Supreme Court Argument : ಸೆಕ್ಯುರಿಟಿಯನ್ನು ಕರೆಸಿ ಹೊರಹಾಕಿಸುವೆ; ಲಾಯರ್ ವಿರುದ್ಧ ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಗರಂ - Vistara News

ದೇಶ

Supreme Court Argument : ಸೆಕ್ಯುರಿಟಿಯನ್ನು ಕರೆಸಿ ಹೊರಹಾಕಿಸುವೆ; ಲಾಯರ್ ವಿರುದ್ಧ ಸುಪ್ರೀಂ ಕೋರ್ಟ್​​ ನ್ಯಾಯಮೂರ್ತಿ ಗರಂ

supreme court argument : ಹೂಡಾ ಅವರು ತಮ್ಮ ವಾದ ಮಾಡುತ್ತಿರುವ ನಡುವೆಯೇ ಮಧ್ಯಪ್ರವೇಶಿಸಿದ ನೆಡುಂಪರಾ ನನಗೂ ಮಂಡಿಸುವುದಕ್ಕೆ ಒಂದು ವಿಷಯವಿದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಅವರು (ಹೂಡಾ) ವಾದಿಸುತ್ತಿದ್ದಾರೆ. ನೀವು ಅವನಿಗೆ ಅಡ್ಡಿಪಡಿಸಬಾರದು ಎಂದು ಹೇಳಿದರು. ಇದಕ್ಕೆ ಸವಾಲು ಹಾಕಿದ ನೆಡಂಪೆರಾ ಅವರು “ನಾನು ಇಲ್ಲಿ ಹಿರಿಯವ” ಎಂದು ಹೇಳಿದರು.

VISTARANEWS.COM


on

supreme court argument
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸುಪ್ರೀಂ ಕೋರ್ಟ್​​ನಲ್ಲಿ ಜುಲೈ 23 ರಂದು ನೀಟ್-ಯುಜಿ ಕುರಿತ ಅರ್ಜಿಗಳ ವಿಚಾರಣೆಯ ವೇಳೆ (Supreme Court Argument) ಕಲಾಪಕ್ಕೆ ಅಡ್ಡಿಪಡಿಸಿದ್ದಕ್ಕಾಗಿ ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ ಅವರು ಹಿರಿಯ ವಕೀಲ ಮ್ಯಾಥ್ಯೂಸ್ ನೆಡುಂಪರಾ ಅವರನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಪ್ರಕರಣದಲ್ಲಿ ಅರ್ಜಿದಾರರಲ್ಲಿ ಒಬ್ಬರನ್ನು ಪ್ರತಿನಿಧಿಸುತ್ತಿದ್ದ ಹಿರಿಯ ವಕೀಲರಾದ ನರೇಂದ್ರ ಹೂಡಾ ಅವರು ತಮ್ಮ ವಾದಗಳನ್ನು ಮಂಡಿಸುತ್ತಿದ್ದಾಗ ನೆಡುಂಪರಾ ಮಧ್ಯ ಪ್ರವೇಶಿಸಿದ್ದಕ್ಕೆ ಅವರು ಸಿಟ್ಟಾದರು. ಅಲ್ಲದೆ, ಭದ್ರತಾ ಸಿಬ್ಬಂದಿಯನ್ನು ಕರೆದು ಕೋರ್ಟ್​ನಿಂದ ಹೊರಕ್ಕೆ ಹಾಕುವೆ ಎಂದು ಎಚ್ಚರಿಕೆ ನೀಡಿದರು.

ಹೂಡಾ ಅವರು ತಮ್ಮ ವಾದ ಮಾಡುತ್ತಿರುವ ನಡುವೆಯೇ ಮಧ್ಯಪ್ರವೇಶಿಸಿದ ನೆಡುಂಪರಾ ನನಗೂ ಮಂಡಿಸುವುದಕ್ಕೆ ಒಂದು ವಿಷಯವಿದೆ ಎಂದು ಹೇಳಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಿಜೆಐ, “ಅವರು (ಹೂಡಾ) ವಾದಿಸುತ್ತಿದ್ದಾರೆ. ನೀವು ಅವನಿಗೆ ಅಡ್ಡಿಪಡಿಸಬಾರದು ಎಂದು ಹೇಳಿದರು. ಇದಕ್ಕೆ ಸವಾಲು ಹಾಕಿದ ನೆಡಂಪೆರಾ ಅವರು “ನಾನು ಇಲ್ಲಿ ಹಿರಿಯವ” ಎಂದು ಹೇಳಿದರು. ಅವರ ಮಾತು ಸಿಜೆಐ ಅವರನ್ನು ಕೆರಳಿಸಿತು. ಅವರು ನೆಡುಂಪರಾಗೆ ತಕ್ಷಣವೇ ಎಚ್ಚರಿಕೆ ನೀಡಿದರು.

ನಾನು ನಿಮಗೆ ಎಚ್ಚರಿಕೆ ಕೊಡುತ್ತಿದ್ದೇನೆ. ನೀವು ಕೋರ್ಟ್​ನ ಗ್ಯಾಲರಿ ಜತೆ ಮಾತನಾಡುತ್ತಿಲ್ಲ. ನೀವು ನನ್ನ ಮಾತನ್ನು ಕೇಳಬೇಕು. ನಾನು ಈ ನ್ಯಾಯಾಲಯದ ಉಸ್ತುವಾರಿ. ತಕ್ಷಣವೇ ಸೆಕ್ಯೂರಿಟಿಯನ್ನು ಕರೆದು ನಿಮ್ಮ ಹೊರ ಹಾಕಬೇಕಾಗುತ್ತದೆ ಎಂದು ಹೇಳಿದರು. ಈ ವೇಳೆ ನೆಡುಂಪರಾ, ಇದನ್ನು ನೀವು ಹೇಳುವ ಅಗತ್ಯವಿಲ್ಲ ಹೇಳಿ ಹೊರಡಲು ಅನುವಾದರು.

ಈ ವೇಳೆ ಮುಖ್ಯ ನ್ಯಾಯಮೂರ್ತಿ, ನೀವು ಅದನ್ನು ಹೇಳಬೇಕಾಗಿಲ್ಲ. ನೀವಿನ್ನು ಹೋಗಬಹುದು. ನಾನು ಕಳೆದ 24 ವರ್ಷಗಳಿಂದ ನ್ಯಾಯಾಂಗ ವ್ಯವಸ್ಥೆಯನ್ನು ನೋಡಿದ್ದೇನೆ. ಈ ನ್ಯಾಯಾಲಯದಲ್ಲಿ ವಕೀಲರ ಕಾರ್ಯವಿಧಾನವನ್ನು ನನಗೆ ನಿರ್ದೇಶಿಸಲು ನಾನು ಅನುಮತಿ ಕೊಡುವುದಿಲ್ಲ ಎಂದು ಹೇಳಿದರು. ಈ ವೇಳೆ ನೆಡುಂಪರಾ ” ಈ ನ್ಯಾಯಾಲಯವನ್ನು 1979 ರಿಂದ ನೋಡಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Union Budget 2024 : ಹೂಡಿಕೆಗಳನ್ನು ಉತ್ತೇಜಿಸಲು ‘ಏಂಜಲ್ ಟ್ಯಾಕ್ಸ್’ ರದ್ದು ಮಾಡಿದ ಕೇಂದ್ರ ಸರ್ಕಾರ

