Gyanvapi Case: ಜ್ಞಾನವಾಪಿ ಮಸೀದಿಯ ಶಿವಲಿಂಗ ಕಾರ್ಬನ್ ಡೇಟಿಂಗ್ ಪರೀಕ್ಷೆ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ - Vistara News

ದೇಶ

Gyanvapi Case: ಜ್ಞಾನವಾಪಿ ಮಸೀದಿಯ ಶಿವಲಿಂಗ ಕಾರ್ಬನ್ ಡೇಟಿಂಗ್ ಪರೀಕ್ಷೆ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ

Gyanvapi Case: ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಇದೆ ಎನ್ನಲಾದ ಶಿವಲಿಂಗ ಕುರಿತು ವೈಜ್ಞಾನಿಕ ಸಮೀಕ್ಷೆ ನಡೆಸಬೇಕೆಂಬ ಕೋರಿಕೆಗೆ ಅಲಹಾಬಾದ್ ಹೈಕೋರ್ಟ್ ಸಮ್ಮತಿ ಸೂಚಿಸಿತ್ತು. ಈ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ನಲ್ಲಿ (Supreme Court) ಪ್ರಶ್ನಿಸಲಾಗಿತ್ತು.

VISTARANEWS.COM


on

Gyanvapi Mosque
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಉತ್ತರ ಪ್ರದೇಶದ ವಾರಾಣಸಿ ಜ್ಞಾನವಾಪಿ ಮಸೀದಿಯ (Gyanvapi Case) ಒಳಗಿರುವ ಶಿವಲಿಂಗದ (Shivalinga) ವೈಜ್ಞಾನಿಕ ಸಮೀಕ್ಷೆ(ಕಾರ್ಬನ್ ಡೇಟಿಂಗ್) ಕೈಗೊಳ್ಳಲು ಒಪ್ಪಿಗೆ ನೀಡಿದ್ದ ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ತಡೆ ಹಿಡಿದಿದೆ. ಈ ವಿಷಯದಲ್ಲಿ ನಾವು ಸೂಕ್ಷವಾಗಿ ಹೆಜ್ಜೆ ಇಡಬೇಕಾಗಿದೆ ಎಂದು ಸುಪ್ರೀಂ ಕೋರ್ಟ್ (Supreme Court) ಹೇಳಿದೆ.

ಕಳೆದ ವಾರ ಅಲಹಾಬಾದ್ ಹೈಕೋರ್ಟ್, ಮಸೀದಿಯ ಸಂಕೀರ್ಣದಲ್ಲಿರುವ ಶಿವಲಿಂಗ ಎಷ್ಟು ಹಳೆಯದು ಎಂಬುದನ್ನು ಪತ್ತೆ ಹಚ್ಚಲು ಕಾರ್ಬನ್ ಡೇಟಿಂಗ್ ಪರೀಕ್ಷೆಗೆ ಒಪ್ಪಿಗೆ ಸೂಚಿಸಿತ್ತು. ಹಿಂದೂಗಳು ಇದು ಶಿವಲಿಂಗ ಎಂದು ಹೇಳಿದರು, ಮುಸ್ಲಿಮರು ಅದೊಂದು ಕಾರಂಜಿಯ ಭಾಗವಾಗಿದೆ ಎಂದು ಹೇಳುತ್ತಿದ್ದಾರೆ. ಹೈಕೋರ್ಟ್‌ನ ಈ ನಿರ್ದೇಶನ ಪ್ರಶ್ನಿಸಿ ಜ್ಞಾನವಾಪಿ ಮಸೀದಿ ವ್ಯವಸ್ಥಾಪನಾ ಕಮಿಟಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿತ್ತು.

ಮಸೀದಿ ಸಮೀಕ್ಷೆಗೆ ಒಪ್ಪಿಗೆ ಸೂಚಿಸಿದ್ದ ವಾರಾಣಸಿ ಕೋರ್ಟ್

ಉತ್ತರ ಪ್ರದೇಶದ ಕಾಶಿ ವಿಶ್ವನಾಥ ದೇವಾಲಯದ ಬಳಿ ಇರುವ ಜ್ಞಾನವಾಪಿ (Gyanvapi Case) ಮಸೀದಿಯಲ್ಲಿ ಪತ್ತೆಯಾದ ಶಿವಲಿಂಗದ ವೈಜ್ಞಾನಿಕ ಪರೀಕ್ಷೆ (ಕಾರ್ಬನ್‌ ಡೇಟಿಂಗ್)‌ಗೆ ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ ನೀಡಿತ್ತು. ಆ ಬಳಿಕ, ಜ್ಞಾನವಾಪಿ ಮಸೀದಿಯ ಭೂ ವಿಸ್ತೀರ್ಣದ ಸಮೀಕ್ಷೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾದ ಅರ್ಜಿಯ ವಿಚಾರಣೆಗೆ ವಾರಾಣಸಿ ನ್ಯಾಯಾಲಯ ಸಮ್ಮತಿ ಸೂಚಿಸಿದೆ.

ಜ್ಞಾನವಾಪಿ ಮಸೀದಿಯ ಇಡೀ ಆವರಣದ ಸಮೀಕ್ಷೆ ನಡೆಸಲು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಗೆ (ASI) ನಿರ್ದೇಶನ ನೀಡಬೇಕು ಎಂದು ನಾಲ್ವರು ಹಿಂದು ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಹಾಗೆಯೇ, ಯಾವುದೇ ಆಕ್ಷೇಪಣೆಗಳು ಇದ್ದರೆ ಮೇ 19ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಹಾಗೂ ಮಸೀದಿ ಉಸ್ತುವಾರಿ ವಹಿಸಿಕೊಂಡಿರುವ ಅಂಜುಮನ್‌ ಇಂತೇಜಾಮಿಯಾಗೆ ಸೂಚಿಸಿದೆ. ಮೇ 22ರಂದು ವಿಚಾರಣೆ ನಡೆಸುವುದಾಗಿಯೂ ತಿಳಿಸಿದೆ.

