SEBI Fine: 2 ಕಂಪನಿ, 7 ಜನಕ್ಕೆ 2.46 ಕೋಟಿ ರೂ. ದಂಡ ವಿಧಿಸಿದ ಸೆಬಿ; ಏನಿದಕ್ಕೆ ಕಾರಣ? Vistara News
Connect with us

ದೇಶ

SEBI Fine: 2 ಕಂಪನಿ, 7 ಜನಕ್ಕೆ 2.46 ಕೋಟಿ ರೂ. ದಂಡ ವಿಧಿಸಿದ ಸೆಬಿ; ಏನಿದಕ್ಕೆ ಕಾರಣ?

SEBI Fine: ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿಯು ಎರಡು ಕಂಪನಿ ಹಾಗೂ ಏಳು ಪ್ರಮೋಟರ್‌ಗಳಿಗೆ ಭಾರಿ ದಂಡ ವಿಧಿಸಿದೆ. ನಿಯಮಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ದಂಡ ವಿಧಿಸಿದೆ.

VISTARANEWS.COM


on

SEBI Imposes Fine
Koo

ನವದೆಹಲಿ: ನಿಯಂತ್ರಕ ಮಾನದಂಡಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಎರಡು ಕಂಪನಿಗಳು ಹಾಗೂ ಏಳು ವ್ಯಕ್ತಿಗಳಿಗೆ ಮಾರುಕಟ್ಟೆ ನಿಯಂತ್ರಕ ಸೆಕ್ಯುರಿಟೀಸ್ ಆ್ಯಂಡ್‌ ಎಕ್ಸ್‌ಚೇಂಜ್‌ ಬೋರ್ಡ್‌ ಆಫ್‌ ಇಂಡಿಯಾ (Securities and Exchange Board of India-SEBI) 2.46 ಕೋಟಿ ರೂ. ದಂಡ (SEBI Fine) ವಿಧಿಸಿದೆ.

ಸೆಬಿ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ತಳ್ವಾಲ್ಕರ್ಸ್‌ ಬೆಟರ್‌ ವ್ಯಾಲ್ಯೂ ಫಿಟ್‌ನೆಸ್‌ ಲಿಮಿಟೆಡ್‌ ಆ್ಯಂಡ್‌ (TBVFL) ಹಾಗೂ ತಳ್ವಾಲ್ಕರ್ಸ್‌ ಹೆಲ್ತ್‌ಕ್ಲಬ್ಸ್‌ ಲಿಮಿಟೆಡ್‌ (THL) ಕಂಪನಿಗಳಿಗೆ ದಂಡ ವಿಧಿಸಲಾಗಿದೆ. ಇದರ ಪ್ರಮೋಟರ್‌ಗಳಾದ ಗಿರೀಶ್‌ ತಳ್ವಾಲ್ಕರ್, ಪ್ರಶಾಂತ್‌ ತಳ್ವಾಲ್ಕರ್, ಮಧುಕರ್‌ ತಳ್ವಾಲ್ಕರ್, ವಿನಾಯಕ್‌ ಗಾವಂಡೆ, ಅನಂತ್‌ ಗಾವಂಡೆ, ಹರ್ಷ ಬಟ್ಕಳ್‌ ಹಾಗೂ ಅನಂತ್‌ ಗಾವಂಡೆ ಅವರೂ ಸೇರಿ ದಂಡ ಪಾವತಿಸಬೇಕಿದೆ.

ಮೋಸ ಹಾಗೂ ಅನ್ಯಾಯದ ವ್ಯಾಪಾರ ಪದ್ಧತಿಗಳ ನಿಯಂತ್ರಣ (PFUTP) ಹಾಗೂ ಕಂಪನಿಯ ಲೆಕ್ಕಪತ್ರ ಬಹಿರಂಗಪಡಿಸುವಿಕೆ ನಿಯಮಗಳನ್ನು ಗಾಳಿಗೆ ತೂರಿ ಉದ್ಯಮ ಮುಂದುವರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಂಪನಿ ಹಾಗೂ ಅದರ ಏಳು ಪ್ರಮೋಟರ್‌ಗಳಿಗೆ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Adani-Hindenburg case: ಅದಾನಿ ಷೇರು ವ್ಯವಹಾರ ತನಿಖೆ ಪೂರ್ಣ! ಸುಪ್ರೀಂಗೆ ಸೆಬಿ ಮಾಹಿತಿ, ಕೆಲವು ಕೇಸ್‌ನಲ್ಲಿ ಕ್ರಮ ಸಾಧ್ಯತೆ!

ಯಾರಿಗೆ ಎಷ್ಟು ದಂಡ?

