ಆಪ್‌ಗೆ ಮುಖಭಂಗ; ಭಗವಂತ್‌ ಮಾನ್‌ ಸಂಸದರಾಗಿದ್ದ ಕ್ಷೇತ್ರದಲ್ಲಿ ಎಸ್‌ಎಡಿ-ಎ ಅಭ್ಯರ್ಥಿಗೆ ಗೆಲುವು - Vistara News

ದೇಶ

ಆಪ್‌ಗೆ ಮುಖಭಂಗ; ಭಗವಂತ್‌ ಮಾನ್‌ ಸಂಸದರಾಗಿದ್ದ ಕ್ಷೇತ್ರದಲ್ಲಿ ಎಸ್‌ಎಡಿ-ಎ ಅಭ್ಯರ್ಥಿಗೆ ಗೆಲುವು

Sangrur Bypoll Results: ಸಂಗ್ರೂರ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಅಚ್ಚರಿ ಮೂಡಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬೀಗಿದ್ದ ಆಪ್‌ಗೆ ಶಾಕ್‌ ಆಗಿದೆ.

VISTARANEWS.COM


on

Punjab Bypolls
ಸಿಮ್ರಂಜಿತ್ ಸಿಂಗ್ ಮಾನ್ ಮತ್ತು ಭಗವಂತ್‌ ಮಾನ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪಂಜಾಬ್‌ನ ಸುಂಗ್ರೂರ್‌ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ (Sangrur Bypoll Results) ಶಿರೋಮಣಿ ಅಕಾಲಿ ದಳ್‌-ಅಮೃತ್‌ಸರ್‌ (SAD-A) ಪಕ್ಷದ ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಗೆದ್ದಿದ್ದಾರೆ. ಇವರು ಸಮೀಪದ ಪ್ರತಿಸ್ಪರ್ಧಿ ಆಮ್‌ ಆದ್ಮಿ ಪಕ್ಷದ ಗುರ್ಮೇಲ್‌ ಸಿಂಗ್‌ಕ್ಕಿಂತ 6800ಮತಗಳನ್ನು ಹೆಚ್ಚಾಗಿ ಪಡೆದು ವಿಜಯದ ನಗೆ ಬೀರಿದ್ದಾರೆ. ಇದು ಆಪ್‌ ಪಾಲಿಗೆ ಬಹುದೊಡ್ಡ ಮುಖಭಂಗ. ಯಾಕೆಂದರೆ ಪಂಜಾಬ್‌ ಈಗಿನ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಂಸದರಾಗಿದ್ದ ಕ್ಷೇತ್ರ ಇದು. ಈ ಸಲ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ, ಗೆದ್ದಿದ್ದರಿಂದ ಸುಂಗ್ರೂರ್‌ನಲ್ಲಿ ಉಪಚುನಾವಣೆ ನಡೆದಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚನೆ ಮಾಡಿದ ಆಪ್‌ಗೆ ಈ ಉಪಚುನಾವಣೆಯಲ್ಲಿ ಎಸ್‌ಎಡಿ-ಎ ಶಾಕ್‌ ಕೊಟ್ಟಿದೆ.

ಈ ಲೋಕಸಭಾ ಕ್ಷೇತ್ರ ಆಮ್‌ ಆದ್ಮಿ ಪಕ್ಷದ ಕೈಯಲ್ಲೇ ಇದ್ದಿದ್ದರಿಂದ ಮತ್ತು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಮತಗಳಿಂದ ಅಧಿಕಾರಕ್ಕೆ ಏರಿದ್ದರಿಂದ ಆಮ್‌ ಆದ್ಮಿ ಪಕ್ಷಕ್ಕೆ ಉಪಚುನಾವಣೆಯಲ್ಲೂ ತಾವೇ ಗೆಲ್ಲುವ ಭರವಸೆ ಜಾಸ್ತಿಯೇ ಇತ್ತು. ಆದರೆ ಮತದಾರರು ಉಲ್ಟಾ ಹೊಡೆದಿದ್ದಾರೆ. ಗಾಯಕ ಸಿಧು ಸಿಂಗ್‌ ಮೂಸೇವಾಲಾ ಹತ್ಯೆಯ ಬಳಿ ಸಿಖ್‌ ಬಲಪಂಥೀಯ ನಾಯಕರು, ಬೆಂಬಲಿಗರು ಆಪ್‌ ಸಹವಾಸ ಬಿಟ್ಟಿದ್ದಾರೆ. ಇದೇ ಲೋಕಸಭಾ ಉಪಚುನಾವಣೆಯಲ್ಲಿ ದೊಡ್ಡ ಹೊಡೆತ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಸುಂಗ್ರೂರ್‌ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬರ್ನಾಲಾದ ಮಾಜಿ ಶಾಸಕ ಕೇವಾಲ್‌ ದಿಲ್ಲಾನ್‌ರನ್ನು ಕಣಕ್ಕೆ ಇಳಿಸಿತ್ತು. ಅವರು ಜೂ.೪ ರಂದು ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಶಿರೋಮಣಿ ಅಕಾಲಿ ದಳದಿಂದ ಕಮಲದೀಪ್‌ ಕೌರ್‌ ಸ್ಪರ್ಧಿಸಿದ್ದರು. ಹಾಗೇ, ಧುರಿಯ ಮಾಜಿ ಶಾಸಕ ದಲ್ವೀರ್‌ ಸಿಂಗ್‌ ಗೋಲ್ಡಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದರು.

