Shraddha Murder Case | ಶ್ರದ್ಧಾಳನ್ನು ಕೊಂದು ಮತ್ತೊಬ್ಬಳ ಜತೆ ಚಕ್ಕಂದ ಆಡಿದ್ದ ಅಫ್ತಾಬ್! ಆ ಯುವತಿ ಯಾರು? - Vistara News

ದಿಲ್ಲಿ ಮರ್ಡರ್

Shraddha Murder Case | ಶ್ರದ್ಧಾಳನ್ನು ಕೊಂದು ಮತ್ತೊಬ್ಬಳ ಜತೆ ಚಕ್ಕಂದ ಆಡಿದ್ದ ಅಫ್ತಾಬ್! ಆ ಯುವತಿ ಯಾರು?

ಶ್ರದ್ಧಾಳನ್ನು (Shraddha Murder Case) ತುಂಡು ತುಂಡು ಮಾಡಿ, ಫ್ರಿಡ್ಜ್‌ನಲ್ಲಿಟ್ಟು ಮತ್ತೊಬ್ಬ ಯುವತಿ ಜತೆ ಚಕ್ಕಂದ ಆಡಿದ್ದ ಸುದ್ದಿ ಗೊತ್ತಲ್ಲ? ಆ ಯುವತಿ ವೃತ್ತಿಯಲ್ಲಿ ವೈದ್ಯಳಾಗಿದ್ದು, ಡೇಟಿಂಗ್ ಆ್ಯಪ್ ಮೂಲಕ ಪರಿಚಯ ಮಾಡಿಕೊಂಡಿದ್ದ ಪಾತಕಿ ಅಫ್ತಾಬ್.

VISTARANEWS.COM


on

Aftab Poonawala Water bill is Also Clues For Cops
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ತನ್ನ ಲಿವ್ ಇನ್ ಸಂಗಾತಿ ಶ್ರದ್ಧಾ ವಾಳ್ಕರಳನ್ನು (Shraddha Murder Case) ಕೊಂದು, ದೇಹವನ್ನು 35 ಭಾಗ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು, ಮತ್ತೊಬ್ಬ ಯುವತಿ ಜತೆ ಅದೇ ಫ್ಲ್ಯಾಟ್‌ನಲ್ಲಿ ಚಕ್ಕಂದ ಆಡಿದ್ದ ಪಾತಕಿ ಅಫ್ತಾಬ್ ಪೂನಾವಾಲ. ಈ ಸುದ್ದಿ ಹೊರಗೆ ಗೊತ್ತಾದಾಗ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಅಫ್ತಾಬ್ ಜತೆ ಆಗ ಮಂಚ ಹಂಚಿಕೊಂಡ ಯುವತಿ ಯಾರೆಂದು ಗೊತ್ತಾಗಿದ್ದು, ಆಕೆ ವೃತ್ತಿಯಲ್ಲಿ ವೈದ್ಯಳಾಗಿದ್ದಾಳೆ. ಆದರೆ, ಆಕೆಗೆ ಶ್ರದ್ಧಾಳ ಕೊಲೆಯಾಗಲೀ, ಫ್ರಿಡ್ಜ್‌ನಲ್ಲಿ ಆಕೆಯ ದೇಹದ ಭಾಗಗಳು ಇರುವುದಾಗಲಿ ಗೊತ್ತಿರಲಿಲ್ಲ!

