Shraddha Murder Case | ಶ್ರದ್ಧಾ ಹತ್ಯೆ ಕೇಸ್​​ನಲ್ಲಿ ಮಹತ್ವದ ತಿರುವು; ಅರಣ್ಯದಲ್ಲಿ ಸಿಕ್ಕ ಎಲುಬುಗಳು ಯಾರದ್ದು ಎಂಬ ಪ್ರಶ್ನೆಗೆ ಸಿಕ್ತು ಉತ್ತರ - Vistara News

ದಿಲ್ಲಿ ಮರ್ಡರ್

Shraddha Murder Case | ಶ್ರದ್ಧಾ ಹತ್ಯೆ ಕೇಸ್​​ನಲ್ಲಿ ಮಹತ್ವದ ತಿರುವು; ಅರಣ್ಯದಲ್ಲಿ ಸಿಕ್ಕ ಎಲುಬುಗಳು ಯಾರದ್ದು ಎಂಬ ಪ್ರಶ್ನೆಗೆ ಸಿಕ್ತು ಉತ್ತರ

ಮೆಹ್ರೌಲಿ ಅರಣ್ಯ ಪ್ರದೇಶಗಳಲ್ಲಿ ಸಿಕ್ಕ ಎಲುಬುಗಳು ಶ್ರದ್ಧಾಳದ್ದೇ ಎಂಬ ಅನುಮಾನ ಇತ್ತು. ಆದರೆ ಅದು ದೃಢಪಟ್ಟಿರಲಿಲ್ಲ. ಈಗ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಹೊರಬಿದ್ದಿದೆ.

VISTARANEWS.COM


on

Shraddha Murder Case Shraddha Father DNA Match with Bones
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ತನಿಖಾಧಿಕಾರಿಗಳಿಗೆ ಮಹತ್ವದ ಎಳೆಯೊಂದು ಸಿಕ್ಕಿದೆ. ದಕ್ಷಿಣ ದೆಹಲಿಯ ಮೆಹ್ರೌಲಿ ಅರಣ್ಯ ಪ್ರದೇಶದಲ್ಲಿ ಸಿಕ್ಕಿದ್ದ ಎಲುಬುಗಳು ಶ್ರದ್ಧಾಳದ್ದೇ ಎಂದು ದೃಢಪಟ್ಟಿದೆ. ದೆಹಲಿಯಲ್ಲಿ ಅಫ್ತಾಬ್​ ಎಂಬಾತ ತನ್ನ ಲಿವ್​ ಇನ್​ ಪಾರ್ಟ್ನರ್​​ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದಿದ್ದಲ್ಲದೆ, 35 ತುಂಡುಗಳಾಗಿ ಮಾಡಿ ಫ್ರಿಜ್​​ನಲ್ಲಿಟ್ಟುಕೊಂಡು, ಅದನ್ನು ಮೆಹ್ರೌಲಿ ಅರಣ್ಯದ ವಿವಿಧೆಡೆ ಎಸೆದಿದ್ದ. ಇದು 2022ರ ಮೇ ತಿಂಗಳಲ್ಲಿ ನಡೆದ ಕೊಲೆಯಾಗಿದ್ದು, ಈಗ ಬೆಳಕಿಗೆ ಬಂದಿದೆ. ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೆಹ್ರೌಲಿ ಅರಣ್ಯವನ್ನೆಲ್ಲ ಹುಡುಕಿದಾಗ ಅವರಿಗೆ ಎಲುಬುಗಳು ಸಿಕ್ಕಿವೆ. ತಲೆ ಬುರುಡೆಯೂ ಪತ್ತೆಯಾಗಿತ್ತು. ಇವನ್ನೆಲ್ಲ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಪರೀಕ್ಷಾ ವರದಿ ಬಂದಿದೆ. ‘ಶ್ರದ್ಧಾಳ ತಂದೆ ವಿಕಾಸ್​ ವಾಳ್ಕರ್​ ಮತ್ತು ಆಕೆಯ ಸೋದರನ​ ಡಿಎನ್​ಎ ಮಾದರಿ ಈ ಎಲುಬುಗಳೊಂದಿಗೆ ಹೊಂದಾಣಿಕೆಯಾಗುತ್ತಿದೆ’ ಎಂದು ವರದಿಯಲ್ಲಿ ದೃಢಪಟ್ಟಿದೆ.

