ಸ್ಪೈಸ್‌ ಜೆಟ್‌ ವಿಮಾನಗಳಿಗೆ ಆಕಾಶ ದೋಷ!; ಮಾರ್ಗ ಮಧ್ಯೆ ಬಿರುಕುಬಿಟ್ಟ ವಿಂಡ್‌ ಶೀಲ್ಡ್‌ - Vistara News

ದೇಶ

ಸ್ಪೈಸ್‌ ಜೆಟ್‌ ವಿಮಾನಗಳಿಗೆ ಆಕಾಶ ದೋಷ!; ಮಾರ್ಗ ಮಧ್ಯೆ ಬಿರುಕುಬಿಟ್ಟ ವಿಂಡ್‌ ಶೀಲ್ಡ್‌

ಸ್ಪೈಸ್‌ ಜೆಟ್‌ ವಿಮಾನಗಳಲ್ಲಿ ಹೀಗೆ ಮಾರ್ಗ ಮಧ್ಯೆಯಲ್ಲಿ ದೋಷ ಕಾಣುತ್ತಿರುವುದು ಕಳೆದ 17 ದಿನಗಳಲ್ಲಿ ಇದು ಏಳನೇ ಬಾರಿಯಾಗಿದೆ. ಇಂದು ಬೆಳಗ್ಗೆಯೊಂದು ವಿಮಾನ ಕರಾಚಿಯಲ್ಲಿ ತುರ್ತು ಭೂಸ್ಪರ್ಶವಾಗಿತ್ತು.

VISTARANEWS.COM


on

Spice Jet
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಗುಜರಾತ್‌ನ ಕಾಂಡ್ಲಾದಿಂದ ಮುಂಬೈಗೆ ಪ್ರಯಾಣ ಮಾಡುತ್ತಿದ್ದ ಸ್ಪೈಸ್‌ ಜೆಟ್‌ ವಿಮಾನಕ್ಕೆ ಮಾರ್ಗ ಮಧ್ಯೆ ಅಡಚಣೆ ಉಂಟಾಗಿದೆ. ಹಾಗಿದ್ದಾಗ್ಯೂ ಅದು ಮುಂಬೈನಲ್ಲಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಈ ವಿಮಾನ 23 ಸಾವಿರ ಅಡಿ ಎತ್ತರದಲ್ಲಿ ಹಾರಾಡುತ್ತಿದ್ದಾಗ ಅದರ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಸಹಜವಾಗಿಯೇ ಆತಂಕ ಉಂಟಾಗಿತ್ತು. ಆದರೆ ಪೈಲಟ್‌ಗಳು ವಿಮಾನವನ್ನು ಸುರಕ್ಷಿತವಾಗಿ ಮುಂಬೈನಲ್ಲಿ ಲ್ಯಾಂಡ್‌ ಮಾಡಿಸಿದ್ದಾರೆ.

ಈ ಬಗ್ಗೆ ಸ್ಪೈಸ್‌ಜೆಟ್‌ ವಕ್ತಾರ ಹೇಳಿಕೆ ಬಿಡುಗಡೆ ಮಾಡಿದ್ದು, ʼಸ್ಪೈಸ್‌ಜೆಟ್‌ Q400 ವಿಮಾನ ಕಾಂಡ್ಲಾದಿಂದ ಮುಂಬೈಗೆ ಹೋಗುತ್ತಿತ್ತು. ಮಾರ್ಗಮಧ್ಯೆ ಪಿ2 ಬದಿಯ ವಿಂಡ್‌ಶೀಲ್ಡ್‌ನಲ್ಲಿ ಬಿರುಕು ಕಾಣಿಸಿಕೊಂಡಿತು. ಏನೂ ತೊಂದರೆಯಾಗುವುದಿಲ್ಲ ಎಂದು ಖಚಿತಪಡಿಸಿಕೊಂಡ ಬಳಿಕ ಪ್ರಯಾಣ ಮುಂದುವರಿಸಲಾಯಿತು ಎಂದು ಹೇಳಿದ್ದಾರೆ.

ಸ್ಪೈಸ್‌ಜೆಟ್‌ ವಿಮಾನ ಇತ್ತೀಚೆಗೆ ಪದೇಪದೆ ಇಂಥ ಸಮಸ್ಯೆಗಳನ್ನು ಎದುರಿಸುತ್ತಿದೆ. ಇಂದು ಬೆಳಗ್ಗೆ ದೆಹಲಿಯಿಂದ ದುಬೈಗೆ ಹೋಗುತ್ತಿದ್ದ ಸ್ಪೈಸ್‌ ಜೆಟ್‌ ಬಿ 737 ವಿಮಾನಕ್ಕೆ ಮಾರ್ಗಮಧ್ಯೆ ತಾಂತ್ರಿಕ ದೋಷ ಎದುರಾಯಿತು. ಇಂಡಿಕೇಟರ್‌ ಲೈಟ್‌ ಸರಿಯಾಗಿ ಕೆಲಸ ಮಾಡದ ಕಾರಣ ಆ ವಿಮಾನವನ್ನು ಪಾಕಿಸ್ತಾನದ ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅಂದಹಾಗೇ, ಈ ಸ್ಪೈಸ್‌ ಜೆಟ್‌ ವಿಮಾನ ಹೀಗೆ ಮಾರ್ಗ ಮಧ್ಯೆಯ ಸಮಸ್ಯೆ ಎದುರಿಸುತ್ತಿರುವುದು ಕಳೆದ 17 ದಿನಗಳಲ್ಲಿ ಇದು ಏಳನೇ ಬಾರಿಯಾಗಿದೆ.