ಇದನ್ನೂ ಓದಿ: 424 ಗಣ್ಯರ ಭದ್ರತೆ ಹಿಂತೆಗೆತ ನಿರ್ಧಾರ ಕೈಬಿಟ್ಟ ಪಂಜಾಬ್‌ ಸರ್ಕಾರ; ಜೂ.7ರಿಂದ ಮತ್ತೆ ಸೆಕ್ಯೂರಿಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

Kisan Samman Nidhi: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಫೆಬ್ರವರಿ 28ರಂದು ಫಲಾನುಭವಿ ಕೃಷಿಕರ ಖಾತೆಗೆ ಕಿಸಾನ್‌ ಸಮ್ಮಾನ್‌ ಯೋಜನೆಯ 16ನೇ ಕಂತು ಬಿಡುಗಡೆ ಮಾಡಲಾಗಿತ್ತು.

VISTARANEWS.COM


on

Kisan Samman Nidhi
Koo

ನವದೆಹಲಿ: ದೇಶದ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೆ ತಂದ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ (PM Kisan Samman Nidhi Yojana)ಯ 17ನೇ ಕಂತಿನ ಹಣ ನಾಳೆ (ಜೂನ್‌ 18) ಬಿಡುಗಡೆಯಾಗಲಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು, ಈ ವೇಳೆ ಸುಮಾರು 9.3 ಕೋಟಿ ರೈತರ ಖಾತೆಗಳಿಗೆ 20,000 ರೂ. ಬಿಡುಗಡೆ ಮಾಡಲಿದ್ದಾರೆ. ಕೇಂದ್ರ ಸರ್ಕಾರ ಪ್ರಧಾನ್‌ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯನ್ನು 2೦19ರಲ್ಲಿ ಜಾರಿಗೆ ತಂದಿದೆ (Kisan Samman Nidhi).

3 ಕಂತುಗಳಲ್ಲಿ ಪಾವತಿ

ಪಿಎಂ-ಕಿಸಾನ್ ಸಮ್ಮಾನ್‌ ಯೋಜನೆಯ ಹಣವನ್ನು ನಾಲ್ಕು ತಿಂಗಳಿಗೊಮ್ಮೆ 2,000 ರೂ.ಗಳಂತೆ ವರ್ಷಕ್ಕೆ 3 ಬಾರಿ ಪಾವತಿಸಲಾಗುತ್ತದೆ. ಏಪ್ರಿಲ್-ಜುಲೈ, ಆಗಸ್ಟ್-ನವೆಂಬರ್ ಮತ್ತು ಡಿಸೆಂಬರ್-ಮಾರ್ಚ್ ಎಂಬ ಮೂರು ಕಂತುಗಳಲ್ಲಿ ಹಣವನ್ನು ಒದಗಿಸಲಾಗುತ್ತದೆ. ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಇ-ಕೆವೈಸಿ ಕಡ್ಡಾಯ

ಕಿಸಾನ್‌ ಸಮ್ಮಾನ್‌ ನಿಧಿಯ ಕಂತನ್ನು ಪಡೆಯಲು ಫಲಾನುಭವಿ ರೈತರು ಇ-ಕೆವೈಸಿ ಪೂರ್ಣಗೊಳಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಇ-ಕೆವೈಸಿ ಮಾಡದ ರೈತರಿಗೆ ಖಾತೆಗೆ ಹಣ ಬಿಡುಗಡೆಯಾಗುವುದಿಲ್ಲ. ಒಟಿಪಿ ಆಧಾರಿತ ಇ-ಕೆವೈಸಿಯನ್ನು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಮಾಡಬಹುದು.

ಹೀಗೆ ಚೆಕ್‌ ಮಾಡಿ

ನೀವು ಈ ಯೋಜನೆಯ ಫಲಾನುಭವಿಯಾಗಿದ್ದರೆ, ಹಣ ನಿಮ್ಮ ಖಾತೆಗೆ ಜಮೆ ಆಗಿದೆಯೇ ಎನ್ನುವುದನ್ನು ಆನ್‌ಲೈನ್‌ ಮೂಲಕ ನಿಮಗೇ ಪರಿಶೀಲಿಸಲು ಸಾಧ್ಯವಿದೆ. ಅದಕ್ಕಾಗಿ ಮಾಡಬೇಕಾದುದು ಇಷ್ಟೆ.

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  • ಆಗ ಓಪನ್‌ ಆಗುವ ಪೇಜ್‌ನ ಬಲ ಬದಿಯಲ್ಲಿರುವ ‘Know Your Status’ ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ರಿಜಿಸ್ಟ್ರೇಷನ್‌ ನಂಬರ್‌ ನಮೂದಿಸಿ, ಕ್ಯಾಪ್ಚ ಕೋಡ್‌ ಭರ್ತಿ ಮಾಡಿ ‘Get Data’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ
  • ಈಗ ಫಲಾನುಭವಿಯ ವಿವರ, ಹಣ ಜಮೆಯಾದ ಮಾಹಿತಿ ಸ್ಕ್ರೀನ್‌ ಮೇಲೆ ಮೂಡುತ್ತದೆ.