ಆರೋಪಿ ಅಫ್ತಾಬ್​​ನನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನನ್ನು ಹಲವು ಮಾದರಿಯ ವಿಚಾರಣೆಗೆ ಒಳಪಡಿಸಿದ್ದಾರೆ. ಈಗಾಗಲೇ ಅವನಿಗೆ ಪಾಲಿಗ್ರಾಫ್​ ಟೆಸ್ಟ್​ ಮತ್ತು ಮಂಪರು ಪರೀಕ್ಷೆ ಮಾಡಲಾಗಿದೆ. ಅದರಲ್ಲಿ ಆತ ತಾನೇ ಶ್ರದ್ಧಾಳ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಹಾಗೇ, ತಾನು ಶ್ರದ್ಧಾಳನ್ನು ಹತ್ಯೆ ಮಾಡಲು ಬಳಸಿದ ಶಸ್ತ್ರ ಯಾವುದು? ಅವುಗಳನ್ನು ಎಲ್ಲಿಟ್ಟಿದ್ದೇನೆ? ಶ್ರದ್ಧಾಳ ದೇಹದ ತುಂಡುಗಳನ್ನು ಎಲ್ಲಿ ಎಸೆದೆ-ಎಂಬಿತ್ಯಾದಿ ಮಾಹಿತಿಗಳನ್ನು ಹೇಳಿಕೊಂಡಿದ್ದ. ಇದೀಗ ಡಿಎನ್​ಎ ಪರೀಕ್ಷೆಯಲ್ಲಿ ಆ ಎಲುಬುಗಳೆಲ್ಲ ಶ್ರದ್ಧಾಳದ್ದೇ ಎಂಬುದು ದೃಢಪಟ್ಟಿದ್ದು, ತನಿಖೆಯನ್ನು ಇನ್ನೊಂದು ಹಂತಕ್ಕೆ ತೆಗೆದುಕೊಂಡು ಹೋಗಿದೆ.

ಇದನ್ನೂ ಓದಿ: Shraddha Murder Case | ಪೊಲೀಸರು ಸಹಕಾರ ನೀಡಿದ್ದರೆ ಮಗಳು ಬದುಕುತ್ತಿದ್ದಳು, ಶ್ರದ್ಧಾ ತಂದೆ ಗಂಭೀರ ಆರೋಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಿಲ್ಲಿ ಮರ್ಡರ್

Murder: ಕಪಾಟಿನಲ್ಲಿತ್ತು ಯುವತಿಯ ಶವ; ಲಿವ್ ಇನ್‌ ಸಂಬಂಧದಲ್ಲಿದ್ದ ಗೆಳೆಯ ನಾಪತ್ತೆ!

Murder: ಮಗಳ ಫೋನ್ ಸ್ವಿಚ್ ಆಫ್ ಆಗಿದ್ದರಿಂದ ಆತಂಕಗೊಂಡ ತಂದೆ ಆಕೆಯನ್ನು ಹುಡುಕಿಕೊಂಡು ಆಕೆ ವಾಸವಿದ್ದ ದೆಹಲಿಯ ದ್ವಾರಕಾ ಪ್ರದೇಶದಲ್ಲಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಯ ಕಪಾಟಿನಲ್ಲಿ ಮಗಳ ಶವ ಪತ್ತೆಯಾಗಿದೆ. ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಆಕೆಯ ಸಂಗಾತಿ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

VISTARANEWS.COM


on

By

Murder
Koo

ಹೊಸದಿಲ್ಲಿ: ಲಿವ್ ಇನ್ ರಿಲೇಷನ್‌ಶಿಪ್‌ನಲ್ಲಿದ್ದ (Leave in relationship) ಯುವತಿಯೊಬ್ಬಳು ಶವವಾಗಿ (Murder) ಮನೆಯ ಕಪಾಟಿನಲ್ಲಿ ಪತ್ತೆಯಾಗಿರುವ ಘಟನೆ ಹೊಸದಿಲ್ಲಿಯ (delhi) ದ್ವಾರಕಾದಲ್ಲಿ (dwaraka) ನಡೆದಿದೆ.

ದ್ವಾರಕಾದ ದಾಬ್ರಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ರುಖ್ಸರ್ ರಜಪೂತ್ (26) ಕೊಲೆಯಾದ ಯುವತಿ. ಗೆಳೆಯ ವಿಪಾಲ್ ಟೈಲರ್ ಆಕೆಯನ್ನು ಕೊಂದಿರಬಹುದು ಎಂದು ಶಂಕಿಸಲಾಗಿದೆ.

