Subramanian Swamy: ರಾಹುಲ್‌ ಗಾಂಧಿಯ ಭಾರತೀಯ ಪೌರತ್ವ ರದ್ದುಗೊಳಿಸಿ; ಹೈಕೋರ್ಟ್‌ಗೆ ಮೊರೆ ಹೋದ ಸುಬ್ರಮಣಿಯನ್ ಸ್ವಾಮಿ - Vistara News

ದೇಶ

Subramanian Swamy: ರಾಹುಲ್‌ ಗಾಂಧಿಯ ಭಾರತೀಯ ಪೌರತ್ವ ರದ್ದುಗೊಳಿಸಿ; ಹೈಕೋರ್ಟ್‌ಗೆ ಮೊರೆ ಹೋದ ಸುಬ್ರಮಣಿಯನ್ ಸ್ವಾಮಿ

Subramanian Swamy: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಮತ್ತಪಮ್ಮೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಗುಡುಗಿದ್ದಾರೆ. ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ ರ್ದೇಶನ ನೀಡುವಂತೆ ಸುಬ್ರಮಣಿಯನ್ ಸ್ವಾಮಿ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

VISTARANEWS.COM


on

Subramanian Swamy
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ನೇರ ಮಾತಿನ ಮೂಲಕ ರಾಜಕಾರಣಿಗಳ ನಿದ್ದೆಗೆಡಿಸಿರುವ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ (Subramanian Swamy) ಹಲವು ದಿನಗಳ ಬಳಿಕ ಮತ್ತೊಮ್ಮೆ ದೇಶಾದ್ಯಂತ ಸುದ್ದಿಯಾಗಿದ್ದಾರೆ. ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸುವಂತೆ ಗೃಹ ಸಚಿವಾಲಯಕ್ಕೆ (MHA) ನಿರ್ದೇಶನ ನೀಡುವಂತೆ ಸುಬ್ರಮಣಿಯನ್ ಸ್ವಾಮಿ ಶುಕ್ರವಾರ ದೆಹಲಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಹೈಕೋರ್ಟ್ ಮುಂದಿನ ವಾರ ಅರ್ಜಿಯ ವಿಚಾರಣೆ ನಡೆಸುವ ನಿರೀಕ್ಷೆಯಿದೆ. ವಕೀಲ ಸತ್ಯ ಸಭರ್ವಾಲ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ಸುಬ್ರಮಣಿಯನ್ ಸ್ವಾಮಿ ವಾದವೇನು?

ರಾಹುಲ್ ಗಾಂಧಿ ತಮ್ಮದು ಬ್ರಿಟಿಷ್ ಪೌರತ್ವ ಎಂಬುದಾಗಿ ದಾಖಲೆಗಳಲ್ಲಿ ಉಲ್ಲೇಖಿಸಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. 2003ರಲ್ಲಿ ನೋಂದಾಯಿಸಲಾದ ಇಂಗ್ಲೆಂಡ್‌ ಮೂಲದ ಕಂಪೆನಿ ಬ್ಯಾಕ್ಆಪ್ಸ್ ಲಿಮಿಟೆಡ್‌ನ ನಿರ್ದೇಶಕರು ಮತ್ತು ಕಾರ್ಯದರ್ಶಿಗಳಲ್ಲಿ ರಾಹುಲ್ ಗಾಂಧಿ ಒಬ್ಬರು ಎಂದು ಸ್ವಾಮಿ 2019ರಲ್ಲಿಯೇ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದರು. 2005 ಮತ್ತು 2006ರಂದು ಸಲ್ಲಿಸಿದ ಸಂಸ್ಥೆಯ ವಾರ್ಷಿಕ ರಿಟರ್ನ್ಸ್‌ನಲ್ಲಿ ರಾಹುಲ್ ಗಾಂಧಿ ಅವರು ತಮ್ಮ ರಾಷ್ಟ್ರೀಯತೆಯನ್ನು ಬ್ರಿಟಿಷ್‌ ಎಂದು ಘೋಷಿಸಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. 2009ರಂದು ಬ್ಯಾಕ್‌ಆಪ್ಸ್ ಲಿಮಿಟೆಡ್‌ನ ವಿಸರ್ಜನೆಯ ಅರ್ಜಿಯಲ್ಲಿ ರಾಹುಲ್‌ ಗಾಂಧಿ ಅವರ ರಾಷ್ಟ್ರೀಯತೆಯನ್ನು ಮತ್ತೆ ಬ್ರಿಟಿಷ್ ಎಂದು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಇದು ಭಾರತದ ಸಂವಿಧಾನದ 9ನೇ ವಿಧಿ ಮತ್ತು 1955ರ ಭಾರತೀಯ ಪೌರತ್ವ ಕಾಯ್ದೆಯನ್ನು ಉಲ್ಲಂಘಿಸುತ್ತದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. 2019ರ ಏಪ್ರಿಲ್ 29ರಂದು ಗೃಹ ಸಚಿವಾಲಯವು ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಪೌರತ್ವದ ಬಗ್ಗೆ ಮಾಹಿತಿ ನೀಡುವಂತೆ ಕೇಳಿತ್ತು. 15 ದಿನದೊಳಗೆ ಉತ್ತರಿಸುವಂತೆಯೂ ತಿಳಿಸಿತ್ತು. ಅವರು ಪತ್ರ ಬರೆದು 5 ವರ್ಷಗಳು ಕಳೆದರೂ ರಾಹುಲ್ ಗಾಂಧಿ ಅವರ ಬಗ್ಗೆ ತೆಗೆದುಕೊಂಡ ನಿರ್ಧಾರದ ಬಗ್ಗೆ ಗೃಹ ಸಚಿವಾಲಯದಿಂದ ಸ್ಪಷ್ಟತೆ ಇಲ್ಲ ಎಂದು ಸ್ವಾಮಿ ತಿಳಿಸಿದ್ದಾರೆ.

