New Parliament Building: ಹೊಸ ಸಂಸತ್ ಭವನ ಫಲಕ ಅನಾವರಣ; ಸರ್ವ ಧರ್ಮ ಪ್ರಾರ್ಥನೆ - Vistara News

ದೇಶ

New Parliament Building: ಹೊಸ ಸಂಸತ್ ಭವನ ಫಲಕ ಅನಾವರಣ; ಸರ್ವ ಧರ್ಮ ಪ್ರಾರ್ಥನೆ

ಸರ್ವ ಧರ್ಮ ಪ್ರಾರ್ಥನೆ ವೇಳೆ ಗೃಹ ಸಚಿವ ಅಮಿತ್​ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್​, ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​​ ಮತ್ತಿತರ ಹಲವು ಗಣ್ಯರು ಇದ್ದರು.

VISTARANEWS.COM


on

Sarv dharma prayer ceremony
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ನೂತನ ಸಂಸತ್ ಭವನ ಉದ್ಘಾಟನೆ (New Parliament Building Inauguration) ನಿಮಿತ್ತ ಮುಂಜಾನೆ 7.30ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರಧಾನಿ ಮೋದಿ ಮತ್ತು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಎಲ್ಲ ಪೂಜೆಗಳಲ್ಲೂ ಪಾಲ್ಗೊಂಡರು. ಗಣಪತಿ ಹೋಮ ಮುಕ್ತಾಯವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರು ಸೆಂಗೋಲ್​​ನ್ನು ಹಿಡಿದು, ನೂತನ ಸಂಸತ್ ಭವನ ಪ್ರವೇಶಿಸಿ, ಅಲ್ಲಿ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಪ್ರತಿಷ್ಠಾಪಿಸಿದರು. ಈ ವೇಳೆ ತಮಿಳುನಾಡಿನ ಅಧೀನಂ ಮಠದ ಪುರೋಹಿತರು, ಸಂತರು, ಮಠಾಧೀಶರು ಇದ್ದರು. ಮಂತ್ರಘೋಷ ಮೊಳಗುತ್ತಿತ್ತು.

ಇಷ್ಟಾದ ಮೇಲೆ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಮಿಕರನ್ನು ಸನ್ಮಾನಿಸಿದರು. ನೂತನ ಸಂಸತ್ ಭವನ ನಿರ್ಮಾಣ ಮಾಡಿದ ಈ ಕೆಲಸಗಾರರಿಗೆ ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಅದಕ್ಕೂ ಮೊದಲು ನರೇಂದ್ರ ಮೋದಿಯವರು ಸಂಸತ್ ಭವನದ ಫಲಕ ಅನಾವರಣಗೊಳಿಸುವ ಮೂಲಕ ಕಟ್ಟಡವನ್ನು ಅಧಿಕೃತವಾಗಿ ಉದ್ಘಾಟನೆ ಮಾಡಿದರು. ನಂತರ ಅಲ್ಲಿ ಸರ್ವಧರ್ಮಗಳ ಪ್ರಾರ್ಥನೆ ನಡೆಯಿತು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ಗೃಹ ಸಚಿವ ಅಮಿತ್​ ಶಾ, ಇನ್ನಿತರ ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಅನುರಾಗ್ ಠಾಕೂರ್​, ರಾಜನಾಥ್ ಸಿಂಗ್​ ಮತ್ತಿತರ ಹಲವು ಗಣ್ಯರು ಇದ್ದರು. ಇವರಲ್ಲಿ ಸ್ಪೀಕರ್ ಓಂ ಬಿರ್ಲಾ ಪ್ರತಿ ಕಾರ್ಯದಲ್ಲೂ ಪ್ರಧಾನಿ ಮೋದಿಗೆ ಜತೆಯಾದರು.

ವಿಡಿಯೋಗಳು ಇಲ್ಲಿವೆ:

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

Whatsapp: ಎನ್‌ಕ್ರಿಪ್ಶನ್‌ ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತ ತೊರೆಯುತ್ತೇವೆ ಎಂಬುದಾಗಿ ದೆಹಲಿ ಹೈಕೋರ್ಟ್‌ಗೆ ವಾಟ್ಸ್‌ಆ್ಯಪ್‌ ಪರ ವಕೀಲರು ತಿಳಿಸಿದ್ದಾರೆ. ಜನರು ತಾವು ಕಳುಹಿಸುವ ಮೆಸೇಜ್‌ಗೆ ಸುರಕ್ಷತೆ ಇದೆ, ಬೇರೆ ಯಾರೂ ಓದುವುದಿಲ್ಲ ಎಂಬ ಕಾರಣಕ್ಕಾಗಿ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಅದಕ್ಕೆ ಧಕ್ಕೆಯಾದರೆ ಭಾರತದಲ್ಲಿ ಇರಲ್ಲ ಎಂದು ವಾಟ್ಸ್‌ಆ್ಯಪ್‌ ತಿಳಿಸಿದೆ.

VISTARANEWS.COM


on

Whatsapp
Koo

ನವದೆಹಲಿ: ಭಾರತದಲ್ಲಿ ಕೋಟ್ಯಂತರ ಜನ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಟೆಲಿಗ್ರಾಮ್ ಸೇರಿ ಹಲವು ಮೆಸೇಜಿಂಗ್‌ ಆ್ಯಪ್‌ಗಳು ಇದ್ದರೂ ವಾಟ್ಸ್‌ಆ್ಯಪ್‌‌ (WhatsApp) ಹೆಚ್ಚು ಜನಪ್ರಿಯವಾಗಿದೆ. ಮೆಸೇಜ್‌, ಫೋಟೊ, ವಿಡಿಯೊಗಳನ್ನು ಕಳುಹಿಸುವ ಜತೆಗೆ ವಾಟ್ಸ್‌ಆ್ಯಪ್‌ ಸ್ಟೇಟಸ್‌ ಕೂಡ ಜನರ ಮನಸೆಳೆದಿದೆ. ಆದರೆ, ಇಷ್ಟೊಂದು ಖ್ಯಾತಿ, ಜನಪ್ರಿಯತೆ ಗಳಿಸಿರುವ ವಾಟ್ಸ್‌ಆ್ಯಪ್‌, “ನಾವು ಭಾರತದಿಂದ ಹೊರಹೋಗುತ್ತೇವೆ” ಎಂದು ದೆಹಲಿ ಹೈಕೋರ್ಟ್‌ಗೆ (Delhi High Court) ತಿಳಿಸಿದೆ. ಇದು, ಕೇಂದ್ರ ಸರ್ಕಾರ ಹಾಗೂ ವಾಟ್ಸ್‌ಆ್ಯಪ್‌ ನಡುವಿನ ಬಿಕ್ಕಟ್ಟಿನಿಂದಾಗಿ ನೀಡಿದ ಎಚ್ಚರಿಕೆಯಾಗಿದೆ.