ಮೀರತ್‌ನಲ್ಲಿ ವಾಸವಾಗಿರುವ ರುಖ್ಸರ್ ರಜಪೂತ್ ಳ ತಂದೆ ಮಗಳನ್ನು ಹುಡುಕಿಕೊಂಡು ಬುಧವಾರ ರಾತ್ರಿ ಬಂದಾಗ ಆಕೆ ಕೊಲೆಯಾಗಿರುವ ವಿಷಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Assault Case : ಆಫೀಸ್‌ನಲ್ಲಿ ಟಾರ್ಚರ್‌ ಕೊಟ್ಟ ಮೇಲಾಧಿಕಾರಿಗೆ ಸುಪಾರಿ ಕೊಟ್ಟು ಹೊಡೆಸಿದ್ರು ಸಿಬ್ಬಂದಿ!

ಒಂದೂವರೆ ವರ್ಷಗಳ ಹಿಂದೆ ಭೇಟಿ

ರಜಪೂತ್ ಗುಜರಾತ್‌ನಲ್ಲಿ ಕರಕುಶಲ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಳು. ಒಂದೂವರೆ ವರ್ಷಗಳ ಹಿಂದೆ ಅಲ್ಲಿ ಆಕೆ ವಿಪಾಲ್‌ನನ್ನು ಭೇಟಿಯಾಗಿದ್ದಳು. ದೆಹಲಿಗೆ ಬಂದ ಬಳಿಕ ಅವರಿಬ್ಬರೂ ಒಟ್ಟಿಗೆ ವಾಸಿಸುತ್ತಿರುವ ವಿಷಯ ಆಕೆಯ ತಂದೆ ಮುಸ್ತಾಕಿನ್ ಮತ್ತು ಅವರ ಕುಟುಂಬಕ್ಕೆ ತಿಳಿದಿತ್ತು.

ತಂದೆಗೆ ಕೊನೆಯ ಕರೆ

ರುಖ್ಸರ್ ರಜಪೂತ್ ಬುಧವಾರ ಮಧ್ಯಾಹ್ನ ತಂದೆ ಮೊಹಮ್ಮದ್ ಮುಸ್ತಾಕಿನ್ ಅವರಿಗೆ ಕರೆ ಮಾಡಿದ್ದರು. ಆಗ ಆಕೆ ತುಂಬಾ ಅಸಮಾಧಾನದಿಂದ ಇದ್ದಿದ್ದು ಕಂಡು ಬಂದಿತ್ತು. ಸಂಜೆ ವೇಳೆಗೆ ಆಕೆಯ ಫೋನ್ ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಆತಂಕದಿಂದ ಮುಸ್ತಾಕಿನ್ ಅವರು ರಾತ್ರಿಯೇ ರುಖ್ಸಾರ್‌ನನ್ನು ಹುಡುಕಿಕೊಂಡು ತಮ್ಮ ಸಂಬಂಧಿಕರೊಂದಿಗೆ ದೆಹಲಿಗೆ ಬಂದಿದ್ದರು.

ಅವರು ರಜಪೂತ್ ವಾಸವಿದ್ದ ಅಪಾರ್ಟ್ ಮೆಂಟ್ ಗೆ ಬಂದಾಗ ಮನೆಗೆ ಹೊರಗಿನಿಂದ ಬೀಗ ಹಾಕಲಾಗಿತ್ತು. ಅವರು ಬೀಗ ಎಲ್ಲಿ ಇಡುತ್ತಾರೆ ಎಂಬುದು ತಿಳಿದಿದ್ದ ಮುಸ್ತಾಕಿನ್ ಮನೆಯ ಬೀಗ ತೆರೆದು ಒಳಗೆ ಬಂದು ಹುಡುಕಿದಾಗ ಕಪಾಟಿನಲ್ಲಿ ರಜಪೂತ್ ಅವರ ಶವ ಪತ್ತೆಯಾಗಿದೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ದೇಹದ 15ಕ್ಕೂ ಹೆಚ್ಚು ಕಡೆ ಗಾಯ

ರುಖ್ಸರ್ ರಜಪೂತ್ ನ ಮುಖದ ಮೇಲೆ ಆಳವಾದ ಗಾಯಗಳು ಸೇರಿ ದೇಹದಾದ್ಯಂತ 15ಕ್ಕೂ ಹೆಚ್ಚು ಗಾಯಗಳಿದ್ದವು. ಮೇಲ್ನೋಟಕ್ಕೆ, ಮಹಿಳೆಯನ್ನು ಕತ್ತು ಹಿಸುಕಿ ಕೊಂದು ಹಾಕಲಾಗಿದೆ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗೆಳೆಯ ನಾಪತ್ತೆ