ಈ ಹಿಂದೆ ಸುಬ್ರಮಣಿಯನ್ ಸ್ವಾಮಿ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತು ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೋರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೇ, ಸ್ಯಾಮ್ ಪಿತ್ರೋಡಾ ಕುರಿತು ಖಾಸಗಿ ದೂರು ನೀಡಿದ್ದರು. 

ಇದನ್ನೂ ಓದಿ: Modi Degree Certificate: ವಿವಾದದ ಬೆನ್ನಲ್ಲೇ ಮೋದಿ ಡಿಗ್ರಿ ಸರ್ಟಿಫಿಕೇಟ್ ಬಿಡುಗಡೆ ಮಾಡಿದ ಸುಬ್ರಮಣಿಯನ್‌ ಸ್ವಾಮಿ

ಮೋದಿ ವಿರುದ್ಧವೂ ಕಿಡಿಕಾರಿದ್ದ ಬಿಜೆಪಿ ನಾಯಕ

ಅಚ್ಚರಿ ಎಂದರೆ ಸುಬ್ರಮಣಿಯನ್ ಸ್ವಾಮಿ ಕೆಲವು ತಿಂಗಳ ಹಿಂದೆ ಪ್ರಧಾನಿ ಮೋದಿ ವಿರುದ್ಧವೂ ಕಿಡಿಕಾರಿದ್ದರು. “ಟ್ವಿಟರ್‌ನಲ್ಲಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು” ಎಂದು ಹೇಳಿ ಬಿಜೆಪಿ ನಾಯಕ ಕೆಂಗಣ್ಣಿಗೆ ಗುರಿಯಾಗಿದ್ದರು. “ಟ್ವಿಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿರುವವರು ಮೂರ್ಖರು. ನರೇಂದ್ರ ಮೋದಿ ಅವರು ನನ್ನನ್ನು ಸಂಸದನನ್ನಾಗಿ ಮಾಡುವುದಿಲ್ಲ ಎಂದು ಫಾಲೋವರ್‌ಗಳು ಯಾವಾಗಲೂ ಹೇಳುತ್ತಿರುತ್ತಾರೆ. ಆದರೆ ಮೂರ್ಖರಿಗೆ ಇದು ಗೊತ್ತಿಲ್ಲ. ನಾನು ಈಗಾಗಲೇ ಸಂಸತ್ತನ್ನು ಆರು ಬಾರಿ ಪ್ರವೇಶಿಸಿದ್ದೇನೆ. ಮೂರು ಬಾರಿ ಲೋಕಸಭೆ ಸದಸ್ಯನಾಗಿ, ಮೂರು ಬಾರಿ ರಾಜ್ಯಸಭೆ ಸದಸ್ಯನಾಗಿದ್ದೇನೆ. ನಾನು ಮನಸ್ಸು ಮಾಡಿದರೆ ವಾರಾಣಸಿಯಿಂದಲೇ (ಮೋದಿ ಅವರ ಕ್ಷೇತ್ರ) ಸ್ಪರ್ಧಿಸಿ ಏಳನೇ ಬಾರಿ ಲೋಕಸಭೆ ಪ್ರವೇಶಿಸಬಲ್ಲೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

70th National Film Awards: ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

VISTARANEWS.COM


on

70th National Film Awards ational Award winner Madhyantara Short Movie
Koo

ಬೆಂಗಳೂರು: 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು (70th National Film Awards) ಘೋಷಣೆಯಾಗಿವೆ. ಫೀಚರ್‌ ಫಿಲ್ಮ್ಸ್‌ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು ನಾಲ್ಕು ಪ್ರಶಸ್ತಿಗಳು ಲಭಿಸಿವೆ. ಅತ್ಯುತ್ತಮ ಪ್ರಾದೇಶಿಕ ಚಿತ್ರಗಳ ಪೈಕಿ ‘ಅತ್ಯುತ್ತಮ ಕನ್ನಡ ಸಿನಿಮಾ’ ಪ್ರಶಸ್ತಿ ‘ಕೆಜಿಎಫ್‌ ಚಾಪ್ಟರ್ 2’ ಪಾಲಾಗಿದೆ. ‘ಕೆಜಿಎಫ್ ಚಾಪ್ಟರ್‌ 2’ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದವರು ನಿರ್ದೇಶಕ ಪ್ರಶಾಂತ್ ನೀಲ್‌. ಚಿತ್ರವನ್ನ ನಿರ್ಮಿಸಿದವರು ಹೊಂಬಾಳೆ ಫಿಲ್ಮ್ಸ್. ನಾನ್ ಫೀಚರ್ ವಿಭಾಗದಲ್ಲಿ ‘ಮಧ್ಯಂತರ’ ಕಿರುಚಿತ್ರ ಬಹುವಾಗಿ ಗಮನ ಸೆಳೆದಿದೆ. ಪ್ರಶಸ್ತಿ ಘೋಷಿಸಿದ ಜ್ಯೂರಿಗಳು ಸಹ ‘ಮಧ್ಯಂತರ’ ಸಿನಿಮಾವನ್ನು ಬಹುವಾಗಿ ಕೊಂಡಾಡಿದ್ದಾರೆ. ಈ ಸಿನಿಮಾ ವಿಶೇಷತೆ ಏನು ತಿಳಿಯಲು ಮುಂದೆ ಓದಿ..