ಈಗಾಗಲೇ ಜ್ಞಾನವಾಪಿ ಮಸೀದಿಯ ವಿಡಿಯೊ ಸಮೀಕ್ಷೆ ಮುಗಿದಿದೆ. ಇದೇ ವೇಳೆ, ಮಸೀದಿ ಆವರಣದಲ್ಲಿರುವ ಬಾವಿಯಲ್ಲಿ ಶಿವಲಿಂಗ ಪತ್ತೆಯಾಗಿದೆ. ಶಿವಲಿಂಗದ ಕಾಲಾವಧಿ ಪತ್ತೆಗಾಗಿ ಕಾರ್ಬನ್‌ ಡೇಟಿಂಗ್‌ ಪರೀಕ್ಷೆ ನಡೆಸಲು ಅಲಹಾಬಾದ್‌ ಹೈಕೋರ್ಟ್‌ ಈಗಾಗಲೇ ನಿರ್ದೇಶಿಸಿದೆ. ಇದರ ಬೆನ್ನಲ್ಲೇ, ವಾರಾಣಸಿ ನ್ಯಾಯಾಲಯವು ಹಿಂದುಗಳ ಅರ್ಜಿಯ ವಿಚಾರಣೆಗೆ ಸಮ್ಮತಿ ಸೂಚಿಸಿದೆ.

ಇದನ್ನೂ ಓದಿ: Gyanvapi Case | ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕ ಶಿವಲಿಂಗದ ರಕ್ಷಣೆ ಮುಂದುವರಿಸಲು ಸುಪ್ರೀಂ ಆದೇಶ

ವಿಡಿಯೊ ಸರ್ವೇ ವೇಳೆ ಪತ್ತೆಯಾದ ಶಿವಲಿಂಗಕ್ಕೆ ಯಾವುದೇ ಹಾನಿಯಾಗದಂತೆ ವೈಜ್ಞಾನಿಕ ಪರೀಕ್ಷೆ ನಡೆಸಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ನಿರ್ದೇಶನ ನೀಡಿದೆ. ಜ್ಞಾನವಾಪಿ ಮಸೀದಿಯು ದೇವಾಲಯಕ್ಕೆ ಅಂಟಿಕೊಂಡಂತಿರುವ ಕಾರಣ, ಅದು ಮೊದಲು ದೇವಾಲಯವೇ ಆಗಿತ್ತು. ದೇವಾಲಯ ಕೆಡವಿ ಮಸೀದಿ ನಿರ್ಮಿಸಲಾಗಿದೆ. ಹಾಗಾಗಿ, ಇಡೀ ಮಸೀದಿಯ ಸಮೀಕ್ಷೆಯಾಗಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

ದೇಶದ ಇನ್ನಷ್ಟು ಕುತೂಹಲಕರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ; ಈತನನ್ನು ಹಿಡಿದುಕೊಟ್ಟವರಿಗಿತ್ತು 5 ಲಕ್ಷ ಬಹುಮಾನ!

ಪ್ರವೀಣ್ ನೆಟ್ಟಾರು (Praveen Nettaru) ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫನಿಗಾಗಿ ಎನ್‌ಐಎ ವರ್ಷಗಳಿಂದ ಹುಡುಕುತ್ತಿತ್ತು. ಸುಳ್ಯದ ಶಾಂತಿನಗರ ನಿವಾಸಿಯಾದ ಮುಸ್ತಾಫ ಪ್ರಕರಣದ A4 ಆಗಿದ್ದಾನೆ. ಮುಸ್ತಾಫನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

VISTARANEWS.COM


on

mustafa paichar praveen nettar ಪ್ರವೀಣ್‌ ನೆಟ್ಟಾರು
Koo

ಹಾಸನ: ಬಿಜೆಪಿ ಕಾರ್ಯಕರ್ತ, ದಕ್ಷಿಣ ಕನ್ನಡದ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ (Praveen Nettaru murder Case) ಪ್ರಕರಣದಲ್ಲಿ ಮೂವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಹಾಸನ ಜಿಲ್ಲೆಯಲ್ಲಿ (Hassan news) ಎನ್‌ಐಎ ಮೂವರನ್ನು ವಶಕ್ಕೆ ಪಡೆದುಕೊಂಡಿದೆ. ಸುಳ್ಯ ಮೂಲದ ಮುಸ್ತಾಫ ಪೈಚಾರ್, ಸೋಮವಾರಪೇಟೆ ಮೂಲದ ಇಲಿಯಾಸ್ ಹಾಗೂ ಸಿರಾಜ್‌ ಬಂಧಿತರು. ಇವರಲ್ಲಿ ಮುಸ್ತಾಫನನ್ನು ಹಿಡಿದುಕೊಟ್ಟವರಿಗೆ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು.

ಸಕಲೇಶಪುರ ತಾಲ್ಲೂಕಿನ ಆನೆಮಹಲ್‌ ಎಂಬಲ್ಲಿ ಆರೋಪಿಗಳನ್ನು ಎನ್‌ಐಎ ವಶಕ್ಕೆ ಪಡೆದಿದೆ. ಆನೆಮಹಲ್‌ನ ಸಿರಾಜ್ ಎಂಬವರ ಬಳಿ ಮುಸ್ತಾಫ ಪೈಚಾರ್ ಹಾಗೂ ಇಲಿಯಾಸ್ ಕೆಲಸಕ್ಕೆ ಸೇರಿದ್ದರು. ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪದಲ್ಲಿ ಸಿರಾಜ್‌ನನ್ನೂ ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ನಾಲ್ಕನೇ ಆರೋಪಿಯಾಗಿದ್ದ ಮುಸ್ತಾಫನಿಗಾಗಿ ಎನ್‌ಐಎ ವರ್ಷಗಳಿಂದ ಹುಡುಕುತ್ತಿತ್ತು. ಸುಳ್ಯದ ಶಾಂತಿನಗರ ನಿವಾಸಿಯಾದ ಮುಸ್ತಾಫ ಪ್ರಕರಣದ A4 ಆಗಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಡಗಿದ್ದ ಆರೋಪಿಯನ್ನು NIA ಇನ್‌ಸ್ಪೆಕ್ಟರ್ ಷಣ್ಮುಗಂ ನೇತೃತ್ವದ ತಂಡ ಬಂಧಿಸಿದೆ. ಆರೋಪಿಯನ್ನು ತನಿಖೆಗಾಗಿ ಬೆಂಗಳೂರು ಎನ್ಐಎ ಕಚೇರಿಯತ್ತ ಕೊಂಡೊಯ್ಯಲಾಗಿದೆ.

