ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ನಿವಾಸದಲ್ಲಿ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ; ಶಿಷ್ಟಾಚಾರ ಪಾಲಿಸಿದ ಮಾಜಿ ಅಧ್ಯಕ್ಷೆ - Vistara News

ದೇಶ

ಮಲ್ಲಿಕಾರ್ಜುನ ಖರ್ಗೆಗೆ ತಮ್ಮ ನಿವಾಸದಲ್ಲಿ ಭೇಟಿಗೆ ಅವಕಾಶ ಕೊಡದ ಸೋನಿಯಾ ಗಾಂಧಿ; ಶಿಷ್ಟಾಚಾರ ಪಾಲಿಸಿದ ಮಾಜಿ ಅಧ್ಯಕ್ಷೆ

ಜನಪಥ ಮಾರ್ಗ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೇ ತೆರಳಿ ಅವರನ್ನು ಭೇಟಿ ಮಾಡುವುದು ಖರ್ಗೆ ಇಂಗಿತವಾಗಿತ್ತು. ಅದಕ್ಕಾಗಿ ಅಪಾಯಿಂಟ್ ಮೆಂಟ್ ಕೂಡ ಕೇಳಿದ್ದರು. ಆದರೆ ತಾಸುಗಳೇ ಕಳೆದರೂ ಅವರಿಗೆ ಸೋನಿಯಾ ಗಾಂಧಿ ಭೇಟಿಗೆ ಅವಕಾಶ ಸಿಕ್ಕಿರಲಿಲ್ಲ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ‌ ಆಯ್ಕೆಯಾಗುತ್ತಿದ್ದಂತೆ ಮಲ್ಲಿಕಾರ್ಜುನ ಖರ್ಗೆ ಮೊಟ್ಟಮೊದಲು ಸೋನಿಯಾ ಗಾಂಧಿಯವರನ್ನು ಭೇಟಿ ಮಾಡಿದ್ದಾರೆ. ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರು ಮಲ್ಲಿಕಾರ್ಜುನ ಖರ್ಗೆ ದೆಹಲಿ ನಿವಾಸಕ್ಕೆ ಆಗಮಿಸಿ ಅವರಿಗೆ ಶುಭಾಶಯ ಕೋರಿದರು. ಆದರೆ ಅದಕ್ಕೂ ಮೊದಲು ಖರ್ಗೆಯವರು ಸೋನಿಯಾ ಗಾಂಧಿಯವರನ್ನು ಅವರ ಮನೆಯಲ್ಲೇ ಭೇಟಿಯಾಗಲು ಅವಕಾಶ ಕೇಳಿದ್ದರಂತೆ. ಆದರೆ ಸೋನಿಯಾ ಗಾಂಧಿ ಒಪ್ಪಿಗೆ ಸಿಕ್ಕಿರಲಿಲ್ಲವಂತೆ..