ಜೂ.19ರಂದು ದೆಹಲಿಯಿಂದ 189 ಪ್ರಯಾಣಿಕರನ್ನು ಹೊತ್ತು ಹೊರಟಿದ್ದ ಸ್ಪೈಸ್‌ ಜೆಟ್‌ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಬಳಿಕ ಪಟಣಾ ಏರ್‌ಪೋರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿತ್ತು. ಜುಲೈ 2ರಂದು ಸ್ಪೈಸ್‌ ಜೆಟ್‌ ವಿಮಾನವೊಂದು ದೆಹಲಿಯಿಂದ ಜಬಲ್ಪುರಕ್ಕೆ ಹೊರಟಿತ್ತು. ಕೆಲವೇ ಕ್ಷಣದಲ್ಲಿ ವಿಮಾನದ ಕ್ಯಾಬಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದ್ದರಿಂದ ವಾಪಸ್‌ ದೆಹಲಿಗೆ ಬಂದು ಲ್ಯಾಂಡ್‌ ಮಾಡಲಾಗಿತ್ತು.

ಇದನ್ನೂ ಓದಿ: ಸ್ಪೈಸ್‌ ಜೆಟ್‌ ವಿಮಾನದಲ್ಲಿ ಹೊಗೆ ಕಂಡ ಬಳಿಕ ತುರ್ತು ಭೂಸ್ಪರ್ಶ, 2 ತಿಂಗಳಲ್ಲಿ 4ನೇ ಅವಘಡ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Unemployment Rate : ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ

VISTARANEWS.COM


on

Unemployment Rate
Koo

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತವು ಉದ್ಯೋಗದ ಪ್ರಮಾಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ವರದಿಯೊಂದು ಹೇಳಿದೆ ಭಾರತದ ನಿರುದ್ಯೋಗ ದರವು 2023ರಲ್ಲಿ ಶೇಕಡಾ 3.1 ಕ್ಕೆ ಇಳಿಕೆಯಾಗಿದ್ದು. ಇದು 2022 ರಲ್ಲಿ ಶೇಕಡಾ 7 ರಷ್ಟಿತ್ತು ಎಂದು ಕ್ಯಾಪ್​ಜೆಮಿನಿ ರೀಸರ್ಚ್​ ಸೆಂಟರ್​ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಿಡಿಪಿಯಲ್ಲಿನ ಒಟ್ಟು ಶೇಕಡಾವಾರು ರಾಷ್ಟ್ರೀಯ ಉಳಿತಾಯವು 2022 ರಲ್ಲಿ ಶೇಕಡಾ 29.9 ಕ್ಕೆ ಹೋಲಿಸಿದರೆ 2023 ರಲ್ಲಿ ಶೇಕಡಾ 33.4 ಕ್ಕೆ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ವಿಚಾರದಲ್ಲಿ ಜಾಗತಿಕವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಅತ್ಯುತ್ತಮವಾಗಿದೆ. ಇಲ್ಲಿ ಎಚ್ಎನ್​ಡಬ್ಲ್ಯುಐ ಸಂಪತ್ತಿನ ಬೆಳವಣಿಗೆಯನ್ನು ಕ್ರಮವಾಗಿ ಶೇಕಡಾ 12.4 ಮತ್ತು ಶೇಕಡಾ 7.9 ಮತ್ತು ಎಚ್​ಎನ್​ಡಬ್ಲ್ಯು ಜನಸಂಖ್ಯೆಯ ಬೆಳವಣಿಗೆ ಕ್ರಮವಾಗಿ ಶೇಕಡಾ 12.2 ಮತ್ತು ಶೇಕಡಾ 7.8 ರಷ್ಟು ದಾಖಲಾಗಿದೆ.

