Congress Working Committee : ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ರೆಬೆಲ್​ಗಳಿಗೆ ಮಣೆ; ಹರಿಪ್ರಸಾದ್​, ಪೈಲೆಟ್​ಗೆ ಸ್ಥಾನ - Vistara News

ದೇಶ

Congress Working Committee : ಕಾಂಗ್ರೆಸ್​ ಕಾರ್ಯಕಾರಿ ಸಮಿತಿಯಲ್ಲಿ ರೆಬೆಲ್​ಗಳಿಗೆ ಮಣೆ; ಹರಿಪ್ರಸಾದ್​, ಪೈಲೆಟ್​ಗೆ ಸ್ಥಾನ

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (AICC) 39 ಸದಸ್ಯರಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿದ (Congress Working Committee) ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಲ್ಲದೆ, ಬಿಕೆ ಹರಿಪ್ರಸಾದ್, ವೀರಪ್ಪ ಮೊಯ್ಲಿ ಅವರಿಗೆ ಸ್ಥಾಲ ಲಭಿಸಿದೆ.

VISTARANEWS.COM


on

Congress Leaders
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ (AICC) ಸಭೆಯ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿಗೆ (Congress Working Committee) 39 ಸದಸ್ಯರನ್ನು ಒಳಗೊಂಡ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಪಟ್ಟಿ ಬಿಡುಗಡೆ ಮಾಡಿದ್ದಾರೆ. ಈ ಸಮಿತಿಯಲ್ಲಿ ಕರ್ನಾಟಕದ ಮೂವರಿಗೆ ಸ್ಥಾನ ಲಭಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ವಿಧಾನ ಪರಿಷತ್​ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಥಾನ ಪಡೆದುಕೊಂಡಿದ್ದಾರೆ. . ಅದೇ ರೀತಿ ಸಮಿತಿಯಲ್ಲಿ ತಮ್ಮದೇ ಪಕ್ಷದ ನಾಯಕರ ವಿರುದ್ಧ ಸಿಡಿದೆದ್ದ ಹಲವರಿಗೆ ಸ್ಥಾನ ನೀಡಲಾಗಿದೆ. ಪ್ರಮುಖವಾಗಿ ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ಬಂಡೆದ್ದಿರವ ಬಿ.ಕೆ ಹರಿಪ್ರಸಾದ್​, ರಾಜಸ್ಥಾನದಲ್ಲಿ ಅಲ್ಲಿನ ಸಿಎಂ ವಿರುದ್ಧ ಸಿಡಿದೆದ್ದಿರುವ ಸಚಿನ್ ಪೈಲೆಟ್​ ಈ ಪಟ್ಟಿಯಲ್ಲಿ ಪ್ರಮುಖರು.

ಕಾಂಗ್ರೆಸ್ ಮುಖಂಡ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಸಮಿತಿಯಲ್ಲಿದ್ದಾರೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಸಚಿನ್ ಪೈಲೆಟ್, ದಿಗ್ವಿಜಯ್ ಸಿಂಗ್, ಶಶಿ ತರೂರ್, ಆನಂದ ಶರ್ಮಾ, ಜೈರಾಮ್ ರಮೇಶ್, ಅಧೀರ್ ರಂಜನ್ ಚೌಧರಿ, ಅಭಿಷೇಕ್ ಮನು ಸಿಂಘ್ವಿ ಪಟ್ಟಿಯಲ್ಲಿರುವ ಇತರ ಪ್ರಮುಖ ನಾಯಕರು

ಸಚಿನ್​, ತರೂರ್​ಗೆ ಸ್ಥಾನ

ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹಿನ್ನೆಲೆಯಲ್ಲಿ ರಾಜಸ್ಥಾನದ ನಾಯಕ ಸಚಿನ್ ಪೈಲಟ್ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತೀಚೆಗೆ ಅವರು ಅಶೋಕ್ ಗೆಹ್ಲೋಟ್ ನೇತೃತ್ವದ ತಮ್ಮದೇ ಪಕ್ಷದ ಸರ್ಕಾರವನ್ನು ಬಹಿರಂಗವಾಗಿ ಮುಜುಗರಕ್ಕೀಡು ಮಾಡಿದ್ದರು. ಹೀಗಾಗಿ ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿಯಾಗಿರುವ ಅವರನ್ನು ಸಮಧಾನ ಪಡಿಸಲು ಅವರಿಗೆ ಉನ್ನತ ಸ್ಥಾನ ನೀಡಲಾಗಿದೆ.

ಇನ್ನೊಂದೆಡೆ ಸಂಸದ ಶಶಿ ತರೂರ್ (ಕಳೆದ ವರ್ಷ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಸ್ಪರ್ಧಿಸಿದ್ದರು). ಇದೀಗ ಅವರಿಗೂ ಕಾರ್ಯಕಾರಿ ಸಮಿತಿಯಲ್ಲಿ ಅವಕಾಶ ಲಭಿಸಿದೆ ದೀಪ್​ ದಾಸ್ ಮುನ್ಷಿ ಮತ್ತು ಸೈಯದ್ ನಾಸಿರ್ ಹುಸೇನ್ ಸಿಡಬ್ಲ್ಯೂಸಿಗೆ ಹೊಸದಾಗಿ ಪ್ರವೇಶ ಪಡೆದುಕೊಂಡವರು.

