Sovereign Gold Bonds: ನಾಳೆಯಿಂದ ಸಾವರಿನ್ ಗೋಲ್ಡ್ ಬಾಂಡ್ ವಿತರಣೆ! ಬೆಲೆ ಎಷ್ಟು? - Vistara News

ದೇಶ

Sovereign Gold Bonds: ನಾಳೆಯಿಂದ ಸಾವರಿನ್ ಗೋಲ್ಡ್ ಬಾಂಡ್ ವಿತರಣೆ! ಬೆಲೆ ಎಷ್ಟು?

Sovereign Gold Bonds: ಫೆ.12ರಿಂದ 16ರವರೆಗೆ ವಿತರಿಸಲಾಗುವ ಸಾವರಿನ್ ಗೋಲ್ಡ್ ಬಾಂಡ್‍‌ಗಳ ಸೆಟಲ್‌ಮೆಂಟ್‌ಗೆ ಕೊನೆಯ ದಿನವು ಫೆ.21 ಆಗಿರುತ್ತದೆ.

VISTARANEWS.COM


on

Sovereign Gold Bonds will be issued from tomorrow Says Finance Ministry
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಫೆಬ್ರವರಿ 12ರಿಂದ 16ರವರೆಗೆ ಕೇಂದ್ರ ವಿತ್ತ ಸಚಿವಾಲಯವು (Finance Ministry) ಸಾವರಿನ್ ಗೋಲ್ಡ್ ಬಾಂಡ್‌ಗಳನ್ನು (Sovereign Gold Bonds) ವಿತರಿಸಲಿದ್ದು, ಫೆ.21 ಸೆಟಲ್‌ಮೆಂಟ್ ದಿನವಾಗಿದೆ. ಪ್ರತಿ ಗ್ರಾಮ್‌ಗೆ 6,263 ರೂಪಾಯಿಯಂತೆ ಭಾರತೀಯ ರಿಸರ್ವ್ ಬ್ಯಾಂಕ್ (Reserve bank of India) ಗೋಲ್ಡ್ ಬಾಂಡ್ ವಿತರಣೆ ಮಾಡಲಿದೆ.

ಭಾರತೀಯ ರಿಸರ್ವ್ ಬ್ಯಾಂಕ್‌ನೊಂದಿಗೆ ಸಮಾಲೋಚನೆ ನಡೆಸಿದ ಸರ್ಕಾರವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಹೂಡಿಕೆದಾರರಿಗೆ ಸಾವರಿನ್ ಗೋಲ್ಡ್ ಬಾಂಡ್‌ಗಳ ವಿತರಣೆಯ ಬೆಲೆಯಿಂದ ಪ್ರತಿ ಗ್ರಾಂಗೆ 50 ರೂ ರಿಯಾಯಿತಿ ನೀಡಲು ನಿರ್ಧರಿಸಿದೆ. ಪಾವತಿಯನ್ನು ಡಿಜಿಟಲ್ ಮೋಡ್ ಮೂಲಕ ಮಾಡಲಾಗುತ್ತದೆ. ಅಂತಹ ಹೂಡಿಕೆದಾರರಿಗೆ ಗೋಲ್ಡ್ ಬಾಂಡ್‌ನ ವಿತರಣೆಯ ಬೆಲೆ ಪ್ರತಿ ಗ್ರಾಂ ಚಿನ್ನಕ್ಕೆ 6, 213 ರೂ. ಇರಲಿದೆ.

ಬಾಂಡ್‌ಗಳಿಗೆ ಪಾವತಿಯು ನಗದು ಪಾವತಿ (ಗರಿಷ್ಠ ರೂ 20,000/- ವರೆಗೆ) ಅಥವಾ ಡಿಮ್ಯಾಂಡ್ ಡ್ರಾಫ್ಟ್ ಅಥವಾ ಚೆಕ್ ಅಥವಾ ಎಲೆಕ್ಟ್ರಾನಿಕ್ ಬ್ಯಾಂಕಿಂಗ್ ಮೂಲಕ ಮಾಡಬೇಕಾಗುತ್ತದೆ.

ನಿಗದಿತ ವಾಣಿಜ್ಯ ಬ್ಯಾಂಕ್‌ಗಳು, ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (SHCIL), ಕ್ಲಿಯರಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (CCIL), ಗೊತ್ತುಪಡಿಸಿದ ಅಂಚೆ ಕಚೇರಿಗಳು ಮತ್ತು ಮಾನ್ಯತೆ ಪಡೆದ ಸ್ಟಾಕ್ ಎಕ್ಸ್‌ಚೇಂಜ್‌ಗಳಾದ ನ್ಯಾಷನಲ್ ಸ್ಟಾಕ್ ಎಕ್ಸ್‌ಚೇಂಜ್ (NSE), ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (BSE) ಸೇರಿದಂತೆ ವಿವಿಧ ಚಾನಲ್‌ಗಳ ಮೂಲಕ ಸಾವರಿನ್ ಗೋಲ್ಡ್ ಬಾಂಡ್ ಲಭ್ಯವಿರುತ್ತವೆ.

