಾಡಿದ್ದು, ಅವು ಸುಳ್ಳು ಎಂದು ಕಂಡುಬಂದಿದೆ ಎಂದು ಹೇಳಿದೆ. ಕಳೆದ ಒಂದು ವಾರದಲ್ಲಿ ಅದಾನಿ ಗ್ರೂಪ್ ಸಂಪತ್ತಿನಲ್ಲಿಿ 1.76 ಲಕ್ಷ ಕೋಟಿ ರೂ.ಗೂ ಅಧಿಕ ಏರಿಕೆಯಾಗಿದೆ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಈ ಮಧ್ಯೆ, ಷೇರು ಪೇಟೆ ನಿಯಮಗಳನ್ನು ಮೀರಿರುವ ಆರೋಪ ಎದುರಿಸುತ್ತಿರುವ ಅದಾನಿ ಗ್ರೂಪ್ ವಿರುದ್ಧ, ನ್ಯಾಯಾಲಯ ನಿಯಂತ್ರಣದಲ್ಲಿ ತನಿಖೆಗೆ ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಕುರಿತಾದ ತೀರ್ಪನ್ನು ಸುಪ್ರೀಂ ಕೋರ್ಟ್ ಕಳೆದ ವಾರ ಕಾಯ್ದಿಟ್ಟಿದೆ. ಶಾರ್ಟ್ ಸೆಲ್ಲರ್ ಹಿಂಡೆನ್‌ಬರ್ಗ್ ವರದಿಯ ಹಿನ್ನೆಲೆಯಲ್ಲ ಈ ಪಿಐಎಲ್ ದಾಖಲಿಸಲಾಗಿತ್ತು.

ನಿಫ್ಟಿ, ಸೆನ್ಸೆಕ್ಸ್‌ ನೆಗೆತ, ಸುಧಾರಿಸಿದ ರೂಪಾಯಿ ಮೌಲ್ಯ!

ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್‌ಗಢದಲ್ಲಿ ಬಿಜೆಪಿ ಗೆಲುವು ಸಾಧಿಸಿದ (Assembly Election Results 2023) ಬೆನ್ನಲ್ಲೇ ದೇಶದ ಷೇರುಪೇಟೆಯಲ್ಲಿ (Stock Market) ಹೊಸ ಉತ್ಸಾಹ ಮೂಡಿದೆ. ಸೋಮವಾರ ನಿಫ್ಟಿ, ಸೆನ್ಸೆಕ್ಸ್‌ ದಾಖಲೆಯ ಏರಿಕೆ ಕಂಡಿದ್ದು, ಚುನಾವಣೆ ಫಲಿತಾಂಶವೇ ಇದಕ್ಕೆ ಕಾರಣ ಎಂದು ಷೇರುಪೇಟೆ ತಜ್ಞರು ತಿಳಿಸಿದ್ದಾರೆ. ಮತ್ತೊಂದೆಡೆ ಡಾಲರ್‌ ಎದುರು ರೂಪಾಯಿ ಮೌಲ್ಯವೂ ಸುಧಾರಿಸಿಕೊಂಡಿದೆ.

ಷೇರು ಮಾರುಕಟ್ಟೆಯಲ್ಲಿ ಸೋಮವಾರ ಬೆಳಗ್ಗೆ ಭಾರಿ ಲವಲವಿಕೆ ಕಂಡುಬಂದಿದೆ. ಬಿಎಸ್‌ಇ ಸೆನ್ಸೆಕ್ಸ್‌ 877.43 ಪಾಯಿಂಟ್‌ಗಳ ಏರಿಕೆಯೊಂದಿಗೆ (ಶೇ.1.3%) 68,358.52 ಅಂಕಗಳೊಂದಿಗೆ ಸಾರ್ವಕಾಲಿಕ ಸಾಧನೆ ಮಾಡಿತು. ಇನ್ನು ನಿಫ್ಟಿಯೂ 284.80 ಅಂಕಗಳ ಏರಿಕೆಯೊಂದಿಗೆ (ಶೇ.1.41) 20,552.70 ಅಂಕಗಳನ್ನು ತಲುಪುವ ಮೂಲಕ ಸಾರ್ವಕಾಲಿಕ ಗರಿಷ್ಠ ಪಾಯಿಂಟ್‌ಗಳ ದಾಖಲೆ ಬರೆಯಿತು.

ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಡಾಲರ್‌ ಎದುರು ರೂಪಾಯಿ ಮೌಲ್ಯವು 6 ಪೈಸೆ ಸುಧಾರಣೆಯಾಗಿದೆ. ಇನ್ನು ಷೇರು ಮಾರುಕಟ್ಟೆಯಲ್ಲ ವಹಿವಾಟು ಆರಂಭವಾದ ಕೆಲವೇ ನಿಮಿಷಗಳಲ್ಲಿ ಹಲವು ಕಂಪನಿಗಳ ಮಾರುಕಟ್ಟೆ ಬಂಡವಾಳವು 4.09 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಬೆಳಗ್ಗೆಯ ಟ್ರೇಡಿಂಗ್‌ನಲ್ಲಿ ಅದಾನಿ ಗ್ರೂಪ್‌ ಕಂಪನಿಗಳು ಹೆಚ್ಚು ಲಾಭ ಗಳಿಸಿವೆ. ಹಾಗೆಯೇ, ಎಸ್‌ಬಿಐ, ಐಸಿಐಸಿಐ ಬ್ಯಾಂಕ್‌, ಭಾರ್ತಿ ಏರ್‌ಟೆಲ್‌, ಎನ್‌ಟಿಪಿಸಿ ಹಾಗೂ ಲಾರ್ಸೆನ್‌ & ಟರ್ಬೊ ಕೂಡ ಹೆಚ್ಚಿನ ಲಾಭ ಗಳಿಸಿದವು.

ಈ ಸುದ್ದಿಯನ್ನೂ ಓದಿ: Gautam Adani: ಶರದ್ ಪವಾರ್ ಮನೆಗೆ ಗೌತಮ್ ಅದಾನಿ; ಎರಡು ಗಂಟೆ ಮಾತುಕತೆ!

Continue Reading

ದೇಶ

ರೇವಂತ್ ರೆಡ್ಡಿ ಅಂದು ಎಬಿವಿಪಿ ನಾಯಕ; ಇಂದು ಕಾಂಗ್ರೆಸ್‌ನಿಂದ ತೆಲಂಗಾಣ ಸಿಎಂ!

Revanth Reddy: ತೆಲಂಗಾಣದಲ್ಲಿ ಬಹುತೇಕ ನೆಲಕಚ್ಚಿದ್ದ ಕಾಂಗ್ರೆಸ್‌ ಪಕ್ಷವನ್ನು ಸಂಘಟಿಸಿ ಅಧಿಕಾರಕ್ಕೇರುವಂತೆ ಮಾಡಿದ ರೇವಂತ್ ರೆಡ್ಡಿ ಅವರು ಮುಂದಿನ ಮುಖ್ಯಮಂತ್ರಿಯಾಗುತ್ತಿದ್ದಾರೆ.