“ಮೆಟಾ ಒಡೆತನದ ವಾಟ್ಸ್‌ಆ್ಯಪ್‌ನ ಎನ್‌ಕ್ರಿಪ್ಶನ್‌ (ಎಂಡ್-ಟು-ಎಂಡ್‌ ಎನ್‌ಕ್ರಿಪ್ಶನ್‌- ಯಾವುದೇ ವ್ಯಕ್ತಿ ಇನ್ನೊಬ್ಬನಿಗೆ ಕಳುಹಿಸುವ ಮೆಸೇಜ್‌ಅನ್ನು ಬೇರೆಯವರು ನೋಡಲು ಆಗದಿರುವ ಸುರಕ್ಷತಾ ವ್ಯವಸ್ಥೆ) ವ್ಯವಸ್ಥೆಗೆ ಧಕ್ಕೆಯಾದರೆ ನಾವು ಭಾರತದಿಂದಲೇ ಹೊರಹೋಗುತ್ತೇವೆ. ಜನರು ತಾವು ಕಳುಹಿಸಿದ ಮೆಸೇಜ್‌ಅನ್ನು ಬೇರೆಯವರು ಓದುವುದಿಲ್ಲ, ಖಾಸಗಿತನಕ್ಕೆ ಧಕ್ಕೆಯಾಗುವುದಿಲ್ಲ ಎಂಬ ಕಾರಣಕ್ಕಾಗಿಯೇ ವಾಟ್ಸ್‌ಆ್ಯಪ್‌ ಬಳಸುತ್ತಾರೆ. ಹಾಗಾಗಿ, ಎನ್‌ಕ್ರಿಪ್ಶನ್‌ಗೆ ಧಕ್ಕೆಯಾದರೆ ನಾವು ಭಾರತದಲ್ಲಿ ಮುಂದುವರಿಯುವುದಿಲ್ಲ” ಎಂಬುದಾಗಿ ವಾಟ್ಸ್‌ಆ್ಯಪ್‌ ಪರ ವಕೀಲರು ದೆಹಲಿ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಯಂತ್ರಣ ಸಾಧಿಸುವ, ಅದರಲ್ಲೂ ವಾಟ್ಸ್‌ಆ್ಯಪ್‌ ಚಾಟ್‌ಗಳ ಮೇಲೆ ನಿಗಾ ಇರಿಸುವ ಕುರಿತು ಕೇಂದ್ರ ಸರ್ಕಾರ 2021ರಲ್ಲಿ ಜಾರಿಗೆ ತಂದ ಮಾಹಿತಿ ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಪ್ರಶ್ನಿಸಿ ವಾಟ್ಸ್‌ಆ್ಯಪ್‌ ದೆಹಲಿ ಹೈಕೋರ್ಟ್‌ ಮೊರೆ ಹೋಗಿದೆ. ಅರ್ಜಿಯ ವಿಚಾರಣೆ ವೇಳೆ ವಾಟ್ಸ್‌ಆ್ಯಪ್‌ ಪರ ವಕೀಲ ತೇಜಸ್‌ ಕಾರಿಯಾ ವಾದ ಮಂಡಿಸಿದರು.

“ಸಾಮಾಜಿಕ ಜಾಲತಾಣವಾಗಿ ನಾವು ಹೇಳುತ್ತಿದ್ದೇವೆ. ಎನ್‌ಕ್ರಿಪ್ಶನ್‌ ಬೇಡ ಎಂದು ಹೇಳಿದರೆ, ಭಾರತದಲ್ಲಿ ವಾಟ್ಸ್‌ಆ್ಯಪ್‌ ಇರುವುದಿಲ್ಲ. ನಾವು ಒಂದು ಪ್ರಕ್ರಿಯೆಯನ್ನು ಪಾಲಿಸಬೇಕಾಗುತ್ತದೆ. ಯಾವ ಸಂದೇಶವನ್ನು ಬಹಿರಂಗಪಡಿಸಬೇಕು ಎಂದು ಹೇಳುತ್ತಾರೋ ಗೊತ್ತಾಗುವುದಿಲ್ಲ. ಇದಕ್ಕಾಗಿ ನಾವು ವರ್ಷಗಳವರೆಗೆ ಕೋಟ್ಯಂತರ ಮೆಸೇಜ್‌ಗಳನ್ನು ಸ್ಟೋರ್‌ ಮಾಡಿ ಇಡಬೇಕಾಗುತ್ತದೆ” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್‌ ಹಾಗೂ ನ್ಯಾ.ಮನ್‌ಮೀತ್‌ ಪ್ರೀತಂ ಸಿಂಗ್‌ ಅರೋರಾ ಅವರಿದ್ದ ನ್ಯಾಯಪೀಠಕ್ಕೆ ತೇಜಸ್‌ ಕಾರಿಯಾ ತಿಳಿಸಿದರು.

ಮಾಹಿತಿ ತಂತ್ರಜ್ಞಾನ ನಿಯಮಗಳನ್ನು (2021) ಕೇಂದ್ರ ಸರ್ಕಾರವು 2021ರ ಫೆಬ್ರವರಿ 25ರಂದು ಜಾರಿಗೆ ತಂದಿದೆ. ಎಕ್ಸ್‌, ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ಹಾಗೂ ವಾಟ್ಸ್‌ಆ್ಯಪ್‌ನಂತಹ ಸಾಮಾಜಿಕ ಜಾಲತಾಣಗಳು ಹೊಸ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶಿಸಲಾಗಿದೆ. ಇದೇ ಕಾರಣಕ್ಕಾಗಿ, ಸಾಮಾಜಿಕ ಜಾಲತಾಣಗಳು ಪ್ರತಿ ತಿಂಗಳು, ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ ಖಾತೆಗಳನ್ನು ರದ್ದುಗೊಳಿಸುತ್ತಿದೆ.

ಇದನ್ನೂ ಓದಿ: WhatsApp Update: ವಾಟ್ಸ್ ಆಪ್ ನಲ್ಲಿ ಮತ್ತೊಂದು ಹೊಸ ಫೀಚರ್! ಫೋಟೊ, ವಿಡಿಯೊ ಶೇರಿಂಗ್ ಇನ್ನೂ ಸುಲಭ

Continue Reading

EXPLAINER

ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಇವಿಎಂ ಪರಿಶೀಲನೆ ಅವಕಾಶ; ಏನಿದು ಸುಪ್ರೀಂ ಆದೇಶ?