ಈ ಸುದ್ದಿಯನ್ನೂ ಓದಿ: ವಿಸ್ತಾರ Money Guide : Sovereign Gold Bond : ಸಾವರಿನ್‌ ಗೋಲ್ಡ್ ಬಾಂಡ್‌ ಮಾರಾಟ ಇಂದಿನಿಂದ ಶುರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

Election Results 2024 : ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

VISTARANEWS.COM


on

Election Results 2024
Koo

ಬೆಂಗಳೂರು: ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸಲಿದೆ. ನರೇಂದ್ರ ಮೋದಿ ಅವರು ಜೂನ್ 8ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ (Election Results 2024) ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿದೆ. ಎನ್​ಡಿಎ ಹಾಗೂ ಇಂಡಿ ಒಕ್ಕೂಟದ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದ್ದು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ. ಏತನ್ಮಧ್ಯೆ, ಈ ಬಾರಿ ಚುನಾವಣಾ ಫಲಿತಾಂಶ ಬದಲಾವಣೆಗೆ ಮುಸ್ಲಿಂ ಮತದಾರರೇ ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಇಂಡಿ ಒಕ್ಕೂಟ ಅದರಲ್ಲೂ ಕಾಂಗ್ರೆಸ್​ಗೆ ಮುಸ್ಲಿಂ ಮತದಾರರ ಸಾರಾಸಗಟಾಗಿ ಮತ ಹಾಕಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರ ಆಯ್ಕೆಯಾಗಿರವ ಪ್ರಮಾಣವೂ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರಲ್ಲಿ 15 ಮಂದಿ ಆಯ್ಕೆಯಾಗಿದ್ದಾರೆ. 2019ರ ಚುನಾವಣೆಯಲ್ಲಿ 115 ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಸಹರಾನ್ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ 64,542 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೈರಾನಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಇಕ್ರಾ ಚೌಧರಿ ಅವರು ಬಿಜೆಪಿಯ ಪ್ರದೀಪ್ ಕುಮಾರ್ ಅವರನ್ನು 69,116 ಮತಗಳ ಅಂತರದಿಂದ ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು 3,38,087 ಮತಗಳ ಅಂತರದಿಂದ ಮಣಿಸಿದ್ದಾರೆ.

ಲಡಾಖ್​ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ 27,862 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ 4.7 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮೊಹಿಬುಲ್ಲಾ 4,81,503 ಮತಗಳನ್ನು ಪಡೆಯುವ ಮೂಲಕ ರಾಂಪುರ ಸ್ಥಾನವನ್ನು ಗೆದ್ದರೆ, ಸಂಭಾಲ್​​ನಲ್ಲಿ ಜಿಯಾ ಉರ್ ರೆಹಮಾನ್ 1.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್-ರಾಜೌರಿ ಕ್ಷೇತ್ರದಲ್ಲಿ ನ್ಯಾಷನಲ್ ಕಾನ್ಫರೆನ್ಸ್​ನ ಮಿಯಾನ್ ಅಲ್ತಾಫ್ ಅಹ್ಮದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ 2,81,794 ಮತಗಳಿಂದ ಗೆದ್ದಿದ್ದಾರೆ. ಶ್ರೀನಗರದಲ್ಲಿ ಎನ್ಸಿ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹ್ದಿ 3,56,866 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ:Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

ಪಶ್ಚಿಮ ಬಂಗಾಳದ ಬಹರಾಂಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಯೂಸುಫ್ ಪಠಾಣ್ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಆರು ಬಾರಿಯ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 85,022 ಮತಗಳಿಂದ ಸೋಲಿಸಿದ್ದಾರೆ.

ಫಲಿತಾಂಶ ಏನಾಯಿತು?

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು 231 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ನೇತೃತ್ವದ ಎನ್ಡಿಎ 295 ಸ್ಥಾನಗಳನ್ನು ಗೆದ್ದಿದೆ. ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚಿಸಲು ಮಿತ್ರಪಕ್ಷಗಳ ಬೆಂಬಲವನ್ನು ಅವಲಂಬಿಸಬೇಕಾಗುತ್ತದೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ 282 ಮತ್ತು 303 ಸ್ಥಾನಗಳನ್ನು ಗೆದ್ದಿತ್ತು. ಸರ್ಕಾರ ರಚಿಸಲು ಬೆಂಬಲವನ್ನು ಒಟ್ಟುಗೂಡಿಸುವ ಭರವಸೆಯಲ್ಲಿ ಭಾರತ ಬಣವು ಎನ್ಡಿಎ ಮಿತ್ರಪಕ್ಷಗಳೊಂದಿಗೆ ಮಾತುಕತೆಗಳನ್ನು ಕಳುಹಿಸುತ್ತಿದೆ ಎಂದು ವರದಿಯಾಗಿದೆ.