VISTARANEWS.COM


on

Political Journey of to be chief minister telangana, Revanth Reddy
Koo

ರ್ನಾಟಕದ ನೆರೆಯ ರಾಜ್ಯದಲ್ಲಿ ಕಾಂಗ್ರೆಸ್‌ನ (Congress Party) ಹೊಸ ಪಯಣ ಶುರುವಾಗಿದೆ. ರೇವಂತ್ ರೆಡ್ಡಿ (Revanth Reddy) ಎಂಬ ಛಲಗಾರ ದಕ್ಷಿಣ ಭಾರತದಲ್ಲಿ (South India) ವಿಶೇಷವಾಗಿ ತೆಲಗು ರಾಜ್ಯಗಳ ಪೈಕಿ ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮರು ಹುಟ್ಟು ನೀಡಿದ್ದಾರೆ. ಅದರ ಫಲವಾಗಿಯೇ ಅವರೀಗ ಮುಖ್ಯಮಂತ್ರಿಯಾಗುತ್ತಿದ್ದಾರೆ (Chief Minister of Telangana). ಚುನಾವಣಾ ಪ್ರಚಾರದಲ್ಲಿ ಅವರು ಆಡುತ್ತಿದ್ದ ಆತ್ಮವಿಶ್ವಾಸದ ನುಡಿಗಳು ಒಮ್ಮೊಮ್ಮೆ ಅತಿಯಾದ ವಿಶ್ವಾಸ ಪ್ರದರ್ಶಿಸುತ್ತಿದ್ದಾರೆ ಎನಿಸುತ್ತಿತ್ತು. ಆದರೆ ಭಾನುವಾರ ಫಲಿತಾಂಶ ಪ್ರಕಟವಾದವಾಗ ಮಾತ್ರ ರೇವಂತ್ ರೆಡ್ಡಿಯ ಮಾತುಗಳು ನಿಜವಾಗಿದ್ದವು. ಹತ್ತು ವರ್ಷ ಆಡಳಿತದಲ್ಲಿದ್ದ ಬಿಆರ್‌ಎಸ್ (BRS) ಪಕ್ಷವನ್ನು ಕಿತ್ತೊಗೆಯುವಲ್ಲಿ ಅವರ ಯಶಸ್ವಿಯಾಗಿದ್ದಾರೆ. ದಕ್ಷಿಣ ಭಾರತದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ರಾಜ್ಯವನ್ನು ಗೆಲ್ಲಿಸಿ ಕೊಟ್ಟಿದ್ದಾರೆ. 119 ವಿಧಾನಸಭೆ ಬಲದ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು 64 ಸ್ಥಾನಗಳನ್ನು ಗೆದ್ದುಕೊಂಡಿದೆ.

ಹಾಗೆ ನೋಡಿದರೆ ರೇವಂತ್ ರೆಡ್ಡಿ ಅವರು ಮೂಲ ಕಾಂಗ್ರೆಸಿಗರಲ್ಲ. ಅವರು ಒಂದು ಕಾಲದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ (Akhila Bharatha Vidyarthi Parishat) ಅಗ್ರ ನಾಯಕ. ಅದೇ ನಾಯಕ ಇಂದು ತೆಲಂಗಾಣ ರಾಜ್ಯದಲ್ಲಿ (Telangana Elections 2023) ಕಾಂಗ್ರೆಸ್‌ನ್ನು ವಿಜಯದತ್ತ (Congress win) ಮುನ್ನುಗ್ಗಿಸಿ ಮುಖ್ಯಮಂತ್ರಿಯಾಗುತ್ತಿದ್ದಾರೆ.

ಹೌದು, ಆರೆಸ್ಸೆಸ್‌ ಮೂಲದ ಸಂಸ್ಥೆಯ ಮೂಲಕ ರಾಜಕೀಯ ಜೀವನವನ್ನು ಆರಂಭ ಮಾಡಿ, ಬಳಿಕ ಸ್ವತಂತ್ರವಾಗಿ ತಮ್ಮ ಚರಿಷ್ಮಾ ಬೆಳೆಸಿಕೊಂಡು ತೆಲುಗು ದೇಶಂ ಪಾರ್ಟಿಯಲ್ಲೂ ತಮ್ಮ ಕರಾಮತ್ತು ತೋರಿಸಿ ಈಗ ಕಾಂಗ್ರೆಸ್‌ನ ತೆಲಂಗಾಣ ರಾಜ್ಯಾಧ್ಯಕ್ಷರಾಗಿರುವ ರೇವಂತ ರೆಡ್ಡಿ ತಮ್ಮ 54ನೇ ವಯಸ್ಸಿನಲ್ಲೇ ಹಲವು ವಿಕ್ರಮಗಳನ್ನು ಸಾಧಿಸಿದವರು.

ತೆಲಂಗಾಣದಲ್ಲಿ ಕೆ.ಚಂದ್ರಶೇಖರ ರಾವ್‌ ನೇತೃತ್ವದ ಭಾರತ ರಾಷ್ಟ್ರ ಸಮಿತಿಯನ್ನು ಮುಳುಗಿಸಿ ಕಾಂಗ್ರೆಸ್‌ ಧ್ವಜ ಹಾರಿಸಿದ ರೇವಂತ್‌ ರೆಡ್ಡಿ ಅವರು, ಕಾಮರೆಡ್ಡಿ ಕ್ಷೇತ್ರದಲ್ಲಿ ಕೆ. ಚಂದ್ರಶೇಖರ ರಾವ್‌ ಅವರನ್ನು ಸೋಲಿಸಿದ ಸಾಧನೆಯನ್ನೂ ಮಾಡಿದ್ದಾರೆ.

