Successful treatment of fetal grape-sized heart in mother's womb ತಾಯಿ ಗರ್ಭದಲ್ಲೇ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯಕ್ಕೆ 90 ಸೆಕೆಂಡ್‌ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ! Vistara News ತಾಯಿ ಗರ್ಭದಲ್ಲೇ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯಕ್ಕೆ 90 ಸೆಕೆಂಡ್‌ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ!
Connect with us

ದೇಶ

ತಾಯಿ ಗರ್ಭದಲ್ಲೇ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯಕ್ಕೆ 90 ಸೆಕೆಂಡ್‌ನಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ!

ದಿಲ್ಲಿಯ ಏಮ್ಸ್ (Delhi AIIMS) ಆಸ್ಪತ್ರೆಯ ವೈದ್ಯರು ಅತ್ಯಂತ ಅಪಾಯಕಾರಿ ಹಾಗೂ ವಿರಳ ಶಸ್ತ್ರ ಚಿಕಿತ್ಸೆ ನಡೆಸಿ ಯಶಸ್ವಿಯಾಗಿದ್ದಾರೆ. ಬಲೂನ್ ಡಿಲೇಷನ್ ಪ್ರೊಸೀಜರ್ (balloon dilation) ಮೂಲಕ ತಾಯಿ ಗರ್ಭದಲ್ಲಿರುವ ಭ್ರೂಣದ ಹೃದಯಕ್ಕೆ ಚಿಕಿತ್ಸೆ ಮಾಡಿದ್ದಾರೆ.

VISTARANEWS.COM


on

Successful treatment of fetal grape sized heart in mothers womb
Koo

ನವದೆಹಲಿ: ತಾಯಿ ಗರ್ಭದಲ್ಲಿರುವ ಭ್ರೂಣದ ದ್ರಾಕ್ಷಿ ಗಾತ್ರದ ಹೃದಯಕ್ಕೆ ಸರ್ಜರಿ ಮಾಡಿ ಯಶಸ್ವಿಯಾಗಿದ್ದಾರೆ ದಿಲ್ಲಿ ಏಮ್ಸ್ ಆಸ್ಪತ್ರೆಯ ವೈದ್ಯರು. ಇದೊಂದು ಅತ್ಯಂತ ಅಪಾಯಕಾರಿ ಸರ್ಜರಿಯಾಗಿದ್ದು, ಸ್ವಲ್ಪವೇ ಲೋಪವಾದರೂ ಮಗು ಸಾವಿಗೀಡಾಗುವ ಸಾಧ್ಯತೆಗಳೇ ಹೆಚ್ಚು. ಆದರೂ, ದಿಲ್ಲಿಯ ಏಮ್ಸ್ (Delhi AIIMS) ವೈದ್ಯರು ಕೇವಲ 90 ಸೆಕೆಂಡುಗಳಲ್ಲಿ ಈ ವಿಶಿಷ್ಟ ವೈದ್ಯಕೀಯ ವಿಧಾನವನ್ನು ಪ್ರಯೋಗಿಸಿ ಯಶಸ್ವಿಯಾಗಿದ್ದಾರೆ. ಇದಕ್ಕೆ ಬಲೂನ್ ಡಿಲೇಷನ್ ಪ್ರೊಸೀಜರ್ (balloon dilation) ಎಂದು ಹೇಳಲಾಗುತ್ತದೆ.

28 ವರ್ಷದ ಗರ್ಭಿಣಿಯು ಏಮ್ಸ್ ಹಾಸ್ಪಿಟಲ್‌ಗೆ ದಾಖಲಾಗಿದ್ದರು. ಈ ಹಿಂದೆ ಮೂರು ಬಾರಿ ಅವರಿಗೆ ಗರ್ಭಪಾತವಾಗಿತ್ತು. ವೈದ್ಯರು ಮಗುವಿನ ಹೃದಯದ ಸ್ಥಿತಿಯ ಬಗ್ಗೆ ಪರೀಕ್ಷಿಸಿದ ನಂತರ ಮತ್ತು ಸಂಭಾವ್ಯ ಹೃದಯ ವೈಫಲ್ಯವನ್ನು ತಡೆಗಟ್ಟುವ ಇಚ್ಛೆಯೊಂದಿಗೆ ಕಾರ್ಯವಿಧಾನ ಕೈಗೊಳ್ಳುವುದು ಅಗತ್ಯವಾಗಿತ್ತು. ಈ ಬಗ್ಗೆ ಪೋಷಕರು ಒಪ್ಪಿಗೆ ನೀಡಿದ ಬಳಿಕ, ಏಮ್ಸ್ ವೈದ್ಯರ ವಿರಳಾತಿವಿರಳ ಮತ್ತು ಅತ್ಯಂತ ಅಪಾಯಕಾರಿ ಪ್ರೊಸೀಜರ್ ಕೈಗೊಳ್ಳಲು ಮುಂದಾದರು. ಈಗಾಗಲೇ ಮೂರು ಗರ್ಭಪಾತವದ್ದರಿಂದ ಪೋಷಕರಿಗೆ ಈ ಬಾರಿ ಮಗುವನ್ನು ಪಡೆಯಲೇಬೇಕು ಎಂದು ನಿರ್ಧರಿಸಿದ್ದರು.

ಏಮ್ಸ್‌ನ ಕಾರ್ಡಿಓತೋರಸಿಕ್ ಸೈನ್ಸ್ ಸೆಂಟರ್‌ನಲ್ಲಿ ಹೃದ್ರೋಗ ತಜ್ಞರು ಮತ್ತು ಭ್ರೂಣದ ಔಷಧ ತಜ್ಞರು ಈ ಪ್ರೊಸೀಜರವನ್ನು ಯಶಸ್ವಿಯಾಗಿ ಪೂರೈಸಿದರು. ಏಮ್ಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ಶಾಸ್ತ್ರ ವಿಭಾಗ (ಭ್ರೂಣ ಔಷಧ) ಜೊತೆಗೆ ಹೃದ್ರೋಗ ಮತ್ತು ಹೃದಯ ಅರಿವಳಿಕೆ ವಿಭಾಗದ ವೈದ್ಯರ ತಂಡದ ಪ್ರಕಾರ, “ಪ್ರೊಸೀಜರ್ ನಂತರ ಭ್ರೂಣ ಮತ್ತು ತಾಯಿ ಇಬ್ಬರೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ವೈದ್ಯರ ತಂಡಗಳು ಬೆಳವಣಿಗೆಯನ್ನು ಮೇಲ್ವಿಚಾರಣೆ ಮಾಡುತ್ತಿವೆ. ಮಗುವಿನ ಭವಿಷ್ಯದ ನಿರ್ವಹಣೆಯನ್ನು ಅಂತಿಮವಾಗಿ ಹೃದಯದ ಕೋಣೆಗಳ ಬೆಳವಣಿಗೆಯ ಆಧಾರದ ಮೇಲೆ ನಿರ್ಧರಿಸಲಾಗುತ್ತಿದೆ ಎಂದು ಏಮ್ಸ್ ಹೇಳಿದೆ.