ದೇಶದಲ್ಲಿ ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡಬೇಕು ಎಂಬ ಅರ್ಜಿಯನ್ನೂ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಆದರೆ, ಚುನಾವಣೆ ಫಲಿತಾಂಶದ ಬಳಿಕ ಅಭ್ಯರ್ಥಿಗೆ ಗೊಂದಲ, ಅನುಮಾನ ಇದ್ದರೆ, ಆತನು ಮತಯಂತ್ರಗಳನ್ನು ಪರಿಶೀಲನೆ ಮಾಡಿಸುವ ಅವಕಾಶವನ್ನು ಸುಪ್ರೀಂ ಕೋರ್ಟ್‌ ನೀಡಿದೆ. ಇದು ಮಹತ್ವದ ಆದೇಶ ಎನಿಸಿದೆ.

VISTARANEWS.COM


on

VVPAT Verification
Koo

ನವದೆಹಲಿ: ಚುನಾವಣೆ ಮತಯಂತ್ರಗಳ (EVM) ಬದಲು ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಯಾಗಬೇಕು, ಇವಿಎಂ ಹ್ಯಾಕ್‌ ಮಾಡಲಾಗುತ್ತಿದೆ, ಇವಿಎಂ-ವಿವಿಪ್ಯಾಟ್‌ ತಾಳೆಯಾಗಬೇಕು ಎಂದು ವಾದಿಸುತ್ತಿದ್ದವರಿಗೆ ಸುಪ್ರೀಂ ಕೋರ್ಟ್‌ ತೀರ್ಪು ಕಹಿಯಾಗಿದೆ. ಬ್ಯಾಲಟ್‌ ಪೇಪರ್‌ ಮತದಾನ ವ್ಯವಸ್ಥೆ ಜಾರಿಗೆ ಬರಬೇಕು, ಇವಿಎಂನಲ್ಲಿ ದಾಖಲಾದ ಎಲ್ಲ ಮತಗಳನ್ನು ತಾಳೆ (EVM VVPAT Verification) ಹಾಕಬೇಕು ಎಂಬುದಾಗಿ ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ (Supreme Court) ಶುಕ್ರವಾರ (ಏಪ್ರಿಲ್‌ 26) ತಿರಸ್ಕರಿಸಿದೆ. ಇದರ ಜತೆಗೆ ಸುಪ್ರೀಂ ಕೋರ್ಟ್‌ ಮಹತ್ವದ ಆದೇಶವೊಂದನ್ನು ನೀಡಿದೆ. ಚುನಾವಣೆ ಫಲಿತಾಂಶದ ಬಳಿಕ ಗೊಂದಲ ಇದ್ದರೆ ಆ ಅಭ್ಯರ್ಥಿಗಳು ಮತಯಂತ್ರ ಪರಿಶೀಲನೆಯ ಸೌಲಭ್ಯ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ಏನಿದು ಹೊಸ ತಂತ್ರಜ್ಞಾನ?

“ದೇಶದಲ್ಲಿ ಚುನಾವಣೆ ವೇಳೆ ಪ್ರತಿಯೊಂದು ಮತಯಂತ್ರಗಳಿಗೂ ಮೈಕ್ರೋ ಕಂಟ್ರೋಲರ್‌ ಪ್ರೋಗ್ರಾಮ್‌ಗಳನ್ನು ಅಳವಡಿಸಬೇಕು. ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌ ಸೌಲಭ್ಯ ನೀಡಬೇಕು. ಅಂದರೆ, ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಗೊಂದಲ ಇದ್ದರೆ, ಆ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಮತಯಂತ್ರಗಳನ್ನು ಎಂಜಿಯನಿಯರ್‌ಗಳ ತಂಡವು ಪರಿಶೀಲನೆ ಮಾಡಬೇಕು. ಚುನಾವಣೆ ಫಲಿತಾಂಶ ಪ್ರಕಟವಾದ ಏಳು ದಿನಗಳ ಒಳಗೆ ಈ ಕುರಿತು ಅಭ್ಯರ್ಥಿಯು ಮನವಿ ಮಾಡಿದರೆ ಮಾತ್ರ ಮತಯಂತ್ರಗಳ ಪರಿಶೀಲನೆ ಮಾಡಬಹುದು” ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಇದು ಮತಯಂತ್ರಗಳ ದಕ್ಷತೆ ಪ್ರಶ್ನಿಸುವವರಿಗೆ ಒಳ್ಳೆಯ ಅವಕಾಶ ಸಿಕ್ಕಂತಾಗಿದೆ. ಯಾವುದೇ ಗೊಂದಲ, ಅನುಮಾನ ಇದ್ದರೆ ಅಭ್ಯರ್ಥಿಯು ಇನ್ನುಮುಂದೆ ತಜ್ಞರ ನೆರವು ಪಡೆಯಬಹುದಾಗಿದೆ. ಇದಲ್ಲದೆ, ಸಿಂಬಲ್‌ ಲೋಡಿಂಗ್‌ ಪ್ರಕ್ರಿಯೆ ಮುಗಿದ ಬಳಿಕ ಸಿಂಬಲ್‌ ಲೋಡಿಂಗ್‌ ಯುನಿಟ್‌ಗಳನ್ನು (SLU) ಸೀಲ್‌ ಮಾಡಿ, 45 ದಿನ ಸಂಗ್ರಹಿಸಬೇಕು ಎಂಬುದು ಸುಪ್ರೀಂ ಕೋರ್ಟ್‌ನ ಮತ್ತೊಂದು ಆದೇಶವಾಗಿದೆ. ಇದರಿಂದ ಇವಿಎಂ ಡೇಟಾ ಚುನಾವಣೆ ಮುಗಿದ 45 ದಿನಗಳವರೆಗೆ ಸಂಗ್ರಹಿಸಿಡಲು ಸಾಧ್ಯವಾಗಲಿದೆ.

ಬ್ಯಾಲಟ್‌ ಪೇಪರ್‌ ಬೇಕಾಗಿಲ್ಲ

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯೂ ಬೇಕಾಗಿಲ್ಲ ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ. ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಏನಿದು ಪ್ರಕರಣ?

ಚುನಾವಣಾ ಮತಯಂತ್ರಗಳಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಯಂತ್ರಗಳ ಜತೆ ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡುವಂತೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸಂಸ್ಥೆ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಈಗ ಪ್ರತಿ ಕ್ಷೇತ್ರದಲ್ಲಿ ಐದು ಮತಯಂತ್ರಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲಾಗುತ್ತದೆ. ಶೇ.100ರಷ್ಟು ಇವಿಎಂಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಆದೇಶ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ತಾಳೆ ಹೇಗೆ ಮಾಡಲಾಗುತ್ತದೆ?