ವೃತ್ತಿಯಲ್ಲಿ ವೈದ್ಯಳಾಗಿರುವ ಯುವತಿಯನ್ನು ಪಾತಕಿ ಅಫ್ತಾಬ್ ಬಂಬಲ್ (Bumble) ಡೇಟಿಂಗ್ ಆ್ಯಪ್ ಮೂಲಕ ಸಂಪರ್ಕಿಸಿದ್ದ. ಇನ್‌ಫ್ಯಾಕ್ಟ್, ಕೊಲೆಯಾದ ಶ್ರದ್ಧಾಳನ್ನು ಇದೇ ರೀತಿಯ ಡೇಟಿಂಗ್ ಆ್ಯಪ್ ಮೂಲಕವೇ ಭೇಟಿಯಾಗಿದ್ದ ಎಂದು ದಿಲ್ಲಿ ಪೊಲೀಸರು ತಿಳಿಸಿದ್ದಾರೆ. ಪಾತಕಿ ಜತೆಗೆ ಸಂಬಂಧ ಬೆಳೆಸಿದ್ದ ವೈದ್ಯೆ ಬಗ್ಗೆ ಪೊಲೀಸರು ಸತತ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಶ್ರದ್ಧಾ ವಾಳ್ಕರ್ ಕೊಲೆಯ ತನಿಖೆಯ ಭಾಗವಾಗಿ ದಿಲ್ಲಿ ಪೊಲೀಸರು, ಬಂಬಲ್ ಡೇಟಿಂಗ್ ಆ್ಯಪ್ ಸಂಪರ್ಕಿಸಿ, ಆಫ್ತಾಪ್ ಈ ಆ್ಯಪ್‌ನಲ್ಲಿ ಯಾವೆಲ್ಲ ಮಹಿಳೆಯರನ್ನು ಸಂಪರ್ಕಿಸಿದ್ದಾನೆಂಬ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಏತನ್ಮಧ್ಯೆ, ನವೆಂಬರ್ 28ರಂದು ಪಾತಕಿ ಅಫ್ತಾಬ್‌ನನ್ನು ಸುಳ್ಳು ಪತ್ತೆ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಇದೇ ವೇಳೆ, ದಿಲ್ಲಿ ನ್ಯಾಯಾಲಯವು ಪಾತಕಿ ಅಫ್ತಾಬ್‌ನನ್ನು ಮತ್ತೆ 13 ದಿನಗಳವರೆಗೆ ಪೊಲೀಸ್ ವಶಕ್ಕೆ ನೀಡಿದೆ. ಆತನನ್ನು ತಿಹಾರ್ ಜೈರಿಗೆ ಸ್ಥಳಾಂತರಿಸಲಾಗುತ್ತಿದ್ದು, ಡಿಸೆಂಬರ್ 8ರವರೆಗೆ ಆತ ಇಲ್ಲಿಯೇ ಇರಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ | Shraddha Murder Case| ತಾನೊಬ್ಬ ಮುಸ್ಲಿಂ ಎಂದು ಹೇಳಿಕೊಂಡು ಅಫ್ತಾಬ್​ ಕೃತ್ಯವನ್ನು ಸಮರ್ಥಿಸಿದ್ದ ಹಿಂದು ಯುವಕ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಿಲ್ಲಿ ಮರ್ಡರ್

Murder: ಕಪಾಟಿನಲ್ಲಿತ್ತು ಯುವತಿಯ ಶವ; ಲಿವ್ ಇನ್‌ ಸಂಬಂಧದಲ್ಲಿದ್ದ ಗೆಳೆಯ ನಾಪತ್ತೆ!

Murder: ಮಗಳ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ತಂದೆ ಆಕೆಯನ್ನು ಹುಡುಕಿಕೊಂಡು ಆಕೆ ವಾಸವಿದ್ದ ದೆಹಲಿಯ ದ್ವಾರಕಾ ಪ್ರದೇಶದಲ್ಲಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಯ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಆಕೆಯ ಸಂಗಾತಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

VISTARANEWS.COM


on

By

Murder
Koo

ಹೊಸದಿಲ್ಲಿ: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ (Leave in relationship) ಯುವತಿಯೊಬ್ಬಳು ಶವವಾಗಿ (Murder) ಮನೆಯ ಕಪಾಟಿನಲ್ಲಿ ಪತ್ತೆಯಾಗಿರುವ ಘಟನೆ ಹೊಸದಿಲ್ಲಿಯ (delhi) ದ್ವಾರಕಾದಲ್ಲಿ (dwaraka) ನಡೆದಿದೆ.

ದ್ವಾರಕಾದ ದಾಬ್ರಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ರುಖ್ಸರ್ ರಜಪೂತ್ (26) ಕೊಲೆಯಾದ ಯುವತಿ. ಗೆಳೆಯ ವಿಪಾಲ್ ಟೈಲರ್ ಆಕೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಮೀರತ್‌ನಲ್ಲಿ ವಾಸವಾಗಿರುವ ರುಖ್ಸರ್ ರಜಪೂತ್ ಳ ತಂದೆ ಮಗಳನ್ನು ಹುಡುಕಿಕೊಂಡು ಬುಧವಾರ ರಾತ್ರಿ ಬಂದಾಗ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Assault Case : ಆಫೀಸ್‌ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸುಪಾರಿ ಕೊಟ್ಟು ಹೊಡೆಸಿದ್ರು ಸಿಬ್ಬಂದಿ!