Continue Reading

ದೇಶ

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Odisha Assembly Result 2024: ಬಿಜೆಡಿ ಪಕ್ಷ ಮುಖ್ಯಸ್ಥರೂ ಆಗಿರುವ ನವೀನ್‌ ಪಟ್ನಾಯಕ್‌ ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್‌ ದಾಸ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇನ್ನು ಭಾರೀ ಬಹುಮತ ಪಡೆದಿರುವ ಬಿಜೆಪಿ ಈ ಬಾರಿ ಸರ್ಕಾರ ರಚಿಸಲಿದ್ದು, ಇದುವರೆಗೆ ಮುಖ್ಯಮಂತ್ರಿ ಯಾರೆಂಬುದು ಘೋಷಣೆ ಆಗಿಲ್ಲ. ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ.

VISTARANEWS.COM


on

Odisha Assembly election 2024
Koo

ಭುವನೇಶ್ವರ: ಲೋಕಸಭೆ ಚುನಾವಣೆ(Lok Sabha Election 2024)ಯಷ್ಟೇ ಈ ಬಾರಿ ಒಡಿಶಾ ವಿಧಾನಸಭೆ(Odisha Assembly Result 2024) ಚುನಾವಣೆಯೂ ದೇಶದ ಗಮನ ಸೆಳೆದಿತ್ತು. ನಿನ್ನೆ ಇಲ್ಲಿಯ ಫಲಿತಾಂಶ ಹೊರ ಬಿದ್ದಿದ್ದು, ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ 24 ವರ್ಷಗಳ ಸುದೀರ್ಘ ಆಡಳಿತ ಕೊನೆಗೊಂಡಿದ್ದು, ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದೆ. ಹೀಗಾಗಿ ಇಂದು ನವೀನ್‌ ಪಟ್ನಾಯಕ್‌ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಬಿಜೆಡಿ ಪಕ್ಷ ಮುಖ್ಯಸ್ಥರೂ ಆಗಿರುವ ನವೀನ್‌ ಪಟ್ನಾಯಕ್‌ ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್‌ ದಾಸ್‌ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಇನ್ನು ಭಾರೀ ಬಹುಮತ ಪಡೆದಿರುವ ಬಿಜೆಪಿ ಈ ಬಾರಿ ಸರ್ಕಾರ ರಚಿಸಲಿದ್ದು, ಇದುವರೆಗೆ ಮುಖ್ಯಮಂತ್ರಿ ಯಾರೆಂಬುದು ಘೋಷಣೆ ಆಗಿಲ್ಲ. ಒಡಿಶಾದಲ್ಲಿ ಈ ಬಾರಿ ಬಿಜೆಪಿ ತನ್ನ ಹಳೆದ ದೋಸ್ತಿ ಬಿಜೆಡಿಗೆ ಭರ್ಜರಿ ಗುದ್ದು ನೀಡಿದ್ದು, ಒಟ್ಟು 147 ಸ್ಥಾನಗಳಲ್ಲಿ 78 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಡಿ ಕೇವಲ 51 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನುಳಿದಂತೆ ಕಾಂಗ್ರೆಸ್‌ 14 ಕ್ಷೇತ್ರಗಳಲ್ಲಿ ಗೆದ್ದಿದೆ.

ಇನ್ನು ಒಡಿಶಾದಲ್ಲಿ ಈ ಬಾರಿ ಚುನಾವಣಾ ಫಲಿತಾಂಶವು ಬಹುತೇಕ 2019ರ ರೀತಿಯಲ್ಲೇ ಇರಲಿದೆ ಎಂದೂ ಅಂದಾಜಿಸಲಾಗಿತ್ತು. ಎಕ್ಸಿಟ್‌ ಪೋಲ್‌ ರಿಸಲ್ಟ್‌ ಪ್ರಕಾರ ಬಿಜೆಡಿ ಈ ಬಾರಿ 62-80 ಸ್ಥಾನಗಳನ್ನು ಗಳಿಸಿದರೆ ಕಾಂಗ್ರೆಸ್‌ 5 ರಿಂದ 8 ಸ್ಥಾನಗಳನ್ನು ಗಿಟ್ಟಿಸಿಕೊಳ್ಳಲಿದೆ. ಇನ್ನು ಲೋಕಸಭಾ ಎಲೆಕ್ಷನ್‌ ರಿಸಲ್ಟ್‌ಗೆ ಬಂದರೆ ಬಿಜೆಪಿ ಒಡಿಶಾದಲ್ಲಿ 18-20 ಸ್ಥಾನಗಳನ್ನು ಪಡೆದುಕೊಳ್ಳಲಿದೆ. ಬಿಜೆಡಿ ಕೇವಲ 0-2 ಸ್ಥಾನ ಪಡೆದುಕೊಳ್ಳಲಿದೆ. ಇಲ್ಲಿ ಕಾಂಗ್ರೆಸ್‌ 0-1 ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ ಎಂದು ಅಂದಾಜಿಸಿತ್ತು ಇಂದಿನ ಈ ಫಲಿತಾಂಶ ಎಲ್ಲಾ ಎಕ್ಸಿಟ್‌ ಪೋಲ್‌ ಫಲಿತಾಂಶವನ್ನು ತಲೆಕೆಳಗಾಗಿಸಿವೆ.