ದಾಸ್ ಮುನ್ಷಿ ಪಶ್ಚಿಮ ಬಂಗಾಳದ ಮಾಜಿ ಸಂಸದೆ ಮತ್ತು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ದಿವಂಗತ ಪ್ರಿಯರಂಜನ್ ದಾಸ್ ಮುನ್ಷಿ ಅವರ ಪತ್ನಿ. ಹುಸೇನ್ ರಾಜ್ಯಸಭಾ ಸದಸ್ಯರಾಗಿದ್ದು, ಈ ಹಿಂದೆ ಕಾಂಗ್ರೆಸ್​ನ ರಾಷ್ಟ್ರೀಯ ಮಾಧ್ಯಮ ಪ್ಯಾನೆಲಿಸ್ಟ್ ಆಗಿ ಸೇವೆ ಸಲ್ಲಿಸಿದ್ದರು.

ತರೂರ್ ಅವರಲ್ಲದೆ, 2020ರಲ್ಲಿ ಪಕ್ಷದಲ್ಲಿ ಸುಧಾರಣೆಗಳನ್ನು ಕೋರಿ ಜಿ -23 ಗುಂಪು ಬರೆದ ಪತ್ರಕ್ಕೆ ಸಹಿ ಹಾಕಿದ ಮತ್ತೊಬ್ಬ ವ್ಯಕ್ತಿ ಆನಂದ್ ಶರ್ಮಾ ಅವರು ಪಕ್ಷದ ಉನ್ನತ ಸಂಸ್ಥೆಯಲ್ಲಿ ಸ್ಥಾನ ಪಡೆದಿದ್ದಾರೆ.

ತಮ್ಮ ಆಯ್ಕೆ ಬಗ್ಗೆ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ. ಪಕ್ಷದ ಅಧ್ಯಕ್ಷರ ನಿರ್ಧಾರ “ಗೌರವ” ಎಂದು ಶಶಿ ತರೂರ್ ಎಕ್ಸ್ ಪೋಸ್ಟ್ ಮಾಡಿದ್ದಾರೆ. “ಈ ಸಂಘಟನೆಯ ಭಾಗವಾಗಿರುವುದಕ್ಕೆ ಕೃತಜ್ಞನಾಗಿದ್ದೇನೆ” ಎಂದು ಅವರು ಹೇಳಿಕೊಂಡಿದ್ದಾರೆ.

ಹಿರಿಯರಿಗೆ ಮಣೆ

ಈ ವರ್ಷದ ಆರಂಭದಲ್ಲಿ, ಪಕ್ಷದ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ.ವೇಣುಗೋಪಾಲ್ ಅವರು ಪಕ್ಷದ ಅರ್ಧದಷ್ಟು ಪದಾಧಿಕಾರಿಗಳು 50ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು ಎಂದು ಹೇಳಿದ್ದರು. ಒಟ್ಟು 39 ಸಿಡಬ್ಲ್ಯುಸಿ ಸದಸ್ಯರಲ್ಲಿ ಕೇವಲ ಮೂವರು ಮಾತ್ರ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರು – ಸಚಿನ್ ಪೈಲಟ್, ಗೌರವ್ ಗೊಗೊಯ್ ಮತ್ತು ಕಮಲೇಶ್ವರ್ ಪಟೇಲ್.

ಇದನ್ನೂ ಓದಿ : Rahul Gandhi: ಲಡಾಕ್‌ನಲ್ಲಿ ರಾಹುಲ್‌ ಗಾಂಧಿ ಬೈಕ್‌ ರೈಡ್‌, ಕ್ರಿಶ್‌ನಂತೆ ಬೈಕ್‌ ಓಡಿಸಿದ ಕಾಂಗ್ರೆಸ್‌ ನಾಯಕ

ಉತ್ತರ ಪ್ರದೇಶದ ಉಸ್ತುವಾರಿಯಾಗಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಯಾವುದೇ ರಾಜ್ಯದ ಉಸ್ತುವಾರಿಯನ್ನಾಗಿ ಮಾಡುವ ಸಾಧ್ಯತೆಯಿಲ್ಲ ಎಂದು ಮೂಲಗಳು ತಿಳಿಸಿವೆ.

ಸದಸ್ಯರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮನಿರ್ದೇಶನ ಮಾಡಿದ್ದಾರೆ. ಯಾರನ್ನೂ ಚುನಾವಣೆಯ ಮೂಲಕ ಆಯ್ಕೆ ಮಾಡಲಾಗಿಲ್ಲ. ಎಲ್ಲಾ ಸಿಡಬ್ಲ್ಯೂಸಿ ಸದಸ್ಯರನ್ನು ನಾಮನಿರ್ದೇಶನ ಮಾಡಲು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್​​ನ ಕಮಿಟಿ ಫೆಬ್ರವರಿಯಲ್ಲಿ ಹೇಳಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