ಒಂದೂವರೆ ವರ್ಷಗಳ ಹಿಂದೆ ಭೇಟಿ

ರಜಪೂತ್ ಗುಜರಾತ್‌ನಲ್ಲಿ ಕರಕುಶಲ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಳು. ಒಂದೂವರೆ ವರ್ಷಗಳ ಹಿಂದೆ ಅಲ್ಲಿ ಆಕೆ ವಿಪಾಲ್‌ನನ್ನು ಭೇಟಿಯಾಗಿದ್ದಳು. ದೆಹಲಿಗೆ ಬಂದ ಬಳಿಕ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿರುವ ವಿಷಯ ಆಕೆಯ ತಂದೆ ಮುಸ್ತಾಕಿನ್ ಮತ್ತು ಅವರ ಕುಟುಂಬಕ್ಕೆ ತಿಳಿದಿತ್ತು.

ತಂದೆಗೆ ಕೊನೆಯ ಕರೆ

ರುಖ್ಸರ್ ರಜಪೂತ್ ಬುಧವಾರ ಮಧ್ಯಾಹ್ನ ತಂದೆ ಮೊಹಮ್ಮದ್ ಮುಸ್ತಾಕಿನ್ ಅವರಿಗೆ ಕರೆ ಮಾಡಿದ್ದರು. ಆಗ ಆಕೆ ತುಂಬಾ ಅಸಮಾಧಾನದಿಂದ ಇದ್ದಿದ್ದು ಕಂಡು ಬಂದಿತ್ತು. ಸಂಜೆ ವೇಳೆಗೆ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಆತಂಕದಿಂದ ಮುಸ್ತಾಕಿನ್ ಅವರು ರಾತ್ರಿಯೇ ರುಖ್ಸಾರ್‌ನನ್ನು ಹುಡುಕಿಕೊಂಡು ತಮ್ಮ ಸಂಬಂಧಿಕರೊಂದಿಗೆ ದೆಹಲಿಗೆ ಬಂದಿದ್ದರು.

ಅವರು ರಜಪೂತ್ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಗೆ ಹೊರಗಿನಿಂದ ಬೀಗ ಹಾಕಲಾಗಿತ್ತು. ಅವರು ಬೀಗ ಎಲ್ಲಿ ಇಡುತ್ತಾರೆ ಎಂಬುದು ತಿಳಿದಿದ್ದ ಮುಸ್ತಾಕಿನ್ ಮನೆಯ ಬೀಗ ತೆರೆದು ಒಳಗೆ ಬಂದು ಹುಡುಕಿದಾಗ ಕಪಾಟಿನಲ್ಲಿ ರಜಪೂತ್ ಅವರ ಶವ ಪತ್ತೆಯಾಗಿದೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೇಹದ 15ಕ್ಕೂ ಹೆಚ್ಚು ಕಡೆ ಗಾಯ

ರುಖ್ಸರ್ ರಜಪೂತ್ ನ ಮುಖದ ಮೇಲೆ ಆಳವಾದ ಗಾಯಗಳು ಸೇರಿ ದೇಹದಾದ್ಯಂತ 15ಕ್ಕೂ ಹೆಚ್ಚು ಗಾಯಗಳಿದ್ದವು. ಮೇಲ್ನೋಟಕ್ಕೆ, ಮಹಿಳೆಯನ್ನು ಕತ್ತು ಹಿಸುಕಿ ಕೊಂದು ಹಾಕಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೆಳೆಯ ನಾಪತ್ತೆ

ರುಖ್ಸರ್ ರಜಪೂತ್ ನ ಗೆಳೆಯ ವಿಪಾಲ್ ಟೈಲರ್ ನಾಪತ್ತೆಯಾಗಿರುವುದರಿಂದ ಆತನೇ ಪ್ರಮುಖ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ. ವಿಪಾಲ್ ಟೈಲರ್ ಎಂಬಾತನೊಂದಿಗೆ ಸುಮಾರು ಒಂದೂವರೆ ತಿಂಗಳಿನಿಂದ ಈ ಅಪಾರ್ಟ್ ಮೆಂಟ್ ನಲ್ಲಿ ರುಖ್ಸರ್ ರಜಪೂತ್ ವಾಸವಾಗಿದ್ದಳು. ರುಖ್ಸರ್ ರಜಪೂತ್ ಮದುವೆಯಾಗಿರುವುದಾಗಿ ಹೇಳಲಾಗಿದ್ದು, ಈ ಕುರಿತು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಉಪ ಆಯುಕ್ತ (ದ್ವಾರಕಾ) ಅಂಕಿತ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ದಾಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದ ಎಂದು ಸಿಂಗ್ ಹೇಳಿದರು.