ತಾಯಿಯ ಗರ್ಭದಲ್ಲಿದ್ದಾಗಲೇ ಭ್ರೂಣದ ಹೃದಯ ಸಂಬಂಧಿ ಕಾಯಿಲೆಗಳನ್ನು ಗುಣಪಡಿಸಬಹುದು. ಗರ್ಭದಲ್ಲಿದ್ದಾಗಲೇ ಚಿಕಿತ್ಸೆ ನೀಡುವುದರಿಂದ, ಜನನದ ಬಳಿಕ ಮಗುವಿನ ಒಟ್ಟಾರೆ ಬೆಳವಣಿಗೆ ಉತ್ತಮವಾಗುತ್ತದೆ ಎಂದು ವೈದ್ಯಕೀಯ ತಂಡವು ಹೇಳಿದೆ.

ಇದನ್ನೂ ಓದಿ: Baby Heart Surgery: ತುಮಕೂರಿನಲ್ಲಿ ಹಸುಗೂಸುಗಳಿಗೆ ಯಶಸ್ವಿ ಹೃದಯ ಶಸ್ತ್ರಚಿಕಿತ್ಸೆ

ಏನಿದು ಬಲೂನ್ ಡಿಲೇಷನ್ ಪ್ರೊಸೀಜರ್?

ಭ್ರೂಣದ ಡಿಲೇಷನ್ ಪ್ರೊಸೀಜರ್ ಅನ್ನು ಅಲ್ಟ್ರಾಸೌಂಡ್ ಮಾರ್ಗದರ್ಶನದಲ್ಲಿ ಮಾಡಲಾಗುತ್ತದೆ. ತಾಯಿಯ ಕಿಬ್ಬೊಟ್ಟೆಯ ಮೂಲಕ ಸೂಜಿಯನ್ನು ಭ್ರೂಣದ ಹೃದಯಕ್ಕೆ ಸೇರಿಸಲಾಗುತ್ತದೆ. ಆ, ಬಳಿಕ ಬಲೂನ್ ಕ್ಯಾತಿಟರ್(ತೂರುನಾಳ) ಬಳಸಿಕೊಂಡು, ರಕ್ತದ ಹರಿವನ್ನು ಸುಧಾರಿಸಲು, ಅಡ್ಡಿಯಾಗಿದ್ದ ಕವಾಟವನ್ನು ಓಪನ್ ಮಾಡಲಾಗುತ್ತದೆ ಎಂದು ವೈದ್ಯಕೀಯ ತಂಡವು ತಿಳಿಸಿದೆ. ಈ ಬಲೂನ್ ಡಿಲೇಷನ್ ಪ್ರೊಸೀಜರ್ ಕೈಗೊಂಡಿರುವುದರಿಂದ ಮಗುವಿನ ಹೃದಯವು ಪರಿಪೂರ್ಣವಾಗಿ ಬೆಳವಣಿಗೆಯಾಗಿ, ಜನನ ಬಳಿಕ ಹೃದಯ ಕಾಯಿಲೆಯ ಶಂಕೆಗಳು ತೀರಾ ನಗಣ್ಯವಾಗಬಹುದು ಎಂದು ನಿರೀಕ್ಷಿಸಿದ್ದೇವೆ ಎಂದು ಶಸ್ತ್ರ ಚಿಕಿತ್ಸೆ ಕೈಗೊಂಡ ವೈದ್ಯರೊಬ್ಬರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಫೇಸ್ ಬುಕ್ ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ವೈವಿಧ್ಯಮಯ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್ ಟ್ವಿಟರ್ ಪೇಜ್ ಫಾಲೋ ಮಾಡಿ

ದೇಶ

ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್​

ಪಂಜಾಬ್​​ ಕಾಂಗ್ರೆಸ್​ನ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್​ ಸಿಧು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಕಾಂಗ್ರೆಸ್​ ಸೋತ ಬಳಿಕ, ಅಂದರೆ 2022ರ ಮಾರ್ಚ್​ ತಿಂಗಳಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮೇ ತಿಂಗಳಲ್ಲಿ ಶಿಕ್ಷೆಯಾಗಿತ್ತು.

VISTARANEWS.COM


on

Edited by

Navjot Sidhu to be released from Jail
Koo

1988ರ ರಸ್ತೆ ಜಗಳ ಪ್ರಕರಣದಲ್ಲಿ ಸುಪ್ರೀಂಕೋರ್ಟ್​​ನಿಂದ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿ, ಪಟಿಯಾಲಾ ಜೈಲಿನಲ್ಲಿರುವ ಮಾಜಿ ಕ್ರಿಕೆಟರ್​, ಕಾಂಗ್ರೆಸ್ ನಾಯಕ ನವಜೋತ್​ ಸಿಂಗ್ ಸಿಧು ಅವರು ನಾಳೆ (ಏಪ್ರಿಲ್​ 1) ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಈ ಬಗ್ಗೆ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್​ಮಾಡಿದ್ದಾರೆ. ‘ಸರ್ದಾರ್ ನವಜೋತ್​ ಸಿಂಗ್ ಸಿಧು ಅವರು (ತಮ್ಮನ್ನು ತಾವು ಹೀಗೆ ಉಲ್ಲೇಖಿಸಿಕೊಂಡಿದ್ದಾರೆ) ನಾಳೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೇ ಮಾಹಿತಿ ಕೊಟ್ಟಿದ್ದಾರೆ’ ಎಂದು ಸಿಧು ಬರೆದುಕೊಂಡಿದ್ದಾರೆ. ನವಜೋತ್​ ಸಿಂಗ್ ಸಿಧು ಬಿಡುಗಡೆಯನ್ನು ಅವರ ಪರ ವಕೀಲರಾದ ಎಚ್​​ಪಿಎಸ್​ ವರ್ಮಾ ಕೂಡ ದೃಢಪಡಿಸಿದ್ದಾರೆ.