Viral News:ಕಳೆದ ತಿಂಗಳು ಹೈದರಾಬಾದ್‌ನಿಂದ ದಿಲ್ಲಿಗೆ ವಿಮಾನಯಾನ ನಡೆಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ 7ಲಕ್ಷ ಮೌಲ್ಯದ ಚಿನ್ನ ಕಳುವಾಗಿತ್ತು. ಇದಾದ ಬೆನ್ನಲ್ಲೇ ಅಮೆರಿಕ ಮೂಲಕದ ವ್ಯಕ್ತಿಯೊಬ್ಬ ಕೂಡ ತನ್ನ ಬ್ಯಾಗ್‌ನಲ್ಲಿದ್ದ 20ಲಕ್ಷ ರೂ. ಕಳುವಾಗಿದೆ ಎಂದು ದೂರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದಿಲ್ಲಿ, ಅಮೃತಸರ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾಜೇಶ್‌ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಆತನನ್ನು ಅರೆಸ್ಟ್‌ ಮಾಡಿದಾಗ ಈತನ ಕೈಚಳಕದ ಬಗ್ಗೆ ಮಾಹಿತಿ ಹೊರಬಿದ್ದಿದೆ.

VISTARANEWS.COM


on

Viral News
Koo

ನವದೆಹಲಿ: ಈತ ಒಂದೇ ವರ್ಷದಲ್ಲಿ 200 ವಿಮಾನ(200 Flights) ಗಳನ್ನು ಹತ್ತಿ ಇಳಿದಿದ್ದಾನೆ. ಸಾವಿರಾರು ಕಿಲೋಮೀಟರ್‌ ವಿಮಾನದಲ್ಲೇ ದೇಶದೊಳಗೆ ಪ್ರಯಾಣ ಬೆಳೆಸಿದ್ದಾನೆ. ಸುಮಾರು ನೂರಕ್ಕೂ ಅಧಿಕ ದಿನಗಳ ಕಾಲ ವಿಮಾನಯಾನವನ್ನೇ ಮಾಡಿದ್ದಾನೆ. ಅಬ್ಬಾ.. ಹಾಗಾದ್ರೆ ಈತ ದೊಡ್ಡ ಉದ್ಯಮಿ ಅಥವಾ ಟ್ರಾವೆಲರ್ ಆಗಿರಲೇಬೇಕು ಎಂದು ನಾವು ಭಾವಿಸಿದರೆ ಅದು ನಮ್ಮ ತಪ್ಪು ಕಲ್ಪನೆ. ಈತ ವಿಮಾನ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ದೋಚುವ ಹೈ ಟೆಕ್‌ ಕಳ್ಳ(Viral News) ವಿಮಾನದಲ್ಲೇ ಪ್ರಯಾಣಿಸುವ ಈತ ಕಳ್ಳತನವೇ ಈತನ ಫುಲ್‌ ಟೈಂ ಜಾಬ್‌ ಆಗಿದೆ. ಇದೀಗ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು ರಾಜೇಶ್‌ ಕಪೂರ್‌(Rajesh Kapoor) ಎಂದು ಗುರುತಿಸಲಾಗಿದ್ದು, ಈತನನ್ನು ಪೊಲೀಸರು ದಿಲ್ಲಿಯ ಪಹಾರ್‌ಗಂಜ್‌ ಇಂದ ಅರೆಸ್ಟ್‌ ಮಾಡಲಾಗಿದೆ.

ಖತರ್ನಾಕ್‌ ಕಳ್ಳ ಬಲೆಗೆ ಬಿದ್ದಿದ್ದು ಹೇಗೆ?

ಕಳೆದ ತಿಂಗಳು ಹೈದರಾಬಾದ್‌ನಿಂದ ದಿಲ್ಲಿಗೆ ವಿಮಾನಯಾನ ನಡೆಸುತ್ತಿದ್ದ ಮಹಿಳೆಯ ಬ್ಯಾಗ್‌ನಿಂದ 7ಲಕ್ಷ ಮೌಲ್ಯದ ಚಿನ್ನ ಕಳುವಾಗಿತ್ತು. ಇದಾದ ಬೆನ್ನಲ್ಲೇ ಅಮೆರಿಕ ಮೂಲಕದ ವ್ಯಕ್ತಿಯೊಬ್ಬ ಕೂಡ ತನ್ನ ಬ್ಯಾಗ್‌ನಲ್ಲಿದ್ದ 20ಲಕ್ಷ ರೂ. ಕಳುವಾಗಿದೆ ಎಂದು ದೂರು ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಕೈಗೆತ್ತಿಕೊಂಡ ಪೊಲೀಸರು ದಿಲ್ಲಿ, ಅಮೃತಸರ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ರಾಜೇಶ್‌ ಬಗ್ಗೆ ಮಾಹಿತಿ ಸಿಕ್ಕಿದೆ. ತಕ್ಷಣ ಆತನನ್ನು ಅರೆಸ್ಟ್‌ ಮಾಡಿದಾಗ ಈತನ ಕೈಚಳಕದ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಕಳ್ಳತನ ಹೇಗೆ ಮಾಡುತ್ತಿದ್ದ?