ಈ ಎರಡೂ ದೇಶಗಳಲ್ಲಿನ ಸಂಪತ್ತಿನ ಬೆಳವಣಿಗೆಯು ಸ್ಥಿರ ಆರ್ಥಿಕತೆ ಮತ್ತು ಈಕ್ವಿಟಿ ಮಾರುಕಟ್ಟೆಗಳ ದೃಢವಾದ ಕಾರ್ಯಕ್ಷಮತೆ ಆಗಿದೆ ಎಂದು ವರದಿ ತೋರಿಸಿವೆ. ಕಳೆದ ಆರು ತ್ರೈಮಾಸಿಕಗಳಲ್ಲಿ ಭಾರತದ ಆರ್ಥಿಕತೆಯು ತನ್ನ ತ್ವರಿತ ಗತಿಯಲ್ಲ ಬೆಳೆದಿದೆ. ಇದು ದೃಢವಾದ ಖಾಸಗಿ ಬಳಕೆ ಮತ್ತು ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಗಳಿಂದ ಆಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

2022 ರಲ್ಲಿ ಶೇಕಡಾ 6 ರಷ್ಟು ಹೆಚ್ಚಳದ ನಂತರ ದೇಶದ ಮಾರುಕಟ್ಟೆ ಬಂಡವಾಳೀಕರಣವು ಕಳೆದ ವರ್ಷ ಶೇಕಡಾ 29 ರಷ್ಟು ಹೆಚ್ಚಾಗಿದೆ. ಸುಧಾರಿತ ಬಂಡವಾಳ ವೆಚ್ಚ, ಬಲವಾದ ಬ್ಯಾಂಕಿಂಗ್ ವ್ಯವಸ್ಥೆ, ಸಾಲದ ಬೆಳವಣಿಗೆ, ವಾಹನಗಳು ಮತ್ತು ವಿದ್ಯುತ್​ಗೆ ಹೆಚ್ಚಿದ ಬೇಡಿಕೆ ಮತ್ತು ಡಿಜಿಟಲೀಕರಣ-ಚಾಲಿತ ಉತ್ಪಾದನೆಗಳ ಹೆಚ್ಚಳದಂತಹ ಅಂಶಗಳು ಈ ಪ್ರವೃತ್ತಿಯನ್ನು ಹೆಚ್ಚಿಸಿದೆ ಎಂದು ವರದಿಯು ತಿಳಿಸಿದೆ.

ವಿದೇಶಿ ಬಂಡವಾಳ ಹೂಡಿಕೆ (ಎಫ್ಪಿಐ) ಹರಿವು 2023-24ರಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಒಟ್ಟು ಎಫ್ಪಿಐ ಒಳಹರಿವು 24.9 ಬಿಲಿಯನ್ ಡಾಲರ್ (ಡಿಸೆಂಬರ್ 6 ರವರೆಗೆ) ಹಿಂದಿನ ಎರಡು ವರ್ಷಗಳ ನಿವ್ವಳ ಹೊರಹರಿವಿಗೆ ಹೋಲಿಸಿದರೆ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Lok Sabha Election : ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

VISTARANEWS.COM


on

Lok Sabha Election
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಮಹಾರಾಷ್ಟ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಗೆದ್ದಿದ್ದ ಸಂಸದರೊಬ್ಬರು ಗುರುವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ಹಳೆ ಪಕ್ಷದ ಒಟ್ಟು ಸದಸ್ಯರ 100ಕ್ಕೆ ಏರಿಕೆಯಾಗಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಶತಕದ ಸಂಭ್ರವನ್ನಾಚರಿಸಿದೆ. ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಒಪ್ಪಂದದ ಅಡಿಯಲ್ಲಿ ಮಹಾ ವಿಕಾಸ್ ಅಘಾಡಿ ಮೈತ್ರಿ ಪಾಲುದಾರ ಶಿವಸೇನೆ (ಯುಬಿಟಿ) ಗೆ ಟಿಕೆಟ್​ ನೀಡಿದ್ದಕ್ಕೆ ಬೇಸರಗೊಂಡಿದ್ದ ಕಾಂಗ್ರೆಸ್ ಮುಖಂಡ ವಿಶಾಲ್ ಪಾಟೀಲ್ ಸಾಂಗ್ಲಿಯಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದರು. ಇದೀಗ ಅವರು ಮಾತೃಪಕ್ಷಕ್ಕೆ ವಾಪಸಾಗಿರುವ ಕಾರಣ ಕಾಂಗ್ರೆಸ್ ಸದಸ್ಯರ ಸಂಖ್ಯೆ ಹೆಚ್ಚಿದೆ.

ಉದ್ಧವ್ ಠಾಕ್ರೆ ಈ ಸ್ಥಾನವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡಲು ನಿರಾಕರಿಸಿದ್ದರು. ಹೀಗಾಗಿ ಪಾಟಿಲ್​ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಅವರು ತಮ್ಮ ಸಮೀಪದ ಬಿಜೆಪಿಯ ಸಂಜಯ್ ಪಾಟೀಲ್ ಅವರನ್ನು 1,00,053 ಮತಗಳಿಂದ ಸೋಲಿ ಸಿದ್ದರು. ಇಲ್ಲಿ ಶಿವಸೇನೆ ಅಭ್ಯರ್ಥಿ ಚಂದ್ರಹರ್ ಪಾಟೀಲ್ ಕೇವಲ 60,860 ಮತಗಳನ್ನು ಪಡೆದಿದ್ದರು.