2019ರ ಚಿತ್ರಣ

2019ರ ವಿಧಾನಸಭಾ ಚುನಾವಣೆಯಲ್ಲಿ ಬಿಜು ಜನತಾ ದಳಕ್ಕೆ 117, ಬಿಜೆಪಿಗೆ 23 ಮತ್ತು ಕಾಂಗ್ರೆಸ್‌ಗೆ 9 ಸ್ಥಾನ ಸಿಕ್ಕಿತ್ತು. 2000ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದ ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಅವರು ಸತತ ಐದನೇ ಅವಧಿಗೆ ಮರು ಆಯ್ಕೆಯಾಗಿದ್ದರು.

ಬಿಜೆಡಿಯ ಮಾಜಿ ಮಿತ್ರ ಪಕ್ಷವಾದ ಬಿಜೆಪಿ ಇತ್ತೀಚಿನ ವರ್ಷಗಳಲ್ಲಿ ಪ್ರಮುಖ ವಿರೋಧ ಪಕ್ಷವಾಗಿ ಗುರುತಿಸಿಕೊಂಡಿದೆ. ಬಿಜೆಪಿಯು 2000 ಮತ್ತು 2009ರ ನಡುವೆ ಬಿಜೆಡಿಯೊಂದಿಗೆ ಅಧಿಕಾರವನ್ನು ಹಂಚಿಕೊಂಡಿತ್ತು. ಆ ಅವಧಿಯಲ್ಲಿ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಸರ್ಕಾರ ನಡೆಸಿದ್ದವು. 2009ರ ಚುನಾವಣೆಗೂ ಮೊದಲು ಮೈತ್ರಿ ಮುರಿದು ಬಿದ್ದು, ಬಿಜೆಪಿ ರಾಜ್ಯದಲ್ಲಿ ಮೂರನೇ ಪ್ರಮುಖ ರಾಜಕೀಯ ಶಕ್ತಿಯಾಗಿ ಬೆಳೆಯಿತು.

ಇದನ್ನೂ ಓದಿ: Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Continue Reading

Lok Sabha Election 2024

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Election Results 2024: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು (Election Results 2024) ಎನ್‌ಡಿಎ ಸರಳ ಬಹುಮತ ಪಡೆದುಕೊಂಡಿದೆ. ಇದೀಗ ಎನ್‌ಡಿಎ ಸರ್ಕಾರ ರಚನೆಯ ಕಸರತ್ತು ಆರಂಭಿಸಿದೆ. ಅದರ ಭಾಗವಾಗಿ ಇಂದು (ಜೂನ್‌ 5) ದೆಹಲಿಯಲ್ಲಿ ಮಹತ್ವದ ಸಭೆ ನಡೆದಿದೆ. ಈ ಮಧ್ಯೆ ನರೇಂದ್ರ ಮೋದಿ (Narendra Modi) ಪ್ರಧಾನಿಯಾಗಿ ಜೂನ್‌ 8ರಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

VISTARANEWS.COM


on

Election results 2024
Koo

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು (Election Results 2024) ಎನ್‌ಡಿಎ ಸರಳ ಬಹುಮತ ಪಡೆದುಕೊಂಡಿದೆ. ಇದೀಗ ಎನ್‌ಡಿಎ ಸರ್ಕಾರ ರಚನೆಯ ಕಸರತ್ತು ಆರಂಭಿಸಿದೆ. ಅದರ ಭಾಗವಾಗಿ ಇಂದು (ಜೂನ್‌ 5) ದೆಹಲಿಯಲ್ಲಿ ಮಹತ್ವದ ಸಭೆ ನಡೆದಿದೆ. ಈ ಮಧ್ಯೆ ನರೇಂದ್ರ ಮೋದಿ (Narendra Modi) ಪ್ರಧಾನಿಯಾಗಿ ಜೂನ್‌ 8ರಂದು ಸಂಜೆ 4 ಗಂಟೆಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.