ದಿಲ್ಲಿ ಡೆಪ್ಯೂಟಿ ಪೊಲೀಸ್‌ ಕಮಿಷನರ್‌ ಉಷಾ ರಂಗ್ರಾಣಿ ಪ್ರತಿಕ್ರಿಯಿಸಿದ್ದು, ರಾಜೇಶ್‌ ವಿಚಾರಣೆ ವೇಳೆ ತನ್ನ ಕುಕೃತ್ಯದ ಬಗ್ಗೆ ಬಾಯಿ ಬಿಟ್ಟಿದ್ದಾನೆ. ಅವರು ಹೇಗೆ ಕಳ್ಳತನ ಮಾಡುತ್ತಿದ್ದ, ಹೇಗೆ ಎಸ್ಕೇಪ್‌ ಆಗುತ್ತಿದ್ದ ಎಂಬ ಬಗ್ಗೆ ಮಾಹಿತಿ ನೀಡಿದ್ದಾನೆ ಎಂದು ಹೇಳಿದರು. ಅವರು ಹೇಳುವ ಪ್ರಕಾರ ಆತ ಕನೆಕ್ಟಿಂಗ್‌ ಫ್ಲೈಟ್ಸ್‌ ಅಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡುತ್ತಿದ್ದ. ಆ ಮಹಿಳೆ ಏಪ್ರಿಲ್‌ನಲ್ಲಿ ಹೈದರಾಬಾದ್‌ನಿಂದ ದಿಲ್ಲಿಗೆ ಬಂದು, ಅಲ್ಲಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದಳು. ಅದೇ ರೀತಿ ಅಮೆರಿಕ ಮೂಲದ ಆ ವ್ಯಕ್ತಿಯೂ ಅಮೃತಸರದಿಂದ ದಿಲ್ಲಿಗೆ ಬಂದು ಅಲ್ಲಿಂದ ಅಮೆರಿಕಕ್ಕೆ ಪ್ರಯಾಣ ಬೆಳೆಸಿದ್ದ. ಇಂತವರನ್ನೇ ಗುರಿಯನ್ನಾಗಿಸಿಕೊಳ್ಳುವ ರಾಜೇಶ್‌, ಪ್ರಯಾಣಿಕರ ಚಲನವಲನ, ವರ್ತನೆ ಮೇಲೆ ತೀವ್ರ ನಿಗಾ ಇರಿಸಿಕೊಳ್ಳುತ್ತಾನೆ. ಅವರ ಬ್ಯಾಗ್‌ ಮೇಲಿರುವ ಸ್ಲಿಪ್‌ನಿಂದಾಗಿ ಅವನಿಗೆ ಅವರ ಬ್ಯಾಗ್‌ನಲ್ಲಿ ಏನಿದೆ ಎಂಬುದು ತಿಳಿಯುತ್ತಿತ್ತು. ಬೋರ್ಡಿಂಗ್‌ ಗೇಟ್‌ ಬಳಿ ಈತ ಅವರ ಜೊತೆ ಮಾತುಕತೆ ನಡೆಸುತ್ತಾನೆ. ಇದಾದ ಬಳಿಕ ವಿಮಾನದಲ್ಲಿ ತನ್ನ ಸೀಟು ಬಲಿಸಿಕೊಡುವಂತೆ ವಿಮಾನ ಸಿಬ್ಬಂದಿಯನ್ನು ಕೇಳುತ್ತಾನೆ. ಹೇಗಾದರೂ ಮಾಡಿ ತಾನು ಟಾರ್ಗೆಟ್‌ ಮಾಡಿರುವ ವ್ಯಕ್ತಿಯ ಪಕ್ಕವೇ ಸೀಟು ಸಿಗುವಂತೆ ಮಾಡುತ್ತಾನೆ. ಆಗ ತನ್ನ ಕೈಚಳಕ ತೋರಿಸಿ ಚಿನ್ನ, ನಗದು ದೋಚಿದ್ದಾನೆ.

ಇದನ್ನೂ ಓದಿ: Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬಹುತೇಕ ಮಹಿಳೆಯರನ್ನೇ ಟಾರ್ಗೆಟ್‌ ಮಾಡಿ ಕದಿಯುತ್ತಿದ್ದ ಈತ ಪಹಾರ್‌ಗಂಜ್‌ನಲ್ಲಿ ಸ್ವಂತ ಗೆಸ್ಟ್‌ ಹೌಸ್‌ವೊಂದನ್ನು ಹೊಂದಿದ್ದಾನೆ. ಅಲ್ಲದೇ ಮನಿ ಎಕ್ಸ್‌ಚೇಂಜ್‌ ಉದ್ಯಮ ಮತ್ತು ಮೊಬೈಲ್‌ ಅಂಗಡಿಗಳನ್ನು ಈತ ಹೊಂದಿದ್ದಾನೆ ಎನ್ನಲಾಗಿದೆ. ಇನ್ನು ತಾನು ಕದ್ದ ಚಿನ್ನಾಭರಣಗಳನ್ನು ಸ್ಥಳೀಯ ಚಿನ್ನದ ಅಂಗಡಿ ಮಾಲೀಕ ಶರದ್‌ ಜೈನ್‌ಗೆ ಮಾರುತ್ತಿದ್ದ ಎನ್ನಲಾಗಿದೆ.

