Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಚಾರಿಕೆಯೋ? - Vistara News

ದೇಶ

Seema Haider: ಮತ್ತೆ ಸುದ್ದಿಯಾದ ಸೀಮಾ ಹೈದರ್‌; ಇದು ಗಡಿಯಾಚೆಗಿನ ಪ್ರೇಮ ಕಥೆಯೋ ಅಥವಾ ಪಾಕ್‌ ಗೂಢಚಾರಿಕೆಯೋ?

Seema Haider: ಸೀಮಾ ಪ್ರೀತಿ ಪ್ರೇಮಕ್ಕಾಗಿ ಭಾರತಕ್ಕೆ ಬಂದಿಲ್ಲ. ಆಕೆಯ ಉದ್ದೇಶ ಬೇರೆಯದ್ದೇ ಇದೆ. ಆಕೆ ಮತ್ತು ಆಕೆ ಕುಟುಂಬಸ್ಥರು ಆಗಾಗ ಪಾಕಿಸ್ತಾನಕ್ಕೆ ಭೇಟಿ ಕೊಡುತ್ತಿರುತ್ತಾರೆ. ಅಲ್ಲದೇ ಅವರು ಪಾಕ್‌ ಸೇನೆ ಜೊತೆ ನಂಟು ಹೊಂದಿದ್ದಾರೆ ಎಂದು ಗುಲಾಂ ಹೇಳಿಕೆಯೊಂದನ್ನು ಕೊಟ್ಟಿದ್ದಾನೆ. ಸೀಮಾ ಆಗಾಗ ಪಾಕಿಸ್ತಾನ ಸೇನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡುತ್ತಿರುತ್ತಾಳೆ. ಆಕೆ ಚಿಕ್ಕಪ್ಪ ಗುಲಾಮ್‌ ಅಕ್ಬರ್‌ ಕೂಡ ಪಾಕ್‌ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆತನನ್ನು ಆಗಾಗ ಭೇಟಿ ಆಗುತ್ತಿರುತ್ತಾಳೆ. ಇದನ್ನೆಲ್ಲಾ ನೋಡಿದರೆ ಆಕೆ ಭಾರತಕ್ಕೆ ಹೋಗಿರುವುದು ಗೂಢಾಚಾರಿಣಿಯಾಗೋ ಎಂಬ ಅನುಮಾನ ಹುಟ್ಟಿಕೊಳ್ಳುತ್ತದೆ ಎಂದು ಗುಲಾಮ್‌ ಹೇಳಿದ್ದಾನೆ.

VISTARANEWS.COM


on

Seema Haider
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ:ಆನ್‌ಲೈನ್‌ ಪಬ್‌ ಜಿ ಗೇಮ್‌ ಆಡುವಾಗ ಪರಿಚಯವಾದ ಗ್ರೇಟರ್‌ ನೊಯ್ಡಾದ ಸಚಿನ್‌ ಮೀನಾ (Sachin Meena) ಎಂಬ ಯುವಕನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದು, ಸಚಿನ್‌ ಮೀನಾ ಜತೆ ಇರುವ ಸೀಮಾ ಹೈದರ್‌(Seema Haider) ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಸೀಮಾ ಹೈದರ್‌ ಮೊದಲ ಪತಿ ಗುಲಾಂ ಹೈದರ್‌ (Ghulam Haider) ಸೀಮಾ ಬಗ್ಗೆ ಆಘಾತಕಾರಿ ಸಂಗತಿಯೊಂದನ್ನು ಬಹಿರಂಗ ಪಡಿಸಿದ್ದು, ಇದೀಗ ಬಹಳ ಚರ್ಚೆ ಆಗುತ್ತಿದೆ.

ಸೀಮಾ ಪತಿ ಹೇಳಿದ್ದೇನು?

ಸೀಮಾ ಪ್ರೀತಿ ಪ್ರೇಮಕ್ಕಾಗಿ ಭಾರತಕ್ಕೆ ಬಂದಿಲ್ಲ. ಆಕೆಯ ಉದ್ದೇಶ ಬೇರೆಯದ್ದೇ ಇದೆ. ಆಕೆ ಮತ್ತು ಆಕೆ ಕುಟುಂಬಸ್ಥರು ಆಗಾಗ ಪಾಕಿಸ್ತಾನಕ್ಕೆ ಭೇಟಿ ಕೊಡುತ್ತಿರುತ್ತಾರೆ. ಅಲ್ಲದೇ ಅವರು ಪಾಕ್‌ ಸೇನೆ ಜೊತೆ ನಂಟು ಹೊಂದಿದ್ದಾರೆ ಎಂದು ಗುಲಾಂ ಹೇಳಿಕೆಯೊಂದನ್ನು ಕೊಟ್ಟಿದ್ದಾನೆ. ಸೀಮಾ ಆಗಾಗ ಪಾಕಿಸ್ತಾನ ಸೇನಾ ತರಬೇತಿ ಕೇಂದ್ರಕ್ಕೆ ಭೇಟಿ ನೀಡುತ್ತಿರುತ್ತಾಳೆ. ಆಕೆ ಚಿಕ್ಕಪ್ಪ ಗುಲಾಮ್‌ ಅಕ್ಬರ್‌ ಕೂಡ ಪಾಕ್‌ ಸೇನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆತನನ್ನು ಆಗಾಗ ಭೇಟಿ ಆಗುತ್ತಿರುತ್ತಾಳೆ. ಇದನ್ನೆಲ್ಲಾ ನೋಡಿದರೆ ಆಕೆ ಭಾರತಕ್ಕೆ ಹೋಗಿರುವುದು ಗೂಢಾಚಾರಿಣಿಯಾಗೋ ಎಂಬ ಅನುಮಾನ ಹುಟ್ಟಿಕೊಳ್ಳುತ್ತದೆ ಎಂದು ಗುಲಾಮ್‌ ಹೇಳಿದ್ದಾನೆ. ಗುಮಾಮ್‌ ಹೇಳಿಕೆಯನ್ನು ಆತನ ವಕೀಲ ಮೊಮಿನ್‌ ಮಾಲಿಕ್‌ ಎಂದು ಬಹಿರಂಗಪಡಿಸಿದ್ದಾರೆ.