ಮಧ್ಯಂತರ ಕಿರು ಚಿತ್ರ

ಇದು ಸಿನಿಮಾ ಪ್ರೇಮಿಗಳಿಬ್ಬರ ಕಥೆ. ಬಂಟ್ವಾಳದ ದಿನೇಶ್ ಅವರು ಸ್ವತಃ ಸಿನಿಮಾ ಪ್ರಿಯರು. 27 ವರ್ಷಗಳಿಂದಲೂ ಅವರು ಮನೊರಂಜನಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.2022ರ ಮಾರ್ಚ್ ತಿಂಗಳಲ್ಲಿ ‘ಮಧ್ಯಂತರ’ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡಿದರು ದಿನೇಶ್ ಶೆಣೈ.ಸಿನಿಮಾದ ನಿರೂಪಣೆ ತಮಾಷೆಯ ಧಾಟಿಯಲ್ಲಿದ್ದರೂ ಗಂಭೀರವಾದ ವಸ್ತು ವಿಷಯ ಒಳಗೊಂಡಿದೆ. ಮುಖ್ಯ ಪಾತ್ರದಲ್ಲಿ ದಾವಣಗೆರೆಯ ವೀರೇಶ್ ಹಾಗೂ ರಂಗಭೂಮಿ ಹಿನ್ನೆಲೆಯ ಅಜಯ್ ನೀನಾಸಂ ನಟಿಸಿದ್ದಾರೆ.

70th National Film Awards : ಕನ್ನಡಿಗರಿಗೆ ಹೆಮ್ಮೆ ತಂದ ರಿಷಭ್​ ಶೆಟ್ಟಿ, ಕೆಜಿಎಫ್​​; ಮಲಯಾಳಂನ ‘ಆಟಂ’ ಅತ್ಯುತ್ತಮ ಸಿನೆಮಾ; ಸಂಪೂರ್ಣ ಲಿಸ್ಟ್‌ ಇಲ್ಲಿದೆಇದನ್ನೂ ಓದಿ:

ಹೋಟೆಲ್ ಸಪ್ಲೈಯರ್​ಗಳಾಗಿ ಕೆಲಸ ಮಾಡುವ ಇಬ್ಬರಿಗೆ ಸಿನಿಮಾ ಅಂದರೆ ಪಂಚ ಪ್ರಾಣ. ಡಾ ರಾಜ್​ಕುಮಾರ್ ಇವರ ಬಲು ಮೆಚ್ಚಿನ ನಟ. ಸಿನಿಮಾ ನೋಡಿ ಬಂದು ಅದನ್ನು ಗೆಳೆಯರ ಬಳಿ ಹೇಳುವುದು ಇವರ ಮೆಚ್ಚಿನ ಅಭ್ಯಾಸ. ಇದೇ ಪ್ರತಿಭೆಯಿಂದ ಇವರು ಸಿನಿಮಾ ನಿರ್ಮಾಣಕ್ಕೂ ಇಳಿಯುತ್ತಾರೆ. ನಿರ್ಮಾಪಕನಿಗೆ ಇವರು ಹೇಳಿದ ಕತೆಯೊಂದು ಒಪ್ಪಿಗೆ ಆಗಿಬಿಡುತ್ತದೆ. ಮುಂದೇನು? ಎಂದು ತಿಳಿಯಲು ಕಿರು ಚಿತ್ರ ನೋಡಬೇಕು.

16 ಎಂಎಂ ಕ್ಯಾಮೆರಾ ನಲ್ಲಿ ಕೊಡಾಕ್ ರೀಲ್ಸ್​ ಬಳಸಿ ಚಿತ್ರೀಕರಣ ಮಾಡಲಾಗಿದೆ. ಬಳಿಕ ಡಿಜಿಟಲ್‌ ಅಲ್ಲಿ ಕನ್ವರ್ಟ್‌ ಮಾಡಲಾಗಿದೆ. 11 ದಿನದಲ್ಲಿ ಸಿನಿಮಾದ ಚಿತ್ರೀಕರಣವನ್ನು ದಿನೇಶ್ ಪೂರ್ತಿ ಮಾಡಿದ್ದಾರೆ.

ಉಳಿದ ಪ್ರಶಸ್ತಿಗಳು

ಅತ್ಯುತ್ತಮ ಆಕ್ಷನ್ ಡೈರೆಕ್ಷನ್ ಪ್ರಶಸ್ತಿ ಅರ್ಥಾತ್ ಬೆಸ್ಟ್ ಸ್ಟಂಟ್ ಕೊರಿಯೋಗ್ರಫಿ ಅವಾರ್ಡ್‌ ಸಹ ‘ಕೆಜಿಎಫ್‌ ಚಾಪ್ಟರ್ 2’ ಸಿನಿಮಾದ ಪಾಲಾಗಿದೆ. ‘ಕೆಜಿಎಫ್: ಚಾಪ್ಟರ್ 2’ ಚಿತ್ರಕ್ಕೆ Anbariv ಸ್ಟಂಟ್ಸ್‌ ಕೊರಿಯೋಗ್ರಫಿ ಮಾಡಿದ್ದರು. ಇದೀಗ Anbariv ಅವರಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿದೆ.ಇನ್ನೂ ಅತ್ಯುತ್ತಮ ನಟ ಪ್ರಶಸ್ತಿ ರಿಷಬ್ ಶೆಟ್ಟಿ ಅವರಿಗೆ ಒಲಿದು ಬಂದಿದೆ. ‘ಕಾಂತಾರ’ ಚಿತ್ರದಲ್ಲಿನ ಆಕ್ಟಿಂಗ್‌ಗಾಗಿ ರಿಷಬ್ ಶೆಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ರಿಷಬ್ ಶೆಟ್ಟಿ ಅಭಿನಯಿಸಿ, ನಿರ್ದೇಶಿಸಿರುವ ‘ಕಾಂತಾರ’ ಚಿತ್ರ ‘ಭರಪೂರ ಮನರಂಜನೆ ನೀಡುವ ಅತ್ಯುತ್ತಮ ಜನಪ್ರಿಯ ಚಿತ್ರ’ ಪ್ರಶಸ್ತಿ ಸಿಕ್ಕಿದೆ.

