Scam Alert: ಎಸ್‌ಬಿಐ ಬ್ಯಾಂಕ್ ಖಾತೆ ತಾತ್ಕಾಲಿಕ ರದ್ದಾಗಿದೆ ಎಂಬ ಸಂದೇಶ ಬಂದಿದೆಯೇ? ಹಾಗಿದ್ದರೆ, ಹುಷಾರಾಗಿರಿ! - Vistara News

ದೇಶ

Scam Alert: ಎಸ್‌ಬಿಐ ಬ್ಯಾಂಕ್ ಖಾತೆ ತಾತ್ಕಾಲಿಕ ರದ್ದಾಗಿದೆ ಎಂಬ ಸಂದೇಶ ಬಂದಿದೆಯೇ? ಹಾಗಿದ್ದರೆ, ಹುಷಾರಾಗಿರಿ!

Scam Alert: ಬ್ಯಾಂಕ್ ಖಾತೆದಾರರ ವೈಯಕ್ತಿಕ ಮಾಹಿತಿಯನ್ನು ಹಾಗೂ ಹಣವನ್ನು ಕದಿಯುವುದಕ್ಕಾಗಿ ವಂಚಕರು, ಬ್ಯಾಂಕ್ ಖಾತೆ ತಾತ್ಕಾಲಿಕ ರದ್ದಾಗಿದೆ ಎಂಬ ಸಂದೇಶ ಕಳುಹಿಸುತ್ತಿದ್ದಾರೆ.

VISTARANEWS.COM


on

Scam Alert, Got Message Saying SBI Account Is Locked? Then be careful
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಅನುಮಾನಾಸ್ಪದ ಚಟುವಟಿಕೆಗಳಿಂದಾಗಿ ನಿಮ್ಮ ಬ್ಯಾಂಕ್ ಖಾತೆ (Bank Account) ತಾತ್ಕಾಲಿಕವಾಗಿ ಸ್ಥಗಿತವಾಗಿದೆ ಎಂಬ ಸಂದೇಶವು ಕಳೆದ ಕೆಲವು ದಿನಗಳಿಂದ ಸ್ಟೇಟ್ ಬ್ಯಾಂಕ್‌ ಇಂಡಿಯಾ(SBI) ಗ್ರಾಹಕರಿಗೆ ಬರುತ್ತಿವೆ. ಸ್ಥಗಿತವಾಗಿರುವ ಖಾತೆಯನ್ನು ಸಕ್ರಿಯ ಮಾಡಲು, ಲಗತ್ತಿಸಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ ಎಂಬ ಮಾಹಿತಿಯನ್ನು ಸಂದೇಶದಲ್ಲಿ ತಿಳಿಸಲಾಗಿದೆ. ವಾಸ್ತವದಲ್ಲಿ ಇದೊಂದು ವಂಚನೆಯ ಟ್ರಿಕ್ ಆಗಿದ್ದು, ಹೀಗೆ ಬಂದ ಸಂದೇಶದ ಜತೆಗಿನ ಲಿಂಕ್ ಮೇಲೆ ಕ್ಲಿಕ್ ಮಾಡಲು ಹೋಗಬೇಡಿ ಎಂದು ಪಿಐಬಿ ಫ್ಯಾಕ್ಟ್ ಚೆಕ್ (PIB Fact Check) ಎಚ್ಚರಿಕೆಯನ್ನು ನೀಡಲಾಗಿದೆ(Scam Alert).

ಪಿಐಬಿ ಫ್ಯಾಕ್ಟ್ ಚೆಕ್ ಟ್ವೀಟ್

ಇದೊಂದು ಫೇಕ್ ಮೆಸೇಜ್ ಆಗಿದೆ ಎಂದು ಸರ್ಕಾರಿ ಫ್ಯಾಕ್ಟ್ ಚೆಕ್ಕರ್ ಪಿಐಬಿ ಫ್ಯಾಕ್ಟ್ ಚೆಕ್ (PIB Fact Check) ಎಚ್ಚರಿಸಿದೆ. ಸಂಶಯಾಸ್ಪದ ಚಟುವಟಿಕೆಯಿಂದಾಗಿ ಖಾತೆಯನ್ನು ತಾತ್ಕಾಲಿಕವಾಗಿ ಲಾಕ್ ಮಾಡಲಾಗಿದೆ ಎಂದು ಎಸ್‌ಬಿಐ ಹೆಸರಿನಲ್ಲಿ ನಕಲಿ ಸಂದೇಶವೊಂದು ಗ್ರಾಹಕರಿಗೆ ರವಾನಿಸಲಾಗುತ್ತಿದೆ. ಈ ರೀತಿಯ ನಿಮ್ಮ ಬ್ಯಾಂಕಿಂಗ್ ವಿವರಗಳನ್ನು ಹಂಚಿಕೊಳ್ಳಲು ಕೇಳುವ ಇಮೇಲ್‌ಗಳು ಅಥಾ ಸಂದೇಶಗಳಿಗೆ ಎಂದಿಗೂ ಪ್ರತಿಕ್ರಿಯಿಸಬೇಡಿ. ಅಂತಹ ಸಂದೇಶಗಳನ್ನು ತಕ್ಷಣವೇ report.phishing@sbi.co.in ಮೂಲಕ ವರದಿ ಮಾಡಬೇಕು ಎದು ಪಿಐಬಿ ಫ್ಯಾಕ್ಟ್ ಚೆಕ್ ಹೇಳಿದೆ.

ಲಿಂಕ್ ಮೇಲೆ ಕ್ಲಿಕ್ ಮಾಡಿದ್ರೆ ಏನಾಗುತ್ತದೆ?

ಹೀಗೆ ಬಂದ ಸಂದೇಶದ ಜತೆಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, ನಿಮಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಹ್ಯಾಕರ್ಸ್‌ ನಿಮ್ಮ ಮಾಹಿತಿಯನ್ನು ಕದಿಯುವುದಕ್ಕಾಗಿ ಲಿಂಕ್‌ನಲ್ಲಿ ಮಾಲ್ವೇರ್‌ ಅನ್‌ಸ್ಟಾಲ್ ಮಾಡಿರುವ ಸಾಧ್ಯತೆ ಇರುತ್ತದೆ. ಒಂದೊಮ್ಮೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿದರೆ, ನಿಮ್ಮ ಬ್ಯಾಂಕ್ ಖಾತೆಯಲ್ಲಿನ ಹಣವನ್ನು ಕಳೆದುಕೊಳ್ಳಬೇಕಾಗಬಹುದು. ಹ್ಯಾಕರ್ಸ್ ದೊರದೆಲ್ಲೆಲ್ಲೂ ಕುಳಿತುಕೊಂಡು ನಿಮ್ಮ ಬ್ಯಾಂಕ್ ಖಾತೆಯನ್ನು ನಿರ್ಹವಣೆ ಮಾಡುವ ಅಪಾಯ ಇದ್ದೇ ಇರುತ್ತದೆ.