ಹೆಸರು ನೋಂದಾಯಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ pmkisan.gov.in ಭೇಟಿ ನೀಡಿ
  •  ‘New Farmer Registration’ ಆಯ್ಕೆ ಮೇಲೆ ಕಲಿಕ್‌ ಮಾಡಿ ಮತ್ತು ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ಕ್ಯಾಪ್ಚ ಕೋಡ್‌ ಭರ್ತಿ ಮಾಡಿ
  • ಅಗತ್ಯ ಮಾಹಿತಿ ತುಂಬಿ ‘Yes’ ಬಟನ್‌ ಕ್ಲಿಕ್‌ ಮಾಡಿ
  • ಅರ್ಜಿ ಫಾರಂ ತುಂಬಿ, ಸೇವ್‌ ಮಾಡಿ ಭವಿಷ್ಯದ ಅಗತ್ಯಗಳಿಗಾಗಿ ಪ್ರಿಂಟ್‌ ಔಟ್‌ ತೆಗೆದಿಡಿ.

ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸುವ ವಿಧಾನ

  • ಅಧಿಕೃತ ವೆಬ್‌ಸೈಟ್‌ www.pmkisan.gov.inಗೆ ಭೇಟಿ ನೀಡಿ
  • ಆಗ ತೆರೆದುಕೊಳ್ಳುವ ಪುಟದಲ್ಲಿನ ‘Beneficiary list’ ಆಯ್ಕೆಯ ಮೇಲೆ ಕ್ಲಿಕ್‌ ಮಾಡಿ
  • ನಿಮ್ಮ ರಾಜ್ಯ, ಜಿಲ್ಲೆ, ಉಪಜಿಲ್ಲೆ, ಬ್ಲಾಕ್‌ ಮತ್ತು ಗ್ರಾಮವನ್ನು ಆಯ್ಕೆ ಮಾಡಿ
  • ‘Get report’ ಆಯ್ಕೆಯನ್ನು ಸೆಲೆಕ್ಟ್‌ ಮಾಡಿ

ಹೆಚ್ಚಿನ ಮಾಹಿತಿಗೆ ಹೆಲ್ಪ್‌ಲೈನ್‌ ನಂಬರ್‌ 155261 ಮತ್ತು 011-24300606 ಅನ್ನು ಸಂಪರ್ಕಿಸಿ.

ಇದನ್ನೂ ಓದಿ: Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

Continue Reading

ವಾಣಿಜ್ಯ

Real Estate: ಹಲವರಿಗೆ ಮನೆ ಇಲ್ಲ, ಇದ್ದವರು ಬಳಸುತ್ತಿಲ್ಲ! ದೇಶದಲ್ಲಿ 1 ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ಖಾಲಿ ಬಿದ್ದಿವೆ!

ಖರೀದಿ ಮಾಡಿರುವ ಒಂದು ಕೋಟಿಗೂ ಹೆಚ್ಚು ಫ್ಲ್ಯಾಟ್ ಗಳು ದೇಶದಲ್ಲಿ ಖಾಲಿ ಇವೆ. ಮಾತ್ರವಲ್ಲದೆ ದೇಶದಲ್ಲಿ ಅಗ್ಗದ ಮನೆಗಳಿಗೆ ಬೇಡಿಕೆ ವೇಗವಾಗಿ ಕುಸಿಯುತ್ತಿದ್ದು, ದುಬಾರಿ ಮನೆಗಳಿಗೆ ಬೇಡಿಕೆ ಹೆಚ್ಚಾಗಿದೆ. ಇದರ ಅರ್ಥ ಎಲ್ಲರೂ ಶ್ರೀಮಂತರಾಗಿದ್ದಾರೆ ಎಂದಲ್ಲ. ರಿಯಲ್ ಎಸ್ಟೇಟ್ (Real Estate) ಉದ್ಯಮಿಗಳು ಶೇ. 10ರಷ್ಟಿರುವ ಶ್ರೀಮಂತರಿಗೆ ತಮ್ಮ ಆಸ್ತಿ ಮಾರಾಟಕ್ಕೆ ಆಸಕ್ತಿ ವಹಿಸಿರುವುದು ಇದಕ್ಕೆ ಮುಖ್ಯ ಕಾರಣ ಎಂದಿದ್ದಾರೆ ಭಾರತದ ರಾಷ್ಟ್ರೀಯ ರಿಯಲ್ ಎಸ್ಟೇಟ್ ಅಭಿವೃದ್ಧಿ ಮಂಡಳಿ (ನರೆಡ್ಕೊ) ಅಧ್ಯಕ್ಷ ಜಿ. ಹರಿಬಾಬು.

VISTARANEWS.COM


on

By

Real Estate
Koo

ಬಳಕೆಯಾಗದ ಆಸ್ತಿಯನ್ನು (assets) ಇಟ್ಟುಕೊಳ್ಳುವುದು ಒಂದು ರಾಷ್ಟ್ರೀಯ ಅಪರಾಧ (national crime) ಎಂದು ನಾನು ಭಾವಿಸುತ್ತೇನೆ. ದೇಶದಲ್ಲಿ ಒಂದೆಡೆ ವಸತಿ ಕೊರತೆಯಿದೆ. ಇನ್ನೊಂದೆಡೆ 1.14 ಕೋಟಿ ಫ್ಲಾಟ್‌ಗಳು ಖಾಲಿ ಇವೆ ಎಂದು ಭಾರತದ ರಾಷ್ಟ್ರೀಯ ರಿಯಲ್ ಎಸ್ಟೇಟ್ (Real Estate) ಅಭಿವೃದ್ಧಿ ಮಂಡಳಿ (NAREDCO) ಅಧ್ಯಕ್ಷ ಜಿ. ಹರಿಬಾಬು (G. Haribabu) ತಿಳಿಸಿದ್ದಾರೆ.