ಎನ್‌. ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷದಿಂದ ಎರಡು ಬಾರಿ ಶಾಸಕರಾಗಿದ್ದ ಅವರು, ಈಗ ಮಲ್ಕಜ್‌ಗಿರಿ ಲೋಕಸಭಾ ಕ್ಷೇತ್ರದ ಸಂಸದರು. 2017ರಲ್ಲಿ ಕಾಂಗ್ರೆಸ್‌ ಸೇರಿದ್ದ ಅವರು 2021ರ ಜುಲೈ ತಿಂಗಳಲ್ಲಿ ತೆಲಂಗಾಣ ಕಾಂಗ್ರೆಸ್‌ ಅಧ್ಯಕ್ಷರಾಗಿ ಆಯ್ಕೆಯಾದರು. ಅಲ್ಲಿಂದ ಬಳಿಕ ಕಾಂಗ್ರೆಸ್‌ ನ್ನು ತಳಮಟ್ಟದಿಂದ ಮೇಲೆತ್ತಿ ಈಗ ಬಿಆರ್‌ಎಸ್‌ ಸೋಲಿಗೆ ಕಾರಣವಾಗಿದ್ದಾರೆ. ಅವರು ಅಧ್ಯಕ್ಷರಾದ ದಿನದಿಂದಲೇ ಬೀದಿ ಹೋರಾಟಗಳ ಮೂಲಕ ಸಂಘಟನೆಯನ್ನು ಬಲಗೊಳಿಸಲು ಆರಂಭಿಸಿದ್ದರು.

ಪಕ್ಷದೊಳಗೇ ಅವರಿಗೆ ವಿರೋಧವಿತ್ತು

ನಿಜವೆಂದರೆ, ರೇವಂತ್‌ ರೆಡ್ಡಿಗೆ ಪಕ್ಷದೊಳಗೆ ಎಲ್ಲವೂ ಸುಲಲಿತವಾಗಿರಲಿಲ್ಲ. ಬೇರೆ ಪಕ್ಷದಿಂದ ಬಂದವರು ಎಂಬ ಕಾರಣಕ್ಕಾಗಿ ಅವರನ್ನು ತೆಲಂಗಾಣ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿ ನೇಮಕ ಮಾಡುವುದಕ್ಕೆ ವಿರೋಧವಿತ್ತು. ಆದರೆ, ಅದ್ಯಾವುದನ್ನೂ ತಲೆಗೆ ಹಾಕಿಕೊಳ್ಳದ ರೇವಂತ್‌ ರೆಡ್ಡಿ ಕರ್ನಾಟಕದ ಕಾಂಗ್ರೆಸ್‌ ನಾಯಕರಿಂದ‌ ಸ್ಫೂರ್ತಿ ಪಡೆದು ದೊಡ್ಡ ನಾಯಕರಾಗಿ ಬೆಳೆದರು. ಪಕ್ಷದ ರಾಷ್ಟ್ರೀಯ ನಾಯಕರ ಜತೆಗೆ ಕಾಣಿಸಿಕೊಂಡರು. ದೊಡ್ಡ ಮಟ್ಟದ ರ‍್ಯಾಲಿಗಳನ್ನು ನಡೆಸಿದರು. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಜತೆಗೆ ಉತ್ತಮ ಬಾಂಧವ್ಯವನ್ನು ಹೊಂದಿದ್ದರು.