ಜನಪಥ ಮಾರ್ಗ್ ನಲ್ಲಿರುವ ಸೋನಿಯಾ ಗಾಂಧಿ ನಿವಾಸಕ್ಕೇ ತೆರಳಿ ಅವರನ್ನು ಭೇಟಿ ಮಾಡುವುದು ಖರ್ಗೆ ಇಂಗಿತವಾಗಿತ್ತು. ಅದಕ್ಕಾಗಿ ಅಪಾಯಿಂಟ್ ಮೆಂಟ್ ಕೂಡ ಕೇಳಿದ್ದರು. ಆದರೆ ತಾಸುಗಳಾದರೂ ಖರ್ಗೆಗೆ ಅನುಮತಿ ಸಿಕ್ಕಿರಲಿಲ್ಲ. ಕಾರಣ ಇತ್ತ ಸೋನಿಯಾ ಗಾಂಧಿ ಬೇರೆಯದ್ದೇ ಪ್ಲ್ಯಾನ್ ಮಾಡುತ್ತಿದ್ದರು. ಖರ್ಗೆಯವರನ್ನು ಭೇಟಿಯಾಗಬಹುದಾದ ಸ್ಥಳದ ಬಗ್ಗೆ ಕೆಲವು ನಾಯಕರ ಬಳಿ ಸುಮಾರು 30 ನಿಮಿಷ ಚರ್ಚಿಸಿದ ನಂತರ ಸೋನಿಯಾ ಗಾಂಧಿಯೇ ಖುದ್ದು ಖರ್ಗೆ ನಿವಾಸಕ್ಕೆ, ಹೂವಿನ ಬೊಕ್ಕೆ ಹಿಡಿದು ಹೊರಟಿದ್ದರು. ಎಐಸಿಸಿ ಅಧ್ಯಕ್ಷರನ್ನು ತಮ್ಮ ಮನೆಗೆ ಕರೆಸಿಕೊಂಡು ಮಾತಾಡುವುದಕ್ಕಿಂತಲೂ, ತಾವೇ ಅವರ ನಿವಾಸಕ್ಕೆ ಹೋಗಿ ಶುಭಕೋರುವುದೇ ಶಿಷ್ಟಾಚಾರ ಎಂಬ ಕಾರಣಕ್ಕೆ ಸೋನಿಯಾ ಗಾಂಧಿ ಈ ನಿರ್ಧಾರ ಮಾಡಿದ್ದರು. ಹಾಗೇ, ಎಐಸಿಸಿಗೆ ಇನ್ನು ಖರ್ಗೆ ಮುಖ್ಯಸ್ಥ ಎಂಬ ಸಂದೇಶವನ್ನು ಅವರು ಈ ಮೂಲಕ ಸಾರಿದರು.

ಸಾಮಾನ್ಯವಾಗಿ ಎಐಸಿಸಿ ಅಧ್ಯಕ್ಷರು ಪಕ್ಷದ ಇತರ ನಾಯಕರು, ಸದಸ್ಯರ ನಿವಾಸಕ್ಕೆಲ್ಲ ಹೋಗುವುದಿಲ್ಲ. ಇಷ್ಟು ವರ್ಷಗಳಲ್ಲಿ ಕೂಡ ಕಾಂಗ್ರೆಸ್ ಅಧ್ಯಕ್ಷರು ಇನ್ನೊಬ್ಬರ ನಿವಾಸಕ್ಕೆ ತೆರಳಿ, ಅಲ್ಲಿ ಅವರೊಂದಿಗೆ ಮಾತುಕತೆ ನಡೆಸಿದ್ದು ಅಪರೂಪ. ಕಲ್ಲಿದ್ದಲು ಹಗರಣ ಪ್ರಕರಣದಡಿ ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಅವರಿಗೆ 2015ರಲ್ಲಿ ಸಿಬಿಐ ಸಮನ್ಸ್​ ನೀಡಿದ್ದ ವೇಳೆ, ಅವರಲ್ಲಿ ಧೈರ್ಯ ತುಂಬಿ, ಮನಮೋಹನ್​ ಸಿಂಗ್​ ಜತೆಗೆ ನಾವೆಲ್ಲ ಇದ್ದೇವೆ ಎಂಬ ಸಂದೇಶ ಕೊಡುವ ಸಲುವಾಗಿ ಅಂದು ಎಐಸಿಸಿ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ, ಮನಮೋಹನ್​ ಸಿಂಗ್​ ನಿವಾಸಕ್ಕೆ ಭೇಟಿ ಕೊಟ್ಟಿದ್ದರು. ಅದು ಬಿಟ್ಟರೆ, ಇನ್ನುಳಿದ ಯಾವುದೇ ಸಂದರ್ಭದಲ್ಲೂ ಇಂಥದ್ದೊಂದು ಸನ್ನಿವೇಶ ಬಂದಿಲ್ಲ.