ಪ್ರಸ್ತುತ ದೇಶದಲ್ಲಿ ಸುಮಾರು ಒಂದು ಕೋಟಿ ಮನೆಗಳು ಖಾಲಿ ಬಿದ್ದಿವೆ. ಒಂದೆಡೆ ದುಬಾರಿ ಮನೆಗಳಿಗೆ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿದೆ. ಮತ್ತೊಂದೆಡೆ ದೇಶದ ದೊಡ್ಡ ನಗರಗಳಲ್ಲಿ ಅಗ್ಗದ ಮನೆಗಳ ಬೇಡಿಕೆ ವೇಗವಾಗಿ ಕುಸಿಯುತ್ತಿದೆ ಎಂದು ಅವರು ಹೇಳಿದ್ದಾರೆ.

ಅಂಕಿಅಂಶಗಳ ಪ್ರಕಾರ 2019 ಮತ್ತು 2023 ರ ನಡುವೆ 1.5 ಕೋಟಿ ರೂ. ಗಿಂತ ಹೆಚ್ಚು ವೆಚ್ಚದ ಮನೆಗಳ ಬೇಡಿಕೆಯು ಸುಮಾರು 1000 ಪ್ರತಿಶತದಷ್ಟು ಹೆಚ್ಚಾಗಿದೆ. ಶ್ರೀಮಂತರು ಮತ್ತು ಸಾಂಸ್ಥಿಕ ಹೂಡಿಕೆದಾರರು ರಿಯಲ್ ಎಸ್ಟೇಟ್ ಕ್ಷೇತ್ರಕ್ಕೆ ಜಿಗಿದಿರುವುದರಿಂದ ಈ ರೀತಿಯಾಗಿದೆ. ಆದರೆ, ದೇಶಕ್ಕೆ ಅಗ್ಗದ ಮನೆಗಳ ಅಗತ್ಯವಿದ್ದು, ರಿಯಲ್ ಎಸ್ಟೇಟ್ ಕ್ಷೇತ್ರದ ಅಭಿವೃದ್ಧಿಗೆ ಅವರ ಬೇಡಿಕೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದ್ದಾರೆ.


ಬಿಲ್ಡರ್‌ ಗಳಿಗೆ ಕೇವಲ ಶೇ. 10ರಷ್ಟು ಜನರಷ್ಟೇ ಗುರಿ

2022ರಲ್ಲಿ ಹೈದರಾಬಾದ್‌ನಲ್ಲಿ 5,300 ಅಗ್ಗದ ಮನೆಗಳನ್ನು ಮಾರಾಟ ಮಾಡಲಾಗಿದೆ. 2023ರಲ್ಲಿ ಈ ಸಂಖ್ಯೆ ಕೇವಲ 3,800 ಕ್ಕೆ ಇಳಿಕೆಯಾಗಿದೆ. ಕೆಲವೇ ಜನರಲ್ಲಿ ಹಣವು ವೇಗವಾಗಿ ಹೆಚ್ಚುತ್ತಿದೆ. ದೇಶದ ಜನಸಂಖ್ಯೆಯ ಶೇ. 10ರಷ್ಟು ಮಂದಿಯಲ್ಲಿ ಶೇ. 63ರಷ್ಟು ಸಂಪತ್ತು ಸಂಗ್ರಹವಾಗಿದೆ. ಈ ಸಂಖ್ಯೆ 14 ಕೋಟಿ ಜನರದ್ದು. ಈ ಸಮಯದಲ್ಲಿ ಹೆಚ್ಚಿನ ಬಿಲ್ಡರ್‌ಗಳು ಈ ಜನರನ್ನು ಗುರಿಯಾಗಿಸಿಕೊಂಡಿದ್ದಾರೆ. ಸುಮಾರು 1.14 ಕೋಟಿ ಮನೆಗಳು ಖಾಲಿ ಬಿದ್ದಿರುವುದಕ್ಕೆ ಇದೇ ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ.

ಖರೀದಿಸಿ ಬಳಕೆಯಾಗದ ಮನೆಗಳು

ಹೂಡಿಕೆದಾರರು ಖರೀದಿಸುವ ಮನೆಗಳನ್ನು ಬಳಸುತ್ತಿಲ್ಲ ಎಂದು ತಿಳಿಸಿರುವ ಹರಿಬಾಬು, ಈ ಮನೆಗಳನ್ನು ಬಾಡಿಗೆಗೆ ಸಹ ನೀಡುತ್ತಿಲ್ಲ. ಒಂದೆಡೆ ಜನ ಮನೆ ಹುಡುಕಿಕೊಂಡು ಅಲೆದಾಡುತ್ತಿದ್ದರೆ, ಮತ್ತೊಂದೆಡೆ ಈ ಮನೆಗಳು ಖಾಲಿ ಬಿದ್ದಿವೆ. ಹೂಡಿಕೆಗಾಗಿ ಖರೀದಿಸಿದ ಈ ಮನೆಗಳು ಬಳಕೆಯಾಗುತ್ತಿಲ್ಲ. ಇದೊಂದು ರೀತಿಯ ಅಪರಾಧ. ಅಂತಹ ಮನೆಗಳ ಮೇಲಿನ ಆಸ್ತಿ ತೆರಿಗೆಯನ್ನು ಎರಡು ಅಥವಾ ಮೂರು ಪಟ್ಟು ಹೆಚ್ಚಿಸಬೇಕು. ಇದರಿಂದ ಈ ಆಸ್ತಿಯನ್ನು ಬಳಸಬಹುದು. ನಮ್ಮ ಜನಸಂಖ್ಯೆಯ ಶೇ.60ರಷ್ಟು ಮಂದಿಗೆ ಮನೆ ಖರೀದಿಸಲು ಸಾಧ್ಯವಾಗುತ್ತಿಲ್ಲ. ಅವರು ಸಂಪೂರ್ಣವಾಗಿ ಸರ್ಕಾರದ ಯೋಜನೆಗಳ ಮೇಲೆ ಅವಲಂಬಿತರಾಗಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: Water Price Hike : ತೈಲ ದರ ಬಳಿಕ ಕುಡಿಯುವ ನೀರು ದುಬಾರಿ! ನೀರಿನ ದರ ಏರಿಕೆಗೆ ಜಲಮಂಡಳಿ ಪ್ರಸ್ತಾವನೆ!