ಗಿರೀಶ್‌ ತಳ್ವಾಲ್ಕರ್, ಪ್ರಶಾಂತ್‌ ತಳ್ವಾಲ್ಕರ್, ಅನಂತ್‌ ಗಾವಂಡೆ ಹಾಗೂ ಹರ್ಷ ಭಟ್ಕಳ್‌ ಅವರಿಗೆ ತಲಾ 36 ಲಕ್ಷ ರೂ., ಟಿಬಿವಿಎಫ್‌ಎಲ್‌, ವಿನಾಯಕ್‌ ಗಾವಂಡೆ ಹಾಗೂ ಮಧುಕರ್‌ ತಳ್ವಾಲ್ಕರ್ ಅವರಿಗೆ ತಲಾ 24 ಲಕ್ಷ ರೂ., ಗಿರೀಶ್‌ ನಾಯಕ್‌ ಅವರಿಗೆ 18 ಹಾಗೂ ಟಿಎಚ್‌ಎಲ್‌ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಹಾಗೆಯೇ, ಏಳೂ ಜನರಿಗೂ 18 ತಿಂಗಳು ಸೆಬಿ ನಿಯಂತ್ರಣದಲ್ಲಿರುವ ಯಾವುದೇ ಕಂಪನಿಯ ಭಾಗವಾಗುವುದರಿಂದ ನಿಷೇಧಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ದೇಶ

India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ

India At UNGA: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್‌ ಉಲ್‌ ಹಕ್‌ ಕಾಕರ್‌ ಅವರು ಕಾಶ್ಮೀರ ವಿಷಯ ಪ್ರಸ್ತಾಪಿಸಿದರು. ಕಾಶ್ಮೀರದಲ್ಲಿ ಮೇಲ್ವಿಚಾರಣಾ ತಂಡವನ್ನು ನಿಯೋಜಿಸಬೇಕು ಎಂದಿದ್ದರು. ಹಾಗಾಗಿ, ಭಾರತ ಸರಿಯಾಗಿಯೇ ಪ್ರತ್ಯುತ್ತರ ನೀಡಿದೆ.

VISTARANEWS.COM


on

Edited by

Petal Gehlot At UNGA
Koo

ನ್ಯೂಯಾರ್ಕ್‌: ವಿಶ್ವಸಂಸ್ಥೆ ಸಾಮಾನ್ಯ ಸಭೆಯ (UNGA) 78ನೇ ಅಧಿವೇಶನದಲ್ಲಿ ಜಮ್ಮು-ಕಾಶ್ಮೀರದ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ ಹಂಗಾಮಿ ಪ್ರಧಾನಿ ಅನ್ವರ್‌ ಉಲ್‌ ಹಕ್‌ ಕಾಕರ್‌ ಅವರಿಗೆ ಭಾರತ ತಿರುಗೇಟು ನೀಡಿದೆ. ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ವಿಶ್ವಸಂಸ್ಥೆ ಭಾರತದ (India At UNGA) ಕಾರ್ಯದರ್ಶಿ ಪೆತಲ್‌ ಗೆಹ್ಲೋಟ್‌, “ಪಾಕಿಸ್ತಾನವು ಭಾರತದ ಅವಿಭಾಜ್ಯ ಕೇಂದ್ರಾಡಳಿತ ಪ್ರದೇಶಗಳಾದ ಜಮ್ಮು-ಕಾಶ್ಮೀರ ಹಾಗೂ ಲಡಾಕ್‌ ವಿಷಯದಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ” ಎಂದು ಚಾಟಿ ಬೀಸಿದ್ದಾರೆ.

“ಭಾರತದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಚಾಳಿಯನ್ನು ಪಾಕಿಸ್ತಾನ ಬಿಡಬೇಕು. ಪಾಕಿಸ್ತಾನವು ತನ್ನ ದೇಶದಲ್ಲಿ ಆಗುತ್ತಿರುವ ಮಾನವ ಹಕ್ಕುಗಳ ದಮನದ ವಿಷಯವನ್ನು ಜಗತ್ತಿನ ಕಣ್ಣಿನಿಂದ ತಪ್ಪಿಸಿಕೊಳ್ಳಲು ಯಾವಾಗಲೂ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಜಮ್ಮು-ಕಾಶ್ಮೀರ ವಿಷಯ ಪ್ರಸ್ತಾಪಿಸಿದೆ. ಆದರೆ, ಪಾಕಿಸ್ತಾನದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ. ಹಾಗಾಗಿ, ನೆರೆರಾಷ್ಟ್ರವು ಮೊದಲು ತನ್ನ ದೇಶದ ಹುಳುಕನ್ನು ಸರಿಪಡಿಸಿಕೊಳ್ಳಬೇಕು” ಎಂದು ಪೆತಲ್‌ ಗೆಹ್ಲೋಟ್‌ ಹೇಳಿದ್ದಾರೆ.

“ಪಾಕಿಸ್ತಾನವು ಭಾರತದ ವಿಚಾರದಲ್ಲಿ ಮೂಗು ತೂರಿಸುವ ಬದಲು ಗಡಿ ಭಯೋತ್ಪಾದನೆ ನಿಗ್ರಹಕ್ಕೆ ಕ್ರಮ ತೆಗೆದುಕೊಳ್ಳಬೇಕು. ಉಗ್ರರಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಕೆಲಸ ಬಿಡಬೇಕು. ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತ ಮಹಿಳೆಯರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಮಾನವ ಹಕ್ಕುಗಳು ಜಗತ್ತಿನಲ್ಲೇ ಕೆಟ್ಟದಾಗಿದ್ದರೆ, ಅದು ಪಾಕಿಸ್ತಾನದಲ್ಲಿ ಮಾತ್ರ. ಪ್ರತಿ ವರ್ಷ ಪಾಕಿಸ್ತಾನದಲ್ಲಿ ಒಂದು ಸಾವಿರ ಅಲ್ಪಸಂಖ್ಯಾತ ಮಹಿಳೆಯರನ್ನು ಅಪಹರಿಸಿ, ಅವರನ್ನು ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ. ಇಂತಹ ಅನಿಷ್ಟಗಳನ್ನು ಪಾಕಿಸ್ತಾನ ನಿರ್ಮೂಲನೆ ಮಾಡಬೇಕು” ಎಂದು ಆಗ್ರಹಿಸಿದರು.