ನಾನ್ ಫೀಚರ್‌ ಫಿಲ್ಮ್ಸ್ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ಒಟ್ಟು 3 ಪ್ರಶಸ್ತಿಗಳು ಲಭಿಸಿವೆ. ‘ಅತ್ಯುತ್ತಮ ಸಂಕಲನ’ ಪ್ರಶಸ್ತಿಗೆ ‘ಮಧ್ಯಂತರ’ ಚಿತ್ರಕ್ಕಾಗಿ ಸಂಕಲನಕಾರ (ಎಡಿಟರ್) ಸುರೇಶ್ ಅರಸ್‌ ಭಾಜನರಾಗಿದ್ದಾರೆ.ಅತ್ಯುತ್ತಮ ಕಲೆ ಹಾಗೂ ಸಾಂಸ್ಕೃತಿಕ ಚಲನಚಿತ್ರ ಪ್ರಶಸ್ತಿ ಕನ್ನಡದ ‘ರಂಗ ವೈಭೋಗ’ ಚಿತ್ರದ ಪಾಲಾಗಿದೆ. ಈ ಚಿತ್ರವನ್ನ ಸುನೀಲ್ ಪುರಾಣಿಕ್ ನಿರ್ಮಿಸಿ, ನಿರ್ದೇಶಿಸಿದ್ದಾರೆ.

Continue Reading

ದೇಶ

Kolkata Doctor Murder Case: ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ; ಸ್ಪಷ್ಟನೆ ನೀಡಿದ ವೈದ್ಯರು

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ರೂರವಾಗಿ ಕೊಲೆಗೀಡಾದ ಟ್ರೈನಿ ವೈದ್ಯೆಯ ದೇಹದ ಮೇಲೆ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ (Kolkata Doctor Murder Case) ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಸಂತ್ರಸ್ತೆಯ ದೇಹದಲ್ಲಿ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮೃತ ವೈದ್ಯೆಯ ಶರೀರದಲ್ಲಿ 150 ಗ್ರಾಂ ವೀರ್ಯ ಪತ್ತೆಯಾಗಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ತಿಳಿಸಲಾಗಿದೆ ಎನ್ನುವ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಮರಣೋತ್ತರ ವರದಿಯು ಉಲ್ಲೇಖಿಸಲಾದ 150 ಗ್ರಾಂ ಸಂತ್ರಸ್ತೆಯ ಆಂತರಿಕ ಅವಯವ ವಿಶೇಷವಾಗಿ ಗರ್ಭಾಶಯದ ತೂಕವನ್ನು ಸೂಚಿಸುತ್ತದೆಯೇ ಹೊರತು ಅದು ಯಾವುದೇ ದ್ರವದ ತೂಕವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವೈದ್ಯರ ಸ್ಪಷ್ಟನೆಯಲ್ಲಿ ಏನಿದೆ?

ʼʼಇಂತಹ ಪ್ರಕರಣಗಳಲ್ಲಿ ಮರಣೋತ್ತರ ಪರೀಕ್ಷಾ ವರದಿಯಲ್ಲಿ ಒಳ ಅಂಗಗಳ ತೂಕವನ್ನು ಉಲ್ಲೇಖಿಸಲಾಗುತ್ತದೆ. ಹೀಗಾಗಿ 150 ಗ್ರಾಂ ಎನ್ನುವುದು ಗರ್ಭಾಶಯದ ಅಳತೆಯಾಗಿದೆ. ಅಲ್ಲದೆ ಘಟನೆ ನಡೆದ ಸುಮಾರು 5 ಗಂಟೆಗಳ ಬಳಿಕ ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಭೇಟಿ ನೀಡಿದ್ದರು. ಹೀಗಾಗಿ ಅಷ್ಟು ದೀರ್ಘ ಸಮಯಗಳ ಕಾಲ ಯಾವುದೇ ದ್ರವ ವಸ್ತು ಅದೇ ಸ್ಥಿತಿಯಲ್ಲಿ ಉಳಿಯಲು ಸಾಧ್ಯವಿಲ್ಲʼʼ ಎಂದು ವೈದ್ಯರು ತಿಳಿಸಿದ್ದಾರೆ. “ಡಿಎನ್ಎ ಪರೀಕ್ಷೆಯ ವರದಿ ಹೊರ ಬಂದ ಬಳಿಕ ಎಲ್ಲ ಗೊಂದಲಗಳಿಗೆ ಉತ್ತರ ಸಿಗಲಿದೆʼʼ ಎಂದು ಅವರು ವಿವರಿಸಿದ್ದಾರೆ.

ಏನಿದು ಘಟನೆ?

ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು.

ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿ, ʼʼಸಂತ್ರಸ್ತೆ ಆಗಸ್ಟ್‌ 9 ಮುಂಜಾನೆ 2 ಗಂಟೆ ಸುಮಾರಿಗೆ ತಮ್ಮ ಸಹೋದ್ಯೋಗಿಗಳೊಂದಿಗೆ ಊಟ ಮಾಡಿದ್ದಾರೆ. ಬಳಿಕ ಸೆಮಿನಾರ್ ಹಾಲ್‌ಗೆ ತೆರಳಿದ್ದರು. ನಂತರ ಸೆಮಿನಾರ್‌ ಹಾಲ್‌ನಲ್ಲಿ ಅವರ ಶವ ಪತ್ತೆಯಾಗಿತ್ತುʼʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Kolkata Doctor Murder Case: ಟ್ರೈನಿ ವೈದ್ಯೆಯ ಅತ್ಯಾಚಾರ, ಕೊಲೆ; ಏಮ್ಸ್‌ ವೈದ್ಯರ ಪ್ರೊಟೆಸ್ಟ್‌-ಪ್ರಾಂಶುಪಾಲರು ರಿಸೈನ್‌

ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 31 ವರ್ಷದ ವೈದ್ಯೆಯ ದೇಹದಲ್ಲಿ ಅತೀ ಕ್ರೂರವಾಗಿ ಹಲ್ಲೆ ನಡೆಸಿದ್ದನ್ನು ಸೂಚಿಸುವ ಅನೇಕ ಗಾಯದ ಗುರುತುಗಳಿವೆ ಎನ್ನುವುದನ್ನು ಮರಣೋತ್ತರ ಪರೀಕ್ಷೆಯ ವರದಿ ಬಹಿರಂಗಪಡಿಸಿತ್ತು. ʼʼಸಂತ್ರಸ್ತೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿತ್ತು. ಮುಖ ಮತ್ತು ಉಗುರುಗಳ ಮೇಲೆ ಗಾಯಗಳಾಗಿವೆ. ಸಂತ್ರಸ್ತೆಯ ಖಾಸಗಿ ಭಾಗಗಳಿಂದಲೂ ರಕ್ತಸ್ರಾವವಾಗಿದೆ. ಮಾತ್ರವಲ್ಲ ಹೊಟ್ಟೆ, ಎಡಗಾಲಿಗೆ ಗಾಯಗಳಾಗಿವೆ. ಕುತ್ತಿಗೆ, ಬಲಗೈ, ಉಂಗುರ ಬೆರಳು ಮತ್ತು ತುಟಿ ಹೀಗೆ ಎಲ್ಲ ಅಂಗಗಳಲ್ಲಿಯೂ ಗಾಯದ ಗುರುತುಗಳಿವೆʼʼ ಎಂದು ವರದಿ ತಿಳಿಸಿತ್ತು.

Continue Reading

ಪ್ರಮುಖ ಸುದ್ದಿ

CM Siddaramaiah: ಮುಡಾ ತನಿಖೆಗೆ ರಾಜ್ಯಪಾಲರ ಗ್ರೀನ್‌ ಸಿಗ್ನಲ್‌; ಸಿಎಂಗೆ ಸಂಕಷ್ಟ

CM Siddaramaiah: ಮುಡಾ ಹಗರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡುವ ಮೂಲಕ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಇನ್ನೊಂದು ಸುತ್ತಿನ ರಾಜಕೀಯ ಕ್ಷೋಭೆಗೆ ನಾಂದಿ ಹಾಡಿದ್ದಾರೆ.

VISTARANEWS.COM


on

thawar chand gehlot cm siddaramaiah Governor versus state
Koo

ಬೆಂಗಳೂರು: ಮುಡಾ ಹಗರಣದಲ್ಲಿ (MUDA Scam) ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಸಂಕಷ್ಟ ಬಿಗಡಾಯಿಸಿದೆ. ಪ್ರಾಸಿಕ್ಯೂಶನ್‌ಗೆ (Prosecution) ರಾಜ್ಯಪಾಲರು (Governor) ಇಂದು ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ (TJ Abraham) ಪ್ರಾಸಿಕ್ಯೂಶನ್‌ಗೆ ಅನುಮತಿ ಕೇಳಿದ್ದರು.

ದೂರುದಾರ ಅಬ್ರಹಾಂ ಅವರನ್ನು ಇಂದು ರಾಜಭವನಕ್ಕೆ ಕರೆಸಿಕೊಂಡ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot), ಪ್ರಾಸಿಕ್ಯೂಶನ್‌ಗೆ ದೂರು ದಾಖಲಿಸಲು ಅನುಮತಿ ನೀಡಿದರು.

ಕಳೆದ ಒಂದು ವಾರದಿಂದ ರಾಜಭವನದ ನಡೆ ನಿಗೂಢವಾಗಿತ್ತು. ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ಯಾವ ಕ್ರಮ ಜರುಗಿಸಲಿದ್ದಾರೆ ಎಂಬ ಕುತೂಹಲ ಇತ್ತು. ದಿಲ್ಲಿ ಪ್ರವಾಸದಲ್ಲಿದ್ದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್‌ ಕಳೆದ ವಾರ ಬೆಂಗಳೂರಿಗೆ ಮರಳಿದ ಬಳಿಕ, ತಾವು ಕೊಟ್ಟಿದ್ದ ನೋಟೀಸ್‌ಗೆ ರಾಜ್ಯ ಸಚಿವ ಸಂಪುಟದ ಉತ್ತರ ಹಾಗೂ ಸಿಎಂ ಸಿದ್ದರಾಮಯ್ಯ ನೀಡಿದ್ದ ಉತ್ತರಗಳನ್ನು ಪರಿಶೀಲಿಸಿದ್ದರು. ದೂರುದಾರ ಟಿ.ಜೆ ಅಬ್ರಾಹಂ ಮೇಲೆಯೇ ದೂರುಗಳಿವೆ ಎಂದು ಸಚಿವ ಸಂಪುಟ ಆರೋಪಿಸಿತ್ತು. ಮುಡಾ ಹಗರಣದ ವಿಚಾರಣೆಗಾಗಿ ರಾಜ್ಯ ಸರಕಾರ ನ್ಯಾ| ದೇಸಾಯಿ ಅವರ ಆಯೋಗವನ್ನು ರಚಿಸಿದೆ.

ಜೊತೆಗೆ ಮೈಸೂರಿನ ಸ್ನೇಹಮಯಿ ಕೃಷ್ಣ ಎಂಬವರು ಸಿಎಂ ವಿರುದ್ಧ ಮತ್ತೂಂದು ದೂರು ಸಲ್ಲಿಸಿದ್ದರು. ಅಕ್ರಮ ಭೂ ಡಿನೋಟಿಫಿಕೇಶನ್‌ಗೆ ಸಿದ್ದರಾಮಯ್ಯ ಪ್ರಭಾವ ಬೀರಿದ್ದಾರೆಂದು ಆರೋಪಿಸಿದ್ದರು. ಜಿಲ್ಲಾಧಿಕಾರಿಯಿಂದ 15 ದಿನದಲ್ಲಿ ವರದಿ ಪಡೆದು ಸೂಕ್ತ ಕ್ರಮ ಜರಗಿಸುವಂತೆ ಕೋರಿದ್ದಾರೆ. ಈ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ರಾಜ್ಯಪಾರು ಗಮನಿಸಿದ್ದರು.