ಮಹಾರಾಷ್ಟ್ರದ ಜನರು ದ್ರೋಹ, ಅಹಂಕಾರ ಮತ್ತು ವಿಭಜನೆಯ ರಾಜಕೀಯವನ್ನು ಸೋಲಿಸಿದ್ದಾರೆ. ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜ್, ಮಹಾತ್ಮ ಜ್ಯೋತಿಬಾ ಫುಲೆ ಮತ್ತು ಬಾಬಾ ಸಾಹೇಬ್ ಡಾ.ಅಂಬೇಡ್ಕರ್ ಅವರಂತಹ ನಮ್ಮ ಪ್ರೇರಣಾದಾಯಕ ನಾಯಕರಿಗೆ ಇದು ಸೂಕ್ತ ಗೌರವವಾಗಿದೆ. ಸಾಂಗ್ಲಿಯ ಚುನಾಯಿತ ಸಂಸದ ಶ್ರೀ ವಿಶಾಲ್ ಪಾಟೀಲ್ (@patilvishalvp) ಅವರು ಕಾಂಗ್ರೆಸ್ ಪಕ್ಷಕ್ಕೆ ನೀಡಿದ ಬೆಂಬಲವನ್ನು ಸ್ವಾಗತಿಸುತ್ತೇನೆ. ಸಂವಿಧಾನ ದೀರ್ಘಕಾಲ ಸುರಕ್ಷಿತವಾಗಿರಲಿ ಎಂದು ಬರೆಯಲಾಗಿದೆ.

ಪಾಟೀಲ್ ಅವರ ಬೆಂಬಲವು ಲೋಕಸಭೆಯಲ್ಲಿ 99 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್​ಗೆ ಗಮನಾರ್ಹ ಉತ್ತೇಜನ ಸಿಕ್ಕಿದೆ. ಈ ಪಕ್ಷ ಹಿಂದಿನ ಚುನಾವಣೆಯಲ್ಲಿ ಪಡೆದಿದ್ದ 52 ರಿಂದ ತನ್ನ ಸಂಖ್ಯೆಯನ್ನು ದುಪ್ಪಟ್ಟು ಮಾಡಿದೆ. ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಮಹಾರಾಷ್ಟ್ರದ 48 ಸ್ಥಾನಗಳಲ್ಲಿ 30 ಸ್ಥಾನಗಳನ್ನು ಗೆದ್ದಿವೆ. ಮತ್ತೊಂದೆಡೆ, ಬಿಜೆಪಿ-ಎನ್ಸಿಪಿ-ಶಿವಸೇನೆ ಮಹಾಯುತಿ ಮೈತ್ರಿಕೂಟವು ಕೇವಲ 17 ಸ್ಥಾನಗಳನ್ನು ಗಳಿಸಿತ್ತು.

ಇದನ್ನೂ ಓದಿ: Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

ಲೋಕಸಭಾ ಚುನಾವಣಾ ಫಲಿತಾಂಶದ ಬಗ್ಗೆ ಚರ್ಚಿಸಲು ಇಂಡಿಯಾ ಬಣದ ಸದಸ್ಯರು ಬುಧವಾರ ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದರು. “ನಮ್ಮ ಮೈತ್ರಿಕೂಟಕ್ಕೆ ದೊರೆತ ಅಪಾರ ಬೆಂಬಲಕ್ಕಾಗಿ ಇಂಡಿಯಾ ಬಣದ ಘಟಕಗಳು ಭಾರತದ ಜನರಿಗೆ ಧನ್ಯವಾದ ಅರ್ಪಿಸುತ್ತವೆ. ಜನಾದೇಶವು ಬಿಜೆಪಿ ಮತ್ತು ಅವರ ದ್ವೇಷ ಮತ್ತು ಭ್ರಷ್ಟಾಚಾರದ ರಾಜಕೀಯಕ್ಕೆ ಸೂಕ್ತ ಉತ್ತರ ನೀಡಿದೆ” ಎಂದು ಖರ್ಗೆ ಸಭೆಯ ನಂತರ ಹೇಳಿದರು.

“ಇದು ಭಾರತದ ಸಂವಿಧಾನವನ್ನು ರಕ್ಷಿಸಲು ಮತ್ತು ಬೆಲೆ ಏರಿಕೆ, ನಿರುದ್ಯೋಗ ಮತ್ತು ಕ್ರೋನಿ ಕ್ಯಾಪಿಟಲಿಸಂ ವಿರುದ್ಧ ಮತ್ತು ಪ್ರಜಾಪ್ರಭುತ್ವವನ್ನು ಉಳಿಸಲು ಜನಾದೇಶವಾಗಿದೆ. ಮೋದಿ ನೇತೃತ್ವದ ಬಿಜೆಪಿಯ ಫ್ಯಾಸಿಸ್ಟ್ ಆಡಳಿತದ ವಿರುದ್ಧ ಭಾರತ ಬಣವು ಹೋರಾಟವನ್ನು ಮುಂದುವರಿಸುತ್ತದೆ” ಎಂದು ಅವರು ಹೇಳಿದರು.