ಪಂಜಾಬ್​​ ಕಾಂಗ್ರೆಸ್​ನ ಅಧ್ಯಕ್ಷರಾಗಿದ್ದ ನವಜೋತ್ ಸಿಂಗ್​ ಸಿಧು ಅವರು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್​​ನಲ್ಲಿ ಕಾಂಗ್ರೆಸ್​ ಸೋತ ಬಳಿಕ, ಅಂದರೆ 2022ರ ಮಾರ್ಚ್​ ತಿಂಗಳಲ್ಲಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷಕ್ಕೆ ನನ್ನ ಸೇವೆಯನ್ನು ಮುಂದುವರಿಸುತ್ತೇನೆ, ಆದರೆ ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಯುತ್ತಿದ್ದೇನೆ ಎಂದು ಸೋನಿಯಾ ಗಾಂಧಿಯವರಿಗೆ ಬರೆದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದರು. ಅದಾಗಿ ಎರಡು ತಿಂಗಳ ನಂತರ ಅಂದರೆ ಮೇ ತಿಂಗಳಲ್ಲಿ ಸುಪ್ರೀಂಕೋರ್ಟ್​ನಿಂದ ಶಿಕ್ಷೆಯಾಗಿತ್ತು.

ಏನಿದು ರಸ್ತೆ ರಗಳೆ?
1988ರ ಡಿಸೆಂಬರ್‌ನಲ್ಲಿ ಪಟಿಯಾಲಾದ ಪಾರ್ಕಿಂಗ್‌ ಸ್ಥಳವೊಂದರಲ್ಲಿ ನವಜೋತ್‌ ಸಿಂಗ್‌ ಸಿಧು ಮತ್ತು ಅವರ ಸಹಚರ ರೂಪಿಂದರ್‌ ಸಿಂಗ್‌ ಸಂಧು ಸೇರಿ, ಹಿರಿಯ ನಾಗರಿಕ ಗುರ್ನಾಮ್‌ ಸಿಂಗ್‌ರಿಗೆ ಬೈದಿದ್ದಲ್ಲದೆ, ಅವರನ್ನು ಕಾರಿನಿಂದ ಕೆಳಗೆ ಇಳಿದು ತಲೆಗೆ ಹೊಡೆದಿದ್ದರು. ಅದಾದ ಕೆಲವು ದಿನಗಳಲ್ಲಿ ಗುರ್ನಾಮ್‌ ಸಿಂಗ್‌ ಮೃತಪಟ್ಟಿದ್ದರು. ಬಳಿಕ ಗುರ್ನಾಮ್‌ ಸಿಂಗ್‌ ಕುಟುಂಬದವರು ಕೋರ್ಟ್‌ ಮೆಟ್ಟಿಲೇರಿದ್ದರು. ಮೊದಲು ಸೆಷನ್ಸ್‌ ಕೋರ್ಟ್‌ಗೆ ಸಲ್ಲಿಕೆಯಾಗಿದ್ದ ಅರ್ಜಿ, ಯಾವುದೇ ಸೂಕ್ತ ದಾಖಲೆಯಿಲ್ಲ ಎಂಬ ಕಾರಣಕ್ಕೆ ವಜಾಗೊಂಡಿತ್ತು. ನಂತರ ಕುಟುಂಬದವರು ಪಂಜಾಬ್‌ ಮತ್ತು ಹರ್ಯಾಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಇದೊಂದು ಶಿಕ್ಷಾರ್ಹ ನರಹತ್ಯೆ ಎಂದು ತೀರ್ಪುಕೊಟ್ಟಿದ್ದಲ್ಲದೆ, ಸಿಧುಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಹೈಕೋರ್ಟ್‌ ತೀರ್ಪಿನ ವಿರುದ್ಧ ನವಜೋತ್‌ ಸಿಂಗ್‌ ಸಿಧು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದರು. 2018ರಲ್ಲಿ ತೀರ್ಪು ನೀಡಿದ್ದ ಸರ್ವೋಚ್ಛ ನ್ಯಾಯಾಲಯ, ಗುರ್ನಾಮ್‌ ಸಿಂಗ್‌ ಮೃತಪಟ್ಟಿದ್ದು ಸಿಧು ನೀಡಿದ ಏಟಿನಿಂದಲೇ ಎಂಬುದಕ್ಕೆ ಸಾಕ್ಷಿಯಿಲ್ಲ ಎಂದು ಹೇಳಿ ಸಿಧು ವಿರುದ್ಧ ದಾಖಲಾಗಿದ್ದ ನರಹತ್ಯೆ ಕೇಸ್‌ನ್ನು ಖುಲಾಸೆಗೊಳಿಸಿತ್ತು. ಆದರೆ ಹಿರಿಯ ನಾಗರಿಕರ ಮೇಲೆ ಹಲ್ಲೆ ಮಾಡಿದ್ದು ತಪ್ಪು ಎಂದು ಹೇಳಿ, ಒಂದು ಸಾವಿರ ರೂಪಾಯಿ ದಂಡ ವಿಧಿಸಿತ್ತು. ಆದರೆ ಸುಪ್ರೀಂಕೋರ್ಟ್‌ನ ಈ ತೀರ್ಪು ತೃಪ್ತಿ ತಂದಿಲ್ಲವೆಂದು ಗುರ್ನಾಮ್‌ ಕುಟುಂಬ ಮತ್ತೆ ಸುಪ್ರೀಂಕೋರ್ಟ್‌ಗೇ ಮೇಲ್ಮನವಿ ಸಲ್ಲಿಸಿತ್ತು. ಅದರ ಆದೇಶ 2022ರ ಮೇ 19ರಂದು ಹೊರಬಿದ್ದಿತ್ತು. ಸಿಧುಗೆ ಜೈಲಾಗಿತ್ತು.