ರಾಜ್ಯಪಾಲರ ಮುಂದಿನ ನಡೆಗಾಗಿ ದೂರುದಾರ ಅಬ್ರಹಾಂ ಕಾದಿದ್ದರು. ರಾಜ್ಯಪಾಲರು ಅನುಮತಿ ನೀಡದಿದ್ದರೆ ಸಿಬಿಐ ಅಥವಾ ಲೋಕಾಯುಕ್ತ ತನಿಖೆಗೆ ಕೋರುವ ಬಗ್ಗೆ ಕಾನೂನು ಸಲಹೆ ಪಡೆದುಕೊಂಡಿದ್ದರು. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡದಿದ್ದರೂ ನೇರವಾಗಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಲು ಕೇಂದ್ರದ ಕಾಯಿದೆಗಳಲ್ಲಿ ಅವಕಾಶಗಳಿವೆಯೇ ಎಂಬುದನ್ನೂ ಪರಿಶೀಲಿಸಿದ್ದರು.

ರಾಜ್ಯಪಾಲರ ನೋಟೀಸ್‌ಗೆ ಒಂದು ಸಾಲಿನ ನಿರ್ಣಯ ಕಳಿಸಿದ ರಾಜ್ಯ ಸರ್ಕಾರ, ಅದಕ್ಕೆ ಸಂಬಂಧಿಸಿದಂತೆ 70 ದಾಖಲೆಗಳನ್ನು ರಾಜ್ಯಪಾಲರಿಗೆ ರವಾನಿಸಿತ್ತು. 1990ರ ದಶಕದಿಂದಲೂ ಇಲ್ಲಿಯವರೆಗೂ ದಾಖಲೆ ನೀಡಿರುವ ಸರ್ಕಾರ, ಸಿದ್ದರಾಮಯ್ಯ ಪತ್ನಿಗೆ ಆಸ್ತಿ ವರ್ಗಾವಣೆ ಹಾಗೂ ಗಿಫ್ಟ್ ಡೀಡ್ ಬಗ್ಗೆ ದಾಖಲೆ ಹಾಗೂ ಸಾಕ್ಷಿ ಸಮೇತ ವಿವರಣೆ ನೀಡಿದೆ. ಹಾಗೂ ದೂರುದಾರ ಅಬ್ರಹಾಂ ಬಗ್ಗೆಯೂ ಮಾಹಿತಿ ನೀಡಿದೆ. ಈ ದಾಖಲೆಗಳನ್ನು ರಾಜ್ಯಪಾಲರು ಪರಿಶೀಲನೆ ಮಾಡುತ್ತಿದ್ದಾರೆ.

ಇತ್ತ ಸಿಎಂ ಸಿದ್ದರಾಮಯ್ಯ ಅವರ 10 ಜನರ ಕಾನೂನು ಟೀಮ್ ಫುಲ್ ಆಕ್ಟೀವ್ ಆಗಿದೆ. ರಾಜ್ಯಪಾಲರ ನಡೆ ಪ್ರಶ್ನೆ ಮಾಡಿ ಕಾನೂನು ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನಪ್ರತಿನಿಧಿಗಳ ಹಾಗೂ ಲೋಕಾಯುಕ್ತ ಕೋರ್ಟ್‌ನಿಂದ ಸುಪ್ರೀಂ ಕೋರ್ಟ್‌ವರೆಗೂ ಹೋಗಲು ವಕೀಲರ ಟೀಮ್ ರೆಡಿಯಾಗಿದೆ. ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಅವರಿಂದಲೇ ಕಾನೂನು ಹೋರಾಟಕ್ಕೆ ಸಿದ್ಧತೆ ನಡೆಯುತ್ತಿದೆ.

ಮತ್ತೊಂದೆಡೆ ಈ ಪ್ರಕರಣವನ್ನು ಪ್ರತಿಷ್ಠೆಯ ಪ್ರಶ್ನೆಯಾಗಿ ತೆಗೆದುಕೊಂಡಿದ್ದ ಬಿಜೆಪಿ- ಜೆಡಿಎಸ್‌, ಬೆಂಗಳೂರಿನಿಂದ ಮೈಸೂರಿನ ವರೆಗೆ ಪಾದಯಾತ್ರೆ ನಡೆಸಿದ್ದವು. ದಾರಿಯುದ್ದಕ್ಕೂ ಸಿಎಂ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದವು. ಸಿದ್ದರಾಮಯ್ಯ ರಾಜೀನಾಮೇ ನೀಡಬೇಕು ಎಂದು ಆಗ್ರಹಿಸಿದ್ದವು.

ಇದನ್ನೂ ಓದಿ: CM Siddaramaiah: ಸಿಎಂ ಸಿದ್ದರಾಮಯ್ಯಗೆ ರಾಜಭವನದಿಂದ ಮೂರನೇ ನೋಟೀಸ್ ಜಾರಿ! ಯಾಕೆ ಪದೇ ಪದೆ ನೋಟೀಸ್‌?

Continue Reading

ದೇಶ

Kolkata Doctor Murder Case: ಇಂದು ದೇಶಾದ್ಯಂತ ವೈದ್ಯರ ಮುಷ್ಕರ; ಏನಿರುತ್ತೆ? ಏನಿರಲ್ಲ?

Kolkata Doctor Murder Case: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯನ್ನು ಖಂಡಿಸಿ ಇಂದು ದೇಶಾದ್ಯಂತ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಭಾರತೀಯ ವೈದ್ಯಕೀಯ ಸಂಘ ಘೋಷಿಸಿದೆ.