ರುಖ್ಸರ್ ರಜಪೂತ್ ನ ಗೆಳೆಯ ವಿಪಾಲ್ ಟೈಲರ್ ನಾಪತ್ತೆಯಾಗಿರುವುದರಿಂದ ಆತನೇ ಪ್ರಮುಖ ಆರೋಪಿಯಾಗಿರಬಹುದು ಎಂದು ಶಂಕಿಸಲಾಗಿದೆ. ವಿಪಾಲ್ ಟೈಲರ್ ಎಂಬಾತನೊಂದಿಗೆ ಸುಮಾರು ಒಂದೂವರೆ ತಿಂಗಳಿನಿಂದ ಈ ಅಪಾರ್ಟ್ ಮೆಂಟ್ ನಲ್ಲಿ ರುಖ್ಸರ್ ರಜಪೂತ್ ವಾಸವಾಗಿದ್ದಳು. ರುಖ್ಸರ್ ರಜಪೂತ್ ಮದುವೆಯಾಗಿರುವುದಾಗಿ ಹೇಳಲಾಗಿದ್ದು, ಈ ಕುರಿತು ಯಾವುದೇ ದಾಖಲೆಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಉಪ ಆಯುಕ್ತ (ದ್ವಾರಕಾ) ಅಂಕಿತ್ ಸಿಂಗ್ ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆಗೆ ಶಿಕ್ಷೆ) ಅಡಿಯಲ್ಲಿ ದಾಬ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಿದ್ದು, ತನಿಖೆಯನ್ನು ಕೈಗೆತ್ತಿಕೊಳ್ಳಲಾಗಿದ ಎಂದು ಸಿಂಗ್ ಹೇಳಿದರು.

ಮುಸ್ತಾಕಿಮ್ ಹೇಳಿಕೆಯನ್ನು ಆಧರಿಸಿ ಕೊಲೆ ಪ್ರಕರಣವನ್ನು ದಾಖಲಿಸಿರುವ ಪೊಲೀಸರು ಆರೋಪಿಗಾಗಿ ಪತ್ತೆ ಹಚ್ಚಲು ಸಿಸಿಟಿವಿಗಳನ್ನು ಪರಿಶೀಲಿಸಲಾಗುತ್ತಿದೆ ಮತ್ತು ತನಿಖೆಗಾಗಿ ಹಲವಾರು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದಿಲ್ಲಿ ಮರ್ಡರ್

ಶ್ರದ್ಧಾ ವಾಳ್ಕರ್​ ಹತ್ಯೆ ಪ್ರಕರಣದಲ್ಲಿ ಸಿದ್ಧವಾಯ್ತು 3000 ಪುಟಗಳ ಕರಡು ಆರೋಪ ಪಟ್ಟಿ; ಕಾನೂನು ತಜ್ಞರಿಂದ ಪರಿಶೀಲನೆ

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂದು ಬಿಂಬಿಸಿದ್ದ.

VISTARANEWS.COM


on

draft chargesheet of Shraddha Walkar murder case Ready By Delhi Police
ಅಫ್ತಾಬ್​ ಮತ್ತು ಶ್ರದ್ಧಾ ವಾಳ್ಕರ್​
Koo

ನವ ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆದ ಶ್ರದ್ಧಾ ವಾಳ್ಕರ್ (Shraddha Walkar)​ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿ ಪೊಲೀಸರು ಸುಮಾರು 3000 ಪುಟಗಳ ಕರಡು ಚಾರ್ಜ್​ಶೀಟ್​ ಸಿದ್ಧಪಡಿಸಿ ಇಟ್ಟಿದ್ದಾರೆ. ವಿಧಿವಿಜ್ಞಾನ ವರದಿಗಳು ಮತ್ತು ಎಲೆಕ್ಟ್ರಾನಿಕ್ ಪುರಾವೆಗಳು ಅಂದರೆ ಇಮೇಲ್​, ಮೊಬೈಲ್ ಫೋಟೋಗ್ರಾಫ್​, ಹಣ ವರ್ಗಾವಣೆ ದಾಖಲೆಗಳನ್ನು ಒಳಗೊಂಡಂತೆ ಸುಮಾರು 100 ಸಾಕ್ಷಿಗಳನ್ನು ಈ ಚಾರ್ಜ್​​ಶೀಟ್​​ನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಈ ಕರಡು ದಾಖಲೆಯನ್ನು ಕಾನೂನು ತಜ್ಞರು ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಅಂತಿಮ ಆರೋಪ ಪಟ್ಟಿ ಸಿದ್ಧವಾಗಲಿದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದ್ದಾಗಿ ಇಂಡಿಯಾ ಟುಡೆ ವರದಿ ಮಾಡಿದೆ.