ಈ ವೇಳೆ ಮುಖ್ಯ ನ್ಯಾಯಮೂರ್ತಿ ನೆಡುಂಪರಾ ಅವರಿಗೆ. “ದಯವಿಟ್ಟು ಸುಮ್ಮನಿರಿ. ಅಥವಾ ಕುಳಿತುಕೊಳ್ಳಿ. ನೀವು ಹೊರಡಲು ಬಯಸುತ್ತೀರಿ ಎಂದಾದರೆ ಹೋಗಬಹುದು. ಅದು ನಿಮ್ಮ ಆಯ್ಕೆ. ನೀವು ವಿಚಾರಣೆ ಮಧ್ಯಪ್ರವೇಶಿಸಬೇಕಾಗಿಲ್ಲ” ಎಂದು ಸಿಜೆಐ ಹೇಳಿದರು.

ನಾನೇ ನಿಮಗೆ ಕ್ಷಮೆ ನೀಡುತ್ತಿದ್ದೇನೆ ಎಂದ ನೆಡುಂಪರಾ

ಅಲ್ಲಿಗೂ ಸುಮ್ಮನಾಗದ ಮ್ಯಾಥ್ಯೂಸ್ ನೆಡುಂಪರಾ, ಬಳಿಕ “ನಾನು ಒಂದು ವಾಕ್ಯವನ್ನು ಹೇಳುವ ಮೂಲಕ ಮುಕ್ತಾಯಗೊಳಿಸುತ್ತೇನೆ. ನನಗೆ ಮಾಡಿದ ಎಲ್ಲಾ ಅವಮಾನಕ್ಕಾಗಿ ನಾನು ನ್ಯಾಯಾಂಗದ ಪ್ರಭುತ್ವವನ್ನು ಕ್ಷಮಿಸುತ್ತಿದ್ದೇನೆ. ಏಕೆಂದರೆ ಅವರು ಏನು ಮಾಡುತ್ತಿದ್ದಾರೆಂದು ನಿಮಗೆ ತಿಳಿದಿಲ್ಲ. ನನ್ನ ಮನಸ್ಸಿನಲ್ಲಿ ಏನೂ ಇಲ್ಲ, ಪ್ರಭುತ್ವದ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿ ಹೊರಟರು.

ವಿಚಾರಣೆಯಲ್ಲಿ ಎನ್​ಟಿಎಯನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ನೆಡುಂಪರಾ ಅವರ ನಡವಳಿಕೆಯನ್ನು ಅಗೌರವ ಎಂದು ಕರೆದಿದ್ದಾರೆ.

ಶಿಕ್ಷೆಗೆ ಒಳಗಾಗಿದ್ದ ನೆಡುಂಪಾರಾ?

2019ರಲ್ಲಿ, ಸುಪ್ರೀಂ ಕೋರ್ಟ್ ನೆಡುಂಪರಾ ಅವರನ್ನು ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಘೋಷಿಸಿ. ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಆ ವೇಳೆ ಅವರು ಆಗಿನ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಅವರ ತಂದೆ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ಹೆಸರನ್ನು ಅನಗತ್ಯವಾಗಿ ಕೋರ್ಟ್​ನಲ್ಲಿ ಉಲ್ಲೇಖಿಸಿದ್ದರು. ಬಳಿಕ ನೆಡುಂಪರಾ ಅವರು ಬೇಷರತ್​​ ಕ್ಷಮೆಯಾಚನೆ ಕೋರಿದ ಬಳಿಕ ಶಿಕ್ಷೆಯನ್ನು ಅಮಾನತುಗೊಳಿಸಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Union Budget 2024: ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಇಳಿಕೆ ಮಾಡಿದ್ದು, ಗ್ರಾಹಕರು ಚಿನ್ನ ಖರೀದಿಸಲು ತುದಿಗಾಲಿನ ಮೇಲೆ ನಿಂತಿದ್ದಾರೆ. ಮತ್ತೊಂದೆಡೆ, ಚಿನ್ನದ ಮೇಲೆ ಹೂಡಿಕೆ ಮಾಡಲು ಇದು ಉತ್ತಮ ಸಮಯವೇ ಎಂಬ ಪ್ರಶ್ನೆಯು ಹೂಡಿಕೆದಾರರಿಗೆ ಕಾಡುತ್ತಿದೆ. ಈ ಪ್ರಶ್ನೆಗೆ ಉತ್ತರ ಹುಡುಕುವ ಪ್ರಯತ್ನ ಇಲ್ಲಿದೆ.

VISTARANEWS.COM


on

Union Budget 2024
Koo

ನವದೆಹಲಿ: ಚಿನ್ನ ಹಾಗೂ ಬೆಳ್ಳಿಯ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.6ರಷ್ಟು ಇಳಿಕೆ ಮಾಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ನಲ್ಲಿ (Union Budget 2024) ಘೋಷಣೆ ಮಾಡಿದ್ದಾರೆ. ಇದರಿಂದಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯು ಇಳಿಕೆಯಾಗಲಿದೆ. ಇದು ಗ್ರಾಹಕರಿಗೆ ಶುಭ ಸುದ್ದಿಯಾಗಿದೆ. ಇನ್ನು, ಚಿನ್ನದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಇಳಿಸಿರುವುದು ಚಿನ್ನದ ಮೇಲೆ ಹೂಡಿಕೆ ಮಾಡಲು ಸಕಾರಾತ್ಮಕ ಪರಿಣಾಮವೇ? ಈಗ ಚಿನ್ನದ ಮೇಲೆ ಹೂಡಿಕೆ ಮಾಡಲು ಸಕಾಲವೇ ಎಂಬ ಪ್ರಶ್ನೆಗಳು ಉದಯಿಸಿವೆ. ಇಂತಹ ಪ್ರಶ್ನೆಗಳಿಗೆ ತಜ್ಞರು ಉತ್ತರ ನೀಡಿದ್ದಾರೆ.

ಕಸ್ಟಮ್ಸ್‌ ಸುಂಕ ಇಳಿಸಿದ್ದು ಹೂಡಿಕೆಗೆ ಸಕಾರಾತ್ಮಕವೇ?