ಏನಿದು ಪ್ರಕರಣ?

Praveen Nettaru

ಬೆಳ್ಳಾರೆ ಪರಿಸರದಲ್ಲಿ ಹಿಂದೂ ಸಂಘಟನೆಯ ಸಕ್ರಿಯ ನಾಯಕರಾಗಿ ಗಮನ ಸೆಳೆದಿದ್ದ ಪ್ರವೀಣ್‌ ನೆಟ್ಟಾರು ಅವರನ್ನು 2022ರ ಜುಲೈ 26ರಂದು ಮೂವರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಕೊಲೆ ಮಾಡಿ ಪರಾರಿಯಾಗಿದ್ದರು. ಕೊಲೆ ಸಂಬಂಧ ಪಿಎಫ್‌ಐ ಸಂಘಟನೆ ಜತೆ ಸಂಪರ್ಕ ಹೊಂದಿದ್ದಾರೆನ್ನಲಾದ 10ಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ಈ ನಡುವೆ, ಹಿಂದೂ ಕಾರ್ಯಕರ್ತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲ ಎಂದು ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಚಾರ್ಜ್‌ಶೀಟ್‌ ಸಲ್ಲಿಕೆ

ಒಟ್ಟು 20 ಆರೋಪಿಗಳ ವಿರುದ್ಧ ಬೆಂಗಳೂರಿನ ಎನ್​ಐಎ ವಿಶೇಷ ನ್ಯಾಯಾಲಯದಲ್ಲಿ ಸುಮಾರು 1500 ಪುಟಗಳ ಚಾರ್ಜ್​ಶೀಟ್​ ಈ ಹಿಂದೆ ಎನ್‌ಐಎ ಸಲ್ಲಿಸಿತ್ತು. ‘ಸಮಾಜದಲ್ಲಿ-ಜನರಲ್ಲಿ ಭಯ ಹುಟ್ಟಿಸುವ ಸಲುವಾಗಿ ಪ್ರವೀಣ್​ ನೆಟ್ಟಾರು ಅವರನ್ನು ಪಿಎಫ್​ಐ ಹತ್ಯೆ ಮಾಡಿದೆ. ಭಯೋತ್ಪಾದನೆ, ಕೋಮು ದ್ವೇಷ ಮತ್ತು ಅಶಾಂತಿ ಸೃಷ್ಟಿಸುವುದು ಆ ಸಂಘಟನೆ ಮುಖಂಡರ ಪ್ರಮುಖ ಉದ್ದೇಶ. 2047ರ ಹೊತ್ತಿಗೆ ಇಸ್ಲಾಮಿಕ್​ ಆಳ್ವಿಕೆ ಸ್ಥಾಪಿಸುವ ನಿಟ್ಟಿನಲ್ಲಿ ಪಿಎಫ್​ಐ ಕಾರ್ಯಕರ್ತರು ಕಾರ್ಯಾಚರಣೆ ನಡೆಸುತ್ತಿದ್ದರು. ವಿವಿಧ ಹಿಂದು ಮುಖಂಡರ ಹತ್ಯೆಗಳನ್ನು ನಡೆಸಲು ಸೇವಾ ತಂಡಗಳು, ಕಿಲ್ಲರ್​ ಸ್ಕ್ವಾಡ್​​ಗಳು ಎಂಬ ರಹಸ್ಯ ತಂಡಗಳನ್ನು ಪಿಎಫ್​ಐ ರಚನೆ ಮಾಡಿಕೊಂಡಿತ್ತು. ಒಬ್ಬ ವ್ಯಕ್ತಿಯನ್ನು ಟಾರ್ಗೆಟ್​ ಮಾಡಿ, ಆತನನ್ನು ಕೊಲ್ಲಲು ಯೋಜನೆ ರೂಪಿಸುತ್ತಿದ್ದರು. ಅದಕ್ಕಾಗಿ ಸದಸ್ಯರಿಗೆ ತರಬೇತಿ ನೀಡುತ್ತಿದ್ದರು. ಬಳಿಕ ಆಯಾ ಜಿಲ್ಲಾ ಮುಖ್ಯಸ್ಥನಿಗೆ ಸೂಚನೆ ನೀಡುತ್ತಿದ್ದರು. ಹೀಗೆ ಟಾರ್ಗೆಟ್​ ಆದ ವ್ಯಕ್ತಿಗಳಲ್ಲಿ ಪ್ರವೀಣ್​ ನೆಟ್ಟಾರು ಕೂಡ ಒಬ್ಬನಾಗಿದ್ದ’ ಎಂಬ ಅಂಶಗಳನ್ನು ಎನ್​ಐಎ ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದೆ.

ಮಹಮ್ಮದ್ ಶಿಯಾಬ್, ಅಬ್ದುಲ್ ಬಶೀರ, ರಿಯಾಝ್, ಮುಸ್ತಫಾ ಪೈಚಾರ್, ಮಸೂದ್ ಕೆ ಎ, ಕೊಡಾಜೆ ಮೊಹಮ್ಮದ್ ಶರೀಫ್, ಅಬೂಬಕ್ಕರ್ ಸಿದ್ದಿಕ್, ನೌಫಲ್ ಎಂ., ಇಸ್ಮಾಯಿಲ್ ಶಾಫಿ.ಕೆ., ಕೆ ಮಹಮ್ಮದ್ ಇಕ್ಬಾಲ್, ಶಹೀದ್ ಎಂ., ಮಹಮ್ಮದ್ ಶಫೀಕ್ ಜಿ., ಉಮ್ಮರ್ ಫಾರೂಕ್ ಎಂ.ಆರ್., ಅಬ್ದುಲ್ ಕಬೀರ್ ಸಿ.ಎ., ಮುಹಮ್ಮದ್ ಇಬ್ರಾಹಿಂ ಶಾ., ಸೈನುಲ್ ಅಬಿದ್ ವೈ., ಶೇಖ್ ಸದ್ದಾಂ ಹುಸೇನ್., ಜಾಕಿಯಾರ್ ಎ., ಎನ್.ಅಬ್ದುಲ್ ಹಾರಿಸ್., ತುಫೈಲ್ ಎಂ. ಎಚ್. ಎಂಬುವರ ಹೆಸರು ಚಾರ್ಜ್​ಶೀಟ್​​ನಲ್ಲಿ ಉಲ್ಲೇಖವಾಗಿದೆ.