ಇದನ್ನೂ ಓದಿ: Kharge Congress President | ಮಲ್ಲಿಕಾರ್ಜುನ ಖರ್ಗೆಗೆ ಶುಭಾಶಯಗಳ ಸುರಿಮಳೆ! ಯಾರು, ಏನು ಹೇಳಿದರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

Patanjali Case: ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್‌ ಅಮಾನುಲ್ಲಾ ಇದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್‌ ಸಲ್ಲಿಸಲು ಮೂರು ವಾರಗಳ ಗಡುವನ್ನು ಪತಂಜಲಿ ಸಂಸ್ಥೆಗೆ ಕೋರ್ಟ್‌ ನೀಡಿದೆ. ಬಾಬಾ ರಾಮ್‌ದೇವ್‌ ಅವರಿಗೆ ಸಾಕಷ್ಟು ಪ್ರಭಾವ ಇದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ ಕ್ಷೇತ್ರಕ್ಕೆ ಅವರು ಉತ್ತಮ ಕೊಡುಗೆ ನೀಡಿದ್ದಾರೆ. ಆದರೆ ಪತಂಜಲಿ ಉತ್ಪನ್ನಗಳ ವಿಚಾರ ಬೇರೆಯಾಗಿದೆ ಎಂದು ಹೇಳಿದರು.

VISTARANEWS.COM


on

Patanjali case
Koo

ನವದೆಹಲಿ: ಜನರನ್ನು ದಾರಿ ತಪ್ಪಿಸುವ ಕೆಲಸ (Misleading Advertisement) ಜಾಹೀರಾತು ಪ್ರಕಟ ಕೇಸ್‌ಗೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್‌ದೇವ್‌(Baba Ramdev) ಅವರ ಆಪ್ತ ಬಾಲಕೃಷ್ಣ ಮತ್ತು ಪತಂಜಲಿ ಸಂಸ್ಥೆ (Patanjali Case)ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣ ತೀರ್ಪನ್ನು ಸುಪ್ರೀಂಕೋರ್ಟ್‌(Supreme Court) ಕಾಯ್ದಿರಿಸಿದೆ. ಇದೇ ವೇಳೆ ಮಾಧ್ಯಮಗಳಲ್ಲಿ ಕೋರ್ಟ್‌ ಮಾಡಿರುವ ಅವಲೋಕನಗಳ ಬಗ್ಗೆ ಹೇಳಿಕೆ ನೀಡಿದಕ್ಕಾಗಿ ಕ್ಷಮೆಯಾಚಿಸಿ ಭಾರತೀಯ ಮೆಡಿಕಲ್‌ ಅಸೋಸಿಯೇಶನ್‌ನ ಅಧ್ಯಕ್ಷ ಡಾ.ಆರ್‌.ವಿ.ಅಶೋಕನ್‌ ಸಲ್ಲಿಸಿರುವ ಅರ್ಜಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್‌ ಅಮಾನುಲ್ಲಾ ಇದ್ದ ನ್ಯಾಯಪೀಠ ಪ್ರಕರಣದ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡವಿಟ್‌ ಸಲ್ಲಿಸಲು ಮೂರು ವಾರಗಳ ಗಡುವನ್ನು ಪತಂಜಲಿ ಸಂಸ್ಥೆಗೆ ಕೋರ್ಟ್‌ ನೀಡಿದೆ. ಬಾಬಾ ರಾಮ್‌ದೇವ್‌ ಅವರಿಗೆ ಸಾಕಷ್ಟು ಪ್ರಭಾವ ಇದೆ ಅದನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ ಕ್ಷೇತ್ರಕ್ಕೆ ಅವರು ಉತ್ತಮ ಕೊಡುಗೆ ನೀಡಿದ್ದಾರೆ. ಆದರೆ ಪತಂಜಲಿ ಉತ್ಪನ್ನಗಳ ವಿಚಾರ ಬೇರೆಯಾಗಿದೆ ಎಂದು ಹೇಳಿದರು.

ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನ ಆದೇಶಗಳ ಕುರಿತು ಪತ್ರಿಕೆಗಳಿಗೆ ಸಂದರ್ಶನ ನೀಡಿದ್ದಕ್ಕಾಗಿ ಐಎಂಎ ಅಧ್ಯಕ್ಷ ಡಾ ಆರ್‌ವಿ ಅಶೋಕನ್ ಅವರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ಅವರು ಕ್ಷಮೆ ಕೋರಿ ಸಲ್ಲಿಸಿರುವ ಅಫಿಡವಿಟ್‌ನೊಂದಿಗೆ ಸಮಾಧಾನಕರವಾಗಿಲ್ಲ ಎಂದು ಹೇಳಿದೆ. ಪತಂಜಲಿ ಮಾಡಿದಂತೆಯೇ ನೀವೂ ಮಾಡುತ್ತಿದ್ದೀರಿ. ನೀವು ಜನಸಾಮಾನ್ಯರಲ್ಲ, ಅಂತಹ ವಿಷಯಗಳ ಪರಿಣಾಮಗಳು ನಿಮಗೆ ತಿಳಿದಿಲ್ಲವೇ?ನಾವು ವಾಕ್ ಸ್ವಾತಂತ್ರ್ಯವನ್ನು ಎತ್ತಿ ಹಿಡಿದವರಲ್ಲಿ ಮೊದಲಿಗರು. ಆದರೆ ಕೆಲವು ಸಂದರ್ಭಗಳಲ್ಲಿ ಸ್ವಯಂ ಸಂಯಮ ಇರಬೇಕು. IMA ಅಧ್ಯಕ್ಷರಾಗಿ ನೀವು ಸ್ವಯಂ ಸಂಯಮವನ್ನು ಹೊಂದಿರಬೇಕು. ನಿಮ್ಮಿಂದ ನಾನು ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಪೀಠವು ನ್ಯಾಯಾಲಯದಲ್ಲಿ ಹಾಜರಿದ್ದ ಅಶೋಕನ್‌ಗೆ ಸೂಚಿಸಿತು.

ಐಎಂಎ ದೂರಿನನ್ವಯ ಈ ಹಿಂದೆ ಸುಪ್ರೀಂ ಕೋರ್ಟ್ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಬಾ ರಾಮ್‌ದೇವ್ ಮತ್ತು ಸಿಇಒ ಆಚಾರ್ಯ ಬಾಲಕೃಷ್ಣಗೆ ಛೀಮಾರಿ ಹಾಕಿತ್ತು. ಈ ಸಂಬಂಧ ಹಲವು ದಿನಪತ್ರಿಕೆಗಳಲ್ಲಿ ತಪ್ಪುದಾರಿಗೆಳೆಯುವ ಜಾಹೀರಾತಿನ ಬಗ್ಗೆ ಪತಂಜಲಿ ಆಯುರ್ವೇದ ಸಂಸ್ಥೆ, ಬಾಬಾ ರಾಮ್‌ದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಕ್ಷಮೆಯನ್ನೂ ಯಾಚಿಸಿದ್ದರು. ಸರ್ವೋಚ್ಚ ನ್ಯಾಯಾಲಯದ ಸೂಚನೆ ಮೇರೆಗೆ ಮತ್ತೊಮ್ಮೆ ಈ ತಪ್ಪನ್ನು ಪುನರಾವರ್ತಿಸುವುದಿಲ್ಲ ಎಂದು ಕಂಪನಿಯು ಏಪ್ರಿಲ್ 22ರಂದು ಬಹಿರಂಗವಾಗಿ ಕ್ಷಮೆ ಯಾಚಿಸಿತ್ತು.

Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಇದರ ಬೆನ್ನಲ್ಲೇ ಯೋಗ ಗುರು ಬಾಬಾ ರಾಮ್‌ದೇವ್‌ ಅವರ ಪತಂಜಲಿ ಹಾಗೂ ದಿವ್ಯಾ ಫಾರ್ಮಸಿ ಸಂಸ್ಥೆಗೆ ಸೇರಿದ 14 ಆಯುರ್ವೇದ ಉತ್ಪನ್ನಗಳಿಗೆ ನೀಡಲಾಗಿದ್ದ ಮಾರಾಟ ಪರವಾನಗಿಯನ್ನು ಉತ್ತರಾಖಂಡ ಸರಕಾರ ಬ್ಯಾನ್‌ ಮಾಡಿತ್ತು. ದೃಷ್ಟಿ ಐ ಡ್ರಾಫ್ಸ್‌, ಶ್ವಾಸರಿ ಗೋಲ್ಡ್‌, ಸ್ವಸರಿ ಪ್ರವಾಹಿ, ಮಧುನಾಶಿನಿ ವಟಿ ಎಕ್ಸ್‌ಟ್ರಾ ಪವರ್‌, ಲಿವಾಮೃತ್‌ ಅಡ್ವಾನ್ಸ್‌, ಲಿವೋಗ್ರಿಟ್‌ ಸೇರಿದಂತೆ 14 ಉತ್ಪನ್ನಗಳಿಗೆ ನೀಡಲಾಗಿದ್ದ ಮಾರಾಟ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮಿಡಿಸ್‌ (ಅಬ್ಜಕ್ಷನೇಬಲ್‌ ಅಡ್ವೊರ್ಟೈಸ್‌ಮೆಂಟ್‌) ಕಾಯಿದೆ, 1954ನ್ನು ಪದೇ ಪದೇ ಉಲ್ಲಂಘಿಸಿದ ಆರೋಪದ ಮೇಲೆ ಪತಂಜಲಿ ಮುಖ್ಯಸ್ಥ ಬಾಬಾ ರಾಮದೇವ್‌ ಹಾಗೂ ಸಿಇಒ ಆಚಾರ್ಯ ಬಾಲಕೃಷ್ಣ ವಿರುದ್ಧ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಸರಕಾರ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಿದೆ.

Continue Reading

ಉದ್ಯೋಗ

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

Job News: ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ವಿವರ ಇಲ್ಲಿದೆ.

VISTARANEWS.COM


on

Job News
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಪಡೆದುಕೊಳ್ಳಬೇಕು ಎನ್ನುವುದು ಬಹತೇಕರ ಕನಸು. ಅದಕ್ಕಾಗಿ ಅನೇಕರು ಹಲವು ವರ್ಷಗಳಿಂದ ಕಠಿಣ ತಯಾರಿಯಲ್ಲಿ ತೊಡಗಿರುತ್ತಾರೆ. ಇದೀಗ ಅಂತಹದ್ದೊಂದು ಸುವರ್ಣಾವಕಾಶ ಬಂದಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಸುಮಾರು 6,740 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಗಮನಿಸಿ ಈ ಪೈಕಿ ಕೆಲವು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕೊನೆಯ ದಿನವಾಗಿದ್ದರೆ ಕೆಲವು ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ನಾಳೆಗೆ ಕೊನೆಗೊಳ್ಳುತ್ತದೆ. ಹೀಗಾಗಿ ಬೇಗ ಬೇಗ ಅಪ್ಲೈ ಮಾಡಿ (Job News).

ಗ್ರೂಪ್‌ ಬಿ ಹುದ್ದೆಗಳು

ರಾಜ್ಯ ಸರ್ಕಾರದ 9 ಇಲಾಖೆಗಳ ಉಳಿಕೆ ಮೂಲ ವೃಂದ ಹಾಗೂ ಎಚ್‌ಕೆ ವೃಂದದ ವಿವಿಧ ಗ್ರೂಪ್‌ ಬಿ 327 ಹುದ್ದೆಗಳ ಅರ್ಜಿಗೆ ಇಂದೇ (14-05-2024) ಕೊನೆ ದಿನವಾಗಿದೆ. ಇಂದು ರಾತ್ರಿ 11.59 ಗಂಟೆಯೊಳಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ಇದೆ. ತಾಂತ್ರಿಕ ಹಾಗೂ ತಾಂತ್ರಿಕೇತರ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಸಿಎಪಿಎಫ್‌ 506 ಹುದ್ದೆಗಳು