ಇದನ್ನೂ ಓದಿ: India retaliates to Pak | ಪ್ರಧಾನಿ ಮೋದಿ ಕಟುಕ ಎಂದ ಭುಟ್ಟೋಗೆ 1971ರ ನರಮೇಧ ನೆನಪಿಸಿ, ತಿರುಗೇಟು ನೀಡಿದ ಭಾರತ!

ಪಾಕ್‌ ಪ್ರಧಾನಿ ಹೇಳಿದ್ದೇನು?

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪಾಕ್‌ ಪ್ರಧಾನಿ ಅನ್ವರ್‌ ಉಲ್‌ ಹಕ್‌ ಕಾಕರ್‌, “ಭಾರತ ಹಾಗೂ ಪಾಕಿಸ್ತಾನದಲ್ಲಿ ಶಾಂತಿ ನೆಲೆಸಲು ಜಮ್ಮು-ಕಾಶ್ಮೀರವೇ ನಿರ್ಣಾಯಕವಾಗಿದೆ. ಇದರಿಂದ ಉಭಯ ದೇಶಗಳ ಅಭಿವೃದ್ಧಿಯೂ ಸಾಧ್ಯವಾಗಲಿದೆ. ಹಾಗೆಯೇ, ಜಮ್ಮು-ಕಾಶ್ಮೀರದಲ್ಲಿ ವಿಶ್ವಸಂಸ್ಥೆ ಮಿಲಿಟರಿ ಮೇಲ್ವಿಚಾರಣಾ ತಂಡವನ್ನು ನಿಯೋಜಿಸಬೇಕು. ಹಾಗೆಯೇ, ಭಾರತ ಹಾಗೂ ಪಾಕಿಸ್ತಾನ ಮಾತುಕತೆಗೆ ಸಂಬಂಧಿಸಿದಂತೆ ಜಗತ್ತಿನ ರಾಷ್ಟ್ರಗಳು ಭಾರತಕ್ಕೆ ಮನವರಿಕೆ ಮಾಡಬೇಕು” ಎಂದು ಹೇಳಿದ್ದರು.

Continue Reading

ದೇಶ

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

Kamal Haasan: ಉದಯನಿಧಿ ಸ್ಟಾಲಿನ್‌ ಅವರು ಸನಾತನ ಧರ್ಮದ ಕುರಿತು ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ಬಳಿಕ ಟೀಕೆಗಳು ವ್ಯಕ್ತವಾಗುತ್ತಿರುವ ಬೆನ್ನಲ್ಲೇ ನಟ ಕಮಲ್‌ ಹಾಸನ್‌ ಅವರು ಉದಯನಿಧಿ ಸ್ಟಾಲಿನ್‌ ಪರ ನಿಂತಿದ್ದಾರೆ.

VISTARANEWS.COM


on

Edited by

Kamal Haasan And Udhayanidhi Stalin
Koo

ಚೆನ್ನೈ: “ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದ ಹಾಗೆ. ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ ನೀಡಿ ಭಾರಿ ಟೀಕೆಗೆ ಗುರಿಯಾಗಿರುವ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ (Udhayanidhi Stalin) ಅವರಿಗೆ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಕೂಡ ನೋಟಿಸ್‌ ನೀಡಿದೆ. ಇದರ ಬೆನ್ನಲ್ಲೇ, ನಟ, ಮಕ್ಕಳ್‌ ನೀಧಿ ಮೈಯಂ ಪಕ್ಷದ ಮುಖ್ಯಸ್ಥ ಕಮಲ್‌ ಹಾಸನ್‌ ಅವರು ಉದಯನಿಧಿ ಸ್ಟಾಲಿನ್‌ ಪರ ನಿಂತಿದ್ದಾರೆ. “ಸನಾತನ ಧರ್ಮದ ವಿಚಾರಕ್ಕೆ ಸಂಬಂಧಿಸಿದಂ‌ತೆ ‘ಚಿಕ್ಕ ಮಗು’ ಉದಯನಿಧಿ ಸ್ಟಾಲಿನ್‌ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಸನಾತನ ಧರ್ಮದ ಕುರಿತಂತೆ ಇನ್ನೂ ಚಿಕ್ಕವನಾಗಿರುವ (Young Kid) ಉದಯನಿಧಿ ಸ್ಟಾಲಿನ್‌ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ. ಎಲ್ಲರೂ ಅವನ ಮೇಲೆ ಮುಗಿಬಿದ್ದಿದ್ದಾರೆ” ಎಂದು ಕಮಲ್‌ ಹಾಸನ್‌ ಹೇಳಿದ್ದಾರೆ. ಆದರೆ, ಅವರು ಯಾವುದೇ ಪಕ್ಷ ಅಥವಾ ಸಂಘಟನೆಯ ಹೆಸರು ಹೇಳಿಲ್ಲ. ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ ಬಳಿಕ ಉದಯನಿಧಿ ಸ್ಟಾಲಿನ್‌ ವಿರುದ್ಧ ಕೇಳಿಬರುತ್ತಿರುವ ಆಕ್ರೋಶದ ಕುರಿತು ಕಮಲ್‌ ಹಾಸನ್‌ ಅವರು ಸಮಾರಂಭವೊಂದರಲ್ಲಿ ಈ ರೀತಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸನಾತನ ಕುರಿತೂ ಕಮಲ್‌ ಹಾಸನ್‌ ಪ್ರತಿಕ್ರಿಯೆ