ಇದನ್ನೂ ಓದಿ: Praveen Nettaru: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇನ್ನೊಂದು ಚಾರ್ಜ್‌ಶೀಟ್‌ ಸಲ್ಲಿಕೆ

Continue Reading

ದೇಶ

Narendra Dabholkar Case: ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ; ಹಂತಕರಿಗೆ ಜೀವಾವಧಿ ಶಿಕ್ಷೆ

Narendra Dabholkar Case:ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11 ವರ್ಷಗಳ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಬ್ಬರು ಹಂತಕರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ

VISTARANEWS.COM


on

Narendra Dabholkar
Koo

ನವದೆಹಲಿ: ಸಾಮಾಜಿಕ ಕಾರ್ಯಕರ್ತ ಹಾಗೂ ಮಹಾರಾಷ್ಟ್ರ(Maharashtra) ಅಂಧಶ್ರದ್ಧ ನಿರ್ಮೂಲನ ಸಮಿತಿ ಮುಖ್ಯಸ್ಥ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಹತ್ಯೆ (Narendra Dabholkar Case) ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11 ವರ್ಷಗಳ ಬಳಿಕ ಮಹತ್ವದ ತೀರ್ಪು ಹೊರಬಿದ್ದಿದ್ದು, ಇಬ್ಬರು ಹಂತಕರಿಗೆ ಜೀವಾವಧಿ(Life imprisonment) ಶಿಕ್ಷೆ ವಿಧಿಸಲಾಗಿದೆ. ಪ್ರಕರಣದ ಉಳಿದ ಮೂವರು ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಪ್ರಕರಣದ ವಿಚಾರಣೆ ನಡೆಸಿದ ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯ ಆರೋಪಿಗಳಾದ ಸಚಿನ್ ಅಂಡುರೆ ಮತ್ತು ಸರದ್ ಕಲಾಸ್ಕರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಅಲ್ಲದೇ ತಲಾ 5ಲಕ್ಷ ರೂ, ದಂಡವನ್ನೂ ವಿಧಿಸಿ ಆದೇಶ ಹೊರಡಿಸಿದೆ. ಇನ್ನು ದಾಭೋಲ್ಕರ್ ಹತ್ಯೆ ಸಂಚಿನ ಮಾಸ್ಟರ್ ಮೈಂಡ್ ಡಾ.ವೀರೇಂದ್ರ ತಾವ್ಡೆ ಮತ್ತು ಇತರ ಇಬ್ಬರು ಆರೋಪಿತ ವಕೀಲರಾದ ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆಯನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯವು ಖುಲಾಸೆಗೊಳಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆಗೆ ಸಂಬಂಧಿಸಿದ ಪ್ರಕರಣಗಳಿಗೆ ವಿಶೇಷ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎ.ಎ. ಜಾಧವ್ ಈ ತೀರ್ಪು ಪ್ರಕಟಿಸಿದ್ದಾರೆ.

2013ರಲ್ಲಿ ನಡೆದಿದ್ದೇನು?

ಪುಣೆಯ ಓಂಕಾರೇಶ್ವರ ಸೇತುವೆಯ ಮೇಲೆ ಬೆಳಗಿನ ವಾಕಿಂಗ್‌ಗೆ ಹೊರಟಿದ್ದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು 2013ರ ಆಗಸ್ಟ್ 20 ರಂದು ಕಿರಾತಕರು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಐವರನ್ನು ಆರೋಪಿಗಳನ್ನಾಗಿ ಮಾಡಲಾಗಿತ್ತು. ಈ ಪ್ರಕರಣದ ಪ್ರಮುಖ ಸಂಚುಕೋರ ಸನಾತನ ಸಂಸ್ಥೆ ಜೊತೆ ಸಂಪರ್ಕ ಹೊಂದಿದ್ದ ಡಾ.ವೀರೇಂದ್ರ ತಾವ್ಡೆ ಎಂದು ಸಿಬಿಐ ಆರೋಪಿಸಿತ್ತು. ದಾಭೋಲ್ಕರ್ ಅವರು ಹಲವು ವರ್ಷಗಳಿಂದ ಆ ಸಮಿತಿಯನ್ನು ನಡೆಸುತ್ತಿದ್ದರು, ಅವರು ಮೂಢನಂಬಿಕೆ ನಿರ್ಮೂಲನೆಗೆ ಸಂಬಂಧಿಸಿದ ವಿವಿಧ ಪುಸ್ತಕಗಳನ್ನು ಪ್ರಕಟಿಸಿದ್ದಾರೆ ಮತ್ತು ಅನೇಕ ಕಾರ್ಯಾಗಾರಗಳನ್ನು ಸಹ ಆಯೋಜಿಸಿದ್ದರು.

ಈ ಹತ್ಯೆಯ ನಂತರ ದೇಶಾದ್ಯಂತ ಸಾಕಷ್ಟು ಗಲಾಟೆ ನಡೆದಿತ್ತು. ನಂತರ, ದಾಭೋಲ್ಕರ್ ಅವರ ಮಕ್ಕಳು ಸಲ್ಲಿಸಿದ ಅರ್ಜಿಗಳ ಮೇಲೆ, ಬಾಂಬೆ ಹೈಕೋರ್ಟ್ ಪ್ರಕರಣವನ್ನು ಪುಣೆ ಪೊಲೀಸರಿಂದ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಿತ್ತು. ದಾಭೋಲ್ಕರ್ ಅವರ ಕೊಲೆಗೆ ಷಡ್ಯಂತ್ರ ರೂಪಿಸಲಾಗಿದೆ, ಇದರಿಂದಾಗಿ ಜನರ ಮನಸ್ಸಿನಲ್ಲಿ ದೊಡ್ಡ ಮಟ್ಟದಲ್ಲಿ ಭಯವನ್ನು ಉಂಟುಮಾಡಬಹುದು ಮತ್ತು ಅವರ ಕೊಲೆಯ ನಂತರ ‘ಅಂಧಶ್ರದ್ಧ ನಿರ್ಮೂಲನ ಸಮಿತಿ’ಯ ಕೆಲಸವನ್ನು ಯಾರೂ ಮಾಡಲು ಸಾಧ್ಯವಿಲ್ಲ ಎಂಬುದು ದುಷ್ಕರ್ಮಿಗಳ ಯೋಚನೆಯಾಗಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿತ್ತು. ಜೂನ್ 2016 ರಲ್ಲಿ ಹಿಂದುತ್ವ ಪರ ಬಲಪಂಥೀಯ ಸಂಘಟನೆ ಸನಾತನ ಸಂಸ್ಥೆಯೊಂದಿಗೆ ಸಂಬಂಧ ಹೊಂದಿದ್ದ ಡಾ. ವೀರೇಂದ್ರ ಸಿಂಗ್ ತಾವ್ಡೆಯನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