ಎನ್‌ಡಿಎ ಒಟ್ಟು 291 ಸ್ಥಾನ ಗೆದ್ದಿದ್ದು, ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಲಿದೆ. ಈಗಾಗಲೇ ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು, ನಿತೀಶ್‌ ಕುಮಾರ್‌ ಮತ್ತಿತರ ಮಿತ್ರ ಪಕ್ಷಗಳ ನಾಯಕರು ಎನ್‌ಡಿಎ ಸರ್ಕಾರ ರಚನೆಗೆ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಮೋದಿ ಜೂ. 8ರಂದು ಸತತ ಮೂರನೇ ಬಾರಿಗೆ ಪ್ರಧಾನಿ ಹುದ್ದೆಗೆ ಏರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಿಂದ 4 ಮಂದಿಗೆ ಸಚಿವ ಸ್ಥಾನ ಫಿಕ್ಸ್?‌

ಈ ಸಂದರ್ಭದಲ್ಲಿ ರಾಜ್ಯದಿಂದ ಆರಿಸಿ ಬಂದಿರುವ ಸಂಸದರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಫಿಕ್ಸ್‌ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ.

ಪ್ರಹ್ಲಾದ ಜೋಶಿ (Prahlad Joshi) ಅವರು ಎನ್‌ಡಿಎ ಮೂರನೆಯ ಅವಧಿಯಲ್ಲೂ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಿರರ್ಗಳತೆ ಹೊಂದಿರುವ ಪ್ರಹ್ಲಾದ್‌ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ನಾಲ್ಕನೇ ಬಾರಿಗೆ ಹುಬ್ಬಳ್ಳಿ- ಧಾರವಾಡದ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, ಬ್ರಾಹ್ಮಣ ಕೋಟಾವನ್ನು ತುಂಬಲಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೂ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ. ಮಾಜಿ ಸಿಎಂ ಆಗಿ ಅನುಭವ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಮಾತುಗಾರಿಕೆ, ಆರ್ಥಿಕತೆಯ ವಿಚಾರಗಳಲ್ಲಿ ವಿಶೇಷ ಜ್ಞಾನ ಹೊಂದಿರುವಿಕೆಯ ಜೊತೆಗೆ ಲಿಂಗಾಯತ ಕೋಟಾ ಕೂಡ ಬೊಮ್ಮಾಯಿ ಅವರಿಗೆ ನೆರವಾಗಲಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಸಿ.ಎನ್‌ ಮಂಜುನಾಥ್‌ (Dr CN Manjunath) ಅವರೂ ಸಚಿವ ಸ್ಥಾನ ಪಡೆಯಬಲ್ಲವರ ಯಾದಿಯಲ್ಲಿ ಇದ್ದಾರೆ ಎನ್ನಲಾಗಿದೆ. ಮಂಜುನಾಥ್‌ ಅವರ ಹಿರಿತನ, ಆರೋಗ್ಯ ಕ್ಷೇತ್ರದ ಅನುಭವ ಸರಕಾರದಲ್ಲಿ ನೆರವಾಗಲಿದೆ ಎಂಬ ಮುಂದಾಲೋಚನೆ. ಜೊತೆಗೆ, ಹಲವು ಬಾರಿಯ ಸಂಸದರಾಗಿರುವ, ಕಾಂಗ್ರೆಸ್‌ನ ಹೆಬ್ಬಂಡೆ ಡಿ.ಕೆ ಸುರೇಶ್‌ (DK Suresh) ಅವರನ್ನು ದೊಡ್ಡ ಅಂತರದಲ್ಲಿ ಸೋಲಿಸಿ ಮಣ್ಣು ಮುಕ್ಕಿಸಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದ ಹೆಗ್ಗಳಿಕೆ ಜತೆಗಿದೆ.

ಮಾಜಿ ಸಿಎಂ, ಜೆಡಿಎಸ್‌ ಮುಖಂಡ ಎಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಮೈತ್ರಿ ಖೋಟಾದಲ್ಲಿ ಸಚಿವ ಸ್ಥಾನ ಫಿಕ್ಸ್ ಆಗಿದೆ ಎನ್ನಲಾಗಿದೆ. ಜೆಡಿಎಸ್‌ ಎರಡು ಸ್ಥಾನಗಳ ಬೆಂಬಲ ಈಗ ಎನ್‌ಡಿಎಗೆ ಮಹತ್ವದ್ದಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಜೆಡಿಎಸ್‌ ಮೈತ್ರಿಯನ್ನು ಬೆಂಬಲಿಸುವುದು ಎನ್‌ಡಿಗೆ ಮೈತ್ರಿ ಧರ್ಮವಾಗಿದೆ ಎನ್ನಲಾಗಿದೆ. ಜತೆಗೆ ಒಕ್ಕಲಿಗ ಕೋಟಾ ಕೂಡ ತುಂಬಲಿದೆ ಎನ್ನುವ ಲೆಕ್ಕಾಚಾರ ಕೇಳಿ ಬಂದಿದೆ.