ಗ್ರಾಹಕರ ರಕ್ಷಣೆ ಹೇಗೆ?

ನಿಮಗೂ ಇಂಥ ಮೆಸೇಜ್ ಬಂದಿದ್ದರೆ, ಸಂಬಂಧಿಸಿದ ಬ್ಯಾಂಕ್ ಸಂಪರ್ಕಿಸಬೇಕು ಮತ್ತು ಸರಿಯಾದ ಮಾಹಿತಿಯನ್ನು ಪಡೆದುಕೊಳ್ಳಬೇಕು. ಒಂದು ವೇಳೆ, ನೀವು ಎಸ್‌ಬಿಐ ಗ್ರಾಹಕರಾಗಿದ್ದಾರೆ, ಇಂಥ ವಂಚನೆಯ ಸಂದೇಶಗಳ ಕುರಿತು report.phishing@sbi.co.in ಮೂಲಕ ರಿಪೋರ್ಟ್ ಮಾಡಬಹುದು.

ಇದನ್ನೂ ಓದಿ: Fact Check: ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆದ್ದಿದ್ದಕ್ಕೆ ಪಾಕ್‌ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದು ನಿಜವೇ? ಇಲ್ಲಿದೆ ಮಾಹಿತಿ

ನಿಮ್ಮ ಖಾತೆಯನ್ನು ನವೀಕರಣ ಮಾಡಬೇಕು ಅಥವಾ ಗುರುತು ದೃಢೀಕರಣದ ಅಗತ್ಯವಿದೆ ಎಂದು ಹೇಳಿಕೊಂಡು ಕರೆಗಳು, ಮತ್ತು ಇಮೇಲ್‌ಗಳು, ಸಂದೇಶಗಳಿಗೆ ಯಾವುದೇ ಕಾರಣಕ್ಕೂ ಪ್ರತಿಕ್ರಿಯಿಸಲು ಹೋಗಬೇಡಿ ಎಂದು ಎಲ್ಲ ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಎಚ್ಚರಿಸುತ್ತಲೇ ಇರುತ್ತವೆ. ಜಾಗೃತಿಯನ್ನು ಮೂಡಿಸುವುದಕ್ಕಾಗಿ ಸಂದೇಶಗಳನ್ನು ಕೂಡ ಕಳುಹಿಸುತ್ತೇವೆ. ಹಾಗಾಗಿ, ಇಂಥ ಅನುಮಾನಾಸ್ಪದರ ಸಂದೇಶಗಳ ಬಗ್ಗೆ ಯಾವಾಗಲೂ ಎಚ್ಚರಿಕೆಯನ್ನು ವಹಿಸಬೇಕಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Dalit Student: ದೇಶ, ರಾಮನ ವಿರೋಧ; ದಲಿತ ಪಿಎಚ್‌.ಡಿ ವಿದ್ಯಾರ್ಥಿಯ ಅಮಾನತು!

Dalit Student: ಮುಂಬೈನಲ್ಲಿರುವ ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸಸ್‌ ಸಂಸ್ಥೆಯಲ್ಲಿ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದ ದಲಿತ ವಿದ್ಯಾರ್ಥಿಯನ್ನು ಆಡಳಿತ ಮಂಡಳಿಯು ಎರಡು ವರ್ಷಗಳವರೆಗೆ ಅಮಾನತು ಮಾಡಿದೆ. ಈತನನ್ನು ಸಂಸ್ಥೆಯ ಹೆಸರಿನಲ್ಲಿ ಪ್ರತಿಭಟನೆ ನಡೆಸಿದ್ದು ಸೇರಿ ಹಲವು ಕಾರಣಗಳಿಂದಾಗಿ ಅಮಾನತುಗೊಳಿಸಲಾಗಿದೆ. ಎರಡು ವರ್ಷಗಳವರೆಗೆ ಈತನು ಕ್ಯಾಂಪಸ್‌ನೊಳಗೆ ಪ್ರವೇಶಕ್ಕೂ ನಿರ್ಬಂಧಿಸಲಾಗಿದೆ.

VISTARANEWS.COM


on

Dalit Student
Koo

ಮುಂಬೈ: ಟಾಟಾ ಇನ್‌ಸ್ಟಿಟ್ಯೂಟ್‌ ಆಫ್‌ ಸೋಷಿಯಲ್‌ ಸೈನ್ಸಸ್‌ (TISS) ಸಂಸ್ಥೆಯು ಪಿಎಚ್‌.ಡಿ ಅಧ್ಯಯನ ಮಾಡುತ್ತಿರುವ ದಲಿತ ವಿದ್ಯಾರ್ಥಿಯೊಬ್ಬನನ್ನು (Dalit Student) ಎರಡು ವರ್ಷಗಳವರೆಗೆ ಅಮಾನತು ಮಾಡಿದೆ. ದೇಶ ಹಾಗೂ ಭಗವಾನ್‌ ಶ್ರೀರಾಮನ ವಿರುದ್ಧದ ಕೃತ್ಯಗಳಿಂದಾಗಿ ರಾಮದಾಸ್‌ ಪ್ರಿನಿ ಶಿವನದನ್‌ (Ramadas Prini Sivanadan) ಎಂಬ ವಿದ್ಯಾರ್ಥಿಯನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ಟಿಐಎಸ್‌ಎಸ್‌ ಕ್ರಮದ ಕುರಿತು ಪರ-ವಿರೋಧ ಚರ್ಚೆಯಾಗುತ್ತಿವೆ. ಕೆಲ ವಿದ್ಯಾರ್ಥಿ ಸಂಘಟನೆಗಳು ಟಿಐಎಸ್‌ಎಸ್‌ ಕ್ರಮವನ್ನು ಖಂಡಿಸಿವೆ.

ಕೇರಳದ ವಯನಾಡು ಮೂಲದ ರಾಮದಾಸ್‌ ಪ್ರಿನಿ ಶಿವನದನ್‌ ಎಂಬಾತನನ್ನು ಎರಡು ವರ್ಷಗಳವರೆಗೆ ಅಮಾನತುಗೊಳಿಸಿ ಸಂಸ್ಥೆಯ ಆಡಳಿತ ಮಂಡಳಿಯು ಆದೇಶ ಹೊರಡಿಸಿದೆ. ಮುಂಬೈನಲ್ಲಿರುವ ಟಿಐಎಸ್‌ಎಸ್‌ ಕ್ಯಾಂಪಸ್‌ನಲ್ಲಿ ಈತನು ಡೆವಲಪ್‌ಮೆಂಟ್‌ ಸ್ಟಡೀಸ್‌ ವಿಭಾಗದಲ್ಲಿ ಪಿಎಚ್‌.ಡಿ ಅಧ್ಯಯನ ಮಾಡುತ್ತಿದ್ದ. ಈತನ ಅಮಾನತು ಮಾತ್ರವಲ್ಲ, ಕ್ಯಾಂಪಸ್‌ ಪ್ರವೇಶಕ್ಕೂ ಆಡಳಿತ ಮಂಡಳಿಯು ನಿರ್ಬಂಧ ವಿಧಿಸಿದೆ.