ಪುಣೆಯಲ್ಲಿ ದಾಭೋಲ್ಕರ್ ಅವರ ಹತ್ಯೆ ಬಳಿಕ ಮತ್ತಷ್ಟು ವಿಚಾರವಾದಿಗಳನ್ನು ಗುರಿಯಾಗಿಸಿ ದಾಳಿ ನಡೆಸಿ ಕೊಲೆಗಳು ನಡೆದಿದ್ದವು. 2015ರ ಫೆಬ್ರವರಿಯಲ್ಲಿ ಗೋವಿಂದ್ ಪನ್ಸಾರೆ, ಅದೇ ವರ್ಷದ ಆಗಸ್ಟ್‌ನಲ್ಲಿ ಕರ್ನಾಟಕದ ಸಂಶೋಧಕ ಎಂಎಂ ಕಲಬುರ್ಗಿ ಹಾಗೂ 2017ರ ಸೆಪ್ಟೆಂಬರ್‌ನಲ್ಲಿ ಬೆಂಗಳೂರಿನಲ್ಲಿ ಮನೆಯ ಹೊರಗೆ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಗಳಿಗೆ ಸಾಮ್ಯತೆ ಇದ್ದು, ಒಂದೇ ಸಂಘಟನೆಯವರ ಕೈವಾಡ ಇವುಗಳಲ್ಲಿ ಇವೆ ಎಂದು ಆರೋಪಿಸಲಾಗಿದೆ.

Continue Reading

ದೇಶ

Yogi Adityanath: ʼಅಕ್ಬರ್‌ಪುರʼದ ಮೇಲೆ ಯೋಗಿ ಆದಿತ್ಯನಾಥ್ ಮಾಸ್ಟರ್‌ ಸ್ಟ್ರೋಕ್‌; ಹೆಸರು ಬದಲಾವಣೆಯ ಸೂಚನೆ

Yogi Adityanath: ಭಾರತದಿಂದ ಗುಲಾಮಗಿರಿಯ ಅವಶೇಷಗಳನ್ನು ತೆಗೆದು ಹಾಕುವುದು ಮತ್ತು ಪರಂಪರೆಯನ್ನು ಗೌರವಿಸುವುದು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ‘ಪಂಚ ಪ್ರಾಣ್’ ಗೆ ಪೂರಕವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಕ್ಬರ್‌ಪುರದ ಹೆಸರನ್ನು ಬದಲಾಯಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಇದರ ಜತೆಗೆ ಮುಂದಿನ ದಿನಗಳಲ್ಲಿ ಆಲಿಗಢ, ಆಜಾಮ್‌ಗಢ, ಷಹಜಾನ್‌ಪುರ, ಗಾಜಿಯಾಬಾದ್‌, ಫಿರೋಜಾಬಾದ್‌, ಫಾರೂಕ್‌ಬಾದ್‌ ಮತ್ತು ಮೊರದಾಬಾದ್‌ ಹೆಸರು ಕೂಡ ಬದಲಾಗಲಿದೆ.

VISTARANEWS.COM


on

Yogi Adityanath
Koo

ಲಕ್ನೋ: ಭಾರತದಿಂದ ಗುಲಾಮಗಿರಿಯ ಅವಶೇಷಗಳನ್ನು ತೆಗೆದು ಹಾಕುವುದು ಮತ್ತು ಪರಂಪರೆಯನ್ನು ಗೌರವಿಸುವುದು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ‘ಪಂಚ ಪ್ರಾಣ್’ (ಐದು ಪ್ರತಿಜ್ಞೆಗಳು)ಗೆ ಪೂರಕವಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅಕ್ಬರ್‌ಪುರ (Akbarpur)ದ ಹೆಸರನ್ನು ಬದಲಾಯಿಸುವ ಬಗ್ಗೆ ಸುಳಿವು ನೀಡಿದ್ದಾರೆ.

“ಅಕ್ಬರ್‌ಪುರ ಹೆಸರನ್ನು ಉಚ್ಚರಿಸುವುದು ಸರಿ ಬರುವುದಿಲ್ಲ. ಹೀಗಾಗಿ ವಿಶ್ವಾಸ ಇಡಿ, ಈ ಎಲ್ಲ ವಿಚಾರಗಳು ಬದಲಾಗುತ್ತವೆ. ಈ ಹೆಸರನ್ನು ಬದಲಾಯಿಸಲಿದ್ದೇವೆ. ನಾವು ವಸಾಹತುಶಾಹಿಯ ಎಲ್ಲ ಗುರುತು, ಅವಶೇಷಗಳನ್ನು ನಮ್ಮ ರಾಷ್ಟ್ರದಿಂದ ನಿರ್ಮೂಲನೆ ಮಾಡಬೇಕು ಮತ್ತು ನಮ್ಮ ಪರಂಪರೆಯನ್ನು ಗೌರವಿಸಬೇಕು” ಎಂದು ಯೋಗಿ ಆದಿತ್ಯನಾಥ್‌ ಅಭಿಪ್ರಾಯಪಟ್ಟಿದ್ದಾರೆ.