ಯೂನಿಯನ್‌ ಪಬ್ಲಿಕ್‌ ಸರ್ವಿಸ್‌ ಕಮಿಷನ್‌ (UPSC)ನ ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಕೇಂದ್ರ ಮೀಸಲು ಪೊಲೀಸ್‌ ಪಡೆ, ಇಂಡೊ-ಟೆಬೆಟನ್ ಗಡಿ ಪೊಲೀಸ್‌ ಮತ್ತು ಸಶಸ್ತ್ರ ಸೀಮಾ ಬಲ ಪಡೆಗಳಲ್ಲಿನ 506 ಹುದ್ದೆಗಳಿಗೆ ಅಪ್ಲೈ ಮಾಡಲು ಇಂದು ಕೊನೆಯ ದಿನ (ಸಂಜೆ 6 ಗಂಟೆ). ಅಂಗೀಕೃತ ವಿಶ್ವ ವಿದ್ಯಾನಿಲಯದಿಂದ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನ 4,660 ಹುದ್ದೆಗಳು

ರೈಲ್ವೆ ನೇಮಕಾತಿ ಮಂಡಳಿಯು ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿ ಖಾಲಿ ಇರುವ ಬರೋಬ್ಬರಿ 4,660 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ್ದು, ಇಂದೇ ಕೊನೆಯ ದಿನ. ಕಾನ್‌ಸ್ಟೇಬಲ್‌, ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳು ಇದಾಗಿದ್ದು, ಎಸ್ಸೆಸ್ಸೆಲ್ಸಿ ತೆರ್ಗಡೆಯಾದವರೂ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

247 ಪಿಡಿಒ ಹುದ್ದೆಗಳು

ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಪಿಡಿಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಮೇ 15) ಕೊನೆಯ ದಿನ. ಪದವಿ ಪಾಸಾದವರು ಅರ್ಜಿ ಸಲ್ಲಿಸಬಹುದು. 150 ಆರ್‌ಪಿಸಿ ಮತ್ತು 97 ಎಚ್‌ಕೆ ಹುದ್ದೆಗಳು ಸೇರಿ ಒಟ್ಟು 247 ಪೋಸ್ಟ್‌ಗಳು ಖಾಲಿ ಇವೆ. ಅರ್ಜಿ ಸಲ್ಲಿಸಲು ಮೇ 15ರ ರಾತ್ರಿ 11 ಗಂಟೆವರೆಗೆ ಅವಕಾಶ ಇದೆ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳು

ಉಳಿಕೆ ಮೂಲ ವೃಂದ ಮತ್ತು ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫೆ. 20ರಂದು ಅಧಿಸೂಚನೆ ಹೊರಡಿಸಿತ್ತು. ಅದರಂತೆ ಅರ್ಜಿ ಸಲ್ಲಿಕೆಗೆ ನಾಳೆಯೇ ಕೊನೆಯ ದಿನ. ದ್ವಿತೀಯ ಪಿಯುಸಿ ಪಾಸಾದವರು ಅರ್ಜಿ ಸಲ್ಲಿಸಲುಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಟೆಕ್ಸ್‌ಟೈಲ್ಸ್‌ ಕಮಿಟಿಯಿಂದ 40 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಬೆಂಗಳೂರಿನಲ್ಲೂ ಇದೆ ಪೋಸ್ಟಿಂಗ್‌

Continue Reading

ದೇಶ

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Supriya Sule:ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ.

VISTARANEWS.COM


on

Supriya Sule
Koo

ನವದೆಹಲಿ: ಲೋಕಸಭಾ ಚುನಾವಣೆಯ(Lok Sabha Election 2024) ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಪೂರ್ಣಗೊಂಡಿದೆ. ಇದರ ಇದೀಗ ಇದರ ಬೆನ್ನಲ್ಲೇ ಭಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಮತಯಂತ್ರ(EVM)ಗಳನ್ನು ಕೂಡಿಟ್ಟಿದ್ದ ಸ್ಟ್ರಾಂಗ್‌ ರೂಂ(Strong room)ನ ಸಿಸಿಟಿವಿ ಕ್ಯಾಮೆರಾ ಸುಮಾರು 45ನಿಮಿಷಗಳ ಕಾಲ ಸ್ವಿಚ್‌ ಆಫ್‌ ಆಗಿತ್ತು ಎಂದು ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಸುಪ್ರಿಯಾ ಸುಳೆ(Supriya Sule) ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದ್ದಾರೆ.