ಟಿಐಎಸ್‌ಎಸ್‌ ಹೇಳುವುದೇನು?

ಟಿಐಎಸ್‌ಎಸ್‌ ಕ್ಯಾಂಪಸ್‌ನಲ್ಲಿ ಒಬ್ಬ ವಿದ್ಯಾರ್ಥಿಯ ವರ್ತನೆ ಹೇಗಿರಬೇಕು ಎಂಬ ನಿಯಮಗಳ ವಿರುದ್ಧ ರಾಮದಾಸ್‌ ಪ್ರಿನಿ ಶಿವನದನ್‌ ನಡೆದುಕೊಂಡಿದ್ದಾರೆ. ಇದೇ ಕಾರಣಕ್ಕಾಗಿ, ಕಳೆದ ಮಾರ್ಚ್‌ 7ರಂದು ರಾಮದಾಸ್‌ ಪ್ರಿನಿ ಶಿವನದನ್‌ಗೆ ಸಂಸ್ಥೆಯು ಶೋಕಾಸ್‌ ನೋಟಿಸ್ ಹೊರಡಿಸಿತ್ತು. ಇದಾದ ಬಳಿಕ ಅಂದರೆ, ಏಪ್ರಿಲ್‌ 18ರಂದು ರಾಮದಾಸ್‌ ಪ್ರಿನಿ ಶಿವನದನ್‌ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಸಂಸ್ಥೆಯ ನಿಯಮಗಳ ವಿರುದ್ಧವಾಗಿ ನಡೆದುಕೊಂಡಿರುವುದು, ಅಶಿಸ್ತು ಸೇರಿ ಹಲವು ಕಾರಣಗಳಿಂದಾಗಿ ಅಮಾನತುಗೊಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

ರಾಮದಾಸ್‌ ಪ್ರಿನಿ ಶಿವನದನ್‌ ಹಿನ್ನೆಲೆ ಏನು?

ಎಡಪಂಥೀಯ ಸಿದ್ಧಾಂತಗಳಿಂದ ಪ್ರೇರೇಪಿತವಾಗಿ ಕಟ್ಟಿರುವ ಪ್ರೊಗ್ರೆಸ್ಸಿವ್‌ ಸ್ಟುಡೆಂಟ್ಸ್‌ ಫೋರಂ (PSF) ಸಂಘಟನೆಗೆ ರಾಮದಾಸ್‌ ಪ್ರಿನಿ ಶಿವನದನ್‌ ಪ್ರಧಾನ ಕಾರ್ಯದರ್ಶಿಯಾಗಿದ್ದಾನೆ. ಕಳೆದ ಜನವರಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸಿದ ಪ್ರತಿಭಟನೆಯಲ್ಲಿ ಟಿಐಎಸ್‌ಎಸ್‌ ಸಂಸ್ಥೆಯಲ್ಲಿ ಹೆಸರಿನಲ್ಲಿ ಸಂಸತ್ತಿನ ಎದುರು ಈತನ ನೇತೃತ್ವದಲ್ಲಿಯೇ ಪ್ರತಿಭಟನೆ ನಡೆಸಲಾಗಿದೆ. ಅಲ್ಲದೆ, ಶ್ರೀರಾಮನ ಕುರಿತು ಬಿಬಿಸಿಯು ಕೆಟ್ಟದಾಗಿ ಚಿತ್ರಿಸಿರುವ ಡಾಕ್ಯುಮೆಂಟರಿಯೊಂದನ್ನು ಕೂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಕೂಡ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ಈತನ ವಿರುದ್ಧ ದೇಶವಿರೋಧದ ಆರೋಪ ಏಕೆ ಬಂದಿದೆ ಎಂಬುದಕ್ಕೆ ಸ್ಪಷ್ಟ ಕಾರಣ ಗೊತ್ತಾಗಿಲ್ಲ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಶಿಕ್ಷಣ ನೀತಿ (NEP) ಜಾರಿ ಖಂಡಿಸಿಯೂ ಈತ ಪ್ರತಿಭಟನೆ ನಡೆಸಿದ್ದ ಎನ್ನಲಾಗಿದೆ.

ಇದನ್ನೂ ಓದಿ: ನಾಟಕದಲ್ಲಿ ಸೀತೆ ಧೂಮಪಾನ ಮಾಡುವ ದೃಶ್ಯ; ಪ್ರೊಫೆಸರ್‌ ಸೇರಿ 6 ವಿದ್ಯಾರ್ಥಿಗಳ ಬಂಧನ

Continue Reading

ದೇಶ

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Lok Sabha Election: ಛತ್ತೀಸ್‌ಗಢದ ಪುವರ್ತಿ ಗ್ರಾಮದಲ್ಲಿ 352 ಮತದಾರರಿದ್ದಾರೆ. ಗ್ರಾಮಕ್ಕೆ ತೆರಳಿದ ಚುನಾವಣೆ ಅಧಿಕಾರಿಗಳು ಮತದಾನಕ್ಕಾಗಿ ಎಲ್ಲ ವ್ಯವಸ್ಥೆ ಮಾಡಿದ್ದರು. ಮತಗಟ್ಟೆ ಬಳಿ ಭದ್ರತಾ ಸಿಬ್ಬಂದಿಯು ಸಕಲ ರೀತಿಯಲ್ಲಿ ಭದ್ರತೆ ಒದಗಿಸಿದ್ದರು. ಇಷ್ಟಾದರೂ ಗ್ರಾಮದ ಒಬ್ಬನೇ ಒಬ್ಬ ಮತದಾರ ಹಕ್ಕು ಚಲಾಯಿಸಿಲ್ಲ ಎಂದು ಚುನಾವಣೆ ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ. ಮಾವೋವಾದಿ ನಾಯಕನ ಭಯದಿಂದಾಗಿ ಜನ ಮತದಾನ ಮಾಡಿಲ್ಲ ಎಂದು ತಿಳಿದುಬಂದಿದೆ.