ತಂತ್ರಜ್ಞಾನದ ಬಗ್ಗೆ ಸೀಮಾಗೆ ಅತೀವ ಜ್ಞಾನ

ಸೀಮಾಗೆ ತಂತ್ರಜ್ಞಾನದ ಬಳಕೆ ಬಗ್ಗೆ ಅತೀವ ಜ್ಞಾನ ಇದೆ. ಮೊಬೈಲ್‌ ಫೋನ್‌ ಅನ್ನು ಜೋಡಿಸುವುದು, ಟಿಕ್‌ ಟಾಕ್‌ ಬ್ಯಾನ್‌ ಆದ ಮೇಲೂ ಅದನ್ನು ಬಳಸುವುದು ಹೀಗೆ ತಂತ್ರಜ್ಞಾನದ ಬಗ್ಗೆ ಬಹಳಷ್ಟು ತಿಳಿದುಕೊಂಡಿದ್ದಳು. ಆದರೆ ಆಕೆಗೆ ಪಬ್‌ಜಿ ಆಟ ಬಗ್ಗೆ ತಿಳಿದಿರಲಿಲ್ಲ. ಹೀಗಾಗಿ ಪಬ್‌ ಜಿ ಮೂಲಕ ಸಚಿನ್‌ ಪರಿಚಯ ಆಗಿದೆ ಎಂಬ ಆಕೆಯ ಹೇಳಿಕೆ ಸುಳ್ಳು ಎಂದು ಗುಲಾಮ್‌ ಹೈದರ್‌ ಹೇಳಿದ್ದಾನೆ.

2020ರಲ್ಲಿ ಸೀಮಾ ಹೈದರ್‌ ಹಾಗೂ ಸಚಿನ್‌ ಮೀನಾ ಪಬ್ಜಿ ಆನ್‌ಲೈನ್‌ ಗೇಮ್‌ ಮೂಲಕ ಪರಿಚಯವಾಗಿದ್ದು, ಪರಿಚಯ ಪ್ರೀತಿಗೆ ತಿರುಗಿದೆ. ಕೊನೆಗೆ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದು, ಸೀಮಾ ಹೈದರ್‌ ಅವರು ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿದ್ದ ತಮ್ಮ ಮನೆ ಮಾರಿ, ಅಕ್ರಮವಾಗಿ 2023ರಲ್ಲಿ ಭಾರತವನ್ನು ಪ್ರವೇಶಿಸಿದ್ದಾರೆ. ಅಕ್ರಮವಾಗಿ ಭಾರತ ಪ್ರವೇಶಿಸಿದ ಸೀಮಾ ಹೈದರ್‌ ಅವರಿಗೆ ಆಶ್ರಯ ನೀಡಿದ ಕಾರಣ ಸೀಮಾ ಹೈದರ್‌, ಆಕೆಯ ನಾಲ್ಕು ಮಕ್ಕಳು, ಸಚಿನ್‌ ಮೀನಾ ಹಾಗೂ ಆತನ ತಂದೆಯನ್ನು ಬಂಧಿಸಿ, ಬಿಡುಗಡೆ ಮಾಡಲಾಗಿದೆ. ಸೀಮಾ ಹೈದರ್‌ ಪಾಕಿಸ್ತಾನದ ಗೂಢಚಾರಿ ಇರಬಹುದು ಎಂಬ ಶಂಕೆಯಿಂದ ಎಟಿಎಸ್‌ ವಿಚಾರಣೆ ಕೂಡ ನಡೆಸಿದೆ.