ಸುಳೆ ಆರೋಪವೇನು?

ಎಕ್ಸ್‌ನಲ್ಲಿ ವಿಡಿಯೋ ಸಹಿತ ಪೋಸ್ಟ್‌ ಮಾಡಿದ್ದ ಸುಪ್ರಿಯಾ ಸುಳೆ, ಭಾರಾಮತಿಯಲ್ಲಿ ಮತದಾನದ ಬಳಿಕ ಇವಿಎಂ ಯಂತ್ರಗಳನ್ನು ಇರಿಸಿದ್ದ ಸ್ಟ್ರಾಂಗ್‌ ರೂಂನ ಸಿಸಿಟಿವಿ ವಿಡಿಯೋ ಕೆಲ ಕಾಲ ಕಾರ್ಯನಿರ್ಹಿಸುತ್ತಿರಲಿಲ್ಲ. ಸುಮಾರು 45 ನಿಮಿಷಗಳ ಕಾಲ ಸಿಸಿಟಿವಿ ಸ್ವಿಚ್‌ ಆಫ್‌ ಆಗಿತ್ತು. ಈಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದಾಗ ಸಮಾಧಾನಕರ ಉತ್ತರ ಸಿಕ್ಕಿಲ್ಲ. ಅದೂ ಅಲ್ಲದೇ ಅದೇ ಸಮಯಕ್ಕೆ ತಂತ್ರಜ್ಞರು ಕೂಡ ಅಲ್ಲಿ ಲಭ್ಯವಿರಲಿಲ್ಲ. ಇವಿಎಂ ಸ್ಥಿತಿಗತಿ ಪರಿಶೀಲನೆಗೂ ನಮಗೆ ಅವಕಾಶ ಕೊಡಲಿಲ್ಲ. ಇದು ಅತ್ಯಂತ ಗಂಭೀರವಾದ ವಿಚಾರವಾಗಿದ್ದು, ಚುನಾವಣಾ ಆಯೋಗ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸ್ಪಷ್ಟನೆ ನೀಡಬೇಕು. ಇಲ್ಲವಾದಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದರು.

EC ಪ್ರತಿಕ್ರಿಯೆ ಏನು?

ಸುಪ್ರಿಯಾ ಸುಳೆ ಆರೋಪಕ್ಕೆ ಪ್ರತಿಕ್ರಿಯಿಸಿದ ಚುನಾವಣಾಧಿಕಾರಿ ಕವಿತಾ ದ್ವಿವೇದಿ, ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ಇವಿಎಂಗಳನ್ನು ಇರಿಸಲಾಗಿರುವ ಗೋದಾಮಿನಲ್ಲಿ ಸಿಸಿಟಿವಿ ವ್ಯವಸ್ಥೆ ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತಿದೆ, ಎಲ್ಲಾ ಡೇಟಾ ಸುರಕ್ಷಿತವಾಗಿದೆ, ಸ್ವಲ್ಪ ಸಮಯದವರೆಗೆ ಮಾನಿಟರ್‌ ಅನ್ನು ಮುಚ್ಚಲಾಗಿತ್ತು. ಅದರ ಹೊರತಾಗಿ ಎಲ್ಲಾ ದತ್ತಾಂಶಗಳು ಸುರಕ್ಷಿತವಾಗಿದೆ ಎಂದು ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ:Bomb Threat: ದಿಲ್ಲಿಯ ನಾಲ್ಕು ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ; ಇ-ಮೇಲ್‌ ಮೂಲಕ ಸಂದೇಶ ರವಾನೆ