VISTARANEWS.COM


on

Lok Sabha Election
Koo

ರಾಯ್‌ಪುರ: ಲೋಕಸಭೆ ಚುನಾವಣೆಯ (Lok Sabha Election 2024) ಮೊದಲ ಹಂತದ ಮತದಾನ ಶುಕ್ರವಾರ (ಏಪ್ರಿಲ್‌ 19) ಮುಕ್ತಾಯಗೊಂಡಿದೆ. 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 102 ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಶೇ.60ರಷ್ಟು ಮತದಾನ ದಾಖಲಾಗಿದೆ. ಕೆಲವು ಪ್ರದೇಶಗಳು ಹೊರತುಪಡಿಸಿ ಎಲ್ಲೆಡೆ ಶಾಂತಿಯುತವಾಗಿಯೇ ಮತದಾನ ನಡೆದಿದೆ. ಆದರೆ, ಛತ್ತೀಸ್‌ಗಢದ ಬಸ್ತಾರ್‌ ಲೋಕಸಭೆ ಕ್ಷೇತ್ರದ ವ್ಯಾಪ್ತಿಯ ಪುವರ್ತಿ ಎಂಬ ಗ್ರಾಮದಲ್ಲಿ (Puvarti Village) ಮಾತ್ರ ಶುಕ್ರವಾರ ಒಬ್ಬರೇ ಒಬ್ಬರು ಮತದಾನ ಮಾಡಿಲ್ಲ. ಇದು ಮಾವೋವಾದಿಯೊಬ್ಬನ ಊರಾಗಿದ್ದು, ಆತನ ಭಯದಿಂದಾಗಿಒಬ್ಬರೂ ಮತದಾನ ಮಾಡಲ್ಲ ಎಂದು ತಿಳಿದುಬಂದಿದೆ.

ಹೌದು, ಪುವರ್ತಿ ಗ್ರಾಮವು ನಕ್ಸಲ್‌ ನಾಯಕ ಹಿದ್ಮಾ ಎಂಬಾತನ ಹುಟ್ಟೂರಾಗಿದೆ. ಇಡೀ ಬಸ್ತಾರ್‌ ವ್ಯಾಪ್ತಿಯಲ್ಲಿ ಹಿದ್ಮಾನ ಪ್ರಭಾವ ಇದೆ. ಈತನ ಭಯವು ಜನರಲ್ಲಿ ಹೆಚ್ಚು ಕಾಡುತ್ತಿದೆ.‌ ಬಸ್ತಾರ್‌ ಪ್ರದೇಶದಲ್ಲಿಯೇ ಎಲ್ಲಿಯೇ ಮಾವೋವಾದಿಗಳ ದಾಳಿಯಾಗಲಿ, ಭದ್ರತಾ ಸಿಬ್ಬಂದಿ ಸೇರಿ ಸಾರ್ವಜನಿಕರ ಹತ್ಯೆಯಾಗಲಿ, ಆಗೆಲ್ಲ ಹಿದ್ಮಾನ ಹೆಸರೇ ಮುನ್ನೆಲೆಗೆ ಬರುತ್ತದೆ. ಈತನೇ ದಾಳಿಯ ರೂವಾರಿ ಎಂಬುದು ಜನರ ದೃಢ ನಂಬಿಕೆಯಾಗಿರುತ್ತದೆ. ಇದೇ ಕಾರಣಕ್ಕಾಗಿ, ಪುವರ್ತಿ ಗ್ರಾಮದಲ್ಲಿ ಶುಕ್ರವಾರ ಮತದಾನಕ್ಕೆ ಸಕಲ ವ್ಯವಸ್ಥೆ ಮಾಡಿದರೂ, ಭದ್ರತಾ ಸಿಬ್ಬಂದಿಯು ಹೆಚ್ಚು ಭದ್ರತೆ ಒದಗಿಸಿದರೂ ಯಾರೊಬ್ಬರೂ ಮತದಾನ ಮಾಡದಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ದೊಡ್ಡ ಅಣಕವಾಗಿದೆ.

ಕೆಲವೆಡೆ ಇವಿಎಂ ದೋಷ

ತಮಿಳುನಾಡು, ಅರುಣಾಚಲ ಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಮತ್ತು ಅಸ್ಸಾಂನ ಕೆಲವು ಬೂತ್ ಗಳಲ್ಲಿ ಸಣ್ಣ ಪ್ರಮಾಣದ ಇವಿಎಂ ದೋಷಗಳು ವರದಿಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಸಂಜೆ 5 ಗಂಟೆಯವರೆಗೆ ಶೇಕಡಾ 77.57, ಅಸ್ಸಾಂನಲ್ಲಿ ಶೇಕಡಾ 70.77 ಮತ್ತು ಮೇಘಾಲಯದಲ್ಲಿ ಶೇಕಡಾ 69.91 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

Lok sabha election-2024

ಪಶ್ಚಿಮ ಬಂಗಾಳದಲ್ಲಿ ಹಿಂಸಾಸಾರ

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಕ್ಷೇತ್ರದಲ್ಲಿ ಹಿಂಸಾಚಾರ ನಡೆದಿದೆ. ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘರ್ಷಣೆ ನಡೆಸಿದ್ದು, ಮತದಾನ ಹಿಂಸಾಚಾರ, ಮತದಾರರ ಬೆದರಿಕೆ ಮತ್ತು ಚುನಾವಣಾ ಏಜೆಂಟರ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ಕ್ರಮವಾಗಿ 80 ಮತ್ತು 39 ದೂರುಗಳನ್ನು ದಾಖಲಾಗಿವೆ. ಸಂಘರ್ಷ ಪೀಡಿತ ಮಣಿಪುರದಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.46ರಷ್ಟು ಮತದಾನವಾಗಿದೆ.

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಥೊಂಗ್ಜು ವಿಧಾನಸಭಾ ಕ್ಷೇತ್ರದಲ್ಲಿ ಸ್ಥಳೀಯರು ಮತ್ತು ಅಪರಿಚಿತ ವ್ಯಕ್ತಿಗಳ ನಡುವೆ ವಾಗ್ವಾದ ನಡೆದಿದೆ. ಛತ್ತೀಸ್​ಗಢದ ನಕ್ಸಲ್ ಪೀಡಿತ ಬಸ್ತಾರ್ ಲೋಕಸಭಾ ಕ್ಷೇತ್ರದಲ್ಲಿ ಶೇಕಡಾ 63.41 ರಷ್ಟು ಮತದಾರರು ಮತ ಚಲಾಯಿಸಿದ್ದಾರೆ. ಅಲ್ಲಿ ಗ್ರೆನೇಡ್ ಆಕಸ್ಮಿಕವಾಗಿ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಿಆರ್​ಪಿಎಫ್​ ಜವಾನ ಗಾಯಗೊಂಡಿದ್ದಾರೆ. ಮತ್ತೊಂದು ಘಟನೆಯಲ್ಲಿ ಐಇಡಿ ಸ್ಫೋಟ ಸಂಭವಿಸಿದೆ.