ಕೇಂದ್ರ ಸರ್ಕಾರವು ಚಿನ್ನದ ಮೇಲಿನ ಕಸ್ಟಮ್ಸ್‌ ಸುಂಕವನ್ನು ಶೇ.6ರಷ್ಟು ಇಳಿಸಿರುವುದು ಗ್ರಾಹಕರು ಖರೀದಿಸಲು ಉತ್ತಮ ಸಮಯವಾಗಿರುವುದರ ಜತೆಗೆ ಹೂಡಿಕೆಗೂ ಸಕಾಲವಾಗಿದೆ ಎಂಬುದಾಗಿ ತಜ್ಞರು ತಿಳಿಸಿದ್ದಾರೆ. ಚಿನ್ನದ ಬೆಲೆಯು ಏಕಾಏಕಿ ಇಳಿಕೆಯಾಗಲಿದ್ದು, ಮದುವೆ ಸೇರಿ ಹಲವು ಸಮಾರಂಭಗಳಿಗೆ ಗ್ರಾಹಕರು ಚಿನ್ನ ಖರೀದಿಸಲು ಅನುಕೂಲವಾಗಲಿದೆ. ಇನ್ನು, ಚಿನ್ನದ ಬೆಲೆಯು ಇಳಿಕೆಯಾಗುವ ಕಾರಣ ಹೂಡಿಕೆ ಮಾಡುವವರೂ ಹೆಚ್ಚಿನ ಪ್ರಮಾಣದ ಚಿನ್ನವನ್ನು ಖರೀದಿಸಬಹುದಾಗಿದೆ.

ಚಿನ್ನದ ಬೆಲೆಯನ್ನು ಜಾಗತಿಕ ಆರ್ಥಿಕ ಪರಿಸ್ಥಿತಿಗಳು, ಜಾಗತಿಕ ರಾಜಕೀಯ ಬೆಳವಣಿಗೆಗಳು, ಹೂಡಿಕೆದಾರರ ಮನಸ್ಥಿತಿ ಸೇರಿ ಹಲವು ಅಂಶಗಳ ಮೇಲೆ ನಿರ್ಧರಿಸಲಾಗುತ್ತದೆ. ಇದರಿಂದಾಗಿ, ಬಹುತೇಕ ಸಂದರ್ಭದಲ್ಲಿ ಚಿನ್ನದ ಬೆಲೆಯು ಏರಿಕೆಯೇ ಆಗುತ್ತದೆ. ಹಾಗಾಗಿ, ಚಿನ್ನದ ಬೆಲೆಯು ಕಡಿಮೆಯಾದಾಗಲೇ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿದರೆ, ಅದು ಹೂಡಿಕೆಯ ದೃಷ್ಟಿಯಿಂದ ಉತ್ತಮ ನಿರ್ಧಾರವಾಗುತ್ತದೆ. ಆದರೆ, ಇರುವ ಹಣವನ್ನೆಲ್ಲ ಚಿನ್ನದ ಮೇಲೆಯೇ ಹೂಡಿಕೆ ಮಾಡುವುದು ಅಪಾಯಕಾರಿ ಎಂಬುದು ತಜ್ಞರ ಅಭಿಪ್ರಾಯವಾಗಿದೆ.

“ಚಿನ್ನದ ಮೇಲಿನ ಮೂಲ ಕಸ್ಟಮ್ಸ್‌ ಸುಂಕವನ್ನು ಇಳಿಕೆ ಮಾಡಿರುವುದು ಖರೀದಿ ಜತೆಗೆ ದೇಶೀಯ ಚಿನ್ನದ ಉದ್ಯಮದಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡಲಿದೆ. ಇದರಿಂದಾಗಿ ಚಿನ್ನದ ಮೇಲಿನ ಒಟ್ಟು ಶೇ.18.5ರಷ್ಟು ತೆರಿಗೆಯು ಶೇ.9ಕ್ಕೆ (ಜಿಎಸ್‌ಟಿ ಸೇರಿ) ಇಳಿಯಲಿದೆ. ಇದರಿಂದ ಖರೀದಿ ಹಾಗೂ ಹೂಡಿಕೆ ಮಾಡಲು ಉತ್ತಮ ಸಮಯವಾಗಿದೆ” ಎಂದು ವರ್ಲ್ಡ್‌ ಗೋಲ್ಡ್‌ ಕೌನ್ಸಿಲ್‌ ರೀಜನಲ್‌ ಸಿಇಒ ಸಚಿನ್‌ ಜೈನ್‌ ಅವರು ನ್ಯೂಸ್‌ 18 ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಹೂಡಿಕೆ ಮಾಡುವವರಿಗೆ ತೆರಿಗೆ ಬಗ್ಗೆಯೂ ಗಮನ ಇರಲಿ

ಚಿನ್ನದ ಬೆಲೆ ಇಳಿಕೆಯಾಗಿದೆ ಎಂದು ಹೆಚ್ಚಾಗಿ ಚಿನ್ನವನ್ನು ಖರೀದಿಸುವ ಮುನ್ನ ಕ್ಯಾಪಿಟಲ್‌ ಗೇನ್‌ (Capital Gain) ಬಗ್ಗೆಯೂ ಗಮನ ಹರಿಸಬೇಕು. ಕೇಂದ್ರ ಸರ್ಕಾರವು ಬಜೆಟ್‌ನಲ್ಲಿ ಕ್ಯಾಪಿಟಲ್‌ ಗೇನ್‌ ಅಂದರೆ, ಹೂಡಿಕೆ ಮೇಲಿನ ತೆರಿಗೆಯನ್ನು ಏರಿಕೆ ಮಾಡಿರುವುದರಿಂದ ಚಿನ್ನದ ಮೇಲೆ ಹೆಚ್ಚು ಹೂಡಿಕೆ ಮಾಡಿ, ಬಳಿಕ ಚಿನ್ನವನ್ನು ಮಾರಾಟ ಮಾಡಲು ಮುಂದಾದರೆ, ತೆರಿಗೆ ಹೊಡೆತ ಬೀಳುತ್ತದೆ ಎಂಬುದು ಹೂಡಿಕೆದಾರರು ಗಮನಿಸಬೇಕಾದ ಪ್ರಮುಖ ಸಂಗತಿಯಾಗಿದೆ.

ನೀವು ಚಿನ್ನವನ್ನು ಖರೀದಿಸಿ, ಅದನ್ನು 2 ವರ್ಷದ ಬಳಿಕ ಮಾರಾಟ ಮಾಡಿದರೆ, ನಿಮಗೆ ನಿಗದಿಯಂತೆ ಆದಾಯ ತೆರಿಗೆ ಸ್ಲ್ಯಾಬ್‌ ರೇಟ್‌ ಪ್ರಕಾರ ತೆರಿಗೆಯನ್ನು ವಿಧಿಸಲಾಗುತ್ತದೆ. ಆದರೆ, ನೀವು ಖರೀದಿಸಿದ ಚಿನ್ನವನ್ನು 24 ತಿಂಗಳ ಬಳಿಕ ಮಾರಾಟ ಮಾಡಿದರೆ, ನೀವು ದೀರ್ಘಾವಧಿ ಹೂಡಿಕೆ ಕ್ಯಾಪಿಟಲ್‌ ಗೇನ್ಸ್‌ ವ್ಯಾಪ್ತಿಗೆ ಬಂದು, ಮಾರಾಟ ಮಾಡಿದ ಬಳಿಕ ಆಗುವ ಕ್ಯಾಪಿಟಲ್‌ ಗೇನ್‌ನಲ್ಲಿ ಶೇ.12.5ರಷ್ಟು ತೆರಿಗೆ ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Union Budget 2024: ಹಳೇ ತೆರಿಗೆ Vs ಹೊಸ ತೆರಿಗೆ; ಯಾರಿಗೆ ಯಾವುದು ಅನುಕೂಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Continue Reading

ಸಿನಿಮಾ

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Salman Khan: ಮುಂಬೈ ಕ್ರೈಂ ಬ್ರ್ಯಾಂಚ್‌ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್‌, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್‌ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು.