Continue Reading

ಪ್ರಮುಖ ಸುದ್ದಿ

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Hoarding Collapse: ಮುಂಬಯಿ ಮಹಾನಗರಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

VISTARANEWS.COM


on

mumbai hoarding collapse
Koo

ಮುಂಬಯಿ: ಮಂಗಳವಾರ ಮುಂಜಾನೆ ಮುಂಬಯಿಯಲ್ಲಿ ಬೃಹತ್ ಹೋರ್ಡಿಂಗ್ ಕುಸಿದ (Mumbai Hoarding Collapse) ಪರಿಣಾಮ ಅದರಡಿಗೆ ಸಿಕ್ಕಿ ಸತ್ತವರ ಸಂಖ್ಯೆ (Death toll) 14ಕ್ಕೆ ಏರಿದೆ. ಸಿಕ್ಕಿಬಿದ್ದವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ (Rescue Operation) ನಡೆಸುತ್ತಿದೆ. ಘಟನೆಯಲ್ಲಿ ಕನಿಷ್ಠ 74 ಜನರು ಗಾಯಗೊಂಡಿದ್ದಾರೆ.

ಕುಸಿದ ಜಾಹೀರಾತು ಫಲಕದ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ತೀವ್ರ ಕಾರ್ಯಾಚರಣೆ ನಡೆಯುತ್ತಿದೆ. ಈಗಾಗಲೇ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನೂ ನಾಲ್ಕು ಶವಗಳು ಅವಶೇಷಗಳೊಳಗೆ ಇವೆ ಎಂದು NDRF ಇನ್ಸ್‌ಪೆಕ್ಟರ್ ಗೌರವ್ ಚೌಹಾಣ್ ತಿಳಿಸಿದ್ದಾರೆ. “ನಾವು ಶವಗಳನ್ನು ಪತ್ತೆ ಮಾಡಿದ್ದೇವೆ. ಆದರೆ ಅಡಿಯಲ್ಲಿ ಪೆಟ್ರೋಲ್ ಬಂಕ್‌ ಇರುವುದರಿಂದ ಕಾರ್ಯಾಚರಣೆ ಕಷ್ಟವಾಗುತ್ತಿದೆ. ಪರಿಸ್ಥಿತಿ ಅಪಾಯಕಾರಿಯಾಗಬಹುದು” ಎಂದು ಅವರು ಹೇಳಿದರು.

ಮುಂಬೈನ ಘಾಟ್‌ಕೋಪರ್‌ನಲ್ಲಿ ನಡೆದ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಸಂತಾಪ ಸೂಚಿಸಿದ್ದು, ಹೋರ್ಡಿಂಗ್ ಕುಸಿತದಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಮುಂಬಯಿಯಲ್ಲಿ ಏನಾಯಿತು?

ಮುಂಬೈನ ಘಾಟ್‌ಕೋಪರ್‌ನಲ್ಲಿ ಸೋಮವಾರ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಿಂದಾಗಿ 70 ಮೀಟರ್ ಎತ್ತರದ ಜಾಹೀರಾತು ಫಲಕ ಕುಸಿದಿದೆ. ಘಾಟ್‌ಕೋಪರ್‌ನ ಚೆಡ್ಡಾನಗರ ಜಂಕ್ಷನ್‌ನಲ್ಲಿರುವ ಪೆಟ್ರೋಲ್ ಪಂಪ್‌ನಲ್ಲಿ ಅಕ್ರಮ ಹೋರ್ಡಿಂಗ್ ಬಿದ್ದಿದೆ. ಸೋಮವಾರ ಸಂಜೆ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, 64 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಲ್ಲಿ ಇನ್ನೂ ಸಿಲುಕಿರುವ ದೇಹಗಳನ್ನು ಹೊರತೆಗೆಯಲು ಎನ್‌ಡಿಆರ್‌ಎಫ್ ರಾತ್ರಿ ರಕ್ಷಣಾ ಕಾರ್ಯಾಚರಣೆಯನ್ನು ಅಗೆಯುವ ಯಂತ್ರಗಳೊಂದಿಗೆ ನಡೆಸಿತು.