ಇದನ್ನೂ ಓದಿ: Narendra Modi : ಮತದಾನ ಮಾಡಿದವರಿಗೆ ಥ್ಯಾಂಕ್ಸ್ ಹೇಳಿದ ಮೋದಿ; ಎನ್​ಡಿಎಗೆ ಮತ ನೀಡಿದ್ದಾರೆ ಎಂದ ಪ್ರಧಾನಿ

Continue Reading

ಪ್ರಮುಖ ಸುದ್ದಿ

Trust Of The Nation 2024 : ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿಯಾಗುವುದು ಖಚಿತ; ಡೈಲಿಹಂಟ್ ಸಮೀಕ್ಷೆ

Trust Of The Nation 2024: ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 61% ಜನರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತುಂಬಾ ಸಂತೋಷವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳನ್ನು ಭಾರತದಾದ್ಯಂತ ವಿವಿಧ ಜನ ಸಮುದಾಯ ಮತ್ತು ವೃತ್ತಿಪರ ಗುಂಪುಗಳಿಂದ ಸಂಗ್ರಹಿಸಲಾಗಿದೆ. ಹೀಗಾಗಿ ಅಭಿಪ್ರಾಯಗಳು ಬಹುತೇಕ ಜನರ ಇಂಗಿತದ ಪ್ರತಿಫಲನವಾಗಿದೆ.

VISTARANEWS.COM


on

Trust Of The Nation 2024
Koo

ನವದೆಹಲಿ: 2024 ರ ಲೋಕಸಭಾ ಚುನಾವಣೆಯ (Lok Sabha Election) ಮೊದಲ ಹಂತ ಏಪ್ರಿಲ್​ 19ರಂದು ನಡೆದಿದೆ. ಇನ್ನೂ ಆರು ಹಂತಗಳ ಮತದಾನ ಪ್ರಕ್ರಿಯೆ ಬಾಕಿ ಉಳಿದಿದೆ. ಮತದಾನ ಜಾತ್ರೆಯ ಹಿನ್ನೆಲೆಯಲ್ಲಿ ಸ್ಥಳೀಯ ಭಾಷೆಗಳ ಕಂಟೆಂಟ್​ ಡಿಸ್ಕವರಿ ಫ್ಲ್ಯಾಟ್​ಫಾರ್ಮ್​ “ಡೈಲಿಹಂಟ್’ (Trust Of The Nation 2024) ನಡೆಸಿದ “ಟ್ರಸ್ಟ್ ಆಫ್ ದಿ ನೇಷನ್” ಸಮೀಕ್ಷೆಯು ಭಾರತದ ಮುಂದಿನ ಪ್ರಧಾನಿ ಯಾರಾಗುತ್ತಾರೆ ಎಂಬುದನ್ನು ಬಹಿರಂಗ ಮಾಡಿದೆ. 77 ಲಕ್ಷಕ್ಕೂ ಹೆಚ್ಚು ಮತದಾರರು ಈ ಸಮೀಕ್ಷೆಯಲ್ಲಿ ಭಾಗಿಯಾಗಿದ್ದು ಭಾರತದ ಉತ್ತಮ ನಾಯಕತ್ವ, ಸಮರ್ಥ ಆರ್ಥಿಕ ನಿರ್ವಹಣೆ ಮತ್ತು ಪ್ರಸ್ತುತ ಸರ್ಕಾರದ ಒಟ್ಟಾರೆ ಕಾರ್ಯಕ್ಷಮತೆಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯಗಳ ಇಲ್ಲ ವ್ಯಕ್ತಗೊಂಡಿವೆ. ಈ ಸಮೀಕ್ಷೆಯ ಸಮಗ್ರ ವಿವರ ಈ ಕೆಳಗೆ ನೀಡಲಾಗಿದೆ.

ಸರ್ಕಾರ ಮತ್ತು ಪ್ರಧಾನಿ ಮೋದಿ ನಾಯಕತ್ವಕ್ಕೆ ಜನರ ಮೆಚ್ಚುಗೆ

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ 61% ಜನರು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಗ್ಗೆ ತುಂಬ ಸಂತೋಷವಾಗಿದ್ದಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಅಭಿಪ್ರಾಯಗಳನ್ನು ಭಾರತದಾದ್ಯಂತ ವಿವಿಧ ಜನ ಸಮುದಾಯ ಮತ್ತು ವೃತ್ತಿಪರ ಗುಂಪುಗಳಿಂದ ಸಂಗ್ರಹಿಸಲಾಗಿದೆ. ಹೀಗಾಗಿ ಅಭಿಪ್ರಾಯಗಳು ಬಹುತೇಕ ಜನರ ಇಂಗಿತದ ಪ್ರತಿಫಲನವಾಗಿದೆ. ಕೆಲವು ಪ್ರದೇಶಗಳಲ್ಲಿ ಗೃಹಿಣಿಯರು ಮತ್ತು ಉದ್ಯಮಿಗಳ ನಡುವೆ ಭಿನ್ನಾಭಿಪ್ರಾಯಗಳು ವ್ಯಕ್ತಗೊಂಡಿವೆ.

ಈ ಬಾರಿಯ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಶೇ.63ರಷ್ಟು ಮಂದಿ ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಜಯಭೇರಿ ಬಾರಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ವಿವರವಾದ ಅಂಕಿ ಅಂಶಗಳು ಪಿಎಂ ಮೋದಿಯವರನ್ನು ಭಾರತದ ಬಹುತೇಕ ರಾಜ್ಯಗಳ ಜನರು ತಮ್ಮ ನೆಚ್ಚಿನ ನಾಯಕ ಎಂದು ಒಪ್ಪಿಕೊಂಡಿದ್ದಾರೆ. ಈ ವಿಚಾರದಲ್ಲಿ ತಮಿಳುನಾಡು ಮತ್ತು ಕೇರಳದಲ್ಲಿ ವ್ಯತಿರಿಕ್ತ ಅಭಿಪ್ರಾಯಗಳು ಮೂಡಿ ಬಂದಿವೆ.

ಪ್ರಧಾನಿ ಮೋದಿಯ ಆರ್ಥಿಕ ಪ್ರಗತಿ ಯೋಜನೆಗೆ ಜನರ ಮೆಚ್ಚುಗೆ

ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸರ್ಕಾರವು ಆರ್ಥಿಕತೆಯನ್ನು ನಿರ್ವಹಿಸಿದ ರೀತಿಗೆ ಸಕಾರಾತ್ಮಕ ಪ್ರತಿಕ್ರಿಯೆ ದೊರೆತಿದೆ, 60% ರಷ್ಟು ಜನರು ದೇಶದ ಆರ್ಥಿಕ ಪ್ರಗತಿಯ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ್ದಾರೆ. ಸಮೀಕ್ಷೆಯು ನಡೆದ ಬಹುತೇಕ ಸ್ಥಳಗಳಲ್ಲಿ ಈ ಅಭಿಪ್ರಾಯವೇ ದೊರಕಿದೆ. ಆದರೂ ದಕ್ಷಿಣದ ಕೆಲವು ರಾಜ್ಯಗಳು ಅದೇ ಉತ್ಸಾಹವನ್ನು ತೋರಿಸಿಲ್ಲ. ಇದು ಪ್ರಾದೇಶಿಕ ಆರ್ಥಿಕ ಅಸಮಾನತೆಯ ಕೂಗು ವ್ಯಕ್ತಗೊಂಡಿದೆ.