ಇದನ್ನೂ ಓದಿ: Mobile Phone Recharges: ಮೊಬೈಲ್‌ ಗ್ರಾಹಕರಿಗೆ ಬಿಗ್‌ ಶಾಕ್‌! ಮತ್ತೆ ರಿಚಾರ್ಜ್‌ ಮೊತ್ತ ಏರಿಕೆ

ತೀವ್ರ ವಿಚಾರಣೆ ಬಳಿಕ ಸೀಮಾ ಹೈದರ್‌ ಹಾಗೂ ಸಚಿನ್‌ ಮೀನಾ ಅವರು ಒಟ್ಟಿಗೆ ವಾಸಿಸಲು ಅನುಮತಿ ನೀಡಲಾಗಿದೆ. ಸೀಮಾ ಹೈದರ್‌ ಹಾಗೂ ಸಚಿನ್‌ ಮೀನಾ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್‌ ಮೂಲಕವೇ ದೇಶದ ಗಮನ ಸೆಳೆದಿದ್ದಾರೆ. ಇವರ ಪ್ರೇಮ ಪ್ರಕರಣವು ದೇಶಾದ್ಯಂತ ಸುದ್ದಿಯಾಗುವ ಜತೆಗೆ, ಇವರ ವಿಡಿಯೊಗಳು ಕೂಡ ವೈರಲ್‌ ಆಗುತ್ತಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Suresh GopiL

VISTARANEWS.COM


on

Suresh Gopi
Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ ಟಿಕೆಟ್​ ಪಡೆಯುವುದೇ ಹರಸಾಹಸ. ಅದಕ್ಕೆ ನೂರಾರು ಮಾದರಿಯಲ್ಲಿ ಪ್ರಭಾವ ಬೀರಬೇಕು. ಸಿಕ್ಕಿ ಗೆದ್ದರಂತೂ ಆಕಾಶಕ್ಕೆ ಮೂರೇ ಗೇಣು. ಗೆದ್ದ ಮೇಲೆ ಸಚಿವ ಸ್ಥಾನ ದೊರೆತರೆ ಅದು ಅವರ ಜೀವನ ಅತ್ಯುನ್ನತ ಸಾಧನೆಯಾಗುತ್ತದೆ. ರಾಜಕಾರಣಿಗಳ ಪರಿಸ್ಥಿತಿ ಈ ರೀತಿ ಇದೆ ಎಂಬುದು ರಾಜಕಾರಣದಲ್ಲಿ ಇಲ್ಲದವರಿಗೂ ಗೊತ್ತಿರುವ ಸಂಗತಿ. ಇಂಥದ್ದರಲ್ಲಿ ಮೊದಲ ಪ್ರಯತ್ನದಲ್ಲೇ ಗೆದ್ದು ಸಚಿವ ಸ್ಥಾನ ದೊರೆತರೆ ಅದನ್ನು ಒಲ್ಲೆ ಎನ್ನುವುದುಂಟೆ? ಆದರೆ, ಅಚ್ಚರಿ ಎಂಬಂತೆ ಕೇರಳದ ತ್ರಿಶ್ಯೂರ್​ ಸಂಸದ, ಸಿನಿಮಾ ನಟ ಸುರೇಶ್​ ಗೋಪಿ (Suresh Gopi) ಈ ರೀತಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಅದೂ ಮೋದಿ 3.0 ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ. ನನಗೆ ಕೇಂದ್ರದಲ್ಲಿ ಸಚಿವ ಸ್ಥಾನದ ಜವಾಬ್ದಾರಿ ಬೇಡ, ನಾನು ತ್ರಿಶ್ಯೂರ್​ ಸಂಸದನಾಗಿಯೇ ಇರುತ್ತೇನೆ. ಅದಕ್ಕಿಂತಲೂ ಮಿಗಿಲಾಗಿ ನಾನು ಸಿನಿಮಾಗಳನ್ನು ಒಪ್ಪಿಕೊಂಡಿದ್ದು ಅದನ್ನು ಮುಗಿಸಬೇಕಾಗಿದೆ ಎಂದು ಹೇಳಿದ್ದಾರೆ.

ಮೋದಿ 3.0 ಕ್ಯಾಬಿನೆಟ್​ನಲ್ಲಿ ಭಾನುವಾರ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ಗಂಟೆಗಳ ನಂತರ, ಸುರೇಶ್ ಗೋಪಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹುದ್ದೆಯಿಂದ ಮುಕ್ತರಾಗಲು ಮತ್ತು ತ್ರಿಶೂರ್ ಜನರಿಗಾಗಿ ಸಂಸದರಾಗಿ ಕೆಲಸ ಮಾಡಲು ಬಯಸುವುದಾಗಿ ಹೇಳಿದ್ದಾರೆ. ನಟ-ರಾಜಕಾರಣಿ ಸುರೇಶ್ ಗೋಪಿ ಅವರು ಚಲನಚಿತ್ರಗಳಿಗೆ ಸಹಿ ಹಾಕಿದ್ದಾರೆ. ಅವುಗಳನ್ನು ಮುಗಿಸಲೇಬೇಕು ಎಂದು ಹೇಳಿದ್ದಾರೆ.