ಇನ್ನೂ ಓದಿ: Election Results 2024: ಸುದೀರ್ಘ ಅವಧಿಗೆ ಪ್ರಧಾನಿ ಆಗ್ತಾರಾ ಮೋದಿ?; ನೆಹರೂ, ಇಂದಿರಾ ಸಾಲಿಗೆ ಸೇರೋದು ಪಕ್ಕಾನಾ?

Continue Reading

ದೇಶ

Stock Market: ಮೋದಿ ಪ್ರಧಾನಿ ಆಗುವುದು ಖಾತರಿ ಆಗುತ್ತಿದ್ದಂತೆ ಮತ್ತೆ ಪುಟಿದೆದ್ದ ಷೇರು ಮಾರುಕಟ್ಟೆ!

Stock Market:ಹಿಂದೂಸ್ತಾನ್ ಯೂನಿಲಿವರ್, ಎಂ & ಎಂ ಟಾಪ್ ಗೇನರ್ ಆಗಿದ್ದರೆ, ಪವರ್ ಗ್ರಿಡ್, ಆಕ್ಸಿಸ್ ಬ್ಯಾಂಕ್ಯ ಶೇರು ಮಾರುಕಟ್ಟೆಗಳಲ್ಲಿ ಅತಿ ಹೆಚ್ಚು ಲಾಭ ಗಳಿಸಿವೆ. ಅದೇ ರೀತಿ, ಎನ್‌ಎಸ್‌ಇ, ಟಾಟಾ ಸ್ಟೀಲ್, ಬಿಪಿಸಿಎಲ್ ಟಾಪ್ ಗೇನರ್ ಆಗಿದ್ದರೆ, ಪವರ್ ಗ್ರಿಡ್, ಅಪೊಲೊ ಆಸ್ಪತ್ರೆಗಳು ಟಾಪ್ ಗೇನರ್‌ಗಳಾಗಿವೆ. ನಿಫ್ಟಿ ಸ್ಮಾಲ್‌ಕ್ಯಾಪ್ ಶೇಕಡಾ 0.32 ರಷ್ಟು ಏರಿಕೆಯಾಗಿದ್ದು, ಮಿಡ್‌ಕ್ಯಾಪ್ ಶೇಕಡಾ 0.47 ರಷ್ಟು ಏರಿಕೆಯಾಗಿದೆ.

VISTARANEWS.COM


on

Stock Market
Koo

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ(Election Results 2024)ದಲ್ಲಿ ಈ ಬಾರಿ ಬಿಜೆಪಿ(BJP) ನೇತೃತ್ವದ ಎನ್‌ಡಿಎ ಸರ್ಕಾರ(NDA Government) ಹಿನ್ನಡೆ ಅನುಭವಿಸುತ್ತಿದ್ದಂತೆ ನಿನ್ನೆ ಶೇರು ಮಾರುಕಟ್ಟೆ(Stock Market) ಡಿಢೀರ್‌ ಕುಸಿತ ಕಂಡಿತ್ತು. ಆದರೆ ಇಂದು ನರೇಂದ್ರ ಮೋದಿ(PM Narendra Modi) ಮತ್ತೆ ಪ್ರಧಾನಿಯಾಗುವುದು ಖಚಿತವಾಗುತ್ತಿದ್ದಂತೆ ಭಾರತೀಯ ಷೇರು ಮಾರುಕಟ್ಟೆಯಲ್ಲಿ ಚೇತರಿಕೆ ಕಂಡಿದ್ದು, ಸೆನ್ಸೆಕ್ಸ್ 1.95 ರಷ್ಟು ಏರಿಕೆಯಾಗಿ 73,486.14ಕ್ಕೆ ವಹಿವಾಟು ನಡೆಸುತ್ತಿದ್ದರೆ, ನಿಫ್ಟಿ 1.91 ರಷ್ಟು ಏರಿಕೆಯಾಗಿ 22,303.40 ಮಟ್ಟದಲ್ಲಿದೆ.