ಮುಸ್ತಾಕಿಮ್ ಹೇಳಿಕೆಯನ್ನು ಆಧರಿಸಿ ಕೊಲೆ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಪತ್ತೆ ಹಚ್ಚಲು ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದಿಲ್ಲಿ ಮರ್ಡರ್

ಶ್ರದ್ಧಾ ವಾಳ್ಕರ್​ ಹತ್ಯೆ ಪ್ರಕರಣದಲ್ಲಿ ಸಿದ್ಧವಾಯ್ತು 3000 ಪುಟಗಳ ಕರಡು ಆರೋಪ ಪಟ್ಟಿ; ಕಾನೂನು ತಜ್ಞರಿಂದ ಪರಿಶೀಲನೆ

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂದು ಬಿಂಬಿಸಿದ್ದ.

VISTARANEWS.COM


on

draft chargesheet of Shraddha Walkar murder case Ready By Delhi Police
ಅಫ್ತಾಬ್​ ಮತ್ತು ಶ್ರದ್ಧಾ ವಾಳ್ಕರ್​
Koo

ನವ ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಳ್ಕರ್ (Shraddha Walkar)​ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಸುಮಾರು 3000 ಪುಟಗಳ ಕರಡು ಚಾರ್ಜ್​ಶೀಟ್​ ಸಿದ್ಧಪಡಿಸಿ ಇಟ್ಟಿದ್ದಾರೆ. ವಿಧಿವಿಜ್ಞಾನ ವರದಿಗಳು ಮತ್ತು ಎಲೆಕ್ಟ್ರಾನಿಕ್ ಪುರಾವೆಗಳು ಅಂದರೆ ಇಮೇಲ್​, ಮೊಬೈಲ್ ಫೋಟೋಗ್ರಾಫ್​, ಹಣ ವರ್ಗಾವಣೆ ದಾಖಲೆಗಳನ್ನು ಒಳಗೊಂಡಂತೆ ಸುಮಾರು 100 ಸಾಕ್ಷಿಗಳನ್ನು ಈ ಚಾರ್ಜ್​​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಕರಡು ದಾಖಲೆಯನ್ನು ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಂತಿಮ ಆರೋಪ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ದೆಹಲಿಯಲ್ಲಿ 2022ರ ಮೇ ತಿಂಗಳಲ್ಲಿ ನಡೆದಿದ್ದ ಶ್ರದ್ಧಾ ವಾಳ್ಕರ್​ ಭೀಕರ ಹತ್ಯೆ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾನೆ. ಈತ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದು, ಆಕೆಯ ಶವವನ್ನು 35ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ 300 ಲೀಟರ್​ ಸಾಮರ್ಥ್ಯದ ಫ್ರಿಜ್​ ಖರೀದಿಸಿ ಆ ಶವದ ತುಂಡುಗಳನ್ನು ಅದರಲ್ಲಿ ಇಟ್ಟಿದ್ದ. ನಂತರ ತಮ್ಮ ಅಪಾರ್ಟ್​ಮೆಂಟ್​ ಸಮೀಪವೇ ಇದ್ದಿದ್ದ ಮೆಹ್ರೌಲಿ ಅರಣ್ಯದ ಹಲವು ಭಾಗಗಳಲ್ಲಿ ಅವುಗಳನ್ನು ಎಸೆದಿದ್ದ. ಮೆಹ್ರೌಲಿ ಅರಣ್ಯವನ್ನು ಜಾಲಾಡಿದಾಗ ಹಲವು ಮೂಳೆಗಳು ಪತ್ತೆಯಾಗಿದ್ದು, ಅವೆಲ್ಲ ಶ್ರದ್ಧಾಳದ್ದೇ ಎಂದೂ ಡಿಎನ್​ಎ ಪರೀಕ್ಷೆಯಲ್ಲಿ.