ಸಂಸದನಾಗಿ ಕೆಲಸ ಮಾಡುವುದು ನನ್ನ ಗುರಿ. ನಾನು ಏನನ್ನೂ ಕೇಳಲಿಲ್ಲ. ನನಗೆ ಈ ಹುದ್ದೆ ಅಗತ್ಯವಿಲ್ಲ ಎಂದು ನಾನು ಹೇಳಿದ್ದೆ. ನಾನು ಶೀಘ್ರದಲ್ಲೇ ಹುದ್ದೆಯಿಂದ ಮುಕ್ತನಾಗುತ್ತೇನೆ ಎಂದು ನಾನು ಭಾವಿಸುತ್ತೇನೆ. ತ್ರಿಶೂರ್ ಮತದಾರರಿಗೆ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಅದು ತಿಳಿದಿದೆ ಮತ್ತು ಸಂಸದನಾಗಿ ನಾನು ಅವರಿಗಾಗಿ ಕಾರ್ಯನಿರ್ವಹಿಸುತ್ತೇನೆ. ನಾನು ನನ್ನ ಚಲನಚಿತ್ರಗಳನ್ನು ಮುಗಿಸಬೇಕು ಎಂದು ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ದೆಹಲಿಯಲ್ಲಿ ಮನೋರಮಾ ಜತೆ ಮಾತನಾಡಿದ ಸುರೇಶ್ ಗೋಪಿ ಹೇಳಿದ್ದಾರೆ.

ಸೋಮವಾರ ನಡೆಯಲಿರುವ ಕೇಂದ್ರ ಸಚಿವ ಸಂಪುಟದ ಮೊದಲ ನಿಗದಿತ ಸಭೆಗೆ ಮುಂಚಿತವಾಗಿ ಗೋಪಿ ಅವರ ಹೇಳಿಕೆ ಬಂದಿದೆ. ಗೋಪಿ ಮತ್ತು ಪಕ್ಷದ ಹಿರಿಯ ನಾಯಕ ಜಾರ್ಜ್ ಕುರಿಯನ್ ಅವರು ಕೇರಳದಿಂದ ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದರು.

ಇದನ್ನೂ ಓದಿ: Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಎಡರಂಗದ ಭದ್ರಕೋಟೆಯಾಗಿದ್ದ ತ್ರಿಶೂರ್ ಲೋಕಸಭಾ ಕ್ಷೇತ್ರದಲ್ಲಿ ಸುರೇಶ್ ಗೋಪಿ ಗೆಲುವು ಸಾಧಿಸಿದ್ದು, ಕೇರಳದ ಮೊದಲ ಬಿಜೆಪಿ ಸಂಸದರಾಗಿ ಇತಿಹಾಸ ನಿರ್ಮಿಸಿದ್ದಾರೆ. ಸುರೇಶ್ ಗೋಪಿ ಅವರು ಸಿಪಿಐನ ವಿ.ಎಸ್.ಸುನಿಲ್ ಕುಮಾರ್ ಅವರನ್ನು 74,000 ಮತಗಳ ಅಂತರದಿಂದ ಸೋಲಿಸಿದ್ದಾರೆ. ತ್ರಿಶೂರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಕೆ ಮುರಳೀಧರನ್ ಅವರನ್ನು ಕಣಕ್ಕಿಳಿಸಿತ್ತು.

2024 ರ ಲೋಕಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ, ಸುರೇಶ್ ಗೋಪಿ ‘ತ್ರಿಶೂರ್​ಗೆ ಕೇಂದ್ರ ಸಚಿವ ಸ್ಥಾನ, ಮೋದಿಯವರ ಗ್ಯಾರಂಟಿ’ ಎಂಬ ಘೋಷಣೆಯೊಂದಿಗೆ ಪ್ರಚಾರ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

Continue Reading

ಪ್ರಮುಖ ಸುದ್ದಿ

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

Election Commission :ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

VISTARANEWS.COM


on

Election Commission
Koo

ಬೆಂಗಳೂರು: ಜುಲೈ 10, 2024 ರಂದು ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಭಾರತದ ಚುನಾವಣಾ ಆಯೋಗ (Election Commission ) ಘೋಷಿಸಿದೆ. ಬಿಹಾರ, ತಮಿಳುನಾಡು ಮತ್ತು ಮಧ್ಯಪ್ರದೇಶದ ತಲಾ ಒಂದು, ಪಶ್ಚಿಮ ಬಂಗಾಳದ ನಾಲ್ಕು ಮತ್ತು ಉತ್ತರಾಖಂಡ, ಪಂಜಾಬ್ ಮತ್ತು ಹಿಮಾಚಲ ಪ್ರದೇಶದ ತಲಾ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13 ರಂದು ಮತ ಎಣಿಕೆ ನಡೆಯಲಿದೆ. ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿದೆ. ಹಾಲಿ ಸದಸ್ಯರ ಮರಣ ಅಥವಾ ರಾಜೀನಾಮೆಯಿಂದ ಉಂಟಾಗಿರುವ ಖಾಲಿ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ.