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣೆ ಆಯೋಗದ ವಾದ ಏನು?

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

Continue Reading

ದೇಶ

VVPAT Verification: ಬ್ಯಾಲಟ್‌ ಪೇಪರ್‌ ಬೇಕಿಲ್ಲ, ವಿವಿಪ್ಯಾಟ್‌ 100% ತಾಳೆಯೂ ಬೇಡ ಎಂದ ಸುಪ್ರೀಂ; ಇವಿಎಂ ವಿರೋಧಿಗಳಿಗೆ ಹಿನ್ನಡೆ

VVPAT Verification: ಇವಿಎಂಗಳಲ್ಲಿ ದಾಖಲಾದ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡಬೇಕು ಎಂಬ ಕುರಿತು ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸೇರಿ ಹಲವರು ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ, ಚುನಾವಣೆ ಆಯೋಗದ ಸ್ಪಷ್ಟನೆ ಸೇರಿ ಹಲವು ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯವೀಗ ತೀರ್ಪು ನೀಡಿದೆ.

VISTARANEWS.COM


on

Supreme Court
Koo

ನವದೆಹಲಿ: ಚುನಾವಣಾ ಮತಯಂತ್ರಗಳಲ್ಲಿ (EVM) ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ (VVPAT Verification) ಮಾಡಬೇಕು ಎಂದು ಸಲ್ಲಿಸಿದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಹಾಗೆಯೇ, ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂಬ ಕುರಿತು ಸಲ್ಲಿಸಿದ ಅರ್ಜಿಗಳನ್ನು ಕೂಡ ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ. ಇದರೊಂದಿಗೆ ದೇಶದಲ್ಲಿ ಬ್ಯಾಲಟ್‌ ಪೇಪರ್‌ ವ್ಯವಸ್ಥೆ ಬರಬೇಕು, ಇವಿಎಂ ಸುರಕ್ಷತೆ ಇಲ್ಲ ಎಂದು ವಾದಿಸುವವರಿಗೆ, ಅರ್ಜಿ ಸಲ್ಲಿಸಿದವರಿಗೆ ಭಾರಿ ಹಿನ್ನಡೆಯಾಗಿದೆ.

ಅರ್ಜಿದಾರರ ವಾದ-ಪ್ರತಿವಾದವನ್ನು ಆಲಿಸಿದ್ದ, ಚುನಾವಣೆ ಆಯೋಗದ ಮಾಹಿತಿಯನ್ನೂ ಪಡೆದಿದ್ದ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಹಾಗೂ ದೀಪಾಂಕರ್‌ ದತ್ತ ಅವರು, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದರು. “ನಾವು ತಾಂತ್ರಿಕ ವಿಭಾಗದ ಎಲ್ಲ ಮಾಹಿತಿಯನ್ನು ಗಮನಿಸಿದ್ದೇವೆ. ಹಾಗಾಗಿ, ಇವಿಎಂ ಮತಗಳನ್ನು ವಿವಿಪ್ಯಾಟ್‌ ಜತೆ ತಾಳೆ ಮಾಡುವ ಅವಶ್ಯಕತೆ ಇಲ್ಲ. ಹಾಗಾಗಿ, ಎಲ್ಲ ಅರ್ಜಿಗಳನ್ನು ತಿರಸ್ಕರಿಸಿದ್ದೇವೆ” ಎಂದು ನ್ಯಾಯಮೂರ್ತಿಗಳು ತಿಳಿಸಿದರು.

ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌

ಇವಿಎಂ ಬದಲು ಬ್ಯಾಲಟ್‌ ಪೇಪರ್‌ ಮತದಾನ, ಇವಿಎಂ ಜತೆ ವಿವಿಪ್ಯಾಟ್‌ ತಾಳೆ ಕುರಿತ ಅರ್ಜಿಗಳನ್ನು ತಿರಸ್ಕರಿಸುವ ಜತೆಗೆ ಸುಪ್ರೀಂ ಕೋರ್ಟ್‌ ಮತ್ತೊಂದು ನಿರ್ದೇಶನ ನೀಡಿದೆ. ಇನ್ನು ಮುಂದೆ, ಚುನಾವಣೆಗೆ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಮೈಕ್ರೋಕಂಟ್ರೋಲರ್‌ ಪ್ರೋಗ್ರಾಮ್‌ ಸೌಲಭ್ಯ ಸಿಗಲಿದೆ. ಅಂದರೆ, ಚುನಾವಣೆ ಫಲಿತಾಂಶದ ಬಳಿಕ ಯಾವುದೇ ಗೊಂದಲ ಇದ್ದರೆ, ಆ ಕ್ಷೇತ್ರದ ವ್ಯಾಪ್ತಿಯ ಚುನಾವಣಾ ಮತಯಂತ್ರಗಳನ್ನು ಎಂಜಿಯನಿಯರ್‌ಗಳ ತಂಡವು ಪರಿಶೀಲನೆ ಮಾಡಬೇಕು. ಚುನಾವಣೆ ಫಲಿತಾಂಶ ಪ್ರಕಟವಾದ ಏಳು ದಿನಗಳ ಒಳಗೆ ಈ ಕುರಿತು ಅಭ್ಯರ್ಥಿಯು ಮನವಿ ಮಾಡಿದರೆ ಮಾತ್ರ ಮತಯಂತ್ರಗಳ ಪರಿಶೀಲನೆ ಮಾಡಬಹುದು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶನ ನೀಡಿದೆ.

ಏನಿದು ಪ್ರಕರಣ?

ಚುನಾವಣಾ ಮತಯಂತ್ರಗಳಲ್ಲಿ ದಾಖಲಾದ ಎಲ್ಲ ಮತಗಳನ್ನು ವಿವಿಪ್ಯಾಟ್‌ ಯಂತ್ರಗಳ ಜತೆ ತಾಳೆ ಹಾಕಬೇಕು ಎಂಬುದಾಗಿ ನಿರ್ದೇಶನ ನೀಡುವಂತೆ ಅಸೋಸಿಯೇಷನ್‌ ಫಾರ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಸಂಸ್ಥೆ ಸೇರಿ ಹಲವರು ಅರ್ಜಿ ಸಲ್ಲಿಸಿದ್ದಾರೆ. ಈಗ ಪ್ರತಿ ಕ್ಷೇತ್ರದಲ್ಲಿ ಐದು ಮತಯಂತ್ರಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲಾಗುತ್ತದೆ. ಶೇ.100ರಷ್ಟು ಇವಿಎಂಗಳನ್ನು ವಿವಿಪ್ಯಾಟ್‌ಗಳ ಜತೆ ತಾಳೆ ಮಾಡಲು ಆದೇಶ ನೀಡಬೇಕು ಎಂಬುದು ಅರ್ಜಿದಾರರ ವಾದವಾಗಿತ್ತು.