‘ಫಿರ್ ಏಕ್ ಬಾರ್ ಮೋದಿ ಸರ್ಕಾರ್’: ಮತ್ತೆ ಬೇಕು ಮೋದಿ

ಶೇ.64ರಷ್ಟು ಮಂದಿ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಿ ಮುಂದುವರಿಯಬೇಕು ಎಂದು ಬಯಸಿದ್ದಾರೆ. ಯುವ ಮತದಾರರಿಂದ ಹಿಡಿದು ನಿವೃತ್ತರ ತನಕ ಪ್ರಧಾನಿ ಮೋದಿಯವರ ವಿಶಾಲ ಆಕರ್ಷಣೆಯನ್ನು ಪ್ರದರ್ಶಿಸಿದೆ. ಇದು ರಾಷ್ಟ್ರೀಯ ನಾಯಕರಾಗಿ ಅವರ ಶಕ್ತಿಯನ್ನು ಹೇಳಿದೆ.

ವಿದೇಶಾಂಗ ನೀತಿ ನಿರ್ಧಾರಗಳಿಗೆ ರಾಷ್ಟ್ರದ ಒಮ್ಮತ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪಾಲಿಸುತ್ತಿರುವ ವಿದೇಶಾಂಗ ನೀತಿಗೆ ಸಮೀಕ್ಷೆಯಲ್ಲಿ ಗಣನೀಯ ಬೆಂಬಲ ದೊರೆತಿದೆ. ಅಂತಾರಾಷ್ಟ್ರೀಯ ವ್ಯವಹಾರಗಳನ್ನು ನಿರ್ವಹಿಸುವಲ್ಲಿ ಸರ್ಕಾರದ ಕಾರ್ಯಕ್ಷಮತೆ ಉತ್ತಮವಾಗಿದೆ ಎಂದು 64% ಜನರು ರೇಟಿಂಗ್ ನೀಡಿದ್ದಾರೆ. ಇದು ಸರ್ಕಾರದ ರಾಜತಾಂತ್ರಿಕ ಕಾರ್ಯತಂತ್ರಗಳು ಮತ್ತು ಅಂತಾರಾಷ್ಟ್ರೀಯ ಸಂಬಂಧಗಳಿಗೆ ವ್ಯಾಪಕ ಬೆಂಬಲ ದೊರಕಿದೆ

ರಾಷ್ಟ್ರೀಯ ಬಿಕ್ಕಟ್ಟುಗಳ ಸ್ಪಂದನೆಗೂ ಶಹಬ್ಬಾಸ್​

ರಾಷ್ಟ್ರೀಯ ಬಿಕ್ಕಟ್ಟಿನ ಸಮಯದಲ್ಲಿ ಪ್ರಧಾನಿ ಮೋದಿಯವರ ನಾಯಕತ್ವವನ್ನು ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಹೆಚ್ಚಿನವರು ಶ್ಲಾಘಿಸಿದ್ದಾರೆ. 63.6% ಜನರು ತುಂಬಾ ಸಂತೋಷವಾಗಿದ್ದಾರೆ. ಪ್ರಕ್ಷುಬ್ಧ ಸಮಯದಲ್ಲಿ ಪಿಎಂ ಮೋದಿಯವರ ಆಡಳಿತದ ಚಾತುರ್ಯವನ್ನು ಸಮೀಕ್ಷೆಯಲ್ಲಿ ಪಾಲ್ಗೊಂಡವರು ಶಹಬ್ಬಾಸ್ ಎಂದಿದ್ದಾರೆ.

ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಆಭಾರಿ

ಸಮೀಕ್ಷೆಯಲ್ಲಿ ಭಾಗವಹಿಸಿದವರಲ್ಲಿ ಅರ್ಧಕ್ಕಿಂತ ಹೆಚ್ಚು, ಅಂದರೆ 53.9% ಕ್ಕಿಂತ ಹೆಚ್ಚು, ಸರ್ಕಾರ ಕೈಗೊಂಡ ಕಲ್ಯಾಣ ಯೋಜನೆಗಳು ಮತ್ತು ಜನಪರ ಚಟುವಟಿಕೆಗಳಿಂದ ಸಂತೋಷವಾಗಿದ್ದಾರೆ. ನಿವೃತ್ತ ವ್ಯಕ್ತಿಗಳು ಮತ್ತು ವಿದ್ಯಾರ್ಥಿಗಳು ನೀಡಿರುವ ಬೆಂಬಲ ಗಮನಾರ್ಹವಾಗಿ ಹೆಚ್ಚಾಗಿದೆ, ಎರಡೂ ಗುಂಪುಗಳು ಸುಮಾರು 59% ತೃಪ್ತಿ ಮಟ್ಟವನ್ನು ತೋರಿಸಿವೆ. ಈ ಗುಂಪುಗಳಿಗೆ ನೇರವಾಗಿ ಪ್ರಯೋಜನವಾಗುವ ನಿರ್ದಿಷ್ಟ ಕಾರ್ಯಕ್ರಮಗಳ ಪರಿಣಾಮ ಇದು. ಉದಾಹರಣೆಗೆ; ವಯಸ್ಸಾದವರಿಗೆ ಪಿಂಚಣಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಬ್ಸಿಡಿಗಳು.

ಮೋದಿಯ ಭ್ರಷ್ಟಾಚಾರ ವಿರೋಧಿ ಕ್ರಮ

ಮೋದಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಸರ್ಕಾರದ ಕ್ರಮಕ್ಕೆ ಶೇ.63.5ರಷ್ಟು ಮಂದಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಜನಸಂಖ್ಯಾ ದೃಷ್ಟಿಕೋನದಿಂದ, ವಿದ್ಯಾರ್ಥಿಗಳು (59%) ಮತ್ತು ನಿವೃತ್ತ (59%) ವ್ಯಕ್ತಿಗಳು ಉದ್ಯಮಿಗಳು ಹೆಚ್ಚು ಸಂತೋಷ ವ್ಯಕ್ತಪಡಿಸಿದ್ದಾರೆ.