ಶುಲ್ಕಗಳಲ್ಲಿ ರಿಯಾಯಿತಿ

ಕೈಗೆಟಕುವ ದರದಲ್ಲಿ ಮನೆ ನಿರ್ಮಿಸಲು ಬಿಲ್ಡರ್ ಗಳ ಮೇಲೆ ಸರಕಾರ ಒತ್ತಡ ಹೇರಬೇಕು ಎಂದ ಅವರು, ಕೈಗೆಟಕುವ ಬೆಲೆಯ ಮನೆಗಳಿಗೆ ಜಿಎಸ್‌ಟಿ, ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕವನ್ನು ಮನ್ನಾ ಮಾಡಬೇಕು. ಈ ಬದಲಾವಣೆಗಳು ಕೈಗೆಟುಕುವ ದರದ ವಸತಿ ವಲಯದಲ್ಲಿ ಶೇ. 25ರಷ್ಟು ಬೆಳವಣಿಗೆಯನ್ನು ತರುವ ನಿರೀಕ್ಷೆಯಿದೆ. ಕೆಳಮಧ್ಯಮ ಮತ್ತು ಮಧ್ಯಮ ವರ್ಗದವರ ಬಗ್ಗೆ ಸರಕಾರ ಚಿಂತನೆ ನಡೆಸಬೇಕಿದೆ. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಸಂಕಲ್ಪದೊಂದಿಗೆ ನಾವು ಸಾಗುತ್ತಿದ್ದೇವೆ. ನಮ್ಮ ಜನಸಂಖ್ಯೆಯ ಶೇ. 40ರಷ್ಟು ಮಂದಿ ಕೊಳೆಗೇರಿಗಳಲ್ಲಿ ವಾಸಿಸುತ್ತಿದ್ದರೆ, ನಾವು ಅಭಿವೃದ್ಧಿ ಹೊಂದಿದ ದೇಶ ಎಂದು ಹೇಗೆ ಕರೆಯಬಹುದು ಎಂದು ಅವರು ಪ್ರಶ್ನಿಸಿದ್ದಾರೆ.

Continue Reading

ದೇಶ

Train Accident: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಗೂಡ್ಸ್​ ರೈಲು ಡಿಕ್ಕಿ; ಕನಿಷ್ಠ 15 ಮಂದಿ ಸಾವು

Train Accident: ಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ.

VISTARANEWS.COM


on

Train Accident
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೋಮವಾರ ಕಾಂಚನಜುಂಗಾ ಎಕ್ಸ್​ಪ್ರೆಸ್​ (Kanchanjunga Express) ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಮೃತಪಟ್ಟಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೀಲ್ದಾಹ್‌ಗೆ ಹೋಗುವ ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಹಿಂದಿನಿಂದ ಗೂಡ್ಸ್ ರೈಲು ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ (Train Accident).

ʼʼಅಪಘಾತದಲ್ಲಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 20-25 ಮಂದಿಗೆ ಗಂಭೀರ ಗಾಯವಾಗಿವೆ. ಪರಿಸ್ಥಿತಿ ಗಂಭೀರವಾಗಿದೆ. ಗೂಡ್ಸ್ ರೈಲು ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ” ಎಂದು ಡಾರ್ಜಿಲಿಂಗ್ ಎಸ್‌ಪಿ ಅಭಿಷೇಕ್ ರಾಯ್ ಮಾಹಿತಿ ನೀಡಿದ್ದಾರೆ. ಗಾಯಗೊಂಡಿರುವವರನ್ನು ನ್ಯೂ ಜಲ್‌ಪೈಗುರಿ ಜಂಕ್ಷನ್‌ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗರ್ತಲಾದಿಂದ ಸೀಲ್ದಾಹ್‌ಗೆ ಪ್ರಯಾಣಿಸುತ್ತಿದ್ದ 13174 ಸಂಖ್ಯೆಯ ಕಾಂಚನಜುಂಗಾ ಎಕ್ಸ್‌ಪ್ರೆಸ್ ರಂಗಪಾಣಿ ಮತ್ತು ಚಥರ್‌ಹತ್ ನಿಲ್ದಾಣದ ಮಧ್ಯೆ ಅಪಘಾತಕ್ಕೀಡಾಗಿ ಹಳಿ ತಪ್ಪಿದೆ.