ಉಪಚುನಾವಣೆಯ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

  • ಅಧಿಸೂಚನೆ ಪ್ರಕಟಣೆ: ಜೂನ್ 14
  • ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಜೂನ್ 21
  • ನಾಮಪತ್ರ ಪರಿಶೀಲನೆ: ಜೂನ್ 24
  • ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ: ಜೂನ್ 26
  • ಮತದಾನದ ದಿನಾಂಕ: ಜುಲೈ 10
  • ಫಲಿತಾಂಶ: ಜುಲೈ 13

ಇದನ್ನೂ ಓದಿ: Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

ಜುಲೈ 10 ರಂದು ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳ ಪಟ್ಟಿ

ಬಿಹಾರ: ಬಿಮಾ ಭಾರತಿ ರಾಜೀನಾಮೆಯಿಂದ ತೆರವಾಧ ರುಪೌಲಿ ಕ್ಷೇತ್ರ
ಪಶ್ಚಿಮ ಬಂಗಾಳ: ಶ್ರೀ ಕೃಷ್ಣ ಕಲ್ಯಾಣಿ ರಾಜೀನಾಮೆಯಿಂದ ತೆರವಾದ ರಾಯ್​ಗಂಜ್ ಸ್ಥಾನ
ಪಶ್ಚಿಮ ಬಂಗಾಳ: ಮುಕುಟ್​​ ಮಣಿ ಅಧಿಕಾರಿ ರಾಜೀನಾಮೆಯಿಂದ ತೆರವಾದ ರಣಘಾಟ್ ದಕ್ಷಿಣ ಕ್ಷೇತ್ರ
ಪಶ್ಚಿಮ ಬಂಗಾಳ: ಬಿಸ್ವಜಿತ್ ದಾಸ್ ರಾಜೀನಾಮೆಯಿಂದ ಬಾಗ್ಡಾ ಸ್ಥಾನ
ಪಶ್ಚಿಮ ಬಂಗಾಳ: ಸಾಧನ್ ಪಾಂಡೆ ನಿಧನದಿಂದ ತೆರವಾದ ಮಣಿಕ್​ತಾಲ್​ ಕ್ಷೇತ್ರ
ತಮಿಳುನಾಡು: ತಿರು ಎನ್​ ಪುಗಳೆಂದಿ ನಿಧನದಿಂದ ತೆರವಾದ ವಿಕ್ರಾವಂಡಿ ಕ್ಷೇತ್ರ
ಮಧ್ಯಪ್ರದೇಶ: ಕಮಲೇಶ್ ಪ್ರತಾಪ್ ಶಾ ರಾಜೀನಾಮೆಯಿಂದಾಗಿ ಅಮರವಾರಾ ಸ್ಥಾನ
ಉತ್ತರಾಖಂಡ: ರಾಜೇಂದ್ರ ಸಿಂಗ್ ಭಂಡಾರಿ ರಾಜೀನಾಮೆಯಿಂದಾಗಿ ಬದರೀನಾಥ್ ಸ್ಥಾನ
ಉತ್ತರಾಖಂಡ: ಸರ್ವತ್ ಕರೀಂ ಅನ್ಸಾರಿ ಅವರ ನಿಧನದಿಂದಾಗಿ ಮಂಗಳೌರ್ ಕ್ಷೇತ್ರ
ಪಂಜಾಬ್​: ಶೀತಲ್ ಅಂಗುರಾ ಅವರ ರಾಜೀನಾಮೆಯಿಂದ ತೆರವಾದ ಪಂಜಾಬ್ ಜಲಂಧರ್ ಪಶ್ಚಿಮ ಸ್ಥಾನ
ಹಿಮಾಚಲ ಪ್ರದೇಶ: ಹೋಶ್ಯಾರ್ ಸಿಂಗ್ ಅವರ ರಾಜೀನಾಮೆಯಿಂದಾಗಿ ಡೆಹ್ರಾಡೂನ್ ಕ್ಷೇತ್ರ
ಹಿಮಾಚಲ ಪ್ರದೇಶ: ಆಶಿಶ್ ಶರ್ಮಾ ಅವರ ರಾಜೀನಾಮೆಯಿಂದಾಗಿ ತೆರವಾದ ಹಮೀರ್ಪುರ ಸ್ಥಾನ
ಹಿಮಾಚಲ ಪ್ರದೇಶ: ಕೆ.ಎಲ್.ಠಾಕೂರ್ ಅವರ ರಾಜೀನಾಮೆಯಿಂದಾಗಿ ತೆರವಾದ ನಲಘರ್ ಸ್ಥಾನ

ಚುನಾವಣೆಗೆ ನಡೆಯುವ ವಿಧಾನಸಭಾ ಕ್ಷೇತ್ರದ ಸಂಪೂರ್ಣ ಅಥವಾ ಯಾವುದೇ ಭಾಗವನ್ನು ಒಳಗೊಂಡಿರುವ ಜಿಲ್ಲೆಗಳಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ತಕ್ಷಣದಿಂದ ಜಾರಿಗೆ ಬರಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.ಜುಲೈ 15 ರೊಳಗೆ ಉಪಚುನಾವಣೆಗಳನ್ನು ಪೂರ್ಣಗೊಳಿಸಬೇಕು ಎಂದು ಅದು ಹೇಳಿದೆ.