Continue Reading

ಪ್ರಮುಖ ಸುದ್ದಿ

Kangana Ranaut : ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ; ತಮ್ಮ ಮೇಲೆ ಹಲ್ಲೆ ನಡೆಸಿದ ಬಗ್ಗೆ ಕಂಗನಾ ಪ್ರತಿಕ್ರಿಯೆ ಹೀಗಿತ್ತು

Kangana Ranaut : ನಾನು ಆರಾಮವಾಗಿ ಇದ್ದೇನೆ. ಆದರೆ, ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ನಾವು ಇದನ್ನು ಹೇಗೆ ನಿಭಾಯಿಸಬೇಕಾಗುತ್ತದೆ ಎಂಬುದೇ ನನಗೆ ಕಳವಳಕಾರಿಯಾಗಿದೆ” ಎಂದು ನಟಿ ಹೇಳಿದ್ದಾರೆ. ಅಂದ ಹಾಗೆ ನಟಿಗೆ ಹೊಡೆದಿರುವುದು ಪಂಜಾಬ್ ಮೂಲದ ಕಾನ್​ಸ್ಟೆಬಲ್​. ಪಂಜಾಬ್​ನ ರೈತರು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವ ವೇಳೆ ನಟಿ ನೀಡಿದ್ದ ಹೇಳಿಕೆಗೆ ಪ್ರತಿಕಾರವಾಗಿ ಅವರು ಅಲ್ಲೆ ನಡೆಸಿದ್ದಾರೆ.

VISTARANEWS.COM


on

Kangana Ranaut
Koo

ನವದೆಹಲಿ: ನಟಿ-ರಾಜಕಾರಣಿ ಕಂಗನಾ ರಣಾವತ್​​ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಮಹಿಳಾ ಕಾನ್​ಸ್ಟೆಬಲ್​ ಹಲ್ಲೆ ಮಾಡಿದ ಘಟನೆ ಕುರಿತು ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ವೇಳೆ ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚಾಗುತ್ತಿದೆ. ಅದು ಕಳವಳಕಾರಿ ಸಂಗತಿ. ಹಲ್ಲೆ ನಡೆದ ಬಳಿಕ ನಾನು ಆರಾಮವಾಗಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.

ಘಟನೆ ಬಳಿಕ ವಿಡಿಯೊ ಮೂಲಕ ಪ್ರತಿಕ್ರಿಯಿಸಿದ ನಟಿ, “ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್ನ ಮಹಿಳಾ ಪೇದೆ ನನಗಾಗಿ ಕಾಯುತ್ತಿದ್ದಳು. ಅವಳು ನನ್ನ ಮುಖಕ್ಕೆ ಒಂದು ಬದಿಯಿಂದ ಹೊಡೆದು ನಿಂದಿಸಿದಳು. ಅವಳು ಇದನ್ನು ಏಕೆ ಮಾಡಿದಳು ಎಂದು ನಾನು ಆಕೆಯನ್ನು ಕೇಳಿದೆ, ಮತ್ತು ಅವಳು ಹೇಳಿದಳು, ಇದು ರೈತರ ಪ್ರತಿಭಟನೆಗಾಗಿ ಎಂದು ಹೇಳಿದಳು ಎಂದು ಕಂಗನಾ ಅವರು ವಿಡಿಯೊ ಮೆಸೇಜ್​ನಲ್ಲಿ ತಿಳಿಸಿದ್ದಾರೆ.