ಇದನ್ನೂ ಓದಿ: Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂಬುದನ್ನು ಬಿಂಬಿಸಲು ಹೋಗಿದ್ದ. ಶ್ರದ್ಧಾ ತಂದೆ-ತಾಯಿಯಿಂದ ದೂರವಾಗಿದ್ದರೂ, ಕೆಲವು ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಳು. ಆದರೆ ಬರುಬರುತ್ತ ಆಕೆ ಸಂಪರ್ಕಕ್ಕೆ ಸಿಗದಂತಾದಾಗ ಶ್ರದ್ಧಾಳ ತಂದೆಯ ಸ್ನೇಹಿತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದರು. ಆಕೆಯ ತಂದೆಗೆ ಈ ವಿಚಾರವನ್ನು ಹೇಳಿದ್ದರು. ಅದರ ಬೆನ್ನಲ್ಲೇ ಶ್ರದ್ಧಾಳ ಅಪ್ಪ ದೂರು ದಾಖಲು ಮಾಡಿದ್ದರು. ತನಿಖೆ ನಡೆಸಿದಾಗ ಆಕೆ ಕೊಲೆಯಾಗಿದ್ದು ಗೊತ್ತಾಗಿದೆ. ನವೆಂಬರ್​ 12ರಂದು ಅಫ್ತಾಬ್​ ಅರೆಸ್ಟ್​ ಆಗಿದ್ದಾನೆ ಮತ್ತು ಕೊಲೆಯನ್ನು ತಾನೇ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದಾನೆ.

Continue Reading

ಕ್ರೈಂ

Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ!

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು.

VISTARANEWS.COM


on

Shraddha Murder Case
Koo

ನವ ದೆಹಲಿ: ಲಿವ್​ ಇನ್​ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾದ ಶ್ರದ್ಧಾ ವಾಳ್ಕರ್​​ ಕೇಸ್​ ತನಿಖೆ ಮುಂದುವರಿದೆ. ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ದೆಹಲಿಯ ತಿಹಾರ್​ ಜೈಲಿನಲ್ಲಿದ್ದು, ಮತ್ತೊಂದೆಡೆ ಅವನ ವಿಚಾರಣೆಯೂ ನಡೆಯುತ್ತಿದೆ. ಅಫ್ತಾಬ್ ಮತ್ತು ಶ್ರದ್ಧಾ ಬೇರೆ ಧರ್ಮದವರು. ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್​ ಜತೆ ಬದುಕುತ್ತಿದ್ದಳು. ಕಳೆದ ಮೇ ತಿಂಗಳಲ್ಲಿ ಅಫ್ತಾಬ್​ ಆಕೆಯನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ, ಅವುಗಳನ್ನೆಲ್ಲ ಫ್ರಿಜ್​​ನಲ್ಲಿಟ್ಟುಕೊಂಡಿದ್ದ. ಬಳಿಕ ತಮ್ಮ ಅಪಾರ್ಟ್​​ಮೆಂಟ್​​ಗೆ ಸಮೀಪದಲ್ಲೇ ಇರುವ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಗುರುಗ್ರಾಮದ ಬಳಿಯ ಅರಣ್ಯದಲ್ಲೂ ಕೆಲವು ತುಂಡುಗಳನ್ನು ಎಸೆದಿದ್ದ.

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು. ಅಫ್ತಾಬ್​ ಶ್ರದ್ಧಾಳ ದೇಹವನ್ನು ಯಾವ ಆಯುಧದಿಂದ ಕತ್ತರಿಸಿದ್ದಾನೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಆ ಮೂಳೆಗಳನ್ನು ಇನ್ನಷ್ಟು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಈಗ ಹೊರಬಿದ್ದಿದೆ. ಅಫ್ತಾಬ್​ ಪೂನಾವಾಲಾ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಕೊಂದು, ಬಳಿಕ ಗರಗಸದಲ್ಲಿ ಆಕೆಯ ದೇಹವನ್ನು ತುಂಡರಿಸಿದ್ದಾನೆ ಎಂಬುದು ಗೊತ್ತಾಗಿದೆ.