ದೆಹಲಿಯಲ್ಲಿ 2022ರ ಮೇ ತಿಂಗಳಲ್ಲಿ ನಡೆದಿದ್ದ ಶ್ರದ್ಧಾ ವಾಳ್ಕರ್​ ಭೀಕರ ಹತ್ಯೆ ಪ್ರಕರಣ ಇತ್ತೀಚೆಗಷ್ಟೇ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ನ್ಯಾಯಾಂಗ ಬಂಧನದಲ್ಲಿಯೇ ಇದ್ದಾನೆ. ಈತ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಉಸಿರುಗಟ್ಟಿಸಿ ಕೊಂದು, ಆಕೆಯ ಶವವನ್ನು 35ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿದ್ದ. ಬಳಿಕ 300 ಲೀಟರ್​ ಸಾಮರ್ಥ್ಯದ ಫ್ರಿಜ್​ ಖರೀದಿಸಿ ಆ ಶವದ ತುಂಡುಗಳನ್ನು ಅದರಲ್ಲಿ ಇಟ್ಟಿದ್ದ. ನಂತರ ತಮ್ಮ ಅಪಾರ್ಟ್​ಮೆಂಟ್​ ಸಮೀಪವೇ ಇದ್ದಿದ್ದ ಮೆಹ್ರೌಲಿ ಅರಣ್ಯದ ಹಲವು ಭಾಗಗಳಲ್ಲಿ ಅವುಗಳನ್ನು ಎಸೆದಿದ್ದ. ಮೆಹ್ರೌಲಿ ಅರಣ್ಯವನ್ನು ಜಾಲಾಡಿದಾಗ ಹಲವು ಮೂಳೆಗಳು ಪತ್ತೆಯಾಗಿದ್ದು, ಅವೆಲ್ಲ ಶ್ರದ್ಧಾಳದ್ದೇ ಎಂದೂ ಡಿಎನ್​ಎ ಪರೀಕ್ಷೆಯಲ್ಲಿ.

ಇದನ್ನೂ ಓದಿ: Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

ಅಫ್ತಾಬ್​ ಮೇ ತಿಂಗಳಲ್ಲಿಯೇ ಶ್ರದ್ಧಾಳನ್ನು ಕೊಂದಿದ್ದರೂ ಅದು ಗೊತ್ತಾಗದಂತೆ ಭಾರಿ ನಾಟಕವಾಡಿದ್ದ. ತಿಂಗಳುಗಳ ಕಾಲ ಆಕೆಯ ಸೋಷಿಯಲ್​ ಮೀಡಿಯಾವನ್ನು ಆತನೇ ಹ್ಯಾಂಡಲ್​ ಮಾಡುವ ಮೂಲಕ, ಆಕೆ ಬದುಕಿದ್ದಾಳೆ ಎಂಬುದನ್ನು ಬಿಂಬಿಸಲು ಹೋಗಿದ್ದ. ಶ್ರದ್ಧಾ ತಂದೆ-ತಾಯಿಯಿಂದ ದೂರವಾಗಿದ್ದರೂ, ಕೆಲವು ಸಂಬಂಧಿಕರೊಂದಿಗೆ ಸಂಪರ್ಕದಲ್ಲಿದ್ದಳು. ಆದರೆ ಬರುಬರುತ್ತ ಆಕೆ ಸಂಪರ್ಕಕ್ಕೆ ಸಿಗದಂತಾದಾಗ ಶ್ರದ್ಧಾಳ ತಂದೆಯ ಸ್ನೇಹಿತರೊಬ್ಬರು ಅನುಮಾನ ವ್ಯಕ್ತಪಡಿಸಿದ್ದರು. ಆಕೆಯ ತಂದೆಗೆ ಈ ವಿಚಾರವನ್ನು ಹೇಳಿದ್ದರು. ಅದರ ಬೆನ್ನಲ್ಲೇ ಶ್ರದ್ಧಾಳ ಅಪ್ಪ ದೂರು ದಾಖಲು ಮಾಡಿದ್ದರು. ತನಿಖೆ ನಡೆಸಿದಾಗ ಆಕೆ ಕೊಲೆಯಾಗಿದ್ದು ಗೊತ್ತಾಗಿದೆ. ನವೆಂಬರ್​ 12ರಂದು ಅಫ್ತಾಬ್​ ಅರೆಸ್ಟ್​ ಆಗಿದ್ದಾನೆ ಮತ್ತು ಕೊಲೆಯನ್ನು ತಾನೇ ಮಾಡಿದ್ದಾಗಿಯೂ ಒಪ್ಪಿಕೊಂಡಿದ್ದಾನೆ.