VISTARANEWS.COM


on

Salman Khan
Koo

ಮುಂಬೈ: ಕಳೆದ ಕೆಲವು ವರ್ಷಗಳಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌(Lawrence Bishnoi gang)ನಿಂದ ನಿರಂತರ ಜೀವ ಬೆದರಿಕೆ(Life threats) ಕರೆ ಬರುತ್ತಿವೆ ಎಂದು ಬಾಲಿವುಡ್‌ ನಟ ಸಲ್ಮಾನ್‌ ಖಾನ್‌(Salman Khan) ಹೇಳಿದ್ದಾರೆ. ಕೆಲವು ತಿಂಗಳ ಹಿಂದೆ ತಮ್ಮ ಮನೆ ಮೇಲೆ ನಡೆದ ದಾಳಿ ಬಗ್ಗೆ ಇದೀಗ ಮಾತನಾಡಿರುವ ಸಲ್ಲು, ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ನನ್ನನ್ನು ಕೊಲ್ಲಲು ಸಕಲ ಪ್ರಯತ್ನವನ್ನೂ ನಡೆಸುಲ್ಲೇ ಇದೆ. ಗುಂಡಿನ ದಾಳಿ ಬಳಿ ನನ್ನ ಕುಟುಂಬಸ್ಥರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಮುಂಬೈ ಕ್ರೈಂ ಬ್ರ್ಯಾಂಚ್‌ಗೆ ವಿಚಾರಣೆ ವೇಳೆ ಮಾಹಿತಿ ನೀಡಿದ ಸಲ್ಮಾನ್‌, ಅಂದು ನನಗೆ ಪಟಾಕಿಯಂತಹ ಸದ್ದು ಕೇಳಿಸಿತ್ತು. ಸುಮಾರು ಬೆಳಗ್ಗೆ 4.55 ಗಂಟೆ ಹೊತ್ತಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನ ಬಾಲ್ಕನಿಯನ್ನು ಗುರಿಯಾಗಿಸಿ ಗುಂಡಿನ ದಾಳಿ ನಡೆಸಿದ್ದರು. ನನ್ನನ್ನು ಮತ್ತು ನನ್ನ ಕುಟುಂಬಸ್ಥರನ್ನು ಗುರಿಯಾಗಿಸಿ ಆ ದಾಳಿ ನಡೆದಿತ್ತು. ಲಾರೆನ್ಸ್‌ ಬಿಷ್ಣೋಯಿ ಈ ಕೃತ್ಯದ ಹೊಣೆ ಹೊತ್ತುಕೊಂಡಿರುವ ಬಗ್ಗೆ ಮಾಧ್ಯಮಗಳ ಮೂಲಕ ಮಾಹಿತಿ ಸಿಕ್ಕಿತ್ತು.

ಈ ಹಿಂದೆ ಕೂಡ ಸಂದರ್ಶನವೊಂದರಲ್ಲಿ ಲಾರೆನ್ಸ್ ಬಿಷ್ಣೋಯ್ ಮತ್ತು ಅವರ ಗ್ಯಾಂಗ್ ಸದಸ್ಯರು ನನ್ನನ್ನು ಮತ್ತು ನನ್ನ ಸಂಬಂಧಿಕರನ್ನು ಕೊಲ್ಲುವ ಬಗ್ಗೆ ಮಾತನಾಡಿದ್ದ. ಹಾಗಾಗಿ, ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್ ಸದಸ್ಯರ ಸಹಾಯದಿಂದ ನನ್ನ ಕುಟುಂಬ ಸದಸ್ಯರು ಒಳಗೆ ಮಲಗಿದ್ದಾಗ ಗುಂಡಿನ ದಾಳಿ ನಡೆಸಿ ನನ್ನನ್ನು ಮತ್ತು ನನ್ನ ಕುಟುಂಬ ಸದಸ್ಯರನ್ನು ಕೊಲ್ಲಲು ಯೋಜಿಸಿ ದಾಳಿ ನಡೆಸಿದ್ದಾನೆ ಎಂದು ನಾನು ನಂಬುತ್ತೇನೆ ಎಂದಿದ್ದಾರೆ.

ಏನಿದು ಪ್ರಕರಣ?

ಎಪ್ರಿಲ್‌ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡಿನ ದಾಳಿ ನಡೆದಿತ್ತು. ಬೈಕ್‌ನಲ್ಲಿ ಬಂದು ದಾಳಿ ನಡೆಸಿದ್ದ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕ್ಕಿ ಗುಪ್ತಾ ಎಂಬ ಇಬ್ಬರು ದುಷ್ಕರ್ಮಿಗಳನ್ನು ಬಳಿಕ ಅರೆಸ್ಟ್‌ ಮಾಡಲಾಗಿತ್ತು. ಮುಂಬೈ ಪೊಲೀಸರು ಜೈಲಿನಲ್ಲಿರುವ ಗ್ಯಾಂಗ್​ಸ್ಟರ್ ಲಾರೆನ್ಸ್ ಬಿಷ್ಣೋಯ್ ಮತ್ತು ಅವನ ಕಿರಿಯ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಈ ಪ್ರಕರಣದ ಪ್ರಮುಖ ಆರೋಪಿಗಳು ಎಂದು ಘೋಷಿಸಿದ್ದರು.

ಈ ಮಧ್ಯೆ ಗುಂಡಿನ ದಾಳಿ ನಡೆಸಿದ್ದ ಶೂಟರ್‌ಗಳಿಗೆ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪ ಎದುರಿಸುತ್ತಿದ್ದ ಅನೂಜ್‌ ಥಾಪನ್‌ ಕೆಲವು ದಿನಗಳ ಹಿಂದೆ ಪೊಲೀಸ್‌ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆತ ಕೊನೆಯುಸಿರೆಳೆದಿದ್ದ. ಅನುಜ್ ಥಾಪನ್ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದ ಆತನ ಕುಟುಂಬ ಇದರ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿತ್ತು. ಲಾಕಪ್‌ನಲ್ಲಿ ಥಾಪನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರೆ ಆತನ ತಾಯಿ ಇದು ಕೊಲೆ ಎಂದು ಆರೋಪಿಸಿದ್ದರು.

ಕಾರಣವೇನು?