Continue Reading

ಪ್ರಮುಖ ಸುದ್ದಿ

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

Narendra Modi 3.0: ನಮ್ಮದು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದ್ದು ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ನಾವು ಇನ್ನೂ ಹೆಚ್ಚು ಕೆಲಸ ಮಾಡಲು ಬಯಸುತ್ತೇವೆ ” ಎಂದು ಕಡತಕ್ಕೆ ಸಹಿ ಹಾಕಿದ ನಂತರ ಪಿಎಂ ಮೋದಿ ಹೇಳಿದ್ದಾರೆ.

VISTARANEWS.COM


on

Narendra Modi 3.0
Koo

ಬೆಂಗಳೂರು: ಭಾನುವಾರ ಸಂಜೆ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ (Narendra Modi 3.0) ಅವರು ಸೋಮವಾರ ‘ಪಿಎಂ ಕಿಸಾನ್ ನಿಧಿ’ ಬಿಡುಗಡೆಯ ಕಡತಕ್ಕೆ ಸಹಿ ಹಾಕಿದರು. ಇದು ಅವರು ಮೂರನೇ ಅವಧಿಯಲ್ಲಿ ಸಹಿ ಹಾಕಿದ ಮೊದಲ ಫೈಲ್​. ಪಿಎಂ ಕಿಸಾನ್ ನಿಧಿಯ 17 ನೇ ಕಂತಿನ ಬಿಡುಗಡೆಗೆ ಅಧಿಕಾರ ನೀಡುವ ಕಡತಕ್ಕೆ ಅವರು ಸಹಿ ಹಾಕಿದರು. ಇದು 9.3 ಕೋಟಿ ರೈತರಿಗೆ ಪ್ರಯೋಜನ ನೀಡುವ ಸುಮಾರು 20,000 ಕೋಟಿ ರೂ. ಬಿಡುಗಡೆಯಾಗಲಿದೆ.

ನಮ್ಮದು ರೈತರ ಕಲ್ಯಾಣಕ್ಕೆ ಬದ್ಧವಾಗಿರುವ ಸರ್ಕಾರ. ಆದ್ದರಿಂದ, ಅಧಿಕಾರ ವಹಿಸಿಕೊಂಡ ನಂತರ ಸಹಿ ಮಾಡಿದ ಮೊದಲ ಕಡತವು ರೈತರ ಕಲ್ಯಾಣಕ್ಕೆ ಸಂಬಂಧಿಸಿದ್ದು ಮುಂಬರುವ ದಿನಗಳಲ್ಲಿ ರೈತರು ಮತ್ತು ಕೃಷಿ ವಲಯಕ್ಕಾಗಿ ನಾವು ಇನ್ನೂ ಹೆಚ್ಚು ಕೆಲಸ ಮಾಡಲು ಬಯಸುತ್ತೇವೆ ” ಎಂದು ಕಡತಕ್ಕೆ ಸಹಿ ಹಾಕಿದ ನಂತರ ಪಿಎಂ ಮೋದಿ ಹೇಳಿದ್ದಾರೆ.

ಈ ನಿರ್ಧಾರವು ಆಡಳಿತಾರೂಢ ಎನ್​ಡಿಎ ಚುನಾವಣಾ ಗೆಲುವಿನ ನಂತರ ರೈತರ ಕಲ್ಯಾಣಕ್ಕೆ ಸರ್ಕಾರದ ಬದ್ಧತೆಯನ್ನು ಸಾರಿದೆ. ವಿಶೇಷವಾಗಿ ಗ್ರಾಮೀಣ ಭಾರತದಲ್ಲಿ ಕೆಲವು ಹಿನ್ನಡೆಗಳನ್ನು ಎದುರಿಸಿದ್ದ ಕಾರಣ ಈ ಕ್ರಮ ನಿರೀಕ್ಷಿತವಾಗಿದೆ.

3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ

72 ಸದಸ್ಯರ ಕೇಂದ್ರ ಸಚಿವ ಸಂಪುಟದ ಮುಖ್ಯಸ್ಥರಾಗಿ ಮೋದಿ ಭಾನುವಾರ ದಾಖಲೆಯ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾನುವಾರ, ನಡೆದ ಕಾರ್ಯಕ್ರಮದಲ್ಲಿ ಸಚಿವ ಸಂಪುಟದಲ್ಲಿ ಉನ್ನತ ಸಹೋದ್ಯೋಗಿಗಳಾದ ಅಮಿತ್ ಶಾ, ನಿರ್ಮಲಾ ಸೀತಾರಾಮನ್, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಎಸ್ ಜೈಶಂಕರ್ ಮತ್ತು ಪಿಯೂಷ್ ಗೋಯಲ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ:8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಪ್ರಮುಖ ಮಿತ್ರ ಪಕ್ಷಗಳಾದ ತೆಲುಗು ದೇಶಂ ಪಕ್ಷ (ಟಿಡಿಪಿ) ಮತ್ತು ಜನತಾದಳ (ಯುನೈಟೆಡ್) ತಲಾ ಒಂದು ಕ್ಯಾಬಿನೆಟ್ ಸ್ಥಾನ ಪಡೆದುಕೊಂಡಿವೆ.