ಸನಾತನ ಧರ್ಮದ ಕುರಿತು ಕೂಡ ಕಮಲ್‌ ಹಾಸನ್‌ ಪ್ರತಿಕ್ರಿಯೆ ನೀಡಿದ್ದಾರೆ. “ನಾವೆಲ್ಲ ಪೆರಿಯಾರ್‌ ಅವರಿಂದ ಸನಾತನ ಎಂಬ ಪದವನ್ನು ಕೇಳಿದ್ದೇವೆ. ಪೆರಿಯಾರ್‌ ಅವರು ವಾರಾಣಸಿಯ ದೇವಾಲಯದಲ್ಲಿ ಅರ್ಚಕರಾಗಿ ಕೆಲಸ ಮಾಡುತ್ತಿದ್ದರು. ತಿಲಕ ಇಟ್ಟುಕೊಂಡು ಪೂಜೆ ಮಾಡುತ್ತಿದ್ದರು. ಅಂತಹವರು ಎಲ್ಲವನ್ನೂ ಬಿಟ್ಟು ಸಮಾಜ ಸುಧಾರಣೆಗೆ ಇಳಿದರು. ಹಾಗಂತ, ಪೆರಿಯಾರ್‌ ಅವರನ್ನು ಡಿಎಂಕೆ ಸೇರಿ ಯಾವುದೇ ಪಕ್ಷವು ಸ್ವಂತ ಮಾಡಿಕೊಳ್ಳುವ ಹಾಗಿಲ್ಲ. ಅವರನ್ನು ಇಡೀ ತಮಿಳುನಾಡು ಸ್ವಂತ ಮಾಡಿಕೊಂಡಿದೆ” ಎಂದರು.

ಇದನ್ನೂ ಓದಿ: Udhayanidhi Stalin: ಸನಾತನ ಧರ್ಮ; ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್‌, ಎದುರಾಯ್ತು ಸಂಕಷ್ಟ

ಏನು ಹೇಳಿದ್ದರು ಉದಯನಿಧಿ ಸ್ಟಾಲಿನ್?

ತಮಿಳುನಾಡಿನ ಚೆನ್ನೈನಲ್ಲಿ ಪ್ರಗತಿಪರ ಲೇಖಕರು, ಕಲಾವಿದರ ಸಂಘದಿಂದ ಆಯೋಜಿಸಿದ್ದ “ಸನಾತನ ನಿರ್ಮೂಲನಾ ಸಮಾವೇಶ”ದಲ್ಲಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಉಲ್ಲೇಖ ಮಾಡಿದ್ದರು. “ ಸನಾತನ ಧರ್ಮ ಕೊರೊನಾ, ಡೆಂಗ್ಯೂ, ಮಲೇರಿಯಾ ಇದ್ದಂತೆ. ಇಂತಹ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನೀವು “ಸನಾತನ ವಿರೋಧಿ ಸಮ್ಮೇಳನ” ಎಂಬುದಾಗಿ ಆಯೋಜಿಸುವ ಬದಲು “ಸನಾತನ ನಿರ್ಮೂಲನಾ ಸಮ್ಮೇಳನ” ಎಂಬುದಾಗಿ ಕಾರ್ಯಕ್ರಮ ಆಯೋಜಿಸಿದ್ದು ನನಗೆ ಇಷ್ಟವಾಯಿತು” ಎಂದು ಹೇಳಿದ್ದರು.

Continue Reading

ದೇಶ

India Canada Row: ನಿಜ್ಜರ್‌ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ

India Canada Row: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್ ನಿಜ್ಜರ್‌ ಹತ್ಯೆ ಹಿಂದೆ ಭಾರತದ ಕೈವಾಡವಿದೆ ಎಂದು ಮಾಡಿದ ಆರೋಪಕ್ಕೆ ಸಾಕ್ಷ್ಯ ನೀಡದ ಜಸ್ಟಿನ್‌ ಟ್ರುಡೋ ಈಗ ಹೊಸ ರಾಗ ತೆಗೆದಿದ್ದಾರೆ. ಭಾರತಕ್ಕೆ ಮೊದಲೇ ಈ ಕುರಿತು ಮಾಹಿತಿ ನೀಡಿದ್ದೇವೆ ಎಂದಿದ್ದಾರೆ. ಆದರೆ, ಯಾವ ಸಾಕ್ಷ್ಯ ನೀಡಲಾಗಿದೆ ಎಂಬುದನ್ನು ಅವರು ಹೇಳಿಲ್ಲ. ಹಾಗಾಗಿ, ಇದು ಬಿಕ್ಕಟ್ಟು ಬಿಗಡಾಯಿಸಲು ಕಾರಣವಾಗಿದೆ.