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದು, ʼʼಡಾರ್ಜಿಲಿಂಗ್ ಜಿಲ್ಲೆಯ ಫನ್ಸಿಡೆವಾ ಪ್ರದೇಶದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತದ ಬಗ್ಗೆ ತಿಳಿದು ಆಘಾತವಾಯಿತು. ಕಾಂಚನಜುಂಗಾ ಎಕ್ಸ್‌ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ವೈದ್ಯಕೀಯ ನೆರವಿಗಾಗಿ ಡಿಎಂ, ಎಸ್ಪಿ, ವೈದ್ಯರು, ಆಂಬ್ಯುಲೆನ್ಸ್‌ಗಳು ಮತ್ತು ವಿಪತ್ತು ತಂಡಗಳು ಸ್ಥಳಕ್ಕೆ ಧಾವಿಸಿವೆʼʼ ಎಂದು ತಿಳಿಸಿದ್ದಾರೆ.

ಡಿಕ್ಕಿ ಹಿಡೆದ ರಭಸಕ್ಕೆ ಕಾಂಚನಜುಂಗಾ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿ ತಪ್ಪಿವೆ ಎಂದು ತಿಳಿದುಬಂದಿದೆ. ಕಾಂಚನಜುಂಗಾ ಎಕ್ಸ್‌ಪ್ರೆಸ್‌ ಬಂಗಾಳವನ್ನು ಈಶಾನ್ಯ ನಗರಗಳಾದ ಸಿಲ್ಚಾರ್ ಮತ್ತು ಅಗರ್ತಲಾದೊಂದಿಗೆ ಸಂಪರ್ಕಿಸುತ್ತದೆ. ಈ ಮಾರ್ಗವು ಚಿಕನ್ಸ್ ನೆಕ್ ಕಾರಿಡಾರ್‌ನಲ್ಲಿದೆ. ಈ ಮಾರ್ಗದಲ್ಲಿನ ಅಪಘಾತವು ಹಲವು ರೈಲುಗಳ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸಹಾಯವಾಣಿ

ರೈಲ್ವೆ ಇಲಾಖೆ ಸಹಾಯವಾಣಿ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. 033-23508794 ಮತ್ತು 033-23833326 (ಸೀಲ್ಡಾ) ಹಾಗೂ 03612731621, 03612731622 ಮತ್ತು 03612731623 (ಗುವಾಹಟಿ) ಸಂಖ್ಯೆಯನ್ನು ಸಂಪರ್ಕಿಸಬಹುದು.

ರಕ್ಷಣಾ ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ಪ್ರಾರಂಭವಾಗಿವೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಎಕ್ಸ್ ನಲ್ಲಿ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. “ಎನ್ಎಫ್ಆರ್ ವಲಯದಲ್ಲಿ ಅಪಘಾತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿದೆ. ರೈಲ್ವೆ, ಎನ್‌ಡಿಆರ್‌ಎಫ್‌ ಮತ್ತು ಎಸ್‌ಡಿಆರ್‌ಎಫ್‌ ಕಾರ್ಯನಿರ್ವಹಿಸುತ್ತಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ” ಎಂದು ಅವರು ಹೇಳಿದ್ದಾರೆ.

ಕಳೆದ ವರ್ಷ ಜೂನ್‌ನಲ್ಲಿ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ 238ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಶಾಲಿಮಾರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್‌ ರೈಲು, ಬೆಂಗಳೂರು-ಹೌರಾ ರೈಲು ಹಾಗೂ ಗೂಡ್ಸ್‌ ರೈಲು ಡಿಕ್ಕಿಯಾಗಿದ್ದು ಈ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಅದೇ ವರ್ಷ ಅಕ್ಟೋಬರ್‌ನಲ್ಲಿ ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಸಂಭವಿಸಿದ ಎರಡು ರೈಲುಗಳ ಡಿಕ್ಕಿಯಲ್ಲಿ 13 ಮಂದಿ ಅಸುನೀಗಿದ್ದರು. ಆ ಆಘಾತಗಳು ಮರೆಯುವ ಮುನ್ನ ಮತ್ತೊಂದು ದೊಡ್ಡ ದುರಂತ ನಡೆದಿದೆ.

ಇದನ್ನೂ ಓದಿ: Andhra train accident: 13 ಜನರ ಬಲಿ ಪಡೆದ ಆಂಧ್ರ ರೈಲು ಅಪಘಾತದ‌ ಮೂಲ ಕಾರಣ ಬಹಿರಂಗ

Continue Reading

ದೇಶ

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

Maoists Killed: ಭದ್ರತಾ ಪಡೆ ಸೋಮವಾರ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 4 ಮಾವೋವಾದಿಗಳನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದವರ ಪೈಕಿ ಓರ್ವ ಮಹಿಳಾ ಮಾವೋವಾದಿಯೂ ಇದ್ದಾಳೆ ಎಂದು ಮೂಲಗಳು ತಿಳಿಸಿವೆ. ಛತ್ತೀಸ್‌ಗಢದ ಅಬುಜ್ಮಾರ್ಹ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಜೂನ್‌ 15ರಂದು ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 8 ಮಾವೋವಾದಿಗಳು ಸಾವನ್ನಪ್ಪಿದ್ದರು. ಅದಾಗಿ ಎರಡನೇ ದಿನಗಳಲ್ಲಿ ಈ ಬೆಳವಣಿಗೆ ಕಂಡು ಬಂದಿದೆ.

VISTARANEWS.COM


on

Maoists Killed
Koo

ರಾಂಚಿ: ಭದ್ರತಾ ಪಡೆ ಸೋಮವಾರ (ಜೂನ್‌ 17) ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ 4 ಮಾವೋವಾದಿಗಳನ್ನು ಹೊಡೆದುರುಳಿಸಿದೆ. ಹತ್ಯೆಗೀಡಾದವರ ಪೈಕಿ ಓರ್ವ ಮಹಿಳಾ ಮಾವೋವಾದಿಯೂ ಇದ್ದಾಳೆ ಎಂದು ಮೂಲಗಳು ತಿಳಿಸಿವೆ (Maoists Killed).