VVPAT ಎಂದರೇನು?

VVPAT ಎಂದರೆ ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್. ಮತವನ್ನು ಸರಿಯಾಗಿ ಚಲಾಯಿಸಲಾಗಿದೆಯೇ ಮತ್ತು ಮತದಾರ ಚಲಾಯಿಸಿದ ಅಭ್ಯರ್ಥಿಗೇ ಆ ಮತ ಹೋಗಿದೆಯೇ ಎಂದು ನೋಡಲು ಅವಕಾಶವಿರುವ ಯಂತ್ರ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯ ಹೆಸರಿನ ಮುಂದಿನ ಬಟನ್ ಅನ್ನು ಒಮ್ಮೆ ಒತ್ತಿದರೆ, ಕಂಟ್ರೋಲ್ ಯೂನಿಟ್ ಮತ್ತು ಬ್ಯಾಲೆಟ್ ಯೂನಿಟ್‌ಗೆ ಸಂಪರ್ಕಗೊಂಡಿರುವ VVPAT, ಏಳು ಸೆಕೆಂಡುಗಳ ಕಾಲ ಮತದಾರರಿಗೆ ಗೋಚರಿಸುವ ಕಾಗದದ ಸ್ಲಿಪ್ ಅನ್ನು ಉತ್ಪಾದಿಸುತ್ತದೆ. ಅದರ ನಂತರ, ಪೇಪರ್ ಸ್ಲಿಪ್ VVPAT ಯಂತ್ರದಲ್ಲಿರುವ ಡ್ರಾಪ್ ಬಾಕ್ಸ್‌ಗೆ ಬೀಳುತ್ತದೆ.

ತಾಳೆ ಹೇಗೆ ಮಾಡಲಾಗುತ್ತದೆ?

ಪ್ರಸ್ತುತ, ಪ್ರತಿ ಅಸೆಂಬ್ಲಿ ವಿಭಾಗದಲ್ಲಿಯೂ 5 ವಿವಿಪ್ಯಾಟ್ ಯಂತ್ರಗಳಲ್ಲಿ ದಾಖಲಾದ ಮತಗಳನ್ನು ಇವಿಎಂಗಳೊಂದಿಗೆ ಕ್ರಾಸ್-ಚೆಕ್ ಮಾಡಲಾಗುತ್ತದೆ. 100 ಶೇಕಡ ಇವಿಎಂಗಳಲ್ಲಿ ದಾಖಲಾದ ಮತಗಳೊಂದಿಗೆ ವಿವಿಪ್ಯಾಟ್ ಸ್ಲಿಪ್‌ಗಳನ್ನು ಕ್ರಾಸ್ ಚೆಕ್ ಮಾಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿಗಳು ಬಯಸಿವೆ. ವಿವಿಪ್ಯಾಟ್‌ನಲ್ಲಿ ಏಳು ಸೆಕೆಂಡ್ ಲೈಟ್ ಆನ್ ಆಗಿದ್ದು, ಮತದಾರರು ತಮ್ಮ ಮತವನ್ನು ಸರಿಯಾಗಿ ದಾಖಲಿಸಲಾಗಿದೆಯೇ ಎಂದು ಪರಿಶೀಲಿಸಬಹುದು ಎಂದು ಅರ್ಜಿದಾರರು ಕೋರಿದ್ದಾರೆ. ಪೇಪರ್ ಸ್ಲಿಪ್ ಅನ್ನು ಮತದಾರರಿಗೆ ನೀಡುವುದು ಮತ್ತೊಂದು ಸಲಹೆಯಾಗಿದೆ. ಚುನಾವಣಾ ಆಯೋಗ ಇದನ್ನು ವಿರೋಧಿಸಿದೆ. ಇದು ಮತದಾನದ ಗೌಪ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ದುರ್ಬಳಕೆಯಾಗಬಹುದು ಎಂದು ಹೇಳಿದೆ.

ಚುನಾವಣೆ ಆಯೋಗದ ವಾದ ಏನು?

ಚುನಾವಣಾ ಆಯೋಗದ ಪ್ರಕಾರ ಇವಿಎಂ ವ್ಯವಸ್ಥೆ ಫೂಲ್ ಪ್ರೂಫ್ ಆಗಿದೆ. ಇದು ಮತ ಎಣಿಕೆ ಸಮಯವನ್ನು ಉಳಿಸುತ್ತದೆ, ಟ್ಯಾಂಪರ್ ಪ್ರೂಫ್ ಮತ್ತು ಬಳಕೆದಾರ ಸ್ನೇಹಿಯಾಗಿದೆ ಎಂದು ಚುನಾವಣಾ ಸಂಸ್ಥೆ ಹೇಳಿದೆ. ಇವಿಎಂಗಳು ಹಗುರವಾಗಿವೆ ಮತ್ತು ಸದೃಢವಾಗಿವೆ- ಮತಗಟ್ಟೆ ಅಧಿಕಾರಿಗಳು ದೂರದ ಕುಗ್ರಾಮಗಳು, ಗುಡ್ಡಗಾಡು ಪ್ರದೇಶಗಳನ್ನು ತಲುಪಲು ಟ್ರೆಕ್ಕಿಂಗ್‌ ಮಾಡಬೇಕಾದ ದೇಶದಲ್ಲಿ ಇದು ನಿರ್ಣಾಯಕವಾಗಿದೆ. ಇವಿಎಂ ಸ್ವಯಂ ರೋಗನಿರ್ಣಯಕ್ಕೆ ಸಮರ್ಥವಾಗಿದೆ ಮತ್ತು ಸ್ವತಂತ್ರವಾಗಿದೆ.