ಹಲವು ವರ್ಷಗಳ ಹಿಂದಿನ ಕೃಷ್ಣಮೃಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಮಾನ್‌ ಅವರನ್ನು ಕೊಲ್ಲುವುದಾಗಿ 2018 ರಲ್ಲಿ ಬೆದರಿಕೆ ಹಾಕಿದ ನಂತರ ಬಿಷ್ಣೋಯ್ ಅವರ ಸಹಾಯಕರಲ್ಲಿ ಒಬ್ಬನನ್ನು ಬಂಧಿಸಲಾಯಿತು. ಜೋಧಪುರ್​ನ ಬಿಷ್ಣೋಯ್​ಗಳು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಹೀಗಾಗಿ ಕೃಷ್ಣಮೃಗ ಕೊಲ್ಲುವುದನ್ನು ಬಿಷ್ಣೋಯ್​ಗಳು ಎಂದಿಗೂ ಸಹಿಸುವುದಿಲ್ಲ. ಈ ಕಾರಣಕ್ಕೆ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ. ಎಬಿಪಿ ನ್ಯೂಸ್‌ಗೆ ನೀಡಿದ ಇತ್ತೀಚಿನ ಸಂದರ್ಶನದಲ್ಲಿ, ʻʻಸಲ್ಮಾನ್ ಖಾನ್ ಅವರನ್ನು ಕೊಲ್ಲುವುದು ನನ್ನ ಜೀವನದ ಗುರಿ. ಸಲ್ಮಾನ್‌ ಅವರು ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ವಿಷಯ ಕೊನೆಗೊಳ್ಳುತ್ತದೆʼʼ ಎಂದು ಹೇಳಿದ್ದ.

ಇದನ್ನೂ ಓದಿ: Rahul Gandhi: ರಾಹುಲ್‌ ಗಾಂಧಿಯನ್ನು ಭೇಟಿಯಾದ ರೈತರು; ಆ.15ರಂದು ದೇಶಾದ್ಯಂತ ರ‍್ಯಾಲಿಗೆ ನಿರ್ಧಾರ!

Continue Reading

ಬಜೆಟ್ 2024

Union Budget 2024: ಹಳೇ ತೆರಿಗೆ Vs ಹೊಸ ತೆರಿಗೆ; ಯಾರಿಗೆ ಯಾವುದು ಅನುಕೂಲ? ಇಲ್ಲಿದೆ ಕಂಪ್ಲೀಟ್ ಮಾಹಿತಿ

Union Budget 2024: ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಂಡವರ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಏರಿಕೆ, ಸ್ಲ್ಯಾಬ್‌ಗಳ ಸ್ಟ್ರಕ್ಚರ್‌ ಬದಲಿಸಿದ ಕಾರಣ ಬಹುತೇಕ ಜನ ಹೊಸ ತೆರಿಗೆ ಪದ್ಧತಿಯೇ ಹೆಚ್ಚು ಅನುಕೂಲ ಎಂಬುದಾಗಿ ಭಾವಿಸಿದ್ದಾರೆ. ಆದರೆ, ಹೆಚ್ಚು ಸಂಬಳ ಇರುವವರಿಗೆ ಹಳೆಯ ತೆರಿಗೆ ಪದ್ಧತಿಯೇ ಹೆಚ್ಚು ಲಾಭದಾಯಕವಾಗಿದೆ. ಯಾರಿಗೆ ಯಾವ ತೆರಿಗೆ ಪದ್ಧತಿ ಹೆಚ್ಚು ಅನುಕೂಲ ಎಂಬುದರ ಮಾಹಿತಿ ಹೀಗಿದೆ…

VISTARANEWS.COM


on

Union Budget 2024
Koo

ನವದೆಹಲಿ: ಉದ್ಯೋಗಿಗಳಿಗೆ, ತೆರಿಗೆ ಪಾವತಿದಾರರಿಗೆ ಅನುಕೂಲವಾಗುವ ದಿಸೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ನಲ್ಲಿ (Union Budget 2024) ಹಲವು ಕ್ರಮಗಳನ್ನು ಘೋಷಣೆ ಮಾಡಿದ್ದಾರೆ.‌ ಅದರಲ್ಲೂ, ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಏರಿಕೆ, ಹೊಸ ತೆರಿಗೆ ಪದ್ಧತಿಯ ಸ್ಲ್ಯಾಬ್‌ಗಳ ಬದಲಾವಣೆ ಮಾಡಿದ ಕಾರಣ ಹೊಸ ತೆರಿಗೆ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಒಳಿತು ಎಂದು ಹೇಳಲಾಗುತ್ತಿದೆ. ಹಾಗಂತ, ಹಳೆಯ ತೆರಿಗೆ ಪದ್ಧತಿಯನ್ನು ಅಳವಡಿಸಿಕೊಳ್ಳುವವರಿಗೆ ನಷ್ಟ ಎಂದಲ್ಲ. ಹೆಚ್ಚಿನ ಸಂಬಳ ಪಡೆಯುವವರಿಗೆ ಹಳೆಯ ತೆರಿಗೆ ಪದ್ಧತಿಯು ತೆರಿಗೆ ಉಳಿಸುತ್ತದೆ. ಹಾಗಾದರೆ, ಎಷ್ಟು ಸಂಬಳ ಇರುವವರು ಯಾವ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ? ಇಲ್ಲಿದೆ ಮಾಹಿತಿ.

ಹೊಸ ತೆರಿಗೆ ಪದ್ಧತಿ ಯಾರಿಗೆ ಅನುಕೂಲ?

ಸ್ಟಾಂಡರ್ಡ್‌ ಡಿಡಕ್ಷನ್‌ ಎಂಬುದು ತೆರಿಗೆ ವಿನಾಯಿತಿ ಆಗಿದ್ದು, ಇದಕ್ಕಾಗಿ ನೌಕರರು ಹೂಡಿಕೆ ಮಾಡಬೇಕಿಲ್ಲ. ತೆರಿಗೆ ಪಾವತಿಸಲು ಅರ್ಹವಿರುವವರು ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತದ ಅಡಿಯಲ್ಲಿ ವಿನಾಯಿತಿ ಪಡೆಯಲಿದ್ದಾರೆ. ಈ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು ಕೇಂದ್ರ ಸರ್ಕಾರವೀಗ ಸ್ಟಾಂಡರ್ಡ್‌ ಡಿಡಕ್ಷನ್‌ ಮೊತ್ತವನ್ನು 50 ಸಾವಿರ ರೂ.ನಿಂದ 75 ಸಾವಿರ ರೂ.ಗೆ ಏರಿಕೆ ಮಾಡಿರುವುದರಿಂದ, ಹೊಸ ತೆರಿಗೆಯ ಸ್ಲ್ಯಾಬ್‌ಗಳ ಸ್ಟ್ರಕ್ಚರ್‌ ಬದಲಾವಣೆ ಮಾಡಿರುವುದರಿಂದ 6-7 ಲಕ್ಷ ರೂ. ಆದಾಯ ಗಳಿಸುವವರು ಶೇ.10ರಷ್ಟು ಬದಲು ಶೇ.5ರಷ್ಟು ತೆರಿಗೆ ಪಾವತಿಸುತ್ತಾರೆ. ಇನ್ನು, 9-10 ಲಕ್ಷ ರೂ. ಆದಾಯ ಗಳಿಸುವವರು ಶೇ.15ರ ಬದಲು ಶೇ.10ರಷ್ಟು ತೆರಿಗೆ ಪಾವತಿಸಲಿದ್ದಾರೆ.