ಕಳೆದ ಬಾರಿ ಚುನಾವಣಾ ಫಲಿತಾಂಶಕ್ಕೆ ಹೋಲಿಸಿದರೆ ಈ ಬಾರಿ ಎನ್‌ಡಿಎ ಒಕ್ಕೂಟ ಕೇವಲ 291 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಳ್ಳಬೇಕಾಗಿದೆ. ಅಲ್ಲದೇ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ನಿನ್ನೆ ಫಲಿತಾಂಶ ಹೊರಬೀಳುತ್ತಿದ್ದಂತೆ ಪವರ್ ಫೈನಾನ್ಸ್ ಕಾರ್ಪೊರೇಷನ್ ಷೇರುಗಳು ಭಾರೀ ಕುಸಿತ (Stock Market Crash) ಕಂಡಿವೆ. ಬಿಜೆಪಿ ನೇತೃತ್ವದ ಎನ್‌ಡಿಎಗೆ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆ ಆಗಿರುವ ಹಿನ್ನೆಲೆಯಲ್ಲಿ ಷೇರು ದರಗಳು ಕುಸಿದು ಹೂಡಿಕೆದಾರರಿಗೆ ಸುಮಾರು 40 ಲಕ್ಷ ಕೋಟಿ ರೂ. ನಷ್ಟ ಅನುಭವಿಸಿತ್ತು. ಇದೀಗ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆ ಪಕ್ಕಾ ಆಗುತ್ತಿದ್ದಂತೆ ನಿಫ್ಟಿಯಲ್ಲಿ ONGC, M&M, BPCL, HUL, ಟಾಟಾ ಸ್ಟೀಲ್ ಪ್ರಮುಖ ಲಾಭ ಗಳಿಸಿವೆ.

ಹಿಂದೂಸ್ತಾನ್ ಯೂನಿಲಿವರ್, ಎಂ & ಎಂ ಟಾಪ್ ಗೇನರ್ ಆಗಿದ್ದರೆ, ಪವರ್ ಗ್ರಿಡ್, ಆಕ್ಸಿಸ್ ಬ್ಯಾಂಕ್ಯ ಶೇರು ಮಾರುಕಟ್ಟೆಗಳಲ್ಲಿ ಅತಿ ಹೆಚ್ಚು ಲಾಭ ಗಳಿಸಿವೆ. ಅದೇ ರೀತಿ, ಎನ್‌ಎಸ್‌ಇ, ಟಾಟಾ ಸ್ಟೀಲ್, ಬಿಪಿಸಿಎಲ್ ಟಾಪ್ ಗೇನರ್ ಆಗಿದ್ದರೆ, ಪವರ್ ಗ್ರಿಡ್, ಅಪೊಲೊ ಆಸ್ಪತ್ರೆಗಳು ಟಾಪ್ ಗೇನರ್‌ಗಳಾಗಿವೆ. ನಿಫ್ಟಿ ಸ್ಮಾಲ್‌ಕ್ಯಾಪ್ ಶೇಕಡಾ 0.32 ರಷ್ಟು ಏರಿಕೆಯಾಗಿದ್ದು, ಮಿಡ್‌ಕ್ಯಾಪ್ ಶೇಕಡಾ 0.47 ರಷ್ಟು ಏರಿಕೆಯಾಗಿದೆ. ವಲಯವಾರು, ನಿಫ್ಟಿ ಎಫ್‌ಎಂಸಿಜಿ ಶೇಕಡಾ 2 ಕ್ಕಿಂತ ಹೆಚ್ಚಿನ ಲಾಭದೊಂದಿಗೆ ಮುನ್ನಡೆ ಸಾಧಿಸಿದೆ, ನಂತರ ಆಟೋ (ಶೇ. 1.73 ಏರಿಕೆ). ಮೆಟಲ್ ಮಾತ್ರ 0.36 ರಷ್ಟು ಕುಸಿದಿದೆ.

ನಿನ್ನೆ ಆರ್ ಇ ಸಿ (REC) ಷೇರುಗಳು ಸುಮಾರು ಶೇ. 20ರಷ್ಟು ಕುಸಿತವಾಗಿದ್ದು, ಬಿ ಹೆಚ್ ಇ ಎಲ್ (BHEL) ಶೇ. 19ರಷ್ಟು ಕುಸಿದಿದೆ. ಗೈಲ್ (GAIL) ಶೇ. 18 ಮತ್ತು ಅದಾನಿ (adani) ಪೋರ್ಟ್ಸ್ ಶೇ. 17ರಷ್ಟು ಕುಸಿತವಾಗಿತ್ತು. ಅದಾನಿ ಎಂಟರ್‌ಪ್ರೈಸಸ್, ಹುಡ್ಕೊ, ಕೆನರಾ ಬ್ಯಾಂಕ್, ಯೂನಿಯನ್ ಬ್ಯಾಂಕ್, ಬ್ಯಾಂಕ್ ಆಫ್ ಬರೋಡಾ, ಒಎನ್‌ಜಿಸಿ ಮತ್ತು ಆರ್‌ಐಎಲ್ ಷೇರುಗಳು ಸಹ ಕುಸಿತದ ಹಾದಿಯಲ್ಲಿ ಸಾಗಿತ್ತು.