ಪೊಲೀಸರು ಹಾಗೂ ಭದ್ರತಾ ಪಡೆ ಈ ಜಂಟಿ ಕಾರ್ಯಾಚರಣೆ ಕೈಗೊಂಡಿದೆ. ಹತರಾದ ಮಾವೋವಾದಿಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಜತೆಗೆ ಇಬ್ಬರನ್ನು ಬಂಧಿಸಲಾಗಿದೆ.

ಪೊಲೀಸ್ ವರಿಷ್ಠಾಧಿಕಾರಿ ಅಶುತೋಷ್ ಶೇಖರ್ ಅವರು ಈ ಬಗ್ಗೆ ಮಾಹಿತಿ ನೀಡಿ, “ಗುವಾ ಮತ್ತು ಜೆಟೆಯಾ ಪಿಎಸ್ ಪ್ರದೇಶಗಳ ಗಡಿಯಲ್ಲಿರುವ ಸರಂದಾ ಅರಣ್ಯಗಳಲ್ಲಿ ಸೋಮವಾರ ಬೆಳಿಗ್ಗೆ ನಡೆದ ಎನ್‌ಕೌಂಟರ್‌ನಲ್ಲಿ ನಮ್ಮ ಜಂಟಿ ಪಡೆಗಳು ಮಾವೋವಾದಿ ವಲಯ ಕಮಾಂಡರ್, ಉಪ-ವಲಯ ಕಮಾಂಡರ್, ಪ್ರದೇಶ ಕಮಾಂಡರ್ ಮತ್ತು ಮಹಿಳಾ ಮಾವೋವಾದಿ ಸೇರಿದಂತೆ ನಾಲ್ವರು ಮಾವೋವಾದಿಗಳನ್ನು ಹೊಡೆದುರುಳಿಸಿವೆ. ಕಾರ್ಯಾಚರಣೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

ಜಿಲ್ಲಾ ಪೊಲೀಸ್ ಮತ್ತು ಅರೆಸೈನಿಕ ಪಡೆಗಳ ಜಂಟಿ ತಂಡವು ಸೋಮವಾರ ಮುಂಜಾನೆ ಸರಂದಾ ಮೀಸಲು ಅರಣ್ಯದೊಳಗಿನ ಲುಕುಂಗ್ ರೈಕೆಲಾ ಕಾಡುಗಳಲ್ಲಿ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ದಟ್ಟವಾದ ಅರಣ್ಯ ಪ್ರದೇಶದಲ್ಲಿ ಅಡಗಿದ್ದ ಮಾವೋವಾದಿಗಳು ಇದ್ದಕ್ಕಿದ್ದಂತೆ ದಾಳಿ ನಡೆಸಿದ್ದರು. ಈ ವೇಳೆ ಎನ್‌ಕೌಂಟರ್‌ ಆರಂಭವಾಗಿತ್ತು.

8 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಅಬುಜ್ಮಾರ್ಹ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಜೂನ್‌ 15ರಂದು ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 8 ಮಾವೋವಾದಿಗಳು ಸಾವನ್ನಪ್ಪಿದ್ದರು. ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದು, ಇಬ್ಬರು ಗಾಯಗೊಂಡಿದ್ದರು. ಕಳೆದ ಕೆಲವು ದಿನಗಳಿಂದ ಅಬುಜ್ಮಾರ್ಹ್‌ ಒಳಗೊಂಡ ನಾರಾಯಣಪುರ ಜಿಲ್ಲೆಯಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಅಬುಜ್ಮಾರ್ಹ್ ಒಂದು ಗುಡ್ಡಗಾಡು ಅರಣ್ಯ ಪ್ರದೇಶವಾಗಿದ್ದು, ಇದು ನಾರಾಯಣಪುರ, ಬಿಜಾಪುರ ಮತ್ತು ದಾಂತೇವಾಡ ಜಿಲ್ಲೆಗಳ ಮಧ್ಯದಲ್ಲಿದೆ. ಇದು 4,000 ಚದರ ಕಿಲೋಮೀಟರ್ ಪ್ರದೇಶದಲ್ಲಿ ಹರಡಿದ್ದು ಮಾವೋವಾದಿಗಳ ಅಡುಗುತಾಣವಾಗಿ ಬದಲಾಗಿದೆ. ಜನ ಸಂಚಾರ ಕಡಿಮೆ ಇರುವ, ಭೌಗೋಳಿಕವಾಗಿ ಪ್ರತ್ಯೇಕವಾಗಿರುವ ಈ ಪ್ರದೇಶವನ್ನು ಮಾವೋವಾದಿಗಳ ಚಟುವಟಿಕೆಗಳ ಕೇಂದ್ರವೆಂದು ಪರಿಗಣಿಸಲಾಗಿದೆ.