Viral Video
ITR Filing

ವರ್ಷಕ್ಕೆ ಸುಮಾರು 7.75 ಲಕ್ಷ ರೂ.ವರೆಗೆ ಸಂಬಳ ಪಡೆಯುವವರು ಇನ್ನು ಮುಂದೆ ಯಾವುದೇ ತೆರಿಗೆ ಪಾವತಿ ಮಾಡಬೇಕಿಲ್ಲ. ಅವರು ಶೂನ್ಯ ತೆರಿಗೆ ವ್ಯಾಪ್ತಿಯಲ್ಲೇ ಬರಲಿದ್ದಾರೆ. ಹಾಗಾಗಿ, ಮಧ್ಯಮ ವರ್ಗದವರಿಗೆ ಹೊಸ ತೆರಿಗೆ ಪದ್ಧತಿಯು ಹೆಚ್ಚು ಅನುಕೂಲಕರವಾಗಿದೆ.

ಹಳೆಯ ತೆರಿಗೆ ಪದ್ಧತಿಯಿಂದ ಯಾರಿಗೆ ಲಾಭ?

8 ಲಕ್ಷ ರೂಪಾಯಿಗಿಂತ ಹೆಚ್ಚು ವಾರ್ಷಿಕ ಸಂಬಳ ಪಡೆಯುವವರಿಗೆ ಹಳೆಯ ತೆರಿಗೆ ಪದ್ಧತಿಯು ಹೆಚ್ಚು ಲಾಭದಾಯಕವಾಗಲಿದೆ. ಸುಮಾರು 11 ಲಕ್ಷ ರೂ. ವಾರ್ಷಿಕ ಆದಾಯ ಪಡೆಯುವವರು, ಹಳೆಯ ತೆರಿಗೆ ಪದ್ಧತಿ ಅನ್ವಯ ಸ್ಟಾಂಡರ್ಡ್‌ ಡಿಡಕ್ಷನ್‌, 2 ಲಕ್ಷ ರೂ.ವರೆಗಿನ ಗೃಹ ಸಾಲ, ಮನೆ ಬಾಡಿಗೆ (HRA) ಮೊತ್ತವನ್ನು ಡಿಡಕ್ಷನ್‌ ಮಾಡಿಕೊಂಡರೆ, ಹಳೆಯ ತೆರಿಗೆ ಪದ್ಧತಿಯು ಹೆಚ್ಚು ಅನುಕೂಲವಾಗಲಿದೆ.

ITR Filing
ITR Filing

ಇನ್ನು, ಗಂಡ-ಹೆಂಡತಿ ಇಬ್ಬರೂ 11 ಲಕ್ಷ ರೂ. ಆದಾಯ ಹೊಂದಿದ್ದರಂತೂ, ಹೆಚ್ಚಿನ ಲಾಭ ಪಡೆಯಲಿದ್ದಾರೆ ಎಂದು ತಜ್ಞರು ತಿಳಿಸಿದ್ದಾರೆ. ಅಷ್ಟೇ ಅಲ್ಲ, 11 ಲಕ್ಷ ರೂ.ನಿಂದ 60 ಲಕ್ಷ ರೂ.ವರೆಗೆ ಸಂಬಳ ಪಡೆಯುವವರು ಕೂಡ ಹಳೆಯ ತೆರಿಗೆ ಪದ್ಧತಿ ಅನ್ವಯ ಹೆಚ್ಚು ಹಣವನ್ನು ಉಳಿಸಬಹುದಾಗಿದೆ ಎಂಬುದಾಗಿ ಹಣಕಾಸು ತಜ್ಞರು ತಿಳಿಸಿದ್ದಾರೆ.

ಹಳೇ ತೆರಿಗೆ ಪದ್ಧತಿ ರದ್ದಾಗುತ್ತದೆಯೇ?

ಹೊಸ ತೆರಿಗೆ ಪದ್ಧತಿ ಅಳವಡಿಸಿಕೊಳ್ಳುವವರಿಗೆ ಹೆಚ್ಚಿನ ಉತ್ತೇಜನ ನೀಡುತ್ತಿರುವ ಕಾರಣ ಹಳೆಯ ತೆರಿಗೆ ಪದ್ಧತಿಯನ್ನು ಒಂದು ವರ್ಷದಲ್ಲಿ ರದ್ದುಗೊಳಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಇದನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಅಲ್ಲಗಳೆದಿದ್ದಾರೆ.

“ಹಳೆಯ ತೆರಿಗೆ ಪದ್ಧತಿಯನ್ನು ರದ್ದುಗೊಳಿಸುವ ಕುರಿತು ಇದುವರೆಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಏಕಾಏಕಿ ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕಲು ಕೂಡ ಆಗುವುದಿಲ್ಲ. ಹಳೆಯ ತೆರಿಗೆ ಪದ್ಧತಿಯನ್ನು ಇನ್ನಷ್ಟು ಸುಲಭಗೊಳಿಸುವ ದಿಸೆಯಲ್ಲಿ ಹೊಸ ತೆರಿಗೆ ಪದ್ಧತಿಯನ್ನು ಪರಿಚಯಿಸಲಾಗಿದೆ. ಆದರೆ, ಹಳೆಯ ತೆರಿಗೆ ಪದ್ಧತಿಯನ್ನು ತೆಗೆದುಹಾಕುವ ನಿರ್ಧಾರ ತೆಗೆದುಕೊಂಡಿಲ್ಲ” ಎಂದು ಬಜೆಟ್‌ ಮಂಡನೆ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: NPS Vatsalya Scheme: ಏನಿದು ಕೇಂದ್ರ ಬಜೆಟ್‌ನಲ್ಲಿ ಘೋಷಿಸಿರುವ ಎನ್‌ಪಿಎಸ್ ವಾತ್ಸಲ್ಯ ಯೋಜನೆ? ನಮ್ಮ ಮಕ್ಕಳಿಗೆ ಇದರಿಂದೇನು ಪ್ರಯೋಜನ?

Continue Reading

ದೇಶ

Worlds Most Powerful Passports: ಪಾಸ್‌ಪೋರ್ಟ್‌ ಸೂಚ್ಯಂಕದಲ್ಲಿ ಸಿಂಗಾಪುರ ನಂ.1; ಭಾರತಕ್ಕೆ ಎಷ್ಟನೇ ಸ್ಥಾನ?