ನಾನು ಆರಾಮವಾಗಿ ಇದ್ದೇನೆ. ಆದರೆ, ಪಂಜಾಬ್​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ನಾವು ಇದನ್ನು ಹೇಗೆ ನಿಭಾಯಿಸಬೇಕಾಗುತ್ತದೆ ಎಂಬುದೇ ನನಗೆ ಕಳವಳಕಾರಿಯಾಗಿದೆ” ಎಂದು ನಟಿ ಹೇಳಿದ್ದಾರೆ. ಅಂದ ಹಾಗೆ ನಟಿಗೆ ಹೊಡೆದಿರುವುದು ಪಂಜಾಬ್ ಮೂಲದ ಕಾನ್​ಸ್ಟೆಬಲ್​. ಪಂಜಾಬ್​ನ ರೈತರು ಡೆಲ್ಲಿಯಲ್ಲಿ ಪ್ರತಿಭಟನೆ ನಡೆಸುವ ವೇಳೆ ನಟಿ ನೀಡಿದ್ದ ಹೇಳಿಕೆಗೆ ಪ್ರತಿಕಾರವಾಗಿ ಅವರು ಅಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ಏತನ್ಮಧ್ಯೆ, ಕಂಗನಾ ರಣಾವತ್​ಗೆ ಕಪಾಳಮೋಕ್ಷ ಮಾಡಿದ ಮಹಿಳಾ ಪೇದೆ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿದ್ದಾರೆ. ಕಂಗಾನ ಪ್ರತಿಭಟನೆಗೆ ಹೋಗಿದ್ದ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಅವರೆಲ್ಲರೂ 100 ರೂಪಾಯಿಗೆ ಸಿಗುವವರು ಎಂದಿದ್ದರು. ಆ ವೇಳೆ ನನ್ನ ತಾಯಿ ಪ್ರತಿಭಟನೆಯಲ್ಲಿದ್ದರು. ನನ್ನ ತಾಯಿ ಬಗ್ಗೆ ಹೇಳಿದ್ದಕ್ಕೆ ಪ್ರತಿಕಾರ ತೀರಿಸಿಕೊಂಡಿರುವುದಾಗಿ ನಟಿ ಹೇಳಿದ್ದಾರೆ. ಘಟನೆ ಬಳಿಕ ಮಹಿಳಾ ಪೇದೆಯನ್ನು ಅಮಾನತುಗೊಳಿಸಲಾಗಿದ್ದು, ಎಫ್ಐಆರ್ ದಾಖಲಿಸಲಾಗಿದೆ.

ಏನು ಹೇಳಿದ್ದರು ಕಂಗನಾ

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.
ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

Continue Reading

ಪ್ರಮುಖ ಸುದ್ದಿ

Kangana Ranaut: ಕಂಗನಾಗೆ ಮಹಿಳಾ ಪೇದೆ ಹೊಡೆಯಲು ಕಾರಣವೇನು? ರೈತರ ಬಗ್ಗೆ ಅವರು ನೀಡಿದ ವಿವಾದಾತ್ಮಕ ಹೇಳಿಕೆ ಏನು?

Kangana Ranaut : 2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು.

VISTARANEWS.COM


on

Kangana Ranaut
Koo

ನವದೆಹಲಿ: ಲೋಕ ಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದ ಮಂಡಿಯಿಂದ ಸಂಸದರಾಗಿ ಆಯ್ಕೆಯಾದ ಕಂಗನಾ ರಣಾವತ್​ (Kangana Ranaut), 2020-21 ರಲ್ಲಿ ನಡೆದ ರೈತರ ಪ್ರತಿಭಟನೆಯ ಬಗ್ಗೆ ಹಿಂದೆ ನೀಡಿದ ಹೇಳಿಕೆಯಿಂದ ಕೆರಳಿದ್ದ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಹಿಳಾ ಸಿಬ್ಬಂದಿಯೊಬ್ಬರು ಗುರುವಾರ ಅವರು ಎದುರು ಸಿಕ್ಕಾಗ ಕಪಾಳಮೋಕ್ಷ ಮಾಡಿದ್ದರು. ನಟಿ ಹಾಗೂ ಸಂಸದೆಯ ವಿರುದ್ಧ ಕೈ ಮಾಡಿದ ಕುಲ್ವಿಂದರ್​ ಕೌರ್​ ವಿ ರುದ್ದ ಪ್ರಕರಣ ದಾಖಲಾಗಿದೆ. ಇದೇ ವೇಳೆ ನಟಿ ಈ ಹಿಂದೆ ನೀಡಿದ್ದ ಹೇಳಿಕೆಯೂ ಮುನ್ನೆಲೆಗೆ ಬಂದಿದೆ.

ನರೇಂದ್ರ ಮೋದಿ ಸರ್ಕಾರವು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಮೂರು ಕಾನೂನುಗಳನ್ನ ಜಾರಿಗೆ ತರಲು ಮುಂದಾದಾಗ ಅದರ ವಿರುದ್ಧ ಆಂದೋಲನ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ‘ಖಲಿಸ್ತಾನಿ ಬೆಂಬಲಿಗರು’ ಎಂದು ಒಂದು ಗುಂಪು ಕರೆದಿತ್ತು. ಈ ವಿವಾದಕ್ಕೆ ಈಡಾದಾಗ ಕಂಗಾನಾ ಆ ಗಾಯಕ್ಕೆ ಉಪ್ಪು ಸವರುವಂಥ ಹೇಳಿಕೆ ನೀಡಿದ್ದರು.