ಇನ್ನೂ 20ರಿಂದ 30 ಜನರು ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ ಎಂದು ಬಿಎಂಸಿ ಹೇಳಿಕೆಯಲ್ಲಿ ತಿಳಿಸಿದೆ. ಆದರೆ ಪೆಟ್ರೋಲ್ ಪಂಪ್‌ನಲ್ಲಿ ಸಂಭವಿಸಿದ ಕುಸಿತದಿಂದಾಗಿ ಅವಶೇಷಗಳನ್ನು ತೆಗೆದುಹಾಕುವಲ್ಲಿ NDRF ಸಮಸ್ಯೆಗಳನ್ನು ಎದುರಿಸುತ್ತಿದೆ, ಇದು ಅಪಾಯಕಾರಿ ಪರಿಸ್ಥಿತಿಗೆ ಕಾರಣವಾಗಬಹುದು.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ಘಟನಾ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ಹಾಗೂ ಗಾಯಗೊಂಡವರಿಗೆ ಚಿಕಿತ್ಸೆ ನೀಡುವುದಾಗಿ ಘೋಷಿಸಿದರು. ಪಾಲಿಕೆಯಿಂದ ಯಾವುದೇ ಪೂರ್ವಾನುಮತಿ ಪಡೆಯದೆ ಅಕ್ರಮವಾಗಿ ಜಾಹೀರಾತು ಫಲಕ ಹಾಕಲಾಗಿದೆ ಎಂದು ಬಿಎಂಸಿ ಹೇಳಿದೆ. ಮುಂಬೈ ಪೊಲೀಸರು ಐಪಿಸಿ 304, 338, 337, ಮತ್ತು 34ರ ಅಡಿಯಲ್ಲಿ ಮಾಲೀಕ ಭವೇಶ್ ಭಿಡೆ ಮತ್ತು ಇತರರ ವಿರುದ್ಧ ಪಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಜೀವಹಾನಿಗೆ ಸಂತಾಪ ಸೂಚಿಸಿರುವ ರಾಷ್ಟ್ರಪತಿ ಮುರ್ಮು, “ಮುಂಬೈನ ಘಾಟ್‌ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಹಲವಾರು ಸಾವುನೋವುಗಳ ಸುದ್ದಿ ಅತ್ಯಂತ ದುಃಖಕರವಾಗಿದೆ. ನಾನು ದುಃಖಿತ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ. ಗಾಯಗೊಂಡವರ ಮತ್ತು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಯಶಸ್ಸಿಗೆ ಹಾರೈಸುತ್ತೇನೆ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ: Dust Storm : ಧೂಳು ಗಾಳಿಗೆ ಹೋರ್ಡಿಂಗ್ ಕುಸಿದು ಮೂವರ ಸಾವು, 59 ಮಂದಿಗೆ ಗಾಯ

Continue Reading

ದೇಶ

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಮೇ 14ರಂದು ನಾಮಪತ್ರ ಸಲ್ಲಿಸಲಿದ್ದು, ಇದಕ್ಕೂ ಮೊದಲು ಅಂದರೆ ಸೋಮವಾರ (ಮೇ 13) ಸಂಜೆ ವಾರಾಣಸಿಯಲ್ಲಿ ಬೃಹತ್‌ ರೋಡ್‌ ಶೋ ನಡೆಸಿದರು. ಆ ಮೂಲಕ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಮೋದಿ ಅವರು ಶಕ್ತಿ ಪ್ರದರ್ಶನ ಮಾಡಿದರು. ಇನ್ನು, ಮಂಗಳವಾರ ಮೋದಿ ಅವರು ವಾರಾಣಸಿಯಲ್ಲಿ ಯಾವೆಲ್ಲ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ? ಇಲ್ಲಿದೆ ಮಾಹಿತಿ.

VISTARANEWS.COM


on

Narendra Modi
Koo

ವಾರಾಣಸಿ: ಉತ್ತರ ಪ್ರದೇಶದ ವಾರಾಣಸಿ (Varanasi) ಲೋಕಸಭೆ ಕ್ಷೇತ್ರದಿಂದ ಸತತ ಮೂರನೇ ಬಾರಿ ಸ್ಪರ್ಧಿಸುತ್ತಿರುವ (Lok Sabha Election) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಗಳವಾರ (ಮೇ 14) ನಾಮಪತ್ರ ಸಲ್ಲಿಸಲಿದ್ದಾರೆ. ಸೋಮವಾರ (ಮೇ 13) ಬೃಹತ್‌ ರೋಡ್‌ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿರುವ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಜತೆಗೆ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.

ಬೆಳಗ್ಗೆ 10.45ಕ್ಕೆ ಕಾಲಭೈರವ ದೇಗುಲಕ್ಕೆ ಭೇಟಿ

ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ ಸಲ್ಲಿಕೆಗೂ ಮೊದಲು ಬೆಳಗ್ಗೆ 10.45ಕ್ಕೆ ಕಾಲಭೈರವ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಇದಾದ ಬಳಿಕ ಮೋದಿ ಅವರು ಲೋಕಸಭೆ ಚುನಾವಣೆ ದೃಷ್ಟಿಯಿಂದ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರ ಜತೆ ಮಹತ್ವದ ಸಭೆ ನಡೆಸಲಿದ್ದಾರೆ. ಲೋಕಸಭೆ ಚುನಾವಣೆ ಗೆಲುವು, ಪಕ್ಷ ಸಂಘಟನೆ ಸೇರಿ ಹಲವು ವಿಷಯಗಳ ಕುರಿತು ನಾಯಕರು ಹಾಗೂ ಕಾರ್ಯಕರ್ತರ ಜತೆ ಮೋದಿ ಚರ್ಚಿಸಲಿದ್ದಾರೆ.