ಅಕ್ಬರ್‌ಪುರ ಹೊರತಾಗಿ ರಾಜ್ಯದ ಇತರ ಕೆಲವು ಜಿಲ್ಲೆಗಳ ಹೆಸರುಗಳೂ ಬದಲಾಗುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಆಲಿಗಢ, ಆಜಾಮ್‌ಗಢ, ಷಹಜಾನ್‌ಪುರ, ಗಾಜಿಯಾಬಾದ್‌, ಫಿರೋಜಾಬಾದ್‌, ಫಾರೂಕ್‌ಬಾದ್‌ ಮತ್ತು ಮೊರದಾಬಾದ್‌ ಹೆಸರು ಕೂಡ ಬದಲಾಗಲಿದೆ ಎಂದು ಮೂಲಗಳು ಸೂಚನೆ ನೀಡಿವೆ. ಯೋಗಿ ಆದಿತ್ಯನಾಥ್ ಅವರು 2017ರಲ್ಲಿ ಅಧಿಕಾರ ವಹಿಸಿಕೊಂಡ ನಂತರ ಗುಲಾಮಗಿರಿಯ ಚಿಹ್ನೆಗಳನ್ನು ನಿರ್ಮೂಲನೆ ಮಾಡುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಈ ಪ್ರಯತ್ನದ ಭಾಗವಾಗಿ ರಾಜ್ಯದ ಹಲವು ರಸ್ತೆಗಳು, ಉದ್ಯಾನವನಗಳು, ಜಂಕ್ಷನ್‌ಗಳು ಮತ್ತು ಕಟ್ಟಡಗಳಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರಿಡಲಾಗಿದೆ.

ಲಕ್ನೋವೊಂದರಲ್ಲೇ ಅಟಲ್ ಬಿಹಾರಿ ವಾಜಪೇಯಿ ರಸ್ತೆ, ಅಟಲ್ ಜಂಕ್ಷನ್‌, ಅಟಲ್ ಬಿಹಾರಿ ವಾಜಪೇಯಿ ಕಾನ್ಫರೆನ್ಸ್ ಸೆಂಟರ್, ಅಟಲ್ ಸೇತುವೆ, ಅಟಲ್ ಬಿಹಾರಿ ಕಲ್ಯಾಣ ಮಂಟಪ ಇದೆ. ಇದಲ್ಲದೆ ದೇಶದ ನಾಲ್ಕನೇ ಅತ್ಯಂತ ಜನನಿಬಿಡ ಜಂಕ್ಷನ್ ಆಗಿರುವ ಮುಘಲ್ಸರಾಯ್ ರೈಲ್ವೆ ನಿಲ್ದಾಣವನ್ನು ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಎಂದು ಮರುನಾಮಕರಣ ಮಾಡಲಾಗಿದೆ.

2019ರ ಕುಂಭಮೇಳಕ್ಕೆ ಸ್ವಲ್ಪ ಮೊದಲು ರಾಜ್ಯ ಸರ್ಕಾರವು ಅಲಹಾಬಾದ್ ಅನ್ನು ಪ್ರಯಾಗ್‌ರಾಜ್‌ ಎಂದು ಮರುನಾಮಕರಣ ಮಾಡಿತ್ತು. ಈ ಐತಿಹಾಸಿಕ ಸ್ಥಳದ ಮೂಲ ಹೆಸರು ಪ್ರಯಾಗ್‌ರಾಜ್. ಇದನ್ನು ಮೊಘಲರು ‘ಅಲಹಾಬಾದ್’ ಎಂದು ಬದಲಾಯಿಸಿದರು ಎನ್ನುವ ವಾದವಿದೆ. ಫೈಜಾಬಾದ್‌ ಅನ್ನು ಅಯೋಧ್ಯೆ ಎಂದೂ ಝಾನ್ಸಿ ರೈಲು ನಿಲ್ದಾಣವನ್ನು ರಾಣಿ ಲಕ್ಷ್ಮೀ ಭಾಯಿ ಸ್ಟೇಷನ್‌ ಎಂದೂ ಬದಲಾಯಿಸಲಾಗಿದೆ.

ಇತ್ತೀಚೆಗೆ ಆಲಿಗಢವನ್ನು ಹರಿಗಢ ಎಂದು ಬದಲಾಯಿಸಬೇಕು ಎನ್ನುವ ಕೂಗು ಕೇಳಿ ಬಂದಿದ್ದು, ಫಿರೋಜಾಬಾದ್‌ ಅನ್ನು ಚಂದ್ರ ನಗರ್‌ ಆಗಿ ಮರುನಾಮಕರಣ ಮಾಡಲು ಆಗ್ರಹಿಸಲಾಗಿದೆ. ಜತೆಗೆ ಮೈನ್‌ಪುರಿ ಜಿಲ್ಲೆಯ ಹೆಸರನ್ನು ಮಾಯಾಪುರಿಯನ್ನಾಗಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಸಚಿವೆ ಗುಲಾಬ್‌ ದೇವಿ ಅವರು ತಮ್ಮ ಜಿಲ್ಲೆಯಾದ ಸಂಭಾಲ್‌ ಹೆಸರನ್ನು ಪೃಥ್ವಿರಾಜ್‌ ನಗರ ಅಥವಾ ಕಲ್ಕಿ ನಗರ ಎಂದು ಬದಲಾಯಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿಯ ಮಾಜಿ ಶಾಸಕರಾದ ದೇವಮಣಿ ದ್ವಿವೇದಿ ಕೂಡ ಸುಲ್ತಾನ್‌ಪುರ ಜಿಲ್ಲೆಯನ್ನು ಖುಷ್ಬಾವನ್‌ಪುರವನ್ನಾಗಿಸಬೇಕು ಎಂದು ಹೇಳಿದ್ದಾರೆ. ಗಾಝಿಪುರದ ಹೆಸರನ್ನು ಗಾಧಿಪುರಿಯಾಗಿಸುವ ಬಗ್ಗೆಯೂ ಬೇಡಿಕೆ ಕೇಳಿ ಬಂದಿದೆ.

ಇದನ್ನೂ ಓದಿ: Encounter in UP: ಯೋಗಿ ನಾಡಿನಲ್ಲಿ ಮತ್ತೊಂದು ಎನ್‌ಕೌಂಟರ್‌, ಮೋಸ್ಟ್‌ ವಾಂಟೆಡ್‌ ಗ್ಯಾಂಗ್‌ಸ್ಟರ್‌ ಬಲಿ!

Continue Reading

ದೇಶ

Mani Shankar Aiyar: ಪಾಕಿಸ್ತಾನವನ್ನು ಕೆಣಕಿದರೆ ಅಣು ಬಾಂಬ್ ಬೀಳಬಹುದು ಹುಷಾರ್! ಮೋದಿಗೆ ಮಣಿಶಂಕರ್ ಅಯ್ಯರ್ ಎಚ್ಚರಿಕೆ!