ಕಠಿಣ ಪರಿಶ್ರಮಿ ಮತ್ತು ಪ್ರಾಮಾಣಿಕ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರ ಗುಣ ಲಕ್ಷಣಗಳ ಬಗ್ಗೆಯೂ ಪ್ರಶ್ನೆ ಕೇಳಲಾಗಿತ್ತು. ಪ್ರಮುಖವಾಗಿ ಅವರ ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮಕ್ಕೆ ಬೆಂಬಲ ದೊರಕಿದೆ. ಶೇ.41ರಷ್ಟು ಮಂದಿ ಅವರ ಈ ಗುಣವನ್ನು ಮೆಚ್ಚಿದ್ದಾರೆ. ನಿವೃತ್ತರು ಮತ್ತು ವಿದ್ಯಾರ್ಥಿಗಳಲ್ಲಿ ಈ ಮೆಚ್ಚುಗೆ ವಿಶೇಷವಾಗಿ ವ್ಯಕ್ತಗೊಂಡಿದೆ. ಕ್ರಮವಾಗಿ 47% ಮತ್ತು 43% ಜನರು ಪ್ರಧಾನಿ ಮೋದಿಯವರ ಸಮಗ್ರತೆ ಮತ್ತು ಶ್ರದ್ಧೆಯನ್ನು ಶ್ಲಾಘಿಸಿದ್ದಾರೆ.

18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯುವ ಮತದಾರರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟವರು ಪ್ರಧಾನಿಯ ಈ ವ್ಯಕ್ತಿತ್ವದ ಬಗ್ಗೆ ಹೆಚ್ಚಿನ ಮೆಚ್ಚುಗೆ ತೋರಿದ್ದಾರೆ. ಅವರ ಪಾರದರ್ಶಕ ಮನಸ್ಸು ಮತ್ತು ಶ್ರಮದ ನೀತಿಯನ್ನು ಎತ್ತಿಹಿಡಿದಿದ್ದಾರೆ.

ಸಮೀಕ್ಷೆಯ ಅಂತಿಮ ಹೇಳಿಕೆ ಹೀಗಿದೆ

ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ, ವಿಶೇಷವಾಗಿ ಆರ್ಥಿಕ ನಿರ್ವಹಣೆ, ವಿದೇಶಾಂಗ ನೀತಿ ಮತ್ತು ಬಿಕ್ಕಟ್ಟು ನಿರ್ವಹಣೆ ಬಗ್ಗೆ ಅತಿ ಹೆಚ್ಚು ಮೆಚ್ಚುಗೆ ಶುರುವಾಗಿದೆ. ಮೋದಿಯ ಆಡಳಿತದ ಬಗ್ಗೆ ತುಂಬಾ ಆಶಾವಾದಿಯಾಗಿರುವವರ ಪ್ರಮಾಣವೇ ಹೆಚ್ಚಿದೆ. ಪ್ರಾಮಾಣಿಕ ಮತ್ತು ಕಠಿಣ ಪರಿಶ್ರಮಿ ಎಂದು ಪರಿಗಣಿಸಲ್ಪಟ್ಟ ನಾಯಕನಾಗಿ ಪ್ರಧಾನಿ ಮೋದಿಯವರು ಭಾರತೀಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೋದಿ ನೇತೃತ್ವದಲ್ಲಿ ಭಾರತವು ಸಂಕೀರ್ಣ ದೇಶೀಯ ಮತ್ತು ಅಂತಾರರಾಷ್ಟ್ರೀಯ ಸಮಸ್ಯೆಗಳನ್ನು ನಿರ್ವಹಣೆ ಮಾಡಿರುವುದು ಕೂಡ ಜನ ಮೆಚ್ಚುಗೆ ಗಳಿಸಿದೆ.

Continue Reading

ದೇಶ

Narendra Modi: ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲು; ಮೋದಿ ಭವಿಷ್ಯ!

Narendra Modi: ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಗಿದಿದ್ದು, ಎರಡನೇ ಹಂತದ ಮತದಾನಕ್ಕಾಗಿ ದೇಶಾದ್ಯಂತ ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲ, ಅಮೇಥಿಯಂತೆ ವಯನಾಡಿನಲ್ಲೂ ರಾಹುಲ್‌ ಗಾಂಧಿಗೆ ಸೋಲಾಗಲಿದೆ ಎಂದು ಹೇಳಿದ್ದಾರೆ.

VISTARANEWS.COM


on

Narendra Modi
Koo

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. “ಏಪ್ರಿಲ್‌ 26ರಂದು ವಯನಾಡಿನಲ್ಲಿ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್‌ ಕುತೂಹಲದಿಂದ ಕಾಯುತ್ತಿದೆ. ಕಾಂಗ್ರೆಸ್‌ನ ಮಹಾರಾಜ (ಶೆಹ್ಜಾದ) ಹೇಗೆ ಅಮೇಥಿಯಿಂದ ಓಡಿದರೋ, ವಯನಾಡಿನಲ್ಲೂ (Wayanad) ಅವರು ಓಡುತ್ತಾರೆ” ಎಂದು ಮಹಾರಾಷ್ಟ್ರದ ನಾಂದೇಡ್‌ನಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಕುಟುಕಿದ್ದಾರೆ.

“ವಯನಾಡಿನಲ್ಲಿ ಕಾಂಗ್ರೆಸ್‌ ಬಿಕ್ಕಟ್ಟು ಎದುರಿಸುತ್ತಿದೆ. ಕಾಂಗ್ರೆಸ್‌ನ ಮಹಾರಾಜ ಹಾಗೂ ಅವರ ಆಪ್ತರು ಮತದಾನಕ್ಕಾಗಿ ಕಾಯುತ್ತಿದ್ದಾರೆ. ಆದರೆ, ಅಮೇಥಿಯಲ್ಲಿ ಅವರು ಓಡಿದಂತೆ, ವಯನಾಡಿನಿಂದಲೂ ಓಡಿಹೋಗುತ್ತಾರೆ. ಇದನ್ನು ನೀವು ಸುಲಭವಾಗಿ ಊಹಿಸಬಹುದು. ಚುನಾವಣೆಯ ಬಳಿಕ ರಾಹುಲ್‌ ಗಾಂಧಿ ಅವರಿಗೆ ಕಾಂಗ್ರೆಸ್‌ ಮತ್ತೊಂದು ಸುರಕ್ಷಿತ ಕ್ಷೇತ್ರವನ್ನು ಹುಡುಕಬೇಕಾಗುತ್ತದೆ” ಎಂದು ಛೇಡಿಸಿದರು.

ಇಂಡಿಯಾ ಒಕ್ಕೂಟಕ್ಕೂ ಟಾಂಗ್‌

“ಕಾಂಗ್ರೆಸ್‌ ಮಾತ್ರವಲ್ಲ ಇಂಡಿಯಾ ಒಕ್ಕೂಟದಲ್ಲೂ ಭಾರಿ ಬಿಕ್ಕಟ್ಟು ಉಂಟಾಗಿದೆ. ಇದೇ ಕಾರಣಕ್ಕಾಗಿ ಇಂಡಿಯಾ ಒಕ್ಕೂಟದಿಂದ ಒಬ್ಬ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಆ ಮೂಲಕ ನಮ್ಮ ನಾಯಕ ಇವರು ಎಂಬುದಾಗಿ ದೇಶದ ಜನರಿಗೆ ತಿಳಿಸಲು ಆಗಲಿಲ್ಲ. ಏಕೆಂದರೆ, ಇಂಡಿಯಾ ಒಕ್ಕೂಟದ ನಾಯಕರು ಈಗಾಗಲೇ ಸೋಲನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆ ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್‌ ಕೂಡ ಸೋಲನ್ನು ಒಪ್ಪಿಕೊಂಡಿದೆ” ಎಂಬುದಾಗಿ ವಾಗ್ದಾಳಿ ನಡೆಸಿದರು.

“ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಗೆ ಸೋಲು ಕಟ್ಟಿಟ್ಟ ಬುತ್ತಿಯಾಗಿದೆ. ಹಾಗಾಗಿ, ಬೇರೆ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಶ್ರಮ ವಹಿಸುವುದರಲ್ಲಿ ಯಾವುದೇ ಉಪಯೋಗವಿಲ್ಲ. ಹಾಗಾಗಿ, ನೀವು ಪಕ್ಷಗಳ ಪರವಾಗಿ ಕೆಲಸ ಮಾಡುವ ಬದಲು, ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಕೆಲಸ ಮಾಡಿ. ಆಗ, ಇಂದಲ್ಲ, ನಾಳೆ ನಿಮಗೂ ಒಂದು ಸಮಯ, ಅವಕಾಶ ಬರುತ್ತದೆ” ಎಂದು ಪರೋಕ್ಷವಾಗಿ ಚುನಾವಣೆಯಲ್ಲಿ ಪಕ್ಷದ ಪರ ಕೆಲಸ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ” ಎಂದರು.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಕೇರಳದ ವಯನಾಡು ಲೋಕಸಭೆ ಕ್ಷೇತ್ರದಿಂದ ಎರಡನೇ ಬಾರಿ ಸ್ಪರ್ಧಿಸುತ್ತಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ಅವರು ಉತ್ತರ ಪ್ರದೇಶದ ಅಮೇಥಿ ಹಾಗೂ ವಯನಾಡಿನಲ್ಲಿ ಸ್ಪರ್ಧಿಸಿದ್ದರು. ಆದರೆ, ಈ ಬಾರಿ ಅಮೇಥಿಯಲ್ಲಿ ಕಾಂಗ್ರೆಸ್‌ ಇದುವರೆಗೆ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಇದನ್ನೂ ಓದಿ: Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Continue Reading
Advertisement
Vinesh Phogat
ಕ್ರೀಡೆ4 mins ago

Vinesh Phogat: ಖೇಲ್ ರತ್ನ ಪ್ರಶಸ್ತಿಯನ್ನು ಪಾದಚಾರಿ ಮಾರ್ಗದಲ್ಲಿ ತೊರೆದಿದ್ದ ವಿನೇಶ್ ಫೋಗಟ್​ಗೆ ಒಲಿದ ಒಲಿಂಪಿಕ್ಸ್​ ಟಿಕೆಟ್​

Dalit Student
ದೇಶ5 mins ago

Dalit Student: ದೇಶ, ರಾಮನ ವಿರೋಧ; ದಲಿತ ಪಿಎಚ್‌.ಡಿ ವಿದ್ಯಾರ್ಥಿಯ ಅಮಾನತು!

Apricot Benefits
ಆರೋಗ್ಯ18 mins ago

Apricot Benefits: ನಿಮಗೆ ಇಂತಹ ಸಮಸ್ಯೆಗಳಿವೆಯೇ?: ಹಾಗಾದರೆ ನಿತ್ಯವೂ ಆಪ್ರಿಕಾಟ್‌ ತಿನ್ನಿ!

Family health insurance
ಮನಿ ಗೈಡ್19 mins ago

Money Guide: ಕುಟುಂಬಕ್ಕಾಗಿ ಆರೋಗ್ಯ ವಿಮೆ; ಖರೀದಿ ಮುನ್ನ ತಿಳಿದಿರಲಿ ಕೆಲವು ವಿಚಾರ

Modi in Karnataka
ಪ್ರಮುಖ ಸುದ್ದಿ24 mins ago

Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

Modi in Karnataka Govt turns tax city Bengaluru into tanker city and attacks girls too PM Narendra Modi
ಕರ್ನಾಟಕ58 mins ago

Modi in Karnataka: ಟ್ಯಾಕ್ಸ್ ಸಿಟಿ ಬೆಂಗಳೂರನ್ನು ಟ್ಯಾಂಕರ್ ಸಿಟಿ ಮಾಡಿದ ಸರ್ಕಾರ, ಹೆಣ್ಣು ಮಕ್ಕಳ ಮೇಲೂ ಹಲ್ಲೆ: ಮೋದಿ ವಾಗ್ದಾಳಿ

Kalki 2898 AD
ಸಿನಿಮಾ60 mins ago

Kalki 2898 AD: ನಾಳೆ ಮಹತ್ವದ  ಅಪ್‌ಡೇಟ್‌ ನೀಡಲಿದೆ ಪ್ರಭಾಸ್‌ ಅಭಿನಯದ ʼಕಲ್ಕಿ 2898 ಎಡಿʼ ಚಿತ್ರತಂಡ; ಹೊಸ ರಿಲೀಸ್‌ ದಿನಾಂಕ ಘೋಷಣೆ?

Lok Sabha Election
ದೇಶ1 hour ago

Lok Sabha Election: ನಿನ್ನೆ ಈ ಗ್ರಾಮದ ಒಬ್ಬರೂ ಮತ ಹಾಕಲಿಲ್ಲ; ಇದ್ದಿದ್ದು ಯಾರ ಭಯ?

Ashutosh Sharma
ಕ್ರೀಡೆ1 hour ago

Ashutosh Sharma: ಖಿನ್ನತೆಗೆ ಒಳಗಾಗಿದ್ದ ಬಿಗ್​ ಹಿಟ್ಟರ್​ ಅಶುತೋಷ್‌ ಶರ್ಮ; ಕ್ರಿಕೆಟ್​ ಜರ್ನಿಯೇ ರೋಚಕ

DK Shivakumar
ಕರ್ನಾಟಕ1 hour ago

DK Shivakumar: ಮತಯಾಚನೆ ವೇಳೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka Congress snatches Rs 4000 under Kisan Samman says PM Narendra Modi
ಪ್ರಮುಖ ಸುದ್ದಿ3 hours ago

Modi in Karnataka: ಕಿಸಾನ್‌ ಸಮ್ಮಾನ್‌ ಅಡಿ 4 ಸಾವಿರ ರೂಪಾಯಿ ಕಿತ್ತುಕೊಂಡ ರೈತ ವಿರೋಧಿ ಸರ್ಕಾರ ಕಾಂಗ್ರೆಸ್‌: ಮೋದಿ ಕಿಡಿ

Modi in Karnataka HD Deve Gowda attack on Congess
Lok Sabha Election 20243 hours ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20245 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ7 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ8 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ2 days ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ4 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ5 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

ಟ್ರೆಂಡಿಂಗ್‌