ವಾರಾಣಸಿಯಲ್ಲಿ ಮೋದಿ ರೋಡ್‌ ಶೋ ಝಲಕ್

11.40ಕ್ಕೆ ನಾಮಪತ್ರ ಸಲ್ಲಿಕೆ

ಮಂಗಳವಾರ ಬೆಳಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದೆ. ಇದು ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ. ನಾಮಪತ್ರ ಸಲ್ಲಿಕೆಗೂ ಮುನ್ನವೇ ಅವರು ಸೋಮವಾರ ರೋಡ್‌ ಶೋ ನಡೆಸಿ ಜನರ ಗಮನ ಸೆಳೆದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿಯ ಕೆಲ ನಾಯಕರು ಮೋದಿ ಅವರಿಗೆ ಸಾಥ್‌ ನೀಡಲಿದ್ದಾರೆ ಎಂದು ತಿಳಿದುಬಂದಿದೆ. ರೋಡ್‌ ಶೋ ಬಳಿಕ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ವಾರಾಣಸಿಯಲ್ಲಿ ಹೊಸ ಅಲೆ ಸೃಷ್ಟಿಸಿದ ಮೋದಿ, ಶಕ್ತಿ ಪ್ರದರ್ಶನ; ರೋಡ್‌ ಶೋ Photos ಇಲ್ಲಿವೆ

Continue Reading

ಪ್ರಮುಖ ಸುದ್ದಿ

Sushil Kumar Modi : ಬಿಹಾರದ ಮಾಜಿ ಡಿಸಿಎಂ ಸುಶೀಲ್ ಕುಮಾರ್ ಮೋದಿ ನಿಧನ

VISTARANEWS.COM


on

Sushil Kumar Modi
Koo

ನವದೆಹಲಿ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ (72) ಸೋಮವಾರ ನಿಧನನ ಹೊಂದಿದ್ದಾರೆ. ಸುಶೀಲ್ ಕುಮಾರ್ ಮೋದಿ ಅವರು ಕ್ಯಾನ್ಸರ್​​ ಸಮಸ್ಯೆಯಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿಯಿಂದಾಗಿ 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಈ ವರ್ಷದ ಏಪ್ರಿಲ್​​ನಲ್ಲಿ ಘೋಷಿಸಿದ್ದರು. ಮಾಜಿ ರಾಜ್ಯಸಭಾ ಸಂಸದರಾಗಿದ್ದ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಸೇರಿದಂತೆ ಹಲವಾರು ಬಿಜೆಪಿ ನಾಯಕರು ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಪಕ್ಷದಲ್ಲಿ ನನ್ನ ಮೌಲ್ಯಯುತ ಸಹೋದ್ಯೋಗಿ ಮತ್ತು ದಶಕಗಳಿಂದ ನನ್ನ ಸ್ನೇಹಿತ ಸುಶೀಲ್ ಮೋದಿ ಜಿ ಅವರ ಅಕಾಲಿಕ ನಿಧನದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಬಿಹಾರದಲ್ಲಿ ಬಿಜೆಪಿಯ ಏಳಿಗೆ ಮತ್ತು ಅದರ ಯಶಸ್ಸಿನ ಹಿಂದೆ ಅವರ ಕೊಡುಗೆ ಅಮೂಲ್ಯವಾಗಿದೆ. ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ ಅವರು ವಿದ್ಯಾರ್ಥಿ ರಾಜಕಾರಣದಿಂದ ತಮ್ಮನ್ನು ಪ್ರೇರಿತರಾಗಿದ್ದರು. ಅವರು ತುಂಬಾ ಶ್ರಮಜೀವಿ ಮತ್ತು ಸ್ನೇಹಪರ ಶಾಸಕ ಎಂದು ಹೆಸರುವಾಸಿಯಾಗಿದ್ದರು. ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಬಹಳ ಆಳವಾಗಿತ್ತು. ಅವರು ಆಡಳಿತಗಾರರಾಗಿ ಪ್ರಶಂಸನೀಯ ಕೆಲಸವನ್ನೂ ಮಾಡಿದರು. ಜಿಎಸ್ಟಿ ಅಂಗೀಕಾರದಲ್ಲಿ ಅವರ ಸಕ್ರಿಯ ಪಾತ್ರವನ್ನು ಯಾವಾಗಲೂ ನೆನಪಿಸಿಕೊಳ್ಳಲಾಗುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನನ್ನ ಸಂತಾಪವಿದೆ. ಓಂ ಶಾಂತಿ! ಎಂದು ಪ್ರಧಾನಿ ಮೋದಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Tejasvi Surya: ಈ ದಲಿತ ನಾಯಕನ ಜತೆ ಚರ್ಚೆಗೆ ಬನ್ನಿ ರಾಹುಲ್‌ ಗಾಂಧಿ; ತೇಜಸ್ವಿ ಸೂರ್ಯ ಪಂಥಾಹ್ವಾನ!

ರಾಷ್ಟ್ರೀಯ ಜನತಾ ದಳ (ಆರ್​ಜೆಡಿ) ಮುಖಂಡ ತೇಜಸ್ವಿ ಯಾದವ್ ಕೂಡ ಎಕ್ಸ್ ನಲ್ಲಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಶೀಲ್ ಕುಮಾರ್ ಮೋದಿ ಯಾರು?