ರೇವಂತ್‌ ರೆಡ್ಡಿ ರಾಜಕೀಯ ಬದುಕಿನ ಹಾದಿ

  1. ರೇವಂತ್‌ ರೆಡ್ಡಿ ಅವರು ವಿದ್ಯಾರ್ಥಿ ಜೀವನದಲ್ಲಿ ಎಬಿವಿಪಿ ನಾಯಕನಾಗಿ ಬೆಳೆದಿದ್ದರು.
  2. 20೦6ರಲ್ಲಿ ಮಿಡ್ಜಿ ಮಂಡಲ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.
  3. 2007ರಲ್ಲಿ ರೇವಂತ್‌ ರೆಡ್ಡಿ ಅವರು ಪಕ್ಷೇತರ ಸ್ಪರ್ಧಿಯಾಗಿ ನಿಂತು ವಿಧಾನ ಪರಿಷತ್‌ ಪ್ರವೇಶ ಮಾಡಿದರು.
    ಬಳಿಕ ತೆಲುಗು ದೇಶಂ ನಾಯಕ ಚಂದ್ರ ಬಾಬು ನಾಯ್ಡು ಅವರು ರೇವಂತ್‌ ಅವರನ್ನು ಸೆಳೆದುಕೊಂಡರು.
  4. 2009ರ ವಿಧಾನಸಭಾ ಚುನಾವಣೆಯಲ್ಲಿ ಕೋಡಂಗಲ್‌ ವಿಧಾನ ಸಭಾ ಕ್ಷೇತ್ರದಲ್ಲಿ ಟಿಡಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದರು. ಅವರು ಸೋಲಿಸಿದ್ದು ಐದು ಬಾರಿ ಶಾಸಕರಾಗಿದ್ದ ಕಾಂಗ್ರೆಸ್‌ನ ಗುರುನಾಥ ರೆಡ್ಡಿ ಅವರನ್ನು.
  5. 2014ರ ಆಂಧ್ರ ಲೋಕಸಭಾ ಚುನಾವಣೆಯಲ್ಲಿ ಅದೇ ಕೋಡಂಗಲ್‌ ಕ್ಷೇತ್ರದಿಂದ ಗೆಲುವು ಸಾಧಿಸಿದರು. ಮುಂದೆ ತೆಲುಗು ದೇಶಂನ ಸದನ ನಾಯಕರೇ ಆದರು.
  6. ಮುಂದೆ ರೇವಂತ್‌ ಅವರು ಕಾಂಗ್ರೆಸ್‌ ಜತೆ ಒಡನಾಟ ಮಾಡುವುದನ್ನು ಗಮನಿಸಿದ ತೆಲುಗು ದೇಶಂ ಪಕ್ಷ ಅವರನ್ನು ವಿಧಾನಸಭೆಯ ಪ್ರತಿ ಪಕ್ಷ ನಾಯಕನ ಸ್ಥಾನದಿಂದ ಕಿತ್ತು ಹಾಕಿತು. ಅವರು 2017ರ ಅಕ್ಟೋಬರ್‌ 31ರಂದು ಅವರು ಕಾಂಗ್ರೆಸ್‌ ಸೇರಿದರು.
  7. 2018ರಲ್ಲಿ ಅವರು ಮತ್ತೆ ಕೋಡಂಗಲ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದು ಟಿಆರ್‌ಎಸ್‌ ಎದುರು ಸೋಲು ಕಂಡರು.
  8. 2019ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ರೇವಂತ್‌ ಈಗ ಲೋಕಸಭಾ ಸದಸ್ಯರೂ ಹೌದು. ಈ ಬಾರಿಯ ಚುನಾವಣೆಯಲ್ಲಿ ಕೋಡಂಗಲ್‌ ಮತ್ತು ಮುಖ್ಯಮಂತ್ರಿ ಕೆ ಚಂದ್ರಶೇಖರ್‌ ರಾವ್‌ ಅವರ ವಿರುದ್ಧವೇ ಕಾಮರೆಡ್ಡಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದರು.

ಇವರ ಪತ್ನಿ ಯಾರು ಗೊತ್ತಾ?

ರೇವಂತ್‌ ರೆಡ್ಡಿ ಅವರು ಹುಟ್ಟಿದ್ದು ಮೆಹಬೂಬ್‌ ನಗರದ ಕೋದಂಡರೆಡ್ಡಿ ಪಳ್ಳಿಯಲ್ಲಿ. 1969ರ ನವೆಂಬರ್‌ 8ರಂದು. ಬಿೆ ಪದವೀಧರರಾಗಿರುವ ಅವರು, ಕಲಿತಿದ್ದು ಒಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ. ಇವರ ಪತ್ನಿ ಗೀತಾ ಅವರು ಜೈಪಾಲ್‌ ರೆಡ್ಡಿ ಅವರ ಸೊಸೆ. ಅವರಿಗೆ ಒಬ್ಬ ಮಗಳಿದ್ದಾಳೆ.