ಇವಿಎಂಗಳಿಗೆ ವಿದ್ಯುತ್ ಅಗತ್ಯವಿಲ್ಲ ಮತ್ತು ಬ್ಯಾಟರಿ/ಪವರ್ ಪ್ಯಾಕ್‌ ಇದರೊಂದಿಗೆ ಬರುತ್ತದೆ. ಸ್ಥಿರವಾದ ವಿದ್ಯುತ್ ಸರಬರಾಜನ್ನು ಹೊಂದಿರದ ಪ್ರದೇಶಗಳಲ್ಲಿ ಮತದಾನವನ್ನು ಸಕ್ರಿಯಗೊಳಿಸಲು ಇದು ಮತ್ತೊಂದು ನಿರ್ಣಾಯಕ ವೈಶಿಷ್ಟ್ಯ. ಪ್ರತಿ ಚುನಾವಣೆಗೂ ಮುನ್ನ ಇವಿಎಂ ಮತ್ತು ವಿವಿಪ್ಯಾಟ್‌ಗಳ ಮೊದಲ ಹಂತದ ತಪಾಸಣೆ (ಎಫ್‌ಎಲ್‌ಸಿ) ನಡೆಸಲಾಗುತ್ತದೆ. ಈ ಪರಿಶೀಲನೆಯ ಸಮಯದಲ್ಲಿ, ಇವಿಎಂಗಳಲ್ಲಿನ ಡೇಟಾವನ್ನು ಅಳಿಸಲಾಗುತ್ತದೆ ಮತ್ತು ವಿವಿಧ ಘಟಕಗಳ ಕಾರ್ಯವನ್ನು ಪ್ರದರ್ಶಿಸಲಾಗುತ್ತದೆ. ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಈ ಪರಿಶೀಲನೆ ನಡೆಸಲಾಗುತ್ತದೆ.

ಇದನ್ನೂ ಓದಿ: VVPAT Verification: ವಿವಿಪ್ಯಾಟ್‌ ಕೇಸ್; ಚುನಾವಣೆಯನ್ನು ನಾವು ನಿಯಂತ್ರಿಸಲಾಗದು ಎಂದ ಸುಪ್ರೀಂಕೋರ್ಟ್; ಮತಯಂತ್ರ ವಿರೋಧಿಗಳಿಗೆ ಹಿನ್ನಡೆ

Continue Reading

ರಾಜಕೀಯ

Lok sabha Election 2024: 2ನೇ ಹಂತದ ಚುನಾವಣೆ; ಕಣದಲ್ಲಿರೋ ಅತ್ಯಂತ ಸಿರಿವಂತ, ಬಡ ಅಭ್ಯರ್ಥಿಗಳು ಯಾರ್ಯಾರು ಗೊತ್ತಾ?

Lok sabha Election 2024:ದೇಶದಲ್ಲಿ ಎರಡನೇ ಹಂತದ ಚುನಾವಣೆ ರಂಗೇರಿದೆ. ಈ ಬಾರಿ ಕಣದಲ್ಲಿ ಅತ್ಯಂತ ಶ್ರೀಮಂತ ಹಾಗೂ ಬಡ ಅಭ್ಯರ್ಥಿಗಳು ಇದ್ದಾರೆ. ಎರಡನೇ ಹಂತದ ಚುನಾವಣೆಯ ಕಣದಲ್ಲಿರುವ ಕೆಲವು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ​​​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ.

VISTARANEWS.COM


on

By

Koo

ನವದೆಹಲಿ: ಲೋಕಸಭಾ ಚುನಾವಣೆ-2024ರಲ್ಲಿ (Lok Sabha Election 2024) ಒಟ್ಟು 12 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ 1,120 ಅಭ್ಯರ್ಥಿಗಳ ತಮ್ಮ ಅದೃಷ್ಟವನ್ನು ಪರೀಕ್ಷೆ ಇಂದು ನಡೆಯಲಿದೆ. ಈ ಬಾರಿ ಹಲವು ಪ್ರಮುಖ ಅಭ್ಯರ್ಥಿಗಳು ಕಣದಲ್ಲಿ ಇದ್ದು, ಇವರಲ್ಲಿ ಅತೀ ಹೆಚ್ಚು ಶ್ರೀಮಂತ (richest), ಕಡಿಮೆ ಆಸ್ತಿ ಹೊಂದಿರುವ (Candidates With Lowest Assets) ಹಾಗೂ ಯಾವುದೇ ಆಸ್ತಿ ಪಾಸ್ತಿ ಹೊಂದಿರದ ಅಭ್ಯರ್ಥಿಗಳೂ (Zero assets candidates) ಸೇರಿದ್ದಾರೆ.

ಎರಡನೇ ಹಂತದ ಚುನಾವಣೆಯ ಕಣದಲ್ಲಿರುವ ಕೆಲವು ಶ್ರೀಮಂತ ಅಭ್ಯರ್ಥಿಗಳ ಪಟ್ಟಿಯನ್ನು ಅಸೋಸಿಯೇಷನ್ ​​​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ ಬಿಡುಗಡೆ ಮಾಡಿದೆ. ಎರಡನೇ ಹಂತದ ಚುನಾವಣೆಯಲ್ಲಿ ಭಾಗವಹಿಸುತ್ತಿರುವ 1,210 ಅಭ್ಯರ್ಥಿಗಳ ಅಫಿಡವಿಟ್‌ಗಳನ್ನು ವಿಶ್ಲೇಷಿಸಿದ್ದು, 390 ಅಭ್ಯರ್ಥಿಗಳು ‘ಕೋಟ್ಯಧಿಪತಿಗಳು’ ಎಂದು ಹೇಳಿದೆ. ಇವರಲ್ಲಿ ಶೇ. 21ರಷ್ಟು ಅಭ್ಯರ್ಥಿಗಳ ವಿರುದ್ಧವೂ ಕ್ರಿಮಿನಲ್ ಪ್ರಕರಣಗಳಿವೆ.

ಟಾಪ್‌ 5 ಶ್ರೀಮಂತ ಅಭ್ಯರ್ಥಿಗಳಿವರು

1. ವೆಂಕಟರಮಣ ಗೌಡ

ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ವೆಂಕಟರಮಣೇಗೌಡ ಅಲಿಯಾಸ್‌ ಸ್ಟಾರ್‌ ಚಂದ್ರು ಈ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. 622 ಕೋಟಿ ರೂ. ಗೂ ಅಧಿಕ ಆಸ್ತಿ ಹೊಂದಿದ್ದಾರೆ.

2. ಡಿ.ಕೆ. ಸುರೇಶ್

ಎರಡನೇ ಸ್ಥಾನವು ಕಾಂಗ್ರೆಸ್‌ನ ಅಭ್ಯರ್ಥಿ ಡಿ.ಕೆ. ಸುರೇಶ್‌ಗೆ ಸೇರಿದೆ. ಅವರು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹೋದರರಾಗಿದ್ದಾರೆ. ಬೆಂಗಳೂರು ಗ್ರಾಮಾಂತರದಿಂದ ಸ್ಪರ್ಧಿಸಿರುವ ಸುರೇಶ್ ಅವರ ಒಟ್ಟು ಆಸ್ತಿ ಮೌಲ್ಯ 593 ಕೋಟಿ ರೂ.