ಟಿಡಿಪಿ ಮತ್ತು ಜೆಡಿಯು ಹೊರತುಪಡಿಸಿ, ಟಿಡಿಪಿ, , ಜೆಡಿಎಸ್​, ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಮತ್ತು ಲೋಕ ಜನಶಕ್ತಿ ಪಕ್ಷ ಕ್ಯಾಬಿನೆಟ್ ಸ್ಥಾನಗಳನ್ನು ಪಡೆದ ಇತರ ಮಿತ್ರಪಕ್ಷಗಳಾಗಿವೆ.

ಲೋಕ ಜನಶಕ್ತಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಉತ್ತಮ ಪ್ರದರ್ಶನ ನೀಡಿದರು. ಚಿರಾಗ್ ಪಾಸ್ವಾನ್ ಮಾಜಿ ಕ್ಯಾಬಿನೆಟ್ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಪುತ್ರ ಮತ್ತು ಎಲ್ಜೆಪಿ ಸಂಸ್ಥಾಪಕ.

Continue Reading

ರಾಜಕೀಯ

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಹೊಸ ಸರ್ಕಾರವು ಶೀಘ್ರದಲ್ಲೇ 8 ನೇ ವೇತನ ಆಯೋಗದ (8th Pay Commission) ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಬಹುದು ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಘೋಷಣೆ ಮಾಡಬಹುದು ಎನ್ನುವ ನಿರೀಕ್ಷೆಯಿದೆ.

VISTARANEWS.COM


on

By

8th Pay Commission
Koo

ನವದೆಹಲಿ: ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದ 3.0 ಸರ್ಕಾರ ರಚನೆಯಾಗಿದ್ದು, ಸಂಪುಟ ಸಚಿವರು (Cabinet Ministers) ಭಾನುವಾರ ಪ್ರಮಾಣ ವಚನ ಸ್ವೀಕರಿಸಿದರು. ಹೊಸದಾಗಿ ರಚನೆಯಾಗಿರುವ ಸರಕಾರದಿಂದ ಈಗ 8ನೇ ವೇತನ ಆಯೋಗ (8th Pay Commission) ರಚನೆ ಸೇರಿದಂತೆ ಹಲವಾರು ನಿರೀಕ್ಷೆಗಳಿವೆ.

ಹೊಸ ಸರ್ಕಾರವು ಶೀಘ್ರದಲ್ಲೇ 8ನೇ ವೇತನ ಆಯೋಗದ ಬಗ್ಗೆ ಚರ್ಚೆಗಳನ್ನು ಪ್ರಾರಂಭಿಸಬಹುದು ಎನ್ನಲಾಗುತ್ತಿದೆಯಾದರೂ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಇನ್ನು ಕೆಲವೇ ತಿಂಗಳುಗಳಲ್ಲಿ ಮೋದಿ ಸರ್ಕಾರ ಕೇಂದ್ರ ಸರ್ಕಾರಿ ನೌಕರರಿಗೆ ದೊಡ್ಡ ಘೋಷಣೆ ಮಾಡಬಹುದು ಎನ್ನುವ ನಿರೀಕ್ಷೆಯಿದೆ.

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಅನುಕೂಲ

ಸರ್ಕಾರಿ ಸಿಬ್ಬಂದಿಯ ವೇತನ ಹೆಚ್ಚಳಕ್ಕೆ ಸಂಬಂಧಿಸಿ 8ನೇ ವೇತನ ಆಯೋಗವು ತನ್ನ ಶಿಫಾರಸುಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಿದೆ. ಇದು ಜಾರಿಯಾದರೆ ಕೋಟ್ಯಂತರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈ ಹಿಂದೆ ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ಹೊಸ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರುತ್ತಿತ್ತು. 7ನೇ ವೇತನ ಆಯೋಗವು ಜನವರಿ 2016ರಲ್ಲಿ ಜಾರಿಗೆ ಬಂದಿತು. ಆದ್ದರಿಂದ ಭಾರತದಲ್ಲಿ 8 ನೇ ವೇತನ ಆಯೋಗವು ಜನವರಿ 2026ರಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಮುಂದಿನ 8ನೇ ವೇತನ ಆಯೋಗ 2025ರಲ್ಲೇ ರಚನೆಯಾಗಬೇಕು. ಇದು ನಡೆದರೆ ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಭಾರಿ ಏರಿಕೆಯಾಗುವ ಸಾಧ್ಯತೆ ಇದೆ ಎಂಬುದು ತಜ್ಞರ ಅಭಿಪ್ರಾಯ.