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಂತಹ ಜನಪ್ರಿಯ ಸ್ಥಳಗಳು ಸೇರಿದಂತೆ 58 ದೇಶಗಳು ಭಾರತೀಯರಿಗೆ ವೀಸಾ ಮುಕ್ತ ಪ್ರವೇಶಕ್ಕೆ ಅನುಮತಿ ನೀಡುತ್ತದೆ. ಜಾಗತಿಕ ಪಾಸ್‌ಪೋರ್ಟ್ ಸೂಚ್ಯಂಕವು ಆಯಾ ದೇಶಗಳ ಪಾಸ್‌ಪೋರ್ಟ್‌ಗಳು ತಮ್ಮ ನಾಗರಿಕರಿಗೆ ಅನುಮತಿಸುವ ಪ್ರಯಾಣ ಸ್ವಾತಂತ್ರ್ಯದ ಪ್ರಕಾರ ಶ್ರೇಯಾಂಕವನ್ನು (World’s Most Powerful Passports) ನೀಡುತ್ತದೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

World's Most Powerful Passports
Koo

ವಾರ್ಷಿಕ ಜಾಗತಿಕ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ (Worlds Most Powerful Passports) ಭಾರತೀಯ ಪಾಸ್‌ಪೋರ್ಟ್ (indian Passports) 82ನೇ ಸ್ಥಾನದಲ್ಲಿದೆ. ಅಂತಾರಾಷ್ಟ್ರೀಯ ವಾಯುಯಾನ ಸಾರಿಗೆ ಅಸೋಸಿಯೇಷನ್ (International Air Transport Association) ಅಂಕಿ ಅಂಶಗಳನ್ನು ಆಧರಿಸಿ ಯುಕೆ ಮೂಲದ ಹೆನ್ಲಿ ಪಾಸ್‌ಪೋರ್ಟ್ ಇಂಡೆಕ್ಸ್‌ (UK-based Henley Passport Index) ಈ ಶ್ರೇಯಾಂಕವನ್ನು ನೀಡಿದೆ.

ಇಂಡೋನೇಷ್ಯಾ, ಮಲೇಷ್ಯಾ ಮತ್ತು ಥೈಲ್ಯಾಂಡ್‌ನಂತಹ ಜನಪ್ರಿಯ ಸ್ಥಳಗಳು ಸೇರಿದಂತೆ 58 ದೇಶಗಳು ಭಾರತೀಯರಿಗೆ ವೀಸಾ-ಮುಕ್ತ ಪ್ರವೇಶಕ್ಕೆ ಅನುಮತಿ ನೀಡುತ್ತದೆ. ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕವು ಆ ದೇಶಗಳ ಸಾಮಾನ್ಯ ಪಾಸ್‌ಪೋರ್ಟ್‌ಗಳು ತಮ್ಮ ನಾಗರಿಕರಿಗೆ ಅನುಮತಿಸುವ ಪ್ರಯಾಣ ಸ್ವಾತಂತ್ರ್ಯದ ಪ್ರಕಾರ ದೇಶಗಳ ಜಾಗತಿಕ ಶ್ರೇಯಾಂ ಕವಾಗಿದೆ.

ಅಗ್ರಸ್ಥಾನದಲ್ಲಿ ಸಿಂಗಾಪುರ

ಸಿಂಗಾಪುರವು ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ ಮುಂಚೂಣಿಯಲ್ಲಿದೆ. ಇತ್ತೀಚಿನ ಶ್ರೇಯಾಂಕದ ಪ್ರಕಾರ ವಿಶ್ವದ ಅತ್ಯಂತ ಶಕ್ತಿಶಾಲಿ ಪಾಸ್‌ಪೋರ್ಟ್ ಎಂಬ ಶೀರ್ಷಿಕೆಯನ್ನು ಇದು ಮತ್ತೆ ಪಡೆದುಕೊಂಡಿದೆ.

ಈ ದೇಶದ ನಾಗರಿಕರು ಈಗ ಪ್ರಪಂಚದಾದ್ಯಂತ 227ರಲ್ಲಿ 195 ಪ್ರಯಾಣದ ಸ್ಥಳಗಳಿಗೆ ವೀಸಾ-ಮುಕ್ತವಾಗಿ ಪ್ರವೇಶ ಪಡೆಯಬಹುದು. ಶ್ರೇಯಾಂಕದ ಪ್ರಕಾರ ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಸ್ಪೇನ್ ಜಂಟಿಯಾಗಿ ಎರಡನೇ ಸ್ಥಾನದಲ್ಲಿದೆ. ಇದು ಪ್ರತಿ 192 ಸ್ಥಳಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ಹೊಂದಿದೆ.

ಆಸ್ಟ್ರಿಯಾ, ಫಿನ್ಲೆಂಡ್, ಐರ್ಲೆಂಡ್, ಲಕ್ಸೆಂಬರ್ಗ್, ನೆದರ್ಲ್ಯಾಂಡ್ಸ್, ದಕ್ಷಿಣ ಕೊರಿಯಾ ಮತ್ತು ಸ್ವೀಡನ್ ಪೂರ್ವ ವೀಸಾ ಇಲ್ಲದೆಯೇ 191 ಸ್ಥಳಗಳಿಗೆ ಪ್ರವೇಶವನ್ನು ಹೊಂದಿರುವ ಏಳು ರಾಷ್ಟ್ರಗಳು ಶ್ರೇಯಾಂಕದಲ್ಲಿ 3 ನೇ ಸ್ಥಾನದಲ್ಲಿದೆ.

ಯುಕೆ, ಬೆಲ್ಜಿಯಂ, ಡೆನ್ಮಾರ್ಕ್, ನ್ಯೂಜಿಲೆಂಡ್, ನಾರ್ವೆ ಮತ್ತು ಸ್ವಿಟ್ಜರ್ಲೆಂಡ್ ಗೆ ವೀಸಾ ಮುಕ್ತ ಗಮ್ಯಸ್ಥಾನ ಪ್ರವೇಶ 190 ಕ್ಕೆ ಕುಸಿದಿದ್ದರೂ ಈ ರಾಷ್ಟ್ರಗಳು ಜಂಟಿಯಾಗಿ ನಾಲ್ಕನೇ ಸ್ಥಾನದಲ್ಲಿದೆ.


ಅಮೆರಿಕಕ್ಕೆ ದಶಕದಿಂದಲೂ 8ನೇ ಸ್ಥಾನ

ಇನ್ನು ಯುಎಸ್ ಈಗ 186 ಗಮ್ಯಸ್ಥಾನಗಳಿಗೆ ವೀಸಾ ಮುಕ್ತ ಪ್ರವೇಶ ಪಡೆಯಬಹುದು. ದಶಕದಿಂದಲೂ 8ನೇ ಸ್ಥಾನದಲ್ಲಿ ಯುಎಸ್ ಉಳಿದಿದೆ ಎಂದು ಸೂಚ್ಯಂಕ ಹೇಳಿದೆ.