Hema Malini

3. ಹೇಮಾ ಮಾಲಿನಿ

ಖ್ಯಾತ ನಟಿ ಹೇಮಾ ಮಾಲಿನಿ ಮೂರನೇ ಸ್ಥಾನ ಪಡೆದಿದ್ದು, ಉತ್ತರ ಪ್ರದೇಶದ ಮಥುರಾದಿಂದ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ. ಇವರು 278.9 ಕೋಟಿ ರೂ. ಮೌಲ್ಯದ ಆಸ್ತಿ ಹೊಂದಿದ್ದಾರೆ.

4. ಸಂಜಯ್ ಶರ್ಮಾ

ಮಧ್ಯಪ್ರದೇಶದ ಹೋಶಂಗಾಬಾದ್‌ನಿಂದ ಸ್ಪರ್ಧಿಸಿರುವ ಕಾಂಗ್ರೆಸ್‌ನ ಸಂಜಯ್ ಶರ್ಮಾ ಅವರ ಆಸ್ತಿ 232 ಕೋಟಿ ರೂ.

5. ಎಚ್.ಡಿ. ಕುಮಾರಸ್ವಾಮಿ

ಬಿಜೆಪಿಯೊಂದಿಗೆ ಸಮ್ಮಿಶ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮುಖಂಡ ಹಾಗೂ ಮಂಡ್ಯ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರ ಆಸ್ತಿ 217 ಕೋಟಿ ರೂ.

ಅತೀ ಕಡಿಮೆ ಆಸ್ತಿ ಹೊಂದಿರುವ ಅಭ್ಯರ್ಥಿಗಳು

    1. ಮಹಾರಾಷ್ಟ್ರದ ನಾಂದೆಡ್‌ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತಿರುವ ಲಕ್ಷ್ಮಣ್‌ ನಾಗರಾವ್‌ ತಮ್ಮ ಅಫಿಡವಿಟ್‌ನಲ್ಲಿ ಕೇವಲ 500 ರೂ. ಆಸ್ತಿ ಹೊಂದಿರುವುದಾಗಿ ಘೋಷಿಸಿದ್ದಾರೆ.

    2. ಕೇರಳದ ಕಾಸರಗೋಡು ಕ್ಷೇತ್ರದಿಂದ ಸ್ಪರ್ಧಿಸಿರುವ ರಾಜೇಶ್ವರಿ ಕೆ.ಆರ್.‌ 1000ರೂ ಆದಾಯ ಘೋಷಿಸಿದ್ದಾರೆ.

      3. ಮತ್ತೋರ್ವ ಸ್ವತಂತ್ರ ಅಭ್ಯರ್ಥಿ ಅಮರಾವತಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಪೃಥ್ವಿಸಾಮ್ರಾಟ್‌ ಮುಖಿಂದ್‌ರಾವ್‌ ದೀಪವಂಶ್ 1,400 ರೂ ಮೊತ್ತದ ಆಸ್ತಿ ಹೊಂದಿದ್ದಾರೆ.

      4. ಇನ್ನು ಕೇವಲ 2000 ರೂ. ಮೌಲ್ಯ ಆಸ್ತಿ ಹೊಂದಿರುವ ರಾಜಸ್ಥಾನದ ಜೋಧ್‌ಪುರ ಅಭ್ಯರ್ಥಿ ಶಹನಾಜ್‌ ಬಾನೋ ನಾಲ್ಕನೇ ಸ್ಥಾನದಲ್ಲಿದ್ದಾರೆ.

      5. ಕೇರಳದ ಕೊಟ್ಟಾಯಂನಲ್ಲಿ ಕಣಕ್ಕಿಳಿದಿರುವ ವಿ.ಪಿ.ಕೊಚುಮನ್‌ 2,230 ರೂ. ಮೌಲ್ಯದ ಆಸ್ತಿ ಘೋಷಿಸಿದ್ದಾರೆ.

      ಇದನ್ನೂ ಓದಿ:Lok Sabha Election 2024: ಲೋಕಸಭೆ ಚುನಾವಣೆ 2024 ಮತದಾನ Live News

      ಯಾವುದೇ ಆಸ್ತಿ ಪಾಸ್ತಿ ಹೊಂದಿರದ ಅಭ್ಯರ್ಥಿಗಳು:

      ಕರ್ನಾಟಕ ಪ್ರಕಾಶ್‌ ಆರ್.ಎ ಜೈನ್‌, ರಾಮಮೂರ್ತಿ ಎಂ ಮತ್ತು ರಾಜಾ ರೆಡ್ಡಿ ಸೇರದಂತೆ ಒಟ್ಟು ಆರು ಮಂದಿ ತಮ್ಮ ಬಳಿ ಯಾವುದೇ ಆಸ್ತಿ ಪಾಸ್ತಿ ಇಲ್ಲ ಎಂದು ಅಫಿಡವಿಟ್‌ನಲ್ಲಿ ಘೋಷಿಸಿಕೊಂಡಿದ್ದಾರೆ. ಮಹಾರಾಷ್ಟ್ರದ ಕಿಶೋರ್‌ ಭೀಮರಾವ್‌ ಲಾಬಡೆ, ನಾಗೇಶ್‌ ಸಾಂಬಾಜಿ ಗಾಯಕ್ವಾಡ್‌ ಮತ್ತು ಧ್ಯಾನೇಶ್ವರ್‌ ರಾವ್‌ ಸಾಹೇಬ್‌ ಕಾಪಟೆ ಕೂಡ ಯಾವುದೇ ಆಸ್ತಿ ಪಾಸ್ತಿ ಹೊಂದಿರದ ಅಭ್ಯರ್ಥಿಗಳ ಪಟ್ಟಿಯಲ್ಲಿದ್ದಾರೆ.

      Continue Reading
      Advertisement
      ಕರ್ನಾಟಕ4 mins ago

      Lok sabha Election 2024: ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿ ನೇರವಾಗಿ ಮತಗಟ್ಟೆಗೆ ಬಂದ ನಾರಾಯಣ ಮೂರ್ತಿ

      Lok Sabha Election 2024: Karnataka records 38.23% voter turnout; highest in Dakshina Kannda
      ಕರ್ನಾಟಕ19 mins ago

      Lok Sabha Election: ರಾಜ್ಯಾದ್ಯಂತ 1 ಗಂಟೆ ವೇಳೆಗೆ 38.23% ಮತದಾನ; ಎಲ್ಲಿ ಹೆಚ್ಚು? ಎಲ್ಲಿ ಕಡಿಮೆ?