Continue Reading

ಕ್ರೈಂ

Shraddha Murder Case | ಶ್ರದ್ಧಾಳ ದೇಹ ಕತ್ತರಿಸಲು ಅಫ್ತಾಬ್​ ಬಳಸಿದ್ದು ಯಾವ ಆಯುಧ?-ಕೊನೆಗೂ ಬಯಲಾಯ್ತು ಸತ್ಯ!

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು.

VISTARANEWS.COM


on

Shraddha Murder Case
Koo

ನವ ದೆಹಲಿ: ಲಿವ್​ ಇನ್​ ಸಂಗಾತಿಯಿಂದ ಬರ್ಬರವಾಗಿ ಹತ್ಯೆಗೀಡಾದ ಶ್ರದ್ಧಾ ವಾಳ್ಕರ್​​ ಕೇಸ್​ ತನಿಖೆ ಮುಂದುವರಿದೆ. ಆರೋಪಿ ಅಫ್ತಾಬ್​ ಪೂನಾವಾಲಾ ಸದ್ಯ ದೆಹಲಿಯ ತಿಹಾರ್​ ಜೈಲಿನಲ್ಲಿದ್ದು, ಮತ್ತೊಂದೆಡೆ ಅವನ ವಿಚಾರಣೆಯೂ ನಡೆಯುತ್ತಿದೆ. ಅಫ್ತಾಬ್ ಮತ್ತು ಶ್ರದ್ಧಾ ಬೇರೆ ಧರ್ಮದವರು. ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್​ ಜತೆ ಬದುಕುತ್ತಿದ್ದಳು. ಕಳೆದ ಮೇ ತಿಂಗಳಲ್ಲಿ ಅಫ್ತಾಬ್​ ಆಕೆಯನ್ನು ಕೊಂದು, 35 ತುಂಡುಗಳಾಗಿ ಕತ್ತರಿಸಿ, ಅವುಗಳನ್ನೆಲ್ಲ ಫ್ರಿಜ್​​ನಲ್ಲಿಟ್ಟುಕೊಂಡಿದ್ದ. ಬಳಿಕ ತಮ್ಮ ಅಪಾರ್ಟ್​​ಮೆಂಟ್​​ಗೆ ಸಮೀಪದಲ್ಲೇ ಇರುವ ಮೆಹ್ರೌಲಿ ಅರಣ್ಯದಲ್ಲಿ ಎಸೆದಿದ್ದ. ಗುರುಗ್ರಾಮದ ಬಳಿಯ ಅರಣ್ಯದಲ್ಲೂ ಕೆಲವು ತುಂಡುಗಳನ್ನು ಎಸೆದಿದ್ದ.

ಪೊಲೀಸರು ಈಗಾಗಲೇ ಅರಣ್ಯ ಪ್ರದೇಶಗಳಲ್ಲಿ ಹುಡುಕಾಟ ನಡೆಸಿ, ಕೆಲವು ಎಲುಬುಗಳನ್ನು ವಶಪಡಿಸಿಕೊಂಡಿದ್ದರು. ಅದು ಶ್ರದ್ಧಾದೇ ಎಂಬುದು ಡಿಎನ್​​ಎ ಟೆಸ್ಟ್​​ನಲ್ಲಿ ಸಾಬೀತಾಗಿತ್ತು. ಅಫ್ತಾಬ್​ ಶ್ರದ್ಧಾಳ ದೇಹವನ್ನು ಯಾವ ಆಯುಧದಿಂದ ಕತ್ತರಿಸಿದ್ದಾನೆ ಎಂಬುದನ್ನು ಪತ್ತೆ ಹಚ್ಚುವ ಸಲುವಾಗಿ ಆ ಮೂಳೆಗಳನ್ನು ಇನ್ನಷ್ಟು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರ ವರದಿ ಈಗ ಹೊರಬಿದ್ದಿದೆ. ಅಫ್ತಾಬ್​ ಪೂನಾವಾಲಾ ತನ್ನ ಲಿವ್​ ಇನ್​ ಸಂಗಾತಿ ಶ್ರದ್ಧಾಳನ್ನು ಕೊಂದು, ಬಳಿಕ ಗರಗಸದಲ್ಲಿ ಆಕೆಯ ದೇಹವನ್ನು ತುಂಡರಿಸಿದ್ದಾನೆ ಎಂಬುದು ಗೊತ್ತಾಗಿದೆ.