2020 ರಲ್ಲಿ, ಕಂಗನಾ ರನೌತ್ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದ ಪಂಜಾಬ್​ನ ಮಹಿಳೆಯೊಬ್ಬರನ್ನು ತಪ್ಪಾಗಿ ಅಂದಾಜಿಸಿದ್ದರು. ಅದಕ್ಕಿಂತ ಹಿಂದೆ ಶಾಹೀನ್ ಬಾಗ್​ನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾನೂನು (ಸಿಎಎ) ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಬಿಲ್ಕಿಸ್ ಬಾನೊ ಅವರು ಎಂದುಕೊಂಡಿದ್ದರು. ಪ್ರತಿಭಟನೆಗೆ ಬರುವ ಮಹಿಳೆಯರೆಲ್ಲರೂ 100 ರೂಪಾಯಿಗೆ ಸಿಗುತ್ತಾರೆ ಎಂದು ಹೇಳಿದ್ದರು. ಇದು ದೊಡ್ಡ ವಿವಾದ ಸೃಷ್ಟಿಸಿತ್ತು. ಅಂದ ಹಾಗೆ ಕಂಗನಾಗೆ ಹೊಡೆದ ಕಾನ್​ಸ್ಟೇಬಲ್​ ಕುಲ್ವಿಂದರ್ ಕೌರ್​ ತಾಯಿಯೂ ಆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಕಂಗನಾ ಹೇಳಿಕೆಯಿಂದ ಕೋಪಗೊಂಡಿದ್ದ ಅವರು ಪ್ರತಿಕಾರ ತೀರಿಸಲು ಕಾದಿದ್ದರು. ಅಂತೆಯೇ ಚಂಡಿಗಢದಲ್ಲಿ ತಪಾಸಣಾ ಕೇಂದ್ರಕ್ಕೆ ಬರುತ್ತಿದ್ದಂತೆ ಕಪಾಳ ಮೋಕ್ಷ ಮಾಡಿದ್ದಾರೆ.

100 ರೂಪಾಯಿಗೆ ಸಿಗುವ ಮಹಿಳೆಯರು ಎಂದು ಕಂಗನಾ ಕೊಟ್ಟಿರುವ ಹೇಳಿಕೆಯು ಎಕ್ಸ್ ನಲ್ಲಿ(ಟ್ವಿಟರ್​) ಕಂಗನಾ ಮತ್ತು ಗಾಯಕ-ನಟ ದಿಲ್ಜೀತ್ ದೋಸಾಂಜ್ ನಡುವೆ ಗಲಾಟೆಗೆ ಕಾರಣವಾಗಿತ್ತು.

ರಿಹಾನ್ನಾ ಬಗ್ಗೆಯೂ ಟೀಕೆ

ಫೆಬ್ರವರಿ 2021 ರಲ್ಲಿ, ಅಂತರರಾಷ್ಟ್ರೀಯ ಪಾಪ್ ಸೆನ್ಸೇಷನ್ ರಿಹಾನ್ನಾ ಅವರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ್ದ ಕಂಗನಾ ರನೌತ್ ಪ್ರತಿಭಟನಾಕಾರರನ್ನು “ಭಯೋತ್ಪಾದಕರು” ಎಂದು ಕರೆದಿದ್ದರು ಮತ್ತು ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

ರಿಹಾನ್ನಾ ಅವರ ಎಕ್ಸ್​ ಪೋಸ್ಟ್​ಗೆ ಉತ್ತರಿಸಿದ ಕಂಗನಾ ರನೌತ್ ” ಅವರು ರೈತರಲ್ಲ, ಅವರು ಭಾರತವನ್ನು ವಿಭಜಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರು. ಇವರಿಂದಾಗಿ ದುರ್ಬಲವಾಗುತ್ತಿರುವ ನಮ್ಮ ದೇಶವನ್ನು ಚೀನಾ ಸ್ವಾಧೀನಪಡಿಸಿಕೊಳ್ಳಬಹುದು. ಚೀನಾದ ವಸಾಹತು ಮಾಡಬಹುದು. ನೀವು ನಮ್ಮ ಬಗ್ಗೆ ಹೇಳಲು ಬರಬೇಡಿ ಎಂದು ಹೇಳಿಕೆ ನೀಡಿದ್ದರು.

ರಿಹಾನ್ನಾ ವಿರುದ್ಧದ ಮತ್ತು ₹ 100 ಪೋಸ್ಟ್​​ಗಳನ್ನು ಕಂಗನಾ ರಣಾವತ್​ ಅಳಿಸಿದ್ದರು. 2021 ರ ಡಿಸೆಂಬರ್​ನಲ್ಲಿ ಕೃಷಿ ಕಾನೂನುಗಳನ್ನು ರದ್ದುಪಡಿಸಲಾಯಿತು ಮತ್ತು ಕೆಲವು ದಿನಗಳ ನಂತರ, ರೈತರ ವಿರುದ್ಧದ ಹೇಳಿಕೆಗಳಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಪ್ರತಿಭಟನಾಕಾರರು ಕಂಗನಾ ಅರ ಕಾರನ್ನು ಪಂಜಾಬ್​ನ ಕಿರಾತ್ಪುರ್ ಸಾಹಿಬ್​ನಲ್ಲಿ ತಡೆದಿದ್ದರು.