VISTARANEWS.COM


on

Kolkata Doctor Murder Case
Koo

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್‌ (RG Kar Medical College and Hospital) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಬರ್ಬರ ಕೊಲೆಯ (Kolkata Doctor Murder Case) ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ಭುಗಿಲೆದ್ದಿದ್ದು, ಭಾರತೀಯ ವೈದ್ಯಕೀಯ ಸಂಘ (Indian Medical Association) ಇಂದು (ಆಗಸ್ಟ್ 17) ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದೆ. ಶನಿವಾರ ಬೆಳಿಗ್ಗೆ 6 ಗಂಟೆಯಿಂದ ಭಾನುವಾರ ಬೆಳಿಗ್ಗೆ 6 ಗಂಟೆವರೆಗೆ 24 ಗಂಟೆಗಳ ಕಾಲ ರಾಷ್ಟ್ರವ್ಯಾಪಿ ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದೆಲ್ಲ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ.

ಸರ್ಕಾರಿ ಮತ್ತು ಖಾಸಗಿ ಆಸ್ಫತ್ರೆಗಳ ಓಪಿಡಿ ಬಂದ್ ಇರಲಿದ್ದು, ಎಮರ್ಜೆನ್ಸಿ ರೋಗಿಗಳಿಗೆ ಮಾತ್ರ ಚಿಕಿತ್ಸೆ ಸಿಗಲಿದೆ‌. ಎಲ್ಲ ವೈದ್ಯರು ಓಪಿಡಿ ಸೇವೆಗಳಿಗೆ ಹಾಜರಾಗದೆ ಪ್ರತಿಭಟನೆ ನಡೆಸಲಿದ್ದಾರೆ. ಇನ್ನು ಸರ್ಕಾರಿ ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಎಮರ್ಜೆನ್ಸಿ ಸೇವೆಯನ್ನ ಮಾತ್ರ ನೀಡಲಿದ್ದಾರೆ.

ಐಎಂಎ ಮುಂದಿಟ್ಟ 5 ಬೇಡಿಕೆ

ಭಾರತೀಯ ವೈದ್ಯಕೀಯ ಸಂಘ ಶುಕ್ರವಾರ 5 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದೆ.

  • ವೈದ್ಯರ ಕರ್ತವ್ಯದ ಅವಧಿ ಮತ್ತು ಅವರು ಜೀವನ ರೀತಿಗಳನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಆರ್‌ಜಿ ಕರ್‌ ಆಸ್ಪತ್ರೆಯ ಸಂತ್ರಸ್ತೆ 36 ಗಂಟೆಗಳ ಕಾಲ ಕರ್ತವ್ಯ ನಿರ್ಶಿವಹಿಸಿದ್ದರು ಮತ್ತು ವಿಶ್ರಾಂತಿ ಪಡೆಯಲು ಅವರಿಗೆ ಸುರಕ್ಷಿತ ಸ್ಥಳಗಳ ಕೊರತೆ ಇತ್ತು. ಈ ಬಗ್ಗೆಯೂ ಗಮನ ಹರಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಆಗ್ರಹಿಸಿದೆ.
  • 1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಗೆ 2023ರಲ್ಲಿ ಮಾಡಿದ ತಿದ್ದುಪಡಿಗಳನ್ನು 2019ರ ಉದ್ದೇಶಿತ ಆಸ್ಪತ್ರೆ ಸಂರಕ್ಷಣಾ ಮಸೂದೆಗೆ ಸೇರಿಸಬೇಕು. ಇದರಿಂದ 25 ರಾಜ್ಯಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನಿಗೆ ಇನ್ನಷ್ಟು ಬಲ ತುಂಬಿದಂತಾಗುತ್ತದೆ. ಕೋವಿಡ್ -19ರ ಸಮಯದಲ್ಲಿ ಜಾರಿಗೆ ತಂದ ಸುಗ್ರೀವಾಜ್ಞೆ ಈ ಪರಿಸ್ಥಿತಿಯಲ್ಲಿ ಸೂಕ್ತವಾಗಿದೆ ಎಂದು ಐಎಂಎ ಸೂಚಿಸಿದೆ.
  • ಆರ್‌ಜಿ ಕರ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿಧ್ವಂಸಕ ಕೃತ್ಯದಲ್ಲಿ ಭಾಗಿಯಾಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆ ವಿಧಿಸಬೇಕು. ಜತೆಗೆ ನಿರ್ದಿಷ್ಟ ಕಾಲಮಿತಿಯೊಳಗೆ ನಿಖರವಾದ ಮತ್ತು ವೃತ್ತಿಪರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಐಎಂಎ ಒತ್ತಾಯಿಸಿದೆ.
  • ಎಲ್ಲ ಆಸ್ಪತ್ರೆಗಳ ಭದ್ರತಾ ಪ್ರೋಟೋಕಾಲ್‌ಗಳನ್ನು ವಿಮಾನ ನಿಲ್ದಾಣದಲ್ಲಿರುವಂತೆ ಜಾರಿಗೊಳಿಸಬೇಕು. ಆಸ್ಪತ್ರೆಗಳನ್ನು ಸುರಕ್ಷಿತ ವಲಯಗಳಾಗಿ ಘೋಷಿಸಬೇಕು. ಸಿಸಿಟಿವಿ ಕ್ಯಾಮೆರಾಗಳು, ಭದ್ರತಾ ಸಿಬ್ಬಂದಿಯ ನಿಯೋಜನೆ ಮುಂತಾದ ಅಗತ್ಯ ಕ್ರಮ ಜಾರಿಯಾಗಬೇಕು ಎಂದು ಮನವಿ ಮಾಡಲಾಗಿದೆ.
  • ಕ್ರೌರ್ಯಕ್ಕೆ ಅನುಗುಣವಾಗಿ ದುಃಖಿತ ಕುಟುಂಬಕ್ಕೆ ಸೂಕ್ತ ಮತ್ತು ಘನತೆಯ ಪರಿಹಾರವನ್ನು ಒದಗಿಸಬೇಕು ಎಂದು ಭಾರತೀಯ ವೈದ್ಯಕೀಯ ಸಂಘ ಬೇಡಿಕೆ ಇಟ್ಟಿದೆ.