VISTARANEWS.COM


on

Edited by

narendra modi justi Trudeau
Koo

ಒಟ್ಟಾವ: ಕೆನಡಾದಲ್ಲಿ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ವಿಚಾರದಲ್ಲಿ ಸಾಕ್ಷ್ಯಾಧಾರಗಳನ್ನೂ ಕೊಡದೆ ಸುಖಾಸುಮ್ಮನೆ ಭಾರತದ ವಿರುದ್ಧ ಆರೋಪ (India Canada Row) ಮಾಡುತ್ತಿರುವ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಈಗ ಹೊಸ ರಾಗ ತೆಗೆದಿದ್ದಾರೆ. “ನಿಜ್ಜರ್‌ ಹತ್ಯೆ ವಿಷಯಕ್ಕೆ ಸಂಬಂಧಿಸಿದಂತೆ ಭಾರತಕ್ಕೆ ಹಲವು ವಾರಗಳ ಹಿಂದೆಯೇ ‘ನಂಬಲರ್ಹ ಆರೋಪಗಳ’ ಕುರಿತು (Credible Allegations) ಮಾಹಿತಿ ನೀಡಿದ್ದೇವೆ” ಎಂದು ಹೇಳಿರುವುದು ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ಬಿಕ್ಕಟ್ಟನ್ನು ಮತ್ತಷ್ಟು ಬಿಗಿಗೊಳಿಸಿದೆ.

“ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ನಾನು ಸೋಮವಾರ ಮಾತನಾಡಿದ್ದೇನೆ. ಆದರೆ, ಆತನ ಹತ್ಯೆಯ ಕುರಿತು ಭಾರತಕ್ಕೆ ತುಂಬ ವಾರಗಳ ಹಿಂದೆಯೇ ನಂಬಲರ್ಹ ಆರೋಪಗಳ ಕುರಿತು ಮಾಹಿತಿಯನ್ನು ಒದಗಿಸಲಾಗಿದೆ. ತುಂಬ ಗಂಭೀರವಾದ ವಿಚಾರದ ಕುರಿತು ಭಾರತ ಹಾಗೂ ಕೆನಡಾ ಒಗ್ಗೂಡಿ ಕಾರ್ಯನಿರ್ವಹಿಸುವ ಕುರಿತು ಕೂಡ ಮನವರಿಕೆ ಮಾಡಲಾಗಿದೆ. ಗಂಭೀರ ಹತ್ಯೆಯ ವಿಚಾರದಲ್ಲಿ ಭಾರತವು ನಮ್ಮ ಜತೆ ಕೈಗೂಡಿಸುತ್ತದೆ ಎಂಬ ಆಶಾಭಾವನೆಯಲ್ಲಿ ಇದ್ದೇವೆ” ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಜೆಲೆನ್‌ಸ್ಕಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸುವ ವೇಳೆ ಜಸ್ಟಿನ್‌ ಟ್ರುಡೋ ಹೇಳಿದ್ದಾರೆ.

ಜಸ್ಟಿನ್‌ ಟ್ರುಡೋ ಆರೋಪ

ಇದರೊಂದಿಗೆ ಭಾರತಕ್ಕೆ ನಾವು ಈಗಾಗಲೇ ಸಾಕ್ಷ್ಯ ನೀಡಿದ್ದೇವೆ, ಆದರೆ ಭಾರತ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬಂತೆ ಜಸ್ಟಿನ್‌ ಟ್ರುಡೋ ಬಿಂಬಿಸಿದ್ದಾರೆ. ಆದರೆ, ಅವರು ಬೇರೊಂದು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ್ದಾರೆ. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ. ಆದರೆ, ಅವರು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿಲ್ಲ.

ಇದನ್ನೂ ಓದಿ: India Canada Row: ನಿಜ್ಜರ್‌ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ

ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. “ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ. ಆದರೆ, ಅವರು ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ಹೇಳುತ್ತಲೇ ಇಂತಹ ಆರೋಪ ಮಾಡಿದ್ದಾರೆ. ಮತ್ತೊಂದೆಡೆ, ಜಸ್ಟಿನ್‌ ಟ್ರುಡೋ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮೆರಿಕ, ತನಿಖೆಗೆ ಭಾರತ ಸಹಕಾರ ನೀಡಬೇಕು ಎಂದಿದೆ. ಆದರೆ, ಸರಿಯಾದ ಸಾಕ್ಷ್ಯಾಧಾರ ಬೇಕು ಎಂದು ಭಾರತ ಸ್ಪಷ್ಟಪಡಿಸಿದೆ.