ಮತ ಎಣಿಕೆಯ ಆರಂಭದಲ್ಲಿ ಎನ್ಎಸ್ಇ ನಿಫ್ಟಿ 50 ಸೂಚ್ಯಂಕವು ಶೇಕಡಾ 3.03ರಷ್ಟು ಕುಸಿದು 22,557 ಕ್ಕೆ ತಲುಪಿದೆ ಮತ್ತು ಎಸ್ ಆಂಡ್ ಪಿ ಬಿಎಸ್ಇ ಸೆನ್ಸೆಕ್ಸ್ ಶೇಕಡಾ 3ರಷ್ಟು ಕುಸಿದು 74,107ಕ್ಕೆ ಇಳಿದಿತ್ತು.ಷೇರು ಮಾರುಕಟ್ಟೆ ಕುಸಿತವು ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನಲ್ಲಿ ಪಟ್ಟಿ ಮಾಡಲಾದ ಕಂಪೆನಿಗಳ ಮೇಲೆ ಭಾರಿ ನಷ್ಟವನ್ನುಂಟು ಮಾಡಿದ್ದವು. ಬಿಎಸ್‌ಇಯಲ್ಲಿ ಪಟ್ಟಿ ಮಾಡಲಾದ 700ಕ್ಕೂ ಹೆಚ್ಚು ಕಂಪೆನಿಗಳು ಪೇಟಿಎಂ ಮತ್ತು ಐನಾಕ್ಸ್ ವಿಂಡ್ ಸೇರಿದಂತೆ ಅತೀ ಕಡಿಮೆ ಲಾಭಗಳಿಸಿತ್ತು.

ನಿನ್ನೆ ಆರಂಭಿಕ ವಹಿವಾಟಿನಲ್ಲಿ ತೀವ್ರ ಕುಸಿತದ ಅನಂತರ ಬೆಂಚ್ಮಾರ್ಕ್ ಸ್ಟಾಕ್ ಮಾರುಕಟ್ಟೆ ಸೂಚ್ಯಂಕಗಳು ಮಧ್ಯಾಹ್ನದ ವೇಳೆಗೆ ಗಣನೀಯವಾಗಿ ಚೇತರಿಸಿಕೊಂಡವು. 30 ಷೇರುಗಳ ಸೆನ್ಸೆಕ್ಸ್ ಮಧ್ಯಾಹ್ನ ಒಂದು ಗಂಟೆಯ ಮೊದಲು 6,000 ಪಾಯಿಂಟ್‌ಗಳ ಕುಸಿತವನ್ನು ಹೊಂದಿದ್ದರೆ, ಬಳಿಕ ಅದು 2 ಗಂಟೆ ಸುಮಾರಿಗೆ 3,372.15 ಪಾಯಿಂಟ್‌ಗಳ ಇಳಿಕೆಯೊಂದಿಗೆ 73,096.63 ಕ್ಕೆ ವಹಿವಾಟು ನಡೆಸಿದ್ದವು. ಮತ್ತೊಂದೆಡೆ, ನಿಫ್ಟಿ 50 1,053.50 ಪಾಯಿಂಟ್‌ಗಳ ಇಳಿಕೆಯೊಂದಿಗೆ 21884.50ಕ್ಕೆ ವಹಿವಾಟು ಮುಗಿಸಿದ್ದವು.

ಇದನ್ನೂ ಓದಿ:Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Continue Reading
Advertisement
Election Results 2024
ಪ್ರಮುಖ ಸುದ್ದಿ5 mins ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ17 mins ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ23 mins ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 202439 mins ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Lakshmi Hebbalkar
ಪ್ರಮುಖ ಸುದ್ದಿ41 mins ago

Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

Pradeep Eshwar
ಪ್ರಮುಖ ಸುದ್ದಿ58 mins ago

Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Stock Market
ದೇಶ1 hour ago

Stock Market: ಮೋದಿ ಪ್ರಧಾನಿ ಆಗುವುದು ಖಾತರಿ ಆಗುತ್ತಿದ್ದಂತೆ ಮತ್ತೆ ಪುಟಿದೆದ್ದ ಷೇರು ಮಾರುಕಟ್ಟೆ!

Gold Rate Today
ಚಿನ್ನದ ದರ1 hour ago

Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Prajwal Revanna
ಪ್ರಮುಖ ಸುದ್ದಿ1 hour ago

Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

election results 2024 joshi hdk cnm bommai
ಪ್ರಮುಖ ಸುದ್ದಿ1 hour ago

Election results 2024: ಎನ್‌ಡಿಎ ಸರಕಾರದಲ್ಲಿ ರಾಜ್ಯದಿಂದ 4 ಮಂದಿಗೆ ಸಚಿವ ಸ್ಥಾನ ಫಿಕ್ಸ್?‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