ಅಫ್ತಾಬ್​ ಪೂನಾವಾಲಾ ಅಪಾರ್ಟ್​ಮೆಂಟ್​​ನಿಂದ ಪೊಲೀಸರು ಹಲವು ಬಗೆಯ ಮಾರಕಾಸ್ತ್ರಗಳನ್ನು ಈಗಾಗಲೇ ವಶಪಡಿಸಿಕೊಂಡಿದ್ದಾರೆ. ಆದರೆ ಅದರಲ್ಲಿ ಶ್ರದ್ಧಾಳನ್ನು ತುಂಡರಿಸಲು ಆತ ಯಾವ ಆಯುಧ ಬಳಸಿದ್ದ ಗೊತ್ತಾಗಿರಲಿಲ್ಲ. ಅಫ್ತಾಬ್​ ಮಂಪರು ಪರೀಕ್ಷೆ ವೇಳೆ, ತಾನು ಚೀನಿ ಕ್ಲೀವರ್ (ಮಾಂಸವನ್ನು ಕತ್ತರಿಸಲು ಬಳಸುವ ದೊಡ್ಡ ಚಾಕು) ಬಳಸಿದ್ದಾಗಿ ಹೇಳಿಕೊಂಡಿದ್ದಾನೆ ಎಂಬ ವರದಿ ಬಂದಿದ್ದರೂ, ಅದು ಸ್ಪಷ್ಟವಾಗಿರಲಿಲ್ಲ.

ಇದನ್ನೂ ಓದಿ: Shraddha Murder Case| ಹೌದು ನಾನೇ ಶ್ರದ್ಧಾಳ ಕೊಲೆ ಮಾಡಿದೆ; ಮಂಪರು ಪರೀಕ್ಷೆಯಲ್ಲೂ ಅದೇ ಉತ್ತರ ಕೊಟ್ಟ ಅಫ್ತಾಬ್​

Continue Reading

ದಿಲ್ಲಿ ಮರ್ಡರ್

Shraddha Walkar | ತನ್ನ ಕುಟುಂಬದ ಸದಸ್ಯರ ಭೇಟಿಗೆ ನಿರಾಕರಿಸುತ್ತಿರುವ ಶ್ರದ್ಧಾ ಕೊಲೆ ಆರೋಪಿ ಅಫ್ತಾಬ್

ಶ್ರದ್ಧಾ ವಾಳ್ಕರ್ (Shraddha Walkar) ಕೊಲೆ ಆರೋಪಿ, 28 ವರ್ಷದ ಅಫ್ತಾಬ್ ಪೂನಾವಾಲ ನವೆಂಬರ್ 26ರಿಂದ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ.

VISTARANEWS.COM


on

Aaftab used Chinese knife To Cut Shraddha Body
Koo

ನವದೆಹಲಿ: ತನ್ನ ಲಿವ್-ಇನ್ ಸಂಗಾತಿ ಶ್ರದ್ಧಾ ವಾಳ್ಕರಳನ್ನು (Shraddha Walkar) ತುಂಡು ತುಂಡಾಗಿ ಕತ್ತರಿಸಿ ಭಯಾನಕವಾಗಿ ಕೊಲೆ ಮಾಡಿದ್ದ ಆರೋಪಿ ಅಫ್ತಾಬ್ ಪೂನಾವಾಲ (Aftab Poonawala) ಈಗ ದಿಲ್ಲಿಯ ತಿಹಾರ್ ಜೈಲಿನಲ್ಲಿದ್ದಾನೆ. ಆತನನ್ನು ಭೇಟಿಯಾಗಲು ಬಂದ ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲು ನಿರಾಕರಿಸುತ್ತಿದ್ದಾನೆಂದು ತಿಳಿದು ಬಂದಿದೆ.

28 ವರ್ಷದ ಅಫ್ತಾಬ್‌ ನವೆಂಬರ್ 26ರಿಂದ ತಿಹಾರ್ ಜೈಲಿನಲ್ಲಿದ್ದಾನೆ. ಆತ ತನ್ನನ್ನು ಯಾರು ಭೇಟಿ ಮಾಡಬೇಕೆಂಬ ಕುರಿತು ಮಾಹಿತಿಯನ್ನು ಜೈಲು ಅಧಿಕಾರಿಗಳಿಗೆ ಇನ್ನಷ್ಟೇ ನೀಡಬೇಕಿದೆ. ನಿಯಮಗಳ ಪ್ರಕಾರ, ಜೈಲಿನಲ್ಲಿರುವ ವ್ಯಕ್ತಿ ವಾರಕ್ಕೆ ಎರಡು ಸಾರಿ, ತನ್ನ ಕುಟುಂಬದವರನ್ನು ಭೇಟಿ ಮಾಡಲು ಅವಕಾಶವಿದೆ.