Continue Reading

ದೇಶ

India Canada Row: ನಿಜ್ಜರ್‌ ಧಾರ್ಮಿಕ ನಾಯಕನಲ್ಲ, 200 ಜನರ ಕೊಲೆಗಾರ; ಕೆನಡಾಗೆ ಭಾರತ ಪ್ರತ್ಯುತ್ತರ

India Canada Row: ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ ನಿಜ್ಜರ್‌ನನ್ನು ಕಳೆದ ಜೂನ್‌ 18ರಂದು ಕೆನಡಾದಲ್ಲಿ ಹತ್ಯೆ ಮಾಡಲಾಗಿದೆ. ಈತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ.

VISTARANEWS.COM


on

Edited by

Hardeep Singh Nijjar
Koo

ನವದೆಹಲಿ: ಭಾರತ ಹಾಗೂ ಕೆನಡಾ ಬಿಕ್ಕಟ್ಟು ದಿನೇದಿನೆ ಉಲ್ಬಣವಾಗುತ್ತಿರುವ ಬೆನ್ನಲ್ಲೇ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆ ಕುರಿತು ಚರ್ಚೆ ಜೋರಾಗಿವೆ. ಒಂದೆಡೆ, ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎಂಬ ಆರೋಪಕ್ಕೆ (India Canada Row) ಜಸ್ಟಿನ್‌ ಟ್ರುಡೋ (Justin Trudeau) ಸಾಕ್ಷ್ಯ ನೀಡತ್ತಿಲ್ಲ. ಮತ್ತೊಂದೆಡೆ, ಭಾರತದ ವಿರುದ್ಧ ಮಾಡುತ್ತಿರುವ ಆರೋಪ ನಿಲ್ಲಿಸುತ್ತಿಲ್ಲ. ಇದರ ಬೆನ್ನಲ್ಲೇ, ಭಾರತವು ಕೆನಡಾಗೆ ತಿರುಗೇಟು ನೀಡಿದೆ. “ಹರ್ದೀಪ್‌ ಸಿಂಗ್‌ ನಿಜ್ಜರ್‌ ಒಬ್ಬ ಕೊಲೆಗಾರನೇ ಹೊರತು, ಧಾರ್ಮಿಕ ನಾಯಕನಲ್ಲ” ಎಂದು ತಿಳಿಸಿದೆ.

ಹರ್ದೀಪ್‌ ಸಿಂಗ್‌ ನಿಜ್ಜರ್‌ ಒಬ್ಬ ಮಹಾನ್‌ ವ್ಯಕ್ತಿ ಎಂಬಂತೆ ಕೆನಡಾ ಬಿಂಬಿಸುತ್ತಿರುವ ಹಿನ್ನೆಲೆಯಲ್ಲಿ ಭಾರತದ ಗುಪ್ತಚರ ಇಲಾಖೆಯು ಕೆನಡಾಗೆ ತಿರುಗೇಟು ನೀಡಿದೆ. “ಹರ್ದೀಪ್‌ ಸಿಂಗ್‌ ನಿಜ್ಜರ್‌ ಖಲಿಸ್ತಾನ ಕಮಾಂಡೋ ಫೋರ್ಸ್‌ (KCF) ಸದಸ್ಯನಾಗಿದ್ದಾಗ ಜನರ ಹತ್ಯೆಯಲ್ಲಿ ತೊಡಗಿದ್ದ. ಆತ 1980ರ ದಶಕದ ಕೊನೆ ಹಾಗೂ 1990ರ ದಶಕದ ಆರಂಭದಲ್ಲಿ ಪಂಜಾಬ್‌ನಲ್ಲಿ 200 ಜನರ ಕೊಲೆಯಲ್ಲಿ ಭಾಗಿಯಾಗಿದ್ದ. ಆತ ಮತ್ತೊಬ್ಬ ಗ್ಯಾಂಗ್‌ಸ್ಟರ್‌ ಗುರ್ನೆಕ್‌ ಸಿಂಗ್‌ ಸಹಚರನಾಗಿದ್ದ” ಎಂದು ಗುಪ್ತಚರ ಇಲಾಖೆಯು ಹರ್ದೀಪ್‌ ಸಿಂಗ್‌ ನಿಜ್ಜರ್‌ನ ಬಣ್ಣ ಬಯಲು ಮಾಡಿದೆ.

justin trudeau

ಇದನ್ನೂ ಓದಿ: India Canada Row: ಉಗ್ರರ ಸುರಕ್ಷಿತ ತಾಣವಾಗುತ್ತಿರುವ ಕೆನಡಾ! ಭಾರತದ ತೀಕ್ಷ್ಣ ಪ್ರತಿಕ್ರಿಯೆ, ಪಾಕ್‌ಗೆ ಹೋಲಿಸಿತೇ ಸರ್ಕಾರ?