ನಾರಾಯಣಪುರ, ಕಂಕರ್, ದಾಂತೇವಾಡ ಮತ್ತು ಕೊಂಡಗಾಂವ್ ಜಿಲ್ಲೆಗಳ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮಾರ್ಹ್ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿತ್ತು. ಈ ನಾಲ್ಕು ಜಿಲ್ಲೆಗಳ ಜಿಲ್ಲಾ ರಿಸರ್ವ್ ಗಾರ್ಡ್ (DRG), ವಿಶೇಷ ಕಾರ್ಯಪಡೆ (STF) ಮತ್ತು ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP)ನ 53ನೇ ಬೆಟಾಲಿಯನ್ ಸಿಬ್ಬಂದಿಯನ್ನು ಒಳಗೊಂಡ ತಂಡ ಜೂನ್ 12ರಂದೇ ಇಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ ವೇಳೆ ಮಾವೋವಾದಿಗಳು ದಾಳಿ ನಡೆಸಿದಾಗ ಗುಂಡಿನ ಚಕಮಕಿ ಆರಂಭವಾಗಿತ್ತು.

ಇದನ್ನೂ ಓದಿ: Encounter In Kanker: ಭದ್ರತಾ ಪಡೆಗಳೊಂದಿಗೆ ಎನ್‌ಕೌಂಟರ್‌; ಓರ್ವ ನಕ್ಸಲ್‌ ಸಾವು

ಏಪ್ರಿಲ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ 29 ಮಾವೋವಾದಿಗಳನ್ನು ಹತ್ಯೆ ಮಾಡಿದ್ದರು. ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಈ ಎನ್‌ಕೌಂಟರ್‌ ನಡೆದಿತ್ತು. ಗುಪ್ತಚರದ ಖಚಿತ ಮಾಹಿತಿಯ ಮೇರೆಗೆ ಬಿಎಸ್ಎಫ್ (BSF) ಮತ್ತು ಜಿಲ್ಲಾ ರಿಸರ್ವ್ ಗಾರ್ಡ್ (DRG) ಕಂಕರ್‌ನ ಚೋಟೆಬೆಟಿಯಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಬಿನಗುಂಡ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಮಾವೋವಾದಿಗಳನ್ನು ಕೊಂದಿದ್ದರು.

Continue Reading
Advertisement
Amy Jackson shares a glimpse of her Paris bachelorette
ಸಿನಿಮಾ35 seconds ago

Amy Jackson: ಮದುವೆಗೂ ಮುನ್ನ ತಾಯಿಯಾಗಿದ್ದ ಆ್ಯಮಿ ಜಾಕ್ಸನ್‌ ಮತ್ತೆ ಸಪ್ತಪದಿ ತುಳಿಯಲು ರೆಡಿ!

PGCET 2024
ಶಿಕ್ಷಣ4 mins ago

PGCET 2024: ಪಿಜಿಸಿಇಟಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ; ಶುಲ್ಕ ಪಾವತಿಗೂ ಅವಕಾಶ

Euro 2024
ಕ್ರೀಡೆ9 mins ago

Euro 2024: ಇಂದು ರೊಮೇನಿಯಾ-ಉಕ್ರೇನ್ ನಡುವೆ ಕಾಲ್ಚೆಂಡಿನ ಕಾದಾಟ; ಯಾರಿಗೆ ಒಲಿಯಲಿದೆ ಗೆಲುವಿನ ಲಕ್​?

death news bhanuprakash petrol diesel price hike
ಪ್ರಮುಖ ಸುದ್ದಿ17 mins ago

Death News: “ಕಾಂಗ್ರೆಸ್‌ ಶವಯಾತ್ರೆ….” ಭಾಷಣ ಮುಗಿಸಿ ಬಿಜೆಪಿ ನಾಯಕ ಭಾನುಪ್ರಕಾಶ್ ಸ್ಥಳದಲ್ಲೇ ನಿಧನ

Petrol Diesel Price Hike
ಕರ್ನಾಟಕ26 mins ago

Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

Hunters Arrest
ಕ್ರೈಂ59 mins ago

Hunters Arrest : ಶಿವಮೊಗ್ಗದಲ್ಲಿ ಕಾಡುಕೋಣಗಳು ಬಲಿ; ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿ ಬೇಟೆಗಾರರು ಸೆರೆ

Petrol Diesel Price Hike
ಕರ್ನಾಟಕ59 mins ago

Petrol Diesel Price Hike: ಬಿಜೆಪಿಯವರು ಪ್ರತಿಭಟನೆ ಮಾಡಬೇಕಿರೋದು ಕೇಂದ್ರದ ವಿರುದ್ಧ: ಸಿಎಂ ತಿರುಗೇಟು

Kisan Samman Nidhi
ದೇಶ1 hour ago

Kisan Samman Nidhi: ರೈತರಿಗೆ ಗುಡ್‌ನ್ಯೂಸ್‌; ಕಿಸಾನ್‌ ಸಮ್ಮಾನ್‌ ನಿಧಿಯ 17ನೇ ಕಂತು ನಾಳೆ ನಿಮ್ಮ ಅಕೌಂಟ್‌ಗೆ; ಹೀಗೆ ಪರಿಶೀಲಿಸಿ

petrol diesel price hike bjp protest
ಪ್ರಮುಖ ಸುದ್ದಿ1 hour ago

Petrol Diesel Price Hike: ಪೆಟ್ರೋಲ್‌ ಬೆಲೆ ಏರಿಕೆ ಖಂಡಿಸಿ ಬಿಜೆಪಿ ವ್ಯಾಪಕ ಪ್ರತಿಭಟನೆ; ಎತ್ತಿನಗಾಡಿ, ಹೆಣ ಮೆರವಣಿಗೆ

Actor Darshan tagadu word umapathy counter now
ಕ್ರೈಂ1 hour ago

Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bakrid 2024
ಬೆಂಗಳೂರು3 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ21 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ22 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

ಟ್ರೆಂಡಿಂಗ್‌