      Lok Sabha Election 2024 Kannada Celeb vote Pictures
      ಸ್ಯಾಂಡಲ್ ವುಡ್41 mins ago

      Lok Sabha Election 2024: ಹಳ್ಳಿ ಸ್ಟೈಲ್‌ನಲ್ಲಿ ಬಂದು ಮತ ಹಾಕಿದ ಡಾಲಿ! ವೋಟ್ ಮಾಡಿದ ಸೆಲೆಬ್ರಿಟಿಗಳಿವರು!

      Lok Sabha Election 2024 DK brothers distribute Rs 505 in Bengaluru Rural constituency HD Kumaraswamy allegations
      Lok Sabha Election 202446 mins ago

      Lok Sabha Election 2024: ಕನಕಪುರದಲ್ಲಿ 505 ರೂ, ಮಲೆ ಮಹದೇಶ್ವರದ ಲಾಡು, ಗ್ಯಾರಂಟಿ ಕಾರ್ಡ್ ಹಂಚಿಕೆ; ಎಚ್‌ಡಿಕೆ ಗಂಭೀರ ಆರೋಪ

      Lok sabha election 2024
      Lok Sabha Election 202457 mins ago

      Lok Sabha Election 2024: ತಾಳಿ ಕಟ್ಟುವ ಹತ್ತು ನಿಮಿಷ ಮುಂಚೆ ಓಡೋಡಿ ಹೋದ ವರ; ವೋಟ್‌ ಹಾಕಿ ನಿರಾಳ

      Narendra Modi
      ಕರ್ನಾಟಕ1 hour ago

      Narendra Modi: ಭ್ರಷ್ಟರ ಬೇಟೆಯಾಡಿದ, ಉಗ್ರರ ಓಡಿಸಿದ; ಮೋದಿಗಾಗಿ ಕನ್ನಡದಲ್ಲಿ ಹಾಡು ಹಾಡಿದ ಅಜ್ಜಿ!

      Chocolate industry
      ಪರಿಸರ1 hour ago

      Chocolate: ಏನಿದು ಮೀಲಿಬಗ್‌ ವೈರಸ್‌? ಚಾಕೊಲೇಟ್ ದರ ಏರಿಕೆಗೂ ಇದಕ್ಕೂ ಏನು ಸಂಬಂಧ?

      ವೈರಲ್ ನ್ಯೂಸ್1 hour ago

      Viral News: ಸಿಂಗಾಪುರ ಏರ್‌ಲೈನ್ಸ್‌ ಪೈಲಟ್‌ ಅಂತಾ ಹೇಳ್ಕೊಂಡು ಪೋಸ್‌ ಕೊಡ್ತಿದ್ದವ ಲಾಕ್‌!

      Lok Sabha Election 2024 Woman casts her vote with the help of oxygen elderly woman dies after casting her vote
      Lok Sabha Election 20242 hours ago

      Lok Sabha Election 2024: ಆಕ್ಸಿಜನ್‌ ಸಹಾಯದಿಂದ ಮತ ಚಲಾಯಿಸಿದ ಮಹಿಳೆ; ವೋಟು ಹಾಕಿ ಕುಸಿದು ಮೃತಪಟ್ಟ ವೃದ್ಧೆ!

      Whatsapp
      ದೇಶ2 hours ago

      WhatsApp: ಭಾರತ ತೊರೆಯುವುದಾಗಿ ವಾಟ್ಸ್‌ಆ್ಯಪ್‌ ಎಚ್ಚರಿಕೆ; ಶೀಘ್ರದಲ್ಲೇ ಆ್ಯಪ್‌ ಅಲಭ್ಯ?

      Sharmitha Gowda in bikini
      ಕಿರುತೆರೆ7 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ7 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ6 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      galipata neetu
      ಕಿರುತೆರೆ5 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ7 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      Kannada Serials
      ಕಿರುತೆರೆ7 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ6 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ4 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      varun
      ಕಿರುತೆರೆ5 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      Kannada Serials
      ಕಿರುತೆರೆ7 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      Lok Sabha Election 2024 congress booth agent allegation for Fake voting in Hassan Lok Sabha constituency
      ಹಾಸನ2 hours ago

      Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

      Lok Sabha Election 2024 Woman suffers cardiac arrest at polling booth Doctor who came to cast his vote saved life
      Lok Sabha Election 20243 hours ago

      Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

      Lok Sabha Election 2024 Youth Congress protest
      Lok Sabha Election 20243 hours ago

      Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

      Dina bhavishya
      ಭವಿಷ್ಯ9 hours ago

      Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

      Neha Murder Case in hubblli
      ಹುಬ್ಬಳ್ಳಿ22 hours ago

      Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

      Neha Murder Case
      ಹುಬ್ಬಳ್ಳಿ22 hours ago

      Neha Murder case : ನೇಹಾ ಹತ್ಯೆ; ಕಾರು ಚಾಲಕ, ಅಕೌಂಟೆಂಟ್‌ ಸಿಐಡಿ ವಶಕ್ಕೆ! ಅಜ್ಞಾತ ಸ್ಥಳದಲ್ಲಿ ವಿಚಾರಣೆ

      Neha Murder case CID Officer
      ಹುಬ್ಬಳ್ಳಿ1 day ago

      Neha Murder Case : ರಹಸ್ಯ ಸ್ಥಳದಲ್ಲಿ ಫಯಾಜ್‌; ನೇಹಾ ಪೋಷಕರಿಗೆ ಸಿಐಡಿ ತಂಡದಿಂದ 1 ಗಂಟೆ ಸುದೀರ್ಘ ವಿಚಾರಣೆ

      Lok sabha election 2024
      Lok Sabha Election 20241 day ago

      Lok Sabha Election 2024 : ಕರ್ನಾಟಕದಲ್ಲಿ ಮೊದಲ ಹಂತದ ಮತದಾನ; ಪ್ರವಾಸಿ ತಾಣಗಳ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ

      Dina Bhavishya
      ಭವಿಷ್ಯ2 days ago

      Dina Bhavishya : ಇಂದು ಈ ರಾಶಿಯ ಉದ್ಯೋಗಿಗಳಿಗೆ ಯಶಸ್ಸು ಕಟ್ಟಿಟ್ಟ ಬುತ್ತಿ

      Dina Bhavishya
      ಭವಿಷ್ಯ3 days ago

      Dina Bhavishya : ಈ ರಾಶಿಯವರು ತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡ್ಬೇಡಿ

      ಟ್ರೆಂಡಿಂಗ್‌