ಇಂದು ಲಭ್ಯವಿರುವ ಸೇವೆಗಳು

ತುರ್ತು ಚಿಕಿತ್ಸೆ, ಮೆಡಿಕಲ್ ಶಾಪ್ಸ್, ಇನ್ ಪೇಷೆಂಟ್ ಸೇವೆ, ಹೆರಿಗೆ ಮತ್ತು ಎಮರ್ಜೆನ್ಸಿ ಸರ್ಜರಿ.

ಲಭ್ಯವಿಲ್ಲದ ಸೇವೆಗಳು

ಓಪಿಡಿ, ಡಯಾಲಿಸಿಸ್, ಕ್ಲಿನಿಕ್ ಸೇವೆ, ಮಕ್ಕಳ ಓಪಿಡಿ, ಡೆಂಟಲ್ ಸರ್ವಿಸ್.

ಇದನ್ನೂ ಓದಿ: Kolkata Doctor murder case: ವೈದ್ಯೆ ಕೊಲೆ ಕೇಸ್‌; ಪ್ರತಿಭಟನಾಕಾರರ ಮೇಲೆ ವಾಹನ ಹರಿಸಲು ಪೊಲೀಸ್‌ ಯತ್ನ?

Continue Reading
Advertisement
Actor Nagabhushan birthday vidhyapathi promo Out
ಸ್ಯಾಂಡಲ್ ವುಡ್12 mins ago

Actor Nagabhushan: ನಾಗಭೂಷಣ್ ಬರ್ತ್‌ಡೇಗೆ ಡಾಲಿ ತಂಡದಿಂದ ಸ್ಪೆಷಲ್ ಗಿಫ್ಟ್‌; ನೋಡಿ ‘ವಿದ್ಯಾಪತಿ’ಯ ಕಿತಾಪತಿ!

Vinesh Phogat
ಕ್ರೀಡೆ12 mins ago

Vinesh Phogat: ತವರಿಗೆ ಮರಳಿದ ವಿನೇಶ್​​​ ಫೋಗಟ್​ಗೆ ಭರ್ಜರಿ ಸ್ವಾಗತ; ಅಭಿಮಾನಿಗಳನ್ನು ಕಂಡು ಕಣ್ಣೀರು

Government Employees
ಕರ್ನಾಟಕ30 mins ago

Government Employees: 7ನೇ ವೇತನ ಆಯೋಗ; ಸರ್ಕಾರಿ ನೌಕರರ ಸಂಘದಿಂದ ಇಂದು ಸಿಎಂ, ಡಿಸಿಎಂಗೆ ಸನ್ಮಾನ; Live ಇಲ್ಲಿದೆ

Viral Video
Latest33 mins ago

Viral Video: ಅಣೆಕಟ್ಟಿನ ಅಂಚಿನಲ್ಲಿ ನಿಂತು ಸ್ಟಂಟ್ ಮಾಡಿದ; ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡ!

Crorepati Sweeper
Latest39 mins ago

Crorepati Sweeper: ಕಸ ಗುಡಿಸುವ ಕಾರ್ಮಿಕನ ಬಳಿ ಇತ್ತು ಐಷಾರಾಮಿ ಕಾರುಗಳು, ಕೋಟಿ ಮೌಲ್ಯದ ಆಸ್ತಿ! ಆತ ಸಂಪಾದಿಸಿದ್ದು ಹೇಗೆ?

70th National Film Awards ational Award winner Madhyantara Short Movie
ಸ್ಯಾಂಡಲ್ ವುಡ್45 mins ago

70th National Film Awards: ಕನ್ನಡಕ್ಕೆ ಸಿಕ್ಕಿದ್ದು ಒಟ್ಟು 7 ಪ್ರಶಸ್ತಿಗಳು; ಜ್ಯೂರಿಗಳನ್ನೇ ಇಂಪ್ರೆಸ್‌ ಮಾಡಿದ ʻಮಧ್ಯಂತರʼ ಕಿರು ಚಿತ್ರ ಬಗ್ಗೆ ನಿಮಗೆಷ್ಟು ಗೊತ್ತು?

Viral Video
Latest45 mins ago

Viral Video: ಅಟಲ್ ಸೇತು ಮೇಲಿಂದ ಸಮುದ್ರಕ್ಕೆ ಹಾರಲೆತ್ನಿಸಿದ ಮಹಿಳೆಯನ್ನು ರಕ್ಷಿಸಿದ್ದು ಹೇಗೆ? ವಿಡಿಯೊ ನೋಡಿ

Kolkata Doctor Murder Case
ದೇಶ51 mins ago

Kolkata Doctor Murder Case: ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ; ಸ್ಪಷ್ಟನೆ ನೀಡಿದ ವೈದ್ಯರು

Vinesh Phogat Emotional Post
ಕ್ರೀಡೆ55 mins ago

Vinesh Phogat Emotional Post: ಅಪ್ಪನ ಸಾವು, ತಾಯಿಗೆ ಕ್ಯಾನ್ಸರ್ ಇರುವ ವಿಚಾರ ತಿಳಿದು ಆಕಾಶವೇ ಕಳಚಿ ಬಿದ್ದಂತಾಗಿತ್ತು; ಭಾವುಕರಾದ ವಿನೇಶ್ ಫೋಗಟ್​​

Actor Yash wears a tiger locket during varamahalakshmi puja
ಸ್ಯಾಂಡಲ್ ವುಡ್1 hour ago

Actor Yash: ಯಶ್‌-ರಾಧಿಕಾ ವರಮಹಾಲಕ್ಷ್ಮಿ ಹಬ್ಬ ಬಲು ಜೋರು; ರಾಕಿಂಗ್‌ ಸ್ಟಾರ್‌ ಲಾಕೆಟ್ ಮೇಲೆ ಎಲ್ಲರ ಕಣ್ಣು!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ1 week ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ1 week ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ1 week ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