ಸದ್ಯ ಜೈಲಿನಲ್ಲಿ ತನ್ನ ಪಾಡಿಗೆ ತಾನು ಇರುತ್ತಿರುವ ಆರೋಪಿ ಪೂನಾವಾಲ ಈ ವಾರದ ಬಳಿಕ, ಯಾರನ್ನೋ ಭೇಟಿಯಾಗುವ ಬಗ್ಗೆ ಸಹ ಕೈದಿಗಳ ಜತೆಗೆ ಮಾತನಾಡಿಕೊಂಡಿದ್ದಾನೆಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಆತ ಇದವರೆಗೂ ಯಾರನ್ನು ಭೇಟಿ ಮಾಡಬೇಕೆಂಬ ಮಾಹಿತಿಯನ್ನು ಹಂಚಿಕೊಂಡಿಲ್ಲ. ಜತೆಗೆ, ತನ್ನ ಕುಟುಂಬದ ಸದಸ್ಯರನ್ನು ಭೇಟಿಯಾಗಲೂ ಮುಂದಾಗುತ್ತಿಲ್ಲ.

ಇದನ್ನೂ ಓದಿ | Shraddha Murder Case | ಶ್ರದ್ಧಾ ವಾಳ್ಕರ್​ ಹತ್ಯೆ ಕೇಸ್​​ ಸಿಬಿಐಗೆ ವರ್ಗಾಯಿಸಲು ಸಾಧ್ಯವಿಲ್ಲ ಎಂದ ದೆಹಲಿ ಹೈಕೋರ್ಟ್​

Continue Reading
Advertisement
Has Karnataka Congress government suggested PM Narendra Modi programme should not be success Kageri question to police
Lok Sabha Election 20241 min ago

PM Narendra Modi: ಮೋದಿ ಕಾರ್ಯಕ್ರಮ ಯಶವಾಗದಿರಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

Congress MLA
ಪ್ರಮುಖ ಸುದ್ದಿ17 mins ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 202432 mins ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ44 mins ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

777 Charlie
ಸ್ಯಾಂಡಲ್ ವುಡ್45 mins ago

777 Charlie: ಜಪಾನಿನಲ್ಲಿ `777 ಚಾರ್ಲಿ ಹವಾ’: ವರ್ಲ್ಡ್​​ ಟೂರ್‌ಗೆ ಧರ್ಮ ಹಾಗೂ ಚಾರ್ಲಿ ರೆಡಿ!

Food Poisoning
ಪ್ರಮುಖ ಸುದ್ದಿ55 mins ago

Food Poisoning : ಹೃದಯ ವಿದ್ರಾವಕ ಘಟನೆ; ವಿಷ ಆಹಾರ ಸೇವಿಸಿ ಇಬ್ಬರು ಮಕ್ಕಳ ಸಾವು, ಮೂವರು ಅಸ್ವಸ್ಥ

Manjummel Boys
ಮಾಲಿವುಡ್1 hour ago

Manjummel Boys: ‘ಮಂಜುಮ್ಮೆಲ್ ಬಾಯ್ಸ್’ ಒಟಿಟಿ ಡೇಟ್ ಅನೌನ್ಸ್ ಮಾಡಿದ ಡಿಸ್ನಿ!

girl Saved Mother
ಪ್ರಮುಖ ಸುದ್ದಿ2 hours ago

Girl Saved Mother: ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಯ ಜೀವ ಕಾಪಾಡಿತು ಪುತ್ರಿ ಶಾಲೆಯಲ್ಲಿ ಕಲಿತ ಪಾಠ!

ವಿದೇಶ2 hours ago

TikTok star: ಇರಾಕ್‌ನಲ್ಲಿ ಗುಂಡಿಕ್ಕಿ ಟಿಕ್‌ಟಾಕ್‌ ಸ್ಟಾರ್‌ನ ಭೀಕರ ಹತ್ಯೆ

Sahil Khan Arrested in Mahadev Betting App Case
ಬಾಲಿವುಡ್2 hours ago

Sahil Khan: ಬೆಟ್ಟಿಂಗ್​ ಅಕ್ರಮದಲ್ಲಿ ಭಾಗಿ; ನಟ ಸಾಹಿಲ್ ಖಾನ್ ಅರೆಸ್ಟ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ2 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202419 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ24 hours ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

Neha Murder Case in hubblli
ಹುಬ್ಬಳ್ಳಿ3 days ago

Neha Murder Case : ಮನೆ ಸುತ್ತಮುತ್ತ ಅನಾಮಧೇಯ ವ್ಯಕ್ತಿಗಳ ಓಡಾಟ; ಸಂತಾಪ ನೆಪದಲ್ಲಿ ನೇಹಾ ಬೆಡ್‌ರೂಂ ಚಿತ್ರೀಕರಣ!

ಟ್ರೆಂಡಿಂಗ್‌