ಈ ಸುದ್ದಿಯನ್ನೂ ಓದಿ: Revanth Reddy: ರೇವಂತ್ ರೆಡ್ಡಿ ತೆಲಂಗಾಣ ನೂತನ ಮುಖ್ಯಮಂತ್ರಿ; ಕಾಂಗ್ರೆಸ್ ಘೋಷಣೆ

Continue Reading
Advertisement
Elephant Arjuna
ಕರ್ನಾಟಕ4 hours ago

Elephant Arjuna: ಮೈಸೂರು, ಹಾಸನದಲ್ಲಿ ಅರ್ಜುನ ಆನೆಯ ಸ್ಮಾರಕ ನಿರ್ಮಾಣ: ಈಶ್ವರ ಖಂಡ್ರೆ

Kabaddi news
ಕ್ರೀಡೆ4 hours ago

Pro Kabaddi : ಮುಂಬಾ ವಿರುದ್ಧ ಜಯಂಟ್ಸ್​​ಗೆ 39-37 ಅಂಕಗಳ ಜಯ

Belagavi Winter Session
ಕರ್ನಾಟಕ4 hours ago

Belagavi Winter Session: ವೇತನ ಆಯೋಗದ ವರದಿ ಬಗ್ಗೆ ಅತೃಪ್ತಿ; ಸಭಾತ್ಯಾಗ ಮಾಡಿದ ಕಮಲ, ದಳ ಸದಸ್ಯರು

our former mlas they did not get even 50 votes in Madhya Pradesh Says Congress
ದೇಶ5 hours ago

ಮಾಜಿ ಎಮ್ಮೆಲ್ಲೆಗಳಿಗೆ ಅವರ ಊರಲ್ಲೇ 50 ವೋಟು ಬಿದ್ದಿಲ್ಲ! ಕಾಂಗ್ರೆಸ್ ನಾಯಕ

Team India1
ಟಾಪ್ 10 ನ್ಯೂಸ್5 hours ago

VISTARA TOP 10 NEWS : ಸಿದ್ದು ಮುಸ್ಲಿಂ ಓಲೈಕೆ ಜಟಾಪಟಿ, ʼಅರ್ಜುನʼನಿಗೆ ಕಂಬನಿಯ ವಿದಾಯ ಇತ್ಯಾದಿ ಪ್ರಮುಖ ಸುದ್ದಿಗಳು

Vistara News Best Teacher Award -2023 programme inauguration by Yadgiri DC Sushila B. at Yadgiri
ಕರ್ನಾಟಕ5 hours ago

ಯಾದಗಿರಿಯಲ್ಲಿ ‘ವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್’ ಕಾರ್ಯಕ್ರಮಕ್ಕೆ ಚಾಲನೆ

BJP knew the result two days earlier vote count Says Congress
ದೇಶ6 hours ago

ಬಿಜೆಪಿಗೆ ರಿಸಲ್ಟ್ ಎರಡು ದಿನ ಮೊದ್ಲೇ ಗೊತ್ತಿತ್ತು! ಕಾಂಗ್ರೆಸ್ ಹೊಸ ವರಾತ್

HD Kumaraswamy
ಕರ್ನಾಟಕ6 hours ago

HD Kumaraswamy: ವೈಯಕ್ತಿಕವಾಗಿ ಕೆಣಕಿದರೆ ನಾನು ಸುಮ್ಮನಿರಲ್ಲ ಎಂದ ಎಚ್‌ಡಿಕೆ

Rahul Dravid
ಕ್ರಿಕೆಟ್6 hours ago

Rahul Dravid : ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

Minister Ramalinga Reddy statement
ಕರ್ನಾಟಕ6 hours ago

5 ಕೋಟಿ ವೆಚ್ಚದಲ್ಲಿ‌ ಇಟಗಿ-ಸಾಸಲವಾಡ ಏತ ನೀರಾವರಿ ಯೋಜನೆ ಪೂರ್ಣ: ಸಚಿವ ರಾಮಲಿಂಗಾ ರೆಡ್ಡಿ

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

DCC Bank Recruitment 2023
ಉದ್ಯೋಗ10 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ2 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

kpsc recruitment 2023 pdo recruitment 2023
ಉದ್ಯೋಗ5 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Village Accountant Recruitment
ಉದ್ಯೋಗ10 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

CM Siddaramaiah and Black magic
ಕರ್ನಾಟಕ7 hours ago

Belagavi Winter Session: ಸಿದ್ದರಾಮಯ್ಯಗೆ ಮಾಟ – ಮಂತ್ರ; ಗಾಳಿ ಬಿಡಿಸಲು ರೇವಣ್ಣಗೆ ಅಶೋಕ್‌ ಮನವಿ!