ಹಲವು ಬದಲಾವಣೆ

8ನೇ ವೇತನ ಆಯೋಗದಲ್ಲಿ ಫಿಟ್‌ಮೆಂಟ್ ಅಂಶ ಸೇರಿದಂತೆ ಹಲವು ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ. ಫಿಟ್‌ಮೆಂಟ್ ಅಂಶವೆಂದರೆ ಹಿಂದಿನ ವೇತನದಿಂದ ವೇತನ ಪರಿಷ್ಕೃರಣೆ ಮಾಡಲು ಪರಿಷ್ಕೃತ ವೇತನದ ಲೆಕ್ಕಾಚಾರ ನಡೆಸಲು ವೇತನ ಆಯೋಗವು ಸೂಚಿಸುವ ನಿರ್ದಿಷ್ಟ ಮೌಲ್ಯವಾಗಿದೆ. ಇದು ಒಂದು ವಿಶಿಷ್ಟ ಅಂಶದ ಮೂಲಕ ಮೂಲ ವೇತನದಲ್ಲಿನ ಪರಿಷ್ಕರಣೆಯನ್ನು ಸೂಚಿಸುತ್ತದೆ. ಫಿಟ್‌ಮೆಂಟ್ ಅಂಶವು ಕೇಂದ್ರ ಸರ್ಕಾರಿ ಸೇವೆಗಳಲ್ಲಿರುವ ಎಲ್ಲಾ ಉದ್ಯೋಗಿಗಳಿಗೆ ಅನ್ವಯಿಸುತ್ತದೆ.

ಉದ್ಯೋಗಿಗಳ ಫಿಟ್‌ಮೆಂಟ್ ಅಂಶವು 3.68 ಪಟ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸರ್ಕಾರಿ ನೌಕರರ ಕನಿಷ್ಠ ಮೂಲ ವೇತನ 18,000 ರೂ. ಗಳಾಗಿದೆ. ಫಿಟ್‌ಮೆಂಟ್ ಅಂಶ ಹೆಚ್ಚಳದಿಂದ ಅವರ ಮೂಲ ವೇತನ 18,000 ರೂ. ನಿಂದ 26,000 ರೂ. ಗೆ ಏರಿಕೆಯಾಗಲಿದೆ.

Continue Reading
Advertisement
Yuva Rajkumar son of raghavendra Rajkumar yuva divorce
ಸ್ಯಾಂಡಲ್ ವುಡ್4 mins ago

Yuva Rajkumar: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಯುವ ರಾಜ್​ಕುಮಾರ್​ ; ಅಣ್ಣಾವ್ರ ಕುಟುಂಬದಲ್ಲಿ ಇದೇ ಮೊದಲ ಪ್ರಕರಣ!

Congress Guaratee
ಕರ್ನಾಟಕ13 mins ago

Congress Guarantee: ಗ್ಯಾರಂಟಿ ನಿಲ್ಲಿಸುವ ಮಾತು ಬೇಡ: ಕೈ ನಾಯಕರಿಗೆ ಎಚ್.ಎಂ ರೇವಣ್ಣ ಎಚ್ಚರಿಕೆ

Suresh Gopi
ದೇಶ14 mins ago

Suresh Gopi : ಪ್ರಮಾಣವಚನ ಸ್ವೀಕರಿಸಿದ ಒಂದೇ ಗಂಟೆಯೊಳಗೆ ಸಚಿವ ಸ್ಥಾನ ಬೇಡ ಎಂದ ಸುರೇಶ್​ ಗೋಪಿ!

Physical Abuse
ಮೈಸೂರು33 mins ago

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Election Commission
ಪ್ರಮುಖ ಸುದ್ದಿ38 mins ago

Election Commission : ಜುಲೈ 10ರಂದು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

bhavani revanna prajwal revanna case
ಪ್ರಮುಖ ಸುದ್ದಿ40 mins ago

Prajwal Revanna Case: ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ! ಅಲ್ಲೇ ಇದ್ದರೂ ಮುಖಾಮುಖಿಯಾಗದ ಅಮ್ಮ- ಮಗ

Niveditha Gowda Chandan Shetty Joint Pressmeet For The First Time
ಕಿರುತೆರೆ58 mins ago

Niveditha Gowda : ಡಿವೋರ್ಸ್‌ ಬಳಿಕ ಒಟ್ಟಾಗಿ ಸುದ್ದಿಗೋಷ್ಠಿ ಕರೆದ ಚಂದನ್-ನಿವೇದಿತಾ!

Narendra Modi 3.0
ಪ್ರಮುಖ ಸುದ್ದಿ1 hour ago

Narendra Modi 3.0 : ಅಧಿಕಾರ ಸ್ವೀಕರಿಸಿದ ಮರುದಿನವೇ ಮೊದಲ ಫೈಲ್​ಗೆ ಸಹಿ ಹಾಕಿದ ಪ್ರಧಾನಿ ಮೋದಿ; ಯಾವ ಕಡತ ಅದು?

8th Pay Commission
ರಾಜಕೀಯ1 hour ago

8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

Physical Abuse
ಕ್ರೈಂ1 hour ago

Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