Mani Shankar Aiyar: ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌, ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ ಎಂದರು.

VISTARANEWS.COM


on

mani shankar iyer
Koo

ನವದೆಹಲಿ: ಕಾಂಗ್ರೆಸ್‌ ಪಾಕಿಸ್ತಾನದ ಫಾಲೋವರ್‌ ಪಕ್ಷ ಎಂದು ಪದೇ ಪದೇ ಬಿಜೆಪಿ ಜಡಿಯುತ್ತಿದ್ದರೂ ಒಂದಿಲ್ಲೊಂದು ಒಂದು ಪಾಕ್‌(Pakistan) ಪರ ಹೇಳಿಕೆ ನೀಡಿ ಕಾಂಗ್ರೆಸ್‌ ನಾಯಕರು ಪಕ್ಷಕ್ಕೆ ಮುಜುಗರ ತರುತ್ತಲೇ ಇದ್ದಾರೆ. ಅಲ್ಲದೇ ಬಿಜೆಪಿ ಆರೋಪಕ್ಕೆ ಆಹಾರವಾಗುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಬಿಜೆಪಿಯನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್‌ ನಾಯಕರು ಪಾಕ್‌ ಪರವಾಗಿ ಬ್ಯಾಟಿಂಗ್‌ ಬೀಸಿ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಇದೀಗ ಕಾಂಗ್ರೆಸ್ (Congress) ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮಣಿಶಂಕರ್ ಅಯ್ಯರ್ (Mani Shankar Aiyar) ಅವರು ಪಾಕ್‌ ಪರ ಹೇಳಿಕೆ ನೀಡಿ ವಿವಾದಕ್ಕಿಡಾಗಿದ್ದಾರೆ. ಅವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಬಿಜೆಪಿ ತೀವ್ರವಾಗಿ ಖಂಡಿಸಿದೆ.

ವೈರಲ್‌ ಆಗಿರುವ ವಿಡಿಯೋದಲ್ಲೇನಿದೆ?

ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡಿದ ಮಣಿಶಂಕರ್‌ ಅಯ್ಯರ್‌, ಭಾರತ ಪಾಕಿಸ್ತಾನಕ್ಕೆ ಗೌರವ ಕೊಡಬೇಕು ಎಂದು ಹೇಳುವ ಮೂಲಕ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪಾಕಿಸ್ತಾನದ ಬಳಿ ಅಣುಬಾಂಬ್‌ಗಳಿವೆ. ಭಾರತ ಕೇವಲ ವಿಶ್ವಗುರು ಎಂದು ಹೇಳುತ್ತಾ ಇದ್ದರೆ ಸಾಲದು ನೆರೆಯ ರಾಷ್ಟ್ರ ಪಾಕಿಸ್ತಾನದ ಜೊತೆ ಮೊದಲು ಶಾಂತಿಯುತ ಮಾತುಕತೆ ನಡೆಸಬೇಕು. ಯಾವಾಗಲೂ ಕೈಯಲ್ಲಿ ಬಂದೂಕು ಹಿಡಿದು ಸುತ್ತಾಡಿದರೆ ಯಾವ ಕೆಲಸವೂ ಆಗಲ್ಲ, ಯಾವ ಪರಿಹಾರವೂ ಸಿಗಲ್ಲ. ಅದು ಕೇವಲ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಅಷ್ಟೇ. ಪಾಕಿಸ್ತಾನ ಕೂಡ ಸಾರ್ವಭೌಮ ರಾಷ್ಟ್ರ ಮತ್ತು ಅದಕ್ಕೆ ಅದರದ್ದೇ ಆದ ಗೌರವ ಇದೆ. ಒಂದು ವೇಳೆ ಅಲ್ಲಿ ತಲೆಕೆಟ್ಟ ಮನುಷ್ಯ ಅಧಿಕಾರಕ್ಕೆ ಬಂದರೆ.. ಲಾಹೋರ್‌ನಲ್ಲಿ ಅಣುಬಾಂಬ್‌ ಸ್ಫೋಟಿಸಿದರೆ ಅದರ ಪರಿಣಾಮ ನಮ್ಮ ದೇಶದ ಭಾಗವಾಗಿರುವ ಅಮೃತಸರದ ಮೇಲೂ ಆಗುತ್ತದೆ. ಹೀಗಾಗಿ ನಾನು ಅವರನ್ನು ಗೌರವಿಸಲು ಪ್ರಾರಂಭಿಸಿದರೆ ಅವರು ಬಾಂಬ್‌ ಬಗ್ಗೆ ಯೋಚನೆ ಮಾಡುವುದೇ ಇಲ್ಲ. ಒಂದು ವೇಳೆ ಅವರನ್ನು ದ್ವೇಷಿಸಿದರೆ ಹುಚ್ಚನೊಬ್ಬ ಬಂದು ಬಾಂಬ್‌ ಸ್ಫೋಟಿಸುತ್ತಾನೆ ಎಂದು ಹೇಳಿದರು. ಮಣಿಶಂಕರ್‌ ಅಯ್ಯರ್‌ ಹೇಳಿಕೆಗೆ ಬಿಜೆಪಿ ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದೆ.

ಈ ಹಿಂದೆಯೂ ಒಮ್ಮೆ ಮಣಿಶಂಕರ್‌ ಅಯ್ಯರ್‌ ಪಾಕ್‌ ಪರ ಹೇಳಿಕೆ ನೀಡಿ ಸುದ್ದಿಯಾಗಿದ್ದರು. ಪಾಕಿಸ್ತಾನೀಯರನ್ನು ಅವರು “ಭಾರತದ ಅತಿದೊಡ್ಡ ಆಸ್ತಿ” ಎಂದು ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು. “ನನ್ನ ಅನುಭವದ ಪ್ರಕಾರ, ಪಾಕಿಸ್ತಾನಿಯರು ಬಹುಶಃ ಎದುರಿನವರಿಗೆ ಅತಿ ಉತ್ತಮ ರೀತಿಯಲ್ಲಿ ಪ್ರತಿಕ್ರಿಯಿಸುವ ಜನರು. ನಾವು ಸ್ನೇಹಪರರಾಗಿದ್ದರೆ ಅವರು ಅತಿಯಾದ ಸ್ನೇಹಪರರಾಗಿರುತ್ತಾರೆ ಮತ್ತು ನಾವು ದ್ವೇಷಿಸಿದರೆ ಅವರು ತುಂಬಾ ದ್ವೇಷಿಸಬಲ್ಲರು. ಪಾಕಿಸ್ತಾನದಂತೆ ನನ್ನನ್ನು ತೆರೆದ ತೋಳುಗಳಿಂದ ಸ್ವಾಗತಿಸಿದ ಇನ್ನೊಂದು ದೇಶಕ್ಕೆ ನಾನು ಯಾವತ್ತೂ ಹೋಗಿಲ್ಲ” ಎಂದು ಮಣಿಶಂಕರ್ ಅಯ್ಯರ್ ಹೇಳಿದ್ದರು.