ಪತ್ನಿಗೆ ಕ್ಯಾನ್ಸರ್​
ವಾರದ ಹಿಂದೆ ನವಜೋತ್​ ಸಿಂಗ್ ಸಿಧು ಪತ್ನಿ ನವಜೋತ್‌ ಕೌರ್‌ ಟ್ವೀಟ್ ಮಾಡಿ, ತಮಗೆ ಸ್ತನ ಕ್ಯಾನ್ಸರ್​ ಇರುವುದಾಗಿ ಪತ್ತೆಯಾಗಿದೆ. ಈ ಹೊತ್ತಲ್ಲಿ ಪತಿ ನವಜೋತ್ ಸಿಂಗ್ ಸಿಧು ತುಂಬ ನೆನಪಾಗುತ್ತಾರೆ ಎಂದು ಭಾವನಾತ್ಮಕವಾಗಿ ಹೇಳಿದ್ದರು. ನಾನು ನಿಮಗಾಗಿ ಕಾಯುತ್ತಲೇ ಇದ್ದೇನೆ. ಆದರೆ, ಸತ್ಯ ಯಾವಾಗಲೂ ತುಂಬ ಪ್ರಬಲವಾಗಿರುತ್ತದೆ. ಹಾಗಾಗಿ ನಿಮಗೆ ಅಷ್ಟೊಂದು ಅಗ್ನಿಪರೀಕ್ಷೆಗಳು ಎದುರಾಗಿವೆ. ಅಷ್ಟಕ್ಕೂ ಇದು ಕಲಿಯುಗ. ಆದರೆ, ನಾವು ಯಾರನ್ನೂ ದೂರುವಂತಿಲ್ಲ. ಏಕೆಂದರೆ, ಇದು ದೇವರ ಆಟ ಎಂದಿದ್ದರು. ಪತ್ನಿಯ ಈ ಭಾವನಾತ್ಮಕ ಟ್ವೀಟ್ ಬೆನ್ನಲ್ಲೇ, ನವಜೋತ್​ ಸಿಂಗ್ ಸಿಧು ಬಿಡುಗಡೆಯ ಸುದ್ದಿಯೂ ಹೊರಬಿದ್ದಿದೆ.

Continue Reading

ಆರೋಗ್ಯ

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ಕೊರೊನಾ ಸೋಂಕಿನ ಬೆನ್ನಲ್ಲೇ ಮತ್ತೊಂದು ಸೋಂಕಿನ (New Virus) ಸುದ್ದಿ ಎಲ್ಲೆಡೆ ಹರಿದಾಡಿದೆ. ಸಿಲ್ವರ್‌ ಲೀಫ್‌ ಡಿಸೀಸ್‌ ಹೆಸರಿನ ಕಾಯಿಲೆ ಭಾರತದಲ್ಲಿ ಮೊದಲನೆಯದಾಗಿ ಪತ್ತೆಯಾಗಿರುವುದಾಗಿ ವರದಿಯಾಗಿದೆ.

VISTARANEWS.COM


on

Edited by

Koo

ನವದೆಹಲಿ: ಕೊರೊನಾ ಸೋಂಕು ವಿಶ್ವಾದ್ಯಂತ ಭಾರೀ ತಲ್ಲಣವನ್ನೇ ಉಂಟುಮಾಡಿತ್ತು. ಲಕ್ಷಾಂತರ ಜೀವಗಳು ಈ ಸೋಂಕಿನಿಂದಾಗಿ ಸಾವನ್ನಪ್ಪಿವೆ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ವೈರಸ್‌ (New Virus) ಬಂದಿರುವ ಬಗ್ಗೆ ಸುದ್ದಿ ಹರಿದಾಡಲಾರಂಭಿಸಿದೆ. ಅದರಲ್ಲೂ ಭಾರತದಲ್ಲಿಯೇ ಮೊದಲನೆಯದಾಗಿ ಸೋಂಕು ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Covid-19 Cases: ಕೊರೊನಾ ಸೋಂಕಿನ ಕೇಸ್​​ನಲ್ಲಿ 24ಗಂಟೆಯಲ್ಲಿ ಶೇ.40 ಏರಿಕೆ; ಇಂದು 3ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲು
ಹೌದು. ಭಾರತದಲ್ಲಿ ಸಸ್ಯಗಳಿಗೆ ಹೆಚ್ಚಾಗಿ ಕಾಡುವ ರೋಗವೆಂದರೆ ಅದು ಸಿಲ್ವರ್‌ ಲೀಫ್‌ ರೋಗ. ಈ ರೋಗದ ವೈರಸ್‌ ಇದೀಗ ಮಾನವನ ದೇಹಕ್ಕೂ ಹೊಗ್ಗಿರುವುದಾಗಿ ವರದಿಯಾಗಿದೆ. ಭಾರತದ ರೈತನೊಬ್ಬನಿಗೆ ಈ ಸೋಂಕು ತಗುಲಿದ್ದು, ಆತನಲ್ಲಿ ಜ್ವರ, ಕೆಮ್ಮುವಿನಂತಹ ಲಕ್ಷಣಗಳು ಕಾಣಿಸಿಕೊಂಡಿವೆ ಎಂದು ವರದಿಯಾಗಿದೆ. ಇದುವರೆಗೆ ಈ ಸೋಂಕು ಯಾವುದೇ ದೇಶದಲ್ಲಿಯೂ ಮನುಷ್ಯರಿಗೆ ಹಬ್ಬಿರಲಿಲ್ಲ. ಇದೇ ಮೊದಲನೇ ಬಾರಿಗೆ ಇಂತದ್ದೊಂದು ಪ್ರಕರಣ ವರದಿಯಾಗಿದೆ.

ಅಂದ ಹಾಗೆ ಈ ಸೋಂಕು ಯಾವಾಗ ರೈತನಿಗೆ ತಗುಲಿದ್ದು ಎನ್ನುವ ವಿಚಾರದಲ್ಲಿ ಸ್ಪಷ್ಟ ಮಾಹಿತಿಯಿಲ್ಲ. ಆದರೆ ಈ ಕುರಿತಾದ ವರದಿಯೊಂದು ʼಮೆಡಿಕಲ್‌ ಮೈಕೋಲಜಿ ಕೇಸ್‌ ರಿಪೋರ್ಟ್ಸ್‌ʼ ಜರ್ನಲ್‌ನಲ್ಲಿ ದಾಖಲಾಗಿದೆ.