R Ashok in assembly session
ಕರ್ನಾಟಕ7 hours ago

Belagavi Winter Session: ಟಿಸಿ ಬದಲಾಯಿಸಲು ಹಣ ಕೇಳ್ತಾರೆ, ರೈತರು ಬದುಕೋದು ಬೇಡವಾ? ಅಶೋಕ್‌ ಕ್ಲಾಸ್‌

R Ashok
ಕರ್ನಾಟಕ7 hours ago

Belagavi Winter Session: ಬರ ಪ್ರದೇಶಕ್ಕೆ ಹೋಗದ ಸಿಎಂ, ಸಚಿವರು; ಸರ್ಕಾರಕ್ಕೆ ಆರ್.‌ ಅಶೋಕ್‌ ಚಾಟಿ

dina bhavishya read your daily horoscope predictions for December 5 2023
ಪ್ರಮುಖ ಸುದ್ದಿ23 hours ago

Dina Bhavishya : ಈ ರಾಶಿಯವರ ಅದೃಷ್ಟ ಸಂಖ್ಯೆ 1, 3! ನಿಮ್ಮ ಲಕ್ಕಿ ನಂಬರ್‌ ಏನು?

ead your daily horoscope predictions for december 4th 2023
ಪ್ರಮುಖ ಸುದ್ದಿ2 days ago

Dina Bhavishya : ಇಂದು ಹೂಡಿಕೆ ಮಾಡಿದ್ರೆ ಈ ರಾಶಿಯವರಿಗೆ ಡಬಲ್‌ ಧಮಾಕಾ!

Police call off protest FIR against lawyer who slapped police
ಕರ್ನಾಟಕ3 days ago

Police Protest : ಪ್ರತಿಭಟನೆ ಕೈ ಬಿಟ್ಟ ಪೊಲೀಸರು; ಕಪಾಳಕ್ಕೆ ಹೊಡೆದ ವಕೀಲನ ಮೇಲೆ ಎಫ್‌ಐಆರ್‌

Dina Bhavihsya
ಪ್ರಮುಖ ಸುದ್ದಿ3 days ago

Dina Bhavishya : ಸಂಡೇ ಆದರೂ ಈ ರಾಶಿಯವರಿಗೆ ಟೆನ್ಷನ್‌ ತಪ್ಪಲ್ಲ! ಇವರಿಂದ ದೂರ ಇರಿ

Cockroaches bite baby born 2 days ago in vanivilas hospital
ಆರೋಗ್ಯ3 days ago

Vanivilas Hospital : 2 ದಿನಗಳ ಹಿಂದಷ್ಟೇ ಜನಿಸಿದ ಮಗುವನ್ನು ಕಚ್ಚಿ ಹಾಕಿದ ಜಿರಳೆಗಳು!

Dina Bhavishya
ಪ್ರಮುಖ ಸುದ್ದಿ4 days ago

Dina Bhavishya : ಯಾರನ್ನೂ ನಂಬಿ ಇನ್ವೆಸ್ಟ್ಮೆಂಟ್‌ ಮಾಡ್ಬೇಡಿ!

DK Shiakumar and MLA Munirathna
ಕರ್ನಾಟಕ5 days ago

DK Shivakumar : ಡಿಕೆಶಿಯನ್ನು ಗೇಟ್‌ ಒಳಗೇ ಬಿಟ್ಟಿಲ್ಲ, ಸಿಎಂ ಮಾಡುವಂತೆಯೂ ಹೇಳಿಲ್ಲವೆಂದ ಮುನಿರತ್ನ!

ಟ್ರೆಂಡಿಂಗ್‌