ಜೂನ್‌ 18ರಂದು ಕೆನಡಾದಲ್ಲಿ ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ, ಭಾರತದ ಏಜೆಂಟರೇ ಹತ್ಯೆ ಮಾಡಿದ್ದಾರೆ ಎಂದು ಜಸ್ಟಿನ್‌ ಟ್ರುಡೋ ಆರೋಪಿಸಿದ್ದಾರೆ. ಆದರೆ, ಅವರು ಸುದ್ದಿಗೋಷ್ಠಿ ನಡೆಸುವ ವೇಳೆ ಭಾರತದ ವಿರುದ್ಧದ ಆರೋಪಗಳಿಗೆ ಸಾಕ್ಷ್ಯ ಇದೆಯೇ ಎಂಬ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಹಾರಿಕೆಯ ಉತ್ತರ ನೀಡಿದ್ದಾರೆ. “ಭಾರತದ ವಿರುದ್ಧ ಆರೋಪ ಮಾಡಲು ಬಲವಾದ ಹಾಗೂ ವಿಶ್ವಾಸಾರ್ಹ ಕಾರಣಗಳಿವೆ” ಎಂದು ಜಸ್ಟಿನ್‌ ಟ್ರುಡೋ ಹೇಳಿದ್ದಾರೆ. ಆದರೆ, ಅವರು ಯಾವುದೇ ಸಾಕ್ಷ್ಯಗಳನ್ನು ನೀಡಿಲ್ಲ ಹಾಗೂ ಇವೆ ಎಂದು ಕೂಡ ಉತ್ತರಿಸಿಲ್ಲ.

ಹತ್ಯೆಗೀಡಾದ ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ನನ್ನು ಕೆನಡಾದ ನಾಗರಿಕ ಎಂದು ಪರಿಗಣಿಸಿ ಜಸ್ಟಿನ್‌ ಟ್ರುಡೋ ಭಾರತದ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆತನ ಹತ್ಯೆಯ ಹಿಂದೆ ಭಾರತದ ಕೈವಾಡವಿದೆ ಎಂದು ಆರೋಪಿಸಿದ್ದಾರೆ. “ಕೆನಡಾ ನಾಗರಿಕರ ಹಕ್ಕುಗಳನ್ನು ಹಾಗೂ ದೇಶದ ಮೌಲ್ಯಗಳನ್ನು ರಕ್ಷಿಸುವುದು ನನ್ನ ಕರ್ತವ್ಯವಾಗಿದೆ” ಎಂದು ಅವರು ಹೇಳಿದ್ದಾರೆ. ಆದರೆ, ಅವರು ಭಾರತಕ್ಕೆ ಪ್ರಚೋದನೆ ನೀಡುವುದಿಲ್ಲ ಎಂದು ಹೇಳುತ್ತಲೇ ಇಂತಹ ಆರೋಪ ಮಾಡಿದ್ದಾರೆ.

Continue Reading
Advertisement
Rain day Girl enjoying
ಉಡುಪಿ3 mins ago

Weather Report : ನಾಳೆವರೆಗೂ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Ptovocative dance at Ganesha festival
ಕರ್ನಾಟಕ22 mins ago

Ganesha Festival : ಹಿಂದು ಮಹಾಸಭಾ ಗಣೇಶೋತ್ಸವದಲ್ಲಿ ತುಂಡು ಬಟ್ಟೆ ತೊಟ್ಟು ಯುವತಿ ಪ್ರಚೋದಕ ಡ್ಯಾನ್ಸ್‌!

Cauvery protest at Mandya
Live News23 mins ago

Karnataka live news: ರಾಜ್ಯದ ಇಂದಿನ ಮಹತ್ವದ ಸುದ್ದಿಗಳು: ವಿಸ್ತರಿಸುತ್ತಿದೆ ಕಾವೇರಿ ಹೋರಾಟ, ಮಂಡ್ಯ ಬಂದ್

Petal Gehlot At UNGA
ದೇಶ33 mins ago

India At UNGA: ‘ನಿಮ್ಮ ದೇಶ ನೋಡಿಕೊಳ್ಳಿ’; ವಿಶ್ವಸಂಸ್ಥೆಯಲ್ಲಿ ‘ಕಾಶ್ಮೀರ’ ಪ್ರಸ್ತಾಪಿಸಿದ ಪಾಕ್‌ಗೆ ಭಾರತ ಚಾಟಿ

cauvery protest
ಕರ್ನಾಟಕ50 mins ago

Cauvery Protest: ಸಿಲಿಕಾನ್ ಸಿಟಿಯಲ್ಲೂ ಕಾವೇರುತ್ತಿದೆ ಕಾವೇರಿ ಕಿಚ್ಚು; ಇಂದು ಬೆಂಗಳೂರು ಬಂದ್‌ ಫಿಕ್ಸ್‌?

Chaitra Gagan kadur and Halashri Swameeji
ಉಡುಪಿ1 hour ago

Chaitra Kundapura : ಚೈತ್ರಾ ಕುಂದಾಪುರ ಗ್ಯಾಂಗ್‌ನಿಂದ ಸೀಜ್‌ ಆಗಿದ್ದು 3.67 ಕೋಟಿ, ಹಾಲಶ್ರೀಯ ಐಷಾರಾಮಿ ಕಾರು ನೋಡಿದ್ರಾ?

