Site icon Vistara News

Sexual abuse: ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಕೇಸ್‌ ತೆಗೆದುಕೊಳ್ಳಲು ವಕೀಲರ ಹಿಂದೇಟು-ಆ.24ರಂದು ಬಂದ್‌ಗೆ ಕರೆ

sexual abuse

ಥಾಣೆ: ಖಾಸಗಿ ಶಾಲೆಯ ನರ್ಸರಿ ಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ(Sexual abuse) ಪ್ರಕರಣ ಮಹಾರಾಷ್ಟ್ರದ ಬದ್ಲಾಪುರ(Badlapur)ದಲ್ಲಿ ಉದ್ನಿಗ್ನ ಪ್ರತಿಸ್ಥಿತಿಯನ್ನು ನಿರ್ಮಿಸಿದೆ. ನಿನ್ನೆ ನಡೆದ ಪ್ರತಿಭಟನೆ ಹಿಂಸಾ ರೂಪ ಪಡೆದುಕೊಂಡ ಕಾರಣ ಇಂದೂ ಕೂಡ ಥಾಣೆ(Thane) ಜಿಲ್ಲೆಯಾದ್ಯಂತ ಇಂಟರ್ನೆಟ್‌ ಸೇವೆ(Internet services) ಸ್ಥಗಿತಗೊಳಿಸಲಾಗಿದೆ. ಅಲ್ಲದೇ ಶಾಲಾ ಕಾಲೇಜು ಬಂದ್‌ ಮಾಡಲಾಗಿತ್ತು. ಮತ್ತೊಂದೆಡೆ ಆರೋಪಿ ಅಕ್ಷಯ್‌ ಶಿಂಧೆಯ ಕೇಸ್‌ ಅನ್ನು ಯಾವ ವಕೀಲರೂ ತೆಗೆದುಕೊಳ್ಳದಂ,ತೆ ಕಲ್ಯಾಣ್‌ ಬಾರ್‌ ಅಸೋಸಿಯೇಶನ್‌ ನಿರ್ಧರಿಸಿದೆ.

ಆ.24ರಂದು ಬಂದ್‌ಗೆ ಕರೆ

ಇನ್ನು ಈ ಹೀನ ಕೃತ್ಯ ಖಂಡಿಸಿ ಮತ್ತು ಮಹಿಳಾ ಸುರಕ್ಷತೆಗಾಗಿ ಮಹಾ ವಿಕಾಸ್‌ ಅಗಾಡಿ ಆ.24ರಂದು ಮಹರಾಷ್ಟ್ರ ಬಂದ್‌ಗೆ ಕರೆ ನೀಡಿದೆ. MVA ಯ ಸಭೆಯಲ್ಲಿ, ಕಾಂಗ್ರೆಸ್, ಶಿವಸೇನೆ (UBT) ಮತ್ತು NCP ಮೂರು ಪಕ್ಷಗಳ ನಾಯಕರು ಭಾಗಿಯಾಗಿ ಬದ್ಲಾಪುರ ಘಟನೆ ಮತ್ತು ರಾಜ್ಯದ ಒಟ್ಟಾರೆ ಮಹಿಳೆಯರು ಮತ್ತು ಹುಡುಗಿಯರ ಸುರಕ್ಷತೆಯ ಬಗ್ಗೆ ಚರ್ಚಿಸಿದರು.

ಸ್ಥಳೀಯ ಶಾಲೆಯೊಂದರಲ್ಲಿ ಅಟೆಂಡರ್‌ನಿಂದ ನರ್ಸರಿ ತರಗತಿಯ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು. ಇದನ್ನು ಖಂಡಿಸಿ ಮಂಗಳವಾರ ಬದ್ಲಾಪುರ ರೈಲು ನಿಲ್ದಾಣದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನಾಕಾರರು ಹಳಿಗಳಿಗೆ ಇಳಿದು ಪ್ರತಿಭಟನೆ ನಡೆಸಿದ ಕಾರಣ ರೈಲ್ವೆ ನಿಲ್ದಾಣದಲ್ಲಿ ಸ್ಥಳೀಯ ರೈಲು ಸಂಚಾರ ಸ್ಥಗಿತಗೊಳಿಸಲಾಯಿತು. ಕೊನೆಗೆ ಈ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡು ಉದ್ರಿಕ್ತ ಪ್ರತಿಭಟನಾಕಾರರು ಶಾಲೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ಈ ಘಟನೆಯು ಆಗಸ್ಟ್ 12-13, 2024 ರಂದು ನಡೆದಿದ್ದು, ಬದ್ಲಾಪುರದ ಶಾಲೆಯ ನರ್ಸರಿ ತರಗತಿಗಳಲ್ಲಿ ಓದುತ್ತಿರುವ ಇಬ್ಬರು ನಾಲ್ಕು ವರ್ಷದ ಬಾಲಕಿಯರ ಮೇಲೆ 23 ವರ್ಷದ ಪುರುಷ ಸ್ವಚ್ಛತಾ ಸಿಬ್ಬಂದಿಯಿಂದ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಹುಡುಗಿಯರ ಶೌಚಾಲಯದ ಒಳಗೆ ತೆರಳಿದಾಗ ಕಿಡಿಗೇಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಬೆಳಗ್ಗೆ ತರಗತಿಯ ವೇಳೆ ಬಾಲಕಿಯರು ವಾಶ್‌ರೂಮ್‌ಗೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಆರೋಪಿ, ಅಕ್ಷಯ್ ಶಿಂಧೆಯನ್ನು ಆಗಸ್ಟ್ 1, 2024 ರಂದು ಗುತ್ತಿಗೆ ಆಧಾರದ ಮೇಲೆ ನೇಮಿಸಲಾಯಿತು. ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದಾಗ ಬಾಲಕಿಯರ ಶೌಚಾಲಯವನ್ನು ಸ್ವಚ್ಛಗೊಳಿಸುವ ಹೊಣೆಗಾರಿಕೆಯನ್ನು ಆತನಿಗೆ ನೀಡಲಾಗಿತ್ತು. ಶುಕ್ರವಾರ ರಾತ್ರಿ ಇಬ್ಬರು ಬಾಲಕಿಯರ ಪೋಷಕರು ದೂರು ದಾಖಲಿಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Sexual Abuse : ತಾಯಿಯೊಂದಿಗೆ ಮಲಗಿದ್ದ 3 ವರ್ಷದ ಹೆಣ್ಣು ಮಗುವನ್ನುಎಳೆದೊಯ್ದು ಅತ್ಯಾಚಾರ ಎಸಗಿದ ಪಾಪಿ

Exit mobile version