ಇದನ್ನೂ ಓದಿ: Murder Case : ಕೊಡಗಿನಲ್ಲಿ ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯ ರುಂಡ ಕತ್ತರಿಸಿ ಕೊಂದ ಪ್ರೇಮಿ

ಎರಡು ದಿನಗಳ ಹಿಂದೆ ಹರಿಯಾಣದ ಫರಿದಾಬಾದ್‌ ಲೋಕಸಭಾ ಕ್ಷೇತ್ರ ಅಭ್ಯರ್ಥಿ ಮಹೇಂದರ್‌ ಪ್ರತಾಪ್‌ ಸಿಂಗ್‌(Mahender Pratap Singh) 2019ರಲ್ಲಿ ನಡೆದ ಪುಲ್ವಾಮಾ ದಾಳಿ(Pulwama attack) ಪಾಕಿಸ್ತಾನ ನಡೆಸಿರುವುದಲ್ಲ, ಬದಲಿಗೆ ಭಾರತ ಸರ್ಕಾರ ನಡೆಸಿರುವುದು ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿದ್ದರು.

Continue Reading
Advertisement
Roopa Iyer
ಕ್ರೈಂ17 mins ago

Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Viral video
ಕ್ರೈಂ24 mins ago

Viral Video:ಛೀ.. ಎಂಥಾ ಹೇಯ ಕೃತ್ಯ! ಶಾಲಾ ಬಾಲಕಿ ಮೇಲೆ ಆಟೋ ಚಾಲಕನ ನೀಚ ಕೃತ್ಯ; ಶಾಕಿಂಗ್‌ ವಿಡಿಯೋ ವೈರಲ್‌

Prajwal Revanna Case SIT issues 2nd notice to Bhavani Revanna Big trouble for Revanna family
ಕ್ರೈಂ26 mins ago

Prajwal Revanna Case: ಭವಾನಿ ರೇವಣ್ಣಗೆ SIT 2ನೇ ನೋಟಿಸ್‌; ರೇವಣ್ಣ ಫ್ಯಾಮಿಲಿಗೆ ಭಾರಿ ಸಂಕಷ್ಟ!

Murder case
ಬೆಳಗಾವಿ39 mins ago

Murder Case: ಆಸ್ತಿಗಾಗಿ ದಾಯಾದಿಗಳ ಕಲಹ; ತಲೆ ಮೇಲೆ ರುಬ್ಬುವ ಕಲ್ಲು ಎತ್ತಿಹಾಕಿ ಕೊಲೆ

mustafa paichar praveen nettar ಪ್ರವೀಣ್‌ ನೆಟ್ಟಾರು
ಪ್ರಮುಖ ಸುದ್ದಿ1 hour ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಬಂಧನ; ಈತನನ್ನು ಹಿಡಿದುಕೊಟ್ಟವರಿಗಿತ್ತು 5 ಲಕ್ಷ ಬಹುಮಾನ!

Narendra Dabholkar
ದೇಶ1 hour ago

Narendra Dabholkar Case: ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ; ಹಂತಕರಿಗೆ ಜೀವಾವಧಿ ಶಿಕ್ಷೆ

Star Suvarna
ಕಿರುತೆರೆ1 hour ago

Star Suvarna: ಬಹುಮಾನದ ಜತೆಗೆ ಮನೋರಂಜನೆ ಹೊತ್ತು ಬರುತ್ತಿದೆ ʼಸುವರ್ಣ ಗೃಹಮಂತ್ರಿʼ; ಯಾವಾಗ ಪ್ರಸಾರ?

Lok Sabha Election 2024 26000 km travelled for Lok Sabha campaigning CM to campaign for 14 to 18 hours a day
ರಾಜಕೀಯ1 hour ago

Lok Sabha Election 2024: ಲೋಕಸಭಾ ಪ್ರಚಾರಕ್ಕೆ 26 ಸಾವಿರ ಕಿಲೋ ಮೀಟರ್ ಸಂಚಾರ, ದಿನಕ್ಕೆ ಸರಾಸರಿ 14-18 ಗಂಟೆ ಸಿಎಂ ಪ್ರಚಾರ!

murder case kalaburagi
ಕಲಬುರಗಿ1 hour ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

gold rate today
ಚಿನ್ನದ ದರ2 hours ago

Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Rain Effect In karnataka
ಮಳೆ3 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ9 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ16 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ17 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ18 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

SSLC Result 2024 78 schools get zero results in SSLC exams
ಬೆಂಗಳೂರು1 day ago

SSLC Result 2024: ಎಸ್‌ಎಸ್‌ಎಲ್‌ಸಿ ಎಕ್ಸಾಂನಲ್ಲಿ ಸಿಕ್ಸರ್‌ ಬಾರಿಸಿದ ಗ್ರಾಮೀಣ ಪ್ರತಿಭೆಗಳು; 78 ಶಾಲೆಗಳಲ್ಲಿ ಶೂನ್ಯ ರಿಸಲ್ಟ್‌!

SSLC Result 2024 SSLC students get 20 percent grace marks but result is very poor
ಶಿಕ್ಷಣ1 day ago

SSLC Result 2024: ಎಸ್‌ಎಸ್‌ಎಲ್‌ಸಿ ಮಕ್ಕಳಿಗೆ ಸಿಕ್ತು 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌! ಆದ್ರೂ ಫಲಿತಾಂಶ ತೀರಾ ಕಳಪೆ

ಟ್ರೆಂಡಿಂಗ್‌