ಬಾರಾಮತಿಯಲ್ಲಿ ಕ್ಷೇತ್ರದಲ್ಲಿ ಪವಾರ್‌ ವರ್ಸಸ್‌ ಪವಾರ್‌ ಸೆಣಸಾಟ ಇದ್ದು, ಇದೊಂದು ಪ್ರತಿಷ್ಠೆಯ ಕಣವಾಗಿದೆ. ಮೇ 7ರಂದು ಮತದಾನ ನಡೆದಿದ್ದು, ಶರದ್‌ ಪವಾರ್‌ ಪುತ್ರಿ ಸುಪ್ರಿಯಾ ಸುಳೆ ಮತ್ತು ಮಾಜಿ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಪರಸ್ಪರ ಎದುರಾಳಿಗಳಾಗಿ ಕಣದಲ್ಲಿದ್ದಾರೆ.

Continue Reading

ಪ್ರಮುಖ ಸುದ್ದಿ

PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

VISTARANEWS.COM


on

pm narendra modi nomination
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ (Narendra modi nomination) ಸಲ್ಲಿಸಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಸಂದರ್ಭದಲ್ಲಿ ಅವರೊಂದಿಗೆ ಇದ್ದರು. ನಿನ್ನೆ ಪ್ರಧಾನಿ ಮೋದಿ ವಾರಾಣಸಿಯಲ್ಲಿ ಭರ್ಜರಿ ರೋಡ್‌ ಶೋ ನಡೆಸಿದ್ದರು.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರ ಜೊತೆಗೆ ನಾಲ್ಕು ಅನುಮೋದಕರು (proposers) ಇದ್ದರು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ನಾಲ್ವರೂ ವಾರಾಣಸಿ ಲೋಕಸಭೆ ಕ್ಷೇತ್ರದವರಾಗಿರಬೇಕು ಎಂಬ ನಿಯಮ ಇರುವುದರಿಂದ, ಅಲ್ಲಿಯವರನ್ನು ಅಯ್ದುಕೊಳ್ಳಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದವರು.

“… ನಮಗೆ ಬೆಳಿಗ್ಗೆ ಮಾಹಿತಿ ಸಿಕ್ಕಿತು. ಪಕ್ಷದ ಕಾರ್ಯಕರ್ತನಾಗಿ ನನಗೆ ವಹಿಸಿದ ಕೆಲಸಗಳನ್ನು ಮಾಡುತ್ತಿದ್ದೇನೆ. ನನಗೆ ಇಷ್ಟು ದೊಡ್ಡ ಜವಾಬ್ದಾರಿ ನೀಡಿದ ಪಕ್ಷಕ್ಕೆ ನಾನು ಆಭಾರಿಯಾಗಿದ್ದೇನೆ…, ”ಎಂದು ಸೋಂಕರ್ ಮಾಧ್ಯಮಗಳಿಗೆ ತಿಳಿಸಿದರು. ಕಳೆದ ಲೋಕಸಭೆ ಚುನಾವಣೆಯಲ್ಲಿ, ಪ್ರಧಾನಿ ಮೋದಿಯವರ ಪ್ರತಿಪಾದಕರು ಕೃಷಿ ವಿಜ್ಞಾನಿ, ಬಿಎಚ್‌ಯು ಮಹಿಳಾ ಮಹಾವಿದ್ಯಾಲಯದ ಮಾಜಿ ಪ್ರಾಂಶುಪಾಲರು, ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ವಾರಣಾಸಿ ಘಾಟ್‌ಗಳ ಮುಖ್ಯ ದಹನಕಾರ ಹೀಗೆ ವಿವಿಧ ಹಿನ್ನೆಲೆಗಳಿಂದ ಬಂದವರಾಗಿದ್ದರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading
Advertisement
Patanjali case
ದೇಶ7 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ24 mins ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ1 hour ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್1 hour ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ1 hour ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ2 hours ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ2 hours ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್2 hours ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ2 hours ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ10 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ21 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ22 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