ಕಂಗನಾ ಪ್ರತಿಕ್ರಿಯೆ ಏನು?

ನಾನು ಸುರಕ್ಷಿತವಾಗಿದ್ದೇನೆ. ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಯ ಸಮಯದಲ್ಲಿ ಈ ಘಟನೆ ನಡೆದಿದೆ. ತಪಾಸಣೆ ಮುಗಿದ ಕ್ಷಣ, ಬೇರೆ ಕ್ಯಾಬಿನ್​ನಲ್ಲಿದ್ದ ಸಿಐಎಸ್ಎಫ್​​ನ ಮಹಿಳಾ ಕಾನ್​ಸ್ಟೆಬಲ್​ ನನ್ನ ಬಳಿಗೆ ಬಂದು ನನ್ನ ಮುಖಕ್ಕೆ ಬದಿಯಿಂದ ಹೊಡೆದು ನಿಂದಿಸಿದಳು. ನೀವು ಇದನ್ನು ಏಕೆ ಮಾಡಿದ್ದೀರಿ ಎಂದು ನಾನು ಅವಳನ್ನು ಕೇಳಿದೆ. ಆಕೆ ರೈತರ ಪ್ರತಿಭಟನೆ ಬಗ್ಗೆ ನಾನು ನೀಡಿದ ಹೇಳಿಕೆಗಾಗಿ ಅಂದಳು ಎಂದು ನಟಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಂಜಾಬ್​​ನಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಇದನ್ನು ಹೇಗೆ ನಿಭಾಯಿಸಬೇಕು ಎಂಬುದು ನನಗೆ ಕಳವಳಕಾರಿಯಾಗಿದೆ ಎಂದೂ ಕಂಗನಾ ಹೇಳಿದ್ದಾರೆ.

Continue Reading
Advertisement
sunil chhetri
ಪ್ರಮುಖ ಸುದ್ದಿ4 mins ago

Sunil Chhetri : ಕಣ್ಣೀರು ಹಾಕುತ್ತಲೇ ಕೊನೇ ಅಂತಾರಾಷ್ಟ್ರೀಯ ಪಂದ್ಯವಾಡಿ ವಿದಾಯ ಹೇಳಿದ ಸುನಿಲ್​ ಛೆಟ್ರಿ

Shri Bhandara Keri Mutt Shri Vidyesh Theertha Swamiji ashirvachan
ಕರ್ನಾಟಕ26 mins ago

Mysore News: ಅಧ್ಯಯನದಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಮಟ್ಟದ ಜ್ಞಾನಾರ್ಜನೆ ಮಾಡಲು ಸಾಧ್ಯ: ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ

Gadag News
ಕರ್ನಾಟಕ60 mins ago

Gadag News : ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಮನೆಗಳಿಗೆ ನುಗ್ಗಿ ದೊಣ್ಣೆ, ಬಡಿಗೆಗಳಿಂದ ಹಲ್ಲೆ

Rain News
ಕರ್ನಾಟಕ2 hours ago

Rain News: ಪ್ರತ್ಯೇಕ ಮಳೆ ಅವಘಡ; ಸಿಡಿಲು ಬಡಿದು ಬಾಲಕ, ಮಹಿಳೆ ದುರ್ಮರಣ

Disciplinary action if cases of mother and child deaths recur DC Diwakar warns
ಆರೋಗ್ಯ2 hours ago

Vijayanagara News: ತಾಯಿ, ಶಿಶು ಮರಣ ಪ್ರಕರಣ ಮರುಕಳಿಸಿದರೆ ಶಿಸ್ತು ಕ್ರಮ: ಡಿಸಿ ದಿವಾಕರ್

BJP State Spokesperson Hariprakash konemane pressmeet at yallapura
ಕರ್ನಾಟಕ2 hours ago

Uttara Kannada News: ಉ.ಕ ಜಿಲ್ಲೆ ಬಿಜೆಪಿಯ ಗಟ್ಟಿನೆಲ ಎಂಬುದು ಮತ್ತೊಮ್ಮೆ ಸಾಬೀತು: ಹರಿಪ್ರಕಾಶ್‌ ಕೋಣೆಮನೆ

Trekking tragedy
ಬೆಂಗಳೂರು2 hours ago

Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Unemployment Rate
ಪ್ರಮುಖ ಸುದ್ದಿ2 hours ago

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Lok Sabha Election
ಪ್ರಮುಖ ಸುದ್ದಿ3 hours ago

Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

Valmiki Corporation Scam
ಕರ್ನಾಟಕ3 hours ago

Valmiki Corporation Scam: ಸಿಎಂ ಸಿದ್ದರಾಮಯ್ಯಗೆ ರಾಜೀನಾಮೆ ಪತ್ರ ಸಲ್ಲಿಸಿದ ಬಿ.ನಾಗೇಂದ್ರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ11 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ3 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ3 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು5 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