ಜನವರಿ 5, 1952 ರಂದು ಜನಿಸಿದ ಸುಶೀಲ್ ಕುಮಾರ್ ಮೋದಿ ಅವರು ಪಾಟ್ನಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿ ಕಾರ್ಯಕರ್ತನಾಗಿ ತಮ್ಮ ರಾಜಕೀಯ ಪ್ರಯಾಣವನ್ನು ಪ್ರಾರಂಭಿಸಿದರು, ಅಲ್ಲಿ ಅವರು 1973 ರಲ್ಲಿ ವಿದ್ಯಾರ್ಥಿ ಒಕ್ಕೂಟದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು.

ತಮ್ಮ ಮೂರು ದಶಕಗಳ ರಾಜಕೀಯ ಜೀವನದಲ್ಲಿ ಸುಶೀಲ್ ಮೋದಿ ಅವರು ಶಾಸಕ, ಎಂಎಲ್ಸಿ ಮತ್ತು ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯ ಸೇರಿದಂತೆ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಅವರು 2005 ರಿಂದ 2013 ರವರೆಗೆ ಮತ್ತು ಮತ್ತೆ 2017 ರಿಂದ 2020 ರವರೆಗೆ ಬಿಹಾರದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು.

ಹಿರಿಯ ರಾಜಕಾರಣಿ 1990 ರಲ್ಲಿ ಪಾಟ್ನಾ ಸೆಂಟ್ರಲ್ ಕ್ಷೇತ್ರದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. 1996 ರಿಂದ 2004 ರವರೆಗೆ ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದರು.

2004 ರಲ್ಲಿ ಸುಶೀಲ್ ಮೋದಿ ಭಾಗಲ್ಪುರದಿಂದ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಪ್ರವೇಶಿಸಿದ್ದರು. ಆದಾಗ್ಯೂ, 2005 ರಲ್ಲಿ, ಅವರು ತಮ್ಮ ಲೋಕಸಭಾ ಹುದ್ದೆಗೆ ರಾಜೀನಾಮೆ ನೀಡಿ ವಿಧಾನ ಪರಿಷತ್ತಿಗೆ ಸೇರಿ ಬಿಹಾರದ ಉಪಮುಖ್ಯಮಂತ್ರಿಯ ಪಾತ್ರವನ್ನು ವಹಿಸಿಕೊಂಡಿದ್ದರು.

Continue Reading
Advertisement
Viral News
ದೇಶ5 mins ago

Viral News: 100 ದಿನ..200ಕ್ಕೂ ಹೆಚ್ಚು ವಿಮಾನಗಳು.. ಮಹಿಳಾ ಪ್ರಯಾಣಿಕರೇ ಈತನ ಟಾರ್ಗೆಟ್‌, ಇದು ಹೈಟೆಕ್‌ ಕಳ್ಳನ ಕಥೆ

HD Revanna Bail
ಪ್ರಮುಖ ಸುದ್ದಿ17 mins ago

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Kalki 2898 AD
ಸಿನಿಮಾ18 mins ago

Kalki 2898 AD: ʼಕಲ್ಕಿʼ ಚಿತ್ರಕ್ಕಾಗಿ ಕನ್ನಡದಲ್ಲಿ ಡಬ್‌ ಮಾಡಲಿದ್ದಾರೆ ದೀಪಿಕಾ ಪಡುಕೋಣೆ

mumbai hoarding collapse
ಪ್ರಮುಖ ಸುದ್ದಿ53 mins ago

Hoarding Collapse: ಹೋರ್ಡಿಂಗ್‌ ಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿಕೆ, ಇನ್ನಷ್ಟು ಜನ ಅದರಡಿಯಲ್ಲಿ

Vertigo Problem
ಆರೋಗ್ಯ1 hour ago

Vertigo Problem: ನಿಮಗೆ ಇದ್ದಕ್ಕಿದ್ದಂತೆ ತಲೆ ಸುತ್ತುತ್ತಿದೆಯೆ? ಈ ವಿಷಯ ತಿಳಿದುಕೊಂಡಿರಿ

king dasharatha dhavala dharini
ಅಂಕಣ1 hour ago

ಧವಳ ಧಾರಿಣಿ ಅಂಕಣ: ಆತುರಗೆಟ್ಟು ಸ್ತಿಮಿತ ಕಳೆದುಕೊಂಡವನ ವಿಲಾಪ

karnataka weather Forecast
ಮಳೆ2 hours ago

Karnataka weather: ವ್ಯಾಪಕ ಮಳೆಯೊಂದಿಗೆ 60 ಕಿ.ಮೀ ವೇಗದಲ್ಲಿ ಅಪ್ಪಿಳಿಸಲಿದೆ ಗಾಳಿ; 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Food Tips Kannada
ಆಹಾರ/ಅಡುಗೆ2 hours ago

Food Tips Kannada: ಸಸ್ಯಾಹಾರಿಗಳಿಗೆ ಒಮೇಗಾ 3 ಕೊಬ್ಬಿನಾಮ್ಲ ಯಾವುದರಲ್ಲಿ ದೊರೆಯುತ್ತದೆ?

Narendra Modi
ದೇಶ3 hours ago

Narendra Modi: ಇಂದು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆ ಜತೆಗೆ ಮೋದಿ ಕಾರ್ಯಕ್ರಮ ಏನೇನು?

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ3 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ13 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ14 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ14 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ14 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ15 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ21 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ2 days ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

ಟ್ರೆಂಡಿಂಗ್‌