ಅಂತಾರಾಷ್ಟ್ರೀಯ ವಾಯುಯಾನ ಸಾರಿಗೆ ಅಸೋಸಿಯೇಷನ್ ಪ್ರಕಾರ ಏರ್‌ಲೈನ್ಸ್ 2024ರಲ್ಲಿ ಈ ವರೆಗೆ ಸರಿಸುಮಾರು 39 ಮಿಲಿಯನ್ ವಿಮಾನಗಳು 22,000 ಮಾರ್ಗಗಳಲ್ಲಿ ಸುಮಾರು 5 ಶತಕೋಟಿ ಜನರನ್ನು ಒಂದೆಡೆಯಿಂದ ಇನ್ನೊಂದೆಡೆಗೆ ಸಾಗಿಸಿದೆ. ಏರ್ ಕಾರ್ಗೋ 62 ಮಿಲಿಯನ್ ಟನ್‌ ಸರಕುಗಳನ್ನು ಸಾಗಿಸಿದೆ. ಇದು ಒಟ್ಟು 8.3 ಟ್ರಿಲಿಯನ್ ಡಾಲರ್ ವಹಿವಾಟನ್ನು ನಡೆಸಿದೆ.

ಇದನ್ನೂ ಓದಿ: NEET: ಕರ್ನಾಟಕ ಬಳಿಕ ಪಶ್ಚಿಮ ಬಂಗಾಳದಲ್ಲೂ ನೀಟ್‌ ಪರೀಕ್ಷೆ ವಿರುದ್ಧ ನಿರ್ಣಯ; ಹೆಚ್ಚಾಯ್ತು ಆಕ್ರೋಶ

ನಮ್ಮ ಉದ್ಯಮವು ಈ ವರ್ಷ ಸುಮಾರು 1 ಟ್ರಿಲಿಯನ್ ಡಾಲರ್ ಆದಾಯವನ್ನು ದಾಖಲಿಸುವ ನಿರೀಕ್ಷೆಯಿದೆ. ಆದರೂ ವೆಚ್ಚಗಳು 936 ಶತಕೋಟಿ ಡಾಲರ್ ಆಗಿದ್ದು, ಏರಿಕೆಯಾಗುತ್ತಲೇ ಇದೆ. ನಿವ್ವಳ ಲಾಭವು 30.5 ಶತಕೋಟಿ ಡಾಲರ್ ಆಗಿದೆ. ಎಂದು ಅಂತಾರಾಷ್ಟ್ರೀಯ ವಾಯುಯಾನ ಸಾರಿಗೆ ಅಸೋಸಿಯೇಷನ್ ನ ಡೈರೆಕ್ಟರ್ ಜನರಲ್ ವಿಲ್ಲಿ ವಾಲ್ಶ್ ಹೇಳಿದ್ದಾರೆ.

2006ರಲ್ಲಿ ಈ ಸೂಚ್ಯಂಕ ಪ್ರಾರಂಭವಾದ ಬಳಿಕ ವೀಸಾ ಮುಕ್ತ ಪ್ರವೇಶ ಪಡೆಯಲು 185 ಪ್ರದೇಶಗಳಲ್ಲಿ 152 ಸ್ಥಳಗಳನ್ನು ಸೇರಿಸುವ ಮೂಲಕ ಯುಎಇ ಮೊದಲ ಬಾರಿಗೆ ಟಾಪ್ 10ರಲ್ಲಿ ಸ್ಥಾನ ಪಡೆದಿದೆ.

Continue Reading
Advertisement
Cat kidnaping Case
ಕರ್ನಾಟಕ7 mins ago

Cat Kidnaping Case: ಬೆಕ್ಕು ಅಪಹರಣ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನಿಂದ ಮಹತ್ವದ ತೀರ್ಪು

Bitcoin Scam
ಕರ್ನಾಟಕ12 mins ago

Bitcoin Scam: ಬಿಟ್‌‌ ಕಾಯಿನ್ ಹಗರಣ; ಆರೋಪಿಗಳಾದ ಶ್ರೀಕಿ, ಖಂಡೇಲ್ ವಾಲಾ ಜೈಲಿನಿಂದ ಬಿಡುಗಡೆ

No Makeup For Kids
ಲೈಫ್‌ಸ್ಟೈಲ್19 mins ago

No Makeup For Kids: ನಿಮ್ಮ ಮಕ್ಕಳ ಮೇಕಪ್‌ ಕ್ರೇಜ್‌ಗೆ NO ಹೇಳಿ!

Union Budget 2024
ದೇಶ42 mins ago

Union Budget 2024: ಬಜೆಟ್‌ನಲ್ಲಿ ಕಸ್ಟಮ್ಸ್‌ ಸುಂಕ ಇಳಿಕೆ; ಚಿನ್ನದ ಮೇಲಿನ ಹೂಡಿಕೆಗೆ ಇದು ಸಕಾಲವೇ? ತಜ್ಞರು ಹೇಳೋದಿಷ್ಟು

Salman Khan
ಸಿನಿಮಾ1 hour ago

Salman Khan: “ನನ್ನನ್ನು ಕೊಲ್ಲಲು ಬಿಷ್ಣೋಯಿ ಗ್ಯಾಂಗ್‌ ಯತ್ನಿಸುತ್ತಿದೆ”-ಗುಂಡಿನ ದಾಳಿ ಬಗ್ಗೆ ಸಲ್ಮಾನ್‌ ಖಾನ್‌ ಹೇಳಿಕೆ ದಾಖಲು

Viral Video
Latest1 hour ago

Viral Video: ದೆಹಲಿ ಬೀದಿಯಲ್ಲಿ ಈ ಹುಡುಗಿಯ ಪರೋಟಾ ತಿನ್ನಲು ಕ್ಯೂ! ವಿಡಿಯೊ ನೋಡಿ

Sandalwood Star Fashion
ಫ್ಯಾಷನ್1 hour ago

Sandalwood Star Fashion: ಮಾನ್ಸೂನ್‌ನಲ್ಲಿ ಮಾಲಾಶ್ರೀ ಮಗಳ ಗ್ಲಾಮರಸ್‌ ಫ್ಯಾಷನ್‌!

DK Shivakumar
ಕರ್ನಾಟಕ2 hours ago

DK Shivakumar: ನಮ್ಮ ಶಾಲೆಯಲ್ಲಿ ಮಗನಿಗೆ ಸೀಟು ಕೇಳಲು ದರ್ಶನ್‌ ಪತ್ನಿ ಬಂದಿದ್ರು: ಡಿಸಿಎಂ ಡಿಕೆಶಿ

Assembly Session 2024 Irrigation Amendment Bill Approval to protect the farmers of the last part of the canals
ಕರ್ನಾಟಕ2 hours ago

Assembly Session 2024: ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ಖಾತರಿ; ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

Anganwadi workers honorarium to be increased soon says Minister Lakshmi Hebbalkar
ಕರ್ನಾಟಕ2 hours ago

Assembly Session 2024: ಅಂಗನವಾಡಿ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಶೀಘ್ರವೇ ಗೌರವಧನ ಹೆಚ್ಚಳ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ13 hours ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ1 day ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ1 day ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ1 day ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ4 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ5 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ5 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ6 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ6 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

ಟ್ರೆಂಡಿಂಗ್‌