ಇದನ್ನೂ ಓದಿ: Coronavirus: ಇಂದು 1800ಕ್ಕೂ ಅಧಿಕ ಕೊರೊನಾ ಕೇಸ್​ಗಳು ಪತ್ತೆ; ಏಪ್ರಿಲ್​​ನಲ್ಲಿ 2 ದಿನ ಆಸ್ಪತ್ರೆಗಳಲ್ಲಿ ಅಣುಕು ಕಾರ್ಯಾಚರಣೆ

ಇತ್ತೀಚೆಗೆ ಅಮೆರಿಕದ ಆರೋಗ್ಯ ಅಧಿಕಾರಿಗಳು ವೈರಸ್‌ ಒಂದರ ಬಗ್ಗೆ ಎಚ್ಚರಿಕೆ ಕೊಟ್ಟಿದ್ದರು. ಕ್ಯಾಂಡಿಡಾ ಔರಿಸ್‌ ಫಂಗಸ್‌ ಹೆಸರಿನ ಸೋಂಕು ಇತ್ತೀಚಿನ ದಿನಗಳಲ್ಲಿ ಮೂರು ಪಟ್ಟು ಹೆಚ್ಚಾಗಿದೆ ಎಂದು ಅವರು ಹೇಳಿದ್ದರು. ಹಾಗೆಯೇ ಈ ಸೋಂಕಿಗೆ ತುತ್ತಾಗುವವರಲ್ಲಿ ಶೇ.60 ಮಂದಿ ಸಾವನ್ನಪ್ಪುವ ಸಾಧ್ಯತೆಯಿದೆ ಎಂದೂ ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇದೀಗ ಭಾರತದಲ್ಲಿ ಮತ್ತೊಂದು ಸೋಂಕಿನ ವಿಚಾರ ಸುದ್ದಿಯಾಗಿದೆ. ಇದರ ಬಗ್ಗೆ ಭಾರತೀಯ ಆರೋಗ್ಯ ಇಲಾಖೆಯಿಂದ ಯಾವುದೇ ಮಾಹಿತಿ ಸೋರಿಕೆಯಾಗಿಲ್ಲ.

Continue Reading

ದೇಶ

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ.

VISTARANEWS.COM


on

Edited by

6 die of suffocation in Delhi After Due to mosquito coil
Koo

ನವ ದೆಹಲಿ: ಸೊಳ್ಳೆಬತ್ತಿ ಹಾಸಿಗೆ (mosquito coil) ಮೇಲೆ ಬಿದ್ದು, ಅದರಿಂದ ಹೊಮ್ಮಿದ ವಿಷಪೂರಿತ ಹೊಗೆಯಿಂದ ಉಸಿರುಕಟ್ಟಿ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿದ್ದಾರೆ. ಈ ಘಟನೆ ವರದಿಯಾಗಿದ್ದು ದೆಹಲಿಯ ಈಶಾನ್ಯ ಭಾಗದಲ್ಲಿರುವ (New Delhi) ಶಾಸ್ತ್ರಿಪಾರ್ಕ್ ಏರಿಯಾದಿಂದ. ಸೊಳ್ಳೆಯಿಂದ ಪಾರಾಗಲು ಈ ಮನೆಯಲ್ಲಿ ಸೊಳ್ಳೆ ಬತ್ತಿ ಹಾಕಿಕೊಂಡು ಎಲ್ಲರೂ ಮಲಗಿದ್ದರು. ರಾತ್ರಿ ಯಾವಾಗಲೋ ಆ ಬತ್ತಿ ಹಾಸಿಗೆ ಮೇಲೆ ಬಿದ್ದಿದೆ. ಸಾಮಾನ್ಯವಾಗಿ ಸೊಳ್ಳೆ ಬತ್ತಿಯ ಹೊಗೆಯೇ ಘಾಟಾಗಿ ಇರುತ್ತದೆ. ಅದು ಹಾಸಿಗೆ ಮೇಲೆ ಬಿದ್ದು, ಹಾಸಿಗೆಯ ಬಟ್ಟೆಯ ಹೊಗೆಯೂ ಜತೆಗೆ ಸೇರಿ, ಆರೂ ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ.

ಮುಂಜಾನೆ ಹೊತ್ತಿಗೆ ಆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ನೆರೆಯವರು ಪೊಲೀಸರಿಗೆ ಕರೆ ಮಾಡಿದ್ದರು. ಅಲ್ಲಿಗೆ ಧಾವಿಸಿದ ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಈಶಾನ್ಯ ದೆಹಲಿ ಜಿಲ್ಲೆಯ ಡಿಸಿಪಿ ಜಾಯ್​ ಟಿರ್ಕಿ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿ ‘ಮಚ್ಚಿ ಮಾರ್ಕೆಟ್​ ಬಳಿಯಿರುವ ಮಾಜಾರ್ ವಾಲಾ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದಾಗಿ ಬೆಳಗ್ಗೆ ಹೊತ್ತಿಗೆ ಶಾಸ್ತ್ರಿಪಾರ್ಕ್ ಪೊಲೀಸ್ ಸ್ಟೇಶನ್​ಗೆ ಕರೆಬಂತು. ಪೊಲೀಸರು ಮತ್ತು ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಅಲ್ಲಿಗೆ ತೆರಳಿದರು. ಮೃತದೇಹಗಳನ್ನೆಲ್ಲ ಜಗ್​ ಪ್ರವೇಶ್​ ಚಂದ್ರ ಆಸ್ಪತ್ರೆಗೆ ಸಾಗಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Family suicide : ಮಂಗಳೂರಿನ ಲಾಡ್ಜ್‌ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಮೃತರು ಮೈಸೂರಿನವರು