ಅಫ್ತಾಬ್​ ಪೂನಾವಾಲಾ ಅಪಾರ್ಟ್​ಮೆಂಟ್​​ನಿಂದ ಪೊಲೀಸರು ಹಲವು ಬಗೆಯ ಮಾರಕಾಸ್ತ್ರಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಆದರೆ ಅದರಲ್ಲಿ ಶ್ರದ್ಧಾಳನ್ನು ತುಂಡರಿಸಲು ಆತ ಯಾವ ಆಯುಧ ಬಳಸಿದ್ದ ಗೊತ್ತಾಗಿರಲಿಲ್ಲ. ಅಫ್ತಾಬ್​ ಮಂಪರು ಪರೀಕ್ಷೆ ವೇಳೆ, ತಾನು ಚೀನಿ ಕ್ಲೀವರ್ (ಮಾಂಸವನ್ನು ಕತ್ತರಿಸಲು ಬಳಸುವ ದೊಡ್ಡ ಚಾಕು) ಬಳಸಿದ್ದಾಗಿ ಹೇಳಿಕೊಂಡಿದ್ದಾನೆ ಎಂಬ ವರದಿ ಬಂದಿದ್ದರೂ, ಅದು ಸ್ಪಷ್ಟವಾಗಿರಲಿಲ್ಲ.

ಇದನ್ನೂ ಓದಿ: Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

Continue Reading

ದಿಲ್ಲಿ ಮರ್ಡರ್

Shraddha Walkar | ತನ್ನ ಕುಟುಂಬದ ಸದಸ್ಯರ ಭೇಟಿಗೆ ನಿರಾಕರಿಸುತ್ತಿರುವ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್

ಶ್ರದ್ಧಾ ವಾಳ್ಕರ್ (Shraddha Walkar) ಕೊಲೆ ಆರೋಪಿ, 28 ವರ್ಷದ ಅಫ್ತಾಬ್ ಪೂನಾವಾಲ ನವೆಂಬರ್ 26ರಿಂದ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ.

VISTARANEWS.COM


on

Aaftab used Chinese knife To Cut Shraddha Body
Koo

ನವದೆಹಲಿ: ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಳ್ಕರಳನ್ನು (Shraddha Walkar) ತುಂಡು ತುಂಡಾಗಿ ಕತ್ತರಿಸಿ ಭಯಾನಕವಾಗಿ ಕೊಲೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲ (Aftab Poonawala) ಈಗ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಆತನನ್ನು ಭೇಟಿಯಾಗಲು ಬಂದ ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾನೆಂದು ತಿಳಿದು ಬಂದಿದೆ.

28 ವರ್ಷದ ಅಫ್ತಾಬ್‌ ನವೆಂಬರ್ 26ರಿಂದ ತಿಹಾರ್ ಜೈಲಿನಲ್ಲಿದ್ದಾನೆ. ಆತ ತನ್ನನ್ನು ಯಾರು ಭೇಟಿ ಮಾಡಬೇಕೆಂಬ ಕುರಿತು ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ಇನ್ನಷ್ಟೇ ನೀಡಬೇಕಿದೆ. ನಿಯಮಗಳ ಪ್ರಕಾರ, ಜೈಲಿನಲ್ಲಿರುವ ವ್ಯಕ್ತಿ ವಾರಕ್ಕೆ ಎರಡು ಸಾರಿ, ತನ್ನ ಕುಟುಂಬದವರನ್ನು ಭೇಟಿ ಮಾಡಲು ಅವಕಾಶವಿದೆ.

ಸದ್ಯ ಜೈಲಿನಲ್ಲಿ ತನ್ನ ಪಾಡಿಗೆ ತಾನು ಇರುತ್ತಿರುವ ಆರೋಪಿ ಪೂನಾವಾಲ ಈ ವಾರದ ಬಳಿಕ, ಯಾರನ್ನೋ ಭೇಟಿಯಾಗುವ ಬಗ್ಗೆ ಸಹ ಕೈದಿಗಳ ಜತೆಗೆ ಮಾತನಾಡಿಕೊಂಡಿದ್ದಾನೆಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆತ ಇದವರೆಗೂ ಯಾರನ್ನು ಭೇಟಿ ಮಾಡಬೇಕೆಂಬ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜತೆಗೆ, ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲೂ ಮುಂದಾಗುತ್ತಿಲ್ಲ.

ಇದನ್ನೂ ಓದಿ | Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

Continue Reading
Advertisement
Pralhad Joshi
ಕರ್ನಾಟಕ4 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ5 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ5 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ6 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ6 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ7 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ13 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