Kamal Haasan And Udhayanidhi Stalin
ದೇಶ1 hour ago

Kamal Haasan: ಸನಾತನ ಧರ್ಮದ ವಿಷಯದಲ್ಲಿ ‘ಮಗು’ ಉದಯನಿಧಿ ಮೇಲೆ ದಾಳಿ ಎಂದ ಕಮಲ್‌ ಹಾಸನ್

mandya bundh
ಕರ್ನಾಟಕ2 hours ago

Cauvery Protest: ಕಾವೇರಿ ಕಿಚ್ಚು: ಮಂಡ್ಯ ಬಂದ್‌; ಹೆದ್ದಾರಿಯಲ್ಲಿ ಉರುಳುಸೇವೆ, ರೈತರ ಜತೆ ಸೇರಿದ ಬಿಜೆಪಿ, ಜೆಡಿಎಸ್

Sanjay and Halashri
ಕರ್ನಾಟಕ2 hours ago

Halashri Swameeji : ಹಾಲಶ್ರೀ ಇನ್ನೊಂದು ದೋಖಾ; ಶಿರಹಟ್ಟಿ ಬಿಜೆಪಿ ಟಿಕೆಟ್‌ ಕೊಡಿಸೋದಾಗಿ ಪಿಡಿಒಗೆ ಕೋಟಿ ವಂಚನೆ!

narendra modi justi Trudeau
ದೇಶ2 hours ago

India Canada Row: ನಿಜ್ಜರ್‌ ಹತ್ಯೆ ಕುರಿತು ಭಾರತಕ್ಕೆ ನಂಬಲರ್ಹ ಮಾಹಿತಿ ನೀಡಿದ್ದೇವೆ; ಕೆನಡಾ ಹೊಸ ರಾಗ

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Govt employees ssociation
ಕರ್ನಾಟಕ7 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

kpsc recruitment 2023 pdo recruitment 2023
ಉದ್ಯೋಗ2 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Rajendra Singh Gudha
ದೇಶ2 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ7 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ9 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

7th Pay Commission
ಕರ್ನಾಟಕ11 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Dina bhavishya
ಪ್ರಮುಖ ಸುದ್ದಿ6 hours ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಇಂದು ಬಾಸ್‌ನಿಂದ ಕಿರಿಕ್‌!

Dina Bhavishya
ಪ್ರಮುಖ ಸುದ್ದಿ1 day ago

Dina Bhavishya : ದಿನದ ಮಟ್ಟಿಗೆ ಈ ರಾಶಿಯವರು ಹೂಡಿಕೆ ಮಾಡ್ಬೇಡಿ!

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ನಂಬಿದ ವ್ಯಕ್ತಿಗಳು ಮೋಸ ಮಾಡ್ತಾರೆ ಹುಷಾರ್‌!

dina bhavishya
ಪ್ರಮುಖ ಸುದ್ದಿ5 days ago

Dina Bhavishya : ಆಪ್ತರೊಂದಿಗೆ ಜಗಳವಾದೀತು ಹುಷಾರ್‌!

Dina Bhavishya
ಪ್ರಮುಖ ಸುದ್ದಿ6 days ago

Dina Bhavishya : ಈ ರಾಶಿಯವರು ಇಂದು ಮುಟ್ಟಿದ್ದೆಲ್ಲಾ ಚಿನ್ನ!

Ramalinga Reddy
ಕರ್ನಾಟಕ7 days ago

ಇನ್ಮುಂದೆ ಹೇಗಂದ್ರೆ ಹಾಗೆ ದೇವಸ್ಥಾನ ಕಟ್ಟೋ ಹಾಗಿಲ್ಲ! ರಾಮಲಿಂಗಾ ರೆಡ್ಡಿ ಮಾಸ್ಟರ್ ಪ್ಲಾನ್

Bannerghatta Park
ಆರೋಗ್ಯ7 days ago

Nipah Virus : ನಿಫಾ ವೈರಸ್‌ ಭೀತಿ; ಬನ್ನೇರುಘಟ್ಟ ಪಾರ್ಕ್‌ನಲ್ಲಿ ಹೈ ಅಲರ್ಟ್

Villagers exclude menstruating women
ಕರ್ನಾಟಕ7 days ago

Tumkur News : ಮುಟ್ಟಾದ ಮಹಿಳೆಯರನ್ನು ಗ್ರಾಮದಿಂದ ಹೊರಗಿಟ್ಟು ಮೌಡ್ಯಾಚರಣೆ!

dina bhavishya
ಪ್ರಮುಖ ಸುದ್ದಿ1 week ago

Dina Bhavishya : ಈ ದಿನ ಭೂಮಿ, ಆಸ್ತಿ ಖರೀದಿಸುವ ಮುನ್ನ ಎಚ್ಚರ!

Kadri temple is the target for Shariq NIA reveals
ಕರ್ನಾಟಕ1 week ago

ಮಂಗಳೂರು ಸ್ಫೋಟ : ಶಾರಿಕ್‌ಗೆ ಕದ್ರಿ ದೇವಸ್ಥಾನವೇ ಟಾರ್ಗೆಟ್; ರಿವೀಲ್ ಮಾಡಿದ ಎನ್ಐಎ

ಟ್ರೆಂಡಿಂಗ್‌