ಈ ಮನೆಯಲ್ಲಿ ಒಟ್ಟು ಒಂಭತ್ತು ಮಂದಿ ಇದ್ದರು. ಅದರಲ್ಲಿ ಮೂವರು ಅಪಾಯದಿಂದ ಪಾರಾಗಿದ್ದಾರೆ. ಆದರೆ ಅವರೂ ಕೂಡ ಎಚ್ಚರ ತಪ್ಪಿದ್ದರು. ಆ ಮೂವರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅದರಲ್ಲಿ ಒಬ್ಬರು ಪ್ರಾಥಮಿಕ ಚಿಕಿತ್ಸೆಗೇ ಚೇತರಿಸಿಕೊಂಡು, ಡಿಸ್​ಚಾರ್ಜ್ ಆಗಿದ್ದಾರೆ. ಇನ್ನಿಬ್ಬರಿಗೆ ಸುಟ್ಟಗಾಯಗಳೂ ಆಗಿದ್ದು ಅವರಿಗೆ ಚಿಕಿತ್ಸೆ ಮುಂದುವರಿದಿದೆ ಎಂದು ಜಾಯ್​ ಟಿರ್ಕಿ ತಿಳಿಸಿದ್ದಾರೆ. ಮೃತಪಟ್ಟವರಲ್ಲಿ ಒಂದು ಮಗು, ನಾಲ್ವರು ಪುರುಷರು, ಒಬ್ಬಳು ಮಹಿಳೆ ಸೇರಿದ್ದಾರೆ.

Continue Reading

ಕೋರ್ಟ್

Supreme Court: ದ್ವೇಷ ಭಾಷಣ ತಡೆಗೆ ಸರ್ಕಾರಕ್ಕೆ ಶಕ್ತಿ ಇಲ್ಲವೇ?: ಕೇಂದ್ರ ವಿರುದ್ಧ ಸುಪ್ರೀಂ ಕೋರ್ಟ್ ಗರಂ

Supreme Court: ದ್ವೇಷ ಭಾಷಣ ತಡೆಗೆ ವ್ಯವಸ್ಥೆಯನ್ನು ರೂಪಿಸುವಲ್ಲಿ ವಿಫಲವಾಗಿರುವ ಕೇಂದ್ರ ಸರ್ಕಾರ ವಿರುದ್ದ ಸುಪ್ರೀಂ ಕೋರ್ಟ್ ಗರಂ ಆಗಿದೆ. ಈ ವಿಷಯದಲ್ಲಿ ಸರ್ಕಾರವು ಶಕ್ತಿಹೀನವಾಗಿದೆ ಎಂದು ಆರೋಪಿಸಿದೆ.

VISTARANEWS.COM


on

Edited by

is State is Impotent why did stop hate speech asks supreme Court
Koo

ನವದೆಹಲಿ: ಕಾಲಮಿತಿಯೊಳಗೇ ದೇಶಾದ್ಯಂತ ದ್ವೇಷ ಭಾಷಣವನ್ನು ಹತ್ತಿಕ್ಕಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಈ ವಿಷಯದಲ್ಲಿ ಸರ್ಕಾರವು ಶಕ್ತಿಹೀನವಾಗಿದೆ(State is Impotent) ಎಂದು ಸುಪ್ರೀಂ ಕೋರ್ಟ್‌ (Supreme Court) ನ್ಯಾಯಮೂರ್ತಿ ಕೆ ಎಂ ಜೋಸೆಫ್ ಅಭಿಪ್ರಾಯಪಟ್ಟಿದ್ದಾರೆ. ರ್ಯಾಲಿಗಳಲ್ಲಿ ದ್ವೇಷದ ಭಾಷಣಗಳ ವಿರುದ್ಧ ಕ್ರಮಕೈಗೊಳ್ಳಲು ವಿಫಲವಾದ ಆರೋಪದ ಮೇಲೆ ಮಹಾರಾಷ್ಟ್ರದ ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಜಸ್ಟೀಸ್ ಜೋಸಫ್ ಅವರು, ಈ ವಿಷಯದಲ್ಲಿ ಮೌನವಾಗಿರುವುದಾದರೆ ನಮಗೆ ಸರ್ಕಾರವೇಕೆ ಬೇಕು ಎಂದು ಪ್ರಶ್ನಿಸಿದರು.

ಭಾತೃತ್ವ ಮತ್ತು ಸಹಿಷ್ಣುತೆಯ ಮಹತ್ವದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಜಸ್ಟೀಸ್ ಜೋಸೆಫ್,
ಪ್ರತಿದಿನ ನೀವು ನ್ಯಾಯಾಲಯದಲ್ಲಿ ಕುಳಿತುಕೊಳ್ಳುತ್ತೀರಿ ಮತ್ತು ಸುತ್ತಮುತ್ತಲಿನ ಪ್ರತಿಯೊಬ್ಬರೂ ನಿಮ್ಮ ಬಗ್ಗೆ ಕೆಟ್ಟದ್ದನ್ನು ಹೇಳುತ್ತಾರೆಂದು ಭಾವಿಸೋಣ, ಮನುಷ್ಯನಿಗೆ ಅತ್ಯಂತ ಮುಖ್ಯವಾದ ವಿಷಯವೆಂದರೆ ಘನತೆ. ನಿತ್ಯವೂ ಅದನ್ನು ಹಾಳುಮಾಡುತ್ತಿದ್ದರೆ, ಪಾಕಿಸ್ತಾನಕ್ಕೆ ಹೋಗು ಎಂಬಂತೆ ಕೆಲವು ಹೇಳಿಕೆಗಳನ್ನು ನೀಡಲಾಗುತ್ತಿದೆ. ಈ ವ್ಯಕ್ತಿಗಳು ನಿಜವಾಗಿಯೂ ಈ ದೇಶವನ್ನು ಆರಿಸಿಕೊಂಡರು. ಅವರು ನಮ್ಮ ಸಹೋದರ ಮತ್ತು ಸಹೋದರಿಯರಂತೆ. ಒಂದೊಮ್ಮೆ ನಾವು ಸೂಪರ್ ಪವರ್ ಆಗಲು ಬಯಸಿದರೆ, ಮೊದಲು ದೇಶದಲ್ಲಿ ಕಾನೂನು ಅನುಷ್ಠಾನ ನಡೆಯಬೇಕು ಎಂದು ಅವರು ಹೇಳಿದರು.

ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮಹ್ತಾ ಅವರು, ಅರ್ಜಿದಾರರು ಈ ಪ್ರಕರಣದಲ್ಲಿ ಸೆಲೆಕ್ಟಿವ್ ಆಗಿ ನಡೆದುಕೊಳ್ಳುತ್ತಿದ್ದಾರೆಂದು ಆರೋಪಿಸಿದರು. ಅರ್ಜಿದಾರರಾಗಿರುವ ವ್ಯಕ್ತಿ ತನ್ನ ಸ್ವಂತ ರಾಜ್ಯದ (ಕೇರಳ) ನ್ಯಾಯಾಲಯದ ಮುಂದೆ ನಿದರ್ಶನಗಳನ್ನು ಕೋರುತ್ತಿಲ್ಲ ಎಂದು ಹೇಳಿದರು. ಮಹಾರಾಷ್ಟ್ರದಲ್ಲಿ ಮಾತ್ರ ದ್ವೇಷ ಭಾಷಣಗಳ ಪ್ರಕರಣಗಳನ್ನು ಪರಿಗಣಿಸಬಾರದು. ಆದರೆ ಕೇರಳ ಮತ್ತು ತಮಿಳುನಾಡಿನಂತಹ ರಾಜ್ಯಗಳಲ್ಲಿ ಇದೇ ರೀತಿಯ ನಿದರ್ಶನಗಳನ್ನು ನೋಡಬೇಕು ಎಂಬ ಸಂಗತಿಯನ್ನು ಕೋರ್ಟ್ ಗಮನಕ್ಕೆ ತರಲಾಯಿತು.

ಇದನ್ನೂ ಓದಿ: Supreme Court: ದ್ವೇಷ ಭಾಷಣದ ಆರೋಪ, ಹಿಂದೂ ಜನ್ ಆಕ್ರೋಶ್ ಸಭೆ ಚಿತ್ರೀಕರಿಸಲು ಕೋರ್ಟ್ ಸೂಚನೆ

ಕೇರಳದಲ್ಲಿ ಹಿಂದೂಗಳ ವಿರುದ್ಧ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿದೆ ಎಂದು ಸಂಗತಿಯನ್ನು ಹೈಲೈಟ್ ಮಾಡಿದ ತುಷಾರ್ ಮಹ್ತಾ ಅವರು, ನ್ಯಾಯಾಲಯವು ಈ ಬಗ್ಗೆ ಯಾಕೆ ಸ್ವಯಂ ಆಗಿ ಪ್ರಕರಣವನ್ನು ಕೈಗೆತ್ತಿಕೊಳ್ಳಲಿಲ್ಲ ಎಂದು ಪ್ರಶ್ನಿಸಿದರು. ಫೆಬ್ರವರಿ 5 ರಂದು ಮುಂಬೈನಲ್ಲಿ ಹಿಂದೂ ಜನ ಆಕ್ರೋಶ್ ಸಭಾ ಆಯೋಜಿಸಿದ್ದ ಕಾರ್ಯಕ್ರಮವನ್ನು ವಿಡಿಯೋಗ್ರಾಫ್ ಮಾಡಿ ವರದಿ ಸಲ್ಲಿಸುವಂತೆ ಫೆಬ್ರವರಿ ಮೊದಲ ವಾರದಲ್ಲಿ ಸುಪ್ರೀಂ ಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

Continue Reading
Advertisement
IPL 2023: IPL fan park after three years; Opportunity in Karnataka too
ಕ್ರಿಕೆಟ್9 mins ago

IPL 2023: ಮೂರು ವರ್ಷಗಳ ಬಳಿಕ ಐಪಿಎಲ್​ ಫ್ಯಾನ್​ ಪಾರ್ಕ್​; ಕರ್ನಾಟಕದಲ್ಲಿಯೂ ಇರಲಿದೆ ಜೋಶ್​

Mallikarjun khuba joins JDS
ಕರ್ನಾಟಕ11 mins ago

JDS Karnataka: ಬಿಜೆಪಿಯಿಂದ ಜೆಡಿಎಸ್‌ಗೆ ಮರಳಿದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ

Navjot Sidhu to be released from Jail
ದೇಶ17 mins ago

ಏ.1ರಂದು ಜೈಲಿಂದ ಬಿಡುಗಡೆಯಾಗಲಿದ್ದಾರೆ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು; ಪತ್ನಿ ಟ್ವೀಟ್ ಬೆನ್ನಲ್ಲೇ ಸಿಧು ಟ್ವೀಟ್​

Release Rs 17.42 crore dues to MySugar factory says Dinesh Gooligowda
ಕರ್ನಾಟಕ18 mins ago

MySugar Factory: ಮೈಶುಗರ್ ಕಾರ್ಖಾನೆಗೆ ಬಾಕಿ ಇರುವ 17.42 ಕೋಟಿ ರೂ. ಬಿಡುಗಡೆ ಮಾಡಿ: ದಿನೇಶ್‌ ಗೂಳಿಗೌಡ

Modi With Kharge
ಅಂಕಣ23 mins ago

ಮೊಗಸಾಲೆ ಅಂಕಣ: ಮೋದಿ, ಖರ್ಗೆ ಹಣಾಹಣಿಗೆ ವೇದಿಕೆ ಸಜ್ಜು

ಆರೋಗ್ಯ24 mins ago

New Virus: ಕೊರೊನಾ ಬೆನ್ನಲ್ಲೇ ಪತ್ತೆಯಾಯ್ತು ಮತ್ತೊಂಡು ಡೆಡ್ಲಿ ವೈರಸ್!‌ ಭಾರತದಲ್ಲೇ ಮೊದಲ ಕೇಸ್‌!

ವೈರಲ್ ನ್ಯೂಸ್27 mins ago

Viral News : ನೂಡಲ್ಸ್‌ನಿಂದಲೇ ರಸ್ತೆ ಗುಂಡಿ ಮುಚ್ಚುವ ವ್ಯಕ್ತಿ! ವೈರಲ್‌ ಆಗ್ತಿದೆ ಈತನ ಕೆಲಸ

Boys death
ಕರ್ನಾಟಕ33 mins ago

Mysterious death : ನಿರ್ಜನ ಪ್ರದೇಶದಲ್ಲಿ 8 ವರ್ಷದ ಬಾಲಕನ ಶವ ಪತ್ತೆ; ದುಷ್ಕರ್ಮಿಗಳು ಕೊಲೆ ಮಾಡಿ ಎಸೆದ ಶಂಕೆ

6 die of suffocation in Delhi After Due to mosquito coil
ದೇಶ54 mins ago

ಒಂದೇ ಕುಟುಂಬದ 6 ಮಂದಿಯ ಪ್ರಾಣ ತೆಗೆದ ಸೊಳ್ಳೆ ಬತ್ತಿ; ಹಾಸಿಗೆ ಮೇಲೆ ಬಿದ್ದು ಭುಗಿಲೆದ್ದ ಹೊಗೆ, ಬೆಂಕಿ

Gas tragedy
ಕರ್ನಾಟಕ55 mins ago

Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್‌ ಸಿಲಿಂಡರ್‌ ಲೀಕ್‌ ಆಗಿ 7 ಕಾರ್ಮಿಕರ ದಾರುಣ ಸಾವು

7th Pay Commission
ನೌಕರರ ಕಾರ್ನರ್5 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

DCC Bank Recruitment 2023
ಉದ್ಯೋಗ2 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Govt employees ssociation
ಕರ್ನಾಟಕ2 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Sphoorti Salu
ಸುವಚನ10 hours ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Village Accountant Recruitment
ಉದ್ಯೋಗ2 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike Order from Govt
ನೌಕರರ ಕಾರ್ನರ್4 weeks ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ3 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

Teacher Transfer
ನೌಕರರ ಕಾರ್ನರ್5 months ago

ಸೇವಾ ನಿರತ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ; ಸದ್ಯವೇ ಸರ್ಕಾರದಿಂದ ಗುಡ್‌ ನ್ಯೂಸ್‌?

7th Pay Commission
ಕರ್ನಾಟಕ5 months ago

7th Pay Commission | 7 ವೇತನ ಆಯೋಗ ರಚನೆಯ ಘೋಷಣೆ; ಹರ್ಷ ವ್ಯಕ್ತಪಡಿಸುತ್ತಿರುವ ಸರ್ಕಾರಿ ನೌಕರರು

Land Surveyor Recruitment
ಉದ್ಯೋಗ2 months ago

Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ3 hours ago

SSLC Exam 2023: ಹಾಲ್ ಟಿಕೆಟ್ ಕೊಡದೆ ಕೈ ಎತ್ತಿದ ಶಾಲೆಗಳು; ವಿಸ್ತಾರ ಎಂಟ್ರಿಯಿಂದ ಪರೀಕ್ಷೆ ಬರೆದ ಮಕ್ಕಳು

ಕರ್ನಾಟಕ21 hours ago

Ram Navami 2023: ಕರುನಾಡಿನೆಲ್ಲೆಡೆ ಶ್ರೀರಾಮ ನಾಮಸ್ಮರಣೆ; ಕಲಬುರಗಿಯಲ್ಲಿ ಮಜ್ಜಿಗೆ, ಪಾನಕ ವಿತರಿಸಿದ ಮುಸ್ಲಿಮರು

Siddalinga Swamiji of Siddaganga Mutt saw a cow and came running away Video goes viral
ಕರ್ನಾಟಕ1 day ago

Sri Siddalinga Swamiji: ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಕಂಡು ಓಡೋಡಿ ಬಂದ ಹಸು; ವಿಡಿಯೊ ವೈರಲ್‌

amit shah convoy
ಕರ್ನಾಟಕ4 days ago

Amit Shah: ಬೆಂಗಳೂರಿನಲ್ಲಿ ಅಮಿತ್‌ ಶಾ ಕಾನ್‌ವೇಯಲ್ಲಿ ಭದ್ರತಾ ವೈಫಲ್ಯ; ಇಬ್ಬರು ವಿದ್ಯಾರ್ಥಿಗಳ ವಿಚಾರಣೆ

rapido bike vs auto-Bike taxi drivers go on strike against auto drivers harassment
ಕರ್ನಾಟಕ4 days ago

Rapido Bike Vs Auto: ಆಟೋ ಚಾಲಕರ ದೌರ್ಜನ್ಯದ ವಿರುದ್ಧ ಸಿಡಿದೆದ್ದ ಬೈಕ್‌ ಟ್ಯಾಕ್ಸಿ ಚಾಲಕರು; ರಕ್ಷಣೆಗಾಗಿ ಪ್ರತಿಭಟನೆ

ಕರ್ನಾಟಕ1 week ago

Halal Ban: ಯುಗಾದಿಗೆ ಹಲಾಲ್‌ ಕಟ್‌ ಬಹಿಷ್ಕರಿಸಿ, ಜಟ್ಕಾ ಮಾಂಸ ಖರೀದಿ; ಮತ್ತೆ ಬೀದಿಗಿಳಿದ ಹಿಂದು ಕಾರ್ಯಕರ್ತರು

Did Dinesh Gundu Rao distribute damaged sarees in Gandhinagar for Ugadi festival?
ಕರ್ನಾಟಕ1 week ago

Damaged Saree: ಯುಗಾದಿ ಹಬ್ಬಕ್ಕೆ ಗಾಂಧಿನಗರದಲ್ಲಿ ಹರಿದ ಸೀರೆ ಕೊಟ್ಟರಾ ದಿನೇಶ್‌ ಗುಂಡೂರಾವ್‌? ಸೀರೆ ನೀಡಿ ಮಹಿಳೆಯರ ಕಿಡಿ

ಕರ್ನಾಟಕ1 week ago

Chikkaballapura BMTC: ಬೆಂಗಳೂರಿಂದ ಚಿಕ್ಕಬಳ್ಳಾಪುರಕ್ಕೆ ಬಿಎಂಟಿಸಿ ವೋಲ್ವೋ ಬಸ್‌ ಸಂಚಾರ ಶುರು; ಟೈಮಿಂಗ್‌ ಏನು?

BMTC bus window shattered as police refused to allow auto drivers rally
ಕರ್ನಾಟಕ2 weeks ago

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

Drivers oppose Rapido bike taxi in bengaluru Extra BMTC buses ply on road, auto stopped plying
ಕರ್ನಾಟಕ2 weeks ago

Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಟ್ರೆಂಡಿಂಗ್‌

error: Content is protected !!